ಹೆಗ್ಗಡಹಳ್ಳಿ ಮಕ್ಕಳಿಂದ “ನಿಮ್ಮ ಕಸ ನಿಮಗೆ” ಅಭಿಯಾನ.

‘ನಾಳೆಗಳು ನಮ್ಮದು” ಎಂಬ ಧ್ಯೇಯದೊಂದಿಗೆ ನಂಜನಗೂಡು ತಾಲೂಕಿನ ಹೆಗ್ಗಡಹಳ್ಳಿಯ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ಕಳೆದ ವಾರ ನಡೆದ ಬಣ್ಣದಮೇಳದಲ್ಲಿ ಮಕ್ಕಳು ಅಪರೂಪದ ಅಭಿಯಾನವೊಂದನ್ನು ಆರಂಭಿಸಿದರು. ಬೇರೆ ಬೇರೆ ರುಚಿಯ ಅತ್ಯಾಕರ್ಷಕ ಮಕ್ಕಳ ತಿಂಡಿಗಳನ್ನು ದೇಶದಲ್ಲಿ ಹಲವಾರು ಕಂಪೆನಿಗಳು ಉತ್ಪಾದಿಸುತ್ತವೆ. ಸಣ್ಣ ಸಣ್ಣ ಹಳ್ಳಿಗಳಲ್ಲಿಯೂ ಇಂತಹ ಉತ್ಪನ್ನಗಳು ಸಿಗುತ್ತವೆ. ಆ ಉತ್ಪನ್ನಗಳನ್ನು ಬಣ್ಣ ಬಣ್ಣದ ಪ್ಲಾಸ್ಟಿಕ್ ಕವರುಗಳಲ್ಲಿ ತುಂಬಿ ಮಕ್ಕಳನ್ನು ಆಕರ್ಷಿಸಲಾಗುತ್ತದೆ. ಹೆಗ್ಗಡಹಳ್ಳಿಯ ಮಕ್ಕಳು ಬಣ್ಣದಮೇಳದಲ್ಲಿ ಸೇರಿ ಈ ಕವರು ನಮ್ಮೂರಿಗೆ ಕಸವಾಗಿ ಹಾಗೆಯೇ ಉಳಿಯುತ್ತದೆ ಎಂಬುವುದನ್ನು … Read more

ಪಂಜು ಕಾವ್ಯಧಾರೆ

ಸ್ವರ್ಗ ಸೃಷ್ಟಿಯಾಗುತಿರಲು ಸುಳಿಯುತಿರುವ ಗಾಳಿ ಗಂಧ ಬಳಿಯಲಿರುವ ಯಮುನೆ ಚಂದ್ರ ಸುಳಿಯದಿರುವ ಸಖನ ನೆನೆದು ನಳಿನೆ ಕಾಯುತಿದ್ದಳು ಅಂದುಗೆ ಧನಿ ‘ಘಲ್” ಎನಲು ಎದೆಯು ಮಿಡಿದು ‘ಝಲ್” ಎನಲು ಬಂದನೇನೆ………. ಮಾಧವನು ಎಂದು ರಾಧೆ ನೊಂದಳು ಸುತ್ತಮುತ್ತ ಭೃಂಗ ಪಾನ ಹೊತ್ತಿ ಎದೆಯ ರಸದ ಗಾನ ಮೆತ್ತನೊಮ್ಮೆ ಮುಖವನೆತ್ತಿ ಮುತ್ತನೊತ್ತ ಬಾರದೇ ಹಾರುತಿತುವ ಸೆರಗ ಬಿಟ್ಟು ಜಾರುತಿರುವ ನೆರಿಗೆ ಬಿಟ್ಟು ಹಾರಿ ಬರುವ ಮುರಳಿಯಡೆಗೆ ನೀರೆ ಓಡಿ ಬಂದಳು ಬಂದ ನಲ್ಲನೊಡನೆ ಕೂಡಿ ಒಂದು ಘಳಿಗೆ ಎಲ್ಲ … Read more

