ಅಮೂಲ್ಯ ಕ್ಷಣ: ಗಿರಿಜಾ ಜ್ಞಾನಸುಂದರ್

ಮೋಡ ತುಂಬಿದ ಆಕಾಶ. ಏನೋ ಒಂಥರಾ ತವಕ, ದುಗುಡ. ಮನಸ್ಸಿನಲ್ಲಿ ತಳಮಳ. ಕೈ ಕೈ ಹಿಸುಕಿ ಕೊಳ್ಳುತ್ತಾ ಓಡಾಡುತ್ತಿದ್ದೆ. ನನ್ನ ಆತಂಕ ಹೆಚ್ಚು ಮಾಡಲೆಂದೇ ಮೋಡ ಮುಸುಕಿದೆಯೇನೋ ಅನ್ನುವಂತಿದೆ. ಅನು ನನ್ನ ಜೀವನಕ್ಕೆ ಬಂದು ೬ ವರ್ಷಗಳಾಯಿತು. ಅವಳಿಲ್ಲದೆ ಒಂದು ದಿನವೂ ಮುಂದೆ ಹೋಗುವುದಿಲ್ಲವೇನೋ ಅನ್ನುವಂತೆ ಬೆಸೆದಿದೆ ಜೀವನ. ಅವಳೇ ಸಾಕು ನಾನು ಸುಖವಾಗಿ ಜೀವನ ನಡೆಸಲಿಕ್ಕೆ ಅನ್ನುವಂತಿದ್ದೆವು. ಮಕ್ಕಳು ಬೇಕೇ ಬೇಕು ಅನ್ನುವ ಹಟವೇನು ನನಗಿರಲಿಲ್ಲ. ಆದರೆ ಅವಳಿಗೆ ಮಕ್ಕಳೆಂದರೆ ಪ್ರಾಣ. ಅವಳ ಆರೋಗ್ಯವನ್ನೇ ಪಣಕ್ಕಿಟ್ಟು … Read more

ತ್ರಿಪದಿ ಕಥೆ: ಶುಭಶ್ರೀ ಭಟ್ಟ, ಬೆಂಗಳೂರು

#ತ್ರಿಪದಿ_ಕಥೆ-1: ನಕ್ಷತ್ರ ಮನೆಯವರೆಲ್ಲರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿ ಸ್ವರ್ಗಕ್ಕೆ ಕಿಚ್ಚು ಹಚ್ಚುವಂತಿದ್ದರು ವಿಶ್ವಾಸ-ವಾಣಿ. ಆರತಿಗೊಬ್ಬ ಮಗಳು-ಕೀರ್ತಿಗೊಬ್ಬ ಮಗಳೆಂಬಂತೆ ಸುಂದರ ಕುಟುಂಬವಾಗಿತ್ತು. 'ಊರಕಣ್ಣೋ ಮಾರಿಕಣ್ಣೋ' ಯಾರ ಕಣ್ಣೋ ಗೊತ್ತಿಲ್ಲ, ದೃಷ್ಟಿಬಿತ್ತು ಅವರ ಕುಟುಂಬಕ್ಕೆ. ಇದ್ದಕ್ಕಿದ್ದಂತೆ ವಾಣಿ ಹೃದಯಾಘಾತದಿಂದ ನಿಧನಳಾದಳು. ಆಗ ಮಗನಿಗಿನ್ನೂ ಒಂದುವರೆ ವರುಷ. ಮಗಳಿಗೆ ಮೂರು ವರುಷ. ಸಾವೆಂದರೆನೆಂದು ತಿಳಿಯದ ವಯಸ್ಸಲ್ಲಿ ಅಮ್ಮನ ಕಳೆದುಕೊಂಡರು. ಎಲ್ಲಾದ್ರಲ್ಲೂ ವಿಶ್ವಾಸ ಕಳೆದುಕೊಂಡ ವಿಶ್ವಾಸ ಕರ್ತವ್ಯದಿಂದ ವಿಮುಖನಾದ, ಮಕ್ಕಳು ಅಜ್ಜಿಮನೆ ಸೇರಿದರು.  ನಕ್ಷತ್ರವಾದ ಅಮ್ಮನ್ನ ಇನ್ನೂ ಹುಡುಕುತಿಹರು ಮಕ್ಕಳು ನೀಲಿಬಾನ … Read more

