ಪ್ರೇಮಖೈದಿ-೨: ಅಭಿ ಸಾರಿಕೆ

ಸ್ಪಂದನ ಅವನೊಂದಿಗೆ ಮಾತಾನಾಡಲು ನಿಲ್ಲಿಸಿದ ಬಳಿಕ ವಿಶ್ವನಿಗೆ ಹುಚ್ಚು ಹಿಡಿದಂತೆನಿಸಿತು, ಹೇಗಾದರೂ ಅವಳ ಸ್ನೇಹ ಮತ್ತೆ ಬೇಕೆನಿಸಿತು. ಅವತ್ತಿಗೆ ಸ್ಪಂದನಳ ಪರೀಕ್ಷೆ ಮುಗಿದಿತ್ತು. ಇಷ್ಟು ದಿವಸಗಳ ಪರೀಕ್ಷೆಯ ಗುಂಗಲ್ಲಿ ವಿಶ್ವನನ್ನು ಸ್ವಲ್ಪಮಟ್ಟಿಗೆ ಮರೆಯಲು ಸಾಧ್ಯವಾಗಿದ್ದರೂ ಪೂರ್ತಿ ಮರೆತಿರಲಿಲ್ಲ, ಹೇಗಿರುವನೋ ಏನೋ ಎಂದುಕೊಳ್ಳುತ್ತ ಊರಿಗೆ ಹೊರಡುವ ತಯಾರಿಯಲ್ಲಿದ್ದಳು, ಇನ್ನೇನು ಬಸ್ ನಿಲ್ದಾಣ ತಲುಪುವ ವೇಳೆಗೆ ಧುತ್ತನೆ ಪ್ರತ್ಯಕ್ಷನಾದ ವಿಶ್ವ, ಕೈಯಲ್ಲಿ ಪುಟ್ಟ ಕವರ್ ಇತ್ತು, ಸ್ಪಂದನಳನ್ನು ನೋಡಿ ಮುಗುಳ್ನಕ್ಕು ಆದರೆ ಇವಳು ನಗಲಿಲ್ಲ, ಅವನೇ ಮಾತಿಗಿಳಿದ, "ದಯವಿಟ್ಟು ನನ್ನನ್ನು … Read more

ಅಳುವ ಧ್ವನಿಯು ಎಲ್ಲಿಂದ?: ಲತಾ ಆಚಾರ್ಯ

     ಅದೊಂದು ಹೆಚ್ಚು ಜನಸಂಚಾರವಿರದ ಪ್ರದೇಶ. ಸುತ್ತಲೂ ಗುಡ್ಡ, ಪೊದರುಗಳು. ಒಂದಕ್ಕಿಂತ ಒಂದು ವಿಭಿನ್ನ. ಆದರೂ ಸೂಕ್ಷ್ಮವಾಗಿ ನೋಡಿದರೆ ಅಲ್ಲೊಂದು ಮನೆ ಕಾಣುತ್ತಿತ್ತು. ಅಲ್ಲಿದ್ದವರು ಶಾಂತಿ ಅವಳ ಗಂಡ ರಘು ಮತ್ತು ಅತ್ತೆ ಕಮಲಮ್ಮ. ದಿನ ನಿತ್ಯದ ಮನೆಗೆ ಬೇಕಾದ ವಸ್ತುಗಳ ಖರೀದಿಗೆ ನಾಲ್ಕು-ಐದು ಕಿಲೋಮೀಟರ್ ನಡೆದುಕೊಂಡು ಬಂದು ಹೋಗಬೇಕಾಗಿತ್ತು. ಹೆಚ್ಚಿನವರು ಇದೇ ಕಾರಣಕ್ಕಾಗಿ ಅಲ್ಲಿಂದ ಬೇರೆ ಕಡೆಗೆ ತೆರಳಿದವರು ಮತ್ತೆ ಆ ದಾರಿಯತ್ತ ಕಣ್ಣು ಹಾಯಿಸಿರಲಿಲ್ಲ. ಹಾಗಿದ್ದರೂ ಕಮಲಮ್ಮನದು ಒಂದೇ ಹಟ. ಬೇರೆಲ್ಲೂ ಹೋಗಲಾರೆನೆಂಬುದು. … Read more

ಕಾಪಿ: ಪ್ರಶಸ್ತಿ ಪಿ.

ಮಾಡಿದ್ದೇ ಕೆಲಸವನ್ನು ಸದಾ ಮಾಡ್ತಾ ಇರು ಅಂದ್ರೆ ಏನೂ ಮಾಡದೇ ಆದ್ರೂ ಇರ್ತೀನಿ,ಆದ್ರೆ ಅದನ್ನ ಮಾಡೋಲ್ಲ ಅಂತಿದ್ದವನು ಅವ. ಹೊಸತನಕ್ಕೆ ತುಡಿದು ಇರೋದನ್ನ ಕಳೆದುಕೊಳ್ಳುವುದಕ್ಕಿಂತ ಇದ್ದುದರಲ್ಲೇ ಖುಷಿಯಾಗಿರೋದು ಮೇಲು ಅನ್ನುವವಳು ಅವಳು. ಭಾರತ-ಪಾಕಿಸ್ತಾನಗಳಂತಹ ಭಿನ್ನ ವಿಚಾರಧಾರೆಯಿದ್ರೂ ಇವರ ಮಧ್ಯೆ ಅದೆಂತದೋ ಒಂದು ಲವ್ವಿರೋದು ಹೆಂಗೆ ಅನ್ನೋದು ಬೇರೆ ಅವ್ರಿಗೆ ಹೋಗ್ಲಿ ಸ್ವತಃ ಅವ್ರಿಗೇ ಅಚ್ಚರಿಯ ವಿಷಯವಾಗಿತ್ತು. ಎಡಪಂಥ ಬಲಪಂಥ ಅಂತ ಪ್ರತಿದಿನಾ ಕಚ್ಚಾಡೋರು ಹೆಗಲ ಮೇಲೆ ಕೈಹಾಕಿಕೊಂಡ್ರು ಓಡಾಡ್ತಿದ್ರೆ ಹೆಂಗೆ ಅಚ್ಚರಿಯಾಗುತ್ತೋ ಆ ತರಹದ ಆಶ್ಚರ್ಯ ಇವ್ರನ್ನ … Read more

ಪ್ರೇಮದ Confession: ಚಂದನ್ ಶರ್ಮ

                    ತಂದೆ-ತಾಯಿ, ಬಂದು-ಬಳಗದ  ಪ್ರೀತಿ, ವಾತ್ಸಲ್ಯ, ಅಕ್ಕರೆ, ಮಮಕಾರ ಬಿಟ್ಟರೆ ಉಳಿಯೋದು ‘ಗಂಡು-ಹೆಣ್ಣಿನ’ ಪ್ರೇಮ; ಅದೇ ವಿಶ್ವದ ಹಲವಾರು ಕಾದಂಬರಿಗಳ, ನಾಟಕಗಳ, ಚಲನಚಿತ್ರಗಳಲ್ಲಿ ಕಂಡುಬರುವ ಪ್ರೀತಿ; ಇಲ್ಲ ಅದನ್ನ ಹಾಗೆ ಹೇಳಬಾರದು ಪ್ರೀತಿ ತುಂಬಾ ವಿಸ್ತಾರಾವಾದ ವಿಷಯ ಅದು ಮಾನವನ ಮೂಲ. ಈ ಪ್ರೀತಿ ಬಯಕೆಗಳ ಮೂಲ; ಒಂದು ಜೀವದ ಸುತ್ತ ಲಕ್ಷ ಆಕಾರಗಳನ್ನು ಪಡೆದು ಸುತ್ತುತ್ತಲೇ ಇರುತ್ತದೆ ಜೀವ ಹೋಗುವ ತನಕ. ಲಕ್ಷ … Read more

