ಒಂದು ಬಸ್ಸಿನ ಕಥೆ: ಅನಿತಾ ನರೇಶ್ ಮಂಚಿ ಅಂಕಣ

ಆಗಷ್ಟೇ ಕಣ್ಣಿಗೆ ನಿದ್ದೆ ಹಿಡಿಯುತ್ತಿತ್ತು.  ಹತ್ತಿರದ ಮಂಚದಲ್ಲಿ ಮಲಗಿದ್ದ ಗೆಳತಿ ’ಗಂಟೆ ಎಷ್ಟಾಯಿತೇ’ ಎಂದಳು. ಪಕ್ಕದಲ್ಲಿದ್ದ ಟಾರ್ಚನ್ನು ಹೊತ್ತಿಸಿ ’ಹತ್ತೂವರೆ’ ಎಂದೆ.  ’ನಾಳೆ ಬೇಗ ಎದ್ದು ಬಸ್ಸಿಗೆ ಹೋಗ್ಬೇಕಲ್ಲ .. ಬೇಗ ಮಲಗು’ ಎಂದಳು.  ಸಿಟ್ಟು ಒದ್ದುಕೊಂಡು ಬಂತು. ಮಲಗಿದ್ದವಳನ್ನೇ ಏಳಿಸಿ ಬೇಗ ಮಲಗು ಅನ್ನುತ್ತಾಳಲ್ಲಾ ಇವಳು ಅಂತ. ಮಾತಿಗೆ ಮಾತು ಬೆಳೆಸಿದರೆ ಇನ್ನೂ ಬರಬೇಕಿದ್ದ ನಿದ್ದೆಯೂ ಹಾರಿ ಹೋದರೆ ಎಂದು ಹೆದರಿ ಮತ್ತೆ ಕಣ್ಣಿಗೆ ಕಣ್ಣು ಕೂಡಿಸಿದೆ.  ಬೇಕಾದ ಕೂಡಲೇ ಓಡಿ ಬಂದು ಆಲಂಗಿಸಲು ಅದೇನು … Read more

ಹುಡುಕಾಟ: ಅನಿತಾ ನರೇಶ್ ಮಂಚಿ ಅಂಕಣ

ನೈಲ್ ಕಟ್ಟರ್ ಎಲ್ಲಿದೇ ..ಎಂದು  ಮೂರನೇ ಸಾರಿ ನಮ್ಮ ಮನೆಯ ಲಾಯರ್ ಸಾಹೇಬ್ರ ಕಂಠ ಮೊಳಗಿತು. ಈ ಸಲವೂ ಹುಡುಕಿ ಕೊಡದಿದ್ರೆ ಹೊಂಬಣ್ಣದ ಮೈಯ ನವಿಲು ಬಣ್ಣದ ಬಾರ್ಡರಿನ ಸೀರೆಯ ಅಹವಾಲು ಡಿಸ್ ಮಿಸ್ ಆಗುವ ಭಯದಲ್ಲಿ ನಿಲ್ಲೀ ಹುಡುಕಿ ಕೊಡ್ತೀನಿ ಅಂದೆ.. ಸತ್ಯ ಹರಿಶ್ಚಂದ್ರನ ಆಣೆಯಾಗಿಯೂ ಅದು ಎಲ್ಲಿದೆ ಅಂತ ನನಗೆ ತಿಳಿದಿರಲಿಲ್ಲ. ನಮ್ಮ ಮನೆಯಲ್ಲಿರುವ ಸ್ಥಿರ ವಸ್ತುಗಳಿಗೂ ಕೈ ಕಾಲು ಬಂದು ಅವು ಚರ ವಸ್ತುಗಳಾಗಿ ಸಿಕ್ಕ ಸಿಕ್ಕ ಕಡೆ ಹೋಗಿ ಸಿಗಬೇಕಾದಾಗ ಸಿಗದೇ … Read more

ಮೂಕಪ್ರೇಮ:ಅನಿತಾ ನರೇಶ್ ಮಂಚಿ ಅಂಕಣ

ಮನುಷ್ಯ ಕೂಡಾ ಪ್ರಾಣಿಗಳ ಕೆಟಗರಿಗೆ ಸೇರುತ್ತಾನಾದರೂ ತಾನು ಅವರಿಂದ ಮೇಲೆ ಎಂಬ ಗರಿಯನ್ನು ತಲೆಯ ಮೇಲೆ ಇಟ್ಟುಕೊಂಡೇ ಹುಟ್ಟಿ ಬರುತ್ತಾನೆ. ತಾನು ಎಲ್ಲಾ ಪ್ರಾಣಿಗಳನ್ನು ನನ್ನ ತಾಳಕ್ಕೆ ಕುಣಿಸಬಲ್ಲೆ ಎಂಬ ಹಮ್ಮು ಅವನದ್ದು. ಹಲವು ಬಾರಿ ಇದು ಸತ್ಯ ಎನ್ನಿಸಿದರೂ ಅವುಗಳೂ ಕೂಡಾ  ಬುದ್ಧಿವಂತಿಕೆಯಲ್ಲಿ ನಮ್ಮಿಂದ ಕಡಿಮೆಯಿಲ್ಲ ಎಂಬುದೇ ಪರಮಸತ್ಯ. ಇದಕ್ಕೆ ಹಲವು ನಿದರ್ಶನಗಳು ಅವುಗಳ ಒಡನಾಟವನ್ನಿಟ್ಟುಕೊಂಡವರ ನಿತ್ಯದ ಬದುಕಿನಲ್ಲಿ ಸಿಕ್ಕೇ ಸಿಗುತ್ತವೆ. ಇದರಲ್ಲಿ ಕೆಲವೊಂದು ನಗು ತರಿಸಿದರೆ ಇನ್ನು ಕೆಲವು ಪೇಚಿಗೆ ಸಿಕ್ಕಿಸುತ್ತವೆ.  ನಮ್ಮ ಮನೆಯ … Read more

