ಧೈರ್ಯವೇ ಹಿಮಾಲಯ, ಗೆಲ್ಲು ನೀ ಅಧೈರ್ಯವಾ. . . . : ಸುನಂದಾ ಎಸ್ ಭರಮನಾಯ್ಕರ

ಧೈರ್ಯ ಎಂದರೆ ಛಾತಿ, ಕೆಚ್ಚು, ಎದೆಗಾರಿಕೆ. ಧೈರ್ಯವು ಭಯ, ನೋವು ಅಪಾಯ ಅನಿಶ್ಚಿತತೆ ಅಥವಾ ಬೆದರಿಕೆಯನ್ನು ಎದುರಿಸುವ ಸಾಮಥ್ರ್ಯ ಮತ್ತು ಇಚ್ಛೆಯಾಗಿದೆ. ಮನುಷ್ಯ ಯಾವುದೇ ಸಾಧನೆ ಮಾಡಬೇಕಾದರೂ ಆತನಲ್ಲಿ ಮೊದಲು ಇರಬೇಕಾದದ್ದು ಧೈರ್ಯ. “ಧೈರ್ಯಂ ಸರ್ವತ್ರ ಸಾಧನಂ”. ಮನುಷ್ಯನಲ್ಲಿ ಸಿಗುವ ಅತಿ ವಿರಳ ಹಾಗೂ ಅತಿ ಅಮೂಲ್ಯವಾದ ವಸ್ತುವೆಂದರೆ ಧೈರ್ಯವೇ ಆಗಿದೆ. ಅದನ್ನು ಪೇಟೆಯಲ್ಲಿ ಖರೀದಿ ಮಾಡಲಾಗುವುದಿಲ್ಲ. ಅದು ಮಾರಾಟದ ವಸ್ತುವಾಗಿದ್ದರೆ ಪುಕ್ಕಲರೂ, ಶ್ರೀಮಂತರಾದಿಯಾಗಿ ಎಲ್ಲರೂ ಅದನ್ನು ಕೊಂಡು ಕೊಂಡು ತಮ್ಮ ಬಳಿ ಇರಿಸಿಕೊಳ್ಳುತ್ತಿದ್ದರು. ಬದುಕು ಗೆಲ್ಲಲು … Read more

ಪದ್ದಕ್ಕಜ್ಜಿಯ ಅಂತಾಕ್ಷರಿ: ವೃಂದಾ. ಸಂಗಮ

ನಮ್ಮ ಪದ್ದಕ್ಕಜ್ಜಿ ನಿಮಗೆಲ್ಲಾ ಗೊತ್ತೇ ಇದೆಯಲ್ವಾ ? ಗೊತ್ತಿದ್ದೇ ಇರತ್ತೆ. ಅವರು ಇಡೀ ಊರಲ್ಲೇ ವರ್ಲ್ಡ ಫೇಮಸ್ಸು. ಅವರು ಇವತ್ತು ತಿಂಡಿಗೆ ಒತ್ತು ಶಾವಿಗೆ ಮಾಡಿದ್ದರು. ಅಲ್ಲರೀ, ಅದೇನೋ ಅಂತಾಕ್ಷರಿ ಅಂದು ಬಿಟ್ಟು, ಇದೇನು ತಿಂಡಿ ಬಗ್ಗೆ ಹೇಳ್ತಿದೀರಲ್ಲ, ಅಂತಿದೀರಾ ? ಪೂರ್ತಿ ಕೇಳಿಸಕೊಳ್ಳಿ. ಅಲ್ಲೇ ಇರೋದು ಮಜಾ, ಒತ್ತು ಶಾವಿಗೆಯ ಖಾರದ ತಿಂಡಿ ಹಾಗೂ ಅದಕ್ಕೆ ಸಿಹಿಯಾಗಿ ಗಸಗಸೆ ಪಾಯ್ಸ. ನಮ್ಮ ರಾಯರು, ಅದೇ ನಮ್ಮ ಪದ್ದಕ್ಕಜ್ಜಿ ಗಂಡ, ನಿಮಗೆ ಗೊತ್ತೇ ಇದೆಯಲ್ಲ, ನಾನು ಬೇರೆ … Read more

ಇದರರ್ಥವೇನು?: ಸಹನಾ ಪ್ರಸಾದ್

ನಾನು ರಜಿತಾ. ರಂಜಿತಾ ಹೆಸರು ಬರೆಯುವಾಗ ಈ ರೀತಿ ತಿರುಚಲ್ಪಟ್ಟು, ಈ ಹೆಸರು ಖಾಯಂ ಆಯಿತು. ವಯಸ್ಸು ೫೫. ಗಂಡ ಸದಾಶಿವ, ದೊಡ್ಡ ಕಂಪನಿಯಲ್ಲಿ ಕೈ ತುಂಬಾ ಕೆಲಸ ಹಾಗು ಕೈ ತುಂಬಾ ದುಡ್ಡೂ ಸಹ. ಮೊದಲಿಂದಲೂ ಮಿತಭಾಷಿ. ಈಗ ವಯಸ್ಸಾದಂತೆ ಮಹಾ ಮೌನಿ. ಬೆಳಗ್ಗೆ ಎದ್ದು ತನ್ನ ಪ್ರಾತಃವಿಧಿಗಳನ್ನು ತೀರಿಸಿ, ೨೦ ನಿಮಿಷ ವ್ಯಾಯಾಮ ಮಾಡಿ , ತಿಂಡಿ ತಿನ್ನುತ್ತಾ ಪೇಪರ್ ಓದಿ ಹೊರಡುವರು. ಹೊಸ ಮಾದರಿಯ ಕಾರು, ಅದಕ್ಕೊಬ್ಬ ಡ್ರೈವರ್ ಇದಾನೆ. ಗಂಡನ ದಿನಚರಿಯಲ್ಲಿ … Read more

ಬದುಕಿದು ಸುಂದರ. . .: ಧೀರೇಂದ್ರ ನಾಗರಹಳ್ಳಿ.

‘ಅವನು’  ವಿಪರೀತವಾದ ಗೊಂದಲದಲ್ಲಿ ಮುಳುಗಿದ್ದ. ತನ್ನ ಸ್ನೇಹಿತನಾದ ‘ಇವನಿ’ಗೆ ಯಾವುದೋ ಒಂದು ಮಾಹಿತಿ ಕೊಡಲು ವಿನಂತಿಸಿದ್ದ. ಅದಕ್ಕೆ ಪ್ರತ್ಯತ್ತರವಾಗಿ ಇವನು,  ಅವನು ಕೇಳಿದ್ದ ಮಾಹಿತಿಯನ್ನೇನೋ  ಒದಗಿಸಿದ್ದ. ಅದನ್ನು ಯಥಾವತ್ತಾಗಿ ಸ್ವೀಕರಸೊವುದೋ ಅಥವಾ ತುಸುವಷ್ಟೇ ತೆಗೆದು ಕೊಂಡು ಉಳಿದದ್ದನ್ನು ಬಿಟ್ಟುಬಿಡಬೇಕೋ?. ಅವನು ಆ ಮಾಹಿತಿಯನ್ನು ಈ ತರಹದ  ಗುಮಾನಿಯಿಂದ ನೋಡುವುದಕ್ಕೆ ಕಾರಣ, ಆ ಮಾಹಿತಿಯಲ್ಲಿ ಇವನು ಕುಳಿತಿದ್ದ. ಇವನು ಕುಳಿತಿದ್ದ ಆ ಮಾಹಿತಿಯಲ್ಲಿ ಅವನಾಗಿರುವ ಇವನಿರಲಿಲ್ಲ. ಹೀಗಾಗಿ ಈ ಮಾಹಿತಿಯನ್ನು ಸ್ವೀಕರಿಸುವುದೋ ಅಥವಾ ಬೇಡವೂ ಎನ್ನುವ ಗೊಂದಲದಲ್ಲಿದ್ದ. ಆದರೆ … Read more

