“ಝೂನೋಟಿಕ್ (ಪ್ರಾಣಿಜನ್ಯ) ರೋಗಗಳು”: ಡಾ. ವೀಣಾಕುಮಾರಿ ಎ. ಎನ್.‌,

ಝೂನೋಟಿಕ್ (ಪ್ರಾಣಿಜನ್ಯ) ರೋಗಗಳು ಪ್ರಾಣಿಗಳು ಮತ್ತು ಮನುಷ್ಯರ ನಡುವೆ ಪರಸ್ಪರ ಹರಡುವ ರೋಗಗಳಾಗಿವೆ. ʼಝುನೋಸಿಸ್ʼ ಎಂಬ ಪದವು ರುಡಾಲ್ಫ್ ವಿರ್ಚೊ (Rudolph Virchow) ಎಂಬಾತನಿಂದ 1880ರಲ್ಲಿ ಪರಿಚಯಿಸಲ್ಪಟ್ಟಿದೆ. ʼಝೂನೋಸಿಸ್ʼ ಎಂಬ ಪದವು ಮೂಲತಃ ಗ್ರೀಕ್ ಭಾಷೆಯ ಪದವಾಗಿದ್ದು, ʼಝೂನೋʼ ಎಂದರೆ ʼಪ್ರಾಣಿʼ ಹಾಗೂ ʼನೊಸೆಸ್ʼ ಎಂದರೆ ʼಅನಾರೋಗ್ಯʼ ಎಂದರ್ಥ. ಇವುಗಳು ವೈರಸ್ ಗಳು (ರೇಬೀಸ್‌, ಆರ್ಬೋವೈರಸ್‌ ಸೋಂಕುಗಳು, ಕ್ಯಾಸನೂರ್‌ ಫಾರಸ್ಟ್‌ ಡಿಸೀಸ್/ಮಂಗನ ಕಾಯಿಲೆ, ಹಳದಿ ಜ್ವರ, ಇನ್ ಫ್ಲುಯೆಂಜಾ), ಬ್ಯಾಕ್ಟೀರಿಯಾಗಳು (ಉದಾಹರಣೆ: ಆಂಥ್ರಾಕ್ಸ್‌, ಬ್ರುಸೆಲ್ಲೋಸಿಸ್‌, ಪ್ಮೇಗ್‌, ಲೆಪ್ಟೋಸ್ಪೈರೋಸಿಸ್‌, … Read more

ಬಾ ಬಾ ಓ ಬೆಳಕೇ…..: ಚಂದಕಚರ್ಲ ರಮೇಶ ಬಾಬು

ಚರಿತ್ರೆ ಪುನರಾವೃತಗೊಳ್ಳುತ್ತದೆಂದು ಓದಿ ತಿಳಿದಿದ್ದರೂ, ಹೇಳಿದವರಿಂದ ಕೇಳಿದ್ದರೂ ಅದು ಇಷ್ಟುಬೇಗ ತನ್ನ ಆವರಿಸುತ್ತದೆ ಎಂದು ಮತ್ತು ಅದರ ಮಿಕ ತಾನಾಗಬೇಕಾಗುತ್ತದೆ ಎನ್ನುವ ಸತ್ಯ ಜಯತೀರ್ಥನಿಗೆ ಕಹಿಯೂಟವಾಗಿತ್ತು.ಮೊನ್ನೆ ವರೆಗೂ ತನ್ನ ಸಂಪತ್ತೇನು, ಮೆರೆದಾಟವೇನು, ಕಂಡ ಕನಸುಗಳೇನು ? ಒಂದೇ ಎರಡೇ? ಜೀವನವಿಡೀ ಕಾಮನಬಿಲ್ಲಿನ ಕನಸಿನಲ್ಲೇ ಕಳೆದುಹೋಗುತ್ತದೆ ಎಂದೆಣಿಸಿ, ಸೊಕ್ಕಿನಲ್ಲಿ ಮುಕ್ಕುತ್ತಿದ್ದ ಅವನಿಗೆ ಆರ್ಥಿಕ ಮುಗ್ಗಟ್ಟು ಲಕ್ವದ ತರ ಬಂದೆರಗಿತ್ತು. ಇಂಥ ಮುಗ್ಗಟ್ಟು ಶುರುವಾಗಿ ಒಂದು ವರ್ಷವಾಗಿದ್ದರೂ ಅವನು ಮತ್ತು ಅವನ ಹೆಂಡತಿ ಅದಕ್ಕೆ ಹೊರತಾಗೇ ಉಳಿದಿದ್ದರು. ಶುರುವಾದ ವರ್ಷಗಳಲ್ಲಿ … Read more

ಅನಿರೀಕ್ಷಿತ ಬದಲಾವಣೆಗಳ ಬೆನ್ನು ಏರಿ..: ವಿಜಯ್ ಕುಮಾರ್ ಕೆ. ಎಂ.

