ಅನುಭೂತಿಗೊಲ್ಲದ ಬಂಧ: ರೇವತಿ ಶೆಟ್ಟಿ
ಆರ್ದ ಮಳೆಯ ಆರ್ಭಟಕ್ಕೆ, ಅಂಗಳದ ತುಂಬೆಲ್ಲಾ ಹರಡಿ ಹಿಪ್ಪೆಯಾದ ಪಾರಿಜಾತ,ಹೆಂಚಿನ ಛಾವಣಿಯಿಂದ ಬೆಳ್ಳಿ ತಂತಿಯಂತೆ ಧೋ ಬೀಳೋ ಮಳೆಸಾಲು, ಪಡಸಾಲೆಯ ಮಧ್ಯದಲ್ಲಿ ನೀಲಾಂಜನ,ಅಲ್ಲೇ ಪಕ್ಕದಲ್ಲಿ ಉಸಿರು ಮರೆತು ಮಲಗಿದ ದೇಹ, ಗುಸುಗುಸು ಮಾತಿನೊಂದಿಗೆ ಅತ್ತಿಂದಿತ್ತ ಸುಳಿದಾಡುತ್ತಾ ಶವ ಸಂಸ್ಕಾರಕ್ಕೆ ತಯಾರಿಯಲ್ಲಿರುವ ಮನೆಯವರು. ಅಷ್ಟರಲ್ಲಿ ಮನೆಯ ಹಿರಿಯರೊಬ್ಬರು ನಿರ್ಧಾರದ ದನಿಯಲ್ಲಿ, ಏನೇ ಆಗಲಿ, ಶಂಕರಪ್ಪ ಕೊನೆಗಾಲದಲ್ಲಿ ಅಂತ ಖರೀದಿ ಮಾಡಿದ್ದ ಜಮೀನಲ್ಲೆ ಶವ ಸಂಸ್ಕಾರ ಮಾಡೋಣ, ಅವನ ಆತ್ಮಕ್ಕೂ ಶಾಂತಿ ಸಿಗತ್ತೆ ಅಂತ ಅನ್ನಿಸತ್ತೆ, ಏನಂತೀರಿ? ಅಂತ ಶಂಕರಪ್ಪನ … Read more