ಕನ್ನಡ ರಂಗಭೂಮಿಯ ಇಳಯರಾಜ: ಪ್ರದೀಪ್ ಮಾಲ್ಗುಡಿ

ಇಸ್ಮಾಯಿಲ್ ಗೋನಾಳ್ ಕಾಲದ ಕರೆಗೆ ಓಗೊಟ್ಟಿದ್ದಾರೆ. ಆದ್ರೆ, ಅವರು ನಮ್ಮಂತವರೊಡನೆ ಬಿಟ್ಟು ಹೋಗಿರುವ ನೆನಪುಗಳು ಚಿರಂತನವಾಗಿರುತ್ತವೆ. ಅಲ್ದೇ, ಅವರು ನೀಡಿರುವ ರಂಗಸಂಗೀತ ಮತ್ತು ಕ್ಯಾಸೆಟ್ ಸಂಗೀತ ನಮ್ಮೊಡನೆ ಯಾವಾಗಲೂ ಇರುತ್ತವೆ. ಬಹುತೇಕ ಎಲ್ಲ ಸಂಗೀತ ಪರಿಕರಗಳನ್ನೂ ನುಡಿಸಬಲ್ಲವರಾಗಿದ್ದ ಇಸ್ಮಾಯಿಲ್, ಎಂದೂ ನನಗೆ ಇಷ್ಟು ಸಾಮಥ್ರ್ಯವಿದೆ ಅಂತ ಹೇಳಿಕೊಳ್ತಿರಲಿಲ್ಲ. ಕ್ಯಾಸೆಟ್ ಸಂಗೀತದ ಉತ್ತುಂಗದ ಶಿಖರದಲ್ಲಿದ್ದ ಅವಧಿಯಲ್ಲೇ ಅಲ್ಲಿಂದ ದಿಡೀರ್ ಅಂತ ಮಾಯವಾಗಿಬಿಟ್ಟು ಎಲ್ಲರಿಗೂ ಅಚ್ಚರಿ ಮೂಡಿಸಿದ್ರು. ಉತ್ತರ ಕರ್ನಾಟಕದ ಜಾನಪದ ಶೈಲಿಯ ಹಾಡುಗಳಿಂದ ಇವ್ರು ಸಂಗೀತ ಕ್ಷೇತ್ರದಲ್ಲಿ ಬಹಳ … Read more

ಸ್ನೇಹಲೋಕದಲ್ಲಿ ಹೊಸದಾದ ಭಾಷ್ಯ ಬರೆಯಬೇಕು…: ಸಿಂಧುಭಾರ್ಗವ್ ಬೆಂಗಳೂರು

ನಗುತಿರು ಪುಟ್ಟ ಮನವೇ ಬೆಳಂದಿಗಳಿನಂತೆ..! ನಾನಿರುವೆನು ಜೊತೆಗೆ ಎಂದಿನಂತೆ..!! ಈಗೀಗ ಎಲ್ಲವನೂ ಸ್ವೀಕರಿಸುವ ಧೈರ್ಯ ಬಂದಿದೆ..! ಮನದಲಿ ನೋವುನಲಿವು ಮಾಮೂಲಿಯಾಗಿದೆ..!! ~ ನಿಜವಾಗಿ ಹೇಳುವುದಾದರೆ ಈ ಜೀವನದ ಸಂತೆಯಲಿ ಸಿಕ್ಕಿದವನಾತ. ನನ್ನ ಮೊಗದಲ್ಲಿ ನಗುವ ಬಯಸಿದವನಾತ. "ಬಿಕ್ಕಿದ್ದು ಸಾಕು ನಿನ್ನ ನಗುಮೊಗವ ನಾ ನೋಡಬೇಕು" ಎಂದಾಗ ಮತ್ತಷ್ಟು ಬಿಕ್ಕಿಬಿಕ್ಕಿ ಅತ್ತಿದ್ದೆ. ಆ ಖುಷಿಯ ಯಾರಲ್ಲಿ ಹೇಳಲಿ.?! ಬೇಕಿತ್ತೇನೋ ಅವನೊಬ್ಬ ನನ್ನ ಕಣ್ಣೀರು ಒರೆಸಲೆಂದು. ಅದಕ್ಕೇ ಬಹಳ ಹತ್ತಿರಕ್ಕೆ ಸೇರಿಸಿಕೊಂಡೆ. ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಂಡೆ. ಪರವಾಗಿಲ್ಲ. "ನಾ ನಿನ್ನ … Read more

ಮಾತಿಗೊಂದು ಎಲ್ಲೆ ಎಲ್ಲಿದೆ. .: ಸ್ಮಿತಾ ಅಮೃತರಾಜ್. ಸಂಪಾಜೆ.