ಬದಲಾವಣೆಗಳು ಅನಿರೀಕ್ಷಿತ, ಇನ್ನಷ್ಟು ಬದಲಾವಣೆಗಳು ನಿರೀಕ್ಷಿತ. ಅನಿರೀಕ್ಷಿತವಾಗಿ ಉಂಟಾಗುವ ಬದಲಾವಣೆಗಳಲ್ಲಿ ಹೆಚ್ಚು ದೀರ್ಘಾವಧಿ ಆಯಸ್ಸು ಬಯಸಲು ಕಷ್ಟವಾಗಬಹುದು ಆದರೆ ನಿರೀಕ್ಷಿತ ಬದಲಾವಣೆಗೆ ಒಂದಷ್ಟು ಆಯಸ್ಸು ಹೆಚ್ಚು ಇರುತ್ತದೆ. ರಾತ್ರೋರಾತ್ರಿ ಸಿಕ್ಕ ಲಾಟರಿಯ ಜಯ, ತಾನು ಕಂಡು ಕೇಳರಿಯದಷ್ಟು ಸಿಕ್ಕ ಹಣ ಮತ್ತು ಒಡವೆ, ನಿರೀಕ್ಷೆಯಿಲ್ಲದೆ ದೊರೆತ ಗೆಲುವು, ಬಯಸದೆ ಸಿಕ್ಕ ಮೆಚ್ಚುಗೆ ಇದೆಲ್ಲವೂ ಮನಸ್ಸಿನಲ್ಲಿ ಇನ್ನಿಲ್ಲದ ಸಂತೋಷ ನೀಡಿತಾದರೂ ಅದರ ಹಿಂದೆ ಬರುವ ಒಂದಷ್ಟು ಜವಾಬ್ದಾರಿ, ಪ್ರಾಮಾಣಿಕತೆ, ನಿರಂತರ ಪರಿಶ್ರಮ ಇದೆಲ್ಲವೂ ಬಹು ಮುಖ್ಯವಾಗುವುದರಲ್ಲಿ ಸಂಶಯವಿಲ್ಲ. ಪ್ರೌಢಾವಸ್ಥೆಗೆ … Read more

ಅಂಕ ಪ್ರಯಾಣ: ನಾಗಸಿಂಹ ಜಿ ರಾವ್

ಸಿಂಹಾವಲೋಕನ 3 “ಪುಲಪೇಡಿ” ಎಂಬ ಸಮುದಾಯ ತಂಡದ ನಾಟಕದಲ್ಲಿ ಭಾಗವಹಿಸಿದ ನಂತರ, ನನ್ನ ಶಾರದಾವಿಲಾಸ ಕಾಲೇಜಿನ ಸಹಪಾಠಿಗಳು ಮತ್ತು ಅಧ್ಯಾಪಕರೆಲ್ಲರೂ ನನ್ನನ್ನು ಗುರುತಿಸತೊಡಗಿದರು. “ಮುಂದಿನ ನಾಟಕ ಯಾವಾಗ?” ಎಂಬ ಪ್ರಶ್ನೆಗಳು ನನ್ನನ್ನು ಕಾಡತೊಡಗಿದವು. ಆದರೆ, ಆ ಪ್ರಶ್ನೆಗೆ ಉತ್ತರವೇ ನನಗೆ ತಿಳಿದಿರಲಿಲ್ಲ. ಒಂದು ದಿನ ಕಾಲೇಜ್ ಮುಗಿಸಿಕೊಂಡು ಮನೆಗೆ ಹೋಗುವಾಗ, ಚಾಮುಂಡಿಪುರಂ ವೃತ್ತದಲ್ಲಿ ಪಾಪು ಎದುರಾದರು. “ಏನ್ರಿ, ಹೇಗಿದ್ದೀರಾ? ನಾಟಕ ಮಾಡ್ತೀರಾ?” ಎಂದು ಕೇಳಿದರು. “ಹೂ, ಮಾಡ್ತೀನಿ, ” ಎಂದೆ. “‘ಬೆಲೆ ಇಳಿದಿದೆ’ ಎಂಬ ಬೀದಿನಾಟಕದ ರಿಹರ್ಸಲ್ … Read more

