ಕೋವಿಡ್ ಕಲಿಸಿದ ಪಾಠ: ಗೀತಾ ಜಿ ಹೆಗಡೆ ಕಲ್ಮನೆ.

ಮೊನ್ನೆ ಒಂದಿನ ಸಾಯಂಕಾಲ ಆಗುತ್ತಿದ್ದಂತೆ ಗಂಟಲು ಸ್ವಲ್ಪ ಉರಿ, ನೆಗಡಿಯಾಗುವಾಗ ಆಗುತ್ತಲ್ಲಾ ಹಾಗೆ ಒಂದು ರೀತಿಯ ಇರಿಟೇಷನ್. ಉಸಿರಾಟದಲ್ಲಿ ಸ್ವಲ್ಪ ಕಷ್ಟ ಅಂದರೆ ಬಾಯಿ ತೆರೆದು ಉಸಿರಾಡಬೇಕು ಅನಿಸುವಷ್ಟು. ಸಂಜೆ ದೀಪ ಹಚ್ಚಿ ಸ್ವಲ್ಪ ಭಗವತ್ಗೀತೆ ಪಾರಾಯಣ ಮಾಡುವ ರೂಢಿ. ಎಂದಿನಂತೆ ಸರಾಗವಾಗಿ ಓದಲು ಆಗುತ್ತಿಲ್ಲ. ಸ್ವರವೇ ಹೊರಗೆ ಬರ್ತಿಲ್ಲ. ಅಯ್ಯೋ ಶಿವನೇ….ಇದೆನಾಯಿತು ನನಗೆ? ಪಕ್ಕನೆ ಕೊರೋನಾ ಸಿಂಟೆಮ್ಸ ಹೀಗೀಗೆ ಇರುತ್ತದೆ ಎಂದು ಟೀವಿಯಲ್ಲಿ ಪೇಪರಲ್ಲಿ ವಾಲಗ ಊದುತ್ತಿದ್ದದ್ದು ಜ್ಞಾಪಕ ಬಂತು ನೋಡಿ…. ಸೋಫಾದಲ್ಲಿ ಕೂತವಳು ಸಣ್ಣಗೆ … Read more

ಮರೆಯಲಾಗದ ಮದುವೆ (ಭಾಗ 12): ನಾರಾಯಣ ಎಮ್ ಎಸ್

“ಸಾರ್… ರೈಲ್ವೇಸಿಂದ ಫೋನು, ಅದ್ಯಾವ್ದೋ ಕಾವ್ಲೀ ಅನ್ನೋ ಸ್ಟೇಷನ್ನಲ್ಲಿ ಯಾವ್ದೋ ವಯ್ಸಾಗಿರೋರ ಹೆಣಾ ಸಿಕ್ಕಿದ್ಯಂತೇ…ಈಗ್ಲೇ ಯಾರಾರೂ ಬಾಡಿ ಐಡೆಂಟಿಫೈ ಮಾಡಕ್ಕೋಗ್ಬೇಕಂತೆ” ರಿಸೆಪ್ಷನ್ ಕೌಂಟರಿನಿಂದ ಯಾವನೋ ಅವಿವೇಕಿ ಗಟ್ಟಿಯಾಗಿ ಕಿರುಚಿದ್ದ. ಲಾಬಿಯಿಡೀ ನೀರವ ಮೌನ ಆವರಿಸಿತು. ಪಾಪ ಸೀತಮ್ಮನವರ ಹೊಟ್ಟೆ ತಳಮಳಗುಟ್ಟಿತು. ಮೆಲ್ಲನೆ ತಮ್ಮ ಎಡಕುಂಡೆಯನ್ನೆತ್ತಿ ಸುಧೀರ್ಘವಾಗಿ ’ಠುಯ್ಯ್…………………’ ಎಂದು ತಾರಕಸ್ಥಾಯಿಯಲ್ಲಿ ಸದ್ದು ಹೊರಡಿಸಿ ಕಣ್ಣು ತೇಲಿಸಿಬಿಟ್ಟರು. ಮೊಮ್ಮಗ ಕಣ್ಣನ್ ಕಣ್ಣರಳಿಸಿ ಸುರುಳಿಯಾಗಿಸಿದ ಅಂಗೈಯನ್ನು ಬಾಯಿನ ಸುತ್ತ ಹಿಡಿದು ’ಠುಯ್ಯ್…………………’ ಎಂದು ನಕಲು ಮಾಡಿ ಪಕಪಕನೆ ನಕ್ಕ. ಇದರಿಂದ … Read more