ಹೊಸ ಚೈತನ್ಯ ನೀಡುವ ಹಬ್ಬ ಯುಗಾದಿ: ಡಾ. ಶಿವಕುಮಾರ ಎಸ್‌. ಮಾದಗುಂಡಿ

ಪ್ರಾಚೀನ ರೋಮನ್ ಕವಿ ಓವಿಡ್ ಒಮ್ಮೆ ಜ್ಯೋತಿಷಿ ಜಾನುಸ್ನನ್ನು ಕೇಳಿದ: ‘ಹೊಸ ವಷ೯ ಜನವರಿಯಿಂದಲೇ ಏಕೆ ಆರಂಭವಾಗಬೇಕು’? ಎಂದು. ಅದಕ್ಕೆ ಜ್ಯೋತಿಷಿ ಹೇಳಿದರೂ ಜನವರಿ ತಿಂಗಳಿನಲ್ಲಿ ಸೂರ್ಯ ಮಕರ ರಾಶಿ ಪ್ರವೇಶಿಸುತ್ತಾನೆ. ಅಂದಿನವರೆಗೆ ಹಿಮದಿಂದ ಮಂಕಾಗಿದ್ದ ಜಗತ್ತು ಅಂದಿನಿಂದ ಸ್ವಚ್ಛವಾಗಿ ಜನತೆಯಲ್ಲಿ ಹೊಸ ಉತ್ಸಾಹ, ನವೋದಯ ಆರಂಭವಾಗುವುದರಿಂದ ಅಂದಿನಿಂದ ಹೊಸವರ್ಷದ ಆರಂಭ ಎಂದು ಹೇಳಿದರು. ಆದರೆ, ಸಾಮಾನ್ಯವಾಗಿ ಹೊಸ ವರ್ಷ ಎಂದರೆ ಜಗತ್ತಿನಲ್ಲಿ ಜನವರಿ ಒಂದು ಎಂದು ನಾವೆಲ್ಲರೂ ಭಾವಿಸುತ್ತೇವೆ. ಆದರೆ, ಆ ದಿನ ಮನೆಯ ಗೋಡೆಯ … Read more

ಮನದಲಿ ಮೂಡಿದ ಸಂಭ್ರಮದ ಯುಗಾದಿ: ಪಿ. ಕೆ. ಜೈನ್ ಚಪ್ಪರಿಕೆ.

ಭೂಮಿಯು ಸೂರ್ಯನ ಸುತ್ತ ಸುತ್ತುವಾಗ ಹವಮಾನದಲ್ಲಿ ಹಾಗೂ ನಿಸರ್ಗದಲ್ಲಿ ಉಂಟಾಗುವ ಬದಲಾವಣೆಗಳಿಗೆ ಋತುಗಳು ಎನ್ನುತ್ತೇವೆ. ಭಾರತೀಯರ ಪದ್ಧತಿಯಲ್ಲಿ 6 ಋತುಗಳಿದ್ದು ವಸಂತ ಋತುವು ಹಿಂದೂ ವರ್ಷದ ಆರಂಭದ ಋತುವಾಗಿದೆ. ಒಂದೊಂದು ಋತುವಿಗೂ ಎರಡು ಮಾಸಗಳಿದ್ದು ಚೈತ್ರ ಮತ್ತು ವೈಶಾಖ ಮಾಸಗಳು ವಸಂತ ಋತುವಿನಡಿಯಲ್ಲಿ ಬರುತ್ತವೆ. ಹೀಗೆ ಚೈತ್ರ ಮಾಸ ಶುಕ್ಲ ಪಕ್ಷದಲ್ಲಿ ಬರುವ ಯುಗಾದಿಯನ್ನು ಹೊಸ ವರ್ಷವೆಂದು ಆಚರಿಸುತ್ತೇವೆ. ಯುಗಾದಿಯು ದಕ್ಷಿಣ ಬಾರತದ ಜನರಿಗೆ ವರ್ಷದ ಮೊದಲ ಹಬ್ಬವಾಗಿ ಉತ್ತರ ಭಾರತದವರಿಗೆ ಇದು ಹೋಳಿಯ ನಂತರ ಬರುವ … Read more

ಹರಕೆ ಸಂದಾಯ: ಕೃಷ್ಣವೇಣಿ ಕಿದೂರು

ನಮ್ಮ ತುಳು ಭಾಷೆಯಲ್ಲಿ ಒಂದು ಮಾತಿದೆ. ಯಾರಿಗಾದರೂ ಒಂದು ಕೆಲಸ ಒಪ್ಪಿಸಿದಾಗ ಅಸಡ್ಡೆಯಿಂದ ಅಥವಾ ಉಡಾಫೆಯಿಂದ ಅರೆಬರೆ ಮಾಡಿದ್ದು ಕಂಡಾಗ ’ ಉಂದ್ ಎಂಚಿನ? ಪರಕೆ ಸಂದಾಯನಾ” (ಏನಿದು ? ಹರಕೆ ಸಂದಾಯವಾ ಅಂತ ಕೇಳುವುದು. ಕನ್ನಡದಲ್ಲಿಯೂ ಅದೇ ಅರ್ಥದ ಮಾತು ಉಂಟು. ಮಾಡುವ ಕಾರ್ಯವನ್ನು ಔದಾಸಿನ್ಯದಿಂದ ಅರ್ಧಮರ್ಧ ಮಾಡಿದಾಗ ಅದಕ್ಕೆ ಹೆಸರೇ’’ ಹರಕೆ ಸಂದಾಯವಾ” ಅಂತ ಸಣ್ಣಕ್ಕೆ ಗದರಿಸುವುದು. ಒಪ್ಪಿಸಿದ ಕೆಲಸ ಒಪ್ಪವಾಗಿ ಮಾಡಿದಾಗ ಅಂಥ ಮಾತಿಗಲ್ಲಿ ಎಡೆಯಿಲ್ಲ. ಬದಲಿಗೆ ಮೆಚ್ಚುಗೆ, ಪ್ರಶಂಸೆ , ಅಭಿಮಾನ … Read more

