ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 29 & 30): ಎಂ. ಜವರಾಜ್

-೨೯- ಅವತ್ತೊಂದಿನ ಈ ಅಯ್ನೋರು ಹೊಳಕರಲಿ ಕೈಯಿ ಕಾಲು ತೊಳಕಂಡು ನನ್ನೂ- ಮರುಳ್ಗಾಕಂಡು ಉಜ್ಜಿ ತೊಳ್ದು ನೀರಂಜಿ ಮರದ ಬುಡದಲ್ಲಿ ನೀರ ಸೋರಕ ಬುಟ್ಟು ಗರಕ ಮ್ಯಾಲ ತಿಕ ಊರಿ ಕುಂತ್ಮೇಲ ಅಕ್ಕ ಪಕ್ಕ ಊರೋರು ಅನ್ತ ಕಾಣುತ್ತ ನೆಪ್ಪಿರ ಮುಂದಾಳು ಬಂದ್ರು. ನಾನು ನೋಡ್ತನೆ ಇದ್ದಿ ಗಗ್ಗೇಶ್ವರಿ ಆಣ್ಗುಂಟ ಹೊಳ ದಾಟ್ಗಂಡು ಚೆಂಗುಲಿ ಬತ್ತಿರದು ಕಾಣ್ತು ಅವನ ಕಂಕುಳಲ್ಲಿ ಏನಾ ಇತ್ತು. ಬಂದವ ಸುತ್ತ ಕುಂತಿದವ್ರ ಮುಂದ ಟವಲ್ಲ ಹಾಸಿ ಪುರಿ ಸುರುದು ಕಾರಸ್ಯಾವ್ಗ ಕಳ್ಳ … Read more

ಬೆನ್ ಜಾನಸನ್‍ನ ನಾಟಕ- Every Man In His Humour- ಅವಿವೇಕತನಕ್ಕೆ ಕನ್ನಡಿ: ನಾಗರೇಖಾ ಗಾಂವಕರ

ಇಂಗ್ಲೆಂಡಿನ ಹಳೆಯ ಉಪನಗರ ಹಾಗ್ಸ್‍ಡೆನ್‍ನ ನೋವೆಲ್ಲ್ ವಯೋವೃದ್ದ, ಆದರೆ ಧೀಮಂತ, ವ್ಯವಹಾರಿಕ ಕಲೆಯಲ್ಲಿ ನಿಪುಣ. ಆತನ ಮಗ ತರುಣ ಎಡ್ವರ್ಡ. ಮಗನ ಆಸಕ್ತಿಗಳು ಆತನ ಶ್ರೇಯಸ್ಸು ಇವುಗಳ ಬಗ್ಗೆಯೇ ತಂದೆಯ ಮೊದಲ ಆದ್ಯತೆ. ಮಗನಿಗೆ ಆಪ್ತವಾಗಿರುವ ಕಾವ್ಯ ಸಾಹಿತ್ಯಗಳೆಲ್ಲವೂ ಆತನಿಗೆ ಉಪಯೋಗಕ್ಕೆ ಬಾರದ ಸಂಗತಿಗಳು. ಲಾಭವಿಲ್ಲದ ವಿದ್ಯೆ. ಅದರೊಂದಿಗೆ ಆತನ ಇನ್ನೊಂದು ಚಿಂತೆ ಸದಾ ಗಿಡುಗಗಳ ಪಳಗಿಸುತ್ತ ಕಾಲಹರಣ ಮಾಡುವ ಆತನ ಅಣ್ಣನ ಮಗ ಹಳ್ಳಿ ಗಮಾರ ಸ್ಟೀಫನ್ ಬಗ್ಗೆ. ಒಬ್ಬ ವ್ಯಾವಹಾರಿಕ ಚಾತುರ್ಯವುಳ್ಳ ನೊವೆಲ್ಲ್ ತಂದೆಯಾಗಿ … Read more

