ಎರಡು ಕಿರು ಲೇಖನಗಳು: ಹೆಚ್.ಕೆ. ಶರತ್, ಸಂದೇಶ್ ಎಲ್. ಎಂ.

ಬದುಕಿನ ಬುಡದಲ್ಲಿ ಅದೆಷ್ಟು ದ್ವಂದ್ವಗಳು? ಮಡುಗಟ್ಟಿದ ಮೌನ. ಮಾತಿನ ಮನೆಯಲ್ಲಿ ಸೂತಕ. ಸಂತಸ ಹೊತ್ತು ಮೆರೆಯುತ್ತಿದ್ದ ಮನಸ್ಸು ನೀರವತೆಯ ದಡದಲ್ಲಿ ನಿಸ್ತೇಜವಾಗಿ ಕೂತಿದೆ. ಅಕಾರಣವಾಗಿ ಬದುಕು ಬೇಸರವೆನಿಸಿದೆ. ಎಲ್ಲದಕ್ಕೂ ಕಾರಣ ಹುಡುಕುವ ಬುದ್ಧಿಗೆ ಸವಾಲೊಡ್ಡುವ ಅಕಾರಣಗಳ ನಡುವಲ್ಲಿ ಬದುಕಿನ ಬಹುದೊಡ್ಡ ಸಡಗರವಿದೆ. ಹಾದಿ ಬದಿಯಲ್ಲಿ ಕಣ್ಣಿಗೆ ಬಿದ್ದ ಅವಳನ್ನು ಆವಾಹಿಸಿಕೊಳ್ಳುವುದರಲ್ಲಿ ಇರುವುದು ಕೇವಲ ಅಕಾರಣ. ಎಲ್ಲವನ್ನೂ ಲೆಕ್ಕಾಚಾರದ ತಕ್ಕಡಿಯೊಳಗೆ ತೂಗಲು ಸಾಧ್ಯವಾದರೆ ಬದುಕು ಸಿದ್ಧ ಮಾದರಿಯೊಳಗೆ ಸಮಾಧಿಯಾದಂತಲ್ಲವೇ? ತಿಕ್ಕಲುತನ ಮೈಗಂಟಿಸಿಕೊಳ್ಳದೇ ಹೋದರೆ ಮನಸು ಹಗುರಾಗಿಸಿಕೊಳ್ಳುವುದು ಹೇಗೆ? ಗಾಂಭೀರ್ಯದ … Read more

ನಾನೇಕೆ ಬರೆಯುವುದಿಲ್ಲ?: ಎಂ. ಎಸ್. ನಾರಾಯಣ

‘ನಾನೇಕೆ ಬರೆಯುವುದಿಲ್ಲ’ ಎಂಬ ಪ್ರಶ್ನೆ ಈ ಹಿಂದೆಯೂ ಕೆಲವೊಮ್ಮೆ ನನ್ನನ್ನು ಕಾಡಿರುವುದು ನಿಜ. ಹೌದು, ಎಲ್ಲರೂ ಬರೆಯಲೇಬೇಕೆಂಬ ನಿಯಮವೇನೂ ಇಲ್ಲ. ಅಸಲು, ಕೆಲವರು ಬರೆಯದೇ ಇರುವುದೇ ಕ್ಷೇಮ. ಆದರೆ ಒಂದು ಮಟ್ಟಿಗೆ ಓದಿಕೊಂಡಿರುವ ನನ್ನಲ್ಲಿ ಬರೆಯಬೇಕೆಂಬ ಕಾಂಕ್ಷೆಗೇನೂ ಕೊರತೆಯಿಲ್ಲ. ಸಮಸ್ಯೆ ಏನೆಂದರೆ, ನನ್ನ ತಿಳುವಳಿಕೆಯಂತೆ ನನಗೆ ಸುಮಾರಾಗಿ ಬರುವ ಇಂಗ್ಲೀಷಿನಷ್ಟೂ ಚೆನ್ನಾಗಿ ಕನ್ನಡ ಬರುವುದಿಲ್ಲ. ಜೊತೆಗೆ ಗಣಕಯಂತ್ರದಲ್ಲಿ ಕನ್ನಡ ಬರೆಯುವ ಕೌಶಲ್ಯವೂ ಕಡಿಮೆಯೇ. ಇಷ್ಟೆಲ್ಲಾ ಇತಿಮಿತಿಗಳಿರುವಾಗ, ನಾನು ಬರೆದು ಏನಾಗಬೇಕು? ನಾನು ಬರೆಯದೇ ಇದ್ದಲ್ಲಿ ಸಮಸ್ತ ಕನ್ನಡ … Read more

ನಂಬಿಕೆ, ಮೂಢನಂಬಿಕೆ: ಅಖಿಲೇಶ್ ಚಿಪ್ಪಳಿ ಅಂಕಣ

ಹೊಸದಾಗಿ ಮದುವೆಯಾಗಿದ್ದ ದಂಪತಿಗಳು ಸಿನಿಮಾ ನೋಡಲು ಹೋಗಿದ್ದರು. ಅದೇನಾಯಿತೋ ಗೊತ್ತಿಲ್ಲ ಹೆಂಡತಿಗೆ ವಿಪರೀತ ತಲೆನೋವು ಶುರುವಾಯಿತು. ಗಂಡನಿಗೆ ಏನು ಮಾಡುವುದು ತಲೆ ಓಡಲಿಲ್ಲ. ಅಷ್ಟರಲ್ಲಿ ಪರಿಚಿತ ಡಾಕ್ಟರು ಅದೇ ಸಿನೆಮಾ ನೋಡಲು ಬಂದ್ದಿದ್ದರು. ಗಂಡ ಹೋಗಿ ಸಂಕೋಚದಿಂದ ಡಾಕ್ಟರಲ್ಲಿ ಅವಲತ್ತುಕೊಂಡ. ಡಾಕ್ಟರ್ ಬುದ್ಧಿವಂತನಿದ್ದ, ಥಿಯೇಟರ್‌ನ ಒಳಗಡೆ ಕತ್ತಲಿತ್ತು, ಗಂಡನಿಗೆ ಗೊತ್ತಾಗದ ಹಾಗೆ ತನ್ನದೆ ಕೋಟಿನ ಒಂದು ಗುಂಡಿಯನ್ನು ಕಿತ್ತು, ಈ ಮಾತ್ರೆಯನ್ನು ಬಾಯಲಿಟ್ಟುಕೊಳ್ಳಲು ಸಲಹೆ ಮಾಡಿದರು. ಹತ್ತು ನಿಮಿಷದಲ್ಲಿ ತಲೆನೋವು ಮಾಯ. ಗಂಡ-ಹೆಂಡತಿ ಸಿನಿಮಾವನ್ನು ಎಂಜಾಯ್ ಮಾಡಿದರು … Read more

ಪಂಜು ಪ್ರವಾಸ ಕಥನ ಸ್ಪರ್ಧೆ

  ಪಂಜು ಅಂತರ್ಜಾಲ ವಾರಪತ್ರಿಕೆ (https://www.panjumagazine.com/) ಮತ್ತು ಪಂಜು ಪ್ರಕಾಶನದ ವತಿಯಿಂದ ಪಂಜು ಪ್ರವಾಸ ಕಥನ ಸ್ಪರ್ಧೆಗೆ ನಿಮ್ಮ ಪ್ರವಾಸ ಕಥನಗಳನ್ನು ಆಹ್ವಾನಿಸಲಾಗಿದೆ. ಲೇಖನಗಳು ಸ್ವಂತ ರಚನೆಗಳಾಗಿರಬೇಕು. ಒಬ್ಬರು ಒಂದಕ್ಕಿಂತ ಹೆಚ್ಚು ಲೇಖನಗಳನ್ನು ಕಳುಹಿಸಬಹುದು (ಗರಿಷ್ಠ ಮಿತಿ 3 ಲೇಖನಗಳು). ಪ್ರತಿ ಲೇಖನಗಳು ಕನಿಷ್ಠ 3000 ಪದಗಳಿಂದ ಕೂಡಿರಬೇಕು (ಗರಿಷ್ಠ ಮಿತಿ 5 ಸಾವಿರ ಪದಗಳು). ಲೇಖನಗಳಲ್ಲಿ ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಅಂತರಾಷ್ಟ್ರೀಯ ಪ್ರವಾಸಗಳ ವೈವಿಧ್ಯತೆ ಇರಲಿ. ಸಾಧ್ಯವಾದರೆ ಲೇಖನಗಳ ಜೊತೆಗೆ ಲೇಖನಕ್ಕೆ ಹೊಂದುವ ನೀವೇ ತೆಗೆದಿರುವ … Read more

