ಕಾದಂಬರಿ

ನಿಲುವಂಗಿಯ ಕನಸು (ಅಧ್ಯಾಯ ೧೮-೧೯): ಹಾಡ್ಲಹಳ್ಳಿ ನಾಗರಾಜ್

ಅಧ್ಯಾಯ ೧೮: ಕೆಂಗಣ್ಣಪ್ಪನ ಔಷಧೋಪಚಾರ ನೀರು ಕುಡಿದು ವಿಶ್ರಮಿಸಿದ ದನಗಳನ್ನು ಬೆಟ್ಟದ ಕಡೆ ತಿರುಗಿಸಿದ ಚಿನ್ನಪ್ಪ ಬೆಟ್ಟದ ನೆತ್ತಿಯ ಹಕ್ಕೆಯ ಗೌಲು ಮರದ ನೆರಳಲ್ಲಿ ಕುಳಿತು ವಿಶ್ರಮಿಸತೊಡಗಿದ.ಸುಬ್ಬಪ್ಪ ದೊಡ್ಡ ಕೆಲಸಗಳನ್ನೆಲ್ಲಾ ಮುಗಿಸಿ ಕೊಟ್ಟು ಹಿಂದಿನ ದಿನ ಸಂಜೆಯಷ್ಟೇ ಊರಿಗೆ ಹೋಗಿದ್ದ, ಇತ್ತೀಚಿನ ಕೆಲವೇ ದಿನಗಳಲ್ಲಿ ಒದಗಿ ಬಂದ ಅನುಭವಗಳು ಹಾಗೂ ಭಾವ ಮೈದುನನೊಂದಿಗಿನ ಮಾತುಕತೆಗಳು ಗಂಡ ಹೆಂಡಿರಿಬ್ಬರಿಗೆ ಬದುಕಿನ ಕೆಲವು ಹೊಸ ಪಾಠಗಳನ್ನು ಕಲಿಸಿದ್ದವು.ಆ ಸಾರಗಳೊಳಗಿನ ಗೂಡಾರ್ಥಗಳು ತಿಳಿಯದಿದ್ದರೂ ಒಟ್ಟು ಸಾರಾಂಶ ಅವರ ಅರಿವಿಗೆ ಬಂದಿತ್ತು.ಇಂದಿನ ಸಾಮಾಜಿಕ […]

ಕಾದಂಬರಿ ಪಂಜು-ವಿಶೇಷ

ನಿಲುವಂಗಿಯ ಕನಸು (ಅಧ್ಯಾಯ ೧೬-೧೭): ಹಾಡ್ಲಹಳ್ಳಿ ನಾಗರಾಜ್

ಅಧ್ಯಾಯ ೧೬: ಹೊನ್ನೇಗೌಡನ ಟೊಮೆಟೋ ತೋಟ ತೀವ್ರಗತಿಯಲ್ಲಿ ಜರುಗಿದ ಘಟನಾವಳಿಗಳ ಹೊಡೆತದಿಂದ ಚೆನ್ನಪ್ಪನ ಮನ್ನಸ್ಸು ವಿಚಲಿತವಾಗಿತ್ತು. ಮಂಕು ಬಡಿದವರಂತೆ ಕುಳಿತ ಗಂಡನನ್ನು ಕುರಿತು ‘ಅದೇನೇನು ಬರುತ್ತೋ ಬರಲಿ ಎದುರಿಸೋಕೆ ತಯಾರಾಗಿರಣ. ನೀವು ಹಿಂಗೆ ತಲೆ ಕೆಳಗೆ ಹಾಕಿ ಕೂತ್ರೆ ನಮ್ಮ ಕೈಕಾಲು ಆಡದಾದ್ರೂ ಹೆಂಗೆ? ಈಗ ಹೊರಡಿ, ದೊಡ್ಡೂರಿನಲ್ಲಿ ಏನೇನು ಕೆಲ್ಸ ಇದೆಯೋ ಮುಗಿಸಿಕಂಡು ಬನ್ನಿ. ನಾನೂ ಅಷ್ಟೊತ್ತಿಗೆ ಮನೆ ಕೆಲಸ ಎಲ್ಲಾ ಮುಗ್ಸಿ ಬುತ್ತಿ ತಗಂಡ್ ಹೋಗಿರ್ತೀನಿ’. ಸೀತೆ ಗಂಡನಿಗೆ ದೈರ್ಯ ತುಂಬುವ ಮಾತಾಡಿದಳು. ನಂತರ ಸುಬ್ಬಪ್ಪನ […]

ಕಾದಂಬರಿ

ನಿಲುವಂಗಿಯ ಕನಸು (ಅಧ್ಯಾಯ ೧೪-೧೫): ಹಾಡ್ಲಹಳ್ಳಿ ನಾಗರಾಜ್

ಅಧ್ಯಾಯ ೧೪: ಸಮೂಹ ಸನ್ನಿ ಚಿನ್ನಪ್ಪ ಕ್ಷಣ ತಬ್ಬಿಬ್ಬಾದ. ಸಮಸ್ಯೆಯ ಗೊಸರಿನ ಮೇಲೆ ಕಾಲಿಟ್ಟಿದ್ದೇನೆ. ಕಾಲಕ್ರಮದಲ್ಲಿ ಭಾರ ಹೆಚ್ಚಾಗಿ ಅದರಲ್ಲಿ ಹೂತು ಹೋಗಿ ಬಿಟ್ಟರೆ, ಶರೀರ ಭಯದಿಂದ ಸಣ್ಣಗೆ ಅದುರಿದಂತೆನಿಸಿತು. ಅಂಗೈಯಲ್ಲಿದ್ದ ಕರಿಮಣಿ ಸರವನ್ನೊಮ್ಮೆ ವಿಷಾದದಿಂದ ನೋಡಿ ನಂತರ ಪ್ಯಾಂಟಿನ ಜೇಬಿನಲ್ಲಿ ಇಟ್ಟಿಬಿಟ್ಟು ರಸ್ತೆಗೆ ಇಳಿದ.ಎದುರಿಗೇ ಪ್ರಭಾಕರನ ಬ್ರಾಂಡಿ ಷಾಪು ಕಾಣುತ್ತಿತ್ತು. ಈವತ್ತು ಸಂತೆಯ ದಿನವಾಗಿದ್ದರೆ ವಾಡಿಕೆಯಂತೆ ಸಂಜೆ ಅಲ್ಲಿ ಸ್ನೇಹಿತರೊಂದಿಗೆ ಕುಳಿತು ಬ್ರಾಂದಿ ಗುಟುಕರಿಸುತ್ತಾ ನನ್ನ ಸಮಸ್ಯೆಯನ್ನು ಅವರ ಮುಂದಿಟ್ಟು ಮನಸ್ಸು ಹಗುರಮಾಡಿ ಕೊಳ್ಳಬಹುದಿತ್ತಲ್ಲ!ಚಿನ್ನಪ್ಪನ ಮನಸ್ಸಿನಲ್ಲಿ […]

ಕಾದಂಬರಿ

ನಿಲುವಂಗಿಯ ಕನಸು (ಅಧ್ಯಾಯ ೧೨-೧೩): ಹಾಡ್ಲಹಳ್ಳಿ ನಾಗರಾಜ್

ಅಧ್ಯಾಯ ೧೨: ಒಬ್ಬ ರೈತನ ಆತ್ಮಹತ್ಯೆ ಸೀಗೆಕಾಯಿ ಗೋದಾಮಿನ ಮುಂದುಗಡೆ ರಸ್ತೆಗೆ ತೆರೆದುಕೊಂಡಂತೆ ಉಳಿದ ಸೈಟ್ ಕ್ಲೀನ್ ಮಾಡಿಸಿ ಪಿಲ್ಲರ್ ಏಳಿಸಿ ಬಿಟ್ಟಿದ್ದ ಜಾಗದಲ್ಲಿ ಮೂರು ಮಳಿಗೆಗಳು ತಲೆಯೆತ್ತಿದವು. ಒಂದರಲ್ಲಿ ಶ್ರೀ ನಂದೀಶ್ವರ ಟ್ರೇಡರ್ಸ್ (ಗೊಬ್ಬರ ಮತ್ತು ಔಷಧಿ ವ್ಯಾಪಾರಿಗಳು) ಎಂಬ ಅಂಗಡಿ ಉದ್ಘಾಟನೆಯಾಯಿತು.ಕತ್ತೆರಾಮನ ಯೋಜನೆ ಅಷ್ಟಕ್ಕೆ ನಿಂತಿರಲಿಲ್ಲ. ಆ ಇಡೀ ಜಾಗವನ್ನೆಲ್ಲಾ ಬಳಸಿಕೊಂಡು ಒಂದು ಕಾಂಪ್ಲೆಕ್ಸ್ ಕಟ್ಟಲು ನೀಲನಕ್ಷೆ ತಯಾರು ಮಾಡಿ ಇಟ್ಟುಕೊಂಡಿದ್ದ.ಅದರಲ್ಲಿ ಮುಖ್ಯರಸ್ತೆಗೆ ತೆರೆದುಕೊಂಡAತೆ ಆರು ಮಳಿಗೆಗಳು, ಹಿಂದುಗಡೆ ಶೆಡ್ ಇರುವ ಕಡೆಗೆ ಒಂದು ವಾಸದ […]