ನಜ಼ರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಜ್ಞಾನೋದಯವಾಗುವಿಕೆ ಒಂದು ದಿನ ನಜ಼ರುದ್ದೀನ್‌ ತನ್ನ ಅನುಯಾಯಿಗಳೊಂದಿಗೆ ಪೇಟೆಬೀದಿಯಲ್ಲಿ ಹೋಗುತ್ತಿದ್ದ. ನಜ಼ರುದ್ದೀನ್‌ ಮಾಡುತ್ತಿದ್ದದ್ದನ್ನೆಲ್ಲ ಅನುಯಾಯಿಗಳು ಅಂತೆಯೇ ನಕಲು ಮಾಡುತ್ತಿದ್ದರು. ತುಸು ದೂರ ನಡೆದ ನಂತರ ನಜ಼ರುದ್ದೀನ್ ಕೈಗಳನ್ನು ಮೇಲೆತ್ತಿ ಗಾಳಿಯಲ್ಲಿ ಆಡಿಸುತ್ತಿದ್ದ, ತದನಂತರ ತನ್ನ ಪಾದಗಳನ್ನು ಮುಟ್ಟಿ “ಹು ಹು ಹು” ಎಂಬುದಾಗಿ ಕಿರುಚುತ್ತಾ ಮೇಲಕ್ಕೆ ಹಾರುತ್ತಿದ್ದ. ತಕ್ಷಣ ಅನುಯಾಯಿಗಳೂ ಅಂತೆಯೇ ಮಾಡುತ್ತಿದ್ದರು.  ಇದನ್ನು ಕುತೂಹಲದಿಂದ ನೋಡಿದ ಒಬ್ಬ ವ್ಯಾಪಾರಿ ನಜ಼ರುದ್ದೀನ್‌ನನ್ನು ಕೇಳಿದ, “ನೀನೇನು ಮಾಡುತ್ತಿರುವೆ ಮಿತ್ರಾ? ಇವರೆಲ್ಲರೂ ನಿನ್ನನ್ನು ಏಕೆ ಅನುಕರಿಸುತ್ತಿದ್ದಾರೆ?” ನಜ಼ರುದ್ದೀನ್‌ ಉತ್ತರಿಸಿದ, … Read more

ನಿನ್ನ ಹೆಸರಲ್ಲೆ ರೂಪ ಅಡಗಿದೆ: ಬಂದೇಸಾಬ ಮೇಗೇರಿ

ಪ್ರೀತಿಯ ಕ್ಯಾಂಪಸ್ಸಿನ ಕನ್ಯೆ, ಕ್ಯಾಂಪಸ್ಸಿನಲ್ಲಿನ ಹೂವುಗಳ ಘಮಲು ಮನಸ್ಸಿಗೆ ತಾಕುತ್ತಿದೆ. ಆ ನೆನಪುಗಳು ಇನ್ನೂ ಇಲ್ಲೇ ಎಲ್ಲೋ ಸುಳಿದಾಡುತ್ತಿವೆ. ಇಬ್ಬರೂ ಕೈ ಕೈ ಹಿಡಿದು ಸುತ್ತಾಡಿದ ಜಾಗಗಳಲ್ಲೆಲ್ಲ ಉಳಿದ ನಮ್ಮ ಬಿಸಿ ಉಸಿರನ್ನು ಹುಡುಕುತ್ತಿದ್ದೇನೆ ನೀನಿಲ್ಲದ ಜಾಗದಲ್ಲಿ. ನನಗಿನ್ನೂ ನೆನಪಿದೆ ನನ್ನನ್ನು ಹುಡುಕುತ್ತಿದ್ದ ನಿನ್ನ ಕಣ್ಣುಗಳ ಹೊಳಪು ಹಾಸುಹೊಕ್ಕಾಗಿದೆ ಈ ಮನದಲ್ಲಿ. ಮೊದಲ ಆಕಸ್ಮಿಕ ಭೇಟಿ ಜಗಳದಿಂದಲೇ ಶುರುವಾದದ್ದು, ಮತ್ತೆ ಕೆಲವು ದಿನ ಓರೆಗಣ್ಣಲ್ಲಿ ನೋಡುವ ಅದೇ ಲುಕ್. ವೈರತ್ವ ಕ್ರಮೇಣ ಸ್ನೇಹವಾಗಿ ರೂಪುಗೊಂಡಿತು. ನೀನು ಎಲ್ಲಿ … Read more

ಅನ್ಯಾಯದ ವಿರುದ್ಧದ ಹೋರಾಟಕ್ಕೆ ಸ್ಪೂರ್ತಿ ‘ಅಗ್ನಿದಿವ್ಯ’ ನಾಟಕ ಪ್ರಯೋಗ: ಹಿಪ್ಪರಗಿ ಸಿದ್ಧರಾಮ

ಆಸ್ಟ್ರೀಯನ್ ಮೂಲದ ಜರ್ಮನಿಯ ರಾಜಕಾರಣಿಯಾಗಿದ್ದು, ನಂತರ ಸರ್ವಾಧಿಕಾರಿಯಾಗಿ ಬದಲಾದ ಅಡಾಲ್ಪ್ ಹಿಟ್ಲರ್ ಯಾರಿಗೆ ತಾನೆ ಗೊತ್ತಿಲ್ಲ ?  ಇತ್ತೀಚೆಗೆ (07-03-2016) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಬೆಂಗಳೂರಿನ ಆವಿಷ್ಕಾರ ತಂಡದ ಕಲಾವಿದರು ಡಾ.ಬಿ.ಆರ್.ಮಂಜುನಾಥ ರಚಿಸಿದ ‘ಅಗ್ನಿದಿವ್ಯ’ ನಾಟಕವನ್ನು ಭಾನು ನಿರ್ದೇಶನದಲ್ಲಿ ಅಭಿನಯಿಸಿದರು. ಯುರೋಪಿನ ಇತಿಹಾಸದ ಕಾಲಘಟ್ಟವೊಂದರಲ್ಲಿ ಬದಲಾವಣೆಗೆ ತಹತಹಿಸುವ ಕ್ರಾಂತಿಕಾರಿ ಮನೋಭೂಮಿಕೆಯ ವ್ಯಕ್ತಿಯೊಬ್ಬನು ಚಾಣಾಕ್ಷತನದಿಂದ ಪರಿಸ್ಥಿತಿಯನ್ನು ಎದುರಿಸುತ್ತಾ ವ್ಯವಸ್ಥೆಯೊಂದಕ್ಕೆ ಸವಾಲಾಗುತ್ತಾ, ಅದೇ ವ್ಯವಸ್ಥೆಯನ್ನು ಪ್ರಶ್ನಿಸುವ ಗಂಭೀರ ಕಥಾನಕದ ಪ್ರಯೋಗವನ್ನು ಪ್ರೇಕ್ಷಕರು ಕುತೂಹಲದೊಂದಿಗೆ ವೀಕ್ಷಿಸಿದರು. ಆವಿಷ್ಕಾರ, ಎಐಡಿವೈಒ ಮತ್ತು … Read more

