ಸಾಮಾನ್ಯ ಜ್ಞಾನ (ವಾರ 74): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: 1.    ಕೇಂದ್ರ ಸಂಗೀತ – ನಾಟಕಅಕಾಡೆಮಿಯಅಧ್ಯಕ್ಷರಾಗಿದ್ದ ಮೊದಲ ಕನ್ನಡಿಗಯಾರು? 2.    ಸಿಸ್ಮೋಗ್ರಫಿ ಇದುಯಾವುದರಕುರಿತುಅಧ್ಯಯನವಾಗಿದೆ? 3.    ಉಕಾಯ್ ನೀರಾವರಿಯೋಜನೆಯಾವ ನದಿಗೆ ಸಂಬಂಧಿಸಿದೆ? 4.    ಭಾರತದಲ್ಲಿಅತಿದೊಡ್ಡರೇಡಿಯೋಟೆಲಿಸ್ಕೋಪ್‍ಎಲ್ಲಿದೆ? 5.    ಯು.ಪಿ.ಎಸ್(UPS) ನ ವಿಸ್ತøತರೂಪವೇನು? 6.    ಅಂಬಿಕಾತನಯದತ್ತಇದುಯಾರಕಾವ್ಯನಾಮ? 7.    1954ರಲ್ಲಿ ಪಾಟೀಲ ಪುಟ್ಟಪ್ಪನವರು ಹೊರಡಿಸಿದ ಪತ್ರಿಕೆಯಾವುದು? 8.    ನಳಂದ ವಿಶ್ವವಿದ್ಯಾಲಯಯಾವಧರ್ಮದ ತತ್ವಗಳನ್ನು ತಳಹದಿಯಾಗಿ ಹೊಂದಿತ್ತು? 9.    ಭಾರತದಲ್ಲಿಮೊದಲ ಬಾರಿಗೆರೈಲ್ವೆ ಮಾರ್ಗಆರಂಭವಾದಾಗಗವರ್ನರ್‍ಜನರಲ್‍ಯಾರಾಗಿದ್ದರು? 10.    ಚಂಪಾರಣ್ಯರೈತ ಚಳುವಳಿ ಇದುಯಾರ ಮುಂದಾಳತ್ವದಲ್ಲಿ ನಡೆಯಿತು? 11.    ರಾಷ್ಟ್ರಧ್ವಜದಲ್ಲಿರುವ ಬಿಳಿ ವರ್ಣಯಾವುದರದೋತ್ಯಕವಾಗಿದೆ? 12.    ರಾಷ್ಟ್ರಕೂಟರರಾಜ್ಯ ಸ್ಥಾಪನೆಗೆ ಅಡಿಪಾಯ ಹಾಕಿದದೊರೆಯಾರು? … Read more

ಕಾಣದ ಕಣ್ಣಿಗೊಂದು: ಪ್ರಶಸ್ತಿ ಪಿ.

ಬೆಳಗ್ಗೆ ಹೊಂಬಿಸಿಲಿನೊಂದಿಗೆ ಮಗುವ ನಗುವಿನಂತೆ ಸೌಮ್ಯವಾಗಿದ್ದ ವರುಣದೇವ ಸಂಜೆಯಾಗುತ್ತಿದ್ದಂತೆ ಕಾಳಿಯಂತೆ ಆರ್ಭಟಿಸತೊಡಗಿದ್ದ. ಒಂದಾನೊಂದು ಕಾಲದ ಕೆರೆಗಳನ್ನೇ ಆಪೋಷನ ತೆಗೆದುಕೊಂಡು ಎದ್ದು ನಿಂತ ಅಪಾರ್ಟುಮೆಂಟುಗಳನ್ನೆಲ್ಲಾ ಮತ್ತೆ ಕೆರೆಗಳನ್ನಾಗಿಸಿಯೇ ಬಿಡೋ ಸಂಕಲ್ಪದಲ್ಲಿದ್ದಾನಾ ಇವನಿಂದು ಎಂಬ ಭಯ ರಸ್ತೆಗಳಲ್ಲಿ ಹರಿಯುತ್ತಿದ್ದ ಮೊಣಕಾಲುದ್ದದ ನೀರ ನೋಡಿ ಕಾಡುತ್ತಿತ್ತು. ಹಿಂದಿನ ದಿನವಷ್ಟೇ ಹೊಸದಾಗಿ ಮಾಡಿದ ಟಾರ್ ರೋಡನ್ನೆಲ್ಲಾ ಅಗೆದು, ಮುಚ್ಚದೇ ಹಾಗೇ ಬಿಟ್ಟ ಗ್ಯಾಸ್ ಕೇಬಲ್ಲಿನವರಿಗೆ ಬಸ್ಸಿನ ಚಕ್ರ ಹೂತು ಕುಂತ ಡ್ರೈವರ್ರು ಶಾಪ ಹಾಕುತ್ತಿದ್ದ. ಹೊಂಡಗಳ ತಪ್ಪಿಸಿ ಸರಿ ರಸ್ತೆಯಲ್ಲಿ ನಡೆಸಲೋಸುಗ ನಿಧಾನವಾದ … Read more

ಮೌಢ್ಯತೆಯ ಕೊಡಲಿಗೆ ಕಾಂತತೆಯ ಕಾವು: ರೋಹಿತ್ ವಿ. ಸಾಗರ್

  ಕಬ್ಬಿಣದಂತಹ ಕೆಲವು ವಸ್ತುಗಳನ್ನು ಪ್ರೀತಿಯಿಂದ ಸೆಳೆದು ಕೊಳ್ಳುವ ವಿಶೇಷ ರೀತ್ಯ ವಸ್ತುಗಳನ್ನು ಆಯಸ್ಕಾಂತಗಳು ಎಂದು ಕರೆಯುತ್ತೇವೆ. ಅವುಗಳಿಗೆ ಈ ಆಯಸ್ಕಾಂತ ಎಂಬ ಹೆಸರು ಬಂದಿದ್ದು ಒಲವು ಎಂಬ ಅರ್ಥ ನೀಡುವ ಐಮಂತ್ ಎಂಬ ಫ್ರೆಂಚ್  ಭಾಷೆಯ ಪದದಿಂದ. ಇಲ್ಲಿ ಒಲವು ಎಂದರೆ ಕಬ್ಬಿಣದಂತಹ ವಸ್ತುಗಳ ಬಗೆಗಿರುವ ಪ್ರೀತಿ ಎಂದು ಬೇರೆ ಬಿಡಿಸಿ ಹೇಳಬೇಕಾಗಿಲ್ಲ ಅಲ್ಲವೇ. ಪ್ರಾನ್ಸಿನವರು ಮಾತ್ರ ವಲ್ಲ ನೈಸರ್ಗಿಕವಾಗಿ ದೊರೆಯುತ್ತಿದ್ದ ಆಯಸ್ಕಾಂತಗಳನ್ನು ಮೊದಲ ಬಾರಿ ಹಡಗು ದೋಣಿಗಳಲ್ಲಿ ದಿಕ್ಕು ತೋರಿಸುವ  ಸೂಜಿಗಲ್ಲುಗಳಾಗಿ ಬಳಸಿದ್ದ ಚೀನಿಯರು … Read more

