ಪ್ರಕೃತಿಯ ಹಾಡು: ಧನು ಮಲ್ಪೆ

ನೀವು ಎಂದಾದರೂ ಪ್ರಕೃತಿಯ ಸಂಗೀತ ಕೇಳಿದ್ದೀರಾ. . ? ಪಾಪ್ ಗೊತ್ತು ರಾಕ್‌ ಗೊತ್ತು ಇದ್ಯಾವುದಪ್ಪಾ ಹೊಸ ಪ್ರಕಾರದ ಸಂಗೀತ ಅಂತೀರಾ? ಹಾಗಾದರೆ ಇಲ್ಲಿ ಕೇಳಿ. ಪ್ರಕೃತಿಯ ಪ್ರತಿಯೊಂದು ಶಬ್ಧವೂ ಮಧುರ ಸಂಗೀತವೆ. ಆದರೆ ಸಿಟಿಯಲ್ಲಿ ಇರುವವರಿಗೆ ಆಟೋರಿಕ್ಷಾ ಬಸ್ಸುಗಳ ಇಂಜಿನ್ ಶಬ್ಧ, ಕರ್ಕಶ ಹಾರ್ನ್ ಬಿಟ್ಟು ಬೇರೆ ಶಬ್ದ ಮರೆತೇ ಹೋಗಿರಬಹುದು. ಪ್ರಕೃತಿಯ ಹಾಡು ಕೇಳಬೇಕಿದ್ದರೆ ನೀವು ಮಾನವ ನಿರ್ಮಿತ ಕೃತಕ ಶಬ್ಧಗಳೇ ಇಲ್ಲದ ದೊಡ್ಡ ಪರ್ವತವನ್ನೇರಬೇಕು ಅಥವಾ ಬಿಸಿಲೇ ನೆಲ ತಾಗದ ದಟ್ಟ ಅರಣ್ಯವನ್ನು … Read more

ಬಾನಂಗಳದಲೊಮ್ಮೆ….: ಅನುರಾಧ ಪಿ. ಸಾಮಗ

ಚಂದ್ರನಿಗೆ ರೋಹಿಣಿಯೂ, ಉಳಿದ ಇಪ್ಪತ್ತಾರು ಪತ್ನಿಯರೂ, ಸುತ್ತಮುತ್ತ ರಾರಾಜಿಸುವ ಇನ್ನುಳಿದ ತಾರೆಯರೂ, ಜಲದ ನೈದಿಲೆಯೂ, ಮರದ ಆಕಾಶಮಲ್ಲಿಗೆಯೂ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಪ್ರೀತ್ಯರ್ಹರೇ. ಅಲ್ಲದೆ ಅವನು ಅವರೊಬ್ಬೊಬ್ಬರ ಜೊತೆಗೂ ಹೆಣೆದುಕೊಂಡ ಅನುಬಂಧದ ಪರಿಗೆ ಸರಿಯಾಗಿ ಒಬ್ಬೊಬ್ಬರೂ ಅವರವರದೇ ರೀತಿಯಲ್ಲಿ ಅವನ ಸಂತೋಷವನ್ನು ಪರಿಪೂರ್ಣವಾಗಿಸುತಿದ್ದರು. ಅವರಲ್ಲೊಬ್ಬರ ಕೊಡುಗೆಯ ವಿನಃವೂ ಅವನ ಸಂತೋಷ ಅಪರಿಪೂರ್ಣ. ಮತ್ತಾಗ ಚಂದ್ರ ಹುಣ್ಣಿಮೆ ಬಂದರೂ ತನ್ನ ತಾನು ಪೂರ್ಣವಾಗಿ ಕಂಡುಕೊಳ್ಳಲಾರ. ಇದು ಅವನ ಬಲಹೀನತೆಯೆಂದರೂ ಸರಿಯೇ, ಮತ್ತೆ ಮತ್ತೆ ಅಳಿಯುತ್ತ ಬೆಳೆಯುತ್ತ ಅದೆಷ್ಟೋ … Read more

ವೆಂಕಜ್ಜ: ಗಿರಿಜಾ ಜ್ಞಾನಸುಂದರ್

ಬೆಳಗಿನ ಸೂರ್ಯನ ಕಿರಣ ಕಣ್ಣಿಗೆ ಚುಚ್ಚುತ್ತಿದ್ದು,   ವೆಂಕಜ್ಜನ ಕಣ್ಣು ಭಾರವಾಗಿದ್ದರೂ ನಿಧಾನವಾಗಿ ತೆಗೆಯುತ್ತಿದ್ದ. ದೇವಸ್ಥಾನದ ಒಂದು ಮೂಲೆಯಲ್ಲಿ ಮಲಗುವ ವೆಂಕಜ್ಜ ಯಾವಾಗಲು ಚುರುಕು. ಅಷ್ಟೊಂದು ನಿಧಾನವಾಗಿ ಎದ್ದವನೇ ಅಲ್ಲ. ಇಂದೇಕೋ ಅವನ ಮನಸ್ಸು ಎಂದಿನಂತೆ ಇರಲಿಲ್ಲ. ವಸುಧಾಳ ನೆನಪು ಬಹಳವಾಗಿ ಕಾಡುತ್ತಿತ್ತು. ಅವಳು ತನ್ನನ್ನು ಎಬ್ಬಿಸುತ್ತಿದ್ದ ರೀತಿ,   ಮುದ್ದು ಮಾಡುತ್ತಾ ಕಚಗುಳಿ ಇಡುತ್ತಿದ್ದ ನೆನಪು. ವೆಂಕಜ್ಜನ ಜೀವನದಲ್ಲಿ ವಸುಧಾ ಅವನ ಬಾಳ ಸಂಗಾತಿಗಿಂತ ಹೆಚ್ಚಾಗಿದ್ದಳು. ಅವನೆಲ್ಲ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಳು. ಚಿಕ್ಕವಯಸ್ಸಿನಲ್ಲಿ ತಂದೆ ತಾಯಿಯನ್ನು ಕಳೆದುಕೊಂಡಿದ್ದ ಅವನಿಗೆ ತನ್ನೆಲ್ಲ … Read more