ನಗುವ ಮಗು: ಸುರೇಶ್ ಬಣಕಾರ್

ಅದು ಅಮಾವಾಸ್ಯೆಯ ಒಂದು ದಿನ. ಸೂರ್ಯ ಮುಳುಗುವ ಸಮಯ. ಎಂದಿನಂತೆ ಕಮಲ ಮನೆಯ ಮುಂದಿನ ತೆಂಗಿನ ತೋಟದಲ್ಲಿ ಒಣ ಕಟ್ಟಿಗೆ ಸಂಗ್ರಹಿಸುತ್ತಿದ್ದಳು. ತಟ್ಟನೆ ಒಂದು ಮಗು ನಗುವ ಸದ್ದು. ಕಮಲಳಿಗೆ ಆಶ್ಚರ್ಯ. ಏಕೆಂದರೆ ಆ ಸುತ್ತಮುತ್ತಲೂ ಹತ್ತು ಮೈಲಿ ದೂರದಲ್ಲಿ ಒಂದೂ ಮನೆ ಇರಲಿಲ್ಲ. ಅವಳು ಸುತ್ತಮುತ್ತ ನೋಡಿದಳು, ಏನೂ ಕಾಣಿಸಲಿಲ್ಲ. ಸ್ವಲ್ಪ ಸಮಯದ ನಂತರ ಶಬ್ದ ನಿಂತಿತು. ಏನೋ ಭ್ರಮೆ ಇರಬೇಕೆಂದು ತನ್ನ ಕೆಲಸದಲ್ಲಿ ಮಗ್ನಳಾದಳು. ಮತ್ತದೇ ನಗು!  ಈ ಬಾರಿ ಅವಳು ಗಮನವಿಟ್ಟು ಆಲಿಸಿದಳು. … Read more

ಕೋಸಿನ ಪಲ್ಯ: ಸಹನಾ ಪ್ರಸಾದ್

ಕಳೆದ ೪-೫ ದಿನಗಳಿಂದ ಕುಸುಮಳ ಮನಸ್ಸು ಕುದಿಯಲು ಶುರುವಾಗಿದೆ. ಪ್ರತಿ ವರುಷ ಸುಮಾರು ಈ ಹೊತ್ತಿಗೆ ಅವಳ ಮನಸ್ಸು ಬಾಂಡಲೆಯಲ್ಲಿ ಕುದಿಯುತಿರುವ ಎಣ್ಣೆಯಂತಾಗುತ್ತದೆ. ಕೊತ ಕೊತ ಕುದಿವ ಮನಸ್ಸಿನಲ್ಲಿ ಅನೇಕನೇಕ ಭಾವನೆಗಳು. ಸುಮಾರು ಒಂದು ವಾರದ ನಂತರ " ಆ ದಿನ" ಬಂದಾಗ ಮನಸ್ಸಿನಲ್ಲಿರುವ ಭಾವನೆಗಳೆಲ್ಲಾ ಸಿಡಿದು ಮನೆಯವರಿಗೆಲ್ಲಾ ಎರಚುವುದು ಅಥವಾ ಮೂಕ ಕಣ್ಣೆರಿನಲ್ಲಿ ಕೊನೆಗಾಣುವುದು. ಮಾರನೆಯ ದಿನದಿಂದ ಮಾಮೂಲು ದಿನಚರಿ ಶುರು. ಒಂದೆರಡು ದಿನ ನೋವು ಮನಸ್ಸನ್ನು ಕಾಡುತ್ತಿದ್ದರೂ ಹಿಂದಿನ ವಾರದಷ್ಟಿಲ್ಲ. ತನ್ನ ಮದುವೆಯ ದಿನ, … Read more

ನಿಯತ್ತು…: ದುರ್ಗಾ ಪ್ರಸಾದ್

ಮೂರು ದಿನವಾದರೂ ಒತ್ತರಿಸಿ ಬರುತ್ತಿದ್ದ ಸೊಸೆ ಮಾಡಿದ ಅವಮಾನದ ದೃಶ್ಯಗಳನ್ನು ರಂಗಪ್ಪನಿಗೆ ಸಹಿಸಲಾಗುತ್ತಿರಲಿಲ್ಲ. ಬೆಳ್ಳಂಬೆಳಗ್ಗೆಯೇ ಊರಿನಿಂದ ಬಂದ ಮಗಳನ್ನು ನಿಂದಿಸಿರುತ್ತಿರುವ ಸೊಸೆಯನ್ನು ಕಂಡು ರಂಗಪ್ಪನಿಗೆ ಸುಮ್ಮನಿರಲಾಗಲಿಲ್ಲ. ಯಾಕಮ್ಮ ಹಾಗೆಲ್ಲ ಮಾತಾಡುತ್ತಿಯಾ ಎಂದು ಕೇಳಿದಾಕ್ಷಣ ಮಾವನ ಕೊರಳಪಟ್ಟಿ ಹಿಡಿದು ಮತ್ತೊಂದು ಕೈಯಲ್ಲಿ ಚಪ್ಪಲಿ ಹಿಡಿದು ನಿಂತ ಸೊಸೆಯನ್ನು ಹಿಗ್ಗಾ ಮುಗ್ಗಾ ತಳಿಸಿಬಿಡಬೇಕು ಎಂದೆನಿಸಿದರೂ ಉಸಿರು ಗಟ್ಟಿ ಮಾಡಿಕೊಂಡು ಸುಮ್ಮನಾಗಿದ್ದರು. ತಂದೆಯನ್ನು ಕೊರಳಪಟ್ಟಿ ಹಿಡಿದರೂ ಏನೊಂದು ಮಾತಾಡದೆ ಒಳನಡೆದ ಮಗನನ್ನು ಕಂಡು ರೇಜಿಗೆ ಹುಟ್ಟಿತು. ಊರಮಂದಿಯೆಲ್ಲಾ ಮನೆಯ ಮುಂದೆ ನೋಡುತ್ತಾ … Read more

