ಖಾಲಿ ಹುದ್ದೆ: ಜಾನ್ ಸುಂಟಿಕೊಪ್ಪ

              ಮಲೆನಾಡಿನ ಬೆಟ್ಟಗುಡ್ಡಗಳ ಮಡಿಲಿನಲ್ಲಿ ಕಾಫಿತೋಟಗಳಿಂದ ಆವರಿಸಲ್ಪಟ್ಟ ಒಂದು ಹಳ್ಳಿ.ಆ ಹಳ್ಳಿಯಲ್ಲೊಂದು ಅನುಧಾನಿತ ಪ್ರೌಢಶಾಲೆ. ಈ ಶಾಲೆ ಒಂದು ರೀತಿ ಹಳ್ಳಿಗೆ ದಾರಿದೀಪವಿದ್ದಂತೆ. ಹಿಂದೆ ಅದೆಷ್ಟೋ ಮಂದಿ ಈ ಜ್ನಾನದೇಗುಲದಲ್ಲಿ ಕಲಿತು ವಿದ್ಯಾವಂತರಾಗಿ ತಮ್ಮ ಬದುಕನ್ನು ರೂಪಿಸಿಕೊಂಡಿದ್ದಾರೆ. ಹಿಂದೆಲ್ಲಾ ಶಾಲೆಗೆ-ಗುರುಗಳಿಗೆ ಅಪಾರ ಗೌರವವಿತ್ತು,ದೊಡ್ಡದೊಡ್ಡ ಸಾಹುಕಾರರ ಮಕ್ಕಳೂ ಸರಕಾರಿ ಶಾಲೆಯಲ್ಲಿ ಓದುತ್ತಿದ್ದರು.ಈಗ ಕಾಲ ಬದಲಾಗಿಬಿಟ್ಟಿದೆ.ಸರಕಾರದಿಂದ ಅನುದಾನ ಬರಲು ಆರಂಬಗೊಂಡದ್ದೇ ರಾಜಕೀಯವೂ ಶಾಲೆಯ ವಠಾರಕ್ಕೆ ವಕ್ಕರಿಸಿಕೊಂಡಿದೆ. ಶಾಲೆಯ ಆಡಳಿತ ಮಂಡಳಿಯೂ,ಶಿಕ್ಷಕ ವರ್ಗವೂ … Read more

ಭೀಮ: ಗಿರಿಜಾ ಜ್ಞಾನಸುಂದರ್

ತುಂಬಾ ಸುಸ್ತು, ನಿಶಕ್ತಿ ಅನ್ನಿಸುತ್ತಿತ್ತು. ನನ್ನ ಒಡೆಯನ ಮಾತು ಕೇಳಿಸುತ್ತಿತ್ತು. ಆದರೆ ಬಾಲ ಅಲ್ಲಾಡಿಸಲು ಸಹ ಆಗದಷ್ಟು ನಿತ್ರಾಣ. ಅವನ ಮಾತಿಗೆ ಪ್ರತಿಕ್ರಿಯೆ ಕೊಡಲೇಬೇಕೆಂಬ ಬಯಕೆ. ಅದಕ್ಕೆ ಸ್ವಲ್ಪ ಮಟ್ಟಿಗೆ ಕಣ್ಣು ತೆರೆಯಲು ಪ್ರಯತ್ನಿಸಿದೆ. ಕಣ್ಣ ತುಂಬಾ ನೀರು ತುಂಬಿಕೊಂಡು ನನ್ನನ್ನೇ ನೋಡುತ್ತಿದ್ದ ನನ್ನ ಜನ. ಅವರಿಗೆ ನಾನು ಚಿರಋಣಿ. ನನ್ನ ಜೀವ ಅವರೆಲ್ಲರೂ.  ನಾನು ತುಂಬಾ ಪುಟ್ಟವನಿದ್ದೆ ಈ ಮನೆಗೆ ಬಂದಾಗ. ನನ್ನ ಅಮ್ಮನಿಗೆ ಯಾವುದೋ ಕಾರ್ ಡಿಕ್ಕಿ ಹೊಡೆದು ಸತ್ತಳಂತೆ. ೨೦ ದಿನದ ಮರಿ … Read more

ಅವಸ್ಥೆ!: ಎಸ್.ಜಿ.ಶಿವಶಂಕರ್

`ನೆನ್ನೆ ರಾತ್ರಿ ದಾವಣಗೆರೆಯವರು  ಫೋನು ಮಾಡಿದ್ದರು..ಶಾಲಿನಿಯನ್ನು ಹುಡುಗ ಒಪ್ಪಿದ್ದಾನಂತೆ..ಆದ್ರೆ ಹುಡುಗ ಕಾರು ತಗೋಬೇಕಂತೆ, ಆರು ಲಕ್ಷ ವರದಕ್ಷಿಣೆ ಕೇಳ್ತಿದ್ದಾರೆ..ನೀನು ಹೂ ಅಂದರೆ..ನಿಮ್ಮಪ್ಪ ಫೋನು ಮಾಡಿ ಮಾತುಕತೆಗೆ ಕರೀಬೇಕೂಂತಿದ್ದಾರೆ…! ತಿಂಡಿಯ ತಟ್ಟೆ ಟೇಬಲ್ಲಿನ ಮೇಲಿಡುತ್ತಾ ತನ್ನ ತಾಯಿ ಹೇಳಿದಾಗ ರಾಜೀವನಿಗೆ ತನ್ನ ಶರೀರದ ಆ ಜಾಗ ನೆನಪಾಯಿತು. ಹೌದು ಸ್ನಾನ ಮಾಡುವಾಗ ನೋಡಿಕೊಂಡೆನಲ್ಲ..! ಅದರ ನೆನಪಿಂದ ಅವನಿಗೆ ವಿಚಿತ್ರವಾದ ಸಂಕಟವಾಯಿತು. ಆಹಾರ ಗಂಟಲಲ್ಲಿ ಇಳಿಯಲಿಲ್ಲ. ಕಿಟಿಕಿಯಿಂದಾಚೆ ನೋಡಿದ ಇನ್ನೂ ಕತ್ತಲಿತ್ತು. ಗಡಿಯಾರ ಆರೂವರೆಯನ್ನು ತೋರಿಸುತ್ತಿತ್ತು. `ಥೂ..ದರಿದ್ರದ ಟೈಮು! ಇದು … Read more

ಒಲ್ಲದ ಮನಸ್ಸಿನ ಮಾನಸ: ಗಿರಿಜಾ ಜ್ಞಾನಸುಂದರ್

ಮರದ ಮೇಲೆ ಹಸಿರೆಲೆ ನೋಡಿದಾಗ ಏನೋ ಒಂಥರಾ ಹೊಸತನ, ಮನಸ್ಸಲ್ಲಿ ಮಲ್ಲಿಗೆ ಹೂವಿನ ಪರಿಮಳ ಮತ್ತು ಏನೋ ಹೇಳಲಾಗದ ಸಡಗರ ಮತ್ತು ಸಂಕೋಚದ ಅನುಭವ.ತನ್ನ ಮದುವೆಯ ದಿನಗಳ ನೆನಪು ತರುವ ಪರಿಮಳ. ಆದರೆ ಇತ್ತೀಚಿಗೆ ಬರುಬರುತ್ತಾ ಆ ಭಾವನೆಗಳು ಎಲ್ಲೋ ಕಾಣೆಯಾಗುತ್ತಿರೋ ಹಾಗಿದೆ. ಹೊಸತನದ ಬದಲು ಭಾರವಾಗುತ್ತಿರುವ ಭಾವನೆಗಳು.. ಹೀಗೆ ಯೋಚಿಸುತ್ತಿರುವಾಗಲೇ ಕಣ್ಣಂಚಿನಲ್ಲಿ ಹನಿ …. "ಕುಕ್ಕರ್ ಎಷ್ಟ್ ಸಲ ವಿಸಿಲ್ ಆಯಿತು.. ಅಡುಗೆ ಮನೆಲ್ಲಿ ಯಾರು ಇಲ್ವಾ? ಏನ್ ರೋಗ ಬಂದಿದೆ ಮಾನಸಂಗೆ?"  ಅಂತ ಅತ್ತೆ … Read more