ಮತ್ತೆ ಹೇಳಿ, ಮರು ಜೋಡಿಸಿ, ನಲಿದಾಡಿ ಅಭಿಯಾನ

ಪ್ರಥಮ್ ಬುಕ್ಸ್ ಸ್ಟೋರಿವೀವರ್ ನ (https://storyweaver.org.in)  ಮತ್ತೆ ಹೇಳಿ, ಮರು ಜೋಡಿಸಿ, ನಲಿದಾಡಿ ಅಭಿಯಾನ ವು (Retell, Remix, Rejoice) ಮಾ.20 ರಿಂದ ಶುರುವಾಗಲಿದೆ. ಈ ಮೂಲಕ ಪ್ರಥಮ್ ಬುಕ್ಸ್ ನ ವಾರ್ಷಿಕ ಕತೆ ಹೇಳುವ ಸ್ಪರ್ಧೆಗೆ ಚಾಲನೆ ಸಿಗಲಿದೆ. ಪ್ರತಿ ವರ್ಷ ಮಾ.20ಕ್ಕೆ ನಮಗಾಗಿ ಕತೆಗಳನ್ನು ಬರೆದ ಲೇಖಕರು, ಓದುಗರಿಂದ ಆಯ್ದ ಕೆಲವು ವಿಷಯಗಳ ಮೂಲ ಎಳೆಯೊಂದಿಗೆ ಕತೆಗಳನ್ನು ಬರೆಯಲು ಆಹ್ವಾನಿಸುತ್ತೇವೆ. ಈ ಎಲ್ಲಾ ವಿಷಯಗಳು ಪ್ರಥಮ್ ಬುಕ್ಸ್ ಸಂಪಾದಕೀಯ ಬಳಗದ ಆಯ್ಕೆಯೇ ಆಗಿರುತ್ತದೆ. 2019ರ ಅಭಿಯಾನದ ಮುಖ್ಯ ಉದ್ದೇಶ … Read more

ಮಾನಸಪುತ್ರ ನಾಟಕ ಪ್ರದರ್ಶನ

ನಾಟಕದ ಹೆಸರು : ಮಾನಸಪುತ್ರ. ಆಧಾರ : ಬೀಚಿಯವರ ‘ ನನ್ನ ಭಯಾಗ್ರಫಿ’ ಮತ್ತು ಇತರೆ ಅನುಭವಗಳು ರಚನೆ – ನಿರ್ದೇಶನ : ಬಸವರಾಜ ಎಮ್ಮಿಯವರ ಅಭಿನಯಿಸುವ ತಂಡ : ಕಲಾವಿಲಾಸಿ ದಿನಾಂಕ ಮತ್ತು ಸಮಯ : 13 ಏಪ್ರಿಲ್ 2019, ಶನಿವಾರ. ಸಂಜೆ 7.00 ಕ್ಕೆ ಸ್ಥಳ :ಸೇವಾಸದನ. 14ನೆ ಅಡ್ಡ ರಸ್ತೆ, ಮಲ್ಲೇಶ್ವರ ಬೆಂಗಳೂರು ನಾಟಕದ ಅವಧಿ : 80 ನಿಮಿಶಗಳು. ಪ್ರವೇಶ ದರ : 100/- ಹೆಚ್ಚಿನ ಮಾಹಿತಿಗೆ : 9663523904 ನಾಟಕದ … Read more

ಜಾಣಸುದ್ದಿ 19: ಕೊಳ್ಳೇಗಾಲ ಶರ್ಮ

ಈ ವಾರದ ಸಂಚಿಕೆಯಲ್ಲಿ ಕೊಳ್ಳೇಗಾಲ ಶರ್ಮರವರ ಧ್ವನಿಯಲ್ಲಿರುವ ಈ ಆಡೀಯೊ ಕೇಳಲು ಈ ಕೆಳಗಿನ ಕೊಂಡಿಯ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಜಾಣ ಸುದ್ದಿ ಧ್ವನಿಮುದ್ರಿಕೆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ save as/ download ಆಪ್ಷನ್ ನಿಂದ ನಿಮ್ಮ ಮೊಬೈಲ್/ ಕಂಪ್ಯೂಟರ್ ಗೆ ಡೌನ್ ಲೋಡ್ ಮಾಡಿಕೊಳ್ಳಿ… ಇ ಮೇಲ್ ನಲ್ಲಿ ಅಥವಾ ವಾಟ್ಸ್ ಅಪ್ ನಲ್ಲಿ ಈ ಧ್ವನಿಮುದ್ರಿಕೆ ನಿಮಗೆ ಬೇಕು ಎಂದನಿಸಿದರೆ ನಿಮ್ಮ ಕೋರಿಕೆಯನ್ನು ನಮ್ಮ … Read more