ಝೆನ್ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಮೀನಿನ ಕುರಿತು ತಿಳಿಯುವುದು. ಚುಆಂಗ್‌ ಝು ಒಂದು ದಿನ ತನ್ನ ಮಿತ್ರನೊಂದಿಗೆ ನದೀ ತಟದಲ್ಲಿ ನಡೆದುಕೊಂಡು ಹೋಗುತ್ತಿದ್ದರು.  ಚುಆಂಗ್‌ ಝು ತನ್ನ ಮಿತ್ರನಿಗೆ ಹೇಳಿದ, “ಮೀನುಗಳು ಈಜಾಡುತ್ತಿರುವುದನ್ನು ನೋಡು. ಅವು ಅದರಿಂದ ನಿಜವಾಗಿಯೂ ಸುಖಿಸುತ್ತಿವೆ.” “ನೀನು ಮೀನಲ್ಲವಲ್ಲ, ಆದ್ದರಿಂದ ಅವು ಸುಖಿಸುತ್ತಿವೆಯೋ ಇಲ್ಲವೋ ಎಂಬುದನ್ನು ನೀನು ನಿಜವಾಗಿಯೂ ತಿಳಿಯಲು ಸಾಧ್ಯವಿಲ್ಲ,” ಪ್ರತಿಕ್ರಿಯಿಸಿದ ಆ ಮಿತ್ರ. ಚುಆಂಗ್‌ ಝು ಹೇಳಿದ, “ನೀನು ನಾನಲ್ಲ. ಅಂದ ಮೇಲೆ ಮೀನುಗಳು ಸುಖಿಸುತ್ತಿವೆ ಎಂಬುದು ನನಗೆ ತಿಳಿದಿಲ್ಲ  ಎಂಬುದು ನಿನಗೆ ಹೇಗೆ … Read more

ಏನಿದು ಮೇಕೆದಾಟು???: ಅಖಿಲೇಶ್ ಚಿಪ್ಪಳಿ

ಕೊಡಗಿನಲ್ಲಿ ಹುಟ್ಟಿದ ಜೀವನಾಡಿ ನದಿ ಕಾವೇರಿಗೆ ಸಂಗಮ ಎಂಬಲ್ಲಿ ಅರ್ಕಾವತಿ ಎಂಬ ಮತ್ತೊಂದು ನದಿ ಸೇರುತ್ತವೆ. ಇಲ್ಲಿಂದ ಜಲಪಾತದೋಪಾದಿಯಲ್ಲಿ ಕಾವೇರಿ ದುಮ್ಮಿಕ್ಕುತ್ತಾಳೆ. ಕಡಿದಾದ ಕಣಿವೆಯಲ್ಲಿ ಸಾಗುವ ಕಾವೇರಿ ಸಂಗಮದಿಂದ ಮೂರುವರೆ ಕಿ.ಮಿ. ಸಾಗುವಷ್ಟರಲ್ಲಿ ಮೇಕೆದಾಟು ಸಿಗುತ್ತದೆ. ಹಿಂದೊಮ್ಮೆ ಹುಲಿಯೊಂದು ಮೇಕೆಯನ್ನು ಹಿಡಿಯಲು ಅಟ್ಟಿಸಿಕೊಂಡು ಬಂತಂತೆ. ಬೆದರಿದ ಮೇಕೆ ಜೋರಾಗಿ ಓಡಿ ಬಂದು ಜೀವವುಳಿಸಿಕೊಳ್ಳಲು ನದಿಯ ಈ ದಡದಿಂದ ಆ ದಡಕ್ಕೆ ಜಿಗಿಯಿತಂತೆ, ಹುಲಿಗೆ ಹಾರಲು ಸಾಧ್ಯವಾಗಲಿಲ್ಲ. ಇಲ್ಲಿ ಮೇಕೆಯ ಶೌರ್ಯವನ್ನು ಹೊಗಳಲು ಈ ಪ್ರದೇಶಕ್ಕೆ ಮೇಕೆದಾಟು ಎಂದು … Read more

’ಪಾನ ಮಹಿಮೆ’: ಗುಂಡುರಾವ್ ದೇಸಾಯಿ ಮಸ್ಕಿ

                                             ನನಗೆ ಇದುವರೆಗೂ ಅರ್ಥವಾಗದ ವಿಷಯವೆಂದ್ರೆ ಪಾರ್ಟಿ ಅಂದ್ರ ಜನ ಕುಡಿತ, ಕಡಿತಾ ಇರಬೇಕು ಅಂತ ಭಾವಸ್ತಾರಲ್ಲ ಯಾಕೆ ಅಂತ! ಅದು ಬಿಟ್ಟು ಸ್ವಾದಿಷ್ಟ ಭೋಜನ ಸವದ್ರ ಪಾರ್ಟಿ ಆಗಲ್ವಾ. ಇಂತಹ ವಿರೋಧ ಕಾರಣಕ್ಕಾಗಿಯೇ ನಾನು ಹಲವಾರು ಸಂಬಂಧಗಳನ್ನು ಕಳೆದುಕೊಂಡಿದ್ದೇನೆ. ಏನು ಚಟ ಮಾಡದ ಹುಂಬ ಎಂದು … Read more

