ಆತ್ಮೀಯ ಎಂದರೆ soulmate ಅಂತ: ಲಾವಣ್ಯ ಆರ್.

ಹಾಯ್ ಆತ್ಮೀಯ, ತಪ್ಪು ತಿಳಿಯಬೇಡ ನಾನಂದದ್ದು ಆತ್ಮೀಯ ಎಂದು ಪ್ರೇಮಿಯೆಂದಲ್ಲ, ನೀನೆಂದು ನನ್ನ ಪ್ರೇಮಿಯಾಗಿರಲಿಲ್ಲ. ಆತ್ಮೀಯ ಎಂದರೆ soulmate ಅಂತ. ಇದೇನು ಇದ್ದಕಿದ್ದ ಹಾಗೆ ನೀನು ಅನ್ನುತ್ತಿದ್ದಾಳೆ ಅಂತ ಹುಬ್ಬು ಗಂಟಿಕ್ಕಬೇಡ ಇದು ಮನಸಿನ ಮಾತು ಇಲ್ಲಿ ಏಕವಚನ ಬಹುವಚನದ ಲೇಪನ ಅನವಶ್ಯಕ. ಅದು ಎಲ್ಲಿದ್ದೊ ತಿಳಿಯದು, ದಿಢೀರನೆ ಪ್ರತ್ಯಕ್ಷವಾದೆ ನನ್ನಲ್ಲಿ ನೂರಾರು ಬದಾಲಾವಣೆ ತಂದೆ, ಯಾರನ್ನು ಕುಡಿ ನೋಟದಲ್ಲು ನೋಡದವಳು ನಿನ್ನ ಕಿರುಗಣ್ಣಿನ ಕೊನೆಯಲ್ಲಿ ನೋಡುವ ಹಾಗೆ ಮಾಡಿದೆ, ಮಾತಿಗಿಂತ ಮೌನವನ್ನೆ ಆಶ್ರಯಿಸುವವಳಲ್ಲಿ ಆಡಿದರು ಮುಗಿಯದಷ್ಟು … Read more

ಮೂವರ ಕವನಗಳು: ಸಿರಿ, ಶ್ರೀಶೈಲ ಮಗದುಮ್ಮ, ವಿನಾಯಕ ಭಟ್

ಸದ್ದಿಲ್ಲದೇ ಒಳ ನುಗ್ಗಿದವನಿಗೆ ಭದ್ರವಾಗಿ ಮುಚ್ಚಿ, ಕೀಲಿ ಹಾಕಿದ್ದ ನನ್ನೆದೆಯ ಗುಬ್ಬಿ ಬಾಗಿಲನು ನಿನ್ನದೇ ಸ್ವಂತ ಸ್ವತ್ತೆಂಬಂತೆ ರಾಜ ಗಾಂಭೀರ್ಯದಲ್ಲಿ ತೆರೆದು  ಸದ್ದಿಲ್ಲದೇ ಒಳನುಗ್ಗಿ,  ಸಿಂಹಾಸನಾರೂಢನಾದೆಯಲ್ಲೋ ನಿನಗದೆಂತಹ ಸೊಕ್ಕು…? ಇಷ್ಟಾದರೆ ಸಹಿಸಿಕೊಳ್ಳುತ್ತಿದ್ದೆ ಪಾಪ, ಸುಸ್ತಾಗಿದ್ದಿರಬಹುದೇನೋ ಕುಳಿತು ಕೊಂಚ ಸುಧಾರಿಸಿಕೊಳ್ಳಲಿ ಎಂದು ಆದರೆ ಸುಮ್ಮನಿರದ ನೀನು ನನ್ನ ಕನಸುಗಳನ್ನೆಲ್ಲ  ವಶ ಪಡಿಸಿಕೊಂಡೆಯಲ್ಲೋ ನಿನಗದೆಂತಹ ಛಾತಿ…? ಇರಲಿ, ಜುಜೂಬಿ ಕನಸುಗಳಿಗಾಗಿ ಕೊರಗುವುದೇ..? ಹಾಳಾಗಲಿ  ಹೊಸ ಕನಸು ಹೆಣೆದರಾಯಿತು ಎಂದು ನನ್ನ ಮನಸಿಗೆ ಸಮಾಧಾನ ಹೇಳಿ ತಿರುಗಿ ನೋಡುವಷ್ಟರಲ್ಲಿ ನೀನು ನನ್ನ … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ದತ್ತು ಹಕ್ಕಿಮರಿಯ ಕತೆ ಒಂದಾನೊಂದು ಕಾಲದಲ್ಲಿ ಹಾರಲಾರದ ಹೆಣ್ಣು ಪಕ್ಷಿಯೊಂದಿತ್ತು. ಕೋಳಿಯಂತೆ ನೆಲದ ಮೇಲೆ ನಡೆದಾಡುತ್ತಿದ್ದ ಅದಕ್ಕೆ ಕೆಲವು ಪಕ್ಷಿಗಳು ನಿಜವಾಗಿಯೂ ಹಾರುತ್ತಿದ್ದವು ಎಂಬುದು ತಿಳಿದಿತ್ತು. ಒಂದು ದಿನ ಅದು ಹಾರುವ ಪಕ್ಷಿಯ ಪರಿತ್ಯಕ್ತ ಮೊಟ್ಟೆಯೊಂದನ್ನು ನೋಡಿತು. ಮೊಟ್ಟೆಯೊಡೆದು ಮರಿ ಹೊರಬರುವ ವರೆಗೆ ಅದಕ್ಕೆ ಕಾವು ಕೊಡಲು ತೀರ್ಮಾನಿಸಿತು. ಯುಕ್ತ ಸಮಯಾನಂತರ ಮೊಟ್ಟೆಯನ್ನು ಒಡೆದುಕೊಂಡು ಮರಿ ಹೊರಬಂದಿತು. ಅದು ಹಾರುವ ಸಾಮರ್ಥ್ಯವಿದ್ದ ಪಕ್ಷಿಯ ಮೊಟ್ಟಯಿಂದ ಹೊರಬಂದ ಮರಿಯಾದ್ದರಿಂದ ಅದಕ್ಕೂ ಹಾರುವ ಸಾಮರ್ಥ್ಯ ಹುಟ್ಟುವಾಗಲೇ ಇತ್ತು. ತುಸು … Read more