ದಂತಕತೆ: ಅನಿತಾ ನರೇಶ್ ಮಂಚಿ

ಈಗೊಂದೆರಡು ದಿನಗಳಿಂದ ಯಾರನ್ನು ಕಂಡರೂ ಕೆಂಡದಂತಹ ಕೋಪ. ಅದರಲ್ಲೂ ಸುಮ್ಮನೆ ಹಲ್ಲು ಕಿಸಿದುಕೊಂಡು ನಗ್ತಾ ಇರ್ತಾರಲ್ಲ ಅಂತವರನ್ನು ಕಂಡರೆ ಅವರ ಅಷ್ಟೂ ಹಲ್ಲುಗಳನ್ನು ಕೆಳಗುದುರಿಸಿ ಅವರ ಬೊಚ್ಚು ಬಾಯಿ ಪೆಚ್ಚಾಗುವಂತೆ ಮಾಡಬೇಕೆಂಬಾಸೆ.. ಇದ್ಯಾಕೋ  ’ಏ ಹಾತ್ ಮುಜೆ ದೇದೋ ಠಾಕುರ್’ ಎಂದು ಅಬ್ಬರಿಸುವ ಗಬ್ಬರ್ ಸಿಂಗನನ್ನು ನಿಮಗೆ ನೆನಪಿಸಿದರೆ ಅದಕ್ಕೆ ನಾನಲ್ಲ ಹೊಣೆ. ನನ್ನ ಹಲ್ಲೇ ಹೊಣೆ.  ಹೌದು .. ಇಷ್ಟಕ್ಕೂ ಮೂಲ ಕಾರಣ ನನ್ನ ಹಲ್ಲುಗಳೇ. ಮಕ್ಕಳಿಗೆ ಮೊದಲು ಮೂಡುವ ಹಲ್ಲುಗಳನ್ನು ಹಾಲು ಹಲ್ಲುಗಳೆಂದು ಅದ್ಯಾರೋ … Read more

ಮೊದಲು ಮಾನವನಾಗು: ಅನಿತಾ ನರೇಶ್ ಮಂಚಿ

ಶಾಲೆಯಿಂದ ಫೋನ್ ಬಂದಿತ್ತು. ಇವತ್ತು ಶಾಲಾವಾಹನ ಹಾಳಾದ ಕಾರಣ ಸರ್ವಿಸ್ ಬಸ್ಸಿನಲ್ಲೇ ಮಕ್ಕಳನ್ನು ಕಳಿಸ್ತಾ ಇದ್ದೀವಿ.. ಟಕ್ಕನೆ ಫೋನ್ ಕಟ್ಟಾಯಿತು.  ಅಯ್ಯೋ.. ಪಾಪ ಸಣ್ಣವನು.. ಸರ್ವಿಸ್ ಬಸ್ಸಿನಲ್ಲಿ ಹೇಗೆ ಬರ್ತಾನೆ ಎಂಬ ಆತಂಕ ನನ್ನದು. ನಾನೇ ಹೋಗಿ ಕರೆತರಬಹುದು ಆದರೆ ಅಷ್ಟರಲ್ಲೇ ಅವನು ಬೇರೆ ಬಸ್ಸಿನಲ್ಲಿ ಹೊರಟು ಬಿಟ್ಟಿದ್ದರೆ..  ಶಾಲೆಗೆ ಫೋನ್ ಮಾಡಿ ವಿಚಾರಿಸೋಣ ಅಂತ ಡಯಲ್ ಮಾಡಿದರೆ ಅದು ಎಂಗೇಜ್ ಸ್ವರ ಬರುತ್ತಿತ್ತು. ಎಲ್ಲಾ ಮಕ್ಕಳ ಮನೆಗಳಿಗೂ ಸುದ್ದಿ ಮುಟ್ಟಿಸುವ ಅವಸರದಲ್ಲಿ ಅವರಿದ್ದರೇನೋ..  ಮನೆಯಿಂದ ಶಾಲೆಗೆ … Read more

ಗಂಧದ ಘಮ..: ಅನಿತಾ ನರೇಶ್ ಮಂಚಿ

ತಲೆಬರಹ ನೋಡಿ ಇದರಲ್ಲೇನಿದೆ ವಿಶೇಷ, ’ತನ್ನನ್ನೇ ತೇದು ಪರಿಮಳವನ್ನು ಲೋಕಕ್ಕೆ ಕೊಡುವ ತ್ಯಾಗಜೀವಿ ತಾನೇ ಗಂಧ’ ಅಂತೀರಲ್ವಾ..ಹೌದು ಸ್ವಾಮೀ ನಾನು ಅದನ್ನು ಅಲ್ಲ ಅನ್ನಲಿಲ್ಲ.. ಆದ್ರೆ ಗಂಧ ತನ್ನನ್ನು ತೇಯಬೇಕಾದರೆ ಎಷ್ಟು ಜೀವ ತೇಯುತ್ತದೆ ಅಂತಾದ್ರು ನಿಮಗೆ ಗೊತ್ತಾ.. ಅದೊಂದು ದೊಡ್ಡ ಕಥೆ.. ಹೇಳ್ತೀನಿ ಕೇಳಿ..   ನನ್ನಣ್ಣನ ಮನೆ ಅಂದರೆ ಅದೊಂದು ಸಸ್ಯ ಭಂಡಾರ. ನಮ್ಮೂರಾದ ಕರಾವಳಿಯಲ್ಲಿ ಬೆಳೆಯದ ಹಲವು ಸಸ್ಯಸಂಕುಲಗಳು ಮಲೆನಾಡಿನ ಅವನ ತೋಟದಲ್ಲಿ ನಳನಳಿಸುತ್ತಿರುತ್ತದೆ. ನಾನೋ ’ಕಂಡದ್ದೆಲ್ಲಾ ಬೇಕು…… ಭಟ್ಟನಿಗೆ’ ಅನ್ನೋ ಜಾತಿ. … Read more