”ಕತ್ತಲ ಜಾಲ”(ಸೈಬರ್‌ ರಕ್ಷಣೆ ಕುರಿತಾದ ನಾಟಕ): ನಾಗಸಿಂಹ ಜಿ ರಾವ್

”ಕತ್ತಲ ಜಾಲ”(ಸೈಬರ್‌ ರಕ್ಷಣೆ ಕುರಿತಾದ ನಾಟಕ)ರಚನೆ: ನಾಗಸಿಂಹ ಜಿ ರಾವ್ಪಾತ್ರಗಳು: ಫೇಸ್ ಬುಕ್ಇನ್ಸಾಟಾಗ್ರಾಂವಾಟ್ಸ್ಆಪ್ಬಾಲಕಿ / ಬಾಲಕ (ಈ ನಾಟಕವನ್ನು ಬೀದಿನಾಟಕ, ರಂಗನಾಟಕ ಹಾಗೂ ಆತ್ಮೀಯ ರಂಗಭೂಮಿಯಲ್ಲೂ ಪ್ರದರ್ಶಿಸಬಹುದು) (ದೃಶ್ಯ ೧)ಹಾಡು:ಕತ್ತಲ ಜಾಲ ಇದುಕತ್ತಲ ಜಾಲಅಪಾಯತರುವಆಂತರ್ಜಾಲವಿಷದ ಹಾವಿನ ಮೋಹಕ ಬಾಲಗೋಮುಖ ವ್ಯಾಘ್ರನ ಬಣ್ಣದಜಾಲ ಕಾಮುಕ ಹರಡಿದ ಸುಂದರ ಬಲೆಲೈಕು ಕಾಮೆಂಟಿಗೆಆದರೆ ಮರುಳುಮುಗಿದೇ ಹೋಯಿತು ಬಾಲ್ಯದ ಕೊಲೆದೂರವಿರುಅದು ವಿಷದ ಹುಳು ಉತ್ತಮರೀತಿಯಲಿ ಬಳಸೋ ಜಾಣನೆನಪಿಡುಅದು ಸಾಮಾಜಿಕಜಾಲತಾಣಮರುಳಾಗದಿರು ಬಣ್ಣದ ಮಾತಿಗೆಅತಿ ಬಳಕೆ ಒಳ್ಳೆಯದಲ್ಲ ಬದುಕಿಗೆ ಕತ್ತಲ ಜಾಲ ಇದುಕತ್ತಲ ಜಾಲಅಪಾಯತರುವಆಂತರ್ಜಾಲವಿಷದ ಹಾವಿನ … Read more

ಲೋಕದ ಡೊಂಕ ತಿದ್ದುವ ಬದಲು….!!: ಶೋಭಾ ಶಂಕರಾನಂದ

ಜಗತ್ತಿನಲ್ಲಿ ಇತರರನ್ನು ತಿದ್ದುವ ಅಧಿಕಾರ ಮತ್ತು ಶ್ರಮ ಬೇಡ. ಒಬ್ಬ ವ್ಯಕ್ತಿ ಒಳ್ಳೆಯವರು/ ಕೆಟ್ಟವರು ಎಂದು ನಿರ್ಧಾರ ಮಾಡುವ ಕಷ್ಟವೂ ನಮಗೆ ಬೇಡ. ಒಬ್ಬರಿಗೆ ಒಳ್ಳೆಯವರಾಗಿ ಕಂಡವರು ಇನ್ನೊಬ್ಬರಿಗೆ ಕೆಟ್ಟವರಾಗಿ ಕಾಣುಬಹುದು ಅಥವಾ ಇನ್ನೊಬ್ಬರಿಗೆ ಕೆಟ್ಟವರಾಗಿ ಕಂಡವರು ಮತ್ತೊಬ್ಬರಿಗೆ ಒಳ್ಳೆಯವರಾಗಿ ಕಾಣಬಹುದು. ಅದು ಆಯಾ ಸಂದರ್ಭಕ್ಕೆ ಅನ್ವಯಿಸಿರುತ್ತದೆ. ವಸ್ತುಗಳಿಗೆ ಕೊಟ್ಟಷ್ಟು ಬೆಲೆಯನ್ನು ನಾವು ಇಂದು ವ್ಯಕ್ತಿಗಳಿಗೆ ನೀಡುತ್ತಿಲ್ಲ. ಕಾರು ಬಂಗಲೆ ಐಷಾರಾಮಿ ಜೀವನಕ್ಕಾಗಿ ಕಾತರಿಸುತ್ತೇವೆಯೇ ಹೊರತು, ವ್ಯಕ್ತಿಗಳಿಗೆ ಅಲ್ಲ ಎನ್ನುವುದು ಹಲವಾರು ಸಂದರ್ಭದಲ್ಲಿ ನಮ್ಮನ್ನು ನಾವು ಪ್ರಶ್ನಿಸಿಕೊಂಡಾಗ … Read more

“ಯುದ್ದಕ್ಕೂ ಸಿದ್ದ ಶಾಂತಿಗೂ ಬದ್ದ”: ಚಲುವೇಗೌಡ ಡಿ ಎಸ್

ನಾವು ಭಾರತೀಯರು, ಭಾರತಾಂಬೆಯ ಮಡಿಲಲಿ ಜೀವಿಸುತ್ತಿರುವ ಮಕ್ಕಳು, ಶಾಂತಿ, ಸೌಹಾರ್ದತೆ, ತ್ಯಾಗ, ಕರುಣೆ, ಮಮತೆ, ಏಕತೆ, ಧರ್ಮ ಸಹಿಷ್ಣುತೆ ಹಾಗೂ ಪರಸ್ಪರ ಸಹಕಾರ ಮನೋಭಾವನೆ ಪ್ರಜೆಗಳುಳ್ಳ ಬೃಹತ್ ರಾಷ್ಟ್ರ ನಮ್ಮದು. ಸರ್ವ ಧರ್ಮಗಳನ್ನು ಸಮಾನವಾಗಿ ಕಾಣುವ, ಅರಸಿ ಬಂದವರಿಗೆ ಆಶ್ರಯ ನೀಡುವ, ಮಾನವೀಯ ಗುಣಗಳನ್ನು ಹೊಂದಿರುವ ಶಾಂತಿಪ್ರಿಯವಾದ ರಾಷ್ಟ್ರ ನಮ್ಮದು. ನಾವು ನಮ್ಮ ಪಾಡಿಗೆ ಯಾವ ರಾಷ್ಟ್ರದ ತಂಟೆಗೂ ಹೋಗದೆ ಶಾಂತಿಯಿಂದ ಬದುಕು ಸಾಗಿಸುತ್ತಿದ್ದೆವು ಆದರೂ ನಮ್ಮ ಭಾರತಾಂಬೆಯ ನೆಲಕ್ಕೆ ಕಾಲಿಟ್ಟ ಉಗ್ರರಕ್ಕಸರು ಭಾರತಮಾತೆಯ ಪುತ್ರರ ಕೊಂದು … Read more

