ಮರದ ಆಸರೆ ಬಯಸಿದ ಬಳ್ಳಿ: ನಾಗಭೂಷಣ ಬಿ ಕೆ, ಚಂದ್ರಶೇಖರಪುರ

ನಯನಮನೋಹರಿಯಾದ ಅವಳ ಅಂದ ಚಂದ ನೋಡಿದರೆ ನೋಡುತಲೇ ಇರಬೇಕು ಎನ್ನುವಷ್ಟು ಆಕರ್ಷಕ ಮೊಗದವಳು. ತಲೆಯ ಮದ್ಯಕ್ಕೆ ಬೈತಲೆ ತೆಗೆದ ಮಾರುದ್ದ ಜಡೆಯವಳು.ಕತ್ತು ಆಡಿಸುತ್ತ ಮುತ್ತಿನಂತ ಮಾತುಗಳ ಹಾಡುತಿದ್ದರೆ ಕಿವಿಯ ಓಲೆಗಳು ನರ್ತಿಸುತಲಿರುತ್ತವೆ. ಆ ನರ್ತನ ಕಾಣಲು ನಿಜಕ್ಕೂ ಕಣ್ಗಳ ಪುಣ್ಯವೆ ಸರಿ. ಕಪ್ಪು ಕಾಡಿಗೆ ಬಳಿದ ಆ ಕಣ್ಣುಗಳ ನೋಟದಲ್ಲೂ ಒಂದು ಆಕರ್ಷಣೆ. ನಕ್ಕರೆ ನಾಜೂಕು ಕೆನ್ನೆಯ ಮೇಲೆ ಗುಳಿಯೊಂದು ಮೂಡಿ ಅವಳ ಅಂದವನು ಹೆಚ್ಚಿಸಿ ಎತ್ತಿ ತೋರಿತಲಿತ್ತು. ಒಟ್ಟಾರೆಯಾಗಿ ಹೇಳುವುದಾದರೆ ಹೊಳೆವ ಹುಣ್ಣಿಮೆಯ ಪೂರ್ಣಚಂದಿರನಂತೆ ಇರುತಿತ್ತು … Read more

ಹಿಮಾಲಯವೆಂಬ ಸ್ವರ್ಗ (ಭಾಗ 7): ವೃಂದಾ ಸಂಗಮ್

ಇಲ್ಲಿಯವರೆಗೆ  ಬದರೀಕ್ಷೇತ್ರವು ಉತ್ತರ ಪ್ರದೇಶದ (ಈಗ ಉತ್ತರಾಂಚಲ್) ಚಮೋಲಿ ಜಿಲ್ಲೆಯ ಗಡ್‌ವಾಲ್ ಪ್ರದೇಶದಲ್ಲಿ ಅಲಕ್‌ನಂದಾ ನದಿಯ ತೀರದಲ್ಲಿದೆ. ಈ ಕ್ಷೇತ್ರವು ಸಮುದ್ರ ಮಟ್ಟಕ್ಕಿಂತ ಸುಮಾರು 103೦೦ ಅಡಿ ಎತ್ತರದಲ್ಲಿದ್ದು, ಊರು ಹಾಗೂ ದೇವಾಲಯದವರೆಗೂ ವಾಹನ ಚಲಿಸುವ ರಸ್ತೆಯಿದೆ. ನರ ಮತ್ತು ನಾರಾಯಣ ಎಂಬ ಎರಡು ಪರ್ವತಗಳು ಈ ಕಣಿವೆ ಪ್ರದೇಶದ ಕಾವಲುಗಾರರಂತೆ ನಿಂತಿವೆ. ಹಿನ್ನೆಲೆಯಲ್ಲಿ 215೦೦ ಅಡಿ ಎತ್ತರದ ಘನ ಗಾಂಭೀರ್ಯ ನೀಲಕಂಠ ಪರ್ವತ ತನ್ನ ತಲೆ ಮೋಡಗಳಲ್ಲಿ ಮುಚ್ಚಿಕೊಂಡು ನಿಂತಿದೆ. ದೇವಾಲಯದ ಮುಂದೆ ಕೊರೆಯುವ ಅಲಕ್‌ನಂದ … Read more

