ಗುರುಗಳನ್ನು ಗೌರವಿಸಿ ಗೌರವ ಹೆಚ್ಚಿಸಿಕೊಂಡವರು!: ಕೆ ಟಿ ಸೋಮಶೇಖರ ಹೊಳಲ್ಕೆರೆ

ಸೆಪ್ಟಂಬರ್ 5 ಡಾ!! ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನ. ಅದನ್ನೇ ಭಾರತದಲ್ಲಿ ಶಿಕ್ಷಕರ ದಿನ ಎಂದು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ. ಅಕ್ಟೋಬರ್ 5 ನ್ನು ವಿಶ್ವ ಶಿಕ್ಷಕರ ದಿನ ಎಂದು ಆಚರಿಸುವರು. ನಿಜವಾಗಿಯೂ ಶಿಕ್ಷಕರ ದಿನಾಚರಣೆಯನ್ನು ಸಮಾಜ ಆಚರಿಸಬೇಕು. ಸಮಾಜದಲ್ಲಿನ ಸಂಘ – ಸಂಸ್ಥೆಗಳು ಆಚರಿಸಿದರೆ ಶಿಕ್ಷಕರಿಗೆ ಗೌರವ. ಅಷ್ಟೇ ಅಲ್ಲ ಆ ಸಂಘ ಸಂಸ್ಥೆಗಳಿಗೂ ಗೌರವ ! ಸಮಾಜ ಶಿಕ್ಷಕರ ದಿನವನ್ನು ಆಚರಿಸದಿರುವುದರಿಂದ ಶಿಕ್ಷಕರೇ ಅವರ ದಿನವನ್ನು ಅವರೇ ಆಚರಿಸಿಕೊಳ್ಳುವಂತಾಗಿರುವುದು ಅವರೇ ಅವರ ಬೆನ್ನನ್ನು … Read more

‘ಅಂಬೇಡ್ಕರ್ ಎಂಬ ಮಹಾನದಿ ಮತ್ತು ದಲಿತೀಕರಣಗೊಂಡ ಗಾಂಧೀಜಿ’ ಕೃತಿಯ ಬಿಡುಗಡೆ ಹಾಗೂ ಕವಿಗೋಷ್ಠಿ.

ಹಿರಿಯ ಸಾಹಿತಿ ಹಾಗೂ ವಿಚಾರವಾದಿ ಡಾ. ಮೋಗಳ್ಳಿ ಗಣೇಶ ಅವರ ‘ಅಂಬೇಡ್ಕರ್ ಎಂಬ ಮಹಾನದಿ ಮತ್ತು ದಲಿತೀಕರಣಗೊಂಡ ಗಾಂಧೀಜಿ’ ಕೃತಿಯ ಬಿಡುಗಡೆ ಹಾಗೂ ರಾಜ್ಯಮಟ್ಟದ ಕವಿಗೋಷ್ಠಿ ಫೆ10 ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ನಾಗಶಾಂತಿ ಉನ್ನತಿ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆಯಲಿದೆ. ರಾಣೇಬೆನ್ನೂರಿನ ಕಾಗದ ಸಾಂಗತ್ಯ ವೇದಿಕೆ ಹಾಗೂ ಲಡಾಯಿ ಪ್ರಕಾಶನ ಜಂಟಿಯಾಗಿ ಕೃತಿಯ ಬಿಡುಗಡೆ ಹಾಗೂ ಕವಿಗೋಷ್ಠಿ ಸಮಾರಂಭವನ್ನು ಹಮ್ಮಿಕೊಂಡಿದೆ. ಖ್ಯಾತ ವಿಮರ್ಶಕರು ಹಾಗೂ ಬೆಂಗಳೂರು ವಿವಿಯ ಪ್ರಾಧ್ಯಾಪಕ ಜೀವನಪ್ರೇಮ, ಕೊಂಕು ಯಾವುದನ್ನೂ ಬಚ್ಚಿಡದಂತೆ … Read more

ಪಂಜು ಕಾವ್ಯಧಾರೆ

ಗುರುದಕ್ಷಿಣೆ ಬಿಳುಪಿಗೂ ಬಿಲ್ಲಿಗೂ ಹೊಸ್ತಿಲಾದ ಹನಿಗೆ ಹುದುಗಿದ್ದ ಚೈತನ್ಯದ ಗುರು ಕಿರಣವೇನೇ? ಮಳೆಹನಿಯ ರಭಸಕ್ಕೆ ತಾಳಿಕೆಯ ತೋರಿಸಿದ ಮರದೆಲೆಯು ಹನಿಗೆ ಗುರು ತಾನೇ? ಹರಿವ ಆಸೆಗೆ ತಗ್ಗಿಗೆ ನುಗ್ಗಿದೊಡೆ ಸಾಗರದ ಹಾದಿಗೊಯ್ದ ಗುರುವು ಭುವಿ ತಾನೇ? ಕಣ್ಣಹನಿ ಮುತ್ತೆಂದು ಒಡನೆ ಚಾಚಿದ ಬೊಗಸೆ ಮೌಲ್ಯದ ಮತಿಹೇಳೋ ಗುರು ತಾನೇ? ರಕ್ತ ಮಾಂಸವಂತೆ ಬುದ್ಧಿ ಭಾವಗಳಂತೆ ಪಂಚಭೂತಗಳಂತೆ ಜೀವದಾ ರಚನೆಗೆ. ಜೀವಿಯ ಜೀವಂತಿಕೆಗೆ ಪಂಚವೆಲ್ಲಾ ಕೊಂಚ! ಕಣಕಣದೊಳೊಕ್ಕಿ ಕಲಿಕೆ ಹುಚ್ಚ ಹಚ್ಚೋ ಅಸಂಖ್ಯಾಣು ಅದ್ಭುತಗಳೇ ಶಿಲ್ಪಿ ಬದುಕೀಗೆ. ದಕ್ಷಿಣೆಯ … Read more

ತೆರೆದಿದೆ ಮನೆಯೋ…: ಅಶ್ಫಾಕ್ ಪೀರಜಾದೆ

ಬದುಕಿನ ಮುಸ್ಸಂಜೆಯಲ್ಲಿ ಕುಳಿತು ನನ್ನ ಜೀವನದ ಮರಳು ಗಾಡಿನಲ್ಲಿ ನನಗಾಗಿ ನನ್ನತ್ತ ನಡೆದು ಬಂದವರ ಹೆಜ್ಜೆಗಳ ಗುರುತು ಹುಡುಕಲು ಪ್ರಯತ್ನಿಸುತ್ತೇನೆ. ಹೃದಯದಲ್ಲಿ ಎದ್ದ ಬಿರುಗಾಳಿಗೆ ಸರಿದು ಹೋದ ಮರಳಿನಲ್ಲಿ ಗುರುತು ಸಿಗದಂತೆ ಅವಶೇಷವಾಗಿ ಅಳಿದುಳಿದ ಗುರತುಗಳೇ!. ಒಂದೇ ಒಂದು ಸ್ಥಿರವಾದ ಹೆಜ್ಜೆ ಅಲ್ಲಿ ಮೂಡಿದ್ದು ಗೋಚರಿಸುವುದೇ ಇಲ್ಲ. ನಾನು ನನ್ನ ಮನೆಯಲ್ಲಿ ಒಂಟಿಯಾಗಿ ಕುಳಿತು ಇವುಗಳನ್ನೆಲ್ಲ ಅವಲೋಕಿಸುತ್ತ ಮತ್ತೇ ನನ್ನತ್ತ ಯಾರಾದರೂ ಬರಬಹುದೇ ಎಂದು ಬರುವವರ ಹೆಜ್ಜೆ ಸಪ್ಪಳ ಆಲಿಸಲು ಮೈಯಲ್ಲ ಕಿವಿಯಾಗಿಸುತ್ತೇನೆ. ಗಾಳಿಗೆ ಹಾರಿ ಹೋದ … Read more