ಕನ್ನಡ ಪ್ರೇಮಿ: ಮಹಾಂತೇಶ್ ಯರಗಟ್ಟಿ

ನರಕಕ್ ಇಳ್ಸಿ, ನಾಲ್ಗೆ ಸೀಳ್ಸಿ ಬಾಯ್ ವೊಲಿಸ್ಯಾರೆದ್ರೊವೆ|| ಮೂಗ್ನಲ್ ಕನ್ನಡ ಪದವಾಡ್ತೀನಿ ನನ್ನ ಮನಸನ್ ನೀ ಕಾಣೆ|| ಈ ಮೇಲಿನ ಸಾಲುಗಳನ್ನು ಓದಿದರೆ ತುಂಬಾ ರೋಮಾಂಚನ ಅನಿಸುತ್ತೆ ಅಲ್ವಾ..? ನಮ್ಮ ನಾಡಿನ ಗಡಿ ಜಿಲ್ಲೆಯಾದ ಚಾಮರಾಜನಗರದ, ಗುಂಡ್ಲುಪೇಟೆಯ ಹಿರಿಯ ಸಾಹಿತಿಗಳಾದ ಶ್ರೀ ಜಿ.ಪಿ.ರಾಜರತ್ನಂರವರ ಈ ಸಾಲುಗಳು ನಿಜಕ್ಕೂ ಪ್ರತಿಯೊಬ್ಬ ಕನ್ನಡಿಗನನ್ನು ಬಡಿದ್ದೆಬ್ಬಿಸುತ್ತವೆ. ಅವರ ಅಪ್ಪಟ ಕನ್ನಡಾಭಿಮಾನವನ್ನು ಬಿಂಭಿಸುವ, ಈ ಸಾಲುಗಳಂತೆ ಇದೇ ಗುಂಡ್ಲುಪೇಟೆಯ “ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ” ದಲ್ಲಿ ಕಂಡಕ್ಟರಾಗಿ ಕೆಸಲನಿರ್ವಹಿಸುತ್ತಿರುವ, ಶ್ರೀ ನಟರಾಜ … Read more

ನ್ಯಾನೋ ಕತೆಗಳು: ಸುನೀತಾ ಮಂಜುನಾಥ್, ನವೀನ್ ಮಧುಗಿರಿ

ಒಂದಷ್ಟು ವಾಸ್ತವಗಳು ……….!!! ಬೆಳಗು ಬೈಗಿನ ಅನ್ನಕ್ಕೆ ಆ ಹೋಟಲಲ್ಲಿ ದುಡಿವ ಅವನು ಚೆಂದದ ಹುಡುಗ ನನ್ನ ಮಗಳ ವಯಸ್ಸೇ ಏನೋ … ಒಂದಷ್ಟು ನೀರೆದು ಹೊಸ ಬಟ್ಟೆ ಹಾಕಿದರೆ ನನ್ನ ಮಕ್ಕಳಿಗಿಂತ ಚೆಂದವೇನೋ … ಒಂದಷ್ಟು ಓದು ನೀಡಿದರೆ ನನ್ನ ಮಕ್ಕಳಿಗಿಂತ ಎತ್ತರಕ್ಕೇರುವನೇನೊ …. 'ಶಾಲೆಗೆ ಹೋಗುವೆಯೇನೋ ಪುಟ್ಟ'ಅಂದೆ 'ಈಗ ಹೋಗಿಬಂದೆ ಅವ್ವ, ಟೀ ಕೊಟ್ಟು ಬಂದೆ' ಅಂದ …. !!!!!!! 'ನಾ ಅಮ್ಮ ಆಗ್ತಾ ಇದ್ದೀನಿ ' ಅಂದ್ಲು ಅವನ ಕಣ್ಣಲ್ಲಿ ಖುಷಿ …. … Read more

ಆತ್ಮಹತ್ಯೆ; ಒಂದು ಚಿಂತನೆ: ದಿವ್ಯಾ ಆಂಜನಪ್ಪ

ಇತ್ತೀಚೆಗೆ ನಾಲ್ಕನೇ ತರಗತಿಯಲ್ಲಿ ವಿಜ್ಞಾನ ಪಾಠವೊಂದರ ಕುರಿತು ಚರ್ಚಿಸುತ್ತಿದ್ದ ಸಮಯ. ಪಾಠದ ಹೆಸರು "ಮಣ್ಣು". ಮಕ್ಕಳಿಗೆ ಮಣ್ಣು ಹೇಗಾಯಿತು? ಮಣ್ಣಿನ ರಚನೆ, ಮಣ್ಣಿನ ಉಪಯೋಗಗಳನ್ನು ಹೇಳುವಾಗ, ಇಂಧನವಾದ ಕಲ್ಲಿದ್ದಲು ಕುರಿತು ಚರ್ಚೆ ಬೆಳೆಯಿತು. ಹಾಗಾಗಿ ಪಾಠಕ್ಕೆ ಹೊರತಾಗಿದ್ದು ಹೆಚ್ಚಿನ ಮಾಹಿತಿಯೆಂದೇ ತಿಳಿದು ವಿಷಯಾಂತರವಾದರೂ ಸರಿಯೇ ಎಂದು ಅದರ ಬಗ್ಗೆಯೂ ಮಾಹಿತಿ ನೀಡುತ್ತಿದ್ದೆ. ಈಗಿನ ಶಿಕ್ಷಣ ಕ್ರಮದಲ್ಲಿ ವಿಷಯಾಂತರ ಎಂಬ ಮಾತಿಲ್ಲ. ಕನ್ನಡ ಪಾಠದಲ್ಲಿ ವಿಜ್ಞಾನದ ವಿಷಯಾಂಶ ಬಂದರೂ ಅದನ್ನು ಭೋದಿಸಿಯೇ ಮುಂದೆ ನಡೆಯಬೇಕು. ಮಕ್ಕಳಲ್ಲಿ ಯಾವುದೊಂದು ಪ್ರಶ್ನೆಯೂ … Read more

ದೀಪ..!!: ಸಚಿನ್ ಎಂ. ಆರ್.

ದೀಪ..!! ಕತ್ತಲೆಯ ಬಾಳಲ್ಲಿ ನೀನಾಗುವೆಯಾ ದೀಪ…? ಅರಸುತಿದೆ ಮನವು ಮುಗ್ಧತೆಯ ಪಾಪಾ.. ಹಳೆಯ ನೋವೆಲ್ಲವೂ ಘನಘೋರ ಶಾಪ.. ಬೇಡ ನನಗಾವುದೇ ಅನುಕಂಪದ ತಾಪ.. ದೀಪದ ಬುಡದಲ್ಲಿ ಕತ್ತಲೆ… ಕತ್ತಲೆಯ ಮೇಲೊಂದು ದೀಪ… ನನ್ನ ಬಾಳಿನ ಕತ್ತಲೆಗೆ ನೀನಾಗುವೆಯಾ ದೀಪ.. ನಂದದಾ ದೀಪ.. ಹುಡುಕುತಿದೆ ಮನವು ಬೆಳಕು ಕರೆದ ಎಡೆಗೆ.. ಕಿಡಿಗೇಡಿ ಬುದ್ಧಿಗೆ, ನನಬಾಳು ಒಡೆದ ಗಡಿಗೆ… ದುಡುಕಿದ ಮನಕೆ ಬೇಕೊಂದು ಭಾವ.. ಮಡಿದ ಮನಸಿಗೆ ಕೊಡುವೆಯಾ ಜೀವ…!! ಹಾಳಾದ ಮನಸು ಈ ಲೆವೆಲ್‌ಗೆ ಕವನ ಗೀಚ್ಕೊಂಡು, ಬಡಬಡಾಯಿಸಿಕೊಂಡು … Read more