ಆರೋಗ್ಯಕ್ಕಾಗಿ ಮರಳಬೇಕಿದೆ ಹಿಂದಿನ ಬದುಕಿಗೆ!: ಕೆ ಟಿ ಸೋಮಶೇಖರ ಹೊಳಲ್ಕೆರೆ

ಕಾಲಚಕ್ರ ಉರುಳುತ್ತನೇ ಇರುತ್ತದೆ. ಉರುಳುವಾಗ ಚಕ್ರದ ಭಾಗ ಹಿಂದಿನದು ಮುಂದಕ್ಕೆ, ಮುಂದಿನದು ಹಿಂದಕ್ಕೆ ಬರುವುದು ಸಹಜ! ಇತಿಹಾಸ ಸಹ ಪುನರಾವರ್ತನೆಯಾಗುತ್ತದೆ ಎನ್ನುತ್ತಾರೆ. ಹಾಗೇ ಮಾನವನ ಬದುಕಿನ ರೀತಿ ಸಹ ಪುನರಾವರ್ತನೆಯಾಗಬೇಕಿದೆ! ನಾವು ನಾಗರೀಕರು ತುಂಬಾ ಮುಂದುವರಿದವರು ಎಂಬುದು ನಾವು ಬಹಳ ಹಿಂದುಳಿದವರೆಂಬ ಧ್ವನಿಯನ್ನು ಒಳಗೊಂಡಿದೆಯಲ್ಲವೆ? ನಮಗೆ ಅನುಕೂಲವಾಗಲೆಂದು, ಸುಲಭವಾಗಿ ಬದುಕಬೇಕೆಂದು ಕಷ್ಟಕರ ಬದುಕನ್ನು ತೊರೆದು ಸುಲಭವಾಗಿ ಬದುಕಲು ಪ್ರಯತ್ನಿಸುವಾಗ ಹಿಂದಿನದಕ್ಕೆ ತಿಲಾಂಜಲಿ ಇತ್ತು ಹೊಸದನ್ನು ಬಿಗಿದಪ್ಪಿಕೊಂಡು ಜೀವಿಸುತ್ತಿದ್ದೇವೆ. ಅದರ ದುಷ್ಪರಿಣಾಮಗಳು ಈಗ ಅರಿತದ್ದರಿಂದ ಹಿಂದಿನ ಜೀವನದ ರೀತಿಯ … Read more

ಹೃದಯಗಳ ಮಿಲನಮಹೋತ್ಸವವೆಂಬುದು: ಸಿದ್ದುಯಾದವ್ ಚಿರಿಬಿ

ಮೈ ಡಿಯರ್ ಸ್ವೀಟ್ ಸವಿ…, ಈ ನವಿರು ಮುಂಜಾವಿಗೆ ನಿನ್ನ ನೆನಪುಗಳಿಂದಲೆ ನೇಯ್ದ ಪ್ರೇಮದ ಬೆಡ್ ಶೀಟ್ ಹೊದ್ದು ಮಲಗಿದ್ದೇನೆ ಸಖಿ. ಸಿಹಿ ಕನಸುಗಳು ನೆನಪಿನ ಪುಟಗಳು ಒಂದೊಂದಾಗಿ ತೆರೆದುಕೊಳ್ಳುತ್ತವೆ. ಆ ನೆನಪಿನ ಪುಟಗಳ ಸಾಲು ಸಾಲು ಅಕ್ಷರಗಳ ಬೀದಿಯಲಿ ಅಲೆದಂತೆ ಅಲ್ಲೆಲ್ಲೊ ನಿನ್ನ ನಗುವಿನ ವೀಣಾ ಲಹರಿ ತೇಲಿದರೆ, ಮತ್ತೆಲ್ಲೋ ನಿನ್ನ ನುಣುಪು ಪಾದಗಳ ಕಾಲ್ಗೆಜ್ಜೆಯ ಝೇಂಕಾರ ಧುಮ್ಮಿಕ್ಕುವುದು, ಕಿವಿಯ ಬಳಿ ಬಂದು ಪ್ರಿಯ ಎಂದು ನೀ ಉಸುರಿದಂತೆ, ಕೈ ಬಳೆಗಳ ಸರಿಗಮ ಚೆಲ್ಲಿದಂತೆ, ಮತ್ತೆಲ್ಲೊ … Read more

ವೃದ್ಧಾಪ್ಯ: ವೈ. ಬಿ. ಕಡಕೋಳ

ವೃದ್ಧಾಪ್ಯ ಮನುಷ್ಯನ ನಾಲ್ಕು ವಿಧದ ಅವಸ್ಥೆಗಳಲ್ಲಿ ಒಂದು. ಬಾಲ್ಯ, ಯೌವನ. ಗೃಹಸ್ಥ, ನಂತರ ಬರುವುದು ವೃದ್ಧಾಪ್ಯ. ಜೀವಿಯ ದೇಹವು ಬೆಳವಣಿಗೆಯ ಕೊನೆಯ ಹಂತದಲ್ಲಿರುವಾಗ ಬರುವ ಈ ವೃದ್ಧಾಪ್ಯ ಬದುಕಿನಲ್ಲಿ ಕೆಲವು ಕುಟುಂಬಗಳಲ್ಲಿ ಸಂತಸವನ್ನು ತಂದರೆ ಇನ್ನು ಕೆಲವು ಕುಟುಂಬಗಳಲ್ಲಿ ದುಃಖದ ಛಾಯೆಯನ್ನು ನೀಡುವ ಬದುಕಿನ ಕೊನೆಯ ಘಟ್ಟದ ಗಳಿಗೆಯನ್ನು ತಂದೊಡ್ಡುತ್ತಿದೆ. ನಾವು ಇತಿಹಾಸದಲ್ಲಿ ಶ್ರವಣಕುಮಾರನ ಕಥೆಯನ್ನು ಕೇಳುತ್ತೇವೆ. ಹಾಗೂ ಒದುತ್ತೇವೆ. ತನ್ನ ವೃದ್ದ ತಂದೆ-ತಾಯಿಯನ್ನು ಬುಟ್ಟಿಯಲ್ಲಿ ಕುಳ್ಳಿರಿಸಿ ತೀರ್ಥಯಾತ್ರೆ ಮಾಡಿಸಿದ್ದನ್ನು ಮತ್ತೊಬ್ಬರಿಗೆ ಆದರ್ಶಪ್ರಾಯವೆಂಬ ಉದಾಹರಣೆ ಕೊಡುತ್ತೇವಲ್ಲವೇ, ? … Read more

ನಿರಂತರ ಪರಿಶ್ರಮದಿಂದ “ಯಶಸ್ಸು”ಗಳಿಸಲು ಸಾಧ್ಯ: ವೇದಾವತಿ ಹೆಚ್. ಎಸ್.

ಪ್ರಪಂಚದಲ್ಲಿ “ಯಶಸ್ಸು”ಎಂಬುದು ಯಾರಿಂದಲೂ ಎರವಲಾಗಿ ಪಡೆಯಲು ಸಾಧ್ಯವಿಲ್ಲ. ನಾವೇ ಕಷ್ಟಪಟ್ಟು ಗುರಿಯನ್ನು ಮುಟ್ಟಿದರೆ ಮಾತ್ರ “ಯಶಸ್ಸು”ನಮ್ಮ ಪಾಲಿಗೆ ಒಲಿಯುತ್ತದೆ. ಮನುಷ್ಯನ ಜೀವನದಲ್ಲಿ ಹಣ, ಕಾರು, ಬಂಗಲೆ, ಅಥವಾ ಬೇರೆಯವರಿಗೆ ಆಫೀಸ್ನಲ್ಲಿ ಕೆಲಸವನ್ನೂ ಕೊಡಿಸಬಹುದು! ಅದರ ಮುಂದಿನ ಗುರಿ, ಜೀವನದಲ್ಲಿ ಸಾಧನೆ ರೂಪದಲ್ಲಿ ಮೆಟ್ಟಿಲು ಏರುವುದೇ “ಯಶಸ್ಸು”. ಯಶಸ್ಸು ಎಂಬುದು ಎಲ್ಲಾ ವಸ್ತುಗಳು ಸಿಗುವಷ್ಟು ಸುಲಭವಾಗಿ ಯಾರಿಗೂ ದೊರಕುವುದಿಲ್ಲ. ಅದನ್ನು ಜಾಣತನದಿಂದ ಸಂಪಾದಿಸಲು ಕಲಿಯಬೇಕು. ಹೊಂಡಾ’ಕಂಪನಿಯ ಹೆಸರನ್ನು ಯಾರು ತಾನೇ ಕೇಳಿಲ್ಲ? ಹೊಂಡಾ ಒಬ್ಬ ಸರಳ ಸ್ವಭಾವದ ವ್ಯಕ್ತಿಯಾಗಿದ್ದ. … Read more