ಕಾದಂಬರಿ

ನಿಲುವಂಗಿಯ ಕನಸು (ಅಧ್ಯಾಯ ೧೦-೧೧): ಹಾಡ್ಲಹಳ್ಳಿ ನಾಗರಾಜ್

ಅಧ್ಯಾಯ ೧೦: ಕತ್ತೆಯ ಅಂಗಡಿ ಇನ್ನೇನು ನಾಳೆ ನಾಡಿದ್ದರಲ್ಲಿ ಅಪ್ಪಣಿ ಬಂದ್‍ಬಿಡ್ತಾನೆ. ಈ ಸರ್ತಿ ಒಂದ್ ನಾಲ್ಕು ದಿನ ಇಟ್ಟುಕೊಂಡು ಬೇಲಿ, ಮೆಣಸಿನ ಪಾತಿ, ನೀರಿನ ಗುಂಡಿ ಎಲ್ಲಾ ಮಾಡಿಸಿಕೊಂಡೇ ಕಳಿಸ್ಬೇಕು… ಹತಾರ ಎಲ್ಲಾ ಹೊಂದಿಸಿ ಇಟ್ಗಳಿ. ನಿಮಗೇನು, ಕೋಲ್ ತಗಂಡು ದನಿನ ಹಿಂದುಗಡೆ ಹೊರಟು ಬಿಡ್ತೀರಿ. ಗುದ್ದಲಿ ಕೆಲಸ ಎಲ್ಲಾನೂ ನಾನೇ ಮಾಡಕ್ಕಾಗುತ್ತಾ…ಸೀತೆಯ ಗೊಣಗಾಟ ನಡೆದಿತ್ತು.ರಾತ್ರಿಯ ಊಟ ಮುಗಿಸಿ ದಿಂಬಿಗೆ ತಲೆಕೊಟ್ಟ ಚಿನ್ನಪ್ಪನಿಗೆ ಮಾಮೂಲಿನಂತೆ ಕೂಡಲೇ ನಿದ್ದೆ ಹತ್ತಲಿಲ್ಲ.‘ಸೀತೆ ಹೇಳುವುದು ಸರಿ. ಎಲ್ಲಾ ಹತಾರ ಹೊಂದಿಸಿಕೊಳ್ಳಬೇಕು. […]

ಕಾದಂಬರಿ

ನಿಲುವಂಗಿಯ ಕನಸು (ಅಧ್ಯಾಯ ೮-೯): ಹಾಡ್ಲಹಳ್ಳಿ ನಾಗರಾಜ್

ಅಧ್ಯಾಯ ೮: ತೋಟ ಹಾಳಾಗುವ ಕಾಲಕ್ಕೆ… ‘ನಿಮ್ಮತ್ತೆ ನಿನ್ನ ಗಂಡನ್ನ ಏಳನೇ ಕ್ಲಾಸಿಗೇ ಬಿಡಿಸುವ ಬದಲು ಇನ್ನಷ್ಟು ಓದಿಸಬೇಕಾಗಿತ್ತು ಕಣಕ್ಕ. ಒಳ್ಳೆಯ ಸಾಹಿತ್ಯಗಾರ ಆಗಿಬಿಡೋರು’ ಸುಬ್ಬಪ್ಪ ಅಕ್ಕನನ್ನು ಕಿಚಾಯಿಸಿದ. ಸೀತೆ ನಾಚಿ ತಲೆ ತಗ್ಗಿಸಿದಳು.‘ನೋಡು ಹೇಗೆ ಈಗ ಇಲ್ಲೇ ನಡೆದ ಹಂಗೆ ಹೇಳಿಬಿಟ್ರು!… ಬಹಳ ಇಂಟರೆಸ್ಟ್ ಆಗಿಬಿಡ್ತು’ ಎನ್ನುತ್ತಾ ಭಾವನ ಕಡೆ ತಿರುಗಿ ‘ಮುಂದೇನಾಯ್ತು ಹೇಳಿಬಿಡಿ… ಈ ಜಾಗನೂ ಒಳ್ಳೆ ಚಂದಾಗೈತೆ. ಇಲ್ಲೇ ಇನ್ನೊಂದು ಗಂಟೆ ಇದ್ದು ಹೋಗಣ’ ಎಂದ.ಆ ಕಡೆ ಮರಳಿನ ದಂಡೆ ಕಡೆ ನೋಡಿ, ದನಗಳು […]

ಕಾದಂಬರಿ

ನಿಲುವಂಗಿಯ ಕನಸು (ಅಧ್ಯಾಯ ೬-೭): ಹಾಡ್ಲಹಳ್ಳಿ ನಾಗರಾಜ್

ಅಧ್ಯಾಯ ೬: ಕೃಷಿ ಎಂಬ ಧ್ಯಾನ ಹೊಳೆಗೆ ಇಳಿದ ದನಗಳು ಬೆಳಗಿನ ಬಾಯಾರಿಕೆ ನೀಗಿಕೊಂಡು, ಹಾಗೆಯೇ ಸ್ವಲ್ಪ ದೂರ ಹೊಳೆಯೊಳಗೇ ಮುದದಿಂದ ನಡೆದು, ಬಲದ ದಂಡೆಗೆ ಹತ್ತಿ, ಅಲ್ಲಿಂದ ಮತ್ತೊಂದು ದಿಣ್ಣೆ ಏರತೊಡಗಿದವು. ಎರಡು ಪರ್ಲಾಂಗ್ ನಡೆದರೆ ಮತ್ತೊಂದು ತಳಾರ ಜಾಗ. ಕಡಿದಾದ ದಿಣ್ಣೆ ಏರಿ ದಣಿದ ದನಗಳು ದಾರಿಯಲ್ಲಿ ಮುಂದೆ ಹೋಗದೆ ವಿಶಾಲವಾದ ಆ ತಳಾರದಲ್ಲಿ ಮೇಯತೊಡಗಿದವು.ಅಕ್ಕನೊಂದಿಗೆ ಲಘುವಾಗಿ ಕೀಟಲೆ ಮಾಡುತ್ತಾ ಬರುತ್ತಿದ್ದ ಸುಬ್ಬಪ್ಪ ದನಗಳು ಮುದದಿಂದ ಮೇಯುತ್ತಿದ್ದುದನ್ನು ನೋಡಿ, ‘ಓಹೋ, ಇದಕ್ಕೇ ನಮ್ಮ ಭಾವ […]