ಓಜೋನ್-ವಿನಾಶ ಅನಿಲಗಳ ನಿಯಂತ್ರಣ: ಜೈಕುಮಾರ್

ದೈತ್ಯ ಕಂಪನಿಗಳ ಪರ ನಿಂತಿರುವ ಅಮೇರಿಕಾ ಅಮೇರಿಕಾ ದೇಶದ ಬಹುರಾಷ್ಟ್ರೀಯ ಕಂಪನಿಗಳು ಉತ್ಪಾದಿಸುವ ಅನಿಲಗಳನ್ನು ಮಾತ್ರವೇ ಶೀತಲೀಕರಣ (ರೆಫ್ರಿಜರೇಶನ್) ಉಪಕರಣಗಳಲ್ಲಿ ಉಪಯೋಗಿಸುವಂತೆ ಅಮೇರಿಕಾವು ಭಾರತದ ಮೇಲೆ ಒತ್ತಡ ಹಾಕುತ್ತಿದೆ. ಶೀತಲೀಕರಣಗಳಲ್ಲಿ ಬಳಸುವ ಅನಿಲಗಳು ಇತರೆ ಹಸಿರು ಮನೆ ಅನಿಲಗಳಂತೆ ಭೂಮಿಯ ತಾಪಮಾನಕ್ಕೆ ಕಾರಣವಾಗುತ್ತವೆ ಎಂಬ ಕಾರಣವೊಡ್ಡಿ ಅಮೇರಿಕಾ ತನ್ನ ಕಂಪನಿಗಳಿಗೆ ಭಾರತದಲ್ಲಿ ಮಾರುಕಟ್ಟೆ ಹುಡುಕುತ್ತಿದೆ.  ಶೀತಲೀಕರಣ ಅನಿಲಗಳನ್ನು ಎರಡು ಅಂತರಾಷ್ಟ್ರೀಯ ಒಪ್ಪಂದಗಳ ವ್ಯಾಪ್ತಿಗೆ ತರಲಾಗಿದೆ: ಮಾಂಟ್ರಿಯಲ್ ಒಡಂಬಡಿಕೆ ಮತ್ತು ಹವಾಮಾನದ ಬದಲಾವಣೆ ಕುರಿತ ವಿಶ್ವಸಂಸ್ಥೆ ಚೌಕಟ್ಟುಗಳ ಒಪ್ಪಂದ. … Read more

ಹುಟ್ಟು ಹಬ್ಬದ ಶುಭಾಶಯಗಳು ಸರ್: ರೇಣುಕಾ ಶಿಲ್ಪಿ, ಹೂವಿನಹಡಗಲಿ.

ಕನ್ನಡ ಸಾರಸ್ವತ ಲೋಕದಲ್ಲಿ ತಮ್ಮದೇ ಆದ ವಿಶಿಷ್ಟ ಕಥನ ಶೈಲಿಯಿಂದ ಜನಪ್ರಿಯರಾಗಿರುವ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕ್ರತ ಕತೆಗಾರ ಕುಂ.ವೀರಭದ್ರಪ್ಪ ಅವರಿಗೆ ಇದೇ ಅಕ್ಟೋಬರ್ 1 ರಂದು ಜನ್ಮದಿನದ ಸಂಭ್ರಮ. ಈ ಸುಸಂದರ್ಭದಲ್ಲಿ ‘ಕುಂವೀ ಯವರಿಗೆ ಈ ಕಿರು ಪರಿಚಯಾತ್ಮಕ ಲೇಖನದ ಮೂಲಕ ಶುಭ ಕೋರುವ ಪುಟ್ಟ ಪ್ರಯತ್ನವಿದು. ನಾನು ಮೊದಲ ಬಾರಿ ಅವರನ್ನು ಕಂಡದ್ದು ನನ್ನ ಹೈಸ್ಕೂಲು ದಿನಗಳಲ್ಲಿ. ಸರಿಸುಮಾರು ಹದಿನೈದು ವರ್ಷಗಳ ಹಿಂದೆ, ನನ್ನೂರು ಹೂವಿನಹಡಗಲಿಯಲ್ಲಿ- ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ … Read more

ಸೈಬರ್ ಕ್ರಾಂತಿ ಮಾರಕವೇ?: ಸಂದೀಪ ಫಡ್ಕೆ, ಮುಂಡಾಜೆ

ಡಿಜಿಟಲ್ ತಂತ್ರಜ್ಞಾನವನ್ನು ಬಗಲಲ್ಲಿಟ್ಟುಕೊಂಡು ಇಲೆಕ್ಟ್ರಾನಿಕ್ ಮಾಧ್ಯಮ ಮತ್ತು ಸಾಮಾಜಿಕ ತಾಣಗಳು ವಿಶ್ವವನ್ನೇ ಅಂಗೈಯಲ್ಲಿ ತಂದು ಕೂರಿಸಿವೆ. ಎಲ್ಲ ಕ್ಷೇತ್ರಗಳ ವಿದ್ಯಮಾನ ಮತ್ತು ದೈನಂದಿನ ಬದುಕಿನ ಪುಟ-ಪುಟಗಳು ಮುಕ್ತವಾಗಿ ಹರಡಲು ಅನುವು ಮಾಡಿಕೊಟ್ಟಿದೆ. ಇಷ್ಟೇ ಅಲ್ಲದೇ, ವಿವಿಧ ಸಂಘಟನೆಗಳ ಪ್ರತಿಭಟನೆಗಳಿಗೆ ಕುಮ್ಮಕ್ಕು ನೀಡಲೂ ಇವು ಹಿಂಜರಿಯುವುದಿಲ್ಲ. ವಾಕ್ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಎಲ್ಲರ ಗಮನ ಸೆಳೆಯುವಂತೆ ಮಾಡುವ ಉದಾರ ಗುಣ ಸೈಬರ್ ಕ್ರಾಂತಿಯ ಬೆನ್ನೆಲುಬು. ವಿವಾದಾತ್ಮಕ ಹೇಳಿಕೆಗಳ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳುವ ಮಂದಿಗೆ ಹೇಳಿ ಮಾಡಿಸಿದಂತಿರುವ … Read more

ವಿಚಾರವಾದಿ ಡಾ. ನರೇಂದ್ರ ದಾಬೋಲ್ಕರ್ ಕಗ್ಗೊಲೆ ವೈಚಾರಿಕತೆಯ ಮೇಲಿನ ಧಾಳಿ: ಜೈಕುಮಾರ್

          ಮೂಢನಂಬಿಕೆ, ಅಂಧಶ್ರದ್ಧೆ, ಕಂದಾಚಾರ ಹಾಗೂ ಜಾತಿ ತಾರತಮ್ಯಗಳ ವಿರುದ್ದ ಮಹಾರಾಷ್ಟ್ರದಲ್ಲಿ ಕಳೆದ ೨೫ ವರ್ಷಗಳಿಂದ ಹೋರಾಟ ಮಾಡುತ್ತಿದ್ದ ಖ್ಯಾತ ವಿಚಾರವಾದಿ ಡಾ: ನರೇಂದ್ರ ದಾಬೋಲ್ಕರ್ ರವರನ್ನು ಎರಡು ವಾರಗಳ ಹಿಂದೆ ಕೊಲೆ ಮಾಡಿರುವುದು ಎಲ್ಲೆಡೆ ಪ್ರತಿಭಟನೆ ಮತ್ತು ಆತಂಕಕ್ಕೆ ಕಾರಣವಾಗಿದೆ. ಅವರು ದಿ: ೨೦.೦೮.೨೦೧೩ ರಂದು ವಾಯುವಿಹಾರಕ್ಕೆ ಹೋಗಿದ್ದಾಗ ಅವರನ್ನು ಸಮಾಜಘಾತುಕ ಶಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ಮಾಯ, ಮಾಟ, ಮಂತ್ರಗಳಿಂದ ಅವರನ್ನು ಕೊಲ್ಲಲಾಗಿಲ್ಲ! ಡಾ: ನರೇಂದ್ರ ದಾಬೋಲ್ಕರ್ ರವರು ಮೂಲತ: … Read more