ರೈತನ ಮಗಳ ಎಂ.ಬಿ.ಬಿ.ಎಸ್. : ಕೊಟ್ರೇಶ್ ಕೊಟ್ಟೂರು

ನಾಳೆ ಹೇಗಾದರೂ ಮಾಡಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಯೇ ತೀರುವೆ ಎನ್ನುವ ಭರವಸೆಯಿಂದ ಜಗದೀಶ ಭಾನುವಾರ ರಾತ್ರಿ 7.00 ಗಂಟೆಗೆ ತನ್ನೆಲ್ಲಾ ಬಟ್ಟೆಯನ್ನು ಪ್ಯಾಕ್ ಮಾಡಿ ರಾತ್ರಿ 10.30 ಕ್ಕೆ ಬಸ್ ಇರುವುದು ಅದಕ್ಕೆ ಹೊರಟರಾಯಿತು ಎಂದು ಅಂದುಕೊಂಡು ತನ್ನ ಹೆಂಡತಿ ಮುಬೀನಾಗೆ ಹೇಳಿದ “ಏನೆ ನಾನು ಬೆಳಿಗ್ಗೆ ಬೆಂಗಳೂರು ಹೋಗ್ತಿದ್ದೀನಿ ಮಗಳಿಗೆ ಏನಾದ್ರೂ ಇದ್ರೆ ಕೊಡು ಅಂದ” ಅದಕ್ಕೆ ಮುಬೀನಾ “ಅಲ್ರೀ ಇಲ್ಲಿ ಉಣ್ಣಾಕ ಏನೂ ಗತಿಯಿಲ್ಲ, ಮಳೆ ನೋಡಿದ್ರ ಕಣ್ಮರೆಯಾಗ್ಯಾತಿ ಏನು ಅದ ಮನ್ಯಾಗ ಬರೀ … Read more

ವಿಂಡೀಸ್ ಪಾಲಿಗೆ ಒಬ್ಬನೇ ಶಿವ, ಒಬ್ಬನೇ ಚಂದ್ರ: ಆದರ್ಶ ಯು ಎಂ

ನೀವು ತೊಂಭತ್ತರ ದಶಕದಿಂದ ಕ್ರಿಕೆಟ್ ನೋಡುವವರಾಗಿದ್ದರೆ ನಿಮಗೆ ಶಿವನಾರಾಯಣ್ ಚಂದ್ರಪೌಲ್ ನೆನಪಿನಲ್ಲಿ ಇದ್ದೇ ಇರುತ್ತಾನೆ, ಹೆಚ್ಚೂ ಕಡಿಮೆ ಬೌಲರ್ ಗೆ ಅಡ್ಡವಾಗಿ ನಿಲ್ಲುವ ಆತನ ಬ್ಯಾಟಿಂಗ್ ಶೈಲಿಯನ್ನು ಮರೆಯಲಾದರೂ ಹೇಗೆ ಸಾಧ್ಯ? ಶಿವನಾರಾಯಣ್ ಚಂದ್ರಪಾಲ್ ನ ವಂಶದ ಹಿಂದಿನವರು ಜೀತ ಪದ್ಧತಿಯಿಂದ ಭಾರತದಿಂದ ವೆಸ್ಟ್ ಇಂಡೀಸ್ ಗೆ ಹೋಗಿ ನೆಲೆಸಿದರು ಅಂತ ಇತಿಹಾಸ ಹೇಳುತ್ತದೆ. ಅಂತಹ ವಂಶದ ಚಂದ್ರಪಾಲ್ ಮುಂದೆ ವೆಸ್ಟ್ ಇಂಡೀಸ್ ತಂಡದ ಆಧಾರ ಸ್ಥಂಭವಾಗಬಲ್ಲ ಅಂತ ಅಂದು ಜೀತದಾಳುಗಳಾಗಿದ್ದ ಆತನ ಪೂರ್ವಜರಿಗೆ ಗೊತ್ತಿರಲಿಲ್ಲವೇನೋ. ಚಂದ್ರ … Read more

ಹೀಗೊಂದು ಸಾರ್ಥಕ ಮಹಿಳಾ ದಿನಾಚರಣೆ: ಶೀಲಾ. ಶಿವಾನಂದ. ಗೌಡರ.   

