ಥ್ರೀರೋಜಸ್ ಕಥೆ (ಭಾಗ 2): ಸಾವಿತ್ರಿ ವಿ. ಹಟ್ಟಿ

  ಇಲ್ಲಿಯವರೆಗೆ… ಮೊದಲನೇ ಕಿರು ಪರೀಕ್ಷೆಗಳು ಮುಗಿದಿದ್ದವು. ಅವತ್ತು ಶನಿವಾರ. ಕೊನೆಯಲ್ಲಿ ಆಟದ ಅವಧಿ ಇತ್ತು. ಏಕೋ ಆಟದಲ್ಲಿ ತೊಡಗಿಕೊಳ್ಳಲು ಮನಸ್ಸು ಬರಲಿಲ್ಲ. ನನ್ನ ವಾಸದ ಕೋಣೆಗೆ ಹೋಗಿ ಅಕ್ಕಿ ತೊಳೆದು, ಒಲೆ ಹೊತ್ತಿಸಿಟ್ಟೆ. ಅನ್ನ ಬೇಯುವಷ್ಟರಲ್ಲಿ ರವೀಂದ್ರ ಕಲ್ಲಯ್ಯಜ್ಜನವರ ಖಾನಾವಳಿಯಿಂದ ಕೆಟ್ಟ ಖಾರದ ರುಚಿಯಾದ ಸಾರು ತಂದಿರಿಸಿದ್ದ. ಊಟದ ನಂತರ, ಸಾಕಷ್ಟು ಸಮಯವಿದ್ದುದರಿಂದ ಒಂದೆರಡು ತಾಸು ಚೆಂದಗೆ ನಿದ್ದೆ ಮಾಡಿಬಿಟ್ಟೆ. ಎಚ್ಚರವಾದಾಗ ಕೋಣೆಯಲ್ಲಿ ರವೀ ಇರಲಿಲ್ಲ. ಅವನು ಸಮಯ ಸಿಕ್ಕಾಗೆಲ್ಲ ಗೆಳೆಯರನ್ನು ಹುಡುಕಿಕೊಂಡು ಹೋಗುವವನು. ಎಲ್ಲಿದ್ದಾನೆಂದು … Read more

ಪರಶುವಿನ ದೇವರು: ಶಾಂತಿ ಕೆ. ಅಪ್ಪಣ್ಣ

ಪರಶುವಿಗೆ ದೇವರು ಬಂದಾಗ ಡೊಳ್ಳನ ಕೇರಿಯ ಜನ ಅದಿನ್ನೂ ತಂತಮ್ಮ ಕೆಲಸಗಳಿಂದ ಮರಳಿ ದಣಿವಾರಿಸಿಕೊಳ್ಳುತ್ತ,  ಅಲ್ಲಲ್ಲೆ ಜಗುಲಿ ಕಟ್ಟೆಯ ಮೇಲೆ ಕುಳಿತು ಗಂಡಸರು ಬೀಡಿಯ ಝುರುಕಿ ಎಳೆದು ಕೊಳ್ಳುತ್ತಿದ್ದರೆ, ಹೆಂಗಸರು ಒಂದು ಬಾಯಿ ಕಾಫಿ ಕುಡಿಯುವ ಆತುರಕ್ಕೆ ಒಳಗೆ ಒಲೆ ಹಚ್ಚುವ ಕೆಲಸದಲ್ಲಿ ತೊಡಗಿದ್ದರು. ಮೊದಲಿನಂತೆ ಚೂರುಪಾರು ಸೌದೆ ತಂದು ಪ್ರಯಾಸದಿಂದ ಒಲೆ ಹಚ್ಚುವ ಕೆಲಸವೇನೂ ಈಗಿರಲಿಲ್ಲ, ಊರು ನಾಡು ಕಾಣುತ್ತಿದ್ದ ಬದಲಾವಣೆಯ ಗಾಳಿ ಯಾವುದೇ ತಕರಾರು ಮಾಡದೆ ಕೇರಿಯೊಳಗೂ ನುಸುಳಿ ಅಲ್ಲೂ ಅಲ್ಪಸ್ವಲ್ಪ ಬದಲಿಕೆ ತರತೊಡಗಿತ್ತು. … Read more