ಜಾಣಸುದ್ದಿ 16: ಕೊಳ್ಳೇಗಾಲ ಶರ್ಮ

ಈ ವಾರದ ಸಂಚಿಕೆಯಲ್ಲಿ ಕೊಳ್ಳೇಗಾಲ ಶರ್ಮರವರ ಧ್ವನಿಯಲ್ಲಿರುವ ಈ ಆಡೀಯೊ ಕೇಳಲು ಈ ಕೆಳಗಿನ ಕೊಂಡಿಯ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಜಾಣ ಸುದ್ದಿ ಧ್ವನಿಮುದ್ರಿಕೆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ save as/ download ಆಪ್ಷನ್ ನಿಂದ ನಿಮ್ಮ ಮೊಬೈಲ್/ ಕಂಪ್ಯೂಟರ್ ಗೆ ಡೌನ್ ಲೋಡ್ ಮಾಡಿಕೊಳ್ಳಿ… ಇ ಮೇಲ್ ನಲ್ಲಿ ಅಥವಾ ವಾಟ್ಸ್ ಅಪ್ ನಲ್ಲಿ ಈ ಧ್ವನಿಮುದ್ರಿಕೆ ನಿಮಗೆ ಬೇಕು ಎಂದನಿಸಿದರೆ ನಿಮ್ಮ ಕೋರಿಕೆಯನ್ನು ನಮ್ಮ … Read more

ಬಣ್ಣದ ನೆರಳು ……: ಸತೀಶ್ ಶೆಟ್ಟಿ, ವಕ್ವಾಡಿ.

ಮುಂಗಾರಿಗೆ ಯಾಕಿಷ್ಟು ಅವಸರವೋ ಗೊತ್ತಿಲ್ಲ. ಊರಲ್ಲಿ ಯಕ್ಷಗಾನ ಮೇಳಗಳು ತಮ್ಮ ತಿರುಗಾಟಕ್ಕೆ ಮಂಗಳ ಹಾಡುವ ಮುನ್ನವೇ ಮಳೆ ತನ್ನ ಒಡ್ಡೋಲಗ ಆರಂಭಿಸಿಬಿಟ್ಟಿದೆ. ಸಾಮಾನ್ಯವಾಗಿ ಜೂನ್ ಮೊದಲ ವಾರದಲ್ಲಿ ಕರಾವಳಿಗೆ ಕಾಲಿಡುತ್ತಿದ್ದ ಮುಂಗಾರು ಈ ಬಾರಿ ಹೆಚ್ಚು ಕಡಿಮೆ ಇಪ್ಪತ್ತು ದಿನಗಳ ಮೊದಲೇ ನೆಲೆಯೂರವ ಲಕ್ಷಣ ಹೆಚ್ಚಾದಂತಿದೆ. ನಿನ್ನೆ ರಾತ್ರಿಯಿಂದ ಧೋ ಅಂತ ಬ್ರೇಕ್ ಇಲ್ಲದೆ ಸುರಿಯುತ್ತಿದ್ದ ಮಳೆ ಊರಲ್ಲಿ ನೆರೆಯನ್ನೇ ಸೃಷ್ಟಿಸಿತ್ತು. ಕಡಲ ಶಬ್ದ ಮತ್ತು ಕಪ್ಪುಗಟ್ಟಿದ ಆಕಾಶ ಭಾರೀ ಮಳೆಯ ಮುನ್ಸೂಚನೆ ನೀಡುತ್ತಿತ್ತು. “ಥತ್, ಎಂತ … Read more

ಸುಂದರ ಊರಿನಲ್ಲೀಗ …: ಸ್ಮಿತಾ ಅಮೃತರಾಜ್. ಸಂಪಾಜೆ

ನಿಮ್ಮ ಊರು ಅದೆಷ್ಟು ಚೆಂದ; ನೀವೆಲ್ಲಾ ಪುಣ್ಯವಂತರು ಕಣ್ರೀ, ಸ್ವರ್ಗ ಅಂದರೆ ಇದೇ ನೋಡಿ. ಅಲ್ಲಿಯ ಬೆಟ್ಟ,ಗುಡ್ಡ,ನದಿ ,ಧುಮ್ಮುಕ್ಕಿ ಹರಿಯುವ ಜಲಧಾರೆ, ತುಂತುರು ಜುಮುರು ಮಳೆ..ನೆಮ್ಮದಿಯಿಂದ ಬದುಕೋದಿಕ್ಕೆ ಇನ್ನೇನು ಬೇಕು ಹೇಳಿ?. ನಾವೂ ನಿಮ್ಮೂರಿನಲ್ಲೇ ಬಂದು ಠಿಕಾಣಿ ಹೂಡ್ತೀವಿ, ಕೆಲಸಕ್ಕೆ ಜನ ಇಲ್ಲ ಅಂತೀರಿ ನಾವೇ ಬಂದು ಬಿಡ್ತೀವಿ, ನಮಗೆ ನಿಮ್ಮ ತೋಟಗಳಲ್ಲಿ ಕೆಲಸ ಕೊಟ್ರೆ ಅಷ್ಟೇ ಸಾಕು . ಈ ಬಯಲು ಸೀಮೆಯ ಒಣ ಹವೆ, ರಾಚುವ ಬಿಸಿಲು, ಇವೆಲ್ಲಾ ಅನುಭವಿಸಿ ಸಾಕಾಗಿ ಹೋಗಿದೆ ಅಂತ … Read more

ನಮ್ಮ ದಸರಾ Exhibition ಸವಾರಿ: ವಿಭಾ ಶ್ರೀನಿವಾಸ್

“Exhimition…Exhimition…” ಪದವನ್ನು ಸರಿಯಾಗಿ ಉಚ್ಚರಿಸಲೂ ಬಾರದ ಆ ದಿನಗಳಲ್ಲಿ ವರ್ಷಕ್ಕೊಮ್ಮೆ ಎದುರಾಗುತಿದ್ದ ಸ೦ತಸವೇ ಮೈಸೂರು ದಸರಾ Exhibition (ದಸರಾ ವಸ್ತುಪ್ರದರ್ಶನ). ಎಲ್ಲಾ ವರ್ಗದ, ಎಲ್ಲಾ ಭಾಷೆಗಳನ್ನು ಮಾತನಾಡುವ ಜನ ಕಾಣಸಿಗುತಿದ್ದ mini world !! ಪ್ರವೇಶ ಟಿಕೆಟ್ ನ ದರ ರೂ5 ಇದ್ದ ಕಾಲ. ನಾ ಮುಂದು ತಾ ಮುಂದು ಎ೦ದು ಟಿಕೆಟ್ ಪಡೆದು, ಮುಖ್ಯದ್ವಾರದ ಕನ್ನಡಿಯಲ್ಲಿ ಮುಖವನ್ನೊಮ್ಮೆ ನೋಡಿ ಹಲ್ಲುಕಿರಿದ ನ೦ತರವೇ ಪ್ರವೆಶಿಸಿದೆವೆ೦ಬ ಖುಷಿ. ಮು೦ದಿನ ೨-೩ ಗಂಟೆಗಳ ಕಾಲ ಅಣ್ಣ/ಚಿಕ್ಕಪ್ಪನ ಮಗಳ ಕೈ ಹಿಡಿದೇ … Read more

