ಕಣ್ಣೀರು ಜಾರಿದ ಆ ಕ್ಷಣ…..: ಚೈತ್ರಾ ಎಸ್.ಪಿ.

ಅವತ್ತಿನ ದಿನಾಂಕ ನೆನಪಿಲ್ಲ. ನೆನಪಿಟ್ಕೊಬೇಕು ಅಂತ ಯಾವತ್ತು ಅನಿಸಿಲ್ಲ. ಆದರೆ ಈಗದರ ಅವಶ್ಯಕತೆ ಇತ್ತು ಅಂತ ಅನಿಸ್ತಾ ಇದೆ. ಯಾಕಂದ್ರೆ ಹೀಗೊಂದು ಘಟನೆಯ ಬಗ್ಗೆ ಬರೀತೀನಿ ಅಂತ ನನ್ಯಾವತ್ತು ಅಂದ್ಕೊಂಡಿರ್ಲಿಲ್ಲ. ಆದರೆ ಬರೀಬೇಕು ಅಂತ ತುಂಬಾ ಅನ್ನಿಸಿ ಬಿಡ್ತು….. ಯಾಕಿಷ್ಟು ಪೀಠಿಕೆ ಅಂತ ಯೋಚ್ನೆ ಮಾಡ್ತ ಇದ್ದೀರ ?? ತುಂಬಾ ಉದ್ದ ಎಳೀದೆ ಆರಂಭಿಸ್ತೀನಿ….. ನಮ್ಮನೇಲೊಬ್ಬ ಪುಟ್ಟ ಪಾರ್ಥ. ಹೊಟ್ಟೆಯೊಳಗಿದ್ದಾಗಿನಿಂದ್ಲೇ ನಮಗೆ ಸಂಭ್ರಮ ನೀಡ್ತ ಇದ್ದ ಪೋರ. ಹತ್ತು-ಹದಿನೈದು ವರ್ಷಗಳ ನಂತರ ಮಗುವಿನ ಅಳು-ಕೇಕೆ, ಪುಟ್ಟ-ಪುಟ್ಟ ಕಾಲ್ಗಳ … Read more

ಪರದೆ ಮೆ ರೆಹೆನೆ ದೋ: ಅಮರ್ ದೀಪ್ ಪಿ.ಎಸ್.

ಕಣ್ ಕಣ್ಣ ಸಲಿಗೆ….  ಸಲಿಗೆ ಅಲ್ಲ ಸುಲಿಗೆ…..  ನೀನಿನ್ನು ನನಗೆ ನನಗೆ…………….. ನನ್ನನಗೇ……….. ಆರು ತಿಂಗಳಿಂದ  ಹೀಗೇ ಬಿಡದೇ ಕಾಡುತ್ತಿದ್ದಾಳೆ. ಅದ್ಯಾಕೆ ನಾನು ಇವಳ ಹಿಂದೆ ಬಿದ್ದೆನೋ ಏನೋ.  ಇವಳ ಸಲುಗೆ, ಸರಸ ಅತಿಯಾಗಿದೆ.   ಇವಳೇ ಮೊದಲೇನಲ್ಲ.  ಸರಿಸುಮಾರು ಒಂಭತ್ತು ವರ್ಷಗಳಿಂದ  ಇಂಥವಳ ಹಲವರ ಸಹವಾಸಕ್ಕೆ ಬಿದ್ದು ನಾನು ನಾನಾಗಿ ಉಳಿದಿಲ್ಲ.  ಆದರೆ, ನಾನು ಈ ಹಿಂದೆ ಬೆನ್ನು ಬಿದ್ದ ಯಾರೂ ಈ ಮಟ್ಟದಲ್ಲಿ ಕಾಡಿದ್ದಿಲ್ಲ.  ನನ್ನ ದುರಾದೃಷ್ಟ ನೋಡಿ ಇಂಥ ರತಿಯರೊಂದಿಗೆ “ಸರಸ” ಸಲ್ಲಾಪವಾಡತೊಡಗಿದ್ದು … Read more

ಇವನು ಬದುಕಲೇ ಬೇಕು: ಜೆ.ವಿ.ಕಾರ್ಲೊ, ಹಾಸನ.

ಇಂಗ್ಲಿಷಿನಲ್ಲಿ: ರೊಆಲ್ಡ್ ದಾಹ್ಲ್ ಕನ್ನಡಕ್ಕೆ: ಜೆ.ವಿ.ಕಾರ್ಲೊ, ಹಾಸನ. ‘ಚಿಂತೆ ಮಾಡುವ ಅವಶ್ಯಕತೆಯೇ ಇಲ್ಲ. ಎಲ್ಲಾ ಸರಿಯಾಗಿದೆ.’ ವೈದ್ಯರು ಹೇಳುತ್ತಿದ್ದರು.. ಅವಳಿಗೆ ವೈದ್ಯರ ಸ್ವರ ಗಟ್ಟಿಯಾಗಿ, ಬಹಳ ದೂರದಿಂದೆಂಬಂತೆ ಕೂಗಿ ಹೇಳಿದಂತೆ ಭಾಸವಾಯಿತು. ‘ನಿನಗೆ ಗಂಡು ಮಗು ಹುಟ್ಟಿದ್ದಾನೆ!’ ವೈದ್ಯರು ಹೇಳಿದರು. ‘ಏನು?’ ಆಕೆ ಪ್ರಯಾಸದಿಂದ ಕೇಳಿದಳು.  ‘ಗಂಡು ಮಗು, ಗಂಡು ಮಗು. ಈಗ ಕೇಳಿಸಿತೇನು?’ ‘ಮಗು ಹೇಗಿದೆ ಡಾಕ್ಟರ್?’ ‘ಚೆನ್ನಾಗಿದೆ. ಚೆನ್ನಾಗಿದೆ.’ ‘ನಾನು ನೋಡಬಹುದೆ, ಡಾಕ್ಟರ್?’ ‘ಖಂಡಿತಾ, ಖಂಡಿತಾ. ಇನ್ನೊಂದು ಗಳಿಗೆ..’ ‘ಮಗು ಖಂಡಿತವಾಗಿಯೂ ಆರೋಗ್ಯದಿಂದೆಯಾ ಡಾಕ್ಟರ್?’ … Read more