ಬಂಡಾಯದ ಪ್ರತಿಬಿಂಬದಂತಿರುವ “ಶಬರಿಯರು” ಕೃತಿ: ದಂಡಿನಶಿವರ ಮಂಜುನಾಥ್

ಕವಿ, ಕಥೆಗಾರ, ನಾಟಕಕಾರ ಹಡವನಹಳ್ಳಿ ವೀರಣ್ಣಗೌಡರು ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪ್ರತಿಭಾನ್ವಿತರು. ಇವರ ಹೊಸಸೃಷ್ಟಿ ‘ಶಬರಿಯರು’ ಕವನ ಸಂಕಲನದ ಬಗ್ಗೆ ಹೇಳಬೇಕೆಂದರೆ ಇಲ್ಲಿನ ಕವಿತೆಗಳಲ್ಲಿ ಕವಿಯು ವರ್ತಮಾನದ ಜಟಿಲತೆಗಳನ್ನು ಅಭಿವ್ಯಕ್ತಪಡಿಸಿದ್ದಾರೆ. ಸಾಲುಗಳು ಸರಳವಾಗಿದ್ದರೂ ಕವಿತೆಗಳು ಹತ್ತು ಹಲವು ಭಾವಗಳನ್ನ ಧ್ವನಿಸುತ್ತವೆ. ಸಂಕಲನದಲ್ಲಿರುವ ಕವಿತೆ, ಕಥನಕಾವ್ಯ ಮತ್ತು ವಚನ ಪ್ರಾಕಾರಗಳಲ್ಲಿ ಒಂದು ವಿಭಿನ್ನತೆಯನ್ನು ಗುರುತಿಸಬಹುದಾಗಿದೆ.   ‘ಶಬರಿಯರು’ ಸಂಕಲನದಲ್ಲಿರುವ ಕೆಲವು ಕವಿತೆಗಳು ಸಾಮಾಜಿಕ ನ್ಯಾಯದ ಹಕ್ಕೊತ್ತಾಯದ ಜೊತೆಗೆ ದಲಿತ-ಬಂಡಾಯದ ಪ್ರತಿಬಿಂಬಗಳಂತೆ ಗೋಚರಿಸುತ್ತವೆ. ಬುದ್ದ, ಬಸವ, ಗಾಂಧಿ, ಅಂಬೇಡ್ಕರ್ … Read more

ಮೇರು ವಿಮರ್ಶಕ- ರಾಷ್ಟ್ರಕವಿ ಕುವೆಂಪು ಮತ್ತು ಅವರ ವಿಮರ್ಶಾ ವೈಶಿಷ್ಟ್ಯತೆ: ಡಾ. ಹನಿಯೂರು ಚಂದ್ರೇಗೌಡ

ರಾಷ್ಟ್ರಕವಿ ಕುವೆಂಪು ಅವರ ವ್ಯಕ್ತಿತ್ವದಲ್ಲಿ ಭಾರತೀಯ ಸಂಸ್ಕøತಿಯ ಬಗ್ಗೆ ಅಭಿಮಾನ, ಅಧ್ಯಾತ್ಮ ಜ್ಯೋತಿಯ ವಿಷಯದಲ್ಲಿ ಅಚಲಶ್ರದ್ಧೆ, ವಿಭೂತಿಪೂಜೆಯಲ್ಲಿ ನಿಷ್ಠೆ, ಸಾಹಿತ್ಯದ ಪರಮಪ್ರಯೋಜನದಲ್ಲಿ ಪೂರ್ಣವಿಶ್ವಾಸ, ಪ್ರಕೃತಿಯ ಬಹುಮುಖ ವಿನ್ಯಾಸದಲ್ಲಿ ಒಂದು ಆತ್ಮೀಯತೆ, ಭವ್ಯತೆಯ ಅನುಭವದಲ್ಲಿ ಭಕ್ತಿ, ಜೀವನದಲ್ಲಿ ಧರ್ಮದ ಮೂಲಭೂತ ಅಗತ್ಯವನ್ನು ಒಪ್ಪುವ ಮನೋಧರ್ಮ, ಜನತೆಯ ಉದ್ಧಾರಕ್ಕಾಗಿ ಹಂಬಲಿಸುವ ಚೇತನ, ಆತ್ಮಸಾಕ್ಷಾತ್ಕಾರದ ಲಕ್ಷ್ಯ-ಇವೆಲ್ಲವೂ ಒಂದು ಸುಂದರ ಪಾಕದಲ್ಲಿ ಸಮರಸವಾಗಿ ಏಕತ್ರಗೊಂಡಿವೆ. ರಾಮಕೃಷ್ಣ ಪರಮಹಂಸ, ಸ್ವಾಮಿ ವಿವೇಕಾನಂದ, ಟ್ಯಾಗೋರ್, ಶ್ರೀಅರವಿಂದ, ರಮಣಮಹರ್ಷಿ, ಗಾಂಧೀಜಿ-ಇನ್ನಿತರೆ ಭಾರತೀಯ ಮಹಾತ್ಮರ ವಿಚಾರಗಳಿಂದ ಭಾವಿತವೂ ಪ್ರಭಾವಿತವೂ … Read more