ಅಡುಗೆ ಮನೆ ಪುರಾಣ: ಅನಿತಾ ನರೇಶ್ ಮಂಚಿ

ಅಡುಗೆ ಮನೆ ಆದ್ರೇನು ಹೂವಿನ ಕುಂಡ ಇಟ್ರೆ ಬೇಡ ಅನ್ನುತ್ತದೆಯೇ? ಒಂದು ಕಿಟಕಿ ಹೂವಿನ ಕುಂಡದಿಂದ ಅಲಂಕೃತಗೊಂಡಿದ್ದರೆ ಇನ್ನೊಂದು ಬದಿಯ ಕಿಟಕಿ ಕರೆಂಟ್ ಹೋದರೆ ಕೈಗೆ ಪಕ್ಕನೆ ಸಿಗಬೇಕಾಗಿರುವ ಎಣ್ಣೆಯ ಕಾಲು ದೀಪದಿಂದ ಕಂಗೊಳಿಸುತ್ತಿತ್ತು. ಸ್ಟವ್ವಿನ  ಒಂದು ಪಕ್ಕದ ಶೆಲ್ಫಿನಲ್ಲಿ ಅಡುಗೆಗೆ ಅಗತ್ಯವಾದ ಸಾಂಬಾರ ಪದಾರ್ಥಗಳು,ಇನ್ನೊಂದು ಕಡೆ ಸೌಟಿನಿಂದ ಹಿಡಿದು ಚಮಚದವರೆಗೆ ಚಾಕುವಿನಿಂದ ಹಿಡಿದು ಕತ್ತಿಯವರೆಗೆ ಸಿಗುವಂತಿತ್ತು. ಕೆಳಭಾಗದ ನಾಲ್ಕು ಕಪಾಟುಗಳಲ್ಲಿ ಈಳಿಗೆ ಮಣೆ ಮೆಟ್ಟುಗತ್ತಿ, ಪಾತ್ರೆಗಳು, ಬೇಗ ಹಾಳಾಗದಿರುವ ತರಕಾರಿಗಳಾದ ಆಲೂಗಡ್ಡೆ ಈರುಳ್ಳಿಗಳು ಆಟವಾಡುತ್ತಿದ್ದವು. ವರ್ಷಪೂರ್ತಿಯ … Read more

ನೋವೊಂದು ಬಳಿ ಬಂದು .. : ಅನಿತಾ ನರೇಶ್ ಮಂಚಿ

ದೊಡ್ಡಪ್ಪನ ಮನೆಯೊಳಗೆ ಕರ್ಫ್ಯೂ ವಿಧಿಸಿದಂತಿದ್ದ ವಾತಾವರಣ. ದೊಡ್ಡಮ್ಮ ಮತ್ತು ಅತ್ತಿಗೆಯರ ಸಂಭಾಷಣೆಯೆಲ್ಲಾ ಸನ್ನೆಯಲ್ಲೇ ಸಾಗುತ್ತಿತ್ತೇ ವಿನಃ ಸ್ವರ ಹೊರ ಬರುತ್ತಿರಲಿಲ್ಲ. ಅಣ್ಣಂದಿರು ಅಲ್ಲಲ್ಲಿ ತಮ್ಮ ಕೆಲಸದಲ್ಲಿ ತೊಡಗಿದಂತೆ ಕಂಡರೂ   ಅವರ ಗಮನವೆಲ್ಲಾ ಈಸೀಚೇರಿನಲ್ಲಿ ಕುಳಿತ ದೊಡ್ಡಪ್ಪನ ಕಡೆಯೇ ಇತ್ತು. ಅವರೊ ಇತ್ತಲಿನ ಪರಿವೆಯಿಲ್ಲದೆ  ಕೈಯನ್ನು ಮೇಲೆತ್ತಲು ಪ್ರಯತ್ನಿಸುತ್ತಾ ಎತ್ತಲಾಗದೇ ಕೆಳಗೆ ಹಾಕುವುದು ಮಾಡುತ್ತ ಕುಳಿತಿದ್ದರು. ಕಣ್ಣಿನಲ್ಲಿ ಶೂನ್ಯ ಭಾವ.  ಮನೆಯೆಲ್ಲಾ ಮೌನದಲ್ಲಿ ಮುಳುಗಿ ಯಾವುದೋ ಶೋಕವನ್ನು ನಿರೀಕ್ಷಿಸುವಂತೆ ಇತ್ತು. ನನ್ನ ಆಗಮನ ಎಲ್ಲರ ಮೊಗದಲ್ಲೂ ನಗೆರೇಖೆಯನ್ನು … Read more