ಇವು ನಮ್ಮ ಕನ್ನಡ ಸಿನೆಮಾಗಳ ಹೆಸರುಗಳು!: ಸೂರಿ ಹಾರ್ದಳ್ಳಿ

ತಮ್ಮದು ಕನ್ನಡ ಸಿನೆಮಾ ಎಂದು ತಾವೇ ಕರೆದುಕೊಳ್ಳುವ ಸಿನೆಮಾಗಳಲ್ಲಿ ಭಾಷೆ ಹೇಗಿದೆಯೋ ಗೊತ್ತಿಲ್ಲವಾದರೂ ಅವು ಹೊಂದಿರುವ ಹೆಸರುಗಳು ಹೇಗಿರುತ್ತವೆ ಗೊತ್ತಾ? ಈ ಕೆಳಗಿನವನ್ನು ಓದಿ. 1.    ಪೂರ್ತಿ ಬೇರೆ ಭಾಷೆಯ ಹೆಸರುಗಳು ದುನಿಯಾ, ಲಾಕಪ್ ಡೆತ್, ಮಾಸ್ಟರ್ ಮೈಂಡ್, ರೈನ್ ಕೋಟ್, ಕೇರ್ ಆಫ್ ಫುಟ್‍ಪಾತ್, ಐ ಆ್ಯಮ್ ಇನ್ ಲವ್, ಲವ್ ಯು ಆಲಿಯಾ, ಲವ್ ಬ್ಯಾಂಡ್, ಫೇರ್ ಅಂಡ್ ಲವ್ಲಿ, ಲವ್ ಈಸ್ ಪಾಯ್ಸನ್, ಲವ್ ಇನ್ ಮಂಡ್ಯ, ಡಾರ್ಲಿಂಗ್, ಕ್ರೇಜಿ ಸ್ಟಾರ್, ಲಿಟಲ್ … Read more

ಗಾಲ್ಫ್ ಕ್ಲಬ್ ಗುಂಡುಗೋಷ್ಠಿಯೂ… ಅಲ್ಲಿನ ರೂಲ್ಸೂ…: ಎಚ್.ಕೆ.ಶರತ್

ಗೆಳೆಯನನ್ನು ಭೇಟಿ ಮಾಡಲು ಇತ್ತೀಚೆಗೆ ಮೈಸೂರಿಗೆ ಹೋಗಿದ್ದೆ. ಹೆಂಡತಿ ತವರು ಮನೆಗೆ ಹೋಗಿದ್ದ ಕಾರಣ ‘ಗುಂಡು ಪಾರ್ಟಿ’ಯಲ್ಲಿ ಪಾಲ್ಗೊಳ್ಳುವ ಅವಕಾಶ ಅವನಿಗೆ ಒಲಿದಿತ್ತು. ಅಪರೂಪಕ್ಕೆ ಸಿಗುವ ಇಂಥ ಚಾನ್ಸ್ ಮಿಸ್ ಮಾಡಿಕೊಳ್ಳಬಾರದೆಂದು ಮೈಸೂರಿನಲ್ಲಿದ್ದ ತನ್ನ ಗೆಳೆಯರಿಗೆಲ್ಲ ಕರೆ ಮಾಡಿ ಪಾರ್ಟಿ ಮಾಡುವ ಪ್ಲ್ಯಾನು ಇರುವುದಾಗಿ ತಿಳಿಸಿದ. ಗಾಲ್ಫ್ ಕ್ಲಬ್ ಮೆಂಬರ್ ಆಗಿರುವವನೊಬ್ಬ, ಕ್ಲಬ್‍ಗೆ ಹೋಗೋಣ ಹಾಗಾದ್ರೆ ಅಂತಂದ. ನಾವು ರೆಡಿಯಾದ್ವಿ. ನಮ್ಮನ್ನು ಕರೆದೊಯ್ಯಲು ಬಂದವನು, ನಮ್ಮ ಅವತಾರ ಕಂಡು ಅವಾಕ್ಕಾದ. ಈ ಡ್ರೆಸ್‍ನಲ್ಲಿ ಬಂದ್ರೆ ನಿಮ್ಮನ್ನು ಕ್ಲಬ್ … Read more

“ಮನವ ಗೆದ್ದವನೇ ಮಹಾ ಶೂರ!”: ಹೊರಾ.ಪರಮೇಶ್ ಹೊಡೇನೂರು

            ಗಾಳಿಗಿಂತಲೂ ವೇಗವಾಗಿ ಚಲಿಸುವುದು ನಮ್ಮ "ಮನಸ್ಸು" ಎಂಬುದು ಸರ್ವವಿಧಿತ. ಏಕೆಂದರೆ, ನಮ್ಮ ಮನಸ್ಸಿನಲ್ಲಿ ಒಂದು ವಸ್ತು, ನೋಡಿದ ಸ್ಥಳ, ಕಾಡುವ ಹುಡುಗಿ, ಬೇಡುವ ದೇವರು ಮೊದಲಾದವುಗಳನ್ನು ಕಲ್ಪಿಸಿಕೊಂಡು ಮನಸ್ಸನ್ನು ಹರಿಯಬಿಟ್ಟರೆ ಅಥವಾ ಅಂದುಕೊಂಡರೆ ಸಾಕು, ನಮ್ಮ ಸ್ಮೃತಿಯೊಳಗೆ ಅವುಗಳ ಚಿತ್ರಣ ಹಾದು ಹೋಗಿ ಕಣ್ಣೆದುರೇ ಬಂದಂತೆ ಭಾಸವಾಗುವುದು ಸೃಷ್ಟಿಯ ಅದ್ಭುತ ಕೊಡುಗೆಯಾಗಿದೆ. ಇದೇ ಮನಸ್ಥಿತಿಯ ಈ ಸಾಮರ್ಥ್ಯವನ್ನು ಬಳಸಿಕೊಂಡೇ ಇಂದು ನಾವೆಲ್ಲರೂ ಅಪಾರವಾದ ಜ್ಞಾನವನ್ನು, ಅದರೊಳಗೆ ಜೀವನ ಸೊಬಗನ್ನೂ … Read more

