ಹಂಪೆಯ ಪಳುಯುಳಿಕೆಗಳು, ಪ್ರೇಯಸಿ ಮತ್ತು ನನ್ನ ಹೆಂಡತಿ: ಧೀರೇಂದ್ರ ನಾಗರಹಳ್ಳಿ

ಹಲೋ ಹನಿ , ಬೆಳಿಗ್ಗೇನೆ ವಿಡಿಯೋ ಕಾಲ್ ಮಾಡಿ ಆಗಿದೆ ಮತ್ತೇನು ಈ ‘ಅಕ್ಷರಗಳು ‘ ಅಂತ ಆಶ್ಚರ್ಯ ಆಗಬಹುದು. ಈ ಮೇಲಿಗೆ ಒಂದು ಕಾರಣವಿದೆ. ಈ ವಾರಾಂತ್ಯದಲ್ಲಿ ಬಿ. ಬಿ. ಸಿಯ ಹಂಪೆಯ ಬಗ್ಗೆ ಒಂದು ಡಾಕುಮೆಂಟರಿಯನ್ನು ನೋಡಿದೆ. ವಿಜಯನಗರ ಸಾಮ್ರಜ್ಯದ ವಿವರಗಳನ್ನು ಕಟ್ಟಿ ಕೊಟ್ಟರು. ಹಾಗೆಯೇ ಬಹಮನಿ ಸುಲ್ತಾನರಿಂದ ನಾಶವಾದ ಹಂಪೆಯ ವಿವರವನ್ನು ಕೊಡಲಾಯಿತು. ಹಂಪೆಯ ನಾಶದ ವಿಷಯವನ್ನು ತೋರಿಸುವಾಗಲಂತೂ – ನಾನು ನಿಜವಾಗಿಯೂ ಸತ್ತೆ ಹೋದೆ. ಆ ಸಾಲು ಸಾಲು ಮುರಿದು ಹೋದ … Read more

ಪರೀಕ್ಷೆಯಲ್ಲಿ ಪಾಸಾದವರೊಂದಿಗೆ ಫೇಲಾದವರೂ ಉತ್ತಮ ಸಾಧಕರು…: ವೀರಣ್ಣ ಮಂಠಾಳಕರ್, ಬಸವಕಲ್ಯಾಣ

ಪರೀಕ್ಷೆಯ ಫಲಿತಾಂಶ ಬಂದ ತಕ್ಷಣ ಅದೇಷ್ಟೋ ವಿದ್ಯಾರ್ಥಿಗಳು ಮಾರ್ಕ್ಸ್ ಕಡಿಮೆ ಬಂತು/ ಫೇಲಾದೆ ಎಂಬ ಕಾರಣಕ್ಕೆ ಮಾನಸಿಕ ಸ್ಥೈರ್ಯವನ್ನು ಕಳೆದುಕೊಳ್ಳದೇ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಬೇಕು. ಪಾಸಾದವರು, ರ್ಯಾಂಕ್ ಪಡೆದವರಷ್ಟೇ ಪ್ರತಿಭಾವಂತರಲ್ಲ. ನೆನಪಿರಲಿ ಫೇಲಾದವರೂ ಜೀವನದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ನೆನಪಿಸಿಕೊಂಡು, ಮುಂದಿನ ಗುರಿ-ಛಲದೊಂದಿಗೆ ಮುನ್ನುಗ್ಗಬೇಕು. ಜೀವನ ಮತ್ತು ಸಾಧನೆಗೆ ಶಿಕ್ಷಣವೊಂದೇ ಮುಖ್ಯವಲ್ಲ. ಕನಿಷ್ಠ ಓದು ಬರಹ ಕಲಿತವರೆಷ್ಟೋ ಶೈಕ್ಷಣಿಕ ವಿದ್ಯಾಭ್ಯಾಸದಲ್ಲಿ ಉತ್ತಮ ಬರಹಗಾರರಾಗಿ ರಾಜ್ಯ/ರಾಷ್ಟ್ರ ಮಟ್ಟದಲ್ಲಿ ಹೆಸರಾಗಿದ್ದಾರೆ. ಸಾಮಾಜಿಕ ಚಿಂತಕರಾಗಿ, ಪತ್ರಕರ್ತರಾಗಿ, ಪತ್ರಿಕಾ ಸಂಪಾದಕರಾಗಿ, ಹೋರಾಟಗಾರರಾಗಿ ಒಳ್ಳೆಯ … Read more

