ಮುಂದುವರೆದ ರೈತರ ಆತ್ಮಹತ್ಯೆಗಳು ಸಾವಿನ ಮನೆಯ ತಲ್ಲಣಗಳು: ಎನ್. ಕವಿತಾ

(ಇಡೀ ರಾಜ್ಯದಲ್ಲೇ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡ ಜಿಲ್ಲೆ ಮಂಡ್ಯ. ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಭೇಟಿ ಕೊಟ್ಟು, ಅನ್ನದಾತನ ಸಾವಿಗೆ ಕಾರಣಗಳೇನು? ಸಾವಿನ ನಂತರ ರೈತನ ಕುಟುಂಬ ಸದಸ್ಯರು ಬದುಕಲು ಯಾವ ರೀತಿ ಪಾಡು ಪಡುತ್ತಿದ್ದಾರೆ? ಆ ಕುಟುಂಬಗಳಿಗೆ ಸರ್ಕಾರಗಳು ಮತ್ತು ಸಮಾಜ ಯಾವ ರೀತಿ ಸ್ಪಂದಿಸಿವೆ? ಮಾಧ್ಯಮಗಳ ಸ್ಪಂದನೆ ಯಾವ ರೀತಿಯಿದೆ? ಇತ್ಯಾದಿ ಕುರಿತಂತೆ ಉತ್ತರ ಕಂಡುಕೊಳ್ಳಲು ಯತ್ನಿಸಲಾಗಿದೆ).  ಒಕ್ಕಲಾ ಕೇರ್ಯಾಗ ಮಳೀರಾಯ ಮಕ್ಕಳ ಮಾರ್ಯಾರ ಮಳೀರಾಯ! ಒಕ್ಕಲಾ ಕೇರ್ಯಾಗ ಮಕ್ಕಳ ಮಾರಿ  … Read more

ಜಾಗತಿಕ ಹವಾಗುಣ ಜಾಥಾ: ಅಖಿಲೇಶ್ ಚಿಪ್ಪಳಿ

ನವಂಬರ್ 30 2015ರಿಂದ ಡಿಸೆಂಬರ್ 11 2015ರ ವರೆಗಿನ ಜಾಗತಿಕ ಹವಾಗುಣ ಶೃಂಗಸಭೆ ಪ್ಯಾರಿಸ್‍ನಲ್ಲಿ ನಡೆಯಲಿದೆ. 190 ವಿಶ್ವನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ, ಜೊತೆಗೆ ವಿಜ್ಞಾನಿಗಳು, ಹೂಡಿಕೆದಾರರು, ವಿವಿಧ ಕ್ಷೇತ್ರಗಳ ತಜ್ಞರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಭೂಮಿಯ ಮೇಲಿನ ಚರಾಚರಗಳ ಭವಿಷ್ಯದ ದೃಷ್ಟಿಯಿಂದ ಈ ಸಭೆ ಅತ್ಯಂತ ಮಹತ್ವ್ತದ ಸಭೆಯಾಗಲಿದೆ ಎಂದು ತರ್ಕಿಸಲಾಗಿದೆ. ಈ ಸಭೆಯಲ್ಲಿ ಕೈಗೊಳ್ಳುವ ಜಾಗತಿಕ ನಿರ್ಣಯಗಳು ಭೂಮಿಯ ಆರೋಗ್ಯದ ಸೂಚ್ಯಂಕವನ್ನು ಬದಲಿಸಲಿವೆ ಎಂದು ಭಾವಿಸಲಾಗಿದೆ. ಈ ಹಿಂದೆ ಇದೇ ತರಹದ 20 ಶೃಂಗಸಭೆಗಳು … Read more

ಕಡ್ಲೆಕಾಳು ಗಣೇಶನಿಗೆ ಜೈ ಎನ್ನುತ್ತಾ: ಪ್ರಶಸ್ತಿ

ಏಕಶಿಲಾ ನಂದಿಯ ಬಳಿಯಿದ್ದ ಸೈಕಲ್ ಪಡೆದ ನಾವು ಹಂಪಿಬಜಾರಿನ ಮೂಲಕ ಹಂಪಿ ಬಸ್ಟಾಂಡವರೆಗೆ ಬಂದೆವು. ಇಲ್ಲೇ ಹತ್ತಿರದಲ್ಲಿರೋದ್ರಿಂದ ಕಡ್ಲೆಕಾಳು ಗಣೇಶ ಮತ್ತು ಹೇಮಕೂಟದಲ್ಲಿರೋ ದೇಗುಲಗಳನ್ನು ನೋಡೋಣ ಅಂತ ಸೈಕಲ್ ಅತ್ತ ತಿರುಗಿಸಿದೆವು. ಘಂಟೆ ನಾಲ್ಕಾಗುತ್ತಾ ಬಂದಿದ್ದರೂ ಮಧ್ಯಾಹ್ನದ ಊಟ ಮಾಡಿಲ್ಲವೆಂಬ ಚಿಂತೆ ಕಾಡುತ್ತಿರಲಿಲ್ಲ. ಬಾಡಿಗೆ ಸೈಕಲ್ ತಗೊಂಡಿದ್ರೂ ನಡೆದಾಟದಲ್ಲೇ ಅರ್ಧದಿನ ಕಳೆದಾಗಿದೆ. ಮುಂದಿನ ಸ್ಥಳಗಳನ್ನಾದರೂ ಸೈಕಲ್ಲಲ್ಲಿ ನೋಡಬೇಕೆಂಬ ಬಯಕೆ ಆಲೋಚನೆ ಮೂಡುತ್ತಿತ್ತು. ಆ ಆಲೋಚನೆಯಲ್ಲೇ ಕಡ್ಲೆಕಾಳು ಗಣೇಶ ದೇವಸ್ಥಾನಕ್ಕೆ ಸಾರೋ ಏರುಹಾದಿಯಲ್ಲಿ ಸೈಕಲ್ ಓಡಿಸಿದೆವು. ಸೈಕಲ್ಲಿನ ಬಂಪರ್ … Read more

ಹೊಂಗೆ ಮರದ ನೆರಳಿನಲ್ಲಿ: ಅನಿತಾ ನರೇಶ್ ಮಂಚಿ

ಸಾಮಾಜಿಕ ಜಾಲ ತಾಣದಲ್ಲಿ ಒಂದೇ ಬಗೆಯ ವಿಷಯಗಳ ಒಲುಮೆಯ ಆಧಾರದಲ್ಲಿ ಹಲವಾರು ಗುಂಪುಗಳು ನಿತ್ಯವೂ ಹುಟ್ಟಿಕೊಳ್ಳುತ್ತಲೇ ಇರುತ್ತವೆ. ಕೆಲವೊಂದು ಅಲ್ಪಾಯುಷ್ಯದಲ್ಲೇ ಕಾಲನರಮನೆಯನ್ನು ಸೇರಿದರೆ ಇನ್ನು ಕೆಲವು ನಮ್ಮ ಸಮ್ಮಿಶ್ರ ಸರಕಾರಗಳನ್ನು ನೆನಪಿಸುತ್ತವೆ. ತಾವೂ ಏನೂ ಧನಾತ್ಮಕ ವಿಷಯಗಳನ್ನು ನೀಡದೇ, ನೀಡುವವರ ಬಗ್ಗೆಯೂ ಮೆಚ್ಚುಗೆಯ ಮಾತನ್ನಾಡದೇ ಕೇವಲ ಕಾಲೆಳೆಯುವುದನ್ನೇ ಉದ್ಯೋಗವಾಗಿಸಿಕೊಂಡಂತವು.  ಮತ್ತೆ ಹಲವು  ಹೊಸಾ ಅಗಸ ಬಟ್ಟೆ ಒಗೆದಂತೆ ಮೊದ ಮೊದಲು ಶುಭ್ರವಾಗಿಯೂ, ಸ್ವಚ್ಚವಾಗಿಯೂ ಕಾಣುತ್ತಿರುತ್ತವೆ. ದಿನ ಕಳೆದಂತೆ ಕೊಳಕುಗಳೇ ಉಳಿದು, ಅಲ್ಲಿಂದ ಹೊರ ಬೀಳುವ ದಾರಿಗಾಗಿ ಚಡಪಡಿಸುವಂತಾಗುತ್ತದೆ. … Read more

