ಭೂಸ್ವಾದೀನ ಕಾಯ್ದೆ: ಎನ್. ಗುರುರಾಜ್ ತೂಲಹಳ್ಳಿ

          ನಮ್ಮ ಭಾರತ ದೇಶ ಕೃಷಿ ಪ್ರಧಾನ ದೇಶವಾಗಿದ್ದು ಶೇಕಡ 70 ರಷ್ಠು ಜನತೆ ಕೃಷಿಯನ್ನೆ ಅವಲಂಬಿಸಿ ಬದುಕುತ್ತಿದ್ದಾರೆ ಎಂದು ನಮ್ಮ ಸರಕಾರಗಳು ಮತ್ತು ರಾಜಕೀಯ ಪಕ್ಷಗಳು ರೂಪಿಸುವ ಎಲ್ಲಾ ನೀತಿ ಯೋಜನೆಗಳ ಹಿಂದೆಯು ರೈತರ ಮತ್ತು ದಲಿತರ ಏಳಿಗೆಯ ಘನ ಉದ್ದೇಶವಿದೆ ಎಂದು ಮಾತ್ರ ಹೇಳಿಕೊಳ್ಳುತ್ತವೆ ಹೊರತು ಅಂತಹ ಯಾವ ಕಾರ್ಯಗಳನ್ನು ಮಾಡುವುದಿಲ್ಲ. ಇದಕ್ಕೆ ಪೂರಕವಾಗಿ ನಮ್ಮ ರಾಜಕೀಯ ಪಕ್ಷಗಳು ತಮ್ಮ ಎಲ್ಲಾ ಸಭೆ-ಸಮಾರಂಭಗಳಲ್ಲಿ ರೈತರ ಪರ, ಬಡವರ ಪರ, … Read more

ನಜ಼ರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

ನಜ಼ರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ ೧. ದೈವೇಚ್ಛೆ ಮುಲ್ಲಾ ನಜ಼ರುದ್ದೀನನೂ ಇತರ ಇಬ್ಬರು ಸಂತರೂ ಮೆಕ್ಕಾಗೆ ಯಾತ್ರೆ ಹೋದರು. ಅವರ ಪ್ರಯಾಣದ ಅಂತಿಮ ಭಾಗದಲ್ಲಿ ಒಂದು ಹಳ್ಳಿಯ ಮೂಲಕ ಹೋಗುತ್ತಿದ್ದರು. ಅವರ ಹತ್ತಿರವಿದ್ದ ಹಣ ಹೆಚ್ಚುಕಮ್ಮಿ ಮುಗಿದಿತ್ತು; ಅರ್ಥಾತ್ ಬಹು ಸ್ವಲ್ಪ ಉಳಿದಿತ್ತು. ಆ ಹಳ್ಳಿಯಲ್ಲಿ ಅವರು ಸಿಹಿ ತಿನಿಸು ಹಲ್ವಾ ಕೊಂಡುಕೊಂಡರು. ಆದರೆ ಅದು ಮೂರು ಮಂದಿಗೆ ಸಾಲುವಷ್ಟು ಇರಲಿಲ್ಲ, ಮೂವರೂ ಬಹು ಹಸಿದಿದ್ದರು. ಮಾಡುವುದೇನು? – ಪಾಲು ಮಾಡಿದರೆ ಯಾರ ಹಸಿವನ್ನೂ … Read more

ಸಾಮಾನ್ಯ ಜ್ಞಾನ (ವಾರ 89): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು 1.    ಶಾಸ್ತ್ರೀಯ ಸಂಗೀತದ ಹಾಡುಗಾರಿಕೆಯಲ್ಲಿ ಅತಿಪುರಾತನ ಶೈಲಿ ಯಾವುದು? 2.    ಆರ್.ಐ.ಟಿ.ಇ.ಎಸ್ (RITES)ನ ವಿಸ್ತೃತ ರೂಪವೇನು? 3.    ಗಣಿತದ ಬಗ್ಗೆ ಮೊದಲು ಅಚ್ಚಾದ ಕೃತಿ ಯಾವುದು? 4.    ತ್ರಿಪದಿಯ ಲಕ್ಷಣವನ್ನು ಮೊಟ್ಟ ಮೊದಲಿಗೆ ಹೇಳಿದವರು ಯಾರು? 5.    ಕನ್ನಡದ ಪ್ರಥಮ ಮಹಿಳಾ ನಿರ್ಮಾಪಕಿ ಯಾರು? 6.    ಗೆಲಿಲಿಯೋನ ಮೊದಲ ವೈಜ್ಞಾನಿಕ ಸಂಶೋಧನೆ ಯಾವುದು? 7.    ಅಡಿಗೆ ಗ್ಯಾಸ್‍ನಲ್ಲಿರುವ ಅನಿಲ ಯಾವುದು? 8.    ಫಾಹಿಯಾನನು ಭಾರತಕ್ಕೆ ಯಾರ ಕಾಲದಲ್ಲಿ ಭೇಟಿ ನೀಡಿದನು? 9.    ರಿಕೆಟ್ಸ್ ಕಾಯಿಲೆ ಯಾವ … Read more

“ವಾರಿಸ್ ಡಿರೀ: ಮರುಭೂಮಿಯ ಒಂದು ಹೂವಿನ ಕಥೆ”: ಪ್ರಸಾದ್ ಕೆ.

ಆಗ ಹೆಚ್ಚೆಂದರೆ ನನಗೆ ಐದು ವರ್ಷ.  ಅಕ್ಕ ಅಮನ್ ಗೆ ‘ಅದನ್ನು’ ಮಾಡಿಸುವುದರ ಬಗ್ಗೆ ಮನೆಯೆಲ್ಲಾ ಗುಲ್ಲು. ‘ಅದನ್ನು’ ಮಾಡಿಸಿಕೊಂಡರೆ ನಮ್ಮಲ್ಲಿಯ ಹೆಣ್ಣುಮಕ್ಕಳಿಗೆ ಭಾರೀ ಬೇಡಿಕೆ. ಒಂದು ಪ್ರತಿಷ್ಠೆಯ ಸಂಕೇತ. ಅಧಿಕೃತವಾಗಿ ಹೆಂಗಸಿನ ಪಟ್ಟಕ್ಕೆ ಭಡ್ತಿ. ನನಗಂತೂ ಈ ಬಗ್ಗೆ ಭಾರೀ ಕುತೂಹಲ. ‘ಅದು’ ಎಂಬುದು ಏನೆಂದು ತಲೆಬುಡ ಗೊತ್ತಿಲ್ಲದಿದ್ದರೂ ಅಮ್ಮನ ಕೊರಳಿಗೆ ಜೋತುಬಿದ್ದು ‘ಅಕ್ಕನಿಗೆ ಮಾಡಿಸುತ್ತೀರಲ್ಲಾ. ನನಗೂ ಮಾಡಿಸಿ’ ಎಂದು ಗೋಳು ಹುಯ್ದುಕೊಳ್ಳುವಷ್ಟರ ಮಟ್ಟಿಗೆ. ‘ಥೂ ಹೋಗೇ’ ಎಂದು ತಳ್ಳಿಹಾಕುವ ಅಮ್ಮ. ಕಣ್ಣಲ್ಲೇ ತುಂಟನಗೆಯೊಂದಿಗೆ ಕೆಣಕುವ … Read more