ಮಾನವ ಜನ್ಮ ದೊಡ್ಡದು ಅಂತ ದಾಸರು ಇದಕ್ಕೇ ಹೇಳಿರಬೇಕು. ಯಾಕೆಂದರೆ ನಾವು ಪ್ರಾಣಿ ಪಕ್ಷಿಗಳಿಂದ, ಕ್ರಿಮಿಕೀಟಾದಿಗಳಿಂದ, ಹೆಚ್ಚೇಕೆ ಸಕಲ ಜೀವ ಸಂಕುಲಗಳಿಗಿಂತ ಅದೆಷ್ಟೋ ಭಿನ್ನವಾದರೂ, ಅವರಿಗಿಂತ ರೂಪು ಲಾವಣ್ಯದಲ್ಲಿ ಮಿಗಿಲಾದರೂ, ಅದೆಲ್ಲಕ್ಕಿಂತ ಹೆಚ್ಚಾಗಿ ನಮಗೆ ಆಲೋಚಿಸುವ, ಯೋಚಿಸಿದ್ದನ್ನು ಹಿಂದು ಮುಂದು ನೋಡದೆ ಒದರುವ , ಅಂದರೆ ಮಾತನಾಡುವ ವಿಶೇಷ ಶಕ್ತಿ ಇರುವುದರಿಂದಲೋ ಏನೋ ನಾವುಗಳು ಎಲ್ಲರ ದೃಷ್ಟಿಯಲ್ಲಿ ಕೃತಾರ್ಥರಾಗಿರುವುದು. ಇನ್ನು ಮನುಷ್ಯನಿಗೆ ಬಾಯಿ ತಿನ್ನಲು ಮಾತ್ರ ಅಲ್ಲ, ಅದು ಮಾತನಾಡುವ ಕೆಲಸ ಕೂಡ ಮಾಡುತ್ತದೆ ಅಂದರೆ ಇದಕ್ಕಿಂತ … Read more

ಪ್ರಕೃತಿ ಧರ್ಮ: ವೈ.ಬಿ.ಕಡಕೋಳ

  ಇಳೆ ನಿಮ್ಮ ದಾನ, ಬೆಳೆ ನಿಮ್ಮ ದಾನ ಸುಳಿದು ಬೀಸುವ ಗಾಳಿ ನಿಮ್ಮಯ ದಾನ ನಿಮ್ಮ ದಾನವನುಂಡು ಅನ್ಯರ ಪೊಗಳುವ ಕುಣ್ಣಿಗಳನೆನೆಂಬೆ ರಾಮನಾಥ ಐದು ನೂರು ಕೋಟಿ ವರ್ಷಗಳ ಹಿಂದೆ ಭೂಮಿಯ ಉದಯವಾಯಿತು ಎಂದು ವಿಜ್ಞಾನಿಗಳು ಹೇಳುತ್ತಾರೆ.30 ಲಕ್ಷ ವರ್ಷದ ಹಿಂದೆ ಮಾನವ ವಿಕಾಸ ಈ ಭೂಮಿಯ ಮೇಲಾಯಿತು ಎನ್ನುವರು. 300 ವರ್ಷಗಳಿಂದೀಚೆಗೆ ಅಭಿವೃದ್ದಿಯ ಹೆಸರಿನಲ್ಲಿ ಪರಿಸರ ನಾಶ ನಮ್ಮ ಸುತ್ತ ಮುತ್ತ ನಡೆಯುತ್ತಿದೆ. ಜೂನ್ 5 ವಿಶ್ವ ಪರಿಸರ ದಿನ.ನಮ್ಮ ಸುತ್ತ ಮುತ್ತಲಿನ ಪರಿಸರ … Read more

ಪಂಜು ಕಾವ್ಯಧಾರೆ

ನಕ್ಷತ್ರಗಳೆಂದರಿಷ್ಟ  ಹೊಸ್ತಿಲು ದಾಟಿ ಬಂದಂತೆ ಕಂಡದ್ದು ಅರ್ಧಚಂದ್ರ ಚೆಲ್ಲಿದ ಮುದ್ದು ಬೆಳದಿಂಗಳು. ಹೊನಲಿನಲ್ಲಿ ಗೋಚರವಾಗಿ  ಹಗಲಲ್ಲಿ ಕಣ್ಮರೆಯಾಗುವ ದಿಗಂತದ ಪರದೆಯಲ್ಲಿ ಬೆಚ್ಚಿ ಬೀಳಿಸುವ  ಶಶಿಯ ಇಂದ್ರಜಾಲ. ನಭೋಮಂಡಲವೇ ರಾತ್ರೋರಾತ್ರಿ ಬೆತ್ತಲಾದಾಗ ನಕ್ಷತ್ರಗಳು ಜಿನುಗುತ್ತವೆ. ಬರಿಗಣ್ಣಿಗೆ ನಂಬಲಾರದಷ್ಟು ಹೆಸರಿಲ್ಲದ ತಾರಾ ಪುಂಜಗಳು ಮೋಡಿಗಾರನ ಕೈಯ ಅಂಕುಶದ ಮಾಯಾಜಾಲದೊಳಗೆ. ಯಾರೋ ದೇವಕನ್ನೆ ರಾತ್ರಿ ಆಕಾಶದಲ್ಲಿ ಜೋಡಿಸದೇ ಹಾಗೇ ಬಿಟ್ಟ ರಂಗೋಲಿ ಚುಕ್ಕಿಯಂತೆ ನೀವು. ನಗರದಾಚೆ ಗಲ್ಲಿಯಲ್ಲಿ ಮಲಗದೇ ಹಠ ಹಿಡಿದು ಅಳುತ್ತಿರುವ ಕಂದಮ್ಮನ ಕಣ್ಣಿಗೆ ನೀವೆಲ್ಲಾ ಹೊಳೆಯುವ ಆಟಿಕೆಗಳು. ಕಂಡಾಗಲೆಲ್ಲಾ … Read more

ಬಿಸಿಲನಾಡಿನಲ್ಲೊಂದು ಕಾವ್ಯಮನೆಯ ಉದ್ಘಾಟನೆ: ಕೆ.ಎಂ.ವಿಶ್ವನಾಥ ಮರತೂರ.