ಕಾಯಕಲ್ಪವಾಗಿ ಪ್ರವಾಸೋದ್ಯಮ: ಎಂ.ಎಚ್.ಮೊಕಾಶಿ

“ದೇಶ ಸುತ್ತಿ ನೋಡು ಕೋಶ ಓದಿ ನೋಡು” ಎಂಬ ಗಾದೆ ಮಾತಿದೆ. ಇದು ತನು ಮನದ ಜ್ಞಾನಕ್ಕಾಗಿ ನಮ್ಮ ಹಿರಿಯರು ಹೇಳಿದ ಮಾತಾಗಿದೆ. ಅನುಭವ, ತನ್ಮೂಲಕ ಅನುಭಾವಕ್ಕೆ ಬಾರದ ಜ್ಞಾನವನ್ನು ಪುಸ್ತಕದ ಬದನೇಕಾಯಿ ಎಂದು ಹೇಳುವುದೂ ಇದೆ. ಒಂದೇ ಒಂದು ಸುತ್ತಾಟ ಪುಸ್ತಕ ನೀಡುವ ಜ್ಞಾನಕ್ಕಿಂತ ಹೆಚ್ಚಿನ ಜ್ಞಾನ ನೀಡುವುದೆಂಬುದು ಅನುಭವದ ಮಾತಾಗಿದೆ. “ವಿಶ್ವ ಒಂದು ಪುಸ್ತಕವಿದ್ದಂತೆ, ಸುತ್ತಾಡಲಾರದವ ಯಾವ ಜ್ಞಾನವನ್ನೂ ಗಳಿಸಲಾರ” ಎಂದು ಸೇಂಟ್ ಆಗಸ್ಟಿನ್ ಹೇಳಿದ್ದಾರೆ. ವಿಶ್ವಸಂಸ್ಥೆಯ ಅಂತರಾಷ್ಟ್ರೀಯ ಪ್ರವಾಸೋದ್ಯಮ ಸಂಸ್ಥೆಯು 1980 ರಿಂದಲೂ … Read more

ಅಸಹಾಯಕತೆ: ನಾವೆ

ಅದೊಂದು ದಿನ ಮಟ ಮಟ ಮಧ್ಯಾಹ್ನ. ಸೂರ್ಯ ನೆತ್ತಿಯ ಮೇಲೆ ಪ್ರಖರ ಕಿರಣಗಳಿಂದ ಸುಡುತ್ತಿದ್ದ. ಗ್ರಾಮೀಣ ಪ್ರದೇಶವಾದ್ದರಿಂದ ಅದಾಗಲೇ ಅಕ್ಕಪಕ್ಕದ ಅಂಗಡಿ ಮುಂಗಟ್ಟುಗಳ ಹೊರಬಾಗಿಲುಗಳೆಲ್ಲ ಮುಚ್ಚಲ್ಪಟ್ಟಿದ್ದವು. ಅಂಗಡಿ ಮಾಲಿಕರು, ಕಾರ್ಮಿಕರೆಲ್ಲ ಹಸಿವೆಂಬ ರಕ್ಕಸನ ಅಬ್ಬರ ತಣಿಸಲು ಅವರವರ ಮನೆಯತ್ತ ಪಯಣಿಸಿಯಾಗಿತ್ತು. ಹಾಗಾಗಿ ಆ ಸಮಯದಲ್ಲಿ ಮನೆಗೆ ಹೋಗದೇ ಊಟ ಹೊತ್ತು ತರುವ ನನ್ನ ಅಂಗಡಿಯೊಂದೇ ತೆರೆದಿತ್ತು.ಊಟದ ಸಮಯದಲ್ಲಿಯೂ ಅಂಗಡಿಯು ತೆರೆದೇ ಇರುತ್ತಾದ್ದರಿಂದ ಅದರ ಗೋಜಿಗೆ ಹೋಗದೆ ನಾನೂ ಕೂಡ ಊಟದ ತಯಾರಿ ನಡೆಸುತ್ತಿದ್ದೆ. ಹಸಿವೆಂಬ ಬ್ರಹ್ಮರಾಕ್ಷಸನ ತೃಪ್ತಿ … Read more

ಶಕ್ತಿಸ್ವರೂಪಿಣಿ ಮಂದಾರ್ತಿಯ ಶ್ರೀ ದುರ್ಗಾಪರಮೇಶ್ವರಿ ಸನ್ನಿದಿ: ಶ್ರೀ ಜಗದೀಶ ಸಂ.ಗೊರೋಬಾಳ

ಮಂದಾರ್ತಿ ಎಂದಾಕ್ಷಣ ಕುಂದ ಮಂದಾರಾದಿಗಳ ಗಂಧ ಮಕರಂದವನ್ನು ಆಗ್ರಾಣಿಸುವ ಆಸ್ವಾದಿಸುವ ವೃಂದಾರಕ ವೃಂದವೇ ಬಂದು ನೆಲೆಸಿರುವ ಪುಣ್ಯಭೂಮಿಯೇ ಮಂದಾರ್ತಿ ಎಂದು ಯಕ್ಷಗಾನದಲ್ಲಿ ಕೇಳಿದ ಮಾತು ನಮಗೆ ನೆನಪಾಗುತ್ತದೆ. ದಕ್ಷಿಣ ಭಾರತದ ಪ್ರಮುಖ ಹಿಂದೂ ದೇವಳಗಳಲ್ಲಿ ಮಂದಾರ್ತಿಯ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನವು ಬಹಳ ವಿಶಿಷ್ಟವಾದುದು. ಸರ್ವಮುನಿಜನ ಪೂಜಿತೆ, ಸಂಕಷ್ಟ ಕಳೆಯುವ ಅಂಬಿಕೆ ಶಕ್ತಿಸ್ವರೂಪಿಣಿ ಸನ್ನದಿಗೆ ರಾಜ್ಯ ಹೊರರಾಜ್ಯಗಳಿಂದ ಅಸಂಖ್ಯಾತ ಭಕ್ತರು ಶ್ರೀಕ್ಷೇತ್ರ ಮಂದಾರ್ತಿಗೆ ಆಗಮಿಸಿ ಇಷ್ಟಾರ್ಥ ನೆರವೇರಿಸಿಕೊಳ್ಳುತ್ತಾರೆ. ನಮ್ಮ ಕರ್ನಾಟಕದ ರಮ್ಯಮನೋಹರ ತಾಣ ಮಂದಾರ್ತಿಯ ಕಿರು ಪರಿಚಯ … Read more

ನಿಯತ್ತಿಗೆ ಮತ್ತೊಂದು ಹೆಸರೇ ಹನುಮಂತಣ್ಣ: ಜೆಪಿ.ಅಡೂರ್

ಎಪ್ಪ ಏನೋ ಇದು ಅಷ್ಟೊಂದು ದೊಡ್ದುದು ಗುಡ್ಡ ಇದ್ದಂಗೆ ಇದೆಯಲ್ಲೋ ಮಾರಾಯ ಅಂದ ನಮ್ಮ ಹನುಮಂತಣ್ಣ ಜೆರೋಸಿಕ್ ಪಾರ್ಕ್ ಸಿನಿಮಾನ ಟಿವಿ ನಲ್ಲಿ ನೋಡುತ. ಹೇ ಹನುಮಂತಣ್ಣ ಅಂತವು ಎರಡು ತರೋನು ನಾವು ಹೊಲ ಹಸನು ಮಾಡೋಕೆ ಬರುತ್ತೆ ಅಂದೆ ಅದಕೆ ಥಟ್ಟಂತ ಉತ್ತರ ಬಂತು ಹನುಮಂತಣ್ಣನಿಂದ “ಬೇಡ ಚಿಕ್ಕ ಧಣಿಯಾರೇ ನಮಗೆ ತಿನ್ನಾಕೆ ಏನು ಸಿಗ್ತಿಲ್ಲಾ ಈ ಮಳೆ ನಂಬಕಂಡು ಇರೋ ಎರಡು ಎತ್ತು ಸಾಕೋದಕ್ಕೆ ಅವರ ಕಾಲು ಇವರ ಕಾಲು ಹಿಡಿದು ಮೇವತಗೊಂಡು ಬರ್ತಾಇದಿವಿ” … Read more