ಸ್ನೇಹದ ಕಡಲಲ್ಲಿ: ಸುಧಾ ಹುಚ್ಚಣ್ಣವರ

ಮನುಷ್ಯ ಇತರ ಎಲ್ಲ ಜೀವಿಗಳಿಗಿಂತ ಬುದ್ಧಿಜೀವಿ ಎನಿಸಿಕೊಂಡಿದ್ದಾನೆ, ಹಾಗೆಯೇ ಸಂಘಜೀವಿ. ಸಮಾಜವನ್ನು ಬಿಟ್ಟು ಬದುಕಲಾರ ತನ್ನ ಎಲ್ಲ ಬೇಕು ಬೇಡಿಕೆಗಳನ್ನು ಸಮಾಜದ ಸಂಘ ಜೀವನದಲ್ಲಿ ಈಡೇರಿಸಿಕೊಳ್ಳುತ್ತಾನೆ. ತನ್ನ ಕುಟುಂಬದ ಸದಸ್ಯರ ಜೊತೆ ನೆರೆಹೊರೆಯವರ ಜೊತೆ ಪ್ರೀತಿ ಸ್ನೇಹ ಸಹಕಾರ ಕೊಟ್ಟು ತೆಗೆದುಕೊಳ್ಳುವ ಭಾವನೆಯಿಂದ ಬೆಳೆಯುತ್ತಾ ಸಾಗುತ್ತಾನೆ. ಹೀಗೆ ಒಂದು ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ “ಜೀವನದ ಮೌಲ್ಯಗಳು” ಎಂಬ ವಿಷಯದ ಕುರಿತು ಪಾಠ ಮಾಡುತ್ತಿರುವಾಗ ವಿದ್ಯಾರ್ಥಿಗಳಿಗೆ ಹೇಳುತ್ತಾರೆ, ಮಕ್ಕಳೇ ಜೀವನದಲ್ಲಿ “ಪ್ರೀತಿ ಸ್ನೇಹ “ಎಲ್ಲವೂ ಬಹಳಷ್ಟು ಮುಖ್ಯ. ಮನುಷ್ಯ … Read more

ಹೇ ಮಾನವ ನಮ್ಮನ್ನೂ ಬದುಕಲು ಬಿಡಿ: ಮಂಜುಳಾ ಶೆಟ್ಟಿಗಾರ್

ಮುಂಜಾನೆ ಬೇಗನೆ ಎದ್ದೆ  ಕಾರಣ ಬಯಕೆಯ ಹಸಿವು. ಗರ್ಬಿಣಿಯಾಗಿದ್ದರಿಂದ ತುಂಬಾ ಆಯಾಸ ಹಾಗಾಗಿ ಹಿಂದಿನ ದಿನ ರಾತ್ರಿಯಾಗುವುದರೊಳಗೆ ಸಿಕ್ಕಿದ್ದನ್ನು ತಿಂದು ಬೇಗನೆ ಮಲಗಿದ್ದೆ. ಅದೇ ಕಾರಣ ಇಂದು ಸೂರ್ಯನ ರಶ್ಮಿ ಸೊಕುವುದಕ್ಕಿಂತ ಮೊದಲೇ ಹಸಿವು ನನ್ನ ಬಡಿದೆಬ್ಬಿಸಿತು.  ಸರಿ ಏನಾದರೂ ತಿಂದು ಹೊಟ್ಟೆ ತುಂಬಿಸಿಕೊಳ್ಳಬೇಕು, ನನಗಲ್ಲದಿದ್ದರು ನನ್ನ  ಉದರದಲಿ ಬೆಳೆಯುತ್ತಿರುವ ನನ್ನ ಕನಸಿನ ಕೂಸಿಗೆ ಎಂದು ದೌಡಾಯಿಸಿ ಎದ್ದೆ. ಗರ್ಭಿಣಿಯ ಆಯಾಸ ಕಾಡುತಿತ್ತು. ಆಯಾಸ ಎಂದು ಕೂತವಳಿಗೆ ಮತ್ತೇ ಹಸಿವು ಹೊಟ್ಟೆಯಲ್ಲಿ ಚುರ್ ಎಂದು ಎಚ್ಚರಿಸಿತು.  ತಡಮಾಡದೆ ಎದ್ದು … Read more

ವಿದಾಯ- ಸಾಧ್ಯವೇ?: ಸಹನಾ ಪ್ರಸಾದ್

ಕಳೆದ ವಾರದಲ್ಲಿ ಚಿಕ್ಕ ವಯಸ್ಸಿನ ವ್ಯಕ್ತಿಗಳ ಸಾವು ನಮ್ಮನ್ನು ನೋಯಿಸಿದೆ. ವಯಸ್ಸಾದವರು ಹೋದರೆ ಮನಸ್ಸಿಗೆ ದುಃಖವಾದರೂ ಸಮಾಧಾನ ಮಾಡಿಕೊಳ್ಳಬಹುದು ” ಹೋಗಲಿ ಬಿಡು, ಬದುಕು ಕಂಡಿದ್ದರು, ಅದರ ಸಿಹಿ, ಕಹಿ ಉಂಡಿದ್ದರು. ಅವರ ಆಯುಸ್ಸು ಮುಗಿದಿತ್ತು. ಭಗವಂತ ಕರೆದುಕೊಂಡ” ಎಂದು. ಚಿಕ್ಕವರಾದರೆ ಮುಮ್ಮಲ ಮರುಗುವುದನ್ನು ಬಿಟ್ಟು ಬೇರೆನೂ ಮಾಡಲಾಗುವುದಿಲ್ಲ. ವಿದಾಯ ಹೇಳುವುದು ಕಷ್ಟ ಎಂಬುದರಲ್ಲಿ ದೂಸರಾ ಮಾತಿಲ್ಲ. ಅತ್ಯಂತ ಕಷ್ಟಕರವಾದ ಪದಗಳಲ್ಲಿ ಮೊದಲ ಬಾರಿಗೆ “ಹಲ್ಲೊ” ಎನ್ನುವುದು, ಕೊನೆಯ ಬಾರಿಗೆ ” ಬೈ” ಎನ್ನುವುದು ಎನಲಾಗಿದೆ. ಹಲ್ಲೊ … Read more