ಒಗ್ಗರಣೆ: ಅನಿತಾ ನರೇಶ್ ಮಂಚಿ

ಮಿಕ್ಸಿಯೊಳಗೆ ಅಕ್ಕಿ ಮತ್ತು ಉದ್ದಿನಬೇಳೆಗಳು ಮರುದಿನದ ಇಡ್ಲಿಗಾಗಿ ಯಾವುದೇ ಡಯಟ್ ಮಾಡದೇ ಸಣ್ಣಗಾಗುತ್ತಿದ್ದವು. ನನ್ನ ಮಿಕ್ಸಿಯೋ .. ಹೊರಗೆ ಸೂಪರ್ ಸೈಲೆಂಟ್ ಎಂದು  ಕೆಂಪು ಪೈಂಟಿನಲ್ಲಿ ಬರೆಯಲ್ಪಟ್ಟದ್ದು. ಅದು ಎಂತಹ ಮೌನಿ ಎಂದರೆ ಪಕ್ಕದಲ್ಲಿ ಬಾಂಬ್ ಸ್ಪೋಟವಾದರೂ ಅದರ ಸದ್ದಿಗೆ ಕೇಳುತ್ತಿರಲಿಲ್ಲ. ಇದರಿಂದಾಗಿ ನೂರು ಮೀಟರ್ ದೂರದಲ್ಲಿದ್ದ ಪಕ್ಕದ ಮನೆಯವರಿಗೂ ಬೆಳಗ್ಗಿನ ತಿಂಡಿಗೆ ನಾನು ಚಟ್ನಿ ಮಾಡದಿದ್ದರೆ ತಿಳಿದುಬಿಡುತ್ತಿತ್ತು. ಇದರ ಸದ್ದಿಗೆ ಪ್ರಪಂಚದ ಉಳಿದೆಲ್ಲಾ ಸದ್ದುಗಳು ಮೌನವಾಗಿ ಹೊರಗಿನಿಂದ ಇವರು ಒಂದು ಗ್ಲಾಸ್ ಕಾಫೀ ಎನ್ನುವುದೋ , … Read more

ಟೇಮು ಅಂದ್ರೆ ಟೇಮು: ಅನಿತಾ ನರೇಶ್ ಮಂಚಿ

ಒಂದು ಕೈಯಲ್ಲಿ ಕೋಕೋಕೋಲಾ ಮತ್ತು ರಿಮೋಟ್ ಕಂಟ್ರೋಲರನ್ನು ಬ್ಯಾಲೆನ್ಸ್ ಮಾಡುತ್ತಾ  ಇನ್ನೊಂದು ಕೈಯಲ್ಲಿ ಅಂಗೈ ತುಂಬುವಷ್ಟು ಚಿಪ್ಸನ್ನು ಹಿಡಿದುಕೊಂಡು ನೆಟ್ಟ ಕಣ್ಣಿನಲ್ಲಿ ಟಿ ವಿ ಯಲ್ಲಿ ತೋರಿಸುತ್ತಿದ್ದ ಫಿಟ್ ನೆಸ್ ಕಾರ್ಯಕ್ರಮವನ್ನು ಸೋಫಾದ ಮೇಲೆ ಮಲಗು ಭಂಗಿಯಲ್ಲಿ ಕುಳಿತು ವೀಕ್ಷಿಸುತ್ತಿರುವ ಸಮಯದಲ್ಲಿ  ’ಅವ್ವಾ ಲಂಗರು ಕೊಡಿ’ ಅಂದಳು ನಮ್ಮ ಮನೆಯ ಹೊಸ  ಸಹಾಯಕಿ. ಇದ್ದಕ್ಕಿದ್ದ ಹಾಗೆ ಕೇಳಿದ  ಅವಳ ಮಾತು ಕಿವಿಯೊಳಗೆ ಹೊಕ್ಕರೂ ಅರ್ಥವಾಗದೇ ಕಣ್ಣುಗಳನ್ನು ಟಿ ವಿ ಯ ಕಡೆಯಿಂದ ಬಲವಂತವಾಗಿ ತಿರುಗಿಸಿ ಅತ್ತ ಕಡೆ … Read more

ಹ್ಹೋ.. ಏನು ..?: ಅನಿತಾ ನರೇಶ್ ಮಂಚಿ

ನಾಯಿ ಬೊಗಳುವ ಸದ್ದಿಗೆ ಒಬ್ಬೊಬ್ಬರಾಗಿ ಹೊರ ನಡೆದ ನಮ್ಮ ಮನೆಯ ಸದಸ್ಯರು ಯಾರೊಂದಿಗೋ ಏನು ? ಏನು? ಎಂದು ವಿಚಾರಿಸುತ್ತಿರುವುದು ಕೇಳಿಸಿತು. ಮಧ್ಯಾಹ್ನದ ಊಟದ ಸಿದ್ದತೆಯಲ್ಲಿದ್ದ ನಾನು ಯಾರಿರಬಹುದು ಎಂಬ ಕುತೂಹಲದಲ್ಲಿ ಹೊರಗೆ ದೃಷ್ಟಿ ಹಾಯಿಸಿದೆ. ಅರ್ರೇ .. ನಮ್ಮ ಪ್ರೀತಿಯ ಗೌರತ್ತೆ.. ಅದೂ ಕೊಡಗಿನ  ಕಾವೇರಿಯ ಉಗಮಸ್ಥಾನದಿಂದ  ಮೊದಲ ಬಾರಿಗೆ ನಮ್ಮನೆಗೆ ಬರುತ್ತಾ ಇರುವುದು. ನಾವೆಲ್ಲಾ ಅವರ ಮನೆಗೆ ಹೋಗಿ ದಿನಗಟ್ಟಲೆ ಟೆಂಟ್ ಊರುತ್ತಿದ್ದೆವು. ಸ್ವಲ್ಪವೂ ಬೇಸರಿಸಿಕೊಳ್ಳದೇ ಉಪಚಾರ ಮಾಡಿ ಅಕ್ಕರೆಯಿಂದ ನೋಡಿಕೊಳ್ಳುತ್ತಿದ್ದರು.  ಅಲ್ಲಿಂದ ಮರಳುವಾಗ … Read more