ಕಾಡು(ವ) ಕಟ್ಟುವ ಕತೆ!! ಭಾಗ-೨: ಅಖಿಲೇಶ್ ಚಿಪ್ಪಳಿ

ಮಲೆನಾಡಿನ ಮಣ್ಣಿನ ಗುಣ ವಿಶಿಷ್ಠವಾದದು. ಒಂದು ಮಳೆಗಾಲ ಮುಗಿಯುವಷ್ಟರಲ್ಲೇ ನೈಸರ್ಗಿಕವಾಗಿ ಸಳ್ಳೆ, ಮತ್ತಿ, ಹುಣಾಲು ಗಿಡಗಳು ಚಿಗುರಿ ಮೇಲೆದ್ದು ಬರುತ್ತಿದ್ದವು. ಜೊತೆಗೆ ಮುಳ್ಳಿನಿಂದ ಕೂಡಿದ ಪರಿಗೆ ಕಂಟಿಗಳು ಹೇರಳವಾಗಿ ಎದ್ದು ಬಂದವು. ಹಸಿರು ಮರಳುಗಾಡಾಗಿದ್ದ ಜಾಗ ನಿಧಾನಕ್ಕೆ ವೈವಿಧ್ಯಮಯ ಹಸಿರಾಗಿ ಕಂಗೊಳಿಸಿತು. ಒಂದಷ್ಟು ಬಿದಿರು ಮೆಳ್ಳೆಗಳಿದ್ದವು. ಹೂ ಬಂದಾದ ಮೇಲೆ ಸತ್ತು ಹೋದವು. ನೈಸರ್ಗಿಕವಾಗಿ ಬಿದಿರು ಮೇಲೆದ್ದು ಬರಲು ಇನ್ನೂ ಸಮಯ ಬೇಕು. ಅಗಳದ ಪಕ್ಕದಲ್ಲಿ ಸುತ್ತಲೂ ರಸ್ತೆಯನ್ನು ನಿರ್ಮಾಣ ಮಾಡಲಾಯಿತು. ಈ ರಸ್ತೆಯಲ್ಲಿ ಒಂದು ಸುತ್ತು … Read more

ಇದೀಗ ನಮ್ಮದೇ ಕಥೆ .. : ಅನಿತಾ ನರೇಶ್ ಮಂಚಿ

                                   ಒಲೆಯ ಮೇಲೆ ಹಾಲು ಬಿಸಿಯಾಗುತ್ತಿತ್ತು. ಪಕ್ಕದ ಒಲೆಯಲ್ಲಿ ಸಿಡಿಯುತ್ತಿದ್ದ ಒಗ್ಗರಣೆಯಿಂದ  ಸಾಸಿವೆ ಕಾಳೊಂದು ಟಪ್ಪನೆ  ಸಿಡಿದು  ಹಾಲಿನ ಪಾತ್ರೆಯೊಳಗೆ ಬಿದ್ದಿತು..  ನೆಂಟರು ಬರುತ್ತಾರೆಂದೇ ಹೆಚ್ಚು ಹಾಲು ತರಿಸಿದ್ದೆ. ಒಗ್ಗರಣೆಯ ಸಾಸಿವೆಯಿಂದಾಗಿ ಬಿಸಿ ಹಾಲು ಒಡೆದರೆ..  ಚಮಚದಿಂದ ಮೆಲ್ಲನೆ ತೆಗೆಯೋಣ ಎಂದುಕೊಂಡೆ. ಸ್ವಲ್ಪ ಮೊದಲಷ್ಟೇ ಅದೇ ಚಮಚದಲ್ಲಿ ನಿಂಬೆಹಣ್ಣಿನ ಶರಬತ್ತಿನಲ್ಲಿದ್ದ ಬೀಜಗಳನ್ನು ಎತ್ತಿ ಬಿಸುಡಿದ್ದೆ.  … Read more

’ಕಪ್ಪು ಹಣ’ವೆಂಬ ಮಾಯಾಮೃಗದ ದರ್ಬಾರು…?: ವಿಜಯಕುಮಾರ ಎಮ್. ಕುಟಕನಕೇರಿ

ನಮ್ಮ ದೇಶದ ಆಡಳಿತ ವ್ಯವಸ್ಥೆಯು ಬೇಲಿಯೇ ಎದ್ದು ಹೊಲವನ್ನು ಮೇಯ್ದ ಹಾಗಿದೆ. ದೇಶದ ಪ್ರಜೆಗಳು ರಾಜಕೀಯ ಅಥವಾ ಯಾವುದೇ ಮೇಲ್ದರ್ಜೆಯ ಸರ್ಕಾರಿ ಹುದ್ದೆಯನ್ನು ಪಡೆದುಕೊಂಡ ತಕ್ಷಣ ಅಧಿಕಾರದ ಚುಕ್ಕಾಣಿ ಹಿಡಿದು, ಇಡಿ ಆಡಳಿತ ವ್ಯವಸ್ಥೆಯನ್ನೆ ತಮ್ಮ ಕಪಿ ಮುಷ್ಟಿಯಲ್ಲಿರಿಸಿಕೊಳ್ಳುವ ಸ್ವಾರ್ಥತೆ ಬೆಳೆಯುತ್ತಿದೆ. ಇದರ ಬೆನ್ನಲ್ಲೆ ಅಧಿಕಾರವನ್ನು ಹಿಡಿಯಲು ಕಾರಣೀಕರ್ತರಾದ ಜನತೆಗೆ ಕಡೆಗಣನೆಯ ಶಾಪ ತಟ್ಟುತ್ತಿದೆ. ಸಮಾಜದಲ್ಲಿ, ಭ್ರಷ್ಟ ಅಧಿಕಾರದ ದಬ್ಬಾಳಿಕೆಯಲ್ಲಿ ಭ್ರಷ್ಟಾಚಾರದ ಪರಮಾಧಿಕಾರ ತಲೆಯೆತ್ತಿ, ಅಭಿವೃದ್ಧಿಯ ಹೆಸರಿನಲ್ಲಿ ಪ್ರಜೆಗಳ ಹಿತಾಸಕ್ತಿಗೆ ಮುಸುಕು ಮೆತ್ತಿಕೊಳ್ಳುತ್ತಿದೆ. ದೇಶದ ಪ್ರಜೆಗಳಿಂದ ಅಕ್ರಮವಾಗಿ … Read more

