ಹರಕೆ ತೀರಿತ್ತು…! (ಮೊದಲ ಭಾಗ) : ಸಾವಿತ್ರಿ ವಿ. ಹಟ್ಟಿ

ದೀಪಿಕಾ ಮೇಲೆದ್ದು ಕುಳಿತಳು. ಎಷ್ಟೊ ಹೊತ್ತು ನಿದ್ರೆ ಬಾರದೆ ಸೆಖೆ ಸೆಖೆ ಎಂದು ಒದ್ದಾಡುತ್ತಲೆ ಇದ್ದ ಪತಿ ನಾಗರಾಜ ಅದೇ ದನೇ ನಿದ್ರೆ ಹೋಗಿದ್ದ. ಗಡಿಯಾರದ ಕಡೆ ನೋಡಿದಳು. ಆಗಲೆ ಮಧ್ಯರಾತ್ರಿ. ಪಕ್ಕದಲ್ಲಿ ಮಕ್ಕಳು ಲೋಕದ ಯಾವ ಚಿಂತೆಯ ಸೋಂಕೂ ಇಲ್ಲದೆ ಶಾಂತವಾಗಿ ನಿದ್ರಿಸುತ್ತಿದ್ದಾರೆ. ಅವಳಿಗೆ ಮಾತ್ರ ನಿದ್ರೆ ಸನಿಹವೂ ಸುಳಿಯುತ್ತಿಲ್ಲ. ಅವಳ ಒಡಲು ಬೆಂಕಿಗೆ ಆಹುತಿಯಾಗಿ ದಗದಗಿಸುತ್ತಿದೆ. ಕಟು ಸತ್ಯ ಸಂಗತಿಯನ್ನು ತಿಳಿದುಕೊಂಡಾಗಲೆ ಎದೆ ಬಿರಿದು ಎರೆಭೂಮಿ ಬಾಯಿ ಬಿಟ್ಟಂತಾಗಿದೆ. ಕಣ್ಣುಗಳಲ್ಲಿ ಆ ಮದ್ಯಾಹ್ನದವರೆಗೂ ನಳನಳಿಸುತ್ತಿದ್ದ … Read more

ನಡುವೆ ಸುಳಿವಾತ್ಮ…: ಮಹಾದೇವ ಹಡಪದ

 ಬನದ-ಭಾರತ ಹುಣಿವಿಗೆ ಯಲ್ಲಮ್ಮ ತಾಯಿ ಜಾತ್ರೆ ಜೋರು ನಡಿತದ. ಉಡಿ ತುಂಬಸೋದು, ಮುತ್ತು ಕಟಗೊಂಡವರು ಸೇವಾ ಮಾಡೋದು, ಬೇವಿನ ತಪ್ಪಲದಾಗ ಕುಂತ ತಾಯಿಯನ್ನ ಎರೆಯೋದು, ದೀಡ ನಮಸ್ಕಾರ ಹಾಕೋದು, ಪಡ್ಡಲಗಿ ಹಿಡದು ನೇಮದ ಸಲುವಾಗಿ ನಾಕೈದು ಮನಿ ಜೋಗ ಬೇಡೋದು ಹಿಂಗ ಒಕ್ಕಲ ಮಕ್ಕಳ ಮನಿಯೊಳಗ ಸಡಗರ ಹೊಗೆಯಾಡತಿರತದ. ಜಡೆಬಿಟ್ಟ ಜೋಗಮ್ಮ ಜೋಗಪ್ಪಗಳು ತಿಂಗಳ ಕಾಲ ಬಿಡುವಿಲ್ಲದ ಮುಯ್ಯಿ ಮಾಡತಿರತಾರು. ಬಳಿ ಒಡೆದು ರಂಡೆ ಮಾಡೋದರಿಂದ ಶುರುವಾಗುವ ವಿಧಿವಿಧಾನಗಳು ಸೀರಿ ಉಡಿಸಿ, ಮುತ್ತು ಕಟ್ಟಿ, ಕುಂಕಮ ಇಡೋವರೆಗೂ … Read more

ಆರಭಿ: ಅಭಿಲಾಷ್ ಟಿ.ಬಿ.

         ಉರಿ ಬಿಸಿಲು, ಬೇಸಿಗೆ ರಜ, ಮೇ ತಿಂಗಳ ಮೊದಲ ವಾರದಲ್ಲೇ ಸೂರ್ಯ ತನ್ನ ದರ್ಪವನ್ನು ತೋರುಸುತ್ತಿದ್ದಾನೆ. ಬೆಳ್ಳಿಗ್ಗೆ ಒ೦ಭತ್ತುಮುಕ್ಕಾಲು ಘ೦ಟೆ, ಲಕ್ಷ್ಮೀ ಆ೦ಟಿ ಆಫೀಸ್ಗೆ ಹೊರಡುವ ಸಮಯ. ಬಿಸಿಲು ಹೆಚ್ಚು ತಾಕದಿರಲಿ ಎ೦ದು ನೀಲಿ ಬಣ್ಣದ ಛತ್ರಿಯನ್ನು ಹಿಡಿದು ಗೇಟ್ ಬಾಗಿಲಿಗೆ ಬೀಗ ಹಾಕುತ್ತಿದ್ದರು. ಮಹಡಿ ಮೇಲಿನ ಗ್ರಿಲ್ ಸ೦ಧಿಯಿ೦ದ ಇಣುಕಿ, "ಅಮ್ಮ, ಬರ್ತಾ ಸಾಯ೦ಕಾಲ ಬಾಲ್ ಐಸ್ ಕ್ರೀಮ್ ತರುತ್ತೀಯಾ" ಎ೦ದು ಒಂದು ಮಗು ಮುದ್ದಾಗಿ ಕೇಳಿತು. ಮುಖದಲ್ಲಿ ಆತುರದ ಭಾವನೆ … Read more

ಥ್ರೀರೋಜಸ್ ಕಥೆ (ಕೊನೆಯ ಭಾಗ): ಸಾವಿತ್ರಿ ವಿ. ಹಟ್ಟಿ

ಇಲ್ಲಿಯವರೆಗೆ ಇದಾದ ನಂತರ ಮತ್ತೊಮ್ಮೆ ಅವರ ಕಾಲೇಜಿನ ಹತ್ತಿರ ಹೋಗಲು ನಾವು ಸಮಯ ಹೊಂಚುತ್ತಿದ್ದೆವು. ಬನ್ನಿಹಬ್ಬದ ದಿನ ಭೆಟ್ಟಿ ಮಾಡಬೇಕೆಂದುಕೊಂಡರೂ ಸರಿ ಅನ್ನಿಸಲಿಲ್ಲ. ಏಕೆಂದರೆ ಅಂದು ಬಾನುವಾರ. ಝಡ್ ಪಿಯ ಸಲಹೆಯ ಮೇರೆಗೆ ಶನಿವಾರ, ಅವರ ವಿರಾಮದ ಅವಧಿಯಲ್ಲಿ ಅವರನ್ನು ಭೆಟ್ಟಿ ಮಾಡಿದ್ದೆವು. ಪರಸ್ಪರರು ಬನ್ನಿ ಹಂಚಿಕೊಂಡು ಖುಷಿಯಾಗಿ ಹರಟಿದೆವು. ಪಿ.ಯು ದಿನಗಳನ್ನು ಸ್ಮರಿಸಿಕೊಂಡು ನಕ್ಕೆವು. ಮಾತಿನ ಮಧ್ಯೆ ಮದುವೆ ವಿಷಯಕ್ಕೆ ಬಂದಾಗ ವಂದನಾ ಓದು, ನೌಕರಿ ಆದ ನಂತರವೇ ಮದುವೆ ಆಗುವುದಾಗಿಯೂ, ತನ್ನ ತಂದೆ ತಾಯಿಗೂ … Read more

ಕನ್ನಡಿಗಳು: ಪ್ರಸಾದ್ ಕೆ.