ಕಾಡ ಹಾಡು: ಅಖಿಲೇಶ್ ಚಿಪ್ಪಳಿ

ಎ ಫಾರ್ ಆಪಲ್ ಯಾಕೆ ಅನಿಮಲ್ ಯಾಕಲ್ಲ? ಲಕ್ಷಗಟ್ಟಲೇ ಡೊನೇಷನ್ ತೆತ್ತು, ಅಸಾಧಾರಣವಾದ ಇಂಟರ್‍ಯೂನ ಎದುರಿಸಿ ಪುಟ್ಟಿಗೊಂದು ಸೀಟುಕೊಡಿಸಿ ನಿರಾಳವಾಗುವಂತಿಲ್ಲ. ಕ್ಲಾಸಿಗೆ ಮೊದಲಾಗಿ ಬರಬೇಕು, ಇದು ಎಲ್ಲಾ ತಂದೆ-ತಾಯಿಗಳ ಇಚ್ಛೆ. ಎಲ್.ಕೆ.ಜಿ.ಯಿಂದಲೇ ಟ್ಯೂಷನ್ ಶುರು. ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ  ಮುಂದಿರಬೇಕು. ಬಹುತೇಕ ಖಾಸಗಿ ಶಾಲೆಗಳಲ್ಲಿ ಹಾಗೂ ಸರ್ಕಾರಿ ಶಾಲೆಗಳಲ್ಲಿ ಇದೇ ನಿಯಮವಿದೆ. ಖಾಸಗಿ ಶಾಲೆಗಳು ಈ ಅಲಿಖಿತ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಿ ಯಶಸ್ಸುಗಳಿಸುತ್ತಾರೆ. ಪಾಪ ಸರ್ಕಾರಿ ಶಾಲೆಗಳ ಶಿಕ್ಷಕರನ್ನೂ ಸರ್ಕಾರ ಎಲ್ಲಾ ಕೆಲಸಗಳಿಗೂ ಬಳಸಿಕೊಳ್ಳುತ್ತದೆಯಾದ್ದರಿಂದ ಈ ನಿಯಮವನ್ನು … Read more

ಭವ: ಪ್ರಶಸ್ತಿ ಪಿ.

ಮಧ್ಯಾಹ್ನದಿಂದಲೂ ಮಳೆಯ ಕಣ್ಣಾಮುಚ್ಚಾಲೆಯಾಟದಲ್ಲಿ ಕಾಮನಬಿಲ್ಲಿನ ಚಿತ್ತಾರಗಳ ಬಿಡಿಸಿ ಸುಸ್ತಾದ ಸೂರ್ಯ ಮೋಡಗಳ ಮರೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾನೋ ಎಂಬಂತೆ ಕವಿದಿದ್ದ  ಮಬ್ಬುಗತ್ತಲು. ಇಲ್ಲಾಡಿ ಬೇಸರಗೊಂಡ ಮೋಡಗಳು ಇನ್ನೆಲ್ಲೋ ಹಾರಿದಂತೆ ಸೂರ್ಯ ಆಗಸವನ್ನೇ ಪಟವನ್ನಾಗಿಸಿ ಬಿಡುವು ಕಳೆಯುತ್ತಿದ್ದ . ಹಳದಿ ಕೇಸರಿಗಳ ಚಿತ್ತಾರ ಬಿಡಿಸುತ್ತಿದ್ದ ರವಿ, ಹೊಗೆಯುಗುಳುತ್ತಿದ್ದ ಬಸ್ಸುಗಳು, ದಿನವಿಡೀ ಸುರಿದ ಮಳೆಯಿಂದ ತಂಪಾದ ದಾರಿಪಕ್ಕದ ಮರಗಳು, ಕೊಚ್ಚೆಯಿಂದ ಕಾಲಿಡಲೂ ಆಗದಂತಹ ರಸ್ತೆಯ ಇಕ್ಕೆಲಗಳು..ಬದುಕೂ ಹೀಗೆ ಅಲ್ಲವೇ ? ಚಂದವೆಂದುಕೊಂಡ್ರೆ ಚಂದ ಚಂದ. ಗೋಳೆಂದುಕೊಂಡ್ರೆ ಗೋಳೇ ಗೋಳು ! ಪ್ರಕೃತಿಗೆ … Read more

ಮೂವರ ಕವನಗಳು: ಮಲ್ಲಿಕಾರ್ಜುನ ಗೌಡ್ರು, ರಾಘವೇಂದ್ರ ಇ. ಆಶಾದೀಪ

೧) ಸಾಕ್ಷಿ: ನಾನು ಕೊಟ್ಟ ಕಾಣಿಕೆಗಳಿಗೆ ನಿನ್ನ ನೆನಪುಗಳೇ.. ನನಗೆ ಸಾಕ್ಷಿ.! ನೀನು ಕೊಟ್ಟ ನೆನಪುಗಳಿಗೆ ನನ್ನ ಕಣ್ಣೀರ ಹನಿಗಳೇ.. ನಿನಗೆ ಸಾಕ್ಷಿ..!! ೨) ಶ್ರೀಮಂತ: ನಾನು ನೋವುಗಳ  ಆಗರ್ಭ ಶ್ರೀಮಂತ ನಾ ಬಚ್ಚಿಟ್ಟ ಆಸ್ತಿ.. ಯಾರೂ ಕೇಳದ, ಯಾರೂ ಬೇಡದ, ಯಾರೂ ಕದಿಯದ, 'ಕರಗದ ಕಣ್ಣೀರ ಹನಿಗಳು' ನಾನು ನೋವುಗಳ ಆಗರ್ಭ ಶ್ರೀಮಂತ -ಮಲ್ಲಿಕಾರ್ಜುನ ಗೌಡ್ರು           ಕಾಯುವಿಕೆ ಜಗದ ನಿಯಮ ಕಾಡಿಸದಿರು ಓ ಸಖೀ ನೀ ನನ್ನಿಂದ ದೂರಾಗಿ … Read more