ಕ್ಯಾನ್ಸರ್ ಟ್ರೇನ್ – ಭಟಿಂಡಾ ಟೂ ಬಿಕನೇರ್: ಅಖಿಲೇಶ್ ಚಿಪ್ಪಳಿ

ಗೋಧಿಯ ಕಣಜವಾದ ಪಂಜಾಬ್ ರಾಜ್ಯದ ಕ್ಯಾನ್ಸರ್ ಟ್ರೇನ್ ಕತೆ ಗೊತ್ತಿರಬಹುದು. ಆದರೂ ಕೊಂಚದಲ್ಲಿ ಹೇಳಿಬಿಡುತ್ತೇನೆ. ನಮ್ಮಲ್ಲಿ ಹೇಗೆ ಅಕ್ಕಿ ಮುಖ್ಯ ಆಹಾರವೋ ಹಾಗೆ ಉತ್ತರ ಭಾರತದಲ್ಲಿ ಗೋಧಿ ಮುಖ್ಯ ಆಹಾರ. ಅಲ್ಲಿ ಅಕ್ಕಿಯನ್ನು ಬಹು ಅಪರೂಪಕ್ಕೆ ಉಪಯೋಗಿಸುತ್ತಾರೆ. ಅದರಲ್ಲೂ ಡಾಭಾಗಳು ಮೈದಾ ಹಿಟ್ಟಿನ ರೋಟಿಯನ್ನೇ ಮಾಡುತ್ತಾರೆ. ಮೈದಾಹಿಟ್ಟು ತಯಾರಾಗುವುದು ಗೋಧಿಯಿಂದಲೇ. ಶಕ್ತಿಯುತ, ಹೇರಳ ಪ್ರೊಟೀನ್ ಮತ್ತು ನಾರಿನಂಶವಿರುವ ಗೋಧಿಯ ಮೇಲಿನ ಭಾಗ ಬೂಸ ಎಂದು ಕರೆಯಲ್ಪಟ್ಟು ಜಾನುವಾರುಗಳಿಗೆ ಆಹಾರವಾಗುತ್ತದೆ. ಹಾಗೆಯೇ ಗೋಧಿ ರವೆ, ಹಿಟ್ಟು ಆಮೇಲೆ ಗೋಧಿಯ … Read more

ಬರಹಗಾರರ ಭಾವವೂ, ಭಾಷೆಯ ನೋವೂ: ಪ್ರಶಸ್ತಿ

ಪೇಪರ್ರಲ್ಲಿ, ಇಂಟರ್ನೆಟ್ಟಲ್ಲಿ, ಮೊಬೈಲಲ್ಲಿ ಏನೋ ಓದುತ್ತೇವೆ, ಇನ್ನೇನೋ ನೋಡುತ್ತೇವೆ, ಮತ್ತಿನ್ನೇನೋ ಕೇಳುತ್ತೇವೆ, ಸಮಾಜದಲ್ಲಿನ ಆಗುಹೋಗುಗಳಲ್ಲಿ ಒಂದಾಗಿ ಏನೇನೋ ಅನುಭವಿಸುತ್ತಿರುತ್ತೇವೆ. ಈ ಘಟನೆಗಳಗಳಲ್ಲಿ ಯಾವುದೋ ಒಂದು ಇನ್ಯಾವುದೋ ಭಾವವನ್ನು ಸ್ಪುರಿಸಿರುತ್ತದೆ. ಹಿಂದಿನ ಓದಿನಿಂದ ಪ್ರಭಾವಿತರಾಗಿರುವಂತೆಯೇ ಆ ಕ್ಷಣಕ್ಕೆ ಹುಟ್ಟಿದ ಸ್ವಂತದ ಭಾವಕ್ಕೊಂದು ಅಕ್ಷರರೂಪ ಕೊಡಬೇಕೆಂಬ ಹಂಬಲವೂ ಹುಟ್ಟಬಹುದು. ಸರಿ, ಬರೆಯುತ್ತೇನೆ. ಆದರೆ ಬರೆಯುವುದು ಎಲ್ಲಿ ಎಂಬುದು ಆಗ ಮೂಡೋ ಮೊದಲ ಪ್ರಶ್ನೆ. ಶಾಲಾ ಕಾಲೇಜು ದಿನಗಳಲ್ಲಾದರೆ ಪುಸ್ತಕದ ಕೊನೆಯ ಪೇಜಿನಲ್ಲೋ, ಸಿಕ್ಕ ಖಾಲಿ ಹಾಳೆಯಲ್ಲೋ ಬರೆದು ಗೆಳೆಯರಿಗೆ ತೋರಿಸಿ … Read more

ಮೂವರ ಕವನಗಳು: ಬಿದಲೋಟಿ ರಂಗನಾಥ್, ರಾಜಹಂಸ, ಗ಼ಂಗಾಧರ ಬೆನ್ನೂರ

ಕಾಡೋ ಕುದುರೆಯ ಕನಸು ದಯೆಗೆ ಅಂಕುಶವಿಟ್ಟ ಪ್ರೀತಿಯೇ ಜಾತಿಯ ಬೆನ್ನ ಬಿದ್ದು ಯಾಕೋದೆ? ಕಣ್ಣ ನೀರಲಿ ಸಾವಿರ ಕಣ್ಣುಗಳ ಹುಟ್ಟಿಸಿ. ಬದುಕು ಜಿಂಕೆಯೋಟ ಮರೆವು ಮಂಗನಾಟ ಕುಲಕಿ ಕುಲಕಿ ಬೆರತ ಆ ನೋಟ ರೆಂಬೆ ಕೊಂಬೆಯಾಗಿ ಚಾಚಿದೆ ವರುಷ ವರುಷಗಳೇ ಸಂದರು. ನೀನಿಟ್ಟ ಹೆಜ್ಜೆ ಮಾತಿನಲಿ ಕಥೆಯಾಗಿದ್ದು ಅಲ್ಪ ಕಾವ್ಯವಾಗಿ ಕಾಡಿದ್ದೇ ಗಹನ ಕಾಡೋ ಕುದುರೆಯ ಕನಸು ಜೂಜಾಟವಾಗಿದ್ದು ಸರಿಯೆ? ಮೋರಿ ಮೇಲೆ ಕೂರಿಸಿ ಮಾಡದ ತಪ್ಪಿಗೆ ಹಿಂಡುವ ನೆನಪ ಬೆಂಬಲಿಸಿದ್ದು ಹಿತವೆ? ಒಂಟಿ ಮರದ ಮೇಲೆ … Read more

ನೆನಪು: ವೇಣುಗೋಪಾಲ್ ಹೆಚ್.