ಥ್ರೀರೋಜಸ್ ಕಥೆ: ಸಾವಿತ್ರಿ ವಿ. ಹಟ್ಟಿ

ನನ್ನವಳಿಗೆ ನಾನೇನೂ ಕಡಿಮೆ ಮಾಡಿಲ್ಲ. ಅವಳು ನಮ್ಮ ತುಂಬು ಮನೆತನಕ್ಕೆ ಏಕೈಕ ಸೊಸೆ. ಸದ್ಯಕ್ಕೆ ನನಗೆ ಅವಳೇ ಮಗಳೂ, ಮಗನೂ ಇದ್ದ ಹಾಗೆ ಕೂಡ. ತಂದೆ ಉಮಾಶಂಕರ ತಾಯಿ ಗೌರಮ್ಮನವರಿಗೆ ಏಕೈಕ ಸುಪುತ್ರನಾಗಿರುವ ನಾನು ಈ ಗೊಂಬೆಯನ್ನು ಕೈ ಮಾಡಿ ತೋರಿಸಿ, ನನಗೆ ಬೇಕು ಎಂದಾಗ ಅಪ್ಪ ಮೌನವಾಗಿ ನನ್ನನ್ನೇ ನೋಡಿದ್ದರು ವಿಸ್ಮಯದಿಂದ. ಅವ್ವ ಹನಿಗಣ್ಣಳಾಗಿದ್ದರೂ ನಂತರ ನನ್ನ ಆಸೆಗೆ ಬೇಡ ಎನ್ನಲಿಲ್ಲ. ನಾನು ಚಿಕ್ಕವನಿದ್ದಾಗ ಏನೆಲ್ಲ ಕೇಳಿದರೂ ಇಲ್ಲವೆನ್ನದೇ ಕೊಡಿಸುತ್ತಿದ್ದರು ತಂದೆ-ತಾಯಿ. ನನ್ನ ಜೀವನದ ಎರಡನೇ … Read more

ನ್ಯಾನೋ ಕತೆಗಳು: ನವೀನ್ ಮಧುಗಿರಿ

ಪ್ರೇಮಿಗಳು ಇಬ್ಬರೂ ಮೌನವಾಗಿ ಕುಳಿತಿದ್ದರು. ಮುಂದೇನು ಮಾಡುವುದೆಂದು ಇಬ್ಬರಿಗೂ ತೋಚುತ್ತಿಲ್ಲ. ಜಾತಿಯ ನೆಪವೊಡ್ಡಿ ಎರಡೂ ಮನೆಯವರು ಪ್ರೇಮಿಗಳನ್ನು ದೂರ ಮಾಡಲು ಯತ್ನಿಸುತ್ತಿದ್ದರು. "ಮುಂದೇನು ಮಾಡುವುದು?" ಹುಡುಗಿ ಪ್ರಶ್ನಿಸಿದಳು. "ಗೊತ್ತಿಲ್ಲ, ಏನೊಂದು ತೋಚುತ್ತಿಲ್ಲ" ಹುಡುಗ ಉತ್ತರಿಸಿದ. "ಎಲ್ಲಾದರೂ ದೂರ ಹೋಗಿ ಜೊತೆಯಾಗಿ ಬದುಕೋಣ" "ಬದುಕು ಎರಡೂವರೆ ಗಂಟೆಯ ಸಿನಿಮಾವಲ್ಲ" "ಹಾಗಾದರೆ ನಾವು ಪ್ರೀತಿಸಿದ್ದಾದರೂ ಯಾಕೆ?" ಹುಡುಗಿಯ ಕಣ್ಣಲ್ಲಿ ನೀರು ತುಂಬಿತ್ತು. ಅವಳ ಕಣ್ಣಲ್ಲಿನ ನೋವು ಗುರುತಿಸಿದ. ಎದೆಗೆ ಕೊಳ್ಳಿಯಿಂದ ತಿವಿದಂತಾಯ್ತು, ನೋವಿನಿಂದಲೇ ನುಡಿದ "ಜೊತೆಯಾಗಿ ಬದುಕೋಣವೆಂದು, ಆದರೆ.." "ಆದರೆ … Read more

ವೀಣಾ: ಶ್ರೀಮಂತ್ ಎಮ್. ಯನಗುಂಟಿ

’ಏ ಮಾಮು ಏಳೋ ಇನ್ನು ಎಷ್ಟೊತ್ತು ಮಲಗ್ತೀಯಾ’ ರಾತ್ರಿಯೆಲ್ಲಾ ಸೀಟು ಸಿಗದೆ ನಿಂತುಕೊಡಿದ್ದವನಿಗೆ ನಸುಕಿನ ಮೂರು ಗಂಟೆಯಲ್ಲೊಂದು ಸೀಟು ಸಿಕ್ಕಿತ್ತು. ನಿದ್ದೆಬರುವುದಿಲ್ಲ ಅಂತ ಗೊತ್ತಿತ್ತು. ಆದರೂ ಸುಮ್ಮನೆ ಬೋರಲಾಗಿ ಮಲಗಿದ್ದೆ. ಯಾರೋ ಚಪ್ಪಾಳೆ ಹಾಕುತ್ತಾ ಮೈದಡವಿದಂತಾಯ್ತು. ಎದ್ದು ಸಮಯ ನೋಡಿದೆ ಇನ್ನೂ ಗಂಟೆಯ ಮುಳ್ಳು ಐದನ್ನೆ ದಾಟಿರಲಿಲ್ಲ. ಸ್ವಲ್ಪ ಹಿಂತಿರುಗಿ ನೋಡಿದೆ. ಮಂಗಳಮುಖಿಯೊಬ್ಬಳು ಬಹಳ ಸಹಜವೆಂಬಂತೆ ಮಾಮೂಲಿ ಕೇಳಲು ಬಂದಿದ್ದಳು.  "ರೀ ನಿಮಗೆ ಹೊತ್ತು ಗೊತ್ತು ಏನೂ ಇಲ್ವಾ. ಇಗಲಾದ್ರೂ ಮಲಗಿದ್ದಿನಿ ನಿಮ್ಮದೊಳ್ಳೆ ಸಹವಾಸ" ಎಂದು ನಿದ್ದೆಯಲ್ಲಿ ಗೊಣಗುತ್ತಲೇ … Read more