’ಪ್ರೇಮಕಾವ್ಯ’ ಕಾದಂಬರಿ ಕುರಿತು: ವೀರಣ್ಣ ಮಂಠಾಳಕರ್, ಬಸವಕಲ್ಯಾಣ

ಕಾವ್ಯಶ್ರೀ ಮಹಾಗಾಂವಕರ್ ಅವರ ಸಾಮಾಜಿಕ ಕಾದಂಬರಿ ’ಪ್ರೇಮಕಾವ್ಯ’ ಜಾತಿಯೆಂಬ ಕಂದಾಚಾರದ ನಡುವೆ ಪ್ರೇಮಿಗಳಿಬ್ಬರೂ ಸಿಕ್ಕಿ ಬೀಳುವ ಕಥಾ ವಸ್ತು ಹೊಂದಿದೆ. ಸರಳ ನಿರೂಪಣೆ, ಸರಾಗವಾಗಿ ಓದಿಸಿಕೊಂಡು ಹೋಗುವ ಸಂಭಾಷಣೆ, ಯುವ ಪ್ರೇಮಿಗಳಿಬ್ಬರು ಪ್ರೀತಿಗಾಗಿ ನಡೆಸುವ ಹೋರಾಟ ಮನ ಮುಟ್ಟುತ್ತದೆ. ಬಸ್ ಪ್ರಯಾಣದ ಮೂಲಕ ಎರಡು ಹೃದಯಗಳ ಮಧ್ಯೆ ಆಗುವ ತಲ್ಲಣಗಳು, ಅಲ್ಲಿಂದಲೇ ಶುರುವಾಗುವ ಪರಿಚಯ ಅರಿಯದೇ ಹುಟ್ಟಿಕೊಳ್ಳುವ ಪ್ರೀತಿ.  ಬ್ರಾಹ್ಮಣ ಜಾತಿಯ ಕಟ್ಟುಪಾಡುಗಳಿಗೆ ಕಟಿಬಿದ್ದು ಹೆತ್ತವರು ನಡೆಸುವ ದರ್ಪ, ತಾಯಿ ಭಾಗ್ಯಳ ಸಹಜ ಉಪದೇಶ, ಹಲವು ಕಷ್ಟ, … Read more

ಝೆನ್ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಮಹಾತ್ಮ ಪರ್ವತದ ತುದಿಯಲ್ಲಿ ಇರುವ ಪುಟ್ಟ ಮನೆಯಲ್ಲಿ ವಿವೇಕಿಯಾದ ಮಹಾತ್ಮನೊಬ್ಬ ವಾಸಿಸುತ್ತಿದ್ದಾನೆ ಎಂಬ ಸುದ್ದಿ ಗ್ರಾಮಾಂತರ ಪ್ರದೇಶದಲ್ಲಿ ಹರಡಿತು.  ಹಳ್ಳಿಯ ನಿವಾಸಿಯೊಬ್ಬ ಸುದೀರ್ಘವೂ ಕಠಿಣವೂ ಆದ ಪ್ರಯಾಣ ಮಾಡಿ ಅವನನ್ನು ಭೇಟಿಯಾಗಲು ನಿರ್ಧರಿಸಿದ. ಆ ಮನೆಯನ್ನು ಅವನು ತಲುಪಿದಾಗ ಒಳಗಿದ್ದ ವೃದ್ಧ ಸೇವಕನೊಬ್ಬ ಬಾಗಿಲಿನಲ್ಲಿ ತನ್ನನ್ನು ಸ್ವಾಗತಿಸಿದ್ದನ್ನು ಗಮನಿಸಿದ. ಅವನು ಸೇವಕನಿಗೆ ಹೇಳಿದ, “ವಿವೇಕಿಯಾದ ಮಹಾತ್ಮನನ್ನು ನಾನು ನೋಡಬಯಸುತ್ತೇನೆ.” ಸೇವಕ ನಸುನಕ್ಕು ಅವನನ್ನು ಮನೆಯೊಳಕ್ಕೆ ಕರೆದೊಯ್ದ. ಮನೆಯಲ್ಲಿ ಕೋಣೆಯಿಂದ ಕೋಣೆಗೆ ಹೋಗುತ್ತಿರುವಾಗ ಮಹಾತ್ಮನನ್ನು ಸಂಧಿಸುವ ನಿರೀಕ್ಷೆಯಿಂದ … Read more

ಅಣ್ಣಾವ್ರ ನೆನಪುಗಳು: ಹೊ.ರಾ.ಪರಮೇಶ್ ಹೊಡೇನೂರು

       ಇದೇ ಏಪ್ರಿಲ್ 12ಕ್ಕೆ ಕನ್ನಡಿಗರ ಕಣ್ಮಣಿ, ನಟಸಾರ್ವಭೌಮ, ವರನಟ ಡಾ.ರಾಜಕುಮಾರ್ ಅವರು ವಿಧಿವಶರಾಗಿ ಒಂಭತ್ತು ವರ್ಷಗಳು ಪೂರೈಸಿವೆ.ಭೌತಿಕವಾಗಿ ಇಲ್ಲವಾದರೂ ಜನ ಮಾನಸದಲ್ಲಿ ಅವರು ಸ್ಥಾಪಿಸಿರುವ ಛಾಪು ಚಿರ ಕಾಲ ಉಳಿಯವಂತಾದ್ದು. ಅಣ್ಣಾವ್ರ ಒಂಭತ್ತನೇ ಪುಣ್ಯತಿಥಿ  ಹಾಗೂ ಅವರ ಜನ್ಮ ದಿನ(ಏಪ್ರಿಲ್-24)) ಸಂದರ್ಭದಲ್ಲಿ  ಈ ಲೇಖನ.              ಕನ್ನಡ ಚಿತ್ರರಂಗದ ಅನಭಿಶಕ್ತ ದೊರೆ, ಕಲಾಕೌಸ್ತುಭ, ಕರ್ನಾಟಕ ರತ್ನ, ಪದ್ಮಭೂಷಣ ಮತ್ತು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದು … Read more