ಶಿಶು ಗೀತೆ: ದೇವರಾಜ್ ನಿಸರ್ಗತನಯ, ನಾಗರಾಜನಾಯಕ ಡಿ.ಡೊಳ್ಳಿನ

ರಜೆಯ ಮಜ… ಬೇಸಿಗೆ ರಜೆಯಲು ಪಾಠವಂತೆ ಯಾರಿಗೆ ಬೇಕಮ್ಮಾ ? ಅಜ್ಜಿಯ ಮನೆಯಲಿ ಆಡಿ ನಲಿವೆ ಊರಿಗೆ ಕಳಿಸಮ್ಮಾ..!! ಹತ್ತು ತಿಂಗಳು ಶಾಲೆಯ ಕಾಟ ಸಾಲದು ಏನಮ್ಮಾ ? ಎರಡು ತಿಂಗಳು ನಮ್ಮಯ ಆಟ ಆಡಲು ಬಿಡಿರಮ್ಮಾ..!! ಗೆಳೆಯರ ಜೊತೆಗೆ ಜೋಕಾಲಿಯಾಟ ಆಡುವೆ ಕಾಣಮ್ಮಾ ! ಹೊಂಗೆಯ ನೆರಳಲಿ ದುಂಬಿಯ ನಾನು ನೋಡಿ ನಲಿವೆನಮ್ಮಾ..!! ದನಕರುಗಳಾ ಜೊತೆ ಕಾಡು ಮೇಡನು ಅಲೆದು ಬರುವೆನಮ್ಮಾ ! ಹಳ್ಳಿಯ ಸೊಭಗ ಪ್ರಕೃತಿ ಸವಿಯ ಸವಿದು ಬರುವೆನಮ್ಮಾ..!! ಅಜ್ಜಿಯ ಜೊತೆಗೆ ಪ್ಯಾಟೆಯ … Read more

ಸಾಂಸ್ಕೃತಿಕ ವೀರ ಮೈಲಾರಲಿಂಗ ಪುಸ್ತಕ ವಿಮರ್ಶೆ: ಪ.ನಾ.ಹಳ್ಳಿ.ಹರೀಶ್ ಕುಮಾರ್

ಪುಸ್ತಕ ವಿಮರ್ಶೆ ಪುಸ್ತಕದ ಶೀರ್ಷಿಕೆ;- ಸಾಂಸ್ಕೃತಿಕ ವೀರ ಮೈಲಾರಲಿಂಗ ಲೇಖಕರು:- ಡಾ.ಚಿಕ್ಕಣ್ಣ ಯಣ್ಣೆಕಟ್ಟೆ. ಪ್ರಕಾಶನ:- ಗಡಿನಾಡ ಜಾನಪದ ಸಂಪರ್ಕಾಧ್ಯಯನ ಕೇಂದ್ರ ಪ್ರತಿಷ್ಠಾನ. ಕಾಳಿದಾಸ ನಗರ. ಸಿರಾ. ತುಮಕೂರು ಜಿಲ್ಲೆ. ಬೆಲೆ:- 150ರೂ ಪ್ರಥಮ ಮುದ್ರಣ: 2019 ಪುಟಗಳು: 214 ಡಾ.ಚಿಕ್ಕಣ್ಣ ಯಣ್ಣೆಕಟ್ಟೆ ವಿರಚಿತ ಸಾಂಸ್ಕೃತಿಕ ವೀರ ಮೈಲಾರಲಿಂಗ ಕೃತಿಯು ಕ್ಷೇತ್ರ ಕಾರ್ಯಾಧಾರಿತ ಅಧ್ಯಯನದಿಂದ ಸಂಗ್ರಹಿಸಿದ ಪ್ರತ್ಯಕ್ಷ ಸಾಕ್ಷಿಯಾಧಾರಿತ ಮಾಹಿತಿಗಳನ್ನೊಳಗೊಂಡ ರಚನೆಯಾಗಿದ್ದು ನಾಡಿನ ಸಾಂಸ್ಕೃತಿಕ ಹಾಗೂ ಜನಪದ ದೈವ ಮೈಲಾರಲಿಂಗಪ್ಪನ ಐತಿಹ್ಯ ಕುರಿತಾದ ಸಂಪೂರ್ಣ ಚಿತ್ರಣವನ್ನು ಓದುಗರಿಗೆ ಕಟ್ಟಿಕೊಡುವಲ್ಲಿ … Read more

ಪಂಜು ಕಾವ್ಯಧಾರೆ

ಇನ್ನಾದರೂ ತುಸು ಹೊತ್ತು ಖುಷಿಯಿಂದ ಉಳಿದುಬಿಡುತ್ತೇನೆ ಬದುಕಿಗೆ ಬೇಸರ ಬರುವಷ್ಟು .. ಈ ಬದುಕು ಸುರುವಿದ ಅಸಂಖ್ಯ ಅವಕಾಶಗಳ ಎಣಿಸುತ್ತಾ ಕೂತು ಕಳೆದಿದ್ದೇನೆ ಹೀಗೆ ಬಳಸಿಕೊಳ್ಳೋದ ಮರೆತು ಪ್ರತಿ ಖುಷಿಯ ಹಿಂದೊಂದು ಮುಗಿಯದ ಖಾಲಿತನವನ್ನು ಸುಮ್ಮನೇ ಉಳಿಸಿಕೊಂಡಿದ್ದೇನೆ ನನ್ನಂಥ ಕಡುಮೌನಿಯೂ ನಿನ್ನ ಮಾತಿಗೆ ಹಪಹಪಿಸಲು ಶುರುವಿಡುವ ಈ ಹೊತ್ತು ಇಲ್ಲೇ ಸ್ತಬ್ಧವಾಗಲಿ ಬಿಡು ಮಾತು ಮೀರಿದ ಘಳಿಗೆ ಎದುರಿಗಿದ್ದಾಗ … ಬೆರಳ್ಹಿಡಿದು ನಡೆಸಿದ ಕಾಲುಹಾದಿಯ ಬದುಕು ಜಾರಿಸಲು ಶುರುವಿಟ್ಟು ನಗುತಾ ನಿಂತ ಸಮಯ ಬೇಕೆನಿಸಿದೆ ನಿನ್ನ ಸಾಂಗತ್ಯ … Read more