ಮನಸ್ವಿನಿ: ಅಭಿಲಾಷ್ ಟಿ ಬಿ

ಕುರಿಗಾಹಿಯೊಬ್ಬನು ತನ್ನ ಎಲ್ಲಾ ಕುರಿಗಳನ್ನು ಒ೦ದೇ ಕಡೆ ಮೇಯಿಸಲು ಹೊರಟನೆ೦ದರೆ ಅದು ಬಯಲುಸೀಮೆಯೇ ಆಗಿರುತ್ತದೆ. ಬರ, ಕ್ಷಾಮ, ಅನಾವೃಷ್ಠಿ, ಅಭಾವ, ಇವರಿಗೆ ಸಾಮಾನ್ಯವಾಗಿ ಹೋಗಿದೆ. ಈ ಕಾರಣಕ್ಕಾಗಿ ಬಯಲುಸೀಮೆಯ ಕೆರೆಗಳಿಗೆ  ಸರ್ಕಾರ ಅಣೆಕಟ್ಟುಗಳಿ೦ದ ನಾಲೆಗಳ ಮುಖಾ೦ತರ ಜೀವಜಲವನ್ನು ಒದಗಿಸುತ್ತಿದೆ. ಕಲ್ಲೂರು, ಗ೦ಗರ, ಚ೦ದ್ರಾಪುರ, ಬೆಣ್ಣೆನಹಳ್ಳಿ,..ಒ೦ದೇ ಎರಡೇ, ಇ೦ತಹ ನೂರಾರು ಹಳ್ಳಿಯ ಜನರು, ಜಾನುವಾರುಗಳು ರಾಮನಿಗಾಗಿ ಶಬರಿ ಕಾಯುವ ಹಾಗೆ ನೀರಿಗಾಗಿ ಕಾಯುತ್ತಿರುತ್ತಾರೆ. ಈ ನೀರಿಗಾಗಿ ಕಾಯುತ್ತಿರುವ ಜನರು, ಎಮ್ಮೆಗಳೂ, ಹೋತಗಳು, ಬಸವಿಗಳು, ಟಗರುಗಳು, ಹಸುಗಳ ಪೈಕಿ ಸತ್ಯವೇ … Read more

ಬಣ್ಣದ ಸಂಜೆ: ಪ್ರಸಾದ್ ಕೆ.

ಬಾನಿನಲ್ಲಿ ಬಣ್ಣಗಳು ಮಾತಾಡತೊಡಗಿದ್ದವು.  ಹೋಳಿ ಹಬ್ಬದ ಸಂಜೆ. ಅವನು ಒಂದರ ಹಿಂದೊಂದು ಸಿಗರೇಟುಗಳನ್ನು ಸುಡುತ್ತಾ ಸುಮ್ಮನೆ ಸಮುದ್ರವನ್ನು ದಿಟ್ಟಿಸುತ್ತಿದ್ದ. ಮಾತನಾಡುವುದಕ್ಕೇನೂ ಇಲ್ಲವೆಂಬಂತೆ ಅವಳೂ ತುಟಿ ಬಿಚ್ಚಲಿಲ್ಲ. ಹನ್ನೊಂದು ವರ್ಷಗಳ ಸುದೀರ್ಘ ಅವಧಿಯ ನಂತರ ಇಬ್ಬರೂ ಆಕಸ್ಮಿಕವಾಗಿ ಪಣಂಬೂರಿನ ಸಮುದ್ರತಟದಲ್ಲಿ ಎದುರುಬದುರಾಗಿದ್ದರು. ಅವನು ಸರಕಾರಿ ಕಂಪೆನಿಯೊಂದರಲ್ಲಿ ಉದ್ಯೋಗಿ. ಅವಳು ನಗರದಲ್ಲಿ ತಳವೂರುತ್ತಿರುವ ದಂತ ವೈದ್ಯೆ. ಅಂದಹಾಗೆ ಇಬ್ಬರೂ ಒಂದಾನೊಂದು ಕಾಲದಲ್ಲಿ ಪ್ರೇಮಿಗಳು.  ಎಷ್ಟು ಚೆನ್ನಾಗಿದ್ದ ಇವ ಥೇಟು ಶಾರೂಖನಂತೆ, ಚಾಕ್ಲೇಟು ಬಾಯ್ ಇಮೇಜ್ ಇದ್ದ ಹುಡುಗ. ಒಣಕಲಾಗಿ ಹೋಗಿದ್ದಾನೆ. … Read more