ಉಳಿತಾಯ: ಅನಿತಾ ನರೇಶ್ ಮಂಚಿ

ಅತ್ತ ಕಡೆಯಿಂದ ಚಿಕ್ಕಿಯ ಫೋನ್. ಹೇಗಿದ್ದರೂ ಅರ್ಧ ಗಂಟೆಗಿಂತ ಕಮ್ಮಿ ಮಾತನಾಡಿ ನಮಗಿಬ್ಬರಿಗೂ ಗೊತ್ತೇ ಇಲ್ಲ. ’ಲೈನಲ್ಲಿರು ಬಂದೇ’ ಎಂದು ಕೂಗಿ ಅಡುಗೆ ಮನೆಗೆ ನುಗ್ಗಿ ಸ್ಟವ್ ಆಫ್ ಮಾಡಿ, ಪಕ್ಕದ ಕೋಣೆಯ ಫ್ಯಾನ್ ನಿಲ್ಲಿಸಿ ಮತ್ತೆ ಲ್ಯಾಂಡ ಫೋನಿನ ರಿಸೀವರ್ ಕೈಯಲ್ಲಿ ಹಿಡಿದು ಲ್ಯಾಂಡಾದೆ. ನಮ್ಮ ಪಕ್ಕದ ಮನೆಯ ದನಗಳಿಗೆ ತಿನ್ನಲು ಹಾಸನದಿಂದ ತರಿಸಿದ ಒಣ ಹುಲ್ಲಿನ ಬಣ್ಣದಿಂದ ಹಿಡಿದು ಮೊನ್ನೆ ನಮ್ಮನೆ ನಾಯಿಯ ಬಾಯಿಗೆ ಸಿಕ್ಕಿ ಸತ್ತ ಹೆಗ್ಗಣದ ಬಾಲದವರೆಗಿನ ಕಥೆ ನನ್ನ ಕಡೆಯಿಂದ … Read more

ಎಂತಾ ಸೆಖೆ ಮಾರ್ರೆ..: ಅನಿತಾ ನರೇಶ್ ಮಂಚಿ

ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡುವಾಗ ವರ್ಷಕ್ಕೆ ಮೂರು ಕಾಲಗಳಿರುತ್ತವೆ, ಮಳೆಗಾಲ ಚಳಿಗಾಲ ಬೇಸಿಗೆಗಾಲ  ಎಂದು ಟೀಚರುಗಳು ಹೇಳಿ ಕೊಟ್ಟದ್ದು ನಿಮಗೆ ನೆನಪಿರಬಹುದು.  ನಾನಂತೂ ಅದನ್ನೇ ಪರಮ ಸತ್ಯವೆಂದು ತಿಳಿದು  ಉರು ಹೊಡೆದಿದ್ದೆ ಮಾತ್ರವಲ್ಲ ಅದನ್ನೇ ಪರೀಕ್ಷೆಗಳಿಗೆ ಬರೆದು ಮಾರ್ಕೂ ಗಿಟ್ಟಿಸಿದ್ದೆ. ಆದರೆ  ದಕ್ಷಿಣ ಕನ್ನಡಕ್ಕೆ ಕಾಲಿಟ್ಟ ಮೇಲೆ ತಿಳಿದಿದ್ದು ಸತ್ಯ ಕೂಡಾ ಊರಿಂದೂರಿಗೆ ಬದಲಾಗುತ್ತದೆ ಎಂದು..!!  'ನೋಡಿ ಹಾಗೆ ಹೇಳ್ಬೇಕು ಅಂದ್ರೆ ನಮ್ಮೂರಲ್ಲಿ ಬೇಸಿಗೆ ಕಾಲ ಅಂತಲೇ ಇಲ್ಲ..' 'ಅರ್ರೇ.. ವಾವ್ ಎಷ್ಟು ಚಂದ' ಅಂತ ಟಿಕೆಟ್ … Read more

ಆ ..ಊ.. ಔಚ್.. ಗಾಯಬ್: ಅನಿತಾ ನರೇಶ್ ಮಂಚಿ

ಇದ್ದಕ್ಕಿದ್ದಂತೆ ಎಂದು ಹೇಳಲು ಸಾಧ್ಯವಿಲ್ಲದಿದ್ದರೂ  ಯಾವುದೇ ಘನ ಗಂಭೀರ ಕಾರಣಗಳಿಲ್ಲದೆ ನನ್ನ ಬಲದ  ಕೈಯ ತೋರು ಬೆರಳಿನಲ್ಲಿ ನೋವು ಕಾಣಿಸಿಕೊಂಡಿತು. ನೋವು ಎಂದರೆ ಅದೇನು ಅಂತಹ ಸಹಿಸಲಸಾಧ್ಯವಾದ ಭಯಂಕರ ನೋವೇನೂ ಅಲ್ಲ. ಆದರೆ ದಿನವಿಡೀ ನಾನಿದ್ದೇನೆ ಎಂದು ಹಣಕಿ ಇಣುಕಿ ಹೋಗುತ್ತಿತ್ತು. ಹೀಗೆ ನೋವುಗಳು ಎಲ್ಲೇ ಪ್ರಾರಂಭವಾದರೂ ನಾನು ಅದರ ಇತಿಹಾಸವನ್ನು ಕೆದಕಲು ಹೊರಡುತ್ತೇನೆ. ಅವುಗಳ ಹುಟ್ಟು, ಬೆಳವಣಿಗೆಗಳ ಬಗ್ಗೆಯೇ ಕುತೂಹಲ ನನಗೆ. ಹಾಗಾಗಿ ನೋವು ಶುರು ಆದದ್ದು  ಹೇಗೆ, ಯಾವಾಗ, ಎಷ್ಟು ಗಳಿಗೆಗೆ, ಮುಂತಾದವುಗಳಿಗೆ ಉತ್ತರ … Read more