ಸ್ಥಾನಮಾನ ಮತ್ತು ಸ್ತ್ರೀ ಸಾಮರ್ಥ್ಯ: ನಾಗರೇಖಾ ಗಾಂವಕರ

ಶ್ರೇಷ್ಟ ತತ್ವಜ್ಞಾನಿ ಕಾರ್ಲಮಾರ್ಕ್ಸ್ ಹೇಳುತ್ತಾನೆ “ಸ್ತ್ರೀಯರ ವಿಮೋಚನೆ ಹಾಗೂ ಎಲ್ಲಿಯರವರೆಗೆ ಸಮಾಜದಲ್ಲಿ ಮಹಿಳೆ ಕ್ರ್ರಿಯಾತ್ಮಕ ಮತ್ತು ಆರ್ಥಿಕ ಮೌಲ್ಯಗಳ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಅವಕಾಶ ಪಡೆಯದೇ, ಅವರ ಚಟುವಟಿಕೆಗಳು ಬರೀಯ ಮನೆಗೆಲಸಗಳಿಗೆ ಸೀಮಿತವಾಗಿ ಉಳಿಯುತ್ತವೆಯೋ, ಅಲ್ಲಿಯವರೆಗೆ ಮಹಿಳೆಯರ ಉದ್ದಾರ ಸಾಧ್ಯವಿಲ್ಲ. ಆಕೆ ಪುರುಷನಿಗೆ ಸಮಾನ ಅವಕಾಶ ಸ್ಥಾನಮಾನಗಳನ್ನು ಪಡೆಯುವುದು ದುಸ್ಸಾಧ್ಯ. ”  ಎನ್ನುತ್ತಾರೆ.  ದ್ವಿತೀಯ ಲಿಂಗಿಯಾಗಿಯೇ ಪರಿಗಣಿಸಲ್ಪಡುವ ಸ್ತ್ರೀಗೆ ಪುರುಷನಿಗೆ ಇರುವ ಸ್ಥಾನಮಾನ ಇಲ್ಲದಿರುವುದಕ್ಕೆ ಕಾರಣ ತಾರತಮ್ಯ ನೀತಿ. ಆಕೆಯ ಸಾಮರ್ಥ್ಯದ ಬಗ್ಗೆ  ಸೃಷ್ಟಿಸಿದ ತಪ್ಪು … Read more

ಪಂಜು ಕಾವ್ಯಧಾರೆ

ಅಪ್ಪ ಅಪ್ಪಾ ಅದೊಂದು ದಿನ ನೀ ಹೇಳಿದೆ ಕಣ್ಣುಗಳನ್ನು ಪಿಳ  ಪಿಳನೆ ಬಿಟ್ಟು ನಿನ್ನನ್ನೇ  ನೋಡುತ್ತಿದ್ದಾ ಈ ಪುಟ್ಟ ಜೀವಕ್ಕೆ, ಮಗಳೇ  ನೀ ನನ್ನ ಮಾತ ನಡೆಸುವೆಯ? ನಿನ್ನ ಬದುಕಿನ  ಪರಪಂಚದಲ್ಲಿ ಕಾಣಿಸುತ್ತಿದ್ದ ಆ ನಿನ್ನ ಆಚಾರಗಳು, ವಿಚಾರಗಳು, ಮಮತೆಯದನಿಯಾಳಗಳು… ಹೀಗೆ.. ನಿನ್ನಪರೂಪದ  ಸಂಗತಿಗಳ ಅರ್ಥೈಸಲಾಗದೆ, ನಿನ್ನೊಲುಮೆಯ ಪ್ರೀತಿಸಾಗರದಲಿ ಮಿಂದೇಳುತ್ತಿದ್ದ ನನಗೆ ನೀನೇ ವಿಸ್ಮಯ ಬೇರೊಂದ ಬಯಸದೆ  ನಾ ಉಲಿದೆ ನೀ ಹೇಳುವ ಮಾತನ್ನೊಂದನ್ನೂ ನಾ ತೆಗೆಯಲಾರೆ. ಅಪ್ಪಾ ನನ್ನಿಂದ ನೀ ದೂರಾದ  ಇಷ್ಟು ವರುಷಗಳೂ ನಡೆದೇ … Read more

ಜಾಣಸುದ್ದಿ 5: ಕೊಳ್ಳೇಗಾಲ ಶರ್ಮ

  ಈ ವಾರದ ಸಂಚಿಕೆಯಲ್ಲಿ ಕೊಳ್ಳೇಗಾಲ ಶರ್ಮರವರ ಧ್ವನಿಯಲ್ಲಿರುವ ಈ ಆಡೀಯೊ ಕೇಳಲು ಈ ಕೆಳಗಿನ ಕೊಂಡಿಯ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಜಾಣ ಸುದ್ದಿ ಧ್ವನಿಮುದ್ರಿಕೆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ save as/ download ಆಪ್ಷನ್ ನಿಂದ ನಿಮ್ಮ ಮೊಬೈಲ್/ ಕಂಪ್ಯೂಟರ್ ಗೆ ಡೌನ್ ಲೋಡ್ ಮಾಡಿಕೊಳ್ಳಿ… ಇ ಮೇಲ್ ನಲ್ಲಿ ಅಥವಾ ವಾಟ್ಸ್ ಅಪ್ ನಲ್ಲಿ ಈ ಧ್ವನಿಮುದ್ರಿಕೆ ನಿಮಗೆ ಬೇಕು ಎಂದನಿಸಿದರೆ ನಿಮ್ಮ ಕೋರಿಕೆಯನ್ನು … Read more

