ಶ್ರೀ ಗುರೂಜಿ ಹೇಳಿದ ಕಥೆಗಳು: ಹೊರಾ.ಪರಮೇಶ್ ಹೊಡೇನೂರು

ಅದೊಂದು ಶನಿವಾರದ ಮಧ್ಯಾಹ್ನದ ಬಿಡುವಿನ ಸುದಿನ. ಅರಕಲಗೂಡಿನ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ತಾಲ್ಲೂಕು ಘಟಕದ ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಹಾಸನದ ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಶ್ರೀ ಶಂಭುನಾಥ ಸ್ವಾಮೀಜಿ ಅವರ ಸಲಹೆ ಮಾರ್ಗದರ್ಶನ ಪಡೆಯಲು, ಬಿಜಿಎಸ್ ಕಾಲೇಜಿನ ಪ್ರಾಂಶುಪಾಲರಾದ ಮಹೇಶ್ ಹೊಡೇನೂರು ಅವರ ಸಲಹೆಯಂತೆ, ನಿಯೋಜಿತ ಅಧ್ಯಕ್ಷ ಗಂಗೇಶ್ ಬಸವನಹಳ್ಳಿ, ಶಿವಣ್ಣ ಕೆರೆಕೋಡಿ ಮತ್ತು ಆರ್. ಬಿ.ರಂಗನಾಥ್ ಅವರೊಂದಿಗೆ ಶ್ರೀ ಮಠಕ್ಕೆ ಪ್ರವೇಶಿಸಿದೆವು. ಈ ಪವಿತ್ರವಾದ ಮಠದೊಳಗೆ ನನ್ನ ಮೊದಲ ಪ್ರವೇಶವೂ ಅದೇ ಆಗಿತ್ತು. … Read more

ಕಲಬುರ್ಗಿ: ರುಕ್ಮಿಣಿ ನಾಗಣ್ಣವರ

2018 ಫೆಬ್ರುವರಿ. ಕಲಬುರ್ಗಿಗೆ ಬೇಸಿಗೆಯ ಬಿಸಿಲು ಇನ್ನೂ ಆವರಿಸಿರಲಿಲ್ಲ. ಹುಬ್ಬಳ್ಳಿ-ದಾಂಡೇಲಿ ಪ್ರವಾಸ ಮುಗಿಸಿ, ರೈಲಿನಲ್ಲಿ ಬೆಳಿಗ್ಗೇನೆ ಕಲಬುರ್ಗಿಗೆ ಬಂದಿಳಿದ ನನಗೆ ಮೊದಲು ಕಾಣಿಸಿದ್ದೇ ಪುಟಾಣಿ ಚಹಾ ಅಂಗಡಿಗಳ ಸಾಲು. ಒಂದು ಅಂಗಡಿಯ ಹೆಸರು ಕರ್ನಾಟಕ ಟೀ ಸ್ಟಾಲ್, ಮತ್ತೊಂದರದ್ದು ಗಾಣಗಾಪುರ ಟೀ ಸ್ಟಾಲ್. ಮೊದಲ ಬಾರಿಗೆ ಕಲ್ಯಾಣ ನಾಡಿನ ನೆಲ ಸ್ಪರ್ಶಿಸಿದ ನನಗೆ ಬಿಸಿ ಬಿಸಿ ಚಹಾ ಕುಡಿದೇ ಮನೆಯತ್ತ ಹೆಜ್ಜೆ ಹಾಕಲು ಮನಸ್ಸು ಹೇಳಿತು. ಆದರೆ, ಮನೆ ತಲುಪಿದರೆ ಸಾಕು ಎಂಬಂತೆ ದಣಿವು ನನ್ನನ್ನು ಆಯಾಸಗೊಳಿಸಿತ್ತು. … Read more

ನಾ ಬದಲಾಗೊ ಗಿರಾಕಿ ಅಲ್ಲಾ….: ಸಹನಾ ಪ್ರಸಾದ್

ಬಹುತೇಕ ಹೆಣ್ಣು ಮಕ್ಕಳಿಗೆ. ನಾನೂ ಸೇರಿದಂತೆ ಭಾವನೆಗಳು ಜಾಸ್ತಿ, ಬಹಳ ಬೇಗ ಬೇರೆಯವರಿಗೆ ಹತ್ತಿರವಾಗಿಬಿಡುತ್ತಾರೆ, ಅದೇ ರೀತಿ ಮುನಿಸು, ವಿರಸವೂ ಬೇಗ ಬಂದುಬಿಡುತ್ತದೆ,. ನಮ್ಮೆಜಮಾನ್ರು ನನಗೆ ಯಾವಾಗಲೂ ಹೇಳುತ್ತಿರುತ್ತಾರೆ” ನಿಂದೆಲ್ಲಾ ಯಾವಾಗಲೂ ಅತಿರೇಕದ ಪ್ರತಿಕ್ರಿಯೆಗಳು. ಹಚ್ಚಿಕೊಂಡರೆ ಅತಿಯಾಗಿ, ಅದೇ ಏನಾದರೂ ಸಣ್ಣ ವಿಷಯ ನಡೆಯಲಿ, ಕುಗ್ಗಿ ಹೋಗುತ್ತೀಯ. ಸ್ವಲ್ಪ ಸಮತೋಲನ ಇರಬೇಕು ಅಲ್ಲವಾ?” ಆಗೆಲ್ಲಾ ನನಗೆನಿಸುತ್ತದೆ ಹೌದಲ್ವಾ, ನಾನು ಸ್ವಲ್ಪ ಬದಲಾಗಬೇಕು ಎಂದು. ಆದರೆ ಆ ನಿರ್ಧಾರಗಳೆಲ್ಲ ತಾತ್ಕಾಲಿಕ. ಮೊನ್ನೆ ನಮ್ಮ ಪಕ್ಕದ ಮನೆಗೆ ನವ ದಂಪತಿಗಳು … Read more

ನೆರೆ ಹೊರೆಯ ಸಂಬಂಧದ ಸವಿನೆನಪು: ಎನ್. ಶೈಲಜಾ ಹಾಸನ

ಅಕ್ಕಪಕ್ಕದ ಮನೆಯವರೊಂದಿಗೆ ಅಂದಿನ ದಿನಗಳಲ್ಲಿ ಅಪಾರವಾದ ಬಾಂಧವ್ಯವನ್ನು ಹೊಂದಿದ್ದು,ಕಷ್ಟ ಸುಖ ಎಲ್ಲಾದರಲ್ಲೂ ಪರಸ್ಪರ ಭಾಗಿಯಾಗಿ ಸ್ಪಂದಿಸುವ ಹೃದಯಗಳನ್ನು ಅಂದು ಹೆಚ್ಚು ಹೆಚ್ಚು ಕಾಣಬಹುದಿತ್ತು.ನಾವು ನಮ್ಮ ತಂದೆಯ ಉದ್ಯೋಗ ನಿಮಿತ್ತ ಎಲ್ಲಾ ಊರುಗಳನ್ನು ಸುತ್ತಿ ಕೊನೆಗೆ ಜಿಲ್ಲಾ ಕೇಂದ್ರಕ್ಕೆ ಬಂದು ನೆಲೆ ನಿಂತೆವು. ನಾವಿದ್ದ ಮನೆ ಒಂದು ವಠಾರದಲ್ಲಿ ಇತ್ತು.ಎಂಟು ಮನೆಗಳಿರುವ ಆ ವಠಾರದಲ್ಲಿ ಇಬ್ಬರು ಒಂದೊಂದು ಸಾಲಿನ ನಾಲ್ಕು ಮನೆಗಳ ಒಡೆಯರಾಗಿದ್ದರು. ವಠಾರವಾದರೂ ಮನೆ ದೊಡ್ಡದಿತ್ತು. ಹತ್ತು ಹದಿನೈದು ಜನ ವಾಸ ಮಾಡಬಹುದಾಗಿತ್ತು.ಒಂದು ರೂಮು,ಎರಡು ದೊಡ್ಡ ಹಾಲು,ಮಹಡಿ … Read more