ಪಾದಗಟ್ಟಿ: ಆನಂದ ಈ. ಕುಂಚನೂರ

    II ಶ್ರೀ ಕಾಡಸಿದ್ಧೇಶ್ವರ ಪ್ರಸನ್ನ II ದಿ: 13-09-2010 ಮಾನ್ಯರೇ, ನಮ್ಮೂರಿನ ಮಗನಂತಿದ್ದ ಶ್ರೀ ಕಾಡಸಿದ್ಧೇಶ್ವರರ ವರಪುತ್ರನೆನೆಸಿದ್ದ ಕಾಡಪ್ಪನು  ನಿನ್ನೆ ರಾತ್ರಿ 2 ಗಂಟೆಗೆ ವಿಧಿವಶನಾಗಿರುತ್ತಾನೆ ಎಂದು ತಿಳಿಸಲು ವಿಷಾದವೆನಿಸುತ್ತದೆ. ಇಂದು ಮುಂಜಾನೆ 10 ಗಂಟೆಗೆ ನಡೆಯುವ ಅವನ ಅಂತ್ಯಕ್ರಿಯೆಯಲ್ಲಿ ಎಲ್ಲರೂ ಭಾಗವಹಿಸಬೇಕೆಂದು ವಿನಂತಿ.   –  ಬನಹಟ್ಟಿಯ ದೈವಮಂಡಳಿ. ಹೀಗೊಂದು ಸಂಗತಿ ಊರಿನ ಪ್ರಮುಖ ನಾಮಫಲಕಗಳ ಮೇಲೆ ರಾರಾಜಿಸುತ್ತಲೇ ಎಲ್ಲರ ಗಂಟಲು ಉಬ್ಬಿಬಂದಿದ್ದುವು. 'ಯವ್ವಾs, ದೈವದ ಮಗಾsನ ಹ್ವಾದಲ್ಲಬೇ…' ಎಂದು ಹೆಂಗಸರು ಜಮಾಯಿಸುವುದರೊಂದಿಗೆ, 'ಈ … Read more

ಇದುವೇ ಜೀವನ: ಪಾರ್ಥಸಾರಥಿ ಎನ್.

ಬೀ ಪ್ರಾಕ್ಟಿಕಲ್ ಮ್ಯಾನ್,  ನೋಡಿ ಇದಕ್ಕಿಂತ ಬೇರೆ ನಿರ್ದಾರ ತೆಗೆದುಕೊಳ್ಳುವುದು ಸಾದ್ಯವಿಲ್ಲ, ಯೋಚಿಸಿ ಡಾ!!ಜೋಷಿ ಹೇಳುತ್ತಿರುವಾಗ , ಮಧು ಗರಬಡಿದವನಂತೆ ಕುಳಿತಿದ್ದ,  ಏನಾಯಿತು ?  ತನ್ನ ಹಾಗು ಕೀರ್ತಿಯ ಕನಸುಗಳೆಲ್ಲ ಕರಗಿ ಹೀಗೆ ವಿಕಾರವಾಗುವದೆಂಬ ನಿರೀಕ್ಷೆಯು ಅವನಿಗಿರಲಿಲ್ಲ.  ಅಪ್ಪ ಅಮ್ಮ ನೋಡಿ ತಾನು ಮೆಚ್ಚಿ ಮದುವೆಯಾದ ಪ್ರೀತಿಯ ಪತ್ನಿ ಕೀರ್ತಿ. ಮದುವೆಯಾಗಿ ಆರು ವರ್ಷಗಳ ನಂತರ ತಾನು ತಂದೆಯಾಗುತ್ತಿರುವ ಸಮಾಚಾರ ತಿಳಿದಾಗ ಕುಣಿದಾಡಿಬಿಟ್ಟಿದ್ದ. ಮದುವೆಯಾದ ಮೊದಲು ಮೂರುವರ್ಷ ಮಕ್ಕಳು ಬೇಡವೆಂದು ಮುಂದೆ ಹಾಕಿದ್ದಾಗಿತ್ತು, ನಂತರ ಮೂರು ವರ್ಷ … Read more

ನೆನಪುಗಳ ಮಾತು ಮಧುರ!: ರುಕ್ಮಿಣಿ ನಾಗಣ್ಣನವರ

ಎಷ್ಟು ಹೊತ್ತಾಯಿತು ಬಸ್ಸಿನಲ್ಲಿ ಕುಳಿತು. ಯಾವಾಗ ಬಿಡುತ್ತೀರಿ? ನಮಗಿನ್ನೂ ತುಂಬ ಮುಂದೆ ಹೋಗಬೇಕಿದೆ. ನನ್ನ ಹಿಂದಿನ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ತನ್ನ ಅಸಮಾಧಾನ ವ್ಯಕ್ತಪಡಿಸುತ್ತ ಕಂಡಕ್ಟರ್ನನ್ನು ದಬಾಯಿಸಿ ಕೇಳುತ್ತಿದ್ದ. ಬೇಗ ಬಿಡಿ ಸರ್ ತುಂಬ ಹೊತ್ತಾಯಿತಲ್ಲ ಎಂದು ಇನ್ನೇನು ನಾನೂ ಹೇಳಬೇಕು ಎನ್ನುವಷ್ಟರಲ್ಲಿ ಅಪ್ಪಯ್ಯನ ಕಾಲು ಬಂತು. ಹೊರಟ್ರ ಅಂತ ಕೇಳುತ್ತಿದ್ದರು. ಹೌದು. ಬಸ್ಸಿನಲ್ಲಿದ್ದೇನೆ. ಅವರಿಗೆ ರಜೆ ಸಿಕ್ಕಿಲ್ವಂತೆ ನಾಳೆ ಬರ್ತಾರೆ ಅಪ್ಪ ಅಂದೆ. ಆಯ್ತು. ಹುಷಾರಾಗಿ ಬಾ ಅಂತ ಹೇಳಿ ಕಾಲ್ ಕಟ್ ಮಾಡಿದ್ರು. ಕಿಟಕಿ … Read more