ಕರ್ನಾಟಕ ರಾಜ್ಯ ಹಲವು ವಿಶೇಷಗಳನ್ನು ಹುಟ್ಟುಹಾಕಿದೆ. ಇಡಿ ದೇಶ ಹಾಗೂ ಪ್ರಪಂಚದಲ್ಲಿ ಹಲವು ಪ್ರಥಮಗಳನ್ನು ಸೃಷ್ಠಿಸಿದ ಕೀರ್ತಿ ಕರ್ನಾಟಕಕ್ಕೆ ಸಲ್ಲುತ್ತದೆ. ಸಾಹಿತ್ಯ ಲೋಕದಲ್ಲಿ ಎಂಟು ಜ್ಞಾನಪೀಠ ಪಡೆದು, ಕನ್ನಡವನ್ನು ಶಾಸ್ತ್ರೀಯ ಭಾಷೆಯಾಗಿ ಮಾಡಿರುವ ಸಾಧನೆ ನಮ್ಮದು. ಇದೆಲ್ಲವೂ ಕನ್ನಡದ ಹೆಸರಾಂತ ಕವಿಗಳ ಸಾಹಿತ್ಯ ಮತ್ತು ಹೋರಾಟದಿಂದ ಸಾಧ್ಯವಾಗಿದೆ. ಕನ್ನಡ ಇಂದು ಬಹು ಶ್ರೀಮಂತವಾಗಿ ಬೆಳೆಯಲು ಹಲವರ ಕೊಡುಗೆ ಅಪಾರವಾಗಿದೆ.      ಪ್ರಸ್ತುತ ದಿನಗಳಲ್ಲಿ ಕಾವ್ಯ, ಕಥೆ, ಕಾದಂಬರಿ ಅರ್ಥ ಕಳೆದುಕೊಂಡು “ಕವಿತೆ ಯಾರು ಕೊಳ್ಳತ್ತಾರೆ” ಎಂಬ … Read more

ಮದರ್ಸ್ ಡೇ: ಪಾರ್ಥಸಾರಥಿ ಎನ್

ಸರೋಜಮ್ಮನವರಿಗೆ ಏಳುವಾಗಲೆ ಎಂತದೋ ಇರುಸುಮುರುಸು. ಎದ್ದು ಮುಖ ತೊಳೆದು ಕಾಫಿ ಕುಡಿಯಬೇಕಾದವರು,  ಎದ್ದು ಹತ್ತು ನಿಮಿಶವಾದರು ಹಾಸಿಗೆ ಮೇಲೆ ಕುಳಿತಿದ್ದರು. ನಂತರ ಎದ್ದು ಮುಖತೊಳೆದು ಅಡುಗೆ ಮನೆಗೆ ಹೋಗಿ ಸೊಸೆ ಮಾಡಿಕೊಟ್ಟ ಕಾಫಿ ಪಡೆದು, ನಡುಮನೆಗೆ ಬಂದು ಸೋಪಾ ಮೇಲೆ ಕುಳಿತರು. ಕಾಫಿ ಕುಡಿಯುತ್ತಿದ್ದರೂ, ಅದೆಂತದೋ ಹಿಂಸೆ, ಬಲಗಡೆ ಪಕ್ಕೆಯಲ್ಲಿ ಸಣ್ಣ ನೋವು.  ಅಲ್ಲಿಯೆ ಮತ್ತೊಂದು ಸೋಪದಲ್ಲಿ ಅಂದಿನ ಪತ್ರಿಕೆ ಹಿಡಿದು ಅದರಲ್ಲೆ ಮುಳುಗಿದ್ದ ಮಗ ಗೋಕುಲ್ ಕಡೆ ನೋಡಿದರು. ಅವನ ಮುಖದಲ್ಲಿ ಗಂಭೀರತೆ. ಮಗನ ಕೈಲಿ … Read more

ಗಂಟೆಯ ನೆಂಟನೆ ಓ ಗಡಿಯಾರ: ಸ್ಮಿತಾ ಅಮೃತರಾಜ್. ಸಂಪಾಜೆ

ಬೆಳಗು, ಮಧ್ಯಾಹ್ನ, ಸಂಜೆ ಇವೆಲ್ಲಾ ಕಾಲದ ಅಣತಿಯಂತೆ ನಿಯಮಾನುಸಾರ ನಡೆಯುವ ಸಂಗತಿಗಳು, ಇದು ಯಾವೊತ್ತೂ ಏರು ಪೇರಾಗುವುದಿಲ್ಲ, ಒಂದು ದಿನವೂ ಶೀತ, ನೆಗಡಿ, ಜ್ವರ ಅಂತ ರಗಳೆಗಳನ್ನು ನೀಡಿ ನುಣುಚಿಕೊಂಡು ಗೈರು ಹಾಜಾರಾಗುವುದಿಲ್ಲ, ಅತೀ ಹೊಂದಾಣಿಕೆಯಿಂದ ಹಗಲು ಪಾಳಿ ರಾತ್ರೆ ಪಾಳಿಯನ್ನು ಯಾವೊತ್ತೂ ಅದಲು ಬದಲು ಮಾಡಿಕೊಳ್ಳುವುದಿಲ್ಲ, ಅಸಲಿಗೆ ಅವರಿಬ್ಬರೂ ಯಾವೊತ್ತೂ ಮುಖಾ ಮುಖಿ ಸಂಧಿಸಿಕೊಳ್ಳುವುದಿಲ್ಲವೆಂಬ ಸತ್ಯ ಎಳೆ ಮಕ್ಕಳಿಗೂ ಗೊತ್ತಿರಬಹುದಾದ ವಿಚಾರ.  ಕಾಲ ನಮಗೆ ಏನೆಲ್ಲಾ ಸಾವಕಾಶಗಳನ್ನು, ಅವಕಾಶಗಳನ್ನು, ಮಾನ ಮರ್ಯಾದೆಯನ್ನು, ಸೋಲು ಗೆಲುವುಗಳನ್ನು ತಂದು … Read more

