ನಮ್ಮೂರ ದಸರಾ: ಪ್ರಶಸ್ತಿ

ಹಬ್ಬಗಳೆಂದ್ರೆ ಅದೇನೋ ಖುಷಿ.ಅದು ನಮ್ಮನ್ನೆಲ್ಲಾ ಸ್ವಂತಂತ್ರ್ಯರನ್ನಾಗಿಸಿದ ಆಗಸ್ಟ್ ಹಬ್ಬವಾಗಿರಬಹುದು. ಗಣತಂತ್ರರನ್ನಾಗಿಸಿದ ಜನವರಿ ಹಬ್ಬವೂ ಆಗಿರಬಹುದು. ನಾಡಹಬ್ಬ ದಸರಾವಾಗಿರಬಹುದು, ಬೆಳಕಹಬ್ಬ ದೀಪಾವಳಿಯಾಗಿರಬಹುದು. ಯಾವಾಗ ಬರುತ್ತಪ್ಪಾ ರಜಾ ಎಂದನಿಸೋ ಬಕ್ರೀದು, ರಂಜಾನ್, ಕ್ರಿಸ್ಮಸ್ಸುಗಳಾದ್ರೂ ಸರಿಯೇ.ಹಬ್ಬವೆಂದ್ರೆ, ಆ ರಜೆಗಳೆಂದ್ರೆ ಅದೆಂತದೋ ಖುಷಿ ಬಾಲ್ಯದಿಂದಲೂ. ಕೆಲವೆಡೆಯೆಲ್ಲಾ ಶಾರದಾಪೂಜೆ, ಲಕ್ಷ್ಮೀ ಪೂಜೆ, ಆಯುಧಪೂಜೆ, ಗೂಪೂಜೆ ಅಂತ ಹಲವಾರು ಪೂಜೆಯಿರೋ ದಸರಾ ದೊಡ್ಡ ಹಬ್ಬವಾದರೆ ನಮ್ಮೆಡೆ ಅದರ ಹೆಚ್ಚಿನವೆಲ್ಲಾ ಬರೋ ದೀಪಾವಳಿಯೇ ದೊಡ್ಡಬ್ಬ. ದಸರಾವೆಂದರೆ  ದೊಡ್ಡವರಿಗೆ ಶಮೀ ಪತ್ರೆ ಕೊಟ್ಟು, ಬನ್ನಿ ಕಡಿಯೋದು , ಬಾಳೆಮರ … Read more

ಕರಿಸುಂದರಿಯ ಕಿರಿಗೂಡು-2: ಅಖಿಲೇಶ್ ಚಿಪ್ಪಳಿ

ಕರಿಸುಂದರಿಯ ಕಿರಿಗೂಡು-1 [ಎರಡು ವಾರದ ಹಿಂದೆ ಬರೆದಿದ್ದ ಈ ಸತ್ಯಕಥೆಯನ್ನು ಪೂರ್ಣಗೊಳಿಸುವ ಹೊಣೆಗಾರಿಕೆ ಇದ್ದುದ್ದರಿಂದ, ನಂತರದಲ್ಲಿ ನಡೆದ ಘಟನೆಗಳನ್ನು ಕಟ್ಟಿಕೊಡುವ ಪ್ರಯತ್ನ ಇಲ್ಲಿ ಮಾಡಲಾಗಿದೆ. ನಾವಂದುಕೊಂಡಂತೆ ಎಲ್ಲವೂ ನಡೆಯುವುದಿದ್ದರೆ, ಪ್ರಪಂಚ ಸುಲಲಿತವಾಗಿಯೇ ಇರುತ್ತಿತ್ತೇನೋ. ಇಲ್ಲಿ ಪುಟ್ಟ ಕಣಜವೊಂದು ತನ್ನ ವಂಶಾಭಿವೃದ್ಧಿಯ ಪ್ರಯತ್ನದಲ್ಲಿದ್ದಾಗಲೇ, ದೂರದ ಅಸ್ಸಾಂನಲ್ಲಿ ಮಾನವನ ಶೋಕಿಗಾಗಿ ಒಂದು ಅಪ್ರಿಯ ಘಟನೆ ನಡೆಯಿತು. ಜೀವಜಾಲದಲ್ಲಿ ನಡೆದ ಎರಡು ಘಟನೆಗಳನ್ನು ಇಲ್ಲಿ ಪೋಣಿಸಲಾಗಿದೆ]    ತನ್ನ ಗೂಡಿಗೆ ಲಪ್ಪ ಹಾಕಿ ಮೆತ್ತಿದಂತೆ, ಜೇಡಿ ಮಣ್ಣನ್ನು ಮೆತ್ತಿ ಹೋದ ಕಪ್ಪು … Read more

ಕಾವ್ಯಧಾರೆ: ವಸಂತ ಬಿ ಈಶ್ವರಗೆರೆ, ನೂರುಲ್ಲಾ ತ್ಯಾಮಗೊಂಡ್ಲು, ಸತೀಶ್ ಪಾಳೇಗಾರ್

ಮಳೆರಾಯ ಬರಡು ಭೂಮಿಗೆ, ಮುತ್ತಿನ ಹನಿಗಳ ಸುರಿಸಿ,  ಹಸಿರ ಚಿಗುರಿಸು ಮಳೆರಾಯ.  ಕಾದು ಬಾಯ್ದೆರೆದಿದೆ,  ನಿನ್ನ ಆಗಮನದ ನಿರೀಕ್ಷೆಯಲಿದೆ, ಸುರಿಯಲು ಬಾರೆಯ ಮಹರಾಯ..? ರೈತ ಮುಗಿಲತ್ತ ನೋಡುತ,  ಪಶು ಪಕ್ಷಿಗಳೆಲ್ಲ ನಿನಗಾಗಿ ಹುಯ್ಯಲಿಡುತ,  ಕರುಣೆ ತೋರಲಾರೆಯ ಮುನಿದ ಮಾಯ…?  ಬೆಟ್ಟದಲಿ ಹಸಿರಿಲ್ಲ,  ಭುವಿಯಲಿ ತಂಪಿನ ಕಂಪಿಲ್ಲ, ತೋರಲಾರೆಯ ಹೊಸ ಚೇತನ ರಾಯ…?  ನೀರಿಗಾಗಿ ಆಹಕಾರ ಏಳುವ ಮುನ್ನ,  ಜಾನುವಾರುಗಳು ಹಸಿವಿನಿಂದ ಸಾಯುವ ಮುನ್ನ,  ಈ ಧರೆ ಬಾಯಿ ಬಿಟ್ಟು ಎಲ್ಲರನು ಮಣ್ಣಾಗಿಸುವ ಮುನ್ನ,  ನಿನ್ನ ಸಿಂಚನ ಸುರಿಸು,  … Read more