ಕನ್ನಡದ ಗಗನಸಖಿ: ಸೂರಿ ಹಾರ್ದಳ್ಳಿ

ಸಂದರ್ಶಕರು ಮಾದೇವಿಯನ್ನು ಕೇಳಿದರು: ‘ನೀವು ಎಂದಿಗಾದರೂ ವಿಮಾನದಲ್ಲಿ ಪ್ರಯಾಣಿಸಿದ್ದೀರಾ?’ ‘ಕ್ವಚಿತ್ತಾಗಿ.’ ‘ವಿಮಾನಗಳಲ್ಲಿ ಏರ್ ಹೋಸ್ಟೆಸ್‍ಗಳು ಪ್ರಯಾಣಿಕರಿಗೆ ಕೆಲವು ಸಲಹೆಗಳನ್ನು ಕೊಡುವುದನ್ನು ನೀವು ಕೇಳಿದ್ದೀರಿ. ಅದನ್ನು ಹೇಳಿ.’ ‘ಗೋ ಔಟ್ ವಿಮಾನದಲ್ಲಿ ಪ್ರಯಾಣಿಸುತ್ತಿರುವ ನಿಮಗೆಲ್ಲಾ ಆದರದ ಸ್ವಾಗತ. ಸ್ವಾಗತ ಎಂದರೆಷ್ಟು ಬಿಟ್ಟರೆಷ್ಟು, ಬಂದು ಅಂಡೂರಿ ಕುಳಿತುಬಿಟ್ಟಿದ್ದಿರಲ್ಲ, ಬೇರೇನೂ ಕ್ಯಾಮೆ ಇರದವರ ಹಾಗೆ.’ ‘ಏನೆಂದಿರಿ?’ ‘ಏನೂ ಇಲ್ಲ. ನಮ್ಮ ವಿಮಾನದಲ್ಲಿ ಮುಂದೆ ಎರಡು ಬಾಗಿಲುಗಳಿವೆ, ಹಿಂದೆ, ತಿರುಗಿಯೇನೂ ನೋಡಬೇಕಾಗಿಲ್ಲ. ಅಲ್ಲೇನೂ ಕರಡಿ ಕುಣಿಯುತ್ತಿಲ್ಲ, ಅಲ್ಲಿ ಎರಡು ನಿರ್ಗಮನ ದ್ವಾರಗಳಿವೆ. ನಡುವೆ … Read more

ಅಂತರಾಗ್ನಿ (ಭಾಗ ೨): ಕಿರಣ್. ವ್ಹಿ

ಇಲ್ಲಿಯವರೆಗೆ ಆಗಲೇ ಮೊವತ್ತು ಕಿಲೋಮೀಟರ್ ಪ್ರಯಾಣಿಸಿಯಾಗಿತ್ತು. ಮುಂದೆ ಸಿಗುವುದು ಬರೀ ಕಾನನ, ತಿರುವು-ಮುರುವು ರಸ್ತೆ ಹಾಗು ನೀರವ ಮೌನವೆಂದು ಅವನಿಗೆ ಗೊತ್ತಿತ್ತು. ಇದನ್ನೇ ಅರಸಿ ಅವನ ಅಂತರಾಳ ಇಲ್ಲಿಗೆ ಕರೆದುಕೊಂಡು ಬಂದಿತ್ತೊ ಏನೊ…! ಸಪ್ತಗಿರಿಯದು ದೊಡ್ಡ ಘಾಟ್ ಆಗಿತ್ತು. ಸುಮಾರು ನಲವತ್ತು ಕಿಲೋಮೀಟರ್ ನಷ್ಟು ರಸ್ತೆ ತಿರುವಿನಿಂದಲೆ ಕೂಡಿತ್ತು. ಒಂದು ಬದಿಗೆ ಮುಗಿಲು ಮುಟ್ಟುವಷ್ಟು ಎತ್ತರದ ಗುಡ್ಡ, ಮತ್ತೊಂದು ಬದಿಗೆ ನೆಲ ಕಾಣಿಸದಷ್ಟು ಆಳವಾದ ಪ್ರಪಾತ. ಅದೆಷ್ಟು ಅಮಾಯಕ ಜೀವಿಗಳು ಪ್ರಾಣ ತೆತ್ತಿವೆಯೋ ಏನೊ. ಕಾಡು ಎಷ್ಟೊಂದು … Read more

ತಿರಂಗಾ ಧ್ವಜದ ರೂವಾರಿ ಪಿಂಗಳಿ ವೆಂಕಯ್ಯ: ನಾರಾಯಣ ಬಾಬಾನಗರ

ಏರುತಿಹುದು. . ಹಾರುತಿಹುದು ನೋಡು ನಮ್ಮ ಬಾವುಟಾ!! ಪುಟಾಣಿಗಳೇ, ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ನೀವು ಉಂಡಿರಬಹುದು. ಝೇಂಡಾ ಊಂಚಾ ರಹೇ ಹಮಾರಾ…ದಂತಹ ಹಾಡುಗಳನ್ನು ಹಾಡಿ, ಹೆಮ್ಮೆ ಗೌರವದಿಂದ ತಲೆ ಎತ್ತಿ, ನಮ್ಮ ದೇಶದ ಬಾವುಟಕ್ಕೆ ವಂದನೆ ಸಲ್ಲಿಸುತ್ತೀರಿ. ಬಾನಂಗಳದಲ್ಲಿ ಕೇಸರಿ, ಬಿಳಿ, ಹಸಿರು ಬಣ್ಣಗಳಿಂದ ಕೂಡಿದ ಧ್ವಜ ಪಟ. . ಪಟನೆ ಹಾರಾಡುತ್ತಿದ್ದರೆ ನಮ್ಮ ಕಣ್ಣಿಗೆ ಹಬ್ಬ. ನಮ್ಮ ಭಾರತದ ಬಾವುಟ ನಮಗೆಷ್ಟು ಆಪ್ತವಾದದ್ದು, ಆಪ್ಯಾಯಮಾನವಾದದ್ದು ಎಂದನಿಸುತ್ತದಲ್ಲವೇ? ಬಾವುಟದ ಚಿತ್ರ ಬಿಡಿಸಿ ಹೆಮ್ಮೆಯಿಂದ ನೀವು ಬೀಗಿರಲೂ ಸಾಕು. ನೀವು … Read more

ಮೆಂಟಲ್ ಎಬಿಲಿಟಿ ಕೋಡಿಂಗ್ ಭಾಗ – 1: ಪ್ರವೀಣ್‌ ಕೆ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೋಡಿಂಗ್‌ ಕುರಿತ ಪ್ರಶ್ನೆಗಳನ್ನು ಉತ್ತರಿಸಲು ಈ ವಿಡಿಯೋ ನಿಮಗೆ ತುಂಬಾ ಸಹಕಾರಿ… ಕೋಡಿಂಗ್ ಭಾಗ – 1:    

ತಮ್ಮನ್ನು ರಕ್ಷಿಕೊಳ್ಳಲಾಗದ ಸಜ್ಜನಿಕೆ ಏಕೆ ಬೇಕು?: ಕೆ ಟಿ ಸೋಮಶೇಖರ ಹೊಳಲ್ಕೆರೆ. 