ನೆನಪಾಗುವರು: ಶೈಲಜ ಮಂಚೇನಹಳ್ಳಿ

ಈ ಹಿಂದೆ ಸಂಕ್ರಾಂತಿಯ ಮುನ್ನಾದಿನ ನನ್ನ ಪುಟ್ಟ ಕಂಪ್ಯೂಟರ್ ಸೆಂಟರ್‍ಗೆ ಒಂದು ಪ್ರಿಂಟರನ್ನು ಕೊಂಡು ತರಲು ಎಸ್.ಪಿ. ರಸ್ತೆಗೆ ಹೋಗಿದ್ದೆ, ಜೊತೆಯಲ್ಲಿ ನನ್ನಕ್ಕನ ಕಿರಿ ಮಗನನ್ನು ಕರೆದುಕೊಂಡು ಹೋಗಿದ್ದೆ. ಹಲವಾರು ಅಂಗಡಿಗಳಲ್ಲಿ ಹಲವಾರು ಬಗೆಯ ಪ್ರಿಂಟರ್‍ಗಳನ್ನು ಅವುಗಳ ಗುಣ-ಲಕ್ಷಣಗಳನ್ನು, ಬೆಲೆಗಳನ್ನು ಕೇಳಿ ತಿಳಿದುಕೊಂಡು ಅಲ್ಲಿರುವ ಒಂದು ಕಾಂಪ್ಲೆಕ್ಸ್‍ನಲ್ಲಿದ್ದ ಕೆಲವು ಅಂಗಡಿಯಲ್ಲಿ ಕೆಲವು ಪ್ರಿಂಟರ್‍ಗಳನ್ನು ವಿಚಾರಿಸಿ ಕಡೆಗೆ ಒಂದು ಅಂಗಡಿಯಲ್ಲಿ, ನಾನು ತೆಗೆದುಕೊಳ್ಳಬೇಕೆಂದಿದ್ದ ಪ್ರಿಂಟರ್ ಮತ್ತು ಇನ್ನೂ ಹಲವಾರು ಬಗೆಯ ಪ್ರಿಂಟರ್‍ಗಳನ್ನು ಮಾಲೀಕ ಕುಳಿತುಕೊಳ್ಳುವ ಜಾಗವನ್ನು ಸುತ್ತುವರೆದು ಪಟ್ಟಿಯಂತಿದ್ದ, … Read more

ಪ್ರೀತಿಯಾಚರಣೆಯ ಹಬ್ಬ: ಸಿಂಧುಚಂದ್ರ

ನಾನು ಪ್ರೀತಿಯಿಂದ ಕೊಂಡುತಂದಿದ್ದ ಜುಮಕಿ ಅದು. ಬಿಳಿ ಚೂಡಿದಾರಕ್ಕೆ ಒಳ್ಳೆಯ ಜೋಡಿಯಾಗುತ್ತಿತ್ತು. ಬಿಳಿಯ ಬಣ್ಣದ ಜುಮಕಿಗೆ ಹೊಳೆಯುವ ಹರಳುಗಳಿದ್ದವು. ತೂಗಾಡುವ ಬಿಳಿ ಬಣ್ಣದ ಮಣಿಗಳು ಅದರ ಅಂದವನ್ನು ಹೆಚ್ಚಸಿದ್ದವು. ಸಿಕ್ಕಾಪಟ್ಟೆ ಚಂದವಿದ್ದ ಆ ಜುಮಕಿಯನ್ನು ಹಾಕಿಕೊಳ್ಳಲು ಇನ್ನೂ ಮುಹೂರ್ತ ಬಂದಿರಲಿಲ್ಲ. ಅಂದೇಕೋ ಅವನು ಫೋನ್ ಮಾಡಿ ಎರಡುವರೆ ಎಕರೆ ವ್ಯಾಪಿಸಿರುವ ಪಿಳಲೆ ಮರವನ್ನು ನೋಡಲು ಹೋಗುತ್ತಿದ್ದೀನಿ, ಬರ್ತೀಯಾ ಎಂದು ಕೇಳಿದಾಗ ಇಲ್ಲವೆನ್ನಲಾಗಲಿಲ್ಲ. ನಾನು ಹೊಸ ಬಿಳಿ ಚೂಡಿದಾರ ತೊಟ್ಟು  ಅದೇ ಬಿಳಿ ಜುಮಕಿಯನ್ನು ಕಿವಿಗೆ ನೇತು ಹಾಕಿದೆ. … Read more