ಭೂಮಿಕಾ: ನಂದಾ ಹೆಗಡೆ

"ಭಟ್ರನ್ನ ಒಳಗೆ ಕರಿಲನೇ" ಎಂದು ನನ್ನವಳಿಗೆ ಕೇಳಿ ಒಪ್ಪಿಗೆ ಪಡೆದು ನಾನು ಇಬ್ಬರು ಭಟ್ಟರೊಂದಿಗೆ ದೇವರ ಮನೆ ಪ್ರವೇಶಿಸಿದೆ. ಇಂದು ನನ್ನಮ್ಮನ ಎಂಟನೇ ಶ್ರಾಧ್ದ. ಪ್ರತೀ ಶ್ರಾಧ್ದದ ದಿನವೂ ನಾನು ಒಂದು ರೀತಿಯ ಭಾವೋದ್ವೇಗಕ್ಕೆ ಒಳಗಾಗುತ್ತೇನೆ. ಅಮ್ಮನ ನೆನಪೇ ಹಾಗೆ. ನೋವು ನಲಿವಿನ ತಂತಿ ಎದೆಯಲ್ಲಿ ಮೀಟಿದ ಹಾಗೆ.  ನನ್ನಮ್ಮ ಹುಟ್ಟು ಹೋರಾಟಗಾರ್ತಿ. ಮದುವೆಗೆ ಮೊದಲೇ ತನ್ನ ಅಪ್ಪ, ಅಣ್ಣನ ಜೊತೆಗೆ ತೋಟ ಗದ್ದೆಗಳ ಕೆಲಸ ಮಾಡುವವಳಂತೆ. ನನ್ನಜ್ಜಿ ಯಾವಾಗಲೂ "ನಿನ್ನಮ್ಮ ಗಂಡಾಗಿ ಹುಟ್ಟಬೇಕಿತ್ತು"ಎಂದು ಹೇಳುತ್ತಿದ್ದರು. ಮದುವೆ … Read more

 ಕೃಷ್ಣ ಚೆಲುವೆಯ ಚಿತ್ರ: ಅನಂತ ರಮೇಶ್

೧ ಆ ಮುಗ್ಧಮುಖದ ಕಪ್ಪು ಚೆಲುವೆಯ ಚಿತ್ರವಿರುವ ಫೋಟೊವನ್ನು ಸುದೀಪ ರಾಜುವಿನ ಕೈಗೆ ಕೊಡುತ್ತಾ ಹೇಳಿದ, 'ರಾಜು, ಬೇಜಾರು ಮಾಡಬೇಡ. ನಿನ್ನ ಹೆಂಡತಿಯ ಈ ಫೋಟೋ  ಕೊಡಲು ಸ್ವಲ್ಪ ತಡವಾಯಿತು'. ಸುದೀಪ ಕೊಟ್ಟ ಆ ಫ಼ೋಟೊ ನೋಡುತ್ತ ರಾಜು ಕಣ್ಣುಗಳಲ್ಲಿ ನೀರು ತುಂಬಿಕೊಂಡ. 'ನಿಮ್ಮಿಂದ ತುಂಬಾ ಉಪಕಾರವಾಯಿತು. ನನ್ನ ಹೆಂಡತಿಯ ನೆನಪಿಗೆ ಇದಕ್ಕಿಂತ ಒಳ್ಳೇದು ನಾನಿನ್ನೇನೂ ನಿರೀಕ್ಷೆ ಮಾಡ್ಲಿಲ್ಲ. ನಿಮ್ಮ ಕ್ಯಾಮರಾದಲ್ಲಿ ಆದಿನ ಫ಼ೋಟೊ ತೆಗೆಯದೆ ಹೋಗಿದ್ದರೆ ಅವಳ ನೆನಪಿಗೆ ಅಂತ ನನ್ನ ಹತ್ರ ಇನ್ನೇನೂ ಇರ್ಲಿಲ್ಲ' … Read more

ಎಲೆಕ್ಷನ್ನು: ಸಿದ್ದರಾಮ ತಳವಾರ, ದಾಸ್ತಿಕೊಪ್ಪ

ಕೇರಿಯ ಜನ ಕಂಗಾಲಾಗಿದ್ದರು. ಗೋಡೆಯಲ್ಲಿದ್ದ ಗೂಟ ಸುಮ್ಮನೆ ತೆಗೆದು ಅದೆಲ್ಗೋ ಬಡ್ಕೊಂಡ್ರು ಅನ್ನೋ ಹಾಗೆ ಇದೆಲ್ಲಾ ನಮ್ಗೆ ಬೇಕಿತ್ತಾ ಅಂತ ಕೇರಿಯ ಹೆಣ್ಣು ಮಕ್ಕಳೆಲ್ಲಾ ಗುಸು ಗುಸು ಪಿಸು ಪಿಸು ಮಾತಾಡಲು ಶುರು ಮಾಡಿದ್ದರು. ಇರೋದಕ್ಕೆ ಸರಿಯಾದ ಸೂರಿಲ್ಲಾ ಕುಡಿಯೋದಕ್ಕೆ ನೀರಿದ್ರೂ ಕೇರಿಯಾಚೆ ಹೋಗಿ ಹಿಡ್ಕೊಂಡ ಬರೋ ಧೈರ್ಯ ಇಲ್ಲಾ. ಮನೇಲಿರೋ ಮುಟಗಿ ಹಿಟ್ಟು ಖಾಲಿ ಆಗಿರೋದ್ರಿಂದ ಮೂರು ದಿನದ ತಂಗಳ ರೊಟ್ಟಿಯನ್ನೇ ನೆನೆಸಿಕೊಂಡು ತಿನ್ನೋ ಟೈಮ್ ಬಂದೈತಿ. ಕೂಸುಗಳಿಗೆ ಹಾಲು ಕುಡಿದೇವಂದ್ರೂ ನಮ್ಮ ಹೊಟ್ಟೆಗ್ ಹಿಟ್ಟಿದ್ರೇ ತಾನೇ … Read more

ಉಬ್ಬಿಯ ಸ್ವಗತ……..: ಅಮರ್ ದೀಪ್ ಪಿ.ಎಸ್.