ಅಕ್ಕಿ ಭಾಗ್ಯ….: ರಾಘವೇಂದ್ರ ತೆಕ್ಕಾರ್

ನನಗೆ ದೋಸೆ, ಇಡ್ಲಿ, ಕಡುಬು ಈ ತರದ ಅಕ್ಕಿತಿಂಡಿಗಳೆಂದರೆ ಪಂಚ ಪ್ರಾಣ. ಬೆಳಿಗ್ಗಿನ ಉಪಹಾರಕ್ಕೆ ಈ ಚೌ ಚೌ ಬಾತ್, ಬೇಳೆ ಬಾತ್,ಪೂರಿ, ಪಲಾವು, ರೈಸ್ ಬಾತ್ ಇವುಗಳೆಲ್ಲ ಅಷ್ಟಕಷ್ಟೆ. ಏನಿದ್ದರೂ ಅಕ್ಕಿ ರುಬ್ಬಿ ಮಾಡಿದ ತಿಂಡಿಗಳತ್ತಲೆ ನನ್ನೊಲುಮೆ. ಅಪರೂಪಕ್ಕೆ ಅನ್ನವನ್ನು ಲಿಂಬೂ ನೀರು ಹಿಂಡಿದ ಈರುಳ್ಳಿ ವಗ್ಗರಣೆಗೆ ಬೆರೆಸಿದ ಚಿತ್ರಾನ್ನ ತರದೆಂತದ್ದನ್ನೊ ತಿನ್ನುವದು ಇದೆ.ಈ ನನ್ನ ಚಪಲ ನನ್ನ ಮನೆಯಾಕೆಗೆ ನುಂಗಲಾರದ ತುತ್ತು. ಆ ಮಿಕ್ಸಿಯಲ್ಲಿ ಗಿರ ಗಿರ ಸದ್ದು ಮಾಡಿಸುತ್ತಾ ಅಕ್ಕಿ ರುಬ್ಬ ಬೇಕಾದುದು … Read more

ಪುಣೇಕರರು ಹಾಗೂ ಅವರ ಆಂಗ್ಲ ಶ್ರೀರಾಮಾಯಣ ದರ್ಶನಂ: ಶ್ರೀನಿವಾಸ ದೇಸಾಯಿ

ಶಂಕರ ಮೊಕಾಶಿ ಪುಣೇಕರ ಕನ್ನಡ ಸಾಹಿತ್ಯದ ವಿಶಿಷ್ಟ ವ್ಯಕ್ತಿ. ಎರಡು ಅಡ್ಡಹೆಸರು ಪಡೆದವರು, ಮಾತೃಭಾಷೆ ಕನ್ನಡ ಹಾಗೂ ವಿಶ್ವಭಾಷೆ ಆಂಗ್ಲಭಾಷೆ ಎರಡರಲ್ಲೂ ಪ್ರತಿಭಾನ್ವಿತರು. ದ್ವಿಭಾಷಾ ಸಾಹಿತಿ ಎಂದು ಪ್ರಸಿದ್ಧರು. ಹಾಗೇ ದೇವಭಾಷೆ ಸಂಸ್ಕೃತವೂ ಚೆನ್ನಾಗಿ ಬರುತ್ತಿತ್ತು. ಪುಣೇಕರರ ಬದುಕಿನ ಪಥವಂತೂ ಅವರೇ ಹೇಳಿಕೊಂಡಂತೆ, ಕಾರವಾನ್(Carvan)ತರಹದ್ದಾಗಿದೆ. ಬಾಲ್ಯದಿಂದಲೂ ಜೀವಕ್ಕೆ ಅಂಟಿಗೊಂಡ ಓದಿನ ಗೀಳು ಬದುಕಿನ ಅಂತ್ಯದವರೆಗೆ ಸಾಗಿತ್ತು. ಬಿ.ಎಂ.ಶ್ರೀ., ಪ್ರೊ. ಮೆನಜಿಸ್, ಡಾ. ಗೋಕಾಕರಂತಹ ಶ್ರೇಷ್ಠ ಶಿಕ್ಷಕರ ಅಡಿಯಲ್ಲಿ ಕಾಲೇಜು ಶಿಕ್ಷಣ ನಡೆದು, ಎಂ.ಎ. (ಇಂಗ್ಲಿಷ್) ಹಾಗೂ ಯೇಟ್ಸ್ … Read more

ಅಮ್ಮನ ನೆನಪಿನ ಧಾರೆ: ಮಾಲಾ

ಅಮ್ಮನ ನೆನಪು, ಸಂಪುಟ ೧,  ಸಂಪಾದನೆ: ಚಂದ್ರಕಾಂತ ವಡ್ಡು,  ಅಂಕುರ ಪ್ರಕಾಶನ, ನಂ. ೧೧೪೮, ೧ನೇ ಮಹಡಿ,  ೨ನೇ ಅಡ್ಡರಸ್ತೆ, ಪಡುವಣ ರಸ್ತೆ,  ಮೈಸೂರು ೫೭೦೦೨೩,  ಪುಟಗಳು ೨೦೦,  ಬೆಲೆ ರೂ. ೧೫೦ ಮಕ್ಕಳ ಪ್ರಪಂಚದಲ್ಲಿ ಮೊದಲಿಗೆ ಅಮ್ಮನಿಗೇ ಸ್ಥಾನ. ಅಮ್ಮ ಎಂಬ ಪದವೇ ಸಾಕು ನಮಗೆ ಹರುಷ ತರಲು.  ಎಲ್ಲ ಮಕ್ಕಳಿಗೂ ಅಮ್ಮನ ನೆನಪು ಅವಳಿಲ್ಲದಿರುವಾಗಲೇ ಹೆಚ್ಚು ಕಾಡುತ್ತದೆ ಎಂದು ನನಗನಿಸುತ್ತದೆ. ಈ ಹೊತ್ತಗೆಯಲ್ಲಿ ೩೬ ಜನ ಮಕ್ಕಳು ಅವರ ತಾಯಿ ಬಗ್ಗೆ ತಮ್ಮ ನೆನಪನ್ನು … Read more

‘ಜಾಲದಲ್ಲಿ ಸಮಾನತೆ’ (ಭಾಗ 2): ಜೈಕುಮಾರ್.ಹೆಚ್.ಎಸ್

ಇಲ್ಲಿಯವರೆಗೆ ನಂತರದ ದಿನಗಳಲ್ಲಿ ಇಂಟರ್ ನೆಟ್ ನ ವಿನ್ಯಾಸ ರಚನೆ ಕೂಡ ಬದಲಾವಣೆಗೊಂಡಿದೆ. ಈ ಮುಂಚಿನ ಕೇಂದ್ರೀಕೃತ ಸರ್ವರ್ ಗಳು ಮತ್ತು ನೋಡ್ ಗಳಿಲ್ಲದ, ಪ್ರತಿಯೊಬ್ಬರೂ ಪರಸ್ಪರ ನೇರವಾಗಿ ಕಂಪ್ಯೂಟರಿಗೆ ಸಂಪರ್ಕ ಮಾಡಿಕೊಳ್ಳುವ ವಿನ್ಯಾಸ ರಚನೆಯ ಸ್ಥಳದಲ್ಲಿ ಇಂದು ಬಳಕೆದಾರರು ಇಂಟರ್ನೆಟ್ ದೈತ್ಯ ಕಂಪನಿಗಳ ಕೇಂದ್ರೀಕೃತ ಸರ್ವರ್ ಗಳನ್ನು ಅವಲಂಬಿಸುತ್ತಿದ್ದಾರೆ. ಇದನ್ನೇ ಕ್ಲೌಡ್ ಕಂಪ್ಯೂಟಿಂಗ್ ಎಂದು ಕರೆಯುವುದು. ಇಂಟರ್ ನೆಟ್ ನ ಸ್ವರೂಪದಲ್ಲಾಗಿರುವ ಈ ಮೂಲಭೂತ ಬದಲಾವಣೆಯು ಜಾಗತಿಕ ಇಂಟರ್ನೆಟ್ ಕಂಪನಿಗಳ ಏಳಿಗೆಯ ಜೊತೆ ಜೊತೆಗೇ ನಡೆದಿದೆ.  … Read more