ಪ್ರೇಮವೆಂಬ ಸರಿಗಮಪ…: ಡಾ.ಪೂರ್ಣಿಮಾ ಸುಧಾಕರ ಶೆಟ್ಟಿ

‘ನಿನ್ನ ಕಣ್ಣ ಕಾಡಿಗೆಯಂತೆ ಕಾಪಿಟ್ಟುಕೊಂಡು ಬರುವೆ’ ಎಂದೆಯಲ್ಲ. ಆ  ನಿನ್ನ ಮಾತಿನಲ್ಲಿ ಎಷ್ಟು ಪ್ರೀತಿ ಇತ್ತು ಅನ್ನೋದು ಗೊತ್ತಾದಾಗ ಎಷ್ಟು ಖುಶಿ ಆಯ್ತು ಗೊತ್ತಾ? ಕ್ಷಮಿಸು.. ಒಂದು ಕ್ಷಣ ನಿನ್ನ ಮೇಲೆ ಸಂಶಯ ಪಟ್ಟಿದ್ದಂತೂ ನಿಜ. ಈಗ ನಾನು ಯಾರನ್ನೂ ನಂಬುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಆದರೆ ಕ್ರಮೇಣ ನಿನ್ನ ಪ್ರೀತಿಯ ಆಳವನ್ನು ಕಂಡು ಪುಳಕಿತಳಾದೆ.. ನಿನಗೊತ್ತಾ… ನಿನ್ನ ಪ್ರೀತಿಯನ್ನು ಸ್ವೀಕರಿಸುವ ಧೈರ್ಯವೂ ನನ್ನಲ್ಲಿರಲಿಲ್ಲ…ನಿನ್ನಿಂದ ದೂರವಾಗುವ ಕಲ್ಪನೆಯನ್ನೂ ಮಾಡುವ ಸ್ಥಿತಿಯಲ್ಲೂ ನಾನಿರಲಿಲ್ಲ.. ಅರ್ಥೈಸಿಕೊಳ್ಳಬಲ್ಲೆ ಅಲ್ವಾ ನನ್ನ ಪರಿಸ್ಥಿತಿಯನ್ನು…ಆ ಕಾರಣಕ್ಕಾಗಿ … Read more

ಮೈತ್ರಿ ಪ್ರಕಾಶನದ ಕಥಾಸಂಕಲನಕ್ಕಾಗಿ ಕತೆಗಳ ಆಹ್ವಾನ

ಹೊಸದಾಗಿ ಪ್ರಾರಂಭವಾಗಿರುವ 'ಮೈತ್ರಿ ಪ್ರಕಾಶನ' ಕನ್ನಡ ಕಥಾಪ್ರಪಂಚಕ್ಕೆ "ಧ್ವನಿಗಳು" ಎಂಬ ಕಥಾಸಂಕಲನವನ್ನು ಅರ್ಪಿಸಲು ಉದ್ದೇಶಿಸಿದೆ.  ಈ ಹಿಂದೆ ಪ್ರಕಟಿಸಿದಂತೆ "ಮಹಿಳೆಯರು  ಬರೆದ ಕಥೆಗಳು" ಎಂಬ ನಿರ್ಭಂದ ತೆಗೆದುಹಾಕಲಾಗಿದ್ದು , ಈಗ ಈ ಸಂಕಲನದಲ್ಲಿ ಕೆಳಗಿನ  ನಿಯಮಗಳಿಗೆ ಒಳಪಟ್ಟು ಯಾರು ಬೇಕಾದವರೂ ಕತೆ ಕಳಿಸಬಹುದಾಗಿದೆ. ಮೇಲಾಗಿ ಮೊದಲ ಮೂರು ಕತೆಗಳಿಗೆ ಬಹುಮಾನ ಘೋಶಿಸಲಾಗಿದ್ದು ಮೊದಲ ಬಹುಮಾನ ೫೦೦೦, ಎರಡನೇ ಬಹುಮಾನ ೩೦೦೦ ಮತ್ತು ಮೂರನೆಯ ಬಹುಮಾನವಾಗಿ ೨೦೦೦ ನಗದು ರೂಪದಲ್ಲಿ ಕೊಡಲು ನಿರ್ಧಾರಮಾಡಿರುವುದನ್ನು ತಿಳಿಸಲು ಅತ್ಯಂತ ಖುಶಿಯಾಗುತ್ತದೆ. ಒಟ್ತು … Read more