ಕಾದಂಬರಿ

ನಿಲುವಂಗಿಯ ಕನಸು (ಅಧ್ಯಾಯ ೪-೫): ಹಾಡ್ಲಹಳ್ಳಿ ನಾಗರಾಜ್

ಅಧ್ಯಾಯ ೪: ನನಗೊಂದು ನೈಂಟಿ ಕೊಡಿಸಿ! ಸೀತೆ ಯಾವ ವಿಚಾರದಲ್ಲೂ ಅತಿಯಾಸೆ ಉಳ್ಳವಳಲ್ಲ. ಬಟ್ಟೆ ಬರೆಯಲ್ಲೂ ಅಷ್ಟೇ. ಅವಳ ಬಳಿ ಇರುವವೇ ಮೂರು ವಾಯಿಲ್ ಸೀರೆ! ಎಲ್ಲಾದರೂ ಹೊರಗೆ ‘ಹೋಗಿ ಬರಲು’ ಹೊರಟಾಗ ಮಾತ್ರ ಅವುಗಳಲ್ಲೊಂದು ಟ್ರಂಕಿನಿಂದ ಹೊರಬರುತ್ತದೆ. ಉಪಯೋಗ ಮುಗಿದ ಕೂಡಲೇ ಒಗೆದು ಮಡಚಿ ಟ್ರಂಕಿನಲ್ಲಿಟ್ಟುಬಿಡುತ್ತಾಳೆ. ಇನ್ನೆರಡು ಸವೆದುಹೋದ ಹಳೆಯ ಸೀರೆ ತೋಟ ಗದ್ದೆಯ ಕೆಲಸದ ವೇಳೆ ಉಡಲು. ಇನ್ನು ಟ್ರಂಕಿನ ತಳ ಸೇರಿ ಕುಳಿತಿರುವ ರೇಷ್ಮೆ ಸೀರೆ! ತನ್ನ ಮದುವೆಯ ಧಾರೆಯ ವೇಳೆ ಧರಿಸಿದ್ದ […]

ಕಾದಂಬರಿ

ನಿಲುವಂಗಿಯ ಕನಸು (ಅಧ್ಯಾಯ ೧-೩): ಹಾಡ್ಲಹಳ್ಳಿ ನಾಗರಾಜ್

‌ ಅಧ್ಯಾಯ ೧: ಮೊಳಕೆಯೊಡೆಯಿತು ಎರಡೊಂದ್ಲ ಎರಡು…ಎರಡೇಡ್ರ್ಳ ನಾಲ್ಕು…ಊರ ಪ್ರಾಥಮಿಕ ಶಾಲೆಯ ಕಡೆಯಿಂದ ಸಮೂಹಗಾನದಂತೆ ರಾಗವಾಗಿ ಹೊರಟ ಮಕ್ಕಳ ಧ್ವನಿ ಪಶ್ಚಿಮದ ಕಾಡಲ್ಲಿ ಕ್ಷಣಕಾಲ ಅನುರಣಿಸಿ ಹಿಂತಿರುಗಿ ಸೀತೆಯ ಕಿವಿಯಲ್ಲಿಳಿದು ಹೃದಯದಲ್ಲಿ ದಾಖಲಾಗತೊಡಗಿತು. ಅದರಲ್ಲಿ ತನ್ನ ಮಗಳು ಪುಟ್ಟಿಯ ಧ್ವನಿಯೂ ಸೇರಿದಂತೆ ಕಲ್ಪಿಸಿಕೊಂಡು ಕ್ಷಣಕಾಲ ಪುಳಕಿತಳಾದಳು.ಪುಟ್ಟಿಗೆ ಈಗಾಗಲೇ ನಾಲ್ಕು ವರ್ಷ ತುಂಬಿದೆ. ಬರುವ ವರ್ಷ ಈ ದಿನಕ್ಕೆ ಅವಳೂ ಅಲ್ಲಿ ನಿಂತು ಮಕ್ಕಳೊಂದಿಗೆ ಮಗ್ಗಿ ಹೇಳುವಂತಾಗುತ್ತಾಳೆ. ‘ಅವ್ವನ ಮನೆಯಿಂದ ಅವಳನ್ನು ಕರೆತಂದು ಇದೇ ಶಾಲೆಗೆ ಸೇರಿಸಬೇಕು. ಹಳ್ಳಿಯ […]

ಕಾದಂಬರಿ

ಮರೆಯಲಾಗದ ಮದುವೆ (ಕೊನೆಯ ಭಾಗ): ನಾರಾಯಣ ಎಮ್ ಎಸ್

ಅಯ್ಯರೊಂದಿಗೆ ಮಾತಾಡಿದ್ದು ಎಲ್ಲರಿಗೂ ಸಮಾಧಾನ ತಂದಿತ್ತು. ತನಿಯಾವರ್ತನದ ನಂತರ ಸಿಂಧು ಭೈರವಿ, ತಿಲಂಗ್ ಮತ್ತು ಶಿವರಂಜನಿಯಲ್ಲಿ ಹಾಡಿದ ದೇವರನಾಮಗಳು ಮುದ ಕೊಟ್ಟವು. ಕಛೇರಿ ಕೊನೆಯ ಭಾಗ ತಲುಪಿದ್ದರಿಂದ ಮೈಕು ಹಿಡಿದ ಮೋಹನ ವೇದಿಕೆ ಹತ್ತಿದ. ನೇದನೂರಿಯವರಿಂದ ಪ್ರಾರಂಭಿಸಿ, ಒಬ್ಬೊಬ್ಬರಾಗಿ ಪಿಟೀಲು, ಮೃದಂಗ, ಖಂಜಿರ ಮತ್ತು ತಂಬೂರಿಯಲ್ಲಿ ಸಾಥ್ ನೀಡಿದ ಪ್ರತಿಯೊಬ್ಬ ಕಲಾವಿದರ ಬಗ್ಗೆಯೂ ಒಂದೆರಡು ಒಳ್ಳೆಯ ಮಾತನಾಡಿ ಧನ್ಯವಾದ ಅರ್ಪಿಸಿದ. ಒಬ್ಬೊಬ್ಬರಿಗೂ ಧನ್ಯವಾದ ಹೇಳಿದ ಬೆನ್ನಲ್ಲೇ ಕ್ರಮವಾಗಿ ಆಯಾ ಕಲಾವಿದರಿಗೆ ಕೃಷ್ಣಯ್ಯರ್ ಖುದ್ದು ತಮ್ಮ ಹಸ್ತದಿಂದ ಸೂಕ್ತ […]

ಕಾದಂಬರಿ

ಮರೆಯಲಾಗದ ಮದುವೆ (ಭಾಗ 15): ನಾರಾಯಣ ಎಮ್ ಎಸ್

ಇಲ್ಲಿಯವರೆಗೆ ಹೇಗಾದರೂ ಮದುವೆ ಪೂರೈಸಬೇಕೆಂದು ಗಟ್ಟಿಮನಸ್ಸಿನಿಂದ ಭಾವನೆಗಳನ್ನು ನಿಗ್ರಹಿಸಿಕೊಂಡಿದ್ದ ಅಯ್ಯರ್ ಕುಟುಂಬವರ್ಗದವರಿಗೆ ಮದುವೆ ಮುಗಿದೊಡನೆ ಮನೆಯೊಡಯನ ಅನುಪಸ್ಥಿತಿಯಲ್ಲಿ ಮದುವೆ ನಡೆಸಿದ ಬಗ್ಗೆ ಪಾಪ ಪ್ರಜ್ಞೆ ಕಾಡತೊಡಗಿತು. ಆವರೆಗೂ ಮಡುಗಟ್ಟಿದ್ದ ಸಂಕಟದ ಕಟ್ಟೆಯೊಡೆದು ಒಂದಿಬ್ಬರು ಮೆಲ್ಲನೆ ಬಿಕ್ಕತೊಡಗಿದರು. ಮದುವೆ ನಡೆದ ಗ್ರೌಂಡ್ ಫ್ಲೋರಿನ ಹಾಲಿನಲ್ಲಿ ಮದುವೆಗೆ ಬಂದಿದ್ದ ಅನೇಕ ಅತಿಥಿಗಳು ಇನ್ನೂ ಕುಳಿತಿದ್ದನ್ನು ಗಮನಿಸಿದ ಮರಳಿಯವರಿಗೆ ಅವರೆದುರು ಮುಜುಗರ ಉಂಟಾಗುವುದು ಬೇಡವಿತ್ತು. ಮದುವೆ ಮಂಟಪದೆದುರು ಹಾಗೆ ಹೆಂಗಸರು ಕುಳಿತು ಅಳುವುದು ವಿವಾಹಿತ ವಧೂವರರಿಗೆ ಶ್ರೇಯಸ್ಸಲ್ಲವೆಂದು ಹೇಳಿ ಎಲ್ಲರನ್ನೂ ಮೂರನೆ […]