ಸ್ವಂತೀ(selpfie): ಪ್ರಶಸ್ತಿ

ಈ ಸ್ವಂತೀ ಅಥವಾ ಸೆಲ್ಪೀ ಅನ್ನೋ ಪದದ ಬಗ್ಗೆ ಕೇಳದ ಸಾಮಾಜಿಕ ತಾಣಗಳ ಬಳಕೆದಾರರು ಇಲ್ಲವೇ ಇಲ್ಲ ಅಂದರೆ ತಪ್ಪಾಗಲಾರದೇನೋ . ಗೆಳೆಯನೊಬ್ಬ ಅಥವಾ ಗೆಳತಿಯೊಬ್ಬಳು ನಮ್ಮ ಪಟ ತೆಗೆಯೋದಕ್ಕೆ ಕಾಯೋ ಬದಲು ನಮ್ಮ ಚಿತ್ರ ನಾವೇ ತೆಗೆದುಕೊಳ್ಳೋದಕ್ಕೆ  ಸೆಲ್ಫೀ ಅಥವಾ ಸ್ವಂತೀ(ಕೃಪೆ: ಮುಖಹೊತ್ತುಗೆಯ "ಪದಾರ್ಥ ಚಿಂತಾಮಣಿ" ಗುಂಪು)ಅಂತ ಕರೆಯುತ್ತಾರೆ ಎಂಬುದು ನಿಮಗೆಲ್ಲಾ ಗೊತ್ತಿರುವಂತದ್ದೇ ಆದರೂ ಆ ಪದವನ್ನು ಮೊದಲು ಹುಟ್ಟುಹಾಕಿದ್ದು ಯಾರಂತ ಗೊತ್ತೇ ? ಆಕ್ಸವರ್ಡ ಪದಕೋಶದಿಂದ ೨೦೧೩ರ "ವರ್ಷದ ಪದ" ಎಂಬ ಬಿರುದು ಪಡೆದ … Read more

ಭಾರತೀಯ ಸನ್ನಿವೇಶದಲ್ಲಿ ಹವಾಮಾನ ಬದಲಾವಣೆ – ಒಂದು ನೋಟ: ಅಖಿಲೇಶ್ ಚಿಪ್ಪಳಿ

ಶ್ರೀ ನಾಗರಾಜ್ ಅಡ್ವೆಯವರು ಇಡೀ ಭಾರತವನ್ನು ಸುತ್ತಾಡಿ, ಹವಾಮಾನ ಬದಲಾವಣೆಯಿಂದಾದ ವ್ಯತ್ಯಾಸಗಳನ್ನು ಗುರುತಿಸಿ, ದಾಖಲಿಸಿದ್ದಾರೆ. ಇದೇ ವರ್ಷದ ಡಿಸೆಂಬರ್‍ನಲ್ಲಿ ಪ್ಯಾರೀಸ್‍ನಲ್ಲಿ ನಡೆಯಲಿರುವ ಜಾಗತಿಕ ಹವಾಮಾನ ವೈಪರೀತ್ಯ ಸಮಾವೇಶದ ಹೊತ್ತಿನಲ್ಲಿ, ಈ ಮಾಹಿತಿಗಳು ಅತ್ಯಂತ ಮಹತ್ವ್ತಪೂರ್ಣವೆನಿಸುತ್ತದೆಯಾದ್ದರಿಂದ ಇಲ್ಲಿ ಅವರು ಬರೆದ ಕಿರುಪುಸ್ತಕದ ಭಾವಾನುವಾದವನ್ನು ನೀಡಲಾಗಿದೆ. ಗುಜರಾತಿನಲ್ಲಿ ಏನು ಹೇಳಿದರು? ಮೂರು ವರ್ಷಗಳ ಹಿಂದೆ ಪೂರ್ವ ಗುಜರಾತಿ ಮೆಕ್ಕೆಜೋಳ ಬೆಳೆಯುವ ರೈತರನ್ನು ಮಾತನಾಡಿಸಲಾಯಿತು. ಕೆಲವು ವರ್ಷಗಳಿಂದ ಬಿಸಿಯಾಗುತ್ತಿರುವ ಚಳಿಗಾಲದಿಂದಾಗಿ, ಅಲ್ಲಿ ಇಬ್ಬನಿ ಬೀಳುವುದು ತೀವ್ರವಾಗಿ ಕಡಿಮೆಯಾಗಿದೆ. ಅತ್ಯಂತ ಕಡಿಮೆ ನೀರು … Read more

ಪ್ರೀತಿಯ ಯಾನಕ್ಕೆ: ವಸಂತ ಬಿ ಈಶ್ವರಗೆರೆ

ಪ್ರೀತಿಯ ಯಾನಕ್ಕೆ ಏರಿಳಿತಗಳ ಓಟ, ನನ್ನವಳು ಜೊತೆಗಿದ್ದರೇ ಅದ ಮರೆವ ಆಟ ನನ್ನ(ಅ)ವಳ ಪ್ರೀತಿಗೆ ಇಂದು 8 ವರ್ಷಗಳ ‘ವಸಂತ’. ಎಂದೂ, ಯಾವತ್ತೂ ದೂರಾಗಿದ್ದಿಲ್ಲ. ಭಾವನೆಗಳ ತೋಯ್ದಾಟದಲ್ಲಿ ನಾವಿಬ್ಬರೂ ಎಂದು ಒಂದೆಂಬ ಭಾವನೆ. ಕಲ್ಪನೆಯ ಗೂಡಲ್ಲಿ ಜೋತೆಯಾಗಿ ಹುಟ್ಟಿದ ಹಕ್ಕಿಗಳೆಂಬ ಭಾವನೆ ನಮ್ಮೊಳಗೆ.  ಅದೇಕೋ ಮುನಿಸು ನಮ್ಮಲ್ಲಿಲ್ಲ, ಪ್ರೀತಿಯೇ ನಮ್ಮೊಳಗೆಲ್ಲ. ನೋಡಿದ ಎಲ್ಲರೂ ಕಲಿಯುಗದ ಅಮರ ಪ್ರೇಮಿಗಳು ಎಂಬ ಭಾವನೆಯಿಂದಲೇ ನಮ್ಮನ್ನ ಕಂಡವರು. ಎಲ್ಲರ ಹಾಗೇ ನಾವು ಸುತ್ತಾಟ, ತಿರುಗಾಟ ಮಾಡಿದ್ದು ಅಲ್ಪವೇ, ಅದರೇ ಮನಸ್ಸೆಂಬ ಭಾವನೆಯ … Read more

