ಪಂಜು ಕಾವ್ಯಧಾರೆ

ಹನಿ-ಹನಿ (೧) ಪೋನು ಪೋನು ಇಲ್ಲದೇ  ಬದುಕದ ನಾನು, ನನಗೆ ನಾನೇ ಮಾಡಿಕೊಂಡ ಬೋನು‌..! (೨) ಮಿಸ್ ನಾವೇ ಲೇಟಾದರೂ ಬಸ್ಸಿಗೆ ಹಿಡಿ ಶಾಪ, ಮೇಲೊಂದು ಮಾತು ಬಸ್ಸು, ಜಸ್ಟ್..! (೩) ದಾರಿ ಅರಿತು ಹೋದರೆ ಬದುಕಿನ ದಾರಿ ರಹದಾರಿ, ಇಲ್ಲದಿದ್ದರೆ ಸೇರಬೇಕಾದೀತು ಬೇಗನೆ ಗೋರಿ..! (೪) ಚಂಚಲ ಮುದುಕನಾದರೂ ಮನಸೇಕೋ ಚಂಚಲ, ಮುದುಕನಾದರೂ ಮನಸೇಕೋ ಚಂಚಲ; ಕಾರಣ ಚಂಚಲಾ..|| (೫)ಆತಂಕ ಎಲ್ಲಾ ಮಕ್ಕಳಿಗೂ ಒಂದೇ ಆತಂಕ, ಕಡಿಮೆ ಬರದಿರಲಿ ಅಂಕ..|| (೬) ಬದುಕು ಬದುಕು ಯಾರೋ … Read more

ಜಾಣಸುದ್ದಿ 4: ಕೊಳ್ಳೇಗಾಲ ಶರ್ಮ

ಈ ವಾರದ ಸಂಚಿಕೆಯಲ್ಲಿ ಕೊಳ್ಳೇಗಾಲ  ಶರ್ಮರವರ ಧ್ವನಿಯಲ್ಲಿರುವ ಈ ಆಡೀಯೊ ಕೇಳಲು ಈ ಕೆಳಗಿನ ಕೊಂಡಿಯ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಜಾಣ ಸುದ್ದಿ ಧ್ವನಿಮುದ್ರಿಕೆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ save as/ download ಆಪ್ಷನ್ ನಿಂದ ನಿಮ್ಮ ಮೊಬೈಲ್/ ಕಂಪ್ಯೂಟರ್ ಗೆ ಡೌನ್ ಲೋಡ್ ಮಾಡಿಕೊಳ್ಳಿ… ಇ ಮೇಲ್ ನಲ್ಲಿ ಅಥವಾ ವಾಟ್ಸ್ ಅಪ್ ನಲ್ಲಿ ಈ ಧ್ವನಿಮುದ್ರಿಕೆ ನಿಮಗೆ ಬೇಕು ಎಂದನಿಸಿದರೆ ನಿಮ್ಮ ಕೋರಿಕೆಯನ್ನು ನಮ್ಮ … Read more

ಅತೀ ವಿನಯಂ ಧೂರ್ತ ಲಕ್ಷಣಂ: ಪಿ.ಎಸ್. ಅಮರದೀಪ್

ವಾಟ್ಸಪ್ ನಲ್ಲಿ ಎಂಥೆಂಥ ಮೆಸೇಜ್ ಗಳು ಬರುತ್ತವೆಂದರೆ, ಅವುಗಳನ್ನು ನಂಬದೇ ಇರಲಾಗುವುದಿಲ್ಲ.   ಕೆಲ ತಿಂಗಳುಗಳ ಹಿಂದೆ ಅಮಿತಾಬ್ ಬಚ್ಚನ್, ವಿನೋದ್ ಖನ್ನಾ, ಹೀಗೆ ಅನೇಕರಿಗೆ ಹಾರ ಹಾಕಿ ಸಂತಾಪ ಸೂಚಿಸುತ್ತಿರುವ ಫೋಟೋ, ಅವರಷ್ಟರದೇ ಅಲ್ಲ,ಸೆಲೆಬ್ರಿಟಿಗಳ, ಕ್ರೀಡಾಪಟುಗಳ, ಸಿನಿಮಾ ನಟರ, ರಾಜಕೀಯ ವ್ಯಕ್ತಿಗಳಿಗೆ ಸಂಬಂಧಿಸಿದ ವಿಷಯಗಳಿಗೆ ಬರುತ್ತಿರುವ ಟ್ರಾಲ್ಸ್, ಕಿಂಡ್ಲಿಂಗ್ ಮೆಸೇಜ್ ಗಳನ್ನು ನೋಡಿದ್ರೆ ಅವುಗಳಿಗೆ ರೆಸ್ಪಾಂಡ್ ಮಾಡುವುದೂ ಕೆಲವೊಮ್ಮೆ  ಸೈಬರ್ ಕ್ರೈಂ  ಆಗುವ ಸಂಭವವಿರುತ್ತದೆ.    “ಕರಗ್ರೇ ವಸತೇ…….. ಎಂದು ಶುರುವಾಗುವ ಬೆಳಿಗ್ಗೆ ಕಣ್ಣು ಬಿಟ್ಟರೇ … Read more

ಜಾಲತಾಣಗಳೆಂಬ ಮಾಯಾಲೋಕ: ವೇದಾವತಿ ಹೆಚ್. ಎಸ್.

ಸ್ನೇಹಿತೆಯ ಪೋನ್ ಕರೆ ಬಂದಿತ್ತು. “ನಿನ್ನ ಪ್ರೊಫೈಲ್ ಪಿಕ್ಚರ್ ತುಂಬಾ ಚೆನ್ನಾಗಿದೆ, ಎಲ್ಲಿಗೆ ಹೋಗಿದ್ದೆ, ಭಾವಚಿತ್ರದ ಹಿಂಬದಿಗೆ ಕಾಣುತ್ತಿರುವ ಫಾಲ್ಸ್ ನಾನು ನೋಡ ಬೇಕು, ಯಾವ ಸ್ಥಳ ಎಂಬುದು ವಾಟ್ಸಾಪ್ ನಲ್ಲಿ ಅಡ್ರೆಸ್ ಹಾಕಿ ತಿಳಿಸು, ಫೇಸ್ಬುಕ್ನಲ್ಲಿ ಬೇಡ. ಅಲ್ಲಿ ಕಾಮೆಂಟ್ ಮಾಡಿದರೆ. . ಎಲ್ಲರಿಗೂ ಗೊತ್ತಾಗುತ್ತದೆ”ಎಂದು ಒಂದೇ ಉಸಿರಿನಲ್ಲಿ ಬೇಕಾದ ಮಾಹಿತಿಯನ್ನು ಕಲೆ ಹಾಕಿದಳು. ಎಲ್ಲಿ ನೋಡಿದರೂ ವಾಟ್ಸಾಪ್, ಫೇಸ್ಬುಕ್ ಗಳ ಬಗ್ಗೆ ಮಾತುಗಳು. ಹಳ್ಳಿಯಿಂದ ಡೆಲ್ಲಿಯವರೆಗೆ ಜಾಸ್ತಿಯಾಗಿ ಜನ ಬಳಕೆ ಮಾಡುವ ಜಾಲತಾಣಗಳು ಎಂದರೆ … Read more