ಸೂಲಂಗಿಯ ಕತೆ-ವ್ಯಥೆ: ಸುಂದರಿ. ಡಿ

ಅದೊಂದು ದಿನ ಜಮೀನಿನಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿತ್ತು, ಹೋಗಿ ನೋಡುವಾಸೆ! ಏಕೆಂದರೆ ಕಬ್ಬು ಬಿತ್ತನೆಯ ಸಮಯದಲಿ ಖುಷಿಯಿಂದಲೇ ನಾನೊಂದಷ್ಟು ನಾಟಿ ಮಾಡಿದ್ದೆ. ಅದೇ ಪ್ರತಿ ದಿನದ ಕಾಯಕವಾದರೆ ಅದು ಈ ಮಟ್ಟದ ಖುಷಿ ಕೊಡಲಾರದು. ಆಗೊಮ್ಮೆ – ಈಗೊಮ್ಮೆ ಜಮೀನಿನ ಮುಖ ನೋಡಿ ಬರುವ ನಮ್ಮನ್ನು ಮರೆತು, ಉಳುವವರೇ ವಾರಸುದಾರರೆಂದು ಜಮೀನು ಎಲ್ಲಿ ತಪ್ಪು ತಿಳಿದೀತೆಂದು ಭಾವಿಸಿ ಅದರ ನಿಜವಾದ ವಾರಸುದಾರರು ನಾವೆಂದು ನೆನಪು ಮಾಡುವ ಸಲುವಾಗಿ ಹೋಗುವ ನಮ್ಮಂಥ ಮಧ್ಯಮವರ್ಗದ ಜನಗಳಿಗೆ ನಿತ್ಯದ ಕಾಯಕವಾಗಿ … Read more

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 47 & 48): ಎಂ. ಜವರಾಜ್

-೪೭-ಈ ಅಯ್ನೋರುಈ ಆಳುನ್ ಗುಟ್ಟ ಕಂಡಿರ್ನಿಲ್ಲಸಂದಲಿಈ ಆಳಾಡ್ದ ಮಾತ್ಗಅಯ್ನೋರ್ ತಿಕುದ್ ಸಂದಿಲೆಇರಂಗಾಯ್ತು ‘ಏ ಬಲ ಇಲ್ಲಿ’ತಲ ಕೆರಿತಾ‘ಅಯ್ನೋರಾ’ ಅನ್ತ ಬಂದರಾತ್ರ ಎಂಟೆಂಟುವರೆ ಗಂಟ್ಯಾಗಿತ್ತು.‘ಅದೇನ್ಲ ನಾ ಅನ್ಕಂಡಂಗೆಕಡ್ಡಿ ಮುರ್ದಾಗಿ ಅನ್ಕಡಾ’‘ಆ ಕಾಲುನ್ ಮಗಂವ್ನಲ್ಲಪರ್ಶುರಾಗಿ ಮಿಲ್ತವ್ಶಿವ್ಲಿಂಗಪ್ಪೋರ್ ಜೊತ್ಗ ನಿಂತಿದ್ನಆ ಶಿವ್ಲಿಂಗಪ್ಪೋರು,‘ಏ ಕಾಲುನ್ ಮಗ್ನೆನಿಮ್ಮಯ್ನೋರು ಗೆದ್ದರಾ’ ಅಂದ್ರುಅದ್ಕ ಪರ್ಶು‘ನಾ ಮಾತಾಡಗಿದ್ದ ಬುದ್ದಿಸೋಲ್ಲಿ ಅಂತಾನೆ ನಾನುಅದ್ರ ಗೆಲ್ಲದೆ ಆವಯ್ಯಬುದ್ದಿ ನೀವೆಲ್ಲ ಕೈಕಟ್ಟುದ್ರಏನಾರ ಮಾಡ್ಬೇದು’ಅಂದ ಅಯ್ನೋರಾಅದ್ಕ ಆ ಶಿವ್ಲಿಂಗಪ್ಪೋರು‘ಎಲಕ್ಷನು ಕಸ್ಟ ಕಣಆದ್ರ ಒಂದ್ ಕೆಲ್ಸ ಮಾಡು’ಅಂದ್ರು ಅದ್ಕ ಈ ಪರ್ಶು‘ಹೇಳ್ಬದ್ದಿ ನೀವು ಕಾಲ್ಲಿತೋರುದ್ದ ಕಣ್ಗೊತ್ತಿ … Read more

‘ಪಾಠವೂ ಮುಖ್ಯ, ಪ್ರಾಣವೂ ಮುಖ್ಯ’: ಬೀರೇಶ್ ಎನ್ ಗುಂಡೂರ್

ಈ ವಯಸ್ಸಿಗೆನೇ ಮೊಬೈಲ್ ಅಬ್ಯಾಸ ಇರಲೇಬಾರದು. ಮಕ್ಳು ಕೆಟ್ಟೋಗ್ತವೆ. ಕಣ್ಣು ಹಾಳಾಗ್ತವೆ. ಅಂತಿದ್ದ ಪಾಲಕರೆಲ್ಲಾ ಈಗ ಅದೇ ಮಕ್ಕಳನ್ನು ಹಿಡಿದು ಮೊಬೈಲ್ ಕೊಟ್ಟು ಹೊಡ್ಡು ಬಡ್ಡು ಕೂರಿಸುತಿದ್ದಾರೆ. ಪರದೆಯ ಮೇಲೆ ಇಟ್ಟ ದೃಷ್ಟಿ ಸ್ವಲ್ಪ ಕದಲಿದರೆ ಸಾಕು, ನೀನು ಸರಿಯಾಗಿ ಕಲಿಯುತ್ತಿಲ್ಲ. ಫೀಸ್ ಕಟ್ಟಿದಿವಿ. ಕಲಿಲಿಲ್ಲ ಅಂದ್ರೆ ಅಷ್ಟೇ ಈ ವರ್ಷ, ಅಂತ ರಾಗ ಹಾಡುತಿದ್ದಾರೆ. ಮಕ್ಕಳಿಗೆ ಇದೊಂತರ ವಿಚಿತ್ರ ಅನಿಸುತಿದ್ದೆ. ಇಷ್ಟು ದಿವಸ ಮೊಬೈಲ್ ಕೇಳಿದರೆ ಕಣ್ಣು ಬಿಡುತಿದ್ದವರು…ಈಗ ಅದೇ ಮೊಬೈಲ್ ಕೊಟ್ಟು ದಿಟವಾಗಿ ನೋಡು, … Read more