ಸುರಿದದ್ದು ಮಳೆ, ಕರಗಿದ್ದು ಒಡಲು: ಸಂಗೀತ ರವಿರಾಜ್

ಇಳೆಯು ಬಯಸಿದ ಪ್ರೇಮ ಕಾವ್ಯವೇ ಮಳೆ ಎಂಬುದು ಅವಳಿಗಷ್ಟೆ ತಿಳಿದಿದೆ. ಈ ಕಾವ್ಯಕ್ಕೆ ನದಿ, ತೊರೆಯ ಹಂಗಿಲ್ಲ. ಇಳೆಯಲ್ಲೇ ಇಂಗಿ ಅಲ್ಲೇ ಒರತೆಯಾಗುವ ಹುಮ್ಮಸ್ಸು ಮಾತ್ರ. ಸುಮಧುರ ಮನಸ್ಸಿಗೆ, ಸುಮಧುರ ಕಾವ್ಯದ ಹಿತ ಕೊಡುವ ಮಳೆ ಅವನಿಯಂತೆ ಅಚಲ. ಭೋರ್ಗರೆಯುತ್ತಾ ಸುರಿಯುವ ನಿನಾದಕ್ಕೆ ಮನದ ಸಂಗೀತ ಎಲ್ಲೆ ಮೀರಿ ಹಾಡುತ್ತಿದೆ. ಆ ರಾಗಕ್ಕೆ ಸ್ವರಗಳು ಶ್ರುತಿಯ ಮೀಟುತ್ತಿದೆ. ಪದಗಳಿಲ್ಲದ ಆಲಾಪವೆಂದರೆ ಅದು ವರ್ಷಾಧಾರೆ ಎಂಬುದನ್ನು ಒಂದೇ ಕೊಡೆಯಡಿಯಲ್ಲಿ ನಡೆದಾಡಿದಾಗ ಉಸುರಿದ್ದು ಈಗ ನೆನಪುಗಳು. ಪದಪದಗಳ ಪಲ್ಲವಿ ಕಟ್ಟಿ … Read more

ಮೂವರ ಕವನಗಳು: ರಾಘವ ಹರಿವಾಣಂ, ಸಿಪಿಲೆನಂದಿನಿ, ಜಾನ್ ಸುಂಟಿಕೊಪ್ಪ

ಇರುವೆ ಇರುವೆಯೇ ಮನುಜರಿಗೆ ನೀ ಮಾದರಿಯಾಗಿರುವೆ ಕಾರ್ಯಕೂ ಮೊದಲು ಧ್ಯೇಯವನು ನಿರ್ಧರಿಸುವೆ ಹಿಡಿದೊಂದು ಕಾರ್ಯದಿ ಶಿಸ್ತಿನ ಸಿಪಾಯಿಯಾಗುವೆ ಗುರಿತಪ್ಪದೆ ಮುಂದ್ಸಾಗುವ ಛಲದಂಕಮಲ್ಲ ನೀನಾಗುವೆ   ಕಣಕಣವ ಸೇರಿಸುತ ಮಹಾರಾಶಿಯ ಕೂಡಿಸುವೆ ಆಳರಸನಾಗುತ ಗುಂಪನು ಪಥದಿ ಮುಂದೊಯ್ಯುವೆ                                                           … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಕಲಾವಿದರ ಕತೆ ಸುಲ್ತಾನ ಶೋಯೆಬ್‌ನ ಸಮ್ಮುಖದಲ್ಲಿ ಚೀನೀ ಕಲಾವಿದರ ಹಾಗೂ ಗ್ರೀಕ್‌ ಕಲಾವಿದರ ಪುಟ್ಟ ಗುಂಪುಗಳ ನಡುವೆ ಯಾರಲ್ಲಿ ಮೇಲ್ದರ್ಜೆಯ ಕಲಾ ಕುಶಲತೆ ಇದೆ ಎಂಬುದರ ಕುರಿತು ಜಗಳವಾಯಿತು. ಮಹಾನ್‌ ಕುಶಲತೆಗಳು ಅಧಿಕ ಸಂಖ್ಯೆಯಲ್ಲಿ ತಮ್ಮಲ್ಲಿ ಇವೆಯೆಂದು ಚೀನೀ ಕಲಾವಿದರು ಘೋಷಿಸಿದರು, ತಾವು ಕಲೆಯ ಮೇಲೆ ಪ್ರಭುತ್ವ ಸಾಧಿಸಿರುವುದಾಗಿ ಗ್ರೀಕ್‌ ಕಲಾವಿದರು ಘೋಷಿಸಿದರು. ಅವೆರಡೂ ಗುಂಪುಗಳ ನಡುವೆ ಸ್ಪರ್ಧೆಯೊಂದನ್ನು ಏರ್ಪಡಿಸುವುದರ ಮೂಲಕ ವಿವಾದವನ್ನು ಪರಿಹರಿಸಲು ಸುಲ್ತಾನ ನಿರ್ಧರಿಸಿದ. ಅರಮನೆಯ ಸಮೀಪದಲ್ಲಿ ಇದ್ದ ಬೆಟ್ಟದ ತುದಿಯಲ್ಲಿ ಎರಡು … Read more