ಕಾದಂಬರಿ

ಮರೆಯಲಾಗದ ಮದುವೆ (ಭಾಗ 14): ನಾರಾಯಣ ಎಮ್ ಎಸ್

ಇಲ್ಲಿಯವರೆಗೆ ತಿಂಡಿ ಮುಗಿಸಿ ಸುಬ್ಬು, ಮುರಳಿ, ಸೀತಮ್ಮನವರು, ಮೋಹನ ಮತ್ತು ಕೃಷ್ಣಯ್ಯರ್ ಸ್ವಾಮಿ ಸರ್ವೋತ್ತಮಾನಂದರ ಆಶ್ರಮಕ್ಕೆ ಕಾರಿನಲ್ಲಿ ಹೊರಟರು. ಸುಮಾರು ಹದಿನೈದು ಮೈಲು ದೂರದ ಆಶ್ರಮವನ್ನು ತಲುಪಲು ಅರ್ಧ ಘಂಟೆಯಾಗಬಹುದೆಂದು ಡ್ರೈವ್ ಮಾಡುತ್ತಿದ್ದ ಮೋಹನ ಹೇಳಿದ. ಸ್ವಾಮೀಜಿಯೊಂದಿಗೆ ಸಮಾಲೋಚಿಸಿ ಮದುವೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಮುರಳಿಯವರ ನಿರ್ಧಾರ ಸುಬ್ಬುವಿಗೆ ಸಮಾಧಾನ ತಂದಿರಲಿಲ್ಲ. ಆದರೆ ಸಾಧುಸಂತರ ಬಗ್ಗೆ ತನ್ನ ತಾಯಿಗಿದ್ದ ಅಪಾರ ಶ್ರದ್ಧಾಭಕ್ತಿಯ ಅರಿವಿದ್ದುದರಿಂದ ಈ ವಿಚಾರದಲ್ಲಿ ತನಗೆ ಅಮ್ಮನ ಬೆಂಬಲ ಸಿಕ್ಕುವ ನಂಬಿಕೆಯಿರಲಿಲ್ಲ. ಇನ್ನು ಮುರಳಿ ಚಿಕ್ಕಪ್ಪನ […]

ಕಾದಂಬರಿ

ಮರೆಯಲಾಗದ ಮದುವೆ (ಭಾಗ 13): ನಾರಾಯಣ ಎಮ್ ಎಸ್

ಇಲ್ಲಿಯವರೆಗೆ -೧೨- ಚಿನ್ನಪ್ಪ ಮತ್ತು ಅಯ್ಯರ್ ಮುಂಜಾನೆ ಬೇಗನೆದ್ದು ನಿತ್ಯಕರ್ಮಗಳನ್ನು ಮುಗಿಸಿ ಉಪಹಾರ ಸೇವಿಸಿ ಗೂಡೂರಿಗೆ ಹೊರಟಾಗ ಅಯ್ಯರ್ ಭಾವುಕರಾದರು. ಅಯ್ಯರ್ ಕಣ್ಣಲ್ಲಿ ನೀರಾಡಿದ್ದು ಕಂಡು ಚಿನ್ನಪ್ಪನ ಹೆಂಡತಿಗೆ ಮುಜುಗರವಾಗಿ ಕಸಿವಿಸಿಗೊಂಡಳು. ಅಯ್ಯರ್ ಚಿನ್ನಪ್ಪನ ಮಗುವನ್ನೆತ್ತಿಕೊಂಡು ಮುತ್ತಿಕ್ಕಿ ತಮ್ಮ ಮನದಾಳದಿಂದ ಒಮ್ಮೆ ಹೆಂಡತಿ ಮಗುವಿನೊಂದಿಗೆ ತಮ್ಮ ಮನೆಗೆ ಬರಬೇಕೆಂದು ಚಿನ್ನಪ್ಪನಿಗೆ ಆಗ್ರಹಮಾಡಿ ಹೇಳಿದರು. ರಾತ್ರಿ ಚಿನ್ನಪ್ಪನ ಋಣ ತೀರಿಸಲಾಗದಿದ್ದರೂ ಪಡೆದ ಉಪಕಾರಕ್ಕೆ ಪ್ರತಿಯಾಗಿ ಏನಾದರೂ ಮಾಡಬೇಕೆಂದುಕೊಂಡದ್ದು ನೆನಪಾಗಿ ಒಂದು ಕಾಗದದಲ್ಲಿ ಅವನ ವಿಳಾಸ ಬರೆದುಕೊಡುವಂತೆ ಚಿನ್ನಪ್ಪನಿಗೆ ಹೇಳಿದರು. […]

ಕಾದಂಬರಿ

ಮರೆಯಲಾಗದ ಮದುವೆ (ಭಾಗ 12): ನಾರಾಯಣ ಎಮ್ ಎಸ್

“ಸಾರ್… ರೈಲ್ವೇಸಿಂದ ಫೋನು, ಅದ್ಯಾವ್ದೋ ಕಾವ್ಲೀ ಅನ್ನೋ ಸ್ಟೇಷನ್ನಲ್ಲಿ ಯಾವ್ದೋ ವಯ್ಸಾಗಿರೋರ ಹೆಣಾ ಸಿಕ್ಕಿದ್ಯಂತೇ…ಈಗ್ಲೇ ಯಾರಾರೂ ಬಾಡಿ ಐಡೆಂಟಿಫೈ ಮಾಡಕ್ಕೋಗ್ಬೇಕಂತೆ” ರಿಸೆಪ್ಷನ್ ಕೌಂಟರಿನಿಂದ ಯಾವನೋ ಅವಿವೇಕಿ ಗಟ್ಟಿಯಾಗಿ ಕಿರುಚಿದ್ದ. ಲಾಬಿಯಿಡೀ ನೀರವ ಮೌನ ಆವರಿಸಿತು. ಪಾಪ ಸೀತಮ್ಮನವರ ಹೊಟ್ಟೆ ತಳಮಳಗುಟ್ಟಿತು. ಮೆಲ್ಲನೆ ತಮ್ಮ ಎಡಕುಂಡೆಯನ್ನೆತ್ತಿ ಸುಧೀರ್ಘವಾಗಿ ’ಠುಯ್ಯ್…………………’ ಎಂದು ತಾರಕಸ್ಥಾಯಿಯಲ್ಲಿ ಸದ್ದು ಹೊರಡಿಸಿ ಕಣ್ಣು ತೇಲಿಸಿಬಿಟ್ಟರು. ಮೊಮ್ಮಗ ಕಣ್ಣನ್ ಕಣ್ಣರಳಿಸಿ ಸುರುಳಿಯಾಗಿಸಿದ ಅಂಗೈಯನ್ನು ಬಾಯಿನ ಸುತ್ತ ಹಿಡಿದು ’ಠುಯ್ಯ್…………………’ ಎಂದು ನಕಲು ಮಾಡಿ ಪಕಪಕನೆ ನಕ್ಕ. ಇದರಿಂದ […]