ಮುಖವಾಡ ಕಳಚಿದಾಗ: ಅಮುಭಾವಜೀವಿ

ವ್ಯಕ್ತಿ ಹಾಗೂ ವ್ಯಕ್ತಿತ್ವದ ಮುಖವಾಡಗಳು ಕಳಚುವ ಕಾಲದ ನಂಬಿಕೆಯ ಪರಿಸ್ಥಿತಿ ನಿಜಕ್ಕೂ ಕಳವಳಕಾರಿಯಾಗಿರುತ್ತದೆ. ನಾವು ನಮಗಿಂತಲೂ ಹೆಚ್ಚು ನಂಬಿಕೆಯಿಟ್ಟ ಮನುಷ್ಯ ನಮ್ಮ ನಂಬಿಕೆಗೆ ಅರ್ಹನಲ್ಲ ಎಂದು ತಿಳಿದಾಗ ನಮ್ಮ ಮೇಲೆ ನಮಗೆ ಜಿಗುಪ್ಸೆಯಾಗುತ್ತದೆ. ಮಾನವ ಸಂಘಜೀವಿ .ಇಲ್ಲಿ ಬದುಕುವ ಪ್ರತಿಯೊಬ್ಬರಿಗೂ ಇನ್ನೊಬ್ಬರ ಅವಶ್ಯಕತೆ  ಇದ್ದೇ ಇರುತ್ತದೆ. ಈ ಜಗತ್ತಿನಲ್ಲಿ ಒಂಟಿ ಬದುಕು ಅಷ್ಟು ಸುಲಭವಲ್ಲ. ನೀರು ಆಹಾರ ಬಟ್ಟೆ ಮೈಥುನ ಸುಖದುಃಖ ನೋವುನಲಿವುಗಳನ್ನು ಹಂಚಿಕೊಳ್ಳಲು ಇನ್ನೊಬ್ಬರ ಸಹಾಯವನ್ನು ನಾವು ಯಾಚಿಸಲೇಬೇಕು. ನೀರು ಸ್ವಾಭಾವಿಕ ಆದರೂ ಅದನ್ನು ತಂದುಕೊಡಲು … Read more

ಒಳ್ಳೆಯ ಚಿಂತನೆಗಳು: ಕೆ ಟಿ ಸೋಮಶೇಖರ ಹೊಳಲ್ಕೆರೆ.        

" ಒಳ್ಳೆಯತನವೇ ಸಂಸ್ಕೃತಿಯ ಸಾರ " ಶ್ರೀನವರತ್ನ ರಾಮರಾವ್. ಒಳ್ಳೆಯ ವಿಚಾರಗಳು ಎಂದರೆ ಯಾವ ಜೀವಿಗಳಿಗೂ ತೊಂದರೆ ಮಾಡದೆ ಆದಷ್ಟು ಅನುಕೂಲ, ಸಹಾಯ ಮಾಡುವ ವಿಚಾರಗಳು, ಚಿಂತನೆಗಳು, ನಡೆಗಳು. ಏನನ್ನು ಚಿಂತಿಸುತ್ತೇವೋ ಅದನ್ನು ಮಾಡಲು ಮುಂದಾಗುತ್ತೇವೆ. ಒಳ್ಳೆಯ ಚಿಂತನೆಗಳು, ವಿಚಾರಗಳು ಒಳಿತನ್ನುಂಟು ಮಾಡಿಸುತ್ತವೆ. ಕೀರ್ತಿ ತರುತ್ತವೆ. ಕೆಟ್ಟ ವಿಚಾರಗಳು, ಚಿಂತನೆಗಳು ಕೆಡುಕನ್ನುಂಟು ಮಾಡಿಸುತ್ತವೆ. ಅಪಕೀರ್ತಿಯನ್ನು ಹರಡುತ್ತವೆ. ಆದ್ದರಿಂದ ಏನನ್ನು ನುಡಿಯಬೇಕು ಹೇಗೆ ನಡೆಯಬೇಕು ಯಾವ ಕೀರ್ತಿ ಸಂಪಾದಿಸಬೇಕು ಎಂಬುದು ಆಯಾಯ ವ್ಯಕ್ತಿಗಳಿಗೆ ಸಂಬಂಧಿಸಿರುತ್ತದೆ. ಅವರವರ ವ್ಯಕ್ತಿತ್ವವನ್ನು ಅವರವರ … Read more