ಹೀಗೊಂದು ವಾರ್ತಾಲಾಪ..: ಅನಿತಾ ನರೇಶ್ ಮಂಚಿ

ಕೊಕ್ಕೋ ಹಣ್ಣಿನ್ನು ಒಡೆದು ಬೀಜ ಬೇರ್ಪಡಿಸುವ ಕೆಲಸ ಶುರುವಾಗಿತ್ತು. ನಾನೂ ಹೋಗಿ ಸೇರಿಕೊಂಡೆ. ಇವರು ಹಣ್ಣುಗಳನ್ನು ಒಡೆದು ರಾಶಿ ಹಾಕಿದರೆ ನಾನು, ಮಾವ, ಮತ್ತು ನಮ್ಮ ತೋಟದ ಸಹಾಯಕರಾದ ವಿನ್ಸಿ, ಸುಬ್ಬಪ್ಪ, ಇಸುಬು ಎಲ್ಲರೂ ಸೇರಿ ಒಳಗಿನ ಬೀಜ ಬೇರ್ಪಡಿಸಿ ದೊಡ್ಡ ಕಟಾರ ( ಹಿಡಿ ಇರುವ ದೊಡ್ಡದಾದ ಪಾತ್ರೆ) ಕ್ಕೆ ತುಂಬುತ್ತಿದ್ದೆವು. ಸಮಯ ಬೇಡುವಂತಹ ಕೆಲಸ ಇದಾದ ಕಾರಣ ಹೊತ್ತು ಹೋಗಲು ಏನಾದರೊಂದು ಟಾಪಿಕ್ ಇದ್ದೇ ಇರುತ್ತಿತ್ತು.  ‘ ಮೊನ್ನೆ ಲಾರೆನ್ಸ್ ಬೈಕಿನಲ್ಲಿ ಹೋಗ್ತಾ ಇದ್ದ … Read more

ಅಂತರ್ಜಾಲದಲ್ಲಿ ದೈತ್ಯ ಕಂಪನಿಗಳು ಮತ್ತು ಬಳಕೆದಾರರ ನಡುವೆ ಸಂಘರ್ಷ: ಜೈಕುಮಾರ್.ಹೆಚ್.ಎಸ್

'ಜಾಲದಲ್ಲಿ ಸಮಾನತೆ'ಗಾಗಿ ನಡೆಸುವ ಹೋರಾಟವು ಪ್ರಜಾಪ್ರಭುತ್ವದ ಉಳಿವಿಗಾಗಿ ನಡೆಯುವ ಯುದ್ದಗಳಲ್ಲೇ ಪ್ರಮುಖವಾದದ್ದು. – ರಾಬರ್ಟ್ ಮ್ಯಾಚೆಸ್ನಿ, ಅಮೇರಿಕಾದ ಪ್ರಸಿದ್ದ ಮಾಧ್ಯಮ ಚಿಂತಕ ಜಾಲದಲ್ಲಿ ಸಮಾನತೆ ಕುರಿತು ಚರ್ಚಿಸುವ ಮುನ್ನ ಒಂದೆರಡು ಸರಳ ಉದಾಹರಣೆಗಳ ಮೂಲಕ ಅದನ್ನು ಅರ್ಥ ಮಾಡಿಕೊಳ್ಳಲು ಯತ್ನಿಸೋಣ.  …ದೀರ್ಘ ಪ್ರಯಾಣ ನಡೆಸುವ ವೇಳೆ ಬಹುತೇಕ ಎಲ್ಲ ಬಸ್ಸುಗಳು ಈಗಾಗಲೇ ನಿಗಧಿಮಾಡಿಕೊಂಡಿರುವ ಹೋಟೆಲ್ ಗಳ ಬಳಿಯೇ ನಿಲ್ಲಿಸುತ್ತವೆ. ಅವುಗಳ ನಡುವೆ ಮೊದಲೇ ಕೊಡುಕೊಳುವಿಕೆಯ ಒಪ್ಪಂದವಾಗಿರುತ್ತದೆ. ಆ ಹೋಟೆಲ್ ಗಳು ಪ್ರಯಾಣಿಕರಿಗೆ ಇಷ್ಟವಿದೆಯೋ ಇಲ್ಲವೋ, ಅವುಗಳ ಗುಣಮಟ್ಟ ಚೆನ್ನಾಗಿದೆಯೋ … Read more

ಕಣ್ಣೀರು ಜಾರಿದ ಆ ಕ್ಷಣ…..: ಚೈತ್ರಾ ಎಸ್.ಪಿ.

ಅವತ್ತಿನ ದಿನಾಂಕ ನೆನಪಿಲ್ಲ. ನೆನಪಿಟ್ಕೊಬೇಕು ಅಂತ ಯಾವತ್ತು ಅನಿಸಿಲ್ಲ. ಆದರೆ ಈಗದರ ಅವಶ್ಯಕತೆ ಇತ್ತು ಅಂತ ಅನಿಸ್ತಾ ಇದೆ. ಯಾಕಂದ್ರೆ ಹೀಗೊಂದು ಘಟನೆಯ ಬಗ್ಗೆ ಬರೀತೀನಿ ಅಂತ ನನ್ಯಾವತ್ತು ಅಂದ್ಕೊಂಡಿರ್ಲಿಲ್ಲ. ಆದರೆ ಬರೀಬೇಕು ಅಂತ ತುಂಬಾ ಅನ್ನಿಸಿ ಬಿಡ್ತು….. ಯಾಕಿಷ್ಟು ಪೀಠಿಕೆ ಅಂತ ಯೋಚ್ನೆ ಮಾಡ್ತ ಇದ್ದೀರ ?? ತುಂಬಾ ಉದ್ದ ಎಳೀದೆ ಆರಂಭಿಸ್ತೀನಿ….. ನಮ್ಮನೇಲೊಬ್ಬ ಪುಟ್ಟ ಪಾರ್ಥ. ಹೊಟ್ಟೆಯೊಳಗಿದ್ದಾಗಿನಿಂದ್ಲೇ ನಮಗೆ ಸಂಭ್ರಮ ನೀಡ್ತ ಇದ್ದ ಪೋರ. ಹತ್ತು-ಹದಿನೈದು ವರ್ಷಗಳ ನಂತರ ಮಗುವಿನ ಅಳು-ಕೇಕೆ, ಪುಟ್ಟ-ಪುಟ್ಟ ಕಾಲ್ಗಳ … Read more

ಪರದೆ ಮೆ ರೆಹೆನೆ ದೋ: ಅಮರ್ ದೀಪ್ ಪಿ.ಎಸ್.