ಕಳೆದ ಒಂದೆರಡು ತಿಂಗಳಿನಿಂದ ಇದು ತುಂಬಾ ಕಷ್ಟವಾಗಿಬಿಟ್ಟಿದ್ದರೂ ಅಭ್ಯಾಸವಾಗಿ ಹೋಗಿದೆ.  ನನ್ನ ಸಮಸ್ಯೆಯೇನೆಂದರೆ ನಾನು ನೋಡುತ್ತಿರುವ ದೃಶ್ಯಗಳೆಲ್ಲಾ ತಿರುಗುಮುರುಗಾಗಿ ಕಾಣಿಸುತ್ತಿವೆ. ಮಿರರ್ ಇಮೇಜ್ ಅಂತೀವಲ್ಲಾ, ಆ ಥರಾನೇ. ಪುಸ್ತಕದಲ್ಲಿರುವ ಅಕ್ಷರಗಳು, ಬೀದಿಯ ಸೈನ್ ಬೋರ್ಡುಗಳು, ಕಟ್ಟಡಗಳಿಗೆ ಜೋತುಬಿದ್ದಿರುವ ಫಲಕಗಳು ಹೀಗೆ ಎಲ್ಲವೂ, ಎಲ್ಲೆಲ್ಲೂ ಕನ್ನಡಿಯಿಂದ ನೋಡಿದಂತೆ ಕಾಣುತ್ತಿವೆ. ಮಗುವೊಂದು ಮೊಟ್ಟಮೊದಲ ಬಾರಿಗೆ ನಡೆದಾಡಲು ಆರಂಭಿಸಿದಾಗ ಜಗತ್ತನ್ನು ಹೇಗೆ ಅಚ್ಚರಿಯಿಂದ ಕಣ್ಣರಳಿಸಿ ನೋಡುತ್ತದೆಯೋ ಹಾಗೇ ನನಗೂ ಅನುಭವವಾಗುತ್ತಿದೆ. ಎಲ್ಲವೂ ನಿಗೂಢ, ಎಲ್ಲವೂ ವಿಚಿತ್ರ. ಮೊದಲೊಮ್ಮೆ ಭಯಭೀತನಾಗಿದ್ದರೂ ಈಗ ಸಾಮಾನ್ಯವಾಗಿ … Read more

ಪರಶುವಿನ ದೇವರು (ಕೊನೆ ಭಾಗ): ಶಾಂತಿ ಕೆ. ಅಪ್ಪಣ್ಣ

ಇಲ್ಲಿಯವರೆಗೆ… "ಅವ್ವ, ಚಡ್ಡಿ ಹಾಕ್ಕೊಡು" ಮಗು ಕೈ ಜಗ್ಗಿದಾಗ ಅದರ ಬೆನ್ನಿಗೆ ಗುದ್ದಿದಳು ಸುಜಾತ. "ಏ ಮುಂಡೇದೇ,  ಎಷ್ಟು ಸಲ ಹೇಳಿಲ್ಲ, ಮಮ್ಮಿ ಅನ್ಬೇಕು ಅಂತ, ಇನ್ನೊಂದ್ಸಲ ಅವ್ವ ಪವ್ವ ಅಂದ್ರೇ ಹೂತಾಕ್ಬುಟ್ಟೇನು" ಮಾತೇನೋ ಆಡಿ ಮುಗಿಸಿದಳು. . ಆದರೆ ಅವಳಿಗೆ ತನ್ನದೇ ವರಸೆಯ ಬಗೆ ನಾಚಿಕೆಯೆನಿಸಿತು. ಅಪರೂಪಕ್ಕೂ ಅವಳಲ್ಲಿ ಇಂಥ ಬಯ್ಗುಳಗಳು ಹೊರಬಿದ್ದದ್ದಿಲ್ಲ ಆದರೆ ಇಲ್ಲಿಗೆ ಬಂದ ಮೇಲೆ ತನಗೆ ಇವೆಲ್ಲ ಸಲೀಸಾಗಿ ಬರುತ್ತಿದೆ. ಏಟು ತಂದು ಮಗು ಅಳುವುದಕ್ಕೂ ಕೆಳಗಿನಿಂದ ಪಾಪಯ್ಯನ ಹೆಂಡತಿ ಅವಳನ್ನು … Read more

ಥ್ರೀರೋಜಸ್ ಕಥೆ (ಭಾಗ 2): ಸಾವಿತ್ರಿ ವಿ. ಹಟ್ಟಿ

  ಇಲ್ಲಿಯವರೆಗೆ… ಮೊದಲನೇ ಕಿರು ಪರೀಕ್ಷೆಗಳು ಮುಗಿದಿದ್ದವು. ಅವತ್ತು ಶನಿವಾರ. ಕೊನೆಯಲ್ಲಿ ಆಟದ ಅವಧಿ ಇತ್ತು. ಏಕೋ ಆಟದಲ್ಲಿ ತೊಡಗಿಕೊಳ್ಳಲು ಮನಸ್ಸು ಬರಲಿಲ್ಲ. ನನ್ನ ವಾಸದ ಕೋಣೆಗೆ ಹೋಗಿ ಅಕ್ಕಿ ತೊಳೆದು, ಒಲೆ ಹೊತ್ತಿಸಿಟ್ಟೆ. ಅನ್ನ ಬೇಯುವಷ್ಟರಲ್ಲಿ ರವೀಂದ್ರ ಕಲ್ಲಯ್ಯಜ್ಜನವರ ಖಾನಾವಳಿಯಿಂದ ಕೆಟ್ಟ ಖಾರದ ರುಚಿಯಾದ ಸಾರು ತಂದಿರಿಸಿದ್ದ. ಊಟದ ನಂತರ, ಸಾಕಷ್ಟು ಸಮಯವಿದ್ದುದರಿಂದ ಒಂದೆರಡು ತಾಸು ಚೆಂದಗೆ ನಿದ್ದೆ ಮಾಡಿಬಿಟ್ಟೆ. ಎಚ್ಚರವಾದಾಗ ಕೋಣೆಯಲ್ಲಿ ರವೀ ಇರಲಿಲ್ಲ. ಅವನು ಸಮಯ ಸಿಕ್ಕಾಗೆಲ್ಲ ಗೆಳೆಯರನ್ನು ಹುಡುಕಿಕೊಂಡು ಹೋಗುವವನು. ಎಲ್ಲಿದ್ದಾನೆಂದು … Read more

ಪರಶುವಿನ ದೇವರು: ಶಾಂತಿ ಕೆ. ಅಪ್ಪಣ್ಣ

ಪರಶುವಿಗೆ ದೇವರು ಬಂದಾಗ ಡೊಳ್ಳನ ಕೇರಿಯ ಜನ ಅದಿನ್ನೂ ತಂತಮ್ಮ ಕೆಲಸಗಳಿಂದ ಮರಳಿ ದಣಿವಾರಿಸಿಕೊಳ್ಳುತ್ತ,  ಅಲ್ಲಲ್ಲೆ ಜಗುಲಿ ಕಟ್ಟೆಯ ಮೇಲೆ ಕುಳಿತು ಗಂಡಸರು ಬೀಡಿಯ ಝುರುಕಿ ಎಳೆದು ಕೊಳ್ಳುತ್ತಿದ್ದರೆ, ಹೆಂಗಸರು ಒಂದು ಬಾಯಿ ಕಾಫಿ ಕುಡಿಯುವ ಆತುರಕ್ಕೆ ಒಳಗೆ ಒಲೆ ಹಚ್ಚುವ ಕೆಲಸದಲ್ಲಿ ತೊಡಗಿದ್ದರು. ಮೊದಲಿನಂತೆ ಚೂರುಪಾರು ಸೌದೆ ತಂದು ಪ್ರಯಾಸದಿಂದ ಒಲೆ ಹಚ್ಚುವ ಕೆಲಸವೇನೂ ಈಗಿರಲಿಲ್ಲ, ಊರು ನಾಡು ಕಾಣುತ್ತಿದ್ದ ಬದಲಾವಣೆಯ ಗಾಳಿ ಯಾವುದೇ ತಕರಾರು ಮಾಡದೆ ಕೇರಿಯೊಳಗೂ ನುಸುಳಿ ಅಲ್ಲೂ ಅಲ್ಪಸ್ವಲ್ಪ ಬದಲಿಕೆ ತರತೊಡಗಿತ್ತು. … Read more