ಹರಕೆ ತೀರಿತ್ತು…! (ಕೊನೆ ಭಾಗ) : ಸಾವಿತ್ರಿ ವಿ. ಹಟ್ಟಿ

ನಾಗರಾಜ ಗದಗ್‍ಗೆ ಸ್ಥಳಾಂತರವಾದ ಮೇಲೆ ಮೊದಲ ದಿನಗಳಲ್ಲಿ ಮಂಕು ಬಡಿದವನಂತೆ ಕುಳಿತಿರುತ್ತಿದ್ದ. ಕ್ರಮೇಣ ಅವನು ಗೆಲುವಾಗತೊಡಗಿದ. ಮಕ್ಕಳೊಂದಿಗೆ ಬ್ಯಾಂಕ್ ರೋಡ್‍ನಲ್ಲಿರುವ ವಾಸು ಸ್ಟೋರ್‍ನಿಂದ ದೀಪಿಕಾಳಿಗೆ ಬೇಕಾಗುವ ಹೊಲಿಗೆ ಪರಿಕರಗಳನ್ನು ತರುವುದು, ಮಾರ್ಕೆಟ್‍ನಿಂದ ತರಕಾರಿ ತರುವುದು, ಸಾಯಂಕಾಲ ಹೆಂಡತಿ-ಮಕ್ಕಳೊಂದಿಗೆ ಪಂಚಾಕ್ಷರಿ ಗವಾಯಿಗಳ ಮಠಕ್ಕೆ ಹೋಗಿ ಅಜ್ಜನವರ ದರ್ಶನ ಪಡೆಯುವುದು… ಹೀಗೆ ಹೊಸ ದಿನಚರಿಯೊಂದಿಗೆ ಅವನು ಹೊಂದಾಣಿಕೆಯನ್ನು ಸಾಧಿಸತೊಡಗಿದ್ದ. ದೀಪಿಕಾಳ ಹೊಲಿಗೆ ವಿದ್ಯೆ ತನ್ನ ನಿಜವಾದ ವಿಸ್ತಾರವನ್ನು ವ್ಯಕ್ತಪಡಿಸುವ ಕಾಲ ಅದಾಗಿತ್ತು. ಆಕೆ ಮನೆಯ ಹತ್ತಿರದಲ್ಲೇ ಇರುವ ಪಠೇಲ್ ರೋಡ್‍ನಲ್ಲಿ, … Read more

ಸಾಮಾನ್ಯ ಜ್ಞಾನ (ವಾರ 73): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಇತ್ತೀಚಿಗೆ ೨೦೧೫ ರ ಅಂಬೇಡ್ಕರ್ ಪ್ರಶಸ್ತಿಯನ್ನು ಶ್ರೀ ಸಿದ್ದರಾಮಯ್ಯನವರು ಯಾರಿಗೆ ಪ್ರಧಾನ ಮಾಡಿದರು? ೨.    ಫೀಫಾ (FIFA) ನ ವಿಸ್ತೃತ ರೂಪ? ೩.    ಪದಬಂಧವನ್ನು ಮೊದಲಿಗೆ ಕಂಡುಹಿಡಿದವರು ಯಾರು? ೪.    ಡಿ. ಎಲ್. ಎನ್ ಇದು ಯಾರ ಕಾವ್ಯನಾಮವಾಗಿದೆ? ೫.    ಕೇಂದ್ರ ಆರ್ಯುವೇದ ಸಂಶೋಧನಾ ಸಂಸ್ಥೆ ಎಲ್ಲಿದೆ? ೬.    ಹಕ್ಕಿಗಳಲ್ಲಿ ಅತ್ಯಂತ ಚಿಕ್ಕದಾದ ಹಕ್ಕಿ ಯಾವುದು? ೭.    ಅತಿ ಹೆಚ್ಚು ಮಳೆ ಬೀಳುವ ಪ್ರದೇಶ ಚಿರಾಪುಂಜಿ ಯಾವ ರಾಜ್ಯದಲ್ಲಿದೆ? ೮.    ದಕ್ಷಿಣ ಭಾರತದಿಂದ ಮೊದಲ … Read more

ನಾಯಿಮರಿಯ ಇಂಗ್ಲೀಷೂ.. ಕೇಶಣ್ಣನ ಹಲ್ಲು ಸೆಟ್ಟೂ..: ಅನಿತಾ ನರೇಶ್ ಮಂಚಿ

ಮಕ್ಕಳಿಗೆ ಯಾವಾಗಲೂ ಮನುಷ್ಯರಿಗಿಂತ ಪ್ರಾಣಿಗಳೇ ಇಷ್ಟವಾಗುವುದು. ಇನ್ನೂ ನಡೆಯಲು ಬಾರದ ಪುಟ್ಟು ಮಕ್ಕಳನ್ನು ಕೇಳಿ ನೋಡಿ. ’ಮನೆಯಲ್ಲಿ ಆಡಲಿಕ್ಕೆ ಆಟದ ಸಾಮಾನು ಕೊಡ್ತೀನಿ, ತಿನ್ನೋದಿಕ್ಕೆ ತಿಂಡಿ ಕೊಡ್ತೀನಿ’ ಎಂದೆಲ್ಲಾ ಗೋಗರೆದರೂ ಬಾರದಿರುವ ಮಕ್ಕಳು ’ಮನೆಯಲ್ಲಿ ನಾಯಿ ಮರಿ ಇದೆ, ಬೆಕ್ಕಿನ ಮರಿ ಇದೆ, ಪುಟಾಣಿ ಉಂಬೆ ಕರು ಇದೆ ಬರ್ತೀಯಾ’ ಅಂದ ಕೂಡಲೇ ಅಮ್ಮನ ತೆಕ್ಕೆ ಬಿಡಿಸಿಕೊಂಡು ಚಾಚಿರುವ ನಮ್ಮ ಕೈಗೆ ಹಾರುತ್ತವೆ. ಬೇರೆಯವರ ಮನೆಯಲ್ಲಿ ಸಾಕಿದ ಪ್ರಾಣಿಗಳನ್ನು ನೋಡಿ ಸಂತಸ ಪಡುವುದೇನೋ ಸರಿ. ಆದರೆ ನಮ್ಮಲ್ಲೂ … Read more

ಸೂರ್ಯನ ಸುತ್ತುವ ಗ್ಲೋಬು ಮತ್ತು ನ್ಯೂಟನ್ನಿನ ಸೇಬು: ರೋಹಿತ್ ವಿ. ಸಾಗರ್

ಮೊನ್ನೆ ಹತ್ತಿರದ ಪ್ರಾಥಮಿಕ ಶಾಲೆಯೊಂದರ ಬಳಿ ಹೋಗುತ್ತಿದ್ದೆ, ಮೈದಾನದಲ್ಲಿ ‘ಸೂರ್ಯ’ ಎಂಬ ಫಲಕ ಹಿಡಿದ ಒಬ್ಬ ಹುಡುಗ ನಿಂತಿದ್ದ, ಆ ಶಾಲೆಯ ಮೇಷ್ಟ್ರು ಕೈಯಲ್ಲಿ ಒಂದು ಗ್ಲೋಬು ಹಿಡಿದು ಆ ಹುಡುಗನ ಸುತ್ತಾ ಸುತ್ತುತ್ತಿದ್ದರು ಉಳಿದವರು ಅವರಿಬ್ಬರನ್ನೇ ಬಾಯಿ ಕಳೆದುಕೊಂಡು ನೋಡುತ್ತಾ ನಿಂತಿದ್ದರು ನಾನೂ ಅವರನ್ನು ಸೇರಿಕೊಂಡೆ. ಅವರೇಕೆ ಹಾಗೆ ಮಾಡುತ್ತಿದ್ದಾರೆ ಎಂದು ಆ ಕ್ಷಣ ಅರ್ಥವಾಗಲಿಲ್ಲ, ಆಮೇಲೆ ವಿಷಯ ಹೊಳೆಯಿತು, ಗ್ರಹಗಳ  ಚಲನೆಯ ಬಗ್ಗೆ ಪಾಠ ಮಾಡಲು ಆ ಶಿಕ್ಷಕ ಈ ಚಟುವಟಿಕೆಯನ್ನು ಮಾಡಿಸುತ್ತಿದ್ದರು.  ಈಗ … Read more

ಲಿನಕ್ಸ್ install ಮಾಡೋದು ಹೇಗೆ ?: ಪ್ರಶಸ್ತಿ ಪಿ.