ಪ್ರಬುದ್ಧ ಸಾಹಿತಿ –ಡಾ.ಸರಜೂ ಕಾಟ್ಕರ್: ನಾಗರೇಖಾ ಗಾಂವಕರ

ಪತ್ರಕರ್ತನೊಬ್ಬನ ವೃತ್ತಿ ಬದುಕಿನ ಹಾದಿ ಸಂಘರ್ಷಗಳ ಕಲ್ಲುಚಪ್ಪಡಿ ಎಂಬುದನ್ನು ಯಾರೂ ಅಲ್ಲಗಳಿಯುವಂತಿಲ್ಲ. ಎಡತಾಕುವ ವಿಘ್ನಗಳು ಹತ್ತು ಹಲವು. ಬೆದರಿಕೆಗಳ ಹೊದಿಕೆಯೊಳಗೆ ಜೀವವನ್ನು ಕೈಲಿಟ್ಟುಕೊಂಡೇ ಲೋಕದ ಡೊಂಕನ್ನು ಜಗತ್ತಿನ ಕಣ್ಣುಗಳಿಗೆ ರವಾನಿಸಬೇಕಾದ ಅದರಲ್ಲೂ ಸತ್ಯದ ಸೂಡಿ ಹಿಡಿದೇ ನಡೆಯಬೇಕಾದ ಅನಿವಾರ್ಯತೆ ಆತನದು. ಆತನ ವೃತ್ತಿಕ್ಷಮತೆ ಪ್ರಾಮಾಣಿಕವಾಗಿದ್ದಷ್ಟೂ ಆತನ ವೃತ್ತಿ ಶತ್ರುಗಳು, ಹಿತ ಶತ್ರುಗಳು ಹುಟ್ಟಿಕೊಳ್ಳುತ್ತಲೇ ಇರುವರು. ಅಂತಹ ಸಂದಿಗ್ಧ ಜಗತ್ತಿನಲ್ಲಿ ದಿಟ್ಟತನಕ್ಕೆ ಹೆಸರಾದ, ಆಮಿಷಗಳಿಗೆ ಬಲಿಯಾಗದೇ, ಬೆದರಿಕೆಗಳಿಗೆ ಅಂಜದೇ ಕಾರ್ಯನಿರ್ವಹಿಸಿದ ಪತ್ರಕರ್ತ ಡಾ. ಸರಜೂ ಕಾಟ್ಕರ್. ಒಬ್ಬ ಪತ್ರಕರ್ತನಲ್ಲಿ … Read more

ಜೈನಾಬಿ, ರೋಸ್ ಮೇರಿ, ಮತ್ತು ಮಾಯಾ ಬಾರ್:  ವಸುಧಾ ಪ್ರಭು

ಟಕ್-ಟಕ್-ಟಕ್ ಮಾಯಾ ಬಾರಿನ ಮೇಲೆ ನಿನ್ನೆ ಮುನ್ಸಿಪಾಲಿಟಿಯವರು ಮಾಡಿದ ದಾಳಿಯಿಂದಾಗಿ ಎಂದಿಗಿಂತ ಒಂದೂವರೆ ಗಂಟೆಯ ಮೊದಲೇ ಫ್ಲ್ಯಾಟಿಗೆ ಬಂದರೆ, ನೆರೆಯ ಫ್ಲ್ಯಾಟ್ ನಲ್ಲಿರುವ ಅಮ್ಮಿ ಬಾಗಿಲು ಬಡಿದಾಗಲೇ ಜೈನಾಬಿಗೆ ಎಚ್ಚರವಾಯಿತು. ಕಣ್ಣು ಸರಿಯಾಗಿ ಬಿಡುತಿದ್ದಂತೆಯೇ ಎದ್ದು ಮೊದಲು ಬಚ್ಚಲಿಗೆ ಧಾವಿಸಿದಳು. ಒಂದರ ಮೇಲೊಂದು ಬಾಲ್ದಿ ಇಟ್ಟಂತೆ ಬಾಲ್ದಿಯನ್ನು ನಲ್ಲಿ ಕೆಳಗೆ ನೀರು ತುಂಬಲು ಇಟ್ಟು ಟೂತ್ ಪೇಸ್ಟ್ ಬ್ರಶ್ ಹಿಡಿದು ಹಲ್ಲುಜ್ಜತೊಡಗಿದಳು. ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ನಾಲ್ಕನೇ ಅಂತಸ್ತಿನಲ್ಲಿರುವ ಇರುವ ಇವಳ  ಮನೆಯ ನಲ್ಲಿಯಲ್ಲಿ ಸಪೂರವಾಗಿ ಕೇವಲ … Read more