ದಿನ ಪತ್ರಿಕೆಯ ಪುಟಗಳನ್ನು ತಿರುವಿ ಹಾಕಿದರೆ ಒಂದೆರಡಾದರೂ ಸ್ತ್ರೀಯರ ಮೇಲಿನ ಅತ್ಯಾಚಾರಗಳು, ಚೀಟಿಹಾಕಿ ಮೋಸಹೋದ ಪ್ರಕರಣಗಳು, ಪೋಲೀಸ್ ಅಧಿಕಾರಿಗಳು ಪೋಲೀಸರಿಗೆ ನೀಡಿದ ಕಿರುಕುಳಗಳು, ವರದಕ್ಷಿಣೆ ಕಿರುಕುಳ ತಾಳಲಾಗದೆ ಹಸುಗೂಸನ್ನು ಬಿಟ್ಟು ತಾಯಿ ಮಾಡಿಕೊಂಡ ಆತ್ಮಹತ್ಯೆಗಳು, ಲಂಚ ಪ್ರಕರಣಗಳು, ಭಯೋತ್ಪಾದನೆಗಳು, ಜನಾಂಗೀಯ ದ್ವೇಷಕ್ಕೆ ತುತ್ತಾದ ಬಲಹೀನರು, ಬಹುಸಂಖ್ಯಾತರಿಂದ ತೊಂದರೆಗೊಳಗಾದ ಅಲ್ಪಸಂಖ್ಯಾತರ ನೋವುಗಳು ವರದಿ ಆಗಿಯೇ ಇರುತ್ತವೆ! ಇಲ್ಲೆಲ್ಲಾ ತೊಂದರೆ ಅನುಭವಿಸಿದ್ದು ದುರ್ಬಲರು! ತೊಂದರೆ ನೀಡಿದ್ದು ಸಬಲರು! ಅಂದರೆ ಪ್ರಬಲರು ದುರ್ಬಲರಿಗೆ ಸದಾ ತೊಂದರೆ ನೀಡುವುದನ್ನು ಕಾಣುವಂತಾಗಿದೆ. ದುರ್ಬಲರ ಶೋಷಣೆಗೆ … Read more

ಪಂಜು ಕಾವ್ಯಧಾರೆ

ಅದೆಷ್ಟು ಕಷ್ಟ ಬುದ್ಧನಾಗುವುದೆಂದರೆ…! ಅದೆಷ್ಟು ಕಷ್ಟ ಈಗ ಬುದ್ಧನಾಗುವುದೆಂದರೆ ಆಸೆಯ ಬಿಡುವ ಯುದ್ಧ ಒಂದೆಡೆಯಾದರೆ ಸಕಲವ ತ್ಯಜಿಸಿ ಎದ್ದು ಬಿಡುವುದು ಇನ್ನೊಂದು! ಕಲ್ಲೆಸೆದವರ ಎದೆಯಲ್ಲಿ ಪ್ರೀತಿ ತುಂಬಿ ಬೆರಳ ಹಾರ ಮಾಡಿದವರ ಕೊರಳಲ್ಲಿ ಶಾಂತಿ ಧ್ವನಿ ನುಡಿಸಿ ರೋಗಕ್ಕೆ ಹೆದರಿ, ಸಾವಿಗೆ ಬೆದರಿ ಮಧ್ಯರಾತ್ರಿ ದಿಗ್ಗನೆ ಎದ್ದು ನಡೆದುಬಿಡುವುದೆಂದರೆ ಉದ್ದುದ್ದ, ಮಾರುದ್ದದ ಬೋಧನೆ ನೀಡದೇ ಸದ್ದು ಮಾಡದೆ ಭೋಧಿಯಡಿಯಲ್ಲಿ ಸಿದ್ಧಿ ಪಡೆದು ಸಿದ್ದಾರ್ಥನ ನಿರ್ವಾಣ ಮಾಡಿ ಗೌತಮನ ನಿರ್ಮಾಣ ಹೊಂದುವುದೆಂದರೆ ಕಡು ಕಷ್ಟವೇ ಅದು!! ಬುದ್ಧನಾಗುವುದೆಂದರೆ ಬರೀ … Read more

ಹಸಿರು ಸೀರೆ ಉಟ್ಟು ನೆರಿಗೆ ಒದೆಯುತ್ತಾ ನಡೆದ ಹುಡುಗಿಯರು: ಅಮರದೀಪ್

ಇದು ಮಳೆಗಾಲವಾ? ಅನುಮಾನವಾಯಿತು. ಕಡು ಬೇಸಿಗೆಗಿಂತ ಧಗೆಯಾದ ವಾತಾವರಣ. ಮಳೆಗಾಲವೇ ಹೀಗೇ… ಇನ್ನು ಬೇಸಿಗೆ ಹೇಗೆ? ಎನ್ನುವ ಆತಂಕ ಬೇರೆ. ಆಗಾಗ ಆಯಾಸ, ಸುಸ್ತು, ಚೂರು ರೆಸ್ಟ್ ಬೇಕು ಎನ್ನುವ ವಯಸ್ಸು ನಾವು ಹರೆಯದಿಂದ ಇಪ್ಪತ್ತು ಇಪ್ಪತ್ತೈದು ವರ್ಷಗಳನ್ನು ದಾಟಿ ಮುಂದೆ ಬಂದಿದ್ದೇವೆನ್ನುವುದಕ್ಕೆ ಮತ್ತು ಗಂಭೀರತೆ, ತಿಳುವಳಿಕೆಯಿಂದ, ಘನತೆಯಿಂದ ಇರಲೇಬೇಕಾದ ಅನಿವಾರ್ಯತೆಗೆ ಕಾರಣವಾಗುತ್ತದೆ. ಯಾವಾಗ ಮಳೆ ಬರುತ್ತದೋ, ಮತ್ತೆ ಬಿಸಿಲು ಸುರಿಯುತ್ತದೋ ತಿಳಿಯುವುದಿಲ್ಲ. ಪ್ರತಿ ದಿನ ಆಫೀಸ್, ಮನೆ, ಮಾರ್ಕೆಟ್ಟು, ಕೊನೆಗೆ ತಲೆಕೆಟ್ಟು ಹೋದರೆ ಒಂದು ಸಿನಿಮಾ, … Read more