ಹೇ ನನ್ನ ಕನಸಿನ ಕೂಸೆ…: ಮಂಜುನಾಥ ಗುಡ್ಡದವರ

ಹೇ ಕನಸಿನ ಕೂಸೆ…     ಕುಶಲವೇ..? ಕ್ಷೇಮವೇ..? ಸೌಖ್ಯವೇ..? ಎಲ್ಲಿರುವೇ..? ಹೇಗಿರುವೇ..? ಇನ್ನೂ ಏನೇನೊ ಸಾವಿರ ಮಾಮೂಲಿ ಪ್ರಶ್ನೆಗಳು. ಆದರೆ ನಿನ್ನ ಕುಶಲೋಪರಿಯ ವರದಿ ತಿಳಿಯಲು ನಿನ್ನಿಂದ ಒಂದು ಪತ್ರವು ಇಲ್ಲ, ನಾ ಮೌನಿಯಾದಾಗ ರಚ್ಚೆ ಹಿಡಿದು ಕೆನ್ನೆ ಹಿಂಡಿ, ಕಣ್ಣ ಮಿಟುಕಿಸಿ ಯಾಕೋ ಕೂಸೆ.. ಏನಾಯ್ತು..? ಎನ್ನುವ ಆ ನಿನ್ನ ಸಿಹಿ ಸಾಂತ್ವಾನವು ಇಲ್ಲ. ಯಾಕಾಯ್ತು ಕೂಸೆ ಹೀಗೆ..? ಎಲ್ಲದಕ್ಕೂ ದೇವರಿದ್ದಾನೆ, ಆಗುವುದೆಲ್ಲಾ ಒಳ್ಳೆಯದಕ್ಕೆ ಕಣೋ ಅಂತ ನನ್ನ ಅನುಮಾನಗಳಿಗೆ ನಂಬಿಕೆಯ ನೀರೆರೆದು, ನೀನೇಕೆ ಬತ್ತಿ … Read more

ಮೂವರ ಕವನಗಳು: ನಂದನ್ ಜಿ, ರನ್ನ ಕಂದ, ಸಿಪಿಲೆನಂದಿನಿ

ತಾರೆ ಬದುಕು  ನೆನಪಿನಾ ಜೋಳಿಗೆಯ ಸರಕು ಆ ನೆನಪಿಗೂ ಬೇಕಿದೆ ಆಸರೆ  ಮಿನುಗುವುದೇ  ಮಿಂಚಿ ಮರೆಯಾದ ಆ ತಾರೆ..  ಹೊಳೆಯುವುದೇ  ಮಿಂಚಿ ಮರೆಯಾದ ಆ ತಾರೆ.. ನೆನಪಿನಾ ಬಾಣಲೆಗೆ ಹಾಕಿದಳು ಒಲವೆಂಬ ಒಗ್ಗರಣೆ  ಹಾಳಾಗಿದೆ ಹೃದಯ..  ಸರಿಪಡಿಸಲಾರದು  ಯಾವುದೇ ಗುಜರಿ ಸಲಕರಣೆ ಅಂದು ಮನತಣಿಸಿದ್ದ  ಹಾವ-ಭಾವ ಮಾತುಗಳ ಸಮ್ಮಿಲನ  ಇಂದೇಕೊ ಕಾಡುತಿದೆ  ಖಾಲಿ ನೀರವತೆಯ ಮೌನ ಶುರುವಾಗಿದೆ ಅವಳೊಂದಿಗಿನ  ಆ ನೆನಪುಗಳ ಪ್ರಹಾರ..  ಮನದ ಪಡಸಾಲೆಯಲ್ಲೆಲ್ಲೋ  ನಿರಂತರ ಮರುಪ್ರಸಾರ. ಕತ್ತಲಲ್ಲಿ ಮುದುಡಿದ್ದ ಮನಸಿಗೆ  ನಗುವೆಂಬ ಲಾಟೀನು ಹಿಡಿದು … Read more

ಚಿಂತೆ ಬಿಡಿ..ರಿಲ್ಯಾಕ್ಸ್ ಪ್ಲೀಸ್..: ಬಿ.ರಾಮಪ್ರಸಾದ್ ಭಟ್

ನೀವು ಸದಾ ಲವಲವಿಕೆಯಿಂದ, ಅತ್ಯುತ್ಸಾಹದಿಂದ ಇರಲು ಬಯಸುವುದು ನಿಜವೇ ಆದರೆ ವೃಥಾ ಚಿಂತಿಸುವುದನ್ನು ಕೈ ಬಿಡಬೇಕು. ಒಂದು ವೇಳೆ ಯಾವುದೇ ರೋಗಕ್ಕೆ ತುತ್ತಾದಾಗಲೂ ಸಹ ಕಳವಳಗೊಳ್ಳದೆ 'ಅಯ್ಯೋ ಈ ರೋಗ ಬಂದಿದೆಯಲ್ಲಪ್ಪಾ,ಏನು ಮಾಡುವುದು? ಹೇಗೆ? ವಾಸಿಯಾಗುವುದೋ ಇಲ್ಲವೋ?' ಎಂದು  ಪೇಲವ ಮುಖ ಮಾಡಿಕೊಂಡು ಚಿಂತೆಗೀಡಾಗದೆ ನೆಮ್ಮದಿಯಾಗಿ ಸಾವಧಾನ ಚಿತ್ತದಿಂದ ಇದ್ದರೆ ಆ ನೆಮ್ಮದಿಯ ಭಾವನೆಯೇ ನಮ್ಮ ದೇಹದ ಜೀವಕೋಶಗಳ ಮೇಲೆ ಪ್ರಭಾವ ಬೀರಿ ನಮ್ಮ ರೋಗಗಳನ್ನು ಕಡಿಮೆಗೊಳಿಸುವುದು. ಅಲ್ಲದೆ ಆರೋಗ್ಯದಲ್ಲಿನ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸುತ್ತದೆ. ಪ್ರತಿಯೊಬ್ಬ ಮನುಷ್ಯನ … Read more