ಪ್ರಸವ ಕಾಲ….: ಆಶಾಜಗದೀಶ್

  ಮನೆ ಮುಂದಿನ ಮಲ್ಲಿಗೆ ತನ್ನ ಎಂದಿನ ತನ್ಮಯತೆಯಲ್ಲಿ ತಾರಸಿಯ ಮೇಲೆ ಧ್ಯಾನಸ್ಥವಾಗಿತ್ತು. ಮಿಸುಗಾಡುವ ಒಡಲು ಅದಕ್ಕೊಂದು ಗರ್ಭಿಣಿಯ ಕಳೆ ತಂದಿತ್ತಿತ್ತು. ಅದೂ ತೀರಾ ಇತ್ತೀಚಿನಿಂದ ಹೀಗೆ….. ಅದು ನವೆಂಬರ್ ಡಿಸೆಂಬರಿನ ಸಂದರ್ಭ… ಗುಬ್ಬಿಯೊಂದು ತನ್ನ ಸಂಗಾತಿಯೊಂದಿಗೆ ಬಾಣಂತನಕ್ಕಾಗಿ ಬಂದಿತ್ತು… ಹೀಗೆ ಹಕ್ಕಿಗಳು ಮೇಲಿಂದ ಮೇಲೆ ನಮ್ಮ ತೋಟವಲ್ಲದ ಪುಟ್ಟ ತೋಟಕ್ಕೆ ಬರುವುದು ಮಾಮೂಲೇ ಇತ್ತಾದರೂ ಪ್ರತಿ ಬಾರಿಯೂ ಹೋಸದೆಂಬಂತಹ ಉತ್ಸಾಹ ಮಾತ್ರ ನಮ್ಮನ್ನು ಅದೇಕೆ ತುಂಬುತ್ತಿತ್ತೋ ಗೊತ್ತಿಲ್ಲ… ಬಹುಶಃ ಹುಟ್ಟು ಎನ್ನುವುದು ಸಕಲ ಜೀವರಾಶಿಯೊಳಗೆ ಪ್ರವೇಶಿಸುವಾಗ … Read more

ಆಸೆಯೆಂಬ ಬಿಸಿಲು ಕುದುರೆ ಏಕೆ ಏರುವೆ…?: ರಮೇಶ್ ವಿ

ಆಸೆ ಯಾರಿಗಿರಲ್ಲ  ಹೇಳಿ! ಪ್ರತಿಯೊಬ್ಬ ಮನುಷ್ಯನಿಗೂ ಅವನೆದೆಯಾದಂತ ಆಸೆ ಆಕಾಂಕ್ಷೆ ಇರುತ್ತೆ, ಅವನ ಆಸೆಯೇ ನಾಳೆಗೆ ಪ್ರೇರಣೆ, ಭರವಸೆ ಹಾಗು ಮುನ್ನುಡಿ. ಆದ್ರೆ ಅದು ದುಃಖದ ಮೂಲವು ಹೌದು. ನನಗು ನನ್ನ ತಂದೆ ಉಳಿಸಿಕೋ ಬೇಕೆಂಬ ಮಹದಾಸೆ ಇತ್ತು ಆದ್ರೆ ಕಡೆಯಲ್ಲಿ ನಮ್ಮಾಸೆ ಜೊತೆ ಅಪ್ಪನಿಗೂ ಎಳ್ಳು ನೀರು ಬಿತ್ತಂತಾಯಿತು! ನನ್ನ ಅನುಭವದ ಮಾತು…! ಮಾರ್ಚ್ ೨೦೧೭ ಅಪ್ಪನಿಗೆ ೬೦ ವಸಂತ ತುಂಬಿದಾಗ ಷಷ್ಠಿಪೂರ್ತಿ ಪೂಜೆ ಮಾಡಲಾಗಲಿಲ್ಲ, ಈಗ ೭೦ ನೇ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಷಷ್ಠಿಪೂರ್ತಿ … Read more

ಯಶೋದೆ: ಪ್ರೇಮಾ ಟಿ ಎಂ ಆರ್

ಲೇಡೀಸ್ ಕ್ಲಬ್ ನಲ್ಲಿ ನವರಾತ್ರಿ ಉತ್ಸವ. ಕೈಯ್ಯಲ್ಲಿ ಪೂಜಾ ಸಾಮಗ್ರಿ ಹಿಡಿದು ಹಿಡಿದು ಗಡಿಬಿಡಿಯಲ್ಲೇ ಹೊರಟಿದ್ದಳು ಕವನ. ಹಿಂದಿಂದ ಬಂದ ಬೈಕೊಂದು ಅವಳನ್ನು ದಾಟಿಕೊಂಡು ನಾಲ್ಕು ಮಾರು ಮುಂದೆ ನಿಂತಿತು. ಬೈಕ್ ಸವಾರ ಹೆಲ್ ಮೆಟ್ ತೆಗೆದು ಸಣ್ಣಗೆ ನಕ್ಕರು. ಈ ವ್ಯಕ್ತಿಯನ್ಬ ಎಲ್ಲೋ ನೋಡಿದ ನೆನಪು ಎಲ್ಲಿ ? ತಲೆಕೆರೆದುಕೊಂಡಳು ಕವನ. ಓ ಹೌದಲ್ವಾ ತಾನು ಗೇಟಿಗೆ ಬೀಗ ಸಿಕ್ಕಿಸುವಾಗ ಎದುರುಗಡೆ ಮನೆಯ ಅಂಗಳದಲ್ಲಿ ನಿಂತಿದ್ದರು ಆ ವ್ಯಕ್ತಿ . ಕಳೆದ ವಾರವಷ್ಟೇ ಆ ಮನೆಯ … Read more

ಹೊಸ್ತಿನ ಮನೆ ಸ್ಮಶಾನವಾದಾಗ: ಪ್ರವೀಣ್ ಶೆಟ್ಟಿ

ಅಂದೇಕೋ ಅವನು ತುಂಬಾ ಖುಷಿಯಾಗಿದ್ದ! ತಂಗಿ ಬೆಂಗಳೂರಿನಿಂದ ಬಂದ ಖುಷಿ, ಅದರ ಜೊತೆ ನಾಳೆ ಅಂದರೆ ಹೊಸ್ತು ಬೇರೆ. ಮನೆಯಲ್ಲಿ ಎಂದೋ ಕಳೆದುಹೊಗಿದ್ದ ಸಂಭ್ರಮ ಬೇರೆ. ಎಲ್ಲ ಅಣ್ಣ-ಅಕ್ಕ-ತಂಗಿ ಒಟ್ಟಾಗಿ ವರುಷಗಳೇ ಕಳೆದಿತ್ತು. ಎಲ್ಲಾ ಸೇರಿ ಹೊಸ್ತು ಮಾಡುವ ಸಂಭ್ರಮ ಮನೆಮಾಡಿತ್ತು. ಅವನು ಸೀತಾರಾಮ ಮೂವರು ಒಡಹುಟ್ಟಿದ ತಂಗಿಯರೊಂದಿಗೆ ಒಬ್ಬನೇ ಮಗ. ಟಿಸಿಎಚ್ ಮಾಡಿ ಸರಕಾರಿ ಕೆಲಸಕ್ಕಾಗಿ ಅರ್ಜಿ ಗುಜರಾಯಿಸಿ ಕಾಯುತ್ತಿದ್ದ. ಹಾಗೆ ತಂದೆಯ ವ್ಯವಹಾರಲ್ಲಿ ಕೈ ಜೊಡಿಸಿದ್ದ. ಅದೇ ಸಮಯಕ್ಕೆ ಸರಿಯಾಗಿ ಗ್ರಾಮೀಣ ಕೃಪಾಂಕದ ಅಡಿಯಲ್ಲಿ … Read more