ವೆಂಕ್ಟಣ್ಣ ಟೈಯರ್ ಅಂಗಡಿ: ದಯಾನಂದ ರಂಗದಾಮಪ್ಪ

ಸತತವಾಗಿ ಹತ್ತು ವರ್ಷ ಯಾವುದೋ ಖಾಸಗಿ ವಿದೇಶಿ ಕಂಪನಿಗೆ ಜೀತದಾಳಾಗಿ ದುಡಿದ ಮೇಲೆ ಯಾಕೋ ಬೇಸರ, ಒಂಟಿತನ, ಜಿಗುಪ್ಸೆ ನಿತ್ಯ ನೋಡೋ ಮಾನಿಟರ್ ಗಿಂತ ಹತ್ತಿರವಾಗಿ ಕಾಣುತ್ತಿತ್ತು. ಟ್ರಾಫಿಕ್ ಜಾಮ್ ನಲ್ಲಿ ನಿಂತಾಗ ನಮ್ಮೂರು ಜಾತ್ರೇಲಿ ನಿಂತ ನೆನಪು, ಯಾರದೋ ಬೈಕ್ ಹಿಂದಿನಿಂದ ಹಾರ್ನ್ ಮಾಡಿದಾಗ ನಮ್ಮೂರ ಗಣೇಶ ಹಬ್ಬ ದಲ್ಲಿ ಹೊಡೆದ ತಮಟೆ ಸದ್ದಿನ ಹಾಗೆ ಭಾಸವಾಗುತ್ತಿತ್ತು. ಆರಂಭದ ದಿನಗಳಲ್ಲಿ ಇಷ್ಟವಾಗುತಿದ್ದ ಮಾಲ್ಗಳು ಹೀಗೇ ಮಾಮೂಲಿಯಾಗಿ ಕಾಣುತ್ತಿವೆ. ಬೆಂಗಳೂರಿನ ದೆವ್ವಗಳೆಲ್ಲ ಒಂದು ಕಡೆ ಸೇರಿ ಜೋರಾಗಿ … Read more

ಮುಂಬಯಿ ಮಾವ: ಶೀಲಾ ಭಂಡಾರ್‌ಕರ್, ಮೈಸೂರು

ಮೂಲ ಕೊಂಕಣಿ: ವಲ್ಲಿ ಕ್ವಾಡ್ರಸ್, ಅಜೆಕಾರು. ಕನ್ನಡಕ್ಕೆ ಅನುವಾದ: ಶೀಲಾ ಭಂಡಾರ್‌ಕರ್, ಮೈಸೂರು ‘ಮುಂಬೈ ಮಾವ ತೀರಿ ಹೋದನಂತೆ.’ ಬೆಳಿಗ್ಗೆ ಎದ್ದು ಅಡುಗೆಮನೆಯೊಳಗೆ ಚಹ ಮಾಡಲು ನೀರು ಕುದಿಯಲಿಡುವ ಸಮಯಕ್ಕೆ ಸರಿಯಾಗಿ ವಾಟ್ಸ್ ಆ್ಯಪ್‍ಗೆ ಬಂದ ಮೆಸೆಜ್ ಓದಿದ ರೀಟಾಳ ಮನಸ್ಸಿನಲ್ಲಿ ಯಾವುದೇ ಭಾವನೆಗಳು ಹುಟ್ಟಲಿಲ್ಲ. ಅವನಿಷ್ಟು ದಿನ ಎಲ್ಲಿದ್ದ? ಯಾರ ಜತೆಯಲ್ಲಿದ್ದ? ಏನಾಗಿದ್ದ? ಎನ್ನುವುದು ಯಾರಿಗೂ ಸರಿಯಾಗಿ ತಿಳಿದಿರಲಿಲ್ಲ. ಆದರೂ ಹೋದ ವಾರ, ಊರಿನ ಕಾಲೇಜಲ್ಲಿ ಓದುತ್ತಿರುವ ಸೋದರತ್ತೆಯ ಮಗನೊಬ್ಬ “ಫ್ಯಾಮಿಲಿ” ಎನ್ನುವ ಹೆಸರಿನ ವಾಟ್ಸ್ … Read more

‘ಅವ್ವ ಮತ್ತು ಅಬ್ಬಲಿಗೆ’ ಪುಸ್ತಕ ಪರಿಚಯ..: ಸಚಿನ್ ಅಂಕೋಲಾ

ವೃತ್ತಿಯಲ್ಲಿ ಶಿಕ್ಷಕಿಯಾಗಿರುವ ಶಿರಸಿಯ ಶೋಭಾ ಹಿರೇಕೈ ಅವರ ಚೊಚ್ಚಲ ಕವನ ಸಂಕಲನ ಈ ‘ಅವ್ವ ಮತ್ತು ಅಬ್ಬಲಿಗೆ’. ಸುಮಾರು ನಲವತ್ತು ಕವಿತೆಗಳನ್ನು ಒಳಗೊಂಡಿರುವ ಈ ಸಂಕಲನವನ್ನು ಹಿರಿಯ ಕವಿ ವಿಷ್ಣು ನಾಯ್ಕರು ತಮ್ಮ ಸುದೀರ್ಘ ಮುನ್ನುಡಿಯ ಆರಂಭದಲ್ಲಿಯೇ ‘ಇದೊಂದು ದೇಸಿ ಚಿಂತನೆಯ ನೆಲ ಮೂಲದ ಕವನ ಗುಚ್ಛ’ ಎಂದು ಉಲ್ಲೇಖಿಸಿದ್ದಾರೆ. ಈ ಕೃತಿಯ ಶೀರ್ಷಿಕೆಯೇ ಅವರ ಮಾತನ್ನು ಅನುಮೋದಿಸುವಂತಿದೆ. ಕನಕಾಂಬರ ಹೂವನ್ನು ನಮ್ಮ ಆಡುಭಾಷೆಯಲ್ಲಿ ಅಬ್ಬಲಿಗೆ ಅಥವಾ ಅಬ್ಬಲಿ ಹೂವು ಎಂದು ಕರೆಯುತ್ತೇವೆ.ಈ ಅಬ್ಬಲಿಗೆ ಹೂವು ಯಾವುದೇ … Read more

ಮೆಂಟಲ್ ಎಬಿಲಿಟಿ ಭಾಜ್ಯತೆಯ ನಿಯಮಗಳು: ಪ್ರವೀಣ್‌ ಕೆ.

ಭಾಗಾಕಾರವನ್ನು ಸುಲಭವಾಗಿ ಮಾಡಲು ಭಾಜ್ಯತೆಯ ನಿಯಮಗಳು ಸಹಕಾರಿಯಾಗಿವೆ. ಈ ವಿಡಿಯೋ (https://www.youtube.com/watch?v=zJzuz6baRkM)ದಲ್ಲಿ ಭಾಜ್ಯತೆಯ ನಿಯಮಗಳನ್ನು ಅರ್ಥಮಾಡಿಸಿ ಅವುಗಳನ್ನು ನೆನಪಿಡಲು ಸುಲಭ ವಿಂಗಡನೆಯನ್ನು ನೀಡಲಾಗಿದೆ.  