ಇದು ಜೈಲು ಹಕ್ಕಿಗಳ ಮಾದರಿ ಕಾಯಕ: ಹನಿಯೂರು ಚಂದ್ರೇಗೌಡ

ಅತಿಕಡಿಮೆ ಬಂಡವಾಳ-ಹೆಚ್ಚು ಆದಾಯದ ಉದ್ಯೋಗ; ಹಂದಿಸಾಕಾಣಿಕೆ       ಮನಸು ಮಾಡಿದರೆ ಏನು ಬೇಕಾದರೂ ಮಾಡಿ ತೋರಿಸಬಹುದೆನ್ನುವುದಕ್ಕೆ ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳ ಕೆಲಸ ಮಾದರಿಯಾಗಿದೆ. ಇತರ ಉದ್ಯೋಗಕ್ಕಾಗಿ ಅಲೆಯುವ ನಿರುದ್ಯೋಗಿ ಯುವಕರ ಪಾಲಿಗೆ ಇಲ್ಲಿನ ಕೈದಿಗಳು, “ಕೆಲಸ ತಮ್ಮ ಕೈಯಲ್ಲಿಯೇ ಇದೆ; ಆದರೆ, ಮನಸು ಮಾಡಬೇಕು” ಎಂಬುದನ್ನು ಬಂದಿಖಾನೆಯಲ್ಲಿ ಬಂಧಿಯಾಗಿದ್ದರೂ ಸ್ವತಃ ಹಂದಿಸಾಕುವ ಮೂಲಕ ಇಲಾಖೆಗೆ ಆದಾಯ ತಂದುಕೊಡುತ್ತಿದ್ದಾರೆ. ಆ ಮೂಲಕ ಪರಿಸ್ಥಿತಿ, ಸನ್ನಿವೇಶಕ್ಕೆ ಬಲಿಯಾಗಿ ಒಂದಿಲ್ಲೊಂದು ಅಪರಾಧವೆಸಗಿ ಜೈಲುಪಾಲಾಗಿರುವ ಇವರು, … Read more

ದುರ್ಗಾಸ್ತಮಾನದ ನೆಪದಲ್ಲಿ ತರಾಸು ನೆನೆಯುತ್ತಾ:ರಾಘವೇಂದ್ರ ಪದ್ಮಶಾಲಿ

" …. ಇತ್ತ ಕಡೆ ಮದಕರಿನಾಯಕ ವ್ಯಾಸರಾಯಮಠದ ಮೇಲೆ ನಿಂತು, ಕೋವಿ ಹಾರಿಸುತ್ತಾ ತನ್ನ ಸೈನಿಕರ ಹೃದಯದಲ್ಲಿ ಧೈರ್ಯ ತುಂಬುತ್ತಿರುವಾಗ, ಅತ್ತ ಹೈದರಾಲಿಯೂ ಮತ್ತಷ್ಟು ಸೇನೆಯೊಂದಿಗೆ ಬಂದು, ತನ್ನ ಕಡೆಯವರನ್ನು ಹುರಿದುಂಬಿಸಲು ಯತ್ನಿಸಿದ.  ಶತ್ರುಸೈನ್ಯದ ಮಧ್ಯದಲ್ಲಿ ಹೈದರಾಲಿಯ ಖಾಸಾ ಹಸಿರು ನಿಶಾನೆಯನ್ನು ಕಾಣುತ್ತಿದ್ದಂತೆಯೇ ದುರ್ಗದ ಸೈನಿಕರಲ್ಲಿ ಮತ್ತಷ್ಟು ರಣೋತ್ಸಾಹವೇರಿ, ಇಮ್ಮಡಿ ಹುರುಪಿನಿಂದ ಶತ್ರುಗಳನ್ನು ಸದೆಬಡಿಯಲಾರಂಭಿಸಿದರು. ಏರಿದ ಬಿಸಿಲಿನಲ್ಲಿ ಸಾವಿರಾರು ಖಡ್ಗಗಳು ಮಿಂಚುಗಳಂತೆ ಹೊಳೆಯುತ್ತಿದ್ದವು. ಕೋವಿಗಳ ಗುಂಡಿನ ಚಟಪಟ ಸದ್ದು, ತೋಫಿನ ಗರ್ಜನೆ, ಸೈನಿಕರ ರಣಕೇಕೆ – ದುರ್ಗದ … Read more

ಚೌತಿ ಹಬ್ಬ: ವೆಂಕಟೇಶ್ ಪ್ರಸಾದ್

ಕಳೆದ ನಾಲ್ಕು ದಿನಗಳಿಂದ ಮಳೆಯಿಲ್ಲದೆ ಬೇಸಿಗೆಯಂತಾಗಿದ್ದ ನನ್ನೂರು ಮೊನ್ನೆ ಶನಿವಾರ ಸುರಿದ ಹಠಾತ್ ಮಳೆಗೆ ಮತ್ತೆ ಮಳೆಗಾಲವನ್ನು ನೆನಪಿಸಿತ್ತು. ಚಹಾ ಕುಡಿಯುತ್ತ ಟೆರೆಸ್ನಲ್ಲಿ ಅಡ್ದಾಡುತ್ತಿದ್ದ ನನಗೆ ಪಕ್ಕದ ಶಾಲೆಯಿಂದ ತೇಲಿಬಂದ  ಗಜಮುಖನೇ ಗಣಪತಿಯೇ ನಿನಗೆ ವಂದನೇ ನಂಬಿದವರ ಬಾಳಿನ ಕಲ್ಪತರು ನೀನೇ ……. ಹಿನ್ನೆಲೆ ಸಂಗೀತ  ರಹಿತ ಎಸ್. ಜಾನಕಿ ಹಾಡು ಕ್ಷಣಕಾಲ ಆಶ್ಚರ್ಯವನ್ನುಂಟುಮಾಡಿತ್ತು. ಇದರ ಬೆನ್ನಿಗೆ ಬಂದ ಶರಣು ಶರಣಯ್ಯ …..  ಪಿ. ಬಿ . ಶ್ರೀನಿವಾಸ್ ಹಾಡು ಆಶ್ಚರ್ಯವನ್ನು ಇಮ್ಮಡಿಗೊಳಿಸಿತ್ತು!! ಇದೇನಪ್ಪಾ ನೋಡಿಬಿಡೋಣ ಎಂದು … Read more

ನೆನೆ ನೆನೆ ಮನವೆ: ಟಿ.ಕೆ.ನಾಗೇಶ್

ತೊದಲು ನುಡಿಯಿಂದ ಮೊದಲುಗೊಂಡು ನನ್ನ ಜೀವನ ರೂಪಿಸಿಕೊಳ್ಳುವವರೆಗೂ ನನ್ನನ್ನು ತಿದ್ದಿ ತೀಡಿ ನನಗೆ ವಿದ್ಯಾದಾನ ಮಾಡಿದ ನನ್ನ ಎಲ್ಲಾ ಶಿಕ್ಷಕರಿಗೂ ಹಾಗು ತಂದೆ ತಾಯಿಗೂ ಶಿಕ್ಷಕರ ದಿನಾಚರಣೆಯ ಶುಭಾಶಯಗಳು. ನಾನು ಒಬ್ಬ ಶಿಕ್ಷಕನಾಗಿ ಈ ದಿನ ನನ್ನ ನೆಚ್ಚಿನ ಶಿಕ್ಷಕರೊಬ್ಬರನ್ನು ನೆನೆ ನೆನೆದು ನನ್ನ ಪೂಜ್ಯ ಪ್ರಣಾಮಗಳನ್ನು ತಿಳಿಸಲು ಇಚ್ಚಿಸುತ್ತೇನೆ.  ಸಾವಿರದ ಒಂಬೈನೂರ ಎಂಬತ್ತೇಳರಲ್ಲಿ ನಾನು ಶಾಲೆಗೆ ಸೇರಿದ್ದು. ಶಿಕ್ಷಕರು ನಿವೃತ್ತಿಯ ಹಂತ ತಲುಪಿದ್ದರೂ ಬೆಳಿಗ್ಗೆ ನನ್ನ ಸ್ಲೇಟಿನಲ್ಲಿ ಮೂರು ಅಕ್ಷರಗಳನ್ನು ಬರೆದುಕೊಟ್ಟರೆ ಸಂಜೆಯವರೆಗೂ ಅದೇ ಅಕ್ಷರಗಳ … Read more