ಆಧುನಿಕ ವಿಜ್ಞಾನಕ್ಕೆ ಸವಾಲಾದ ಪುರಾತನ ಸಲಕರಣೆಗಳು: ಆರ್.ಬಿ.ಗುರುಬಸವರಾಜ ಹೊಳಗುಂದಿ

21ನೇ ಶತಮಾನದಲ್ಲಿ ನಮ್ಮ ಪೂರ್ವಜರ ಹೆಚ್ಚಿನ ಸಹಾಯವಿಲ್ಲದೇ ನಾವು ಮಹತ್ತರವಾದ ಮತ್ತು ಪ್ರಬಲವಾದ ತಾಂತ್ರಿಕ ಸಾಮ್ರಾಜ್ಯವನ್ನು ಸಾಧಿಸಿದ್ದೇವೆಂದು ಭಾವಿಸುತ್ತೇವೆ. ಆದರೆ ಭಾವಿಸಿದಂತೆ ಇದು ಸತ್ಯವಲ್ಲ. ಇತ್ತೀಚಿನ ಸಂಶೋಧನೆ ಎಂದು ಹೇಳುವ ಬಹುತೇಕ ವಸ್ತುಗಳನ್ನು ನಮ್ಮ ಪೂರ್ವಜರು ಆಗಲೇ ಬಳಸಿದ್ದರು ಮತ್ತು ನಾವು ಈಗ ಯೋಚಿಸುವುದಕ್ಕಿಂತ ಮುಂಚಿತವಾಗಿ ಅವರು ವೈಜ್ಞಾನಿಕವಾಗಿ ಮುಂದುವರೆದಿದ್ದರು ಎನ್ನುವುದಕ್ಕೆ ಕೆಲವೊಂದು ನಿದರ್ಶನಗಳು ದೊರೆಯುತ್ತವೆ. ಅಂತಹ ಕೆಲ ಸಲಕರಣೆಗಳೇ ನಮ್ಮ ಇಂದಿನ ಆಧುನಿಕ ತಂತ್ರಜ್ಞಾನಕ್ಕೆ ಹಾಗೂ ವಿವಿಧ ಸಂಶೋಧನೆಗಳಿಗೆ ಪ್ರೇರಣೆಯಾಗಿವೆ. ಹಾಗಾದರೆ ಆ ವಸ್ತುಗಳು ಯಾವುವು? … Read more

ಚಿಗುರಿನ ಮುನ್ನ: ಮಂಜು ಹೆಗಡೆ

“ನಂಗೆ ನಿನ್ನಿಂದ ಒಂದು ಮಗು ಬೇಕು, ಪ್ಲೀಸ್ ಇಲ್ಲ ಅನ್ನಬೇಡ. ನಾನು ಜೀವನದಲ್ಲಿ ಒಂಟಿ ಆಗ್ಬಿಡ್ತೀನಿ. ನೆಮ್ಮದಿ, ನನ್ನ ಜೀವನಕ್ಕೆ ಭರವಸೆಗಾದ್ರು ಬೇಕು. ಇದು ಕೋನೆಯ ಆಸೆ, ಇಲ್ಲ ಅನ್ನಬೇಡಿ. ” ಅಂತ ಗಾಯತ್ರಿ ಗೋಗರಿತಾ ಇದ್ದಾಗ ರಾಘವ ಮೌನವಾಗಿದ್ದ. ‘ಇಲ್ಲ ಕಣೆ ಏನ್ ಹೇಳಬೇಕು ತಿಳಿತಿಲ್ಲ, ನಿನ್ನ ಮಾತು ಒಮ್ಮೆಲೆ ಬಾಂಬ್ ಬಿದ್ದಾಗೆ ಆಗಿದೆ. ‘ ಏಕಾಂತದಲ್ಲೂ ವೈರುಧ್ಯದ ಭಾವ. ‘ಹಾಗಲ್ಲ ರಾಘವ 7ವರ್ಷ ಆಯ್ತು ನಂದು ನಿಂದು ಪರಿಚಯ, ಮದುವೆ ಆದಾಗಿಂದ ನಾನು ಪಟ್ಟ … Read more

ಮೋಹಕ ತಿರುವು: ಕಮಲ ಬೆಲಗೂರ್.

ಪಾರ್ವತಿ ಒಲೆಯ ಮುಂದೆ  ಕುಳಿತು ರೊಟ್ಟಿ ಮಾಡ್ತಿದ್ದಾಳೆ. ಯಾಂತ್ರಿಕವಾಗಿ ಕೈ ಕೆಲಸಮಾಡುತ್ತಿದ್ದರೂ ಮನಸ್ಸು ಗಾಢವಾದ ಯೋಚನೆಯಲ್ಲಿ ಸಿಲುಕಿದೆ. ಕಣ್ಣು ಗಳು ಉರಿಯನ್ನೇ ದಿಟ್ಟಿಸಿ ನೋಡುತ್ತಿವೆ. ಮನಸ್ಸು ಮಗನ ಬಗ್ಗೆ ಯೋಚಿಸುತ್ತಾ ಕೊರಗುತ್ತಿದೆ. ಮಗನ ಸಂಸಾರವನ್ನು ನೋಡುತ್ತಾ ಕಣ್ತುಂಬಿಸಿಕೊಳ್ಳಬೇಕೆಂಬ ಆಸೆ ಆಸೆಯಾಗಿಯೇ ಉಳಿದುಬಿಟ್ಟಿದೆ. ಪಾರ್ವತಿ ವಿಧವೆ. ಮಗ ಸೋಮು ಪ್ರತಿಭಾವಂತ. ಚಿಕ್ಕಂದಿನಲ್ಲಿಯೇ ಅಪ್ಪನನ್ನು ಕಳೆದುಕೊಂಡು ಬೆಳೆದ ಅವನಿಗೆ ಅಮ್ಮನೇ ಸರ್ವಸ್ವ. ಅಪ್ಪನ ಕೊನೆಯ ಆಸೆಯಂತೆ ಅವರ ಸ್ನೇಹಿತರ ಮಗಳೊಂದಿಗೆ ಅವನ ಬಾಲ್ಯ ವಿವಾಹವಾಗಿರುತ್ತದೆ. ತಂದೆಯ ಮರಣಾನಂತರ ಎರಡೂ ಕುಟುಂಬಗಳು … Read more