ಹೊಸ ಬದುಕು, ಹೊಸ ಊರು, ಹೊಸ ಗೆಳೆಯರು, ಎಲ್ಲವೂ ಹೊಸದೇ ಆದರೆ ನೆನಪುಗಳು………????                   ಹೀಗೆ ಮೊನ್ನೆ ಹುಟ್ಟಿದ ಊರಿಗೆ ಹೋಗಿದ್ದೆ ಆ ಜಾಗ, ಶಾಲೆ, ಮನೆ, ಗಿಡ-ಮರಗಳ ನೆನಪು ಹಾಗೆ ಕಣ್ಣಮುಂದೆ ಹಾಗೆ ಬಂದುಹೋದಂತಾಯಿತು….ಆ ಸೊಗಡಿನಲ್ಲಿ ಬೆಳೆದ ಎಲ್ಲರಿಗೂ ಆದ ಅನುಬವವೇ ಈ ನೆನಪು.. ಮೊದಲನೆಯದಾಗಿ ಆ ಮಲಗುವ ಅಟ್ಟ ಒಮ್ಮೆ ಕಣ್ಣು ಮುಚ್ಚಿದರೆ ಏಳುತಿದ್ದದ್ದು ಬೆಳೆಗ್ಗೆಯೆ ನಮ್ಮದು ಬೇರೆ ದೇಶದವರತರವಲ್ಲ ಅಪ್ಪ ಅಮ್ಮನ … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಬೋಹ್‌ಲುಲ್‌ ಮತ್ತು ಸೇತುವೆ ನದಿ ನೀರಿನ ಹರಿಯುವಿಕೆಯನ್ನು ನೋಡುತ್ತಾ ಒಂದು ಸೇತುವೆಯ ಮೇಲೆ ಕುಳಿತಿದ್ದ ಬೋಹ್‌ಲುಲ್‌. ರಾಜ ಅವನನ್ನು ನೋಡಿದ, ತಕ್ಷಣ ದಸ್ತಗಿರಿ ಮಾಡಿಸಿದ. ರಾಜ ಹೇಳಿದ, “ಸೇತುವೆ ಇರುವುದು ನದಿಯನ್ನು ದಾಟಲೋಸುಗ, ಅಲ್ಲಿಯೇ ಉಳಿದುಕೊಳ್ಳಲು ಅಲ್ಲ.” ಬೋಹ್‌ಲುಲ್ ಉತ್ತರಿಸಿದ, “ನೀವೊಮ್ಮೆ ನಿಮ್ಮನ್ನೇ ನೋಡಿಕೊಳ್ಳುವುದು ಒಳ್ಳೆಯದು. ಈ ಜೀವನಕ್ಕೆ ಹೇಗೆ ಅಂಟಿಕೊಂಡಿದ್ದೀರಿ ಎಂಬುದನ್ನೊಮ್ಮೆ ಗಮನಿಸುವುದು ಒಳ್ಳೆಯದು.” ***** ೨. ಬಾಸ್ರಾದ ಹಸನ್‌ನಿಗೆ ರಬಿ’ಆ ಳ ಉಡುಗೊರೆಗಳು ರಬಿ’ಆ ಅಲ್‌-ಅದವಿಯ್ಯಾ ಬಾಸ್ರಾದ ಹಸನ್‌ನಿಗೆ ಮೂರು ವಸ್ತುಗಳನ್ನು ಕಳುಹಿಸಿದಳು … Read more

ಕವಿತೆ ಕಳ್ಳರಿದ್ದಾರೆ ಎಚ್ಚರಿಕೆ!!!: ನಟರಾಜು ಎಸ್. ಎಂ.

ಪಿಯುಸಿಯ ದಿನಗಳವು. ಯಾವುದೋ ಮುದ್ದು ಕನಸಿಗೆ ಬಿದ್ದು ಕವಿತೆ ಬರೆಯಲು ಶುರು ಮಾಡಿದ್ದೆ. ಬರೆದ ಕವಿತೆಯನ್ನು ತರಗತಿಯಲ್ಲಿ ಓದಬೇಕೆಂಬ ಹಪಹಪಿ ಇತ್ತು. ಅಂದು ಕ್ಲಾಸಿಗೆ ಸರ್ ಇನ್ನೂ ಬಾರದಿದ್ದ ಕಾರಣ ಕ್ಲಾಸಿನಲ್ಲಿ ಹರಟುತ್ತಾ ಕುಳಿತ್ತಿದ್ದ ಸಹಪಾಠಿಗಳಿಗೆ ಅಚ್ಚರಿಯಾಗುವಂತೆ ಡಯಾಸ್ ಬಳಿ ನಿಂತು "ಇವತ್ತು ಒಂದೆರಡು ಕವಿತೆ ಓದಬೇಕು ಅಂದುಕೊಂಡಿದ್ದೇನೆ" ಎಂದಿದ್ದೆ. ನನ್ನ ಮಾತಿಗೆ ಗಲಾಟೆಯಲ್ಲಿ ತೊಡಗಿದ್ದ ಕ್ಲಾಸ್ ಒಂದು ಹಂತಕ್ಕೆ ಸೈಲೆಂಟ್ ಆಗಿ ಹೋಗಿತ್ತು. ಹಿಂದಿನ ಬೆಂಚಿನ ಒಂದಿಬ್ಬರು ಗೆಳೆಯರು "ಎಲ್ಲಾ ಸೈಲೆಂಟ್ ಆಗ್ರಪ್ಪಾ ನಟ ಕವಿತೆ … Read more

ದಾರಿ ತೋರುವ ದುರಂತನಾಯಕ: ಚೈತ್ರಾ ಎಸ್.ಪಿ.

ಅವನೆಂದರೆ ಥಟ್ಟನೆ ನೆನಪಾಗುವುದು ಹೆಸರು ದುರಂತನಾಯಕ. ಮಹಾಕಾವ್ಯದ ದುರಂತನಾಯಕ. ಅಸಹಾಯಕ ಪರಿಸ್ಥಿತಿಯಲ್ಲಿ ಸಿಕ್ಕಿ ಒದ್ದಾಡಿದ ನತದೃಷ್ಟ.ಅವಮಾನಗಳಲ್ಲಿ ಬೆಂದು ಮಿಂದೆದ್ದವ. ತಿರಸ್ಕಾರಗಳನ್ನೆ ಕಂಡವ. ಹುಟ್ಟಿದಾಗ ತಾಯಿಗೆ ಬೇಡವಾದ. ಗುರುಕುಲದಲ್ಲಿ ಗುರುಗಳಿಗೆ ಬೇಡವಾದ.ಸ್ವಯಂವರದಲ್ಲಿ ಮೆಚ್ಚಿದ ಹುಡುಗಿಗೆ ಬೇಡವಾದ. ಹೇಗೆ ಬದುಕಿರಬಹುದು ತನ್ನ ಬಾಳನ್ನು ? ಬೇಸರದಲ್ಲೇ ? ಖಿನ್ನತೆಯಲ್ಲೇ ? ಕಂಡಿರದ ತಂದೆ-ತಾಯಿಗಾಗಿ ಹಂಬಲಿಸಿದನೇ ? ಮಾಡಿದ ತಪ್ಪಿಗಾಗಿ ಪರಿತಪಿಸಿದನೇ ? ಬೆರಳು ತೋರಿಸಿದರೆಂದು ಮರುಗಿದನೇ ? ಜನ್ಮದತ್ತವಾಗಿ ಐಶ್ವರ್ಯ, ಕ್ಷಾತ್ರಪಂಥದ ಹೆಗ್ಗುರುತಾದ ಎದೆಗವಚಗಳನ್ನು ಹೊತ್ತು ಬಂದರೂ ಸೂತಪುತ್ರನೆಂಬ ಹಣೆಪಟ್ಟಿಯಿಂದ ಕಂಗೆಟ್ಟನೆ … Read more