ಕುವೆಂಪು ಮತ್ತು ಕನ್ನಡ: ದೊರೇಶ್

 ಡಿಸೆಂಬರ್ 29 ಕುವೆಂಪು ಅವರ ಹುಟ್ಟುಹಬ್ಬವನ್ನು ನಾವು ಆಚರಿಸುತ್ತಿದ್ದೇವೆ. ಆದಿಕವಿ ಪಂಪನಿಂದ ಸಶಕ್ತ ಕಾವ್ಯ ಮಾರ್ಗವನ್ನು ಕಂಡುಕೊಂಡ ಕನ್ನಡ ಸಾಹಿತ್ಯವು ಅಗಾಧವಾಗಿ ಬೆಳೆದಿರುವುದಷ್ಟೇ ಅಲ್ಲದೆ ಅನುಪಮ ಕೊಡುಗೆಯನ್ನು ವಿಶ್ವ ಸಾಹಿತ್ಯಕ್ಕೆ ನೀಡಿದೆ. ಈ ಕನ್ನಡದ ಸಾಹಿತ್ಯ ನದಿಯು ತನ್ನ ಸುದೀರ್ಘ ಪಯಣದಲ್ಲಿ ಆಚೀಚೆಯಿಂದ ಜಲದ್ರವ್ಯಗಳನ್ನು ಪಡೆದು ಮುಂದೆ ಸಾಗಿ ಸಾಗರವಾಗಿ ರೂಪುಗೊಂಡಿತು. ಆ ಸಾಗರದಲ್ಲಿ ಮುತ್ತುರತ್ನಗಳು ನಿರ್ಮಾಣವಾದವು. ಅದರಲ್ಲೊಂದು ಅದ್ಭುತ ಮುತ್ತು ಕುವೆಂಪು.ಅವರ ಸಾಧನೆಯ ಪ್ರತಿಯೊಂದು ಹೆಜ್ಜೆಯಲ್ಲೂ ಕನ್ನಡ ಸಂಸ್ಕೃತಿಯ ದರ್ಶನವಾಗುತ್ತದೆ. ಕುವೆಂಪು ಅವರಷ್ಟು ಕನ್ನಡದ ಪರವಾಗಿ … Read more

ಹೊಸ ವರುಷದೊಂದಿಗೆ ಬೆಸೆಯಲಿ ಸ್ನೇಹ- ಸಂಬಂಧಗಳು: ವೇದಾವತಿ ಹೆಚ್. ಎಸ್.

ಮನುಷ್ಯನ ಜೀವನ ಎಷ್ಟೊಂದು ವಿಚಿತ್ರ. ಬೇಕು ಬೇಕು ಎನ್ನುತ್ತಾ ಸಾಗುವಾಗ ವಯಸ್ಸಿನ ಅರಿವು ಮರೆತು ಹೋಗುತ್ತದೆ. ಹೊಸ ವರ್ಷದ ಸಂತೋಷ ಒಂದು ಕಡೆ ಇದ್ದರೆ, ಈ ಹಿಂದಿನ ವರುಷಗಳು ಹೇಗೆ ಕಳೆದು ಹೋದವು ಎಂಬುದು ಮೆಲುಕು ಹಾಕುವುದು ಮರೆತಿರುತ್ತಾನೆ. ನಾಗಾಲೋಟದಲ್ಲಿ ಸಾಗುತ್ತಿರುವ ಜೀವನ ಯಾವಾಗಲೂ ನಾಳೆಯದನ್ನೇ ಯೋಚಿಸಿ ಜೀವನದಲ್ಲಿ ತನಗಾಗಿ ಬರುವಂತಹ ಇಂದಿನ ದಿನದ  ಸಂತೋಷವನ್ನು ಕಳೆದು ಕೊಳ್ಳುತ್ತಾನೆ. ಹಿಂದಿನ ಕಾಲದಲ್ಲಿ ಹಬ್ಬಗಳಲ್ಲಿ ಹೊಸ ವರ್ಷಗಳ ಆಚರಣೆಯನ್ನು ಮಾಡುವ ಸಂಪ್ರದಾಯವಿತ್ತು. ಮನೆಯವರೆಲ್ಲ ಒಂದೆಡೆ ಸೇರಿ ಸಂಭ್ರಮಿಸುತ್ತಿದ್ದ ದಿನಗಳವು. … Read more

ಕುಪ್ಪಳ್ಳಿಯ ಕವಿಶೈಲದ ಮರೆಯಲಾಗದ ನೆನಪುಗಳು: ವೈ.ಬಿ.ಕಡಕೋಳ

ಹತ್ತು ವರ್ಷಗಳ ಹಿಂದಿನ ನೆನಪು (2007) ಕುವೆಂಪುರ ಮನೆಯಲ್ಲಿ ಐದು ದಿನಗಳ ಕಾಲ ಸಂಶೋಧನ ವಿದ್ಯಾರ್ಥಿಗಳಿಗೆ ಕಮ್ಮಟವನ್ನು ಅನಿಕೇತನ ಕಟ್ಟಡದಲ್ಲಿ ಹಮ್ಮಿಕೊಳ್ಳಲಾಗಿತ್ತು. ಐದು ದಿನಗಳು ಕಮ್ಮಟದ ಜೊತೆಗೆ ಕವಿಮನೆಯನ್ನು ನೋಡುತ್ತ ಅಲ್ಲಿನ ವಾತಾವರಣದ ಜೊತೆಗೆ ಕುವೆಂಪುರವರ ಬದುಕಿನ ಘಟ್ಟಗಳ ಹಾಗೂ ಅವರ ಕೃತಿಗಳ ಓದು ನನಗೆ ಹಿಡಿಸಿತ್ತು. ಆ ಐದು ದಿನಗಳ ಅವಧಿಯ ನಂತರ ಆ ಸ್ಥಳ ಪರಿಸರ ಬಿಟ್ಟು ಬರುವಾಗ ಕವಿಸ್ಮøತಿಯನ್ನು ಮನದಲ್ಲಿ ಹೊತ್ತು ಹೊರಬರಬೇಕಾಯಿತು.ಆ ದಿನ ಅವರ ಹುಟ್ಟು ಹಬ್ಬದ ಸಡಗರ ಎಲ್ಲ ಶಿಬಿರಾರ್ಥಿಗಳೊಡನೆ … Read more