ಗಿರಿಕನ್ಯೆಯ ಗುನುಗು: ಗೀತಾ ಪ್ರಸನ್ನ

ಅಣ್ಣಾವ್ರ ಗಿರಿಕನ್ಯೆ ಬರ್ತಿತ್ತು ಇವತ್ತು. ಎಷ್ಟ್ ಚೆಂದದ ಜೋಡಿ.. ಚೆನ್ನ ಚೆಲುವೆ. ಜಯಮಾಲಾ ಎಳೇ ಬಳ್ಳಿ, ಅಣ್ಣಾವ್ರ ಕರಿಷ್ಮಾ – ಇಬ್ಬರ ಜೋಡಿ ಆಹಾ.. ಆ ಎವರ್ ಗ್ರೀನ್ ಹಾಡುಗಳು. “ನಗು ನಗುತಾ ನೀ ಬರುವೆ.. ನಗುವಿನಲೆ ಮನ ಸೆಳೆವೆ.. “ ಆಹಾ ಎಂಥಾ ಮುದ. ದೋಣಿಯಲ್ಲಿ ಇಬ್ಬರ ರೋಮ್ಯಾನ್ಸ್!! ಈ ದೋಣಿ ಸೀನ್ ನೋಡಿ ಸೀದಾ ಕಾಲೇಜು ದಿನಕ್ಕೆ ಹೋಯ್ತು ನೆನಪು. ಅಣ್ಣಾವ್ರು ಹುಟ್ಟು ಹಾಕ್ತಾ ಇದ್ರೆ, ಚೆಲುವೆ ಎಳೇ ಬಳ್ಳಿ ಹಾಗೆ ಮರಕ್ಕೆ ಹಬ್ಬಿಕೊಳ್ಳೋ … Read more

ಪಂಜು ಕಾವ್ಯಧಾರೆ

ಮಳೆ – ಇಳೆ ಮಳೆಯ ಹನಿಗೆ ಇಳೆಯು ನಡುಗಿದೆಎದೆಯ ಗೂಡಿಗೆ ಮನವು ಮಿಡಿದಿದೆಹಸಿರು ತೋರಣವ ತೊಳೆದು ಬೆಳಗಿದೆಮನಕೆ ಮುದವ ತಂದು ಹಿತವಾಗಿದೆ ಬೀಸುವ ತಂಗಾಳಿ ನಿನ್ನ ನೆನಪಿಸಿದೆತೋಳು ಬಯಸಿ ಕೈಬೀಸಿ ಕರೆದಿದೆಬಂದು ಸೇರುವ ಬಯಕೆ ಮನದಲಿ ನೆಟ್ಟಿದೆಪಿಳಿಪಿಳಿಸುತ ಕಣ್ಣದೃಷ್ಟಿ ನಿನ್ನತ್ತಲೇ ನಾಟಿದೆ. ನೆನಪು ಬರಿಸುತ ತಿಳಿಗಾಳಿ ಚೇಡಿಸುತಿದೆಮಳೆಯ ಹನಿಯೂ ಸಾತ್ ನೀಡುತಿದೆಬಾ ಎನ್ನ ಬಳಿಗೆ ಹೇ… ಜೀವ ಒಲವೆಮೋಡ ಸರಿದು ಬಾನು ಭೂಮಿ ಒಂದಾಗಿವೆ. ನಿನ್ನಿಧ್ವನಿ ಕೇಳದೆ ಕರ್ಣಪಟಲವೇ ಮಂಕಾಗಿದೆನಿನ್ನಿನಿಯನ ಮನವು ಕಾದು ಕಾದು ಸೋತಿದೆಕಣ್ಣ ಕಾಂತಿಯಲೇ … Read more

ದೊಡ್ಡೂರು ಮತ್ತು ಅವಲಕ್ಕಿ: ಗುರುಪ್ರಸಾದ ಕುರ್ತಕೋಟಿ

ನಾನು ಬೆಳೆದ ಲಕ್ಷ್ಮೇಶ್ವರ (ಈಗಿನ ಗದಗ ಜಿಲ್ಲೆ) ನಾನಾ ಕಾರಣಗಳಿಂದ ನನಗೆ ಇಷ್ಟ. ಅದೊಂದು ಐತಿಹಾಸಿಕ ಮಹತ್ವವುಳ್ಳ ಊರು. ಅದರ ಸುತ್ತಲೂ ತುಂಬಾ ಹಳ್ಳಿಗಳು ಇವೆ. ಅದರಲ್ಲೇ ಕಳಶಪ್ರಾಯವಾದ ಹಳ್ಳಿಯ ಹೆಸರು ದೊಡ್ಡೂರು. ಅದೊಂದು ಚಿಕ್ಕ ಹಳ್ಳಿ ಆದರೂ ಹೆಸರು ಮಾತ್ರ ದೊಡ್ಡೂರು. ಒಂದು ಕಾಲದಲ್ಲಿ ಆ ಪ್ರದೇಶದಲ್ಲಿ ಅದೇ ದೊಡ್ಡ ಊರಾಗಿತ್ತೋ ಏನೋ. ಒಟ್ಟಿನಲ್ಲಿ ನನ್ನ ತಲೆಯಲ್ಲಿ ಹಳ್ಳಿಗಳ ಬಗ್ಗೆ ಒಂದು ವಿಶಿಷ್ಟ ಗೌರವ ಹುಟ್ಟಿಸಿ, ಕೃಷಿ ಬಗ್ಗೆ ನನ್ನ ತಲೆಯಲ್ಲಿ ಆಳವಾಗಿ ಬೀಜ ಬಿತ್ತಿದ … Read more