ಪಾಂಡದ ಪರಿ-ಬಿದಿರೆಂಬ ಸಿರಿ: ಅಖಿಲೇಶ್ ಚಿಪ್ಪಳಿ

ಕಳೆದ 2 ವರ್ಷದಿಂದ ಕಳಲೆ ತಿಂದಿಲ್ಲ. ಕಳಲೆ ತಿನ್ನುವುದು ಕಾನೂನುಬಾಹಿರವೆಂದು ಅಂದು ಕೊಂಡಿದ್ದ ದಿನಗಳವು. ಆದರೂ ಮಳೆಗಾಲ ಬಂತೆಂದರೆ ಕಳಲೆಗೆ ಮುಗಿಬೀಳುವುದು ನಡದೇ ಇತ್ತು ಮತ್ತು ಇದೆ. ಕಳಲೆಗಾಗಿಯಲ್ಲವಾದರೂ ರೈತರು ತಮ್ಮ ಸ್ವಂತ ಜಮೀನಿನಲ್ಲಿ ಬಿದಿರನ್ನು ನೆಟ್ಟು ಬೆಳೆಸಿರುತ್ತಾರೆ. ಅದರಲ್ಲಿ ಮೂಡುವ ಕಳಲೆಗಳ (ಬ್ಯಾಂಬೂ ಶೂಟ್) ಲ್ಲಿ ಕೆಲವನ್ನು ಕತ್ತರಿಸಿ, ಸಂಸ್ಕರಿಸಿ ತಿನ್ನುವ ವಾಡಿಕೆ ಮಲೆನಾಡಿನಲ್ಲಿ ಇದೆ. ಹಿಂದಿನ ವಾಡಿಕೆಯಂತೆ ಬಿದಿರು ಹೂ ಬಿಟ್ಟ ನಂತರದಲ್ಲಿ ಸಾಯುತ್ತದೆ. ಬಿದಿರು ಹೂ ಬಿಡುವುದು 60 ವರ್ಷಕ್ಕೊಮ್ಮೆ. 2013-14ರಲ್ಲಿ ಮಲೆನಾಡಿನ … Read more

ಏಕಾದಶಿ: ಗುಂಡುರಾವ್ ದೇಸಾಯಿ

‘ಲೇ ರಂಡೆಗಂಡಾ, ಎಂತಾ ಅನಾಹುತ ಮಾಡಿಬಿಟ್ಟಿ, ನನ್ನ ಜೀವಮಾನದ ಸಾಧನೆಯಲ್ಲಾ ಇವತ್ತು ವ್ಯರ್ಥ ಮಾಡತಿದ್ದೆಲ್ಲೋ    , ಕೃಷ್ಣ ಕೃಷ್ಣ ನೀನ ಕಾಪಾಡಬೇಕ¥!À’ ಅಂತ ಬಯ್ಯಕೋತ ಗುಡಿಯಿಂದ ಬಂದ್ಲು. ‘ಏನಾಯ್ತವ್ವ ಒಮ್ಮಿದೊಮ್ಮೆಲೆ, ಯಾಕ ಸಿಟ್ಟಿಗೆದ್ದು ದಾರ್ಯಾಗಿನಿಂದ ಕೂಗಿಕೊಂತ ಬರಕತಿದಿ, ಮೆಲ್ಲಕ ಬಾರವ್ವ, ಮೆಲ್ಲಕ ಮಾತಾಡು ’ ‘ನನ್ನ ಸುದ್ದಿ ಬಿಡು, ಎಂತ ಮೋಸ ಮಾಡಿಬಿಟ್ಟೆಲ್ಲೋ, ನೀನು ಬಾಳ ಶ್ಯಾಣೆ ಅಂತ ಮಾಡಿದ್ದೇ, ನಿನಗಿಂತ ನಿಮ್ಮಕ್ಕನ ವಾಸಿ. ನಿಮ್ಮಪ್ಪ ಹೋದ ಮ್ಯಾಲೆ ಪಂಚಾಂಗ ನೋಡಿ ತಿಥಿ ಲೆಕ್ಕ ಎಷ್ಟು ಕರೆಕ್ಟಾಗಿ … Read more

ಸಾವು: ಪ್ರಶಸ್ತಿ

ಸಾವೆಂಬುದು ಬೆನ್ನ ಹತ್ತಿ ಬರುತ್ತಿದೆಯಾ ಎಂಬ ಭಾವ ಪದೇ ಪದೇ ಕಾಡತೊಡಗಿತ್ತವನಿಗೆ. ಯದ್ವಾತದ್ವಾ ಟ್ರಾಫಿಕ್ ಜ್ಯಾಂನಿಂದ ರೈಲು ತಪ್ಪಿಸಿಕೊಂಡ ಬೇಜಾರಲ್ಲಿ ಬಸ್ಸಿಗೆ ಹೋದ ದಿನವೇ ರೈಲಿನ ಅಪಘಾತವಾಗಿ ಅದೆಷ್ಟೋ ಜನ ಅಸುನೀಗಿದ್ದರು. ಆ  ಆಘಾತ ಮನಸ್ಸಿನಿಂದ ಅಳಿಸೋ ಮುನ್ನವೇ ಇವ ರಿಸರ್ವ ಮಾಡಿಸಿದ್ದ ಬಸ್ಸು ಆಯತಪ್ಪಿ ಕೊರಕಲಿಗೆ ಜಾರಿದ ಸುದ್ದಿ ಕೇಳಿಬಂದಿತ್ತು. ಬೇಗ ಹೋಗಬೇಕಂದುಕೊಂಡ್ರೂ ಆ ಶುಕ್ರವಾರವೇ ವಿಪರೀತ ಲೇಟಾಗಿ ರಿಸರ್ವ್ ಮಾಡಿಸಿದ ಬಸ್ಸಿಗೆ ಹೋಗಲಾಗದ್ದಕ್ಕೆ ಅದೆಷ್ಟೋ ಶಾಪ ಹಾಕಿದ್ದವನಿಗೆ ಮಾರನೇ ದಿನದ ಪೇಪರ್ ನೋಡಿದಾಗ ಮತ್ತೊಮ್ಮೆ … Read more

ನಾಲ್ವರ ಕವನಗಳು: ಶಿದ್ರಾಮ ತಳವಾರ, ನೂರುಲ್ಲಾ ತ್ಯಾಮಗೊಂಡ್ಲು, ಮೆಲ್ವಿನ್ ಕೊಳಲಗಿರಿ, ಆಶಿತ್

ಪಯಣ ಎಲ್ಲೋ ನಡೆಯುತ್ತಿದೆ ನನ್ನೀ ಪಯಣ ಎಲ್ಲೆಂತೆನಗರಿವಿಲ್ಲವಾದರೂ ಇಲ್ಲೇ ಎಲ್ಲೋ ನಡೆಯುತ್ತಿದ್ದೇನೆ,,,,, ದಾರಿಯುದ್ದಕ್ಕೂ ಬರೀ ಕತ್ತಲು ಎಲ್ಲೆಲ್ಲೂ ಸ್ಮಶಾನ ಮೌನ ಕಾಣದಿಹ ಈ ದಾರಿಯಲ್ಲಿ ನನಗೆ ನಾನೇ ಪ್ರಶ್ನೆ, ಅಲ್ಲಲ್ಲಿ ನಾಯಿ ಊಳಿಡುತಿವೆ, ತಂಪು ಗಾಳಿಗೆ ಒಣಗಿದೆಲೆಗಳು ಪಟ ಪಟ ಉದುರುವ ಸದ್ದು ಬೇರೇನಿಲ್ಲ, ಆದರೂ,,, ಅದಾರೋ ನನ್ನ ಹಿಂಬಾಲಿಸುವಂತಿದೆ. ಇಲ್ಲೇ ಎಲ್ಲೋ ದೂರದಲ್ಲಿ ಬೆಂಕಿ ಹೊತ್ತಿಕೊಂಡಿದೆ ಬಹುಶ: ಹೆಣ ಸುಡುತಿರಬಹುದು ವಾಸನೆ ಮೂಗು ಕಟ್ಟುತಿದೆ ಯಾವುದೀ ತಾಣ ? ಕೆಟ್ಟ ಕನಸಿರಬಹುದು ಅಲ್ಲವೇ ? ಆದರೂ,,,, … Read more