ಮತಿಭ್ರಮಣೆ: ಶಿವಕುಮಾರ ಚನ್ನಪ್ಪನವರ

ಪೆಣ್ಣು, ಪೆಣ್ಣೆಂದೇಕೆ ಬೀಳುಗಳೆವರು ಕಣ್ಣು ಕಾಣದ ಗಾವಿಲರು  -ಸಂಚಿ ಹೊನ್ನಮ್ಮ ತಾನು ಸೋಮುವಿಗೆ ಹೀಗೆನ್ನಬಾರದಿತ್ತು. ಪಾಪ ಎಷ್ಟು ನೊಂದುಕೊಂಡನೋ ಏನೋ……? ತಾನೇ ಸಾಕಿ ಬೆಳೆಸಿದ ಕೂಸು ಆದರೂ ಅವನು ಹದ್ದುಮೀರಿ ಮಾತಾಡಿದ್ದ. ಬೇಡವೆಂದರೂ ಕೇಳದೇ ಹೆಂಡತಿಯ ಭ್ರೂಣಪತ್ತೆಯ ಕೆಲಸಕ್ಕೆ ಕೈ ಹಾಕಿದ್ದಿರಬಹುದು, ತಮ್ಮ ತಾಯಿಗೆ ಗಂಡು ಮಗುವೇ ಬೇಕೆಂದು, ತನಗೂ ಅದೇ ಇಷ್ಟವಿದೆಯೆಂದು, ಹಟ ಹಿಡಿದು ಈ ಸಲ ಹೆಣ್ಣಾದರೆ ಆಪರೇಷನ್ ಮಾಡಿಸದೇ ಮುಂದಿನದಕ್ಕೆ ಬಿಡಬೇಕೆಂದು ಹಟ ಹಿಡಿದದ್ದು ತಪ್ಪಲ್ಲವೇ……?, ಡಾಕ್ಟರು ಇದು ಎರಡನೇ ಬಾರಿ ಸಿಜೇರಿಯನ್ … Read more

ಚಲರೇ ಭೋಪಳ್ಯಾ ಟುಣಕ್-ಟುಣಕ್ (ಆಡಿಯೋ ಕತೆ): ಸುಮನ್ ದೇಸಾಯಿ

ಒಂದು ಭಯಂಕರ ದಟ್ಟ ಜಂಗಲ್ ಇತ್ತು. ಆಲ. ಹಲಸು, ಹುಣಸೆ, ಮಾವು ಸೊಗೆ, ದೊಡ್ಡ ದೊಡ್ಡ ಮರ ಇದ್ವು. ಅದೆಷ್ಟು ದಟ್ಟ ಇತ್ತಂದರ. ಮಟಾ ಮಟಾ ಮಧ್ಯಾಹ್ನದಾಗು ಸೂರ್ಯನ ಬೆಳಕಿಗೂ ಒಳಗ ಬರಲಿಕಕ್ಕೆ ಜಾಗ ಇದ್ದಿಲ್ಲ. ಆ ಕಾಡಿನ ತುಂಬ ಪ್ರಾಣಿಗಳು ಭಾಳ ಇದ್ವು. ಕಾಡಿಗೆ ಹಚ್ಚಿ ಇನ್ನೊಂದು ಕಡೆ ಸುಂದರ ಸರೋವರ ಇತ್ತು. ಸರೋವರದ ಇನ್ನೊಂದು ಕಡೆ ಒಂದು ಪುಟ್ಟ ಹಳ್ಳಿ ಇತ್ತು. ಅಲ್ಲಿಯ ಜನ ಯಾವಾಗಲೂ ಕಾಡಿನ ಭಯದಿಂದ ಜೀವ ಕೈಯ್ಯೊಳಗ ಹಿಡಕೊಂಡನ ಜೀವನ … Read more

ಮೌನ ತಳೆದ ಹುಡುಗಿ: ರುಕ್ಮಿಣಿ ನಾಗಣ್ಣವರ

ಆಗಷ್ಟೆ ಬೆಳಕಿನ ಬೆನ್ನಿಗೆ ಕತ್ತಲು ಪತ್ತಲ ಹಾಸುತ್ತಿತ್ತು. ಮಿಣಮಿಣ ಮಿನುಗುವ ತಾರೆಗಳು ಚಂದ್ರನೊಂದಿಗೆ ಕಣ್ಣಾ ಮುಚ್ಚಾಲೆ ಆಡಲು ಸಿದ್ಧವಾಗಿದ್ದವು. ಚಂದ್ರನೋ, ತಾರೆಗಳ ಬಳಗದಿಂದ ತಪ್ಪಿಸಿಕೊಂಡವನಂತೆ ರಮೇಶನ ಕೋಣೆಯನ್ನೇ ಇಣುಕಿ ಇಣುಕಿ ನೋಡುತ್ತಿದ್ದ. ದೀಪ ಹಚ್ಚದ ಕೋಣೆಯಲ್ಲಿ ಕತ್ತಲ ತೆಕ್ಕೆಯೊಳಗೆ ರಮೇಶ್ ಗಾಢ ಮೌನಕ್ಕೆ ಶರಣಾಗಿದ್ದ. ಮನದ ಮೈದಾನದಲಿ ಜಾನಕಿಯೆಡೆಗಿನ ವಿಚಾರಗಳು ಕಾಳಗದ ಹೋರಿಯಂತೆ ಕಾದಾಟ ನಡೆಸಿದ್ದವು. ಅರಳು ಹುರಿದಂತೆ ಮಾತಾಡುವ ಜಾನಕಿ ಕಳೆದ ಆರು ತಿಂಗಳಿನಿಂದ ಮೌನವಾಗಿದ್ದಳು. ಆ ದೀರ್ಘಮೌನ ರಮೇಶನನ್ನು ಭಾದಿಸುತ್ತಿತ್ತು.  ತಲೆ ಚಿಟ್ಟೆನ್ನುವ ಅಸಹನೆ. … Read more