ಸಂತಾ ರನ್: ಪ್ರಶಸ್ತಿ

ವಾರಕ್ಕೊಮ್ಮೆ ಆಗೋ ಸಂತೆ ಗೊತ್ತು. ,ಸಂತಾ-ಬಂತಾ ಜೋಕುಗಳಲ್ಲಿಯ ಸಂತಾ ಗೊತ್ತು. ಕ್ರಿಸ್ಮಸ್ಸಿನಲ್ಲಿ ಗಿಫ್ಟ್ ಕೊಡ್ತಾನೆ ಅಂತ ಮಕ್ಕಳು ಕಾಯೋ ಸಂತಾ ಕ್ಲಾಸೂ ಗೊತ್ತು. ಇದೇನಿದು ಸಂತಾ ರನ್ ಅಂದ್ರಾ ? ಮೆಕ್ಸಿಕೋದಲ್ಲಿ ವರ್ಷಕ್ಕೊಮ್ಮೆ ಕ್ರಿಸ್ಮಸ್ ಸಮಯದಲ್ಲಿ ಆಗೋ ಓಟದ ಸ್ಪರ್ಧೆಯೇ "ಸಂತಾ ರನ್". ನಮ್ಮ ಬೆಂಗಳೂರಲ್ಲೂ ತಿಂಗಳಿಗೊಂದರಂತೆ ಓಟಗಳು ನಡೀತಿರತ್ತೆ. ನೈಸ್ ರೋಡ್ ಮ್ಯಾರಥಾನ್, ಟಿಸಿಎಸ್ ೧೦ಕೆ ಓಟಕ್ಕೆ ವಿದೇಶೀ ಅಥ್ಲೀಟುಗಳೂ ಬರುತ್ತಾರೆ ಇದ್ರಲ್ಲೇನು ವಿಶೇಷ ಅಂದ್ರಾ ? ಹೆಸರೇ ಹೇಳುವಂತೆ ಓಟಕ್ಕೆ ಬರೋ ಎಲ್ಲಾ ಸ್ಪರ್ಧಿಗಳೂ … Read more

ಫ್ರಾನ್ಜ್ ಕಾಫ್ಕನ ತಪೋಸ್ಥಲ: ಕೀರ್ತಿ. ಪಿ

ಜಗತ್ತಿನ ಪ್ರತಿಯೊಂದು ಕತೆ, ಕಾದಂಬರಿಯೂ ಏನೋ ಒಂದು ಸಾರಾಂಶವ ಹೇಳಲು ಹೊರಟಿರುತ್ತದೆ. ತನ್ನ ಕಾವ್ಯಾನುಶಕ್ತಿಯ ಮೀರಿ ಕವಿ ಬರೆಯಲು ಹೋದಾಗ ಕವಿಗೆ ಕಾವ್ಯ ಹೊಸತು, ನಿರ್ಧಾರ ಸ್ಪಷ್ಟವಾಗುತಾ ಹೋಗುತ್ತದೆ. ಕವಿ ಹೀಗೆಯಿರಬೇಕೆಂಬ ಇರಾದೆ, ತಗಾದೆಯೂ ಇಲ್ಲ, ತನ್ನ ಅರ್ಥಪೂರ್ಣ ಕತೆಯ ಚಿತ್ರಿಸಲು ಕವಿಗೆ ಹೊಳೆದದ್ದನ್ನು ಹೇಳಿ ಮುಗಿಸಿ ಬಿಡುತ್ತಾನೆ. ಕಾವ್ಯ ತಪಸ್ಸು, ತಪಸ್ಸಿಲ್ಲದ ವ್ಯಕ್ತಿಗೆ ಕಾವ್ಯ ದಕ್ಕುವುದು ಕಷ್ಟ. ಓದು, ಜ್ಞಾನ, ತಾಳ್ಮೆ, ಪ್ರೀತಿ, ಸಹನೆ, ತಪಸ್ಸು, ಏಕಾಂತ, ಧ್ಯಾನ, ವಿಭೂತಿಯ ವಿಭಾವ, ಭಾವನಾತ್ಮಕ ಮನೋಭಾವ ಬಹುಮುಖ್ಯ! … Read more

ಲೇಡೀಸ್ ಬೋಗಿ: ಪ್ರೇಮಾ ಟಿ ಎಮ್ ಆರ್

ರೈಲು ಸಿಳ್ಳೆ ಹೊಡೆಯುತ್ತ ಹೊರಟಿದೆ. ಲೇಡೀಸ್ ಬೋಗಿ ತುಂಬಿ ತುಳುಕುತ್ತಿದೆ. ಮುಚ್ಚಿದ  ಕಿಟಕಿ ಗಾಜಿನಮೇಲೆ ಮಳೆನೀರು ಧಾರೆಯಾಗಿ ಹರಿಯುತ್ತಿದೆ. ಒಳಗೆ ಬದುಕಿನ ಕಥೆಗಳು  ಮಾತುಗಳಾಗಿ ಬಿಚ್ಚಿಕೊಳ್ಳುತ್ತಿವೆ. ಇನ್ನಷ್ಟು ಕಥೆಗಳು ಸರದಿಯಲ್ಲಿವೆ. ಅವಳು ಕಸ್ತೂರಿ.  ಕಾವೇರಿಯಂತೆ ತಂಪಿನ ಹುಡುಗಿ. ಅವಳ ನಗು ರೇಶಿಮೆಯಷ್ಟು ನವಿರು. ಜುಳುಗುಡುವ ನೀರ ಮೈಮೇಲೆ ಮೂಡುವ ಸುಳಿಯಂಥ ಕೆನ್ನೆಗುಳಿ. ಕಸ್ತೂರಿ ಏಳನೇ ತರಗತಿ ಮುಟ್ಟುವದರೊಳಗೆ ಅಮ್ಮ ಮತ್ತೆ ನಾಲ್ಕು ಹೆತ್ತಿದ್ದಳು. ನಿತ್ಯದ ಗಂಜಿಗೆ ಅಮ್ಮ ಅಪ್ಪನಿಗೆ ನೆರಳಾಗಿ ನಡೆಯಬೇಕು  ಹೊರಗಿನ ದುಡಿತಕ್ಕೆ. ತಮ್ಮ ತಂಗಿಯರು  … Read more