ಗೆಲುವು ಸುಲಭಾನಾ?: ರೋಷನ್ ಅರೆಹೊಳೆ

ಅದ್ಭುತವಾದ ವಿಜಯವನ್ನು ಸಾಧಿಸಿದವರೆಲ್ಲ ಉನ್ನತ ಸ್ಥಾನದಿಂದ ಬಂದವರಲ್ಲ…! ತೀರಾ ಕೆಳಮಟ್ಟದಿಂದಾನೇ ಬಂದಿರುವವರು….! ಕಷ್ಟದ ಅರಿವಿದ್ದರೆ, ಜಯದ ರುಚಿ ಬೇಕು ಎನಿಸುವುದು. ಒಮ್ಮೆ ಕೆಲವು ಸಾಧಕರ ಬಗ್ಗೆ ತಿಳಿದುಕೊಂಡರೆ, ನಾವು ಎಲ್ಲಿದ್ದೇವೆ? ಎನ್ನುವಂತಹದ್ದು ಅರಿವಾಗುತ್ತದೆ. ಇಂದು ಜಗತ್ತಿನಾದ್ಯಂತ ಅತಿ ಹೆಚ್ಚು ಜನರು ಇಷ್ಟ ಪಡುವ ಆಟ ಫುಟ್ಬಾಲ್. ಸದ್ಯದ ಯುವಕರಿಗೆ ಫುಟ್ಬಾಲ್ ಅಲ್ಲಿ ಇಷ್ಟವಾಗುವ ಆಟಗಾರ "ಲೂಯಿಸ್ ಲಯೋನೆಲ್ ಆ್ಯಂಡ್ರೆಸ್ ಮೆಸ್ಸಿ" ಲೂಯಿಸ್ ರೊನಾಲ್ಡೊ ತರ ಆಕ್ರಮಣಕಾರಿ ಆಟಗಾರನಲ್ಲದಿದ್ದರೂ ಆತ ಜಗತ್ತಿಗೆ ಇಷ್ಟವಾಗುತ್ತಾನೆ….! ಇಷ್ಟರ ಮಟ್ಟಿಗೆ ಈತ ಜನಪ್ರಿಯನಾಗಲು … Read more

ಹನಿಯೂರು ಚಂದ್ರೇಗೌಡರ “ಸೋಲಿಗರು: ಬದುಕು ಮತ್ತು ಸಂಸ್ಕೃತಿ” ಕೃತಿಯ- ಒಂದು ವಿಮರ್ಶೆ: ಡಾ. ಕೆ.ಮಧುಸೂದನ ಜೋಷಿ

  ಬಹುಮುಖಿಯಾಗಿ  ಬಹುರೂಪಿಯಾಗಿ ಬೆಳೆದು ಬಂದ ಕನ್ನಡ ಸಾಹಿತ್ಯ ಕಾಲದಿಂದ ಕಾಲಕ್ಕೆ ತಕ್ಕಂತೆ ಬದಲಾಗುತ್ತ, ಪ್ರಸ್ತುತಗೊಳ್ಳುತ್ತ ಬಂದಿದ್ದರಿಂದಲೇ ಅದು ಜೀವಂತಿಕೆಯನ್ನು ಕಾಯ್ದುಕೊಂಡು 8 ಜ್ಞಾನಪೀಠಗಳನ್ನು ಏರಿ ಭರತೀಯ ಸಾಹಿತ್ಯ ಸಾಮ್ರಾಜ್ಯದ ಮೊದಲ ಚಕ್ರವರ್ತಿಯಾಗಿ ಮೆರೆದಿದೆ; ಮೆರೆಯುತ್ತಿದೆ. ಕಾವ್ಯ, ಕತೆ, ಕಾದಂಬರಿ, ನಾಟಕ, ವಿಮರ್ಶೆ, ಸಂಶೋಧನೆ, ಆತ್ಮಚರಿತ್ರೆ, ಜೀವನಚರಿತ್ರೆ, ಗೀತನಾಟಕ, ಕಥನಕವನ, ಪ್ರವಾಸಕಥನ, ಜನಾಂಗೀಯ ಅಧ್ಯಯನ…. ಹೀಗೆ ಹತ್ತು ಹಲವು ಮುಖಗಳಲ್ಲಿ ಹೊಮ್ಮಿಬಂದ ಕನ್ನಡ ಸಾಹಿತ್ಯವಾಹಿನಿ ಮೈದುಂಬಿಕೊಳ್ಳುತ್ತ, ಮನಗಳನ್ನು ತುಂಬುತ್ತ ಸಾಗಿದೆ. ಆದರೆ ಈ ಎಲ್ಲ ಸಾಹಿತ್ಯದ ಪ್ರಕಾರಗಳಲ್ಲಿಯೇ ಅಪರೂಪ … Read more

ಇರಲಾದರದ್ದು ಮಾಡಿ ಮೈ ಕೆರಕೊಂಡರಂತ…: ಗಾಯತ್ರಿ ಬಡಿಗೇರ

ಬಾಳಿನ ಹಾದಿಯಲ್ಲಿ ಸಂಬಂಧ, ಸ್ನೇಹ, ಪ್ರೀತಿ, ದ್ವೇಷ, ಸಿಟ್ಟು ಮತ್ತು ನೋವು-ನಲಿವು ಎಲ್ಲವೂ ಸಹಜ. ಕೆಲವೊಮ್ಮೆ ಕನಸದಾಗು ನೆನಸಿಕೊಂಡಿರಂಗಿಲ್ಲ ಹಂತಾ ದುರಂತ ನಡದ ಬಿಡ್ತಾವ. ಜೀವನಾ ಒಂದ ಚೌಕ್ಕಟನ್ಯಾಗ ಇರಬೇಕು. ಆದ್ರ ಚೌಕ್ಕಟ್ಟೆ ಜೀವನಲ್ಲ. ತಿಳ್ಕೊಬೇಕಾದ ವಿಷಯ ಹೇಳಲಾರದಷ್ಟ ಆದ. ಆದ್ರ ಕೇಳೊ ಮನಸ್ಸಗಳು ಪ್ರೀತಿ ಎಂಬ ಬೆಂಕಿಯಲ್ಲಿ ಬಿದ್ದು ಜಗತ್ತಿನ ಅರಿವಿಲ್ಲದೆ ನರಳತಿದಾವ. ಪ್ರೀತಿ ಮಾಡೋದ ತಪ್ಪಲ್ಲ. ಹಂಗಂತಾ ಪ್ರೀತಿನೇ ಜೀವನಾ ಅಲ್ರಿ. ಪ್ರೀತಿ ಮಾಡಿ ಅದೇನು ಸಾದಸ್ತಾರೋ? ಗೊತ್ತಿಲ್ಲ. ಆದ್ರ ಮನೆವರ ಹೊಟ್ಟೆ ಮಾತ್ರ … Read more