ಥ್ರೀರೋಜಸ್ ಕಥೆ: ಸಾವಿತ್ರಿ ವಿ. ಹಟ್ಟಿ

ನನ್ನವಳಿಗೆ ನಾನೇನೂ ಕಡಿಮೆ ಮಾಡಿಲ್ಲ. ಅವಳು ನಮ್ಮ ತುಂಬು ಮನೆತನಕ್ಕೆ ಏಕೈಕ ಸೊಸೆ. ಸದ್ಯಕ್ಕೆ ನನಗೆ ಅವಳೇ ಮಗಳೂ, ಮಗನೂ ಇದ್ದ ಹಾಗೆ ಕೂಡ. ತಂದೆ ಉಮಾಶಂಕರ ತಾಯಿ ಗೌರಮ್ಮನವರಿಗೆ ಏಕೈಕ ಸುಪುತ್ರನಾಗಿರುವ ನಾನು ಈ ಗೊಂಬೆಯನ್ನು ಕೈ ಮಾಡಿ ತೋರಿಸಿ, ನನಗೆ ಬೇಕು ಎಂದಾಗ ಅಪ್ಪ ಮೌನವಾಗಿ ನನ್ನನ್ನೇ ನೋಡಿದ್ದರು ವಿಸ್ಮಯದಿಂದ. ಅವ್ವ ಹನಿಗಣ್ಣಳಾಗಿದ್ದರೂ ನಂತರ ನನ್ನ ಆಸೆಗೆ ಬೇಡ ಎನ್ನಲಿಲ್ಲ. ನಾನು ಚಿಕ್ಕವನಿದ್ದಾಗ ಏನೆಲ್ಲ ಕೇಳಿದರೂ ಇಲ್ಲವೆನ್ನದೇ ಕೊಡಿಸುತ್ತಿದ್ದರು ತಂದೆ-ತಾಯಿ. ನನ್ನ ಜೀವನದ ಎರಡನೇ … Read more

ನ್ಯಾನೋ ಕತೆಗಳು: ನವೀನ್ ಮಧುಗಿರಿ

ಪ್ರೇಮಿಗಳು ಇಬ್ಬರೂ ಮೌನವಾಗಿ ಕುಳಿತಿದ್ದರು. ಮುಂದೇನು ಮಾಡುವುದೆಂದು ಇಬ್ಬರಿಗೂ ತೋಚುತ್ತಿಲ್ಲ. ಜಾತಿಯ ನೆಪವೊಡ್ಡಿ ಎರಡೂ ಮನೆಯವರು ಪ್ರೇಮಿಗಳನ್ನು ದೂರ ಮಾಡಲು ಯತ್ನಿಸುತ್ತಿದ್ದರು. "ಮುಂದೇನು ಮಾಡುವುದು?" ಹುಡುಗಿ ಪ್ರಶ್ನಿಸಿದಳು. "ಗೊತ್ತಿಲ್ಲ, ಏನೊಂದು ತೋಚುತ್ತಿಲ್ಲ" ಹುಡುಗ ಉತ್ತರಿಸಿದ. "ಎಲ್ಲಾದರೂ ದೂರ ಹೋಗಿ ಜೊತೆಯಾಗಿ ಬದುಕೋಣ" "ಬದುಕು ಎರಡೂವರೆ ಗಂಟೆಯ ಸಿನಿಮಾವಲ್ಲ" "ಹಾಗಾದರೆ ನಾವು ಪ್ರೀತಿಸಿದ್ದಾದರೂ ಯಾಕೆ?" ಹುಡುಗಿಯ ಕಣ್ಣಲ್ಲಿ ನೀರು ತುಂಬಿತ್ತು. ಅವಳ ಕಣ್ಣಲ್ಲಿನ ನೋವು ಗುರುತಿಸಿದ. ಎದೆಗೆ ಕೊಳ್ಳಿಯಿಂದ ತಿವಿದಂತಾಯ್ತು, ನೋವಿನಿಂದಲೇ ನುಡಿದ "ಜೊತೆಯಾಗಿ ಬದುಕೋಣವೆಂದು, ಆದರೆ.." "ಆದರೆ … Read more

ವೀಣಾ: ಶ್ರೀಮಂತ್ ಎಮ್. ಯನಗುಂಟಿ

’ಏ ಮಾಮು ಏಳೋ ಇನ್ನು ಎಷ್ಟೊತ್ತು ಮಲಗ್ತೀಯಾ’ ರಾತ್ರಿಯೆಲ್ಲಾ ಸೀಟು ಸಿಗದೆ ನಿಂತುಕೊಡಿದ್ದವನಿಗೆ ನಸುಕಿನ ಮೂರು ಗಂಟೆಯಲ್ಲೊಂದು ಸೀಟು ಸಿಕ್ಕಿತ್ತು. ನಿದ್ದೆಬರುವುದಿಲ್ಲ ಅಂತ ಗೊತ್ತಿತ್ತು. ಆದರೂ ಸುಮ್ಮನೆ ಬೋರಲಾಗಿ ಮಲಗಿದ್ದೆ. ಯಾರೋ ಚಪ್ಪಾಳೆ ಹಾಕುತ್ತಾ ಮೈದಡವಿದಂತಾಯ್ತು. ಎದ್ದು ಸಮಯ ನೋಡಿದೆ ಇನ್ನೂ ಗಂಟೆಯ ಮುಳ್ಳು ಐದನ್ನೆ ದಾಟಿರಲಿಲ್ಲ. ಸ್ವಲ್ಪ ಹಿಂತಿರುಗಿ ನೋಡಿದೆ. ಮಂಗಳಮುಖಿಯೊಬ್ಬಳು ಬಹಳ ಸಹಜವೆಂಬಂತೆ ಮಾಮೂಲಿ ಕೇಳಲು ಬಂದಿದ್ದಳು.  "ರೀ ನಿಮಗೆ ಹೊತ್ತು ಗೊತ್ತು ಏನೂ ಇಲ್ವಾ. ಇಗಲಾದ್ರೂ ಮಲಗಿದ್ದಿನಿ ನಿಮ್ಮದೊಳ್ಳೆ ಸಹವಾಸ" ಎಂದು ನಿದ್ದೆಯಲ್ಲಿ ಗೊಣಗುತ್ತಲೇ … Read more

