ಬೀದಿ ದೀಪ: ಕೊಡೀಹಳ್ಳಿ ಮುರಳೀ ಮೋಹನ್

ಸಂಜೆಯಲಿ ಮರಳಿ ಮನೆಗೆ ಸಾಗುವ ಜನಕೆಲ್ಲಾ,ನಾನು ಬೆಳಕಾಗಿ ನಿಲ್ಲುವೆನು, ರಾತ್ರಿಯಿಡೀ.ಮರವಂತೆ ನಿಂತು ರಸ್ತೆಯ ಬದಿಯಲಿ ಏಕಾಂಗಿ,ನನ್ನ ಬೆಳಕಿನಲಿ ನಾ ಬೆಳಗುವೆ, ಶಾಂತವಾಗಿ. ಶಿವನು ವಿಷವನುಂಡು, ಅಮೃತವನು ನೀಡಿದಂತೆ,ವಿದ್ಯುತ್ತನುಂಡು ಬೆಳಕನಿತ್ತು, ಜನಕೆ ಹಿತವಂತೆ.ಮನದಲಿ ಶುದ್ಧತೆಯು, ಕತ್ತಲೊಡನೆ ಹೋರಾಟ,ಬೆಳಕಿನ ತ್ಯಾಗವಿದು, ಜನರಿಗಾಗಿ ಸದಾ ನೋಟ. ಭೂಮಿಯ ಕತ್ತಲಲಿ ಸೂರ್ಯನಿಲ್ಲದ ಕೊರತೆಯಲಿ,ರಾತ್ರಿಯೆಲ್ಲಾ ಎಚ್ಚರ, ಬೆಳಕನಿತ್ತು ಹರುಷದಲಿ.ತ್ಯಾಗಮೂರ್ತಿಯಂತೆ ನಿಂತು, ರಸ್ತೆಯಲಿ ಏಕಾಂಗಿ,ಬೆಳಕಿನ ಹಂಚುವಿಕೆ, ನನ್ನ ಜೀವನದ ಸಾಂಗತ್ಯ. ಶಾಲೆಯಲಿ ಶಿಕ್ಷೆಯಾದ ಬಾಲಕನಂತೆ ದಿನವೆಲ್ಲಾ,ಒಂದೇ ಕಾಲಿನಲಿ ನಿಂತು, ಕಾವಲು ಕಾಯುವೆನು ಎಲ್ಲಾ.ಜಗಕೆ ಒಳ್ಳೆಯವರ ಬಗ್ಗೆ … Read more

ಅಪ್ಪು ಅಣ್ಣನ ಮೇಲೆ ಕೇಸ್ ಮಾಡ್ತೀಯೇನೋಲೆ …. !!!!: ನಾಗಸಿಂಹ ಜಿ ರಾವ್

(ಪುನೀತ್ ರಾಜ್‌ಕುಮಾರ್ ರವರ ಹುಟ್ಟುಹಬ್ಬ ಮಾರ್ಚ್ ೧೭, ಈ ಸಂದರ್ಭದಲ್ಲಿ ಮಕ್ಕಳ ಶಿಕ್ಷಣದ ಬಗ್ಗೆ ಅವರಿಗಿದ್ದ ಕಾಳಜಿಯನ್ನು ಸ್ಮರಿಸಿ ಈ ನೆನೆಪು ….) ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ ೨೦೦೯ ನಮ್ಮ ರಾಜ್ಯದಲ್ಲಿ ಜಾರಿಯಾಗಿದ್ದು ಹಲವಾರು ಪ್ರತಿಭಟನೆ ಹಾಗೂ ಗೊಂದಲದ ನಡುವೆ ಈ ಕಾಯ್ದೆಗೆ ಸೂಕ್ತ ಪ್ರಚಾರವೇ ಇರಲಿಲ್ಲ. ಆದರೆ ಈ ಕಾಯ್ದೆಯ ವಿಭಾಗ ೧೨.೧.ಅ ಅಪಾರ ಪ್ರಚಾರ ಪಡೆದಿತ್ತು ಹಾಗೂ ಬಹಳ ಜನಪ್ರಿಯ ಸಹ ಆಗಿತ್ತು. ವಿಭಾಗ ೧೨.೧.ಅ ಯ ಪ್ರಕಾರ … Read more

ವಿಶ್ವ ಜಲ ದಿನಾಚರಣೆ 2025 @ ಮೈಸೂರು

ಮೈಸೂರು ಸ್ಟೋರಿಟೆಲ್ಲರ್ಸ್ ನೆಟ್‌ವರ್ಕ್, ಕಲರ್ ಆಶ್ರಮ, ಮೈಸೂರು ವಿಶ್ಚವಿದ್ಯಾನಿಲಯ ಮತ್ತು ಮೈಸೂರು ಇಕೋ ಪ್ರಿಂಟ್ಸ್ ಸಹಯೋಗದೊಂದಿಗೆ ಮಾರ್ಚ್ 22, 2025 ರ ಶನಿವಾರ ವಾಟರ್ ಫೋರಮ್ ಮೈಸೂರು  ಆಯೋಜಿಸಿರುವ 💧ವಿಶೇಷ ವಿಶ್ವ ಜಲ ದಿನಾಚರಣೆಯಲ್ಲಿ ಭಾಗವಹಿಸಿ. 📍ಬೆಳಿಗ್ಗೆ ಕಾರ್ಯಕ್ರಮ | ಕುಕ್ಕರಹಳ್ಳಿ ಕೆರೆ (ಮುಖ್ಯ ದ್ವಾರ, ರೈಲ್ವೆ ಗೇಟ್ ಬಳಿ)ಬೆಳಿಗ್ಗೆ 6:45 – 10:00 : • ಪಕ್ಷಿ ವೀಕ್ಷಣೆ ನಡಿಗೆ • ಮರಗಳ ವೀಕ್ಷಣೆ ನಡಿಗೆ • ಪ್ರಕೃತಿ ನಡಿಗೆ • ಚಿತ್ರಕಲೆ • ಕೆರೆ … Read more

ಚಾರ್ಲಟ್‌ಟೌನ್ – ಒಂದು ಬಣ್ಣದ ಕನಸು: ಡಾ. ಅಮೂಲ್ಯ ಭಾರದ್ವಾಜ್

ಚಾರ್ಲಟ್‌ಟೌನ್, ಕೆನಡಾ – ಇಲ್ಲಿನ ಬದುಕು ಅಕ್ಷರಶಃ ಬಣ್ಣಗಳ ನಡುವೆ ಜೀವಿಸಿದಂತಿದೆ ಎಂದರೆ ತಪ್ಪಾಗದು. ಊರೆಲ್ಲಾ ಹಾಲು ಚೆಲ್ಲಿದಂತೆ ಕಾಣುವ ಚಳಿಗಾಲವು, ಬೆಂಕಿಯ ರಶ್ಮಿಯೊಂದಿಗೆ ಬೆರೆತು ನಗುವ ಬೇಸಿಗೆ, ಕೋಗಿಲೆಯ ರಾಗದಲ್ಲಿ ಮೂಡುವ ಗೀಜುಗಾಲು, ಹೊಸ ಜೀವನಕ್ಕೆ ಶಕ್ತಿಯ ಉಡುಗೊರೆಯಾದ ವಸಂತ—ಪ್ರಕೃತಿಯೆಂಬ ಭಾಷೆಯಲ್ಲಿ ಇಲ್ಲಿ ಎಲ್ಲವೂ ಒಂದು ಅಪೂರ್ವ ಕವಿತೆಯಾಗಿ ಮೂಡಿಬರುತ್ತವೆ. ಮೈಸೂರಿನಲ್ಲಿ ವರ್ಷ ಪೂರ್ತಿ ಹಸಿರಿನ ಸಿರಿಯನ್ನೇ ಕಂಡ ನಾವು ಇಲ್ಲಿಗೆ ಬಂದಾಗ, ಕಾಲದೊಂದಿಗೆ ಬದಲಾಗುವ ಪ್ರಕೃತಿಯ ಬಣ್ಣ ಮತ್ತು ಆಕಾಶವೇ ದಿನಕ್ಕೊಂದು ಹೊಸ ಬಣ್ಣದಲ್ಲಿ … Read more