ಕಣ್ ಕಣ್ಣ ಸಲಿಗೆ….  ಸಲಿಗೆ ಅಲ್ಲ ಸುಲಿಗೆ…..  ನೀನಿನ್ನು ನನಗೆ ನನಗೆ…………….. ನನ್ನನಗೇ……….. ಆರು ತಿಂಗಳಿಂದ  ಹೀಗೇ ಬಿಡದೇ ಕಾಡುತ್ತಿದ್ದಾಳೆ. ಅದ್ಯಾಕೆ ನಾನು ಇವಳ ಹಿಂದೆ ಬಿದ್ದೆನೋ ಏನೋ.  ಇವಳ ಸಲುಗೆ, ಸರಸ ಅತಿಯಾಗಿದೆ.   ಇವಳೇ ಮೊದಲೇನಲ್ಲ.  ಸರಿಸುಮಾರು ಒಂಭತ್ತು ವರ್ಷಗಳಿಂದ  ಇಂಥವಳ ಹಲವರ ಸಹವಾಸಕ್ಕೆ ಬಿದ್ದು ನಾನು ನಾನಾಗಿ ಉಳಿದಿಲ್ಲ.  ಆದರೆ, ನಾನು ಈ ಹಿಂದೆ ಬೆನ್ನು ಬಿದ್ದ ಯಾರೂ ಈ ಮಟ್ಟದಲ್ಲಿ ಕಾಡಿದ್ದಿಲ್ಲ.  ನನ್ನ ದುರಾದೃಷ್ಟ ನೋಡಿ ಇಂಥ ರತಿಯರೊಂದಿಗೆ “ಸರಸ” ಸಲ್ಲಾಪವಾಡತೊಡಗಿದ್ದು … Read more

ಇವನು ಬದುಕಲೇ ಬೇಕು: ಜೆ.ವಿ.ಕಾರ್ಲೊ, ಹಾಸನ.

ಇಂಗ್ಲಿಷಿನಲ್ಲಿ: ರೊಆಲ್ಡ್ ದಾಹ್ಲ್ ಕನ್ನಡಕ್ಕೆ: ಜೆ.ವಿ.ಕಾರ್ಲೊ, ಹಾಸನ. ‘ಚಿಂತೆ ಮಾಡುವ ಅವಶ್ಯಕತೆಯೇ ಇಲ್ಲ. ಎಲ್ಲಾ ಸರಿಯಾಗಿದೆ.’ ವೈದ್ಯರು ಹೇಳುತ್ತಿದ್ದರು.. ಅವಳಿಗೆ ವೈದ್ಯರ ಸ್ವರ ಗಟ್ಟಿಯಾಗಿ, ಬಹಳ ದೂರದಿಂದೆಂಬಂತೆ ಕೂಗಿ ಹೇಳಿದಂತೆ ಭಾಸವಾಯಿತು. ‘ನಿನಗೆ ಗಂಡು ಮಗು ಹುಟ್ಟಿದ್ದಾನೆ!’ ವೈದ್ಯರು ಹೇಳಿದರು. ‘ಏನು?’ ಆಕೆ ಪ್ರಯಾಸದಿಂದ ಕೇಳಿದಳು.  ‘ಗಂಡು ಮಗು, ಗಂಡು ಮಗು. ಈಗ ಕೇಳಿಸಿತೇನು?’ ‘ಮಗು ಹೇಗಿದೆ ಡಾಕ್ಟರ್?’ ‘ಚೆನ್ನಾಗಿದೆ. ಚೆನ್ನಾಗಿದೆ.’ ‘ನಾನು ನೋಡಬಹುದೆ, ಡಾಕ್ಟರ್?’ ‘ಖಂಡಿತಾ, ಖಂಡಿತಾ. ಇನ್ನೊಂದು ಗಳಿಗೆ..’ ‘ಮಗು ಖಂಡಿತವಾಗಿಯೂ ಆರೋಗ್ಯದಿಂದೆಯಾ ಡಾಕ್ಟರ್?’ … Read more

ಕ್ಯಾನ್ಸರ್ ಟ್ರೇನ್ – ಭಟಿಂಡಾ ಟೂ ಬಿಕನೇರ್: ಅಖಿಲೇಶ್ ಚಿಪ್ಪಳಿ

ಗೋಧಿಯ ಕಣಜವಾದ ಪಂಜಾಬ್ ರಾಜ್ಯದ ಕ್ಯಾನ್ಸರ್ ಟ್ರೇನ್ ಕತೆ ಗೊತ್ತಿರಬಹುದು. ಆದರೂ ಕೊಂಚದಲ್ಲಿ ಹೇಳಿಬಿಡುತ್ತೇನೆ. ನಮ್ಮಲ್ಲಿ ಹೇಗೆ ಅಕ್ಕಿ ಮುಖ್ಯ ಆಹಾರವೋ ಹಾಗೆ ಉತ್ತರ ಭಾರತದಲ್ಲಿ ಗೋಧಿ ಮುಖ್ಯ ಆಹಾರ. ಅಲ್ಲಿ ಅಕ್ಕಿಯನ್ನು ಬಹು ಅಪರೂಪಕ್ಕೆ ಉಪಯೋಗಿಸುತ್ತಾರೆ. ಅದರಲ್ಲೂ ಡಾಭಾಗಳು ಮೈದಾ ಹಿಟ್ಟಿನ ರೋಟಿಯನ್ನೇ ಮಾಡುತ್ತಾರೆ. ಮೈದಾಹಿಟ್ಟು ತಯಾರಾಗುವುದು ಗೋಧಿಯಿಂದಲೇ. ಶಕ್ತಿಯುತ, ಹೇರಳ ಪ್ರೊಟೀನ್ ಮತ್ತು ನಾರಿನಂಶವಿರುವ ಗೋಧಿಯ ಮೇಲಿನ ಭಾಗ ಬೂಸ ಎಂದು ಕರೆಯಲ್ಪಟ್ಟು ಜಾನುವಾರುಗಳಿಗೆ ಆಹಾರವಾಗುತ್ತದೆ. ಹಾಗೆಯೇ ಗೋಧಿ ರವೆ, ಹಿಟ್ಟು ಆಮೇಲೆ ಗೋಧಿಯ … Read more