ಎಕ್ಸ್ಪೀರಿಯೆನ್ಸ್ ಅಂದ್ರೆ ಸುಮ್ನೆ ಅಲ್ಲ: ಮಧುಕರ್ ಬಳ್ಕೂರು

“ಬಿಡು, ಇದೆಲ್ಲ ಕಾಮನ್, ಒಂದ್ ಎಕ್ಸ್ಪೀರಿಯೆನ್ಸ್ ಅಷ್ಟೇ. ಇದರಲ್ಲೇನು ಹೋದಂಗಾಯಿತು..?” “ಸುಮ್ಮನೆ ಎಕ್ಸ್ಪೀರಿಯೆನ್ಸ್ ಗೆ ಇರಲಿ ಅಂತ ಮಾಡ್ತಿದೀನಿ ಮತ್ತಿನ್ನೇನಿಲ್ಲ. ಇದರಲ್ಲೇನು ಹೋಗೋದಿದೆ..?” ಒಂದ್ ನಿಮಿಷ… ಎಕ್ಸ್ಪೀರಿಯೆನ್ಸ್ ಅನ್ನೋದೆ ಒಂದ್ ದೊಡ್ಡ ವಿಚಾರ. ಇದನ್ನೇನು ಬಿಡು ಕಾಮನ್ ಅಂತ ಹೇಳೋದು..? ಎಕ್ಸ್ಪೀರಿಯೆನ್ಸ್ ಅನ್ನೋದೆ ಪ್ರಾಕ್ಟಿಕಲ್ ಜ್ಞಾನ. ಇನ್ನು ಅದರಲ್ಲೇನು ಹೋದಂಗಾಯಿತು ಅನ್ನೋದು..? ಏನೇ ಮಾಡಿದ್ರು ಎಕ್ಸ್ಪೀರಿಯೆನ್ಸ್ ಸಿಗ್ತದೆ ಅಂದ ಮೇಲೆ ಎಕ್ಸ್ಪೀರಿಯೆನ್ಸ್ ಗೆ ಅಂತಾನೇ ಮಾಡ್ತಿದೀನಿ ಅನ್ನೋದರಲ್ಲಿ ಅರ್ಥ ಇದೆಯಾ..? ಇಲ್ಲಾ ಅಲ್ವಾ.. ಹಾಗಿದ್ರೆ ಯಾಕೆ ಇಂತಹ … Read more

ಚುಂಬಕ ಚಂದ್ರಮನೊಂದಿಗೆ ಚಲಿಸುತ್ತಾ….: ಶೋಭಾ ಶಂಕರಾನಂದ

ಪ್ರತಿನಿತ್ಯ ನಾವು ನೋಡಬಹುದಾದ ಪ್ರತ್ಯಕ್ಷ ದೈವಗಳಾದ ಸೂರ್ಯ ಮತ್ತು ಚಂದ್ರ ನಮ್ಮ ಬದುಕಿನಲ್ಲಿ ಅಗಾಧ ಪ್ರಭಾವವನ್ನು ಬೀರುತ್ತವೆ. ಅದರಲ್ಲೂ ಚಂದ್ರನಿಗೆ ವೇದಗಳಲ್ಲಿ ಅಧಿಕ ಪ್ರಾಶಸ್ತ್ಯವನ್ನು ಕೊಡಲಾಗಿದೆ. ಆತನನ್ನು ವೇದಗಳಲ್ಲಿ ‘ಸೋಮದೇವ’ ಎಂದು ಕರೆದಿದ್ದಾರೆ. ಪವಮಾನ ಸೂಕ್ತದಲ್ಲಿ ಅದರ ಹೆಚ್ಚಿನ ಮಾಹಿತಿ ನೋಡಬಹುದು. “ಚಂದ್ರಮಾ ಮನಸೋ ಜಾತಃ” ಎಂದು ಒಂದು ಉಲ್ಲೇಖವಿದೆ. ಚಂದ್ರ ನಮ್ಮ ಮನಸ್ಸಿಗೆ ಅಧಿಪತಿ ಎಂದು ಇದರ ಅರ್ಥ. ನಮ್ಮ ಮನಸ್ಸು ನೆಮ್ಮದಿಯಿಂದ ಇಲ್ಲವೆಂದಾದರೆ, ಚಂದ್ರನ ಧ್ಯಾನ ಮಾಡಬೇಕು. ಏಕೆಂದರೆ ಭೂಮಿಗೂ ಚಂದ್ರನಿಗೂ ನಡುವೆ ಒಂದು … Read more

ಅಂಗವಿಕಲತೆ: ಸಮಾಜದಲ್ಲಿ ಮುಂದುವರಿದ ಊಹಾಪೋಹಗಳ ಓರೆಹೊರೆ: ರಶ್ಮಿ ಎಂ. ಟಿ.