ಕಾದಂಬರಿ

ಮರೆಯಲಾಗದ ಮದುವೆ (ಭಾಗ 11): ನಾರಾಯಣ ಎಮ್ ಎಸ್

-೧೧- ಗಂಡಿನಮನೆಯವರನ್ನು ಸ್ವಾಗತಿಸಲೆಂದು ಈಗಾಗಲೇ ರೈಲ್ವೇಸ್ಟೇಷನ್ನಿಗೆ ಬಂದಿದ್ದ ಕೃಷ್ಣಯ್ಯರ್ ಮಕ್ಕಳಾದ ಶೇಖರ್ ಮತ್ತು ಮೋಹನ್ ತಮ್ಮ ಪತ್ನಿಯರೊಂದಿಗೆ ಅಯ್ಯರ್ ಕುಟುಂಬದವರಿಗಾಗಿ ಕಾಯುತ್ತಿದ್ದರು. ಸುಮಾರು ನಾಲ್ಕು ಘಂಟೆಹೊತ್ತಿಗೆ ತಿರುವಾರೂರಿನ ರೈಲು ವಿಶಾಖಪಟ್ಟಣ ಸ್ಟೇಷನ್ನಿಗೆ ಬಂದು ತಲುಪಿತು. ಜೋತುಮೋರೆ ಹಾಕಿಕೊಂಡು ಒಲ್ಲದ ಮನಸ್ಸಿನಿಂದ ಯಾಂತ್ರಿಕವಾಗಿ ಒಬ್ಬೊಬ್ಬರೇ ರೈಲಿನಿಂದಿಳಿಯುತ್ತಿದ್ದ ಗಂಡಿನ ಮನೆಯವರನ್ನು ಕಂಡ ಶೇಖರ್ ಮತ್ತು ಮೋಹನರಿಗೆ ಎಲ್ಲವೂ ಸರಿಯಿಲ್ಲವೆಂಬ ಸುಳಿವು ಮೇಲ್ನೋಟಕ್ಕೇ ಸಿಕ್ಕಿಹೋಯಿತು. ಅತಿಥಿಗಳ ಲಗೇಜುಗಳನ್ನು ಒತ್ತಾಯದಿಂದ ಕೆಳಗಿಳಿಸಿಕೊಳ್ಳುವಾಗ ಹೆಂಗಸರು ಸಣ್ಣಗೆ ಅಳುತ್ತಿದ್ದುದು ಗಮನಿಸಿ ಏನೋ ಎಡವಟ್ಟಾಗಿರಬೇಕೆಂದು ಗಾಬರಿಯಾಯ್ತು. ಸುಬ್ಬುವನ್ನು […]

ಕಾದಂಬರಿ ಪಂಜು-ವಿಶೇಷ

ಮರೆಯಲಾಗದ ಮದುವೆ (ಭಾಗ 10): ನಾರಾಯಣ ಎಮ್ ಎಸ್

-೧೦- ಬಹುಶಃ ಬದುಕಿನಲ್ಲಿ ಮೊದಲಬಾರಿಗೆ ಅಯ್ಯರಿಗೆ ತನಗೆ ವಯಸ್ಸಾಗುತ್ತಿರುವ ಅರಿವಾಯಿತು. ಕೊಮ್ಮರಕುಡಿಯಿಂದ ಗೂಡೂರಿಗೆ ಕಾಲ್ನಡಿಗೆಯಲ್ಲಿ ಹೊರಟಿದ್ದ ಅಯ್ಯರ್ ಒಂದೆರಡು ಮೈಲು ನಡೆಯುವಷ್ಟರಲ್ಲೇ ಹೈರಾಣಾಗಿ ಬಿಟ್ಟಿದ್ದರು. ಮೊದಲೇ ಅಯ್ಯರಿಗೆ ಒರಟು ರಸ್ತೆಯಮೇಲೆ ಚಪ್ಪಲಿಯೂ ಇಲ್ಲದೆ ಬರಿಗಾಲಲ್ಲಿ ನಡೆದು ಅಭ್ಯಾಸವಿರಲಿಲ್ಲ, ಸಾಲದ್ದಕ್ಕೆ ಏರುಬಿಸಿಲು ಬೇರೆ. ಅರೆಕ್ಷಣಕ್ಕೆ ಸುಮ್ಮನೆ ಕೊಮ್ಮರಕುಡಿ ರೈಲ್ವೇ ಸ್ಟೇಷನ್ನಿಗೆ ಮರಳಿ ಸಂಜೆ ನಾಲ್ಕೂಕಾಲಿನವರೆಗೂ ಕಾದು ವಿಜಯವಾಡಕ್ಕೆ ಹೋಗುವ ರೈಲಿನಲ್ಲಿ ನೆಲ್ಲೂರಿಗೆ ಹೋದರೆ ಹೇಗೆಂಬ ಯೋಚನೆ ಬಂತು. ಮರುಕ್ಷಣವೇ ಟಿಕೆಟ್ಟಿಗೆ ಹಣವಿಲ್ಲದ್ದು ನೆನಪಾಗಿ ಖೇದವಾಯಿತು. ಹಿಂದೆಯೇ ಆಪತ್ಕಾಲದಲ್ಲಿ ಅನಿವಾರ್ಯವಾಗಿ […]

ಕಾದಂಬರಿ

ಮರೆಯಲಾಗದ ಮದುವೆ (ಭಾಗ 9): ನಾರಾಯಣ ಎಮ್ ಎಸ್

   ಇಲ್ಲಿಯವರೆಗೆ      -೯- ಬೆಂಗಳೂರಿನಿಂದ ರೈಲಿನಲ್ಲಿ ಹೊರಟಿದ್ದ ಮುಕ್ತಾಳ ಕುಟುಂಬ ವಿಶಾಖಪಟ್ಟಣ ತಲುಪಿದಾಗ ಸಮಯ ಬೆಳಗ್ಗೆ ಹತ್ತೂವರೆಯಾಗಿತ್ತು. ರೈಲುನಿಲ್ದಾಣದಿಂದ ಹೋಟೆಲ್ ಗ್ರ್ಯಾಂಡ್ ರೆಸಿಡೆನ್ಸಿಗೆ ಹೊರಟ ಟ್ಯಾಕ್ಸಿಯ ಕಿಟಕಿಗಳ ಬಳಿ ಕುಳಿತಿದ್ದ ಯುಕ್ತಾ ಮತ್ತು ಶರತ್ ವಿಶಾಖಪಟ್ಟಣ ಸಿಟಿಯನ್ನು ಕುತೂಹಲದಿಂದ ನೋಡುತ್ತಿದ್ದರು. ಗ್ರ್ಯಾಂಡ್ ರೆಸಿಡೆನ್ಸಿ ಇನ್ನೂ ಸ್ವಲ್ಪದೂರವಿದ್ದಂತಯೇ ಬಹುಮಹಡಿ ಕಟ್ಟಡವನ್ನು ಗುರುತಿಸಿದ ಶರತ್ “ಅಮ್ಮಾ… ನೋಡಲ್ಲೀ… ಹೋಟ್ಲು ಬಂತು” ಎಂದು ಉತ್ಸಾಹದಿಂದ ಕೂಗಿದ. ಅಷ್ಟರಲ್ಲಿ ಹೋಟೆಲಿನ ಸೈನ್ಬೋರ್ಡಿದ್ದ ಸ್ವಾಗತಕಮಾನು ಪ್ರವೇಶಿಸಿ ಸುಮಾರು ನೂರುಮೀಟರಿದ್ದ ಪುಷ್ಪಾಲಂಕೃತ ಕಾರಿಡಾರನ್ನು ದಾಟಿದ ಟ್ಯಾಕ್ಸಿ […]

ಕಾದಂಬರಿ

ಮರೆಯಲಾಗದ ಮದುವೆ (ಭಾಗ 8): ನಾರಾಯಣ ಎಮ್ ಎಸ್

ಹನುಮಾನ್ ಜಂಕ್ಷನ್ನಿನ ಪೋಲೀಸ್ ಚೌಕಿಯಲ್ಲಿ ಅಯ್ಯರ್ ಕಾಣೆಯಾಗಿದ್ದ ದೂರನ್ನು ಅಧಿಕೃತವಾಗಿ ದಾಖಲಿಸಲು ತಂಗಮಣಿಯವರಿಗೆ ಸಾಕಷ್ಟು ಸಮಯ ಹಿಡಿಯಿತು. ಪೋಲೀಸರು ಅಯ್ಯರ್ ಹಿನ್ನಲೆ ಕುರಿತು ಹತ್ತುಹಲವು ಪ್ರಶ್ನೆಗಳನ್ನು ಕೇಳಿದರು. ವೇಲಾಯಧನ್ ಮತ್ತು ತಂಗಮಣಿ ತಮಗೆ ತಿಳಿದಿದ್ದ ಎಲ್ಲ ಮಾಹಿತಿಗಳನ್ನು ಒದಗಿಸಿದರು. ಮದ್ರಾಸು ಸ್ಟೇಷನ್ನಿನಿಂದ ರೈಲು ಹೊರಟಾಗ ಅಯ್ಯರ್ ರೈಲಿನಲ್ಲಿದ್ದುದು ರೈಲ್ವೇ ಪೋಲೀಸರಿಗೆ ಖಾತ್ರಿಯಾಗಿತ್ತು. ಹಾಗಾಗಿ ಹನುಮಾನ್ ಜಂಕ್ಷನ್ನಿನಿಂದ ಹಿಡಿದು ಮದ್ರಾಸಿನವರೆಗೆ ಆ ಮಾರ್ಗದಲ್ಲಿದ್ದ ಎಲ್ಲಾ ನಿಗದಿತ ನಿಲ್ದಾಣಗಳಿಗೂ ಅಯ್ಯರ್ ಕಾಣೆಯಾಗಿದ್ದ ದೂರಿನ ಮಾಹಿತಿ ಕಳುಹಿಸುವ ವ್ಯವಸ್ಥೆ ಮಾಡಿದರು. ಅಯ್ಯರ್ […]