ಗೆಳೆಯ, ಮೇರೆ ಬಾತೋ ಮೇ ತೇರಿ ಫಿಕರ್ ಸದಾ…………………. ಮೇರೆ ಯಾದೋಂ ಮೇ ತೇರಿ ಫಿಕರ್ ಸದಾ………………..   ಖುಷಿಯಾಗಬೇಡ, ನಿನ್ನ ನೆನಸ್ಕೊಂಡು ಈ ಹಾಡು ಗುನುಗುತ್ತಿಲ್ಲ.  ತುಂಬಾ ಹಾಯಾಗಿದ್ದೆ ಕಣೋ ನಾನು, ಸ್ವಾಭಿಮಾನಿ.  ಚಿಕ್ಕಂದಿನಲ್ಲಿ ನನ್ನಿಬ್ಬರು ಗೆಳತಿಯರೊಡನೆ ಹರಟುತ್ತಾ, ನಗುತ್ತಾ ಶಾಲೆಗೆ, ಕಾಲೇಜಿಗೆ ಹೋಗುವುದು ಓದು ಕಲಿಯಲು ಎನ್ನುವುದನ್ನೇ ಮರೆತು ತುಂಬಾ ನಲಿಯುತ್ತಿದ್ದೆ. ಕಾಲೇಜಿನಲ್ಲಿ ಚೂಡಿ ಹಾಕಿದರೆ ವೇಲ್ ಹಾಕದೇ ಹೊರಟರೆ, ಇದ್ದರೂ ಕೊರಳಿಗಷ್ಟೇ ಸುತ್ತಿಕೊಂಡು ತಿರುಗುವುದನ್ನು ನೋಡಿ ಫ್ಯಾಮಿಲಿ ಫ್ರೆಂಡ್ಸ್ ಥರವಿದ್ದ ಹುಡುಗನೊಬ್ಬ ಗದರಿಸಿ … Read more

ಜಾತ್ಯಾಗೇನೈತಿ ಸುಡಗಾಡ: ತಿರುಪತಿ ಭಂಗಿ

       ಅಂವ ಉಳಿಯೋದ ಗ್ಯಾರಂಟಿ ಇಲ್ಲ. ನಾಂವ sಮಾಡಬೇಕಾದ ಪ್ರಯತ್ನಾ ಎಲ್ಲಾ ಮಾಡಾಕ ಹತ್ತೀವಿ. ಮಿಕ್ಕಿದ್ದ ಆ ದೇವ್ರಿಗೆ ಬಿಟ್ಟದ್ದ ಅನಕೋತ ಕೈಯಾಗ ಒಂದ ದೇಹಾ ಚಕ್ಕಮಾಡುವ ಮಶಿನ್ ಹಿಡಕೊಂಡ ಮಾತಾಡಕೋತ ಮಾತಾಡಕೋತ ಕಂಚಿ ಡಾಕ್ಟರ್ ಆಫ್ರೇಶನ್ ಥೇಟರ್ಗೆ ಹೊಂಟ. ಬಿಳಿ ಸೀರಿ,ಬಿಳಿ ಜಂಪರ್ ತೊಟ್ಟ, ಮೂಗಿಗೆ ಎತ್ತಗೊಳಿಗೆ ಹಾಕಿದಂಗ ಒಂದ ಬಾಯಿಬುಟ್ಟಿ ಹಕ್ಕೊಂಡ, ಮನಿ ಕಳ್ಳತನಾ ಮಾಡಾಕ ಬಂದ ಕಳ್ಳರಂತೆ ವೇಷಧಾರಿ ನರಸಬಾಯಿಗೋಳು ಡಾಕ್ಟರ್ ಹಿಂದ ಮುಂದ ಪಾದರಸದ ಹಂಗ ಆ ಕಡೆಯಿಂದ ಈ … Read more

ಮೂಕ ಪ್ರಾಣಿಯ ಪ್ರೀತಿ: ಪ್ರವೀಣ ಕಾಗಾಲ.ಕುಮಟಾ.

                 ಅದೊಂದು ಪುಟ್ಟ ಊರು.  ಆ ಊರಿನಲ್ಲಿ ಸೊಮೇಗೌಡ ಎಂಬ ಮಧ್ಯಮವರ್ಗದ ವ್ಯಕ್ತಿಯು ತನ್ನ ಹೆಂಡತಿ ಹಾಗೂ ಎರಡು ಮಕ್ಕಳೊಂದಿಗೆ ಬಾಳ್ವೆ ನಡೆಸುತ್ತಿದ್ದನು. ಸೊಮೆಗೌಡನು ಇತರರಿಗೆ ಯಾವಾಗಲೂ ಸಹಾಯ ಮಾಡುತ್ತ ತನ್ನ ಎರಡು ಮಕ್ಕಳನ್ನು ಒಳ್ಳೆಯ ವ್ಯಕ್ತಿಗಳನ್ನಾಗಿ ರೂಪಿಸಲು ಇವರು ಶ್ರಮಿಸುತ್ತಿದ್ದರು. ಸೊಮೇಗೌಡನ ಮಗನ ಹೆಸರು ನಿಖಿಲ್. ಹತ್ತನೆಯ ತರಗತಿಯಲ್ಲಿ ಓದುತ್ತಿದ್ದನು. ಮಗಳ ಹೆಸರು ರೂಪಾ. ಇವಳು ನಿಖಿಲ್ ಗಿಂತ ಎರಡು ವರ್ಷ ದೊಡ್ಡವಳಾಗಿದ್ದಳು. ನಗರದ ಕಾಲೇಜಿನಲ್ಲಿ ಪಿ. ಯು. ಸಿ. … Read more

ರಾಜ್ಯೋತ್ಸವ: ಪಾರ್ಥಸಾರಥಿ ಎನ್

ನಾಯಕ ನಟ ರೂಪೇಶನ ಮಾತು ಮುಂದುವರೆದಿತ್ತು, " ಕನ್ನಡ ನಾಡು ನುಡಿ ಜಲ ಭೂಮಿಗಾಗಿ, ನನ್ನ ಈ ಜನ್ಮವನ್ನು ಮೀಸಲಾಗಿಡುವೆ.  ನನ್ನ ಪ್ರೀತಿಯ ಅಣ್ಣ ತಮ್ಮಂದಿರೆ, ಇಂದು ನಾನು ಈ ನಾಡಿನಲ್ಲಿ  ಅನ್ನ ತಿನ್ನುತ್ತಿರುವೆ, ನಿಮ್ಮ ನಡುವೆ ಒಬ್ಬ ನೆಚ್ಚಿನ ನಟನಾಗಿ ನಿಂತಿರುವೆ ಎನ್ನುವದಾದರೆ ಅದಕ್ಕೆ ಈ ನಾಡಿನ ಸಮಸ್ತ ತಾಯಿಯರ ಪ್ರೀತಿ, ಅಕ್ಕ ತಂಗಿಯರ ವಾತ್ಸಲ್ಯ ಕಾರಣ. ಸ್ವಂತ ಅಣ್ಣ ತಮ್ಮಂದಿರು ನನ್ನ  ಜೊತೆ ಇರಲಿಲ್ಲ, ಆದರೆ ನೀವು ನನ್ನ ಕೈ ಬಿಡಲಿಲ್ಲ, ನನಗೆ ಅಣ್ಣನಂತೆ … Read more