ಲವ್ ಕ್ರುಷಾದ್: ಎಫ್ ಎಂ ನಂದಗಾವ

ರಾಜ್ಯದ ಸಚಿವ ಸಂಪುಟದ ನಡುವಯಸ್ಸಿನ ಹಿರಿಯ ಸದಸ್ಯ, ಗೃಹ ಖಾತೆಯ ಜವಾಬ್ದಾರಿ ಹೊತ್ತ ಸಚಿವ ಕೆ.ಟಿ.ಕಿರಣ ಅವರು, ಅಂದು ಸಂಗಮನೂರು ನಗರ ಪೊಲೀಸ್ ಠಾಣೆಗೆ ಭೇಟಿಕೊಡುವವರಿದ್ದರು. ಸಮಯ ನಿಗದಿ ಆಗಿರಲಿಲ್ಲ. ಊರಲ್ಲಿನ ಅವರ ಪಕ್ಷದ ನಾಯಕ ಹಿರಿಯಣ್ಣ ನಾಯ್ಕ ಎಂಬುವವರ ಮಗಳು ಮಂಗಳಾಳ ಮದುವೆಗೆ ಅವರು ಬಂದಿದ್ದರು. ಅವರ ಈ ಖಾಸಗಿ ಭೇಟಿಯನ್ನು ಅಧಿಕೃತಗೊಳಿಸುವ ಉದ್ದೇಶದಿಂದ ಸಂಗಮನೂರು ನಗರ ಪೊಲೀಸ್ ಠಾಣೆಯ ಭೇಟಿಯ ಕಾರ‍್ಯಕ್ರಮವನ್ನು ಆಯೋಜಿಸಲಾಗಿತ್ತು. ಬಾಲ್ಯದಿಂದಲೇ ಸಂಘಟನೆಯ ಶಾಖೆಯಲ್ಲಿ ಪ್ರಾಥಮಿಕ ಸದಸ್ಯತ್ವ ಹೊಂದಿ, ಅದರಲ್ಲಿಯೇ ಬೆಳೆಯುತ್ತಾ … Read more

ಜೀವನ ಮಕರಂದ: ಕೋಡಿಹಳ್ಳಿ ಮುರಳೀಮೋಹನ್

ತೆಲುಗು ಮೂಲ: ವಿಜಯ ಶ್ರೀಮುಖಿಕನ್ನಡ ಅನುವಾದ: ಕೋಡಿಹಳ್ಳಿ ಮುರಳೀಮೋಹನ್ “ಅಮ್ಮಾ, ಕೈವಲ್ಯಾ! ಅಭಿನವ್ ಕಾಲ್ ಮಾಡಿದ್ರು.. ನಿನ್ನ ಜೊತೆ ಮಾತಾಡೋಣ ಅಂತ ಎರಡು ಮೂರು ಸಾರಿ ಮಾಡಿದ್ರೂ ನೀನು ಲಿಫ್ಟ್ ಮಾಡ್ಲಿಲ್ಲ ಅಂತೆ?” ಕರೆದು ಕೇಳಿದ್ರು ರಾಮಚಂದ್ರ.“ಹೌದಾ ಅಪ್ಪಾ? ನನ್ನ ಮೊಬೈಲ್ ಬೆಡ್‌ರೂಮ್‌ನಲ್ಲಿದೆ. ನಾನು ಅಮ್ಮ, ಅಕ್ಕ ಅವರ ಜೊತೆ ಮಾತಾಡ್ತಾ ಅಡುಗೆಮನೆಯಲ್ಲಿದ್ದೆ. ಹೋಗಿ ನೋಡ್ತೀನಿ” ತಂದೆಯೊಂದಿಗೆ ಹೇಳುತ್ತಲೇ ಬೆಡ್‌ರೂಮ್‌ಗೆ ಹೋದಳು ಕೈವಲ್ಯ. “ನನ್ನಗೆ ಕಾಲ್ ಮಾಡಿದ್ರಂತೆ? ನಾನು ನೋಡಲೇ ಇಲ್ಲ, ಮೊಬೈಲ್ ಇನ್ನೊಂದು ರೂಮ್‌ನಲ್ಲಿದೆ” ಕಾಲ್ … Read more

ಗಾಂಜಾ ವ್ಯಸನಿಗಳು. . !!!!: ನಾಗಸಿಂಹ ಜಿ ರಾವ್

”ಮಕ್ಕಳಹಕ್ಕುಗಳ ಒಡಂಬಡಿಕೆಯ ಪರಿಚ್ಛೇದ ೩೩ ಮಕ್ಕಳನ್ನು ಮಾದಕಪದಾರ್ಥಗಳಿಂದ ರಕ್ಷಿಸಬೇಕು ಎಂದು ಹೇಳಿದೆ. ಮಾದಕ ಪದಾರ್ತಗಳಿಗೆ ಮಕ್ಕಳು ಬಲಿಯಾಗದಿರುವಂತೆ ಮಾಡುವುದು ಮಕ್ಕಳಹಕ್ಕು. ನೀವು ಯೋಚಿಸಬೇಡಿ ಸಾರ್ ನಾವು ನಿಮ್ಮ ಶಾಲೆಗೆ ಬಂದು ಮಾದಕ ಪದಾರ್ಥಗಳಿಗಿಂದ ಆಗುವ ಅನಾಹುತಗಳ ಬಗ್ಗೆ ನಿಮ್ಮ ಶಾಲೆಯ ಮಕ್ಕಳಿಗೆ ಅರಿವು ಮೂಡಿಸುತ್ತೇವೆ” ಎಂದು ಮಾರೇನಹಳ್ಳಿ ಸರ್ಕಾರೀ ಹಿರಿಯ ಪ್ರೌಢಶಾಲೆಯ ಮುಖ್ಯೋಪಾದ್ಯಾಯರಿಗೆ ಭರವಸೆ ನೀಡಿದೆ, ತಮ್ಮ ಶಾಲೆಯ ಮಕ್ಕಳು ಬೀಡಿ, ಸಿಗರೇಟುಗಳಿಗೆ ಬಲಿಯಾಗುತ್ತಿದ್ದಾರೆ, ಅವರಿಗೆ ಅರಿವು ಮೂಡಿಸಿ ಎಂದು ನಮ್ಮನ್ನು ಆಹ್ವಾನಿಸಲು ದೂರದ ಮಾರೇನಹಳ್ಳಿಯಿಂದ ನಮ್ಮ … Read more

ಯಾವುದಕ್ಕಾದರೂ, ಉಚಿತವಾದರೆ ಬೆಲೆ ತೆರೆವುದು ಜಾಸ್ತಿ: ಡಾ. ಅಮೂಲ್ಯ ಭಾರದ್ವಾಜ್

ಗಲ್ಲಿ ಗಲ್ಲಿಗೂ ಡಾಕ್ಟ್ರುಗಳನ್ನು ಕಾಣುತ್ತಿದ್ದ ನಾವು ಕೆನಡಾಗೆ ಬಂದ ನಂತರ ಮೊದಲ ಬಾರಿಗೆ “ಎಲ್ಲಿಗೆ ಬಂದುಬಿಟ್ಟೆವೋ?” ಅನ್ನಿಸಿದ್ದು ಸತ್ಯ. ಅನಾರೋಗ್ಯವಾದರೆ ನಾಟಿ ಔಷಧ, ಮನೆಮದ್ದು ಅಥವಾ ಸ್ಪೆಷಲಿಸ್ಟ್‌ ಡಾಕ್ಟ್ರನ್ನೇ ಕಂಡು ಏನೋ ಒಂದು ಉಪಶಮನ ಮಾಡಿಕೊಳ್ಳುತ್ತಿದ್ದ ನಮಗೆ (ಬರಿಯ) ಅಸಿಡಿಟಿಯ ಅತಿರೇಕವನ್ನು ಅನುಭವಿಸಿ ಸುಸ್ತು ಹೊಡೆದೆವು. ನನ್ನ ಗಂಡನಿಗೆ ಅಸಿಡಿಟಿ ಸಮಸ್ಯೆ ಬಹಳ ಕಾಲದಿಂದಲೂ ಇದೆ. ವಿಜೇತ್‌ರ ಈ ಸಮಸ್ಯೆ ನಮಗೆ ಇಲ್ಲಿಗೆ ಬರುವವರೆಗೂ ಭಾರವೆನಿಸಿರಲಿಲ್ಲ. ಅಲ್ಲಲ್ಲೆ ಉಪಶಮನ ಕಾಣುತ್ತಿದ್ದ ನಾವು, ಈ ಚಿಕ್ಕ ಸಮಸ್ಯೆಗೆ ಉಪಶಮನ … Read more