ನಮ್ಮ ಇಂದ್ರಿ ಕತಿ: ರುಕ್ಮಿಣಿ ನಾಗಣ್ಣವರ

ಕೆಲಸದ ಮ್ಯಾಲ ಹೆಡ್ ಆಫಿಸಿಗಿ ಹ್ವಾದ್ರ ನನ್ನದಲ್ಲದ ಕೆಲಸಾನೂ ನಾ ಮಾಡಬೇಕಾಗಿ ಬರ್ತದ. ಮನ್ನಿ ಮನ್ನೆರ ಕಂಪ್ಯೂಟರ್ ಕೆಲಸಕಂತ ಒಬ್ಬ ಹುಡುಗನ ನೇಮಿಸ್ಯಾರ.  ಅದೇನೋ ಡಿಪ್ಲೊಮಾ ಕೋರ್ಸ್ ಮುಗಿಸ್ಯಾನಂತ. ಆ ಊರ ಪಲ್ಲಾಳಗಿತ್ತಿ ಪದ್ದಿ ಬಾಯಾಗಿಂದ ಕೇಳಿದ ಸುದ್ದಿ. ಡಿಪ್ಲೊಮಾ ಮುಗಿಸಿದ ಹುಡಗ ಇಲ್ಲಿ ಇವರ ಕೊಡು ಯಾಡ ಸಾವಿರಕ ಅವರ ಅಂದಿದ್ದ ಅನಿಸ್ಕೊಂಡ ನಾಯಿಗಿಂತ ಕಡೆ ಆಗಿ ಯಾಕ ಸಾಯ್ಲಿಕ್ ಬಂದಾನೊ? ಅಂತ ನನಗ ಅನಿಸಿದ್ದೂ ಅದ. ಅವನ ಮಾರಿ ನೋಡಿದರ ಅಯ್ಯೋ ಪಾಪ! ಅನಿಸಿ … Read more

ಅಗ್ನಿ: ಬೆಳ್ಳಾಲ ಗೋಪಿನಾಥ ರಾವ್

       ೧. ಬಲಿ   ಚಂದ್ರ ಹಾಸ ಮತ್ತೊಮ್ಮೆ ತಲೆ ಕೆರೆದುಕೊಂಡ.   ಎರಡಸ್ಥಂತಿನ  ಭದ್ರ ಬುನಾದಿ ಎಬ್ಬಿಸಿ ಕಟ್ಟಿಸಿದ ಈ ಕಟ್ಟೋಣ    ಅಲುಗಾಡುವದೆಂದರೇನು?  ಅರ್ಥವಾಗಲಿಲ್ಲ.     ಚೈತ್ರಂಗೆ ಹೇಳೋಣವೆಂದುಕೊಂಡ ಮತ್ತೆ ನಕ್ಕಾಳು.  ನಿನ್ನೆ ಹಲ್ಲಿನ ವೈದ್ಯರು ಕೊಟ್ಟ  ಮಾತ್ರೆಯದ್ದೇನಾದರೂ ಸೈಡ್ ಎಫೆಕ್ಟ್ ಆಗಿರಬಹುದಾ.   ಸ್ವಲ್ಪ ಮತ್ತಿನಲ್ಲಿದ್ದವರ ಹಾಗಿದ್ದೀರಾ ಚೈತ್ರನ ರಾತ್ರೆಯ ಮಾತು ನೆನಪಾಯ್ತು.  ಕಣ್ಣೂ ನಿಚ್ಚಳವಾಗಿ ಕಾಣ್ತಾ ಇದೆ.  ಚಿವುಟಿಕೊಂಡ.   ಇಲ್ಲ ಸರಿಯಾಗಿ ನೋವಾಗ್ತಾ ಇದೆ.  ಮತ್ತೆ,,?  … Read more

ಕಿರು ಕತೆಗಳು: ನವೀನ್ ಮಧುಗಿರಿ, ಮುಕುಂದ್ ಎಸ್.