ಆಗಂತುಕ: ಪಾರ್ಥಸಾರಥಿ ಎನ್

ಬಾಗಿಲಲ್ಲಿ ನಿಂತ ಕುಮುದಳಿಗೆ  ಮನೆಯ ಎದುರಿಗೆ  , ಶಂಕರ ಯಾರ ಜೊತೆಗೋ ಮಾತನಾಡುತ್ತಿರುವುದು ಗಮನ ಸೆಳೆಯಿತು.  ದಿಟ್ಟಿಸಿ ನೋಡಿದಳು, ಯಾರೋ ಬಿಕ್ಷುಕನಿರಬೇಕು ಅಂದುಕೊಂಡಳು. ಅವನ ಮಾಸಿದ ಕಾವಿಯ ನಿಲುವಂಗಿ, ಬಲಹೆಗಲಿಗೆ ಜೋತುಬಿದ್ದ ಬಟ್ಟೆಯ ಜೋಳಿಗೆ. ಹಾಗೆ ಕೈಯಲ್ಲಿ  ಆಸರೆಗೆ ಹಿಡಿದು ನಡೆಯುವಂತ ಉದ್ದನೆಯ ನಯಮಾಡಿದ ಕೋಲು.  ಸಾಕಷ್ಟು ಉದ್ದ ಎನ್ನಬಹುದಾದ ಬಿಳಿ ಕರಿ ಬಣ್ಣ ಮಿಶ್ರಿತ ಗಡ್ಡ ಅವಳ ಗಮನ ಸೆಳೆಯಿತು.   ಶಂಕರ ಆಗುವದಿಲ್ಲ  ಅನ್ನುವಂತೆ ತಲೆ ಅಡ್ಡಡ್ಡ ಆಡಿಸುತ್ತಿದ್ದ. ಕುಮುದ ಹೊರಗೆ ಬಂದು ನಿಂತಿದ್ದು … Read more

 ಅಕ್ಷರ, ಅನ್ನ, ಕುಬೇರ: ಸೋಮಶೇಖರ ಬಿದರೆ

                                      ಬೆಳಗಿನ ಸೂರ್ಯ ಆಗಲೇ ತೇಲಿ ಬಂದು ೩ನೇಅಂತಸ್ತಿನಲ್ಲಿರೊ ಅವನ ಮನೆಯ ಕಿಟಕಿಯಲ್ಲಿ ಇಣುಕುತ್ತಿದ್ದ, ಹೆಂಡತಿ ಮಗ ಇನ್ನೂ ಸುಖ ನಿದ್ರೆಯಲ್ಲಿದ್ರು. ಬ್ರಾಹ್ಮೀ ಮಹೂರ್ತದಲ್ಲಿ ಏಳಬೇಕಂದು ಎಷ್ಟೋ ಸಲ ಅನ್ನಿಸಿದರೂ ಸಾಧ್ಯವಾಗಿಲ್ಲ. ತಿಂಗಳದ ಮೊದಲ ವಾರವಾದ್ದರಿಂದ ಖುಷಿಯಾಗಿದ್ದ. ರೂಡಿಯಂತೆ ತನ್ನ ಮೊಬೈಲಿನ ಸ್ಕ್ರೀನ್ ಆನ್ ಮಾಡಿದ ಸಾಲು ಸಾಲಾಗಿ ಸಂದೇಶಗಳು ಬಂದಿದ್ವು … Read more

 ಬೆಳಕು ಕಂಡ ಕಣ್ಣು: ಅನಂತ ರಮೇಶ್

ಉಪಗ್ರಹದಿಂದ ಬರುವ ಛಾಯಾ ಚಿತ್ರಗಳು ವಿನೀತನ ಮನಸ್ಸನ್ನು ತುಂಬಾ ಸೆಳೆಯುತ್ತವೆ. ಆಗಾಗ ಅಂತರ್ಜಾಲದಲ್ಲಿ ಭೂಮಿಯ ವೈವಿಧ್ಯದ ಚಿತ್ರಗಳನ್ನು ಅವನು ಅಪ್ಪನ ಜೊತೆ ಕುಳಿತು ನೊಡುತ್ತಿರುತ್ತಾನೆ. ಬಣ್ಣದ ಓಕುಳಿಯಲ್ಲಿ ಈಜುವಂತೆ ಕಾಣುವ ಭೂಮಿಯನ್ನು ನೋಡಲು ಅವನಿಗೆ ತುಂಬಾ ಇಷ್ಟ.  "ಅಪ್ಪಾ.. ನಮ್ಮ ದೇಶದ ಕಡೆ ಜೂಮ್ ಮಾಡು. ಎಷ್ಟೊಂದು ಹಸಿರು ಕಾಣುತ್ತೆ ಅಲ್ವ !   ಈ ಥರ ಹಸಿರು ನಾನು ನೋಡೆ ಇಲ್ಲ " "ನಾಗರಹೊಳೆ ಅಥವ ಅಗುಂಬೆ ಕಡೆಗೆ ಈ ರಜಾದಲ್ಲಿ ಹೋಗೋಣ…. ಹಸಿರು ಕಾಡಿಗೆ" … Read more

ಜೋಗದ ಜಾಲ: ಪ್ರಶಸ್ತಿ

ಮಳೆಗಾಲದಲ್ಲಿನ ಮಲೆನಾಡು ಅಂದ್ರೆ ಎಲ್ಲೆಡೆ ಹಚ್ಚ ಹಸಿರು. ಬಿಟ್ಟೂ ಬಿಡದೇ ಸುರಿಯೋ ಮಳೆಗೆ ಕಗ್ಗಲ್ಲುಗಳ ನಡುವೆ ಬೈತಲೆ ತೆಗೆದಂತಹ ಜಲಪಾತಗಳು, ಹಸಿರು ಹೊದ್ದ ಕಾನನಗಳು. ಇವುಗಳನ್ನು ಕಣ್ತುಂಬಿಕೊಳ್ಳೋಕೆ ಎಲ್ಲೆಡೆಯಿಂದ ಬರ್ತಿರೋ ಪ್ರವಾಸಿಗರಿಗೆ ರೆಕ್ಕೆಬಿಚ್ಚಿದ ನವಿಲುಗಳ, ಇಂಪು ಕಂಠದ ಕೋಗಿಲೆಗಳ ಸ್ವಾಗತ. ಮಳೆ ಹೆಚ್ಚಾದಂತೆಲ್ಲಾ ಹೆಚ್ಚಾಗೋ ಜಲಪಾತಗಳ ಭೋರ್ಗರೆತಕ್ಕೆ ಸುತ್ತಲಿನ ಜಾಗದಲ್ಲೆಲ್ಲಾ ಮಂಜು ಮುಸುಕಿ ಜಲಪಾತದ ನೋಟವೇ ಮುಚ್ಚಿಹೋಗೋದೂ ಉಂಟು. ಅಂತಹ ಸಂದರ್ಭದಲ್ಲೆಲ್ಲಾ ಬೀಸೋ ಗಾಳಿಯ ಜೊತೆ ತೆರೆತೆರೆಯಾಗಿ ಸರಿವ ಮಂಜ ಪರದೆಯ ಹಿಂದಿನ ಜಲಪಾತವನ್ನು ಕಣ್ತುಂಬಿಕೊಳ್ಳೋ ಅನುಭವವೇ … Read more