ಮೂರು ಕವಿತೆಗಳು: ನಾಗರಾಜ ಜಿ. ಎನ್.  ಬಾಡ

ವಾಸ್ತವ ಎಷ್ಟೇಅದುಮಿಟ್ಟರೂಕನಸುಗಳುಚಿಗುರುವುದು ಆಶೆಗಳುಗರಿ ಗೆದರುವುದುಹೂವಂತೆ ಅರಳಿಘಮ ಘಮಿಸುವುದು ಸಂಭ್ರಮಿಸುವಮೊದಲೇನಿರಾಶೆಯಕಾರ್ಮೋಡಸುಳಿಯುವುದು ಖುಷಿ ಖುಷಿಯಾಗಿದ್ದಮನವುನೋವಿಂದನರಳುವುದು ಮನಸ್ಸುಇನ್ನೆಲ್ಲೋಹೊರಳುವುದುವಾಸ್ತವದ ಅರಿವುಕಣ್ಣ ತೆರೆಸುವುದು ಖುಷಿಯ ಅಳಿಸುವುದುಕಣ್ಣೀರ ಧಾರೆಯಹರಿಸುವುದುಮನದ ತುಂಬನೋವುಗಳನ್ನುಉಳಿಸುವುದು ಬೀಸಿ ಬರುವತಂಗಾಳಿಯೂತಂಪ ನೀಡದುನೊಂದ ಮನಕೆ ಕೊನೆಯ ನಿಲ್ದಾಣ ದೂರದೂರಿನ ಈ ಪಯಣಕೊನೆಗೆ ಸೇರುವುದು ಸ್ಮಶಾನಇರುವುದು ನಾಲ್ಕಾರು ದಿವಸಇರಲಿ ಇರುವಷ್ಟು ದಿನ ಹರುಷಕಳೆದು ಹೋಗುವುದು ವರುಷನಡುವೆ ಯಾಕೆ ಸುಮ್ಮನೆ ವಿರಸಸಂಸಾರದಲ್ಲಿ ಇರಲಿ ಸರಸಅನುಭವಿಸು ನೀ ಪ್ರತಿ ದಿವಸನಿನ್ನದೆನ್ನುವುದು ಇಲ್ಲಿ ಏನಿಲ್ಲಅವನು ಆಡಿಸಿದಂತೆ ನಡೆಯುವುದೆಲ್ಲಬರಿ ಪಾತ್ರದಾರಿಗಳು ನಾವೆಲ್ಲಾಅವನೆದಿರು ಆಟ ನಡೆಯುವುದಿಲ್ಲಅವನು ಕುಣಿಸಿದಂತೆ ಕುಣಿಯಬೇಕಲ್ಲಯಾವ ಉನ್ಮಾದವೂ ಜೊತೆಯಾಗುವುದಿಲ್ಲಯಾವ ಸಂಪತ್ತು … Read more

ಮೂರು ಕವಿತೆಗಳು: ರಾಜಹಂಸ

ಅಭಿವ್ಯಕ್ತಿಗಳ ಧರ್ಮಸಂಕಟ -೧-ಉಸಿರಿನಿಂದ ರಚಿಸಿದ ಬೇಲಿಯಿಂದಮನದ ಅಭಿವ್ಯಕ್ತಿಗಳಿಗೆ ಬಂಧಿಸಿದ್ದೇನೆಸೂಕ್ಷ್ಮಕ್ರಿಮಿಗಳು ಹಾರುವಹೂದೋಟದಲಿ ಅರಳದ ಹಾಗೆ ಭೂಮಿಯ ಗುರುತ್ವಾಕರ್ಷಣೆಯಿಂದತಪ್ಪಿಸಿಕೊಳ್ಳುವಷ್ಟೇ ಕಷ್ಟವಿದ್ದರೂಬೇಲಿ ಜಿಗಿದು ಹೂಬನದಲಿ ಹೆಜ್ಜೆಇಡಲೇಬೇಕೆಂಬುವ ದಿವ್ಯ ಉತ್ಸಾಹಹೊಂದಿರುವ ಈ ಅಭಿವ್ಯಕ್ತಿಗಳಿಗೆಮನವೊಲಿಸುವಲ್ಲಿ ಪೂರ್ಣ ವೈಫಲ್ಯಬಂಧಮುಕ್ತಗೊಳಿಸಲೂ ಅಸಾಧ್ಯಚಂಚಲ ಮನಸ್ಸಿನ ಅಭಿವ್ಯಕ್ತಿಗಳಿಗೆಅನುಕ್ಷಣ ಕಾವಲು ಕಾಯುವ ತುಟಿಗಳು -೨-ಅಭಿವ್ಯಕ್ತಿ ಇಡುವ ಹೆಜ್ಜೆಗಳಿಗೆ ಧರ್ಮದಗೆಜ್ಜೆ ಕಟ್ಟಿ ರಾಜಕೀಯದ ಬಣ್ಣ ಬಳಿದುಅವಾಚ್ಯ ಶಬ್ದಗಳ ಪಲ್ಲಕ್ಕಿಯಲಿಹೂದೋಟದ ತುಂಬೆಲ್ಲ ಮೆರವಣಿಗೆಅದಕ್ಕಾಗಿಯೇ ಜನ್ಮಪಡೆದ ಅಭಿವ್ಯಕ್ತಿಗಳಕೊರಳು ಹಿಸುಕಿ ಉಸಿರು ನಿಲ್ಲಿಸುತ್ತಿದ್ದೇನೆಮರಳಿ ಸೇರುತಿವೆ ಪಂಚಭೂತಗಳ ಗೂಡಿಗೆ! -೩-ಬೆಳಕಿನ ಮೇಲೆ ಭಯದ ಗುರುತುಗಳುರೇಖಾಚಿತ್ರಗಳು ಬರೆಯಲುಬಣ್ಣ ತುಂಬುತಿವೆ ನೋವಿನ … Read more

ಹೊಸ ಕಿರು ಚಿತ್ರ “ಆಡು ಆನೆಯ ನುಂಗಿ”

ಆಡು ಆನೆಯ ನುಂಗಿ ಕಿರುಚಿತ್ರವನ್ನು ನೋಡಿ. ತಳಸಮಾಜಗಳು ವ್ಯವಸ್ಥೆಯು ಹೇರಿರುವ ಬಡತನವ ಮೈತುಂಬಾ ಹೊದ್ದು ಬದುಕುತ್ತಿರುವವರು. ಆದರೆ ಬಿಟ್ಟಿಯಾಗಿ ಬರುವ ಹಣ(ದಾನ) ಕ್ಕೆ ಆಸೆ ಪಡುವ ಮತ್ತು ಅದರ ಹಂಗಿನಲ್ಲಿ ತಮ್ಮ ಸ್ವಾಭಿಮಾನವ ಅಡವಿಟ್ಟು ಬದುಕುವವರಲ್ಲ. ರಟ್ಟೆಲಿ ಶಕ್ತಿ ಇರೋ ತನಕ ದುಡಿದು ಉಣ್ಣೋರು ಅವರು. ಹಸಿದು ಮಲಗಿದರೂ ಆತ್ಮಗೌರವ ಮಾರಿಕೊಳ್ಳರು. ಅದಕ್ಕೆ ಹೇಳೋದು ಬಡವನಿಗೆ ಸ್ವಾಭಿಮಾನ ಜಾಸ್ತಿ‌ ಅಂತ. ಅಂತಹ ಸ್ವಾಭಿಮಾನವ ಬಿಟ್ಟು ಅಂಗಲಾಚುವ ಪರಿಸ್ಥಿತಿಯನ್ನ ಹೇಗಾದರೂ ತಂದು ಮತ್ತೆ ತಾವೇ ಸಹಾಯ‌ ಮಾಡುವ ಔದಾರ್ಯವ … Read more