ಪಂಜು ಕಾವ್ಯಧಾರೆ

ಕಾಗದದ ನಾವೆ ತೇಲಿ ಬಿಟ್ಟಿವೆ ದೋಣಿಗಳ ಪುಟ್ಟ ಕನಸು ಕೈಗಳು ತೇಲಿ ಸಾಗಿದಷ್ಟೂ ಹರುಷ ಕಂಗಳಲಿ ಪ್ರತಿಫಲಿಸುವ ತಿಳಿನೀರು ಗಾಳಿಗೆ ಹೊಯ್ದಾಡುತ್ತ ಸಾಗುತಿವೆ ಕಾಗದದ ನಾವೆಗಳು ಅರಿಯದ ಗುರಿಯೆಡೆಗೆ ಹೊಳೆಯ ಹರಿವಿನೆಡೆ ಮೌನ ಪಯಣ ಅಂದು ನಾನೂ ಕಳಿಸಿದ್ದೆ ದೋಣಿಗಳ ಹೊಳೆಗುಂಟ ಸಾಗಿ ಅದರ ಹಿಂದಿಂದೆ ಕಲ್ಲುಗಳ ತಡವಿ ಗಿಡಗಂಟಿಗಳ ದಾಟಿ ದೂರ ದೂರ ಯಾನ ಕೆಲವು ಮುಳುಗಿ ಕೆಲವು ತೇಲಿ  ಕಣ್ ಹಾಯ್ದಷ್ಟು ದೂರ ನೋಡಿ ಮತ್ತಷ್ಟು ದೋಣಿಗಳು ಹೆಗಲ ಚೀಲದಲ್ಲಿ ನಾಳೆಯ ಪಯಣಕೆ ಸಜ್ಜಾಗಿ … Read more

ನಿರ್ಧಾರ!: ಎಸ್.ಜಿ.ಶಿವಶಂಕರ್

ಕೊನೆಗೂ ಸದಾನಂದರು  ನಿರ್ಧಾರ ತೆಗೆದುಕೊಂಡುಬಿಟ್ಟಿದ್ದರು. ಯಾವುದಕ್ಕಾಗಿ ಮೂವತ್ತು ವರ್ಷಗಳಿಂದ ಹಿಂಜರಿಯುತ್ತಿದ್ದರೋ ಅದನ್ನಿಂದು ಹತ್ತಿಕ್ಕಿದ್ದರು! ಜೀವನದಲ್ಲಿ ಎಂದೂ ತೆಗೆದುಕೊಳ್ಳದ ಮಹತ್ವದ ನಿರ್ಧಾರವನ್ನು ಸದಾನಂದರು ತೆಗೆದುಕೊಂಡಿದ್ದರು. ಅವರ ನಿರ್ಧಾರ ಯಾವ ಸ್ವರೂಪದ್ದು ಎಂಬುದರ ಕಲ್ಪನೆ ಮನೆಯವರಿಗೆ ಇರಲಿಲ್ಲ;  ಶ್ಯಾಮಲೆಗೂ  ಇರಲಿಲ್ಲ. ಹಾಗೇನಾದರೂ ಗೊತ್ತಾಗಿಬಿಟ್ಟಿದ್ದರೆ ಅವರ ಕಣ್ಣಿನಲ್ಲಿ ಸದಾನಂದರು ಏಕದಂ ವಿಲನ್ ಅಗಿಬಿಡುತ್ತಿದ್ದರು. ಎಲ್ಲರೂ ಹಿಡಿಹಿಡಿ ಶಾಪ ಹಾಕುತ್ತಿದ್ದುದರಲ್ಲಿ ಸಂದೇಹವೇ ಇರಲಿಲ್ಲ. ಇವೆಲ್ಲಾ ಸದಾನಂದರಿಗೆ ಗೊತ್ತಿತ್ತು. ಅದಕ್ಕೇ ಇಷ್ಟು ವರ್ಷ ಅದನ್ನೆಲ್ಲ ಒಳಗೇ ಹಿಡಿದಿಟ್ಟಿದ್ದರು. ಮೂವತ್ತು ವರ್ಷಗಳಿಂದ ಯಾವುದಕ್ಕೆ ಹಿಂದೇಟು ಹಾಕುತ್ತ … Read more