ಕಾಂತಾಸಮ್ಮಿತ: ಸುಂದರಿ ಡಿ

ಅದೊಂದು ಸಂಜೆ ಸ್ನೇಹಿತೆಯ ಮನೆಗೆ ಹೋಗಲೇಬೇಕಾಯಿತು, ಕಾರಣ ಬಹಳ ಕಾಲ ಸಬೂಬು ಹೇಳಿ ಸಾಕಾಗಿ ಆ ದಿನ ಅವಳ ಮನೆಯ ಬಳಿಯೇ ಹೋಗುವಾಗ ಅವಳ ಕಣ್ಣಲ್ಲಿ ಬಂಧಿಯಾದ ಮೇಲೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಕುಳಿತು ಆತಿಥ್ಯ ಸ್ವೀಕರಿಸಿಯೂ ಆಯಿತು. ಯಾರದೋ ಮನೆಗೆ ಹೋಗೋಣವೆಂದು ಕರೆದಳು. ಹೋಗಲು ಮನಸಿಲ್ಲ, ಕಾರಣ ಆಗಲೇ ಸಂಜೆಯಾಗಿತ್ತು, ಜೊತೆಗೆ ಯಾರದೋ ಮನೆಗೆ ನಾನೇಕೆ ಹೋಗುವುದು? ಹಾಗಾಗಿ ಬೇಡವೆಂದು ನಿರಾಕರಿಸಿದೆ. ಆದರೆ ಆಕೆ ಟಪ್ಪರ್‍ವೇರ್ ಡಬ್ಬಿ ಖರೀದಿಸುತ್ತಿದ್ದಳು ಅದನ್ನು ನೋಡಿ ನಾನು ಅಸ್ತು ಎನ್ನಬೇಕಿತ್ತು, ಕಾರಣ … Read more

ಡಾರ್ಕ್‍ವೆಬ್: ಸಾಮಾನ್ಯರಿಗೆ ನಿಲುಕದ ನಕ್ಷತ್ರ: ಚಾರು ಮಂಜುರಾಜ್

ನಮಗಿಷ್ಟವಾದುದನ್ನು ಆನ್‍ಲೈನ್‍ನಲ್ಲಿ ತರಿಸಿಕೊಳ್ಳುವಾಗಲೋ ಸ್ನೇಹಿತರಿಗಾಗಿ ಉಡುಗೊರೆಗಳನ್ನು ಕೊಳ್ಳುವಾಗಲೋ ಗೂಗಲ್‍ನಲ್ಲಿ ಕಾಣುವ ಪುಟಗಳು ಸರ್‍ಫೇಸ್ ವೆಬ್. ಅಂದರೆ ನಾವು ಗೂಗಲ್‍ನಲ್ಲಿ ಜಾಲಾಡುವಾಗ ಅದರಲ್ಲಿ ತೆರೆದುಕೊಳ್ಳುವ ಪ್ರತಿಯೊಂದು ಪುಟವೂ ಇಂಥ ಸರ್‍ಫೇಸ್ ವೆಬ್ಬೇ! ದಿನನಿತ್ಯ ನಾವು ಅಂತರ್ಜಾಲದೊಂದಿಗೆ ವ್ಯವಹರಿಸುವಾಗ ಕೇವಲ ಶೇಕಡ ಒಂದರಷ್ಟು ಮಾತ್ರ ಮಾಹಿತಿಯನ್ನು ಎಕ್ಸ್‍ಪ್ಲೋರ್ ಮಾಡುತ್ತಿರುತ್ತೇವೆ. ಉಳಿದ ಶೇಕಡ 96 ರಿಂದ 99 ರಷ್ಟು ಮಾಹಿತಿಗಳು ಡೀಪ್‍ವೆಬ್ ಮತ್ತು ಡಾರ್ಕ್‍ವೆಬ್‍ಗಳಲ್ಲಿ ಅಡಗಿರುತ್ತವೆ. ಎರಡಂತಸ್ತಿನ ಕಟ್ಟಡವೊಂದರಲ್ಲಿ ಮೇಲೆ ಕಾಣುವುದೇ ನಾವು ಜಾಲಾಡುವ ತಾಣಗಳು, ಆನಂತರದ್ದು ಡೀಪ್‍ವೆಬ್. ಅದರ ಕೆಳಗಿರುವುದೇ … Read more

ಬದುಕು ಮಾಯದ ಆಟ…: ಪಿ.ಎಸ್.ಅಮರದೀಪ್.