ನಿರಂತರ ಪ್ರಕಾಶನದ ಹೊಸ ಪುಸ್ತಕ ಹಾಗೂ ಸೀಡಿ ‘ಹಾರೋಣ ಬಾ’ ಕುರಿತು

ನಿರಂತರ ಪ್ರಕಾಶನ  ಮೈಸೂರಿನ ನಿರಂತರ ಪ್ರಕಾಶನ ಕಳೆದ 20 ವರ್ಷಗಳಿಂದ ರಂಗಭೂಮಿ,ಸಾಹಿತ್ಯ, ಜಾನಪದ ಕ್ಷೇತ್ರಗಳಲ್ಲ್ಲಿ ಕೆಲಸ ಮಾಡುತ್ತಿದೆ. ನಮ್ಮ ಎಚ್ಚರದ, ಕನಸಿನ ಸಮಯಗಳಲ್ಲಿ ಚಳುವಳಿಗಳಷ್ಟೇ ಪ್ರಮುಖವಾಗಿ ಪುಸ್ತಕಗಳೂ ಆವರಿಸಿವೆ. ಕಲಿಸಿವೆ ಓದುಗನೊಬ್ಬ ಸಮಾಜದ ಜತೆಗೆ  ನೇರವಾಗಿ ಮುಖಾಮುಖಿಯಾಗುವ ಇಂಥ ಸನ್ನಿವೇಶ ಸೃಷ್ಟಿಸುವÀÀ ಹೊಣೆ  ನಮ್ಮೆಲ್ಲರದ್ದು. ಪುಸ್ತಕ ಪ್ರಕಟಣೆ ಎನ್ನುವುದು ನಮ್ಮ ಇಂಥಹ ಚಟುವಟಿಕೆಗಳ ವಿಸ್ತರಣೆ ಎಂಬುದು ನಮ್ಮ ನಂಬಿಕೆ. ಜನ ಸಾಂಸ್ಕøತಿಕ ಪರಂಪರೆಯ ಕುರಿತ ಉತ್ತಮ, ಚಿಂತನಶೀಲ ಪುಸ್ತಕಗಳ ಪ್ರಕಟಣೆ ನಮ್ಮ ಆಶಯ. ಈ ಹಿನ್ನೆಲೆಯಲ್ಲಿ ಕೆಲಸ … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

ವಿದ್ವಾಂಸನೂ ಸೂಫಿಯೂ ಒಬ್ಬ ವಿದ್ವಾಂಸ ಸೂಫಿಯೊಬ್ಬನಿಗೆ ಹೇಳಿದ, “ನಮ್ಮ ತಾರ್ಕಿಕ ಪ್ರಶ್ನೆಗಳು ನಿಮಗೆ ಅರ್ಥವೇ ಆಗುವುದಿಲ್ಲವೆಂಬುದಾಗಿ ನೀವು ಸೂಫಿಗಳು ಹೇಳುತ್ತೀರಿ. ಅಂಥ ಒಂದು ಪ್ರಶ್ನೆಯನ್ನು ನೀವು ಉದಾಹರಿಸಬಲ್ಲಿರಾ?” ಸೂಫಿ ಹೇಳಿದ, “ಖಂಡಿತ. ಅದಕ್ಕೊಂದು ಉದಾಹರಣೆ ನನ್ನ ಹತ್ತಿರ ಇದೆ. ನಾನೊಮ್ಮೆ ರೈಲಿನಲ್ಲಿ ಪಯಣಿಸುತ್ತಿದ್ದೆ. ಆ ರೈಲು ಏಳು ಸುರಂಗಗಳ ಮೂಲಕ ಹಾದುಹೋಯಿತು. ಆ ವರೆಗೆ ರೈಲಿನಲ್ಲಿ ಪಯಣಿಸದೇ ಇದ್ದ ಹಳ್ಳಿಗಾಡಿನವನೊಬ್ಬ ನನ್ನ ಎದುರು ಕುಳಿತಿದ್ದ. ರೈಲು ಏಳು ಸುರಂಗಗಳನ್ನು ದಾಟಿದ ನಂತರ ಅವನು ನನ್ನ ಭುಜ ತಟ್ಟಿ … Read more

ಸಾಮಾನ್ಯ ಜ್ಞಾನ (ವಾರ 81): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: 1.    1975ರಲ್ಲಿ ನವಮಂಗಳೂರು ಬಂದರನ್ನು ಉದ್ಘಾಟಿಸಿದವರು ಯಾರು? 2.    ಬಿಎಆರ್‍ಸಿ (BARC) ನ ವಿಸ್ತøತರೂಪವೇನು? 3.    ಪ್ರಸಿದ್ಧ ಏಕಾಂಬರೇಶ್ವರದೇವಾಲಯಎಲ್ಲಿದೆ? 4.    ತಾಳಬ್ರಹ್ಮ ಎಂದುಯಾರನ್ನುಕರೆಯುತ್ತಾರೆ? 5.    2008ರ ವಿಶ್ವ ಪ್ರವಾಸೋದ್ಯಮ ದಿನಾಚರಣೆಆತಿಥ್ಯ ವಹಿಸಿದ ದೇಶಯಾವುದು? 6.    ಸೌದಿ ಅರೇಬಿಯಾದರಾಜಧಾನಿ ಯಾವುದು? 7.    ಮಯೂರವರ್ಮನದಂಡಯಾತ್ರೆಯನ್ನು ಸೂಚಿಸುವ ಶಾಸನ ಯಾವುದು? 8.    ಭಾರತದಲ್ಲಿ ಮ್ಯಾಂಗನೀಸ್ ನಿಕ್ಷೇಪದಲ್ಲಿ 2ನೇ ಸ್ಥಾನದಲ್ಲಿರುವರಾಜ್ಯಯಾವುದು? 9.    1977-1982ರ ಅವಧಿಯ ಭಾರತದರಿಸರ್ವ್ ಬ್ಯಾಂಕಿನಗವರ್ನರ್‍ಯಾರಾಗಿದ್ದರು? 10.    ಅಕೌಸ್ಟಿಕ್ಸ್ ಇದುಯಾವುದರಇದುಯಾವುದರಕುರಿತುಅಧ್ಯಯನವಾಗಿದೆ? 11.    ಗಾಳಿಯ ವೇಗವನ್ನು ಅಳೆಯುವ ಮಾನಯಾವುದು? 12.    ‘ಮೆಕ್ಕಾ’ … Read more

ಹಿಮಾಲಯದಲ್ಲೊಂದು ಸೈಕಲ್ ಪಯಣ: ಡಾ. ಸುಪ್ರಿಯಾ ಸಿಂಗ್

                        ಹಿಮಾಚಲ ಪ್ರದೇಶದ ಮನಾಲಿಯಿಂದ ಜಮ್ಮು ಕಾಶ್ಮೀರದ ಲೇಹ್, ಲಡಾಖ್‍ಗೆ  ಸೈಕಲ್ ಪಯಣ ಮಾಡುವುದು, ವಿಶ್ವದ ಅತ್ಯಂತ ಕಠಿಣ ಮತ್ತು ಸಾಹಸದ ಪಯಣಗಳಲ್ಲಿ ಒಂದು ಎಂದು ಪರಿಗಣಿಸಲಾಗುತ್ತದೆ.   ಹಿಮಾಲಯದ ಸೌಂದರ್ಯ ಸವಿಯುತ್ತ ಸಾಗುವ ಪಯಣ ಸಂತೋಷ ನೀಡುವುದು ನಿಜ, ಆದರೆ ಸೈಕಲ್ ಸವಾರನ ಕೌಶಲ್ಯ, ತಾಳ್ಮೆ ಮತ್ತು ಧೈರ್ಯವನ್ನು ಪರೀಕ್ಷಿಸುವಲ್ಲಿ ರಸ್ತೆಗಳು ಮೊದಲು. ಕೆಲವಡೆ ಚೆನ್ನಾಗಿರುವ ರಸ್ತೆಗಳಿದ್ದರೆ, ಅನೇಕ ಕಡೆ ಕಚ್ಚಾ … Read more

ಹಾಳು ಕೃಷಿಕನೊಬ್ಬನ ಸ್ವಗತ: ಅಮರ್ ದೀಪ್ ಪಿ.ಎಸ್.