ತನಿಖಾ ಸಮಿತಿಯ ಸದಸ್ಯ. . . . !!!!!: ನಾಗಸಿಂಹ ಜಿ ರಾವ್

”ನಾಗಸಿಂಹ ಏನ್ರಿ ?” ”ಹೌದು ನೀವು ಯಾರು ಸರ್ ?” ”ಪೊಲೀಸ್ ಕಮಿಷನರ್ ಆಫೀಸ್ ಇಂದ ಫೋನ್ ಮಾಡಿದೀನಿ, ನಿಮ್ಮ ಮೇಲೆ ಸರ್ಕಾರೇತರ ಶಾಲೆಯ ಸಂಘದ ಅಧ್ಯಕ್ಷರು ದೂರು ಕೊಟ್ಟಿದ್ದಾರೆ, ನೀವು ಅವರ ಶಾಲೆಗೆ ನುಗ್ಗಿ ಗಲಾಟೆ ಮಾಡಿ, ಮಕ್ಕಳಿಗೆ, ಶಿಕ್ಷಕರಿಗೆ ಬೆದರಿಕೆ ಹಾಕಿದೀರಾ, ಅತಿಕ್ರಮಣ ಪ್ರವೇಶ ಮಾಡಿದ್ದೀರಾ ಅಂತ ದೂರು ಕೊಟ್ಟಿದ್ದಾರೆ, ನಾಳೆ ಬೆಳಗ್ಗೆ ಹನ್ನೊಂದು ಗಂಟೆಗೆ ನೀವು ಕಮಿಷನ್ ಆಫೀಸ್ ಗೆ ಬಂದು ಹೇಳಿಕೆ ಕೊಡಿ ” ಫೋನ್ ಕಟ್ ಆಯಿತು. ನನಗೆ ಸಹಜವಾಗಿಯೇ … Read more

ಗುಸು ಗುಸು ಮಾಡುವವರು ಹೆಂಗಸರಷ್ಟೆಯೇ? ಒಬ್ಬ ಐಲ್ಯಾಂಡರ್‌ನ ಕೇಳಲೇಬೇಕು: ಡಾ.ಅಮೂಲ್ಯ ಭಾರದ್ವಾಜ್

ನಾನು ಹಲವು ಬಾರಿ ಯೋಚಿಸುತ್ತಿರುತ್ತೇನೆ. ಭಾರತೀಯ ಹೆಂಗಸರ ಬಗ್ಗೆ ಯಾವಾಗಲೂ ಗುಸು ಗುಸು ಮಾಡುತ್ತಾರೆ ಎಂಬ ಆಪಾದನೆ ಎಷ್ಟು ಸರಿ ಎಂದು. ಕೆನಡಾಗೆ ಹೋದಾಗಿನಿಂದ ಇದು ನನ್ನ ಮೂರನೇ ಕೆಲಸ. ಹಾಲು ಕೃಷಿಕರ ಹಿತಾಸಕ್ತಿಯನ್ನು ಕಾಯುವ ಇಲ್ಲಿನ ರಾಜ್ಯದ ನಂದಿನಿಯಂತಹ ಸಂಸ್ಥೆಯಲ್ಲಿರುವ ಈ ನನ್ನ ಕೆಲಸ ನನಗೆ ಅತಿ ಪ್ರಿಯವಾದದ್ದು. ಹಾಲು ಉತ್ಪಾದಕರಿಗೆ ಇಲ್ಲಿ ಎರಡು ರೀತಿಯ ವ್ಯವಸ್ಥೆಗಳಿವೆ – ಕ್ರೆಡಿಟ್ ಮತ್ತು ಕೋಟಾ ವ್ಯವಸ್ಥೆ. ಈ ಎರಡೂ ವ್ಯವಸ್ಥೆಗಳು ಹಾಲು ಮಾರಾಟದ ಕೋಟಾವನ್ನು ನಿರ್ವಹಿಸಲು ಸಹಾಯ … Read more

ಮೂರು ಕವಿತೆಗಳು: ಎನ್. ಶೈಲಜಾ, ಹಾಸನ

ಕದಲಿಕೆ ನಿನ್ನದೊದು ಸಣ್ಣಸಾಂತ್ವನಕ್ಕಾಗಿಅದೆಷ್ಟು ಕಾದಿದ್ದೆನಿನಗದರ ಅರಿವಿತ್ತೇ ನನ್ನ ದಿಮ್ಮನೆ ಭಾವನೋಡಿ ಹೊರಟುಬಿಟ್ಟೆಯಲ್ಲ ದೂರ ಹೋಗುವಾಗ ಹಾಗೆನನ್ನ ಕಂಗಳದಿಟ್ಟಿಸಿದ್ದರೆಕಾಣುತ್ತಿತ್ತುನನ್ನ ಹಂಬಲಿಕೆತೆಳ್ಳನೆ ಕಣ್ಣೀರಪಸೆಯ ಆರ್ದ್ರತೆ ನಿನ್ನದೊಂದು ಕದಲಿಕೆಗೆನನ್ನೊಳಗಿನಭಾವಗಳ ಸಡಿಲಿಕೆ ಒಮ್ಮೆ ಕಣ್ಣಲ್ಲಿ ಕಣ್ಣುನೆಟ್ಟಿದ್ದರೆ ಸಾಕಿತ್ತುನೋಟ ಹೇಳುತ್ತಿತ್ತುನೀನು ಬೇಕೆಂದು ಕೇಳಿಸಿಕೊಳ್ಳುವತಾಳ್ಮೆ ಇಲ್ಲದ ನೀನುಹೇಳುವ ವಾಂಛೆಇಲ್ಲದ ನಾನುಆಹಾ ಅದೆಂತಹಜೋಡಿ ನಮ್ಮದು. ಎದೆಯ ಗೂಡಿನೊಳಗೆಬಚ್ಚಿಟ್ಟಿದ್ದೆ ಅನುರಾಗಆದರೆ ನಿನಗೆ ಕಂಡಿದ್ದುಬಿರು ವದನ ಮಾತ್ರ ಹುಡುಕುವಪ್ರಾಮಾಣಿಕತೆನಿನ್ನಲ್ಲಿದ್ದಿದ್ದರೆಜೋಡಿ ಹಕ್ಕಿಯಾಗಿಸುತ್ತಾಡ ಬಹುದಿತ್ತುಬಾನ ತುಂಬಾ ಆದರೀಗ ರೆಕ್ಕೆಮುರಿದಹಕ್ಕಿಯಂತೆನಿಂತಲ್ಲೇಸುತ್ತುತ್ತಾಚಡಪಡಿಸುವದುಸ್ಥಿತಿ * ವಿಕಾರದ ಮರಳು ಇದಿರು ಹಳಿಯುವುದುಬೇಡವೆ ಬೇಡತನ್ನ ತಾ ಬಣ್ಣಿಸಿಕೊಳ್ಳುವುದಂತುಇಲ್ಲವೆ ಇಲ್ಲಈ ಅಂತರಂಗದಬಹಿರಂಗದ … Read more