ಅಂದು ಮಾರ್ಚ 8. ವಿಶ್ವ ಮಹಿಳಾ ದಿನಾಚರಣೆ. ಶಾಲೆಯಲ್ಲಿ ವಿಶ್ವ ಮಹಿಳಾ ದಿನದ  ಇತಿಹಾಸವನ್ನು,  ಮಹಿಳೆಯರ ಹಕ್ಕು, ರಕ್ಷಣೆ, ಖ್ಯಾತ ಮಹಿಳಾ ಸಾಧಕಿಯರು, ಸಾಧನೆಯ ಹಾದಿಯಲ್ಲಿ ಎದುರಾಗುವ ತೊಡಕುಗಳು, ಅವುಗಳನ್ನು ಮೆಟ್ಟಿನಿಂತು ಸಾಧನೆಯ ನಗುಚಲ್ಲುವ  ಛಾತಿಯ ಬಗ್ಗೆ ವಿದ್ಯಾರ್ಥಿಗಳಿಗೆ  ತಿಳಿಸಲು , ಅವರೊಂದಿಗೆ ಚರ್ಚಿಸಲು ತುಂಬಾ ಉತ್ಸುಕಳಾಗಿದ್ದೆ.  ಸಂಸಾರ ಮತ್ತು  ವೃತ್ತಿಗಳೆರಡನ್ನು  ಯಶಸ್ವಿಯಾಗಿ  ನಿಭಾಯಿಸುತ್ತಿರುವ ಸುಪರ್ ವುಮನ್ ಗಳ ಸಾಲಿನಲ್ಲಿ ನಾನೂ ಒಬ್ಬಳು ಎಂದು ಬೀಗುತ್ತ, ಲಗುಬಗೆಯಲ್ಲಿ ಶಾಲೆಗೆ ನಡೆದೆ. ಯಾವತ್ತೂ ಅಭ್ಯಾಸದಲ್ಲಿ, ಶಾಲೆಯ ಪ್ರತಿ ಚಟುವಟಿಕೆಗಳಲ್ಲಿ … Read more

ಬೆಲ್ಲದ ಬಗ್ಗೆ ಬಲ್ಲಿರೇನು?: ಎಂ.ಎಚ್.ಮೊಕಾಶಿ

ಇಂದು ಬಹುತೇಕ ಜನರ ಮನೆಯಲ್ಲಿ ಫ್ರಿಜ್ ಇರುವುದರಿಂದ ವಿವಿಧ ರೀತಿಯ ಸಾಫ್ಟ್ ಡ್ರಿಂಕ್ಸ್‍ಗಳನ್ನು ಬಳಸುತ್ತೇವೆ. ಇವುಗಳು ನಾವು ಬಿಸಿಲಿನಿಂದ ಬಂದಾಗ ನಮ್ಮ ದೇಹವನ್ನು ತಂಪಾಸುತ್ತವೆ. ಆದರೆ ಮೊದಲೆಲ್ಲ ಹಾಗಿರಲಿಲ್ಲ ಹೊರಗಿನಿಂದ ಬಿಸಿಲಿನಲ್ಲಿ ಬಂದವರಿಗೆ ಬೆಲ್ಲ ಮತ್ತು ನೀರು ಕೊಡುತ್ತಿದ್ದರು. ಏಕೆಂದರೆ ಬೆಲ್ಲದಲ್ಲಿ ಗ್ಲುಕೋಸ್, ವಿಟಮಿನ್ ಹಾಗೂ ಕ್ಯಾಲ್ಸಿಯಮ್‍ಗಳಿರುವುದರಿಂದ ಶೀಘ್ರವಾಗಿ ದಣಿವಾರಿಸಿ ಆರೋಗ್ಯವನ್ನು ಸುಧಾರಿಸುವುದೆಂದು ತಿಳಿದಿದ್ದರು. ಆದರೆ ಇಂದು ಬೆಲ್ಲ ತಿನ್ನುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಏಕೆಂದರೆ ಬಹುತೇಕ ಜನರು ಸಕ್ಕರೆಯತ್ತ ತಮ್ಮ ಅಕ್ಕರೆಯನ್ನು ತೋರಿಸುತ್ತಿದ್ದಾರೆ. ಬೆಲ್ಲ ಅಂದರೆ ಮೂಗು … Read more