ಮಹಿಳಾ ಸಬಲೀಕರಣದತ್ತ…!: ನಸ್ರೀನ್. ಮೈ. ಕಾಖಂಡಕಿ

ದೇಶದ ಅಭಿವೃದ್ಧಿ ಸಾಧನೆಯಲ್ಲಿ ಮಹಿಳಾ ಸಶಕ್ತೀಕರಣದಷ್ಟು ಪರಿಣಾಮಕಾರಿ ಸಾಧನ ಮತ್ತೊಂದಿಲ್ಲ. ಮಹಿಳೆಯರ ಸಾಮಥ್ರ್ಯವನ್ನು ಇದಕ್ಕಿಂತ ಸರಿಯಾಗಿ ಬಣ್ಣಿಸುವ ಹೇಳಿಕೆ ಬೇರೊಂದಿಲ್ಲ ಎನ್ನಬಹುದು. ಇದು ಸಾಂಪ್ರದಾಯಿಕ ಕ್ಷೇತ್ರವಾಗಿರಲಿ ಅಥವಾ ಆಧುನಿಕ ರಂಗವಿರಲಿ, ಮಹಿಳೆ ತನ್ನ ಛಾಪು ಮೂಡಿಸದ ಕ್ಷೇತ್ರವೇ ಇಲ್ಲ. ಮಕ್ಕಳನ್ನು ಹೆತ್ತು, ಹೊತ್ತು ಭವಿಷ್ಯದ ಭವ್ಯ ನಾಗರಿಕರನ್ನಾಗಿ ರೂಪಿಸುವ ಮಹತ್ವದ ಪ್ರಾಥಮಿಕ ಜವಾಬ್ದಾರಿ ಯಾವಾಗಲೂ ಅಮ್ಮನದೇ ಆಗಿದೆ. ನಾರಿ, ಮಗಳು, ಅಕ್ಕ, ತಂಗಿ, ಹೆಂಡತಿಯಾಗಿಯೂ ಪುರುಷರ ಬೆನ್ನೆಲುಬಾಗಿದ್ದಾಳೆ. ಆಧುನಿಕ ರಂಗದಲ್ಲಿ ಪ್ರಶಿಕ್ಷಕರಾಗಿ, ಪ್ರಬಂಧಕರಾಗಿ, ರಾಜಕೀಯ ಧುರೀಣೆಯಾಗಿ ಪ್ರಮುಖ … Read more

ಮರೆಯಲಾಗದ ಬಂಧುಗಳು: ವೆಂಕಟೇಶ ಚಾಗಿ

ಆ ದಿನ ರಾತ್ರಿ ಮನೆಯ ಹಿತ್ತಲಿನ ಗೋಡೆಯ ಒಂದು ಮೂಲೆಯಲ್ಲಿ ಅದೇನೋ ಶಬ್ದ. ಇಡೀ ರಾತ್ರಿ ಅದಾವುದೋ ಬೆಕ್ಕು ಬುಸುಗುಡುವ ಶಬ್ದ. ಆಗಾಗ ನಾಯಿ ಬೊಗಳುವ ಶಬ್ದ ಬೇರೆ. ರಾತ್ರಿ ಎದ್ದು ಆ ಬೆಕ್ಕು ಮತ್ತು ನಾಯಿ ಎರಡನ್ನೂ ಓಡಿಸೋಣ ಎಂದುಕೊಂಡರೆ ಮನದಲ್ಲಿ ಅದೇನೋ ಭಯ. ಆದರೂ ದೈರ್ಯ ತಂದುಕೊಂಡು ಕೈಯಲ್ಲಿ ಟಾರ್ಚ ಹಾಗೂ ಮೂಲೆಯಲ್ಲಿದ್ದ ಕೋಲನ್ನು ಹಿಡಿದು ನಿಧಾನವಾಗಿ ಬಾಗಿಲನ್ನು ತರೆದು ಹೊರ ಬಂದೆ. ವಿದ್ಯುತ್ ಕೈ ಕೊಟ್ಟಿದ್ದರಿಂದ ಹೊರಗಿನ ಬಲ್ಬ್ ಉರಿಯುತ್ತಿರಲಿಲ್ಲ. ಧೈರ್ಯ ತಂದುಕೊಂಡು … Read more

‘ಕೊನೆಯ ದಿನದೊಳಗೊಂದು’ ಕಥೆ: ಮೊಗೇರಿ ಶೇಖರ ದೇವಾಡಿಗ

ಫಲಿತಾಂಶದ ಪಟ್ಟುಯನ್ನು ಕೂಲಂಕಷವಾಗಿ ಪರಿಶೀಲಿಸಿದ ಮೇಲೆ ಸಹಜವಾಗಿ ಸಂತೃಪಿಯ ನಗು ತೇಲಿತು. ನೋಟಿಸ್ ಬೋರ್ಡ್‍ಗೆ ಹಚ್ಚಿದ ಮೇಲಂತೂ ಮನಸ್ಸು ತುಸು ಹಗುರಾಯಿತು. 8ನೇ ತರಗತಿಯ ಮಕ್ಕಳು ಕೆಲದಿನಗಳಿಂದ ‘ಕಥೆ ಹೇಳಿ ಸಾರ್…’ ಎಂದು ಪೀಡಿಸುತ್ತಿದ್ದದ್ದು ನೆನಪಾಗಿ ‘ಕೊನೆಯ ದಿನದೊಳಗೊಂದು’ ಕಥೆ ಹೇಳಬೇಕೆಂದು ಮನ ಮಾಡಿ ಅತ್ತ ಕಾಲಿಟ್ಟಿದ್ದೆ. ತರಗತಿಯ ಲೀಡರ್ ಅಭಿಷೇಕ್ ‘ಅರುಣ್ ಸರ್ ಬಂದ್ರ… ಇವತ್ತು ಕಥೆ ಗ್ಯಾರಂಟಿ…’ ಎಂದ ತುಸು ಜೋರಾಗಿಯೇ ತರಗತಿ ಕ್ಷಣಾರ್ಧದಲ್ಲಿ ಮೌನವಾಗಿ ನನ್ನ ಕಥೆಗೊಂದು ವೇದಿಕೆ ನಿರ್ಮಿಸಿಕೊಟ್ಟಿತ್ತು. “ಮಕ್ಕಳೇ, ಇದು … Read more

ಸತ್ಯಮೇವಜಯತೆ: ಕೆ ಟಿ ಸೋಮಶೇಖರ ಹೊಳಲ್ಕೆರೆ.