ಮೊದಲ ಸಲಾ: ಅನಿತಾ ನರೇಶ್ ಮಂಚಿ

 ಏನೇ ಹೇಳಿ.. ಜೀವನದಲ್ಲಿ  ಮೊದಲ ಸಲ ಎನ್ನುವುದು ಪ್ರತಿಯೊಬ್ಬನ ಮನಸ್ಸಿನಲ್ಲಿಯೂ ವಿಶೇಷವಾಗಿಯೇ ನೆನಪಿರುತ್ತದೆ. ಮೊದಲ ಸಲ ಶಾಲೆಯ ಮೆಟ್ಟಿಲು ಹತ್ತಿದ್ದು, ಮೊದಲ ಸಲ ತಪ್ಪು ಮಾಡಿ ಶಿಕ್ಷೆ ಅನುಭವಿಸಿದ್ದು, ಮೊದಲ ಸಲ ಯಾರಿಗೂ ಕಾಣದಂತೆ ಅಮ್ಮನ ಸೀರೆ ಉಟ್ಟದ್ದು, ಹುಡುಗರಾದರೆ ಸೊಂಟದಿಂದ ಜಾರುವ ಭಯವಿದ್ದರೂ ಅಪ್ಪನ ಪಂಚೆಯನ್ನುಟ್ಟು ದೊಡ್ಡವನಾದಂತೆ ಮೆರೆದದ್ದು, ಇಷ್ಟೇ ಏಕೆ ಮೊದಲ ಸಲ ಯಾರೊಡನೆಯೋ ಕಣ್ಣೋಟ ಕೂಡಿದ್ದು, ಕನಸಾಗಿ ಕಾಡಿದ್ದು.. ಯಾವುದನ್ನೇ ಹೇಳಲಿ ಮೊದಲ ಸಲ ಎನ್ನುವುದು ನಮಗೆ ನೆನಪಾದಂತೆ ಮನಸ್ಸಿಗೆ ಮುದ ನೀಡುವುದಂತೂ … Read more

ಪತ್ರ ಬರೆಯಲಾ: ಅನಿತಾ ನರೇಶ್ ಮಂಚಿ

ಅದೊಂದು ಕಾಲವಿತ್ತು.. ಅದನ್ನು ಕಾಯುವಿಕೆಯಲ್ಲಿನ ಪರಮ ಸುಖದ ಕಾಲ ಅಂತ ಕರೆದರೂ ಸರಿಯೇ. ಕಾಯುವಿಕೆ  ಅನಿವಾರ್ಯವಾದ ಕಾರಣ ’ತಾಳುವಿಕೆಗಿಂತನ್ಯ ತಪವು ಇಲ್ಲ’ ಎಂದುಕೊಂಡೇ ಎಲ್ಲರೂ ಆ ಸುಖವನ್ನು ಅನುಭವಿಸುತ್ತಿದ್ದರು. ಹೇಳಲಾರದ  ಚಡಪಡಿಕೆ, ಕಣ್ಣೋಟ ದೂರ ದಾರಿಯ ಕಡೆಗೇ.. ಕಾಲುಗಳು ನಿಂತಲ್ಲಿ ನಿಲಲರಿಯದೇ ಅತ್ತಿಂದಿತ್ತ ಇತ್ತಿಂದತ್ತ.. ಕಿವಿಗಳು ಅವನ ಹೆಜ್ಜೆಯ ಸಪ್ಪಳದ ಸದ್ದಿಗಾಗಿ ಹಾತೊರೆಯುತ್ತಾ.. ನಿಜಕ್ಕೂ ಅದು ರಾಮನ ಬರುವಿಕೆಗಾಗಿ ಕಾದಿರುವ  ಶಬರಿಯ ಧ್ಯಾನದಿಂದ ಕಡಿಮೆಯದ್ದೇನು ಅಗಿರಲಿಲ್ಲ.  ಏನಿರಬಹುದು ಇದು ಎಂಬ ಕುತೂಹಲವೇ..  ’ವಸಂತ ಬರೆದನು ಒಲವಿನ ಓಲೆ … Read more