ಪ್ರಾಣೇಶ-ಕಲ್ಲೋಳ ಹಾಸ್ಯದ್ವಯರ ಸಂಗಮ:ಗುಂಡೇನಟ್ಟಿ ಮಧುಕರ ಕುಲಕರ್ಣಿ

ಸುಮಾರು ಹತ್ತು ವರ್ಷಗಳ ಹಿಂದೆ ಹಾಸ್ಯಲೇಖಕ ಅನಂತ ಕಲ್ಲೋಳರಿಂದ ಒಂದು ಕಾಗದ ನನಗೆ ಬಂದಿತ್ತು. ನಾನೊಂದು ಕಾರ್‍ಯಕ್ರಮದಲ್ಲಿ ಯುವಕನೊಬ್ಬನ ಹಾಸ್ಯ ಭಾಷಣವನ್ನು ಕೇಳಿದೆ, ತುಂಬಾ ಚನ್ನಾಗಿ ಮಾತನಾಡುತ್ತಾರೆ. ಜನ ಬಿದ್ದು ಬಿದ್ದು ನಕ್ಕರು. ನೀವು ’ಕ್ರಿಯಾಶೀಲ ಬಳಗ’ದಿಂದ ಆ ಯುವ ಹಾಸ್ಯಭಾಷಣಕಾರನ ಕಾರ್‍ಯಕ್ರಮವನ್ನಿಟ್ಟುಕೊಳ್ಳಬೇಕು. ಬೆಳಗಾವಿ ಜನರಿಗೆ ಅವರ ಭಾಷಣವನ್ನು ಕೇಳುವ ಅವಕಾಶ ಮಾಡಿಕೊಡಿ ಎಂದು ಕಾಗದ ಬರೆದಿದ್ದರು. ಅನಂತ ಕಲ್ಲೋಳರ ಪತ್ರದಲ್ಲಿ ಬರೆದಿರುವಂತೆ ಮುಂದೆ ನಗರದ ಸಾಹಿತ್ಯ ಭವನದಲ್ಲಿ ಆ ನಗೆಭಾಷಣಕಾರನ ಭಾಷಣವನ್ನಿಟ್ಟುಕೊಂಡಿದ್ದೆವು. ಅಂದು ಸಾಹಿತ್ಯ ಭವನ … Read more

ಪುಟ್ರಾಜು ಕತೆ: ಗವಿಸ್ವಾಮಿ

ಮಧ್ಯಾಹ್ನದ ಹೊತ್ತು. ಪಕ್ಕದ ಹಳ್ಳಿಯಲ್ಲೊಂದು ಕೇಸು ಮುಗಿಸಿಕೊಂಡು ವಾಪಸ್ ಬರುತ್ತಿದ್ದೆ. ಹೈವೇ ಬದಿಯಲ್ಲಿರುವ ಪುಟ್ಟರಾಜುವಿನ ಸೂರ್ಯಕಾಂತಿ ಹೊಲದಲ್ಲಿ ಐದಾರು ಮಂದಿ ಟೂರಿಸ್ಟುಗಳು  ಫೋಟೋ  ತೆಗೆಸಿಕೊಳ್ಳುತ್ತಿದ್ದರು. ಬಂಡೀಪುರ – ಊಟಿ ಕಡೆಗೆ ಹೋಗುವ  ಟೂರಿಸ್ಟುಗಳು ದಾರಿಯಲ್ಲಿ  ಎತ್ತಿನಗಾಡಿಯನ್ನು ಕಂಡರೂ ಫೋಟೊ ತೆಗೆಸಿಕೊಳ್ಳುತ್ತಿರುತ್ತಾರೆ. ಗಾಡಿ ಮೇಲೆ ಕೂತ ರೈತನಿಗೆ ಒಂಥರಾ ಬೆರಗು! ಪಾಪ ಅವರ ಕಡೆ ಇದೆಲ್ಲಾ ನೋಡೋದಿಕ್ಕೆ ಸಿಗೋದಿಲ್ವೇನೋ ಅಂದುಕೊಂಡು ಖುಷಿಯಿಂದ ಪೋಸು ನೀಡುತ್ತಾನೆ. ಇನ್ನು ಕೆಲ ಟೂರಿಸ್ಟರು ಆಲದ ಮರದ ಬೀಳಲುಗಳನ್ನು ಹಿಡಿದು ಜೋತಾಡುವ ತಮ್ಮ ಮಕ್ಕಳನ್ನು ನೋಡುತ್ತಾ ರಿಲ್ಯಾಕ್ಸ್ ಆಗುತ್ತಿರುತ್ತಾರೆ. … Read more

ಅಪಘಾತುಕಗಳು: ಸಚಿನ್ ಎಂ. ಆರ್.

  “ಏನ್ ಜನಗಳೋ ಏನೋ? ಮನುಷ್ಯತ್ವದ ಒಂದು ತುಣುಕಾದ್ರೂ ಬೇಡವಾ? ಅವರ ಮೂತಿಗಿಷ್ಟು ಬರೇ ಹಾಕಾ.. ಅವರ ಪಿಂಡ ಏಲಿಯನ್ ನೆಕ್ಕಾ.. ನಾನೇನಾದ್ರೂ ದೇವರಾಗಿದ್ರೆ, ನನ್ನತ್ರ ಏನಾದ್ರೂ ಸೂಪರ್ ನ್ಯಾಚುರಲ್ ಪವರ್ ಇದ್ದಿದ್ರೆ ಆಗ ತೋರಿಸ್ತಿದ್ದೆ ನನ್ನ ಕೆಪ್ಯಾಸಿಟಿನ, ಈಗಲೂ ನೆನಸ್ಕೊಂಡ್ರೆ ಎಲ್ಲೆಲ್ಲೋ ಉರಿತದೆ..” ಹೀಗೆ ಎರ್ರಾಬಿರ್ರಿ ಬೈಗುಳಗಳ ಸುರಿಮಳೆ ಸುರಿಸ್ತಾ ಇದ್ದ ನಮ್ಮ ಡೊಂಕೇಶ. ನಾನೂ ನಮ್ಮ ಕ್ರಾಕ್ ಬಾಯ್ ಇಬ್ಬರೂ ಲೆಮನ್ ಟೀ ಕುಡೀವಾ ಅಂತ ಹೋದೋರು, ಅಲ್ಲಿಯೇ ಇದ್ದ ನಮ್ಮ ಡೊಂಕೇಶನ ಆರ್ಭಟ … Read more