ಹೊಟ್ಟೆ ತುಂಬಾ ನಗು ಕಣ್ಣ ತುಂಬಾ ನೀರು ಉಕ್ಕಿಸಿದ ನಾಟಕ ಕಿಲಾಡಿ ರಂಗಣ್ಣ: ಹಿಪ್ಪರಗಿ ಸಿದ್ಧರಾಮ

ನವರಸಗಳಿಂದಾದ ಕಲಾರಂಗವು ಜನಸಮುದಾಯದ ಸಮಸ್ಯೆಗಳನ್ನು ವಿವಿಧ ಕಾನ್ವಾಸಗಳ ಮೂಲಕ ಹೊರಹೊಮ್ಮಿಸುತ್ತಾ ಸಮಕಾಲೀನ ಸಮಸ್ಯೆಗಳನ್ನು ಎತ್ತಿ ತೋರಿಸಿ ಜಾಗೃತಿಯ ನಿನಾದವನ್ನು ನಿರಂತರವಾಗಿಸುವ ಶಕ್ತಿ ಹೊಂದಿದೆ. ಇಂತಹ ಪ್ರಖರ ಶಕ್ತಿಯನ್ನು ಹೊಂದಿರುವ ಕಪಾಪ್ರಕಾರಗಳಲ್ಲಿ ಒಂದಾದ ರಂಗಭೂಮಿಯು ಶತಮಾನದಿಂದಲೂ ಇಂಥಹ ಸಾಮಾಜಿಕ ಜಾಗೃತಿಯನ್ನು ಮೂಡಿಸುತ್ತಾ ಕೆಲವೊಂದು ಬಗೆಹರಿಸಲಾಗದ ಸಮಸ್ಯೆಗಳನ್ನು ನವರಸಗಳಲ್ಲಿಯೇ ಹೆಚ್ಚು ಇಷ್ಟವಾಗುವ ಹಾಸ್ಯರಸದ ಮೂಲಕ ಹೇಳಲು ಪ್ರಯತ್ನಿಸುತ್ತಿದೆ. ಈ ಪ್ರಯತ್ನದಲ್ಲಿ ಹಲವಾರು ನಾಟಕಕಾರರು ಆಗಾಗ ಪ್ರಯತ್ನ-ಪ್ರಯೋಗ ಮಾಡುತ್ತಲೇ ಬಂದಿದ್ದಾರೆ. ಯಾಕಂದರೆ ರಂಗಭೂಮಿಯೆಂಬುದು ನಾಗರಿಕ ಚಿಕಿತ್ಸಕ ಶಕ್ತಿಯೊಂದಿಗೆ ಅನುದಿನವೂ ನಿತ್ಯನಿರಂತರ ಪ್ರವಹಿಸುವ … Read more

ಬೀದಿ ನಾಯಿಗಳ ವ್ಯಥೆ: ಎಚ್.ಕೆ.ಶರತ್

ಬೀದಿ ನಾಯಿಗಳಾದ ನಮಗೆ ಮನುಷ್ಯರೆಂದು ಕರೆಸಿಕೊಳ್ಳುವ ನಿಮ್ಮ ಮೇಲೆ ಮುನಿಸಿದೆ. ನಾವೇನು ನಮಗೆ ವಸತಿ ಸೌಲಭ್ಯ ಕಲ್ಪಿಸಿ ಎಂದು ಎಂದಾದರೂ ಬೇಡಿಕೆ ಮುಂದಿಟ್ಟಿದ್ದೇವೆಯೇ? ಬೀದಿಯನ್ನೇ ಸರ್ವಸ್ವವೆಂದು ಭಾವಿಸಿ ನಮ್ಮ ಮುತ್ತಾತನ ಕಾಲದಿಂದಲೂ ಅಲ್ಲೇ ಜೀವಿಸುತ್ತಿದ್ದೇವೆ. ಇತ್ತೀಚಿನ ದಿನಗಳಲ್ಲಿ ನಮ್ಮ ಮೇಲೆ ನೀವು ಹೊರಿಸುತ್ತಿರುವ ಗಂಭೀರ ಆಪಾದನೆ ಎಂದರೆ, ನಾವು ಮನುಷ್ಯರ ಮೇಲೆ ದಾಳಿ ಮಾಡುತ್ತೇವೆನ್ನುವುದು. ಯಾರೋ ನಮ್ಮ ಕಡೆಯ ಕೆಲವರು ಮಾಡುವ ದುಷ್ಕøತ್ಯಕ್ಕೆ ನಮ್ಮೆಲ್ಲರನ್ನೂ ಬಲಿಪಶುಗಳನ್ನಾಗಿ ಮಾಡುವುದು ಎಷ್ಟು ಸರಿ? ಈಗ ನೀವೆ ಆಲೋಚಿಸಿ, ನಿಮ್ಮ ಕುಲಕ್ಕೆ … Read more

‘ಕೊರಿಯೋ’ಗ್ರಾಫರ್: ಗುರುಪ್ರಸಾದ ಕುರ್ತಕೋಟಿ

’ಸುರದು ಊಟ ಮಾಡಬೇಕು ಗೊರದು ನಿದ್ದೆ ಮಾಡಬೇಕು’ ಅಂತ  ಹಳ್ಳಿ ಕಡೆ ಹೇಳತಾರೆ. ಅದರರ್ಥ ’ಸೊರ ಸೊರ’ ಅಂತ ಸದ್ದು ಮಾಡುತ್ತ, ಅದು ಹುಳಿಯೋ, ಸಾರೋ ಅದೇನೇ ಇದ್ದರೂ ಅದನ್ನು ಸೊರ ಸೊರನೆ ಸವಿದು ಊಟ ಮಾಡಬೇಕು. ಹಾಗೂ ಗೊರಕೆ ಹೊಡೆಯುತ್ತ ನಿದ್ದೆ ಮಾಡಬೇಕು, ಅದೇ ಗಡದ್ದಾದ ನಿದ್ದೆ ಅನ್ನೋದು ಈ ಹೇಳಿಕೆಯ ಹಿಂದಿರುವ ಅರ್ಥ. ಸುರದು ಹೊಟ್ಟೆ ಬಿರಿಯುವಂತೆ ಊಟ ಮಾಡಿದ ಮೇಲೆ ಗೊರಕೆ ಹೊಡೆಯುವಂತಹ ನಿದ್ದೆ ಬರದೇ ಇನ್ನೇನು? ಆದರೆ ಆ ಎರಡೂ ಕ್ರಿಯೆಗಳಿಂದ … Read more