ಅವನ ಪತ್ರ: ಪ್ರಾಣ್

ಹೇಗೆ ಕರೆಯಲಿ ಎಂದು ತಿಳಿಯದೆ ಹಾಗೆ ಶುರು ಮಾಡ್ತಾ ಇದ್ದೀನಿ. ಎಂದಿನಂತೆ 'ಮುದ್ದು' ಎಂದು ಕರೆಯೋಣ ಅಂದ್ಕೊಂಡೆ, ಅದ್ಯಾಕೋ ಹಾಗೆ ಕರೆಯಬೇಕು ಅನಿಸಲಿಲ್ಲ.  ಹೊರಡುವಿಕೆಯ ಹೊಸ್ತಿಲ ಬಳಿ  ನಿಂತು ಹಿಂತಿರುಗಿ ನಿನ್ನ ನೋಡಿ, ಹೇಳಲು ನಿಂತರೆ ಮತ್ತೆ ಹೋಗಬೇಕು ಅನಿಸೋದಿಲ್ಲ ! ಅದಕ್ಕೆ ಹಿಂದಕ್ಕೆ ತಿರುಗಿ ನೋಡದೆ ಹೊರಟಿದ್ದೀನಿ . ಆದರು ಹೊರಡುವ ಮುನ್ನ ನಿನಗೆ ಹೇಳದೆ ಹೋಗಬೇಕು ಅಂತ ಕೂಡ ಅನಿಸಲಿಲ್ಲ. ಬಹುಶಃ ಒಂದ್ಹತ್ತು ವರುಷವಾಗಿದೆಯಲ್ಲವೇ ನಮ್ಮಿಬ್ಬರ ಪರಿಚಯವಾಗಿ !? ಪರಿಚಯ ಗೆಳೆತನವಾಗಿ, ಗೆಳೆತನ ಅಭಿಮಾನವಾಗಿ, … Read more

ರಾಮಕುಂಜದಿಂದ ರಾಷ್ಟ್ರ ಪ್ರಶಸ್ತಿಯವರೆಗೆ: ಹೊರಾ.ಪರಮೇಶ್ ಹೊಡೇನೂರು

(ನಾರಾಯಣ ಭಟ್ ಶಿಕ್ಷಕರ ಯಶೋಗಾಥೆ) ************************* ಪ್ರತಿಯೊಬ್ಬರ ಬದುಕಿನಲ್ಲಿ ಪ್ರಭಾವ ಬೀರುವ ವ್ಯಕ್ತಿಗಳಲ್ಲಿ ತಾಯಿ ತಂದೆಯರದ್ದು ಒಂದು ರೀತಿಯದಾದರೆ, ಗುರುವಿನದ್ದು ಮತ್ತೊಂದು ಬಗೆಯದ್ದಾಗಿರುತ್ತದೆ. ಹೆತ್ತವರು ದೈಹಿಕ ಮತಾತು ಮಾನಸಿಕ ಸದೃಢತೆ ಸುರಕ್ಷತೆ ಮತ್ತು ಪೋಷಣೆಯ ಹೊಣೆ ನಿರ್ವಹಿಸಿದರೆ ಗುರುವು ಬೌದ್ಧಿಕ ಜ್ಞಾನ, ಅಕ್ಷರಾಭ್ಯಾಸದ ಜೊತೆಗೆ ಬದುಕಿಗೆ ಬೇಖಾದ ಮಾರ್ಗದರ್ಶನವನ್ನು ಒದಗಿಸುತ್ತಾರೆ. ಹಾಗಾಗಿಯೇ ಗುರುವಿನ ಸ್ಥಾನವು ಸಹಜವಾಗಿ ಸಮಾಜದಿಂದ ಗೌರವಕ್ಕೆ ಪಾತ್ರವಾಗುತ್ತದೆ. ಸ್ಥಾನ ಮಾತ್ರದಿಂದಲೇ ಗೌರವ ಪಡೆಯುವುದು ಒಂದು ರೀತಿಯದಾದರೆ, ವೃತ್ತಿ ನಿರ್ವಹಣಿಯ ವೈಖರಿಯಿಂದಲೂ ನಿಸ್ಪೃಹ ನಡತೆಯಿಂದಲೂ ಗುರುವಿಗೆ … Read more

ವರದಾಮೂಲ: ಪ್ರಶಸ್ತಿ

ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ಚಿತ್ರಗಳ ಮಾಹಿತಿ ಕಲೆಹಾಕಿ ಅದನ್ನು ವಿಕಿಪೀಡಿಯಾದಲ್ಲಿ ಎಲ್ಲರಿಗೂ ತಲುಪುವಂತೆ ದಾಖಲಿಸೋ ಒಂದು ಕಾರ್ಯಕ್ರಮ ವಿಕಿಪೀಡಿಯಾ ಫೋಟೋವಾಕ್.ಸಾಗರದಲ್ಲಿ ಈ ಕಾರ್ಯಕ್ರಮವನ್ನು ಮಾಡಬೇಕೆಂದುಕೊಂಡಾಗ ನಾವು ಅದನ್ನು ಶುರುಮಾಡಿದ್ದು ವರದಾಮೂಲದಿಂದ. ವರದಾಮೂಲವೆನ್ನೋ ಸ್ಥಳದ ಬಗ್ಗೆ ಸಾಗರದ ಸುತ್ತಮುತ್ತಲಿನವರಿಗೆ ಹೊಸದಾಗಿ ಹೇಳೋ ಅವಶ್ಯಕತೆಯಿಲ್ಲದಿದ್ದರೂ ಈ ಭಾರಿಯ ಭೇಟಿಯಲ್ಲಿ ಸಿಕ್ಕ ಒಂದಿಷ್ಟು ಆಸಕ್ತಿಕರ ಮಾಹಿತಿಯನ್ನು ಹಂಚಿಕೊಳ್ಳಲೇಬೇಕೆಂಬ ಹಂಬಲ ಹುಟ್ಟಿದ್ದು ಸಹಜ. ಅದರ ಫಲವೇ ಈ ಲೇಖನ.  ಹೋಗೋದು ಹೇಗೆ ?  ವರದಾಮೂಲಕ್ಕೆ ಸಾಗರದಿಂದ ೬ ಕಿ.ಮೀ. … Read more

