ಶ್ರೀ ಗುರೂಜಿ ಹೇಳಿದ ಕಥೆಗಳು: ಹೊರಾ.ಪರಮೇಶ್ ಹೊಡೇನೂರು
ಅದೊಂದು ಶನಿವಾರದ ಮಧ್ಯಾಹ್ನದ ಬಿಡುವಿನ ಸುದಿನ. ಅರಕಲಗೂಡಿನ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ತಾಲ್ಲೂಕು ಘಟಕದ ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಹಾಸನದ ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಶ್ರೀ ಶಂಭುನಾಥ ಸ್ವಾಮೀಜಿ ಅವರ ಸಲಹೆ ಮಾರ್ಗದರ್ಶನ ಪಡೆಯಲು, ಬಿಜಿಎಸ್ ಕಾಲೇಜಿನ ಪ್ರಾಂಶುಪಾಲರಾದ ಮಹೇಶ್ ಹೊಡೇನೂರು ಅವರ ಸಲಹೆಯಂತೆ, ನಿಯೋಜಿತ ಅಧ್ಯಕ್ಷ ಗಂಗೇಶ್ ಬಸವನಹಳ್ಳಿ, ಶಿವಣ್ಣ ಕೆರೆಕೋಡಿ ಮತ್ತು ಆರ್. ಬಿ.ರಂಗನಾಥ್ ಅವರೊಂದಿಗೆ ಶ್ರೀ ಮಠಕ್ಕೆ ಪ್ರವೇಶಿಸಿದೆವು. ಈ ಪವಿತ್ರವಾದ ಮಠದೊಳಗೆ ನನ್ನ ಮೊದಲ ಪ್ರವೇಶವೂ ಅದೇ ಆಗಿತ್ತು. … Read more