ಅಂತರಾಗ್ನಿ: ಕಿರಣ್. ವ್ಹಿ

ಧೋಧೋ ಎಂದು ಧಾರಾಕಾರವಾಗಿ ಸುರಿಯುತ್ತಿರುವ ಮಳೆ.ನೆಲವೆಲ್ಲ ತೋಯ್ದು ಘಮ್ ಎಂದು ಹೊರಸೂಸುವ ಮಣ್ಣಿನ ಸುವಾಸನೆಗೆ ಎಂತಹವರೆ ಆದರು ಮೈಮರೆಯುವರು. ಅಂತಹ ಸಮಯವದು. ಸಂಜೆಯಾಗಿದ್ದರಿಂದ, ಸೂರ್ಯ ತನ್ನ ಪ್ರತಾಪವನ್ನು ಇಳಿಮುಖಗೊಳಿಸಿ ಮರಳುತ್ತಿದ್ದ. ದೂರದ ಬಾನಂಚಿನಲ್ಲಿ ಮುಳುಗುತ್ತಿದ್ದ  ನೇಸರನನ್ನೆ ದಿಟ್ಟಿಸಿ ನೋಡುತ್ತಿದ್ದ ಹರಿ. ಅವನ ಮನಸ್ಸು ಅಲ್ಲಿರಲಿಲ್ಲ. ಕೇವಲ ಶೂನ್ಯವೇ ಆವರಿಸಿತ್ತು ಅವನಲ್ಲಿ. ಇನ್ನೇನು ಜೀವನ ಮುಗಿದೇ ಹೋಯಿತು ಎನ್ನುವಂತೆ ನಿಂತಿದ್ದ. ರಪರಪನೆ ಹೊಡೆಯುವ ಹೊಡೆತವು ಅವನ ಅರಿವಿಗೆ ಬರಲಿಲ್ಲ. “ಥೋ  ಇದೇನು ಮಳೆ. ಬೆಳಗ್ಗೆಯಲ್ಲ ನೆತ್ತಿ ಸುಡುವಂತೆ ಬಿಸಿಲಿರತ್ತೆ. … Read more

“ಮುದವಲ್ಲವೇ ಮೌನದಾಲಿಂಗನ”: ನಾಗರೇಖಾ ಗಾಂವಕರ, ದಾಂಡೇಲಿ

“ಸಾಯ್‍ಲೆನ್ಸ  ಇಜ್ ದ್ ಬೆಷ್ಟ್ ಆನ್ಸರ್ ಫಾರ್ ಆಲ್ ಸ್ಟುಪಿಡ್ ಕ್ವೆಶ್ಚನ್ಸ್, ಸ್ಮಾಯ್ಲಿಂಗ ಇಜ್ ದ್ ಬೆಷ್ಟ್ ರಿಯಾಕ್ಷನ್ ಇನ್ ಅಲ್ ಕ್ರಿಟಿಕಲ್ ಸಿಚ್ಯುಯೇಶನ್”. ಎಷ್ಟು ಸುಂದರವಾಗಿ ಹೇಳಿದ್ದಾರೆ ಅಲ್ವೆ? ಮೌನ ಮತ್ತು ಮುಗುಳು ನಗೆಯ ಪರಿಪೂರ್ಣ ಮಹತ್ವವನ್ನು ಬಿಂಬಿಸುವ ಈ ವ್ಯಾಖ್ಯಾನ ಮಾರ್ಮಿಕವೆನಿಸುತ್ತದೆ ಮುಗುಳುನಗೆಯ ಮುಖಾರವಿಂದದಲಿ ಮೌನದ ರಿಂಗಣ ಮನಮೋಹಕ. ಬಹಳ ಸಂದರ್ಭಗಳಲ್ಲಿ ಕೆಲವು ಮೂರ್ಖ ಪ್ರಶ್ನೆಗಳಿಗೆ ಮೌನವೇ ಸರಿಯಾದ ಉತ್ತರ. ಹಾಗೆ ಮುಗುಳುನಗೆ ಒಂದು ಉದ್ದಿಪನ ಮಾತ್ರೆಯಂತೆ. ಅತಿ ಗಂಭೀರ ಹಾಗೂ ಕ್ಲಿಷ್ಟಕರ ಸನ್ನಿವೇಷಗಳಲ್ಲಿ … Read more

ನವರಾತ್ರಿಯ ಸಂಭ್ರಮ: ಪೂಜಾ ಗುಜರನ್ ಮಂಗಳೂರು.

ಭೂಮಿ ಮೇಲೆ ರಾಕ್ಷಸರ ಅಟ್ಟಹಾಸವು ಮಿತಿಮೀರಿದಾಗ. ಎಲ್ಲೆಲ್ಲೂ ಅನ್ಯಾಯ ವಿಜೃಂಭಿಸಿ ಅಧರ್ಮವೇ ತಾಂಡವಾಡುವಾಗ ದುಷ್ಟರನ್ನು ಸಂಹರಿಸಿ ಶಿಷ್ಟರನ್ನು, ರಕ್ಷಿಸಲು ಧರೆಗಿಳಿದು ಬಂದವಳೇ ದುರ್ಗಾಮಾತೆ. ತನ್ನ ಬಳಿಗೆ ನೊಂದು ಬರುವ ಭಕ್ತರಿಗೆ ದೇವಿಯೂ ಅನುಗ್ರಹವನ್ನು ಮಾಡಿ ತಮ್ಮ ಕಷ್ಟ ಕಾರ್ಪಣ್ಯಗಳನ್ನು ದೂರ ಮಾಡಿ ಹರಸುತ್ತಾಳೆ ಅನ್ನುವ ಅಚಲವಾದ ನಂಬಿಕೆ ಭಕ್ತರಿಗಿದೆ. ನವರಾತ್ರಿಯ ಕುರಿತು ಪುರಾಣಗಳಲ್ಲಿ ಹಲವಾರು ಕಥೆಗಳಿವೆ. ದುರ್ಗಾದೇವಿಯೂ ಮಹಿಷಾಸುರನೊಂದಿಗೆ ಪಾಡ್ಯದಿಂದ ನವಮಿವರೆಗೆ ಯುದ್ಧ ಮಾಡಿ ನವಮಿಯಂದು ಅಸುರನನ್ನು ಕೊಂದಳು. ಅದುದರಿಂದ ದೇವಿಗೆ ಮಹಿಷಾಮರ್ಧಿನಿ ಎಂದು ಕರೆಯುತ್ತಾರೆ. ಪುರಾಣದ … Read more

ಪರಮ ದೇಶಭಕ್ತ ಕ್ರಾಂತಿಕಾರಿ ಭಗತ್ ಸಿಂಗ್  !: ಕೆ ಟಿ ಸೋಮಶೇಖರ್ ಹೊಳಲ್ಕೆರೆ

1931 ರಲ್ಲಿ  ತನ್ನ 23 ನೇ ವಯಸ್ಸಿನಲ್ಲಿ ನೇಣಿಗೆ ಸಿದ್ಧನಾಗಿ ಕಪ್ಪು ಬಟ್ಟೆಯನ್ನು ತೊಟ್ಟರೂ ನೇಣಿಗೆ ಹೆದರಿ ಮುಖ ಮುಚ್ಚಿಕೊಳ್ಳದೆ  ನೇಣಿಗೆ ನಡುಕ ಉಂಟು ಮಾಡಿ ಕತ್ತನ್ನು ನೇಣಿಗೆ ಕೊಟ್ಟು ಕತ್ತನ್ನು ಸುತ್ತುವರಿದ ನೇಣಿನ ಹಗ್ಗಕ್ಕೆ ಮುತ್ತಿಟ್ಟು ತನ್ನ ಇಬ್ಬರು ಸ್ನೇಹಿತರೊಂದಿಗೆ ಹುತಾತ್ಮನಾದ ಧೈರ್ಯವಂತ ಭಗತ್ ಸಿಂಗ್!  ನೇಣಿಗೆ ಕತ್ತು ಕೊಡಲು ಇನ್ನು ಕೆಲವೇ ಗಂಟೆಗಳು ಬಾಕಿ ಇರುವಾಗ ‘ ದ ರೆವಲ್ಯೂಷನರಿ ಲೆನಿನ್ ‘ ಪುಸ್ತಕ ತಂದಿದ್ದೀರಾ? ಎಂದು ತಮ್ಮ ಕೊನೆಯ ಅಸೆಯ ತಿಳಿಯಲು ಬಂದ  … Read more

