ಬೆಳೆದಿದೆ ನೋಡಾ ಬೆಂಗಳೂರು ನಗರ!!!: ಅಖಿಲೇಶ್ ಚಿಪ್ಪಳಿ
ಹಿಂದಿನ ಭಾನುವಾರ ಸಾಗರದಲ್ಲಿನ ಸ್ವಸಹಾಯ ಗುಂಪಿನ ವಾರ್ಷಿಕ ಸಭೆ ಕರೆದಿದ್ದರು. ಪೇಟೆಯಲ್ಲಿ ತರಕಾರಿ ಬೆಳೆಯುವ ಬಗ್ಗೆ ಮಾಹಿತಿ ನೀಡಿ ಎಂಬುದು ಅವರ ಕೋರಿಕೆ. ವಾಯುಭಾರ ಕುಸಿತದಿಂದಾಗಿ ಅಂದು ಜೋರು ಮಳೆಯಿತ್ತು, ಕರೆಂಟು ಇರಲಿಲ್ಲ. ಅದೊಂದು ಸುಮಾರು 50-60 ಜನರಿರುವ ಚಿಕ್ಕ ಸಭೆ. ಸಭೆಯ ವಿಧಿ-ವಿಧಾನಗಳು ಮುಗಿದ ಮೇಲೆ ಮಾತಿಗೆ ಶುರುವಿಟ್ಟುಕೊಂಡಿದ್ದಾಯಿತು. ಆ ಸಭೆಯಲ್ಲಿ ಭಾಗವಹಿಸಿದ ಎಲ್ಲರೂ ಮೂಲತ: ಕೃಷಿ-ಕುಟುಂಬದವರೇ ಆಗಿದ್ದರು. ನಿಮ್ಮ ವಂಶವಾಹಿನಿಯಲ್ಲೇ ಕೃಷಿ-ತೋಟಗಾರಿಕೆಗೆ ಬೇಕಾಗುವ ಅಂಶವಿದೆ ಆದ್ದರಿಂದ ತರಕಾರಿ ಬೆಳೆಯುವ ಬಗ್ಗೆ ಆಮೇಲೆ ಮಾತನಾಡೋಣ ಎಂದು, … Read more