ಯುಗಾದಿ ವಿಶೇಷಾಂಕಕ್ಕೆ ಲೇಖನ ಆಹ್ವಾನ

ಪ್ರಿಯ ಪಂಜುವಿನ ಓದುಗರೇ ಹಾಗು ಬರಹಗಾರರೇ, ನಿಮ್ಮೆಲ್ಲರ ಅಭಿಮಾನದಿಂದ ಪಂಜು ಕಳೆದ ತಿಂಗಳು ಜನವರಿ 21 ರಂದು ಐದು ವರ್ಷ ತುಂಬಿ ಆರನೇ ವರ್ಷಕ್ಕೆ ಕಾಲಿಟ್ಟಿದೆ. ಹತ್ತಾರು ವೆಬ್ ತಾಣಗಳ ನಡುವೆಯೂ ತನ್ನದೇ ಆದ ಓದುಗ ಬಳಗವನ್ನು ಹೊಂದಿರುವ ಪಂಜು, ತಿಂಗಳಿಗೆ ಕಡಿಮೆ ಎಂದರೂ ಎರಡೂವರೆ ಲಕ್ಷ ಹಿಟ್ಸ್ ಜೊತೆಗೆ ಸುಮಾರು ಏಳೂವರೆ ಸಾವಿರ ಓದುಗರು ಪಂಜುಗೆ ಭೇಟಿ ನೀಡುತ್ತಾರೆ ಎಂಬುದು 2017ರ ಹೈಲೈಟ್ಸ್.. ಪಂಜು ಆಗಾಗ ವಿಶೇಷ ಸಂಚಿಕೆಗಳನ್ನು ಹೊರ ತರುವುದು ವಾಡಿಕೆ. ಈ ವರ್ಷದ … Read more

ಪಂಜು ಕಾವ್ಯಧಾರೆ

ಪಯಣ  ನಿರರ್ಥಕ ಹಾದಿಯಲ್ಲಿ ಅರ್ಥಹೀನ ಹಗಳಿರುಳುಗಳ ಸೆಳುವಲ್ಲಿ ಯಾನ ಹೊರಟ ದೋಣಿಯ ಪಯಣಿಗ ತಲುಪಬೇಕೆನ್ನುವ ಗಮ್ಯ ಇಲ್ಲದಂತೆನಿಸಿ ಬಿಟ್ಟ ಗಾಳಿಯ ದಿಕ್ಕಿಗೆ ಹೊಮ್ಮುವ ಅಲೆಗಳ ನಾಟ್ಯದೊಟ್ಟಿಗೆ ಸಾಗುವ ಹುಚ್ಚು ಪಯಣಿಗ ಬದುಕಿನ ನಾವೆ ಕಾಲದ ಶರಧಿಯಲ್ಲಿ ಅಂಡಲೆಯುತಲೇ ಇದೆ ಇಲ್ಲಿ ಸುಳ್ಳುಗಳನ್ನೇ ಸತ್ಯವೆಂದುಕೊಂಡ ಸಹಯಾತ್ರಿಕರ ಹಿಂಡೇ ಇದೆ ಸ್ವತಃ ವಂಚಿಸುತ್ತಾ ಸಾತ್ವಿಕತೆಯ ಭೋದಿಸುವ ತಂಡೋಪ ತಂಡವೇ ಇದೆ ಕಾಲದ ಸಾಗರ ಮಾತ್ರ ತನ್ನೊಡಲೊಳಗೆ ಎಲ್ಲವನ್ನೂ ಹುದುಗಿಸಿಕೊಳ್ಳುತ್ತ ಉಕ್ಕೇರುತ್ತಲೇ ಇದೆ ತಲೆತಲಾಂತರಗಳಿಂದ ಹಲವು ಬಾರಿ ಒಡಲೊಳಗಿನ ಕಿಚ್ಚನ್ನೆಲ್ಲ ಸುನಾಮಿಯಂತೆ … Read more

ಜೀವ ಜೀವನದ ಭಿನ್ನತೆಯೊಳಗಿನ ಸಂಭ್ರಮ: ಪಿ. ಕೆ. ಜೈನ್ ಚಪ್ಪರಿಕೆ

ಅಂದು ಪ್ರಕೃತಿಯು ತನ್ನ ವಸಂತಕ್ಕೆ ಕಾಲಿಟ್ಟ ಸಮಯ. ಆ ತಾಯಿಯು ತನ್ನೆಲ್ಲ ನೋವುಗಳನ್ನು ಮರೆತು ತನ್ನ ಸೌಂದರ್ಯವನ್ನು ಇಮ್ಮಡಿಗೊಳಿಸಿಕೊಳ್ಳುತ್ತಲ್ಲಿದ್ದಳು. ವಸಂತ ಎಂಬ ಪದವೇ ಹಾಗೆ. ಅವನಿಗೆ ಎಣೆ ಯಾರು? ಯಾರನ್ನಾದರೂ ಬಿಟ್ಟಿಹನೆ? ಸೃಷ್ಟಿಯ ರುವಾರಿಯಾದ ಬ್ರಹ್ಮನನ್ನೇ ಬಿಡದ ಮಾರ…ಪ್ರಕೃತಿಯನ್ನು ಬಿಡಬಲ್ಲನೆ? ಹಾಗೆಯೇ ವಸಂತಕ್ಕೆ ಕಾಲಿಟ್ಟ ಭೂಮಿ ತಾಯಿಯ ಜೊತೆ ಅನೋನ್ಯದಿಂದ ಜೀವಿಸುತ್ತಿದ್ದ ಪ್ರಾಣಿ ಪಕ್ಷಿಗಳು, ಗಿಡ ಮರಗಳಿಗೂ ಅದರ ಅನುಭವ ಆಗಬೇಕಲ್ಲವೇ… ಗಿಡ ಮರಗಳು ಮೈ ಕೊಡಗಿ ಚಿಗುರೊಡೆದು ಹಚ್ಚ ಹಸುರಿನಿಂದ ಕಂಗೊಳಿಸುತ್ತಿದ್ದವು…ಅವುಗಳನ್ನು ಅವಲಂಬಿಸಿದ ಪ್ರಾಣಿ ಪಕ್ಷಿಗಳಲ್ಲೂ … Read more

e – ಸಂಭಾಷಣೆ !: ಸಂತೋಷ್ ಮೂಲಿಮನಿ

ಇಬ್ಬರೂ ತಮ್ಮ ತಮ್ಮ ಲ್ಯಾಪ್ಟಾಪ್ ಮುಂದೆ ಕುಳಿತಿದ್ದಾರೆ, ಇಬ್ಬರ ತೆರೆಯ ಮೇಲೂ ಫೇಸ್ಬುಕ್ ನ ಪರದೆ ಇಣುಕಿ ಇವರ ಮುಖವನ್ನ ಆವರಿಸಿಕೊಂಡಿದೆ. ಇವನು ತನ್ನ ಫೇಸ್ಬುಕ್ ಪ್ರೋಪೈಲಿನಲ್ಲಿ ಈಗ ತಾನೆ ತನ್ನ ಬ್ಲಾಗ್ ನಲ್ಲಿ ಪ್ರಕಟಿಸಿದ ಲೇಖನದ ಕೊಂಡಿಯನ್ನು ಎಲ್ಲರೊಂದಿಗೆ ಹಂಚುತ್ತಲಿದ್ದ. ಅಪ್ದೇಟ್ ಬಟನ್ ಒತ್ತಿದ ತಕ್ಷಣ, ‘ ಸುಮಿ, ಆಯ್ತು ನೋಡು ‘ ಎಂದು ಸ್ವಲ್ಪ ದೂರದಲ್ಲೆ ಕೂತಿದ್ದ ಹೆಂಡತಿಗೆ ಉಸಿರಿದ್ದ. ಅವಳು ಆಗಲೆ ಮೆಚ್ಚಿದ್ದ ಗಂಡನ ಪೊಸ್ಟ್ ನ್ನ ಲೈಕ್ ಮಾಡಿದಳು. ಹೀಗೆ ಅವನ … Read more