ಮನಸ್ವಿನಿ: ಅಭಿಲಾಷ್ ಟಿ ಬಿ

ಕುರಿಗಾಹಿಯೊಬ್ಬನು ತನ್ನ ಎಲ್ಲಾ ಕುರಿಗಳನ್ನು ಒ೦ದೇ ಕಡೆ ಮೇಯಿಸಲು ಹೊರಟನೆ೦ದರೆ ಅದು ಬಯಲುಸೀಮೆಯೇ ಆಗಿರುತ್ತದೆ. ಬರ, ಕ್ಷಾಮ, ಅನಾವೃಷ್ಠಿ, ಅಭಾವ, ಇವರಿಗೆ ಸಾಮಾನ್ಯವಾಗಿ ಹೋಗಿದೆ. ಈ ಕಾರಣಕ್ಕಾಗಿ ಬಯಲುಸೀಮೆಯ ಕೆರೆಗಳಿಗೆ  ಸರ್ಕಾರ ಅಣೆಕಟ್ಟುಗಳಿ೦ದ ನಾಲೆಗಳ ಮುಖಾ೦ತರ ಜೀವಜಲವನ್ನು ಒದಗಿಸುತ್ತಿದೆ. ಕಲ್ಲೂರು, ಗ೦ಗರ, ಚ೦ದ್ರಾಪುರ, ಬೆಣ್ಣೆನಹಳ್ಳಿ,..ಒ೦ದೇ ಎರಡೇ, ಇ೦ತಹ ನೂರಾರು ಹಳ್ಳಿಯ ಜನರು, ಜಾನುವಾರುಗಳು ರಾಮನಿಗಾಗಿ ಶಬರಿ ಕಾಯುವ ಹಾಗೆ ನೀರಿಗಾಗಿ ಕಾಯುತ್ತಿರುತ್ತಾರೆ. ಈ ನೀರಿಗಾಗಿ ಕಾಯುತ್ತಿರುವ ಜನರು, ಎಮ್ಮೆಗಳೂ, ಹೋತಗಳು, ಬಸವಿಗಳು, ಟಗರುಗಳು, ಹಸುಗಳ ಪೈಕಿ ಸತ್ಯವೇ … Read more

ಬಣ್ಣದ ಸಂಜೆ: ಪ್ರಸಾದ್ ಕೆ.

ಬಾನಿನಲ್ಲಿ ಬಣ್ಣಗಳು ಮಾತಾಡತೊಡಗಿದ್ದವು.  ಹೋಳಿ ಹಬ್ಬದ ಸಂಜೆ. ಅವನು ಒಂದರ ಹಿಂದೊಂದು ಸಿಗರೇಟುಗಳನ್ನು ಸುಡುತ್ತಾ ಸುಮ್ಮನೆ ಸಮುದ್ರವನ್ನು ದಿಟ್ಟಿಸುತ್ತಿದ್ದ. ಮಾತನಾಡುವುದಕ್ಕೇನೂ ಇಲ್ಲವೆಂಬಂತೆ ಅವಳೂ ತುಟಿ ಬಿಚ್ಚಲಿಲ್ಲ. ಹನ್ನೊಂದು ವರ್ಷಗಳ ಸುದೀರ್ಘ ಅವಧಿಯ ನಂತರ ಇಬ್ಬರೂ ಆಕಸ್ಮಿಕವಾಗಿ ಪಣಂಬೂರಿನ ಸಮುದ್ರತಟದಲ್ಲಿ ಎದುರುಬದುರಾಗಿದ್ದರು. ಅವನು ಸರಕಾರಿ ಕಂಪೆನಿಯೊಂದರಲ್ಲಿ ಉದ್ಯೋಗಿ. ಅವಳು ನಗರದಲ್ಲಿ ತಳವೂರುತ್ತಿರುವ ದಂತ ವೈದ್ಯೆ. ಅಂದಹಾಗೆ ಇಬ್ಬರೂ ಒಂದಾನೊಂದು ಕಾಲದಲ್ಲಿ ಪ್ರೇಮಿಗಳು.  ಎಷ್ಟು ಚೆನ್ನಾಗಿದ್ದ ಇವ ಥೇಟು ಶಾರೂಖನಂತೆ, ಚಾಕ್ಲೇಟು ಬಾಯ್ ಇಮೇಜ್ ಇದ್ದ ಹುಡುಗ. ಒಣಕಲಾಗಿ ಹೋಗಿದ್ದಾನೆ. … Read more

ಪಾದಗಟ್ಟಿ: ಆನಂದ ಈ. ಕುಂಚನೂರ

    II ಶ್ರೀ ಕಾಡಸಿದ್ಧೇಶ್ವರ ಪ್ರಸನ್ನ II ದಿ: 13-09-2010 ಮಾನ್ಯರೇ, ನಮ್ಮೂರಿನ ಮಗನಂತಿದ್ದ ಶ್ರೀ ಕಾಡಸಿದ್ಧೇಶ್ವರರ ವರಪುತ್ರನೆನೆಸಿದ್ದ ಕಾಡಪ್ಪನು  ನಿನ್ನೆ ರಾತ್ರಿ 2 ಗಂಟೆಗೆ ವಿಧಿವಶನಾಗಿರುತ್ತಾನೆ ಎಂದು ತಿಳಿಸಲು ವಿಷಾದವೆನಿಸುತ್ತದೆ. ಇಂದು ಮುಂಜಾನೆ 10 ಗಂಟೆಗೆ ನಡೆಯುವ ಅವನ ಅಂತ್ಯಕ್ರಿಯೆಯಲ್ಲಿ ಎಲ್ಲರೂ ಭಾಗವಹಿಸಬೇಕೆಂದು ವಿನಂತಿ.   –  ಬನಹಟ್ಟಿಯ ದೈವಮಂಡಳಿ. ಹೀಗೊಂದು ಸಂಗತಿ ಊರಿನ ಪ್ರಮುಖ ನಾಮಫಲಕಗಳ ಮೇಲೆ ರಾರಾಜಿಸುತ್ತಲೇ ಎಲ್ಲರ ಗಂಟಲು ಉಬ್ಬಿಬಂದಿದ್ದುವು. 'ಯವ್ವಾs, ದೈವದ ಮಗಾsನ ಹ್ವಾದಲ್ಲಬೇ…' ಎಂದು ಹೆಂಗಸರು ಜಮಾಯಿಸುವುದರೊಂದಿಗೆ, 'ಈ … Read more

ಇದುವೇ ಜೀವನ: ಪಾರ್ಥಸಾರಥಿ ಎನ್.

ಬೀ ಪ್ರಾಕ್ಟಿಕಲ್ ಮ್ಯಾನ್,  ನೋಡಿ ಇದಕ್ಕಿಂತ ಬೇರೆ ನಿರ್ದಾರ ತೆಗೆದುಕೊಳ್ಳುವುದು ಸಾದ್ಯವಿಲ್ಲ, ಯೋಚಿಸಿ ಡಾ!!ಜೋಷಿ ಹೇಳುತ್ತಿರುವಾಗ , ಮಧು ಗರಬಡಿದವನಂತೆ ಕುಳಿತಿದ್ದ,  ಏನಾಯಿತು ?  ತನ್ನ ಹಾಗು ಕೀರ್ತಿಯ ಕನಸುಗಳೆಲ್ಲ ಕರಗಿ ಹೀಗೆ ವಿಕಾರವಾಗುವದೆಂಬ ನಿರೀಕ್ಷೆಯು ಅವನಿಗಿರಲಿಲ್ಲ.  ಅಪ್ಪ ಅಮ್ಮ ನೋಡಿ ತಾನು ಮೆಚ್ಚಿ ಮದುವೆಯಾದ ಪ್ರೀತಿಯ ಪತ್ನಿ ಕೀರ್ತಿ. ಮದುವೆಯಾಗಿ ಆರು ವರ್ಷಗಳ ನಂತರ ತಾನು ತಂದೆಯಾಗುತ್ತಿರುವ ಸಮಾಚಾರ ತಿಳಿದಾಗ ಕುಣಿದಾಡಿಬಿಟ್ಟಿದ್ದ. ಮದುವೆಯಾದ ಮೊದಲು ಮೂರುವರ್ಷ ಮಕ್ಕಳು ಬೇಡವೆಂದು ಮುಂದೆ ಹಾಕಿದ್ದಾಗಿತ್ತು, ನಂತರ ಮೂರು ವರ್ಷ … Read more