Online Hydroponics ತರಬೇತಿ (ಕನ್ನಡದಲ್ಲಿ)

ಮಣ್ಣನ್ನು ಬಳಸದೆ, ಅವಶ್ಯಕ ಲವಣಾಂಶ ಭರಿತ ನೀರಿನಲ್ಲಿ ನಿಮ್ಮ ಮನೆಯಲ್ಲಿಯೇ ಹಣ್ಣು ತರಕಾರಿ ಬೆಳೆಯುವ ವಿಧಾನದ ಬಗ್ಗೆ ಕೇಳಿದ್ದೀರಾ? ಅದಕ್ಕೆ hydroponics ಅನ್ನುತ್ತಾರೆ. ಅದನ್ನು ನೀವೂ ಕಲಿಯಬೇಕೆ? ಇಲ್ಲಿದೆ ಅವಕಾಶ! ಬೆಳೆಸಿರಿ ಸಂಸ್ಥೆ ಕನ್ನಡಿಗರಿಗಾಗಿ, ಕನ್ನಡದಲ್ಲಿಯೇ ವಿಶೇಷವಾಗಿ ತಯಾರಿಸಿದ ತರಬೇತಿ ಶಿಬಿರ, online ನಲ್ಲಿ… ಅದೂ ವಿಶೇಷ ರಿಯಾಯಿತಿಯೊಂದಿಗೆ !! ಒಬ್ಬರಿಗೆ ಕೇವಲ 999 ಮಾತ್ರ (ಮೂಲ ಬೆಲೆ 1999)! *ಕೆಲವೇ ಸೀಟುಗಳು ಲಭ್ಯ. ಮೊದಲು ಬಂದವರಿಗೆ ಆದ್ಯತೆ. ದಿನಾಂಕ: ಜೂನ್ 21, 2020 – ಭಾನುವಾರ … Read more

NRIs ಅಂದ್ರೆ ನಾನ್ ರಿಟರ್ನಿಂಗ್ ಇಂಡಿಯನ್ಸ್? (ಭಾಗ ೨): ಗುರುಪ್ರಸಾದ ಕುರ್ತಕೋಟಿ

ಇಲ್ಲಿಯವರೆಗೆ ಪರದೇಶದಲ್ಲಿ ತಳ ಊರಲು ಹೆಣಗಾಡುವ ಮೊದಲ ದಿನಗಳಲ್ಲಿ ತುಂಬಾ ಖುಷಿ ಕೊಡುವ ಕೆಲವೇ ಕೆಲವು ಸ್ಥಳಗಳಲ್ಲಿ ಒಂದು Indian grocery stores! ತರತರಹದ ಮಸಾಲೆ ಪದಾರ್ಥಗಳು, ಕಾಳುಗಳು, ಚುರುಮುರಿ, ಅವಲಕ್ಕಿ, ಇಡ್ಲಿ ಮಿಕ್ಸ್ ಇನ್ನೂ ಏನೇನೋ… ಸಿಗುವ ಏಕೈಕ ಸ್ಥಳ ಜೊತೆಗೆ ಭಾರತೀಯರ ಸಮ್ಮಿಲನದ ಒಂದು ಕೇಂದ್ರವೂ ಹೌದು. ಅಂಥದರಲ್ಲಿ ಅದು ಕನ್ನಡಿಗರದೇ ಇದ್ದರಂತೂ ಮುಗಿದೇ ಹೋಯಿತು. ಕನ್ನಡಿಗರೇ ನಡೆಸುತ್ತಿರುವ ಅಂತಹ ಒಂದು ಅಂಗಡಿ ಒಮಾಹಾದಲ್ಲಿದೆ. ಅದರ ಹೆಸರು ತುಳಸಿ! ಅಲ್ಲಿ ಹೋದಾಗಲೊಮ್ಮೆ, ನಾವು ಸಣ್ಣವರಿದ್ದಾಗ … Read more