ಫ್ಲಾಪಿಬಾಯ್ ಮತ್ತು ಲಗೋರಿಬಾಬಾ 8

ಕಾಲೇಜಿನ ಉಪನ್ಯಾಸ ಫ್ಲಾಪಿಬಾಯ್ ಮತ್ತು ಲಗೋರಿಬಾಬಾ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ಇವರ ಅಪರಿಮಿತ ಬುದ್ಧಿವಂತಿಕೆ, ಜ್ಞಾನಕ್ಕೆ ಮೆಚ್ಚಿದ ನಗರದ ನಾಗರಿಕರು ಬೆರೆ ಬೇರೆ ಕಡೆ ಉಪನ್ಯಾಸಕ್ಕೆ ಕರೆಯುತ್ತಿದ್ದರು. ಹೊಸ ಕೆಲಸ ಹೊಸ ಉತ್ಸಾಹ ಇಬ್ರೂ ಕರೆದಲ್ಲೆಲ್ಲಾ ಹೋಗಿ ಭಾಷಣ ಬಿಗಿದು ಸಿಳ್ಳೆ ಗಿಟ್ಟಿಸಿ ಬರುತ್ತಿದ್ದರು. ಹೀಗೆ ಒಮ್ಮೆ ಅವರಿಬ್ಬರನ್ನ ಉಪನ್ಯಾಸ ಕೊಡಲು ನಗರದ ಒಂದು ಕಾಲೇಜಿನಿಂದ ಕರೆ ಬಂತು. ಆಯ್ತು ಅಂತ ಇಬ್ರೂ ಹೊರಟ್ರು.  ಫ್ಲಾಪಿಬಾಯ್ ಇರಲಿ, ಲಗೋರಿಬಾಬಾನೆ ಆಗಿರಲಿ ಜನರನ್ನ ನೋಡಿ ಮಾತಾಡೋವಂತವ್ರು. ಮೊದಲೇ … Read more

ನಿ. ರಾಜಶೇಖರ ಅವರ ಜೀವನ ದರ್ಶನ ಹಾಗೂ ಅವರ ‘ಶ್ರೀರಾಮಾಯಣ ದರ್ಶನಂ’ ಗದ್ಯಾನುವಾದ: ಶ್ರೀನಿವಾಸ ಕೃ. ದೇಸಾಯಿ

ಕೃಪೆಗೆಯ್, ತಾಯೆ, ಪುಟ್ಟನಂ!  ಕನ್ನಡದ ಪೊಸಸುಗ್ಗಿ ಬನದ ಈ ಪರಪುಟ್ಟನಂ (ಶ್ರೀ.ರಾ.ದ. ಆಯೋದ್ಯಾ ಸಂಪುಟಂ – ಸಂಚಿಕೆ 1; 139-140) ಪುಟ್ಟನನ್ನು, ಕನ್ನಡದ ಹೊಸ ಸುಗ್ಗಿವನದ ಈ ಕೋಗಿಲೆಯನ್ನು ಹರಸು ತಾಯಿ! (ಗದ್ಯಾನುವಾದ – ನಿ. ರಾಜಶೇಖರ) ಹೊಸಗನ್ನಡದ ಸಾಹಿತ್ಯದ ಮೊಟ್ಟಮೊದಲ ಮಹಾಕಾವ್ಯವೆಂದು ಮಹಾಕವಿ ಕುವೆಂಪುರವರ ಮಹಾಛಂದಸ್ಸಿನ ‘ಶ್ರೀರಾಮಾಯನ ದರ್ಶನಂ’ ಪ್ರಸಿದ್ಧಿ ಪಡೆದಿದೆ. ಇದನ್ನು ಪುಷ್ಟೀಕರಿಸುವಂತೆ, ಕನ್ನಡ ಭಾಷೆಯ ಮೊದಲ ‘ಜ್ಞಾನಪೀಠ ಪ್ರಶಸ್ತಿ’ಯನ್ನು, ಈ ಮಹಾಕಾವ್ಯ ತನ್ನದಾಗಿಸಿತು. ಅದರಂತೆಯೇ ಕರ್ನಾಟಕ ರಾಜ್ಯ ಸರ್ಕಾರವು ಪ್ರಾರಂಬಿಸಿದ ‘ಪಂಪ’ ಪ್ರಶಸ್ತಿಯು … Read more

ಕಾವ್ಯಧಾರೆ: ಸುಷ್ಮಾ ರಾಘವೇಂದ್ರ, ಶೋಭಾ ಕೆ., ಕು.ಸ.ಮಧುಸೂದನ್ ರಂಗೇನಹಳ್ಳಿ, ಎಸ್.ಕಲಾಲ್

ಹಚ್ಚೆಯ ಹಸಿರು ಅವಳು, ಒಡಕು ಕನ್ನಡಕದೊಳಗಿನಿಂದ ಇಣುಕಿ ನನ್ನ ಕರೆದಾಗ ನನಗಿನ್ನು ಎಳಸು ಬೆರೆಯಲಿಲ್ಲ ಬೆಳೆಯಲಿಲ್ಲ ಅವಳೊಳಗೆ ಅವಳ ಕೈ ತುಂಬಿದ ಹಚ್ಚೆಯ ಹಸಿರೊಳಗೆ, ಎಲ್ಲರಂತೆ ತೊಡೆಯೇರಿ ಕಥೆಯಾಗಿ ಹಂಬಲಿಸಲಿಲ್ಲ ಅದಕ್ಕೇ ಕಾಡುತ್ತಾಳವಳು ಕಣ್ಣಂಚಿನಲ್ಲಿ ಹನಿಗಳಾಗಿ, ಬೀಳಲೊಲ್ಲೆ ನೆಲಕ್ಕೆ  ಬಾಗುತ್ತೇನೆ ಅವಳೆದುರಿಗೆ, ಯಾವ ಕಥೆಯ ನಾಯಕಿಯಂತಲ್ಲ ಉತ್ತಿದಳು ಬಿತ್ತಿದಳು ನನ್ನವರ ಹಸುರ, ಕೂತು ತಿನ್ನುವ ಮಂದಿಗೆ ಕುಡಿಕೆ ಹೊನ್ನು ತುಂಬಿಸಿ ಹರಿದ ನೆತ್ತರ,  ಕರಗಿದ ಖಂಡವನ್ನು ಸವೆದ ಬೆನ್ನ ಮೂಳೆಯ ತಿರುಗಿ ನೋಡದೇ ಬೆತ್ತಳಾದಳು ಶೂನ್ಯದೊಳಗೆ ನೆನಪಾಗದ … Read more