ಇದೇನ್  ಕಾಕಾ, ಯಾಕೆ ಹೀಗೆ ಮಾಡಿದ್ರಿ?  ಏನಿತ್ತು ಅಂಥ ಅವಸರ.  ಇನ್ನೂ ಒಂದಿಷ್ಟು ಹುಡುಗರಿಗೆ ದುಡಿಯುವ ದಾರಿ ತೋರಿಸಿ ಅವರಿಗೆ ಜೀವನ‌ದ ಪಾಠ ಹೇಳಿಕೊಡವುದು ಬಾಕಿ ಇತ್ತು.  ದಿನದ ಇಪ್ಪತ್ನಾಲ್ಕು ಗಂಟೆಗಳನ್ನು ಅದೇಗೆ‌ ದುಡಿಸಿಕೊಳ್ಳುವುದು‌ ಎನ್ನುವುದರ ಬಗ್ಗೆ ನಿಮ್ಮಿಂದ ನೋಡಿ ನಮ್ಮಂಥವರಿಗೆ ಕಲಿಯುವುದೂ ಇತ್ತು.  ಬಹಳ ಆತುರ ಪಟ್ಟು ಹೊರಟಿರಿ… ಮೊದಲೆಲ್ಲಾ ನೀವು ಪಕ್ಕಾ ಪ್ಲಾನ್ ಮಾಡುತ್ತಿದ್ದಿರಿ.. ಯಾವ ವಯಸ್ಸಿನಲ್ಲಿ ಎಷ್ಟು ಕಷ್ಟ‌ಪಡಬೇಕು, ಎಷ್ಟು ದುಡಿಯಬಹುದು, ಏನೆನೆಲ್ಲಾ ಕೆಲಸ ಮಾಡಲು ನಮಗೆ ಅವಕಾಶ ಇವೆ.. ಯಾರೆಲ್ಲಾ ಏನೇನು‌ ಕೆಲಸ ಮಾಡಬಲ್ಲರು? ಯಾರಿಂದ ಯಾವ ಮತ್ತು  ಎಷ್ಟು ಕೆಲಸ ಪಡೆಯಬಹುದು ಹೀಗೆ…  ಅದ್ಯಾಕೆ … Read more

ಮರೆಯಲಾಗದ ಮದುವೆ (ಭಾಗ 11): ನಾರಾಯಣ ಎಮ್ ಎಸ್

-೧೧- ಗಂಡಿನಮನೆಯವರನ್ನು ಸ್ವಾಗತಿಸಲೆಂದು ಈಗಾಗಲೇ ರೈಲ್ವೇಸ್ಟೇಷನ್ನಿಗೆ ಬಂದಿದ್ದ ಕೃಷ್ಣಯ್ಯರ್ ಮಕ್ಕಳಾದ ಶೇಖರ್ ಮತ್ತು ಮೋಹನ್ ತಮ್ಮ ಪತ್ನಿಯರೊಂದಿಗೆ ಅಯ್ಯರ್ ಕುಟುಂಬದವರಿಗಾಗಿ ಕಾಯುತ್ತಿದ್ದರು. ಸುಮಾರು ನಾಲ್ಕು ಘಂಟೆಹೊತ್ತಿಗೆ ತಿರುವಾರೂರಿನ ರೈಲು ವಿಶಾಖಪಟ್ಟಣ ಸ್ಟೇಷನ್ನಿಗೆ ಬಂದು ತಲುಪಿತು. ಜೋತುಮೋರೆ ಹಾಕಿಕೊಂಡು ಒಲ್ಲದ ಮನಸ್ಸಿನಿಂದ ಯಾಂತ್ರಿಕವಾಗಿ ಒಬ್ಬೊಬ್ಬರೇ ರೈಲಿನಿಂದಿಳಿಯುತ್ತಿದ್ದ ಗಂಡಿನ ಮನೆಯವರನ್ನು ಕಂಡ ಶೇಖರ್ ಮತ್ತು ಮೋಹನರಿಗೆ ಎಲ್ಲವೂ ಸರಿಯಿಲ್ಲವೆಂಬ ಸುಳಿವು ಮೇಲ್ನೋಟಕ್ಕೇ ಸಿಕ್ಕಿಹೋಯಿತು. ಅತಿಥಿಗಳ ಲಗೇಜುಗಳನ್ನು ಒತ್ತಾಯದಿಂದ ಕೆಳಗಿಳಿಸಿಕೊಳ್ಳುವಾಗ ಹೆಂಗಸರು ಸಣ್ಣಗೆ ಅಳುತ್ತಿದ್ದುದು ಗಮನಿಸಿ ಏನೋ ಎಡವಟ್ಟಾಗಿರಬೇಕೆಂದು ಗಾಬರಿಯಾಯ್ತು. ಸುಬ್ಬುವನ್ನು … Read more