ಸಮಾಧಾನ: ಗಿರಿಜಾ ಜ್ಞಾನಸುಂದರ್

ಘಂಟೆ ರಾತ್ರಿ 8.30 ಆಗಿತ್ತು. ಕುಮುದಳ ಶಿಫ್ಟ್ ಮುಗಿದು ಅವಳು ತನ್ನ ಕಂಪ್ಯೂಟರ್ ಮುಚ್ಚುತ್ತಿದ್ದಳು. ಅಷ್ಟರಲ್ಲಿ ಮೂರ್ತಿ ಅಂಕಲ್ ನ ಕರೆ. ಅವಳಿಗೆ ಅವರ ಕರೆಯನ್ನು ಸ್ವೀಕರಿಸಲು ಮನಸ್ಸಿಲ್ಲ. ಹಾಗೆ ಸುಮ್ಮನೆ ಮೊಬೈಲ್ ಕಂಪಿಸುತ್ತಿತ್ತು. ತನ್ನ ಆಫೀಸ್ ನ ಕ್ಯಾಬ್ ಗಳು ನಿಲ್ಲುವ ಜಾಗಕ್ಕೆ ಬೇಗ ಬೇಗ ಹೆಜ್ಜೆ ಹಾಕುತ್ತಿದ್ದಳು. 15 ನಿಮಿಷದಲ್ಲಿ ಅವಳಿಗೆ ಅವಳ ಕ್ಯಾಬ್ ಹಿಡಿದು ಕೂರಬೇಕಿತ್ತು. ಮತ್ತೊಮ್ಮೆ ಮೂರ್ತಿ ಅಂಕಲ್ ನ ಕರೆ. ಅವಳಿಗೆ ಇಷ್ಟವೇ ಇಲ್ಲದ ಕರೆ. ಸುಮ್ಮನಾದಳು. ಕ್ಯಾಬ್ ಹಿಡಿದು … Read more

ಅಜ್ಜನ ಹಲ್ಲು ಸೆಟ್ಟು ಮಕ್ಕಳಿಗಾಗಿ ಕವಿತೆಗಳು: ಸೂಗೂರೇಶ ಹಿರೇಮಠ

ಕವಿಗಳು: ಗುಂಡುರಾವ್ ದೇಸಾಯಿ ಪ್ರಕಾಶಕರು: ಜಿ ಜಿ ದೇಸಾಯಿ ಮಸ್ಕಿ ಅಜ್ಜನ ಹಲ್ಲು ಸೆಟ್ಟು ಮಕ್ಕಳ‌ಸಾಹಿತ್ಯದ ಮೂಲ ಪುರುಷರೆಂದರೆ ಅಜ್ಜ ಅಜ್ಜಿ ಮೊಬೈಲ್ ಟೀವಿಗಳಿಲ್ಲ ಕಾಲದಲ್ಲಿ ನಮ್ಮ ಅಜ್ಜ ಅಜ್ಜಿಯರು ಕತೆ ಹೇಳಿತ್ತಾ ಮಕ್ಕಳಿಗೆ ಮೌಲ್ಯಗಳನ್ನೂ ಹಾಗೂ ಮನರಂಜನೆಯನ್ನು ನೀಡುತ್ತಾ ಶಾಲೆಗಳು ಕಲಿಸದಂತಹ ಸೃಜನಾತ್ಮಕತೆಯನ್ನು ಅಜ್ಜ ಅಜ್ಜಿಯರು ಹೇಳಿಕೊಡುತ್ತಿದ್ದರು. ಹೀಗಿರುವಾಗ ಮಕ್ಕಳಿಗೆ ಅಜ್ಜನೆಂದರೆ ಹಿಗ್ಗೊಹಿಗ್ಗು ಅಂತಹ ಹಿಗ್ಗು ಕೊಡುವಂತಹ ಕೃತಿ ಅಜ್ಜನ ಹಲ್ಲು ಸೆಟ್ಟು. ಸ್ವತಃ ಶಿಕ್ಷಕರಾಗಿರುವ ಹಾಸ್ಯ ಪ್ರಬಂಧಕಾರರಾಗಿರುವ ಶ್ರೀಯುತ ಗುಂಡುರಾವ್ ದೇಸಾಯಿ ಯವರು ಮಕ್ಕಳಿಗಾಗಿ … Read more

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 27 & 28): ಎಂ. ಜವರಾಜ್

-೨೭- ಕತ್ತಲಾಗಿತ್ತು. ಹೆಂಡದ ಗುಳ್ಳಲಿ ಲಾಟೀನು ಉರಿತಾ ಉರಿಯೋ ಬೆಳಕಲಿ ಕುಡಿಯೋರು ಕುಡಿತಾ ತೂರಾಡ್ತ ಆ ಕುಡ್ದೋರು ಗಂಟ್ಲು ಗಳ್ಳಾಕ ಸದ್ದಿತ್ತು. ‘ಅಯ್ನೋರಾ ನಾ ಈಗ ಏನ್ಮಾಡ್ಲಿ ಸಂತ ಒಳಗ ಹೇಳುದ್ದಾ ನಾ ಯಾಗಾರು ನಂಬ್ಲಿ ಮದ್ವಿ ಆಗಿ ಮಕ್ಳ ಫಲ ಇಲ್ದೆ ಈ ಸವ್ವಿನೇ ದೇವ್ತಿತರ ಬಂತು ಆ ದೇವ್ತಿ ಕಿಲಕಿಲ ಅನ್ನವತ್ಲಿ ನನ್ ಪರ್ಶು ಹುಟ್ತು ಆ ದೇವ್ತಿ ಈಗ ಈತರ ಅಂದ್ರ ನನ್ ಕಳ್ಳು ಕಿತ್ಬತ್ತುದ ಅಯ್ನೋರಾ..’ ಅಂತ ನನ್ ಕಾಲಯ್ಯ ಬಿಕ್ಕುಳುಸ್ತ … Read more