ಜೀವನದಲ್ಲಿ ಸತ್ಯ ಬಹು ಅಮೂಲ್ಯವಾದುದು. ಸತ್ಯದ ನಡೆ – ನುಡಿ ಕಠಿಣವಾದರೂ, ಮೌಲ್ಯಯುತವಾದುದು. ಬದುಕನ್ನು ಪಾರದರ್ಶಕಗೊಳಿಸಿ ಸತ್ಯವಂತರನ್ನು ಪ್ರಾಕಾಶಿಸುವಂತೆ ಮಾಡುತ್ತದೆ. ಸತ್ಯಕ್ಕೆ ಪ್ರತ್ಯೇಕ ಅಸ್ಥಿತ್ವವಿಲ್ಲ. ಅದು ಅದನ್ನು ಉಳಿಸಿಕೊಳ್ಳಲು ಹೋರಾಡುವುದಿಲ್ಲ. ಅದು ಮಾನವರ ನಡವಳಿಯನ್ನು ಅವಲಂಭಿಸಿರುತ್ತದೆ. ಮಾನವರು ಸತ್ಯದ ಪರ ನಿಂತಂತೆ ಅವರ ವ್ಯಕ್ತಿತ್ವ ಉನ್ನತಿಗೇರುತ್ತಾ ಹೋಗಿ ಅವರದು ಪರಿಶುದ್ದ ಆತ್ಮ ಆಗುತ್ತಾ ಹೋಗುತ್ತದೆ. ಆದ್ದರಿಂದ ‘ ಸತ್ಯ’ ಜೀವಕ್ಕಿಂತ ಅಮೂಲ್ಯ ಎಂದು ಭಾವಿಸಿ ಅಮರರಾದವರು ನಮ್ಮ ಸುತ್ತ ಇದ್ದಾರೆ! ಸತ್ಯವನ್ನು ಬಹುಕಾಲ ಮುಚ್ಚಿಡಲಾಗದು. ಮುಚ್ಚಿಟ್ಟಷ್ಟೂ ಬಡಬಾಗ್ನಿಯಂತೆ … Read more

ಪಂಜು ಕಾವ್ಯಧಾರೆ

ಶ್ರಾವಣ…. ಎಲ್ಲೆಲ್ಲೂ ಹಸಿರು, ತಳಿರು ತೋರಣ, ನೀ ಬಂದೊಡನೆ ಬಂಜರು ಭೂಮಿಯಲ್ಲೂ ಹಬ್ಬದ ವಾತಾವರಣ … ಎಲ್ಲೆಲ್ಲೂ ಸಂತೋಷ, ನಗು, ಸಂಭ್ರಮ, ಸ್ವರ್ಗ ವಾಗುವುದು ಧರೆ ಲೆಕ್ಕಿಸದೆ ಪಟ್ಟಣ ಗ್ರಾಮ … ಆದರಲ್ಲಿ ಸಂಭವಿಸಿದ್ದು ಕಾಲನ ತಾಂಡವ, ಹರಿಯಿತು ಜಲ ಧಾರೆ ಲೆಕ್ಕಿಸದೇ ನಿನ್ನಯ ಬರುವಿಕೆಯ… ಆಕ್ರಂಧನ ಮಾತ್ರ ಕೇಳುತಿತ್ತು, ಅಲ್ಲಿ ದೇವರ ಸ್ವಂತ ನಾಡು ಮುಳುಗುತಿತ್ತು…. ನಿಸ್ಸಹಾಯಕರಾದರು ಮನುಜರು, ದಡ ಸೇರದಾದರು ಈಜಿದರೂ…. ನಿನ್ನ ಆಗಮನಕ್ಕೆ ಕಾದಿದ್ದ ಹೂರಾಶಿಗಳೆಲ್ಲ, ನೆಲದ ಮೇಲಿನ ರಂಗೋಲಿಯಾಗದೆಯೇ ಅಸುನೀಗಿದವು… ಎಲ್ಲವನ್ನು … Read more

ವಿಜ್ಞಾನಿ ಮಿತ್ರರು: ಡಾ. ಗಿರೀಶ್ ಬಿ.ಸಿ.

ಜಗುಲಿ ಮೇಲೆ ಕುಳಿತು ಬಲಗೈಯಲ್ಲಿ ಬೂದುಗಾಜು ಹಿಡಿದು ಎಡಗೈಯ ಬೆರಳುಗಳ ಮದ್ಯೆ ಅದಾವುದೊ ಕೀಟವನ್ನು ವೀಕ್ಷಿಸುತ್ತ್ತಿದ್ದ ಈಸುರಯ್ಯನ ರವಿ. ಅಚಾನಕ್ ಆಗಿ ಆಗಮಿಸಿದವನಿಗೆ ಕುಳಿತುಕೊಳ್ಳಲು ಕಣ್ಣಲ್ಲೇ ಸಂಜ್ಞೆಮಾಡಿ ತನ್ನ ಅಧ್ಯಯನವನ್ನು ಮುಂದುವರೆಸಿದ. ಅದೇನು ಮಾಡ್ತಾನೋ ನೋಡೋಣ ಅಂತ ಅವನ ಎಡಭಾಗದಲ್ಲಿ ಮಂಡಿವೂರಿ ಕುಳಿತೆ. ಕಣ್ಣು ಮಿಟುಕಿಸದೆ ಆ ಕೆಂಪು ಕೀಟವನ್ನು ನೋಡುತ್ತಾ ಕತ್ತನ್ನು ಮೇಲೆ ಕೆಳಗೆ ಆಡಿಸುತ್ತಾ ಏನನ್ನೋ ನೆನದು ‘ಯೆಸ್ ಯೆಸ್’ ಅಂದ. ಕೈಯಲ್ಲಿರುವುದನ್ನು ನೆಲದ ಮೇಲೆ ಹಾಕಿ ‘ಬಂದೇ ಇರು’ ಅನ್ನುತ್ತ ಒಳಗೆ ಹೋಗುವಾಗ … Read more

ಅಂತೆ ಕಂತೆಗಳ ನಡುವೆ…: ಅಶ್ಫಾಕ್ ಪೀರಜಾದೆ

ಗೆಳೆಯ ಗಂಗಾಧರ ಸತ್ತ ಸುದ್ದಿಯ ಹಿನ್ನಲೆಯಲ್ಲಿ ನಾನು ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣ ಬೆಳಸಬೇಕಾಗಿ ಬಂತು. ಗಂಗಾಧರ ನನ್ನ ಪ್ರಾಣ ಸ್ನೇಹಿತ, ವಾರಿಗೆಯವ, ಹೆಚ್ಚುಕಮ್ಮಿ ನನ್ನಷ್ಟೇ ವಯಸ್ಸು, ನಲವತ್ತೈದು ಸಾಯುವ ವಯಸ್ಸಲ್ಲ, ಅದಕ್ಕೆ ಅದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಆದರೆ ಗಂಗಾಧರನ ಪತ್ನಿಯೇ ಅಳುತ್ತ ದೂರವಾಣಿಯ ಮುಖಾಂತರ ಇದನ್ನು ಹೇಳಿದಾಗ ನಂಬದೇ ಗತಿಯಿರಲಿಲ್ಲ. ಗಂಗಾಧರನ ಅಗಲಿಕೆಯ ವೇದನೆ ಹೊತ್ತು ಭಾರವಾದ ಮನಸ್ಸಿನಿಂದ ಬೆಳಗಾವಿ ಬಸ್ಸು ಹತ್ತಿದೆ. ಬಸ್ಸು ನಿಲ್ಧಾಣ ಬಿಟ್ಟಾಗ ರಾತ್ರಿ ಹತ್ತರ ಸಮಯ, ಸೀಟಿಗೊರಗಿ ಮಲಗಲು ಪ್ರಯತ್ನಿಸಿದೆ.ಸಾಧ್ಯವಾಗಲಿಲ್ಲ. ಕೇವಲ … Read more