ಬದಲಾಗುವ ಬಣ್ಣಗಳು (ಭಾಗ 1): ಅಶ್ಫಾಕ್ ಪೀರಜಾದೆ

– 1 – ಡಿಶಂಬರ್ – 25, ಕ್ರಿಸಮಸ್ ಹಬ್ಬ. ಯೇಸು ಈಗಲೂ ಆ ಗೋಡೆಯ ಮೇಲೆ ನೇತಾಡುತ್ತಿದ್ದ. ಪ್ರತಿ ಹೊಸ ವರ್ಷದಂದು ಯೇಸು ಚಿತ್ರವಿರುವ ದಿನದರ್ಶಿಕೆ ತಂದು ಪವಿತ್ರ ತನ್ನ ಮನೆಯಲ್ಲಿ ನಿತ್ಯ ಆರಾಧನೆ ಸಲ್ಲಿಸುವದನ್ನು ರೂಡಿಸಿಕೊಂಡಿದ್ದಳು. ಮನುಕುಲವನ್ನೇ ಉದ್ಧರಿಸಿದ ಯೇಸುತನ್ನನ್ನು ಕೂಡ ಒಂದಿಲ್ಲ ಒಂದು ದಿನ ಉದ್ಧರಿಸುತ್ತಾನೆ ಎನ್ನುವ ಬಲವಾದ ನಂಬಿಕೆ ಅವಳದು. ಆ ಕ್ಯಾಲೆಂಡರದಲ್ಲಿ ಡಿಶೆಂಬರ 1980 ಎಂದು ಅಚ್ಚಾದ ಕೊನೆ ತಿಂಗಳ ಪುಟದ ಬಣ್ಣವೆಲ್ಲ ಮಾಸಹೋಗಿ ಹೊಗೆ ಹಿಡದವರಂತೆ ಬಣ್ಣ ಬದಲಾಗಿ ಸ್ಪಷ್ಟವಾಗಿ ಕಾಣದ ದಿನಾಂಕಗಳ … Read more

ಟ್ರೇನ್ ಪ್ರಯಾಣ: ಆಶಾಜಗದೀಶ್

ನನಗೆ ಪ್ರಯಾಣವೆಂದರೆ ಬಹಳ ಇಷ್ಟ. ಬಸ್ ಟ್ರೇನ್ ಕಾರ್ ಬೈಕ್… ಯಾವ್ದಾದ್ರೂ ಸರಿ ಹತ್ತಿ ಹೊರಟುಬಿಟ್ಟರೆ ಮುಗೀತು. ಯಾಕೆ ಅಂತ ಗೊತ್ತಿಲ್ಲ. ಅದರೆ ನನಗೆ ಬೀಸುವ ಗಾಳಿ ಅಂದ್ರೆ ಇಷ್ಟ, ತೊಟ್ಟಿಲ ಹಾಗೆ ತೂಗುವ ವಾಹನ ಇಷ್ಟ, ಪ್ರಯಾಣದ ನಿದ್ದೆ ಇಷ್ಟ, ನಾನಾ ಥರದ ಜನಗಳನ್ನು ನೋಡುವುದು ಇಷ್ಟ, ಹಿಂದಕ್ಕೆ ಜೋರಾಗಿ ಓಡುವ ಮರಗಳು ಇಷ್ಟ, ನಾನಾ ಥರದ ಪರಿಸರದ ಚಿತ್ರಣವನ್ನು ಕಣ್ತುಂಬಿಕೊಳ್ಳುವುದು ಇಷ್ಟ….. ಹೀಗೆ ಇಷ್ಟಗಳ ಸಾಲೇ ಇದೆ. ಅದರೊಂದಿಗೆ ಅಪರೂಪದ ಅನುಭವಗಳೂ ಸಿಗುತ್ತವೆ. ಇಂತಹ … Read more