ಕಾಬೂಲಿನ ಕಥೆ: ನಟರಾಜ್ ಕಾನುಗೋಡು

ಇದು ನಾನು ಯೂರೋಪಿನ “1tv” ಕಾಬೂಲ್ ಬ್ರಾಂಚಿನಲ್ಲಿ ಕೆಲಸ ಮಾಡುವಾಗಿನ ಘಟನೆ. ನನಗೆ ಕಾಬೂಲ್ ತುಂಬಾ ಅಮೇರಿಕಾ ಹಾಗೂ ಯುರೋಪ್ ಸೈನಿಕರು ಎಲ್ಲೆಲ್ಲೂ ಕಾಣುತ್ತಿದ್ದರು. ಅಗ ನಾನು ಕಬೂಲಿಗೆ ಬಂದ ಹೊಸತು. ನನಗೆ ಏಕೋ ತಾಲಿಬಾನ್ ಮುಖ್ಯಸ್ಥನನ್ನು ಖುದ್ಧಾಗಿ ಭೆಟ್ಟಿಯಾಗುವ ಮನಸ್ಸಾಯಿತು. ನಾನು ಕೆಲಸ ಮಾಡುತ್ತಿರುವ ಚಾನೆಲ್ ಮುಖ್ಯಸ್ಥರನ್ನು ಕೇಳಿದೆ. ನಿರಾಶಾದಾಯಕ ಉತ್ತರ ದೊರೆಯಿತು. ಮತ್ತು ನನಗೆ ಅವರನ್ನು ಭೆಟ್ಟಿ ಆಗಲು ಅವಕಾಶ ನಿರಾಕರಿಸಲಾಯಿತು. ಕಾರಣ ಒಮ್ಮೆ ಅಲ್ಲಿಗೆ ಅವರ ಸಂದರ್ಶನಕ್ಕೆಂದು ಹೋದ ಯೂರೋಪಿನ ಒಬ್ಬ ವರದಿಗಾರ … Read more

ಮದುವೆ ಮನೆಯಲ್ಲಿ ಕಾವ್ಯದ ಹೂರಣ: ಡಾ.ಪ್ರಕಾಶ ಗ.ಖಾಡೆ.

ಈಗ ಏನಿದ್ದರೂ ಸಾಂದರ್ಭಿಕ ಕವಿಗೋಷ್ಠಿಗಳ ಕಾಲ. ಹಿಂದೆಲ್ಲ ಚೈತ್ರ ಕವಿಗೋಷ್ಠಿ, ಯುಗಾದಿ ಕವಿಗೋಷ್ಠಿ, ಸಮ್ಮೇಳನದ ಕವಿಗೋಷ್ಠಿಗಳು ನಡೆಯುತ್ತಿದ್ದುದು ವಾಡಿಕೆ. ಈಗ ಗೃಹ ಪ್ರವೇಶ, ಮಗುವಿನ ಹುಟ್ಟು ಹುಬ್ಬಗಳಲ್ಲದೆ ಮದುವೆ ಮನೆಗೂ ನಮ್ಮ ಕವಿಗೋಷ್ಠಿ ಪ್ರವೇಶ ಪಡೆದಿದೆ. ಇದು ಕಾವ್ಯ ಖಾಸಗಿಯಾಗುತ್ತಿರುವ ಜೊತೆಗೆ ಸಾರ್ವತ್ರೀಕತೆಯನ್ನು ಪಡೆಯುತ್ತಿರುವ ಸೂಚನೆಯಾಗಿದೆ. ಇಂದಿನ ಅವಸರದ ಜಗತ್ತಿನಲ್ಲಿ ಮೊದಲಿದ್ದ ಮದುವೆ ಸಂಭ್ರಮದ ಓಡಾಟ, ಹಾಡು, ಆಟಗಳೆಲ್ಲ ಹೇಳ ಹೆಸರಿಲ್ಲದೆ ಕಣ್ಮರೆಯಾಗುತ್ತಿರುವ ಹೊತ್ತಿನಲ್ಲಿ ಒಂದಿಷ್ಟು ಚಿಂತನೆಗೆ ತೊಡಗಿಸುವ ಕಾವ್ಯಗೋಷ್ಠಿಗಳು ಮದುವೆ ಮಂಟಪದಲ್ಲಿ ಕಾಣಸಿಗುತ್ತಿರುವದೂ ಒಳ್ಳೆಯ ಬೆಳವಣಿಗೆಯಾಗಿದೆ. … Read more

ಹೆಣ್ಣು ನಡೆದುಬಂದ ಹಾದಿ: ಗಾಯತ್ರಿ ಸಚಿನ್ ಹೆಗಡೆ

‘ಸ್ತ್ರೀ’ ಎಂದರೆ ಅಷ್ಟೇ ಸಾಕೆ?  ಎಂಬ ಕವಿವಾಕ್ಯವನ್ನು ಓದುವಾಗ ಈ ಪದ ಎಲ್ಲಿಂದ ಶುರುವಾಗಿರಬಹುದು ಎಂಬ ಯೋಚನೆ ಬಂತು. ಬಹುಶಃ ಭೂಮಿಯ ಜನನದಿಂದಲೇ ಪ್ರಾರಂಭವಾಯ್ತೇನೋ!! ಅದಕ್ಕೇ ಭೂಮಿಯನ್ನು ತಾಯಿ ಅಂತ ಕರೆದದ್ದಿರಬಹುದು. ಭೂಮಿಯನ್ನು ಸ್ತ್ರೀಯಾಗಿಸಿದ್ದು ಅಥವಾ ಸ್ತ್ರೀಯನ್ನು ಭೂಮಿಗೆ ಹೋಲಿಸಿದ್ದು ಅವರ ಕ್ಷಮಾಗುಣ ಮತ್ತು ಸಹನೆಯ ಕಾರಣದಿಂದಲೇ.. ಎಲ್ಲವನ್ನೂ ಸಹಿಸುವ ಮತ್ತು ಕ್ಷಮಿಸುವ ಗುಣ ಹೆಣ್ಣಿಂದಲ್ಲದೇ ಬೇರೆಯವರಿಂದ ಸಾಧ್ಯವೇ!? ಸಹನೆಯನ್ನು ದೌರ್ಬಲ್ಯವೆಂದು  ತುಳಿದು ಮಿತಿ ಮೀರಿದರೆ ಒಂದು ಕಂಪನ ಸಾಕು ಅವಳ ಶಕ್ತಿ ಅರಿವಾಗಲು ಇಂಥ ‘ಹೆಣ್ಣು’ … Read more

ಉಪನ್ಯಾಸಕರ ಅಮೂಲ್ಯ ಸಸ್ಯ ಸಂಪತ್ತ ವನ: ಹನಿಯೂರು ಚಂದ್ರೇಗೌಡ

ನಮ್ಮ ನಡುವೆ ಎರಡು ಮಾದರಿಯ ಜನರಿರುತ್ತಾರೆ; ಒಂದು ಮಾದರಿ, ಕೆಲಸ ಮಾಡುವುದರ ಬದಲು ಕೇವಲ ಉಪದೇಶಿಸುವವರು;  ಮತ್ತಿನ್ನೊಂದು ಮಾದರಿ, ಉಪದೇಶಿಸುವುದಷ್ಟೇ ಅಲ್ಲ ಆ ಕೆಲಸವನ್ನು ಸ್ವತಃ ಮಾಡಿ ತೋರಿಸುವವರು. ಮೊದಲನೆ ಸಾಲಿನಲ್ಲಿ ನಿಲ್ಲಬಲ್ಲವರು ಅನೇಕರು ಅನಾಯಾಸವಾಗಿ ನಮಗೆ ದೊರಕುತ್ತಾರೆ. ಆದರೆ, ಎರಡನೆಯ ಮಾದರಿಯ ಜನರು ಸಿಗುವುದು ಬಹಳ ವಿರಳವೇ.  ಅಂಥ ವಿರಳಾತಿ ವಿರಳ ವ್ಯಕ್ತಿಗಳಲ್ಲಿ ರಾಮನಗರ ಜಿಲ್ಲೆ, ಗೊಂಬೆನಗರ ಚನ್ನಪಟ್ಟಣ ತಾಲೂಕಿನ ಎಲೆಭೂಹಳ್ಳಿಯ, ವೃತ್ತಿಯಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿರುವ ಭೂಹಳ್ಳಿ ಪುಟ್ಟಸ್ವಾಮಿ ಒಬ್ಬರು.  ಇವರು ಪ್ರವೃತ್ತಿಯಲ್ಲಿ ಕವಿ, ಸಾಹಿತಿ, … Read more