ಗೂಡಿನಲ್ಲೊಂದು ಗೂಡು!: ಜಯಶ್ರೀ. ಜೆ. ಅಬ್ಬಿಗೇರಿ ಬೆಳಗಾವಿ 

‘ನಿರಂತರ ಸಂತೋಷವೆಂಬುದಿಲ್ಲ ಕೇವಲ ಸಂತಸದ ಕ್ಷಣಗಳಿವೆ.’ ಎನ್ನುವುದು ಬಲ್ಲವರ ಮಾತು. ಇಂಥ ಸಂತಸದ ಕ್ಷಣಗಳನ್ನು ದಕ್ಕಿಸಿಕೊಳ್ಳಲು ಸ್ವಂತದ್ದೊಂದು ಗೂಡು (ಹೋಮ್ ಸ್ವೀಟ್ ಹೋಮ್) ಕಟ್ಟಲೇಬೇಕೆಂದು ಮುಂದಾಗುತ್ತೇವೆ. ಸ್ವಂತದ್ದೊಂದು ಮನೆ ಕಟ್ಟಿಕೊಳ್ಳುವುದು ಬದುಕಿನ ಪರಮೋಚ್ಚ ಗುರಿ. ಆ ಗುರಿ ಮುಟ್ಟಲು ಬ್ಯಾಂಕ್ ಲೋನ್‍ಗೆ ಅರ್ಜಿ ಸಾಲದ್ದಕ್ಕೆ ಸಂಬಂಧಿಕರು ಸ್ನೇಹಿತರು ಪರಿಚಿತರ ಹತ್ತಿರ ಸಾಲ. ಮನೆಯಾಕೆಯ ಸಾಮಾನು ಅಡವಿಡುವುದು ಇನ್ನೂ ಏನೇನೋ ನಡೆಯುತ್ತವೆ. ಇದನ್ನೆಲ್ಲ ಅರಿತ ನಮ್ಮ ಹಿರಿಯರು ‘ಮನೆ ಕಟ್ಟಿ ನೋಡು ಮದುವೆ ಮಾಡಿ ನೋಡು.’ ಎಂಬ ಮಾತು … Read more

ಸ್ವಾರ್ಥಿಗಳಾಗಿ – ಅಗತ್ಯವಿದ್ದವರಿಗೆ ನೆರವಾಗಿ: ಎಂ.ಎನ್.ಸುಂದರ ರಾಜ್, ಶಿವಮೊಗ್ಗ

ಇದೊಂದು 100 ವರ್ಷದ ಕಥೆಯಾದರೂ, ಅದರಿಂದ ದೊರಕುವ ಪಾಠ ಇಂದಿಗೂ ಪ್ರಸ್ತುತವಾದದ್ದು. 1892ನೆಯ ಇಸವಿ., ಸ್ಥಳ ಸ್ಟಾಂಡ್ ಫೋರ್ಡ್ ವಿಶ್ವವಿದ್ಯಾನಿಲಯ. 18 ವರ್ಷದ ಯುವ ವಿದ್ಯಾರ್ಥಿಯೊಬ್ಬ ಕಾಲೇಜಿನ ಶುಲ್ಕ ಕಟ್ಟಲು ಹೆಣಗಾಡುತ್ತಿದ್ದ. ಅವನೊಬ್ಬ ಅನಾಥ, ಯಾವ ಬಂಧುಗಳೂ ಇಲ್ಲ, ಹಣ ಹೊಂದಿಸುವುದು ಹೇಗೆಂದು ಒದ್ದಾಡುತ್ತಿದ್ದ. ಆಗ ಅವನಿಗೊಂದು ಉಪಾಯ ಹೊಳೆಯಿತು. ಅವನು ಮತ್ತು ಅವನ ಗೆಳೆಯನೊಬ್ಬ ವಿಶ್ವ ವಿದ್ಯಾನಿಲಯದ ಆವರಣÀದಲ್ಲಿ ಒಂದು ಸಾಂಸ್ಕøತಿಕ ಕಾರ್ಯಕ್ರಮವನ್ನೇರ್ಪಡಿಸಿ ಹಣ ಸಂಪಾದಿಸಿ ಕಾಲೇಜಿನ ಶುಲ್ಕ ಭರ್ತಿ ಮಾಡುವುದು. ಅದಕ್ಕಾಗಿ ಅಂದಿನ ಪ್ರಸಿದ್ಧ … Read more

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ!: ಕೆ ಟಿ ಸೋಮಶೇಖರ ಹೊಳಲ್ಕೆರೆ.