ಜಾಣಸುದ್ದಿ 15: ಕೊಳ್ಳೇಗಾಲ ಶರ್ಮ

ಈ ವಾರದ ಸಂಚಿಕೆಯಲ್ಲಿ ಕೊಳ್ಳೇಗಾಲ ಶರ್ಮರವರ ಧ್ವನಿಯಲ್ಲಿರುವ ಈ ಆಡೀಯೊ ಕೇಳಲು ಈ ಕೆಳಗಿನ ಕೊಂಡಿಯ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಜಾಣ ಸುದ್ದಿ ಧ್ವನಿಮುದ್ರಿಕೆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ save as/ download ಆಪ್ಷನ್ ನಿಂದ ನಿಮ್ಮ ಮೊಬೈಲ್/ ಕಂಪ್ಯೂಟರ್ ಗೆ ಡೌನ್ ಲೋಡ್ ಮಾಡಿಕೊಳ್ಳಿ… ಇ ಮೇಲ್ ನಲ್ಲಿ ಅಥವಾ ವಾಟ್ಸ್ ಅಪ್ ನಲ್ಲಿ ಈ ಧ್ವನಿಮುದ್ರಿಕೆ ನಿಮಗೆ ಬೇಕು ಎಂದನಿಸಿದರೆ ನಿಮ್ಮ ಕೋರಿಕೆಯನ್ನು ನಮ್ಮ … Read more

ಹವ್ಯಕರಲ್ಲಿ ಗಣೇಶ ಹಬ್ಬದ ಆಚರಣೆ: ಗೀತಾ ಜಿ.ಹೆಗಡೆ, ಕಲ್ಮನೆ.

ಸೃಷ್ಟಿ ಸೌಂದರ್ಯದ ತವರೂರಾದ ಮಲೆನಾಡಿನ ಜಿಲ್ಲೆಯಾದ್ಯಂತ ನೂರಾರು ಹವ್ಯಕ ಕುಟುಂಬಗಳು ಅಲ್ಲಲ್ಲಿ ನಾಲ್ಕು ಐದು ಮನೆಗಳಿಂದ ಸಣ್ಣ ಸಣ್ಣ ಹಳ್ಳಿಗಳಾಗಿ ಪುರಾತನ ಕಾಲದಿಂದಲೂ ನೆಲೆ ನಿಂತಿವೆ. ಒಂದೊಂದು ಹಳ್ಳಿಗೂ ಒಂದೊಂದು ಹೆಸರು. ಹಾಗೆ ಅಲ್ಲಿ ಆಚರಿಸುವ ಹಬ್ಬಗಳಲ್ಲೂ ವಿಶೇಷತೆಯಿದೆ. ಅವುಗಳಲ್ಲಿ “ಗಣೇಶ ಹಬ್ಬ”ವೂ ಒಂದು. ಹವ್ಯಕರಲ್ಲಿ ಈ ಗಣೇಶ ಹಬ್ಬಕ್ಕೆ ಚೌತಿ ಹಬ್ಬವೆಂದು ಹೇಳುವ ವಾಡಿಕೆ. ತಲೆ ತಲಾಂತರದಿಂದ ಮನೆತನದಲ್ಲಿ ನಡೆದುಕೊಂಡು ಬಂದ ಹಲವು ಪದ್ಧತಿಗಳಿದ್ದು ಅದು ಈಗಲೂ ಮುಂದುವರೆದಿದೆ. ಹಬ್ಬಕ್ಕೆ ಹದಿನೈದು ದಿನಗಳಿರುವಾಗಲೆ ಹಬ್ಬದ ತಯಾರಿ … Read more

ಜೀರಾ ರೈಸ್ ಮತ್ತು ದಾಲ್ ಫ್ರೈ ರೆಸಿಪಿ: ವೇದಾವತಿ ಹೆಚ್. ಎಸ್.

1.ಜೀರಾ ರೈಸ್.(ರೆಸ್ಟೋರೆಂಟ್ ಸ್ಟೈಲ್) ಬೇಕಾಗುವ ಸಾಮಾಗ್ರಿಗಳು: ಬಾಸುಮತಿ ಅಕ್ಕಿ 1ಕಪ್ ಎಣ್ಣೆ 1ಚಮಚ ಉಪ್ಪು 1/2ಚಮಚ ತುಪ್ಪ 2ಚಮಚ ಜೀರಿಗೆ 2ಚಮಚ ಕೊತ್ತಂಬರಿ ಸೊಪ್ಪು ಸ್ವಲ್ಪ ಅಕ್ಕಿ ಬೇಯಿಸಲು ನೀರು 5ಕಪ್ ತಯಾರಿಸುವ ವಿಧಾನ: ಬಾಸುಮತಿ ಅಕ್ಕಿಯನ್ನು 20ನಿಮಿಷಗಳ ಕಾಲ ನೀರಿನಲ್ಲಿ ನೆನೆಸಿಡಿ. ಬಾಣಲೆಯಲ್ಲಿ ಐದು ಕಪ್ ನೀರನ್ನು ಹಾಕಿ. ಈ ನೀರಿಗೆ ಉಪ್ಪು ಮತ್ತು ಎಣ್ಣೆಯನ್ನು ಹಾಕಿ ನೀರನ್ನು ಕುದಿಸಿ. ನಂತರ ನೆನೆಸಿ ಕೊಂಡ ಅಕ್ಕಿಯ ನೀರನ್ನು ತೆಗೆದು ಕುದಿಯುವ ನೀರಿಗೆ ಹಾಕಿ. ಎಂಟರಿಂದ ಹತ್ತು … Read more

ಈ ಹುಚ್ಚುವಿಗೆ ಯಾವುದು ಮದ್ದು?:  ಸ್ಮಿತಾ ಅಮೃತರಾಜ್. ಸಂಪಾಜೆ

ಅನ್ವರ್ಥ ನಾಮಕ್ಕೆ ವೈದ್ಯ, ವಿದ್ವಾಂಸ, ವ್ಯಾಪಾರಿ ಹೀಗೆ ಅನೇಕ ಉದಾಹರಣೆಗಳನ್ನು ಕೊಡುತ್ತಾ ಹೋಗಬಹುದು. ಹಾಗೆಯೇ ಒಂದಷ್ಟು ಮಿನಿ ಕವಿತೆ, ಚುಟುಕು ಅಂತ ಎರಡು ಸಾಲು ಗೀಚಿದ ಕವಿಗಳಿಗೆ ಕೂಡ ಅವರ ವಿಳಾಸದ ಕೆಳಗೆ ಅವರಿಗೂ ಗೊತ್ತಿಲ್ಲದಂತೆ ‘ಕವಿಗಳು’ ಅಂತ ಅನ್ವರ್ಥಕ ನಾಮವೊಂದು ತಗಲಿ ಹಾಕಿಕೊಂಡು ಬಿಡುತ್ತದೆ. ಇದನ್ನು ನಾನು ಯಾಕೆ ಉದಾಹರಿಸುತ್ತಿರುವೆನೆಂದರೆ ಕೆಲವೊಂದು ಪರ್ಯಾಯ ಹೆಸರುಗಳು ನಮಗೆ ಅದು ಹೇಗೋ  ಜಿಗುಟು ಜಿಗುಟು ಮೇಣದಂತೆ ಅಂಟು ಹಾಕಿಕೊಂಡು ಬಿಡುತ್ತದೆ. ಮತ್ತೆ ನಾವು ಬಿಟ್ಟರೂ ಅದು ನಮ್ಮನ್ನು ಬಿಡದಂತೆ … Read more