ನಾವಿಕನಿಲ್ಲದ ದೋಣಿಯಲ್ಲಿ……: ಮಲ್ಲೇಶ ಮುಕ್ಕಣ್ಣವರ

ಕೆಲವೊಂದು ಸಂಧರ್ಭದಲ್ಲಿ ಅಪ್ಪ ಅಂದರೆ ನಮಗೆಲ್ಲಾ ಯಾವುದೋ ಮಿಲಟರಿ ದಂಡಿನ ಮಹಾದಂಡನಾಯಕನಂತೆಯೂ ಮತ್ತೊಮ್ಮೆ  ಜಮದಗ್ನಿ ಮುನಿಯಂತೆ ಭಾಸವಾಗಿ ಬಿಡುತ್ತಾನೆ.ಅಷ್ಟೇ ಏಕೆ ನಮ್ಮಪ್ಪ ಕೋಪಿಷ್ಟ, ಗರ್ವಿಷ್ಟ ಅವನ ಮೂಗಿನ ತುದಿಯಲ್ಲೇ ಕೋಪ ಎಂದೆಲ್ಲಾ ಗೊಣಗುತ್ತೇವೆ. ಆದರೆ ಅಪ್ಪನ ಮನಸ್ಥಿತಿಯೇ ಬೇರೆ ಮನದಲ್ಲಿ ಬೆಟ್ಟದಷ್ಟು ಪ್ರೀತಿಯನ್ನು ತುಂಬಿಕೊಂಡಿದ್ದರು ವ್ಯಕ್ತಪಡಿಸುವಲ್ಲಿ ಹಿಂದೆಟು ಹಾಕುತ್ತಾನೆ. ತನ್ನವರನ್ನು ಸಂರಕ್ಷಿಸಲು ಹಗಲಿರುಳು ಶ್ರಮಿಸುತ್ತಾನೆ. ಅಂತಹ ಅಪ್ಪನಿಗೆ ಅಪ್ಪನೇ ಸಾಟಿ. ಅವನ ಶ್ರಮದ ಬೆವರಹನಿಯ ಹಿಂದೆ ತನ್ನವರನ್ನು ಸಂರಕ್ಷಿಸುವ ಸ್ವಾರ್ಥತೆಯಿದೆ. ಕ್ಷಣಕ್ಷಣಕ್ಕೂ ಕೋಪಸಿಕೊಳ್ಳುವ ಕೋಪದ ಹಿಂದೆ ಮಕ್ಕಳಿಗೆ … Read more

ನನ್ನೊಲವಿನ ಗೆಳತಿಗೆ…: ರಮೇಶ್ ನೆಲ್ಲಿಸರ

ನನ್ನೊಲವಿನ ಗೆಳತಿಗೆ… ಹೌದು ನಿನಗೆ ಬರಿತಿರೋದು ಮಾರಾಯ್ತಿ ಇನ್ನು ಎಷ್ಟು ದಿನ ಅಂತಾ ಈ ಮೋಬೈಲ್ನಲ್ಲಿ ಮೆಸೇಜ್ ಟೈಪ್ ಮಾಡದು, ಅದ್ ನೋಡಿದ್ರೆ 135 ಕ್ಕಿಂತ ಜಾಸ್ತಿ ಲೆಟರ್ಸ್ ತಗೊಳಲ್ಲ 2-3 ಮೆಸೇಜ್ ಒಟ್ಟಿಗೆ ಕಳ್ಸಣ ಅಂದ್ರೆ ನಿಮ್ ಡಬ್ಬ ಊರಲ್ ನೆಟ್ವರ್ಕಾದ್ರೂ ಸಿಗ್ತದಾ? ಅದೂ ಇಲ್ಲ,ಹೋಗ್ಲಿ ಸಿಗೇ ಮಾರಾಯ್ತಿ ಸ್ವಲ್ಪ ಮಾತಾಡನಾ ಅಂದ್ರೆ ನೀನು ಅದ್ಕೂ ನಮ್ಮನೇಲ್ ಸ್ಟ್ರಿಕ್ಟು ಹಾಗೇ ಹೀಗೆ ಅಂತೀಯಾ,ಮೂರ್ -ನಾಲ್ಕ್ ಸತಿ ಸಿಕ್ಕಿದ್ರು ಅರ್ಧ ಗಂಟೆ ಮಾತಾಡ್ಸ್ ಓಡ್ತಿಯಾ,ವರ್ಷ ಆತಲೆ ಅದ್ರು … Read more

ಸಾಮಾನ್ಯ ಜ್ಞಾನ (ವಾರ 91): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು:- 1.    ಭಾರತೀಯ ಸ್ಟೇಟ್‍ಬ್ಯಾಂಕ್ ಯಾವ ವಿದೇಶದಲ್ಲಿ ತನ್ನ ಪ್ರಥಮ ಶಾಖೆ ಪ್ರಾರಂಭಿಸಿತು? 2.    ಗೇಲ್ (GAIL) ನ ವಿಸ್ತೃತ ರೂಪವೇನು? 3.    ವಿಲಿಯಂ ಹಾರ್ವೆ ಕಂಡುಹಿಡಿದ ಗ್ರಹ ಯಾವುದು? 4.    ಮಿಲಿಟರಿ ಕಾಲೇಜ್ ಆಫ್ ಎಲೆಕ್ಟ್ರಾನಿಕ್ಸ್ ಆಂಡ್ ಮೆಕಾನಿಕಲ್ ಇಂಜಿನಿಯರಿಂಗ್ ಎಲ್ಲಿದೆ? 5.    ಭಾರತೀಯ ಶುಷ್ಕ ತೋಟಗಾರಿಕೆ ಸಂಶೋಧನಾ ಸಂಸ್ಥೆ ಎಲ್ಲಿದೆ? 6.    ದ್ರುಪದ್ ಸಂಗೀತ ಶೈಲಿಯಲ್ಲಿ ನುಡಿಸುವ ಲಯವಾದ್ಯ ಯಾವುದು? 7.    ಲೇಸರ್ ರೂಪತಾಳಿದ ವರ್ಷ ಯಾವುದು? 8.    ಈಜಿಪ್ಟ್ ನೈಲ್ ನದಿಯ ವರದಾನ … Read more