ಸುಜಿಯೆಂಬ ಕುರುಡಾನೆಯ ಬಿಡುಗಡೆ!: ಅಖಿಲೇಶ್ ಚಿಪ್ಪಳಿ

[ಮಾನವನ ಮನೋವಿಕಾರಗಳಿಗೆ ಎಣೆಯಿಲ್ಲ. ಮನುಷ್ಯರನ್ನೇ ಗುಲಾಮರನ್ನಾಗಿಸಿ, ಚಿತ್ರಹಿಂಸೆ ನೀಡಿ ದುಡಿಸಿಕೊಂಡಿರುವ ಹಲವಾರು ನಿದರ್ಶನಗಳು ಇತಿಹಾಸದ ಪುಟಗಳಲ್ಲಿ ದಾಖಲಾಗಿವೆ. ಅನೇಕ ತರಹದ ರಕ್ತಪಾತ, ಹೋರಾಟ, ಪ್ರತಿರೋಧಗಳಿಂದಾಗಿ ಜಗತ್ತಿನ ಹಲವು ಭಾಗಗಳಲ್ಲಿ ಮಾನವ ಗುಲಾಮಗಿರಿ ಎಂಬ ಅಮಾನುಷ ಕೃತ್ಯ ಹೆಚ್ಚು ಕಡಿಮೆ ಅಳಿದುಹೋಗಿದ್ದರೂ, ನಾಗರೀಕ ಸಮಾಜದಲ್ಲಿ ಅಲ್ಲಲ್ಲಿ ಇನ್ನೂ ಈ ಹೇಯ ಕೃತ್ಯ ಇನ್ನೂ ಉಳಿದುಕೊಂಡಿದೆ. ಜೀತ ಪದ್ಧತಿಯೆಂದು ನಮ್ಮಲ್ಲಿ ಕರೆಯಲಾಗುವ ಕೆಲವು ಘಟನೆಗಳನ್ನು ದಿನಪತ್ರಿಕೆಗಳಲ್ಲಿ ನಾವಿನ್ನೂ ಓದುತ್ತಿದ್ದೇವೆ. ಇದೇ ನಾಗರೀಕ ಸಮಾಜ ತನ್ನ ಮನರಂಜನೆಗಾಗಿ ಪ್ರಾಣಿಗಳನ್ನು ಪಳಗಿಸಿ ಗುಲಾಮಿತನಕ್ಕೆ … Read more

ಖಾಲಿ: ಪ್ರಶಸ್ತಿ

ಕನಸ ಕಲ್ಪನೆಗಳೆಲ್ಲಾ ಕರಗಿಹೋಗಿ, ಮನದ ಭಾವಗಳೆಲ್ಲಾ ಬತ್ತಿಹೋಗಿ ಖಾಲಿತನ ಕಾಡುತ್ತಿತ್ತು. ಬರೆಯೋಣವೆಂದರೆ ಬರೆಯಲೇನನ್ನ, ಹಾಡೋಣವೆಂದರೆ ಹಾಡಲೇನನ್ನ ಅನ್ನೋ ದ್ವಂದ್ವ. ಸಖತ್ ಚೆನ್ನಾಗಿ ಬರೆದು ಅದಕ್ಕೇನಾದ್ರೂ ಪುರಸ್ಕಾರಗಳ ಸುರಿಮಳೆಯಾಗಿ ಕೊನೆಗೊಂದು ದಿನ ಅದನ್ನು ವಾಪಾಸ್ ಮಾಡಬೇಕಾಗಬಹುದೆನ್ನೋ ಭಯ ಬರೆಯಲೇ ಬಿಡುತ್ತಿರಲಿಲ್ಲ! ಹೊಸದೇನನ್ನಾದ್ರೂ ಬರೆಯೋ ಬದಲು ಬರೆದುದರ ಬಗ್ಗೆಯೇ ಮತ್ತಿನ್ನೇನ್ನಾದ್ರೂ ಬರೆಯೋಣವಾ ಅನ್ನಿಸಿತು. ವಿಶ್ವವಿದ್ಯಾಲಯಗಳಲ್ಲಿರುವ ಕೃತಿಚೌರ್ಯ ತಂತ್ರಜ್ಜಾನ ಎಲ್ಲಾ ಲೇಖಕರ, ಓದುಗರ ಬಳಿಯೂ ಸದ್ಯಕ್ಕಿಲ್ಲದೇ ನಾ ಕದ್ದಿದ್ದು ಗೊತ್ತಾಗದಿಲ್ಲದಿದ್ದರೂ ಮುಂದೊಂದು ದಿನ ಜನರ ಬಾಯಲ್ಲಿ ಛೀ, ಥೂ ಅನ್ನಿಸಿಕೊಳ್ಳೋ ಬದಲು … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಮಂಗಗಳನ್ನು ಹಿಡಿಯುವುದು ಹೇಗೆ? ಒಂದಾನೊಂದು ಕಾಲದಲ್ಲಿ ಚೆರಿ ಹಣ್ಣುಗಳನ್ನು ಬಲು ಇಷ್ಟಪಡುತ್ತಿದ್ದ ಮಂಗವೊಂದಿತ್ತು. ಒಂದು ದಿನ ಅದಕ್ಕೆ ರಸಭರಿತ ಚೆರಿ ಹಣ್ಣೊಂದು ಗೋಚರಿಸಿತು. ಆ ಹಣ್ಣನ್ನು ಪಡೆಯಲೋಸುಗ ಮಂಗ ಮರದಿಂದ ಇಳಿದು ಬಂದಿತು. ಆ ಹಣ್ಣು ಒಂದು ಶುಭ್ರವಾದ ಗಾಜಿನ ಸೀಸೆಯೊಳಗಿತ್ತು. ವಿವಿಧ ರೀತಿಯಲ್ಲಿ ಪ್ರಯತ್ನಿಸಿದ ನಂತರ ಸೀಸೆಯ ಕತ್ತಿನೊಳಕ್ಕೆ ಕೈತೂರಿಸಿ ಹಣ್ಣನ್ನು ಹಿಡಿಯಬಹುದು ಎಂಬುದನ್ನು ಅದು ಪತ್ತೆಹಚ್ಚಿತು. ಅಂತೆಯೇ ಕೈತೂರಿಸಿ ಹಣ್ಣನ್ನು ಹಿಡಿದುಕೊಂಡಿತಾದರೂ ಮುಷ್ಟಿಯಲ್ಲಿ ಹಣ್ಣನ್ನು ಹಿಡಿದುಕೊಂಡಾಗ ಅದರ ಗಾತ್ರ ಸೀಸೆಯ ಕತ್ತಿನ ಗಾತ್ರಕ್ಕಿಂತ … Read more

ಸತ್ಯಶೋಧಕನಿಗೊಂದು ರಂಗನಮನ ಸಲ್ಲಿಸಿದ ‘ಖರೇ-ಖರೇ ಸಂಗ್ಯಾ-ಬಾಳ್ಯಾ’ ಪ್ರದರ್ಶನ: ಹಿಪ್ಪರಗಿ ಸಿದ್ಧರಾಮ