ಅಂಗವಿಕಲತೆ ಎಂಬುದು ಕೇವಲ ವೈದ್ಯಕೀಯ ಅಥವಾ ಶಾರೀರಿಕ ಪರಿಸ್ಥಿತಿಯಲ್ಲ, ಅದು ಹಲವಾರು ಸಾಮಾಜಿಕ ಮೂಡನಂಬಿಕೆಗಳು, ತಪ್ಪು ತಿಳುವಳಿಕೆಗಳು ಮತ್ತು ಅನಾವಶ್ಯಕ ಊಹಾಪೋಹಗಳಿಂದ ಕೂಡಿರುವ ಒಂದು ಸಾಂಸ್ಕೃತಿಕ ಅನುಭವವೂ ಹೌದು. ಈ ಕಾಲದಲ್ಲಿ ವೈದ್ಯಕೀಯ ಕ್ಷೇತ್ರ ಎಷ್ಟೇ ಅಭಿವೃದ್ಧಿಯಾಗಿದ್ದರೂ, ಅಂಗವಿಕಲತೆಯನ್ನು ಇಂದು ಕೂಡ ಕೆಲವು ಮಂದಿ “ಪೂರ್ವ ಜನ್ಮದ ಶಾಪ”, “ತಾಯಿ-ತಂದೆ ಮಾಡಿದ ಕರ್ಮ”, ಅಥವಾ “ಗಾಳಿ ಸೋಕು” ಎಂಬ ನಂಬಿಕೆಗಳ ಮೂಲಕ ನೋಡುತ್ತಿದ್ದಾರೆ. ಇವುಗಳೆಲ್ಲ ಸಮಾಜದಲ್ಲಿ ಆಳವಾಗಿ ಬೇರುಬಿಟ್ಟಿರುವ ಕುಂದಿದ ನಂಬಿಕೆಗಳು. ಒಂದು ಕಾಲದಲ್ಲಿ ಹೆಣ್ಣು ಮಗು … Read more

ವಚನದಲ್ಲಿ ಸಸ್ಯಜೀವಶಾಸ್ತ್ರ: ರೋಹಿತ್ ವಿಜಯ್ ಜಿರೋಬೆ

ವಚನದಲ್ಲಿ ಸಸ್ಯಜೀವಶಾಸ್ತ್ರ: ಬಸವಣ್ಣನ ವಚನಗಳಲ್ಲಿ ಪ್ರಕೃತಿಯ ಜೀವಚಲನಗಳ ಅನಾವರಣ “ಉದಕದೊಳಗೆ ಬಯ್ಚಿಟ್ಟ ಬಯ್ಕೆಯ ಕಿಚ್ಚಿನಂತಿದ್ದಿತ್ತು,ಸಸಿಯೊಳಗಣ ರಸದ ರುಚಿಯಂತಿದ್ದಿತ್ತು,ನೆನೆಯೊಳಗಣ ಪರಿಮಳದಂತಿದ್ದಿತ್ತು,ಕೂಡಲಸಂಗಮದೇವಾ, ಕನ್ನೆಯ ಸ್ನೇಹದಂತಿದ್ದಿತ್ತು!” ಬಸವಣ್ಣನವರು ಈ ನಾಲ್ಕು ಸಾಲುಗಳಲ್ಲಿ ಬರೆದ ವಚನವನ್ನು ಮೊದಲು ಓದಿದಾಗ ಅದು ಒಂದು ಭಕ್ತಿಪೂರ್ಣ ಕಾವ್ಯವಾಗಿ ತೋರುತ್ತದೆ. ಆದರೆ ಪ್ರತಿ ಸಾಲಿನಲ್ಲಿ ಅಡಗಿರುವ ತತ್ತ್ವಗಳು ಮತ್ತು ವೈಜ್ಞಾನಿಕ ಅರ್ಥಗಳು ನಮ್ಮನ್ನು ಆಳವಾಗಿ ಆಲೋಚನೆಗೆ ತರುವುದು. ಈ ವಚನ ಕೇವಲ ಭಕ್ತಿಯ ನಿರೂಪಣೆಯಲ್ಲ; ಇದು ಪ್ರಕೃತಿಯ ಜೀವಚಲನಗಳ ಸಂವೇದನಾತ್ಮಕ ಹಾಗೂ ವೈಜ್ಞಾನಿಕ ವಿಶ್ಲೇಷಣೆ ಕೂಡ ಹೌದು. … Read more