ಮಂಗಳನ ಅಂಗಳದಲ್ಲಿ! (ಕೊನೆಯ ಭಾಗ): ಎಸ್.ಜಿ.ಶಿವಶಂಕರ್

  ಇಲ್ಲಿಯವರೆಗೆ "ರುಚಿಕಾ, ಮಗಳೆ ಮದುವೆಯ ನಂತರ ಗಂಡನ ಮನೆಗೆ ಹೋಗುವಾಗ ಹೇಳಬೇಕಾದ ವಿದಾಯವನ್ನು ಈಗಲೇ ಹೇಳಬೇಕಾದ ಪರಿಸ್ಥಿತಿ ಒದಗಿ ಬಂದಿದೆ. ನನ್ನ ಕಣ್ಣಾಲಿಗಳು ತುಂಬಿವೆ. ಮಾತು ಹೊರಡದಾಗಿದೆ. ಆದರೂ ಮತ್ತೆ ನಿನ್ನೊಂದಿಗೆ ಮಾತಾಡುವ ಸಂದರ್ಭ ಬರಲಾರದು. ಅದಕ್ಕೇ ತಾಯಿಯಾಗಿ ಕೆಲವು ಮಾತುಗಳನ್ನು ಹೇಳಲು ಬಯಸುತ್ತೇನೆ. ನೀನು ಕೊನೆಗೆ ತಲುಪಲಿರುವ ಜಾಗ ಹೇಗಿದೆಯೋ? ಅಲ್ಲಿ ನಮ್ಮಂತ ಜೀವಿಗಳಿರುವರೋ ಗೊತ್ತಿಲ್ಲ. ನಿನ್ನ ಜೊತೆಯಲ್ಲಿ ಬರುತ್ತಿರುವ ಸೃಜನ್ ನನ್ನ ಗೆಳತಿಯ ಮಗ. ನಿನಗೆ ಅನುರೂಪನಾದ ವರನಾಗಬಲ್ಲ. ಅವನನ್ನು ಒಪ್ಪುವುದು, ಬಿಡುವುದೂ … Read more

ಕುರುಂಜಿಮಲೆ ಹೋಂಸ್ಟೇ: ಜಾನ್ ಸುಂಟಿಕೊಪ್ಪ.

ಬಿದ್ದಪ್ಪ ಗೈಡ್ ಆದದ್ದೇನೂ ದೊಡ್ಡ ವಿಷಯವಾಗಿರಲಿಲ್ಲ. ಕುರುಂಜಿಮಲೆ ಹೋಂಸ್ಟೇ ಮಾಲಿಕ ಗಣಪತಿಯೂ ಅವನ ಹೆಂಡತಿ ದೇವಕ್ಕಿಯೂ, ಮತ್ತೆ ಆ ಬಡಕಲು ಲೈನ್‍ಮನೆಯಲ್ಲಿದ್ದ ನಾಲ್ಕು ಸಂಸಾರಗಳು ಅವರಷ್ಟಕ್ಕೇ ದಿನ ದೂಡುವುದು ಇದ್ದೇಇತ್ತು. ಕ್ಯಾಟರ್ ಬಿಲ್ಲೋ, ಸಾಹುಕಾರನ      ಕೋವಿಯೋ ಹಿಡಿದು ಆ ತಡಿಯಂಡಮೋಳು, ಮಾಪಿಳೆಕುಂದು, ಕರಡಿಮಲೆ ಎಂದೆಲ್ಲಾ ಇರೋಬರೋ ಬೆಟ್ಟ-ಕಾಡೊಳಗೆ ನುಗ್ಗಿ ಮೊಲವೋ, ಕಬ್ಬೆಕ್ಕೋ, ಕಾಡುಹಂದಿಯೋ, ಕೋಳಿಯೋ ಏನಾದರೂ ಹೊಡೆದು ತರುತ್ತಿದ್ದ ಬಿದ್ದಪ್ಪ ಆ ಗಣಪತಿ ಸಾಹುಕಾರನ ಮನೆ ಜಗಲಿಯಲ್ಲಿ ಬೇಟೆ ಹಾಕಿ ಕಾಲಿಗೆ ಹತ್ತಿದ ಜಿಗಣೆಗಳನ್ನು ಒಂದೊಂದಾಗಿ ಕಿತ್ತು … Read more