ಜ್ಞಾನದ ಹರಿವಿನ ಸ್ಥಿತಿಗತಿ. ಏನು? ಎತ್ತ?: ರಕ್ಷಿತ್ ಶೆಟ್ಟಿ

ಒಂದು ಕಾಲವಿತ್ತು. ಬರಹಗಾರರು ಹಗಲಿರುಳೆನ್ನದೇ ಬರೆದು ತಮ್ಮ ಕೃತಿಗಳನ್ನು ಮುದ್ರಿಸಿ ಉರಿ ಮಳೆ ಚಳಿಯಲ್ಲಿಯೂ ಅಲೆದು ಪ್ರತಿಯನ್ನು ಮಾರುತ್ತಿದ್ದರು. ನಾಡು ನುಡಿಗಾಗಿ ಭಾಷೆಯ ಹಲವು ಮಗ್ಗುಲಲ್ಲಿ ಸಾಹಿತ್ಯ ಕೃಷಿ ಮಾಡಿ ಓದುಗರೊಡನೆ ಭಾವನೆಗಳನ್ನು ಬೆಸೆದುಕೊಳ್ಳುತ್ತಿದ್ದ ಸಮಯವದು. ಇಂಗ್ಲೀಷಿನ ಬರಹಗಾರರಿಗೆ ವಿಶೇಷ ಸ್ಕೋಪ್ ಸಿಗುತ್ತಿದ್ದರೂ ಸ್ವಭಾಷೆಯನ್ನು ಕೃತಿಗಳಲ್ಲಿ ಮೈತಾಳಿಸಿಕೊಂಡು ಭಾಷಾ ಸೇವೆ ಮಾಡಿರವುದು ಕೇವಲ ಕನ್ನಡಕ್ಕಷ್ಟೇ ಸೀಮಿತವಲ್ಲದ್ದು. ಅಂದಿನ ಓದು :- ಕೃತಿಯೊಂದನ್ನು ಮನೆಯವರೆಲ್ಲರೂ ಕಿತ್ತಾಡಿಕೊಂಡು ಆದಷ್ಟು ಬೇಗ ಓದುತ್ತಿದ್ದ ಕಾಲವಿತ್ತು. ಕಾಲ ಸಂದರ್ಭವೂ ಪೂರಕವಾಗಿದ್ದುದು ಬೇರೆ ಮಾತು. ವರ್ಷದಲ್ಲಿ ದುಡಿಯೋದನ್ನ ತಿಂಗಳಲ್ಲಿ ದುಡಿಯೋ ಧಾವಂತ ಆಗಿರಲಿಲ್ಲ. ಅನಕ್ಷರತೆಯಿಂದ ಅಕ್ಷರಸ್ಥತೆಯೆಡೆಗೆ … Read more

ಸ್ನೇಹ ಎಂಬ ನಂದಾದೀಪ: ಮಂಜು ಎಂ. ದೊಡ್ಡಮನಿ

  ಅಲ್ಲಿ ಎಲ್ಲಿಯೂ ಎಳ್ಳಷ್ಟು ನಿಮ್ಮ ತಪ್ಪು ಇರುವುದಿಲ್ಲ, ಇದ್ದರೂ ನೀವು ಬೇಕೆಂದು ತಪ್ಪು ಮಾಡಿರುವುದಿಲ್ಲ ನಿಮ್ಮ ಗಮನಕ್ಕೆ ಬಾರದೆ ಆದ ಸಣ್ಣದೊಂದು ತಪ್ಪನ್ನು ಅವರು ದೊಡ್ಡದಾಗಿಸಿ ನಿಮ್ಮದೇ ತಪ್ಪು ಎನ್ನುವಂತೆ ತಮ್ಮನ್ನು ತಾವು  ಸಮರ್ಥಿಸಿಕೊಳ್ಳುವ ನಿಟ್ಟಿನಲ್ಲಿ ನಿಮ್ಮೆದುರು ನಿಂತು ಪ್ರತಿಪಾದಿತ್ತಾರೆ, ಇಲ್ಲ ಸಲ್ಲದ ಆರೋಪಗಳನ್ನು ನಿಮ್ಮ ಮೇಲೆ ಹೊರಿಸುತ್ತಾರೆ, ಕಿಂಚಿಂತು ಬೆಲೆ ಕೊಡದೆ ಫುಲ್ ಸ್ಟಾಪ್ ಇಲ್ಲದೆ ಬಡ ಬಡ ಮಾತಾಡಿ, ಬಾಯಿಗೆ ಬಂದಂತೆ ಉವಾಚಿಸುತ್ತಾರೆ, ನೀವು ಎಷ್ಟೇ ಕಾರಣಕೊಟ್ಟರು ಏನೇ ಹೇಳಿದರು ಕೊನೆಗೆ ಸ್ವಾಭಿಮಾನ ಮರೆತು ಮಾಡದ ತಪ್ಪಿಗೆ ಕ್ಷಮೆ ಕೇಳಿದರೂ  ಅವರು ನಿಮ್ಮ  ಯಾವುದೇ justification ಅಥವಾ reason … Read more

ಹೀಗೊಂದು ಪ್ರಸಂಗ: ಗವಿಸ್ವಾಮಿ

ಮೊನ್ನೆ ಬೈಕಿನಲ್ಲಿ ಪಕ್ಕದ ಹಳ್ಳಿಗೆ ಹೊರಟಿದ್ದೆ. ಹೊರಡುವಾಗಲೇ ಸೂಜಿಗಾತ್ರದ ಹನಿಗಳು  ಗಾಳಿಯಲ್ಲಿ ಚದುರಿಕೊಂಡು ಉದುರುತ್ತಿದ್ದವು.  ಜನರ ಓಡಾಟ ಮಾಮೂಲಿನಂತೆಯೇ ಇತ್ತು.ಒಂದು ಮೈಲಿಯಷ್ಟು ಮುಂದೆ ಹೋಗುವಷ್ಟರಲ್ಲಿ  ಸೂಜಿ ಗಾತ್ರದ ಹನಿಗಳು  ದಬ್ಬಳದ ಗಾತ್ರಕ್ಕೆ ತಿರುಗಿದ್ದವು. ಎದುರುಗಾಳಿ ಬೀಸುತ್ತಿದ್ದರಿಂದ  ಹನಿಗಳು ಮುಖವನ್ನು ಅಡ್ಡಾದಿಡ್ಡಿ ಪಂಕ್ಚರ್ ಮಾಡತೊಡಗಿದವು. ಅಲ್ಲೇ ರಸ್ತೆ ಬದಿಯಲ್ಲಿದ್ದ ಹುಣಸೆಮರದಡಿಯಲ್ಲಿ ಗಾಡಿ ನಿಲ್ಲಿಸಿ ಫೇಸ್ ಬುಕ್ ಓಪನ್ ಮಾಡಿದೆ. ನೋಟಿಫಿಕೇಶನ್ ಐಕಾನ್ ಖಾಲಿ ಹೊಡೆಯುತ್ತಿತ್ತು. ಒಂದು ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಸಡನ್ನಾಗಿ ಓಕೆ ಕೊಡುವುದು ಬೇಡ, ನಿಧಾನಕ್ಕೆ ಕನ್ಫರ್ಮ್ ಮಾಡಿದರಾಯಿತು ಎಂದುಕೊಂಡು … Read more