ಕಾದಂಬರಿ

ಮರೆಯಲಾಗದ ಮದುವೆ (ಭಾಗ 7): ನಾರಾಯಣ ಎಮ್ ಎಸ್

ಇಲ್ಲಿಯವರೆಗೆ -೭- ’ಶ್ಯೀ…ಕುಯ್ಯ್… ಶ್ಯೀ…ಕುಯ್ಯ್… ಶ್ಯೀ…ಕುಯ್ಯ್… ಕುಯ್ಯ್…’ ಎಂದಾದ ಸದ್ದಿಗೆ ಅಯ್ಯರಿಗೆ ಎಚ್ಚರವಾಯ್ತು. ಕೂತಲ್ಲೇ ಕಣ್ತೆರೆದರು. ಎದುರಿಗೆ ಒಂದು ಬಡಕಲು ಕುನ್ನಿ ಕಂಡಿತು. ಅದೀಗ ಸ್ವಲ್ಪದೂರದಲ್ಲಿ ಬಿದ್ದಿದ್ದ ನಶ್ಯದಕವರಿನತ್ತ ದಿಟ್ಟಿಸಿ ತನ್ನ ಕೋರೆಹಲ್ಲು ತೋರುತ್ತಾ ಗುರ್ರ್ ಎಂದು ಗುರುಗುಟ್ಟತೊಡಗಿತು. ಪಾಪ ಪ್ರಾಣಿ ಏನೋ ತಿನ್ನಲು ಸಿಕ್ಕಿತೆಂದು ನಶ್ಯದಕವರಿಗೆ ಬಾಯಿಹಾಕಿರಬೇಕು. ನಶ್ಯದ ಫಾಟಿಗೆ ಸೀನುಬಂದು ನಾಯಿ ಗಾಬರಿಗೊಂಡಿತ್ತು. ಅಯ್ಯರಿಗೆ ತಾನೆಲ್ಲಿದ್ದೇನೆ ತಿಳಿಯಲಿಲ್ಲ. ಅಪರಾತ್ರಿಯ ನೀರವತೆಯಲ್ಲಿ ದೂರದಲ್ಲೆಲ್ಲೋ ಜೀರುಂಡೆಗಳು ಗುಯ್ಗುಟ್ಟುತ್ತಿದ್ದುವು. ನಿಧಾನಕ್ಕೆ ಸಿಕ್ಕಿಕೊಂಡಿದ್ದ ಪರಿಸ್ಥಿತಿ ಅರಿವಾಗಹತ್ತಿತು. ಕೈಯಲ್ಲಿ ಬಿಡುಗಾಸಿಲ್ಲ. ಮೈಮೇಲೆ […]

ಕಾದಂಬರಿ

ಅಂತರಾಗ್ನಿ (ಕೊನೆಯ ಭಾಗ): ಕಿರಣ್. ವ್ಹಿ

ಇಲ್ಲಿಯವರೆಗೆ ವಿಶಾಲವಾದ ಹಾಲ್. ಕಿಕ್ಕಿರಿದು ತುಂಬಿರುವ ಜನ, ಚಪ್ಪಾಳೆ ಹೊಡೆದಾಗಲೆಲ್ಲ ಸೀಲಿಂಗ್ ಸೀಳಿಹೋಗುವುದೇನೊ ಎಂಬಂತೆ ಭಾಸವಾಗುತ್ತಿತ್ತು. ಅದು ‘ Reflection ‘ ಎಂಬ ಅಂಧಮಕ್ಕಳ ಶಾಲೆಯ ಉದ್ಘಾಟನಾ ಸಮಾರಂಭವಾಗಿತ್ತು. ” ಈಗ ನಮ್ಮೆಲ್ಲರ ಅಕ್ಕರೆಯ ‘Reflection charitable trust’ ನ ಮುಖ್ಯಸ್ಥರಾದ ಶ್ರೀಯುತ ಹರಿಯುವರನ್ನು, ಈ ಸಂಸ್ಥೆಯ ಕುರಿತು ಒಂದೆರಡು ಮಾತನಾಡಬೇಕೆಂದು ಕೋರಿಕೊಳ್ಳುತ್ತೇನೆ.” ಎಂಬ ಆಹ್ವಾನಕ್ಕೆ ಎದ್ದುನಿಂತ ಹರಿ, ವೇದಿಕೆ ಮೇಲೆ ಹೊರಡಲು ಸಿದ್ಧನಾದ. ಚಪ್ಪಾಳೆಗಳ ಸುರಿಮಳೆಯೆ ಹರಿಯಿತು. ” ಎಲ್ಲರಿಗೂ ನಮಸ್ಕಾರ ನಮ್ಮ ಈ ‘Reflection […]

ಕಾದಂಬರಿ

ಅಂತರಾಗ್ನಿ (ಭಾಗ ೬): ಕಿರಣ್. ವ್ಹಿ

ಇಲ್ಲಿಯವರೆಗೆ ರೂಮಿಗೆ ಬಂದ ಹರಿ, ಹೊಸ ಅನುಭವದಲ್ಲಿ ತೇಲಾಡುತ್ತಿದ್ದ. ಒಂದು ಬಗೆಯ ಎಲ್ಲದರಿಂದ ವಿಮುಕ್ತನಾದಂತಹ ಭಾವನೆ ಅವನಲ್ಲಿ ಮೂಡಿತ್ತು. ಅದೇ ವೇಳೆಗೆ, ಗೋಪಾಲ ವರ್ಮಾರನ್ನು ಎಷ್ಟೊಂದು ಬೈಕೊಂಡು ಬಿಟ್ಟೆ ಅಂತ ಬೇಜಾರಾದ. ನಿಜವಾಗಿಯೂ, ವರ್ಮಾರವರು ಅವನ ಮೇಲೆ ಗಾಢವಾದ ಪ್ರಭಾವವನ್ನು ಬೀರಿದ್ದರು. ಅದು ಹೇಳಲಾಗದಷ್ಟು ಗಾಢವಾದ ಪರಿಣಾಮ. ಆದರೂ, ಒಂದು ಮೂಲೆಯಲ್ಲಿ ಹಳೆಯ ನೆನಪು ಅವನನ್ನು ಕಾಡುತ್ತಿತ್ತು. ಒಂದೇ ದಿನಕ್ಕೆ ಹೋಗುವುದಿಲ್ಲ ನೋಡಿ, ಮತ್ತೆ ಅದೇ ಮೂಡ್ ಗೆ ಹೋಗಿಬಿಟ್ಟರೆ ಕಷ್ಟ ಎಂದು, ಬಿಯರ್ ಬಾಟಲ್ ಕೈಗೆತ್ತಿಕೊಂಡು […]