ಪರೀಕ್ಷೆಯ ದೀಕ್ಷೆ ದಾಟಿ…..: ಸಂಗೀತ ರವಿರಾಜ್

ದಿಗಿಲು ನೀಡುವಂತಹ ಸನ್ನಿವೇಶವನ್ನು  ನಾವಾಗಿಯೇ ಸೃಷ್ಟಸಿ, ಅನಾವಶ್ಯಕ ಆತಂಕ ಬಯಲುಪಡಿಸಿ ನಾವು ನಾವಾಗಿರದಂತೆ ದಿನಗಳ ಕಾಲ ತಲ್ಲಣಗೊಳಿಸಿಬಿಡುತ್ತದೆ ಈ ಪರೀಕ್ಷೆಯೆಂಬ ಮಾಯಕ. ಬದುಕು ಕ್ರಮಿಸುವ ಹಾದಿಯಲ್ಲಿ ಪರೀಕ್ಷೆಯೆ ಅತ್ಯಮೂಲ್ಯ. ಎಂಬುದು ಪ್ರತಿಯೊಬ್ಬರ ತಲೆಯಲ್ಲಿ ತುಂಬಿದ ನಂತರ ಇದು ಸುಲಭದಲ್ಲಿ ಬಿಟ್ಟು ಹೋಗುವಂತದ್ದಲ್ಲ. ಬದುಕು ಪಾಠ ಕಲಿಸಿ ಏಳು ಬೀಳುಗಳ ಸಮರ ಸಾರಿದ ನಂತರ ನಮಗಾಗಿಯೆ ಅರ್ಥವಾಗುವ ಮುನ್ನ ಪರೀಕ್ಷೆಯೆಂಬ ಚಿಂತೆ ಎಲ್ಲರಲ್ಲಿಯು ಇದ್ದೇ ಇರುತ್ತದೆ. ಈ ಅರ್ಥವಾಗುವ ಕಾಲ ಬಂದಾಗ ನಮ್ಮ ಅಂಕ ಗಳಿಕೆಯ ಪರೀಕ್ಷೆಗಳೆಲ್ಲವು ಮುಗಿದಿರುತ್ತದೆ! … Read more

ಪ್ರೊ. ಪ್ರಫುಲ್ಲ ಚಂದ್ರ ರೇ: ಗುರುರಾಜ್ ಜಯಪ್ರಕಾಶ್

ಪ್ರಫುಲ್ಲ ಚಂದ್ರರು ಆಗಸ್ಟ್ 2 1861, ಅವಿಭಜಿತ ಭಾರತದ ಬಂಗಾಳದ ಸುಶಿಕ್ಷಿತ ಮತ್ತು ಸುಸಂಸ್ಕೃತ ಕುಟುಂಬದಲ್ಲಿ ಜನಿಸಿದರು. ಇವರ ತಂದೆ ಹರೀಶ್ ಚಂದ್ರರು ಜಮೀನುದಾರರಾಗಿದ್ದರು ಗಳಿಕೆಯನ್ನೆಲ್ಲಾ ಒಂದು ಗ್ರಂಥಾಲಯ ಕಟ್ಟಲು ಬಳಸಿದರು. ಒಂಭತ್ತನೇ ವರ್ಷದ ವರೆಗೆ ಅವರು ತನ್ನ ತಂದೆಯ ಶಾಲೆಯಲ್ಲೇ ಕಲಿತರು, ಮುಂದಿನ ಅಭ್ಯಾಸಕ್ಕಾಗಿ ತಂದೆಯ ಪ್ರೋತ್ಸಾಹದೊಂದಿಗೆ ಕೋಲ್ಕತ್ತಾಗೆ ತೆರಳಬೇಕಾಯಿತು. ಅವರು ಶೇಕ್ಸ್‌ಪಿಯರ್‌ ಸಾಹಿತ್ಯ, ಇತಿಹಾಸ, ಭೂಗೋಳ, ಮತ್ತು ಪ್ರಸಿದ್ದ ಪುರುಷರಾ ಜೀವನಚರಿತ್ರೆಯನ್ನು ಪ್ರೀತಿಯಿಂದ ಓದಿದರು. ನಾಲ್ಕನೆಯ ತರಗತಿಯಲ್ಲಿ ತೀವ್ರ ಜೀರ್ಣಕಾರಿ ಅಸ್ವಸ್ಥತೆಯ ಕಾರಣದಿಂದ  ತಮ್ಮ … Read more

ಡಾ.ಖಾದರ ಎನ್ನುವ ಆರೋಗ್ಯ ವಿಜ್ಞಾನದ ಸಂತ: ಗುಂಡುರಾವ್ ದೇಸಾಯಿ

•    ನೀವು ಕಕ್ಕಸಕ್ಕೆ ಹೋದಾಗ ನೀರು ಹಾಕಿದ ಕೂಡಲೆ ಕಕ್ಕಸು ಸ್ವಚ್ಛವಾದರೆ ನೀವು ಆರೋಗ್ಯವಂತರು, ಅದು ಅಲ್ಲೆ ಹಿಡಿದುಕೊಂಡರೆ ನಿಮಗೆ ಏನೋ ತೊಂದರೆ ಇದೆ ಎಂದೆ ಅರ್ಥ •    ನಿಮ್ಮ ಮಕ್ಕಳಿಗೆ 15-20 ವರ್ಷಕ್ಕೆ ಶುಗರ್ ಗೆ ಬಲಿಯಾಗಿಸಬೇಕೆಂದಿದ್ದರೆ ನೂಡಲ್ಸ್ ತಿನ್ನಿಸಿ •    ನಿಮ್ಮ ಮುಂದಿನ ಪೀಳಿಗೆ ಬೊಕ್ಕತಲೆಯವರಾಗಬೇಕಾದರೆ ನೀವು ಪ್ಲಾಸ್ಟಿಕ್ ಬಾಟಲ್ ನೀರನ್ನೆ ಕುಡಿಯಿರಿ •    ನೂರು ಗ್ರಾಂ ಚಾಕಲೇಟ್ ನಲ್ಲಿ  4% ಜಿರಲೆ, 6% ಇಲಿ ಪಿಚ್ಚಿಕೆ ಇದ್ದೆ ಇರುತ್ತವೆ. ಹಾಗಾಗಿ ಆರಾಮಾಗಿ ನಿಮ್ಮ … Read more