ಅಂತ:ಕರಣ: ಕು.ಸ.ಮಧುಸೂದನ್

ಕಳೆದ ಒಂದು ತಿಂಗಳಿನಿಂದ ಶುರುವಾಗಿದ್ದ ರಾಮೇಗೌಡನ ಕಲ್ಲಿನ ಪುರಾಣ ಅವನ ಹೆಂಡತಿ ಮಗನ ತಲೆ ಕೆಡಿಸಿತ್ತು. ಅನ್ನ ಕಲೆಸಿ ಒಂದು ತುತ್ತು ಬಾಯಿಗಿಟ್ಟು ಅಗಿಯುತ್ತಿದ್ದಂತೆ, ‘ಅಯ್ಯೋ!ಕಲ್ಲು!ಕಲ್ಲು!’ ಅಂತ ರಾಮೆಗೌಡ ಕೂಗಾಡಲು ಪ್ರಾರಂಭಿಸುತ್ತಿದ್ದ. ಇದರಿಂದ ರೋಸತ್ತ ತಾಯವ್ವ ಪ್ರತಿ ಸಾರಿಯೂ ತಾನೇ ಅನ್ನ ಸಾರು ಕಲೆಸಿ ಒಂದೊಂದು ಅಗುಳನ್ನೂ ಹಿಚುಕಿ ನೋಡಿಊಟ ಬಡಿಸುತ್ತಿದ್ದಳು. ಅಷ್ಟಾದರು ಬಾಯಿಗಿಟ್ಟ ತುತ್ತನ್ನು ಉಗಿದು ಕಲ್ಲು, ಕಲ್ಲು ಎಂದು ಕೂಗಾಡುವುದನ್ನೇನು ರಾಮೇಗೌಡ ಬಿಟ್ಟಿರಲಿಲ್ಲ. ಜೊತೆಗೆ ‘ಬಡ್ಡೆತ್ತದೆ, ಬರೀ ಕಲ್ಲೇ ಉಣ್ಣಾಕಿಕ್ತಿಯಲ್ಲೇ ಬೇವಾರ್ಸಿ’ ಅಂತ ತಾಯವ್ವನ … Read more

ಹಳೇ ಬಟ್ಟೆ ಮತ್ತು ಹೊಸಾ ಪರ್ಸು: ಅನಿತಾ ನರೇಶ್ ಮಂಚಿ

ಮಳೆಗಾಲ ಬಂತೆಂದರೆ ಹಳ್ಳಿಯವರಾದ ನಮಗೆ ಸ್ವಲ್ಪ ಬಿಡುವು ಸಿಕ್ಕಿದ ಹಾಗೆ. ಬೇಸಿಗೆಯಿಡೀ ತೋಟಕ್ಕೆ ನೀರು ಹನಿಸುವ ಕೆಲಸ, ಆ ನೀರಿನ ಪೈಪುಗಳು ತುಂಡಾದರೆ ಜೋಡಿಸುವ ಕೆಲಸ, ಅದಕ್ಕೆ ಬೇಕಾದ ಸಲಕರಣೆಗಳು ಇಲ್ಲದಿದ್ದರೆ ಪೇಟೆಗೆ ಓಡುವ ಕೆಲಸ ಹೀಗೆ ಒಂದರ ಹಿಂದೊಂದು ಅಂತ ಪುರುಸೊತ್ತೇ ಇರೋಲ್ಲ, ಜಿಟಿ ಪಿಟಿ ಮಳೆ ಬೀಳಲು ಸುರುವಾಯ್ತೆಂದರೆ ಈ ಕೆಲಸಗಳಿಗೆಲ್ಲ ಮುಕ್ತಿ ಸಿಕ್ಕಿದಂತಾಗುತ್ತದೆ. ಮೊದಲಿಗೆ ಸುಮ್ಮನೇ ಕುಳಿತು ದಿನ ದೂಡುವುದರಲ್ಲೇ ಸುಖ ಅನುಭವಿಸಿದರೂ ಮತ್ತೆ ನಿಧಾನಕ್ಕೆ ಹೊತ್ತು ಕಳೆಯುವುದು ಹೇಗಪ್ಪಾ ಅನ್ನುವ ಚಿಂತೆ … Read more

ಬದಲಾವಣೆ-ಬಟ್ಟಂಗಿಗಳು-ಸ್ವಂತಿಕೆ: ರಾಘವೇಂದ್ರ ತೆಕ್ಕಾರ್

ನಮ್ಮೊಂದಿಗೆ ಸದಾ ಇದ್ದು ತುಸು ಹೆಚ್ಚಾಗೆ ನಮ್ಮನ್ನು ಹೊಗಳುತ್ತಿರುವವರನ್ನು ತುಸು ದೂರವೆ ಇಡೋಣ. ಸುಮ್ಮನೆ ಸುಮ್ಮನೆ ಹಲುಬುವವರನ್ನು ನಿರ್ಲಕ್ಷಿಸೋಣ. ಅನುಕೂಲಕ್ಕೆ ತಕ್ಕಂತೆ ವ್ಯಕ್ತಿತ್ವವನ್ನ ಬದಲಾಯಿಸಿಕೊಳ್ಳುವ ಒಂದು ವರ್ಗದ ಜನರಿವರು. ಯಾವತ್ತು ಇಂಥವರನ್ನು ನಾವು ನಿರ್ಲಕ್ಷಿಸಿಕೊಂಡು ಮುಂದುವರಿಯುತ್ತೇವೆಯೊ ಅದು ನಮ್ಮಲ್ಲಿನ ಕ್ರೀಯಾಶೀಲತೆಯನ್ನು ಸಾಣೆ ಹಿಡಿಯುತ್ತಲೆ ನಾವು ಮುನ್ನಡೆಯುತಿದ್ದೇವೆ ಎಂಬುದರ ಅರ್ಥ. ಮನುಷ್ಯ ಹೊಸ ಸವಾಲುಗಳನ್ನು ಎದುರಿಸುತ್ತ ಕೆಲವೊಮ್ಮೆ ಗೊತ್ತಿದ್ದು ಇನ್ನೂ ಕೆಲವೊಮ್ಮೆ ತನಗೆ ಗೊತ್ತಿಲ್ಲದಂತೆ ಕೂಡ ತನ್ನೊಳಗೆ ಅಪ್ ಡೇಟ್ ಆಗುತ್ತಾನೆ ಇರುತ್ತಾನೆ.ಹಾಗೆ ನೋಡಿದಲ್ಲಿ ಹೊಸ ಬದಲಾವಣೆಗೆ ತೆರದುಕೊಳ್ಳದವರ್ಯಾರು?ಎಲ್ಲೋ … Read more