ಸರಿಸುಮಾರು ಕ್ರಿ.ಶ.1850ರ ಸುಮಾರಿಗೆ ಬ್ರಿಟಿಷರ ಆಳ್ವಿಕೆಯಲ್ಲಿ ಹಳ್ಳಿಯಂತಿದ್ದ ಇಂದಿನ ಬೈಲಹೊಂಗಲದ ಆಗಿನ ಲಗಳೇರ ಮನೆತನದಲ್ಲಿ ನಡೆದ ಘಟನೆಯನ್ನಾಧರಿಸಿ ಪತ್ತಾರ ಮಾಸ್ತರ ರಚಿಸಿದ್ದಾರೆಂದು ಓದಿ-ಕೇಳಿದ ಮೂಲ ‘ಸಂಗ್ಯಾ-ಬಾಳ್ಯಾ’ ಕಥಾನಕವು ವಿವಿಧ ಪ್ರಕಾರದ ಪ್ರದರ್ಶನ ಕಲೆಗಳ ಮೂಲಕ ನಾಡಿನಾದ್ಯಂತ ಸಾವಿರಾರು ಪ್ರದರ್ಶನ ಕಂಡಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿ. ಈ ಕಥೆಯಲ್ಲಿ ಲಗಳೇರ ಮನೆತನದ ಈರಪ್ಪನ ಹೆಂಡತಿ ಗಂಗಾ ರೂಪಕ್ಕೆ ಆತನ ಗೆಳೆಯ ಸಂಗ್ಯಾ ಮನಸೋಲುವುದು, ಗಂಗಾ ಜೊತೆಗೆ ದೈಹಿಕ ಸುಖ ಪಡೆಯಲು ಆತ ಜೀವದ ಗೆಳೆಯ ಬಾಳ್ಯಾನ ಜೊತೆ ಚರ್ಚಿಸುವುದು. … Read more

ಸಾಮಾನ್ಯ ಜ್ಞಾನ (ವಾರ 78): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು 1.    2015ರ ಮೈಸೂರು ದಸರಾ ಉದ್ಘಾಟಕರು ಯಾರು? 2.    SUNFED ನ ವಿಸ್ತೃತ ರೂಪವೇನು? 3.    ಗೋವಿಂದ ವಲ್ಲಬ್ ಪಂತ್ ಜಲಾಶಯ ಯಾವ ರಾಜ್ಯದಲ್ಲಿದೆ? 4.    ಮೂತ್ರಪಿಂಡಕ್ಕೆ ಸಂಬಂಧಿಸಿದ ವ್ಯಾಧಿಗಳನ್ನು ವಿವರಿಸವ ಶಾಸ್ತ್ರಕ್ಕೆ ಏನೆನ್ನುತ್ತಾರೆ? 5.    ಸದಾಶಿವಗುರು ಇದು ಯಾರ ಅಂಕಿತನಾಮವಾಗಿದೆ? 6.    ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರಾರಂಭಿಸಿದ ಮುಖ್ಯಮಂತ್ರಿ ಯಾರು? 7.    ಬೋರಾಕ್ಸ್‍ನ ರಾಸಾಯನಿಕ ಹೆಸರೇನು? 8.    ಬಹುಮನಿ ಸುಲ್ತಾನರ ಅತ್ಯಂತ ಪ್ರಾಚೀನ ಸ್ಮಾರಕ ಯಾವುದು? 9.    “ಮೇರಾ ನಾಮ್ ಜೋಕರ್” ಕಾದಂಬರಿಯ ಕರ್ತೃ … Read more

ಪ್ರಾಣಿಗಳೇ ಗುಣದಲಿ ಮೇಲು..: ಅನಿತಾ ನರೇಶ್ ಮಂಚಿ

                ಗೆಳೆತನ ಅಂದ್ರೆ ಯಾರಿಗಿಷ್ಟ ಇಲ್ಲ..! ಪ್ರಪಂಚದಲ್ಲಿ ಪ್ರತಿಯೊಬ್ಬರು ಗೆಳೆತನದ ನೆರಳಿನ ತಂಪಿನಲ್ಲಿ ಪವಡಿಸುತ್ತಾ ಇರುವ ಕನಸು ಕಾಣುವವರೇ. ಇದು ಮನುಷ್ಯರಿಗೆ ಮಾತ್ರವಲ್ಲ ಪ್ರಾಣಿಗಳಲ್ಲೂ ಇಂತಹ ಬಯಕೆ ಸಹಜವಾಗಿಯೇ ಮೂಡುತ್ತದೆ.  ನಮ್ಮನೆಯ ನಾಯಿ ಟೈಗರ್. ಅದು ಪುಟ್ಟ ಮರಿಯಾಗಿದ್ದಾಗ ಅದರ ಜೊತೆಗಾರ ಜ್ಯಾಕ್ ನೊಂದಿಗೆ ಆಟವಾಡುತ್ತಲೇ ಬೆಳೆದದ್ದು. ಎರಡೂ ಮರಿಗಳು ಮಾಡದ ತುಂಟತನವಿಲ್ಲ. ದಿನಾ ಈ ಎರಡು ನಾಯಿ ಮರಿಗಳು   ಮುಚ್ಚಿದ್ದ ಗೇಟಿನ ಗ್ರಿಲ್ಲುಗಳೆಡೆಯಲ್ಲಿ ತೂರಿ … Read more

ಫ್ಲಾಪಿಬಾಯ್ ಮತ್ತು ಲಗೋರಿಬಾಬಾ 7

ಪತ್ರಕರ್ತೆಯೊಂದಿಗೆ ಲಗೋರಿಬಾಬಾ ಫ್ಲಾಪಿಬಾಯ್ ಮತ್ತು ಲಗೋರಿಬಾಬಾನೊಂದಿಗೆ ಸಂದರ್ಶನ ಮಾಡಲು ಬಂದಿದ್ದ ಪತ್ರಕರ್ತೆ ವರದಾ ಫ್ಲಾಪಿಬಾಯ್‍ನೊಂದಿಗೆ ಮಾತುಕತೆ ನಡೆಸಿ ನಂತರ ಲಗೋರಿಬಾಬಾನೊಮದಿಗೆ ಚಿಟ್ ಚಾಟ್ ಮಾಡಲು ಭಲೇ ಉತ್ಸುಕಳಾಗಿದ್ದಳು. ತರುಣ ಯುವಕ ಲಗೋರಿಬಾಬಾ ನೊಡಲು ಹ್ಯಾಂಡ್‍ಸಮ್ ಆಗಿದ್ರೂ ಅಘೋರಿಯಾಗಿ ವಿಕಾರಿತರ ಇದ್ದ. ಮೊದಲ ನೋಟಕ್ಕೇ ಭಯಪಡಿಸುವಂತಿದ್ದ ಆತನ ಚಹರೆಯ ಜೊತೆಗೇ.., ಮೊದಮೊದಲಿಗೆ ಆತನ ಮಾತೂ ಹೆದರಿಕೆ ಹುಟ್ಟಿಸುವಂತಿತ್ತು. ಆದರೆ ಅಪರಿಮಿತ ಜ್ಞಾನಿಯಾದ ಲಗೋರಿಬಾಬಾನನ್ನು ಮಾತನಾಡಿಸಲೇಬೇಕೆಂದು ವರದಾ ಹಠ ಹಿಡಿದು ಅವನ ಬಳಿ ಬಂದಳು.. ಮುಂದೆ..?? ಇನ್ನೇನು..?? ಓದಿ ಗೊತ್ತಾಗತ್ತೆ..! … Read more