ಪ್ರಪಂಚ ರಹಸ್ಯಗಳ, ವಿಸ್ಮಯಗಳ ಆಗರ! ಎಲ್ಲಾ ಜೀವಿಗಳಂತೆ ಮಾನವ ಭೂಮಿಯ ಮೇಲೆ ಹುಟ್ಟಿದ್ದಾನೆ. ಎಲ್ಲಾ ಜೀವಿಗಳು ಬದುಕಿನಲ್ಲಿ ಲೀನವಾಗಿ ಬದುಕುತ್ತಿವೆ. ಅವು ಬದುಕಿನ ಹೊರತು ಬೇರೇನೂ ಯೋಚಿಸವು. ಇಂದಿನ ಆಹಾರದ ಹೊರತು ನಾಳಿನ ಆಹಾರದ ಬಗ್ಗೆ ಚಿಂತಿಸವು. ಮಾನವ ಮಾತ್ರ ಈ ಎಲ್ಲಾ ಜೀವಿಗಳು, ಮಾನವರು ಯಾಕೆ ಹುಟ್ಟಬೇಕು? ಯಾಕೆ ಬದುಕಬೇಕು? ಬದುಕಿನ ಉದ್ದೇಶವೇನು? ಎಂಬ ಪ್ರಶ್ನೆಗಳನ್ನು ಕೇಳಿಕೊಂಡು ಉತ್ತರ ಹುಡುಕುತ್ತಿದ್ದಾನೆ! ನಾಳಿನ ಆಹಾರದ ಬಗ್ಗೆ, ಸುಂದರವಾದ ಭವಿಷ್ಯದ ಬಗ್ಗೆ ಯೋಚಿಸುತ್ತಿದ್ದಾನೆ! ಎಲ್ಲರೂ ಹುಟ್ಟಿದಂತೆ ಹುಟ್ಟುವುದು ಹುಟ್ಟಿಸುವವರನ್ನು … Read more

ಪಂಜು ಕಾವ್ಯಧಾರೆ

Me too ಮುಗಿದು ಹೋದ ಕಥೆಗೆ ಅನುಭವಿಸಿಯಾದ ವ್ಯಥೆಗೆ ಯಾಕೆ ಬೇಕಿತ್ತು ಈಗ Me too ಬಿಸಿ ಇರುವಾಗಲೇ ಮುಗಿಸಬೇಕಿತ್ತು ಕಂಪ್ಲೆಂಟ್ ಕೊಟ್ಟು ಆಗುತ್ತಿತ್ತಾಗಲೇ ಗುಟ್ಟು ರಟ್ಟು ಅಂದು ಅನುಭವಿಸುವಾಗ ಮಜ ಈಗ ಅದು ಸಜ ಇರಬಹುದು ಇದಕೆ ಕಾರಣ ದ್ವೇಷ ಜೊತೆಗೆ ಹಣದ ಆಮಿಷ ಯೋಚಿಸಲಿ ಪೂರ್ವಾಗ್ರಹ ಬದಿಗಿಟ್ಟು ಸತ್ಯಾಸತ್ಯತೆಗೆ ಬೆಲೆಕೊಟ್ಟು ಬಲಿಯಾಗದಿರಲಿ ಮರ್ಯಾದೆ ಸುಮ್ಮ ಸುಮ್ಮನೆ ತೆಗೆಯದಿರಲಿ ತಗಾದೆ ನಿಜಕೂ ಅನ್ಯಾಯವಾಗಿದ್ದರೆ ಅದು ಸರಿ ಬರಲಿ ಬೆಳಕಿಗೆ ರಕ್ಕಸರ ತೇವಲಿ ಅನ್ಯಾಯವಾದರೂ ಆಗಿಹರಾಗಲೇ ಬಲಿ … Read more