ನಜ಼ರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ವೇಗ ಹೆಚ್ಚಿದಷ್ಟೂ — ಮುಲ್ಲಾ ನಜ಼ರುದ್ದೀನ್‌ ತನ್ನ ತೋಟದಲ್ಲಿ ಯಾವುದೋ ಬೀಜ ಬಿತ್ತನೆ ಮಾಡುತ್ತಿದ್ದ. ಬಿತ್ತನೆ ಮಾಡುತ್ತಾ ಮುಂದೆಮುಂದೆ ಹೋದಂತೆ ಬೀತ್ತನೆ ಮಾಡುವ ವೇಗ ಹೆಚ್ಚುತ್ತಿದ್ದದ್ದನ್ನು ಅವನ ಹೆಂಡತಿ ನೋಡಿ ಹೇಳಿದಳು, “ಮುಲ್ಲಾ, ಅದೇಕೆ ಅಷ್ಟು ವೇಗವಾಗಿ ಬೀಜಗಳನ್ನು ಎರಚುತ್ತಿರುವೆ? ನಿಧಾನವಾಗಿ ಜಾಗರೂಕತೆಯಿಂದ ಬೀಜ ಬಿತ್ತುವುದು ಒಳ್ಳೆಯದಲ್ಲವೇ?” ನಜ಼ರುದ್ದೀನ್‌ ಹೇಳಿದ, “ಸಾಧ್ಯವಿಲ್ಲ. ಏಕೆಂದರೆ ಇನ್ನು ಹೆಚ್ಚು ಬೀಜ ಉಳಿದಿಲ್ಲ. ಅದು ಮುಗಿಯುವುದರೊಳಗಾಗಿ ಬಿತ್ತನೆ ಕೆಲಸ ಮುಗಿಸಬೇಕಾಗಿದೆ!” ***** ೨. ಅಂದುಕೊಳ್ಳುವಿಕೆಗಳು ಖ್ಯಾತ ಮುಲ್ಲಾ ನಜ಼ರುದ್ದೀನನನ್ನು ಒಬ್ಬಾತ … Read more

ಸಾಮಾನ್ಯ ಜ್ಞಾನ (ವಾರ 88): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು ೧.    ಕಲ್ಯಾಣ ಚಾಲುಕ್ಯರ ವಿಕ್ರಮಾದಿತ್ಯ ಆರಂಭಿಸಿದ ಹೊಸ ಕಾಲಗಣನೆ ಯಾವುದು? ೨.    ಯು.ಎನ್.ಐ ನ ವಿಸ್ತೃತ ರೂಪವೇನು? ೩.    ನ್ಯಾಷನಲ್ ಜಿಯೋಫಿಜಿಕಲ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಎಲ್ಲಿದೆ? ೪.    ಸಾವಿರ ಸರೋವರಗಳ ನಾಡು ಎಂದು ಯಾವುದನ್ನು ಕರೆಯುತ್ತಾರೆ? ೫.    ’ಬುಲ್ಸ್’ ’ಬೇರ್ಸ್’ ಎಂಬ ಪದಗಳು ಯಾವ ಉದ್ಯಮಕ್ಕೆ ಸಂಬಂಧಿಸಿವೆ? ೬.    ಅರ್ಥಶಾಸ್ತ್ರವು ಮಾನವ ಜೀವನದ ದೈನಂದಿನ ವ್ಯವಹಾರಗಳನ್ನು ಕುರಿತು ಅಧ್ಯಯನವಾಗಿದೆ. ಈ ವ್ಯಾಖ್ಯೆ ನೀಡಿದವರು ಯಾರು? ೭.    ಭಾರತೀಯ ದ್ವಿದಳ ಧಾನ್ಯ ಸಂಶೋಧನಾ ಸಂಸ್ಥೆ ಎಲ್ಲಿದೆ? ೮.   … Read more

ಪುಣ್ಯಕೋಟಿ-ಜಾನಪದ ಕಥನ ನಾಟಕ ಪ್ರದರ್ಶನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಮೈಸೂರು ಸರ್ಕಾರಿ ಪ್ರೌಢಶಾಲಾ, ಕುಕ್ಕರಹಳ್ಳಿ ಮೈಸೂರು ಸರ್ವೋದಯ ದಿನಾಚರಣೆ ಉಪನ್ಯಾಸ ಮತ್ತು ನಾಟಕ ಪ್ರದರ್ಶನ  ನಮ್ಮೊಂದಿಗೆ ಶ್ರೀ ಎಂ.ಕೆ.ಬೋರೇಗೌಡ ನಿವೃತ್ತ ಮುಖ್ಯ ಶಿಕ್ಷಕರು      ಶ್ರೀ ಎನ್.ಎಸ್.ಗೋಪಿನಾಥ್ ಮಾಜಿ ಸಿಂಡಿಕೇಟ್ ಸದಸ್ಯರು,ಮೈಸೂರು ವಿಶ್ವವಿದ್ಯಾಲಯ ಮಕ್ಕಳು ಅಭಿನಯಿಸುವ ಜಾನಪದ ಕಥನ ಪುಣ್ಯಕೋಟಿ ಪರಿಕಲ್ಪನೆ ಮತ್ತು ವಿನ್ಯಾಸ :ಜೀವನ್ ಹೆಗ್ಗೋಡು ವಸ್ತ್ರ ವಿನ್ಯಾಸ : ಶೀಲಾ.ಎಸ್  ಪರಿಕರ ಮತ್ತು ಪ್ರಸಾಧನ : ಮಂಜು ಕಾಚಕ್ಕಿ ನಿರ್ದೇಶನ : ದೀಪಕ್ ಮೈಸೂರು ದಿನಾಂಕ : 30.01.16 … Read more