ಕಂಪ್ಯೂಟರನ್ನು ಹೆಚ್ಚೆಚ್ಚು ಬಳಸೋರಿಗೆ ಲಿನಕ್ಸೆನ್ನೋದು ಪರಿಚಿತವಾದ್ರೂ ಹೊಸದಾಗಿ ಬಳಸೋರಿಗೆ ಅದ್ರ ಬಗ್ಗೆ ಇಲ್ಲದ ಭಯ ಇರ್ಬೋದು.ಏ ಲಿನಕ್ಸು ಸಿಕ್ಕಾಪಟ್ಟೆ ಕಷ್ಟ ಮಾರಾಯ, ಎಲ್ಲದಕ್ಕೂ ಕಮಾಂಡ್ ಕೊಡ್ತಾ ಕೂರ್ಬೇಕು ಅಂತ ಓಬಿರಾಯನ ಕಾಲದಲ್ಲಿ ಯಾರೋ ಹೇಳಿದ್ದನ್ನೇ ನಂಬಿಕೊಂಡು ಕೂರೋರು ಅದ್ರಲ್ಲಿ ಎಷ್ಟು ಪ್ರತಿಶತ ಸತ್ಯವಿದೆ ಅಂತ ಪರೀಕ್ಷಿಸಲೂ ಹೋಗೋಲ್ಲ. ಕಂಪ್ಯೂಟರ್ ಕೊಳ್ಳುವಾಗ ಕೆಲವೇ ಕೆಲವು ಕಂಪ್ಯೂಟ್ರುಗಳ ಜೊತೆಗೆ ಮಾತ್ರ ಒರಿಜಿನಲ್ ವಿಂಡೋಸ್ ಬರುತ್ತೆ. ಉಳಿದಿದ್ದೆಲ್ಲಾ ಪೈರೇಟೆಡ್ ಅಥವಾ ಕಳ್ಳಮಾಲು ! ಚೈನಾ ಬಜಾರ್ಗೆ ಹೋಗಿ ಒಂದು ಕಳ್ಳಮಾಲಿನ ಶರ್ಟೋ … Read more

ಹರಕೆ ತೀರಿತ್ತು…! (ಮೊದಲ ಭಾಗ) : ಸಾವಿತ್ರಿ ವಿ. ಹಟ್ಟಿ

ದೀಪಿಕಾ ಮೇಲೆದ್ದು ಕುಳಿತಳು. ಎಷ್ಟೊ ಹೊತ್ತು ನಿದ್ರೆ ಬಾರದೆ ಸೆಖೆ ಸೆಖೆ ಎಂದು ಒದ್ದಾಡುತ್ತಲೆ ಇದ್ದ ಪತಿ ನಾಗರಾಜ ಅದೇ ದನೇ ನಿದ್ರೆ ಹೋಗಿದ್ದ. ಗಡಿಯಾರದ ಕಡೆ ನೋಡಿದಳು. ಆಗಲೆ ಮಧ್ಯರಾತ್ರಿ. ಪಕ್ಕದಲ್ಲಿ ಮಕ್ಕಳು ಲೋಕದ ಯಾವ ಚಿಂತೆಯ ಸೋಂಕೂ ಇಲ್ಲದೆ ಶಾಂತವಾಗಿ ನಿದ್ರಿಸುತ್ತಿದ್ದಾರೆ. ಅವಳಿಗೆ ಮಾತ್ರ ನಿದ್ರೆ ಸನಿಹವೂ ಸುಳಿಯುತ್ತಿಲ್ಲ. ಅವಳ ಒಡಲು ಬೆಂಕಿಗೆ ಆಹುತಿಯಾಗಿ ದಗದಗಿಸುತ್ತಿದೆ. ಕಟು ಸತ್ಯ ಸಂಗತಿಯನ್ನು ತಿಳಿದುಕೊಂಡಾಗಲೆ ಎದೆ ಬಿರಿದು ಎರೆಭೂಮಿ ಬಾಯಿ ಬಿಟ್ಟಂತಾಗಿದೆ. ಕಣ್ಣುಗಳಲ್ಲಿ ಆ ಮದ್ಯಾಹ್ನದವರೆಗೂ ನಳನಳಿಸುತ್ತಿದ್ದ … Read more

ಅಲ್ಲಿ ಮಾವಿಗೆ ಮರಣದಂಡನೆ – ಇಲ್ಲಿ ಕಾಡೆಮ್ಮೆ ಕರುವಿನ ದುರಂತ: ಅಖಿಲೇಶ್ ಚಿಪ್ಪಳಿ

ನೈಸರ್ಗಿಕ ಸಂಪತ್ತನ್ನು ಬರಿದು ಮಾಡಲು ಯಾರೆಲ್ಲಾ, ಏನೆಲ್ಲಾ ದಾರಿಗಳನ್ನು ಹುಡುಕುತ್ತಾರೆ. ಪಶ್ಚಿಮಘಟ್ಟಗಳ ಕಾಡನ್ನು ಬರಿದು ಮಾಡಲಾಗಿದೆ. ಅಳಿದುಳಿದ ಅರಣ್ಯವನ್ನು ನುಂಗಿ ನೊಣೆಯುವ ಹಂತಕ್ಕೆ ಸರ್ಕಾರವೇ ಬಂದು ನಿಂತಿದೆ. ನಮ್ಮ ಘನ ಸರ್ಕಾರ ಒಂದು ಆದೇಶವನ್ನು ಹೊರಡಿಸಿದೆ. ಈ ಆದೇಶದ ಪ್ರಕಾರ, ನೀಲಗಿರಿ, ಅಕೇಶಿಯಾದ ಕೆಲವು ತಳಿಗಳು, ಅಡಕೆ-ತೆಂಗಿನ ಮರಗಳು, ನಿಂಬೆ-ಪೇರಳೆ ಗಿಡ, ಕಾಫಿ ಗಿಡ, ಹಳದಿ ಬಿದಿರು, ಹೆಬ್ಬೇವು, ಶಮೆಗಳ ಹೀಗೆ ಒಟ್ಟು 26 ಗಿಡ-ಮರಗಳಿಗೆ ಅರಣ್ಯ ಇಲಾಖೆಯಿಂದ ಅನುಮತಿ ಪಡೆಯುವುದರಿಂದ ವಿನಾಯತಿ ನೀಡಲಾಗಿದೆ. ಅಂದರೆ, ಅರಣ್ಯ … Read more