ಅತಿಥಿ ಸಂಪಾದಕೀಯ: ಅನಿತಾ ನರೇಶ್ ಮಂಚಿ

ಮನುಷ್ಯ ಸಂಘ ಜೀವಿ. ಇದರಲ್ಲಿ ಹೆಣ್ಣಾದರೂ ಸರಿ ಗಂಡಾದರೂ ಸರಿ ಬದುಕು ಸಾಗಿಸಬೇಕಾದರೆ ಜೊತೆಯನ್ನು ಬಯಸುವುದು ಸಹಜ. ಬಂಡಿಯ ಎರಡು ಗಾಲಿಗಳಲ್ಲಿ ಯಾವುದು ಮುಖ್ಯವೆಂದು ಹೇಗೆ ಹೇಳಲು ಸಾಧ್ಯವಿಲ್ಲವೋ ಹಾಗೇ ಸ್ತ್ರೀ ಪುರುಷರಿಬ್ಬರಲ್ಲೂ ಯಾರು ಮೇಲು ಯಾರು ಕೀಳು ಎಂದು ಹೇಳುವುದು ಸಾಧ್ಯವಿಲ್ಲ. ಒಬ್ಬರಿಗೊಬ್ಬರು ಪೂರಕವಾಗಿ ನಡೆದರೆ ಬದುಕು ಸೊಗಸು.   ಬದಲಾದ ಕಾಲ ಘಟ್ಟದಲ್ಲಿ  ಸ್ತ್ರೀ ಇನ್ನಷ್ಟು ಹೊಣೆಗಾರಿಕೆಗಳನ್ನು ಹೆಗಲ ಮೇಲೇರಿಸಿಕೊಳ್ಳುತ್ತಾ ನಡೆದಿದ್ದಾಳೆ.ಆ ಹೆಜ್ಜೆಗಳು ನಡೆದಾಡಿದ ದಾರಿ ಹೊಸ ದಿಕ್ಕಿನತ್ತ ಸಾಗಬೇಕಾದರೆ ಸಮಾಜದ ಸಹಕಾರವೂ ಮುಖ್ಯ. … Read more

ದ್ವಿಮುಖ ಪರಿಚಯ: ಅನಿತಾ ನರೇಶ್ ಮಂಚಿ

ಇಡ್ಲಿ ಬೇಯಲಿಟ್ಟು ಚಟ್ನಿಗಾಗಿ ಕಾಯಿ ತುರಿಯುತ್ತಲಿದ್ದೆ. ಪಕ್ಕದ ಮನೆಯ ಪಂಕಜಾಕ್ಷಿ ಅಕ್ಕಾ ಅಂತ ಕರೆದಳು. ಅದರ ಮೊದಲೇ ಅವಳ ಕುಮಾರ ಕಂಠೀರವ ಅಡುಗೆ ಮನೆಗೆ ನುಗ್ಗಿ ಎರಡು ಜ್ಯೂಸಿನ ಲೋಟ ನೆಲಕ್ಕೆಸೆದಾಗಿತ್ತು. ಪುಣ್ಯಕ್ಕೆ ಅದು ಅನ್ ಬ್ರೇಕೇಬಲ್ ಗಳಾದ್ದರಿಂದ ಬಿದ್ದ ಲೋಟ ಎತ್ತಿಟ್ಟು ಅವನ ಕೆಲಸಕ್ಕೆ ಬ್ರೇಕ್ ಹಾಕಿದೆ. ಅಕ್ಕಾ ಸ್ವಲ್ಪ ಹೊತ್ತು ಅವನನ್ನಿಲ್ಲಿ ಬಿಟ್ಟು ಹೋಗ್ತೀನಿ.. ಅಂದಳು ಅವಳು.. ನಾನು ಹೂಂ ಅನ್ನುವ ಮೊದಲೇ ಅವಳ ಕುಮಾರ ಕಂಠೀರವ ನನ್ನ ಮುಖ ನೋಡಿ ಕಿಟಾರನೆ ಕಿರುಚಿ … Read more

ಹನಿಮೂನ್: ಅನಿತಾ ನರೇಶ್ ಮಂಚಿ

ಸಂಜೆಯ ಹೊತ್ತು.. ಹೂಗಿಡಗಳ ಮೇಲಿನಿಂದ ಬೀಸಿ ಬರುವ ಗಾಳಿ ಪಾರಿಜಾತದ ಕಂಪನ್ನು ಒಳ ಹೊತ್ತು ಬರುತ್ತಿತ್ತು.ಅಂಗಳದ ಮೂಲೆಯಲ್ಲಿ ಅರಳಿದ ಸಂಜೆ ಮಲ್ಲಿಗೆಯನ್ನು ನೇವರಿಸುತ್ತಾ ’ಜೀವ ತುಂಬಿ ಭಾವ ತುಂಬಿ ಮನದ ದೀಪ ಬೆಳಗಿ ಬಾ..’ ಎಂದು ಹಾಡುತ್ತಿರುವಾಗಲೇ  ದೀಪ ಹೊತ್ತಿಸುವ ಹೊತ್ತಾಯಿತೆಂದು ನೆನಪಾಗಿದ್ದು. ಒಳಗಡಿಯಿಟ್ಟೆ. ಮಬ್ಬುಗತ್ತಲಲ್ಲಿ ತಲೆ ತಗ್ಗಿಸಿ ಕೂತಿದ್ದ ಆಕಾರವೊಂದನ್ನು ಕಂಡು ಅಲ್ಲಿಯವರೆಗಿದ್ದ ರೋಮ್ಯಾಂಟಿಕ್ ಮೂಡ್   ಒಮ್ಮೆಲೇ ಮಾಯವಾಗಿ  ಹೃದಯ ಹಾರಿ ಬಾಯಿಗೆ ಬರುವಂತಾಯಿತು. ನನ್ನನ್ನು ಕಂಡು ಪಕ್ಕನೇ ಎದ್ದ ಆಕಾರ ಪರಿಚಯದ್ದು ಅನ್ನಿಸಿ … Read more