ಅಂಜದೆ ಮುನ್ನುಗ್ಗುತ್ತಿರು: ಪ್ರೊ ಸುಧಾ ಹುಚ್ಚಣ್ಣವರ

ಪ್ರತಿಯೊಬ್ಬ ಮನುಷ್ಯ ತನ್ನ ಬಾಳ ಹಾದಿಯಲ್ಲಿ ಹಲವಾರು ರೀತಿಯ ಏಳು ಬೀಳುಗಳನ್ನು ಕಾಣುತ್ತಾ ಸಾಗುತ್ತಾನೆ, ಕಷ್ಟ ಸುಖ ನೋವು ನಲಿವು ಹೀಗೆ ಹಲವಾರು ರೀತಿಯ ವೈಪರೀತ್ಯಗಳನ್ನು ಜೀವನದ ವಿಭಿನ್ನ ಸನ್ನಿವೇಶಗಳಲ್ಲಿ ಎದುರಿಸುತ್ತಾ ಸಾಗುವ ಮನುಷ್ಯ ಕೆಲವೊಮ್ಮೆ ಜೀವನದ ಕಹಿ ಘಟನೆಗಳಿಂದ ವಿಚಲಿತನಾಗಿ ಬಿಡುತ್ತಾನೆ. ಮುಂದೇನು ಮಾಡಬೇಕು ಎಂಬ  ವಿಚಾರವೇ ತೋಚದಂತಾಗಿ ಗೊಂದಲಕ್ಕೀಡಾಗುತ್ತಾನೆ. ಆದರೆ ವಾಸ್ತವದಲ್ಲಿ ಯಾವುದೇ ಒಂದು ಸಮಸ್ಯೆಗೆ ಚಿಂತೆ ಮಾಡುವುದು ಪರಿಹಾರವಲ್ಲ ಬದಲಾಗಿ ಆ ಸನ್ನಿವೇಶಗಳನ್ನು ಧೈರ್ಯದಿಂದ ಎದುರಿಸಿ ಮುನ್ನುಗ್ಗುತ್ತಾ ಸಾಗುವುದೇ ಮನುಷ್ಯ ಧರ್ಮವಾಗಬೇಕು ಕಾರಣ … Read more

ಸಂತೆಗಳೆಲ್ಲ ಮತ್ತೆ ತುಂಬಿ ಕಂಗೊಳಿಸುವುದೇ: ವಿಜೇತ ಮಳಲಗದ್ದೆ

ಲಾಕ್ ಡೌನ್, ಸೀಲ್ ಡೌನ್, ಕ್ವಾರಂಟೈನ್, ಕಂಟೈ ನ್ಮೆಂಟ್ ಝೋನ್, ರೆಡ್, ಗ್ರೀನ್, ಆರೇಂಜ್ ಝೋನ್ ಇವೆಲ್ಲ ಈ ಎರಡೂವರೆ ತಿಂಗಳಿಂದ ಪ್ರತಿದಿನ ಕೇಳಿ ಬರುತ್ತಿರುವ ಪದಗಳು. ಬಹುಶಃ ಹಿಂದೆಂದೂ ಕಂಡಿರದಂತಹ ನಿಗೂಢತೆ ಬೆಚ್ಚಿಬೀಳಿಸುವ ಭಯ ಜನರಲ್ಲಿ ಆವರಿಸಿದೆ. ಇಡೀ ವಿಶ್ವಕ್ಕೆ ವಿಶ್ವವೇ ಕೊರೋನಾ ಮಾರಿಯಿಂದ ತತ್ತರಿಸಿದೆ. ಒಂದು ಕಡೆ ಜನರ ಜೀವದ ಪ್ರಶ್ನೆಯಾದರೆ ಮತ್ತೊಂದು ಕಡೆ ಜೀವನದ ಪ್ರಶ್ನೆ. ನಮಗೆ ಎರಡೂ ಮುಖ್ಯವಾದುದೆ. ಜೀವ ಜೀವನದ ಮಧ್ಯೆ ತೂಗುಗತ್ತಿಯ ಮೇಲೆ ನೇತಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವರು ಜೀವವನ್ನು … Read more