ವಿಠಲನ ನಾಡಿನಲ್ಲಿ: ಪ್ರಶಸ್ತಿ

ಹಂಪಿ ಬಜಾರ್: ಹಂಪಿ ವಿರೂಪಾಕ್ಷನ ದರ್ಶನ ಪಡೆದ ನಾವು ಪಕ್ಕದಲ್ಲಿದ್ದ ತುಂಗಭದ್ರೆಗೊಂದು ನಮನವೆನ್ನುತ್ತಾ ಹಂಪೆ ಬಜಾರುಗಳನ್ನಾಸಿ ವಿಠಲ ದೇಗುಲದತ್ತ ಸಾಗಿದೆವು. ಹಂಪೆ ಬಜಾರೆಂದರೆ ಜನರಿಗೆ ಅದರಲ್ಲೇನಿದೆ ? ಎಲ್ಲಾ ಊರಿನಂತೆ, ಹಂಪಿಯಲ್ಲೊಂದು ಮಾರುಕಟ್ಟೆ, ವಿಶೇಷವೇನಪ್ಪ ಅನಿಸಬಹುದು. ಶ್ರೀ ಕೃಷ್ಣ ದೇವರಾಯನ ಕಾಲದ ಮಾರುಕಟ್ಟೆ, ಮುತ್ತು ರತ್ನಗಳನ್ನಳೆದು ತೂಗುತ್ತಿದ್ದ ಬೀದಿ ಅಂದರೆ ಆಗ ಓಹ್ ಅನ್ನಬಹುದು. ಹಂಪಿಯಲ್ಲಿ  ಶ್ರೀ ಕೃಷ್ಣ ದೇಗುಲದ ಎದುರಿಗಿನ ಕೃಷ್ಣ ಬಜಾರ್, ಮಹಾನವಮಿ ದಿಬ್ಬದಿಂದ ಬ್ಯಾಂಡ್ ಟವರಿನತ್ತ ಸಾಗುವಾಗ ಸಿಗುವ ಪಾನ್ ಸುಪಾರಿ ಬಜಾರ್ … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಅರಬ್ಬನ ಅಶ್ಲೀಲ ಬಯ್ಗುಳವೂ ದೇವರ ಸಂದೇಶವೂ ಒಂದು ದಿನ ಪ್ರವಾದಿ ಮೊಹಮ್ಮದ್‌ರು ಮಸೀದಿಯೊಂದರಲ್ಲಿ ಬೆಳಗಿನ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಅವರೊಂದಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದವರ ಪೈಕಿ ಇಸ್ಲಾಂನಲ್ಲಿ ಮೇಲೇರಬಯಸುತ್ತಿದ್ದ ಅರಬ್ಬನೊಬ್ಬನಿದ್ದ. ಆ ದಿನ ಕೊರಾನ್‌ನಲ್ಲಿ “ನಾನೇ ನಿಮ್ಮ ನಿಜವಾದ ದೇವರು” ಎಂಬ ಅರ್ಥವಿರುವ ಫೆರೋನ ಹೇಳಿಕೆ ಉಳ್ಳ ಶ್ಲೋಕವನ್ನು ಮಹಮ್ಮದ್‌ರು ಪಠಿಸುತ್ತಿದ್ದಾಗ ಅದನ್ನು ಕೇಳಿದ ಅರಬ್ಬನು ಕೋಪೋದ್ರಿಕ್ತನಾಗಿ ಪ್ರಾರ್ಥನೆಯನ್ನು ನಿಲ್ಲಿಸಿ ಬೊಬ್ಬೆ ಹೊಡೆದ: “ಸೂಳೆಮಗ*, ಬಡಾಯಿಕೋರ!” ಪ್ರವಾದಿಗಳು ತಮ್ಮ ಪ್ರಾರ್ಥನೆ ಮುಗಿಸಿದ ಕೂಡಲೆ ಅವರ ಸಹಚರರು ಅರಬ್ಬನಿಗೆ ಛೀಮಾರಿ … Read more

ಫಸ್ಟ್ ಟ್ರೈ: ಸಿ೦ಧು ಭಾರ್ಗವ್

ಹೊಸ ಖಾದ್ಯ ತಯಾರಿಸುವಾಗ ಆದ ಅನುಭವ. ಗಾ೦ಧಿ ಜಯ೦ತಿ ಪ್ರಯುಕ್ತ ರಜೆ ಇದ್ದ ಕಾರಣ ಮನೆಯಲ್ಲಿ ಸುಮ್ಮನೆ ಕುಳಿತಿದ್ದೆ. ಅಪರೂಪಕ್ಕೆ ಕರೆ ಮಾಡುವ ಮಾವನಿಗೆ ನನ್ನ ನೆನಪಾಗಿ ಮಾತನಾಡುವ ಮನಸಾಯಿತು. ಕರೆ ಸ್ವೀಕರಿಸಿ ಮಾತನಾಡಿಡಲು ಶುರು ಮಾಡಿದೆ. ಯೋಗ ಕ್ಷೇಮವನ್ನೆಲ್ಲಾ ವಿಚಾರಿಸಿದ ಮೇಲೆ , ಇ೦ದು ಎಲ್ಲಿಗೂ ಹೊರಗಡೆ ಹೋಗಲಿಲ್ಲವೇ..? ಎ೦ದು ಕೇಳಿದೆ. ಇಲ್ಲ ಇವತ್ತು ಅಡುಗೆ ಮನೆಯಲ್ಲೇ ಬಿಸಿ ಎ೦ದರು. ನಳಮಹಾರಾಜರು ಸೌಟು ಹಿಡಿದು ಏನು ಮಾಡುತ್ತಿದ್ದೀರಿ..? ಹಾಗಾದರೆ ಇ೦ದು ಅತ್ತೆಗೆ ಆರಾಮವಾಯ್ತು ಬಿಡಿ ಎ೦ದೆ. … Read more