ನೆನಪಿನ ಪಯಣ – ಭಾಗ 5: ಪಾರ್ಥಸಾರಥಿ ಎನ್

ಇಲ್ಲಿಯವರೆಗೆ ಜ್ಯೋತಿಯ ದ್ವನಿ ಮೊದಲಿನಂತೆ ಇರದೇ ಸ್ವಲ್ಪ ಬದಲಾವಣೆಗೊಂಡಿದೆ,    ಮಾತು ಮುಂದುವರೆಯಿತು.. .. ಯಾವುದೋ ಚಿಕ್ಕ ದೇವಾಲಯದಂತಿದೆ, ನೋಡಿದರೆ ದೇವಿಯ ವಿಗ್ರಹ ಮಣ್ಣಿನಲ್ಲಿ ಮಾಡಿರುವುದು. ಮುಂಬಾಗದಲ್ಲಿ ಕಳಶವೂ ಇದೆ. ಪೂಜೆ ನಡೆಯುತ್ತಿದೆ. ಊರಜನರೆಲ್ಲ ಸಂಭ್ರಮದಿಂದ ಓಡಾಡುತ್ತಿದ್ದಾರೆ. ಇದೇನು ಈ ವಿಗ್ರಹ ಯಾವುದು, ಇಲ್ಲಿರುವ ಕಳಶವಾದರು ಯಾವುದು.  ಊರದೇವಿ ಮಹಿಷಾಸುರಮರ್ಧಿನಿ ದೇವಿಯ ಪ್ರತಿಷ್ಠಾಪನೆಯಂತೆ. ದೇವಿಗೆ ಆರತಿ ಮೈಸೂರಿನಿಂದ ಬಂದಿದೆಯಂತೆ. ಏನೆಲ್ಲ ಮಾತುಗಳು. ಇನ್ನೂ ಹಿಂದೆ ಹೋಗಬೇಕೇನೊ ದೇವಾಲಯದ ರಹಸ್ಯ ತಿಳಿಯಲು….. ಯಾರೋ ತಲೆಯ ಮೇಲೆ ಒಂದು ಕುಕ್ಕೆಯನ್ನು … Read more

ಮಂಗಳನ ಅಂಗಳದಲ್ಲಿ! (ಭಾಗ 1): ಎಸ್.ಜಿ.ಶಿವಶಂಕರ್

ಇಡೀ ಮನೆ ಅಲುಗಾಡಿದಂತ ಅನುಭವವಾಯಿತು ಸೃಜನನಿಗೆ. ಇದೊಂದು ಹೊಸ ಅನುಭವ. ಹಿಂದೆಂದೂ ಹೀಗಾಗಿರಲಿಲ್ಲ! ಭೂಕಂಪನವಾಗುತ್ತಿದೆ ಎನಿಸುವಂತ ಅನುಭವ! ಕೆಲವು ನಿಮಿಷಗಳ ನಂತರ ಆ ಕಂಪನ ನಿಂತಿಂತೆ ಅನಿಸಿತು. ಎಲ್ಲ ಸ್ಥಬ್ದವಾಯಿತು; ನೆಮ್ಮದಿ! ಸ್ವಲ್ಪ ಎಚ್ಚರವಾಗಿತ್ತು-ಅಲುಗಾಟಕ್ಕೆ. ಸ್ಥಬ್ದವಾದನಂತರ ಮತ್ತೆ ಜೋಂಪು. ಮತ್ತೆ ಅಲುಗಾಟ, ಕುಲುಕಾಟ! ಮನೆಯೇ ಅತ್ತಿತ್ತ ವಾಲಿದಂತೆ, ಮತ್ತೆ ಅದೇ ಸಾವರಿಸಿಕೊಂಡು ನೆಟ್ಟಗೆ ನಿಂತಂತೆ! ಛೆ..ಇದೆಂತಾದ್ದು..? ನಿಜಕ್ಕೂ ಏನಾಗುತ್ತಿದೆ..? ಈ ಸಾರಿ ಬಹಳ ಹೊತ್ತು ಸ್ಥಬ್ದತೆ ಇದ್ದಂತೆ ಭಾವನೆ. ಈ ಕಂಪನ, ಸ್ಥಬ್ದತೆಗಳ ನಡುವೆ ಎಂತದೋ ಕಿರಿಕಿರಿ! … Read more

“ಮಾಡರ್ನ್ ಲೋಕದ ಮಿನಿಕಥೆಗಳು”: ಪ್ರಸಾದ್ ಕೆ.

  ಅವಳಿಗೆ ಮುಂಜಾನೆಯ ಏಳಕ್ಕೆ ಸರಿಯಾಗಿ ಎಚ್ಚರವಾಯಿತು. ಕಣ್ಣುಜ್ಜಿ ಅತ್ತಿತ್ತ ನೋಡಿದರೆ ಅವನಿನ್ನೂ ವಿವಸ್ತ್ರನಾಗಿಯೇ ಬಿದ್ದುಕೊಂಡಿದ್ದ. ಲಗುಬಗೆಯಲ್ಲೇ ಕಾಲನ್ನು ನೀಲಿ ಜೀನ್ಸ್ ಪ್ಯಾಂಟಿನೊಳಗೆ ತೂರಿಸಿ, ಟೀಶರ್ಟೊಂದನ್ನು ಧರಿಸಿ ತನ್ನ ಪುಟ್ಟ ಬ್ಯಾಗಿನೊಂದಿಗೆ ಅವಳು ಹೊರಟುಹೋದಳು. ಹತ್ತರ ಸುಮಾರಿಗೆ ಅವನಿಗೆ ಎಚ್ಚರವಾಯಿತು. ಹೋಟೇಲ್ ರೂಮಿನಲ್ಲಿ ಅವಳ ಪತ್ತೆಯಿರಲಿಲ್ಲ. ಅವಳ ಮೈಬೆವರಿನ, ಉನ್ಮಾದಗಳ ನೆನಪಾಗಿ ಮತ್ತೊಮ್ಮೆ ರೋಮಾಂಚಿತನಾದ. ಛೇ, ನಿನ್ನೆ ರಾತ್ರಿ ಅವಳ ನಂಬರನ್ನಾದರೂ ಕೇಳಬಹುದಿತ್ತು ಎಂದು ಪರಿತಪಿಸಿದ ಆತ. ಹಾಸಿಗೆಯಿಂದೆದ್ದು ಒಳಉಡುಪನ್ನು ಧರಿಸಿ ನೀರಿನ ಬಾಟಲಿಗೆಂದು ಫ್ರಿಡ್ಜ್ ಕಡೆಗೆ … Read more