ಪಂಜು ಕಾವ್ಯಧಾರೆ

ಒಡೆದ ನೆನಪಿನ ಚೂರುಗಳು…!! ಆ ತೋರು ಬೆರಳು ಸಹ ಕಣ್ಣ ಮಿಟಿಗಿಸುತ್ತ ಮೊಬೈಲ್ನ ಮೂರು ಗಳಿಗೆಯೂ ಬ್ಲಾಕ್ ಮಾಡಿರುವ ವಾಟ್ಸಾಪ್ ನಂಬರ್, ಫೇಸ್ಬುಕ್ನ ಐಡಿ ನೋಡುವುದ ಬಿಡೋದಿಲ್ಲ ಅದಕ್ಕೂ ತಿಳಿದಿರಬೇಕು ನಾವು ದೂರವಾಗಿರುವ ವಿಷಯವು ಪದೇ ಪದೇ ನಿನ್ನ ನೆನಪಿಸುತ್ತಿದೆ !! ನೋಡು ನಮ್ಮನಗಲಿಕೆಯ ಕಂಡು ಆ ಬಸ್ಸು – ಲಾರಿ, ಕಾರು- ಸ್ಕೂಟರುಗಳು ಒಂದೇ ಸಮನೇ ಜೋರು ಸದ್ದು ಮಾಡಿ ರಸ್ತೆಗುಂಟ ಕೇಕೆ ಹಾಕುತ್ತ ಹೊಟ್ಟೆ ಉರಿಸುತ್ತಿವೆ…!! ಒಡೆದ ಕನ್ನಡಿಯೂ ಹೇಳುತ್ತಿತ್ತು ಛಿದ್ರ -ಛಿದ್ರವಾದ ಚೂರುಗಳಲ್ಲಿಯೂ … Read more

ಲೇಖನ ಆಹ್ವಾನ

ಆತ್ಮೀಯರೇ, ಆಯುಧ ಪೂಜೆ ಅಥವಾ ದಸರಾ ಹಬ್ಬದ ನಿಮ್ಮ ಅನುಭವಗಳನ್ನು ಬರೆದು ನಮಗೆ ಕಳುಹಿಸಿಕೊಡಿ. ಲೇಖನಗಳಿಗೆ ಪದಗಳ ಮಿತಿ ಇಲ್ಲ. ಲೇಖನದಲ್ಲಿ ಕನಿಷ್ಠವೆಂದರೂ 500 ಪದಗಳಿರಲಿ. ನಿಮ್ಮ ಲೇಖನಗಳು ಅಕ್ಟೋಬರ್ 5, 2019 ರ ಒಳಗೆ ನಮಗೆ ತಲುಪಲಿ. ನಮ್ಮ ಇ ಮೇಲ್ ವಿಳಾಸ: editor.panju@gmail.com, smnattu@gmail.com ನಿಮ್ಮ ಲೇಖನಗಳ ನಿರೀಕ್ಷೆಯಲ್ಲಿ ಪಂಜು ಬಳಗ

ಸಂಕಲನ ಮತ್ತು ವ್ಯವಕಲನ ಸುಲಭ ವಿಧಾನ: ಪ್ರವೀಣ್‌ ಕೆ.

ಸಂಕಲನ ಮತ್ತು ವ್ಯವಕಲನಗಳನ್ನು ಎಲ್ಲರೂ ಮಾಡುತ್ತಾರೆ. ಆದರೆ ಶಾಲೆಯಲ್ಲಿ ಕಲಿಸಿದ ಪಾರಂಪರಿಕ ವಿಧಾನದಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸುಗಳಿಸುವುದು ಸುಲಭವಲ್ಲ. ಅಲ್ಲದೇ ಆ ವಿಧಾನಗಳನ್ನು ನಾವು ಉಪಯೋಗ ಮಾಡಬೇಕಾಗಿಯೂ ಇಲ್ಲ. ಅದಕ್ಕಿಂತ ಸುಲಭದ ಮನಸ್ಸಿನಲ್ಲಿಯೇ ಕ್ಷಣಮಾತ್ರದಲ್ಲಿ ಮಾಡುವಂತಹ ವಿಧಾನಗಳನ್ನು ಈ ವಿಡಿಯೋ ದಲ್ಲಿ ನೀಡಲಾಗಿದೆ. ಇದಕ್ಕೆ ಪ್ರಾಕ್ಟೀಸ್ ಮಾಡಲು ಕೊಂಡಿಯನ್ನು ಇಲ್ಲಿ ನೀಡಲಾಗಿದೆ. ಇಲ್ಲಿ ಒತ್ತಿ: Practical test  

ಚಿಮಣಿ ಬುಡ್ಡಿ: ಚೈತ್ರಾ ವಿ.ಮಾಲವಿ

ಕೇರಿಯ ಬೀದಿ ದೀಪದ ಮಂದ ಬೆಳಕಲ್ಲಿ ತನ್ನ ಗುಡಿಸ್ಲು ಮುಂದ ಓದ್ತಾ ಕುಂತಿದ್ಲು ಪಾರಿ. “ಲೇ.. ಪಾರಿ, ಚಿಮಣಿ ಬುಡ್ಡಿ ಎಲ್ಲಿಟ್ಟಿ? ಕಾಣವಲ್ತು” ಒದರಿದ್ಲು ಅವ್ವ ಹುಲಿಗೆವ್ವ. “ಯವ್ವಾ, ಅಲ್ಲೇ ಇಟ್ಟಿನಿ ನೋಡ್ಬೇ” ಕುಂತಲ್ಲೇ ಉಸರಿದಳು. ಕತ್ಲು ಕವಿದ ಗುಡಿಸ್ಲು ಒಳಗ ತಡಕಾಡ್ತಿದ್ದ ಹುಲಿಗೆವ್ವಗ ಅಡಿಗೆ ಮನಿ ಮೂಲ್ಯಾಗ ತಣ್ಣಗ ಕುಂತಿದ್ದ ಚಿಮಣಿ ಬುಡ್ಡಿ ಕರ್ರಗೆ ಕಾಣ್ತು. ಏನೇನೋ ಗುನುಗುತ್ತಾ ಚಿಮಣಿ ಬುಡ್ಡಿಯನ್ನು ಕೈಗೆ ತಕ್ಕಂಡು, ಗುಡಿಸ್ಲು ನಡು ಕಂಬಕ ತಂದಿಟ್ಲು. ಬೆಂಕಿಪಟ್ಣ ಕಾಣ್ದೇ ಪಾರಿ ಮ್ಯಾಲಾ … Read more