ಶಿಶಿರನ ಅಂತ್ಯ ವಸಂತನ ಆದಿಯೆ?: ಕೆ ಟಿ ಸೋಮಶೇಖರ ಹೊಳಲ್ಕೆರೆ

ಒಂದರ ಅಂತ್ಯ ಇನ್ನೊಂದರ ಆರಂಭ! ಹಗಲಿನ ಅಂತ್ಯ ರಾತ್ರಿಯ ಆರಂಭ! ರಾತ್ರಿಯ ಅಂತ್ಯ ಹಗಲಿನ ಆರಂಭ! ಕಷ್ಟಗಳ ಅಂತ್ಯ ಸುಖದ ಆರಂಭ! ಸುಖದ ಅಂತ್ಯ ಕಷ್ಟದ ಆರಂಭ! ಜೀವನ ಸುಖದ ಸುಪ್ಪತ್ತಿಗೆಯಲ್ಲ, ಕಷ್ಟ ಸುಖಗಳ ಹಾಸು! ಪುರಾಣಗಳು ಘನಘೋರ ಕಷ್ಟಗಳ ಅಂತ್ಯ ಸುಖದ ಸೂಚಕ ಎಂದು ಸಾರಿವೆ! ಭಗವಂತ ಕಷ್ಟಗಳ ಮಳೆಗರೆದು ಭಕ್ತರನ್ನು ಪರೀಕ್ಷಿಸಿ ಕೊನೆಗೆ ಅಪರಿಮಿತ ಸುಖ ನೀಡುತ್ತಾನೆ ಎಂದು ಪುರಾಣಗಳಲ್ಲಿ ಕಥೆಗಳಿವೆ. ಇದಕ್ಕೆ ಸತ್ಯಹರಿಶ್ಚಂದ್ರನ ಕಥೆ ಉತ್ತಮ ಉದಾಹರಣೆಯಾಗಿದೆ. ಹೀಗೆ ಜೀವನದಲ್ಲಿ ಏಳು ಬೀಳಿಗೆ, … Read more

‘ಗೀರು’ ನನ್ನ ಮನಸ್ಸಲ್ಲಿ ಗೀಚಿದ್ದು – ಗೀರು ಕಥಾಸಂಕಲನ ವಿಮರ್ಶೆ: ಕೊಟ್ರೇಶ್ ಕೊಟ್ಟೂರು

ಕನ್ನಡ ಕಥಾ ಪರಂಪರೆಯಲ್ಲಿ ಮಹಿಳಾಪರ ಕಥೆಗಳು ಬರುವುದು ತುಂಬಾ ಮುಖ್ಯವಾಗಿದೆ. ಕನ್ನಡ ಕಥೆಗಳಲ್ಲಿ ಮಹಿಳಾ ಅಸ್ಮಿತೆಯನ್ನು ಉಳಿಸಿಕೊಂಡು ಹೋಗುವ ಕಥೆಗಳು ಇತ್ತೀಚಿಗೆ ಅಪರೂಪವಾಗಿದೆ. ಮತ್ತು ನನಗದು ಸ್ವಲ್ಪ ಸಮಾಧಾನವಿದೆ ಅಂತಹ ಸಮಾಧಾನ ತರುವಲ್ಲಿ ದೀಪ್ತಿ ಭದ್ರಾವತಿ ಅವರ ಗೀರು ಕಥಾಸಂಕಲನ ಯಶಸ್ವಿಯಾಗಿದೆ. ಬಹುಶಃ ಇದರಲ್ಲಿನ ಎಲ್ಲಾ ಕಥೆಗಳಲ್ಲೂ ಮಹಿಳೆ ಮುಖ್ಯಪಾತ್ರವಹಿಸಿ, ಬದುಕಿನ ಕಾಲಘಟ್ಟದಲ್ಲಿ ಅವಳ ಪಾತ್ರ ಎಷ್ಟು ಮುಖ್ಯ ಎನ್ನುವುದನ್ನು ಸಾರಿ ಸಾರಿ ಹೇಳುತ್ತದೆ. ಈ ಕಥೆಗಳಲ್ಲಿನ ಮಹಿಳೆ ತಾನು ಅನುಭವಿಸುವ ಕಷ್ಟಗಳನ್ನು ನೋಡಿದರೆ ಕರುಳು ಕಿತ್ತು … Read more

ತಾಯಿಯ ಗರ್ಭವೆಂಬ ಪುಟ್ಟ ಪ್ರಪಂಚದಲ್ಲಿ: ಸಿಂಧು ಭಾರ್ಗವ್

ಒಂದು ಮಗುವಿನ ಜನನ ಯಾವ ತಾಯಿಯ ಗರ್ಭದಲ್ಲಿ ಆಗುತ್ತದೆ ಎಂಬುದು ಹೇಳಬರದು. ಹುಟ್ಟು ನಮ್ಮ ಕೈಯಲ್ಲಿ ಇರುವುದಿಲ್ಲ. ಜನಿಸಿದ ಮೇಲೆ ಹಡೆದ ಜನನಿಯ ಮುಖ ದರುಷನವಾಗುವುದು. ಅವಳು ನಮಗಾಗಿ ಎಷ್ಟೆಲ್ಲ ಕಷ್ಟ ಪಡುತ್ತಾಳೆ. ಅವಳ ತ್ಯಾಗ ಸಹನೆಗೆ ನಾವು ಎಂದಿಗೂ ಋಣಿಗಳಾಗಿರಬೇಕು. ಒಬ್ಬ ತಾಯಿ ತಾನು ಗರ್ಭವತಿ ಎಂದು ತಿಳಿದ ತತ್ಕ್ಷಣದಿಂದ ಮುಂದೆ ಜನಿಸುವ ಮಗುವಿನ ಬಗೆಗೆ ನೂರಾರು ಕನಸುಗಳನ್ನು ಕಟ್ಟಿಕೊಳ್ಳಲು ಶುರುಮಾಡುತ್ತಾಳೆ. ಜೊತೆಗೆ ತಂದೆಯಾಗುವವನೂ ಕೂಡ ಆ ಮಗುವಿನ ಬಗೆಗೆ ಸಾಕಷ್ಟು ಕನಸುಗಳನ್ನು ಹೆಣೆಯುತ್ತಾನೆ. ತಮ್ಮ … Read more