ನೆನಪುಗಳ ಮಾತು ಮಧುರ!: ರುಕ್ಮಿಣಿ ನಾಗಣ್ಣನವರ

ಎಷ್ಟು ಹೊತ್ತಾಯಿತು ಬಸ್ಸಿನಲ್ಲಿ ಕುಳಿತು. ಯಾವಾಗ ಬಿಡುತ್ತೀರಿ? ನಮಗಿನ್ನೂ ತುಂಬ ಮುಂದೆ ಹೋಗಬೇಕಿದೆ. ನನ್ನ ಹಿಂದಿನ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ತನ್ನ ಅಸಮಾಧಾನ ವ್ಯಕ್ತಪಡಿಸುತ್ತ ಕಂಡಕ್ಟರ್ನನ್ನು ದಬಾಯಿಸಿ ಕೇಳುತ್ತಿದ್ದ. ಬೇಗ ಬಿಡಿ ಸರ್ ತುಂಬ ಹೊತ್ತಾಯಿತಲ್ಲ ಎಂದು ಇನ್ನೇನು ನಾನೂ ಹೇಳಬೇಕು ಎನ್ನುವಷ್ಟರಲ್ಲಿ ಅಪ್ಪಯ್ಯನ ಕಾಲು ಬಂತು. ಹೊರಟ್ರ ಅಂತ ಕೇಳುತ್ತಿದ್ದರು. ಹೌದು. ಬಸ್ಸಿನಲ್ಲಿದ್ದೇನೆ. ಅವರಿಗೆ ರಜೆ ಸಿಕ್ಕಿಲ್ವಂತೆ ನಾಳೆ ಬರ್ತಾರೆ ಅಪ್ಪ ಅಂದೆ. ಆಯ್ತು. ಹುಷಾರಾಗಿ ಬಾ ಅಂತ ಹೇಳಿ ಕಾಲ್ ಕಟ್ ಮಾಡಿದ್ರು. ಕಿಟಕಿ … Read more

ಮತಿಭ್ರಮಣೆ: ಶಿವಕುಮಾರ ಚನ್ನಪ್ಪನವರ

ಪೆಣ್ಣು, ಪೆಣ್ಣೆಂದೇಕೆ ಬೀಳುಗಳೆವರು ಕಣ್ಣು ಕಾಣದ ಗಾವಿಲರು  -ಸಂಚಿ ಹೊನ್ನಮ್ಮ ತಾನು ಸೋಮುವಿಗೆ ಹೀಗೆನ್ನಬಾರದಿತ್ತು. ಪಾಪ ಎಷ್ಟು ನೊಂದುಕೊಂಡನೋ ಏನೋ……? ತಾನೇ ಸಾಕಿ ಬೆಳೆಸಿದ ಕೂಸು ಆದರೂ ಅವನು ಹದ್ದುಮೀರಿ ಮಾತಾಡಿದ್ದ. ಬೇಡವೆಂದರೂ ಕೇಳದೇ ಹೆಂಡತಿಯ ಭ್ರೂಣಪತ್ತೆಯ ಕೆಲಸಕ್ಕೆ ಕೈ ಹಾಕಿದ್ದಿರಬಹುದು, ತಮ್ಮ ತಾಯಿಗೆ ಗಂಡು ಮಗುವೇ ಬೇಕೆಂದು, ತನಗೂ ಅದೇ ಇಷ್ಟವಿದೆಯೆಂದು, ಹಟ ಹಿಡಿದು ಈ ಸಲ ಹೆಣ್ಣಾದರೆ ಆಪರೇಷನ್ ಮಾಡಿಸದೇ ಮುಂದಿನದಕ್ಕೆ ಬಿಡಬೇಕೆಂದು ಹಟ ಹಿಡಿದದ್ದು ತಪ್ಪಲ್ಲವೇ……?, ಡಾಕ್ಟರು ಇದು ಎರಡನೇ ಬಾರಿ ಸಿಜೇರಿಯನ್ … Read more

ಚಲರೇ ಭೋಪಳ್ಯಾ ಟುಣಕ್-ಟುಣಕ್ (ಆಡಿಯೋ ಕತೆ): ಸುಮನ್ ದೇಸಾಯಿ

ಒಂದು ಭಯಂಕರ ದಟ್ಟ ಜಂಗಲ್ ಇತ್ತು. ಆಲ. ಹಲಸು, ಹುಣಸೆ, ಮಾವು ಸೊಗೆ, ದೊಡ್ಡ ದೊಡ್ಡ ಮರ ಇದ್ವು. ಅದೆಷ್ಟು ದಟ್ಟ ಇತ್ತಂದರ. ಮಟಾ ಮಟಾ ಮಧ್ಯಾಹ್ನದಾಗು ಸೂರ್ಯನ ಬೆಳಕಿಗೂ ಒಳಗ ಬರಲಿಕಕ್ಕೆ ಜಾಗ ಇದ್ದಿಲ್ಲ. ಆ ಕಾಡಿನ ತುಂಬ ಪ್ರಾಣಿಗಳು ಭಾಳ ಇದ್ವು. ಕಾಡಿಗೆ ಹಚ್ಚಿ ಇನ್ನೊಂದು ಕಡೆ ಸುಂದರ ಸರೋವರ ಇತ್ತು. ಸರೋವರದ ಇನ್ನೊಂದು ಕಡೆ ಒಂದು ಪುಟ್ಟ ಹಳ್ಳಿ ಇತ್ತು. ಅಲ್ಲಿಯ ಜನ ಯಾವಾಗಲೂ ಕಾಡಿನ ಭಯದಿಂದ ಜೀವ ಕೈಯ್ಯೊಳಗ ಹಿಡಕೊಂಡನ ಜೀವನ … Read more

ಮೌನ ತಳೆದ ಹುಡುಗಿ: ರುಕ್ಮಿಣಿ ನಾಗಣ್ಣವರ

ಆಗಷ್ಟೆ ಬೆಳಕಿನ ಬೆನ್ನಿಗೆ ಕತ್ತಲು ಪತ್ತಲ ಹಾಸುತ್ತಿತ್ತು. ಮಿಣಮಿಣ ಮಿನುಗುವ ತಾರೆಗಳು ಚಂದ್ರನೊಂದಿಗೆ ಕಣ್ಣಾ ಮುಚ್ಚಾಲೆ ಆಡಲು ಸಿದ್ಧವಾಗಿದ್ದವು. ಚಂದ್ರನೋ, ತಾರೆಗಳ ಬಳಗದಿಂದ ತಪ್ಪಿಸಿಕೊಂಡವನಂತೆ ರಮೇಶನ ಕೋಣೆಯನ್ನೇ ಇಣುಕಿ ಇಣುಕಿ ನೋಡುತ್ತಿದ್ದ. ದೀಪ ಹಚ್ಚದ ಕೋಣೆಯಲ್ಲಿ ಕತ್ತಲ ತೆಕ್ಕೆಯೊಳಗೆ ರಮೇಶ್ ಗಾಢ ಮೌನಕ್ಕೆ ಶರಣಾಗಿದ್ದ. ಮನದ ಮೈದಾನದಲಿ ಜಾನಕಿಯೆಡೆಗಿನ ವಿಚಾರಗಳು ಕಾಳಗದ ಹೋರಿಯಂತೆ ಕಾದಾಟ ನಡೆಸಿದ್ದವು. ಅರಳು ಹುರಿದಂತೆ ಮಾತಾಡುವ ಜಾನಕಿ ಕಳೆದ ಆರು ತಿಂಗಳಿನಿಂದ ಮೌನವಾಗಿದ್ದಳು. ಆ ದೀರ್ಘಮೌನ ರಮೇಶನನ್ನು ಭಾದಿಸುತ್ತಿತ್ತು.  ತಲೆ ಚಿಟ್ಟೆನ್ನುವ ಅಸಹನೆ. … Read more