ಗುರುವೆಂಬುದು ಅತಿಭೌತಿಕ ಶಕ್ತಿ: ಶ್ರೀ.ಎಂ.ಎಚ್.ಮೊಕಾಶಿ

ಸಮಾಜದಲ್ಲಿ ಅನೇಕ ವೃತ್ತಿಗಳಿವೆ. ಅವುಗಳಲ್ಲಿ ಪ್ರಮುಖವಾದುದೆಂದರೆ ಶಿಕ್ಷಕ ವೃತ್ತಿಯಾಗಿದೆ. ಶಿಕ್ಷಕನನ್ನು ಬೋಧಕ, ಅಧ್ಯಾಪಕ, ಮೇಷ್ರು, ಗುರು, ಮೊದಲಾದ ಬೇರೆ ಬೇರೆ ಹೆಸರುಗಳಿಂದ ಕರೆಯುವರು. ಗುರುವನ್ನು “ಆಚಾರ್ಯ ದೇವೋಭವ”ಎನ್ನಲಾಗಿದೆ. ಅಂದರೆ ದೇವರ ಸ್ಥಾನ ಮಾನ ನೀಡಲಾಗಿದೆ. ಗುರು “ಸಂಸ್ಕøತಿಯ ಪ್ರಗತಿಯ ಅಗ್ರಧೂತ”, ”ರಾಷ್ರ ನಿರ್ಮಾತೃ”, ”ಇತಿಹಾಸದ ನಿರ್ಮಾಪಕ” ಕೂಡ ಆಗಿದ್ದಾನೆ. ಗುರು ಮಗುವಿಗೆ ದ್ವಿತೀಯ ಜನ್ಮದಾತನಾಗಿದ್ದಾನೆ. ಹೀಗಾಗಿ ಗುರುವಿಗೆ ಸಮಾಜದಲ್ಲಿ ಮಹತ್ವದ ಸ್ಥಾನಮಾನ ನೀಡಲಾಗಿದೆ. ಗುರು ಭೂಮಿಯ ಮೇಲಿರುವ ಅತಿಭೌತಿಕ ಹಾಗೂ ಉನ್ನತ ಶಕ್ತಿಯ ಕುರಿತಾದ ಅತ್ಯುನ್ನತ ಜ್ಞಾನವನ್ನು … Read more

ಅತಿಥಿ ದೇವೋ ಭವ: ಸುನಂದಾ ಎಸ್ ಭರಮನಾಯ್ಕರ

ಭಾರತೀಯ ನಾಗರೀಕತೆಯು ಭೂಮಿಯಲ್ಲಿಯೇ ಅತ್ಯಂತ ಪ್ರಾಚೀನವಾದವುಗಳಲ್ಲಿ ಒಂದಾಗಿರುವುದಲ್ಲದೇ, ಇತರೇ ಎಲ್ಲಾ ಸಂಸ್ಕøತಿಗಳಂತೆ ತನ್ನದೇ ಆದ ಸಂಪ್ರದಾಯಗಳನ್ನು ಹೊಂದಿದ್ದು ಅವುಗಳಲ್ಲಿ ಸಾಕಷ್ಟು ಅತಿಥಿ ಸತ್ಕಾರದ ವಿಚಾರಗಳನ್ನು ಹೊಂದಿದೆ. ಅತಿಥಿ ಎಂಬ ಶಬ್ದವು ಭಾರತೀಯರ ಒಂದು ವಿಶಿಷ್ಟ ಜೀವನಕ್ರಮವನ್ನು ಸೂಚಿಸುತ್ತದೆ. ಯಾರಿಗಾದರೂ ಅನೀರಿಕ್ಷಿತವಾಗಿ ಅಪರಿಚಿತರ ಆತಿಥ್ಯವನ್ನು ಅವಲಂಬಿಸುವ ಪ್ರಸಂಗ ಒದಗಬಹುದು. ಸಂಚಾರ ಸಾಧನಗಳು ಇಂದಿನ ಹಾಗೆ ಇಲ್ಲದಿದ್ದ ಕಾಲದಲ್ಲಿ ದೂರ ಪ್ರಯಾಣದಲ್ಲಿರುವವರು ಇಂಥ ಆತಿಥ್ಯವನ್ನು ನಂಬಿಕೊಂಡೆ ವ್ಯವಹಾರ ಸಾಗಿಸಬೇಕಿತ್ತು. ಇಂದು ಕೂಡ ಬಾರತೀಯ ಹಳ್ಳಿಗರಲ್ಲಿ ಈ ಧೋರಣೆ ಹಾಗೇ ಉಳಿದಿದೆ. … Read more

ದಿಟ್ಟ ಬಾಲಕಿಯೋರ್ವಳ ಕಥಾನಕದ ‘ಸಮಸ್ಯೆಗಳ ಮೆಟ್ಟಿ ನಿಂತ ಬಾಲಕಿ’ ನಾಟಕ ಪ್ರದರ್ಶನ: ಪ್ರೊ.ಅನ್ನಪೂರ್ಣ ತಳಕಲ್

ಇತ್ತೀಚೆಗೆ (26-08-2018) ಹುಬ್ಳಳ್ಳಿ-ಧಾರವಾಡ ನಗರಗಳನ್ನು ಸುತ್ತ-ಮುತ್ತ ಬೆಳೆದರೂ ತನ್ನ ಸೊಗಡನ್ನು ಕಳೆದುಕೊಳ್ಳದ ಸುತಗಟ್ಟಿ ಗ್ರಾಮದಲ್ಲಿ ಮಕ್ಕಳ ನಾಟಕವೊಂದನ್ನು ವೀಕ್ಷಿಸುವ ಭಾಗ್ಯ ಸಿಕ್ಕಿತ್ತು. ಆ ನಾಟಕದಲ್ಲಿ ಪ್ರತಿಭೆ ಯಾರೊಬ್ಬರ ಸ್ವತ್ತಲ್ಲ ಎಂಬ ಮಾತಿನಂತೆ ಗ್ರಾಮೀಣ ಪ್ರದೇಶದ ಬಡ ಕುಟುಂಬದ ಹಿನ್ನಲೆಯ ಬಾಲಕಿಯೋರ್ವಳು ತನಗೆದುರಾಗುವ ಸಂಕಷ್ಟಗಳನ್ನು ಸಮಯೋಚಿತವಾಗಿ ಜಾಣ್ಮೆಯಿಂದ ಎದುರಿಸುವ ಕಥಾನಕದ ಕು.ಬಿಂದು ಮತ್ತಿಕಟ್ಟಿ ರಚನೆಯ ‘ಸಮಸ್ಯೆಗಳ ಮೆಟ್ಟಿ ನಿಂತ ಬಾಲಕಿ’ ನಾಟಕವನ್ನು ಹುಬ್ಬಳ್ಳಿ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸುತಗಟ್ಟಿಯ ವಿದ್ಯಾರ್ಥಿ ಮಕ್ಕಳು ಶಾಲಾ ಆವರಣದ ರಂಗಮಂದಿರದಲ್ಲಿ … Read more

ತಲ್ಲೀನತೆಯ ಪರಾಕಾಷ್ಠೆ: ಕೆ ಟಿ ಸೋಮಶೇಖರ ಹೊಳಲ್ಕೆರೆ.