ಮೈತ್ರಿ ಪ್ರಕಾಶನದ ಕಥಾಸಂಕಲನಕ್ಕಾಗಿ ಕತೆಗಳ ಆಹ್ವಾನ

ಹೊಸದಾಗಿ ಪ್ರಾರಂಭವಾಗಿರುವ 'ಮೈತ್ರಿ ಪ್ರಕಾಶನ' ಕನ್ನಡ ಕಥಾಪ್ರಪಂಚಕ್ಕೆ "ಧ್ವನಿಗಳು" ಎಂಬ ಕಥಾಸಂಕಲನವನ್ನು ಅರ್ಪಿಸಲು ಉದ್ದೇಶಿಸಿದೆ.  ಈ ಹಿಂದೆ ಪ್ರಕಟಿಸಿದಂತೆ "ಮಹಿಳೆಯರು  ಬರೆದ ಕಥೆಗಳು" ಎಂಬ ನಿರ್ಭಂದ ತೆಗೆದುಹಾಕಲಾಗಿದ್ದು , ಈಗ ಈ ಸಂಕಲನದಲ್ಲಿ ಕೆಳಗಿನ  ನಿಯಮಗಳಿಗೆ ಒಳಪಟ್ಟು ಯಾರು ಬೇಕಾದವರೂ ಕತೆ ಕಳಿಸಬಹುದಾಗಿದೆ. ಮೇಲಾಗಿ ಮೊದಲ ಮೂರು ಕತೆಗಳಿಗೆ ಬಹುಮಾನ ಘೋಶಿಸಲಾಗಿದ್ದು ಮೊದಲ ಬಹುಮಾನ ೫೦೦೦, ಎರಡನೇ ಬಹುಮಾನ ೩೦೦೦ ಮತ್ತು ಮೂರನೆಯ ಬಹುಮಾನವಾಗಿ ೨೦೦೦ ನಗದು ರೂಪದಲ್ಲಿ ಕೊಡಲು ನಿರ್ಧಾರಮಾಡಿರುವುದನ್ನು ತಿಳಿಸಲು ಅತ್ಯಂತ ಖುಶಿಯಾಗುತ್ತದೆ. ಒಟ್ತು … Read more

ಎಲ್ಲಾನು ಮಾಡುವುದು ಹೊಟ್ಟೆಗಾಗಿ .. : ಅನಿತಾ ನರೇಶ್ ಮಂಚಿ

ಕೆಲವು ಪುಸ್ತಕಗಳ ತಲೆಬರಹವೇ ಎತ್ತಿಕೋ ಎಂದು ಕೈ ಚಾಚಿ ಕರೆಯುವ ಮಗುವಿನಂತೆ ಭಾಸವಾಗುತ್ತದೆ. ಬೆಳಗಿನ ಸಮಯದಲ್ಲೇನಾದರೂ ಸುಮ್ಮನೆ ಕಗೆತ್ತಿಕೊಂಡು ಕಣ್ಣಾಡಿಸ ಹೊರಟಿರಾದರೆ ಸಿಕ್ಕಿಬಿದ್ದಿರೆಂದೇ ಅರ್ಥ. ಪುಸ್ತಕ ಎತ್ತಿಕೊಂಡವರು ನನ್ನಂತಹ ಗೃಹಿಣಿಯರಾದರೆ  ಅರ್ಧ ತೊಳೆದ ಪಾತ್ರೆಪಗಡಿಗಳು, ವಾಷಿಂಗ್ ಮೆಶೀನಿನಲ್ಲಿ ನೆನೆದು ಒದ್ದೆಯಾಗಿರುವ ಬಣ್ಣ ಬಿಡುವ ಬಟ್ಟೆ,  ಸ್ಟವ್ವಲ್ಲಿಟ್ಟ ಹಾಲು, ಮಧ್ಯಾಹ್ನದ ಅಡುಗೆ ಎಲ್ಲದಕ್ಕೂ ಎಳ್ಳು ನೀರು ಬಿತ್ತೆಂದೇ ತಿಳಿಯಿರಿ. ಅಕ್ಷರಗಳ ಗುರುತ್ವಾಕರ್ಷಣೆಯೇ ಹೆಚ್ಚಿ ಕೊನೆಯ ಪುಟ ಬರುವಲ್ಲಿಯವರೆಗೆ ನಿಮ್ಮ ಕೈಯಿಂದ ಕೆಳಗಿಳಿಲಾರವು.  ಹಾಗಾಗಬಾರದೆಂಬ ಎಚ್ಚರಿಕೆಯಲ್ಲೇ ಪುಸ್ತಕಗಳನ್ನು ಓದುವ ವೇಳೆ … Read more

“ವಾರಿಸ್ ಡಿರೀ: ಮರುಭೂಮಿಯ ಒಂದು ಹೂವಿನ ಕಥೆ” (ಕೊನೆಯ ಭಾಗ): ಪ್ರಸಾದ್ ಕೆ.

ಇಲ್ಲಿಯವರೆಗೆ…. 1991 ರಲ್ಲಿ ನ್ಯೂಯಾರ್ಕ್ ಗೆ ತೆರಳಿದ ವಾರಿಸ್ ನಿರೀಕ್ಷೆಗೂ ಮೀರಿ ಯಶಸ್ವಿಯಾಗುತ್ತಾರೆ. ರೆವಲಾನ್, ಲೆವಿಸ್, ಲಾರಿಯಲ್, ಬೆನೆಟನ್ ಮುಂತಾದ ಪ್ರತಿಷ್ಠಿತ ಕಂಪನಿಗಳ ಉತ್ಪನ್ನಗಳ ರಾಯಭಾರಿಯಾಗಿ ವಾರಿಸ್ ಮಿಂಚುತ್ತಾರೆ. ಮೂರು ತಿಂಗಳಲ್ಲೇ ವಾರಿಸ್ ರ ಚಿತ್ರವನ್ನು ಹೊತ್ತ ದೈತ್ಯ ಜಾಹೀರಾತು ಫಲಕಗಳು ವಿಶ್ವದಾದ್ಯಂತ ಬಿಡುಗಡೆಯಾಗಿ ಎಲ್ಲೆಲ್ಲೂ ರಾರಾಜಿಸತೊಡಗುತ್ತವೆ. ಸುಗಂಧ ದ್ರವ್ಯಗಳು, ಆಭರಣಗಳು, ಮದ್ಯತಯಾರಿಕೆ, ಬಟ್ಟೆಗಳು ಹೀಗೆ ನಾನಾ ಕ್ಷೇತ್ರಗಳಲ್ಲಿ ತನ್ನದೇ ಛಾಪನ್ನು ಮೂಡಿಸಿರುವ ದೈತ್ಯ ಬಹುರಾಷ್ಟ್ರೀಯ ಕಂಪೆನಿಗಳು ತಮ್ಮ ಉತ್ಪನ್ನಗಳ ರಾಯಭಾರಿಯನ್ನಾಗಿಸಿಕೊಳ್ಳಲು ವಾರಿಸ್ ರ ಬೆನ್ನು ಬೀಳುತ್ತವೆ. … Read more