ಅದೊಂದು ಎಂಟು ದೊಡ್ಡ ಅಂಕಣದ ಮನೆ. ನಮ್ಮಪ್ಪ ಆ ಊರಿನ ಆದರ್ಶ ಶಿಕ್ಷಕ. ಆತನ ಶಿಷ್ಯಂದಿರು ರಾಜ್ಯವಲ್ಲದೇ ದೇಶ, ವಿದೇಶಗಳಲ್ಲೂ ಹೆಸರು ಗಳಿಸಿದ ಸುಶಿಕ್ಷಿತರು.  ಅಷ್ಟೇಕೇ, ನಮ್ಮ ಮನೆಯಲ್ಲೇ ನಾಲ್ಕೂ ಜನ ಮಕ್ಕಳಲ್ಲಿ ಮಾಸ್ಟರ್ ಡಿಗ್ರಿ  ಮಾಡಿ ಉಪನ್ಯಾಸಕ, ಎಂಜನೀಯರ್, ಮತ್ತಿತರ ವೃತ್ತಿಗಳಲ್ಲಿದ್ದುಕೊಂಡು ಅಪ್ಪನ ಹೆಸರಿಗೆ ಗರಿ ಮೂಡಿಸಿದವರು.  ನಾನು ಸಿವಿಲ್ ಎಂಜನೀಯರ್ ಪದವೀಧರ. ಈಗ್ಗೆ ಇಪ್ಪತ್ತೈದು ವರ್ಷಗಳ ಹಿಂದೆ ಹಳ್ಳಿಯ ಕನ್ನಡ ಮಾಧ್ಯಮದ ನಾನು ಸಿವಿಲ್ ಎಂಜನೀಯರಿಂಗ್ ಮಾಡಿ ರಾಜ್ಯದ ಪ್ರಮುಖ ನಗರಗಳಲ್ಲಿ ದುಡಿದು, ನನ್ನ … Read more

ರೈತರ ಸಾವಿಗೆ ಪೂರಕವಾಗಿವೆಯೇ ನಮ್ಮ ಅಭಿವೃದ್ಧಿ ಯೋಜನೆಗಳು….?: ಮಂಜುಳ ಎಸ್.

             ದೇಶದಲ್ಲಿ ನೀರಿಗೆ, ಅನ್ನಕ್ಕೆ ಬರವಿರುವಂತೆಯೇ, ಅನ್ನದಾತನ ಆತ್ಮಹತ್ಯೆಗಳು ಸಹ ಬರವಿಲ್ಲದಂತೆ ಪ್ರತಿ ರಾಜ್ಯ, ಜಿಲ್ಲೆಗಳಲ್ಲಿ ಸ್ಪರ್ಧಾತ್ಮಕವಾಗಿ ನಡೆಯುತ್ತಿವೆ. ಕೃಷಿಯಲ್ಲಿ ಅವೈಜ್ಞಾನಿಕ ಪದ್ದತಿಯನ್ನು ಬಳಸುತ್ತಿರುವುದು, ಸಾಲ ಮಾಡುತ್ತಿರುವುದು, ಮದುವೆ ಸಮಾರಂಭಗಳಿಗೆ ಹೆಚ್ಚು ದುಂದು ವೆಚ್ಚ ಮಾಡುತ್ತಿರುವುದೇ ರೈತರ ಸರಣಿ ಆತ್ಮಹತ್ಯೆಗಳಿಗೆ ಕಾರಣವಾಗುತ್ತಿದೆ ಎಂದು ನಮ್ಮ ಸರ್ಕಾರಗಳು ಅಮಾನವೀಯವಾಗಿ ಉತ್ತರಿಸುತ್ತಾ ಒಂದಿಷ್ಟು ಪರಿಹಾರ ಧನವನ್ನು ನೀಡಿ, ಸಂತ್ರಸ್ತ ಕುಟುಂಬಗಳಿಗೆ ಆ ಕ್ಷಣಕ್ಕೆ ಸಮಾಧಾನ ಪಡಿಸುತ್ತಿವೆ. ರೈತರ ಸರಣಿ ಆತ್ಮಹತ್ಯೆಗಳು ನೆನ್ನೆ ಮೊನ್ನೆಯದಲ್ಲ, … Read more

ಗಾಳಿಪಟದ ಘಟಕೆಷ್ಟು ನೆತ್ತರ ಅಭಿಷೇಕ!!!: ಅಖಿಲೇಶ್ ಚಿಪ್ಪಳಿ

[ಪ್ರತಿವರ್ಷದ ಆರಂಭದಲ್ಲಿ ಮಕರ ಸಂಕ್ರಾತಿಯ ಸಂದರ್ಭದಲ್ಲಿ ಗುಜರಾತಿನಲ್ಲಿ ನಡೆಯುವ ಗಾಳಿಪಟದ ಹಬ್ಬದಲ್ಲಿ ನಡೆಯುವ ಹಿಂಸೆಯ ಕುರಿತಾದ ಲೇಖನವಿದು. ಮಾನವ ತನ್ನ ಮನರಂಜನೆಗಾಗಿ ಏನೆಲ್ಲಾ ಅವಘಡಗಳನ್ನು ಮಾಡುತ್ತಾನೆ ಎಂಬುದರ ಕುರಿತು ಬೆಳಕು ಚೆಲ್ಲುವ ಪ್ರಯತ್ನ] ಈಗೊಂದು 25 ವರ್ಷಗಳ ಹಿಂದೆ ಗಾಳಿಪಟ ಹೆಸರು ಕೇಳಿದೊಡನೆ ಆಗಿನ ಮಕ್ಕಳ ಮುಖ ಮೊರದಗಲವಾಗುತ್ತಿತ್ತು. ಮನೆಯ ಹಿರಿಯರಿಗೆ ಬೆಳಗಿನಿಂದ ಕಾಡಿ-ಬೇಡಿ ಮಾಡಿದರೆ ಸಂಜೆ 4ರ ಹೊತ್ತಿಗೆ ಗಾಳಿಪಟ ತಯಾರಾಗುತ್ತಿತ್ತು. ಗಾಳಿ ಬಂದಂತೆಲ್ಲಾ ಮೇಲೇರುವ ಗಾಳಿಪಟವನ್ನು ಆಕಾಶದೆತ್ತರಕ್ಕೇರಿಸಲು ವಿಶಾಲವಾದ ಖಾಲಿ ಜಾಗದ ಅಗತ್ಯವಿತ್ತು. ಮಲೆನಾಡಿನಲ್ಲಿ … Read more

ಅರಿಶಿಣ ಬುರುಡೆ ಹಕ್ಕಿ: ಹರೀಶ್ ಕುಮಾರ್, ಪ. ನಾ. ಹಳ್ಳಿ.

