ಕೋಲಾಪಾನಕ ಉಪಾಖ್ಯಾನ ಸಹಿತ ರಘುವರಚರಿತ ಲಘುವ್ಯಾಖ್ಯಾನವು: ಎಸ್. ಜಿ. ಸೀತಾರಾಮ್
ವಿಧವಿಧ ರಾಮಾಯಣಗಳಿಂದ ಹೆಚ್ಚುತ್ತಿರುವ ಹೊರೆಯಿಂದಾಗಿ, ಭೂಭಾರವನ್ನು ಹೊತ್ತ ಆದಿಶೇಷನು ನುಲಿದಾಡುತ್ತಿದ್ದಾನೆ; ರಾಮಾಯಣ ಸಾಹಿತ್ಯ ಪ್ರದೇಶ ಕಾಲಿಡಲಾಗದಷ್ಟು ನಿಬಿಡವಾಗಿಹೋಗಿದೆ ಎಂಬಂತೆ ಕುಮಾರವ್ಯಾಸನು ಸುಮಾರು ೬೦೦ ವರ್ಷಗಳ ಹಿಂದೆಯೇ ಹೇಳಿದ್ದನೆಂದಮೇಲೆ, ಇಂದು ಆ ಹೊರೆ ಇನ್ನೆಷ್ಟು ಹೆಚ್ಚಿರಬಹುದೆಂದು ಊಹಿಸಬಹುದು. ಆದ್ದರಿಂದಾಗಿ, ಮತ್ತೆ ಅದೇ ಕಥೆಯನ್ನೇ ಇರುಳುದ್ದ ಹೇಳಿ, ಹಗಲು ಹರಿಯುತ್ತಿದ್ದಂತೆ, ರಾಮಣ್ಣ-ರಾವಣ್ಣ ಯೇನ್ ಅಣ್ಣ-ತಮ್ಮಂದ್ರಾ? ಎಂಬ ಆಕಳಿಕೆಯ ಆಲಾಪವನ್ನು ಆಲಿಸುವ ಬದಲು, ಈಗಿನ ರಾಮಜನ್ಮದಿನಾಚರಣೆಗಾಗಿ ಅದೇ ರಘುವರಕಥೆಯ ಕೆಲವೇ ವಿಚಾರಗಳ ಲಘುನೋಟವೊಂದನ್ನು ಇಲ್ಲಿ ತೆಗೆದುಕೊಳ್ಳಲಾಗಿದೆ. ಆ ಕಥೆಯ ಕೆಲವು ಪ್ರಮುಖ … Read more