ಕಾದಂಬರಿ

ಅಂತರಾಗ್ನಿ (ಭಾಗ 5): ಕಿರಣ್. ವ್ಹಿ

ಇಲ್ಲಿಯವರೆಗೆ.. ” ಆಮೇಲೆ ಇಲ್ಲಿಗೆ ಹೊರಟದ್ದು ಮಧ್ಯದಲ್ಲಿ ನೀವು ಸಿಕ್ಕಿದ್ದು. ನಿಮ್ಮ ಪರಿಚಯ. ಇದೆಲ್ಲ ನಡೆದದ್ದು. ಇಲ್ಲಿ ಕೂತುಕೊಂಡು ಗುಂಡು ಹಾಕುತ್ತಿರೋದು. ಅಷ್ಟೇ ಅಂಕಲ್. ಹೆಂಗಿತ್ತು ನನ್ನ ಪ್ಲಾಪ್ ಲವ್ ಸ್ಟೋರಿ?” ಎನ್ನುತ್ತಾ ನಕ್ಕ ಹರಿ. ಅಷ್ಟರಲ್ಲಿ ನಶೆಯಲ್ಲಿ ತೇಲುತ್ತಿದ್ದ. ” ಇಷ್ಟೆಲ್ಲಾ ಆಗಿದೆ ನಿನ್ನ ಲೈಫ್ನಲ್ಲಿ ಅಂತಾಯ್ತು..” ” ಹಂ ಅಂಕಲ್. ಎಲ್ಲರೂ ಮೋಸಗಾರು……. ಮೋಸಗಾರರು.” ಎನ್ನುತ್ತ ಧೊಪ್ಪನೆ ಬಿದ್ದುಬಿಟ್ಟ. ಹುಡುಗ ಫುಲ್ ಟೈಟ್ ಆಗಿದ್ದಾನೆ ಎಂದುಕೊಂಡು, ಎಲ್ಲವನ್ನೂ ನೀಟಾಗಿ ತೆಗೆದಿಟ್ಟು, ತಮ್ಮ ರೂಮಿಗೆ ನಡೆದರು […]

ಕಾದಂಬರಿ

ಅಂತರಾಗ್ನಿ (ಭಾಗ ೪): ಕಿರಣ್. ವ್ಹಿ

ಇಲ್ಲಿಯವರೆಗೆ.. ಒಂದು ವಾರದಿಂದ ಅನೂಷಾ ಸರಿಯಾಗಿ ಮಾತನಾಡುತ್ತಿರಲಿಲ್ಲ. ಏನಾಯಿತು ಎಂದು ಕೇಳಿದರೆ ಬಾಯಿ ಸಹ ಬಿಡಲಿಲ್ಲ. ಇಗ್ನೋರ್ ಮಾಡುತ್ತಿದ್ದಾಳೆ ಎಂಬ ಭಾವನೆ ಹರಿಯಲ್ಲಿ ಮೂಡಲಾರಂಭಿಸಿತು. ಮುಂದಿನವಾರ ಊರಿಗೆ ಹೋಗುವ ಯೋಚನೆಯಲ್ಲಿದ್ದ ಹರಿ, ಅದೇ ಶುಕ್ರವಾರದ ರಾತ್ರಿ ಬಸ್ ಹತ್ತಿದ. ಏನಾಗಿದೆಯೋ ಎಂಬ ಚಿಂತೆ ಅವನನ್ನು ಬಹಳವೇ ಕಾಡುತ್ತಿತ್ತು. ರಾತ್ರಿಯಿಡಿ ನಿದ್ರೆ ಮಾಡಲಿಲ್ಲ ಹರಿ. ಏನೇನೋ ಯೋಚನೆಗಳು ಬೆಳಗು ಯಾವಾಗ ಆದೀತು, ಯಾವಾಗ ತಲುಪುತ್ತೇನೊ, ಎನ್ನುವ ಅವಸರ. ಬೆಳಗ್ಗೆ ಏಳರ ಸುಮಾರು ಬೆಂಗಳೂರು ತಲುಪಿದ. ಮನೆಗೆ ಹೋದವನೇ ಫ್ರೆಶ್ […]

ಕಾದಂಬರಿ

ಅಂತರಾಗ್ನಿ (ಭಾಗ ೪): ಕಿರಣ್. ವ್ಹಿ

ಇಲ್ಲಿಯವರೆಗೆ ರೂಮಿಗೆ ಬಂದ ಹರಿ ಅನೂಷಾಳಿಗೆ ಕಾಲ್ ಮಾಡಿದ. “ಹೇ ಅನೂಷ ಏನ್ ಮಾಡ್ತಿದ್ದೀಯಾ?” ” ಏನಿಲ್ಲಪ್ಪ. ಈಗ ಜಸ್ಟ್ ಊಟ ಆಯ್ತು, ಸುಮ್ಮನೆ ಕೂತಿದ್ದೀನಿ. ಮನೆಯಲ್ಲಿ ಫುಲ್ ಖುಷ್ ಕಣೋ, ಕೆಲಸ ಸಿಕ್ಕಿದ್ದಕ್ಕೆ” ” ಹೌದಾ… ನಮ್ಮನೇಲೂ ಅಷ್ಟೇ, ತುಂಬಾ ಖುಷಿಯಾಗಿದ್ದಾರೆ. ಆದ್ರೂ ನಮ್ಮಪ್ಪ, ಕೊನೆಗೊಂದು ಬಾಂಬ್ ಹಾಕಿನೆ ಹೋದ್ರು ನೋಡು.” ” ಹ್ಹ….ಹ್ಹ…. ಹಂಗೆ ಆಗ್ಬೇಕು ನಿನಗೆ. ಅಂದ್ಹಾಗೆ, ಏನ್ ಬಾಂಬು ಅದು ಮಿಸ್ಟರ್ ಹರಿ?”. ಎಂದು ರೇಗಿಸಿದಳು ಅನೂಷಾ. “ಏಯ್… ಸಾಕು ಸುಮ್ನಿರೇ […]

ಕಾದಂಬರಿ

ಅಂತರಾಗ್ನಿ (ಭಾಗ 3): ಕಿರಣ್. ವ್ಹಿ

ಇಲ್ಲಿಯವರೆಗೆ ಹೊರಗೆ ಬಂದ ಇಬ್ಬರು ತಮ್ಮ ತಮ್ಮ ಕೆಲಸ ನೋಡಿಕೊಳ್ಳಲು ಮುಂದಾದರು. ಹರಿಗೆ ತನ್ನ ಬೈಕ್ ಸರಿಯಾದರೆ ಸಾಕಾಗಿತ್ತು. ಆ ನಡುರಸ್ತೆಯಲ್ಲಿ ಕೆಟ್ಟು ನಿಂತದ್ದು ಮತ್ತೊಂದು ತಲೆನೋವಾಗಿತ್ತು. ಸಹಾಯಕ್ಕೆಂದು ಮ್ಯಾನೇಜರ್ ರವಿಯ ಬಳಿ ಹೋದ. ಗೋಪಾಲ್ ವರ್ಮಾರವರು ಕೂಡ ತಮ್ಮ ಮನೆಯವರೆಲ್ಲರ ಜೊತೆ ಸಪ್ತಗಿರಿಯನ್ನು ನೋಡಲು ಹೊರಟರು. ರವಿ, ಹರಿಗೆ ಒಬ್ಬ ಮೆಕ್ಯಾನಿಕ್ನನ್ನು ಪರಿಚಯಿಸಿ ಅವನ ಜೊತೆಯಲ್ಲಿ ಹೋಗಿ ಬೈಕನ್ನು ರಿಪೇರಿ ಮಾಡಿ, ತೆಗೆದುಕೊಂಡು ಬರಲು ಹೇಳಿದ. ಇಬ್ಬರು ಮೆಕ್ಯಾನಿಕ್ ನ ಬೈಕ್ನಲ್ಲಿ ಹೋಗಿ ಗಾಡಿಯನ್ನು ರಿಪೇರಿ […]