ಸ್ತ್ರೀ ಸಾಮರ್ಥ್ಯ ಮತ್ತು ಅವಕಾಶಗಳು: ನಾಗರೇಖಾ ಗಾಂವಕರ

ಡಾ. ಸೌಮ್ಯ ಸ್ವಾಮಿನಾಥನ್ ವಿಶ್ವ ಆರೋಗ್ಯ ಸಂಸ್ಥೆಯ ಭಾರತದ ಪ್ರತಿನಿಧಿಯಾಗಿ ಈ ತಿಂಗಳ ಮೊದಲ ವಾರವಷ್ಟೇ ಆಯ್ಕೆಯಾಗಿದ್ದಾರೆ. ಭಾರತದ ಮಟ್ಟಿಗೆ ಪ್ರಪ್ರಥಮ ಬಾರಿಗೆ ಒಬ್ಬ ಮಹಿಳೆ ಆಯ್ಕೆಯಾಗಿರುವುದು ಸ್ತ್ರೀ ಸಮಾಜ ಹೆಮ್ಮೆ ಪಡುವಂತಹ ಸಂಗತಿ. ಮಹಿಳೆಗೆ ಅಸಾಧ್ಯವೆನ್ನುವಂತಹ  ಜವಾಬ್ದಾರಿ ಯಾವುದು ಇಲ್ಲ ಎಂಬುದಕ್ಕೆ  ಸಾಕ್ಷಿಯಾಗುತ್ತಿದ್ದಾರೆ. ಸ್ತ್ರೀ ಜಾಗತಿಕ ರಂಗದಲ್ಲಿ ಪುರುಷನಿಗೆ ಸಮಾನವಾಗಿ ಮಿಂಚುವ ಯಾವ ಸಾಮಥ್ರ್ಯದಲ್ಲೂ ಕಡಿಮೆಯಿಲ್ಲ. ಹಾಗಾಗಿ ಮಹಿಳೆ ಮತ್ತು ಮಹಿಳಾ ಜಗತ್ತು ಇಂದು ವ್ಯಾಪಕ ಅರ್ಥ ಹಾಗೂ ವಿಸ್ತಾರವನ್ನು ಪಡೆದುಕೊಳ್ಳುತ್ತಿದೆ. ಜಾಗತಿಕ ಸಮೀಕ್ಷೆಯ ಪ್ರಕಾರ … Read more

ದೇವಾಲಯ, ದೇವರ .. ಸರಳವಾಗಿ ಅರ್ಥೈಸಿದ ವಚನಕಾರರು!: ಕೆ ಟಿ ಸೋಮಶೇಖರ ಹೊಳಲ್ಕೆರೆ

ಇಂದು ಹಣ, ಅಧಿಕಾರ, ಆಸ್ಥಿ, ವಸ್ತು, ಒಡವೆ, ವಾಹನಗಳು ಇದ್ದವರಿಗೆ ಜನ ಹೆಚ್ಚು ಗೌರವ ಕೊಡುತ್ತಿದ್ದಾರೆ. ಮಾನ, ಮನ್ನಣೆ ನೀಡುತ್ತಿದ್ದಾರೆ. ಪ್ರಯುಕ್ತ ಜನ ಅದನ್ನು ಗಳಿಸಲು ಶತಾಯ ಗತಾಯ ಶ್ರಮಿಸುತ್ತಿದ್ದಾರೆ. ಇವರು ಗಳಿಸುವ ಏಕಮೇವ ಉದ್ದೇಶ ಹೊಂದಿ ಶೀಘ್ರವಾಗಿ ಸಂಪತ್ತು ಗಳಿಸಲು ಇರುವ ಮಾರ್ಗಗಳು ಯಾವು ಎಂದು ಹುಡುಕುತ್ತಿದ್ದಾರೆಯೇ ವಿನಾ ಒಳ್ಳೆಯ, ನೀತಿಯುತ ಮಾರ್ಗ ಯಾವುದು ಎಂದು ಹುಡುಕುತ್ತಿಲ್ಲ! ಗಳಿಸುವುದು ಮುಖ್ಯ ವಿನಾ ಮಾರ್ಗ ಮುಖ್ಯವಲ್ಲ! ಎಂದು ಭಾವಿಸಿದುದರಿಂದ ಅನ್ಯ ಮಾರ್ಗದಿಂದ ದುಡಿಯುವಂತಾಗಿದೆ. ಧರ್ಮ, ಅರ್ಥ, ಕಾಮ, … Read more

ಮಾತೋಶ್ರೀ ಗೌರಮ್ಮ ಸಾಹಿತ್ಯ ಪ್ರಶಸ್ತಿಗಾಗಿ ಕೃತಿಗಳ ಆಹ್ವಾನ

ಮಾತೋಶ್ರೀ ಗೌರಮ್ಮ ಸಾಹಿತ್ಯ ಪ್ರತಿಷ್ಠಾನವು 2016-17ರಲ್ಲಿ ಪ್ರಕಟವಾದ ಕಥೆ,ಕಾದಂಬರಿ,ಕವನ ಸಂಕಲನ,ವಿಮರ್ಶೆ ಮತ್ತು ಅನುವಾದ ಸಾಹಿತ್ಯ ಕೃತಿಗಳಿಗೆ ಪ್ರಶಸ್ತಿ ನೀಡಲು ಆಹ್ವಾನಿಸಿದೆ. ಕನ್ನಡದ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದು. ಸಾಹಿತ್ಯದ ಎರಡು ಪ್ರಕಾರದ ಉತ್ತಮ ಕೃತಿಗಳಿಗೆ ಈ ಪ್ರಶಸ್ತಿ ನೀಡಲು ಪ್ರತಿಷ್ಠಾನ ನಿರ್ಧರಿಸಿದೆ.  2500 ನಗದು ಮತ್ತು ಫಲಕವನ್ನು ಒಳಗೊಂಡಿರುವುದೆಂದು ಪ್ರತಿಷ್ಠಾನದ ಅಧ್ಯಕ್ಷರು ಶ್ರೀ ಭೀಮಣ್ಣ ಭಂಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಲೇಖಕರು ಕೃತಿಗಳನ್ನು 28 ಜನವರಿ 2018ರ ಒಳಗಾಗಿ ಈ ವಿಳಾಸಕ್ಕೆ ಕಳಿಸಬಹುದು. ತಿರುಪತಿ ಭಂಗಿ  ಕಾರ್ಯದರ್ಶಿಗಳು “ಮಾತೋಶ್ರೀ ಗೌರಮ್ಮ ಸಾಹಿತ್ಯ … Read more

ಪಂಜು ಕಾವ್ಯಧಾರೆ

ಹನಿ-ಹನಿ (೧) ಪೋನು ಪೋನು ಇಲ್ಲದೇ  ಬದುಕದ ನಾನು, ನನಗೆ ನಾನೇ ಮಾಡಿಕೊಂಡ ಬೋನು‌..! (೨) ಮಿಸ್ ನಾವೇ ಲೇಟಾದರೂ ಬಸ್ಸಿಗೆ ಹಿಡಿ ಶಾಪ, ಮೇಲೊಂದು ಮಾತು ಬಸ್ಸು, ಜಸ್ಟ್..! (೩) ದಾರಿ ಅರಿತು ಹೋದರೆ ಬದುಕಿನ ದಾರಿ ರಹದಾರಿ, ಇಲ್ಲದಿದ್ದರೆ ಸೇರಬೇಕಾದೀತು ಬೇಗನೆ ಗೋರಿ..! (೪) ಚಂಚಲ ಮುದುಕನಾದರೂ ಮನಸೇಕೋ ಚಂಚಲ, ಮುದುಕನಾದರೂ ಮನಸೇಕೋ ಚಂಚಲ; ಕಾರಣ ಚಂಚಲಾ..|| (೫)ಆತಂಕ ಎಲ್ಲಾ ಮಕ್ಕಳಿಗೂ ಒಂದೇ ಆತಂಕ, ಕಡಿಮೆ ಬರದಿರಲಿ ಅಂಕ..|| (೬) ಬದುಕು ಬದುಕು ಯಾರೋ … Read more