ಲಿಂಗ ಸಾಮರಸ್ಯತೆ  ಮತ್ತು ಸ್ತ್ರೀ ಸಂವೇದನೆ: ನಾಗರೇಖಾ ಗಾಂವಕರ

ನನ್ನೊಳಗಿನ ತುಡಿತಗಳು ಅವನಿಗೆ ಅರ್ಥವಾಗುವುದಿಲ್ಲ. ಅವನದೇನಿದ್ದರೂ ತನ್ನ ಮೇಲುಗಾರಿಕೆಯ ನೆಲೆಯಲ್ಲಿಯೇ ನನ್ನನ್ನು ಉದ್ದರಿಸುವ ನಿಲುವು. ಇದು ಧೀಮಂತ ವ್ಯಕ್ತಿತ್ವ ಎನ್ನಿಸಿಕೊಳ್ಳುವ ಪ್ರತಿಯೊಬ್ಬ ಸಜ್ಜನ ಪುರುಷನ ಲಕ್ಷಣ. ಹೆಣ್ಣು ದುರ್ಬಲೆ ಎಂಬ ಧೋರಣೆಯ ಅಂಚಿನಿಂದ ಆತನಿನ್ನೂ ಹೊರಬಂದಿಲ್ಲ. ಅವಳ ಮಾನಸಿಕ ಸಾಮಥ್ರ್ಯ ತನಗೆ ಮಿಕ್ಕಿದ್ದರೂ ಒಪ್ಪಲಾರ. ಅದು ಅವರಿಬ್ಬರ ಜಗತ್ತಿಗೆ ಅನ್ವಯಿಸಿ ಹೇಳುವಾಗ ಹೆಂಗಸರ ಬುದ್ಧಿ ಮೊಣಕಾಲ ಕೆಳಗೆ ಎಂದು ಉದ್ಘರಿಸುವ ಹಲವು ಮುಖಗಳು ಸದಾ ನಮ್ಮ ಸುತ್ತಮುತ್ತ ಸಂಚರಿಸುತ್ತಿರುತ್ತವೆ. ಅದಕ್ಕಾಗೆ ಪ್ರತ್ಯೇಕ ಸ್ತ್ರೀ ಪ್ರಜ್ಞೆಯ ಸ್ತ್ರೀ ಸಂವೇದನೆಯ … Read more

ನಿರಾಶ್ರಿತ: ವೈ. ಬಿ. ಕಡಕೋಳ

"ನಮಸ್ಕಾರ ಗುರುಗಳಿಗೆ" ಎದುರಿಗಿದ್ದ ಮಲ್ಲಪ್ಪನ ಕಂಡ ವೆಂಕಪ್ಪ ಮಾಸ್ತರು  "ಅರೆ ಮಲ್ಲಪ್ಪ. ಏನಿದು ಕಳೆದ ಎಳೆಂಟು ತಿಂಗಳಿಂದ ಬೆಟ್ಟಿ ಆಗಿಲ್ಲ ಎಲ್ಲಿ ಹೋಗಿದ್ದಿ. ಏನು ಕಥೆ? ", ಮತ್ತೆ ಮಾತು ಮುಂದುವರೆಸಿ "ಅಂದಾಂಗ ನಿನ್ನ ಮಗ ಚನ್ನಪ್ಪ ಅರಾಮ ಅದಾನೇನು? " ಹಾಗೆಯೇ ಒಂದೇ ಉಸಿರಿನಿಂದ ಪ್ರಶ್ನೆಗಳ ಸುರಿಮಳೆಯನ್ನೇ ಹರಿಸಿದರು. ಬಹಳ ದಿನಗಳಿಂದ ಶಾಲೆಯ ಕಡೆಗೆ ಬರದಿದ್ದ ಮಲ್ಲಪ್ಪನ ಬಗ್ಗೆ ವೆಂಕಪ್ಪ ಮಾಸ್ತರರಿಗೆ ವಿಶೇಷ ಕಾಳಜಿ. ಅವನ ಮಗ ಚನ್ನಪ್ಪ ಓದಿನಲ್ಲಿ ಸದಾ ಮುಂದು. ಮಲ್ಲಪ್ಪ ಬಡವನಾದರೂ … Read more

ಬದುಕಿನಲ್ಲಿ ಭರವಸೆ ಎಂಬುದು ಪುನರ್ಜನ್ಮದ ಅವಕಾಶವಿದ್ದಂತೆ: ನರಸಿಂಹಮೂರ್ತಿ. ಎಂ.ಎಲ್.

ನಿರೀಕ್ಷೆಗಳು ಹುಸಿಗೊಂಡಾಗ ಭರವಸೆಗಳೊಂದಿಗೆ ಬೆಸೆದುಕೊಂಡು ಮುನ್ನೆಡೆಯಬೇಕು. ಅಂದುಕೊಂಡಿದ್ದೆಲ್ಲ  ನಡೆಯಲ್ಲ, ಅಪೇಕ್ಷಿಸಿದ್ದೆಲ್ಲ ದೊರೆಯುವುದಿಲ್ಲ. ಇದು ಹೀಗೆ ಒಂದಂತರಂಗದ ಅಲೆಯಾಗಿ ಮೌನವನ್ನು ಪರಿಚಯಿಸಿ ಹೋಗಿಬಿಡುತ್ತದೆ.  ನಿರೀಕ್ಷೆಗಳಲ್ಲಿ ತೇಲಿಮುಳುಗುವಾಗ ಕುತೂಹಲಗಳು ಕನಸ್ಸಿನ ದೋಣಿಯನ್ನು ಅಲುಗಾಡದಂತೆ ಮುನ್ನೆಡಿಸಿದಂತೆ ಸೊಗಸಾದ ಅನುಭವದ ಹಿತವನ್ನು ಒಡ್ಡುತ್ತದೆ. ಅದೇ ನಿರೀಕ್ಷೆಗಳು ಹುಸಿಯಾಗುತ್ತಿದ್ದಂತೆ ಭರವಸೆಯ ಬೆಳಕು ಮೆಲ್ಲನೆ ಸರಿದು ಹೋಗಿ ಕತ್ತಲಾವರಿಸಲು ಆರಂಭಿಸಿ ಅತೀವ ಭಾವೋವೇದನೆಗೆ ಗುರಿ ಮಾಡುತ್ತಾ ಜಗತ್ತೆಲ್ಲ ಶೂನ್ಯವೆಂಬಂತಾಗಿ ಜಿಗುಪ್ಸೆ ಆವರಿಸಿಕೊಳ್ಳುತ್ತದೆ. ಏನೇನು ಹುಚ್ಚು ಮನಸ್ಸಿನ ಮಜಲುಗಳು ವಿವಿಧ ಆಯಾಮಗಳಲ್ಲಿ ಹಂಗಿಸಲು ಆರಂಭಿಸುತ್ತದೆ. ಈ ಪಯಣವೇ … Read more