ಹಾಗೇ ಸುಮ್ಮನೆ ಅವನಿಗೊಂದಷ್ಟು ಅವಳ ಮಾತುಗಳು: ಅನುರಾಧ ಪಿ. ಸಾಮಗ

ಬಿರುಸಾದ ಗಾಳಿ. ಹಿತವೂ ಅಲ್ಲದ ಅಹಿತವೂ ಅಲ್ಲದ ಶೈತ್ಯ. ಬಿಸಿಲ ಸುಳಿವೇ ಇಲ್ಲದೊಂದು ಹಗಲು. ಸುತ್ತಲಿನ ಸಂಬಂಧಗಳ ಸಂತೆಯಲ್ಲಿ ನನ್ನ ಇರುವಿಕೆ ಮತ್ತದರ ಮೌನ, ಆಪ್ತತೆಯೆಡೆ ನನದೊಂದು ವಿಚಿತ್ರ ಉದಾಸೀನ ಇವೆಲ್ಲವೂ ನಿಜವಾಗಲೂ ಜಾಡ್ಯಕ್ಕೋ, ಮಂಪರಿಗೋ ಎಡೆ ಮಾಡಿಕೊಡಬೇಕಾಗಿತ್ತು. ಆದರೆ ಇಂದು ಮನದಲ್ಲಿ ಹುಡುಕಿದರೂ ಅಸಹನೀಯವಾದದ್ದಕ್ಕೆ ಒಂದಿಷ್ಟೂ ಜಾಗವಿಲ್ಲ. ಯಾಕಿರಬಹುದು?! ಕ್ಷಣಕ್ಕೊಂದಷ್ಟರಂತೆ ಹಲವು ವಿಷಯಗಳು ಮನಃಪಟಲದಲ್ಲಿ ಹಾದುಹೋದವು. ಆದರೆ ಮುಚ್ಚಿದ ಕಣ್ಣ ಮುಂದಿದ್ದುದೊಂದೇ ಅಸ್ಪಷ್ಟ ಬಿಂಬ, ಅದು ನಿನ್ನದು. ಸುಂದರಸ್ವಪ್ನವಾಗಬಹುದಾದದ್ದು ಎಷ್ಟು ಹೊತ್ತಿಗೆ ಮುಗಿದೀತೋ ಅನ್ನುವ ಭಯಂಕರ … Read more

ಪೌರಾಣಿಕ ಸ್ತ್ರೀ ಪಾತ್ರಗಳಲ್ಲಿ ಸ್ತ್ರಿ ಶೋಷಣೆಯ ವಿರುದ್ಧ ಕಹಳೆ: ನಾಗರೇಖಾ ಗಾಂವಕರ

ಜಗತ್ತು ಬದಲಾಗುತ್ತಿದೆ. ಬದಲಾಗುತ್ತಿರುವ ವೈವಸ್ಥೆಯಲ್ಲಿ  ಕಾಲಚಕ್ರದ ಒಂದು ಸುತ್ತು ಈಗಾಗಲೇ ಸುತ್ತಿಬಂದಂತಾಗಿದೆ. ಆಧುನಿಕ ಮೂರನೇ ಜಗತ್ತಿನ ಸ್ತ್ರೀಯರು ಪುರಾಣ ಪಾತ್ರಗಳ ಆದರ್ಶ ಪ್ರತಿರೂಪಗಳ ಧರಿಸಬಯಸುವುದಿಲ್ಲ. ಹಾಗಿದ್ದು ಇಂದಿನ ಪುರುಷ ವಿರಚಿತ ಸಾಹಿತ್ಯದಲ್ಲಿಯೂ ಸ್ತ್ರೀ ಪಾತ್ರಗಳು ಉನ್ನತ ಮೌಲ್ಯಗಳ ಪ್ರತಿಬಿಂಬಿಸುವ ಪಾತ್ರಗಳಾಗಿ ತನ್ನ ತ್ಯಾಗದಿಂದ ಇತರರ ಉದ್ದರಿಸುವ ಅಪರೂಪದ ದೇವತಾ ಸ್ವರೂಪದ ಪ್ರತಿಮೆಗಳಾಗಿ ಮೂಡಿಬರುತ್ತಲೇ ಇವೆ. ಪ್ರಾಚೀನ ಪರಂಪರೆಯಲ್ಲಿ  ಹೆಣ್ಣನ್ನು ದೇವತೆಯಾಗಿಸಿ, ಶಕ್ತಿಯ ಪ್ರತೀಕವಾಗಿಸಿ ಚಿತ್ರಿಸಿದ ಹತ್ತು ಹಲವು ಪಾತ್ರಗಳೂ ಇವೆ. ತನ್ನ ಸಹನೆಗೆ, ಹೆಸರಾದ ಹೆಣ್ಣು  ಆತ್ಮಾಭಿಮಾನಕ್ಕೆ … Read more