ನೆನಪಿನ ಪಯಣ – ಭಾಗ 4: ಪಾರ್ಥಸಾರಥಿ ಎನ್

ಇಲ್ಲಿಯವರೆಗೆ ಜ್ಯೋತಿ ಮತ್ತೆ ನೆನಪಿಸಿಕೊಳ್ಳುತ್ತಿದ್ದಳು. ನಾನು ಆಗಿನ್ನು ಪಿಯುಸಿ ಮುಗಿಸಿದ್ದೆ, ಯಾವುದು ಸರಿಯೋ ಯಾವುದು ತಪ್ಪೋ ಯಾರು ಒಳ್ಳೆಯವರು ಕೆಡುಕರು ಅನ್ನುವುದು ಸದ್ಯ ತಿಳಿಯದ ಸ್ಥಿತಿ. ನಾನಾಗ ರಜೆಯಲ್ಲಿ ಟೈಪಿಂಗ್ ಕೋರ್ಸ್ ಸೇರಿದ್ದೆ. ಅಲ್ಲಿ ಒಬ್ಬ ಹುಡುಗ ಪರಿಚಯವಾಗಿದ್ದ. ನನಗಿಂತ ಮೂರು  ವರ್ಷ ದೊಡ್ಡವನಿರಬಹುದೇನೊ, ನಾಗೇಶ ಎಂದು ಹೆಸರು. ಅಲ್ಲಿ ಹೋದ ಒಂದು ತಿಂಗಳಿಗೆಲ್ಲ ಎಷ್ಟು ಆತ್ಮೀಯನಾಗಿದ್ದ ಎಂದರೆ ಅವನ ಮಾತುಗಳಿಗೆ ನಾನು ಮರುಳಾಗಿದ್ದೆ. ಅವನನ್ನು ಪ್ರಾಣದಂತೆ ಪ್ರೀತಿಸುತ್ತಿದ್ದೆ. ಮನೆಯಲ್ಲಿ ಅಪ್ಪ ಅಮ್ಮನಿಗೂ ಹೇಳುವ ದೈರ್ಯವಿಲ್ಲ. ಹೇಳಿದರೆ, … Read more

ಬದುಕು ಮಾಯೆ: ಮಂಜುನಾಥ ಹೆಗಡೆ

ಪ್ರತಾಪ್ ಚೆಂಬರ್ ನಲ್ಲಿ ಕುಳಿತು ಮಂಕಾಗಿದ್ದ, ಆಗಷ್ಟೆ ಸುನಯನಾ ಜೊತೆ ಕೊನೆ ಬಾರಿ ಮಾತನಾಡಿದ್ದ. ಐದು ವರ್ಷಗಳ ಪ್ರೀತಿಗೆ ಕೊನೆಯ ಮಾತಿನೊಂದಿಗೆ ಪರದೆ ಎಳೆದಿದ್ದಳು ಅವಳು. ಪ್ರತಾಪ್ ನೊಂದಿದ್ದ, ಕೆಲಸಕ್ಕೆ ನಾಲ್ಕು ದಿನ ರಜಾ ಹಾಕಿ ಹೋಗಲು ತೀರ್ಮಾನಿಸಿ ರಜಾ ಅರ್ಜಿ ರೆಡಿಮಾಡುತ್ತಿದ್ದ. ಆಗ ನೀತಾ ಮೆ ಐ ಕಮಿನ್ ಎನ್ನುತ್ತ ಬಾಗಿಲು ತಳ್ಳಿ ನಗುತ್ತ ಬಂದಳು, ಆದರೇ ಪ್ರತಾಪ್ ಮುಖನೋಡಿ ಒಮ್ಮೆ ದಿಗಿಲಾಯಿತು, ಮೌನ ಆವರಿಸಿತು ಇಬ್ಬರ ನಡುವೆ. ಪ್ರತಾಪ್ ಟೇಬಲ್ ಮೇಲಿನ ಲೀವ್ ಲೆಟರ್ … Read more