ಬದುಕೆಂದರೆ ಪೂರ್ಣತ್ವದ ಕಡೆಗೆ ಸಾಗುವುದ?: ಕೆ ಟಿ ಸೋಮಶೇಖರ ಹೊಳಲ್ಕೆರೆ

 ‌ " ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ " ಎಂದು ಗೋಪಾಲಕೃಷ್ಣ ಅಡಿಗರು ಹೇಳಿದ್ದಾರೆ. ಜೀವನ ಎಂದರೇನು ಎಂದು ಒಂದು ವ್ಯಾಖ್ಯೆಯಲ್ಲಿ ಹಿಡಿದಿಡುವುದು ಕಷ್ಟ. ಆದರೂ ಕೆಲವರು ಪ್ರಯತ್ನಿಸಿದ್ದಾರೆ ಅದು ಜೀವನವನ್ನೆಲ್ಲಾ ಒಂದೇ ವ್ಯಾಖ್ಯೆಯಲ್ಲಿ ಹಿಡಿದಿಟ್ಟಿದ್ದರೂ ಅವು ಪರಿಪೂರ್ಣ ಅನ್ನಿಸವು. ಏಕೆಂದರೆ ಜೀವನ ಹೇಗೆ ಬೇಕಾದರೂ ಇರಬಹುದು! ವಿಶಾಲವೂ ಆಗಬಹುದು, ಅತಿ ಕಿರಿದೂ ಆಗಬಹುದು! ಹಿಗ್ಗಿನ ಸುಗ್ಗಿಯಾಗಬಹುದು, ಬಿರು ಬಿಸಿಲ ಬೇಸಿಗೆಯಾಗಬಹುದು. ಕಷ್ಟಗಳ ಮಳೆಯಾಗಬಹುದು! ಸಾಧನೆಯ ಶಿಖರವೇ ಆಗಬಹುದು. ಭೂಮಿಯ ಮೇಲಿರುವವರಾರೂ ಪರಿಪೂರ್ಣರಲ್ಲ. ಹುಟ್ಟಿದ ಪ್ರಯುಕ್ತ … Read more

ಪಂಜು ಕಾವ್ಯಧಾರೆ

ಅಕ್ಕನ ವಿಭೂತಿ ರತ್ನದ ಸಂಕೋಲೆ ತೊರೆದು ಜಂಗಮರ ಜೋಳಿಗೆ ಹಿಡಿದು ಅಪರಮಿತಕತ್ತಲೊಳಗೆ ಬೆತ್ತಲೆಯಾಗಿ ಊರೂರು ಅಲೆದು  ಕಲ್ಯಾಣದ ಕಾಂತಾರದ ಖನಿಗೆ ಬಾಗಿದಾಗ  ಮೈ ಮುತ್ತಿದ ಆ ಕೇಶಲಂಕಾರಕ್ಕೆ ಶರಣೆಂದರೆ ಸಾಕೆ….? ಜೋಳಿಗೆಯಲಿ ಜೋತಾಡಿದ ಅನಲದ ಉಂಡೆಯಾಕಾರದ ಮುಖವಾಡ ಒಂದೊಂದು ರೀತಿಹವು ಅಂಗದ ಲಿಂಗಕ್ಕೆ ಕೈ ತೆತ್ತಾಗ ದಕ್ಕಿದ್ದು ಅವರಿಗೆ ಬೂದಿ ಅದು ಬರೀ ಬೂದಿಯೇ! ಅಲ್ಲ ಗಂಡರನ್ನು ಭಸ್ಮ ಮಾಡುವ  ಭಂಡಾರದ ಭಕ್ತಿಯ ವಿಭೂತಿ ಹಣೆ ತಟ್ಟಿ ಮನ ಮುಟ್ಟಿ ಮಡಿಮಡಿಯಾಗಿ ಎಡೆ ಎಲೆಯಲ್ಲಿ ಉರುಳಾಡಿದರು ? … Read more

ಯೇಸು ಶಿಲುಬೆಯಲ್ಲಿಲ್ಲ: ಧನು ಮಲ್ಪೆ

ಸಾರ್, ಸಾರ್ ಎಂಬ ಕೂಗಿಗೆ ಅವನು ಸಾವಧಾನವಾಗಿ ಅಷ್ಟೆ ನಿರ್ಲಕ್ಷ್ಯವಾಗಿ ತಿರುಗಿ ನೋಡಿದ. ರೈಲಿನ ಕಿಟಕಿಯಿಂದ ವೇಗವಾಗಿ ಚಲಿಸುತ್ತಿರುವಂತೆ ಭಾಸವಾಗುವ ನದಿ ಸೇತುವೆಗಳು, ಹಸಿರು ಸೀರೆಯನ್ನು ಹೊದ್ದು ಮಲಗಿದಂತೆ ಕಾಣುವ ಹೊಲ ಗದ್ದೆಗಳು, ಕಪ್ಪು ಚುಕ್ಕೆಗಳಂತೆ ಕಾಣುವ ದನ ಕರುಗಳನ್ನು ನೋಡುತ್ತಾ ಯಾವುದೋ ಆಲೋಚನೆಯಲ್ಲಿ ಮುಳುಗಿದ್ದವನಿಗೆ ಆ ಕೂಗಿನಿಂದ ಅಸಾಧ್ಯ ಸಿಟ್ಟು ಬಂತು. ತಿರುಗಿ ನೋಡಿದಾಗ ಗಂಟಿನ ಕೆಳಗೆ ಎರಡೂ ಕಾಲುಗಳಿಲ್ಲದ ಹೆಳವನೊಬ್ಬ ತಟ್ಟೆ ಹಿಡಿದು ದೈನ್ಯವಾಗಿ ಅವನನ್ನೇ ನೋಡುತ್ತಿದ್ದಾನೆ. ಕಳೆದ ಎರಡು ವರ್ಷಗಳಲ್ಲಿ ಇದು ಅವನಿಗೆ … Read more

ಜಾಣಸುದ್ದಿ 3: ಕೊಳ್ಳೇಗಾಲ ಶರ್ಮ 

ಈ ವಾರದ ಸಂಚಿಕೆಯಲ್ಲಿ ಕೊಳ್ಳೇಗಾಲ  ಶರ್ಮರವರ ಧ್ವನಿಯಲ್ಲಿರುವ ಈ ಆಡೀಯೊ ಕೇಳಲು ಈ ಕೆಳಗಿನ ಕೊಂಡಿಯ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಜಾಣ ಸುದ್ದಿ ಧ್ವನಿಮುದ್ರಿಕೆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ save as/ download ಆಪ್ಷನ್ ನಿಂದ ನಿಮ್ಮ ಮೊಬೈಲ್/ ಕಂಪ್ಯೂಟರ್ ಗೆ ಡೌನ್ ಲೋಡ್ ಮಾಡಿಕೊಳ್ಳಿ… ಇ ಮೇಲ್ ನಲ್ಲಿ ಅಥವಾ ವಾಟ್ಸ್ ಅಪ್ ನಲ್ಲಿ ಈ ಧ್ವನಿಮುದ್ರಿಕೆ ನಿಮಗೆ ಬೇಕು ಎಂದನಿಸಿದರೆ ನಿಮ್ಮ ಕೋರಿಕೆಯನ್ನು ನಮ್ಮ … Read more

ಹೆಣ್ಣೆಂದರೆ ಪ್ರೀತಿ, ನಂಬಿಕೆ, ಹೊಂದಾಣಿಕೆಯ ಅಮೋಘ ಶಕ್ತಿ: ವೇದಾವತಿ ಹೆಚ್. ಎಸ್.