ಹಿಮಾಲಯವೆಂಬ ಸ್ವರ್ಗ (ಭಾಗ 6): ವೃಂದಾ ಸಂಗಮ್

ಇಲ್ಲಿಯವರೆಗೆ  ಸಾಯಂಕಾಲ ಹೃಷಿಕೇಶಕ್ಕೆ. ಇದು ಭಾರತದ ಉತ್ತರಾಖಂಡ ರಾಜ್ಯದ ಡೆಹ್ರಾಡೂನ್ ಜಿಲ್ಲೆಯಲ್ಲಿರುವ ಒಂದು ಪಟ್ಟಣ. ಹಿಮಾಲಯಕ್ಕೆ ಹೆಬ್ಬಾಗಿಲೆನಿಸಿಕೊಳ್ಳುತ್ತದೆ ಹೃಷಿಕೇಶ ವಿಷ್ಣುವಿನ ಒಂದು ಹೆಸರು. ಇದರ ಅರ್ಥ ಇಂದ್ರಿಯಗಳ ಒಡೆಯ ಎಂಬುದಾಗಿದೆ. ಈ ಸ್ಥಳದಲ್ಲಿ ರೈಭ್ಯ ಋಷಿಯ ತಪಸ್ಸಿಗೆ ಒಲಿದು ವಿಷ್ಣು ಹೃಷಿಕೇಶನಾಗಿ ಪ್ರತ್ಯಕ್ಷನಾದನೆಂದು ಒಂದು ಕಥೆಯಿದೆ.  ಸ್ಕಂದ ಪುರಾಣದಲ್ಲಿ ಈ ಸೀಮೆಯು ಕುಬ್ಜಾಮ್ರಕ ಎಂದು ಹೆಸರಿಸಲ್ಪಟ್ಟಿದೆ. ಐತಿಹಾಸಿಕವಾಗಿ ಹೃಷಿಕೇಶ ಕೇದಾರ ಖಂಡದ ಭಾಗ. ಇಂದಿನ ಗಢ್ವಾಲ್ ಪ್ರದೇಶವು ಹಿಂದೆ ಕೇದಾರ ಖಂಡ ವೆಂದು ಕರೆಯಲ್ಪಡುತ್ತಿತ್ತು.         … Read more

ಕಳ್ಳನ ಕಥೆ: ಶ್ರೀಮಂತ ಯನಗುಂಟಿ

ಮೂಲ: ರಸ್ಕಿನ್ ಬಾಂಡ್ ಕನ್ನಡಕ್ಕೆ: ಶ್ರೀಮಂತ ಯನಗುಂಟಿ ರೋಮಿಗೆ ಭೇಟಿಯಾದಾಗ ನಾನಿನ್ನೂ ಕಳ್ಳನಾಗಿದ್ದೆ. ಕೇವಲ ಹದಿನೈದು ವರ್ಷದವನಾಗಿದ್ದರೂ ಕಳ್ಳತನದಲ್ಲಿ ನಾನೊಂದು ಅನುಭವಿ ಮತ್ತು ಯಶಸ್ವೀ ಹಸ್ತವಾಗಿದ್ದೆ.  ನಾನು ರೋಮಿಯ ಬಳಿ ಹೋದಾಗ ಅವನು ಕುಸ್ತಿ ಪಂದ್ಯವನ್ನು ವಿಕ್ಷೀಸುತ್ತಿದ್ದ. ಅವನು ಇಪ್ಪತ್ತೈದು ವರ್ಷದವನಿರಬಹುದು. ನನ್ನ ಉದ್ದೇಶಕ್ಕೆ ಸರಳವಾಗಿ ಸರಿಹೊಂದುವ ಹಾಗೆ ಕಾಣಿಸಿದ. ಈ ಯುವಕನ ವಿಶ್ವಾಸವನ್ನು ಗೆಲ್ಲಬಲ್ಲೆ ಎಂದು ನನಗೆ ಖಚಿತವಾಯಿತು.  "ನೀನು ಸ್ವಲ್ಪ ಕುಸ್ತಿ ಪಟುವಿನ ಹಾಗೆ ಕಾಣಿಸುತ್ತಿಯ", ನಾನು ಹೇಳಿದೆ. ಮಂಜುಗಡ್ಡೆಯನ್ನು ಕರಗಿಸಲು ಯಾವುದೇ ಹೊಗಳಿಕೆಯ … Read more

ಪುನೀತಭಾವ: ಸತೀಶ್ ಶೆಟ್ಟಿ ವಕ್ವಾಡಿ.