ನಜ಼ರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

ನಜ಼ರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ ೧. ದೈವೇಚ್ಛೆ ಮುಲ್ಲಾ ನಜ಼ರುದ್ದೀನನೂ ಇತರ ಇಬ್ಬರು ಸಂತರೂ ಮೆಕ್ಕಾಗೆ ಯಾತ್ರೆ ಹೋದರು. ಅವರ ಪ್ರಯಾಣದ ಅಂತಿಮ ಭಾಗದಲ್ಲಿ ಒಂದು ಹಳ್ಳಿಯ ಮೂಲಕ ಹೋಗುತ್ತಿದ್ದರು. ಅವರ ಹತ್ತಿರವಿದ್ದ ಹಣ ಹೆಚ್ಚುಕಮ್ಮಿ ಮುಗಿದಿತ್ತು; ಅರ್ಥಾತ್ ಬಹು ಸ್ವಲ್ಪ ಉಳಿದಿತ್ತು. ಆ ಹಳ್ಳಿಯಲ್ಲಿ ಅವರು ಸಿಹಿ ತಿನಿಸು ಹಲ್ವಾ ಕೊಂಡುಕೊಂಡರು. ಆದರೆ ಅದು ಮೂರು ಮಂದಿಗೆ ಸಾಲುವಷ್ಟು ಇರಲಿಲ್ಲ, ಮೂವರೂ ಬಹು ಹಸಿದಿದ್ದರು. ಮಾಡುವುದೇನು? – ಪಾಲು ಮಾಡಿದರೆ ಯಾರ ಹಸಿವನ್ನೂ … Read more

ಕಾಡು(ವ) ಕಟ್ಟುವ ಕತೆ!! ಭಾಗ-೨: ಅಖಿಲೇಶ್ ಚಿಪ್ಪಳಿ

ಮಲೆನಾಡಿನ ಮಣ್ಣಿನ ಗುಣ ವಿಶಿಷ್ಠವಾದದು. ಒಂದು ಮಳೆಗಾಲ ಮುಗಿಯುವಷ್ಟರಲ್ಲೇ ನೈಸರ್ಗಿಕವಾಗಿ ಸಳ್ಳೆ, ಮತ್ತಿ, ಹುಣಾಲು ಗಿಡಗಳು ಚಿಗುರಿ ಮೇಲೆದ್ದು ಬರುತ್ತಿದ್ದವು. ಜೊತೆಗೆ ಮುಳ್ಳಿನಿಂದ ಕೂಡಿದ ಪರಿಗೆ ಕಂಟಿಗಳು ಹೇರಳವಾಗಿ ಎದ್ದು ಬಂದವು. ಹಸಿರು ಮರಳುಗಾಡಾಗಿದ್ದ ಜಾಗ ನಿಧಾನಕ್ಕೆ ವೈವಿಧ್ಯಮಯ ಹಸಿರಾಗಿ ಕಂಗೊಳಿಸಿತು. ಒಂದಷ್ಟು ಬಿದಿರು ಮೆಳ್ಳೆಗಳಿದ್ದವು. ಹೂ ಬಂದಾದ ಮೇಲೆ ಸತ್ತು ಹೋದವು. ನೈಸರ್ಗಿಕವಾಗಿ ಬಿದಿರು ಮೇಲೆದ್ದು ಬರಲು ಇನ್ನೂ ಸಮಯ ಬೇಕು. ಅಗಳದ ಪಕ್ಕದಲ್ಲಿ ಸುತ್ತಲೂ ರಸ್ತೆಯನ್ನು ನಿರ್ಮಾಣ ಮಾಡಲಾಯಿತು. ಈ ರಸ್ತೆಯಲ್ಲಿ ಒಂದು ಸುತ್ತು … Read more