ಪ್ರೇಮಖೈದಿ-೧: ಅಭಿ ಸಾರಿಕೆ

ವಿಶ್ವನಿಗೆ ಪ್ರಜ್ಞೆ ಬಂದಾಗ ತಾನೊಂದು ಆಸ್ಪತ್ರೆಯಲ್ಲಿರುವುದು ತಿಳಿಯಿತು,  ಎದ್ದು ಕುಳಿತುಕೊಳ್ಳಲು ಹೋದವನಿಗೆ, ತಲೆ ಭಾರವಾದಂತ ಅನುಭವ, ಬಲಗೈ, ಎರಡು ಕಾಲು, ತಲೆ ಪೂರ್ತಿ ಬ್ಯಾಂಡೇಜ್ ಮಾಡಿದ್ದರು, ತಕ್ಷಣಕ್ಕೆ ಅವನಿಗೆ ಯಾವುದು ಗುರುತಿಗೆ ಬರಲಿಲ್ಲ, ಎಷ್ಟು ದಿನವಾಗಿದೆಯೋ ನಾನಿಲ್ಲಿ ಬಂದು ಎಂದುಕೊಂಡ,  ನಿಧಾನವಾಗಿ ನಡೆದ ಘಟನೆ ನೆನೆಸಿಕೊಂಡ, ಅಂದು ಪಾರ್ಸಲ್ ಡೆಲಿವರಿ ಕೊಡಲು ಇಂದಿರಾನಗರದ ಕಡೆಗೆ ಹೊರಟಿದ್ದ, ಸಮಯ ಆಗಲೇ ಐದೂವರೆ ಇದೇ ಕೊನೆಯ ಡೆಲಿವರಿ, ಬೇಗ ಹಿಂದಿರುಗದಿದ್ದರೆ ಕೊರಿಯರ್ ಆಫೀಸು ಬಾಗಿಲು ಮುಚ್ಚುತ್ತಾರೆ, ಮತ್ತೆ ನಾಳೆ ಮ್ಯಾನೆಜರ್ನಿಂದ … Read more

ನೀನಂದ್ರೆ ನನಗಿಷ್ಟ…: ಅನುರಾಧ ಪಿ. ಸಾಮಗ

ಈಗಷ್ಟೇ ನಿನ್ನೊಡನೆ ಮಾತಾಡಿ ಫೋನಿಟ್ಟು ಈಚೆಗೆ ಬರುತ್ತಿದ್ದೇನೆ ಗೆಳೆಯಾ. ಸಣ್ಣಪುಟ್ಟ ಅಲೆ ಸೇರಿ ಹೆದ್ದೆರೆಯಾಗುವಂತೆ ನನ್ನೊಳಗೆ ನಿನ್ನ ಬಗೆಗಿನ ಆಲೋಚನೆಗಳು ದಟ್ಟವಾಗುತಲೇ, "ಮನದಲ್ಲಿ ನೆನೆದವರು ಎದುರಲ್ಲಿ" ಎಂಬಂತೆ ನೀನು ಅಲ್ಲೆಲ್ಲಿಂದಲೋ ಸಂಪರ್ಕಿಸಿರುತ್ತೀಯಾ. ಇದು ಮೊದಲೆಲ್ಲ ತುಂಬ ಅಚ್ಚರಿಯೆನಿಸುತ್ತಿತ್ತು. ಈಗೀಗ ನಿನ್ನ ಕುರಿತಾದ ಒಂದೊಂದೇ ಯೋಚನೆ ಬರುಬರುತಾ ಕಾಡತೊಡಗಿ ತೀವ್ರವಾಗಿ ಆವರಿಸಿಕೊಳುತಲೇ ನಿನ್ನ ಕರೆಯ, ನಿನ್ನ ಸಂದೇಶವೊಂದರ ಅಥವಾ ಸಾಕ್ಷಾತ್ ನಿನ್ನ ಬರುವಿಕೆಯ ಗಾಢನಿರೀಕ್ಷೆಯೊಂದು ತನ್ನಷ್ಟಕ್ಕೆ ಮೂಡಿಬರುತ್ತದೆ. ಅದು ಹೇಗಿರುತ್ತದೆ ಅಂದರೆ, ಕತ್ತಲನ್ನು ಮೆಲ್ಲ ಸರಿಸುತ್ತಾ ನಾಕೂ ದಿಕ್ಕಿಂದ … Read more

ಆಗಸದಲ್ಲೊಂದು ಅಧೂರಿ ಕಹಾನಿ: ಪ್ರಸಾದ್ ಕೆ.

13 ಫೆಬ್ರವರಿ, 2016 ದೆಹಲಿಯ ಮಯೂರ್ ವಿಹಾರ್ ಎಂಬ ಪ್ರದೇಶದ, ಕೋಟ್ಲಾ ಹಳ್ಳಿಯ ಮೂರನೇ ಗಲ್ಲಿಯಲ್ಲಿ ತಲೆಯೆತ್ತಿರುವ ಕಟ್ಟಡದ ಐದನೇ ಮಹಡಿಯ ಮನೆಯೊಂದು ಆ ದಿನ ತುಸು ಹೆಚ್ಚೇ ಅನ್ನುವಷ್ಟು ಚಟುವಟಿಕೆಯಲ್ಲಿತ್ತು.  ನಾನು ಆಫ್ರಿಕಾದ ಮೂಲೆಯೊಂದರಲ್ಲಿರುವ ಲುವಾಂಡಾಗೆ ಉದ್ಯೋಗ ನಿಮಿತ್ತವಾಗಿ ತೆರಳುವ ತರಾತುರಿಯಲ್ಲಿದ್ದೆ. ಪ್ಯಾಕಿಂಗ್ ಬಹುತೇಕ ಮುಗಿದಿದ್ದರೂ ಬ್ಯಾಗಿನೊಳಗೆ ಇನ್ನೇನು ತುರುಕಬಹುದು ಎಂಬ ದುರಾಸೆಯಿಂದ ನನ್ನ ಕಣ್ಣುಗಳು ಮನೆಯ ಮೂಲೆಮೂಲೆಗಳನ್ನು ಜಾಲಾಡುತ್ತಿದ್ದವು. ನಾಲ್ಕೈದು ಭಾರದ ಪುಸ್ತಕಗಳು “ಬಾ ಬಾರೋ… ಎತ್ತಿಕೋ ನನ್ನ'' ಎಂದು ಮೌನವಾಗೇ ಬಲು ಪ್ರೀತಿಯಿಂದ … Read more

ದಶಕದ ನೆನೆಪಿಗೆ ಗೆಳೆಯನಿಗೊಂದು ಪ್ರೇಮ ಪತ್ರ: ಸುಮಲತಾ ನಾಯ್ಕ

ಗೆಳೆಯ..ಗೆಳೆಯ.. ಏ.. ಮರಿ .. ಮರಿ  ನಂಗೆ ತುಂಬ ಖುಷಿ ಆಗ್ತಾ ಇದೆ. ನಂಗೆ ನಂಬೋಕೆ ಆಗ್ತಾ ಇಲ್ಲ. ನಂಗೆ ನಗು ಬರ್ತಾ ಇದೆ. ಮತ್ತದೇ ನಾಚಿಕೆ ನನ್ನಲ್ಲಿ ಮೂಡುತ್ತಿದೆ. ಯಾಕೆ ಗೊತ್ತಾ  ನಮ್ಮ ಪ್ರೇಮಕ್ಕೆ 10 ವರ್ಷವಂv!!!É. ನಿಮಗೆ ನಂಬೋಕೆ ಆಗ್ತಾ ಇದ್ಯಾ. ನೀವ್ ಬಿಡಿ ನನಗಿಂತ ತುಂಬಾ ಹುಷಾರು . ಎಲ್ಲವನ್ನು ನೆನೆಪಿಡುವ ಮಹಾ ರಸಿಕ. ನೋಡಿ ಒಮ್ಮೆ ಹಿಂದೆ ಹೋಗಿ ಬರ್ಲಾ. ನಮ್ಮ ಪ್ರೇಮಕ್ಕೆ 10ವರ್ಷದ ಹೊಸ್ತಿಲು. ನೆನೆದಷ್ಟು ಮೊಗೆದಷ್ಟು, ಬೆರೆತಷ್ಟು, ಕಲೆತಷ್ಟು … Read more