ತಲ್ಲೀನತೆಯೆಂದರೆ ವ್ಯಕ್ತಿ ಏನನ್ನು ಮಾಡಬಯಸುತ್ತಾನೋ ಅದರಲ್ಲಿಯೇ ಮನಸ್ಸು ಐಕ್ಯವಾಗುವುದು! ಮತ್ತೊಂದರ ಕಡೆಗೆ ಗಮನ ಹರಿಸದಂತೆ ಕೆಲಸದಲ್ಲಿ ಮುಳುಗುವುದು! ಯಾವುದೇ ಕೆಲಸವನ್ನು ಏಕಾಗ್ರತೆಯಿಂದ, ಇಷ್ಟಪಟ್ಟು, ಪ್ರೀತಿಸಿ ಮಾಡಿದಾಗ ಆ ಕೆಲಸ ಸುಂದರವಾಗುವುದು, ಮನಸ್ಸಿಗೆ ಮುದನೀಡುವುದು, ಇತರರ ಮನಸೂರೆಗೊಳ್ಳುವುದು! ಕಾಟಾಚಾರಕ್ಕೆ, ಒತ್ತಾಯಕ್ಕೆ, ಅಧಿಕಾರದ ದರ್ಪಕ್ಕೆ ಹೆದರಿ ಮಾಡುವ ಕೆಲಸಗಳು ಸುಂದರವಾಗವು, ಮಾಡಿದವರಿಗೂ ನೋಡುವವರಿಗೂ ಮೆಚ್ಚಿಗೆಯಾಗವು, ಯಾರಿಗೂ ತೃಪ್ತಿನೀಡವು. ಮಾಡಿದ್ದು ಸುಂದರವಾಗಬೇಕೆಂದರೆ ಗರಿಷ್ಟಮಟ್ಟದ ತಲ್ಲೀನತೆ ಅವಶ್ಯ! ಪ್ರಪಂಚದಲ್ಲಿ ಯಾವುವು ಪ್ರಸಿದ್ಧವಾದ, ಸುಂದರವಾದ ಕೆಲಸಗಳೋ ಅವು ತಲ್ಲೀನತೆಯ ಪರಾಕಾಷ್ಠೆಯ ಫಲಗಳಾಗಿವೆ. ಅವು ಯೋಗದ … Read more

ಎರಡು ಕನಸುಗಳು: ಚೈತ್ರಾ ವಿ.ಮಾಲವಿ

ಕನಸು-ಒಂದು (೧೫-೧೧-೨೦೧೭)ಶುಕ್ರವಾರ      ಅವತ್ತು ಮುಂಜಾನೆ ಚಹಾ ಮಾಡಲು ಅಡುಗೆ ಮನೆಗೆ ಹೋದ ಗಂಗಾ, ಗ್ಯಾಸ್ ಸ್ಟವ್ ಹಚ್ಚಲು ಪರಿತಪಿಸುತ್ತಿದ್ದಳು, ಮೂರು, ನಾಲ್ಕು ಬಾರಿ ಲೈಟರಿನಿಂದ ಟಕ್, ಟಕ್ ಅಂತ ಅಂದರೂ ಸ್ಟವ್ ಹತ್ತಲಿಲ್ಲ. ಟಕ್ ಟಕ್ ಸದ್ದು ಕೇಳಿದ ಕೂಡಲೇ, ಪಡಸಾಲೆಯಲ್ಲಿ ಟೀವಿ ನೋಡುತ್ತಿದ್ದ ಅವಳ ಮಾವ ಕಿರಣ್ ಅಡುಗೆ ಮನೆಗೆ ಹೋದ. ಕಿರಣ್ ನ ದೊಡ್ಡಕ್ಕನ ಮಗಳು ಈ ಗಂಗಾ.  ಅವಳನ್ನು ನೋಡಿ, “ಹೇ..ಮಬ್ಬು, ಈ ಕಡೆ ಬಾ..ಇಲ್ಲಿ. ಇಷ್ಟು.. ಗ್ಯಾಸ್ ಹಚ್ಚೋಕೆ … Read more

ಅಧೀನ ನೆಲೆಯಲ್ಲಿ ಹೆಣ್ತನ: ನಾಗರೇಖಾ ಗಾಂವಕರ

ಆಕೆ ಫಣಿಯಮ್ಮ. ಮನೆಗೆಲಸ ಮಾಡಿ ಬದುಕ ನಡೆಸುತ್ತ ಏಗುತ್ತಿರುವ ಮಧ್ಯವಯಸ್ಸಿನ ಹೆಂಗಸು. ನಾಲ್ಕು ಮಕ್ಕಳ ತಾಯಿ. ಮಕ್ಕಳೆಲ್ಲಾ ಶಾಲೆ ಕಾಲೇಜುಗಳಲ್ಲಿ ಕಲಿಯುತ್ತಿದ್ದಾರೆ. ಗಂಡ ಕೂಡಾ ಒಬ್ಬ ಕೂಲಿ. ಆದರೆ ವಿಪರೀತ ಕುಡುಕ. ದುಡಿದ ಹಣದಲ್ಲಿ ಬಹಳ ಸಲ ಬಿಡಿಗಾಸನ್ನು ಮನೆಗೆ ಕೊಡದೆ ಮನೆಯಲ್ಲಿ ಉಂಡು ಮಲಗುವ ದಂಡಪಿಂಡ. ಆಕೆ ಕಣ್ಣೀರಿನಲ್ಲಿಯೇ ಕೈತೊಳೆಯುತ್ತಿದ್ದಾಳೆ. ದಿನವೂ ಐದಾರು ಮನೆಗಳ ಕಸ ಮುಸುರೆ ತಿಕ್ಕಿ ತಿಂಗಳೊಂದಕ್ಕೆ ಐದಾರು ಸಾವಿರ ಗಳಿಸುವ ಆಕೆಯ ಕುಟುಂಬಕ್ಕೆ ಸಿಗುವ ಪಡಿತರ ಅಕ್ಕಿ ಕಾಳುಗಳು ಹೇಗೋ ಜೀವನ … Read more

ಎಲ್ಲಿ ಹೋದವು ಆ ದಿನಗಳು?: ಗೌರಿ. ಚಂದ್ರಕೇಸರಿ

ಗುರುವಿಗೊಬ್ಬ ಯೋಗ್ಯ ಶಿಷ್ಯ, ಶಿಷ್ಯನಿಗೊಬ್ಬ ಜ್ಞಾನಿಯಾದ ಗುರು ಇವೆರಡೂ ಲಭ್ಯವಾಗುವುದು ಅವರಿಬ್ಬರ ಅದೃಷ್ಟವೆಂದೇ ಹೇಳಬೇಕು. ವಿದ್ಯಾರ್ಥಿಗಳ ಜ್ಞಾನದಾಹವನ್ನು ನೀಗಿಸುವ ಗುರು ನಿರ್ಧಿಷ್ಟ ವಿಷಯದ ಬಗ್ಗೆ ಆಳವಾದ ಅಧ್ಯಯನ ಮಾಡಿಕೊಂಡಿರಬೇಕಾಗುತ್ತದೆ. ಸತತ ಪರಿಶ್ರಮಿಯಾಗಿರಬೇಕಾಗುತ್ತದೆ. ತಾವು ಬೋಧಿಸುವ ವಿಷಯದ ಕುರಿತು ತುಡಿತವನ್ನು ಹೊಂದಿರಬೇಕಾಗುತ್ತದೆ. ಅಂದಾಗಲೇ ಅದನ್ನು ಮತ್ತೊಬ್ಬರೊಂದಿಗೆ ಪ್ರಸ್ತುತಪಡಿಸಬಹುದು ಹಾಗೂ ಚರ್ಚಿಸಬಹುದು.‘ಗುರು’ ಎಂಬ ಶಬ್ದವೇ ಕತ್ತಲೆಯನ್ನು ಹೊಡೆದೋಡಿಸುವುದು ಎಂಬ ಅರ್ಥವನ್ನು ಹೊಂದಿದೆ. ಪ್ರತಿಷ್ಠಿತ ಕಾಲೇಜೊಂದರಲ್ಲಿ ಓದಿದ ನಾನು ಪ್ರಸಿದ್ಧ ಸಾಹಿತಿಗಳು, ವಿಮರ್ಶಕರು, ವಾಗ್ಮಿಗಳು, ಭಾಷಾ ಪಾರಂಗತರನ್ನು ಗುರುಗಳನ್ನಾಗಿ ಪಡೆದದ್ದು ನನ್ನ … Read more