ಅನುರಣಿಸಿದ ಅಲೆಗಳು: ಸಾತ್ವಿಕ್ ಹ೦ದೆ

ಭರವಸೆಗಳೆಲ್ಲಾ ಬತ್ತಿ ಹೋಗಿದ್ದವು. ಇರುವಿಕೆಗೆ ಹೊಸ ಅರ್ಥಗಳನ್ನು ಹುಡುಕಿಕೊ೦ಡು ಬದುಕಬೇಕಾಗಿದೆಯೋ ಏನೋ ಎನಿಸುವಷ್ಟು ಖಿನ್ನತೆ. ರೌರವ ಮೌನದ ನಡುವೆ ಅಲೆಗಳ ಆರ್ಭಟ. ತನ್ನದೇ ಪ್ರಶ್ನೋತ್ತರಗಳಲ್ಲಿ ಸಮುದ್ರದ ಅಲೆಗಳು ಮಗ್ನವಾಗಿದ್ದವು. ಸಮುದ್ರ ತೀರದಲ್ಲಿ ಸಾಕಷ್ಟು ಮೀನುಗಳು ಸತ್ತುಬಿದ್ದಿದ್ದವು.  ಕಾಗೆಗಳು ನಾ ಮು೦ದು ತಾ ಮು೦ದು ಎ೦ಬ೦ತೆ ಹಿ೦ಡು ಹಿ೦ಡಾಗಿ ಬ೦ದು ತಿನ್ನುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಬೇರೆ ಪಕ್ಷಿಗಳ೦ತೆ ತನ್ನ ಆಹಾರವನ್ನು  ಬೇರೆಡೆಗೆ  ಕೊ೦ಡೊಯ್ದು ತಿನ್ನದ ಕಾಗೆಗಳು ಸ್ವಲ್ಪ ರುಚಿನೋಡಿ ಹಾರಿ ಹೋಗುತ್ತಿದ್ದವು. ಇಡೀ ಸಮುದ್ರತೀರ ಸ್ಮಶಾಣವಾಗಿ ಮಾರ್ಪಾಡಾಗಿತ್ತು. ಸ೦ಸ್ಕಾರವೇ … Read more

ಕೋಟಿಗೊಬ್ಬ!!: ಎಸ್.ಜಿ.ಶಿವಶಂಕರ್

ಪ್ರೇಕ್ಷಕರು ಉಸಿರು ಬಿಗಿಹಿಡಿದು ಕೂತಿದ್ದರು!! ಟಿವಿ ಸ್ಟುಡಿಯೋದಿಂದ 'ಕೋಟಿ ಲೂಟಿ' ಕಾರ್ಯಕ್ರಮ ನೇರ ಪ್ರಸಾರವಾಗುತ್ತಿತ್ತು. ಸ್ಟುಡಿಯೋದ ಪ್ರೇಕ್ಷಕರ ಜೊತೆಗೆ ಮನೆಗಳಲ್ಲಿ ಟಿವಿ ನೋಡುತ್ತಿದ್ದವರೂ ಸಹ ಉಸಿರು ಬಿಗಿಹಿಡಿದು ಕೂತಿದ್ದರು!! ಆತ ಅದ್ವಿತೀಯನೆನಿಸಿದ್ದ! ಒಂದಿಷ್ಟೂ ತಿಣುಕದೆ ಸರಾಗವಾಗಿ, ಒಂದು ಕ್ಷಣವೂ ಯೋಚಿಸದೆ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡುತ್ತಿದ್ದ! ಇದುವರೆಗೆ ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಯಾರಿಗೂ ಆ ರೀತಿಯಲ್ಲಿ ಉತ್ತರಿಸಲು ಸಾಧ್ಯವಾಗಿರಲಿಲ್ಲ!  ಕಾರ್ಯಕ್ರಮವನ್ನು ಪ್ರಾರಂಭದಿಂದಲೂ ವೀಕ್ಷಿಸುತ್ತಿದ್ದವರಿಗೆ ಆಶ್ಚರ್ಯ! ಯಾರೀತ? ಇಲ್ಲಿಯವರೆಗೂ ಯಾರ ಗಮನಕ್ಕೂ ಬಾರದೆ ಎಲ್ಲಿ ಅಡಗಿದ್ದ? ಜ್ಞಾನಭಂಡಾರದ ಬಾಗಿಲನ್ನೇ … Read more

ಅರೆಘಳಿಗೆಯ ಕತ್ತಲು: ಫಕೀರ

ಕಪ್ಪು ಬೆಳಕಿನ ಆ ಕಂದಕದ ಬೆಳಕಿನಲ್ಲಿ ಸಾಗಿದ್ದ ನಮ್ಮ ಮಾತುಕತೆ ಏಲ್ಲೋ ಒಂದು ಕಡೆ ತನ್ನ ಹಾದಿಯನ್ನು ತಪ್ಪಿತ್ತು. ಅವಳನ್ನು ನಾನು ಭೇಟಿಯಾದೆ ಅನ್ನುವ ವಿಚಾರ ನನಗೆ ಆಗಲೇ ಮರೆತುಹೋಗಿತ್ತು. ಸುಂದರ ಮೊಗದ, ಆಕರ್ಷಕ ನಗುವಿನ ಆ ಹುಡುಗಿಯ ಮಾತುಗಳನ್ನು ಕೇಳುತ್ತಾ ಅವಳ ಜೊತೆ ನಾನು ಅನುಸರಿಸಿ ಒಡನಾಡುತ್ತಾ ಅವಳ ಮನಸ್ಸಿಗೆ ಹತ್ತಿರವಾಗಿದ್ದು ಮಾತ್ರ ತುಂಬಾ ಅನಿರೀಕ್ಷಿತ. ಇಷ್ಟು ವರ್ಷದವರೆಗೆ ಹುಡುಗಿಯರ ಅಂತರಂಗವನ್ನು ಹೆಚ್ಚು ಕೆದಕದ ನನಗೆ ಅದೊಂದು ಹೊಸ ಅನುಭವವಾಗಿತ್ತು. ಹೆಣ್ಣಿನ ಸುಂದರ ಮನೆಯೊಳಗೊಮ್ಮೆ ಹೋಗಿ … Read more

ಗೋಡೆಗಳ ದಾಟುತ್ತ…: ಉಮೇಶ್ ದೇಸಾಯಿ

               ಅಂದು ಬೆಳಿಗ್ಗೆಯೇ ದತ್ತಣ್ಣಿ ತನ್ನ ಗೆಳೆಯ ದಸ್ತಗೀರನಿಗೆ ಫೋನು ಮಾಡಲು ಎರಡು ಕಾರಣಗಳಿದ್ದವು. ಅಂದು ದಸ್ತಗೀರನ ಹುಟ್ಟಿದಹಬ್ಬ ಅಂತೆಯೇ ನಿನ್ನೆ ಎಲ್ಲ ಟಿವಿ ಚಾನಲಗಳಲ್ಲಿ ಬಂದ ದಸ್ತಗೀರನ ಸಂದರ್ಶನ. ಗೆಳೆಯನ ಉತ್ತರಕ್ಕೂ ಕಾಯದೇ ಭೆಟ್ಟಿಯಾಗಲು ಬರುವುದಾಗಿ ಹೇಳಿ ಫೋನು ಇಟ್ಟ. ಕೇವಲ ಅಸೀೀಪನ ತಂದೆ ಆಗಿದ್ದಕ್ಕಾಗಿ ಅವ ಕೇಳಬಾರದ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿತ್ತು,ಮಾತ್ರವಲ್ಲ ಮಗ ಹೀಗೆ ಮಾಡಿದ ಅದಕ್ಕೆ ನನಗೇಕೆ ಈ ಶಿಕ್ಷೆ ಎಂಬ ಅವನ ಅಳಲು ಮೂಕರೋದನವಾಗಿತ್ತು. … Read more

