ಪಂಜು ಕಾವ್ಯಧಾರೆ
ಋಣಿಯಾಗಿರು ಹೆತ್ತವಳು ಹಣ್ಣಣ್ಣು ಬದುಕಿಯಾದಾಗಅಕ್ಕರೆಯಿಂದಿರು ಸಾಕು…ಹಾಲುಣಿಸಿ ಋಣ ತೀರಿಸುವುದು ಬೇಕಿಲ್ಲ. ಹೆತ್ತವಳು ಮುಪ್ಪಾಗಿ ಹೊಟ್ಟೆ ಹಸಿದಾಗಚೂರು ಅನ್ನವನಿಡು ಸಾಕು….ತುತ್ತುಣಿಸಿ ಋಣ ತೀರಿಸುವುದು ಬೇಕಿಲ್ಲ. ಹೆತ್ತವಳ ಕೈ ಕಾಲಿಗೆ ಶಕ್ತಿ ಇಲ್ಲದಿದ್ದಾಗಕೈಕೋಲು ಕೊಡು ಸಾಕು…..ಬೆರಳಿಡಿದು ನಡೆಸಿ ಋಣ ತೀರಿಸುವುದು ಬೇಕಿಲ್ಲ. ಹೆತ್ತವಳು ದುಃಖದ ಕಣ್ಣೀರಿಡುವಾಗಅವಳ ಕಣ್ಣೆದುರಿರು ಸಾಕು….ಚಂದ್ರನ ತೋರಿಸಿ ಋಣ ತೀರಿಸುವುದು ಬೇಕಿಲ್ಲ. ಹೆತ್ತವಳು ವೃದ್ದೆಯಾಗಿ ಹಾಸಿಗೆ ಹಿಡಿದಾಗಚಾಪೆ ಚಾದರ ನೆಲಕಾಸು ಸಾಕು….ಜೋಗುಳದೊಳು ಮಲಗಿಸಿ ಋಣ ತೀರಿಸುವುದು ಬೇಕಿಲ್ಲ. -ಮೈನು ಐ.ಬಿ.ಎಮ್ ಬಾಳುತಿರು ನಶ್ವರದ ಜೀವನದಲಿ ನನ್ನದು ನನ್ನದೆಂದುನಾಚಿಕೆ … Read more