ಪುಟ್ಟಿಯ ಬೆಂಗಳೂರು: ನಾಗರಾಜನಾಯಕ ಡಿ.ಡೊಳ್ಳಿನ

ಬೆಂಗಳೂರು ಅಂದರೆ ಚಿಕ್ಕಂದಿನಿಂದಲೂ ನಮಗೆ ಆಕರ್ಷಣೆ. ಅಲ್ಲಿನ ಮೆಜೆಸ್ಟಿಕ್, ಗಾಂಧಿನಗರ, ವಿಧಾನಸೌಧ, ಉದ್ಯೋಗಸೌಧ, ಹೈಕೋರ್ಟು, ಕಬ್ಬನ ಉದ್ಯಾನವನದಲ್ಲಿನ ಗ್ರಂಥಾಲಯ, ಲಾಲಬಾಗ್, ಬನ್ನೇರುಘಟ್ಟ, ನೆಹರು ತಾರಾಲಯ, ರವೀಂದ್ರ ಕಲಾಕ್ಷೇತ್ರ ಹೀಗೆ ಒಂದೇ ಎರಡೆ ಹೇಳುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಚಿಕ್ಕವನಿದ್ದಾಗ ಬೆಂಗಳೂರು ಕಾಡಿದ್ದು ಸುಳ್ಳಲ್ಲ. ಅಪ್ಪ ಬೆಂಗಳೂರಿಗೆ ಹೋದಾಗಲೆಲ್ಲ ನಮಗಾಗಿ ಚೆಂದನೆಯ ಆಟಿಕೆ, ಶಾಲಾ ಬ್ಯಾಗಗಳನ್ನು ತರುತ್ತಿದ್ದರಿಂದಲೋ ಏನೋ ನಮಗೆ ಬೆಂಗಳೂರಿನ ಬಣ್ಣ ಬಣ್ಣದ ಕಲ್ಪನೆಗಳು ಮೂಡುವಂತೆ ಮಾಡಿದ್ದು. ಆದರೆ ಆ ಕಲ್ಪನೆಗಳು ನಾವು ಪ್ರೌಢಾವಸ್ಥೆಗೆ ತಲುಪಿ … Read more

ಜಾಣಸುದ್ದಿ 21: ಕೊಳ್ಳೇಗಾಲ ಶರ್ಮ

ಈ ವಾರದ ಸಂಚಿಕೆಯಲ್ಲಿ ಕೊಳ್ಳೇಗಾಲ ಶರ್ಮರವರ ಧ್ವನಿಯಲ್ಲಿರುವ ಈ ಆಡೀಯೊ ಕೇಳಲು ಈ ಕೆಳಗಿನ ಕೊಂಡಿಯ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಜಾಣ ಸುದ್ದಿ ಧ್ವನಿಮುದ್ರಿಕೆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ save as/ download ಆಪ್ಷನ್ ನಿಂದ ನಿಮ್ಮ ಮೊಬೈಲ್/ ಕಂಪ್ಯೂಟರ್ ಗೆ ಡೌನ್ ಲೋಡ್ ಮಾಡಿಕೊಳ್ಳಿ… ಇ ಮೇಲ್ ನಲ್ಲಿ ಅಥವಾ ವಾಟ್ಸ್ ಅಪ್ ನಲ್ಲಿ ಈ ಧ್ವನಿಮುದ್ರಿಕೆ ನಿಮಗೆ ಬೇಕು ಎಂದನಿಸಿದರೆ ನಿಮ್ಮ ಕೋರಿಕೆಯನ್ನು ನಮ್ಮ … Read more