ಅಮ್ಮ, ಮಗಳು, ಹೆಂಡತಿ ಮತ್ತು ಅತ್ತೆ ಈ ನಾಲ್ಕು ಒಂದು ಹೆಣ್ಣಿನ ಬಾಳಲ್ಲಿ ಸಹಜವಾಗಿಯೇ ನಡೆಯುವ ಕ್ರಿಯೆ. ಅದರೆ ವ್ಯತ್ಯಾಸ ಮಾತ್ರ ಬೆಟ್ಟದಷ್ಟು. ಅಮ್ಮ ಅಂದರೆ ಕರುಣಾಮಯಿ. ತನ್ನ ಮಕ್ಕಳ ಒಳತಿಗಾಗಿ ಮತ್ತು ಸಂಸಾರದ ಸುಖಕ್ಕಾಗಿ ಜೀವನದ ಜೊತೆ ಹಗಲು ಇರುಳು ಎನ್ನದೆ ದುಡಿದು ತನ್ನ ಕಷ್ಟಗಳು ಬೆಟ್ಟದಷ್ಟು ಇದ್ದರು ತೋರಿಸಿ ಕೊಳ್ಳದೆ ದುಡಿಯುವ ಮಹಾತಾಯಿ. ಮಕ್ಕಳೊಂದಿಗೆ ಮಕ್ಕಳಾಗಿ ಅವರ ಮನಸ್ಸುಗಳನ್ನು ಅರಿತು ಅವರ ಸುಖದುಃಖಗಳಲ್ಲಿ ಬಾಗಿಯಾಗಿ ತನ್ನ ಕಷ್ಟಗಳನ್ನು ಮನಸ್ಸಿನಲ್ಲಿ ನುಂಗಿ ಪ್ರೀತಿಯಿಂದ ಮಕ್ಕಳಿಗೆ ಸ್ಫಂದಿಸುವ … Read more

ಗರತಿ ಹಾಡುಗಳಲ್ಲಿ ಒಡಮೂಡಿದ ಸ್ತ್ರೀ ವೇದನೆಯ ಮುಖಗಳು: ನಾಗರೇಖಾ ಗಾಂವಕರ

  “ಹೆಣ್ಣಾಗಿ ಹುಟ್ಟೊಕ್ಕಿಂತ ಮಣ್ಣಾಗಿ ಹುಟ್ಟಿದರೆ ಮಣ್ಣಿನ್ಮೇಲೊಂದು ಮರವಾಗಿ ಹುಟ್ಟಿದರೆ ಪುಣ್ಯವಂತರಿಗೆ ನೆರಳಾಗಿ.” ಇದು ನಮ್ಮ ಜಾನಪದ ಗೀತೆಗಳಲ್ಲಿ ಬರುವ ಗರತಿಯ ಹಾಡಿನ ಒಂದು ತುಣುಕು.ಆಕೆ ಹೆಣ್ಣು.ಆಕೆಗೆ ಅದ್ಯಾಕೋ ಬದುಕು ಸಾಕಾಗಿದೆ. ಈ ಹೆಣ್ಣಿನ ಬದುಕಿನಲ್ಲಿ ಪುರುಷನ ಆತನ ಸಾಮಾಜಿಕ ನಿಲುವಿನ ಆಘಾತ ಚೇತರಿಸಿಕೊಳ್ಳಲಾಗದಂತಹ ನೋವು ನೀಡಿದೆ.ಅದಕ್ಕಾಗೆ ಆಕೆ ಮಣ್ಣಾಗಿ ಇಲ್ಲವೇ ಮರವಾಗಿ ಹುಟ್ಟಿದ್ದರೆ ಪುಣ್ಯವಂತರಿಗೆ ಆಸರೆಯಾಗಿ ನೆರಳಾಗಿ ಬದುಕಬಹುದಿತ್ತು.ಸ್ವಾರ್ಥ ರಹಿತಳಾದ ಆಕೆ ಇತರರಿಗೆ ನೆರಳಾಗಿಯೇ ತನ್ನ ಬದುಕಿನ ಸಾರ್ಥಕತೆಯನ್ನು ಬಿಂಬಿಸುತ್ತಾಳೆ.ಆದರೆ ಈ ಹೆಣ್ಣು ಜನ್ಮ ಎಷ್ಟು … Read more

ಮತ್ತೆ ಮಳೆಯಾಗಿದೆ: ಪ್ರಶಸ್ತಿ

ಮಳೆಗಾಲ ಮುಗೀತು. ಇನ್ನೇನು ಚಳಿಗಾಲ ಬರ್ಬೇಕಿತ್ತಲ್ಲ ಅಂತ ಕಾಯ್ತಾ ಇದ್ದವರಿಗೆ ಡಿಸೆಂಬರ್ ಐದಾದರೂ ಚಳಿಯ ದರ್ಶನವಾಗಿರಲಿಲ್ಲ. ಕಡಿಮೆಯೆಂದರೆ ಹದಿನೈದು , ಹೆಚ್ಚೆಂದರೆ ಇಪ್ಪತ್ತೈದು ಡಿಗ್ರಿಯಿರುತ್ತಿದ್ದ ದಿನಗಳಲ್ಲಿ ಗ್ಲಾಸ ಕಿಟಕಿಯ ಪಕ್ಕದಲ್ಲಿ ಕುಳಿತು ಕೆಲಸ ಮಾಡೋದೊಂತರ ಖುಷಿ. ಎದುರಿಗಿರೋ ಬೆಟ್ಟಗಳ ಮೇಲೆ ಕವಿಯುತ್ತಿದ್ದ ಮೋಡಗಳು, ಪಕ್ಕದ ಗಗನಚುಂಬಿಗಳ ನಡುವೆ ಕೂಕೆನ್ನುತ್ತಾ ಸಂಜೆ ಕಳೆಯೋ ಮುಳುಗುರವಿ, ಡಿಸೆಂಬರ್ ಬಂತೆಂದು ನೆನಪಿಸುತ್ತಾ ರಸ್ತೆಯಲ್ಲಿ ಆಗಾಗ ಕಾಣುವ ಮೆರವಣಿಗೆಗಳು ಕ್ರಿಸ್ ಮಸ್ ರಜೆ ಬರುತ್ತಿರೋ ಸೂಚನೆ ಕೊಡುತ್ತಿದ್ದವು. ಆಗಾಗ ಎದುರಿಗಿರೋ ಪರ್ವತಗಳನ್ನೇ ಮುಚ್ಚುವಂತಹ … Read more