ಚಪ್ಪಾಳೆ ಇಡೀ ಶಾಲೆಗೇ ವರ್ಷದ ಉತ್ತಮ ಪ್ರತಿಭಾವಂತ ವಿದ್ಯಾರ್ಥಿ ಎಂದು ಮಗ ವೇದಿಕೆಯ ಮೇಲೆ ಪ್ರಶಸ್ತಿಯನ್ನು ಪಡೆವಾಗಯುವಾಗ, ಪೋಷಕರ ಸಾಲಿನಲ್ಲಿ ಕುಳಿತ ಅವನ ಕುರುಡು ತಂದೆ ಸಂತಸದಿಂದ ಎಲ್ಲರೊಟ್ಟಿಗೆ ಚಪ್ಪಾಳೆ ತಟ್ಟಿದರು. *** ನಾಯಿ ಆ ಮನೆಯಲ್ಲಿ ಅದು ಊಟದ ಸಮಯ. ಗಂಡ ಊಟಕ್ಕೆ ಕುಳಿತಿದ್ದ, ಹೆಂಡತಿ ಬಡಿಸುತ್ತಿದ್ದಳು. ಎರಡು ತುತ್ತು ತಿನ್ನುವಾಗ ಗಂಡ ತನ್ನ ಮಾಮೂಲಿ ಗೊಣಗಾಟವನ್ನ ಶುರು ಮಾಡಿದ. ಅನ್ನ ಯಾಕಿಷ್ಟು ಮೆತ್ತಗೆ ಮಾಡಿದ್ದೀಯ?  ಸಾರಿಗೆ ಉಪ್ಪು ಕಡಿಮೆ. ಪಲ್ಯ ತುಂಬಾ ಖಾರ ಖಾರ. … Read more

ಸಾವಿರದ ನೋಟು: ಗಣೇಶ್ ಖರೆ

ಬೆಂಗಳೂರಿನ ರಸ್ತೆಯ ಮೂಲೆಯಲ್ಲಿ ಡೊಂಬರಾಟದವರು ತಮ್ಮ ಕಸರತ್ತು ತೋರಿಸುವಲ್ಲಿ ನಿರತರಾಗಿದ್ದರು. ನೋಡಿದರೆ ಯಾವುದೋ ಹಳ್ಳಿಯ ಮೂಲೆಯಿಂದ ಬಂದವರಂತೆ ಅವರ ವೇಶ ಭೂಶಣವಿತ್ತು. ಹಗ್ಗದ ಮೇಲೆ ನಡೆಯುವುದು, ಗೋಲಕದೊಳಗೆ  ತಮ್ಮ ಮೈಯ್ಯನ್ನು ತೂರಿಸುವುದು, ತಲೆ ಕೆಳಗಾಗಿ ಕೈಯ್ಯ ಮೇಲೆ ನಡೆಯುವುದು ಹೀಗೆ ಕಸರತ್ತು ಸಾಗಿತ್ತು. ಸಿಗುವ ಬಿಡಿ ಕಾಸಿಗಾಗಿ ಜೀವವನ್ನು ಪಣಕ್ಕಿಟ್ಟು ಮಾಡುವ ಕಸರತ್ತು ಜನರನ್ನು ಅವರತ್ತ ಆಕರ್ಷಿಸುತ್ತಿತ್ತು. ಡೊಂಬರಾಟದ ಗುಂಪಲ್ಲಿ ಇದ್ದದ್ದು ಮೂರು ಜನ, ಎಲ್ಲರೂ ಹೆಂಗಸರೇ. ಒಬ್ಬಳಿಗೆ ಸುಮಾರು ಮೂರರಿಂದ ನಾಲ್ಕು ವಯಸ್ಸಿರರಬಹುದು, ನೋಡೊಕೆ ಮುಗ್ಧ … Read more

ನೈಸ್ ರೋಡ್ ಮತ್ತು ಹೈವೇ ಕಳ್ಳರು: ವೀರ್ ಸಂತೋಷ್

ಸುಮಾರು ವರ್ಷಗಳ ಹಿಂದಿನ ಮಾತು. ಹೈವೇಗಳೆಂದರೆ ಏನೋ ಕುತೂಹಲ. ರೈಲೆಂದರೂ ಅಷ್ಟೇ. ಹೊಳೆನರಸೀಪುರದಿಂದ ಮೈಸೂರಿಗೆ ಬಸ್ಸಿನಲ್ಲಿ ಬರುವಾಗ ಮಾರ್ಗ ಮಧ್ಯೆ ಹಳ್ಳಿಯೊಂದರಲ್ಲಿ SH88 ಎಂದು ದಪ್ಪಕ್ಷರಗಳಲ್ಲಿ ಬರೆದಿದ್ದ ಮೈಲಿಗಲ್ಲೊಂದನ್ನು ನೋಡಿ ಪುಳಕಗೊಂಡಿದ್ದೆ. ಮತ್ತೊಮ್ಮೆ ಹಾಸನದಿಂದ ಧರ್ಮಸ್ಥಳಕ್ಕೆ ಹೋಗುವಾಗ ಸಕಲೇಶಪುರದ ಬಾಳ್ಳುಪೇಟೆ ಬಳಿ NH48 ಎಂಬ ಬೋರ್ಡೊಂದನ್ನು ನೋಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಿದ ಸಂಭ್ರಮಾಚರಣೆ ಮಾಡಿದ್ದೆ.  ಮಾನವನ ಅಭಿವೃದ್ಧಿಯಲ್ಲಿ ಬಹುಮುಖ್ಯ ಪಾತ್ರವಹಿಸುತ್ತಿರುವ ಅಗಣಿತ ಹರಿಕಾರರಲ್ಲಿ ಹೆದ್ದಾರಿಗಳ ಪಾತ್ರ ದೊಡ್ಡದು. ವಿಮಾನ, ಕಾರು ಜನಸಾಮಾನ್ಯರ ಮನಸ್ಸಿಗೆ ಮತ್ತು ಜೇಬಿಗೆ ಹತ್ತಿರವಾಗುವವರೆಗೆ … Read more