ಮುಂದಿನ ಪೀಳಿಗೆಯ ಭವಿಷ್ಯವನ್ನು ಕಿತ್ತುಕೊಳ್ಳದಿರೋಣ !: ನಿಂಗಪ್ಪ ಹುತಗಣ್ಣವರ

ನಿಸರ್ಗವು ನಮ್ಮ ಆಸೆಗಳನ್ನು ಪೂರೈಸುತ್ತದೆ, ನಮ್ಮ ದುರಾಸೆಗಳನ್ನಲ್ಲ ! ಗಾಂಧೀಜಿಯವರ ಈ ಮಾತನ್ನು ನಾವು ಅರ್ಥೈಸಿಕೊಳ್ಳದೆ ಹೋದರೆ ಇಡೀ ಭೂಮಿಯನ್ನು ನಾವು ಅಂತ್ಯದೆಡೆಗೆ ಕೊಂಡುಯ್ಯುತ್ತೇವೆ. ಇದು ನನ್ನ ಗೆಳತಿ ಭೂಮಿಯ ಮಾತು. ಹೌದು ನಿಜಕ್ಕೂ ಗಂಭೀರವಾಗಿ ಯೋಚಿಸಬೇಕಾದ ಸಂಗತಿಯಿದು. ದಿನದಿಂದ ದಿನಕ್ಕೆ ಜಾಗತಿಕ ತಾಪಮಾನ ಏರುತ್ತಿದೆ ಆದರೂ ಕಾರ್ಖಾನೆಗಳು ಹೊಗೆಯುಗುಳುತ್ತಿವೆ, ವಾಹನಗಳು ಇಂಧನವನ್ನು ಸುಡುತ್ತಲಿವೆ. ಬದುಕಲು ಆಮ್ಲಜನಕ ಅವಶ್ಯಕವೆಂದು ತಿಳಿದಿದ್ದರೂ ಒಂದು ಸಸಿಗೆ ನೀರುಣಿಸಲಾಗದಷ್ಟು ಅವಿಶ್ರಾಂತರಾಗಿ ದುಡಿಯುವವರ ಹಾಗೆ ನಡೆದುಕೊಳ್ಳಿತ್ತಿದ್ದೇವೆ. ಮತ್ತೊಂದು ಪರಿಸರ ದಿನವನ್ನು ನಾವು ಆಚರಿಸಿ … Read more

ನಾನು ಅವನಲ್ಲ!: ಜೆ.ವಿ.ಕಾರ್ಲೊ

ಹಿಂದಿ ಮೂಲ: ಮುನ್ಶಿ ಪ್ರೇಮಚಂದ್ ಇಂಗ್ಲಿಶಿನಿಂದ: ಜೆ.ವಿ.ಕಾರ್ಲೊ ಇದು, ಹಿಂದಿನ ದಿನ ನಾನು ಕುದುರೆ ಗಾಡಿಯಲ್ಲಿ ಪೇಟೆಗೆ ಹೋಗುತ್ತಿದ್ದಾಗ ನಡೆದ ಘಟನೆ. ಗಾಡಿ ಸ್ವಲ್ಪ ಮುಂದೆ ಹೋಗಿತ್ತಷ್ಟೇ. ಯಾರೋ ಕೈ ಅಡ್ಡ ಹಾಕಿ ಗಾಡಿಯನ್ನು ಹತ್ತಿಕೊಂಡ. ಅವನನ್ನು ಹತ್ತಿಸಿಕೊಳ್ಳಲು ಗಾಡಿಯವನಿಗೆ ಸ್ವಲ್ಪವೂ ಇಷ್ಟವಿರಲಿಲ್ಲವಾದರೂ ಬೇರೆ ದಾರಿ ಇರಲಿಲ್ಲ. ಹತ್ತಿದವನು ಒಬ್ಬ ಪೊಲೀಸ್ ಆಫೀಸರನಾಗಿದ್ದ. ಕೆಲವು ಖಾಸಗಿ ಕಾರಣಗಳಿಂದಾಗಿ ಖಾಕಿ ಧರಿಸಿದವರೆಂದರೆ ನನಗೆ ಮೊದಲಿನಿಂದಲೂ ಅಷ್ಟಕಷ್ಟೇ. ಅವರ ನೆರಳು ಕಂಡರೂ ದೂರ ಓಡಿಹೋಗುತ್ತೇನೆ! ಗಾಡಿಯ ಒಂದು ತುದಿಗೆ ಕುಳಿತು … Read more