ಕ್ಯಾ ಯಹೀ ಪ್ಯಾರ್ ಹೇ…..: ಗಿರಿಜಾ ಜ್ಞಾನಸುಂದರ್

ಬೆಳಿಗ್ಗೆ ಏಳುತ್ತಲೇ ಗಲಾಟೆ ಮಾಡುತ್ತಿದ್ದ ತನ್ನ ಪುಟ್ಟ ಅಚಿಂತ್ಯನನ್ನ ತನ್ನ ಕಂಕುಳಲ್ಲಿ ಹೊತ್ತುಕೊಂಡು ಅಡುಗೆ ಮನೆಗೆ ಧರಿತ್ರಿ ಬಂದಳು. ಗಂಟೆ ಆಗಲೇ ೬ ಆಗಿತ್ತು. ಗಂಡನಿಗೆ ಅಡುಗೆ ಮಾಡಿ ಡಬ್ಬಿಗೆ ಹಾಕಬೇಕು, ಹೆಚ್ಚು ಸಮಯವಿಲ್ಲ ಎಂದು ದಡಬಡ ಕೆಲಸ ಮಾಡುತ್ತಿದ್ದಳು. ಗಂಡನ ಪ್ರೀತಿಯ ವಾಂಗೀಬಾತ್ ಮಾಡುತ್ತ ಜೊತೆಯಲ್ಲಿ ಗಸಗಸೆ ಪಾಯಸ ಮಾಡುವುದರಲ್ಲಿ ಮಗ್ನಳಾಗಿದ್ದಳು. ಪುಟ್ಟ ಮಗು ಕೈಬಿಡುತ್ತಿಲ್ಲ. ಆದರೂ ಅವನ ಹುಟ್ಟುಹಬ್ಬಕ್ಕೆಂದು ಅವನಿಗೆ ಮತ್ತು ಅವನ ಸಹೋದ್ಯೋಗಿಗಳಿಗೂ ಆಗುವಂತೆ ಪ್ರೀತಿಯಿಂದ ತಯಾರು ಮಾಡಿ, ಡಬ್ಬಿಗೆ ಹಾಕಿದಳು. ಅಷ್ಟರಲ್ಲಿ … Read more

ಜಾಣಸುದ್ದಿ 18: ಕೊಳ್ಳೇಗಾಲ ಶರ್ಮ

ಈ ವಾರದ ಸಂಚಿಕೆಯಲ್ಲಿ ಕೊಳ್ಳೇಗಾಲ ಶರ್ಮರವರ ಧ್ವನಿಯಲ್ಲಿರುವ ಈ ಆಡೀಯೊ ಕೇಳಲು ಈ ಕೆಳಗಿನ ಕೊಂಡಿಯ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಜಾಣ ಸುದ್ದಿ ಧ್ವನಿಮುದ್ರಿಕೆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ save as/ download ಆಪ್ಷನ್ ನಿಂದ ನಿಮ್ಮ ಮೊಬೈಲ್/ ಕಂಪ್ಯೂಟರ್ ಗೆ ಡೌನ್ ಲೋಡ್ ಮಾಡಿಕೊಳ್ಳಿ… ಇ ಮೇಲ್ ನಲ್ಲಿ ಅಥವಾ ವಾಟ್ಸ್ ಅಪ್ ನಲ್ಲಿ ಈ ಧ್ವನಿಮುದ್ರಿಕೆ ನಿಮಗೆ ಬೇಕು ಎಂದನಿಸಿದರೆ ನಿಮ್ಮ ಕೋರಿಕೆಯನ್ನು ನಮ್ಮ … Read more

ನಿಷೇಧಕ್ಕೊಳಪಟ್ಟ ಆ ಒಂದು ನೋಟು- ವಿಮರ್ಶೆ: ಸಚಿನ್ ಅಂಕೋಲಾ..

ಕವಿತೆಗಳ ಮೂಲಕವೇ ಪರಿಚಿತರಾದ ವಿಲ್ಸನ್ ಕಟೀಲ್ ಅವರ ಚೊಚ್ಚಲ ಕನ್ನಡ ಕವಿತೆಗಳ ಸಂಕಲನವನ್ನು ಓದುವ ಈ ಹೊತ್ತಿಗೆ ಅವರೊಬ್ಬ ಪ್ರಭುದ್ಧ, ವೈಚಾರಿಕ, ಸಾಮಾಜಿಕ ಕಳಕಳಿಯುಳ್ಳ, ಸರಳ ವ್ಯಕ್ತಿತ್ವದ ವಿಶೇಷ ಕವಿಯಾಗಿ ನಮ್ಮೆಲ್ಲರಿಗೂ ಆಪ್ತರಾದವರು.. ಸಮಾಜದಲ್ಲಿ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಘಾಸಿಯಾದಂತೆಲ್ಲಾ ತಾವು ಲೇಖನಿಯ ಮೂಲಕ ತಕ್ಷಣದಲ್ಲಿ ಪ್ರತಿಕ್ರಿಯಿಸುವ ವಿಲ್ಸನ್ ಕಟೀಲ್ ಅವರು ಈ ದಿನಗಳ ಬಹಳ ಅಗತ್ಯದ ಕವಿ ಮತ್ತು ಅವರ ಕವಿತೆಗಳು ಇಂದಿನ ಅತ್ಯಾವಶ್ಯಕ ರಚನೆಗಳಾಗಿವೆ.. ಪ್ರಸ್ತುತ “ನಿಷೇಧಕ್ಕೊಳಪಟ್ಟ ಒಂದು ನೋಟು” ಕವಿತೆಗಳ ಸಂಕಲನ ಯಾವ … Read more