ಹೆಬ್ಬಲಸು : ಅಪರೂಪದ ಕಾಡುಹಣ್ಣು: ಚರಣಕುಮಾರ್ ಮತ್ತು ಡಾ. ಶ್ರೀಕಾಂತ್ ಗುಣಗಾ

ಹೆಬ್ಬಲಸು : ಅಪರೂಪದ ಕಾಡುಹಣ್ಣುArtocarpus hirsutus Lam.ಕುಟುಂಬ: ಮೊರೇಸಿ ವಿತರಣೆ: ಭಾರತೀಯ ಮೂಲದ ಬೃಹದ್ಧಾಕಾರದ ವೃಕ್ಷ ಪಶ್ಚಿಮ ಘಟ್ಟದ ನಿತ್ಯಹರಿಧ್ವರ್ಣ ಮತ್ತು ಅರೆ-ನಿತ್ಯಹರಿಧ್ವರ್ಣ ಕಾಡುಗಳಲ್ಲಿ ಸಾಮಾನ್ಯವಾಗಿ ಕಂಡುಬರುತ್ತದೆ. ಪರಿಚಯ: ನೇರವಾಗಿ ಬೆಳೆಯುವ ಎತ್ತರದ ಮರ. ಕಂದು ಬಣ್ಣದ ತೊಗಟೆ. ತೊಗಟೆಯ ಮೇಲೆ ಸಣ್ಣ ವಾತರಂದ್ರಗಳು. ಗಾಯವಾದ ತೊಗಟೆಯಿಂದ ಹೊರಸೂಸುವ ಹಾಲಿನಂತ ಅಂಟು ಸೊನೆ. ಅಗಲವಾದ ಹುರುಬುರುಕಿನ ಎಲೆಗಳು ಕಡು ಹಸಿರಿನಿಂದ ಕೂಡಿವೆ. ಎಲೆಗಳ ಮೇಲೆ ಅಚ್ಚಾಗಿ ಮೂಡಿರುವ ನರಗಳಿವೆ. ಗಂಡು ಮತ್ತು ಹೆಣ್ಣು ಹೂವುಗಳು ಬೇರೆ ಬೇರೆಯಾಗಿರುತ್ತವೆ. … Read more

‘ನುಡಿಯೊಳಗಾಗಿ ನಡೆಯದಿದ್ದರೆ ಮೆಚ್ಚ …: ಡಾ. ಹೆಚ್ಚೆನ್ ಮಂಜುರಾಜ್

ಮೋಸ ವಂಚನೆಗಳಲ್ಲಿ ಹಲವು ವಿಧಗಳಿವೆ. ಅವುಗಳಲ್ಲಿ ನನ್ನನ್ನು ತುಂಬ ಕಾಡುವುದು ಆತ್ಮವಂಚನೆ ಎಂಬುದು. ಅಂದರೆ ನಮ್ಮನ್ನು ನಾವೇ ವಂಚಿಸಿಕೊಳ್ಳುವ ವೈಖರಿಯೇ ಕಂಗೆಡಿಸುವ ವಿಚಾರ. ಆತ್ಮವಂಚನೆಯನ್ನೇ ರೂಢಿಸಿಕೊಂಡವರು ಕ್ರಮೇಣ ಬಂಡತನವನ್ನು ಬೆಳೆಸಿಕೊಂಡು ಸಂವೇದನಾಶೂನ್ಯರಾಗುವರೋ? ಅಥವಾ ಸಂವೇದನಾಶೀಲತೆ ಕಡಮೆಯಾದ ಮೇಲೆ ಆತ್ಮವಂಚನೆಗೆ ಇಳಿಯುತ್ತಾರೋ? ಸದಾ ಗೊಂದಲ ನನಗೆ. ನಾವೆಲ್ಲ ಒಂದಲ್ಲ ಒಂದು ಸಲ, ಒಂದಲ್ಲ ಒಂದು ದಿನ ಇಂಥ ಆತ್ಮವಂಚನೆಗೈದವರೇ! ಮನುಷ್ಯರಾದ ಮೇಲೆ ಇದೆಲ್ಲ ಮಾಮೂಲು ಎಂದು ಕೈ ತೊಳೆದುಕೊಂಡು ಬಿಡದೇ ಸೀರಿಯಸ್ಸಾಗಿ ಯೋಚಿಸಿದಾಗ ನನಗೆ ಹೊಳೆದದ್ದು: ಇದೊಂದು ಮನೋಬೇನೆ … Read more

ತಡವಾಗಿ ಬಿದ್ದ ಮಳೆ: ನಂದಾದೀಪ, ಮಂಡ್ಯ

ಪುಸ್ತಕ ಯಾವುದೇ ಇರಲಿ ಮೊದಲು ಪುಸ್ತಕದ ಶೀರ್ಷಿಕೆ ಓದುಗರನ್ನ ಸೆಳೆಯಬೇಕು.. ಅಲ್ಲಿಗೆ ಆ ಪುಸ್ತಕ ಅರ್ಧ ಗೆದ್ದಂತೆಯೇ ಸರಿ..! ಆ ವಿಷಯದಲ್ಲಿ ಲೇಖಕರಾದ ಸಂತೋಷಕುಮಾರ್ ಮೆಹಂದಳೆಯವರು ಎಂದಿಗೂ ರಾಜಿಯಾದವರಲ್ಲ ಎನಿಸುತ್ತದೆ..!ಜೊತೆಗೆ ಅವರ ಪುಸ್ತಕ ಓದುಗನನ್ನು ತನ್ನೊಳಗೆ ಲೀನವಾಗಿಸಿಕೊಳ್ಳುತ್ತದೆ ಎಂಬುದಕ್ಕೆ ನಾ ಹಿಂದೆ ಓದಿದ್ದ ಅಘೋರಿಗಳ ಲೋಕದ ಪುಸ್ತಕದ ಬಗ್ಗೆ ಬರೆದಾಗಲೇ ಹೇಳಿದ್ದೆ ಎಂದರೆ ತಪ್ಪಾಗಲಾರದು. ತಡವಾಗಿ ಬಿದ್ದ ಮಳೆ ಮೊದಲು ಆಕರ್ಷಿಸಿದ್ದು ಶೀರ್ಷಿಕೆಯೇ.. ಅದೇ ಕುತೂಹಲದಿಂದ ಓದಲು ಶುರು ಮಾಡಿದ ನಾನು ಒಂದೇ ಗುಕ್ಕಿಗೆ ಓದಿ ಮುಗಿಸಿದೆ.. … Read more