ಕಾವ್ಯಧಾರೆ: ಕು.ಸ.ಮಧುಸೂದನ ರಂಗೇನಹಳ್ಳಿ, ಮಂಗಳ.ಎನ್, ಬಿದಲೋಟಿ ರಂಗನಾಥ್, ಅರುಣ್ ಅಲೆಮಾರಿ

ಹೂ-ನದಿ ಮುಂಜಾನೆಯರಳಿ ಸಂಜೆಗೆ  ಬಾಡುವ ಹೂವು ಶಾಶ್ವತವಲ್ಲದಿದ್ದರೂ ಬಾಡುವ ಮುಂಚೆ ಸೇರುವುದು ತಾಯಂದಿರ ಮುಡಿಯ ದೇವರ ಗುಡಿಯ ಮಳೆಗಾಲದಿ ಉಕ್ಕಿ ಬೇಸಿಗೆಯಲಿ ಬತ್ತಿ ಹರಿಯುವ ನದಿ ನಿರಂತರವಲ್ಲದಿದ್ದರೂ ಬತ್ತುವ ಮುಂಚೆ ತೊಳೆಯುವುದು ನಮ್ಮ ಕೊಳೆಗಳ ಬೆಳೆಯುವುದು ಜೀವಿಗಳಿಗೆ ಬೆಳೆಗಳ! ಧ್ಯಾನದ ಕೊನೆಗೆ! ಮೌನದಲ್ಲಿ ಧ್ಯಾನಸ್ಥನಾಗಿದ್ದ ಬುದ್ದ ಮೆಲ್ಲಗೆದ್ದ ಕಣ್ಣರಳಿಸಿ ಮುಗುಳ್ನಗೆ ಬೀರಿದ ಮಂಜಿನ ಬೆಟ್ಟ ಕರಗಿ ನದಿಯಾಗಿ ಹರಿಯತೊಡಗಿತು ಕಗ್ಗಲ್ಲ ಬೆಟ್ಟಕೆ ರೆಕ್ಕೆ ಬಂದು ಹಕ್ಕಿಯಾಗಿ ಹಾರತೊಡಗಿತು ಕಗ್ಗತ್ತಲಕೂಪದಲಿ ಮುಳುಗೆದ್ದ ಭೂಮಿ ದಿವಿನಾಗಿ ಬೆಳಗತೊಡಗಿತು ಸುತ್ತ ನೆರೆದಿದ್ದ … Read more

ಕಾಡು(ವ) ಕಟ್ಟುವ ಕತೆ!! ಭಾಗ-೧: ಅಖಿಲೇಶ್ ಚಿಪ್ಪಳಿ

ಲೋಕೋಬಿನ್ನರುಚಿ: ಎನ್ನುವ ಮಾತು ಸಾರ್ವಕಾಲಿಕ ಸತ್ಯವಾದದು. ಒಬ್ಬೊಬ್ಬರದೂ ಒಂದೊಂದು ತರಹದ ವಿವೇಕ, ವಿವೇಚನೆ, ಹವ್ಯಾಸ, ಅಭ್ಯಾಸ ಹೀಗೆ ಏನೇ ಹೇಳಿ ಒಬ್ಬರಿಂದೊಬ್ಬರು ಬಿನ್ನ. ಕೆಲವರಿಗೆ ಚೆನ್ನಾಗಿ ಓದಬೇಕು, ದೊಡ್ಡ ಕೆಲಸ ಹಿಡಿಯಬೇಕು, ಕೈತುಂಬಾ ಸಂಬಳ, ಇರಲೊಂದು ಐಷಾರಾಮಿ ಮನೆ, ದೊಡ್ಡದೊಂದು ಕಾರು, ಮುದ್ದಿನ ಮಡದಿ, ಮಡದಿಗೆ ಮೈತುಂಬಾ ಬಂಗಾರ, ಮನೆಯಲ್ಲಿ ಎಲ್ಲಾ ತರಹದ ಆಧುನಿಕ ತಂತ್ರಜ್ಞಾನದ ಸಲಕರಣೆಗಳು, ಜೊತೆಗೆರೆಡು ಮಕ್ಕಳು, ಅವು ಅಸಾಧಾರಣ ಬುದ್ಧಿವಂತರಾಗಿರಬೇಕು, ದೊಡ್ಡವರಾಗುತ್ತಿದ್ದ ಹಾಗೆಯೇ ಎಲ್ಲರ ಮಕ್ಕಳಿಗಿಂತ ವಿದ್ಯಾವಂತರಾಗಬೇಕು, ಕ್ಲಾಸಿಗೆ, ಶಾಲೆಗೆ, ರಾಜ್ಯಕ್ಕೆ ಮೊದಲಿಗರಾಗಬೇಕು … Read more

ನಜ಼ರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ನೀನೇಕೆ ಇಲ್ಲಿರುವೆ? ಒಂದು ದಿನ ನಜ಼ರುದ್ದೀನ್‌ ನಿರ್ಜನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ. ಕತ್ತಲಾಗುತ್ತಿದ್ದಾಗ ಕುದುರೆ ಸವಾರರ ತಂಡವೊಂದು ಅವನತ್ತ ಬರುತ್ತಿದ್ದದ್ದನ್ನು ನೋಡಿದ. ಅವನ ಕಲ್ಪನಾಶಕ್ತಿ ಬಲು ಚುರಕಾಗಿ ಕಾರ್ಯೋನ್ಮುಖವಾಯಿತು. ಅವರು ತನ್ನನ್ನು ದರೋಡೆ ಮಾಡಲೋ ಅಥವ ತನ್ನನ್ನು ಸೈನ್ಯಕ್ಕೆ ಸೇರಿಸಿಕೊಳ್ಳಲೋ ಬರುತ್ತಿದ್ದಾರೆಂದು ಅವನು ಊಹಿಸಿಕೊಂಡು ಭಯಭೀತನಾದ. ಭಯ ಎಷ್ಟು ತೀವ್ರವಾಗಿತ್ತೆಂದರೆ ಅವರಿಂದ ತಪ್ಪಿಸಿಕೊಳ್ಳಲೇಬೇಕೆಂಬ ಛಲ ಮೂಡಿ ಪಕ್ಕದಲ್ಲಿದ್ದ ಎತ್ತರದ ಗೋಡೆಯೊಂದನ್ನು ಹೇಗೋ ಹತ್ತಿ ಇನ್ನೊಂದು ಪಕ್ಕಕ್ಕೆ ಹಾರಿದ. ಅದೊಂದು ಸ್ಮಶಾನ ಎಂಬುದು ಅವನಿಗೆ ಆಗ ತಿಳಿಯಿತು. … Read more