‘ನಿರ್ಧಾರ’: ರಮೇಶ್ ನೆಲ್ಲಿಸರ

'ನಂಗೊತ್ತಿತ್ತು ಒಂದ್ ದಿನ ನೀನು ಬಂದೇ ಬರ್ತೀಯ ಅಂತ' ಎಲ್ಲ ಸಂಬಂಧಗಳ ಬಂಧನವನ್ನು ಕಳಚಿ ಬಹುದೂರ ಸಾಗಿಬಂದ ಜಾಹ್ನವಿ,ರಾಘವ್ ತನ್ನನ್ನು ಏಂದಾದರೂ ಹುಡುಕಿಕೊಂಡು ಬಂದೇಬರುವನೆಂಬ ಆಸೆಯನ್ನು ಮನದ ಗರ್ಭದಲಿ ಸುಪ್ತ ಶಿಲಾಪಾಕದಂತೆ ಕಾಯ್ದಿಟ್ಟುಕೊಂಡಿದ್ದಳು. ಕಳೆದ ಹತ್ತು ವರ್ಷಗಳಿಂದ ಅನಾಥ ಮಕ್ಕಳ ಸೇವಾಸಂಸ್ಥೆ ನಡೆಸುತ್ತಿ‌ದ ಜಾಹ್ನವಿ ಮೊದಲ ಬಾರಿಗೆ ತನಗಾಗಿ ಇಷ್ಟೊಂದು ಖುಷಿಪಟ್ಟಿದ್ದಳು. ರಾಘವ್ ನ ಮುಖವನ್ನು ಕಣ್ತುಂಬಿಕೊಳ್ಳುತ್ತಿರುವಾಗಲೇ,ಹಿಂದೆ ಎಂದೋ ಕೀಲಿಹಾಕಿ ಭದ್ರಪಡಿಸಿ‌ದ್ದ ನೆನಪಿನ ಬಾಗಿಲು ತಂತಾನೆ ತೆರೆದುಕೊಂಡಿತು. ““““““““` ರಾಘವ್ ಹಾಗೂ ಜಾಹ್ನವಿ ಒಂದೇ ಕಾಲೇಜಿನಲ್ಲಿ ಕಲಿತದ್ದು,ರಾಘವ್ … Read more

ಕಾವ್ಯಧಾರೆ: ಜಯಶ್ರೀ ದೇಶಪಾಂಡೆ, ವಲ್ಲಿ ಕ್ವಾಡ್ರಸ್, ಸಂತೆಬೆನ್ನೂರು ಫೈಜ್ನಟ್ರಾಜ್

ಜ್ಯೋತಿಯೆದುರು ನತಮಸ್ತಕ. 'ಸತ್ಯಮೇವ ಜಯತೇ' ಪರ೦ಪರೆಗಳಿ೦ದ ಬಿ೦ಬಿತ… ಅಲ್ಲಗಳೆದು ನಕ್ಕಿದೆ ವಾಸ್ತವ , ಹುಚ್ಚು ಅದಕ್ಕೆ?!  ನೂರು ಅಪರಾಧಿಗಳಳಿದರೂ  ಒಬ್ಬ ನಿರಪರಾಧಿ  ಅಳಿವುದು ಬೇಡ .. ವರ್ತಮಾನದ ಸತ್ಯವೇ ಮಿಥ್ಯವೇ ? ಉರಿಬಿಸಿಲ ಸೂರ್ಯನ ಕಣ್ಣೆದುರು   ಜೀವಜಾಲದ ಕಡುಗೊಲೆ, ಸಾಕ್ಷಿಗಳಿಲ್ಲ..ನೋಡಿದವರಿಲ್ಲ, ಆರೋಪಿಗಿದೆ  ಅನುಮಾನದ ಭಾಗ್ಯ..ಬೆನೆಫಿಟ್ ಆಫ್ ಡೌಟ್! ಸಿರಿವ೦ತರಿಗೆ ಮಾತ್ರ-ಯಾರಿಗೂ ಹೇಳಬೇಡಿ! ಅಪ್ಪಿತಪ್ಪಿ ಗಲ್ಲೇ? ಅದಕೂ ದಾರಿ ನೂರೆ೦ಟು. ಕಪ್ಪುಕೋಟಿನ ಅಸ್ಖಲಿತ ಮೊಳಕೆಯ ಮಿದುಳುಗಳಿರುವುವುದೇಕೆ?  ಸರ್ವೇ ಗುಣ: ಕಾ೦ಚನಮಾಶ್ರಯ೦ತಿ.  ಅವನ ಶಿಕ್ಷೆ ಇವನ ಪ್ರಸಾದ! ಮಕ್ಕಳು … Read more

ವಿಕಟ ವಿನಾಯಕ (ಭಾಗ-2): ಎಸ್. ಜಿ. ಸೀತಾರಾಮ್, ಮೈಸೂರು.

ಚೆಲುಗನ್ನಡದಲ್ಲಿ ಚೆನ್‍ಗಣೇಶ ಕೆಳಕಾಣುವ “ಕನ್ನಡಗಣೇಶ ಏಕವಿಂಶತಿ ನಾಮಾವಳಿ” ಪಾಠದಲ್ಲಿ “ಓ” ಮತ್ತು “ಕೈಮುಗಿದೆ” ಎಂದು ಪ್ರತಿ ಹೆಸರಿಗೂ ಹಿಂದೆ-ಮುಂದೆ (ಓ ಬೆನಕ! ಕೈಮುಗಿದೆ…ಓ ಆನೆಮೊಗ! ಕೈಮುಗಿದೆ ಎಂಬಂತೆ) ಸೇರಿಸಿಕೊಂಡು ಜಪಿಸಿದವರಿಗೆ ವಿಘ್ನಪತಿಯು ಅಪವಿಘ್ನದ ಅಭಯವನ್ನೀವನು. ಕನ್ನಡರಕ್ತವನ್ನು ಉಕ್ಕೇರಿಸಿ, ಅಂಥವರನ್ನು “ಕನ್ನಡ ಚೆನ್ನೈದಿಲು” ಮಾಡುವನು ಎಂದು “ಬೆನಕ ಬಲ್ಮೆ” ಎಂಬ ಹವಳಗನ್ನಡ ಕೃತಿಯು ವಿಶಿಷ್ಟವಾಗಿ ವಿಶದಪಡಿಸಿದೆ. ಬೆನಕ= ವಿನಾಯಕ ಪಿಳ್ಳಾರಿ (ಪಿಳ್ಳೆ)= ಬಾಲಗಣಪತಿ  ಆನೆಮೊಗ= ಆನೆಯ ಮುಖದವನು  ಸುಂಡಿಲಮೊಗ= ಸೊಂಡಿಲ ಮುಖದವನು ಇಲಿದೇರ= ಇಲಿಯನ್ನು ತೇರಾಗಿ ಚಲಿಸುವನು ಬಿಂಕಣಗಿವಿಯ … Read more