ವಿಶ್ವಾಮಿತ್ರ!!: ಎಸ್.ಜಿ.ಶಿವಶಂಕರ್

ಅರಳೀಕಟ್ಟೆಯಲ್ಲಿ ಕೂತಿದ್ದ ಶತಾಯುಶಿ ಹನುಮಜ್ಜ ತನ್ನಷ್ಟೇ ವಯಸ್ಸಾದಂತೆ ಕಾಣುತ್ತಿದ್ದ ಕನ್ನಡಕವನ್ನು ಸರಿಪಡಿಸಿಕೊಂಡು ತನ್ನ ಮುಂದೆ ಧೂಳೆಬ್ಬಿಸುತ್ತಾ ಹೋದ ಕಾರು ನೋಡಿದ. ಇದು ಎಷ್ಟನೆಯ ಕಾರು ಎಂದು ಅಚ್ಚರಿಪಟ್ಟ. ಸುಮಾರು ಅರ್ಧ ಗಂಟೆಯಿಂದ ಏನಿಲ್ಲವೆಂದರೂ ಇಪ್ಪತ್ತಕ್ಕೂ ಹೆಚ್ಚು ಕಾರುಗಳು ಅವನು ಕೂತಿದ್ದ ಆರಳೀಕಟ್ಟೆಗೆ ಧೂಳಿನ ಅಭಿಷೇಕ ಮಾಡಿದ್ದವು.  "ಇವತ್ತೇನು ನಡೀತೈತೆ ಆ ಫಾರಮ್ಮಿನಾಗೆ..?" ಹನುಮಜ್ಜ ಗೊಗ್ಗರು ದನಿಯಲ್ಲಿ ತನಗೆ ತಾನೇ ಎಂಬಂತೆ ಹೇಳಿಕೊಂಡ. "ಏನು ನಡದ್ರೆ ನಮಗೇನು..? ನಾವು ಹೊಲಗೈಯಾದು ತಪ್ಪತೈತ..?" ಹನುಮಜ್ಜನಿಗಿಂತ ಹತ್ತು ವರ್ಷ ಕಿರಿಯ ಭರಮಜ್ಜ … Read more

ಹೊಸ ಸ್ನೇಹ: ಅನಂತ ರಮೇಶ್

ಬೆಳಿಗ್ಗೆ ಬೆಡ್ ಕಾಫ಼ಿ ಕುಡಿಯುವ ಅಭ್ಯಾಸ ಅಪ್ಪನ ರಗಳೆಯ ಮಾತುಗಳಿಂದ ನೆನ್ನೆಯಿಂದಲೆ ವಿನೀತ ನಿಲ್ಲಿಸಿದ್ದಾನೆ. ಹಲ್ಲುಜ್ಜಿ,  ಕೈಕಾಲು ಮುಖ ತೊಳೆದು ದೇವರ ಮನೆ ಎದುರು ನಿಂತು ಕೈ ಮುಗಿದ ನಂತರವೆ ಅಮ್ಮ ಅವನಿಗೆ ಹಾಲು ತರುತ್ತಾಳೆ.  ಕೈಗೆ ಸಿಕ್ಕಿದ ಪುಸ್ತಕ ನೋಡುತ್ತ ಕುಳಿತ ಸ್ವಲ್ಪ ಹೊತ್ತಿಗೆ, " ವಿನೂ, ಬೇಲಾನನ್ನು ಹೊರಗೆ ಕರೆದುಕೊಂಡು ಹೋಗು" ಅನ್ನುತ್ತಾಳೆ ಅಮ್ಮ. ಬೇಲಾನ ಕೊರಳಿಗೆ ಸರಪಳಿ ಹಾಕಿ ಹವಾಯಿ ಮೆಟ್ಟಿ ವಿನೀತ ಬೆಳಗಿನ ಬಿಸಿಲಿಗೆ ಮೈಯೊಡ್ಡಿ ನಡೆಯುತ್ತಾ ಇವತ್ತು ಕ್ಲಾಸಲ್ಲಿ ಯಾವ … Read more

ಮರಳಿ ಬಂದನೆ ದೀಪು: ನಾಗರತ್ನಾ ಗೋವಿಂದನ್ನವರ.

ಮುಸ್ಸಂಜೆಯ ಸಮಯ ಕಡಲಿನ ಅಲೆಗಳು ಜೋರಾಗಿ ದಂಡೆಗೆ ಅಪ್ಪಳಿಸುತ್ತಾ ಇದ್ದರೂ ಅವುಗಳ ಕಡೆ ಗಮನ ಕೊಡದೆ ತನ್ನ ಇರುವನ್ನೆ ಮರೆತು ಮರಳಿನಲ್ಲಿ ಏನೆನೊ ಚಿತ್ತಾರಗಳನ್ನು ಬರೆಯುವುದರಲ್ಲಿ ಮಗ್ನಳಾಗಿದ್ದಳು ಸರೋಜಾ. ಅದೆಷ್ಟು ಹೊತ್ತು ಹಾಗೆ ಬರೆಯುತ್ತಿದ್ದಳೊ ತಕ್ಷಣ ಏನೊ ನೆನಪಾದವಳಂತೆ ಮೆಲಕ್ಕೆದ್ದು ವೇಗವಾಗಿ ನಡೆಯುತ್ತಾ ಲಾಡ್ಜ್‍ನ್ನು ತಲುಪಿದಳು. ಎದುರಿಗೆ ಬರುತ್ತಿದ್ದ ಸರೋಜಾಳನ್ನು ನೋಡಿದ ಕಿರಣಗೆ ವಿಪರೀತ ಕೋಪಬಂದು ಎಲ್ಲಿ ಹೋಗಿದ್ದೆ ನಿನಗಾಗಿ ಅದೆಷ್ಟೊತ್ತು ಅಂತ ಕಾಯೋದು. ಎಲ್ಲಿಯೂ ಹೋಗಿಲ್ಲಾ ನಡಿರಿ ಎನ್ನುತ್ತಾ ಅವನೊಡನೆ ಹೆಜ್ಜೆ ಹಾಕಿ ರೂಮಿನೊಳಗೆ ಹೋದಳು. … Read more

ಆಹಾ..ಬೆಂಗಳೂರು!!: ಎಸ್.ಜಿ.ಶಿವಶಂಕರ್,

ಪದೇಪದೇ ನಿಟ್ಟುಸಿರುಬಿಡುತ್ತಿದ್ದ್ದ್ದೆ! ಏನೋ ಒಂದು ರೀತಿಯ ಅಧೀರತೆ! ದುಗುಡ! ಯಾವ ಕೆಲಸವನ್ನೂ ಮಾಡಲಾರದೆ ಟಿವಿಯತ್ತ ನೋಡುತ್ತಿದ್ದೆ. ಜನಪ್ರಿಯ ಸೀರಿಯಲ್ಲಿನ ನಾಲ್ಕುನೂರ ಇಪ್ಪತ್ತನೆಯ ಎಪಿಸೋಡು ಬಿತ್ತರವಗುತ್ತಿತ್ತು! ನಿರ್ಮಾಪಕರು ಮತ್ತು ನಿರ್ದೇಶಕರಿಗೆ ಮೂಲ ಕತೆ ಹಳ್ಳ ಹಿಡಿದಿದೆ ಎನ್ನುವುದು ಗೊತ್ತಿದ್ದರೂ ರಬ್ಬರಿನಂತೆ ಎಳೆಯುತ್ತಿದ್ದರು! ನನ್ನವಳು ಹುರಿಳಿಕಾಯಯನ್ನು ಚಟಚಟನೆ ಮುರಿಯುತ್ತಾ, ತುಟುಪಿಟಿಕ್ಕನ್ನದೆ ಸೀರಿಯಲ್ಲಿನಲ್ಲಿ ಕಣ್ಣು ನೆಟ್ಟಿದ್ದಳು. ನಾಲ್ಕು ನಿಮಿಷ ಸೀರಿಯಲ್ಲಿನ ನಂತರ ಐದು ನಿಮಿಷದ ಜಾಹೀರಾತು! ಮತ್ತೆ ನಾಲ್ಕು ನಿಮಿಷ ಸೀರಿಯಲ್ಲು ಹೀಗೆ ಸಾಗಿತ್ತು ಸೀ..ರಿ..ಯಲ್ಲು! ದೀರ್ಘ ಜಾಹೀರಾತಿನ ನಡುವೆ ಮನೆಯವಳು … Read more

ಕೊಲೆ: ಪ್ರಸಾದ್ ಕೆ.