ನನ್ನ ಆನಂದ: ಹೆಚ್. ಷೌಕತ್ ಆಲಿ, ಮದ್ದೂರು

ಖಾಸಗಿ ಶಾಲೆಗಳಲ್ಲಿ ಪ್ರತಿಷ್ಠಿತ ವಿದ್ಯಾರ್ಥಿಗಳೇ ಹೆಚ್ಚು, ಪೋಷಕರಿಗೂ ತಮ್ಮ ಮಕ್ಕಳ ಶಾಲೆಗಳ ಬಗ್ಗೆ, ಶಿಕ್ಷಕರ ಬಗ್ಗೆ, ಆಡಳಿತಾಧಿಕಾರಿ, ಕಾರ್ಯಕಾರಿ ಮಂಡಳಿಯ ಬಗ್ಗೆ ಇತರರೊಂದಿಗೆ ಹೇಳಿಕೊಳ್ಳೋದೆ ಒಂದು ಶ್ರೀಮಂತಿಕೆ ಎನ್ನಬಹುದು ಒಂದು ನಗರದ ಹೃದಯ ಭಾಗದಲ್ಲಿದ್ದ ಒಂದು ಪ್ರಸಿದ್ಧ ಶಾಲೆಯಲ್ಲಿ ನಾನು ಶಿಕ್ಷಕನಾಗಿ ಸೇರಿದ್ದ ಮೊದಲ ವರ್ಷದಲ್ಲಿ ……………. . ! ಎಂಟನೆಯ ತರಗತಿಗೆ ಪ್ರವೇಶ ಮಾಡುವ ಕೆಲ ವಿದ್ಯಾರ್ಥಿಗಳಿಗೆ ನಾನು ಕೆಲವು ಪ್ರಶ್ನೆಗಳನ್ನು ಅವರ ಮೆಂಟಲ್ ಎಬಿಲಿಟಿ, ಮೆಮೋರಿ, ರೀಡಿಂಗ್, ರೈಟಿಂಗ್, ಜಿ. ಕೆ. ಸ್ಕಿಲ್ಸ್ ಬಗ್ಗೆ … Read more

ಜೀವದ ಪ್ರಾಮುಖ್ಯತೆ: ಗಿರಿಜಾ ಜ್ಞಾನಸುಂದರ್

ಅಹ್! ದೇಹ ಹಗುರವಾಗುತ್ತಿರುವ ಅನುಭವ! ಏನಾಯಿತು ಅಷ್ಟೊಂದು ನೋವಾಗುತ್ತಿದ್ದ ದೇಹಕ್ಕೆ? ಪ್ರಸಾದ್ ಯೋಚಿಸುತಿದ್ದಂತೆ ತಿಳಿಯಿತು ಅವನ ಆತ್ಮ ದೇಹದಿಂದ ಹೊರಗೆ ಬಂದಿದೆ!! ಹಾಗಾಗಿ ನೋವು ಮರೆಯಾಗಿದೆ…. ತಾನು ಮನನೊಂದು ಆತ್ಮಹತ್ಯೆ ಮಾಡಿಕೊಂಡದ್ದು ನೆನಪಿಗೆ ಬಂತು….. ಕಷ್ಟಪಟ್ಟು ಓದಿ ಶಾಲೆಯಲ್ಲಿ ಮೊದಲನೆಯವನಾಗಿದ್ದ ಪ್ರಸಾದ್. ಎಲ್ಲದರಲ್ಲೂ ಮೊದಲು. ಆಟ ಪಾಠ, ವಿದ್ಯೆ, ಪರಿಶ್ರಮ, ಸಹನೆ, ಸ್ನೇಹ ಎಲ್ಲದರಲ್ಲೂ. ಅತ್ಯಂತ ಶ್ರದ್ಧೆಯಿಂದ ಓದಿ ಡಾಕ್ಟರ್ ಆಗಿದ್ದು ಆಯಿತು. ಉತ್ತಮ ರಾಂಕ್ ಗಳಿಸಿದ್ದಕ್ಕಾಗಿ ಸರ್ಕಾರಿ ಉದ್ಯೋಗವು ಆಯಿತು. ಡಾಕ್ಟರ್ ಆಗಿ ತನ್ನ ಕರ್ತವ್ಯ … Read more

ಬದಲಾಗುವ ಬಣ್ಣಗಳು (ಕೊನೆಯ ಭಾಗ): ಅಶ್ಫಾಕ್ ಪೀರಜಾದೆ

ಇಲ್ಲಿಯವರೆಗೆ -7 – ಪ್ರತೀಕ ಮೊದಲು ಬಂದವನೇ ಚೇತನನ್ನು ಭೇಟಿಯಾದ. ಚೇತನ ತನ್ನ ಹೆಂಡ್ತಿ ಮಕ್ಕಳನ್ನು ತೋರಿಸಿ ತಾನೀಗ ಸಂಸಾರ ಸಮೇತ ಹಾಯಾಗಿರುವುದಾಗಿ ಹೇಳಿದ “ಅವಳ ಸಂಗ ಬಿಟ್ಟು ಬಿಟ್ಟಿದ್ದೇನೆ. ಆದರೂ ಒಮ್ಮೊಮ್ಮೆ ಅವಳು ನೆನಪಾಗಿ ಕಾಡುತ್ತಾಳೆ ಒಂದೆರಡು ಪೆಗ್ಗು ಹಾಕಿ ಮಲಗಿ ಬಿಡುತ್ತೇನೆ” ಎಂದು ಹೇಳಿದಾಗ ಪ್ರತೀಕನಿಗೆ ಆಶ್ಚರ್ಯವಾಗುತ್ತದೆ. “ಗಂಡ ಹೆಂಡತಿಗಿಂತ ಹೆಚ್ಚಾಗಿ ಇದ್ದವರು ನೀವು… ಇಬ್ಬರೂ ಇಷ್ಟು ಸುಲಭವಾಗಿ ಹೇಗೆ ಅಗಲಿದಿರಿ..?” ಎಂದು ಪ್ರತೀಕ ಪ್ರಶ್ನೆಸಿದಾಗ ಏನು ಮಾಡಲಿ ಅನಿವಾರ್ಯವಾಯಿತು. ಈ ಮದುವೆ ಸಂಬಂಧ … Read more

ಪ್ರಾಮಾಣಿಕತೆ ಎಂಬ ಪ್ರತಿಬಿಂಬ: ಎಂ.ಎಚ್. ಮೊಕಾಶಿ ವಿಜಯಪುರ

ಯಾವುದೇ ಸಂಸ್ಕೃತಿಯಾದರೂ ಕೆಲವು ಮೌಲ್ಯಗಳನ್ನು ಹೊಂದಿರುತ್ತದೆ. ಅದರಲ್ಲಿ ಪ್ರಾಮಾಣಿಕತೆ ಎಂಬುದು ಮಹಾಮೌಲ್ಯವಾಗಿದೆ ಎಂದು ಜಗತ್ತಿನ ಎಲ್ಲ ಸಂಸ್ಕೃತಿಗಳ ನಂಬಿಕೆ. ಪ್ರಾಮಾಣಿಕತೆ ಎನ್ನುವುದು ವ್ಯಕ್ತಿಯ ನಡತೆಯ ಅಂಶವನ್ನು ಸೂಚಿಸುವುದಾಗಿದೆ. ಪ್ರಾಮಾಣಿಕತೆಯಲ್ಲಿ ನಿಷ್ಠೆ, ನಿಷ್ಪಕ್ಷಪಾತ, ವಿಶ್ವಾಸರ್ಹ ಮೊದಲಾದ ಗುಣಗಳು ಸೇರಿವೆ. ಇಂದಿಗೂ ನಮ್ಮಲ್ಲಿ ಸತ್ಯ, ನಿಷ್ಟೆ, ಪ್ರಾಮಾಣಿಕತೆಯಂತಹ ಹಲವಾರು ಸದ್ಗುಣಗಳಿವೆ. ಆದರೆ ಅದನ್ನು ಗುರುತಿಸುವ ಒಳಗಣ್ಣು ಬೇಕಾಗಿದೆ. “ನಾನು ಸರಿ, ಉಳಿದವರು ಸರಿಯಿಲ್ಲ” ಎಂಬ ಭಾವನೆಗಳು ಪ್ರಸ್ತುತ ಹೆಚ್ಚಾಗುತ್ತಿವೆ. ನಾವು ಸತ್ಯ ನಿಷ್ಟರೇ? ಎಂಬುದನ್ನು ಮೊದಲು ಪರಾಮರ್ಶಿಸಿಕೊಳ್ಳಬೇಕು. ಪ್ರಾಮಾಣಿಕತೆಯ ಬಗ್ಗೆ … Read more