ಜೇ.ಸಿ.ಬಿ!: ಗುರುಪ್ರಸಾದ್ ಕುರ್ತಕೋಟಿ

ಇಲ್ಲಿಯವರೆಗೆ ಬೆಳ್ಳಂ ಬೆಳಿಗ್ಗೆ ಅಮೇರಿಕದಿಂದ ವೆಂಕಟ್ ಕಳಿಸಿದ್ದ ಒಂದು ಇಮೇಲ್ ಭಾರತದಲ್ಲಿದ್ದ ಅವನ ಬಾಸ್ ಸುಧೀರನನ್ನು ಅಧೀರನನ್ನಾಗಿಸಿತ್ತು! ಅದು ಅಲ್ಲಿನ ಒಂದು ಬಹು ಮುಖ್ಯ ಸುದ್ದಿಯನ್ನು ಭಿತ್ತರಿಸಿದ ಸಂದೇಶವಾಗಿತ್ತು. ಇವರ ಕಂಪನಿಯ ಅಮೆರಿಕಾದ ಮೂಲ ಶಾಖೆಯ ಉಪಾಧ್ಯಕ್ಷ ನಾಗಿದ್ದ ರೋಜರ್ ನನ್ನು ಅಲ್ಲಿನ ಆಡಳಿತ ಮಂಡಳಿ ಕಿತ್ತೊಗೆದಿತ್ತು. ಖಾಲಿಯಾದ ಅವನ ಸ್ಥಾನದಲ್ಲಿ ಮೂವತ್ತು ವರ್ಷದಿಂದ ಅದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಜಾನ್ ಸಿ. ಬೇಕರ್ ನನ್ನು ಕುಳ್ಳಿರಿಸಿದ್ದರು.  …ಅಮೆರಿಕಾದಲ್ಲಿ ಇದೆಲ್ಲ ಈಗ ಮಾಮೂಲಿ. ಅದು ಕಂಪನಿಯ ವೆಚ್ಚಗಳ … Read more

ಮೂರು ಕವಿತೆಗಳು: ಸಂತೋಷಕುಮಾರ ಸೋನಾರ, ಲಕ್ಷ್ಮೀಕಾಂತ ಇಟ್ನಾಳ, ನಳಿನಾಕ್ಷಿ ಹೀನಗಾರ್

ಅಪ್ಪ ಬೆಂಕಿ ಉಗುಳುವ ಕಣ್ಣು| ಘರ್ಜಿಸುವ ದನಿ| ಹೃದಯ ಸೂಕ್ಷ್ಮ | ಒಮ್ಮೊಮ್ಮೆ ಉಗ್ರ ಪ್ರತಾಪಿ | ಮಗದೊಮ್ಮೆ ಮಗುವಿನ ಮನಸ್ಸು|  ಅರ್ಥಕ್ಕೆ ನಿಲುಕದಾ ನನ್ನ ಅಪ್ಪ ನೆನಪಾಗುತ್ತಾರೆ !   ಏನೀ ಪ್ರಶ್ನೆಗಳು? ಈ ಹಳೆಯ ಕಾಲದ ಮಂದಿ| ಏನೇನೋ ಕೇಳುವರು ದೊಡ್ಡ ವೈದ್ಯರಿಗೇ ಪ್ರಶ್ನೆ | ಈ ನರ್ಸುಗಳು |  ಬಿಳಿ ಬಟ್ಟೆ ವೈದ್ಯರು ಕಂಡಾಪಟ್ಟೆ ಓದಿದವರು|  ಆತನ ಪ್ರಶ್ನೆಗಳಿಗೆ ಉತ್ತರಿಸಲಾರರು ಅದಕ್ಕೆ ಅಪ್ಪ ನೆನಪಾಗುತ್ತಾರೆ ! ಇನ್ನೂ ಈ ಮಕ್ಕಳು ಮರಿಗಳು? ಚಿಕ್ಕವರಿದ್ದಾಗ … Read more

ಝೆನ್ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಜ್ಞಾನೋದಯವಾದವ ಯುವ ಸನ್ಯಾಸಿಯೊಬ್ಬ ಜ್ಞಾನೋದಯದ ಅತ್ಯುನ್ನತ ಮಟ್ಟವನ್ನು ತಲುಪಿದ್ದಾನೆಂದು ಗುರುಗಳು ಒಂದು ದಿನ ಘೋಷಿಸಿದರು. ಈ ವಾರ್ತೆ ಸಂಭ್ರಮಕ್ಕೆ ಕಾರಣವಾಯಿತು. ಯುವ ಸನ್ಯಾಸಿಯನ್ನು ನೋಡಲು ಕೆಲವು ಸನ್ಯಾಸಿಗಳು ಹೋದರು. “ನಿನಗೆ ಜ್ಞಾನೋದಯವಾಗಿದೆ ಎಂಬ ಸುದ್ದಿ ಕೇಳಿದೆವು. ಅದು ನಿಜವೇ?” ಕೇಳಿದರು ಸನ್ಯಾಸಿಗಳು. “ಅದು ನಿಜ,” ಉತ್ತರಿಸಿದ ಯುವ ಸಂನ್ಯಾಸಿ. “ಈಗ ನೀನು ಹೇಗಿರುವೆ?” ವಿಚಾರಿಸಿದರು ಸಂನ್ಯಾಸಿಗಳು. “ಎಂದಿನಂತೆ ದುಃಖಾರ್ತ,” ಪ್ರತಿಕ್ರಿಯಿಸಿದ ಯುವ ಸಂನ್ಯಾಸಿ ***** ೨. ಸಭ್ಯಾಚಾರ ಒಂದು ದಿನ ಆ ಪ್ರಾಂತ್ಯದ ಆಡಳಿತದ ಜವಾಬ್ದಾರಿ … Read more