ಅರಿಶಿಣ ಬುರುಡೆ ಹಕ್ಕಿ ಹಳದಿ ದೇಹ, ಕಪ್ಪು ರೆಕ್ಕೆಯ ಆಕರ್ಷಕ ವರ್ಣ ಸಂಯೋಜನೆ ಹೊಂದಿರುವ ಅರಿಶಿಣ ಬುರುಡೆ ಹಕ್ಕಿಯು ಸದಾ ಕಾಲ ಶುಭ್ರವಾಗಿದ್ದು, ಚಟುವಟಿಕೆಯಿಂದ ಕೂಡಿರುತ್ತದೆ, ಸಂಘ ಜೀವನ ಬಯಸುವ ಈ ಹಕ್ಕಿಯು ಚಿಕ್ಕ-ಚೊಕ್ಕ ಸಂಸಾರವನ್ನು ಬಹಳ ಪ್ರೀತಿಸುವ ಪ್ರವೃತ್ತಿ ಹೊಂದಿದೆ.ಈ ಹಕ್ಕಿಗೆ ಸುವರ್ಣ ಹಕ್ಕಿ, ಮಂಜಲಕ್ಕಿ, ಹೊನ್ನಕ್ಕಿ, ಪಿಪೀಲಾಯ ಮುಂತಾದ ಹೆಸರುಗಳೂ ಇವೆ. ತನ್ನದೇ ಆದ ಒನಪು, ವಯ್ಯಾರ ಹಾಗೂ ಗಾಂಭೀರ್ಯ ಹೊಂದಿರುವ ಈ ಹಕ್ಕಿಗೆ ಮದುವಣಗಿತ್ತಿ ಎಂಬ ಹೆಸರಿನಿಂದಲೂ ಕರೆಯುವುದುಂಟು. ಅರಿಶಿಣ ಬುರುಡೆಯು ಒರಿಯಲ್ … Read more

ಮೂವರ ಕವನಗಳು: ವಸಂತ ಬಿ ಈಶ್ವರಗೆರೆ, ದಿವ್ಯ ಆಂಜನಪ್ಪ, ಆಶಿತ್

ನನ್ನವಳಿಗೆ ಮೊಬೈಲ್ ಸಂದೇಶದ ಕವನಗಳು. ನನ್ನ ಭಾವನೆಯ ಮುಟ್ಟಿಸಿ ಪ್ರೇಮದ ಸಾಲುಗಳು…! 1. ಬೆಳದಿಂಗಳ ರಾತ್ರಿಯಲಿ, ಹೊಳೆವ ಬಾನಂಗಳದ ಎರೆಡು ನಕ್ಷೇತ್ರಗಳು ಆಗೋಣವೇ..? ಧರೆ ನಮ್ಮ ಸುತ್ತ, ಗ್ರಹ ಮಂಡಲ ನಮ್ಮ ಸುತ್ತ, ನೋಡುತ ಪ್ರೀತಿಯ ಮಾಡೋಣ, ಪಥ ಬದಲಿಸದಂತೆ ಜೊತೆ ಸಾಗೋಣ..! . 2. ಎದೆಯೊಳಗಿನ ನೋವು, ಹೃದಯದೊಳಗಿನ ಮಾತು, ನನ್ನ ಎದೆಗೆ ತಲೆ ಇಟ್ಟಾಗಲೇ ಮರೆತೆ. ನಗು ಈಗ ಮೊಗದೊಳಗೆ, ಪ್ರೀತಿಯ ಹೊಳೆ, ನಿನ್ನ ಈ ದಿನಗಳ ಒಳಗೆ, ಇಷ್ಟು ಸಾಕಲ್ಲವೇ ನಾ ಬಂದ … Read more

ನೀಲಿ: ತಿರುಪತಿ ಭಂಗಿ

                                     ಮೊದಲ ಕೋಳಿ ಕೂಗಿತು. “ಅಯ್ಯೋ ಬೆಳಕ ಆತು. ಇಂದ ಬ್ಯಾರೆ ಅಮವಾಸಿ ಐತಿ ಹಾರಿಗೆಡಿಲಿ, ಈ ನಿದ್ದಿ ಒಂದ ನನಗ ದೆವ್ವ ಕಾಡಿದಂಗ ಕಾಡ್ತೈತಿ ನೋಡ, ಅಮವಾಸಿ ಅಡಗಿ ಮಾಡಬೇಕಾದ್ರ ಸೂರ್ಯಾ ನೆತ್ತಿ ಮ್ಯಾಲ ಬರ್ತಾನ” ಎಂದು ಗಡಬಡಿಸಿ ಹಾಸಗಿಯಿಂದ ಮ್ಯಾಲೆದ್ದು ನೀಲವ್ವ ಕಣ್ಣುಜ್ಜತೊಡಗಿದಳು. ತನ್ನ ಮಗ್ಗಲ ಮಲಿಗಿದ್ದ ಲಕ್ಕಪ್ಪ ಇನ್ನ … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಪಕ್ಷಿಗಳು ಇರುವುದೇ  ಹಾರಾಡುವುದಕ್ಕಾಗಿ ಒಂದು ದಿನ ಹಸ್ಸಿದ್‌ನ ಮುಮುಕ್ಷು ಜೂಸಿಯಾ ಎಂಬಾತ ಪರ್ವತ ಪ್ರದೇಶದಲ್ಲಿ ಅಡ್ಡಾಡುತ್ತಿದ್ದಾಗ ಒಬ್ಬ ತನ್ನ ಮನೆಯ ಹೊರಗೆ ಪಂಜರದಲ್ಲಿ ಬಂಧಿಸಿ ಇಟ್ಟಿದ್ದ ಅನೇಕ ಪಕ್ಷಿಗಳನ್ನು ನೋಡಿದ. ಜೂಸಿಯಾ ಪಂಜರದ ಬಾಗಿಲು ತೆರೆದ — ಏಕೆಂದರೆ ಪಕ್ಷಿಗಳು ಇರುವುದೇ ಹಾರಾಡುವುದಕ್ಕಾಗಿ — ಎಲ್ಲ ಪಕ್ಷಿಗಳೂ ಹಾರಿಹೋದವು. ಪಂಜರದ ಮಾಲಿಕ ತನ್ನ ಮನೆಯಿಂದ ಹೊರಗೋಡಿಬಂದು ಕೇಳಿದ, “ಇದೇನು ಮಾಡಿದೆ ನೀನು?” ಜೂಸಿಯಾ ಹೇಳಿದ, “ಪಕ್ಷಿಗಳಿರುವುದೇ ಹಾರಾಡುವುದಕ್ಕಾಗಿ. ನೋಡು, ನೋಡು, ಹಾರಾಡುವಾಗ ಅವು ಎಷ್ಟು ಸುಂದರವಾಗಿ … Read more