ಅವನು ಮಾತಿಲ್ಲದೆ ಒಳಬಂದ. ನನ್ನಷ್ಟಕ್ಕೆ ನಾನು ರೇಜರ್ ಬ್ಲೇಡನ್ನು ಹಿಂದಕ್ಕೂ ಮುಂದಕ್ಕೂ ಉಜ್ಜುತ್ತಾ ಹರಿತಗೊಳಿಸುತ್ತಿದ್ದೆ. ಅವನ ಗುರುತು ಹಿಡಿದಾಕ್ಷಣ ನಾನು ನನಗರಿವಿಲ್ಲದಂತೆಯೇ ಸಣ್ಣಗೆ ನಡುಗಿದೆ. ನನ್ನ ಪುಣ್ಯಕ್ಕೆ ಅದನ್ನವನು ಗಮನಿಸಲಿಲ್ಲ. ನಾನು ನನ್ನ ಭಯವನ್ನು ತೋರಗೊಡದೆ ಬ್ಲೇಡನ್ನು ಹರಿತಗೊಳಿಸುವುದನ್ನು ಮುಂದುವರಿಸಿದೆ. ರೇಜರ್ ಬ್ಲೇಡನ್ನು ಹೆಬ್ಬೆರಳಿಗೆ ಕೊಂಚ ಒತ್ತಿ ಹಿಡಿದು, ಬೆಳಕಿಗೂ ಹಿಡಿದು ಪರೀಕ್ಷಿಸುತ್ತಾ ಸಾಕಷ್ಟು ಹರಿತವಾಗಿದೆ ಎಂಬುದನ್ನು ಖಾತ್ರಿಪಡಿಸಿಕೊಂಡೆ. ಅತ್ತ ಅವನೂ ಮಾತನಾಡುವ ಗೋಜಿಗೆ ಹೋಗದೆ ತನ್ನ ಸೊಂಟಕ್ಕೆ ಬಿಗಿದುಕೊಂಡಿದ್ದ, ಬಂದೂಕಿನ ಬುಲೆಟ್ಟುಗಳನ್ನು ಉದ್ದಕ್ಕೂ ಜೋಡಿಸಿದ್ದ ಬೆಲ್ಟ್ … Read more

ಬದುಕಿನ ಸುಳಿಯಲ್ಲಿ: ಪ್ರಕಾಶ ತದಡಿಕರ

  “ಹುಚ್ಚಿ… ಹುಚ್ಚಿ”  ಎಂದು ಹಿಯಾಳಿಸುತ್ತ  ಕೇಕೆ ಹಾಕುವ ಮಕ್ಕಳ ಗುಂಪು ನನ್ನನ್ನು ಅಟ್ಟಿಸಿ ಕುಷಿಪಡುತ್ತಿತ್ತು. ರಸ್ತೆ ಬದಿಯಲ್ಲಿ ಅಸ್ತವ್ಯಸ್ತವಾಗಿ ನಿಂತ ನಾನು ಮಕ್ಕಳೆಸೆಯುವ ಕಲ್ಲಿನ ಪೆಟ್ಟು ಸಹಿಸದೇ ಬಿಕ್ಕಿ ಬಿಕ್ಕಿ ಅಳುತ್ತಿದ್ದೆ. ಯುವಕರು, ಹಿರಿಯರೂ ಎನ್ನದೇ  ಎಲ್ಲರೂ ನನ್ನ ಅವಸ್ಥೆ ಕಂಡು ನಗುತ್ತಿದ್ದರು. ಹಸಿವಾದಾಗ ಊರಿನ ಖಾನವಳಿಯ ಮುಂದೆ ನಿಲ್ಲುವ ನನ್ನ ಗೋಳು ಪ್ರತಿ ನಿತ್ಯ ಪೇಟೆಯ ರಸ್ತೆಯಲ್ಲಿ ಕಾಣಬಹುದಾದ ದೃಶ್ಯ. ಕೆದರಿದ ತಲೆಗೂದಲು, ಕೊಳಕು ದೇಹ , ಆ ದೇಹವನ್ನು ಮುಚ್ಚಲು ಹೆಣಗುವ  ಹಳೆಯ … Read more

ಕರಿಯ ಮತ್ತು ಕೆಂದಿಯ ಕಥೆ: ನವೀನ್ ಮಧುಗಿರಿ

ಮಲ್ಲಿಗೆಪುರದ ಗಾಳೇರ ಓಣಿಯಲ್ಲಿ ಹನುಮಂತಪ್ಪನ ಮನೆ. ಹನುಮಂತಪ್ಪ ಒಂದು ಕಪ್ಪು ಬಣ್ಣದ ನಾಯಿ ಸಾಕಿದ್ದ. ತುಂಬಾ ದಷ್ಟಪುಷ್ಟ ಹಾಗೂ ನಂಬಿಕಸ್ಥ ನಾಯಿ ಅದು. ಹನುಮಂತಪ್ಪ ಅದನ್ನ ಕರಿಯ ಅಂತ ಕರೆಯುತ್ತಿದ್ದ. ಅಪ್ಪಿತಪ್ಪಿ ಅವನೆದುರು ಯಾರಾದರೂ ಅದನ್ನ ನಾಯಿ ಅಂದರೆ, "ಅದುಕ್ಕೆ ಹೆಸರಿಲ್ವಾ? ನಾಯಿ ಅಂತ್ಯಾಕಂತೀರ? ಕರಿಯ ಅಂತ ಕರೀರಿ" ಎಂದು ದಬಾಯಿಸುತ್ತಿದ್ದ. ಆ ಕರಿಯನ ದೆಸೆಯಿಂದಾಗಿ ಹನುಮಂತಪ್ಪನ ಮನೆಯಂಗಳದ ಮೇಲೆ  ಹೆಜ್ಜೆಯಿಡಲು ಜನ ಹೆದರುತ್ತಿದ್ದರು. ಕರಿಯ ಮನೆಯ ಹಜಾರದಲ್ಲಿ ಮಲಗುತ್ತಿದ್ದ. ಹಾಕಿದ ಊಟ ತಿನ್ನುತ್ತಿದ್ದ. ಯಾರಾದರೂ ಮನೆಯ … Read more

ಅವನಿಕ – ಐ ಮಿಸ್ ಯೂ: ಅಮರ್ ದೀಪ್ ಪಿ.ಎಸ್.