ಕಿರುಕವಿತೆಗಳು: ಚಾರುಶ್ರೀ ಕೆ ಎಸ್

ಪ್ರೀತಿ ಎಷ್ಟು ಪ್ರೀತಿ, ಎಷ್ಟ್ ಎಷ್ಟೋ ಪ್ರೀತಿ,ಸತ್ಯವೇ ಕಾಣುವ ಪ್ರೀತಿಯಾಗಿ,ನಂಬಿಕೆಯ ಅನಿವಾರ್ಯತೆ ಇಲ್ಲದ ಪ್ರೀತಿ,ಬಯಕೆಗಳ ಮೀರಿ ಇರುವ ಪ್ರೀತಿ,ಪರರ ಕಾಡದ, ಎನ್ನ ನೋಯಿಸದ,ಗೌರವದ ಶ್ರೇಣಿ ಇದು ಪ್ರೀತಿ,ಶಾಂತಿಯ ಧರಿಸಿದ ಪ್ರೀತಿ,ಬದುಕನ್ನ ಸ್ವೀಕರಿ‌ಸಿ ಅದುವೇ,ಬಯಲೆಂದು ಅರಿತ ಪ್ರೀತಿ,ಅರಿತು ಓಡುತಲಿರಲು,ಜಂಗಮನಲ್ಲವೆ ಶರಣಾಗತಿಯೆಅಧಮ್ಯ ಶಕ್ತಿಯ ಮೇಲಿನ ಪ್ರೀತಿ. * ತರಂಗ ರೂಪ ಬೆಲೆಯುಳ್ಳ ಚುಕ್ಕಿಗಳು,ಬಗೆ ಬಗೆಯ ಜೋಡಿಗಳ,ಸುಂದರ ಮಿಲನ ನಾ,ನನ್ನೀ ಗಣಿತ ಕಾರ್ಯಕ್ಕೆ,ಪ್ರಕ್ಷೇಪಣಗೆ ಜಾಗ ಉಂಟು,ಹೊರತೆಗೆಯುವಿಕೆಯು ಸಾಧ್ಯ,ಅಂಶಗಳ ಧರಿಸುವ ಭರದಲ್ಲಿ,ಸಾಗರದ ತೀರವ,ಮುಟ್ಟಿ ಬಂದಿದ್ದೇ, ಬಂದಿದ್ದು,ಪ್ರೀತಿಯ ಅಂಶಗಳ ತೊಟ್ಟ ನಂತರ,ಕತೃ, ಕರ್ಮ, ಕ್ರಿಯೆ,ಎಲ್ಲಾ … Read more

ಗುಂಡೂಮಾಮನ ಜಾದು ಮತ್ತು ಇಕ್ಕಳ: ಡಾ. ಹೆಚ್ ಎನ್ ಮಂಜುರಾಜ್

ಪ್ರೌಢಶಾಲೆಯಲ್ಲಿ ಓದುವಾಗ ಕೆ ಎಸ್ ನರಸಿಂಹಸ್ವಾಮಿಯವರ ‘ಇಕ್ಕಳ’ ಎಂಬೊಂದು ಪದ್ಯವಿತ್ತು. ಮೇಡಂ ಪಾಠ ಮಾಡುವಾಗ ಅದೇನು ಹೇಳಿದರೋ ಆಗ ತಲೆಗೆ ಹೋಗಿರಲಿಲ್ಲ. ಆದರೆ ನಮ್ಮ ಮನೆಯ ಅಡುಗೆಮನೆಯಲ್ಲೊಂದು ಇಕ್ಕಳ ಇತ್ತು. ಆ ಪದ್ಯಪಾಠ ಓದುವಾಗೆಲ್ಲ ನನಗೆ ಅದೊಂದೇ ನೆನಪಾಗುತ್ತಿತ್ತು. ಮನೆಮಂದಿಗೆಲ್ಲಾ ಆ ಇಕ್ಕಳದ ಮೇಲೆ ಬಲು ಅಕ್ಕರೆ. ಏಕೆಂದರೆ ಕೆಳಮಧ್ಯಮವರ್ಗದವರಾದ ನಮ್ಮ ಮನೆಗೆ ಬಂದಿದ್ದ ಮೊತ್ತ ಮೊದಲ ವಿದೇಶಿ ವಸ್ತುವದು. ನಮ್ಮ ತಂದೆಯ ಸೋದರಮಾವ ಚಿಕ್ಕಂದಿನಲ್ಲೇ ಮುಂಬಯಿಗೆ ಓಡಿ ಹೋಗಿ ಅಲ್ಲೆಲ್ಲೋ ಇದ್ದು, ಏನೇನೋ ವಿದ್ಯೆಗಳನ್ನು ಕಲಿತು, … Read more

ನಿಮ್ಮ ಮಕ್ಕಳು.. ನೀವೇ ಹೊಣೆ !!!: ನಾಗಸಿಂಹ ಜಿ ರಾವ್

‘ ಸಾರ್ ನಮ್ಮ ಮಕ್ಕಳನ್ನ ಶಾಲೆಯಿಂದ ಹೊರಗಡೆ ಹಾಕಿದ್ದಾರೆ, ಸಹಾಯ ಮಾಡಿ ಸಾರ್ ”ಹೀಗೆ ಪೋಷಕರ ಕರೆ ಬಂತು, ಸುಮಾರು ಎಂಟು ಜನ ಏಳನೇ ತರಗತಿಯ ಮಕ್ಕಳನ್ನು ಸರಿಯಾಗಿ ಓದು ಬಾರದವರು ಎಂದು ವಸಂತನಗರದ ಸರಸ್ವತಿ ಶಾಲೆಯಿಂದ ಹೊರಗಡೆ ಕಳಿಸುವ ತೀರ್ಮಾನವನ್ನ ಶಾಲೆಯ ಆಡಳಿತ ಮಂಡಳಿ ಮಾಡಿದ್ದರು. ಪೋಷಕರನ್ನು ಕರೆದು ಟಿಸಿ ತೆಗೆದುಕೊಂಡು ಹೋಗಿ ಎಂದು ತಿಳಿಸಿದ್ದರು. ಕೆಲವು ಪೋಷಕರಿಗೆ ಟಿಸಿ ಕೊಟ್ಟುಬಿಟ್ಟಿದ್ದರು. ಈ ಮಕ್ಕಳಿಗೆ ಓದಲು ಬರುವುದಿಲ್ಲ ಎಂದು ಸರಸ್ವತಿ ಶಾಲೆಯಿಂದ ಹೊರಗಡೆ ಹಾಕಿದ್ದಾರೆ ನಾವೂ … Read more

ಅಮ್ರಾವತಿಯ ಗಂಡ: ಚಿನ್ನು ಪ್ರಕಾಶ್ ಶ್ರೀರಾಮನಹಳ್ಳಿ

“ಮುಂಗಾಲಿನ ಮ್ಯಾಲೆ ನಡೆಯೋ ಹೆಂಗ್ಸು ಮೂರೊಲೇ ಗುಂಡು ಒಂದ್ಕಡೆ ಇಕ್ಕಲ್ಲ, ಯಿಟ್ನೊತ್ಗೇ ಒಲೆ ಕಿತ್ತಾಕಿ ಮುಂಗೈನ ತಿಕುಕ್ಕೆ ಸೀಟ್ಕಂಡು ಮುಂದ್ಲೂರಿಗೆ ವೋತಾಳೆ, ನೀನು ಅಂಗೇ ಕಣೇಳೇ ಬಿತ್ರೀ ಆಹ ಹ ಹಾ… ಹೆಂಗ್ ವನಿತಾಳ್ನೋಡು ಇವುಳ್ ವೈಯ್ಯಾರುಕ್ಕೆ ನನ್… ” ಮಲ್ಲಕ್ಕ ಕುಂತಲ್ಲೇ ಕೊಸರಾಡತೊಡಗಿದಳು, ಅವಳ ಆವೇಶ, ಆಕ್ರೋಶ ಎಷ್ಟಿತ್ತೆಂದರೆ ಅವಳು ಕುಂತಿರೋ ಜಾಗಕ್ಕೆ ಗಾರೆ ಬಳಿಯದೇ ಬರೀ ಮಣ್ಣಿನ ನೆಲವಾಗಿದ್ದಿದ್ರೇ ಅವಳ ಕೊಸರಾಟಕ್ಕೆ ಅವಳ ಕುಂಡಿಯಷ್ಟಗಲವೂ ನೆಲ ತೂತು ಬಿದ್ದು ನೆಲದೊಳಗೆ ವೊಲ್ಟೋಗಿರೋಳು, ಇವಳ ಕೊಸರಾಟ … Read more