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 45 & 46): ಎಂ. ಜವರಾಜ್

-೪೫-ಈ ಅಯ್ನೋರುತೂರಾಡ್ತ ಬಂದುಮನ ಬಾಗುಲ್ಗ ಕಾಲೂರವತ್ಗಮೂರ್ಗಂಟ ರಾತ್ರಒಳಗ ನೀಲವ್ವೋರು‘ಅಯ್ಯೊ ಉಸ್ಸೊ’ ಅನ್ತನಳ್ಳಾಡದು ಕೇಳ್ತಿತ್ತು ಈ ಅಯ್ನೋರುಬಾಗ್ಲ ತಟ್ಟಿಕಾಲ್ನ ಒದರ ರಬುಸುಕ್ಕನಾ ದಿಕ್ಕಾಪಾಲಾದಿಒಳಕೋದ ಆಸಾಮಿಕೆಮ್ನು ಇಲ್ಲಕ್ಯಾಕುರ್ಸ್ನು ಇಲ್ಲ‘ಇದೇನಯಾಕಿಂಗ ನಳ್ಳಾಡಿಯೆ’ಅನ್ತಕೇಳ್ದ ಮಾತುನಂಗಂತೂ ಕೇಳ್ನಿಲ್ಲ.ಆದ್ರಈ ನೀಲವ್ವೋರು‘ಅಯ್ಯೊ ಉಸ್ಸೊಅಯ್ಯಯ್ಯಪ್ಪಾ’ ಅನ್ತನರಳಾಡದನಂಗ ತಡಿಯಕಾಗ್ದೆ‘ದೊಡ್ಡವ್ವಾ…’ ಅನ್ತನಾನ್ಯಂಗ್ ಕೂಗ್ಲಿ..ಸಂಕ್ಟ ಕಿತ್ತು ಕಿತ್ತು ಬತ್ತಿತು. ಮೊಬ್ಗೆಬಂದೊರ್ಯಾರ ಕಾಣಿಒಬ್ಬೆಂಗ್ಸು ಒಬ್ಬ ಗಂಡ್ಸುನಡ್ಬಾಗುಲ್ಲಿ ಕುಂತ್ರು ಈ ದೊಡ್ಡವ್ವಬಾಗುಲ್ ತಗ್ದುಸದ್ದ ಮಾಡ್ಕಂಡುಈಚ್ಗ ಬಂದುಇತ್ತಗ ನೋಡ್ಬುಟ್ಟುಸಂದಿದಿಕ ಹೋಗಿಮೂತ್ರುಸ್ಬುಟ್ಟು ಬಂದಗಾಯ್ತು. ‘ಕುಸೈ ಇದೇನವ್ವ ಇಸ್ಟೊತ್ಗೆಬಾಣಳ್ಳಿಯಿಂದ ಇಬ್ರೆಎಲ್ಲ ಚಂದಗಿದ್ದರ ಇದೇನ್ ಬಂದ್ರಿ’‘ಅಮೈ ಚಂದಗರಇದೇನಾಗಿದ್ದು ಇವುಳ್ಗಇದ ಇವ್ಳನೋಡಂವ್ ಅನ್ತ … Read more

ಪಂಜು ಕಾವ್ಯಧಾರೆ

ಮಣ್ಣಿನ ಮಮತೆ ಹೆತ್ತತಾಯಿ ಉದರದಲ್ಲಿಜನಿಸಿದ ನಾವೇ ಭಾಗ್ಯವಂತರುಈ ಪುಣ್ಯಭೂಮಿಯಲ್ಲಿಬೆಳೆದ ನಾವೇ ಪುಣ್ಯವಂತರು ಹಚ್ಚ ಹಸಿರು, ಚಿನ್ನದಂತಹ ಪೈರುತೊನೆದಾಡುವುದ ನೋಡಿರಿಬಣ್ಣಬಣ್ಣದ ಸುಮಗಳಿಂದಅರಳಿದ ಲತೆಯ ಕಾಣಿರಿ ಖಗ ಮಿಗಗಳು‌ ನೇಹದಿಂದಕಾಡಿನಲಿ ಬಾಳುತಿವೆಹಕ್ಕಿಗಳ ಕಲವರಕೆಎನ್ನೀ ಮನ ಸೋಲುತಿದೆ ಜನನ ಇಲ್ಲೇ ಮರಣ ಇಲ್ಲೇಅಪ್ಪಿಕೊಳ್ವುದು ಭೂಮಿಯುಆಡಿ ಕುಣಿದು ಬೆಳೆದ ಎಮ್ಮಕೈಬಿಡಳು ಭೂಮಿ ತಾಯಿಯು ಬೆಳೆಬೆಳೆವ ರೈತರುಭೂತಾಯಿಗೆ ನಮಿಸುವರುಕಷ್ಟ ನಷ್ಟವ ಎಲ್ಲವನುಸಮನಾಗಿ ಕಾಣ್ವರು ಮಣ್ಣಿನ ಮಮತೆಯ ಎಂದಿಗೂಮರೆಯಲಾಗದು ಗೆಳೆಯಾಈ ಮಣ್ಣಿನ ಋಣವ ಎಂದಿಗೂತೀರಿಸಲಾಗದು ಗೆಳೆಯಾ –ಸಿಂಧು ಭಾರ್ಗವ್ ಜೀವನ ಚಕ್ರ…..! ಕದಿಯಲು ಬಂದ ಕಳ್ಳನಿಗೆಶ್ರೀಮಂತನಾಗುವ … Read more