ಕಾವ್ಯಧಾರೆ: ಯಲ್ಲಪ್ಪ ಎಮ್ ಮರ್ಚೇಡ್, ಚಾರುಶ್ರೀ ಕೆ.ಎಸ್., ಬಿದಲೋಟಿ ರಂಗನಾಥ್, ರಘು ಕ.ಲ., ರಾಘವೆಂದ್ರ ಹೆಗಡೆಕರ, ಅಮಿತ್ ಭಟ್

ಕಾವ್ಯ ನಮನ  "ಅಮರ ವೀರ:ಹನುಮಂತಪ್ಪ ಕೊಪ್ಪಗೆ ನಮನ" ಕನ್ನಡದ ನೆಲ ವೀರ ಪುತ್ರನೆ ಕನ್ನಡ ಮಣ್ಣಿನ ಧೀರ ಮಿತ್ರನೆ ಭಾರತ ಮಾತೆಯ ಹೆಮ್ಮೆಯ ಪುತ್ರನೆ ಉಕ್ಕಿನ ದೇಹದ ವೀರ ಕನ್ನಡಿಗನೆ ಕನ್ನಡದ ಕೆಚ್ಚೇದೆಯ ಗಂಡಗಲಿಯೆ ಗಂಡೆದೆಯ ಗುಂಡಿಗೆಯ ಮಗಧೀರನೆ ನಿನ್ನ ನಾಮವ ಪುಸ್ತಕದ ಪುಟ ಪುಟದಲಿ ಶತ ಕಾಲ ಅಮರವಾಗಿರಲಿ||1|| ನಿನ್ನ ಸತ್ತಿಲ್ಲದ ವಿಷಯ ಅರಿತ ಇಡೀ ದೇಶವೇ ಸಂತಸದಲಿ ಸಂಭ್ರಮಿಸಿ… ಪ್ರಾರ್ಥನೆ ಮಾಡಿತು, ನಿನ್ನ ಹೆತ್ತ ಮಡಿಲು ಮರೆಯಲ್ಲಿ ನಿಂತು ಬಿಗಿಹಿಡಿದ ನಿಟ್ಟುಸಿರು  ನಿಧಾನಕೆ ಬಿಟ್ಟಳು … Read more

ಕಾಡು(ವ) ಕಟ್ಟುವ ಕತೆ!! ಭಾಗ-5: ಅಖಿಲೇಶ್ ಚಿಪ್ಪಳಿ

ಮೊಲಕ್ಕೆ ಕತ್ತಿ ಬೀಸಿದವ ಮಳೆಯನ್ನೇ ನಂಬಿಕೊಂಡು ಕಾಡು ಕಟ್ಟಲು ಹೊರಟ ನಮ್ಮ ಬವಣೆಗೀಗ ಒಂದು ಪರಿಹಾರ ಬೇಕಾಗಿತ್ತು. ನಮ್ಮ ಹತ್ತಿರ ಮಳೆಗಾಲದಲ್ಲಿ ಮಳೆ ನೀರಿಂಗಿಸಲು ತೋಡಿದ 20 * 20 * 20ರ ನೀರಿಲ್ಲದ ಹೊಂಡವೊಂದು ಬಿಟ್ಟರೆ ಬೇರೆ ಏನೂ ಇಲ್ಲ. ಮನೆಯಿಂದ ಪ್ರತಿದಿನ ನೀರು ತೆಗೆದುಕೊಂಡು ಹೋಗಿ ಸಾಯುತ್ತಿರುವ ಗಿಡಗಳಿಗೆ ನೀರುಣಿಸುವ ಕೆಲಸ ಕಷ್ಟ. ಅಂತೆಯೇ ಏರಿಯ ಮೇಲೆ ನೆಟ್ಟ 400 ಬಿದಿರು ಹಾಗೂ 100 ಕ್ಯಾಲಿಯಾಂಡ್ರಗಳಲ್ಲಿ ಬಿದಿರು ಮಾತ್ರ ಜೀವ ಹಿಡಿದುಕೊಂಡಿತ್ತು. ಕ್ಯಾಲಿಯಾಂಡ್ರಗಳು ಹೆಚ್ಚಿನವು … Read more

ಪರೀಕ್ಷೆಯ ದೀಕ್ಷೆ ದಾಟಿ…..: ಸಂಗೀತ ರವಿರಾಜ್

ದಿಗಿಲು ನೀಡುವಂತಹ ಸನ್ನಿವೇಶವನ್ನು  ನಾವಾಗಿಯೇ ಸೃಷ್ಟಸಿ, ಅನಾವಶ್ಯಕ ಆತಂಕ ಬಯಲುಪಡಿಸಿ ನಾವು ನಾವಾಗಿರದಂತೆ ದಿನಗಳ ಕಾಲ ತಲ್ಲಣಗೊಳಿಸಿಬಿಡುತ್ತದೆ ಈ ಪರೀಕ್ಷೆಯೆಂಬ ಮಾಯಕ. ಬದುಕು ಕ್ರಮಿಸುವ ಹಾದಿಯಲ್ಲಿ ಪರೀಕ್ಷೆಯೆ ಅತ್ಯಮೂಲ್ಯ. ಎಂಬುದು ಪ್ರತಿಯೊಬ್ಬರ ತಲೆಯಲ್ಲಿ ತುಂಬಿದ ನಂತರ ಇದು ಸುಲಭದಲ್ಲಿ ಬಿಟ್ಟು ಹೋಗುವಂತದ್ದಲ್ಲ. ಬದುಕು ಪಾಠ ಕಲಿಸಿ ಏಳು ಬೀಳುಗಳ ಸಮರ ಸಾರಿದ ನಂತರ ನಮಗಾಗಿಯೆ ಅರ್ಥವಾಗುವ ಮುನ್ನ ಪರೀಕ್ಷೆಯೆಂಬ ಚಿಂತೆ ಎಲ್ಲರಲ್ಲಿಯು ಇದ್ದೇ ಇರುತ್ತದೆ. ಈ ಅರ್ಥವಾಗುವ ಕಾಲ ಬಂದಾಗ ನಮ್ಮ ಅಂಕ ಗಳಿಕೆಯ ಪರೀಕ್ಷೆಗಳೆಲ್ಲವು ಮುಗಿದಿರುತ್ತದೆ! … Read more