ನಮ್ಮ ಇಂದ್ರಿ ಕತಿ: ರುಕ್ಮಿಣಿ ನಾಗಣ್ಣವರ

ಕೆಲಸದ ಮ್ಯಾಲ ಹೆಡ್ ಆಫಿಸಿಗಿ ಹ್ವಾದ್ರ ನನ್ನದಲ್ಲದ ಕೆಲಸಾನೂ ನಾ ಮಾಡಬೇಕಾಗಿ ಬರ್ತದ. ಮನ್ನಿ ಮನ್ನೆರ ಕಂಪ್ಯೂಟರ್ ಕೆಲಸಕಂತ ಒಬ್ಬ ಹುಡುಗನ ನೇಮಿಸ್ಯಾರ.  ಅದೇನೋ ಡಿಪ್ಲೊಮಾ ಕೋರ್ಸ್ ಮುಗಿಸ್ಯಾನಂತ. ಆ ಊರ ಪಲ್ಲಾಳಗಿತ್ತಿ ಪದ್ದಿ ಬಾಯಾಗಿಂದ ಕೇಳಿದ ಸುದ್ದಿ. ಡಿಪ್ಲೊಮಾ ಮುಗಿಸಿದ ಹುಡಗ ಇಲ್ಲಿ ಇವರ ಕೊಡು ಯಾಡ ಸಾವಿರಕ ಅವರ ಅಂದಿದ್ದ ಅನಿಸ್ಕೊಂಡ ನಾಯಿಗಿಂತ ಕಡೆ ಆಗಿ ಯಾಕ ಸಾಯ್ಲಿಕ್ ಬಂದಾನೊ? ಅಂತ ನನಗ ಅನಿಸಿದ್ದೂ ಅದ. ಅವನ ಮಾರಿ ನೋಡಿದರ ಅಯ್ಯೋ ಪಾಪ! ಅನಿಸಿ … Read more

ಅಗ್ನಿ: ಬೆಳ್ಳಾಲ ಗೋಪಿನಾಥ ರಾವ್

       ೧. ಬಲಿ   ಚಂದ್ರ ಹಾಸ ಮತ್ತೊಮ್ಮೆ ತಲೆ ಕೆರೆದುಕೊಂಡ.   ಎರಡಸ್ಥಂತಿನ  ಭದ್ರ ಬುನಾದಿ ಎಬ್ಬಿಸಿ ಕಟ್ಟಿಸಿದ ಈ ಕಟ್ಟೋಣ    ಅಲುಗಾಡುವದೆಂದರೇನು?  ಅರ್ಥವಾಗಲಿಲ್ಲ.     ಚೈತ್ರಂಗೆ ಹೇಳೋಣವೆಂದುಕೊಂಡ ಮತ್ತೆ ನಕ್ಕಾಳು.  ನಿನ್ನೆ ಹಲ್ಲಿನ ವೈದ್ಯರು ಕೊಟ್ಟ  ಮಾತ್ರೆಯದ್ದೇನಾದರೂ ಸೈಡ್ ಎಫೆಕ್ಟ್ ಆಗಿರಬಹುದಾ.   ಸ್ವಲ್ಪ ಮತ್ತಿನಲ್ಲಿದ್ದವರ ಹಾಗಿದ್ದೀರಾ ಚೈತ್ರನ ರಾತ್ರೆಯ ಮಾತು ನೆನಪಾಯ್ತು.  ಕಣ್ಣೂ ನಿಚ್ಚಳವಾಗಿ ಕಾಣ್ತಾ ಇದೆ.  ಚಿವುಟಿಕೊಂಡ.   ಇಲ್ಲ ಸರಿಯಾಗಿ ನೋವಾಗ್ತಾ ಇದೆ.  ಮತ್ತೆ,,?  … Read more

ಕಿರು ಕತೆಗಳು: ನವೀನ್ ಮಧುಗಿರಿ, ಮುಕುಂದ್ ಎಸ್.

ಚಪ್ಪಾಳೆ ಇಡೀ ಶಾಲೆಗೇ ವರ್ಷದ ಉತ್ತಮ ಪ್ರತಿಭಾವಂತ ವಿದ್ಯಾರ್ಥಿ ಎಂದು ಮಗ ವೇದಿಕೆಯ ಮೇಲೆ ಪ್ರಶಸ್ತಿಯನ್ನು ಪಡೆವಾಗಯುವಾಗ, ಪೋಷಕರ ಸಾಲಿನಲ್ಲಿ ಕುಳಿತ ಅವನ ಕುರುಡು ತಂದೆ ಸಂತಸದಿಂದ ಎಲ್ಲರೊಟ್ಟಿಗೆ ಚಪ್ಪಾಳೆ ತಟ್ಟಿದರು. *** ನಾಯಿ ಆ ಮನೆಯಲ್ಲಿ ಅದು ಊಟದ ಸಮಯ. ಗಂಡ ಊಟಕ್ಕೆ ಕುಳಿತಿದ್ದ, ಹೆಂಡತಿ ಬಡಿಸುತ್ತಿದ್ದಳು. ಎರಡು ತುತ್ತು ತಿನ್ನುವಾಗ ಗಂಡ ತನ್ನ ಮಾಮೂಲಿ ಗೊಣಗಾಟವನ್ನ ಶುರು ಮಾಡಿದ. ಅನ್ನ ಯಾಕಿಷ್ಟು ಮೆತ್ತಗೆ ಮಾಡಿದ್ದೀಯ?  ಸಾರಿಗೆ ಉಪ್ಪು ಕಡಿಮೆ. ಪಲ್ಯ ತುಂಬಾ ಖಾರ ಖಾರ. … Read more

ಸಾವಿರದ ನೋಟು: ಗಣೇಶ್ ಖರೆ

ಬೆಂಗಳೂರಿನ ರಸ್ತೆಯ ಮೂಲೆಯಲ್ಲಿ ಡೊಂಬರಾಟದವರು ತಮ್ಮ ಕಸರತ್ತು ತೋರಿಸುವಲ್ಲಿ ನಿರತರಾಗಿದ್ದರು. ನೋಡಿದರೆ ಯಾವುದೋ ಹಳ್ಳಿಯ ಮೂಲೆಯಿಂದ ಬಂದವರಂತೆ ಅವರ ವೇಶ ಭೂಶಣವಿತ್ತು. ಹಗ್ಗದ ಮೇಲೆ ನಡೆಯುವುದು, ಗೋಲಕದೊಳಗೆ  ತಮ್ಮ ಮೈಯ್ಯನ್ನು ತೂರಿಸುವುದು, ತಲೆ ಕೆಳಗಾಗಿ ಕೈಯ್ಯ ಮೇಲೆ ನಡೆಯುವುದು ಹೀಗೆ ಕಸರತ್ತು ಸಾಗಿತ್ತು. ಸಿಗುವ ಬಿಡಿ ಕಾಸಿಗಾಗಿ ಜೀವವನ್ನು ಪಣಕ್ಕಿಟ್ಟು ಮಾಡುವ ಕಸರತ್ತು ಜನರನ್ನು ಅವರತ್ತ ಆಕರ್ಷಿಸುತ್ತಿತ್ತು. ಡೊಂಬರಾಟದ ಗುಂಪಲ್ಲಿ ಇದ್ದದ್ದು ಮೂರು ಜನ, ಎಲ್ಲರೂ ಹೆಂಗಸರೇ. ಒಬ್ಬಳಿಗೆ ಸುಮಾರು ಮೂರರಿಂದ ನಾಲ್ಕು ವಯಸ್ಸಿರರಬಹುದು, ನೋಡೊಕೆ ಮುಗ್ಧ … Read more