ನಾಲ್ವರ ಕವಿತೆಗಳು: ಸಿರಿ ಹೆಗ್ಡೆ, ಚಿದು, ಬಿದಲೋಟಿ ರಂಗನಾಥ್, ಕಿರಣ್ ಬಾಗಡೆ

ಕ್ಷಮಿಸಿ ನನ್ನನ್ನು … ಇಷ್ಟು ವರ್ಷಗಳ ಕಾಲ ಕುಣಿಸಿದೆ, ಗೆಜ್ಜೆಯ ಗೀಳು ಹತ್ತಿಸಿದೆ, ನಿಮ್ಮಿಂದ ನಾ ಹೆಸರು ಗಳಿಸಿದೆ, ಆದರಿಂದು …? ಕ್ಷಮಿಸಿ ನನ್ನನ್ನು… ನೋವೆಂದು ನೀವಳುತ್ತಿದ್ದ ದಿನಗಳವು, ಬೇಡ ಸಾಕೆಂದು ಗೋಗರೆಯುತ್ತಿದ್ದ ಕಾಲ, ಕೇಳಲಿಲ್ಲ ನಾನು, ಅಹಂಕಾರಿ ! ಮತ್ತೆ ಕಟ್ಟಿಸಿದೆ ಗೆಜ್ಜೆ, ಕುಣಿಸಿದೆ, ಆದರಿಂದು …? ಕ್ಷಮಿಸಿ ನನ್ನನ್ನು… ನಿಮ್ಮ ಸಾಮರ್ಥ್ಯಕ್ಕಿಂತ ಜಾಸ್ತಿ ದುಡಿಸಿದೆ, ಇಂದು ನನ್ನ ಹೊಗಳುತ್ತಾರೆ, ನಿಮ್ಮಿಂದ, ನಾ ಸದಾ ಕೃತಜ್ನೆ, ಆದರಿಂದು …? ಕ್ಷಮಿಸಿ ನನ್ನನ್ನು… ಬಂದನವನು ನನ್ನ ಬಾಳಲ್ಲಿ, … Read more

ಭಾವಗಳ ಬಂಡಿಯೇರಿ: ಪ್ರಶಸ್ತಿ

ಭಾವಲಹರಿಯೆನ್ನೋದೇ ಹಾಗೆ. ಈ ಭಾವಗಳ ಮಡಿಲಲ್ಲಿದ್ದಾಗ ಶಬ್ದಗಳ ಹಂಗಿಲ್ಲ, ಕಾಲದ ಅರಿವಿಲ್ಲ,ಸುತ್ತಣ ಪರಿಸರದ ಪರಿವೆಯೂ ಇಲ್ಲದ ಪರಿಸ್ಥಿತಿ. ಪಕ್ಕದ ಯಾವುದೋ ಘಟನೆ ನಮ್ಮ ತಟ್ಟೆಬ್ಬಿಸೋ ತನಕ ಕಲ್ಪನಾಲೋಕದಲ್ಲಿ ನಮಗೆ ನಾವಲ್ಲದೆ ಇನ್ಯಾರೂ ಇಲ್ಲ.ಭಾವಗಳ ಬಂಡಿಯೇರಿದ ಆ ಪಯಣ ಸಾಗೋ ಪರಿಯೇ ಅದಮ್ಯ.ಆ ಕ್ಷಣಕ್ಕೆ ಮೂಡೋ ಭಾವಕ್ಕೊಂದು ಆಕಾರವಿಲ್ಲದಿದ್ದರೆ ಕಳೆದೇ ಹೋದೀತೆಂದು ಸಿಕ್ಕ ಮೊಬೈಲಲ್ಲೋ ಪೇಪರಲ್ಲೋ ಕಂಪ್ಯೂಟರಲ್ಲೋ ಗೀಚುವವರದು ಒಂದು ಲಹರಿ.ಕಡಲಲೆಗಳಲ್ಲಿ ಕಂಡ ಸುಂದರ ಅಲೆಯೊಂದು ಕಾಲದ ಗರ್ಭದಲ್ಲಿ ಕರಗಿಹೋಗೋ ಹಾಗೆ ಮುಂಬರುವ ಭಾವ ಪ್ರವಾಹದಲ್ಲಿ ಈಗಿನ ಭಾವ … Read more

’ಮಂಗಳಮುಖಿ’ಯರಿಗೆ ಮರೀಚಿಕೆಯಾದ ಸಮಾನತೆಯ ಬದುಕು: ಗುರುರಾಜ್ ಎನ್

ಪ್ರಿಯಾಂಕ, ಮಮತ, ಚೆಲುವೆ, ಅಪ್ಸರ, ಜಯಶ್ರೀ, ವಿಧ್ಯಾ, ಹೀಗೆ  ಎಷ್ಟೋಂದು ಸುಂದರ ಹೆಸರುಗಳು, ಇವು ಒಂದು ವಿಭಿನ್ನ ಸಾಮಜಿಕ ಗುಂಪಿಗೆ ಸೇರಿದ ಹಿಜ್ರಾ, ಕೋಥಿ, ಮಂಗಳಮುಖಿ, ಜೋಗಪ್ಪ, ಡಬಲ್ ಡೆಕ್ಕರ್,  ದ್ವಿಲಿಂಗ ಕಾಮಿ, ಟ್ರಾನ್ಸ್‌ಜೆಂಡರ್, ಅಂತರ್‌ಲಿಂಗಿ, ಇಕ್ವಿಯರ್, ಲೈಂಗಿಕ ಅಲ್ಪಸಂಖ್ಯಾತ ವ್ಯಕ್ತಿಗಳ ಹೆಸರುಗಳು. ಗಂಡು ದೇಹದಲ್ಲಿ ಬಂದಿಯಾಗಿರುವ ಹೆಣ್ಣುಗಳ ಹೆಸರುಗಳಿವು ಹಾಗೇನೆ ಹೆಣ್ಣು ದೇಹದಲ್ಲಿ ಗಂಡುಗಳ ಹೆಸರುಗಳು ಬಂದಿಯಾಗಿರುವವರು ಇದ್ದಾರೆ. ಸಮಾಜದ ಕಣ್ಣಿಗೆ ಅವರು ಯಾರು? ಅವರ ನೋವು ಸಂಕಟಗಳೇನು? ಅವರ ತೊಂದರೆಗಳೇನು? ಎಂದು ಊಹಿಸಲು ಸಾದ್ಯಾವಾಗುವುದಿಲ್ಲ, … Read more

ನಗೆ ಹನಿ: ರಾಮಪ್ರಸಾದ.ಬಿ.