ಬರಹಗಾರರ ಭಾವವೂ, ಭಾಷೆಯ ನೋವೂ: ಪ್ರಶಸ್ತಿ

ಪೇಪರ್ರಲ್ಲಿ, ಇಂಟರ್ನೆಟ್ಟಲ್ಲಿ, ಮೊಬೈಲಲ್ಲಿ ಏನೋ ಓದುತ್ತೇವೆ, ಇನ್ನೇನೋ ನೋಡುತ್ತೇವೆ, ಮತ್ತಿನ್ನೇನೋ ಕೇಳುತ್ತೇವೆ, ಸಮಾಜದಲ್ಲಿನ ಆಗುಹೋಗುಗಳಲ್ಲಿ ಒಂದಾಗಿ ಏನೇನೋ ಅನುಭವಿಸುತ್ತಿರುತ್ತೇವೆ. ಈ ಘಟನೆಗಳಗಳಲ್ಲಿ ಯಾವುದೋ ಒಂದು ಇನ್ಯಾವುದೋ ಭಾವವನ್ನು ಸ್ಪುರಿಸಿರುತ್ತದೆ. ಹಿಂದಿನ ಓದಿನಿಂದ ಪ್ರಭಾವಿತರಾಗಿರುವಂತೆಯೇ ಆ ಕ್ಷಣಕ್ಕೆ ಹುಟ್ಟಿದ ಸ್ವಂತದ ಭಾವಕ್ಕೊಂದು ಅಕ್ಷರರೂಪ ಕೊಡಬೇಕೆಂಬ ಹಂಬಲವೂ ಹುಟ್ಟಬಹುದು. ಸರಿ, ಬರೆಯುತ್ತೇನೆ. ಆದರೆ ಬರೆಯುವುದು ಎಲ್ಲಿ ಎಂಬುದು ಆಗ ಮೂಡೋ ಮೊದಲ ಪ್ರಶ್ನೆ. ಶಾಲಾ ಕಾಲೇಜು ದಿನಗಳಲ್ಲಾದರೆ ಪುಸ್ತಕದ ಕೊನೆಯ ಪೇಜಿನಲ್ಲೋ, ಸಿಕ್ಕ ಖಾಲಿ ಹಾಳೆಯಲ್ಲೋ ಬರೆದು ಗೆಳೆಯರಿಗೆ ತೋರಿಸಿ … Read more

ಮೂವರ ಕವನಗಳು: ಬಿದಲೋಟಿ ರಂಗನಾಥ್, ರಾಜಹಂಸ, ಗ಼ಂಗಾಧರ ಬೆನ್ನೂರ

ಕಾಡೋ ಕುದುರೆಯ ಕನಸು ದಯೆಗೆ ಅಂಕುಶವಿಟ್ಟ ಪ್ರೀತಿಯೇ ಜಾತಿಯ ಬೆನ್ನ ಬಿದ್ದು ಯಾಕೋದೆ? ಕಣ್ಣ ನೀರಲಿ ಸಾವಿರ ಕಣ್ಣುಗಳ ಹುಟ್ಟಿಸಿ. ಬದುಕು ಜಿಂಕೆಯೋಟ ಮರೆವು ಮಂಗನಾಟ ಕುಲಕಿ ಕುಲಕಿ ಬೆರತ ಆ ನೋಟ ರೆಂಬೆ ಕೊಂಬೆಯಾಗಿ ಚಾಚಿದೆ ವರುಷ ವರುಷಗಳೇ ಸಂದರು. ನೀನಿಟ್ಟ ಹೆಜ್ಜೆ ಮಾತಿನಲಿ ಕಥೆಯಾಗಿದ್ದು ಅಲ್ಪ ಕಾವ್ಯವಾಗಿ ಕಾಡಿದ್ದೇ ಗಹನ ಕಾಡೋ ಕುದುರೆಯ ಕನಸು ಜೂಜಾಟವಾಗಿದ್ದು ಸರಿಯೆ? ಮೋರಿ ಮೇಲೆ ಕೂರಿಸಿ ಮಾಡದ ತಪ್ಪಿಗೆ ಹಿಂಡುವ ನೆನಪ ಬೆಂಬಲಿಸಿದ್ದು ಹಿತವೆ? ಒಂಟಿ ಮರದ ಮೇಲೆ … Read more

ನೆನಪು: ವೇಣುಗೋಪಾಲ್ ಹೆಚ್.

ಹೊಸ ಬದುಕು, ಹೊಸ ಊರು, ಹೊಸ ಗೆಳೆಯರು, ಎಲ್ಲವೂ ಹೊಸದೇ ಆದರೆ ನೆನಪುಗಳು………????                   ಹೀಗೆ ಮೊನ್ನೆ ಹುಟ್ಟಿದ ಊರಿಗೆ ಹೋಗಿದ್ದೆ ಆ ಜಾಗ, ಶಾಲೆ, ಮನೆ, ಗಿಡ-ಮರಗಳ ನೆನಪು ಹಾಗೆ ಕಣ್ಣಮುಂದೆ ಹಾಗೆ ಬಂದುಹೋದಂತಾಯಿತು….ಆ ಸೊಗಡಿನಲ್ಲಿ ಬೆಳೆದ ಎಲ್ಲರಿಗೂ ಆದ ಅನುಬವವೇ ಈ ನೆನಪು.. ಮೊದಲನೆಯದಾಗಿ ಆ ಮಲಗುವ ಅಟ್ಟ ಒಮ್ಮೆ ಕಣ್ಣು ಮುಚ್ಚಿದರೆ ಏಳುತಿದ್ದದ್ದು ಬೆಳೆಗ್ಗೆಯೆ ನಮ್ಮದು ಬೇರೆ ದೇಶದವರತರವಲ್ಲ ಅಪ್ಪ ಅಮ್ಮನ … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಬೋಹ್‌ಲುಲ್‌ ಮತ್ತು ಸೇತುವೆ ನದಿ ನೀರಿನ ಹರಿಯುವಿಕೆಯನ್ನು ನೋಡುತ್ತಾ ಒಂದು ಸೇತುವೆಯ ಮೇಲೆ ಕುಳಿತಿದ್ದ ಬೋಹ್‌ಲುಲ್‌. ರಾಜ ಅವನನ್ನು ನೋಡಿದ, ತಕ್ಷಣ ದಸ್ತಗಿರಿ ಮಾಡಿಸಿದ. ರಾಜ ಹೇಳಿದ, “ಸೇತುವೆ ಇರುವುದು ನದಿಯನ್ನು ದಾಟಲೋಸುಗ, ಅಲ್ಲಿಯೇ ಉಳಿದುಕೊಳ್ಳಲು ಅಲ್ಲ.” ಬೋಹ್‌ಲುಲ್ ಉತ್ತರಿಸಿದ, “ನೀವೊಮ್ಮೆ ನಿಮ್ಮನ್ನೇ ನೋಡಿಕೊಳ್ಳುವುದು ಒಳ್ಳೆಯದು. ಈ ಜೀವನಕ್ಕೆ ಹೇಗೆ ಅಂಟಿಕೊಂಡಿದ್ದೀರಿ ಎಂಬುದನ್ನೊಮ್ಮೆ ಗಮನಿಸುವುದು ಒಳ್ಳೆಯದು.” ***** ೨. ಬಾಸ್ರಾದ ಹಸನ್‌ನಿಗೆ ರಬಿ’ಆ ಳ ಉಡುಗೊರೆಗಳು ರಬಿ’ಆ ಅಲ್‌-ಅದವಿಯ್ಯಾ ಬಾಸ್ರಾದ ಹಸನ್‌ನಿಗೆ ಮೂರು ವಸ್ತುಗಳನ್ನು ಕಳುಹಿಸಿದಳು … Read more