ಜಾಣಸುದ್ದಿ 8: ಕೊಳ್ಳೇಗಾಲ ಶರ್ಮ

ಈ ವಾರದ ಸಂಚಿಕೆಯಲ್ಲಿ ಕೊಳ್ಳೇಗಾಲ ಶರ್ಮರವರ ಧ್ವನಿಯಲ್ಲಿರುವ ಈ ಆಡೀಯೊ ಕೇಳಲು ಈ ಕೆಳಗಿನ ಕೊಂಡಿಯ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಜಾಣ ಸುದ್ದಿ ಧ್ವನಿಮುದ್ರಿಕೆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ save as/ download ಆಪ್ಷನ್ ನಿಂದ ನಿಮ್ಮ ಮೊಬೈಲ್/ ಕಂಪ್ಯೂಟರ್ ಗೆ ಡೌನ್ ಲೋಡ್ ಮಾಡಿಕೊಳ್ಳಿ… ಇ ಮೇಲ್ ನಲ್ಲಿ ಅಥವಾ ವಾಟ್ಸ್ ಅಪ್ ನಲ್ಲಿ ಈ ಧ್ವನಿಮುದ್ರಿಕೆ ನಿಮಗೆ ಬೇಕು ಎಂದನಿಸಿದರೆ ನಿಮ್ಮ ಕೋರಿಕೆಯನ್ನು ನಮ್ಮ ಇ … Read more

ಮುರಿದ ಟೊಂಗೆಯ ಚಿಗುರು ಪುಸ್ತಕಾವಲೋಕನ: ಸುರೇಶ ಎಲ್.ರಾಜಮಾನೆ

ಕವನಸಂಕಲನ; “ಮುರಿದ ಟೊಂಗೆಯ ಚಿಗುರು” ಲೇಖಕರು; ಸೂಗುರೇಶ ಹಿರೇಮಠ(ಸುಹಿ) ಪುಸ್ತಕಾವಲೋಕನ; ಸುರೇಶ ಎಲ್.ರಾಜಮಾನೆ. ಚಿಗುರಿನ ಕವಿತೆಗಳೊಂದಿಗೆ ಮಾತಿಗಿಳಿದಾಗ…. ಇತ್ತೀಚಿಗೆ ತಾಂತ್ರಿಕ ಜಗತ್ತು ತನ್ನದೇ ಆದ ವೇಗ ಪಡೆದುಕೊಳ್ಳುತ್ತಿರುವದು ನಮ್ಮೆಲ್ಲರ ಕಣ್ಮುಂದಿರುವ ಸತ್ಯ. ಇದರ ಹಿನ್ನೆಲೆಯಲ್ಲಿ ಮುಖಪುಟದ ಮೂಲಕ ಸಾಹಿತ್ಯ ಲೋಕಕ್ಕೆ ಹೊಸ ಹೊಸ ಪ್ರತಿಭೆಗಳು ಲಗ್ಗೆ ಇಡುತ್ತಿವೆ ಎಲ್ಲರ ಮನಸನ್ನು ಆವರಿಸುತ್ತಿವೆ. ಹೀಗೆ ಅಂತರ್ಜಾಲದ ಮೂಲಕ ನನ್ನ ಅಂತರಂಗವನ್ನು ಸೇರಿಕೊಂಡ ಗೆಳೆಯ ಸೂಗುರೇಶ ಹಿರೇಮಠ ಅದರಾಚೆಗೂ ಭಾವನಾತ್ಮಕ ಬದುಕಿನ ದಾರಿಯಲಿ ಬದುಕಿರುವ ಒಬ್ಬ ಭಾವುಕ ಜೀವಿ. ಕವಿತೆಗಳಿಂದಲೇ … Read more

ವರ್ಣಮಯ ಬದುಕು ಆನಂದಮಯ: ಜಯಶ್ರೀ.ಜೆ. ಅಬ್ಬಿಗೇರಿ

ಮುದ್ದು ಕಂದಮ್ಮ ರಚ್ಚೆ ಹಿಡಿದು ಅಳುವಾಗ ಅದರ ಕೈಯಲ್ಲಿ ಬಣ್ಣದ ಗೊಂಬೆಯನ್ನು ಕೊಟ್ಟರೆ ಸಾಕು ತಕ್ಷಣಕ್ಕೆ ಅಳು ನಿಲ್ಲಿಸಿ ನಗು ಚೆಲ್ಲುತ್ತದೆ. ಬಣ್ಣದ ಆಕರ್ಷಣೆಯೇ ಅಂಥದು. ಬಣ್ಣವಿಲ್ಲದ ಬದುಕನ್ನು ಊಹಿಸಲು ಸಾಧ್ಯವೇ ಇಲ್ಲ. ಎನ್ನುವಷ್ಟರ ಮಟ್ಟಿಗೆ ಬಣ್ಣ ನಮ್ಮ ಜೀವನದಲ್ಲಿ ಹಾಸು ಹೊಕ್ಕಾಗಿದೆ. ಬಣ್ಣಗಳು ತಮ್ಮ ಪ್ರಭಾವಲಯವನ್ನು ಅಷ್ಟೊಂದು ವ್ಯಾಪಕವಾಗಿ ವಿಸ್ತರಿಸಿಕೊಂಡಿವೆ. ದಿನಗಳೆದಂತೆ ನಾವೂ ಅವುಗಳ ಮೋಡಿಗೆ ಹೆಚ್ಚು ಹೆಚ್ಚು ಬೀಳಿತ್ತಲೇ ಇದ್ದೇವೆ.ನಮ್ಮಲ್ಲಿ ಬಣ್ಣಗಳಿಲ್ಲದೇ ಹಬ್ಬದ ರಂಗು ಹೆಚ್ಚುವುದೇ ಇಲ್ಲ. ನವರಾತ್ರಿಯಲ್ಲಿ ಶಕ್ತಿ ದೇವತೆಗೆ ಹಲವಾರು ರತ್ನ … Read more