ಕಿರು ಲೇಖನಗಳು: ಕುಮಾರಿ ವರ್ಷಾ

ಪರಿವರ್ತನೆ ಒಂದು ಊರಲ್ಲಿ ಪುಟ್ಟ ಎಂಬ ಹುಡುಗ ಇದ್ದ.ಇವನು ಆ ಊರಿನ ಕಿಲಾಡಿ ಕಿಟ್ಟ ಮುಂಜಾನೆಯಿಂದ ಸಂಜೆಯವರೆಗೆ ಆಟ ಬಿಟ್ಟರೆ ಬೇರೆ ಏನೂ ಮಾಡುತ್ತಿರಲಿಲ್ಲ. ಇವನ ತಂದೆ ತಾಯಿಯೂ ರೈತಾಪಿ ಜನರು.ಸೂರ್ಯನ ಕಿರಣಗಳು ಭೂಮಿಯ ಮೇಲೆ ಬೀಳುವ ಮೊದಲೇ ಹೊಲದಲ್ಲಿ ಕೆಲಸಕ್ಕೆ ಹೋಗುತ್ತಿದ್ದರು. ಮತ್ತೇ ರಾತ್ರಿನೇ ಮನೆಗೆ ಬರುತ್ತಿದ್ದರು. ಹೀಗಾಗಿ ಅವರಿಗೆ ಮಗ ಏನು ಮಾಡುತ್ತಿದ್ದಾನೆ ಎನ್ನುವುದು ಗೊತ್ತಾಗುತ್ತಿದ್ದಿಲ್ಲ. ಪಾಲಕರು ಯಾವಾಗಲೂ ತಮ್ಮ ಮಕ್ಕಳು ಆದರ್ಶ ವ್ಯಕ್ತಿಗಳಾಗಬೇಕೆಂದು ನಿರೀಕ್ಷಿಸುತ್ತಾರೆ. ಹಾಗೆಯೇ ಪುಟ್ಟನ ತಂದೆ ತಾಯಿಯೂ ಸಹ, ತಮ್ಮ … Read more

ನಡುವೆ ಸುಳಿವಾತ್ಮ…: ಮಹಾದೇವ ಹಡಪದ

 ಬನದ-ಭಾರತ ಹುಣಿವಿಗೆ ಯಲ್ಲಮ್ಮ ತಾಯಿ ಜಾತ್ರೆ ಜೋರು ನಡಿತದ. ಉಡಿ ತುಂಬಸೋದು, ಮುತ್ತು ಕಟಗೊಂಡವರು ಸೇವಾ ಮಾಡೋದು, ಬೇವಿನ ತಪ್ಪಲದಾಗ ಕುಂತ ತಾಯಿಯನ್ನ ಎರೆಯೋದು, ದೀಡ ನಮಸ್ಕಾರ ಹಾಕೋದು, ಪಡ್ಡಲಗಿ ಹಿಡದು ನೇಮದ ಸಲುವಾಗಿ ನಾಕೈದು ಮನಿ ಜೋಗ ಬೇಡೋದು ಹಿಂಗ ಒಕ್ಕಲ ಮಕ್ಕಳ ಮನಿಯೊಳಗ ಸಡಗರ ಹೊಗೆಯಾಡತಿರತದ. ಜಡೆಬಿಟ್ಟ ಜೋಗಮ್ಮ ಜೋಗಪ್ಪಗಳು ತಿಂಗಳ ಕಾಲ ಬಿಡುವಿಲ್ಲದ ಮುಯ್ಯಿ ಮಾಡತಿರತಾರು. ಬಳಿ ಒಡೆದು ರಂಡೆ ಮಾಡೋದರಿಂದ ಶುರುವಾಗುವ ವಿಧಿವಿಧಾನಗಳು ಸೀರಿ ಉಡಿಸಿ, ಮುತ್ತು ಕಟ್ಟಿ, ಕುಂಕಮ ಇಡೋವರೆಗೂ … Read more

ಸೂರ್ಯನ ಮೇಲೆ ಇರಲಿ ಭಕ್ತಿ, ಕೊಡುತಾನಂತೆ ಪುಗಸಟ್ಟೆ ಸೌರಶಕ್ತಿ: ರೋಹಿತ್ ವಿ. ಸಾಗರ್

ನಿಸರ್ಗದ ಅತೀ ಬುದ್ಧಿವಂತ ಕೂಸು ಎಂದೇ ಕರೆಯಲ್ಪಡುವ ಮಾನವನ ಅತೀ ಬುದ್ಧಿವಂತಿಕೆಯ ಪರಾಕಾಷ್ಟೆ ಆ ನಿಸರ್ಗದ ಬುಡವನ್ನೇ ಅಲುಗಾಡಿಸುವಂತದ್ದು. ಕುತೂಹಲ ಯೋಚನಾ ಸಾಮರ್ಥ್ಯದ ಬಲದಿಂದ  ಮೊದಲು ಬೆಂಕಿಯನ್ನು ಕಂಡುಹಿಡಿದ, ಅದರಿಂದ  ಬೇಕಾದದ್ದು, ಬೇಡವಾದದ್ದು ಎಲ್ಲವನ್ನೂ ಎಗ್ಗಿಲ್ಲದೆ ಮಾಡತೊಡಗಿದ. ಬೇಯಿಸಿದ ಆಹಾರ ರುಚಿಯೆನಿಸಿತು; ಬೆಂಕಿ ಉರಿಸಲು ಕಟ್ಟಿಗೆ ಬೇಕು ಕಾಡು ಕಡಿದ, ಬೆಂಕಿಯ ಬೆಳಕು ಬೇಕು ಕಾಡು ಕಡಿದ, ಮರಕ್ಕಿಂತ ಕಲ್ಲಿದ್ದಲು ಉತ್ತಮ ಎಂದು ಅರಿತ, ಗಣಿ ಬೇಕು, ಕಾಡು ಕಡಿದ, ವಿದ್ಯುತ್ ಕಂಡುಹಿಡಿದ, ಅದಕ್ಕೆ ಅಣೆಕಟ್ಟು ಬೇಕು, … Read more