ಸಂಗೀತ ಮೇಷ್ಟ್ರು:ಏನಮ್ಮ ರಾಗಿಣಿ! ಸ…ರಿ…ಅನ್ನು…. ರಾಗಿಣಿ:ಸಾರಿ ಅನ್ನೋಂತಹ ತಪ್ಪು ನಾನೇನು ಮಾಡಿದ್ದೇನೆ ಗುರುಗಳೇ?! **** ರಮ್ಯ:ಡ್ಯಾಡಿ,ನನಗೆ ಟೀಚರ್ ಶಿಕ್ಷೆ ಕೊಟ್ರು … ತಂದೆ:ಯಾಕೋ ಪುಟ್ಟ ಅಂತಾ ತಪ್ಪು ನೀನೇನು ಮಾಡಿದೆ?! ರಮ್ಯ:ನಮ್ ಟೀಚರ್ ನನ್ಹತ್ರ ಸ್ಕೇಲ್ ತೋರಿಸಿ ಎಲ್ರ ಮುಂದೆ ಹೇಳ್ತಿದ್ರು-"ಈ ಸ್ಕೇಲ್ ತುದಿಗೆ ಒಬ್ಬ ಮೂರ್ಖ ವ್ಯಕ್ತಿ ನಿಂತಿದ್ದಾಳೆ…" ಆಗ ನಾನು ಸ್ಕೇಲ್ ನ ಯಾವ ತುದಿ ಟೀಚರ್ ಅಂತ ಕೇಳಿದೆಯಷ್ಟೇ!" **** ಡಾಕ್ಟರ್:ನೀವೇನು ಭಯಪಡಬೇಡಿ!ಆಪರೇಷನ್ ಆದಕೂಡಲೇ ನೀವು ಹಾಯಾಗಿ ನಿಮ್ಮ ಮನೆಗೆ ನಡೆದುಕೊಂಡೇ ಹೋಗಬಹುದು…. … Read more

ಸಾಮಾನ್ಯ ಜ್ಞಾನ (ವಾರ 87): ಮಹಾಂತೇಶ್ ಯರಗಟ್ಟಿ

  ಪ್ರಶ್ನೆಗಳು: ೧.    ರೋಮನ್ನರ ಎರಡು ಮುಖಗಳ ಯಾವ ದೇವತೆಯ ಹೆಸರಿನಿಂದ ಜನವರಿ ತಿಂಗಳಿಗೆ ಹೆಸರನ್ನಿಡಲಾಗಿದೆ? ೨.    ಐ.ಎಫ್.ಆರ್.ಐ (IFRI)ನ ವಿಸ್ತೃತ ರೂಪವೇನು? ೩.    ನವಗಿರಿನಂದ ಇದು ಯಾರ ಕಾವ್ಯನಾಮಗಿದೆ? ೪.    ಭೂಮಿಗೆ ಅತಿ ಸಮೀಪದಲ್ಲಿರುವ ಸೌರವ್ಯೂಹದಾಚೆಗಿನ ನಕ್ಷತ್ರ ಯಾವುದು? ೫.    ರಣರಿಸಕ ಎಂಬ ಬಿರುದನ್ನು ಪಡೆದಿದ್ದ ಚಾಲಕ್ಯ ದೊರೆ ಯಾರು? ೬.    ಐಸ್ ಕ್ರೀಂ ಬೇಗ ಗಡ್ಡೆಕಟ್ಟಲು ಏನನ್ನು ಬೆರೆಸುತ್ತಾರೆ? ೭.    ಶಿಲೀಂಧ್ರಗಳ ಅಧ್ಯಯನಕ್ಕೆ ಆಂಗ್ಲ ಭಾಷೆಯಲ್ಲಿ ಏನೆಂದು ಕರೆಯುತ್ತಾರೆ? ೮.    ಕುತುಬ್ ಮಿನಾರ್ ಆವರಣದಲ್ಲಿರುವ … Read more

ಸಮಯ ಪರಿಪಾಲನೆ: ಅನಿತಾ ನರೇಶ್ ಮಂಚಿ

                           ನನ್ನ ಲ್ಯಾಪ್ಟಾಪಿಗೆ ಜ್ವರ ಬಂದಿತ್ತು. ಜ್ವರ ಅಂದರೆ ಅಂತಿಂಥಾ ಜ್ವರವಲ್ಲ..ಮೈಯ್ಯೆಲ್ಲಾ ಬಿಸಿಯೇರಿ ತೇಲುಗಣ್ಣು  ಮಾಲುಗಣ್ಣು ಮಾಡಿಕೊಂಡು ಕೋಮಾ ಸ್ಥಿತಿಗೆ ಹೋಯಿತು. ಹೋಗುವಾಗ ಸುಮ್ಮನೇ ಹೋಗಲಿಲ್ಲ. ನಾನು ಕಷ್ಟಪಟ್ಟು ತಾಳ್ಮೆಯಿಂದ ಬರೆಯುತ್ತಿದ್ದ  ಇನ್ನೇನು ಮುಕ್ತಾಯ ಹಂತಕ್ಕೆ ಬಂದಿದ್ದ ಘನ ಗಂಭೀರ  ಲೇಖನವೊಂದನ್ನು ಕರೆದುಕೊಂಡೇ ಹೋಯಿತು. ಅದೆಷ್ಟು ತಪಸ್ಸುಗಳ ಫಲವೋ ನಾನು ಅಷ್ಟೊಂದು ಸೀರಿಯಸ್ ವಿಷಯದ ಬಗ್ಗೆ ಬರೆಯಹೊರಟಿದ್ದು. ಒಂದೆರಡು ಬಾರಿ … Read more

ಅರಣ್ಯ ಹಕ್ಕು ಮಾನ್ಯತೆ ಕಾಯಿದೆ ಮತ್ತು ಹವಾಮಾನ ಬದಲಾವಣೆ (ಕೊನೆಯ ಭಾಗ): ಅಖಿಲೇಶ್ ಚಿಪ್ಪಳಿ

ಇಲ್ಲಿಯವರೆಗೆ ಈ ಮಟ್ಟದ ಹಾಗೂ ಈ ಮೊತ್ತದ ಕಾಡು ನಾಶ ಈ ಹಿಂದೆಯೂ ಆಗಿತ್ತು. ಬಗರ್ ಹುಕುಂ ಕಾಯ್ದೆ 1989-90ರಲ್ಲಿ ಜಾರಿಯಾದ ಸಂದರ್ಭದಲ್ಲಿ ಲಕ್ಷಾಂತರ ಸಂಖ್ಯೆಯ ಮಿಣಿಸುತ್ತಿನ ಮರಗಳ ಮಾರಣ ಹೋಮವಾಗಿತ್ತು. ಮರಗಳ ಬುಡಕ್ಕೆ ಬೆಂಕಿ ಹಚ್ಚಿ ಸುಡಲಾಗಿತ್ತು. ಆ ಕಾರಣಕ್ಕಾಗಿಯೇ ಕಳೆದ 10 ವರ್ಷಗಳಲ್ಲಿ ತಾಲ್ಲೂಕಿನಲ್ಲಿ 40% ಮಳೆ ಪ್ರಮಾಣ ಕಡಿಮೆಯಾಗಿದೆ. ರಾಜಕೀಯ ದೂರದೃಷ್ಟಿಯ ಕೊರತೆ, ಅತಿಯಾಸೆ, ರೈತರಲ್ಲಿ ಪರಸ್ಪರ ಪೈಪೋಟಿ ಮನೋಭಾವ (ಸರ್ಕಾರಿ ಕೃಪಾಪೋಷಿತ ಇಲಾಖೆಗಳೇ ಹಸಿರು ಕ್ರಾಂತಿಯ ನೆಪದಲ್ಲಿ ಕ್ಷೇತ್ರೋತ್ಸವ ಎಂಬ ಸಂಭ್ರಮಾಚರಣೆ … Read more