ಸಿಕಾಡ ಎಂಬ ಸಂಗೀತ: ಅಖಿಲೇಶ್ ಚಿಪ್ಪಳಿ

ಜೂನ್ ತಿಂಗಳಲ್ಲಿ ಮುಂಗಾರು ಪ್ರಾರಂಭವಾಗದೆ, ಈ ವರುಷದ ಗಿಡ ನೆಡುವ ಕಾರ್ಯಕ್ರಮ ಮುಂದಕ್ಕೆ ಹೋಯಿತು. ಅಂತೂ ಜುಲೈ ತಿಂಗಳಲ್ಲಿ ಮಳೆಗಾಲ ಶುರುವಾಯಿತೇನೊ ಎನಿಸಿ, ಗಿಡ ನೆಡುವ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು. ಮಳೆ ಬಂದು ಇಳೆಯೇನೋ ತಂಪಾಯಿತು. ಗಿಡ ನೆಟ್ಟ ಮೇಲೆ ಬಿರು ಬೇಸಿಗೆ ಶುರುವಾಯಿತು. ನೆಟ್ಟ ಗಿಡಗಳು ಇನ್ನೆರೆಡು ದಿನ ಮಳೆ ಬಾರದಿದ್ದಲ್ಲಿ ಸತ್ತೇ ಹೋಗುವ ಸಂದರ್ಭ. ಮನುಷ್ಯರ ಕತೆ ಹೀಗಾದರೆ, ಮಳೆಗಾಲದಲ್ಲೇ ಜನ್ಮ ತಳೆಯುವ ಅದೆಷ್ಟೋ ಕೀಟಗಳು ಸಂಕಷ್ಟಕ್ಕೆ ಸಿಲುಕಿದ್ದವೋ. ನಮ್ಮಲ್ಲಿ ಮಳೆಗಾಲದಲ್ಲಿ ಸಾಮಾನ್ಯವಾಗಿ ಕಂಡು … Read more

ಮೂವರ ಕವನಗಳು: ರವಿಶಂಕರ್.ಎನ್. ಕೆ., ಬಿದಲೋಟಿ ರಂಗನಾಥ್, ಸಿಪಿಲೆ ನಂದಿನಿ

ಬದುಕುವೆನು ನಾನು  ಬರೆಯುವ ಮೊದಲೇ ಮರೆತು ಹೋಗಿದೆ  ನನ್ನಿಷ್ಟದ ಸಾಲು , ಹೇಗೆ ಹೇಳಲಿ …? ಏನು ಮಾಡಲಿ…? ಜಿಗಿದಾಡುವ ಮನದ ಮೂಲೆಯಲ್ಲಿ ಜೋಕಾಲಿಯಂತೆ ಜೀಕುವಾಗ ನೀನು  ಸುಡುವ ಪ್ರೇಮದ ಒಡಲೊಳಗೆ ಕಾಡುವ ನಿನ್ನದೇ ನೆನಪಿನ ಜಗದೊಳಗೆ ತುಸು ಯಾಮಾರಿದಾಗ ಹೇಗೆ ಹೇಳಲಿ …? ಏನು ಮಾಡಲಿ …? ಜಗದ ಕೊನೆಯ ತುದಿಯ ಬಳಿ ನಿಂತು  ಕೂಗುವಾಗ ಸಾವಿರ ಸಲ ಹೇಳ ಹೆಸರಿಲ್ಲದಂತೆ ಮರೆತು ಹೋಗಿ ಬಿಡು  ಮತ್ತೆ ಬಾರದಂತೆ ನೀನು, ಬದುಕಬಹುದು ನಾನು. ನೀನಿಲ್ಲದೆ…! ಏನೂ … Read more

ಕುಂದ್ಲಳ್ಳಿ ಕೆರೆ: ಪ್ರಶಸ್ತಿ

ಒಂದಾನೊಂದು ಕಾಲದಲ್ಲಿ ಬೆಂಗಳೂರನ್ನೋದು ಉದ್ಯಾನನಗರಿ ಅನ್ನುವಂತೆಯೇ ಕೆರೆಗಳ ನಗರವೂ ಆಗಿತ್ತಂತೆ. ಈಗ ಕೆರೆಯಿದ್ದೆಡೆಯೆಲ್ಲಾ ಅಪಾರ್ಟುಮೆಂಟುಗಳೋ, ಸ್ಟೇಡಿಯಮ್ಮುಗಳೋ ತಲೆಯೆತ್ತಿ ಬೇಸಿಗೆ ಬರೋದ್ರೊಳಗೇ ನೀರಿಗೆ ಹಾಹಾಕಾರ. ಸಾವಿರ ಅಡಿ ಕೊರೆದ್ರೂ ಬೋರಲ್ಲಿ ನೀರಿಲ್ಲ ಅನ್ನೋ ಸಮಸ್ಯೆ ಒಂದೆಡೆಯಾದ್ರೆ ಇರೋ ಕೆರೆಗಳ ನೀರಿಗೂ ವಿಪರೀತ ಪ್ರಮಾಣದ ರಾಸಾಯನಿಕಗಳ ಸುರುವಿ ಅದನ್ನೂ ಹಾಲಾಹಲವಾಗಿಸುತ್ತಿರುವ ಸಮಸ್ಯೆ ಇನ್ನೊಂದೆಡೆ. ವೈಟ್ ಫೀಲ್ಡೆಂಬ ಏರಿಯಾವನ್ನೇ ತಗೊಂಡ್ರೆ ಸುತ್ತಲ ಏಳೆಂಟು ಕೆರೆಗಳಿದ್ದಿದ್ದನ್ನ ಕಾಣಬಹುದು(ಚಿತ್ರ:lakes around whitefield).ಇದ್ದಿದ್ದು ಅಂತ್ಯಾಕೇ ಹೇಳ್ತಿದೀನಾ ? ಇನ್ನೂ ಇಲ್ವಾ ಆ ಕೆರೆಗಳು ಅಂತ ಅಂದ್ರಾ … Read more

