ಮೇರು ವಿಮರ್ಶಕ- ರಾಷ್ಟ್ರಕವಿ ಕುವೆಂಪು ಮತ್ತು ಅವರ ವಿಮರ್ಶಾ ವೈಶಿಷ್ಟ್ಯತೆ: ಡಾ. ಹನಿಯೂರು ಚಂದ್ರೇಗೌಡ
ರಾಷ್ಟ್ರಕವಿ ಕುವೆಂಪು ಅವರ ವ್ಯಕ್ತಿತ್ವದಲ್ಲಿ ಭಾರತೀಯ ಸಂಸ್ಕøತಿಯ ಬಗ್ಗೆ ಅಭಿಮಾನ, ಅಧ್ಯಾತ್ಮ ಜ್ಯೋತಿಯ ವಿಷಯದಲ್ಲಿ ಅಚಲಶ್ರದ್ಧೆ, ವಿಭೂತಿಪೂಜೆಯಲ್ಲಿ ನಿಷ್ಠೆ, ಸಾಹಿತ್ಯದ ಪರಮಪ್ರಯೋಜನದಲ್ಲಿ ಪೂರ್ಣವಿಶ್ವಾಸ, ಪ್ರಕೃತಿಯ ಬಹುಮುಖ ವಿನ್ಯಾಸದಲ್ಲಿ ಒಂದು ಆತ್ಮೀಯತೆ, ಭವ್ಯತೆಯ ಅನುಭವದಲ್ಲಿ ಭಕ್ತಿ, ಜೀವನದಲ್ಲಿ ಧರ್ಮದ ಮೂಲಭೂತ ಅಗತ್ಯವನ್ನು ಒಪ್ಪುವ ಮನೋಧರ್ಮ, ಜನತೆಯ ಉದ್ಧಾರಕ್ಕಾಗಿ ಹಂಬಲಿಸುವ ಚೇತನ, ಆತ್ಮಸಾಕ್ಷಾತ್ಕಾರದ ಲಕ್ಷ್ಯ-ಇವೆಲ್ಲವೂ ಒಂದು ಸುಂದರ ಪಾಕದಲ್ಲಿ ಸಮರಸವಾಗಿ ಏಕತ್ರಗೊಂಡಿವೆ. ರಾಮಕೃಷ್ಣ ಪರಮಹಂಸ, ಸ್ವಾಮಿ ವಿವೇಕಾನಂದ, ಟ್ಯಾಗೋರ್, ಶ್ರೀಅರವಿಂದ, ರಮಣಮಹರ್ಷಿ, ಗಾಂಧೀಜಿ-ಇನ್ನಿತರೆ ಭಾರತೀಯ ಮಹಾತ್ಮರ ವಿಚಾರಗಳಿಂದ ಭಾವಿತವೂ ಪ್ರಭಾವಿತವೂ … Read more