ಕರ್ನಾಟಕ ಪರಿಶೆ (ಭಾಗ-3): ಎಸ್. ಜಿ. ಸೀತಾರಾಮ್, ಮೈಸೂರು

       ಕನ್ನಡ ಭಾಷೆಯನ್ನು ಅರಳಿಸುವ ಹೆಸರಿನಲ್ಲಿ, ಅದೇ ಖ್ಯಾತ ಸಾಹಿತಿಗಳನ್ನು ಉತ್ಸವಗಳಲ್ಲಿ ಮತ್ತೆಮತ್ತೆ ಮೆರೆಸಿ, ಪಂಪ ಪ್ರಶಸ್ತಿ, ನಾಡೋಜ ಪ್ರಶಸ್ತಿ, ನೃಪತುಂಗ ಪ್ರಶಸ್ತಿ, ಕರ್ನಾಟಕ ರತ್ನ ಪ್ರಶಸ್ತಿ ಮೊದಲಾದ ಪದವಿ-ಪ್ರಶಂಸೆಗಳ ಸುಂಟರಮಳೆಯನ್ನು ಅವರ ಮೇಲೆ ಚಳಿಜ್ವರಬರುವಮಟ್ಟಿಗೆ ಸುರಿಸುವುದು ಒಂದು ಸಂಪ್ರದಾಯವಾಗಿಬಿಟ್ಟಿದೆ. (“ರಾಜ್ಯಕವಿ” ಬಿರುದು ಯಾವ “ದಾತಾರ” ನೇತಾರರಿಗೂ ಏಕೋ ಇನ್ನೂ ಹೊಳೆದಿಲ್ಲ! ನಿಜಾರ್ಥದಲ್ಲಿ “ರಾಷ್ಟ್ರಕವಿ” ಎಂಬುವುದೂ “ರಾಜ್ಯಕವಿ” ಅಷ್ಟೇ ಅಲ್ಲವೇ?) ಕನ್ನಡ “ಅಕ್ಕ-ಡುಮ್ಮಿ” (‘ಅಕ್ಯಾಡಮಿ’- ಡಿ.ವಿ.ಜಿ. ಕರೆದಂತೆ), ಪರಿಷತ್ತು, ಪ್ರಾಧಿಕಾರ, ಪೀಠ, ವಿಶ್ವವಿದ್ಯಾನಿಲಯ, ಇಲಾಖೆ … Read more

ಇಂಡೊನೇಷ್ಯಾವನ್ನು ನುಂಗಿ ನೊಣೆಯುತ್ತಿರುವ ಕಾಡ್ಗಿಚ್ಚು: ಅಖಿಲೇಶ್ ಚಿಪ್ಪಳಿ

[ಇಂಡೊನೇಷ್ಯಾದಿಂದ ಭಾರತಕ್ಕೆ ಭೂಗತ ಪಾತಕಿ ಛೋಟಾ ರಾಜನ್‍ನ್ನು ಹಸ್ತಾಂತರಿಸಿದ ಸಚಿತ್ರ ವರದಿಗಳು ಬಹುತೇಕ ಎಲ್ಲಾ ಪ್ರಮುಖ ಪತ್ರಿಕೆಗಳ ಮುಖ್ಯಪುಟಗಳಲ್ಲಿ ರಾರಾಜಿಸುತ್ತಿದ್ದವು. ಅತ್ತ ಖುದ್ದು ಇಂಡೊನೇಷಿಯಾವು ಇತಿಹಾಸ ಕಂಡರಿಯದ ಕಾಡ್ಗಿಚ್ಚಿನಿಂದ ನಲುಗುತ್ತಿತ್ತು. ಆ ದೇಶದ ಲಕ್ಷಾಂತರ ಜನ ಈ ಕಾಡ್ಗಿಚ್ಚಿನ ಸಂತ್ರಸ್ಥರಾಗಿ ಬಳಲುತ್ತಿರುವುದನ್ನು ಪ್ರಪಂಚದ ಗಾರ್ಡಿಯನ್, ನ್ಯೂಯಾರ್ಕ್ ಟೈಮ್ಸ್‍ನಂತಹ ಪ್ರಮುಖ ಪತ್ರಿಕೆಗಳು ವರದಿ ಮಾಡಿದ್ದವು. ಬಹುಷ: ಛೋಟಾ ರಾಜನ್ ಕೂಡ ಅಲ್ಲಿನ ಭೀಕರವಾದ ಕಾಡ್ಗಿಚ್ಚಿಗೆ ಬೆದರಿ ಶರಣಾದನೇ ಎಂಬುದು ಕುಹಕವೇ ತಾನೆ] ಸಿಂಗಾಪುರ ಮತ್ತು ಮಲೇಷಿಯಾಗಳ ಶಾಲೆಗಳನ್ನು ಸ್ಥಗಿತಗೊಳಿಸಲಾಗಿದೆ. … Read more

ಬೆಳಕಿನ ಹಬ್ಬ ದೀಪಾವಳಿ..: ಸವಿತಾ ಗುರುಪ್ರಸಾದ್

     ''ಇವತ್ತು ಹಬ್ಬ ಎಷ್ಟ್ ಕೆಲಸ ಇರ್ತು ಇವತ್ತಾದ್ರೂ ಸ್ವಲ್ಪ ಬೇಗ ಬೇಗ ಮಾಡನಹೇಳಿಲ್ಲೆ, ಇವತ್ತೂ ತೋಟಕ್ಕ್ ಹೋಗಿ ಕೂತ್ಕೈನ್ದ ಎಲ್ಲರ ಮನೆಲೂ ಪೂಜೆ ಮುಗಿದರೆನಮ್ಮನೇಲಿ ಇನ್ನೂ ಸ್ನಾನವೇ ಆಗಲ್ಲೆ, ಎಲ್ಲ ನಾ ಒಬ್ಬಳೇ ಮಾಡಿ ಸಾಯಕ್ಕು ''ಹಬ್ಬದ ತಯಾರಿ ಮಾಡ್ತಾ ಅಜ್ಜಿಯ  ಸುಪ್ರಭಾತ ಸಾಗ್ತಾ ಇತ್ತು, ನಿಧಾನಕ್ಕೆ ಒಳಗಡೆಬಂದ ತಾತ, ಪೂಜೆ ಆತನೇ ಮಂತ್ರ ಕೇಳ್ತಾ ಇತ್ತು ಅಂತ ಕೇಳಿದ್ರು ನನ್ನ ಮುಖನೋಡಿ ನಗ್ತಾ, ಹು ಈಗ ಬಂದ್ರ, ಬೇಗ್ ಬೇಗ್ ಸ್ನಾನ ಮಾಡಿ, … Read more

ಸಾಮಾನ್ಯ ಜ್ಞಾನ (ವಾರ 80): ಮಹಾಂತೇಶ್ ಯರಗಟ್ಟಿ

1.    2015ರ ರಾಜ್ಯೋತ್ಸವ ಪ್ರಶಸ್ತಿಯನ್ನು ಡಾ||ಆರ್.ಕೆ.ಸರೋಜಅವರಿಗೆ ಯಾವ ಕ್ಷೇತ್ರದಲ್ಲಿನ ಸಾಧನೆಗಾಗಿ ನೀಡಲಾಯಿತು? 2.    ಬಿ.ಎಚ್.ಯು(BHU) ನ ವಿಸ್ತೃತರೂಪವೇನು? 3.    ಜೀಶಂಪಇದುಯಾರಕಾವ್ಯನಾಮವಾಗಿದೆ? 4.    ಸ್ಥಾಯಿ ಸೈನ್ಯ ಸ್ಥಾಪಿಸಿದ ಮೊದಲ ದೆಹಲಿ ಸುಲ್ತಾನ ಯಾರು? 5.    ‘ಗಿಡ್ಡಾ’ ಇದುಯಾವರಾಜ್ಯದ ಮಹಿಳೆಯರ ನೃತ್ಯಕಲೆಯಾಗಿದೆ? 6.    ಭರತ್‍ಪುರ ಪಕ್ಷಿಧಾಮ ಯಾವ ರಾಜ್ಯದಲ್ಲಿದೆ? 7.    ರಾಷ್ಟ್ರೀಯ ಮಹಿಳಾ ಆಯೋಗ ಸ್ಥಾಪನೆಯಾದ ವರ್ಷಯಾವುದು? 8.    ಉಸ್ತಾದ್ ಬಿಸ್ಮಿಲ್ಲಾ ಖಾನ್‍ಯುವ ಪುರಸ್ಕಾರವನ್ನು ನೀಡುವ ಸಂಸ್ಥೆ ಯಾವುದು? 9.    ಲಿಟಲ್‍ಕಾರ್ಪೊರಲ್‍ ಎಂದು ಯಾರನ್ನು ಕರೆಯುತ್ತಾರೆ? 10.    ಇಂಡಿಯನ್ ಇನ್‍ಸ್ಟಿಟ್ಯೂಟ್ … Read more