ನೆನಪಿನ ಪಯಣ – ಭಾಗ 3: ಪಾರ್ಥಸಾರಥಿ ಎನ್  

ಇಲ್ಲಿಯವರೆಗೆ ಆಗ ವಿಚಿತ್ರ ಗಮನಿಸಿದೆ,  ಜ್ಯೋತಿಗೆ ಸಂದ್ಯಾಳ ಮಾತು ಕೇಳಿಸುತ್ತಿದೆ ಎಂದು ನನಗನ್ನಿಸಲಿಲ್ಲ. ಹೀಗೇಕೆ ಆಕೆಯನ್ನು ನಾನು ಹಿಪ್ನಾಟಾಯಿಸ್ ಏನು ಮಾಡಿಲ್ಲ, ಮೊದಲಿಗೆ ನನಗೆ ಆ ಹಿಪ್ನಾಟೈಸ್ ಅಥವ ಸಂಮೋಹನ ವಿದ್ಯೆಯ ಬಗ್ಗೆ ಗೊತ್ತು ಇಲ್ಲ. ಆದರೆ ಇಲ್ಲಿ ಏನೋ ವಿಚಿತ್ರವಾದಂತಿದೆ  ನಾನು. ’ ಜ್ಯೋತಿ ಸಮಾದಾನ ಪಟ್ಟುಕೊಳ್ಳಿ ಅದೇಕೆ ಎಲ್ಲ ದುಃಖದ ವಿಷಯವನ್ನೆ ನೆನೆಯುತ್ತಿರುವಿರಿ, ನೀವು ಎದ್ದೇಳಿ, ಸ್ವಲ್ಪ ಕಾಪಿ ಕುಡಿಯಿರಿ ಮತ್ತೆಂದಾದರು , ಈ ಪ್ರಯೋಗ ಮುಂದುವರೆಸೋಣ, ಇಂದಿಗೆ ಸಾಕು ಅಲ್ಲವೇ' ಎಂದೆ ' … Read more

ಅಮ್ಮಾ ಕ್ಷಮಿಸು: ನಂದಾ ಹೆಗಡೆ

ದಿನಪತ್ರಿಕೆಯೊಂದಕ್ಕೆ ನನ್ನ ಅತ್ತೆಯವರ ಅಡಿಗೆ ರೆಸಿಪಿಯನ್ನ ಕಳುಹಿಸಿದ್ದೆ. ಆದರೆ ಈಗ ಆರು ತಿಂಗಳಿನಿಂದಲೂ ಪ್ರತೀ ವಾರ ಕಾಯುತ್ತಲೇ ಇದ್ದೇನೆ. ಆದರೆ ಅದು ಪ್ರಕಟವಾಗಲೇ ಇಲ್ಲ. 83 ವರ್ಷದ ನನ್ನ ಅತ್ತೆಯವರ ಜೀವನೋತ್ಸಾಹದ ಬಗ್ಗೆ ಚಿಕ್ಕ ಮಾಹಿತಿಯನ್ನೂ ಕೂಡ ಬರೆದು ಒಪ್ಪವಾಗಿಯೇ ಕಳುಹಿಸಿದ್ದೆ ಅಂದುಕೊಂಡಿದ್ದೆ. ಆದರೂ ಯಾಕೋ ಪ್ರಕಟವಾಗಲಿಲ್ಲ. . . . . . . . . ಅವರ ಮಾನದಂಡವೇನೋ. . . . . . . . ಅಂದುಕೊಳ್ಳುತ್ತಿರುವ ಹಾಗೇ ನನ್ನ ಉದ್ಯೋಗದ … Read more

ನೆನಪಿನ ಪಯಣ: ಬಾಗ – 2: ಪಾರ್ಥಸಾರಥಿ ಎನ್

ಇಲ್ಲಿಯವರೆಗೆ ನೆನಪಿನ ಪಯಣದ ಪ್ರಯೋಗ ಪ್ರಾರಂಭ:  ಆನಂದ ಹೇಳಿದಂತೆ ರೂಮಿನ ಮಂಚದಲ್ಲಿ ಜ್ಯೋತಿ ಮಲಗಿದಳು, ತಂಪಾಗಿರಲೆಂದೆ ಏಸಿ ಆನ್ ಮಾಡಿದೆವು. ಆನಂದನ ಪೀಯುಸಿ ಓದುತ್ತಿದ್ದ ಮಗ ಶಶಾಂಕ್ ಮನೆಯಲ್ಲಿರಲಿಲ್ಲ ಅವನ ಸ್ನೇಹಿತರ ಜೊತೆ ಯಾವುದೋ ಟೂರ್ ಅಂತ ಹೋಗಿದ್ದ. ಹಾಗಾಗಿ ನಮ್ಮಗಳದೆ ಸಾಮ್ರಾಜ್ಯ.  ಶ್ರೀನಿವಾಸಮೂರ್ತಿಗಳು ಮಾತ್ರ ಈಗಲೂ ಆತಂಕದಲ್ಲಿದ್ದರು ರೂಮಿನಲ್ಲಿ ಒಂದು ದೀಪ ಬಿಟ್ಟು ಎಲ್ಲ ದೀಪವನ್ನು ಆನಂದ ಆರಿಸಿದ. ಜ್ಯೋತಿ ಮಾತ್ರ ನಗುತ್ತಿದ್ದಳು. ಅವಳಿಗೆ ಎಂತದೊ ಮಕ್ಕಳ ಆಟದಂತೆ ತೋರುತ್ತಿತ್ತು ಅನ್ನಿಸುತ್ತೆ. ಜ್ಯೋತಿ ಆರಾಮವಾಗಿ ಅನ್ನುವಂತೆ … Read more