ಅಮಾಸ ಎಂಬ ದೇವನೂರು ಮಹಾದೇವ: ಸಂತೋಷ್ ಟಿ

ನಮ್ಮ ನಡುವಿನ ಸವ್ಯಸಾಚಿ ಲೇಖಕರಲ್ಲಿ ವಿಶಿಷ್ಟವಾದ ಪ್ರತಿಭೆಯ ಛಾಪನ್ನು ಮೂಡಿಸಿದ ಬರಹಗಾರ ದೇವನೂರು ಮಹಾದೇವ ಅವರು. ಜನಸಾಮಾನ್ಯರ ಆಶೋತ್ತರಗಳಿಗೆ ಬಂಡಾಯ ಮನೋಭಾವದ ಮೂಲಕ ಸ್ವಂದಿಸಿದ ಅವರ ಹೋರಾಟ ಮತ್ತು ಭಾಷಣಗಳು ಸಾಮಾಜಿಕವಾಗಿ ಸಾಂಸ್ಕೃತಿಕ ರಾಜಕಾರಣದಲ್ಲಿ ಪರಿಣಾಮಕಾರಿ. ಅವರು ಕೃತಿಗಳ ಮೂಲಕ ಕಟ್ಟಿಕೊಡುವ ಒಳನೋಟಗಳು ಪ್ರಾದೇಶಿಕ ಸ್ಥಳೀಯ ಗ್ರಾಮೀಣರ ಜೀವನವನ್ನು ತಲಸ್ವರ್ಶಿಯಾಗಿ ಕಂಡ ಅನುಭವ ಮತ್ತು ಭಾಷೆಯ ಸ್ವರೂಪ ವಿನೂತನ ಮಾದರಿ. ಕೃತಿಗಳು ತನ್ನ ಗಾತ್ರದಲ್ಲಿ ಕಿರಿದಾದರೂ ಅವು ಉಂಟುಮಾಡಿದ ಸಾಮಾಜಿಕ ಪಲ್ಲಟಗಳ ಪರಿಣಾಮಕಾರಿ ವಿಸ್ಮಯ ಸೋಜಿಗ ಪಡುವಂತದ್ದು. … Read more

‘ಕಾಮ’

‘ಅಮ್ಮನ ಗುಡ್ಡ’ ಕವಿತೆ ಮತ್ತು ಅದೇ ಹೆಸರಿನ ಕವನ ಸಂಕಲನದಿಂದ ಐವತ್ತು ವರ್ಷಕ್ಕೂ ಮೇಲ್ಪಟ್ಟು ಕಾವ್ಯರಸಿಕರ ಮನಸ್ಸಿನಲ್ಲಿ ಉಳಿದಿರುವ ಕವಿ ಚ. ಸರ್ವಮಂಗಳ. ಈ ಸಂಕಲನವು ೧೯೮೮ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡರೂ, ಇಲ್ಲಿನ ಕೆಲವು ಕವನಗಳ ರಚನೆಯು ೧೯೬೮ರಲ್ಲಿಯೇ ನಡೆದಿದೆ. ಬಾಲ್ಯಕಾಲ ಮತ್ತು ಪ್ರೌಢ ಅನುಭವ ಪ್ರಪಂಚಗಳ ನಡುವಿನಲ್ಲಿ ಅರಳುವ ಪ್ರಜ್ಞೆಯನ್ನು ಹಿಡಿಯಲು ಯತ್ನಿಸುವ ಈ ಸಂಕಲನ ನನ್ನನ್ನು ಬಹಳ ಕಾಲದಿಂದ ಕಾಡಿದೆ. ಇದರಲ್ಲಿ ನನ್ನನ್ನು ಬಹುವಾಗಿ ಆವರಿಸಿರುವ ಕವಿತೆ ‘ಕಾಮ’. ಕವಿತೆಯ ಪಠ್ಯ ಹೀಗಿದೆ: ಕಾಮನಿಧಾನವಾಗಿ … Read more

ಪಂಜು ಲೈಬ್ರರಿ

ಪಂಜು ಸಾದರ ಸ್ವೀಕಾರ ಕೃತಿ: ಜಯಂತಿಪುರದ ಕತೆಗಳುಪ್ರಕಾರ: ಕಥಾ ಸಂಕಲನಲೇಖಕರು: ಶ್ರೀಧರ ಬನವಾಸಿಪ್ರಕಾಶನ: ಪಂಚಮಿ ಮೀಡಿಯಾ ಪಬ್ಲಿಕೇಷನ್ಪುಟಗಳು: 272ಬೆಲೆ: Rs. 300/-ಪ್ರತಿಗಳಿಗಾಗಿ ಸಂಪರ್ಕಿಸಿ: 9740069123 ಕೃತಿ: ಪು ತಿ ನ ಮಲೆದೇಗುಲಪ್ರಕಾರ: ಕಾವ್ಯ ವಿಮರ್ಶೆಲೇಖಕರು: ಜ.ನಾ.ತೇಜಶ್ರೀಪ್ರಕಾಶನ: ಡಾ. ಪು ತಿ ನ ಟ್ರಸ್ಟ್ಪುಟಗಳು: 142ಬೆಲೆ: Rs. 150/-ಪ್ರತಿಗಳಿಗಾಗಿ ಸಂಪರ್ಕಿಸಿ: 9483913393 ಕೃತಿ: ನನ್ನ ಅಮೆರಿಕತೆಗಳುಪ್ರಕಾರ: ಅನುಭವ ಲೇಖನಲೇಖಕರು: ಗುರುಪ್ರಸಾದ್ ಕುರ್ತಕೋಟಿಪ್ರಕಾಶನ: ಪರಿಷ ಮಾಧ್ಯಮಪುಟಗಳು: 191ಬೆಲೆ: Rs. 200/-ಪ್ರತಿಗಳಿಗಾಗಿ ಸಂಪರ್ಕಿಸಿ: 99805 62045 ಕೃತಿ: ಕದಂಬಪ್ರಕಾರ: ಅನುವಾದಿತ ಲೇಖನಗಳುಲೇಖಕರು: … Read more