ಜಾಣಸುದ್ದಿ 4: ಕೊಳ್ಳೇಗಾಲ ಶರ್ಮ

ಈ ವಾರದ ಸಂಚಿಕೆಯಲ್ಲಿ ಕೊಳ್ಳೇಗಾಲ  ಶರ್ಮರವರ ಧ್ವನಿಯಲ್ಲಿರುವ ಈ ಆಡೀಯೊ ಕೇಳಲು ಈ ಕೆಳಗಿನ ಕೊಂಡಿಯ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಜಾಣ ಸುದ್ದಿ ಧ್ವನಿಮುದ್ರಿಕೆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ save as/ download ಆಪ್ಷನ್ ನಿಂದ ನಿಮ್ಮ ಮೊಬೈಲ್/ ಕಂಪ್ಯೂಟರ್ ಗೆ ಡೌನ್ ಲೋಡ್ ಮಾಡಿಕೊಳ್ಳಿ… ಇ ಮೇಲ್ ನಲ್ಲಿ ಅಥವಾ ವಾಟ್ಸ್ ಅಪ್ ನಲ್ಲಿ ಈ ಧ್ವನಿಮುದ್ರಿಕೆ ನಿಮಗೆ ಬೇಕು ಎಂದನಿಸಿದರೆ ನಿಮ್ಮ ಕೋರಿಕೆಯನ್ನು ನಮ್ಮ … Read more

ಅತೀ ವಿನಯಂ ಧೂರ್ತ ಲಕ್ಷಣಂ: ಪಿ.ಎಸ್. ಅಮರದೀಪ್

ವಾಟ್ಸಪ್ ನಲ್ಲಿ ಎಂಥೆಂಥ ಮೆಸೇಜ್ ಗಳು ಬರುತ್ತವೆಂದರೆ, ಅವುಗಳನ್ನು ನಂಬದೇ ಇರಲಾಗುವುದಿಲ್ಲ.   ಕೆಲ ತಿಂಗಳುಗಳ ಹಿಂದೆ ಅಮಿತಾಬ್ ಬಚ್ಚನ್, ವಿನೋದ್ ಖನ್ನಾ, ಹೀಗೆ ಅನೇಕರಿಗೆ ಹಾರ ಹಾಕಿ ಸಂತಾಪ ಸೂಚಿಸುತ್ತಿರುವ ಫೋಟೋ, ಅವರಷ್ಟರದೇ ಅಲ್ಲ,ಸೆಲೆಬ್ರಿಟಿಗಳ, ಕ್ರೀಡಾಪಟುಗಳ, ಸಿನಿಮಾ ನಟರ, ರಾಜಕೀಯ ವ್ಯಕ್ತಿಗಳಿಗೆ ಸಂಬಂಧಿಸಿದ ವಿಷಯಗಳಿಗೆ ಬರುತ್ತಿರುವ ಟ್ರಾಲ್ಸ್, ಕಿಂಡ್ಲಿಂಗ್ ಮೆಸೇಜ್ ಗಳನ್ನು ನೋಡಿದ್ರೆ ಅವುಗಳಿಗೆ ರೆಸ್ಪಾಂಡ್ ಮಾಡುವುದೂ ಕೆಲವೊಮ್ಮೆ  ಸೈಬರ್ ಕ್ರೈಂ  ಆಗುವ ಸಂಭವವಿರುತ್ತದೆ.    “ಕರಗ್ರೇ ವಸತೇ…….. ಎಂದು ಶುರುವಾಗುವ ಬೆಳಿಗ್ಗೆ ಕಣ್ಣು ಬಿಟ್ಟರೇ … Read more

ಜಾಲತಾಣಗಳೆಂಬ ಮಾಯಾಲೋಕ: ವೇದಾವತಿ ಹೆಚ್. ಎಸ್.

ಸ್ನೇಹಿತೆಯ ಪೋನ್ ಕರೆ ಬಂದಿತ್ತು. “ನಿನ್ನ ಪ್ರೊಫೈಲ್ ಪಿಕ್ಚರ್ ತುಂಬಾ ಚೆನ್ನಾಗಿದೆ, ಎಲ್ಲಿಗೆ ಹೋಗಿದ್ದೆ, ಭಾವಚಿತ್ರದ ಹಿಂಬದಿಗೆ ಕಾಣುತ್ತಿರುವ ಫಾಲ್ಸ್ ನಾನು ನೋಡ ಬೇಕು, ಯಾವ ಸ್ಥಳ ಎಂಬುದು ವಾಟ್ಸಾಪ್ ನಲ್ಲಿ ಅಡ್ರೆಸ್ ಹಾಕಿ ತಿಳಿಸು, ಫೇಸ್ಬುಕ್ನಲ್ಲಿ ಬೇಡ. ಅಲ್ಲಿ ಕಾಮೆಂಟ್ ಮಾಡಿದರೆ. . ಎಲ್ಲರಿಗೂ ಗೊತ್ತಾಗುತ್ತದೆ”ಎಂದು ಒಂದೇ ಉಸಿರಿನಲ್ಲಿ ಬೇಕಾದ ಮಾಹಿತಿಯನ್ನು ಕಲೆ ಹಾಕಿದಳು. ಎಲ್ಲಿ ನೋಡಿದರೂ ವಾಟ್ಸಾಪ್, ಫೇಸ್ಬುಕ್ ಗಳ ಬಗ್ಗೆ ಮಾತುಗಳು. ಹಳ್ಳಿಯಿಂದ ಡೆಲ್ಲಿಯವರೆಗೆ ಜಾಸ್ತಿಯಾಗಿ ಜನ ಬಳಕೆ ಮಾಡುವ ಜಾಲತಾಣಗಳು ಎಂದರೆ … Read more

ಸಂತಾ ರನ್: ಪ್ರಶಸ್ತಿ

ವಾರಕ್ಕೊಮ್ಮೆ ಆಗೋ ಸಂತೆ ಗೊತ್ತು. ,ಸಂತಾ-ಬಂತಾ ಜೋಕುಗಳಲ್ಲಿಯ ಸಂತಾ ಗೊತ್ತು. ಕ್ರಿಸ್ಮಸ್ಸಿನಲ್ಲಿ ಗಿಫ್ಟ್ ಕೊಡ್ತಾನೆ ಅಂತ ಮಕ್ಕಳು ಕಾಯೋ ಸಂತಾ ಕ್ಲಾಸೂ ಗೊತ್ತು. ಇದೇನಿದು ಸಂತಾ ರನ್ ಅಂದ್ರಾ ? ಮೆಕ್ಸಿಕೋದಲ್ಲಿ ವರ್ಷಕ್ಕೊಮ್ಮೆ ಕ್ರಿಸ್ಮಸ್ ಸಮಯದಲ್ಲಿ ಆಗೋ ಓಟದ ಸ್ಪರ್ಧೆಯೇ "ಸಂತಾ ರನ್". ನಮ್ಮ ಬೆಂಗಳೂರಲ್ಲೂ ತಿಂಗಳಿಗೊಂದರಂತೆ ಓಟಗಳು ನಡೀತಿರತ್ತೆ. ನೈಸ್ ರೋಡ್ ಮ್ಯಾರಥಾನ್, ಟಿಸಿಎಸ್ ೧೦ಕೆ ಓಟಕ್ಕೆ ವಿದೇಶೀ ಅಥ್ಲೀಟುಗಳೂ ಬರುತ್ತಾರೆ ಇದ್ರಲ್ಲೇನು ವಿಶೇಷ ಅಂದ್ರಾ ? ಹೆಸರೇ ಹೇಳುವಂತೆ ಓಟಕ್ಕೆ ಬರೋ ಎಲ್ಲಾ ಸ್ಪರ್ಧಿಗಳೂ … Read more