  ಸೂರ್ಯನಿಗೆ ಆಗಷ್ಟೇ ಬೆಳಗಾಗಿತ್ತು. ಹಕ್ಕಿಗಳ ಚಿಲಿಪಿಲಿ ಇಲ್ಲದ್ದಿದ್ದರೂ ಡಿಸೆಂಬರ್ ತಿಂಗಳ ಚುಮು ಚುಮು ಚಳಿಗೆ ಮುಂಜಾನೆ ಆಹ್ಲಾದಕರವಾಗಿತ್ತು. ಶೀತಗಾಳಿಗೆ ಮೈಯೊಡ್ಡಿ ಮಂಜಿನಹನಿಗಳನ್ನು ಹೊತ್ತ ಹುಲ್ಲಿನ ಮೇಲೆ ಬರಿಗಾಲಿನಲ್ಲಿ  ನೆಡೆಯುವುದೇ ಒಂದು ಅನನ್ಯ ಅನೂಭೂತಿ.  ಹಾಗೆ ಹಲ್ಲಿನ ಜೊತೆ ಜಗಳಕ್ಕೆ ಬಿದ್ದ ಬ್ರಷ್ ನೊಂದಿಗೆ ಕಾದಾಡುತ್ತ ಮನೆ ಎದುರಿನ ಗದ್ದೆಯ ಅಂಚಿನಲ್ಲಿ ಹೆಜ್ಜೆಹಾಕುತ್ತಿದ್ದೆ.  ಬೆಂಗಳೂರಿನಂತೆ ಇಲ್ಲಿ ತರಕಾರಿಯವನ ಬೊಬ್ಬೆ ಇಲ್ಲ.  ಕಸದವಳ ಶೀಟಿ ಸ್ವರವಿಲ್ಲ, ಸ್ಕೂಲ್ ವ್ಯಾನಿನ ಕರ್ಕಶ ಹಾರ್ನಿನ ಮಾರ್ಧನಿ ಇಲ್ಲ. ಆಗಷ್ಟೇ ಕೊಯ್ಲು ಮಾಡಿದ … Read more

ಜನಜಾಗೃತಿಯ ಮಹಾಮಾರ್ಗದ ‘ಆಯುಧ’ ನಾಟಕ ಪ್ರಯೋಗ: ಹಿಪ್ಪರಗಿ ಸಿದ್ಧರಾಮ

ಬದುಕಿನಲ್ಲಿ ಸರ್ವವನ್ನು ಕಳೆದುಕೊಂಡ ವ್ಯಕ್ತಿಯೋರ್ವ ಅಂತಿಮವಾಗಿ ಗುರುವಿನ ಹುಡುಕಾಟದಲ್ಲಿ ಅಲೆಮಾರಿಯಾಗಿ ತಾಯಿಯನ್ನು ಕಳೆದುಕೊಂಡ ಮಗುವಿನಂತೆ ಹಂಬಲಿಸುತ್ತಾ ರಂಗಪ್ರವೇಶಿಸುವುದರೊಂದಿಗೆ ‘ಆಯುಧ’ ನಾಟಕ ಅಸಂಗತವಾಗಿ ಆರಂಭವಾಗುತ್ತದೆ. ಕೆಲಸವಿಲ್ಲದ ವಿದ್ಯಾವಂತ ನಿರುದ್ಯೋಗಿಗಳು ಬಡಾವಣೆಯೊಂದರ ಹರಟೆ ಕಟ್ಟೆಯಲ್ಲಿ ಕಲಿತ ವಿದ್ಯೆಯನ್ನು ಮರೆತು ಇಸ್ಪೀಟು, ಜೂಜಾಟದಲ್ಲಿ ತೊಡಗಿಸಿಕೊಂಡಿರುತ್ತಾರೆ. ಅಲ್ಲಿಗೆ ಆಗಮಿಸುವ ಅನಾಮಿಕನೋರ್ವನು ‘ಸೇವ್ ಇಂಡಿಯಾ ; ಸೇವ್ ಡೆಮಾಕ್ರಸಿ’ ಎಂದು ತನ್ನಷ್ಟಕ್ಕೆ ತಾನೆ ಬಡಬಡಿಸುತ್ತಾ, ನಗುತ್ತಾ ಅವಧೂತನಂತೆ ಆಗಮಿಸಿ, ಕುಳಿತುಕೊಳ್ಳುತ್ತಾನೆ. ಹೀಗೆ ಎಷ್ಟೋ ಹೊತ್ತು ನಡೆದರೂ ನಿರುದ್ಯೋಗಿಗಳು ಮತ್ತು ಅನಾಮಿಕರ ನಡುವೆ ಯಾವುದೇ ಸಂವಹನ … Read more