ಯುವ ಪುರಸ್ಕಾರ ಪ್ರಶಸ್ತಿಗೆ ಭಾಜನರಾಗಿರುವ ಶ್ರೀ ದಿಲೀಪ್ ಕುಮಾರ್ ಆರ್ ಅವರ ವಿಶೇಷ ಸಂದರ್ಶನ

ದಿಲೀಪ್ ಕುಮಾರ್ ಅವರೆ, ನಿಮ್ಮ “ಪಚ್ಚೆಯ ಜಗುಲಿ” ವಿಮರ್ಶಾ ಸಂಕಲನ ೨೦೨೫ ರ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ಪಂಜುವಿನ ಓದುಗ ಹಾಗು ಬರಹಗಾರರ ಪರವಾಗಿ ಅನೇಕ ಅಭಿನಂದನೆಗಳು. ೧. ಮೊದಲಿಗೆ ತಮ್ಮ ಕಿರು ಪರಿಚಯ ತಿಳಿಸಿ ನನ್ನೂರು ಚಾಮರಾಜನಗರ, ಹುಟ್ಟಿದ್ದು 1991 ರ ಮಾರ್ಚಿ 16 ಮೈಸೂರಿನಲ್ಲಿ. ತಂದೆ ದಿವಂಗತ ಎ. ಎಸ್. ರಾಮರಾವ್, ತಾಯಿ ಕೆ. ರಂಗಮ್ಮ ಮತ್ತು ತಮ್ಮ ಆರ್. ಪವನ್. ನನ್ನ ತಂದೆ ಆಟೋ ಚಾಲಕರಾಗಿದ್ದರು, ಅಮ್ಮ … Read more

ಟೈಮ್ ಪಾಸ್ ಆಗ್ತಿಲ್ವ…: ಮಧುಕರ್ ಬಳ್ಕೂರು

‘ಯಾಕೋ ಬೋರು. ಹ್ಯಾಗೆ ಟೈಂ ಪಾಸ್ ಮಾಡಬೇಕೋ ಗೊತ್ತಾಗ್ತ ಇಲ್ಲ.’‘ಸುಮ್ಮನೆ ಟೈಂಪಾಸ್ ಗೆ ಅಂತ ಕೆಲಸಕ್ಕೆ ಹೋಗ್ತಿದೀನಿ. ಇದರಿಂದ ನನಗೇನು ಆಗಬೇಕಾಗಿಲ್ಲ.’‘ಯಾಕೋ ಟೈಂ ಪಾಸ್ ಆಗ್ತಿಲ್ಲ ಕಣೋ. ಅದಕ್ಕೆ ಕಾಲ್ ಮಾಡ್ದೆ. ಮತ್ತೆ ಫುಲ್ ಫ್ರೀನಾ..?’‘ಅವನು ಜೊತೆ ಇದ್ದರೆ ತಲೆ ಬಿಸಿನೇ ಇಲ್ಲ. ತಮಾಷೆ ಮಾಡೋಕೆ ಕಾಲೆಳೆಯೋಕೆ ಒಳ್ಳೆ ಟೈಂ ಪಾಸ್ ಗಿರಾಕಿ.’‘ಹಾಳಾದ್ದು ಟೈಮು, ನಿದ್ದೆ ಮಾಡಿ ಎದ್ದರೂ ಮುಂದುಕ್ಕ್ ಹೋಗಲ್ಲ ಅನ್ನುತ್ತೆ.’ಓಹೋ, ಇದ್ಯಾಕೋ ತುಂಬಾ ದೊಡ್ಡ ಪ್ರಾಬ್ಲಮ್ಮೆ ಆಯಿತು. ನಿದ್ದೆ ಮಾಡಿ ಎದ್ರುನೂ ಟೈಂ ಮುಂದಕ್ಕೆ … Read more

ಬೊಮ್ಮವಾರದ ಶಾಸನ: ಸಂತೋಷ್ ಟಿ

ಕಾಲ: ಶಕವರ್ಷ ೧೨೭೭ಕ್ರಿ.ಶ ೧೩೫೪ರಾಜವಂಶ:ವಿಜಯನಗರ ಸಾಮ್ರಾಜ್ಯರಾಜ: ಹರಿಯಪ್ಪ ಓಡೆಯರು ಶಾಸನ ಪಾಠ ಈ ಕೆಳಕಂಡತೆ ೧. ಶ್ರೀ ಮತು ಸಕ ವರುಷ ೧೨೭೭ಜ೨. ಯ ಸಂವತ್ಸರದ (ಕಾ) ಸು ೧೫ ಶ್ರೀ ಮನು೩. ಮಹಾ ಮಂಡಳೇಶ್ವರಂ ಅರಿರಾಯ ವಿಭಾಡ೪. ಭಾಷೆಗೆ ತಪ್ಪುವ ರಾಯರ ಗಂಡ ಚತುಸಮು೫. ದ್ರಾಧಿಪತಿ ಶ್ರೀ ವೀರ ಹೇ೬. ರಿಯಪ್ಪ ಒಡೆಯರು ಪುತಿ೭. ವಿ ರಾಜ್ಯವಂ ಶ್ರೀ ಮನು ಮಹಾ೮. ಎಲಹಕ್ಕನಾಡ ಪ್ರಭುಗಳು ಸೊಣಪ.. ದೇ೯. ಣನ.. ಸರುರ ಬಯಿರಿದೇವ.. ವಾಗಟ೧೦. ದ ಮಾರದೇವಯ … Read more