NRIs ಅಂದ್ರೆ ನಾನ್ ರಿಟರ್ನಿಂಗ್ ಇಂಡಿಯನ್ಸ್? (ಭಾಗ ೧): ಗುರುಪ್ರಸಾದ ಕುರ್ತಕೋಟಿ

(ಇಲ್ಲಿಯವರೆಗೆ : https://panjumagazine.com/?p=16864) ಒಂದು ಮಟ್ಟಕ್ಕೆ ಜೀವನದಲ್ಲಿ ಸೆಟ್ಲ್ ಆಗಿದ್ದೆ. ಸ್ವಂತಕ್ಕೆ ಅಂತ ಒಂದು ಮನೆಯಿತ್ತು (ಹೆಸರಿಗೆ ನನ್ನದು, ಆದರೆ ಅಧಿಕೃತವಾಗಿ ಅದರ ಮಾಲಿಕರು ಬ್ಯಾಂಕ್ ನವರೇ ಆಗಿದ್ದರು, ಆ ಮಾತು ಬೇರೆ! ನಾವು ಅವರ ಬಳಿ ತೆಗೆದುಕೊಂಡ ಸಾಲ ತೀರುವವರೆಗೆ ಅವರೇ ಯಜಮಾನರು). ರಿಟೈರ್ ಆದ ಮೇಲೆ ಇರಲಿ ಅಂತ ಊರಲ್ಲಿ ತೆಗೆದುಕೊಂಡ ಒಂದಿಷ್ಟು ಜಾಗವೂ ಇತ್ತು. ನನಗಾಗಲೇ ಆಫೀಸಿನಲ್ಲಿ ಒಂದು ಸ್ಥಾನಮಾನ ಸಿಕ್ಕಿತ್ತು. ಇಷ್ಟೆಲ್ಲಾ ಕಂಫರ್ಟ್ ಝೋನಿನಲ್ಲಿ (ಬೋನಿನಲ್ಲಿ?) ಇದ್ದ ನಾನು ಒಮ್ಮೆಲೇ ಎಲ್ಲವನ್ನೂ … Read more

ಕೊರೋನಾ ಕಾಲುಗಳು!: ಎಸ್.ಜಿ.ಶಿವಶಂಕರ್

ಏನು? ಕೊರೊನಾಕ್ಕೂ ಕಾಲುಗಳಿವೆಯೆ ಎಂದು ಹುಬ್ಬೇರಿಸಬೇಡಿ. ನಾನೀಗ ಹೇಳುತ್ತಿರುವುದು ಕೊರೋನಾ ಲಾಕ್ಡೌನ್ ಸಮಯದಲ್ಲಿ ಬರುತ್ತಿದ್ದ ಫೋನ್ ಕಾಲುಗಳ ಬಗೆಗೆ! ಕೊರೋನಾ ಮಾರಿ ಇಡೀ ವಿಶ್ವವನ್ನೇ ನಡುಗಿಸಿ, ಸಾವಿನ ಗಾಣದಲ್ಲಿ ಹಾಕಿ ಅರೆಯುತ್ತಿರೋವಾಗ ಅನಿವಾರ್ಯವಾಗಿ ಲಾಕ್‍ಡೌನ್ ಅಮರಿಕೊಂಡಿದೆ! ಎಲ್ಲೆಲ್ಲೂ ಲಾಕ್‍ಡೌನ್!! ಅಲ್ಲೂ ಲಾಕ್ಡೌನ್! ಇಲ್ಲೂ ಲಾಕ್‍ಡೌನ್, ಎಲ್ಲಾ ಕಡೆಯೂ ಲಾಕ್‍ಡೌನ್! ವಾರವೊ, ಹದಿನೈದು ದಿನವೊ ಆಗಿದ್ದರೆ ಹೇಗೋ ಜನ ತಡ್ಕೋಬಹುದು. ಅದು ತಿಂಗಳುಗಳನ್ನೂ ಮೀರಿ, ವಿಸ್ತರಿಸುತ್ತಾ..ವಿಸ್ತರಿಸುತ್ತಾ..ಮನೆಯೊಳಗೆ ಧಿಗ್ಭಂದಿಯಾದ ಜನ ಹೇಗೆ ಕಾಲ ಕಳೀಬೇಕೂಂತ ಪರಿತಪಿಸೋ ಹಾಗಾಗಿಬಿಡ್ತು. ಟಿ.ವಿ ವಾಹಿನಿಗಳೂ … Read more

ರೈತ ಫಾರ್ ಸರಕಾರ: ಸೂರಿ ಹಾರ್ದಳ್ಳಿ

ಒಂದು ಅಶುಭ ದಿನದಂದು, ಕಾಶೀಪತಿ ಕೊರೆಯಲು ಶುರುಮಾಡಿದನು. ‘ನಮ್ಮದು ರೈತರ ಫಾರ್ ಸರಕಾರ,’ ರಾಜಕಾರಣಿಗಳಿಗೆ ಮತ್ತು ಕವಿಗಳಿಗೆ ಇಹಲೋಕದಲ್ಲಿ ಬೇಕಿರುವುದು ‘ಕೇಳುವ ಕಿವಿಗಳು’ ಮತ್ತು ಆಡಿಸಲು ಒಳಗೆ ಟೊಳ್ಳಿರುವ ತಲೆಗಳು. ನಡುನಡುವೆ ಚಪ್ಪಾಳೆಯ ದನಿಗಳು. ಇವು ಮೂರಿರದ್ದರೆ, ದೇವರ ದಯೆ, ಒಡೆಯದ, ಮುರಿಯದ, ಚರ್ಮದ ಬಾಯಿ ದಣಿಯುವುದಿಲ್ಲ. ಕಾಶೀಪತಿ ಹೇಳಿದ್ದನ್ನು ನಾನು ತಿದ್ದಿದೆ, ‘ಅದರು ಫಾರ್ ಅಲ್ಲ, ಪರ.’ ‘ಇಂಗ್ಲಿಷಿನವರಿಗೂ ತಿಳಿಯಲಿ ಎಂದು ಹಾಗೆಂದೆ. ಆ್ಯಂಡು, ನಾನು ಹಳ್ಳಿಯವರ ಮಕ್ಕಳೂ ಗರ್ಭದಲ್ಲಿರುವಾಗಲೇ ಇಂಗ್ಲಿಷ್ ಕಲಿಯಬೇಕು ಎಂದು ವಾದಿಸುವವನು. … Read more