ನೆನಪಿನ ಪಯಣ:  ಬಾಗ – 1: ಪಾರ್ಥಸಾರಥಿ ಎನ್

  ಅದು ಪ್ರಾರಂಭವಾದುದೆಲ್ಲ ಸಾದಾರಣವಾಗಿಯೆ ! ಕೆಲವರಿಗೆ ಅದೊಂದು ವರ ದಿಂಬಿಗೆ ತಲೆಕೊಟ್ಟ ಕ್ಷಣವೇ ನಿದ್ದೆ ಆವರಿಸುವುದು.  ನನ್ನಂತ ಕೆಲವರ ಪಾಡು ಕಷ್ಟ , ಮಲಗಿ ಎಷ್ಟು ಕಾಲವಾದರು ಹತ್ತಿರ ಸುಳಿಯದ ನಿದ್ರಾದೇವಿ. ನಿದ್ರಾದೇವಿಯನ್ನು ಅಹ್ವಾನಿಸಲು ಹೊಸ ಹೊಸ ರೀತಿಯ ಪ್ರಯೋಗ.  ಒಮ್ಮೆ ಕೆಲವು ರಾತ್ರಿ  ನಿದ್ದೆ ಬರಲಿ ಎನ್ನುವ ಕಾರಣಕ್ಕೆ ಮನಸನ್ನು ಒಂದೇ ಕಡೆ ಕೇಂದ್ರಿಕರಿಸಲು ಪ್ರಯತ್ನಿಸುತ್ತ, ಬೆಳಗ್ಗೆಯಿಂದ ರಾತ್ರಿಯ ತನಕ ಏನೆಲ್ಲ ಆಯಿತು ಎಂದು ನೆನೆಯುತ್ತ ಹೋದೆ. ಯಾರುಯಾರ ಜೊತೆಯೆಲ್ಲ ಮಾತನಾಡಿದೆ, ಬೆಳಗಿನ ತಿಂಡಿ … Read more

ನನ್ನವಳು: ಗಿರಿಜಾ ಜ್ಞಾನಸುಂದರ್

   ಎಲ್ಲೋ ತುಂಬಾ ಸದ್ದು ಕೇಳಿಸುತ್ತಿರುವಂತೆ ಅನುಭವ. ಕಣ್ಣು ತೆರೆಯಲು ಆಗುತ್ತಲೇ ಇಲ್ಲ. ರೆಪ್ಪೆಗಳು ತುಂಬಾ ಭಾರ. ತನ್ನ ಮೈ ತನ್ನ ಮತ್ತೆ ಕೇಳುತ್ತಿಲ್ಲ ಅನ್ನಿಸುತ್ತಿದೆ. ತನ್ನಷ್ಟಕ್ಕೆ ತಾನು ಅತಿ ನೋವು ಅನುಭವಿಸುತ್ತಿದೆ. ಸುತ್ತಲೂ ಮಷೀನ್ ಗಳ ಶಬ್ದ. ತನಗೇನಾಗುತ್ತಿದೆ ಎಂದು ತಿಳಿದುಕೊಳ್ಳಲು ಕಷ್ಟವಾಗುತ್ತಿದೆ. ಸ್ವಲ್ಪ ಸಮಯ ತೆಗೆದುಕೊಂಡ ಮೇಲೆ ತಿಳಿಯುತ್ತಿದೆ ನಾನು ಆಸ್ಪತ್ರೆಯಾ ಐ ಸೀ ಯು ವಾರ್ಡ್ನಲ್ಲಿದ್ದೀನಿ ಎಂದು. ಎದೆನೋವೆಂದು ಹೇಳಿದ್ದೊಂದೇ ನೆನಪು. ಆಮೇಲೇನಾಯಿತೋ ಗೊತ್ತಿಲ್ಲ. ಆಸ್ಪತ್ರೆ ನನ್ನನ್ನು ಆಲಂಗಿಸಿದೆ. ತನ್ನ ಅರೋಗ್ಯ ಹದಗೆಟ್ಟಿದೆ … Read more