ಮರ ಗಿಡು ಬಳ್ಳಿ – ಬಸವಣ್ಣನ ದೃಷ್ಟಿಯಲ್ಲಿ ಜೀವಜಾಲದ ಮಹತ್ವ: ರೋಹಿತ್ ಜಿರೋಬೆ

ಇಂದು ಮಾನವನು ತನ್ನ ಸ್ವಾರ್ಥಕ್ಕಾಗಿ ಪ್ರಕೃತಿಯನ್ನು ನಾಶಮಾಡುತ್ತಾ ಹೋಗುತ್ತಿರುವುದು ಹೊಸದೇನಲ್ಲ. ಮರ ಕಡಿತ, ಗಿಡಗಳ ತುಳಿವು, ಧಾನ್ಯಗಳ ಹತೋಟಿ – ಇವೆಲ್ಲವೂ ನಾವು ಸಾಧಾರಣವಾಗಿ ಗಮನಿಸದ ಪ್ರಪಂಚದ ದೈನಂದಿನ ಕ್ರಿಯೆಗಳು. ಆದರೆ, ಸಾವಿರ ವರ್ಷಗಳ ಹಿಂದೆಯೇ ಬಸವಣ್ಣನವರು ಸಸ್ಯಜಗತ್ತಿಗೆ ಜೀವವಿದೆ ಎಂಬುದನ್ನು ತಮ್ಮ ತತ್ತ್ವದಿಂದಲೇ ಸಾರಿದ್ದರು. ಅವರು ತಮ್ಮ ಈ ವಿಖ್ಯಾತ ವಚನದಲ್ಲಿ ಹೇಳುತ್ತಾರೆ: “ಮರ ಗಿಡು ಬಳ್ಳಿ ಧಾನ್ಯಂಗಳ ಬೆಳಸೆಲ್ಲವ ತರಿತರಿದುಪ್ರಾಣವ ಕೊಂದುಂಡು, ಶರೀರವ ಹೊರೆವ ದೋಷಕ್ಕೆಇನ್ನಾವುದು ವಿಧಿಯಯ್ಯಾಒಂದಿಂದ್ರಿಯ ಮೊದಲಾಗಿ ಐದಿಂದ್ರಿಯ ಕಡೆಯಾದಜೀವಜಾಲದಲ್ಲಿದೆ ಚರಾಚರವೆಲ್ಲ.ಅದು ಕಾರಣ,ಕೂಡಲಸಂಗನ … Read more

‘ಫಣಿಯಮ್ಮ’ ಕಾದಂಬರಿ ಮತ್ತು ಸಿನಿಮಾ : ಒಂದು ಕಥೆ ಎರಡು ದೃಷ್ಟಿ: ಡಾ. ಸುಶ್ಮಿತಾ ವೈ.

ಎಂ.ಕೆ. ಇಂದಿರಾ ಅವರ ‘ಫಣಿಯಮ್ಮ’ ಕಾದಂಬರಿಯನ್ನು ಆಧರಿಸಿ ರಚನೆಯಾದ ‘ಫಣಿಯಮ್ಮ’ ಸಿನಿಮಾ ೧೯೮೩ರಲ್ಲಿ ಬಿಡುಗಡೆಯಾಗಿದೆ. ಫಣಿಯಮ್ಮ ಸಿನಿಮಾದ ಯಶಸ್ಸಿಗೆ ಮುಖ್ಯವಾಗಿ ಕಾದಂಬರಿಯ ಕಥೆ ಹಾಗೂ ವಸ್ತುವೇ ಕಾರಣವಾದರೂ ಪ್ರೇಮಾ ಕಾರಂತರ ಚಿತ್ರಕತೆ ರಚನೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದ ಸಿನಿಮಾ ಕಾದಂಬರಿಯ ಅರ್ಥ ವಿಸ್ತಾರತೆಯನ್ನು ಸಾಧಿಸಿತು. ಸಿನಿಮಾ ಅನಕ್ಷರಸ್ಥರನ್ನೂ ತಲುಪಿ ಸಂಚಲನವನ್ನುಂಟು ಮಾಡಿತು. ಇಲ್ಲಿ ನಿರ್ದೇಶಕಿಯ ಮುಖ್ಯ ಗಮನವಿರುವುದು ಫಣಿಯಮ್ಮನ ಜೀವನದ ಕಥೆಯ ಜೊತೆಗೆ ಬ್ರಾಹ್ಮಣ ಸಮುದಾಯವು ಮಹಿಳೆಯರನ್ನು, ಅದರಲ್ಲೂ ವಿಧವೆಯರನ್ನು ವ್ಯವಸ್ಥಿತವಾಗಿ ಶತಮಾನಗಳಿಂದ ಶೋಷಿಸುತ್ತ ಬಂದಿದ್ದನ್ನು ಹೇಳುವುದು … Read more