ಮೂಕ ಕಹಳೆ: ಗಿರಿಜಾ ಜ್ಞಾನಸುಂದರ್

ಕೈಯಲ್ಲಿ ಮಿಠಾಯಿ ಡಬ್ಬಿ ಹಿಡಿದು ಅಮ್ಮನ ಬಳಿ ಓಡಿ ಬಂದಳು ಆರತಿ, “ಅಮ್ಮ, ನಾನು     ಎಸ್ಎಸ್ಎಲ್ಸೀ ಪಾಸ್ ಆದೆ, ಫಸ್ಟ್ ಕ್ಲಾಸ್” ಎಂದು ಹೇಳುತ್ತಾ ಅಮ್ಮನ ಬಾಯಿಗೆ ಸಿಹಿಯನ್ನು ತುರುಕಿದ್ದಳು. ಅಮ್ಮನ ಖುಷಿಯನ್ನು ಅಮ್ಮ ತನ್ನ ಮುಗುಳ್ನಗೆಯಲ್ಲಿ ತಿಳಿಸಿದಳು. ಮನೆಯಲ್ಲಿ ಸಂಭ್ರಮ. ಒಂದು ವಾರವಾಗಿತ್ತು. ಯಾವ ಕಾಲೇಜು ಸೇರುವುದು, ಯಾವ ವಿಷಯ ಓದುವುದು ಎಂದು ಚರ್ಚೆ ನಡೆಯುತ್ತಿತ್ತು. ಆರತಿಯ ಅಜ್ಜಿ ಮನೆಗೆ ಬಂದರು. ಅಜ್ಜಿಗೂ ಸಿಹಿ ಕೊಟ್ಟದಾಯಿತು, ಸಂತೋಷ ಹಂಚಿದ್ದಾಯಿತು. ಆದರೂ ಅಜ್ಜಿ ಯಾಕೋ ಸಂತೋಷದಲ್ಲಿದ್ದಂತಿರಲಿಲ್ಲ. ಆರತಿಯ … Read more

ಗೆಲ್ಲುವ, ಗೆಲ್ಲಿಸುವ ದಾರಿಯ ಅನ್ವೇಷಣೆ: ರಘುನಂದನ ಕೆ. ಹೆಗಡೆ

ನಮ್ಮೂರ ಯಂಕ್ಟ ಅದ್ಭುತ ಮಾತುಗಾರ, ಏನನ್ನೇ ಕೊಟ್ಟರೂ ಮಾರಾಟ ಮಾಡಬಲ್ಲ. ಎಲ್ಲಿ ಬೇಕಾದರೂ ಬದುಕಬಲ್ಲ. ಯಾವ ವಿಷಯದ ಬಗ್ಗೆ ಬೇಕಾದರೂ ಮಾತಾಡಬಲ್ಲ. ರಿಸೆಶ್ಶನ್, ಷೇರು ಮಾರುಕಟ್ಟೆಯಿಂದ ರಸಗೊಬ್ಬರ, ಮಣ್ಣಿನ ಫಲವತ್ತತೆಯವರೆಗೆ ಎಲ್ಲ ವಿಷಯಗಳೂ ಅವನಿಗೆ ಗೊತ್ತು. ಜನರನ್ನ ಸೆಳೆಯುವುದು, ಸಂವಹನ ಮಾಡುವುದು, ಯಾವುದೇ ವಿಷಯದ ಬಗ್ಗೆ ಮಾತಾಡುವುದು ಇದರಲ್ಲಿ ಅವನು ತುಂಬಾ ನಿಪುಣ. ಆದರೇನು, ಕಳೆದ 20 ವರ್ಷಗಳಿಂದಲೂ ಅವನು ಸೇಲ್ಸ್‍ಮೆನ್ ಆಗಿಯೇ ದುಡಿಯುತ್ತಿದ್ದಾನೆ. ನಮ್ಮೂರ ಬಡ ಮೇಷ್ಟ್ರ ಮಗ ತುಂಬಾ ಬುದ್ದಿವಂತ. ನಾವೆಲ್ಲ ಕಂಪ್ಯೂಟರ್ ಎಂದರೇನು … Read more

ಪದಸಾಲುಗಳ ನಡುವೆ: ಅನುರಾಧ ಪಿ. ಸಾಮಗ

1. ಉಕ್ಕಿ ಹರಿಯುತ್ತಿದ್ದ ಉತ್ಸಾಹ ಅವರ ಬೆನ್ನಾರೆ ಹೊರಟೇಹೋಯಿತೇನೋ ಅನ್ನುವ ಹಾಗೆ… ಅವರ ನೆನಕೆಯ ನೂಲಿನಲಿ ಕಥೆಯೆಷ್ಟೋ ನೇಯ್ದುಬಿಡುವವರು ನಾವು ದೂರದಲಿದ್ದುಕೊಂಡೇ ಅವರೆಂದರೆ, ಎದೆಯೊಳಗಿನ ಪ್ರಾಣಕೆದುರಾಗುವವರು ಬಳಿಯಿದ್ದುಬಿಡು ಸದಾ ಎನ್ನಲೇಕೆ; ಜೊತೆಗಿರುವುದು ಸಾಲದೇನು? ಪ್ರೀತಿಯೆದುರು ಅದರ ಸಂಕಟದ್ದೇನು ನಡೆದೀತು; ಬೆರೆತ ಮನಸುಗಳೆದುರು ಈ ದೂರವೇನು ಮಾಡೀತು? ಹಾರಲು ಕಲಿಯುವ ಹಕ್ಕಿಯದು ನೆಲದ ನೆಲೆಯ ತೊರೆಯಲೇಬೇಕು ಚೂರುಚೂರೇ ತಮ್ಮೆದೆಯನಿಬ್ಬರೂ ಚೂರುಚೂರಾಗಿಸಲೇಬೇಕು ಮನಸಿನಪ್ಪಣೆಯಿದ್ದಮೇಲಿನ್ನು ಒಪ್ಪುವ ಯಾ ಒಪ್ಪದ ಲೋಕವೇನು ಮಾಡೀತು? ಪ್ರೀತಿಯೆದುರು ಅದರ ಸಂಕಟದ್ದೇನು ನಡೆದೀತು; ಬೆರೆತ ಮನಸುಗಳೆದುರು ಈ … Read more