ಕುವೆಂಪುರವರ ಕ್ರಾಂತಿ ಗೀತೆ: ದಿವ್ಯ ಆಂಜನಪ್ಪ

ಏನಾದರೂ ಆಗು, ನೀ ಬಯಸಿದಂತಾಗು, ಏನಾದರೂ ಸರಿಯೇ ಮೊದಲು ಮಾನವನಾಗು – ಎಂಬ ಮಾತಿನಿಂದ ಮಾನವನ ಮಾನವೀಯತೆಯನ್ನು ಕವಿ ಜಾಗೃತಗೊಳಿಸುವ ಪ್ರಯತ್ನವನ್ನು ನಡೆಸಿದ್ದಾರೆ. ಮನುಷ್ಯತ್ವವನ್ನೇ ಮರೆತಂತಹ ರಾಕ್ಷಸ ಕೃತ್ಯಗಳು ತಾಂಡವವಾಡುತ್ತಿರುವ ಕಾಲದಲ್ಲಿ ಇಂತಹ ಕವಿವಾಣಿಗಳು ಆಗಿಂದಾಗ್ಗೆ ಮನುಷ್ಯನ ಕಿವಿ ಮೇಲೆ ಬೀಳುತ್ತಿದ್ದಲ್ಲಿ ಸುಧಾರಣೆ ಕಾರ್ಯ ಸಾಧ್ಯವಾಗುವುದೆನೋ? ಎಂದೆನಿಸುತ್ತದೆ. ಇಂತಹದೇ ಸಂದೇಶ ಹೊತ್ತ ಮನುಜ ಮತಕ್ಕೆ ಒತ್ತನ್ನು ನೀಡಿದ ಅವರ ಕ್ರಾಂತಿಕಾರಿ ಗೀತೆಗಳ "ಅನಿಕೇತನ" ಕವನ ಸಂಕಲನದ "ಗುಡಿ, ಚರ್ಚು ಮಸಜೀದಿಗಳ ಬಿಟ್ಟು ಹೊರ ಬನ್ನಿ….ಎಂಬ ಕ್ರಾಂತಿ ಗೀತೆ. ಕವಿ ತಮ್ಮ ಈ ಗೀತೆಯಲ್ಲಿ ಸರ್ವ ಧರ್ಮ … Read more

ಕೊನೆಗಾಲದ ಕಥೆ ಹೇಳುವ ಚರ್ಚು:ಎಚ್.ಕೆ.ಶರತ್

ಒಂದೂರಿನ ಇತಿಹಾಸದ ಅಸ್ಥಿಪಂಜರದಂತಿರುವ ಚರ್ಚು, ಬರಗಾಲದ ಬವಣೆಯ ಬಿಡಿ ಚಿತ್ರಗಳನ್ನು ಕಟ್ಟಿಕೊಡುವ ಅಣೆಕಟ್ಟೆಯ ಹಿನ್ನೀರು, ವ್ಯವಧಾನ ಮತ್ತು ಧಾವಂತಕ್ಕೆ ರೂಪಕವಾಗಿ ನಿಂತಿರುವ ಸೇತುವೆ ಮತ್ತದರ ಮೇಲೆ ಚಲಿಸುವ ವಾಹನಗಳು, ಇಡೀ ಪರಿಸರಕ್ಕೆ ಸೊಗಸಾದ ಉಡುಗೆ ತೊಡಿಸುತ್ತಿರುವ ಸೂರ್ಯ, ಇರುವ ಅತ್ಯಲ್ಪ ನೀರಲ್ಲೇ ಬದುಕು ಕಟ್ಟಿಕೊಳ್ಳಲು ಬೆವರು ಹರಿಸುತ್ತಿರುವ ಶ್ರಮ ಜೀವಿಗಳು… ಹಾಸನದಿಂದ ಇಪ್ಪತ್ತು ಕಿಲೋ ಮೀಟರ್ ದೂರದಲ್ಲಿರುವ ಶೆಟ್ಟಿಹಳ್ಳಿ ಗ್ರಾಮದ ಹೊರವಲಯದಲ್ಲಿ ಸೇತುವೆ, ಚರ್ಚಿನ ಅಳಿದುಳಿದ ಭಾಗಗಳು ಮತ್ತು ಹೇಮಾವತಿ ಜಲಾಶಯದ ಹಿನ್ನೀರು ಸೇರಿ ನಿರ್ಮಿಸಿರುವ ಸುಂದರ … Read more

ಬದಲಾದ ಹುಬ್ಬಳ್ಳಿಯಲ್ಲಿ ಮತ್ತ ನಾಕಹೆಜ್ಜಿ: ಉಮೇಶ್ ದೇಸಾಯಿ

ಹೌದು ಅಗದಿ ಏನು ಬಹಳ ದಿನಾ ಆಗಿರಲಿಲ್ಲ ಹುಬ್ಬಳ್ಳಿಗೆ ಹೋಗಿ. ಅಲ್ಲಿ ಇಲ್ಲಿ ಫೇಸಬುಕ್ಕಿನ ಹುಬ್ಬಳ್ಳಿ ಮಂದಿ ಯಲ್ಲಿ ಅಲ್ಲಿನ ಸುದ್ದಿ ಅಪಡೇಟ್ ಆಗುತ್ತಲೇ ಇತ್ತು. ಈ ಸಲ ಟೈಮಿತ್ತು. ಹಂಗ ಒಬ್ಬಾವನ ಹುಬ್ಬಳ್ಳಿಯೊಳಗ ಸುತ್ತಾಕಿದೆ.. ಅಗದಿ ಎದ್ದುಕಾಣುವ ಬದಲಾವಣಿ  ಆಗಿದ್ದು  ಗೋಕುಲ್ ರೋಡನ್ಯಾಗ ಅಂತ (ಈಗ ಮತ್ತೆ  ಹಳೇ ಹೆಸರಿಂದ ಅದನ್ನ ಕರೀಬೇಕೋ ಬ್ಯಾಡೋ ಗೊತ್ತಾಗವಲ್ತು..).. ಅಲ್ಲಿ  ಏರಪೋರ್ಟ  ಅದ.  ಹಂಗ ಒಂದೆರಡು ಮಾಲ್  ಬಂದಾವ  ಅಂತ,  ಹಂಗ  ಕೆ ಎಫ್ ಸಿ, ಮೆಕ್ ಡೊನಾಲ್ಡು … Read more

ವಿಶ್ವದೆಲ್ಲೆಡೆ ಹರಡುತ್ತಿರುವ ಅಮೇರಿಕಾ ಬೇಹುಗಾರಿಕೆಯ ಜಾಲಬಂಧ: ಜೈಕುಮಾರ್

ಅಮೇರಿಕಾದ ಕ್ರಮ ಪ್ರಜಾಪ್ರಭುತ್ವಕ್ಕೆ ಅಪಾಯ : ಎಡ್ವರ್ಡ್ ಸ್ನೋಡೆನ್, ಮಾಜಿ ಸಿಐಎ ಉದ್ಯೋಗಿ “ನಾನು ಮತ್ತೆ ಮನೆಗೆ ತೆರಳುತ್ತೇನೆಂಬ ಭರವಸೆಯಿಲ್ಲ. ತಮ್ಮ ಹೆಸರಿನಲ್ಲಿ ಸರ್ಕಾರಗಳು ನಡೆಸುತ್ತಿರುವ ಕೃತ್ಯಗಳನ್ನು ಜನತೆಗೆ ತಿಳಿಸುವುದಷ್ಟೇ ನÀನ್ನ ಉದ್ದೇಶ. ನನಗೆ ರೂ. 1 ಕೋಟಿ ಸಂಬಳ, ಒಳ್ಳೆಯ ಗೆಳತಿ, ಹವಾಯಿ ದ್ವೀಪದಲ್ಲೊಂದು ಐಷಾರಾಮಿ ಮನೆ ಮತ್ತು ಆತ್ಮೀಯ ಬಂಧುವರ್ಗದವರೆಲ್ಲರೂ ಇದ್ದು ಆರಾಮ ಜೀವನ ನಡೆಸಬಹುದು. ಆದರೆ, ಇವೆಲ್ಲವನ್ನೂ ನಾನು ತ್ಯಾಗ ಮಾಡಲು ಸಿದ್ದನಿದ್ದೇನೆ. ಏಕೆಂದರೆ, ಅಮೇರಿಕಾ ವಿಶ್ವದಾದ್ಯಂತ ರಹಸ್ಯವಾಗಿ ನಿರ್ಮಿಸುತ್ತಿರುವ ಬೇಹುಗಾರಿಕಾ ವ್ಯವಸ್ಥೆಯು … Read more