ಆಸ್ಪತ್ರೆಯಲ್ಲಿ ಹೀಗೊಂದು ಮಾತುಕತೆ…: ಎಚ್.ಕೆ.ಶರತ್

ಅದು ಆಸ್ಪತ್ರೆಯ ಜನರಲ್ ವಾರ್ಡು. ನಾಲ್ವರು ನಾಲ್ಕು ಪ್ರತ್ಯೇಕ ಹಾಸಿಗೆಗಳ ಮೇಲೆ ಮಲಗಿಕೊಂಡೇ ಮಾತಿಗಿಳಿದಿದ್ದಾರೆ. ಡಾಕ್ಟರ್ ಒಬ್ಬನ ಹೊಟ್ಟೆ ಭಾಗದಲ್ಲಿ ಅರ್ಧ ಅಡಿ ಉದ್ದ ಕೊಯ್ದು ಆಪರೇಷನ್ ಮಾಡಿದ್ದಾರೆ. ಮತ್ತೊಬ್ಬ ಬೈಕ್ ಮೇಲಿಂದ ಬಿದ್ದು ಬೆನ್ನಿನ ಮೂಳೆಗೆ ಪೆಟ್ಟು ಮಾಡಿಕೊಂಡಿದ್ದಾನೆ. ಇನ್ನೊಬ್ಬ ಬೇರೊಬ್ಬರ ತಪ್ಪಿಗೆ ತಾನು ನೋವು ಅನುಭವಿಸುತ್ತಿದ್ದಾನೆ. ರಸ್ತೆ ಬದಿಯಲ್ಲಿ ಸುಮ್ಮನೆ ನಿಂತಿದ್ದ ಅವನಿಗೆ ಬೈಕೊಂದು ಬಂದು ಗುದ್ದಿದ ಪರಿಣಾಮ ಹಣೆ ಹಾಗೂ ಕಾಲಿಗೆ ಪೆಟ್ಟಾಗಿದೆ. ಕಾಲಿನ ಚರ್ಮ ಕಿತ್ತು ಹೋಗಿದೆ. ತೊಡೆಯ ಚರ್ಮ ಕಿತ್ತು … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಮೊಳೆ ಒಂದು ಮೊಳೆ ಮತ್ತು ಒಬ್ಬ ಮನುಷ್ಯನ ನಡುವೆ ನಡೆದ ಸಂಭಾಷಣೆ ಇಂತಿದೆ: ಮೊಳೆ: “ಅನೇಕ ವರ್ಷಗಳಿಂದ ಈ ಫಲಕಕ್ಕೆ ಅಂಟಿಕೊಂಡಿರುವ ನಾನು ಭವಿಷ್ಯದಲ್ಲಿ ನನಗೆ ಏನಾಗಬಹುದೆಂಬುದರ ಕುರಿತು ಅನೇಕ ಸಲ ಕುತೂಹಲದಿಂದ ಆಲೋಚಿಸಿದ್ದೇನೆ.” ಮನುಷ್ಯ: “ನೀನು ಈಗ ಇರುವ ಸನ್ನಿವೇಶದಲ್ಲಿ ಅನೇಕ ಸಾಧ್ಯತೆಗಳು ಹುದುಗಿವೆ. ಯಾರಾದರು ಚಿಮುಟದಿಂದ ನಿನ್ನನ್ನು ಎಳೆದು ಹಾಕಬಹುದು, ನೀನಿರುವ ಫಲಕ ಸುಟ್ಟು ಹೋಗಬಹುದು, ನೀನಿರುವ ಫಲಕವನ್ನು ಹುಳು ತಿನ್ನಬಹುದು – ಹೀಗೆ ಅನೇಕ ಸಾಧ್ಯತೆಗಳಿವೆ. ಮೊಳೆ: “ಇಂಥ ಮೂರ್ಖ ಪ್ರಶ್ನೆಗಳನ್ನು … Read more

ಉಪವಾಸ ನಿರತ ಕಾಲ ರಂಜಾನ್: ಬಂದೇಸಾಬ. ಮೇಗೇರಿ ರಾಮಾಪುರ

ರಂಜಾನ್ ಮುಸ್ಲಿಮರ ಪಾಲಿನ ವಸಂತ ಮಾಸವಾಗಿದೆ. ರಂಜಾನ್ ಮಾಸವು ಪುಣ್ಯಗಳನ್ನು ಬಾಚಿಕೊಳ್ಳುವ ತಿಂಗಳಾಗಿದೆ. ಜಗತ್ತಿನ ಎಲ್ಲ ಮುಸ್ಲಿಮರು ಭಯ, ಭಕ್ತಿಯಿಂದ ಆಚರಿಸುವ ಹಬ್ಬ ಇದಾಗಿದೆ. ಈ ತಿಂಗಳಲ್ಲಿ ಮುಸ್ಲಿಮ್ ಬಾಂಧವರೆಲ್ಲ ಪುಳಕಿತಗೊಳ್ಳುತ್ತಾರೆ. ಏಕೆಂದರೆ ಇದು ಪವಿತ್ರ ಕುರ್‍ಆನ್ ಅವತರಿಸಿದ ಮಾಸ. ಒಳ್ಳೆಯ ಕೆಲಸಗಳನ್ನು ಮಾಡುತ್ತ ನಮಾಜ್, ದಾನ-ಧರ್ಮ(ಜಕಾತ್) ದಂತಹ ಪುಣ್ಯ ಕರ್ಮಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ವಿಶೇಷವಾಗಿ ರಂಜಾನ್ ತಿಂಗಳಲ್ಲೇ ಮಹಮ್ಮದ್(ಸ) ಪೈಗಂಬರರು ಈ ಮಾಸದಲ್ಲಿ ಬಲು ಉದಾರಿಗಳಾಗಿದ್ದರು ಎಂದು ಇತಿಹಾಸದಿಂದ ತಿಳಿದು ಬರುತ್ತದೆ. ಹಗಲು ರಾತ್ರಿಯೆಲ್ಲಾ ಸೃಷ್ಠಿಕರ್ತನ ಆರಾಧನೆಯಲ್ಲಿ … Read more

ಸಮಾಜವಾದಿ ಕ್ಯೂಬಾದ ವೈದ್ಯಕೀಯ ಕ್ರಾಂತಿ; ಜಗತ್ತಿಗೇ ಮಾದರಿ: ಜೈಕುಮಾರ್ ಹೆಚ್.ಎಸ್.

ಬೆಂಗಳೂರಿನಷ್ಟು ಜನಸಂಖ್ಯೆ ಹೊಂದಿರುವ ಪುಟ್ಟ ದೇಶ ಕ್ಯೂಬಾ ವೈದ್ಯಕೀಯ ರಂಗದಲ್ಲಿ ಮಾಡುತ್ತಿರುವ ಹೊಸ ಆವಿಷ್ಕಾರಗಳು ಮತ್ತು ಅದರ ವಿಶಿಷ್ಟ ಆರೋಗ್ಯ ವ್ಯವಸ್ಥೆಯ ಕಾರ್ಯಕ್ಷಮತೆ ಪ್ರತಿದಿನ ಸುದ್ದಿಯಲ್ಲಿವೆ. ಅಲ್ಲಿಯ ಜನರ ಜೀವಿತಾವಧಿ ಸುಮಾರು 78 ವರ್ಷ ಮತ್ತು ಅಲ್ಲಿನ ಹಲವು ಆರೋಗ್ಯ ಸೂಚ್ಯಂಕಗಳು ಅಭಿವೃದ್ಧಿ ಹೊಂದಿದ ದೇಶಗಳ ಮಟ್ಟದಲ್ಲಿದೆ. ಭೂಕಂಪ, ಚಂಡಮಾರುತ, ಇತ್ಯಾದಿ ವಿಪತ್ತಿನ ಕಾಲದಲ್ಲಿಯಂತೂ ವಿಶ್ವದಾದ್ಯಂತ ಕ್ಯೂಬಾದ ವೈದ್ಯರು ತಮ್ಮ ಅನುಪಮ ಸೇವೆಯಿಂದ ಮೇಲ್ಪಂಕ್ತಿಯಲ್ಲಿದ್ದಾರೆ. ಮಿಷನ್ ಐ ಹೆಸರಿನ ಕಾರ್ಯಕ್ರಮದಡಿ ಇತರೆ ದೇಶಗಳಲ್ಲಿ ಸುಮಾರು 35 ಲಕ್ಷ … Read more