ನೆರೆಹೊರೆಯವರೊಂದಿಗೆ ಹೇಗಿರಬೇಕು?: ವೈ. ಬಿ. ಕಡಕೋಳ

ಇತ್ತೀಚಿಗೆ ಪಕ್ಕದ ಮನೆಗೆ ನೆಂಟರು ಬಂದಿದ್ದರು ಅವರು ತಮ್ಮ ಮೋಬೈಲ್ ಚಾರ್ಜರ್ ತಂದಿರಲಿಲ್ಲ. ಆಗ ಅವರಿಗೆ ಮೋಬೈಲ್ ಚಾರ್ಜರ್ ಬೇಕಾಯಿತು. ನಮ್ಮ ಮನೆಗೆ ಬಂದರು. ಮೋಬೈಲ್ ನೋಡಿದೆ ಅದರ ಚಾರ್ಜರ್ ನಮ್ಮ ಮನೆಯಲ್ಲಿತ್ತು ಅವರಿಗೆ ಕೊಟ್ಟು ನಿಮ್ಮ ಮೋಬೈಲ್ ಚಾರ್ಜ ಆದ ತಕ್ಷಣ ಮರಳಿಸಿ ಎಂದು ತಿಳಿಸಿದೆ. ತಗೆದುಕೊಂಡು ಹೋದರು. ಮರುದಿನ ಸಂಜೆಯಾದರೂ ಚಾರ್ಜರ ಮರಳಿಸಿರಲಿಲ್ಲ. ಆಫೀಸಿಂದ ಮನೆಗೆ ಬಂದು ಹೆಂಡತಿಯನ್ನು ಅವರ ಮನೆಗೆ ಕಳಿಸಿದೆ. ಅಯ್ಯೋ ಮರೆತೇ ಬಿಟ್ಟಿದ್ದೆವು. ತಗೊಳ್ಳಿ ಎಂದು ಚಾರ್ಜರ್ ಕೊಟ್ಟರಂತೆ. ಅಷ್ಟೇ … Read more

ಕನ್ನಡಿ  ಮತ್ತು  ನಿಂದಕರು: ಕೆ ಟಿ ಸೋಮಶೇಖರ ಹೊಳಲ್ಕೆರೆ

          ಕನ್ನಡಿ ಗೊತ್ತಿಲ್ಲದವರಿಲ್ಲ. ಅದೊಂದು ಹೆಚ್ಚು ಬೆಲೆಬಾಳದ, ಕೆಳಗೆ ಬಿದ್ದರೆ ಸಾಕು ಒಡೆದೇಹೋಗುವ ವಸ್ತು. ಗಾಜಿನ ಒಂದು ಮುಖವನ್ನು ಮೆರುಗುಗೊಳಿಸಿದರೆ ಕನ್ನಡಿ ಸಿದ್ದ! ವಿವಿಧ ಆಕಾರ, ಎತ್ತರಗಳಲ್ಲಿ ಮಾರುಕಟ್ಟಿಯಲ್ಲಿ ದೊರೆಯುವ ನುಣುಪಾದ ಮೇಲ್ಮೈಯುಳ್ಳ ವಸ್ತು! ಹಾಗೆ ನೋಡಿದರೆ ಅದು ವಸ್ತುವೇ ಅಲ್ಲ! ವಿರೂಪ ತೊಡೆದು ಸುರೂಪಿಯಾಗಿಸುವ ಮೂಕ ಸಲಹೆಗಾರ, ಆತ್ಮೀಯ ಸ್ನೇಹಿತ, ಮನೆಯ ಸದಸ್ಯ, ಅಜಾತ ಶತೃ!        ಕನ್ನಡಿಯನ್ನು ಪ್ರೀತಿಸದವರಿಲ್ಲ. ಕನ್ನಡಿಯನ್ನು ಯಾರು ಎಷ್ಟು ಪ್ರೀತಿಸುತ್ತಾರೋ ಅವರು … Read more

ಪಂಜು ಕಾವ್ಯಧಾರೆ

" ಶಾಂತಿ " ಮಳೆ ಹನಿಗಳು ಧರೆಗಿಳಿದಂತೆ ಶಾಂತಿ ದೊರೆಯುತ್ತಿದೆ ಹಕ್ಕಿಗಳ ಕಲರವದಲ್ಲಿ  ಶಾಂತಿ ದೊರೆಯುತ್ತಿದೆ ತಿಳಿಕೊಳದಲ್ಲಿ ಮೀನು ಈಜಿದಂತೆ ಶಾಂತಿ ದೊರೆಯುತ್ತಿದೆ ಪುಟ್ಟ ಮಕ್ಕಳ ನಗುವಿನಲ್ಲಿ ಶಾಂತಿ ದೊರೆಯುತ್ತಿದೆ ಕಾಡಿನಲ್ಲಿ ನೆಡೆಯವಾಗ ಶಾಂತಿ ದೊರೆಯುತ್ತಿದೆ ಕಡಲತಡಿಯಲ್ಲಿ ಸೂರ್ಯೋದಯ ಶಾಂತಿ ದೊರೆಯುತ್ತಿದೆ ವಿವಿಧ ರೀತಿಯಲ್ಲಿ ಶಾಂತಿ ದೊರೆಯಲಿ ನನಗೂ, ನಿಮಗೂ, ನಮ್ಮೆಲ್ಲರಿಗೂ ಕೂಡಾ ಚೀನಾದ ಕವಿ Lin LiMei ಯವರು ಚೀನಾ ಭಾಷೆಯಲ್ಲಿ ಕಳುಹಿಸಿರುವ ಶಾಂತಿ ಸಂದೇಶದ ಕನ್ನಡ ಅನುವಾದ -ಉದಯ ಶಂಕರ ಪುರಾಣಿಕ     … Read more