ಸಂಗೀತ ಲೋಕದ ಬೆರಗು ಎಸ್‍ಪಿಬಿ: ಡಾ. ಹೆಚ್ ಎನ್ ಮಂಜುರಾಜ್

‘ಮಲೆಗಳಲುಲಿಯುವ ಓ ಕೋಗಿಲೆಯೇಬಲು ಚೆಲ್ವಿದೆ ನಿನ್ನೀ ಗಾನಇಂಗ್ಲಿಷಿಗೆ ತರ್ಜುಮೆ ಮಾಡಿದರೆದೊರೆವುದು ನೊಬೆಲ್ ಬಹುಮಾನ’ ಕುವೆಂಪು ಅವರ ಕವಿತೆಯೊಂದರ ಸಾಲುಗಳಿವು. ಇದನ್ನು ಪ್ರಸ್ತಾಪಿಸುತ್ತಾ ಡಾ. ಹಾ ಮಾ ನಾಯಕರು, ‘ಕೋಗಿಲೆಯ ಹಾಡನ್ನು ಇಂಗ್ಲಿಷಿಗೆ ತರ್ಜುಮೆ ಮಾಡುವವರು ಯಾರು?’ ಎಂದು ಕೇಳುತ್ತಾ, ಪರೋಕ್ಷವಾಗಿ ಕುವೆಂಪು ಅವರ ಪ್ರತಿಭೆಗೆ ನೊಬೆಲ್ ಬಹುಮಾನ ಲಭಿಸುವುದು ಯಾವಾಗ? ಎಂಬ ದನಿಯಲ್ಲಿ ಬರೆದಿದ್ದರು. ಏಕೆ ಈಗ ಈ ಮಾತು ನೆನಪಾಯಿತೆಂದರೆ, ಇಂಥ ಸವಾಲನ್ನೂ ಸಾಹಸವನ್ನೂ ಅಪೂರ್ವ ರೀತಿಯಲ್ಲಿ ತಮ್ಮ ಬದುಕಿನುದ್ದಕ್ಕೂ ಕೈಗೊಂಡು ಗಾಯನ ರಸಯಾತ್ರೆಯಲ್ಲಿ ಸಹೃದಯರನ್ನು … Read more

ಬದುಕೇ ಶೂನ್ಯವೆಂಬ ನಿಜದನಿಯ ಎಲ್ಲರೆದೆಗೆ ಆವಾಹಿಸಿದ ‘ಕೊರೋನಾ’: ಸುಂದರಿ. ಡಿ.

ಕಾರ್ಮೋಡ ಆವರಿಸಿದ ಇಳಿಸಂಜೆಯ ಮಬ್ಬಾದ ವಾತಾವರಣ ಕುಳಿತು ನೋಡುತಿರಲು ಆ ವಾತಾವರಣವೇ ಇಡೀ ಜಗತ್ತಿಗೆ ಕವಿಯಿತೇ? ಎಂಬ ಪ್ರಶ್ನೆ ಆ ಸವಿಯಾದ ಇಳಿಸಂಜೆಯನ್ನು ಸವಿಗಾಣದಂತೆ ಮನದ ಮೂಲೆಯಲಿ ಮನೆಮಾಡಿದ ಆತಂಕದ ಪರಮಾವಧಿಯ ಸ್ಥಿತಿ ಅಂದಿನದು. ಆದರೂ ಒಮ್ಮೆ ದವಾಖಾನೆಯ ಕಿಟಕಿಯ ಸರಳುಗಳ ಭದ್ರ ಸೆರೆಯಿಂದ ಬಿಡಿಸಿಕೊಂಡು ಬಾಂದಳದ ಬಾನಾಡಿಯಂತೆ ವಿಹರಿಸುತ ಇಳಿಸಂಜೆಯ ಸವಿಯುವಾಸೆ. ಕಿಟಕಿಗಳಿಂದ ಹೊರ ನೋಟ ಮೇಲ್ನೋಟಕ್ಕೆ ಸಂತಸ ಕೊಟ್ಟರೂ, ಮನದ ಮೂಲೆಯಲಿ ಬಲು ಭಾರವ ಬಹಳ ಕಾಲ ಹೊತ್ತ ಅನುಭವ. ಕಳೆದ ರಾತ್ರಿಯ ಕಳೆಯುವುದೇ … Read more