ತಸ್ಮೈ ಶ್ರೀ ಗುರು ಏನ್ ಮಹಾ?: ಅನಿರುದ್ಧ ಕುಲಕರ್ಣಿ

ನಮ್ಮ ಭಾರತೀಯ ಪರಂಪರೆಯಲ್ಲಿ ಗುರುಗಳಿಗೆ ಒಂದು ವಿಶೇಷ ಸ್ಥಾನವಿದೆ, ಉಪನಿಷತ್ತಿನ ಪ್ರಕಾರ ಗುರು ಶಬ್ದಕ್ಕೆ ಗು ಎಂದರೆ ಅಂಧಕಾರ ಮತ್ತು ರು ಎಂದರೆ ದೂರ ಮಾಡುವವನು ಅಥವಾ ಅಜ್ಞಾನದ ಅಂಧಕಾರವನ್ನ ನಿವಾರಿಸಿ ಜ್ಞಾನ ಮಾರ್ಗವನ್ನು ತೋರಿಸುವವ,  ಸಂಸ್ಕೃತದಲ್ಲಿ ಗುರು ಎಂಬ ಶಬ್ದಕ್ಕೆ  ಭಾರವಾದ ಎನ್ನುವ ಅರ್ಥವೂ ಇದೆ, ಯಾರು ಜ್ಞಾನದಿಂದ ಭಾರವಾಗಿರುತ್ತಾರೋ ಅವನೇ ಗುರು , . ಈ ಗುರುವಿನ ಕುರಿತು ಪುರಂದರ ದಾಸರು ಗುರುವಿನ ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಪರಿ ಪರಿ ಶಾಸ್ತ್ರವನೋದಿದರೇನು … Read more

ನೇಮಿನಾಥ ತಪಕೀರೆ ಫೋಟೋಗ್ರಾಫಿ

1)    ‘ಸಿಹಿಮುತ್ತು ಸಿಹಿಮುತ್ತು ಇನ್ನೊಂದು’ ಗಿಳಿಗಳೆರಡು ಮುತ್ತಿಕ್ಕುವ ದೃಶ್ಯ. ಚಿಕ್ಕೋಡಿ ತಾಲೂಕು ಬೆಳಕೂಡದಲ್ಲಿ ತೆಗೆದಿದ್ದು. ದಿ: 19/06/2014ರಂದು   2)    ‘ನನ್ನಂಥ ಚೆಲುವ ಚೆನ್ನಿಗ ಇನ್ನಾರು?’ ಕನ್ನಡಿಯಲ್ಲಿ ತನ್ನ ಒರತಿಬಿಂಬ ನೋಡಿಕೊಳ್ಳುತ್ತಿರುವ ‘ಸನ್‍ಬರ್ಡ್’. ಚಿಕ್ಕೋಡಿ ತಾಲೂಕು ಬೆಳಕೂಡದಲ್ಲಿ ತೆಗೆದಿದ್ದು. ದಿ: 30/08/2014   3)    ‘ಚಂದ್ರ’ ಚಂದ್ರನ ಮೇಲಿರುವ ಕುಳಿಗಳು ಸ್ಪಷ್ಟವಾಗಿ ಗೋಚರವಾಗಿದೆ. ದಿ: 22/08/2015     4)    ‘ಆಹಾ ಭೂರಿ ಭೋಜನವಿದು’ ಜೋಳದ ದಂಟಿನ ತುದಿಯಲ್ಲಿರುವ ತೆನೆಯ ಕಾಳುಗಳನ್ನು ಮೆಲ್ಲುತ್ತಿರುವ ಅಳಿಲು. ಚಿಕ್ಕೋಡಿ ತಾಲೂಕು … Read more

ಸಾಮಾನ್ಯ ಜ್ಞಾನ (ವಾರ 77): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: 1.    ಇತ್ತೀಚಿಗೆ ವಿವಾದಕ್ಕೆ ಒಳಗಾದ ಮ್ಯಾಗಿ ನೂಡಲ್ಸ್ ಯಾವ ಕಂಪೆನಿಯದು? 2.    HUDCO(ಹುಡ್ಕೊ)ನ ವಿಸ್ತೃತ ರೂಪವೇನು? 3.    ಹಣ್ಣು ಮತ್ತು ಹಣ್ಣಿನ ತೋಟದ ಬಗೆಗಿನ ಅಧ್ಯಯನ ಶಾಸ್ತ್ರಕ್ಕೆ ಎನೆನ್ನುತ್ತಾರೆ? 4.    ಮೇಲ್ಗಾಟ್ ರಾಷ್ಟ್ರೀಯ ಉದ್ಯಾನವನ ಯಾವ ರಾಜ್ಯದಲ್ಲಿದೆ? 5.    ಯುವ ಜನರಲ್ಲಿ ಥೈರಾಕ್ಸಿನ್ ಕೊರತೆಯಿಂದ ಬರುವ ವ್ಯಾದಿ ಯಾವುದು? 6.    ಕನ್ನಡದ ಪ್ರಥಮ ಖಾಸಗಿ ಟಿ.ವಿ.ಚಾನಲ್ ಯಾವುದು? 7.    ಭಾರತದ ರಾಜಧಾನಿಯನ್ನು ಕೊಲ್ಕತ್ತಾದಿಂದ ದೆಹಲಿಗೆ ಸ್ಥಳಾಂತರಿಸಲಾದ ವರ್ಷ ಯಾವುದು? 8.    ಭಾರತದಲ್ಲಿ ಮೊಟ್ಟ ಮೊದಲ ರಾಷ್ಟ್ರೀಯ … Read more

ಹಲ್ಲು ಕೆಟ್ಟ ಕಥೆ!: ಗುರುಪ್ರಸಾದ್ ಕುರ್ತಕೋಟಿ

ಎಲ್ಲ ತೊಂದರೆಗಳು ಶುರುವಾಗುವುದು ರಾತ್ರಿನೇ! ಅಥವಾ ಹಾಗೆ ರಾತ್ರಿ ಶುರುವಾದ ತೊಂದರೆಗಳು ಮಾತ್ರ ನೆನಪಿನಲ್ಲಿ ಉಳಿಯುವುದಕ್ಕೆ ಹಾಗೆ ಅನ್ನಿಸುತ್ತದೆಯೋ? ಎಂದು ಪುಟ್ಯಾ ತಲೆಕೆರೆಯುತ್ತ ಯೋಚಿಸುತ್ತಿದ್ದ. ಅವನ ಮಕ್ಕಳ ಜ್ವರವೇ ಇರಲಿ, ತನ್ನ ಹೊಟ್ಟೆ ನೋವಿರಲಿ ಅಥವಾ ತಲೀನ ಇಲ್ಲ ನೋಡ್ ಲೇ ನಿನಗ ಅಂತ ಬೈಸಿಕೊಳ್ಳುವ ಅವನ ಹೆಂಡತಿ ಪಾರಿಯ ತಲೆ ನೋವಿರಲಿ… ಇವೆಲ್ಲ ಉದ್ಭವಿಸುವುದು ರಾತ್ರಿಯೇ. ಇನ್ನೇನು ಮಲಕೊಬೇಕು ಅನ್ನುತ್ತಿರುವಾಗಲೇ ಇಂಥದ್ದೇನೋ ಬಂದು ನಿದ್ದೆ ಕೆಡಿಸಿ ಕಂಗಾಲು ಮಾಡುತ್ತದೆ.  ಇಂತಹದೇ ಒಂದು ಕರಾಳ ರಾತ್ರಿ ಇವನ … Read more