ಈ ನೆಲಮೂಲದ ಅನುಭವ ಮತ್ತು ಅಧ್ಯಯನದ ಘಮಲು “ಹಾಣಾದಿ: ಕೆ.ಎಂ.ವಿಶ್ವನಾಥ ಮರತೂರ.

“ಈ ಬಿಸಿಲಂದ್ರೆ ಅಪ್ಪ ಇದ್ದಂಗೆ, ಮುಂಜಾನೆ ಎಳೆ ಮಗುವಿನಂತೆ, ಮಧ್ಯಾನ ಉರಿ ಬಿಸಿಲಿನಂತೆ ಸಿಡುಕಿನ ಮನುಷ್ಯ, ರಾತ್ರಿ ಬಿಸಿಲು ಬಿಟ್ಟು ಹೋದ ಅವಶೇಷದಂತಿರುತ್ತಿದ್ದ. ಬಿಸಿಲಿನಷ್ಟೆ ಸದ್ದಿಲ್ಲದೆ ಕುದಿಯುತ್ತಿರುವ ಮನುಷ್ಯ” “ನೀರು ಹರಿದು ನುಣುಪಾದ ಜಾರು ಕಲ್ಲುಗಳು. ಉಸುಕು ಮಣ್ಣು ಬೆರೆತು ನೆಲದಲ್ಲಿ ನೀರು ನಿಂತ ಅಗಲವಾದ ಜಾಗ. ಮಧ್ಯೆ ಮಧ್ಯೆ ವಿಚಿತ್ರ ಕೀಟಗಳ ಹಾರಾಟ” ಈ ಮೇಲಿನ ಸಾಲುಗಳು ನಾನು ಇತ್ತೀಚಗೆ ಓದಿರುವ ಕಪಿಲ ಪಿ ಹುಮನಾಬಾದೆ ಎನ್ನುವ ಪ್ರೀತಿಯ ಹರೆಯದ ಹುಡುಗನ “ಹಾಣಾದಿ” ಕಾದಂಬರಿಯ ಸಾಲುಗಳು. … Read more

ಪರಿವರ್ತನೆಗೊಂದು ಅವಕಾಶಕೊಟ್ಟಾಗ: ಎಂ. ಡಿ. ಚಂದ್ರೇಗೌಡ ನಾರಮ್ನಳ್ಳಿ

ಬದುಕನ್ನು ರೂಪಿಸಿಕೊಳ್ಳಲು ಒಂದು ಕೆಲಸ ಬೇಕು. ಕೆಲವರು ವೈಟ್ ಕಾಲರ್ ವೃತ್ತಿಯನ್ನೆ ಹುಡುಕುತ್ತಾರೆ. ಕೆಲವರು ಕಮಾಯಿ ಅಧಿಕವಿರುವುದನ್ನು ಅಪೇಕ್ಷಿಸುತ್ತಾರೆ. ಮತ್ತೆ ಕೆಲವರು ಆದರ್ಶಗಳ ಬೆನ್ನು ಹತ್ತುತ್ತಾರೆ. ದೇಶ ಪ್ರೇಮದ ತುಡಿತವುಳ್ಳವರು ಸೈನಿಕರಾಗುತ್ತಾರೆ. ಅರ್ಪಣಾ ಮನೋಭಾವ ಇರುವವರು ಶಿಕ್ಷಕರಾಗುತ್ತಾರೆ. ಕೆಲವು ವಿದ್ಯಾರ್ಥಿಗಳು ‘ತಮ್ಮ ಗುರುಗಳನ್ನು ಅನುಕರಿಸಿ ಶಿಕ್ಷಕರಾಗಬೇಕೆಂದು’ ಹೊರಡುತ್ತಾರೆ . ಕೆಲವರು ಸ್ವ- ಉದ್ಯೋಗದ ದಾರಿ ಹಿಡಿದು ಬದುಕು ಕಟ್ಟಿಕೊಳ್ಳುತ್ತಾರೆ. ಎಷ್ಟೋ ದಿನಗಳ ನಂತರ, ಎದುರು ಸಿಕ್ಕಾಗಲೋ, ಪೋನ್ ಕರೆ ಮಾಡಿದಾಗಲೋ, ನೆನಪುಗಳಿಗೆ ಮತ್ತಷ್ಟು ಹಸಿರು ಬಣ್ಣ ಬಳಿಯುತ್ತಾರೆ. … Read more

ಸೆಳತ: ಕಿರಣ್. ವ್ಹಿ, ಧಾರವಾಡ

ಸುಧಾಕರ ಹಾಗು ಸ್ವಾತಿ ರಾತ್ರೋರಾತ್ರಿ ಊರು ಬಿಟ್ಟು ಹೊರಟು ಹೋದರು. ಇಬ್ಬರದು ಮೂರು ವರ್ಷಗಳ ಪ್ರೇಮ್ ಕಹಾನಿ ಆಗಿದ್ದರಿಂದ ಸೆಳತ ಹೆಚ್ಚಿಗೆಯೆ ಇತ್ತು. ಸುಧಾಕರ, ಆಟೊ ಓಡಿಸಿಕೊಂಡು ನಾಲ್ಕು ಕಾಸು ಸಂಪಾದನೆ ಮಾಡುತಿದ್ದ. ಅದ್ಹೇಗೊ ಇಬ್ಬರ ನಡುವೆ ಪ್ರೇಮಾಂಕುರವಾಗಿಬಿಟ್ಟಿತ್ತು. ಸುಧಾಕರನ ತಾಯಿ ಜಲಜಮ್ಮನಿಗೆ, ಗಂಡ ತೀರಿ ಹೋದಾಗಿನಿಂದ ಕೆಲಸ ಮಾಡಬೇಕಾದ ಅನಿವಾರ್ಯತೆ ಬಂದಿತ್ತು. ಬಡತನವೊ, ಅಥವ ಮನೆಯ ಯಜಮಾನನಿಲ್ಲವೆಂಬ ಕಾರಣಕೋ, ಸುಧಾಕರನಿಗೆ ವಿದ್ಯೆ ಅಷ್ಟೊಂದು ತಲೆಗೆ ಹೋಗಲಿಲ್ಲ. ಕಾಲಕಳದಂತೆ ಓದಬೇಕೆಂಬ ಹಂಬಲವು ಕಡಿಮೆಯಾಯಿತು. ತಾಯಿಗೆ ವಯಸ್ಸಾಗುತ್ತಿದೆ ಎಂದು … Read more