ನೈಸ್ ರೋಡ್ ಮತ್ತು ಹೈವೇ ಕಳ್ಳರು: ವೀರ್ ಸಂತೋಷ್

ಸುಮಾರು ವರ್ಷಗಳ ಹಿಂದಿನ ಮಾತು. ಹೈವೇಗಳೆಂದರೆ ಏನೋ ಕುತೂಹಲ. ರೈಲೆಂದರೂ ಅಷ್ಟೇ. ಹೊಳೆನರಸೀಪುರದಿಂದ ಮೈಸೂರಿಗೆ ಬಸ್ಸಿನಲ್ಲಿ ಬರುವಾಗ ಮಾರ್ಗ ಮಧ್ಯೆ ಹಳ್ಳಿಯೊಂದರಲ್ಲಿ SH88 ಎಂದು ದಪ್ಪಕ್ಷರಗಳಲ್ಲಿ ಬರೆದಿದ್ದ ಮೈಲಿಗಲ್ಲೊಂದನ್ನು ನೋಡಿ ಪುಳಕಗೊಂಡಿದ್ದೆ. ಮತ್ತೊಮ್ಮೆ ಹಾಸನದಿಂದ ಧರ್ಮಸ್ಥಳಕ್ಕೆ ಹೋಗುವಾಗ ಸಕಲೇಶಪುರದ ಬಾಳ್ಳುಪೇಟೆ ಬಳಿ NH48 ಎಂಬ ಬೋರ್ಡೊಂದನ್ನು ನೋಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಿದ ಸಂಭ್ರಮಾಚರಣೆ ಮಾಡಿದ್ದೆ.  ಮಾನವನ ಅಭಿವೃದ್ಧಿಯಲ್ಲಿ ಬಹುಮುಖ್ಯ ಪಾತ್ರವಹಿಸುತ್ತಿರುವ ಅಗಣಿತ ಹರಿಕಾರರಲ್ಲಿ ಹೆದ್ದಾರಿಗಳ ಪಾತ್ರ ದೊಡ್ಡದು. ವಿಮಾನ, ಕಾರು ಜನಸಾಮಾನ್ಯರ ಮನಸ್ಸಿಗೆ ಮತ್ತು ಜೇಬಿಗೆ ಹತ್ತಿರವಾಗುವವರೆಗೆ … Read more

ತಿರಸ್ಕಾರ (ಭಾಗ 5): ಜೆ.ವಿ.ಕಾರ್ಲೊ, ಹಾಸನ

(ಇಲ್ಲಿಯವರೆಗೆ…) ಅವಳು ತನ್ನೊಟ್ಟಿಗಿದ್ದಾಳೆ ಎಂದು ಹ್ಯಾನ್ಸನಿಗೆ ಖಾತ್ರಿಯಾಯ್ತು. ಈ ಸಂಗತಿ ಅವನನ್ನು ನಿರಾಶೆಯ ಮಡಿಲಿಂದ ಮೇಲೆತ್ತಲು ನೆರವಾಯಿತು. ಆನ್ನೆಟ್ ಮತ್ತೊಬ್ಬನ ಪ್ರೇಮದಲ್ಲಿರುವ ಸಂಗತಿ ಅವನಿಗೆ ಜೀರ್ಣಿಸಿಕೊಳ್ಳುವುದು ಕಷ್ಟವಾಯಿತು. ಅದೃಷ್ಟವಶಾತ್ ಅವನ ಪ್ರತಿಸ್ಪರ್ಧಿ ಜರ್ಮನಿಯಲ್ಲಿ ಯುದ್ಧಕೈದಿಯಾಗಿದ್ದ. ಮಗು ಜನಿಸುವ ಮೊದಲೇ ಅವನಿಗೆ ಬಿಡುಗಡೆಯಾಗದಿದ್ದರೆ ಸಾಕೆಂದು ಅವನು ಭಗವಂತನಿಗೆ ಮೊರೆಯಿಟ್ಟ. ಮಗು ಜನಿಸಿದ ನಂತರ ಆನ್ನೆಟ್ ಬದಲಾದರೂ ಆದಳೇ. ಈ ಹುಡುಗಿಯರನ್ನು ಅರ್ಥಮಾಡಿಕೊಳ್ಳುವುದೇ ಕಷ್ಟ. ಊರಿನಲ್ಲಿ ಅವನಿಗೆ ಗೊತ್ತಿದ್ದ ಜೋಡಿಯೊಂದು ಎಷ್ಟೊಂದು ಅನ್ಯೋನ್ಯವಾಗಿತ್ತೆಂದರೆ, ಅವರಿಗೆ ಒಬ್ಬರನ್ನೊಬ್ಬರು ಬಿಟ್ಟು ನೋಡಲು ಸಾಧ್ಯವೇಯಿರಲಿಲ್ಲ. … Read more

ಕಾಲೇಜು ದಿನಗಳ ವಾಕಿಂಗ್: ಅಕ್ಷಯ ಕಾಂತಬೈಲು

ನನ್ನ ಇಂಜಿನಿಯರಿಂಗ್ ಕಲಿಕೆಯ ದಿನಗಳವು; ಅಸೈನ್ಮೆಂಟ್ ಬರೆಯದ್ದರಿಂದ, ಕ್ಲಾಸಿಗೆ ತಡವಾಗಿ ಹಾಜರಾಗುತ್ತಿದ್ದ ಕಾರಣ, ಲ್ಯಾಬ್ ರೆಕಾರ್ಡ್ ಸಮಯಕ್ಕೆ ಸರಿಯಾಗಿ ಕೊಡದ್ದರಿಂದ ಲೆಕ್ಚರರ ಕೈಯಲ್ಲಿ ನಾನು ಸಿಕ್ಕಾಪಟ್ಟೆ ಉಗಿಸಿಕೊಳ್ಳುತ್ತಿದ್ದೆನು. ನನ್ನೀ ಉದಾಸೀನತೆ ಅತಿರೇಕ ತಲುಪಿ ಲೆಕ್ಚರುಗಳು ಕ್ಲಾಸಿನಿಂದ ಉಚ್ಚಾಟನೆ ಮಾಡಿದ ಪ್ರಸಂಗವೂ ಬೇಜಾನ್ ಇದೆ. ಕಾಲೇಜಿನಲ್ಲಿ ಚೆಂದಮಾಡಿ ಬೈಗುಳ ಉಂಡು ಸಂಜೆ ಹೊತ್ತು ರೂಂಗೆ ಹಿಂತಿರುಗಿದಾಗ ಆ ದಿನದ ನಿರ್ವಹಣೆಯ ಬಗೆಗೆ ನನ್ನ ಮೇಲೆ ನನಗೇ ಬೇಸರ ಮೂಡುತ್ತಿತ್ತು. ಮನಸಿಗೆ ಮೂಡಿದ ಬೇಸರವ ಕಳೆಯಲು ಮಿತ್ರ -ಶಿವಕುಮಾರನ ಜೊತೆ … Read more