ನಜ಼ರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಬಲು ಚಳಿ ಚಳಿಗಾಲದಲ್ಲಿ ವಿಪರೀತ ಚಳಿ ಇದ್ದ ಒಂದು ದಿನ ದಪ್ಪನೆಯ ಉಣ್ಣೆ ಬಟ್ಟೆಗಳನ್ನು ಧರಿಸಿದ್ದಾತನೊಬ್ಬ ಬಲು ತೆಳುವಾದ ಸಾಧಾರಣ ಬಟ್ಟೆ ಧರಿಸಿದ್ದ ನಜ಼ರುದ್ದೀನ್‌ನನ್ನು ಗಮನಿಸಿದ. ಅವನು ಕೇಳಿದ, “ಮುಲ್ಲಾ, ಇಷ್ಟೊಂದು ಬಟ್ಟೆ ಧರಿಸಿದ್ದರೂ ನನಗೆ ತುಸು ಚಳಿಯಾಗುತ್ತಿದೆ. ನೀನಾದರೋ ಬಟ್ಟೆಯೇ ಇಲ್ಲವೇನೋ ಅನ್ನಬಹುದಾದಷ್ಟು ಕಮ್ಮಿ ಬಟ್ಟೆ ಧರಿಸಿದ್ದರೂ ಈ ಶೀತಹವೆಯಿಂದ ಪ್ರಭಾವಿತನಾಗಿಲ್ಲ, ಏಕೆ?” ನಜ಼ರುದ್ದೀನ್‌ ಉತ್ತರಿಸಿದ, “ಕಾರಣ ಇಷ್ಟೇ: ನನ್ನ ಹತ್ತಿರ ಇನ್ನೂ ಹೆಚ್ಚು ಬಟ್ಟೆಗಳಿಲ್ಲ, ಎಂದೇ ಚಳಿಯನ್ನು ಅನುಭವಿಸಲು ಸಾಧ್ಯವಿಲ್ಲ. ನಿಮ್ಮ ಹತ್ತಿರವಾದರೋ … Read more

ಸಾಮಾನ್ಯ ಜ್ಞಾನ (ವಾರ 90): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: 1.    ರಾಷ್ಟ್ರೀಯ ಯಕ್ಷಗಾನ ತರಬೇತಿ ಕೇಂದ್ರ ಕರ್ನಾಟಕದಲ್ಲಿ ಎಲ್ಲಿದೆ? 2.    ಎನ್.ಟಿ.ಪಿ.ಸಿ ನ (NTPC) ವಿಸ್ತೃತ ರೂಪವೇನು? 3.    ಗೋಪಾಲಕೃಷ್ಣ ಅಡಿಗರ ಯಾವ ಕೃತಿಗೆ ಪಂಪ ಪ್ರಶಸ್ತಿ ದೊರಕಿದೆ? 4.    ಯುರೋಪಿನ ಯಾವ ನಗರವನ್ನು ಬಿಳಿಯ ನಗರ ಎಂದು ಕರೆಯುತ್ತಾರೆ? 5.    ಗಾಂಧೀಜಿಯವರನ್ನು ಕುರಿತು ಪ್ರಥಮ ಬಾರಿಗೆ ಕನ್ನಡದಲ್ಲಿ ಗ್ರಂಥವನ್ನು ರಚಿಸಿದವರು ಯಾರು? 6.    ಅಂಡಮಾನ್ ದ್ವೀಪಗಳಲ್ಲಿರುವ ಅತಿ ಎತ್ತರವಾದ ಶಿಖರ ಯಾವುದು? 7.    ಪರಾಗ ಸ್ಪರ್ಶಕ್ಕಾಗಿ ಕೀಟಗಳನ್ನು ಆಕರ್ಷಿಸುವ ಹೂವಿನ ಭಾಗ ಯಾವುದು? 8.   … Read more

ಕಾವ್ಯ ಧಾರೆ

ಮನೆ ಮಾತು ಮೌನ ಜಂಟಿ ಸದನ ಅನಿವಾರ್ಯತೆ ಖಡಕ್ ಅಧಿಕಾರಿಯೂ  ಸೇವಕನ  ಗುಲಾಮ ಸಮಾಧಾನ ಹಗಲಿನ ನಿರೀಕ್ಷೆಗಳಿಗೆ ರಾತ್ರಿ ಸ್ವಪ್ನ ಸ್ಖಲನ! ತಳ್ಳಾಟ ಹೆಣ್ಣಿನ  ತಾರತಮ್ಯಕ್ಕೆ ತವರು ಮನೆಯೆ ತೊಟ್ಟಿಲು! ಅಲ್ಲಿಂದಲೇ ತಳ್ಳಾಟ ಒಂದೊಂದೆ  ಮೆಟ್ಟಿಲು! ಕರಕುಂಡ ಪುಟಾಣಿ ಕಂದನ ನಗೆಮೊಗ್ಗು ಹೂವಾಯ್ತು ಅಮ್ಮನ ಕರ ಕುಂಡದಲ್ಲಿ ಮರದ ಹನಿ ಮಳೆ ಸುರಿದರೆ ಮರಗಿಡಗಳಿಗೆ ಅದೆಂಥ ಪುಳಕ ಮಳೆ ನಿಂತ ಮೇಲೂ ಹನಿ ಹನಿ ಜಳಕ! ಮೊದಲರಾತ್ರಿ ಮಾತು ಬೆಳ್ಳಿ ಮೌನ ಬಂಗಾರ ಮೊದಲ ರಾತ್ರಿ ಶೃಂಗಾರ … Read more

ಕಾಣದ ಕಣ್ಣಲಿ ಕಾಡುವ ಕಣ್ಣೀರು: ಕ.ಲ.ರಘು.

ಅದೊಂದು ದಿನ ಸಂಜೆ ನನ್ನ ಪಯಣ ಬೆಂಗಳೂರಿನ ಕಡೆಗೆ ಸಾಗಿತ್ತು. ನನ್ನ ಸಂಬಂಧಿಕರ ಮದುವೆಸಮಾರಂಭಕ್ಕೆ ಹೋಗಬೇಕಾಗಿದ್ದರಿಂದ ನನ್ನ ವೃತ್ತಿ ಮುಗಿಸಿಕೊಂಡು ಕೆಎಸ್‍ಆರ್‍ಟಿಸಿ ಬಸ್‍ಗೆ ಹತ್ತಿದೆ. ಮನಸಿಗೆ ಉಲ್ಲಾಸ ನೀಡುವ ಮೌನಗೀತೆ ಹಾಗೂ ಭಾವಗೀತೆಗಳನ್ನು ಕೇಳುವ ಹವ್ಯಾಸ ಸ್ವಲ್ಪ ಇರುವುದರಿಂದ ಏನಾಗಲಿ ಮುಂದೆ ಸಾಗು ನೀ ಎಂಬ ಗೀತೆಯನ್ನು ಕೇಳುತ್ತಾ ಪ್ರಯಾಣ ಆರಂಭವಾಗಿ ಚಂದಿರ ಬರುವ ವೇಳೆಗೆ ಬೇಂಗಳೂರು ತಲುಪಿದೆ.  ಪ್ರಯಾಣ ಅಲ್ಲಿಗೆ ಮುಗಿಯಲಿಲ್ಲ ಅಲ್ಲಿಂದ ನಮ್ಮ ಸಂಬಂಧಿಕರ ಕಾರಿನಲ್ಲಿ ಮದುವೆ ನಡೆಯುತ್ತಿದ್ದ ಸ್ಥಳಕ್ಕೆ ಹೊರಟೆ. ಹಿಂದೆ ಮುಂದೆ … Read more

“ವಾರಿಸ್ ಡಿರೀ: ಮರುಭೂಮಿಯ ಒಂದು ಹೂವಿನ ಕಥೆ” (ಭಾಗ 3): ಪ್ರಸಾದ್ ಕೆ.