ಫ್ರಾನ್ಜ್ ಕಾಫ್ಕನ ತಪೋಸ್ಥಲ: ಕೀರ್ತಿ. ಪಿ

ಜಗತ್ತಿನ ಪ್ರತಿಯೊಂದು ಕತೆ, ಕಾದಂಬರಿಯೂ ಏನೋ ಒಂದು ಸಾರಾಂಶವ ಹೇಳಲು ಹೊರಟಿರುತ್ತದೆ. ತನ್ನ ಕಾವ್ಯಾನುಶಕ್ತಿಯ ಮೀರಿ ಕವಿ ಬರೆಯಲು ಹೋದಾಗ ಕವಿಗೆ ಕಾವ್ಯ ಹೊಸತು, ನಿರ್ಧಾರ ಸ್ಪಷ್ಟವಾಗುತಾ ಹೋಗುತ್ತದೆ. ಕವಿ ಹೀಗೆಯಿರಬೇಕೆಂಬ ಇರಾದೆ, ತಗಾದೆಯೂ ಇಲ್ಲ, ತನ್ನ ಅರ್ಥಪೂರ್ಣ ಕತೆಯ ಚಿತ್ರಿಸಲು ಕವಿಗೆ ಹೊಳೆದದ್ದನ್ನು ಹೇಳಿ ಮುಗಿಸಿ ಬಿಡುತ್ತಾನೆ. ಕಾವ್ಯ ತಪಸ್ಸು, ತಪಸ್ಸಿಲ್ಲದ ವ್ಯಕ್ತಿಗೆ ಕಾವ್ಯ ದಕ್ಕುವುದು ಕಷ್ಟ. ಓದು, ಜ್ಞಾನ, ತಾಳ್ಮೆ, ಪ್ರೀತಿ, ಸಹನೆ, ತಪಸ್ಸು, ಏಕಾಂತ, ಧ್ಯಾನ, ವಿಭೂತಿಯ ವಿಭಾವ, ಭಾವನಾತ್ಮಕ ಮನೋಭಾವ ಬಹುಮುಖ್ಯ! … Read more

ಲೇಡೀಸ್ ಬೋಗಿ: ಪ್ರೇಮಾ ಟಿ ಎಮ್ ಆರ್

ರೈಲು ಸಿಳ್ಳೆ ಹೊಡೆಯುತ್ತ ಹೊರಟಿದೆ. ಲೇಡೀಸ್ ಬೋಗಿ ತುಂಬಿ ತುಳುಕುತ್ತಿದೆ. ಮುಚ್ಚಿದ  ಕಿಟಕಿ ಗಾಜಿನಮೇಲೆ ಮಳೆನೀರು ಧಾರೆಯಾಗಿ ಹರಿಯುತ್ತಿದೆ. ಒಳಗೆ ಬದುಕಿನ ಕಥೆಗಳು  ಮಾತುಗಳಾಗಿ ಬಿಚ್ಚಿಕೊಳ್ಳುತ್ತಿವೆ. ಇನ್ನಷ್ಟು ಕಥೆಗಳು ಸರದಿಯಲ್ಲಿವೆ. ಅವಳು ಕಸ್ತೂರಿ.  ಕಾವೇರಿಯಂತೆ ತಂಪಿನ ಹುಡುಗಿ. ಅವಳ ನಗು ರೇಶಿಮೆಯಷ್ಟು ನವಿರು. ಜುಳುಗುಡುವ ನೀರ ಮೈಮೇಲೆ ಮೂಡುವ ಸುಳಿಯಂಥ ಕೆನ್ನೆಗುಳಿ. ಕಸ್ತೂರಿ ಏಳನೇ ತರಗತಿ ಮುಟ್ಟುವದರೊಳಗೆ ಅಮ್ಮ ಮತ್ತೆ ನಾಲ್ಕು ಹೆತ್ತಿದ್ದಳು. ನಿತ್ಯದ ಗಂಜಿಗೆ ಅಮ್ಮ ಅಪ್ಪನಿಗೆ ನೆರಳಾಗಿ ನಡೆಯಬೇಕು  ಹೊರಗಿನ ದುಡಿತಕ್ಕೆ. ತಮ್ಮ ತಂಗಿಯರು  … Read more

ಲಿಂಗ ಸಾಮರಸ್ಯತೆ  ಮತ್ತು ಸ್ತ್ರೀ ಸಂವೇದನೆ: ನಾಗರೇಖಾ ಗಾಂವಕರ

ನನ್ನೊಳಗಿನ ತುಡಿತಗಳು ಅವನಿಗೆ ಅರ್ಥವಾಗುವುದಿಲ್ಲ. ಅವನದೇನಿದ್ದರೂ ತನ್ನ ಮೇಲುಗಾರಿಕೆಯ ನೆಲೆಯಲ್ಲಿಯೇ ನನ್ನನ್ನು ಉದ್ದರಿಸುವ ನಿಲುವು. ಇದು ಧೀಮಂತ ವ್ಯಕ್ತಿತ್ವ ಎನ್ನಿಸಿಕೊಳ್ಳುವ ಪ್ರತಿಯೊಬ್ಬ ಸಜ್ಜನ ಪುರುಷನ ಲಕ್ಷಣ. ಹೆಣ್ಣು ದುರ್ಬಲೆ ಎಂಬ ಧೋರಣೆಯ ಅಂಚಿನಿಂದ ಆತನಿನ್ನೂ ಹೊರಬಂದಿಲ್ಲ. ಅವಳ ಮಾನಸಿಕ ಸಾಮಥ್ರ್ಯ ತನಗೆ ಮಿಕ್ಕಿದ್ದರೂ ಒಪ್ಪಲಾರ. ಅದು ಅವರಿಬ್ಬರ ಜಗತ್ತಿಗೆ ಅನ್ವಯಿಸಿ ಹೇಳುವಾಗ ಹೆಂಗಸರ ಬುದ್ಧಿ ಮೊಣಕಾಲ ಕೆಳಗೆ ಎಂದು ಉದ್ಘರಿಸುವ ಹಲವು ಮುಖಗಳು ಸದಾ ನಮ್ಮ ಸುತ್ತಮುತ್ತ ಸಂಚರಿಸುತ್ತಿರುತ್ತವೆ. ಅದಕ್ಕಾಗೆ ಪ್ರತ್ಯೇಕ ಸ್ತ್ರೀ ಪ್ರಜ್ಞೆಯ ಸ್ತ್ರೀ ಸಂವೇದನೆಯ … Read more