ಚೊಕ್ಕ ಕತೆಗಳು: ಮಾಧವ ಡೋಂಗ್ರೆ

1.ಸಂಸಾರ ಆತ ಸ್ಥಿತಪ್ರಜ್ಞ. ಆಕೆ ಚಂಚಲೆ. ಆದರೂ ಅವರದು ಬಿಡಲಾರದ ಅನುಬಂಧ.  ಆಕೆ ಆತನನ್ನು ಖುಶಿಪಡಿಸಲು ದಿನವೂ ಆತನಲ್ಲಿ ಬಂದು ಅವನಲ್ಲಿ ಸೇರುತ್ತಾಳೆ. ಆದರೆ ಕೆಲವೊಮ್ಮೆ ನಿತ್ರಾಣಳಾಗಿ ನಡುದಾರಿಯಲ್ಲೆ ಬಿದ್ದುಹೋಗುತ್ತಾಳೆ. ಅವನಾದರೋ ಇದ್ಯಾವುದರ ಪರಿವೆ ಇಲ್ಲದೆ ನಿಶ್ಚಲನಾಗಿದ್ದು ತನ್ನ ತಪಸ್ಸನ್ನಾಚರಿಸುತ್ತಾನೆ. ಇನ್ನೊಂದು ಆಯಾಮದಲ್ಲಿ ಆತ ಆಕೆಗಾಗಿ ಕ್ಷಣಕ್ಷಣವೂ ಹಾತೊರೆಯುತ್ತಿರುತ್ತಾನೆ. ಆಕೆಯ ಬರುವಿಕೆ ಗೊತ್ತಿದ್ದರೂ ಸುಮ್ಮನೆ ಮುನಿಸಿಕೊಳ್ಳುತ್ತಾನೆ. ಆದರೆ ಆಕೆ ಬಂದರೂ, ಬರದಿದ್ದರೂ ಅವರಿಬ್ಬರ ಮಕ್ಕಳನ್ನು ಜೊಪಾನವಾಗಿ ನೋಡಿಕೊಂಡು, ರಾತ್ರಿಯಾದಂತೆ ಮಕ್ಕಳನ್ನು ಮಲಗಿಸಿ ಅವಳಿಗೊಸ್ಕರ ಕಾಯತೊಡಗುತ್ತಾನೆ. ಆತನ ಹೆಸರು … Read more

ತಿರಸ್ಕಾರ (ಭಾಗ 2): ಜೆ.ವಿ.ಕಾರ್ಲೊ, ಹಾಸನ

(ಇಲ್ಲಿಯವರೆಗೆ) … ಹುಡುಗಿ ಅವನಿಗೆ ಒಂದು ಮುತ್ತು ಕೊಟ್ಟಿದ್ದರೆ ಅವನು ಸುಮ್ಮನೇ ಹೊರಟುಹೋಗಿ ಈ ಅನಾಹುತ ಜರುಗುತ್ತಿರಲಿಲ್ಲವೇನೋ? ನೆಲಕ್ಕುರುಳಿದ್ದ ರೈತನ ಮೇಲೆ ಅವನ ದೃಷ್ಟಿ ಹರಿದು ಅವನಿಗೆ ನಗು ಬಂದಿತು. ಹಾಗೆಯೇ ಹೆಂಗಸಿನೆಡೆಗೆ ನೋಡಿದಾಗ ಅವಳಿನ್ನೂ ಕಂಪಿಸುತ್ತಿದ್ದಳು. ಹುಡುಗಿಯ ನಂತರ ತನ್ನ ಸರದಿ ಎಂದು ಅವಳು ಭಾವಿಸಿರಬೇಕು! ಯಾಕೆ ಹೆಂಗ್ಸೇ ಅಳ್ತಾ ಇದ್ದೀಯಾ? ಇದು ಇವತ್ತಲ್ಲ ನಾಳೆ ಜರುಗಲೇ ಬೇಕಿತ್ತು. ಅವನು ಹಿಂಬದಿಯ ಜೇಬಿನಿಂದ ಪರ್ಸನ್ನು ಹೊರತೆಗೆದು, ತೆಗೋ ಇದರಲ್ಲಿ ನೂರು ಫ್ರಾಂಕುಗಳಿವೆ. ನಿನ್ನ ಮಗಳಿಗೊಂದು ಡ್ರೆಸ್ … Read more

ತಿರಸ್ಕಾರ (ಭಾಗ 1): ಜೆ.ವಿ.ಕಾರ್ಲೊ, ಹಾಸನ

ಮೂಲ: ಡಬ್ಲ್ಯು. ಸಾಮರ್ಸೆಟ್ ಮ್ಹಾಮ್. ಕನ್ನಡಕ್ಕೆ: ಜೆ.ವಿ.ಕಾರ್ಲೊ, ಹಾಸನ (ಬ್ರಿಟಿಶ್ ಲೇಖಕ ಡಬ್ಲ್ಯು. ಸಾಮರ್ಸೆಟ್ ಮ್ಹಾಮ್ (೧೮೭೪-೧೯೬೫) ಹುಟ್ಟಿದ್ದು ಪ್ಯಾರಿಸಿನಲ್ಲಿ. ತನ್ನ ಕುಟುಂಬದ ಸಂಪ್ರದಾಯದಂತೆ ಅವನು ವೃತ್ತಿಯಲ್ಲಿ ವಕೀಲನಾಗಬೇಕಿತ್ತು. ಹುಟ್ಟಿನಿಂದಲೇ ತೊದಲುವಿಕೆಯ ಕಾರಣಗಳಿಂದ ಅವನು ವಕೀಲನಾಗಲಿಲ್ಲ. ಹತ್ತು ವರ್ಷಗಳಲ್ಲೇ ಅನಾಥನಾದ್ದರಿಂದ ಅವನನ್ನು ಅವನ ಚಿಕ್ಕಪ್ಪ ಇಂಗ್ಲೆಂಡಿನಲ್ಲಿ ಸಾಕಿದರು. ಅವನು ಕಲಿತದ್ದು ವೈಧ್ಯ ಶಿಕ್ಷಣವಾದರೂ ಅವನ ಆಸಕ್ತಿ ಸಾಹಿತ್ಯದಲ್ಲಿತ್ತು. ಲೇಖಕನಾಗಿ ಹೆಸರು, ಹಣ ಗಳಿಸಲು ಅವನಿಗೆ ಬಹಳಷ್ಟು ವರ್ಷಗಳೇ ಹಿಡಿದವು. ಕಾದಂಬರಿಕಾರನಾಗಿ, ಸಣ್ಣ ಕತೆಗಾರನಾಗಿ ಹೆಸರುಗಳಿಸುವ ಮೊದಲು ಅವನು … Read more

ಒಂದು ಹನಿ ಕಣ್ಣೀರು: ಪಾರ್ಥಸಾರಥಿ ಎನ್

ಎಲ್ಲವೂ ಅನಿರೀಕ್ಷಿತ ಅನ್ನಿಸುವಂತೆ ಮುಗಿದುಹೋಯಿತು. ಬೆಳಗಿನ ಜಾವ ನಾಲಕ್ಕು ಗಂಟೆ ಇರಬಹುದು ರೂಮಿನಲ್ಲಿ ಮಲಗಿದ್ದ ಅಮ್ಮ ತುಂಬಾನೆ ಕೆಮ್ಮುತ್ತಿದ್ದಳು, ಇದೇನು ಎಂದು ಎದ್ದುಹೋದೆ. "ಏನಮ್ಮ ತುಂಬಾ ಕೆಮ್ಮು ಇರುವ ಹಾಗಿದೆ , ಕುಡಿಯಲು ನೀರು ಕೊಡಲಾ? " ಎಂದೆ, ದೀಪ ಹಾಕುತ್ತ. ಅವಳಿಗೆ ಉತ್ತರಿಸಲು ಆಗಲಿಲ್ಲ ಅನ್ನಿಸುತ್ತೆ, "ಕೊಡು" ಅನ್ನುವಂತೆ ತಲೆ ಆಡಿಸಿದಳು. ಹೋಗಿ ನೀರು ತಂದೆ. ಎದ್ದು ಕುಳಿತು ಕುಡಿಯಲು ಪ್ರಯತ್ನಿದಳು, ಆದರೆ ಪೂರ್ತಿ ನೀರು ಕುಡಿಯಲೇ ಇಲ್ಲ. ತಲೆ ಪಕ್ಕಕ್ಕೆ ವಾಲಿಸಿ ಹಾಗೆ ಹಿಂದಕ್ಕೆ … Read more