ಜಾತಿ ಜಾನಪದ ಬೇರೆ ಬೇರೆ ಅಲ್ಲ ಎನ್ನುವ “ದಲಿತ ಜಾನಪದ”: ಡಾ. ನಟರಾಜು ಎಸ್ ಎಂ

ಮೊಗಳ್ಳಿ ಗಣೇಶ್ ಅವರದು ಕನ್ನಡ ಕಥಾಲೋಕದಲ್ಲಿ ಬಹು ದೊಡ್ಡ ಹೆಸರು. ೧೯೯೨ ರಲ್ಲಿ ತಮ್ಮ ಮೂವತ್ತನೇ ವಯಸ್ಸಿಗೆ ಮೊದಲ ಕಥಾಸಂಕಲನ ಪ್ರಕಟಿಸಿದ್ದ ಮೊಗಳ್ಳಿಯವರು ೨೦೨೪ ರ ತಮ್ಮ ಅವರತ್ತೆರಡನೇ ವಯಸ್ಸಿನವರೆಗೂ ಅಂದರೆ ಕಳೆದ ಮೂವತ್ತೆರಡು ವರ್ಷದಲ್ಲಿ ನವತ್ತೇಳಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಅವರ ಬರಹಗಳು ಕಥೆಗಳಾಗಿ, ಕಾದಂಬರಿಗಳಾಗಿ, ಸಂಸ್ಕೃತಿ ಚಿಂತನೆಗಳಾಗಿ, ಕಾವ್ಯಗಳಾಗಿ, ಬೀದಿ ನಾಟಕಗಳಾಗಿ, ಸಂಪಾದಿತ ಕೃತಿಗಳಾಗಿ ಕನ್ನಡ ಸಾರಸ್ವತ ಲೋಕಕೆ ಸೇರ್ಪಡೆಯಾಗಿವೆ. ಅವರ ಸಾಹಿತ್ಯ ಸೇವೆಗೆ ಅನೇಕ ಪ್ರಶಸ್ತಿಗಳು ಇವರನ್ನು ಅರಸಿ ಬಂದಿವೆ. ೨೦೧೭ ರ … Read more

ಮೇಷ್ಟ್ರು ರವಿ, ರಾಜಿ ಮತ್ತು ಮಗ ರವಿರಾಜ: ಲಿಂಗರಾಜು ಕೆ ಮಧುಗಿರಿ

ಅಗ್ರಹಾರಕ್ಕೆ ವರ್ಗವಾಗಿ ಬಂದ ರವಿಯನ್ನು, “ಆ ಶಾಲೆಯನ್ಯಾಕೆ ತೆಗೆದುಕೊಂಡೆ ಗುರು? ನೆಕ್ಸ್ಟ್ ಅಕಾಡೆಮಿಕ್ ಇಯರ್‌ಗೆ ನೀನು ಹೆಚ್ಚುವರಿ ಆಗೋದು ಪಕ್ಕಾ. ಆ ಹೆಸ್ರಿಗೂ ಆ ಊರ್ಗೂ ಸಂಬಂಧಾನೇ ಇಲ್ಲ. ಊರಿನ ತುಂಬೆಲ್ಲಾ ಇರೋದು ಮಾದಿಗ್ರು, ಹೊಲೇರು, ಕುರುಬ್ರು, ಮಡಿವಾಳ್ರೇ. ಗೊತ್ತಲ್ಲಾ ಅವ್ರೆಂಗೆ ಅಂತಾ?”, ಹೀಗೆ ತುಟಿಗೆ ಇಷ್ಟಿಷ್ಟೇ ವೋಡ್ಕಾನಾ ಮುತ್ತಿಡ್ತಾ, ರವಿಯ ಕಸಿನ್, ಕುಮಾರ ಮುಂದಾಗಬಹುದಾದ ಅನಾಹುತಗಳ ಬಗ್ಗೆ ಎಚ್ಚರಿಸಿದ. ರವಿ, ಅಗ್ರಹಾರದ ಹೆಸರಿನಿಂದ ಹಾಗೂ ಕೌನ್ಸೆಲಿಂಗ್ ನಲ್ಲಿ ಉಳಿದ ಒಂದೇ ಒಂದು ಶಾಲೆ ಇದಾಗಿದ್ದುದರಿಂದ ಅನಿವಾರ್ಯವಾಗಿ … Read more

ಕಿರು ಕತೆಗಳು: ಸುಜಾತಾ ಎಸ್ ಹೆಗಡೆ ದಂಟಕಲ್

ಅಂತರ್ಗತ “ಲೇ ಭಾವನಾ ಎಲ್ಲೆ ಇದ್ದೀಯಾ ? ನನಗೆ ಕೆಲಸಕ್ಕೆ ಹೊರಡೋಕೆ ಸಮಯ ಆಯ್ತು. ಚಿನ್ನುಗೆ ಬೇರೆ ಸಮವಸ್ತ್ರ ಹಾಕಿಲ್ಲಾ. ಅವನನ್ನ ಶಾಲೆಗೆ ಬಿಟ್ಟು ನಾನು ತಲುಪೋದು ಯಾವಾಗಾ ?. ಹರ್ಷ ಏರು ಧ್ವನಿಯಲ್ಲಿ ಕೂಗಿದಾಗಲೇ ವಾಸ್ತವಕ್ಕೆ ಬಂದಳು. ಅವಸರವಸರವಾಗಿ ಉಕ್ಕುತ್ತಿದ್ದ ಹಾಲಿನ ಪಾತ್ರೆಯ ಉರಿಯನ್ನು ನಂದಿಸಿದಳು. ಅಡಿಗೆ ಮನೆಯ ಬಾಗಿಲಿಗೆ ಬಂದ ಪತಿಯನ್ನು ಕಂಡು ಮುಖ ಬಾಡಿಸಿಕೊಂಡಳು. ಕಣ್ಣಾಲಿಗಳು ತುಂಬಿಕೊಂಡವು. ಭಾವುಕಳಾದ ಹೆಂಡತಿಯನ್ನು ಕಂಡು ಸ್ವಲ್ಪ ಮೆತ್ತಗಾದ. “ಇದೇನೆ ಭಾವನಾ ? ಇಷ್ಟಕ್ಕೆಲ್ಲ ಯಾರಾದ್ರು ಕಣ್ಣೀರು … Read more

ಶಿಕ್ಷಣ, ಉದ್ಯೋಗ ಮತ್ತು ನೈತಿಕತೆ: ಪರಮೇಶ್ವರಿ ಭಟ್

ಎಲ್ಲರೂ ತಿಳಿದಂತೆ ಶಿಕ್ಷಣ‌ ಮತ್ತು ಉದ್ಯೋಗ ಒಂದಕ್ಕೊಂದು ಸಂಬಂಧಪಟ್ಟ ವಿಷಯಗಳು. ಉತ್ತಮ ಶಿಕ್ಷಣ ಉತ್ತಮ ಉದ್ಯೋಗಕ್ಕೆ, ಉತ್ತಮ ಉದ್ಯೋಗವು ಉತ್ತಮ ಜೀವನ ಮಟ್ಟಕ್ಕೆ ಕಾರಣವಾಗುತ್ತದೆ. ಹಾಗಾಗಿ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಜೀವನ ಒದಗಿಸಿಕೊಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿರುತ್ತಾರೆ. ಆದರೆ ಹಾಗೆ ಮಾಡುವಾಗ ಜೀವನಕ್ಕೆ ಅತೀ ಅಗತ್ಯವಾದ ನೈತಿಕತೆಯ ಬಗ್ಗೆ ಗಮನ ಹರಿಸುವುದಿಲ್ಲ. ಹಾಗೆಂದು ಅವರು ವಾಮ‌ಮಾರ್ಗ ಅನುಸರಿಸುತ್ತಾರೆ ಅಂತ ಅರ್ಥವಲ್ಲ. ಅವರ ಗಮನ ಮಕ್ಕಳು ಗಳಿಸುವ ಅಂಕಗಳಿಗೆ. . ಯಾಕೆಂದರೆ ಅಂಕಗಳೇ ಬುದ್ಧಿವಂತಿಕೆಯ ಅಳತೆಗೋಲು ಅಂತ‌ … Read more