ನಿರಾಶ್ರಿತ: ವೈ. ಬಿ. ಕಡಕೋಳ

"ನಮಸ್ಕಾರ ಗುರುಗಳಿಗೆ" ಎದುರಿಗಿದ್ದ ಮಲ್ಲಪ್ಪನ ಕಂಡ ವೆಂಕಪ್ಪ ಮಾಸ್ತರು  "ಅರೆ ಮಲ್ಲಪ್ಪ. ಏನಿದು ಕಳೆದ ಎಳೆಂಟು ತಿಂಗಳಿಂದ ಬೆಟ್ಟಿ ಆಗಿಲ್ಲ ಎಲ್ಲಿ ಹೋಗಿದ್ದಿ. ಏನು ಕಥೆ? ", ಮತ್ತೆ ಮಾತು ಮುಂದುವರೆಸಿ "ಅಂದಾಂಗ ನಿನ್ನ ಮಗ ಚನ್ನಪ್ಪ ಅರಾಮ ಅದಾನೇನು? " ಹಾಗೆಯೇ ಒಂದೇ ಉಸಿರಿನಿಂದ ಪ್ರಶ್ನೆಗಳ ಸುರಿಮಳೆಯನ್ನೇ ಹರಿಸಿದರು. ಬಹಳ ದಿನಗಳಿಂದ ಶಾಲೆಯ ಕಡೆಗೆ ಬರದಿದ್ದ ಮಲ್ಲಪ್ಪನ ಬಗ್ಗೆ ವೆಂಕಪ್ಪ ಮಾಸ್ತರರಿಗೆ ವಿಶೇಷ ಕಾಳಜಿ. ಅವನ ಮಗ ಚನ್ನಪ್ಪ ಓದಿನಲ್ಲಿ ಸದಾ ಮುಂದು. ಮಲ್ಲಪ್ಪ ಬಡವನಾದರೂ … Read more

ಬದುಕಿನಲ್ಲಿ ಭರವಸೆ ಎಂಬುದು ಪುನರ್ಜನ್ಮದ ಅವಕಾಶವಿದ್ದಂತೆ: ನರಸಿಂಹಮೂರ್ತಿ. ಎಂ.ಎಲ್.

ನಿರೀಕ್ಷೆಗಳು ಹುಸಿಗೊಂಡಾಗ ಭರವಸೆಗಳೊಂದಿಗೆ ಬೆಸೆದುಕೊಂಡು ಮುನ್ನೆಡೆಯಬೇಕು. ಅಂದುಕೊಂಡಿದ್ದೆಲ್ಲ  ನಡೆಯಲ್ಲ, ಅಪೇಕ್ಷಿಸಿದ್ದೆಲ್ಲ ದೊರೆಯುವುದಿಲ್ಲ. ಇದು ಹೀಗೆ ಒಂದಂತರಂಗದ ಅಲೆಯಾಗಿ ಮೌನವನ್ನು ಪರಿಚಯಿಸಿ ಹೋಗಿಬಿಡುತ್ತದೆ.  ನಿರೀಕ್ಷೆಗಳಲ್ಲಿ ತೇಲಿಮುಳುಗುವಾಗ ಕುತೂಹಲಗಳು ಕನಸ್ಸಿನ ದೋಣಿಯನ್ನು ಅಲುಗಾಡದಂತೆ ಮುನ್ನೆಡಿಸಿದಂತೆ ಸೊಗಸಾದ ಅನುಭವದ ಹಿತವನ್ನು ಒಡ್ಡುತ್ತದೆ. ಅದೇ ನಿರೀಕ್ಷೆಗಳು ಹುಸಿಯಾಗುತ್ತಿದ್ದಂತೆ ಭರವಸೆಯ ಬೆಳಕು ಮೆಲ್ಲನೆ ಸರಿದು ಹೋಗಿ ಕತ್ತಲಾವರಿಸಲು ಆರಂಭಿಸಿ ಅತೀವ ಭಾವೋವೇದನೆಗೆ ಗುರಿ ಮಾಡುತ್ತಾ ಜಗತ್ತೆಲ್ಲ ಶೂನ್ಯವೆಂಬಂತಾಗಿ ಜಿಗುಪ್ಸೆ ಆವರಿಸಿಕೊಳ್ಳುತ್ತದೆ. ಏನೇನು ಹುಚ್ಚು ಮನಸ್ಸಿನ ಮಜಲುಗಳು ವಿವಿಧ ಆಯಾಮಗಳಲ್ಲಿ ಹಂಗಿಸಲು ಆರಂಭಿಸುತ್ತದೆ. ಈ ಪಯಣವೇ … Read more

ಬದುಕೆಂದರೆ ಪೂರ್ಣತ್ವದ ಕಡೆಗೆ ಸಾಗುವುದ?: ಕೆ ಟಿ ಸೋಮಶೇಖರ ಹೊಳಲ್ಕೆರೆ

 ‌ " ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ " ಎಂದು ಗೋಪಾಲಕೃಷ್ಣ ಅಡಿಗರು ಹೇಳಿದ್ದಾರೆ. ಜೀವನ ಎಂದರೇನು ಎಂದು ಒಂದು ವ್ಯಾಖ್ಯೆಯಲ್ಲಿ ಹಿಡಿದಿಡುವುದು ಕಷ್ಟ. ಆದರೂ ಕೆಲವರು ಪ್ರಯತ್ನಿಸಿದ್ದಾರೆ ಅದು ಜೀವನವನ್ನೆಲ್ಲಾ ಒಂದೇ ವ್ಯಾಖ್ಯೆಯಲ್ಲಿ ಹಿಡಿದಿಟ್ಟಿದ್ದರೂ ಅವು ಪರಿಪೂರ್ಣ ಅನ್ನಿಸವು. ಏಕೆಂದರೆ ಜೀವನ ಹೇಗೆ ಬೇಕಾದರೂ ಇರಬಹುದು! ವಿಶಾಲವೂ ಆಗಬಹುದು, ಅತಿ ಕಿರಿದೂ ಆಗಬಹುದು! ಹಿಗ್ಗಿನ ಸುಗ್ಗಿಯಾಗಬಹುದು, ಬಿರು ಬಿಸಿಲ ಬೇಸಿಗೆಯಾಗಬಹುದು. ಕಷ್ಟಗಳ ಮಳೆಯಾಗಬಹುದು! ಸಾಧನೆಯ ಶಿಖರವೇ ಆಗಬಹುದು. ಭೂಮಿಯ ಮೇಲಿರುವವರಾರೂ ಪರಿಪೂರ್ಣರಲ್ಲ. ಹುಟ್ಟಿದ ಪ್ರಯುಕ್ತ … Read more