ಇಲ್ಲಿಯವರೆಗೆ ಶ್ರಮಜೀವಿ ವಾರಿಸ್ ಮೆಕ್ ಡೊನಾಲ್ಡ್ ರೆಸ್ಟೊರೆಂಟಿನಲ್ಲಿ ನಿಷ್ಠೆಯಿಂದ ದುಡಿಯುತ್ತಾ ದಿನ ತಳ್ಳುತ್ತಿರುತ್ತಾಳೆ. ಆಗೊಮ್ಮೆ ಈಗೊಮ್ಮೆ ಹಾಲ್ವು ಳೊಂದಿಗೆ ವಾರಾಂತ್ಯಗಳಲ್ಲಿ ಕ್ಲಬ್ ಗಳಿಗೆ ತೆರಳಿ ಮಂದಬೆಳಕಿನಲ್ಲಿ ವೈಭವಿಸುವ ಹಾಡು, ನೃತ್ಯ, ಮದ್ಯಗಳನ್ನು ನಿರ್ಲಿಪ್ತತೆಯಿಂದ ಮೂಲೆಯಲ್ಲಿ ನಿಂತು ಸುಮ್ಮನೆ ನೋಡುತ್ತಿರುತ್ತಾಳೆ. ನಗರದ ಜನರ ಮುಕ್ತ ಲೈಂಗಿಕತೆ ಅವಳಿಗೆ ಅಸಹ್ಯ ಉಂಟುಮಾಡಿದರೆ, ಮೂತ್ರವಿಸರ್ಜನೆಗೂ ಬಾತ್ ರೂಮಿನಲ್ಲಿ ಬಹುಹೊತ್ತು ಹೊಟ್ಟೆಹಿಡಿದುಕೊಂಡು ನರಳಬೇಕಾಗಿ ಒದ್ದಾಡುವ ಅನಿವಾರ್ಯತೆ, ನೋವನ್ನು ಯಾರಲ್ಲೂ ಹೇಳಿಕೊಳ್ಳಲಾಗದ ಎಫ್.ಜಿ.ಎಮ್ ಬಗೆಗಿನ ಕೀಳರಿಮೆ ಅವಳನ್ನು ಮಾನಸಿಕವಾಗಿ ಬಳಲಿಸುತ್ತದೆ. ಆ ದಿನಗಳಲ್ಲಿ ತಕ್ಷಣದ … Read more

ಕಾಡು(ವ) ಕಟ್ಟುವ ಕತೆ!! ಭಾಗ-4: ಅಖಿಲೇಶ್ ಚಿಪ್ಪಳಿ

ಶುಭಸೂಚನೆ ನೀಡಿ ಬಂದ ಮಳೆ ಅದೇಕೋ ಮತ್ತೆ ಮುನಿಸಿಕೊಳ್ಳುವ ಹವಣಿಕೆಯಲ್ಲಿದ್ದಂತೆ  ತೋರಿತು. ಇನ್ನಷ್ಟು ಜನರನ್ನು ಕರೆದುಕೊಂಡು ಬಂದು ಆದಷ್ಟು ಬೇಗ ಗಿಡ ನೆಡಲು ತರಾತುರಿ ಮಾಡಿದೆ. ಆಳುಗಳ ನಿರ್ವಹಣೆ ಮಾಡುವ ನಿರ್ವಾಹಕನಿಗೆ ಕೆಲವು ಷರತ್ತುಗಳನ್ನು ಮೊದಲೇ ಹಾಕಿದ್ದೆ. ಗಿಡಗಳನ್ನು ನೆಟ್ಟ ನಂತರ ಖಾಲಿ ಪ್ಲಾಸ್ಟಿಕ್ ಕೊಟ್ಟೆಗಳನ್ನು ಎಲ್ಲೆಂದರಲ್ಲಿ ಎಸೆಯಬಾರದು. ಯಾವುದೇ ಪ್ರಾಣಿ-ಪಕ್ಷಿ-ಕೀಟ-ಹಾವು-ಕಪ್ಪೆಗಳನ್ನು ಅಪ್ಪಿ-ತಪ್ಪಿಯೂ ಕೊಲ್ಲಬಾರದು. ಅಕೇಶಿಯಾ-ನೀಲಗಿರಿ ಹಾಗೂ ಯುಪಟೋರಿಯಂ ಬಿಟ್ಟು ಮತ್ಯಾವುದೇ ನೈಸರ್ಗಿಕ ಗಿಡ-ಬಳ್ಳಿ-ಮುಳ್ಳುಕಂಟಿಗಳನ್ನು ಕಡಿಯಬಾರದು. ಈ ಯಾವುದೇ ಷರತ್ತುಗಳನ್ನು ಉಲ್ಲಂಘನೆ ಮಾಡಿದರೂ ಮತ್ತೆ ಕೆಲಸಕ್ಕೆ ಬರುವುದು … Read more

ನಜ಼ರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ನಾವು ಪಕ್ಕಾ ಕೆಲಸಗಾರರು ಒಮ್ಮೆ ನಜ಼ರುದ್ದೀನ್ ನ್ಯಾಯಾಧೀಶನಾಗಿ ಕಾರ್ಯ ನಿರ್ವಹಿಸುತ್ತಿದ್ದ. ಒಂದು ದಿನ ಒಬ್ಬಾತ ಅವನ ಹತ್ತಿರ ಓಡಿ ಬಂದು ಹೇಳಿದ, “ಈ ಹಳ್ಳಿಯ ಗಡಿಯ ಸಮೀಪದಲ್ಲಿ ನನ್ನನ್ನು ಲೂಟಿ ಮಾಡಿದ್ದಾರೆ. ಕಳ್ಳ ನನ್ನ ಹತ್ತಿರವಿದ್ದ ಎಲ್ಲವನ್ನೂ ಕಿತ್ತುಕೊಂಡಿದ್ದಾನೆ – ನನ್ನ ಪಾದರಕ್ಷೆಗಳು, ನನ್ನ ಷರಾಯಿ, ನನ್ನ ಅಂಗಿ, ನನ್ನ ಮೇಲಂಗಿ, ನನ್ನ ಕಂಠಹಾರ, ನನ್ನ ಕಾಲುಚೀಲಗಳನ್ನೂ ಬಿಡಲಿಲ್ಲ – ನನ್ನ ಹತ್ತಿರವಿದ್ದ ಎಲ್ಲವನ್ನೂ ಕಿತ್ತುಕೊಂಡ. ಅವನನ್ನು ಪತ್ತೆಹಚ್ಚಿ ನನಗೆ ನ್ಯಾಯ ಕೊಡಿಸಿ.” ನಜ಼ರುದ್ದೀನ್‌ ಹೇಳಿದ, … Read more