ಕೆನಡಾದಲ್ಲಿ ಒಂದು ಸಂಜೆ

ಕೆನಡಾದಲ್ಲಿ ಇರುವ ಮಗನ ಮನೆಯಲ್ಲಿ ಆ ಸಂಜೆ ಅದಾಗ ತಾನೇ ಬರುತ್ತಿದ್ದ ತುಂತುರು ಮಳೆ ನಿಂತಿತ್ತು. ಆದರೆ ಬೆಳಗಿನಿಂದ ರಸ್ತೆ ಪೂರಾ ಚೆಲ್ಲಿದ್ದ ಮಂಜು ಮತ್ತಷ್ಟು ಗಟ್ಟಿಯಾಗಿ ಕಾಲಿಟ್ಟರೆ ಜಾರುವ ಸ್ಥಿತಿಯನ್ನು ತಲುಪಿತ್ತು. ರಸ್ತೆಯಲ್ಲಿ ವಿರಳವಾಗಿ ಅಲ್ಲೊಂದು ಇಲ್ಲೊಂದು ವಾಹನಗಳು ಚಲಿಸುತ್ತಿದ್ದವು. ಗಟ್ಟಿಯಾದ ಮಂಜನ್ನು ಸರಿಸಲು ಟ್ರಕ್ಕುಗಳಲ್ಲಿ ‘ ರಾಕ್ ಸಾಲ್ಟ್ ‘ ಲವಣವನ್ನು ರಸ್ತೆ ತುಂಬಾ ಸುರಿಯುತ್ತಿದ್ದರು. ರಾಕ್ ಸಾಲ್ಟ್ ನಮ್ಮಲ್ಲಿ ಸಿಗುವ ಉಪ್ಪಿನಂತೆ ಲವಣದ ರೂಪದಲ್ಲಿ ಇದ್ದು ಗಾತ್ರದಲ್ಲಿ ದೊಡ್ಡ ಸ್ಪಟಿಕಾಗಳಾಗಿ ದೊರೆಯುತ್ತದೆ. ನೇರಳೆ … Read more

ಮೂಗು ಸುಂದರಿಯೂ ಕಪ್ಪು ಹುಡುಗನೂ: ಎಂ ನಾಗರಾಜ ಶೆಟ್ಟಿ

ಹಾರ ಹಾಕಿ, ಧಾರೆ ಎರೆದು ಅಕ್ಷತೆ ಕಾಳು ಹಾಕುವುದನ್ನೇ ಕಾದಿದ್ದ ಅವಸರದ ಅನೇಕ ಆಮಂತ್ರಿತರು ಶುಭಕೋರಲು ಸಭಾಂಗಣದಿಂದ ಎದ್ದು ವೇದಿಕೆಯ ಎಡಭಾಗದಲ್ಲಿ ಒತ್ತೊತ್ತಾಗಿ ನೆರೆದುದನ್ನು ಕಂಡು ʼ ಸ್ವಲ್ಪ ತಾಳಿ ʼ ಎಂದು ಸುಧಾರಿಸಿಕೊಂಡು ಬರಲು ಮದುಮಕ್ಕಳನ್ನು ವೇದಿಕೆಯ ಪಕ್ಕದ ಕೋಣೆಗಳಿಗೆ ಕಳಿಸಿ ಕೊಡಲಾಯಿತು. ಹೆಚ್ಚೆಚ್ಚು ಜನ ಸೇರುತ್ತಿದ್ದಂತೆಲ್ಲಾ ಸರತಿಯ ಮುಂದಿದ್ದ ಆತುರಗಾರರು ʼ ಬೇಗ ಬರಕ್ಕೆ ಹೇಳಿ ʼ ಎಂದು ತಾಳ್ಮೆಗೆಟ್ಟು ಕೂಗುವುದನ್ನು ಕಂಡು, ಜನ ಅವಸರ ಮಾಡುತ್ತಿದ್ದಾರೆ ಬೇಗ ಬರಬೇಕಂತೆ ಎಂದು ಮದುಮಕ್ಕಳಿಗೆ ಹೇಳಿ … Read more

“ಕಲರ್ ಕಲರ್” ಮಾತುಗಳು ಮತ್ತು ಮಂಗರಾಯ: ಡಾ. ಅಮೂಲ್ಯ ಭಾರದ್ವಾಜ್

ಹುಟ್ಟಿದ ಕೂಡಲೇ ಬಿಳಿಯ ಜಗತ್ತು ಕಂಡಿದ್ದರೇ ಹೀಗಾಗುತ್ತಿರಲಿಲ್ಲವೇನೋ! ಆದರೆ ಕಂಡದ್ದು ಗಡಸು ಬ್ರೌನ್. ನಾವು ಹುಟ್ಟಿದಾಗಿನಿಂದ ಜನರು ನಮ್ಮ ಕಲರ್ಗಳ ನಡುವೆ ನಾವು ಎಷ್ಟು ಬಿಳಿ ಎಂದದ್ದೇ ಹೆಚ್ಚು ಕೇಳಿದ್ದು. ಆದರೆ ದೇಶ ಬಿಟ್ಟು ದೇಶಕ್ಕೆ ಬಂದ ನಂತರ ಆ ವೈಭವೀಕೃತ ಜಗತ್ತು ಹರಿದು ಬಹಳ ತಿಂಗಳುಗಳೇ ಆಗಿಹೋಗಿವೆ. ಅಂದು ನಾನು ಆಫೀಸಿನಲ್ಲಿದ್ದೆ. ಮಧ್ಯಾಹ್ನ ಊಟ ಮುಗಿಸಿ ಕುಳಿತಿದ್ದೆ. ದಿಢೀರನೆ ಮಗಳ ಸ್ಕೂಲಿನಿಂದ ಒಂದು ಕರೆ ಬಂತು.“ಹಲೋ!” ಎಂದ ಕೂಡಲೆ ಆ ಬದಿಯಿಂದ ಶಾಲೆಯ ಪ್ರಾಂಶುಪಾಲರು. ವಿಷಯ … Read more

ತಾಕತ್ತಿದ್ರೆ ಒಂದಿನ ಕ್ಲಾಸ್ ಮಾಡಿ ..!!!!!!!!: ನಾಗಸಿಂಹ ಜಿ ರಾವ್

ಶಾಲೆಗಳಲ್ಲಿ ದೈಹಿಕ ಶಿಕ್ಷೆ ಇಂದಾಗಿ ಇಡೀ ದೇಶದಲ್ಲಿ ಸುಮಾರು ೩೦% ಮಕ್ಕಳು ಶಾಲೆಯಿಂದ ಹೊರಗಿದ್ದಾರೆ ಅನ್ನೋ ಒಂದು ಕಹಿ ಸತ್ಯವನ್ನ ರಾಷ್ಟ್ರೀಯ ಮಕ್ಕಳ ರಕ್ಷಣಾ ಆಯೋಗ ತನ್ನ ಒಂದು ವರದಿಯಲ್ಲಿ ತಿಳಿಸಿತ್ತು. ಶಾಲೆಗಳಲ್ಲಿ ದೈಹಿಕ ಶಿಕ್ಷೆ ನೀಡದೆ ಹೇಗೆ ಪಾಠ ಮಾಡಬಹುದು ಅನ್ನುವ ಕೈಪಿಡಿಯನ್ನು ಸಿದ್ದಪಡಿಸಿ ಪ್ರತಿ ರಾಜ್ಯದ ಶಾಲೆಗಳಲ್ಲಿ ತರಬೇತಿ ನೀಡಿ ಎಂದು ತಿಳಿಸಿತ್ತು. ಅದೂ ಅಲ್ಲದೆ ಕೈಪಿಡಿಯನ್ನು ಕುರಿತು ಶಿಕ್ಷಕರಿಗೆ ತರಬೇತಿ ನೀಡಲು ಹೈದರಾಬಾದ್‌ನಲ್ಲಿ ತರಬೇತುದಾರರ ತರಬೇತಿಯನ್ನು ಆಯೋಗ ಏರ್ಪಡಿಸಿತ್ತು. ಮೂರುದಿನಗಳ ಈ ತರಬೇತಿಗೆ … Read more