ಡಾ||ಕ್ಲೀನ್, ವಾಷ್‍ರೂಮ್ ಟು ವಾರ್ಡ್‍ರೋಬ್

ಲಾಂಡ್ರಿ, ಡ್ರೈಕ್ಲೀನಿಂಗ್ ಈಗ ನಿಮ್ಮ ಬೆರಳ ತುದಿಯಲ್ಲಿ  ಭಾರತದ ಮೊಟ್ಟ ಮೊದಲ ಆನ್‍ಲೈನ್ ಲಾಂಡ್ರಿ ಬುಕಿಂಗ್ ವ್ಯವಸ್ಥೆಯನ್ನು ಬೆಂಗಳೂರು ಮೂಲದ ಕನ್ನಡಿಗ, ಜರಗನಹಳ್ಳಿ ಕಾಂತರಾಜುರವರು “ಡಾ||ಕ್ಲೀನ್, ವಾಷ್‍ರೂಮ್ ಟು ವಾರ್ಡ್‍ರೋಬ್” ಎಂಬ ಲಾಂಡ್ರಿ ಸರ್ವಿಸಸ್ ಸಂಸ್ಥೆಯನ್ನು ಪ್ರಾರಂಭಿಸಿ ಅಭಿವೃದ್ದಿಪಡಿಸಿದ್ದಾರೆ. ಇದರ ಮೂಲಕ ಗ್ರಾಹಕರು ತಮ್ಮ ದಿನನಿತ್ಯ ಬಳಕೆಯ ಎಲ್ಲಾ ತರಹದ ಬಟ್ಟೆಗಳನ್ನು ಕುಳಿತಲ್ಲಿಯೇ ಕೆಲವೇ ಸೆಕೆಂಡುಗಳಲ್ಲಿ ತಮ್ಮ ಸ್ಮಾರ್ಟ್‍ಫೋನ್‍ಗಳನ್ನು ಬಳಸಿ ಲಾಂಡ್ರಿ ಬುಕ್ ಮಾಡಿ ಸೇವೆಯನ್ನು ತಮಗೆ ಬೇಕಾದ ದಿನ ಮತ್ತು ಸಮಯಕ್ಕೆ ಪಡೆಯಬಹುದಾಗಿದೆ.  ಇಂದಿನ ಯಾಂತ್ರಿಕ … Read more

ಪುರಂದರ ಮಂಟಪದತ್ತಣ ಪಯಣ: ಪ್ರಶಸ್ತಿ

ಆಚೆ ದಡದ ಸಾಲು ದೇಗುಲಗಳ ಬಗ್ಗೆ ಅಚ್ಚರಿಪಡುತ್ತಾ, ಎತ್ತ ಸಾಗಿದರೂ ಅದೇ ಸರಿಯಾದ ದಾರಿಯೇನೋ ಎಂಬತ್ತಿದ್ದ ದೇಗುಲಗಳ, ಅವುಗಳಿಗೆ ಕರೆದೊಯ್ಯುತ್ತಿದ್ದ ಕಾಲು ಹಾದಿಗಳಲ್ಲಿ ಯಾವುದು ಸರಿ, ಯಾವುದು ತಪ್ಪು ಎಂದು ಬೋರ್ಡ್ ಹಾಕಿ ಮುಗಿಯೋ ಬಾಬತ್ತಲ್ಲ ಎಂದು ಆಲೋಚಿಸುತ್ತಾ ಎದುರಿಗೆ ಕಂಡ ಧ್ವಜಸ್ಥಂಭದ ದೇಗುಲದತ್ತ ದಾಪುಗಾಲಿಟ್ಟೆವು. ಧ್ವಜಸ್ಥಂಭವಿದೆ, ಕೆಳಗಿಳಿಯೋ ಮೆಟ್ಟಿಲುಗಳೂ ಇವೆ. ಆದರೆ ಅದ್ಯಾವ ದೇಗುಲವೆಂಬ ಮಾಹಿತಿಯೇ ಇರಲಿಲ್ಲ ಅಲ್ಲೆಲ್ಲೋ. ದಾಳಿಗೆ ತುತ್ತಾಗಿ ಗರ್ಭಗೃಹದಲ್ಲಿ ಪೂಜಾ ಮೂರ್ತಿಯಿಲ್ಲದ ಆ ದೇಗುಲ ಬಿಕೋ ಅನ್ನುತ್ತಿತ್ತು. ಅಲ್ಲಿಂದ ಮುಂದೆ ಸಾಗಿದರೆ … Read more