ಮಕ್ಕಳಲ್ಲಿ ಹೆಚ್ಚುತ್ತಿರುವ ಒತ್ತಡ: ವೈ. ಬಿ. ಕಡಕೋಳ

"ಅಮ್ಮಾ ಇಂದು ನನಗೆ ಹೊಟ್ಟೆ ನೋಯುತಿದೆ. ಶಾಲೆಗೆ ಹೋಗಲಾರೆ”, ಮಹೇಶನಿಗೆ ಶಾಲೆಗೆ ಹೋಗದೇ ಇರಲು ಇಂಥ ನೆಪ ಹೊಸತೇನಲ್ಲ. ಆತ ಆಗಾಗ ತಲೆನೋವು, ಹೊಟ್ಟೆನೋವು, ಎನ್ನುತ್ತಲೇ ಇರುತ್ತಾನೆ. ಕೆಲ ಸಲ ವಾಂತಿಯಾಗುತ್ತದೆ ಎಂದು ಹೇಳಿ ವಾಂತಿ ಸಹ ಮಾಡುತ್ತಾನೆ. ಆತನ ತಂದೆ ತಾಯಿ ಇದು ಆತನ ಹಠಮಾರಿತನ ಎಂದು ಭಾವಿಸುತ್ತಾರೆ. ಆತನನ್ನು ಹೊಡೆದು ಬಡಿದು ಬೈದು ಹೇಗಾದರೂ ಮಾಡಿ ಆತನನ್ನು ಶಾಲೆಗೆ ಕಳುಹಿಸುತ್ತಾರೆ.     ಅವರೇನೋ ಆತನದು ಹಠಮಾರಿತನ ಎಂದು ಭಾವಿಸಿದ್ದಾರೆ ಆತ ನಿಜವಾಗಿಯೂ ಅನಾರೋಗ್ಯಕ್ಕೀಡಾಗಿದ್ದಾನೆ. ಆತನಿಗೆ ಶಾಲೆಯ … Read more

ಹಿಮಾಲಯವೆಂಬ ಸ್ವರ್ಗ (ಕೊನೆಯ ಭಾಗ): ವೃಂದಾ ಸಂಗಮ್

ಇಲ್ಲಿಯವರೆಗೆ ಮುಂದೆ ರಾಜಘಾಟ್ ಗೆ ತೆರಳಿದೆವು.  ದೆಹಲಿಯ ಸುಡು ಬಿಸಿಲಿಗೆ ನಾವಾಗಲೇ ಸುಸ್ತು ಹೊಡೆದಿದ್ದೆವು. ಹೆಚ್ಚಿನವರು ಗಾಡಿಯಲ್ಲಿಯೇ ಕುಳಿತಿದ್ದರು. ಮಹಾತ್ಮ ಗಾಂಧಿಯವರ ಸಮಾಧಿಯ ಮುಂದೆ ನಿಂತಾಗ ನನಗರಿವಿಲ್ಲದೆಯೇ ತ್ಯಾಗ, ಬಲಿದಾನಗಳ ನಮ್ಮ ಸ್ವಾತಂತ್ರ್ಯ ಚಳುವಳಿಯ ಹರಿಕಾರ ಗಾಂಧೀಜಿ. ಅಹಿಂಸೆ, ಸತ್ಯ ಎಂಬ ಎರಡು ಪ್ರಬಲವಾದ  ಅಸ್ತ್ರಗಳಿಂದ   ಬ್ರಿಟಿಷ್ ಸಾಮ್ರಾಜ್ಯವನ್ನು ಬಗ್ಗಿಸಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟ ಮಹಾಚೇತನ. ಅಲ್ಲಿ ನಿಂತಾಗ ಮೂಡಿದ್ದು ಧನ್ಯತೆಯ ಕುಸುಮಗಳು – ಕಣ್ಣಲ್ಲಿ ಎರಡು ಹನಿಗಳು. ಹಿಂದಿರುಗುವಾಗ, ದಾರಿಯಲ್ಲಿ ಕಂಡು ಬಂದದ್ದು ಕಿಸಾನ್ ಘಾಟ್, … Read more

ಮಾಂಸಾಹಾರ ತಪ್ಪೆಂದರೆ ಸಸ್ಯಾಹಾರ ಸರಿ! ಹೇಗೆ?: ಕೆ ಟಿ ಸೋಮಶೇಖರ ಹೊಳಲ್ಕೆರೆ

ಮಂಗನಿಂದ ಮಾನವ ಎಂದು ಹೇಳುತ್ತೇವೆ. ಯಾವುದೋ ಕಾಲಘಟ್ಟದಲ್ಲಿ ಮಂಗ ಮಾನವನಾಗಿ ಬದಲಾದ ಎಂದು ಡಾರ್ವಿನ್ ವಿಕಾಸವಾದ ಹೇಳುತ್ತದೆ. ಮಂಗನೋ ಗೋರಿಲ್ಲಾನೋ ಚಿಂಪಾಂಜಿಯೋ ವಿಕಾಸ ಹೊಂದಿ ಮಾನವನಾಗಿ ಬದಲಾದ ಎಂಬುದನ್ನು ಎಲ್ಲರೂ ಓದಿದ್ದೇವೆ. ಈಗ ಇರುವ ಮಂಗ, ಗೊರಿಲ್ಲ , ಚಿಂಪಾಂಜಿಗಳು ಯಾವಾಗ ಮಾನವರಾಗುತ್ತವೆ? ಯಾಕೆ ಇನ್ನೂ ಮಾನವರಾಗಿಲ್ಲ? ಎಂದು ಕೆಲವರು ಪ್ರಶ್ನಿಸುತ್ತಾರೆ. ಈ ಪ್ರಶ್ನೆಗಳು ಮೇಲುನೋಟಕ್ಕೆ ಕಿಡಿಗೇಡಿಗಳ ಪ್ರಶ್ನೆಗಳೆನಿಸಿದರೂ ಒಮ್ಮೆ ಹೌದಲ್ಲಾ! ಈ ಮಂಗಗಳೆಲ್ಲ ಯಾವಾಗ ಮಾನವರಾಗಿ ಬದಲಾಗುತ್ತವೆ? ಯಾಕೆ ಇನ್ನೂ ಮಾನವರಾಗಿ ಬದಲಾಗಿಲ್ಲ? ಎಂಬ ಪ್ರಶ್ನೆ … Read more

ಪಂಜು ಕಾವ್ಯಧಾರೆ

೧. ಕೂರೂಪಿ……. ದಾನ ಪಡೆದೆ ಜೀವವ, ನನ್ನ ಶಿಲ್ಪಿ ನಾನಲ್ಲ… ಕರಿ ಬೆಕ್ಕೆಂದು ತಳ್ಳದಿರಿ, ನಾ ನಡೆದ ಹಾದಿ ಅಪಶಕುನವಲ್ಲ… ವರ್ಣವಿರಬೊಹುದೇನೋ ಕಡುಗಪ್ಪು, ಕರಿ ಬಂಡೆಯಂತೆ ನನ್ನ ಮನಸಿಲ್ಲ…. ತೊಗಲ ಬಣ್ಣ ಕಪ್ಪಾದ ಮಾತ್ರಕ್ಕೆ , ನಾ ಬರೆದ ಪದಗಳು ಕವನಗಳಾಗಲಿಲ್ಲ… ನನ್ನ ಭಾವನೆಗಳಿಗೂ ಮಳೆಬಿಲ್ಲಿನ ರಂಗಿದೆ, ಹಾಲ್ಗೆನ್ನೆಯವಳ/ವನ ಪದ್ಯದ ಮರೆಯಲ್ಲಿ ನಿಮಗದು ಕಾಣಲಿಲ್ಲ… ಗೀಚಿದಷ್ಟೂ ಕುಳಿತಿದೆ ಮೂಲೆಯಲ್ಲಿ ಸಾಲುಗಳೆಲ್ಲವು, ರೂಪವಂತರ ಹಸಿ ಕಾಳುಗಳೂ ನಿಮಗೆ ಬೆಂದಂತೆ,ನಾ ಬರೆದುದಕ್ಕೆ ಮಾತ್ರ ಪಕ್ವತೆಯಿಲ್ಲ… ಸಹಿಸುವೆ ಇಂದೂ ಎಂದೂ ಕೊನೆವರೆಗೂ, … Read more