ಶಶಿ (ಕೊನೆಯ ಭಾಗ): ಗುರುರಾಜ ಕೊಡ್ಕಣಿ

ಇಲ್ಲಿಯವರೆಗೆ ಮರುದಿನ ಬೆಂಗಳೂರಿಗೆ ತೆರಳಿದ ನನಗೆ ಒಂದು ಗಳಿಗೆಯೂ ಪುರುಸೊತ್ತು ಇಲ್ಲದಂತಾಗಿತ್ತು. ಕಂಪನಿಯ ವಾರ್ಷಿಕ ಸಮ್ಮೇಳನದ ಸಮಾರಂಭದಲ್ಲಿ ನನಗೆ ಬೆಸ್ಟ್ ರೆಪ್ರಸೆಂಟಿಟಿವ್ ಆಫ್ ದಿ ಇಯರ್’ ಪ್ರಶಸ್ತಿ ಬಂದಾಗ ನನ್ನ ಸಂತೋಷ ಹೇಳತೀರದು. ಕಂಪನಿಗೆ ಸೇರಿದ ಎರಡೇ ವರ್ಷಗಳಲ್ಲಿ ಇಂಥದ್ದೊಂದು ಪ್ರಶಸ್ತಿ ಪಡೆದುಕೊಳ್ಳುವುದು ನಿಜಕ್ಕೂ ಹೆಮ್ಮೆಯ ಸಂಗತಿಯೇ ಆಗಿತ್ತು. ಪ್ರಶಸ್ತಿ ಫಲಕ , ಪ್ರಶಸ್ತಿಪತ್ರ ಸ್ವೀಕರಿಸಿ ಕಂಪನಿಯ ರೀಜನಲ್ ಮ್ಯಾನೇಜರಿನೊಂದಿಗೆ ಸೆಲ್ಫಿ ತೆಗೆಸಿಕೊಳ್ಳುವಷ್ಟರಲ್ಲಿ ರಿಂಗಣಿಸಿದ ಫೋನಿನ ತೆರೆಯ ಮೇಲೆ ’ಅಮ್ಮ’ಎಂದು ತೋರಿಸುತ್ತಿತ್ತು. ತಕ್ಷಣ ಕರೆಯನ್ನು ಕಟ್ ಮಾಡಿ … Read more

ಮಲ್ಲಿಗೆಯ ದಂಡೆಯನು ಹಿಂಡಿದರೆ: ವೃಂದಾ ಸಂಗಮ

“ಜ್ಞಾನಪೂರ್ಣಂ ಜ್ಞಾನಂ ಜ್ಯೋತಿ. ನಿರ್ಮಲವಾದ ಮನವೇ ಕರ್ಪೂರದಾರತಿ.“  ಅಕ್ಕನ ಬಳಗದ ಭಜನೆ ಹಾಡು ಕಿವಿಗೊಮ್ಮೆ ಬಿದ್ದಾಗ ಅಲ್ಲೇ ಬಾಜೂಕ, ಮಠದಾಗ ಕೂತಿದ್ದ ಸ್ವಾಮಿಗಳು ಮೈ ಕೊಡವಿದರು. ಪ್ರತಿ ದಿನ ಅಕ್ಕನ ಬಳಗದಾಗ ಸಂಜೀ ಮುಂದ ಎಲ್ಲಾ ಸದಸ್ಯರೂ ಮನೀಗೆ ಹೋಗೋ ಮುಂದ ಬಸವಣ್ಣಗ ಒಂದು ಆರತಿ ಮಾಡತಾರ. ಆವಾಗ ಎಷ್ಟೇ ಭಜನಿ ಹಾಡಿದ್ದರೂ ಸೈತ, ಆರತಿ ಮಾಡುವಾಗ, ಈ ಹಾಡು ಹಾಡೇ ಹಾಡತಾರ. ದಿನಾ ಕೇಳೋ ಹಾಡೇ ಆದರೂ ಇವತ್ತ ಯಾಕೋ ಅವರ ಮನಸಿಗೆ ಚುಳುಕ್ ಅಂತು. … Read more

ಶಶಿ (ಭಾಗ 2): ಗುರುರಾಜ ಕೊಡ್ಕಣಿ

ಇಲ್ಲಿಯವರೆಗೆ ಅಂದು ರಾತ್ರಿಯಿಡಿ ನಾನು ಶಶಿಯ ಬಗ್ಗೆ ಯೋಚಿಸುತ್ತಿದ್ದೆ. ಅವರ ಮನೆಯಲ್ಲಿ ನಡೆದ ಜಗಳ ಶಶಿಯ ಕುರಿತಾಗಿಯೇ ನಡೆದದ್ದು ಎನ್ನುವುದು ನನಗೆ ಬಹುತೇಕ ಖಚಿತವಾಗಿತ್ತು. ಇಬ್ಬರು ಹೆಣ್ಣುಮಕ್ಕಳ ಮದುವೆಯ ನಂತರ ನಂಜಮ್ಮನ ಮನೆಯಲ್ಲಿದ್ದಿದ್ದು ಶಶಿ, ಫಕೀರಪ್ಪ ಮತ್ತು ಆಶಾ ಮಾತ್ರ. ಅವರಿಬ್ಬರೂ ಮೂರನೆಯ ಹೆಂಗಸಿನ ಮೇಲೆ ಕೂಗಾಡುತ್ತಿದ್ದರೆಂದರೆ ಅದು ಶಶಿಯೇ ಆಗಿರಬೇಕೆನ್ನುವ ಅಂದಾಜು ನನಗಾಗಿತ್ತು. ಗುದ್ದಿದ್ದು ಸಹ ಶಶಿಯನ್ನೇ ಎಂಬುದು ಊಹಿಸಿಕೊಂಡಾಗ ನಿಜಕ್ಕೂ ನನಗೆ ಕಸಿವಿಸಿಯಾಯಿತು. ಅಂಥಹ ತಪ್ಪು ಅವಳೇನು ಮಾಡಿದ್ದಳೆಂದು ಊಹಿಸಲಾಗದೇ , ತೊಳಲಾಟದಲ್ಲಿಯೇ ನಿದ್ರೆ … Read more