ಡಿಯರ್ ಅವನಿಕ, ನಿನಗಲ್ಲದೇ ನಾನ್ಯಾರಿಗೆ ಹೇಳಿಕೊಳ್ಳಲಿ,  ಈಗತಾನೇ ಎರೆಡೆರಡು ಅಪಘಾತವಾಗುವ ಕಂಟಕದಿಂದ ತಪ್ಪಿಸಿಕೊಂಡು ಬಂದು ಹೂಳು ತುಂಬಿದ ತುಂಗಭಧ್ರ ನದಿ ತಟದಲ್ಲಿ ಒಬ್ಬನೇ ಕೂತು ನಡುಗುತ್ತಿದ್ದೇನೆ. ಅದೇನಾಗಿತ್ತು ನಂಗೆ? ಬೈಕ್ ಓಡಿಸುವಾಗ ನಾನೆಂಥ “ಚಿತ್ತ”ದಲ್ಲಿದ್ದರೂ ಹದ ತಪ್ಪುತ್ತಿರಲಿಲ್ಲ.  ಯಾವ ಯೋಚನೆಯಲ್ಲಿ ಬೈಕ್ ಓಡಿಸುತ್ತಿದ್ದೆನೋ? ಎರಡು ಕ್ಷಣ ಮೈಮರೆತಿದ್ದರೆ ಟಿಪ್ಪರ್ ಗಾಡಿಯ ಗಾಲಿಗೆ  ಅಂಟಿಕೊಳ್ಳುತ್ತಿದ್ದೆ. ಯಾರಿಗಾದ್ರೂ ಫೋನ್ ಮಾಡಿ ಹೇಳಿಕೊಳ್ಲಾ ಅಂದರೆ ಮತ್ತೆ ನನಗೇ ಬೈಗುಳ.  ನಿನಗೊಬ್ಬಳಿಗೆ ಸುಮ್ಮನೇ ಮೆಸೇಜ್ ಕುಟ್ಟಿ ಮೊಬೈಲ್ ಜೇಬಲ್ಲಿಟ್ಟುಕೊಂಡೆ.  ಹೆದ್ದಾರಿಯಲ್ಲಿ ಈಗತಾನೇ ಕಣ್ಣುಬಿಟ್ಟುಕೊಂಡು … Read more

ಕನಸಲ್ಲಿ ಕಂಡವಳು!: ಎಸ್.ಜಿ.ಶಿವಶಂಕರ್

                   `ನೋ…ಇದು ಸಾಧ್ಯವಿಲ್ಲ!' ಕಪಿಲನ ದನಿ ನಡುಗುತ್ತಿತ್ತು!  ಮಿದುಳಿಗೆ ಒಮ್ಮೆಲೇ ರಕ್ತ ಪ್ರವಾಹದಂತೆ ನುಗ್ಗಿ ಕಿವಿಗಳು ಗುಂಯ್ ಎಂದವು! ಎದುರು ಕುಳಿತಿದ್ದ ಆ ಅಪ್ರತಿಮ ಸುಂದರಿಯನ್ನು ಕಂಡು ಕಪಿಲ ಬೆದರಿ, ಬೆವರಿಬಿಟ್ಟಿದ್ದ! ಮೇರೆ ಮೀರಿದ ಅಚ್ಚರಿ, ಅನುಮಾನ, ಸಂತೋಷ  ಎಲ್ಲವೂ ಏಕ ಕಾಲದಲ್ಲಿ ಆಗಿದ್ದವು! ಜೊತೆಗೆ ಆಕೆ ತನ್ನ ಸಂಗಾತಿಯಾಗಲಿರುವಳು ಎಂಬ ಅನಿವರ್ಚನೀಯ ಆನಂದ ಬೇರೆ! `ಎಸ್.. ಇಟ್ ಇಸ್ ರಿಯಲ್! ಯಾವುದೂ ಅಸಾಧ್ಯವಲ್ಲ!' ಅಂಕುರನದು … Read more

ತಾಯಿಯ ಮನಸ್ಸು: ಹೆಚ್ ಎಸ್ ಅರುಣ್ ಕುಮಾರ್

ಕಾರು "ಚೈತನ್ಯ ಧಾಮ" ದ ಮುಂದೆ ನಿಂತಿತು. ಅವಳು ಕಾರಿನಿಂದ ಆತುರವಾಗಿ ಇಳಿದಳು. "ಇಂದಿರಾ ನಿಧಾನ" ತಂದೆಯ ಮಾತು ಮುಗಿಯುವ ಮುನ್ನವೇ ಅನಾಥಾಶ್ರಮದಲ್ಲಿ ನುಗ್ಗಿದಳು. ನಾಲ್ಕು ವರ್ಷಗಳಲ್ಲಿ ಅವಳು ತಿರುಗಿದ ಅನಾಥಾಶ್ರಮಗಳು ಏಷ್ಟೊ. ಅಂದು ಒಂದು ಸ್ವಷ್ಟ ಸುಳಿವಿನ ಆಧಾರದ ಮೇಲೆ ತುಂಬು ನಂಬಿಕೆ ಯಿಂದ ಶಿವಮೊಗ್ಗದಿಂದ ಬೆಂಗಳೊರಿಗೆ ಬಂದಿದ್ದಳು. ಶಾರದಮ್ಮ ಅವಳನ್ನು ಕುಳಿತುಕೊಳ್ಳಲು ಹೇಳಿ ಮಕ್ಕಳನ್ನು ಕರೆದು ತರಲು ಆಯಗೆ ಹೇಳಿದಳು. ಅವಳ ಕಣ್ಣು ಬಾಗಿಲ ಕಡೆಗೆ ಇತ್ತು. ಮನಸ್ಸು "ಅಕ್ಷಯ" "ಅಕ್ಷಯ" ಎಂದು ಚೀರುತ್ತಿತ್ತು. ಇಂದಿರಾ … Read more

ಸತ್ತವನ ಶಿಕಾಯತ್ತುಗಳು : ಪ್ರಸಾದ್ ಕೆ.

  1977 ರ ದಿನಗಳು ಇಪ್ಪತ್ತೆರಡರ ಯುವಕನೊಬ್ಬನಿಗೆ ಬ್ಯಾಂಕಿನಿಂದ ಲೋನ್ ಬೇಕಾಗಿತ್ತು. ಲೋನ್ ಅಂದಾಗ ಕಾಗದ ಪತ್ರಗಳ ಅವಶ್ಯಕತೆ, ಓಡಾಟ ಎಲ್ಲವೂ ಸಹಜವೇ ಅನ್ನಿ. ಆಗಿನ ಕಾಲದಲ್ಲಿ ಈಗಿನಂತೆ ಕರೆದು ಸಾಲ ಕೊಡುತ್ತಿರಲಿಲ್ಲವೋ ಏನೋ! ಇರಲಿ, ವಿಷಯಕ್ಕೆ ಬರೋಣ. ಸೋ ಈ ನಮ್ಮ ಬಡಪಾಯಿ ಯುವಕ ಆ ಸರ್ಟಿಫಿಕೇಟು, ಈ ಸರ್ಟಿಫಿಕೇಟು ಅಂತ ಕಾಗದ ಪತ್ರಗಳನ್ನು ಲಗುಬಗೆಯಿಂದ ಹೊಂದಿಸುತ್ತಲೇ ಇದ್ದ. ಬಹುತೇಕ ಎಲ್ಲಾ ಮುಗಿದ ನಂತರ ತನ್ನ ಗುರುತು ಪ್ರಮಾಣಪತ್ರದ ಸಲುವಾಗಿ ಆತ ರೆವೆನ್ಯೂ ಆಫೀಸಿನ ಬಾಗಿಲು … Read more