ಅಳಿಯದ ಸಂಬಂಧ: ಶೀಲಾ ಎಸ್. ಕೆ.

“ಅಂಜು, ಅಂಜು‌” ಎಂದು ಹೊರಗಡೆಯಿಂದ ಬಂದ ಕೂಗಿಗೆ, “ಅಮ್ಮಾ ಸಂತು ಬಂದ ನಾನ್ ಶಾಲೆಗೆ ಹೊರಟೆ ಬಾಯ್” ಎಂದು ಒಳಗಿನಿಂದ ತುಂಟ ಹುಡುಗಿ ಓಡಿ ಬಂದಳು. ತಿಂಡಿ ತಿಂದು ಹೋಗು ಎಂದು ಕೂಗಿದ ಅಮ್ಮನ ದನಿ ಕಿವಿಯ ಮೇಲೆ ಬೀಳಲೇ ಇಲ್ಲ. “ಇವತ್ತು ತಿಂಡಿ ತಿನ್ನದೆ ಬಂದ್ಯ ? ನನ್ನ ಬೈಸೋಕೆ ಹೀಗೆ ಮಾಡ್ತೀಯ” ಎಂದು ದಿನದ ಮಾತು ಆರಂಭಿಸಿದ ಸಂತು. ಯಥಾಪ್ರಕಾರ ಇದಕ್ಕೆ ಕಿವಿಕೊಡದ ಪೋರಿ “ಫಸ್ಟ್‌ ಪೀರಿಯಡ್ ಗಣಿತ ಇದೆ ಹೋಮ್ ವರ್ಕ್ ಮಾಡಿದ್ಯ” … Read more

“ಬದುಕಿಗೊಂದು ಹೊಸ ಆಯಾಮವಿರಲಿ”: ಸುಧಾ ಹುಚ್ಚಣ್ಣವರ

ಬದುಕು ಆ ದೇವರು ಕರುಣಿಸಿದ ಅತ್ಯಮೂಲ್ಯ ಕಾಣಿಕೆ ಸೃಷ್ಟಿಯ ಸಕಲ ಜೀವರಾಶಿಗಳಲ್ಲಿ ಮಾನವ ಬುದ್ಧಿಜೀವಿ ಎನಿಸಿಕೊಂಡಿದ್ದಾನೆ ಹಾಗೆಯೇ ಅವನ ಬದುಕಿನ ಶೈಲಿ ಇತರ ಪ್ರಾಣಿ ಪಕ್ಷಿಗಳಿಗಿಂತ ಸುಧಾರಿಸಿದೆ. ಪ್ರಕೃತಿಯ ಆಗುಹೋಗುಗಳ ಜೊತೆಗೆ ಕಾಲಕ್ಕೆ ತಕ್ಕಂತೆ ಸಾಮಾಜಿಕವಾಗಿ ಶೈಕ್ಷಣಿಕವಾಗಿ ರಾಜಕೀಯವಾಗಿ ಆರ್ಥಿಕವಾಗಿ ಎಲ್ಲ ರೀತಿಯ ಬದಲಾವಣೆಯ ಜೊತೆಗೆ ಮನುಷ್ಯನ ಜೀವನ ಸಾಗುತ್ತಾ ಬಂದಿದೆ. ಅನಾದಿ ಕಾಲದಿಂದ ಇಂದಿನವರೆಗೆ ಹಲವಾರು ಆಯಾಮಗಳಲ್ಲಿ ವ್ಯತ್ಯಾಸಗಳನ್ನು, ವೈಪರೀತ್ಯಗಳನ್ನು, ಬದಲಾವಣೆಗಳನ್ನು, ಸುಧಾರಣೆಗಳನ್ನು ಕಾಣುತ್ತಾ ಬಂದಿದ್ದಾನೆ. “ಬೆದಕಾಟ ಬದುಕೆಲ್ಲ ಚಣಚಣವು ಹೊಸಹಸಿವು ಅದಕ್ಕಾಗಿ ಇದಕ್ಕಾಗಿ ಮತ್ತೊಂದು … Read more