ಆತ್ಮ ವಿಶ್ವಾಸ ಯಶಸ್ಸಿನ ಮೊದಲ ಮೆಟ್ಟಿಲು: ಎಂ.ಎನ್.ಸುಂದರ ರಾಜ್

ಹೆನ್ರಿ ಡೇವಿಡ್ ಥೋರೋ ಹೇಳಿದಂತೆ, “ಮನುಷ್ಯರು ಯಶಸ್ಸುಗಳಿಸಲೆಂದೇ ಜನಿಸಿರುವರು, ಅಪಜಯ ಹೊಂದುವುದಕ್ಕಲ್ಲ” ಸಂತೋಷದಂತೆ ಯಶಸ್ಸು ಸಹ ಮಾನವನ ಮೂಲಭೂತ ಗುರಿಯಾಗಿದೆ. ‘ನಾವು ಹೆಚ್ಚು ಗುಲಾಬಿಗಳನ್ನು ಪಡೆಯಬೇಕಾದರೆ ಹೆಚ್ಚು ಗಿಡಗಳನ್ನು ನೆಡಬೇಕು’ ಎಂದು ಇಲಿಯೆಟ್ ಒಂದೆಡೆ ಹೇಳಿದ್ದಾನೆ. ನಾವು ಜೀವನದಲ್ಲಿ ಏನೇ ಸಾಧಿಸಲು ನಮಗೆ ಅತ್ಯಗತ್ಯವಾದದ್ದು ಹಣವಲ್ಲ, ಯಾರ ಆಶ್ರಯವೂ ಅಲ್ಲ, ಇನ್ನೊಬ್ಬರ ಉತ್ತೇಜನವೂ ಇಲ್ಲ. ಬೇಕಾಗಿರುವುದು ಆತ್ಮವಿಶ್ವಾಸ. ಇದು ಇಲ್ಲದ ವ್ಯಕ್ತಿ ಎಷ್ಟೇ ಉತ್ತೇಜನ ನೀಡಿದರೂ ಯಶಸ್ಸಿನ ದಾರಿಯಲ್ಲಿ ನಡೆಯಲಾರ. ಆತ್ಮ ವಿಶ್ವಾಸವೆಂದರೇನು ಎನ್ನುವ ಪ್ರಶ್ನೆಗೆ ಉತ್ತರ … Read more

ದಿಟ್ಟ ಹೆಣ್ಣು..: ದೇವರಾಜ್ ನಿಸರ್ಗತನಯ

ಆಗ ತಾನೇ ಹೈಸ್ಕೂಲು ಮೆಟ್ಟಿಲೇರಿದ್ದ ನಿರೋಷಾಗೆ ತನ್ನ ದೇಹದಲ್ಲಾಗುತ್ತಿದ್ದ ಬದಲಾವಣೆಗಳನ್ನು ಕಂಡು ತನ್ನೊಳಗೇ ತಾನು ಹೆಮ್ಮೆಪಡಲಾರಂಭಿಸಿದಳು. ಇತರ ಹೆಣ್ಮಕ್ಕಳಿಗಿಂತ ಭಿನ್ನವಾಗಿ ಆಲೋಚಿಸತೊಡಗಿದಳು. ಮುಗ್ದತೆ ತುಂಟತನ ಮಾಯವಾಗಿ ಗಂಭೀರ ಸ್ವಭಾವ ದಿನೇ ದಿನೇ ಹೆಚ್ಚಾಗತೊಡಗಿತು. ಅವಳ ಬದಲಾವಣೆಯನ್ನು ಗಮನಿಸಿದ ಅವಳ ತಾಯಿ ಸುಜಾತಳಿಗೂ ತನ್ನ ಮಗಳು ಬೆಳೆದು ದೊಡ್ಡವಳಾಗುತ್ತಿದ್ದಾಳೆ ಎಂಬ ಹೆಮ್ಮೆ ಒಂದು ಕಡೆಯಾದರೆ ಈಗಿನ ಸಮಾಜದಲ್ಲಿ ಬೆಳೆದ ಹೆಣ್ಣುಮಕ್ಕಳು ಸೆರಗಿನಲ್ಲಿ ಕೆಂಡ ಕಟ್ಟಿಕೊಂಡಂತೆ ಎನ್ನುವ ಆತಂಕವೂ ಅವಳನ್ನು ಕಾಡಿತ್ತು. ಚಿಕ್ಕವಯಸ್ಸಿಗೆ ಗಂಡನನ್ನು ಕಳೆದುಕೊಂಡು ಬದುಕುತಿದ್ದ ಒಂಟಿ ಜೀವ … Read more