ಯುವಜನರ ಹಕ್ಕುಗಳ ರಕ್ಷಣೆಗೂ ಆಯೋಗ ಬೇಕಲ್ಲವೇ?: ರುಕ್ಮಿಣಿ ನಾಗಣ್ಣವರ

ಫಕ್ಕೀರಪ್ಪ. ಹುಟ್ಟಿ-ಬೆಳೆದದ್ದು ಬೆಳಗಾವಿ ಜಿಲ್ಲೆಯ ಪುಟ್ಟ ಗ್ರಾಮದಲ್ಲಿ. ದೊಡ್ಡ ವ್ಯಕ್ತಿಯಾಗುವ ಅಥವಾ ಉನ್ನತ ಸಾಧನೆ ಮಾಡುವ ಅದಮ್ಯ ಕನಸುಗಳೇನೂ ಇರಲಿಲ್ಲ. ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಪೂರ್ಣಗೊಳಿಸಿದ ಅವರಿಗೆ ವಿಶ್ವವಿದ್ಯಾಲಯದ ಮೆಟ್ಟಿಲೇರುವ ಗುರಿ ಇರಲಿಲ್ಲ. ಅಷ್ಟೇ ಅಲ್ಲ, ಪಿಯು ಕಾಲೇಜಿಗೆ ಹೋಗುವ ಸ್ಪಷ್ಟ ಕಲ್ಪನೆಯೂ ಇರಲಿಲ್ಲ. ಆಯಾ ದಿನದ ದುಡಿಮೆಯನ್ನೇ ನಂಬಿದ್ದ ತಂದೆ, ತಾಯಿಗೂ ಮಗನಿಗೆ ಉನ್ನತ ಶಿಕ್ಷಣ ಕೊಡಿಸುವ ಶಕ್ತಿ ಇರಲಿಲ್ಲ. ಸಾಂವಿಧಾನಿಕ ಹಕ್ಕು ಇದ್ದರೂ ಆರ್ಥಿಕ ಮತ್ತು ಇನ್ನಿತರ ಸೌಲಭ್ಯದ ಕೊರತೆಯಿಂದ ಫಕ್ಕೀರಪ್ಪಗೆ ಶಾಲೆಯ … Read more

ವಿಶ್ವ ರೇಡಿಯೋ ದಿನಾಚರಣೆ: ಎಂ.ಎಚ್.ಮೊಕಾಶಿ

ನಾಲಿಗೆಯಿಲ್ಲದೇ ಮಾತನಾಡುವ ವಸ್ತು ಎಂದೇ ಖ್ಯಾತಿಯಾದ ರೇಡಿಯೋವನ್ನು ಇಟಲಿ ದೇಶದ ವಿಜ್ಞಾನಿ ಗುಗ್ಲಿಯೊಲ್ಮೋ ಮಾರ್ಕೋನಿ ಆವಿಷ್ಕಾರ ಮಾಡಿದರು. 1886 ರಲ್ಲಿ ‘ಹೆನರಿಜ್ ಹಟ್ರ್ಜ್’ ಎಂಬ ವಿಜ್ಞಾನಿ ತರಂಗಗಳ ಸಂಶೋಧನೆಯನ್ನಾರಂಭಿಸಿದರು. ಮಾರ್ಕೊನಿಯು ಹಟ್ರ್ಜ್‍ರವರ ತರಂಗಗಳ ಕುರಿತು ಅಧ್ಯಯನ ಕೈಗೊಂಡು ಕೊನೆಗೆ ಜಯ ಪಡೆದರು. ಹೀಗಾಗಿ ಮಾರ್ಕೋನಿಯನ್ನು ರೇಡಿಯೋದ ಜನಕನೆಂದು ಕರೆಯುವರು. ಮಾರ್ಕೊನಿಯು 1896ರಲ್ಲಿ ಒಂದು ಏರಿಯಲ್ ಮುಖಾಂತರ 15 ಕಿಲೋ ಮೀಟರ್ ದೂರದಲ್ಲಿದ್ದ ಒಂದು ಸ್ಥಳಕ್ಕೆ ತಂತಿ ಇಲ್ಲದೇ ಸಂದೇಶ ಕಳಿಸಿದರು. ಇದೇ ಹೊಸ ತಂತ್ರಜ್ಞಾನದ ಆವಿಷ್ಕಾರಕ್ಕೆ ಕಾರಣವಾಯಿತು. … Read more