ಕೆರೆಗೆ ಹಾರ ಭಾಗ 2: ಅಖಿಲೇಶ್ ಚಿಪ್ಪಳಿ

ಇಲ್ಲಿಯವರೆಗೆ [ಹಿಂದಿನ ವಾರ: ಉದ್ಘಾಟನೆಯ ಮಾರನೇ ದಿನವೇ ವಾಟ್ಸಪ್ ಗುಂಪು ಚುರುಕಿನಿಂದ ಕೆಲಸ ಮಾಡಿತು. ಸಲಹೆಗಳು ಹರಿದು ಬಂದವು. ಮತ್ತೂ ಮತ್ತೂ ಮರೆಯಬಾರದ ಸೂತ್ರವೊಂದಿದೆ. ಅದೇ ಸೂತ್ರವನ್ನು ಗಮನಿಸುತ್ತಲೇ ಇರಬೇಕು. ಅದೇ ಉತ್ಸಾಹ-ಸಲಹೆ-ಸೂಚನೆಗಳು ಕೆರೆಯ ಹೂಳನ್ನು ಎತ್ತಲಾರವು ಎಂಬುದೇ ಈ ಸೂತ್ರ. ಬಂಗಾರಮ್ಮನ ಕೆರೆಯ 600 ವರ್ಷಗಳ ಹೂಳನ್ನು ತೆಗೆಯಲು ಹಿಟಾಚಿ-ಟಿಪ್ಪರ್‍ಗಳು ಬೇಕು. ಇವಕ್ಕೆ ಮತ್ತೆ ಹಣಕಾಸು ಬೇಕು. ಅಗಾಧ ಪ್ರಮಾಣದ ಹೂಳನ್ನು ಹೊರಸಾಗಿಸಲು ಅಷ್ಟೇ ಪ್ರಮಾಣದ ಹಣಕಾಸು ಬೇಕು. ಕೆಲಸ ಶುರು ಮಾಡಿದ ವಾರದಲ್ಲೇ ಇಂಜಿನಿಯರ್ … Read more

ಬಡತನ: ಅಣ್ಣಪ್ಪ ಆಚಾರ್ಯ

ಸುತ್ತಲೊಮ್ಮೆ ನೋಡಿದರೆ ಗವ್ವೆನ್ನುವ, ಬೆಳಕನ್ನೇ ನುಂಗಿ ನೀರ್ ಕುಡಿಯುವ, ನಿಂತಲ್ಲೇ ಉಚ್ಚೆ ಹುಯ್ಯಿಕೊಳ್ಳುವ ಕತ್ತಲು; ಕಗ್ಗತ್ತಲು. ಅಮಾವಾಸ್ಯೆಯಾದ್ದರಿಂದ ನರಮನುಷ್ಯರು ಓಡಾಡಿದ ವಾಸನೆಯೂ ಬರುತ್ತಿಲ್ಲ. ಒಂದೆರಡು ನಾಯಿ-ಪಕ್ಕಿಗಳ ಕೂಗು, ನರಿಗಳ ಊಳಿಡುವಿಕೆ ಬಿಟ್ಟರೆ ಉಳಿದಂತೆ ಇಡೀ ಊರಿಗೆ ಊರೇ ಮೌನವಾಗಿದೆ. ಜಗವೆಲ್ಲ ಬೇಕಾಗಿದ್ದು, ಬೇಡವಾಗಿದ್ದನ್ನೆಲ್ಲ ತಿಂದು, ಬಕ್ಕ ಬೋರಲಾಗಿ ಮಲಗಿದೆ. ಆದರೆ ಈ ಗುಡಿಸಲಿನಲ್ಲಿ..?! ಆಗಲೋ, ಈಗಲೋ ಆರಿಹೋಗುವಂತಹ ಚಿಮಣಿ ಬುಡ್ಡಿಯನ್ನು ಎದುರಿಗಿಟ್ಟುಕೊಂಡು ಬಾಗಿಲ ಬಳಿ ಅವ್ವ ಕುಳಿತಿದ್ದಾಳೆ. ಮಕ್ಕಳೆಲ್ಲವೂ ‘ಪಿಳಿ-ಪಿಳಿ’ ಕಣ್ಣ್ ಬಿಡುತ್ತಾ, ತೆಂಗಿನ ಗರಿಯ ಮಾಡನ್ನೇ(ಛಾವಣಿ) … Read more

ಪ್ರೇಮ ಪತ್ರ ತಂದ ಪೇಚು: ವೈ. ಬಿ. ಕಡಕೋಳ

ಆ ದಿನ ಎಂದಿನಂತಿರಲಿಲ್ಲ ವಿಜಯ್ ಗರಬಡಿದವನಂತೆ ಕುಳಿತಿದ್ದ. “ಯಾಕೋ ಹೀಗೆ ಕುಳಿತಿರುವೆ ಏನಾಗಿದೆ ನಿನಗೆ? “ಎಂದ ಅಮಿತ್. “ಮಾಡೋದೆಲ್ಲ ಮಾಡಿಬಿಟ್ಟು ಏನೂ ಗೊತ್ತಿಲ್ಲ ಅನ್ನುವಂತೆ ಇದ್ದೀಯಲ್ಲ ನೀನೂ ಒಬ್ಬ ಗೆಳೆಯನಾ? “ಎಂದ. “ಯಾಕಪ್ಪಾ ಅಂಥಾ ತಪ್ಪು ನನ್ನಿಂದ ಆಗಿದ್ದಾದರೂ ಏನು? ” ಎಂದು ಅಮಿತ್ ಕುತೂಹಲದಿಂದ ಪ್ರಶ್ನಿಸಲು “ನನ್ನ ಭಾವಿ ಪತ್ನಿಗೆ ಪತ್ರ ಬರೆದಿದ್ದು  ಎಡವಟ್ಟಾಗಿದೆ ಏನು ಮಾಡಲಿ? ” ಎಂದ ಸಪ್ಪೆ ಮೋರೆಯಿಂದ, “ಅದಕ್ಯ್ಕಾಕೋ ಬೇಜಾರು? ” ಎಂದ ಅಮಿತ್ . ಆಗ ವಿಜಯ್ “ನೀನು … Read more

ಸ್ತ್ರೀ ವ್ಯಕ್ತಿತ್ವ ವಿಕಸನದ ಅಡೆತಡೆಗಳು ವಸ್ತ್ರ ಸಂಹಿತೆ- ಗೋಷಾ ಪದ್ಧತಿ: ನಾಗರೇಖಾ ಗಾಂವಕರ

ಬದಲಾವಣೆಯ ಕಾಲಘಟ್ಟದಲ್ಲಿ ಹೆಣ್ಣು ಮತ್ತಾಕೆಯ ಸ್ಥಿತಿಗತಿಗಳ ಬಗ್ಗೆ ಸಮಾನತೆಯ ಬಗ್ಗೆ ಚರ್ಚಿಸುವ ಅದಕ್ಕಾಗಿ ಹೋರಾಟ ನಡೆಸುತ್ತಿರುವ ಉಚ್ಚ್ರಾಯ ಕಾಲವಿದು. ಆದರೆ ಅದರೊಂದಿಗೆ ಆಕೆಯ ಮೇಲಾಗುತ್ತಿರುವ ದೌರ್ಜನ್ಯಗಳ ಪ್ರಮಾಣಗಳೂ ಅಧಿಕವಾಗುತ್ತಿರುವ ಸಂದರ್ಭದಲ್ಲಿ ಧರ್ಮ ಕಾಲ ದೇಶಗಳ ವೈತ್ಯಾಸವಿರದೇ ಇಡೀ ಜಗತ್ತಿನಾದ್ಯಂತ ಈ ಶೋಷಣೆಗಳು ನಡೆಯುತ್ತಲೇ ಇರುವುದು ಕೂಡಾ ದಿನನಿತ್ಯದ ಸಂಗತಿ. ಸ್ತ್ರೀ ಶೋಷಣೆ ಎಂಬ ವಿಚಾರ ಬರಿಯ ಭಾರತದ ಮತ್ತು ಕೇವಲ ಹಿಂದೂ ಧರ್ಮದ ಆಚರಣೆಗಳಲ್ಲಿ ಮಾತ್ರ ಸೀಮಿತವಾಗಿರದೇ ಅದು ವಿಶ್ವವ್ಯಾಪಿಯಾದ ವಿಚಾರ. ಮಹಿಳಾ ಸ್ವಾತಂತ್ರ್ಯಕ್ಕೆ ಆಕೆಯ ಸರ್ವತೋಮುಖ … Read more

ಲೋಕದೊಳಗೆ ಹುಟ್ಟಿದ ಬಳಿಕ.. ಕೋಪವತಾಳದೆ ಸಮಾಧಾನಿಯಾಗಿರಬೇಕು: ಕೆ ಟಿ ಸೇಮಶೇಖರ ಹೊಳಲ್ಕೆರೆ!