ತಿರಸ್ಕಾರ (ಭಾಗ 5): ಜೆ.ವಿ.ಕಾರ್ಲೊ, ಹಾಸನ

(ಇಲ್ಲಿಯವರೆಗೆ…) ಅವಳು ತನ್ನೊಟ್ಟಿಗಿದ್ದಾಳೆ ಎಂದು ಹ್ಯಾನ್ಸನಿಗೆ ಖಾತ್ರಿಯಾಯ್ತು. ಈ ಸಂಗತಿ ಅವನನ್ನು ನಿರಾಶೆಯ ಮಡಿಲಿಂದ ಮೇಲೆತ್ತಲು ನೆರವಾಯಿತು. ಆನ್ನೆಟ್ ಮತ್ತೊಬ್ಬನ ಪ್ರೇಮದಲ್ಲಿರುವ ಸಂಗತಿ ಅವನಿಗೆ ಜೀರ್ಣಿಸಿಕೊಳ್ಳುವುದು ಕಷ್ಟವಾಯಿತು. ಅದೃಷ್ಟವಶಾತ್ ಅವನ ಪ್ರತಿಸ್ಪರ್ಧಿ ಜರ್ಮನಿಯಲ್ಲಿ ಯುದ್ಧಕೈದಿಯಾಗಿದ್ದ. ಮಗು ಜನಿಸುವ ಮೊದಲೇ ಅವನಿಗೆ ಬಿಡುಗಡೆಯಾಗದಿದ್ದರೆ ಸಾಕೆಂದು ಅವನು ಭಗವಂತನಿಗೆ ಮೊರೆಯಿಟ್ಟ. ಮಗು ಜನಿಸಿದ ನಂತರ ಆನ್ನೆಟ್ ಬದಲಾದರೂ ಆದಳೇ. ಈ ಹುಡುಗಿಯರನ್ನು ಅರ್ಥಮಾಡಿಕೊಳ್ಳುವುದೇ ಕಷ್ಟ. ಊರಿನಲ್ಲಿ ಅವನಿಗೆ ಗೊತ್ತಿದ್ದ ಜೋಡಿಯೊಂದು ಎಷ್ಟೊಂದು ಅನ್ಯೋನ್ಯವಾಗಿತ್ತೆಂದರೆ, ಅವರಿಗೆ ಒಬ್ಬರನ್ನೊಬ್ಬರು ಬಿಟ್ಟು ನೋಡಲು ಸಾಧ್ಯವೇಯಿರಲಿಲ್ಲ. … Read more

ಕಾಲೇಜು ದಿನಗಳ ವಾಕಿಂಗ್: ಅಕ್ಷಯ ಕಾಂತಬೈಲು

ನನ್ನ ಇಂಜಿನಿಯರಿಂಗ್ ಕಲಿಕೆಯ ದಿನಗಳವು; ಅಸೈನ್ಮೆಂಟ್ ಬರೆಯದ್ದರಿಂದ, ಕ್ಲಾಸಿಗೆ ತಡವಾಗಿ ಹಾಜರಾಗುತ್ತಿದ್ದ ಕಾರಣ, ಲ್ಯಾಬ್ ರೆಕಾರ್ಡ್ ಸಮಯಕ್ಕೆ ಸರಿಯಾಗಿ ಕೊಡದ್ದರಿಂದ ಲೆಕ್ಚರರ ಕೈಯಲ್ಲಿ ನಾನು ಸಿಕ್ಕಾಪಟ್ಟೆ ಉಗಿಸಿಕೊಳ್ಳುತ್ತಿದ್ದೆನು. ನನ್ನೀ ಉದಾಸೀನತೆ ಅತಿರೇಕ ತಲುಪಿ ಲೆಕ್ಚರುಗಳು ಕ್ಲಾಸಿನಿಂದ ಉಚ್ಚಾಟನೆ ಮಾಡಿದ ಪ್ರಸಂಗವೂ ಬೇಜಾನ್ ಇದೆ. ಕಾಲೇಜಿನಲ್ಲಿ ಚೆಂದಮಾಡಿ ಬೈಗುಳ ಉಂಡು ಸಂಜೆ ಹೊತ್ತು ರೂಂಗೆ ಹಿಂತಿರುಗಿದಾಗ ಆ ದಿನದ ನಿರ್ವಹಣೆಯ ಬಗೆಗೆ ನನ್ನ ಮೇಲೆ ನನಗೇ ಬೇಸರ ಮೂಡುತ್ತಿತ್ತು. ಮನಸಿಗೆ ಮೂಡಿದ ಬೇಸರವ ಕಳೆಯಲು ಮಿತ್ರ -ಶಿವಕುಮಾರನ ಜೊತೆ … Read more