ಸಸ್ಯ ಪ್ರೇಮಿ: ಅನಿತಾ ನರೇಶ್ ಮಂಚಿ

ಮನೆ ಮಂದಿಯೆಲ್ಲಾ ಔತಣಕ್ಕೆಂದು ಹೊರ ಹೋಗಿದ್ದರು. ಅದ್ಯಾಕೋ ಮನೆಯಲ್ಲಿ ಯಾರೂ ಇಲ್ಲದಿದ್ದರೆ ಹಾಡುವ ಉಮೇದು,  ನಾಟಕದ ಡೈಲಾಗುಗಳನ್ನು ದೊಡ್ಡದಾಗಿ  ಹೇಳುವ ಉತ್ಸಾಹ ನನ್ನೊಳಗಿನಿಂದ  ಉಕ್ಕಿ ಬರುತ್ತದೆ. ಯಾಕೆಂದರೆ ನನ್ನ ಹಾಡು ಕೂಡಾ ’ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ’ ಅನ್ನುವ ಮಾದರಿಯದ್ದು. ಇವತ್ತಂತೂ ಯಾವ ಹಾಡು ಕೂಡಾ ಎರಡು ಗೆರೆಯಷ್ಟುದ್ದಕ್ಕೆ ನೆನಪಿಗೇ ಬರಲಿಲ್ಲ. ಕೊನೆಗೆ  ’ಯಾವ ಹಾಡ ಹಾಡಲೀ.. ಎಂದು ಯೋಚಿಸುವಾಗಲೇ ಮುಂದಿನ ಲೈನ್ ನೆನಪಿಗೆ ಬಂದು ’ಯಾವ ಹಾಡಿನಿಂದ ನಿಮಗೆ ನೆಮ್ಮದಿಯನು ನೀಡಲೀ..’  ಅಂತ ಧ್ವನಿ … Read more

ಡೊಂಕು ಬಾಲದ ನಾಯಕರು: ಅನಿತಾ ನರೇಶ್ ಮಂಚಿ

’ಡೊಂಕು ಬಾಲದ ನಾಯಕರೇ ನೀವೇನೂಟವ ಮಾಡಿದಿರಿ’ ಎಂದು ಅಡುಗೆ ಮನೆಯಲ್ಲಿ ಪಲ್ಯ ತಳ ಹತ್ತದಂತೆ ಸೌಟಿನಲ್ಲಿ ತಾಳ ಹಾಕುತ್ತಾ ನನ್ನ ಧ್ವನಿಗೆ ನಾನೇ ಮೆಚ್ಚಿಕೊಳ್ಳುತ್ತಾ ಹಾಡುತ್ತಿದ್ದೆ.ಅಷ್ಟರಲ್ಲಿ ’ಅಮ್ಮಾ’ ಎಂದಿತು ಕಂದನ ಕರುಳಿನ ಕರೆಯೋಲೆ. ನಾನೇ ಹಾಡುತ್ತಿದ್ದ ಲಾಲಿ ಹಾಡು ಕೇಳಲಾಗದೇ ಬೇಗನೇ ನಿದ್ರಿಸಿ ದೊಡ್ಡವನಾದ ನನ್ನ ಕರುಳ ಕುಡಿಯಲ್ಲವೇ ಎಂದು ಹಾಡನ್ನು ಮುಂದುವರಿಸಿದೆ.  ಅಮ್ಮಾ.. ಡೊಂಕು ಬಾಲದ ನಾಯಕರು ಅಂದರೆ ಯಾರು ಎಂದ. ಅವನ ಪ್ರಶ್ನೆಗೆ ಸರಳವಾಗಿ ’ನಾಯಿ’ ಎಂದು ಉತ್ತರ ಕೊಟ್ಟೆ. ತಕ್ಷಣ ನಾಲಿಗೆ ಕಚ್ಚಿಕೊಂಡೆ. … Read more

ಮನೆಯ ಮೂಲೆ: ಅನಿತಾ ನರೇಶ್ ಮಂಚಿ

  ಕೋಣೆ ಅನ್ನುವುದು ಹೆಚ್ಚಿನೆಲ್ಲಾ ಮನೆಗಳಲ್ಲಿ ಚೌಕವೋ ಆಯತವೋ ಇರುವುದರಿಂದ ಒಂದು ಕೋಣೆಗೆ ನಾಲ್ಕು ಮೂಲೆಗಳು ಇದ್ದೇ ಇರುತ್ತವೆ. ಅವುಗಳಲ್ಲಿ ಒಂದೆರಡು ಹೊರ ಜಗತ್ತಿಗೆ ತೆರೆದಿದ್ದರೆ ಮತ್ತುಳಿದವು ತಮ್ಮನ್ನು ಮಂಚವೋ, ಮೇಜೋ, ಕುರ್ಚಿಯೋ ಹೀಗೇ ಯಾವುದಾದರೂ ವಸ್ತುಗಳಿಂದ ಆವರಿಸಿಕೊಂಡಿರುತ್ತವೆ. ಇವುಗಳೇ ಮನೆಯ ಅತ್ಯದ್ಭುತ ಸ್ಥಳ ಎಂದು ನನ್ನ ಅಭಿಪ್ರಾಯ. ಇವುಗಳು ಮುಚ್ಚಿಟ್ಟುಕೊಂಡಿರುವ ರಹಸ್ಯಗಳೇ ಹಾಗಿರುತ್ತವೆ.   ಪಕ್ಕನೆ ಮನೆ ಒಳಗೆ ನುಗ್ಗಿದವರಿಗೆ ಕಾಣಬಾರದ, ಕಸ,  ಕಸಬರಿಕೆ, ಬಿಸುಡಲು ಮನಸ್ಸಿಲ್ಲದ ಹಳೆಯ ಬಟ್ಟೆಯ ಗಂಟು, ಮುರಿದ ಪಾತ್ರೆ ಪಡಗಗಳು, … Read more