ಅರಿಷಡ್ವರ್ಗಗಳು ಮಾನವನನ್ನು ಉತ್ತಮನಾಗಲಿಕ್ಕೆ ಬಿಡುವುದಿಲ್ಲ. ಉತ್ತಮನಾಗಿ ರೂಪಿಸದಿದ್ದರೂ ಪರವಾಗಿಲ್ಲ, ದುಷ್ಟನಾಗುವಂತೆ ಮಾಡುತ್ತವೆ! ಅರಿಷಡ್ವರ್ಗಗಳಲ್ಲಿ ಕೋಪವೂ ಒಂದು. ಕೋಪ ಬೆಂಕಿಯಿದ್ದಂತೆ. ಕೋಪಕ್ಕೆ ತುತ್ತಾದವರ ಮೇಲೆ ದುಷ್ಪರಿಣಾಮ ಬೀರುತ್ತದಲ್ಲದೆ ಕೋಪಗೊಂಡವರನ್ನೇ ಸುಟ್ಟುಬಿಡುತ್ತದೆ. ಆದುನಿಕ ಬದುಕಿನಲ್ಲಿ ಸಮಾಧಾನವಾಗಿರುವುದು ಕಷ್ಟ. ಬೆಳಿಗ್ಗೆ ಹಾಸಿಗೆಯಿಂದ ಏಳುತ್ತಿದ್ದಂತೆ ಅಯ್ಯೋ! ಟೈಂ ಆಯ್ತು! ಅಯ್ಯೋ! ಟೈಂ ಆಯ್ತು! ನಿತ್ಯ ಕರ್ಮ ತೀರಿಸಬೇಕು, ಸ್ನಾನ ಇಲ್ಲ! ಪೂಜೆ ಇಲ್ಲ! ಆ ಕೆಲಸ ಆಗಿಲ್ಲ, ಈ ಕೆಲಸ ಆಗಿಲ್ಲ. ಎಲ್ಲಾ ಮುಗಿಸಿ ಹೊರಡುವುದು ಎಷ್ಟು ಹೊತ್ತಾಗುತ್ತದೋ ಏನೋ? ಎಂದು ಅವಸರ … Read more

ಪಂಜು ಕಾವ್ಯಧಾರೆ

ಮಂಗ ಮತ್ತು ಬೆಕ್ಕುಗಳು ಇಬ್ಬರ ಜಗಳದಿ ಯಾರಿಗೆ ಲಾಭವು ಬನ್ನಿರಿ ನಾವು ತಿಳಿಯೋಣ ನೀತಿಯ ಸಾರುವ ಕಥೆಯನು ಕೇಳಿ ಜೀವನ ಸುಂದರಗೊಳಿಸೋಣ|| ಸುಂದರವಾದ ಊರಿನಲಿ ಬೆಕ್ಕುಗಳೆರಡು ಜೊತೆಯಲ್ಲಿ ಆಡುತಲಿದ್ದವು ಅಲೆಯುತಲಿದ್ದವು ಬದುಕುತಲಿದ್ದವು ಸಂತಸದಿ|| ಹಸಿವನು ನೀಗಲು ಒಂದುದಿನ ಬೆಕ್ಕುಗಳಿಗೆ ಅದು ಸುದಿನ ಪ್ರತಿಮನೆಯಲ್ಲೂ ಬೆಣ್ಣೆಕದ್ದವು ಮರದಡಿ ಬಂದು ಸೇರಿದವು|| ಬೆಣ್ಣೆಯ ಆಸೆ ಹೆಚ್ಚಾಯ್ತು ಇಬ್ಬರ ಜಗಳವು ಶುರುವಾಯ್ತು ನನಗೂ ಜಾಸ್ತಿ ನಿನಗೂ ಜಾಸ್ತಿ ಬೆಣ್ಣೆಯು ಗೆಳೆತನ ಕೆಡಿಸಿತ್ತು|| ಮರದಲಿ ಕುಳಿತಿರೊ ಮಂಗಣ್ಣ ನೋಡುತಲಿದ್ದನು ಜಗಳವನ್ನ ಉಪಾಯ ಹೂಡಿ … Read more

ಸನ್ಮಾನಗಳು ಸಣ್ಮಾನಗಳಾಗಬಾರದಷ್ಟೇ..: ಪಿ.ಎಸ್. ಅಮರದೀಪ್

ಸಾಧನೆಗೆ ಹಲವು ಮುಖಗಳಿರುತ್ತವೆ. ಸಾಧಕರಿಗೆ ನೂರು ಯೋಚನೆಗಳಿರುತ್ತವೆ. ಒಂದು ಯೋಚನೆ ನೂರು ಸಾಧಕರನ್ನು ಸೃಷ್ಟಿಸಬಲ್ಲದು. ಅಂತಹ ಸಾಧನೆಗಳನ್ನು ಯಾರಾದರೂ ಕೇವಲ ಪ್ರಚಾರಕ್ಕಾಗಿ ಮಾಡಿರುವುದಿಲ್ಲ. ಒಂದೊಳ್ಳೆ ಉದ್ದೇಶವಿಟ್ಟುಕೊಂಡೇ ಪರಿಶ್ರಮದ ಹಾದಿ ತುಳಿದಿರುತ್ತಾರೆ. ನಾವು ಇಲ್ಲಿಯವರೆಗೂ ಕಣ್ಣೆದುರಿಗೆ, ಸುದ್ದಿ ಮೂಲಕ, ದೃಶ್ಯ ಮಾಧ್ಯಮದ ಮೂಲಕ ಸಾಧಕರನ್ನು ಗುರುತಿಸುವುದನ್ನು ನೋಡಿದ್ದೇವೆ. ಖುಷಿ ಪಟ್ಟಿದ್ದೇವೆ, ಹರಸಿದ್ದೇವೆ. ಕಿರಿಯರಿಗೆ ಮಾದರಿಯಾಗಿ ತೋರಿಸಿದ್ದೇವೆ. ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸಿದವರ ಸಾಧಕರ ಪಟ್ಟಿಗೇನೂ ಕಮ್ಮಿಯಿಲ್ಲ. ಅಂತೆಯೇ ಅಂಥ ಸಾಧಕರ ಕುರಿತು ಬೆಳಕು ಚೆಲ್ಲುವ, ಸಾಧನೆಯ ಹಿಂದಿನ ಶ್ರಮದ … Read more