ಕಾವ್ಯಧಾರೆ: ಪ್ರವೀಣ್ ಕುಮಾರ್ ಜಿ., ಚಾರುಶ್ರೀ ಕೆ ಎಸ್, ಸಿಪಿಲೆನಂದಿನಿ, ಸಂದೇಶ್.ಎಚ್.ನಾಯ್ಕ್

-: ನಿಂತ ನಾವೆ :-  ಮುಗುಚಿಬಿದ್ದ ನಾವೆ  ಅತ್ತ ದಡಕ್ಕಿರದೆ  ಇತ್ತ ಕಡಲ ಒಡಲಲಿ  ತೇಲದೆ ನಿಂತಿದೆ  ಕಾಲದ ಕೊಂಡಿಯಾ ಕಳಚಿಕೊಂಡು.  ಬೀಸುವ ಗಾಳಿಗೂ  ಮಿಸುಕಾಡದೆ ಅಬ್ಬರಿಸಿ  ಬರುವ ಅಲೆಗಳಿಗು  ಅತ್ತಿತ್ತಾಗದೆ ನಿಂತಿಹುದು ನಾವೆ  ಕಾಲದ ಕೊಂಡಿಯಾ ಕಳಚಿಕೊಂಡು.  ವಿಶಾಲ ಸಾಗರದ  ಎದೆಯ ಮೇಲೆ  ಮಿಸುಕದೆ ಕುಂತ ನಾವೆಯ  ಹೊತ್ತೊಯ್ಯುವವರಿರದೆ ಅನಾಥವಾಗಿ  ಕುಳಿತಿಹುದು ಕಾಲದ ಕೊಂಡಿಯಾ ಕಳಚಿಕೊಂಡು.  -ಪ್ರವೀಣ್ ಕುಮಾರ್ ಜಿ.         ನೈಜ ಪ್ರೀತಿ ನಿನ್ನ ನನ್ನ ಮರೆತು ಪ್ರೀತಿಸಿದೆ. ನನ್ನ … Read more

ರೋಹಿಣಿ: ಸಾವಿತ್ರಿ ವಿ. ಹಟ್ಟಿ

ಆ ಒಂಟಿ ಕೋಣೆಯಲ್ಲಿ ಅವಳನ್ನು ಹೊರತುಪಡಿಸಿದರೆ, ಒಂದೆರಡು ತಟ್ಟೆ ಲೋಟಗಳು, ಒಂದೆರಡು ಪಾತ್ರೆಗಳು, ಪ್ಲಾಸ್ಟಿಕ್ ಕೊಡ, ಬಕೆಟ್, ಚೊಂಬು ಹಾಗೂ ಒಂದಷ್ಟು ಪುಸ್ತಕಗಳು ಮಾತ್ರ. ಕೋಣೆಯಲ್ಲಿ ನಿಃಶಬ್ದ ಕವಿದಿತ್ತು. ಅಪರೂಪಕ್ಕೆ ಕೈಜಾರಿಸಿದರೆ ಪಾತ್ರೆಗಳ ಸದ್ದಷ್ಟೆ. ಆ ಮೌನ ಅವಳನ್ನು ಅದೆಷ್ಟು ಹಿಂಸಿಸುತ್ತಿತ್ತೆಂದರೆ ಇನ್ನೂ ತಾಸು ಮುಂಚಿತವಾಗಿಯೇ ಕಾಲೇಜಿಗೆ ಹೊರಟು ಬಿಡುತ್ತಿದ್ದಳು. ಅಲ್ಲಿಯಾದರೆ ವಿದ್ಯಾರ್ಥಿಗಳ, ಸಹೋದ್ಯೋಗಿಗಳ ಒಡನಾಟ ಸಿಗುತ್ತದೆ. ಬಿಡುವಿನ ವೇಳೆಯಲ್ಲಿ ಗ್ರಂಥಾಲಯದಲ್ಲಿಯ ಪುಸ್ತಕಗಳಿರುತ್ತವೆ ಎಂಬುದು ರೋಹಿಣಿಯ ಯೋಚನೆಯಾಗಿರುತ್ತಿತ್ತು. ಆದರೆ ಅವಳಿಗೆ ಮೊದಲಿನಂತೆ ತನ್ಮಯಳಾಗಿ ಪಾಠ ಮಾಡಲಾಗುವುದಿಲ್ಲ. ಮೈಮರೆತು … Read more

ನಜರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ವಿದ್ವಾಂಸ ಸಾರಥಿ ಮುಲ್ಲಾ ನಜರುದ್ದೀನ್‌ ಒಮ್ಮೆ ಕುದುರೆಗಾಡಿಯ ಸಾರಥಿಯ ಕೆಲಸವನ್ನು ಮಾಡಲು ಒಪ್ಪಿಕೊಂಡ. ಒಂದು ದಿನ ಆತ ಪಟ್ಟಣದ ಕುಖ್ಯಾತ ಭಾಗಕ್ಕೆ ಮಾಲಿಕನನ್ನು ಒಯ್ಯಬೇಕಾಗಿತ್ತು. ಗಮ್ಯಸ್ಥಾನ ತಲುಪಿದ ನಂತರ ಗಾಡಿಯಿಂದಿಳಿದ ಮಾಲಿಕ ಸಲಹೆ ನೀಡಿದ, “ಬಲು ಜಾಗರೂಕನಾಗಿರು. ಇಲ್ಲಿ ತುಂಬಾ ಕಳ್ಳರಿದ್ದಾರೆ.” ತುಸು ಸಮಯ ಕಳೆದ ನಂತರ ಹೊಸ ಸಾರಥಿ ಏನು ಮಾಡುತ್ತಿದ್ದಾನೆಂಬುದನ್ನು ತಿಳಿಯಲು ಇಚ್ಛಿಸಿದ ಮಾಲಿಕ ತಾನಿದ್ದ ಮನೆಯ ಕಿಟಕಿಯೊಂದರಿಂದ ತಲೆ ಹೊರಹಾಕಿ ಬೊಬ್ಬೆಹಾಕಿದ, “ಎಲ್ಲವೂ ಸರಿಯಾಗಿದೆಯಷ್ಟೆ? ಈಗ ನೀನೇನು ಮಾಡುತ್ತಿರುವೆ?” “ಒಬ್ಬ ವ್ಯಕ್ತಿ … Read more