ಜಾಣಸುದ್ದಿ 2: ಕೊಳ್ಳೇಗಾಲ ಶರ್ಮ, ಮಂಜುನಾಥ ಕೊಳ್ಳೇಗಾಲ

 ಈ ವಾರದ ಸಂಚಿಕೆಯಲ್ಲಿ ಮಂಜುನಾಥ ಕೊಳ್ಳೇಗಾಲರವರ ಧ್ವನಿಯಲ್ಲಿರುವ ಈ ಆಡೀಯೊ ಕೇಳಲು ಈ ಕೆಳಗಿನ ಕೊಂಡಿಯ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಜಾಣ ಸುದ್ದಿ ಧ್ವನಿಮುದ್ರಿಕೆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ save as/ download ಆಪ್ಷನ್ ನಿಂದ ನಿಮ್ಮ ಮೊಬೈಲ್/ ಕಂಪ್ಯೂಟರ್ ಗೆ ಡೌನ್ ಲೋಡ್ ಮಾಡಿಕೊಳ್ಳಿ… ಇ ಮೇಲ್ ನಲ್ಲಿ ಅಥವಾ ವಾಟ್ಸ್ ಅಪ್ ನಲ್ಲಿ ಈ ಧ್ವನಿಮುದ್ರಿಕೆ ನಿಮಗೆ ಬೇಕು ಎಂದನಿಸಿದರೆ ನಿಮ್ಮ ಕೋರಿಕೆಯನ್ನು ನಮ್ಮ … Read more

ಹಸಿದವರು: ಪ್ರವೀಣಕುಮಾರ್. ಗೋಣಿ

ಒಲೆಯ ಮೇಲೆ ಇಟ್ಟ ಅನ್ನ ಉಕ್ಕಿ ಗಂಜಿ ಎಲ್ಲ ಪಾತೆಲಿಯ ಮೈತುಂಬ ಇಳಿದು ಉರಿಯುತ್ತಿದ್ದ ಬೆಂಕಿಯನ್ನ ಚರ ಚರನೇ ಆರಿಸುತ್ತಲಿತ್ತು.  ಮಿಣುಕು ದೀಪದ ಮುಂದೆ ಓದುತ್ತ ಕುಳಿತಿದ್ದ ಮಗನನ್ನೇ ಬೆರಗು ಕಣ್ಣಿಂದ ನೋಡುತ್ತಾ ಕುಳಿತಿದ್ದ ಯಲ್ಲಿ ಎದ್ದು ಓಡಿ ಹೋಗಿ ಪಾತ್ರೆಯ ಮೇಲಿನ ಮುಚ್ಚಳಿಕೆಯನ್ನ ಆಚೆ ನೂಕಿದಳು.  ಏಳು ಮಗಾ ವೇಳ್ಯಾ ಬಾಳ್ ಆಯ್ತು ಅನ್ನಾನು ಆಗೆದೆ ಉಂಡು ಒದ್ತಾ ಕೂಡುವೆಂತೆ ಅಂತಾ ರಾತ್ರಿ ಊಟಕ್ಕೆ ಗಂಗಾಳ ಇಟ್ಲು.  ತೇಲಿ ಬರುತ್ತಿದ್ದ ನಿದ್ದೆಯನ್ನ ಸರಿಸಿ ಪರಮ ಚಕ್ಕಳುಮುಕ್ಕಳು … Read more

ಸಾಫ್ಟ್ ವೇರ್ ಹೆಂಡತಿಯ ನೋವು ನಲಿವು: ವೇದಾವತಿ ಹೆಚ್. ಎಸ್. 

ಮದುವೆಯಾಗಿ ಇಪ್ಪತ್ತು ವರ್ಷಗಳು ಕಳೆದು ಹೋದವು. ಇಪ್ಪತ್ತು ವರ್ಷಗಳಲ್ಲಿ ಸಂತೋಷ ದುಃಖ ಎರಡೂ ಹೇಗೆ ಬಂದವು ಹಾಗೆ ಕಳೆದು ಹೋದವು. ಹಳೆಯ ದಿನ ಪುನಃ ಮರಳಿ ಬರುತ್ತಿದ್ದರೆ…ಜೀವನದಲ್ಲಿ ತಪ್ಪುಗಳನ್ನು ತಿದ್ದಿ ಇನ್ನೂ ಚನ್ನಾಗಿ ಬದುಕಿನ ಸಂತೋಷ ಅನುಭವಿಸಬಹುದಿತ್ತು. ದೇವರು ಎಲ್ಲಾರಿಗೂ ಸುಖ ಸಂತೋಷ ಕೊಟ್ಟ ಹಾಗೆ ತನಗೂ ಸಹ ಕೊಟ್ಟಿದ್ದಾನೆ. ತನ್ನ ಕಷ್ಟ ಬೇರೆಯವರ ಕಷ್ಟಕ್ಕಿಂತ ಬೇರೆ ರೀತಿಯಲ್ಲಿ ಇರಬಹುದು ಅಷ್ಟೆ.           ದೇವಿಕಗೆ ಹಳೆಯ ದಿನಗಳ ನೆನಪುಗಳು ತುಂಬಾನೆ ಮನಸ್ಸಿಗೆ ಬರುತ್ತಿದ್ದವು. … Read more

ಸೀಕ್ರೆಟ್ ಡೈರಿ: ಪ್ರಸಾದ್ ಕೆ.