ಕಾವ್ಯಧಾರೆ: ಬಿದಲೋಟಿ ರಂಗನಾಥ್, ಶ್ರೀಶೈಲ ಮಗದುಮ್, ಶ್ರೀಮಂತ ಯನಗುಂಟಿ, ಎಸ್ ಕಲಾಲ್

ಸುಡುವ ಕನ್ನಡಮ್ಮನ ಪಾದಗಳು ಸುಡುಬಿಸಿಲ ನಡುಮಧ್ಯಾಹ್ನ ನನ್ನವ್ವಳ ಅಂಗಾಲುಗಳು ಚುರ್ರುಗುಟ್ಟಿ ಬೊಬ್ಬೆ ಎದ್ದಿವೆ ಮೈಲಿದೂರಗಳ ಕ್ರಮಿಸಿ ಛತ್ರಿಯಿಲ್ಲ ಚಪ್ಪಲಿಯಿಲ್ಲ ಹೆಗಲ ಮೇಲೆ ಕೂರಿಸಿಕೊಳ್ಳುವವರು ಮೊದಲೇ ಬಚ್ಚಿಕ್ಕಿಕೊಳ್ಳುತ್ತಿದ್ದಾರೆ ಕಣ್ತಪ್ಪಿ ಕೂರಿಸಿಕೊಂಡವವನನ್ನು ಹುಚ್ಚ ದಡ್ಡನೆಂದು ಜರಿಯುತ್ತಿದ್ದಾರೆ 'ಅಮ್ಮ' ಎನ್ನುವ ನಾಲಗೆಗಳು  'ಮಮ್ಮಿ' ಅನ್ನುತ್ತಿದ್ದಾವೆ ಬರಿಗಾಲಲಿ ನಡೆದೋಗುತಿರುವ ತಾಯಿಗೆ ನೀರಡಿಕೆಯಾದರು ಗುಟುಕು ನೀರು ಕೊಡುವವರಿಲ್ಲ ಮರದಡಿಯ ಮರಳ ಚಿಲುಮೆ ಉಕ್ಕುತ್ತಿಲ್ಲ ! ಬೆವರ ಹನಿಗಳು ತಂಬಿಗೆ ಲೆಕ್ಕದಲ್ಲಿ ಸೋರುತ್ತಿವೆ ಒರೆಸುವ ಕೈಗಳು ಗಾಯವಿಲ್ಲದೆಯೂ ಬ್ಯಾಂಡೀಜ್ ಕಟ್ಟಿಕೊಂಡಿದ್ದಾರೆ ! ಉಸಿರೆತ್ತಿದರೆ ಕನ್ನಡಮ್ಮನ ಮಡಿಲ … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಶಿಷ್ಯನಾಗಿರುವುದು ಬಲು ಕಷ್ಟದ ಕೆಲಸ ಸೂಫಿ ಮುಮುಕ್ಷು ಜುನ್ನೈದ್‌ನ ಹತ್ತಿರ ಅವನ ಶಿಷ್ಯನಾಗಲೋಸುಗ ಒಬ್ಬ ವ್ಯಕ್ತಿ ಬಂದನು. ಜುನ್ನೈದ್‌ ಬಹಳ ಹೊತ್ತು ಅವನನ್ನೇ ದಿಟ್ಟಿಸಿ ನೋಡಿದ. ಪರಿಣಾಮವಾಗಿ ಆ ವ್ಯಕ್ತಿ ತುಸು ಅಸ್ಥಿರಮನಸ್ಕನಾದ, ಜುನ್ನೈದ್‌ ಏಕೆ ಇಷ್ಟು ಹೊತ್ತು ಮೌನವಾಗಿ ತನ್ನನ್ನು ದಿಟ್ಟಿಸಿ ನೋಡುತ್ತಿದ್ದಾನೆ ಎಂಬುದು ಅರ್ಥವಾಗದೆ.  ಕೊನೆಗೊಮ್ಮ ಜುನ್ನೈದ್‌ ಹೇಳಿದ, “ಶಿಷ್ಯನಾಗಿರುವುದು ಬಲು ಕಷ್ಟದ ಕೆಲಸ.” ಆ ವ್ಯಕ್ತಿ ಹೇಳಿದ, “ಅಂತಾದರೆ ನಾನು ಹಿಂಬಾಲಕನಾಗಿರಲೂ ಸಿದ್ಧನಿದ್ದೇನೆ.” ಜುನ್ನೈದ್‌ ಹೇಳಿದ, “ಅದು ಇನ್ನೂ ಕಷ್ಟದ ಕೆಲಸ. … Read more

ಕಾಸರಗೋಡಿನ ಅಮ್ಮ ತೊಟ್ಟಿಲು: ಕೃಷ್ಣವೇಣಿ ಕಿದೂರ್

ಅನೈತಿಕ ಸಂಬಂಧ, ದೈಹಿಕ ದೌರ್ಜನ್ಯ, ಅವಿವಾಹಿತ ತಾಯಿ, ಇಂತಹ ಸನ್ನಿವೇಶಗಳಲ್ಲಿ ಜನಿಸುವ ಕಂದ ಯಾರಿಗೂ ಬೇಡ. ತಾಯ್ತಂದೆಗೆ ಹೊರೆಯಾದ, ಮನೆಮಂದಿಗೆ ಶಾಪವಾದ ಈ ಮಕ್ಕಳನ್ನು     ಉಪೇಕ್ಶಿಸುವುದೇ  ಜಾಸ್ತಿ. ರಾತ್ರೆಯ ಕಗ್ಗತ್ತಲಲ್ಲಿ ರಸ್ತೆ ಬದಿಗೆ, ಕಾಡುದಾರಿಯಲ್ಲಿ, ಪೊದೆಗಳಲ್ಲಿ, ಹೊಳೆನೀರಿನಲ್ಲಿ ಎಸೆಯುವವರಿಗೆ ಶಿಶುವಿನ  ಉಳಿವು ಬೇಡ. ಈ ಶಿಶುಗಳು ನೀರಿನಲ್ಲಿ ಉಸಿರುಗಟ್ಟಿದರೆ, ರಸ್ತೆಗೆಸೆದ ಕಂದ ನರಿ, ನಾಯಿ, ತೋಳಗಳ ಬಾಯಿಗೆ ತುತ್ತಾಗುತ್ತದೆ. ಕಾಗೆ, ಹದ್ದುಗಳು ಕುಕ್ಕಿ ಕೊಲ್ಲುತ್ತವೆ. ತೀವ್ರ ಚಳಿ, ಬಿರುಬಿಸಿಲು ತಡೆಯದೆ ಪ್ರಾಣ ಬಿಡುವ ಹಸುಳೆಗಳೂ … Read more

ಕರ್ನಾಟಕ ಪರಿಶೆ (ಭಾಗ-2): ಎಸ್. ಜಿ. ಸೀತಾರಾಮ್, ಮೈಸೂರು

  ಇಲ್ಲಿಯವರೆಗೆ ಇಂಗ್ಲಿಷ್ ಭಾಷೆಯು ಭಾರತೀಯರಿಗೆ ದತ್ತವಾಗಿರುವ ಒಂದು ಅಮೂಲ್ಯ-ಪಾರಂಪರಿಕ ಸಂಪತ್ತು. ಭೌಗೋಳೀಕರಣವು ಭರದಿಂದ ಸಾಗುತ್ತಿರುವ ಈ ಯುಗದಲ್ಲಿ, ಇಂಗ್ಲಿಷ್ ಭಾಷೆಯನ್ನು ಬಿಸಾಡುವುದು ಕೇವಲ ತಿಳಿಗೇಡಿತನವಷ್ಟೇ ಅಲ್ಲ, ವಿದ್ಯೆ- ಮತ್ತು ಪ್ರಗತಿ-ವಿರೋಧಿ ಕೃತ್ಯವೂ ಹೌದು.  ವಿಶೇಷವಾಗಿ, ನೆರೆ‘ಹೊರೆ’ಯ ತಮಿಳರು ಮತ್ತು ಮರಾಠಿಗಳಲ್ಲಿರುವ ಪ್ರಾಂತಾಭಿಮಾನದ ಅತಿರೇಕಾಚಾರಗಳಿಗೆ ಪ್ರತಿಯಾಗಿ, ಭಾಷಾನಿರಪೇಕ್ಷತೆ ಹಾಗೂ ಸರ್ವಜನಾಂಗಶಾಂತಿಯ ತೋಟವಾದ ಕರ್ನಾಟಕದಲ್ಲೂ ಈಗ ಅದೇ ಭಾಷಾದುರಾಗ್ರಹದ ತೀಕ್ಷ್ಣವಿಷಾಣು ಹರಡುತ್ತಿದೆ; ವಿಶಾಲಕರ್ನಾಟಕದ ವಿಶಾಲಹೃದಯದಲ್ಲೊಂದು ಕಂದರ ಏಳುತ್ತಿದೆ; ಕನ್ನಡದ ಹರಿವಿನೆದುರು ಕನ್ನಂಬಾಡಿಕಟ್ಟೆ ಕಟ್ಟುವ ದುಸ್ಸಾಹಸ ನಡೆಯುತ್ತಿದೆ; “ಕನ್ನಡವನ್ನಷ್ಟೇ ನುಡಿ, … Read more