ಚಿಂಕ್ರ: ಶಿವಕುಮಾರ ಸರಗೂರು

ಚಿಂಕ್ರ ಎಲ್ಲೊದ್ನಡ ನನ್ನ ಕೂಸು ಅಂತಿದ್ದಅವ್ವನ ಬೋ ಪ್ರೀತಿ ಮಗ್ನ ಮೇಲಿತ್ತುಒಂದ್ಗಳ್ಗಾದ್ರು ಎಡ್ಬಿಡದ ಜೀವ ಅದುಅವಳ್ಗ ಇವ್ನ್ಬಿಟ್ರಾ ಇನ್ಯಾರಿದ್ದರು?ಒಂದ್ಪ್ರಾಣವಾಗಿ ಜೋಕಾಗಿದ್ರು. ಬೆಳಿ ಬೆಳಿತ ಚೂರಾದ್ರು ಕಲ್ತೊಳ್ಳಿ ಅಂತಸ್ಕೂಲ್ಗ ಸೇರುಸ್ಬುಟ್ರಾ ಸರೋಯ್ತದಇಂಕ್ರ ಬುದ್ದಿ ತಲ್ಯಾಗ ಒಕ್ಬುಟ್ಟಂದ್ರನನ್ಮಗ ಪರಪಂಚ ಗ್ಯಾನ ತಿಳ್ಕಂಡುಪಸಂದಾಗಿ ಬೆಳ್ದ್ಬುಡ್ತಾನ ಅನ್ಕೊಂಡ್ಳು. ಗೌರ್ಮೆಂಟೌವ್ರು ಏನೇಳ್ಕೊಟ್ಟಾರು?ಪ್ರವೀಟ್ಗಾದ್ರು ಹಾಕ್ಬಾರ್ದ ಮಂಕೆಅಂತೇಳ್ದ ನೆರ್ಮನೆ ಗೌರಿ ಮಾತುಬಾಳ ಹಿಡಿಸ್ಬುಡ್ತು ತಲೆಚಿಟ್ಟಿಡಿತುಸಾಲಸೋಲ ಮಾಡಿ ಸೇರ್ಸ್ಬುಡದ.! ಅವ್ನ್ಗೇನೊ ಅವರ್ರಿಂಗ್ಲೀಸು ಹಿಡೀಸ್ದು.ಗೀಚಿ ಪಾಚಿ ಕಲಿಯಾಕ್ ಸುರ್ಮಾಡ್ದ.ಯಾರೊಂದ್ಗು ಮಾತಾಡ್ನಾರ. ಸಂಕೋಚಕಲ್ತ್ರುವ ಹೇಳೋಕು ಮುಜ್ಗರ ತಪ್ಪಾದ್ದು ಅಂತ.ಆದ್ರೂ ಅವ್ರವ್ವನ ಮೆಚ್ಸಕ … Read more

ಪ್ರೇಮದ ಪರಿಭಾಷೆ: ದೇವರಾಜ್ ಹುಣಸಿಕಟ್ಟಿ

ಪ್ರೇಮದ ಪರಿಭಾಷೆ ಪ್ರೇಮದ ಪರಿಭಾಷೆ ಏನುಇಮ್ರೋಜ್ ಹೇಳಿಲ್ಲಿ…. ಇನ್ನೇನಿದೆ…ಕಂಬನಿಗೆ ತಂಗಾಳಿ ಸೋಕಿಮೋಡವಾಗಿ ಸುರಿವ ಮಳೆಯಂತೆ….. ಅಷ್ಟೇ ಅಂದನಂತೆ.. ಇಮ್ರೋಜ್ ಅಷ್ಟೇ ನಾ ಅಂದ್ರೇ…. ಇಲ್ಲಾ ಕೇಳಿಲ್ಲಿ.. ಭೂಮಿ ಭಾರ ವಿರಹದಉರಿಯ ಹೊತ್ತು..ಕ್ಷಣ ಕ್ಷಣವು ಯುಗದಂತೆ ಕಳೆದು ಭೂಮಿಗೆ ಬಿದ್ದ ಮೇಲೂ.. ಅವಳು ತಿರಸ್ಕರಿಸಿದರೆಕಂಬನಿ ಮಿಡಿಯದೆ..ಎದೆ ಭಾರ ಮಾಡಿಕೊಳ್ಳದೆ ನಗು ಮುಖವ ತೋರಿತುಟಿಯಲ್ಲಿ ಬಿಕ್ಕಳಿಕೆ ಕುಡಿದು…ಕಣ್ಣಲ್ಲಿ ಹುಸಿ ಹೊಳಪು..ಮುಡಿದು…ಕಣ್ಣ ಕಾಡಿಗೆಯಲ್ಲಿ ಮುಚ್ಚಿನಗುವ ಬಡಪಾಯಿ ಪ್ರೇಮಿಯಂತೆಅಷ್ಟೇ ಅಂದ ಅವ್ಹ ಇಮ್ರೋಜ್ ಮತ್ತೆ….ಹೆಚ್ಚೇನಿಲ್ಲ..ಭೂಮಿ ಆಗಸ ಚುಂಬಿಸುವುದಕಂಡು..ಮುಖದ ತುಂಬ ಹಾಲ್ ಬೆಳಕ ಚೆಲ್ಲಿ..ಶರಧಿಯ … Read more

ಚಂದ್ರಶೇಖರ ಕಂಬಾರರ “ಕರಿಮಾಯಿ “ಮತ್ತು ಇತರೆ ಕಾದಂಬರಿಗಳು: ರಾಘವೇಂದ್ರ ಅಡಿಗ ಎಚ್ಚೆನ್.

1937 ಜನವರಿ 2 ರಂದು, ಬೆಳಗಾವಿ ಜಿಲ್ಲೆಯ ಘೋಡಗೇರಿಯಲ್ಲಿ ಜನಿಸಿದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಜಾನಪದ ವಿದ್ವಾಂಸ ಡಾ. ಚಂದ್ರಶೇಖರ ಕಂಬಾರರು ಹಲವು ಕ್ಷೇತ್ರಗಳಲ್ಲಿ ಪರಿಣತರು. ಅಸಂಖ್ಯಾತ ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡವರು. ಸಾಹಿತ್ಯ, ಸಂಗೀತ, ರಂಗಭೂಮಿ,ಸಿನಿಮಾ ಎಲ್ಲವೂ ಅವರ ತೆಕ್ಕೆಗೆ ಸಿಕ್ಕಿ ಹೆಜ್ಜೆ ಗುರುತನ್ನು ಮೂಡಿಸಿಕೊಂಡವು. ಧಾರವಾಡದಲ್ಲಿ ಎಂ.ಎ ಮತ್ತು ಪಿ.ಎಚ್.ಡಿ ಪದವಿಗಳನ್ನು ಪಡೆದು ಅಮೆರಿಕಾದ ಚಿಕಾಗೋ ವಿಶ್ವವಿದ್ಯಾಲಯದಲ್ಲಿ (1968-69), ಬೆಂಗಳೂರು ವಿಶ್ವವಿದ್ಯಾಲಯದಲ್ಲಿ (1971-91) ಅಧ್ಯಾಪಕರಾಗಿ, ಪ್ರವಾಚಕರಾಗಿ ಸೇವೆ ಸಲ್ಲಿಸಿದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಮೊಟ್ಟ … Read more

ಯೋಗಸ್ಥದ ಅಂತಸ್ಥ ಮತ್ತು ಪರಸ್ಥ: ಡಾ. ಹೆಚ್ ಎನ್ ಮಂಜುರಾಜ್

ರಾಗಂ ಅವರ ‘ಸಂತೆಯಿಂದ ಸಂತನೆಡೆಗೆ’ ಕೃತಿಯ ಓದು ನಮ್ಮೆಲ್ಲರ ಪ್ರೀತಿಯ ಗೆಳೆಯ ವಿಜಯ್ ಹನೂರು ಇದೀಗ ಯಳಂದೂರಿನ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ನನ್ನ ಬಗ್ಗೆ ಅಪಾರ ಪ್ರೀತಿ, ಅಭಿಮಾನ ಮತ್ತು ಗೌರವಾದರಗಳನ್ನು ಹೊಂದಿರುವ ಸಾಹಿತ್ಯ ಸಹೃದಯಿ; ಜೊತೆಗೆ ಗಂಭೀರ ಸಾಹಿತ್ಯ ವಿದ್ಯಾರ್ಥಿ. ಕಳೆದೊಂದು ವಾರದ ಹಿಂದೆ ಫೋನು ಮಾಡಿ, ‘ಗುರುಗಳೇ, ಸಿದ್ಧೇಶ್ವರ ಸ್ವಾಮಿಗಳನ್ನು ಕುರಿತ ಹೊಸದೊಂದು ಪುಸ್ತಕವನ್ನು ನಿಮಗೆ ಅಂಚೆಯಲ್ಲಿ ಕಳಿಸುತ್ತಿರುವೆ. ರಾಗಂ ಅವರ ‘ಯೋಗಸ್ಥಃ’ ಅಂತ ಹೆಸರು. ನೀವು ಓದಿ, ಬರೆದು ಕೊಡಬೇಕು’ ಎಂದರು. … Read more