ಕೊಡಚಾದ್ರಿಯ ಎತ್ತರ. ತಣ್ಣನೆ ಗಾಳಿ. ಹಾಗೆ ಸುಮ್ಮನೆ ತಲೆಯ ಒಂದಿಷ್ಟು ಮೇಲಿನಿಂದ ಹಾದುಹೋಗುತ್ತಿರುವ ಮೋಡಗಳ ಚಪ್ಪರ. ಇನ್ನೇನು ಒಂದು ಲಾಗ ಹಾಕಿದರೆ ಹಿಡಿಯಷ್ಟು ಮೋಡವನ್ನು ಬಾಚಿ ಜೇಬಿನಲ್ಲಿಡಬಹುದು ಎಂಬಂತೆ. ಮುಳುಗುತ್ತಿದ್ದ ಸೂರ್ಯ ಕಿತ್ತಳೆಯಂತೆ, ಕೆಂಡದ ಪಾಕದಲ್ಲದ್ದಿದ ನಾಣ್ಯದಂತೆ ಕಾಣುತ್ತಿದ್ದ. ಆದರೆ ಅವನ ವೃತ್ತಾಕಾರದ ಅಂಚುಗಳೋ ಕೈವಾರದಿಂದ ವೃತ್ತ ಕೊರೆದಷ್ಟು ಹರಿತ, ಅಷ್ಟು ಪರಿಪೂರ್ಣತೆ. ಅಷ್ಟು ಎತ್ತರದಲ್ಲಿ ಅವರಿಬ್ಬರೂ ಅಂದು ಇದ್ದರು. ಅವನು ಮತ್ತು ಅವಳು.  ಕಳೆದೆರಡು ದಿನಗಳಿಂದ ಪರ್ವತವನ್ನು ಹತ್ತಿ, ಅಲ್ಲಲ್ಲಿ ನಿಂತು, ಅಲ್ಲಿಲ್ಲಿ ನಿದ್ದೆ ಹೊಡೆದು … Read more

ಮಹಾವಲಸೆ: ಪ್ರಶಸ್ತಿ

  ಚಳಿಗಾಲ ಬಂತಂದ್ರೆ ಮನೆಯಿಂದ ಹೊರಗೆ ಹೊರಡೋಕೆ ಮನಸ್ಸಾಗಲ್ಲ. ಹೊರಗಡೆ ಚುಮುಚುಮು ಚಳಿ ಕೊರಿತಾ ಇರುವಾಗ  ಮನೆಯೊಳಗೆ ಬೆಚ್ಚಗೆ ಹೊದ್ದು ಕೂತು ಬಿಸಿ ಬಿಸಿ ಬಜ್ಜಿಯೋ, ಬೋಂಡಾವೋ ತಿನ್ನುತ್ತಾ ಚಹಾ ಹೀರೋ ಸವಿಯಿದ್ಯಲ್ಲಾ ? ಆಹಾ. ಬಾಳೇಕಾಯಿ ಚಿಪ್ಸೋ, ಹಲಸಿನ ಕಾಯಿ ಚಿಪ್ಸೋ ಸಿಕ್ಕಿಬಿಟ್ಟರೆ ಅದೇ ಸ್ವರ್ಗ. ನಮ್ಮಲ್ಲಿನ ಚಳಿಯೆಂದರೆ ಎಷ್ಟಿದ್ದೀತು ? ಅಬ್ಬಬ್ಬಾ ಅಂದರೆ ಹದಿನೈದು ಡಿಗ್ರಿಯವರೆಗೆ ಇಳಿಯಬಹುದೇನೋ ? ಆದರೆ ಆ ಚಳಿ ಹಾಗೇ ಹತ್ತಕ್ಕಿಂತಲೂ ಕಡಿಮೆಯಾಗುತ್ತಾ ಹೋದರೆ ? ರಾತ್ರಿ ಹೋಗಲಿ, ಹಗಲಲ್ಲೂ … Read more

ದೇವರಂಥವರಿವರು: ಪ್ರೇಮಾ ಟಿ ಎಮ್ ಆರ್

"ನೀನು ದೇವರನ್ನು ನೋಡಿದ್ದೀಯಾ?" ಮುಸ್ಸಂಜೆ ಜಗುಲಿ ಕಟ್ಟೆಮೇಲೆ  ಕೂತು ಹರಟುವಾಗೆಲ್ಲ ಈ ಥರ ತರ್ಲೆ ಪ್ರಶ್ನೆಗಳನ್ನು ಎಸೆದು ನನ್ನೊಳಗಿನ ಗಡಿಬಿಡಿಯನ್ನ ನೋಡುತ್ತ ಕೂಡ್ರುವದು  ಗೆಳತಿ ವೀಣಾಳ ಅಭ್ಯಾಸ.  ನಾನು ತಡಮಾಡದೇ ಹೂಂ ಎಂದೆ.  ನನ್ನ ಹೂಂ ಎಂಬ ಉತ್ತರಕ್ಕೆ ನಾನೇ ಗಲಿಬಿಲಗೊಂಡಿದ್ದೆ. ನನ್ನ ಹೂಂ ಗೆ ಉತ್ತರ ಹುಡುಕುತ್ತ ನನ್ನೊಳಗೆ ನಾನೇ ಹಿಮ್ಮುಖವಾದೆ. ಈಗ ನಾನೋಡಿದ ದೇವರನ್ನು ಹುಡುಕಬೇಕಿತ್ತು ನನ್ನೊಳಗೆ.  ಕೆಲ ತಿಂಗಳುಗಳ ಹಿಂದೆ ಒಂದು ಸಾಂಸ್ಕ್ರತಿಕ ಕಾರ್ಯಕ್ರಮಕ್ಕೆ ನಿರೂಪಕಿಯಾಗಿ ಹೋಗಿದ್ದೆ. ಪ್ರತಿಷ್ಠಿತ ಶಿಕ್ಷಣಸಂಸ್ಥೆಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮ. … Read more

ಹಿಮಾಲಯವೆಂಬ ಸ್ವರ್ಗ (ಭಾಗ 9): ವೃಂದಾ ಸಂಗಮ್

ಇಲ್ಲಿಯವರೆಗೆ ಮಥುರ ಶ್ರೀಕೃಷ್ಣನ ಜನ್ಮಸ್ಥಾನ. ಈ ಪ್ರದೇಶವನ್ನು ಬ್ರಜ್‌ಭೂಮಿ ಎಂದು ಕರೆಯುತ್ತಾರೆ. ಶ್ರೀಕೃಷ್ಣನ ಕಥೆಗಳು ಹಾಗು ಸ್ಥಳ ಪುರಾಣಗಳ ಬಗ್ಗೆಯೂ ನಾನೇನೇ ಹೇಳಿದರು ಅದು ಸಂಪೂರ್ಣವಾಗಲು ಸಾಧ್ಯವಿಲ್ಲ. ಮನುವಿನ ಮೊಮ್ಮಗ ಧ್ರುವ ತನ್ನ ತಾಯಿಯ ಸವತಿ ಸುರುಚಿ ಕೊಡುತ್ತಿದ್ದ ಹಿಂಸೆ ಅನುಭವಿಸುತ್ತಿದ್ದಾಗ ನಾರದರ ಉಪದೇಶದಂತೆ ಮಧುವನದಲ್ಲಿ ತಪಸ್ಸನ್ನು ಆಚರಿಸುತ್ತಾನೆ. ಇಲ್ಲಿ ನಿತ್ಯ ಹರಿಸಾನ್ನಿಧ್ಯವಿದೆ ಎಂದು ನಾರದರು ಧ್ರುವನಿಗೆ ತಿಳಿಸುತ್ತಾರೆ. "ಪುಣ್ಯಂ ಮಧುವನಂ ಯತ್ರ ಸಾನ್ನಿಧ್ಯಂ ನಿತ್ಯದಾ ಹರಿಃ ". ಮುಂದೆ ಮಧು ಎಂಬ ರಾಕ್ಷಸ ಇಲ್ಲಿ ಮಧುರಾ … Read more