ಕಾದಂಬರಿ

ಅಂತರಾಗ್ನಿ (ಭಾಗ ೨): ಕಿರಣ್. ವ್ಹಿ

ಇಲ್ಲಿಯವರೆಗೆ ಆಗಲೇ ಮೊವತ್ತು ಕಿಲೋಮೀಟರ್ ಪ್ರಯಾಣಿಸಿಯಾಗಿತ್ತು. ಮುಂದೆ ಸಿಗುವುದು ಬರೀ ಕಾನನ, ತಿರುವು-ಮುರುವು ರಸ್ತೆ ಹಾಗು ನೀರವ ಮೌನವೆಂದು ಅವನಿಗೆ ಗೊತ್ತಿತ್ತು. ಇದನ್ನೇ ಅರಸಿ ಅವನ ಅಂತರಾಳ ಇಲ್ಲಿಗೆ ಕರೆದುಕೊಂಡು ಬಂದಿತ್ತೊ ಏನೊ…! ಸಪ್ತಗಿರಿಯದು ದೊಡ್ಡ ಘಾಟ್ ಆಗಿತ್ತು. ಸುಮಾರು ನಲವತ್ತು ಕಿಲೋಮೀಟರ್ ನಷ್ಟು ರಸ್ತೆ ತಿರುವಿನಿಂದಲೆ ಕೂಡಿತ್ತು. ಒಂದು ಬದಿಗೆ ಮುಗಿಲು ಮುಟ್ಟುವಷ್ಟು ಎತ್ತರದ ಗುಡ್ಡ, ಮತ್ತೊಂದು ಬದಿಗೆ ನೆಲ ಕಾಣಿಸದಷ್ಟು ಆಳವಾದ ಪ್ರಪಾತ. ಅದೆಷ್ಟು ಅಮಾಯಕ ಜೀವಿಗಳು ಪ್ರಾಣ ತೆತ್ತಿವೆಯೋ ಏನೊ. ಕಾಡು ಎಷ್ಟೊಂದು […]

ಕಾದಂಬರಿ

ಅಂತರಾಗ್ನಿ: ಕಿರಣ್. ವ್ಹಿ

ಧೋಧೋ ಎಂದು ಧಾರಾಕಾರವಾಗಿ ಸುರಿಯುತ್ತಿರುವ ಮಳೆ.ನೆಲವೆಲ್ಲ ತೋಯ್ದು ಘಮ್ ಎಂದು ಹೊರಸೂಸುವ ಮಣ್ಣಿನ ಸುವಾಸನೆಗೆ ಎಂತಹವರೆ ಆದರು ಮೈಮರೆಯುವರು. ಅಂತಹ ಸಮಯವದು. ಸಂಜೆಯಾಗಿದ್ದರಿಂದ, ಸೂರ್ಯ ತನ್ನ ಪ್ರತಾಪವನ್ನು ಇಳಿಮುಖಗೊಳಿಸಿ ಮರಳುತ್ತಿದ್ದ. ದೂರದ ಬಾನಂಚಿನಲ್ಲಿ ಮುಳುಗುತ್ತಿದ್ದ  ನೇಸರನನ್ನೆ ದಿಟ್ಟಿಸಿ ನೋಡುತ್ತಿದ್ದ ಹರಿ. ಅವನ ಮನಸ್ಸು ಅಲ್ಲಿರಲಿಲ್ಲ. ಕೇವಲ ಶೂನ್ಯವೇ ಆವರಿಸಿತ್ತು ಅವನಲ್ಲಿ. ಇನ್ನೇನು ಜೀವನ ಮುಗಿದೇ ಹೋಯಿತು ಎನ್ನುವಂತೆ ನಿಂತಿದ್ದ. ರಪರಪನೆ ಹೊಡೆಯುವ ಹೊಡೆತವು ಅವನ ಅರಿವಿಗೆ ಬರಲಿಲ್ಲ. “ಥೋ  ಇದೇನು ಮಳೆ. ಬೆಳಗ್ಗೆಯಲ್ಲ ನೆತ್ತಿ ಸುಡುವಂತೆ ಬಿಸಿಲಿರತ್ತೆ. […]

ಕಾದಂಬರಿ

ಓಯಸಿಸ್: ನಿನಾದ (ಭಾಗ 4)

ಅಷ್ಟು ಹೊತ್ತಿಗೆ ನಿಶಾಂತ್ ಕರೆ ಮಾಡಿ ಹೇಳಿದ ತಡೆ  ಹಿಡಿದ ವೇತನ ಬಿಡುಗಡೆ ಆಗಿದೆ. ಯಾವ್ ಯಾವ್ದಕ್ಕೆ ಎಷ್ಟು ಎಂದು ವಿಲೇವಾರಿ  ಹೇಳು. ಮೊದಲು ಆ ಜೈನ್  ಗೆ ಫೋನ್ ಮಾಡಿ ಹೇಳು, ಹೇಳಿದ್ರೆ ಆವಾ ನಂಬೋಲ್ಲ ನಿನ್ನೆ ಅಕೌಂಟ್ ಗೆ  ಹಾಕಿದ ಹಣ ವಾಪಸು ಮಾಡಬೇಕು. ಸರಿ ಈಗಲೇ ಹೇಳುವೆ ನೀ ವಾಪಾಸು  ಮಾಡಿ ಬಿಡು. ಎಂದು ನಿಶಾಂತ್ ಹೇಳಿ ಕರೆಯನ್ನು ಮುಗಿಸಿದ. ಅಲ್ಲಿಗೆ ಒಂದು ವಿಲೇವಾರಿ ಆಯಿತು. ಅಂತೂ ಚಿಂತೆಯ ಮೂಟೆ ಹೊತ್ತು ಬಂದು ಎಲ್ಲ […]

ಕಾದಂಬರಿ

ಓಯಸಿಸ್: ನಿನಾದ (ಭಾಗ 4)

ಇಲ್ಲಿಯವರೆಗೆ ಇತ್ತ ಟೀಂ ಲೀಡರ್ ಹಂಜ್ಹಾ.. ನಿಗೆ ಮೈ ಪರಚಿ ಕೊಳ್ಳುವಂತೆ ಆಯಿತು. ಒಂದು ದಿನ ಸಮಯ ನೋಡಿ ಹೇಳಿ ಬಿಟ್ಟೆ. ನೋಡು ನಾನು  ಎಲ್ಲಿಯೂ ಸಲ್ಲುವೆ. ಹೀಗಾಗಿ ಮಾತ್ರ ನನ್ನ ಇಲ್ಲಿ ವಾಪಸು ಕರೆದರು. ನಿನಗೆ ನೀನ್ ಹೇಳಿದ್ದು  ನೆನಪಿದೆಯ??? ನೀ ಮಾತ್ರ ಇಲ್ಲೇ ಇರು… ಅಂದಾಗ ಅವನ ಮುಖ ನೋಡಬೇಕಿತ್ತು. ಆಗ ನಿನಾದ ೪ ವರ್ಷದ ಕೆಳಗಿನ ಒಂದು ದಿನದ ಕಹಿ ಘಟನೆ ಹೇಳಿದಳು. ಒಂದು ದಿನ ಶುಕ್ರವಾರ, ಮದ್ಯನ್ನ ಸರಿ ಸುಮಾರು ೨ […]

ಕಾದಂಬರಿ

ಸ್ನೇಹ ಭಾಂದವ್ಯ (ಕೊನೆಯ ಭಾಗ): ನಾಗರತ್ನಾ ಗೋವಿಂದನ್ನವರ

        (ಇಲ್ಲಿಯವರೆಗೆ…) ರಾಜೇಶ ಇನ್ನು ಮನೆಗೆ ಬಂದಿರಲಿಲ್ಲ. ಆಗ ಪದ್ಮಮ್ಮ ರೇಖಾಳಿಗೆ ಬಾರಮ್ಮ ಬಾ ನಿನ್ನಿಂದ ಒಂದು ಉಪಕಾರ ಆಗಬೇಕಾಗಿದೆ ಎಂದಳು. ನಮ್ಮ ರಾಜೇಶ ಸುಧಾಳ ನೆನಪಲ್ಲೆ ಹುಚ್ಚನ ಹಾಗಾಗಿದ್ದಾನೆ. ನಿನ್ನ ಮಾತಿಗೆ ಆತ ಗೌರವ ಕೊಡುತ್ತಾನೆ ದಯವಿಟ್ಟು ಅವನಿಗೆ ಮೊದಲಿನ ರಾಜೇಶ ಅಗೋಕೆ ಹೇಳಮ್ಮ. ಇದ್ದ ಒಂದು ವಂಶದ ಕುಡಿನು ದ್ವೇಷಿಸೋಕೆ ಕಲಿತಿದ್ದಾನೆ. ಏನು ಮಾಡಬೇಕು ಅಂತ ತಿಳಿತಿಲ್ಲಾ ಎಂದರು ಪದ್ಮಮ್ಮ. ಆದರೆ ಅಂದು ಎಷ್ಟು ಹೊತ್ತಾದರು ರಾಜೇಶ ಬಾರದಿರುವುದನ್ನ ಕಂಡು […]