’ಕಪ್ಪು ಹಣ’ವೆಂಬ ಮಾಯಾಮೃಗದ ದರ್ಬಾರು…?: ವಿಜಯಕುಮಾರ ಎಮ್. ಕುಟಕನಕೇರಿ

ನಮ್ಮ ದೇಶದ ಆಡಳಿತ ವ್ಯವಸ್ಥೆಯು ಬೇಲಿಯೇ ಎದ್ದು ಹೊಲವನ್ನು ಮೇಯ್ದ ಹಾಗಿದೆ. ದೇಶದ ಪ್ರಜೆಗಳು ರಾಜಕೀಯ ಅಥವಾ ಯಾವುದೇ ಮೇಲ್ದರ್ಜೆಯ ಸರ್ಕಾರಿ ಹುದ್ದೆಯನ್ನು ಪಡೆದುಕೊಂಡ ತಕ್ಷಣ ಅಧಿಕಾರದ ಚುಕ್ಕಾಣಿ ಹಿಡಿದು, ಇಡಿ ಆಡಳಿತ ವ್ಯವಸ್ಥೆಯನ್ನೆ ತಮ್ಮ ಕಪಿ ಮುಷ್ಟಿಯಲ್ಲಿರಿಸಿಕೊಳ್ಳುವ ಸ್ವಾರ್ಥತೆ ಬೆಳೆಯುತ್ತಿದೆ. ಇದರ ಬೆನ್ನಲ್ಲೆ ಅಧಿಕಾರವನ್ನು ಹಿಡಿಯಲು ಕಾರಣೀಕರ್ತರಾದ ಜನತೆಗೆ ಕಡೆಗಣನೆಯ ಶಾಪ ತಟ್ಟುತ್ತಿದೆ. ಸಮಾಜದಲ್ಲಿ, ಭ್ರಷ್ಟ ಅಧಿಕಾರದ ದಬ್ಬಾಳಿಕೆಯಲ್ಲಿ ಭ್ರಷ್ಟಾಚಾರದ ಪರಮಾಧಿಕಾರ ತಲೆಯೆತ್ತಿ, ಅಭಿವೃದ್ಧಿಯ ಹೆಸರಿನಲ್ಲಿ ಪ್ರಜೆಗಳ ಹಿತಾಸಕ್ತಿಗೆ ಮುಸುಕು ಮೆತ್ತಿಕೊಳ್ಳುತ್ತಿದೆ. ದೇಶದ ಪ್ರಜೆಗಳಿಂದ ಅಕ್ರಮವಾಗಿ … Read more

ಅರಣ್ಯ ಹಕ್ಕು ಮಾನ್ಯತೆ ಕಾಯಿದೆ ಮತ್ತು ಹವಾಮಾನ ಬದಲಾವಣೆ (ಭಾಗ 2): ಅಖಿಲೇಶ್ ಚಿಪ್ಪಳಿ

ಇಲ್ಲಿಯವರೆಗೆ ಅರಣ್ಯಹಕ್ಕು ಮಾನ್ಯತೆ ಕಾಯ್ದೆ ಜಾರಿ ಪ್ರಯತ್ನ ಹವಾಮಾನದ ಬದಲಾವಣೆಯ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದನ್ನು ಇಲ್ಲಿ ನೋಡೋಣ. ಸಾಗರ ತಾಲ್ಲೂಕಿನಲ್ಲಿ 29 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶವಿದೆ. ಹಾಗೂ ನೈಸರ್ಗಿಕ ಕಾಡನ್ನು ಸವರಿ ಎಂ.ಪಿ.ಎಂ.ನವತಿಯಿಂದ ಬೆಳೆಸಿದ 7100 ಹೆಕ್ಟರ್ ಅಕೇಶಿಯಾವೆಂಬ ಹಸಿರು ಮರಳುಗಾಡೂ ಇದೆ. ಕರ್ನಾಟಕ ಪವರ್ ಕಾರ್ಪೊರೇಷನ್‍ವತಿಯಿಂದ 653 ಹೆಕ್ಟೆರ್ ಅರಣ್ಯ ಪ್ರದೇಶವನ್ನು ಎಂ.ಪಿ.ಎಂ.ನವರಿಗೆ ಅಕೇಶಿಯಾ ಬೆಳೆದುಕೊಳ್ಳಲು ನೀಡಲಾಗಿದೆ. 1989-90ರಲ್ಲಿ ಜಾರಿಯಾದ ಬಗರ್‍ಹುಕುಂ ಕಾಯ್ದೆಯಡಿಯಲ್ಲಿ ಇದೇ ಅರಣ್ಯ ಪ್ರದೇಶದಲ್ಲಿ ಮಂಜೂರಾದ ಜಮೀನುಗಳ … Read more

ಅಂತರ್ಜಾಲ ಸಮಾನತೆ ಬುಡಮೇಲು ಮಾಡಲು ಫೇಸ್‍ಬುಕ್ ಕಂಪನಿ ಹುನ್ನಾರ: ಜೈಕುಮಾರ್ ಹೆಚ್.ಎಸ್.

 ‘ಫ್ರೀಬೇಸಿಕ್’ ಯೋಜನೆ ವಿರುದ್ದ ನೆಟ್ ಬಳಕೆದಾರರ ಹೋರಾಟ –    ಜೈಕುಮಾರ್.ಹೆಚ್.ಎಸ್ ದಿಕ್ಕುತಪ್ಪಿಸುವ ಜಾಹೀರಾತುಗಳು: ‘ಗಣೇಶ್ ಎಂಬ ಬಡ ರೈತ ಉಚಿತ ಇಂಟರ್‍ನೆಟ್ ಸೌಲಭ್ಯ ಪಡೆದದ್ದರಿಂದ ಒಳ್ಳೆಯ ಬೇಸಾಯ ಪದ್ದತಿಗಳನ್ನು ಅಳವಡಿಸಿಕೊಂಡು ಅಭಿವೃದ್ಧಿ ಹೊಂದಲು ಸಾಧ್ಯವಾಗಿದೆ. ಆದ್ದರಿಂದ ಫೇಸ್‍ಬುಕ್ ಕಂಪನಿಯ ಫ್ರೀಬೇಸಿಕ್ ನ್ನು ಬೆಂಬಲಿಸಿ’ ‘ರಾಹುಲ್ ಎಂಬ ಬಡ ಇಂಜಿನಿಯರಿಂಗ್ ವಿದ್ಯಾರ್ಥಿಯು ಉಚಿತ ಇಂಟರ್‍ನೆಟ್ ಸೌಲಭ್ಯ ಪಡೆದದ್ದರಿಂದ ಉತ್ತಮ ಸಂಶೋಧಕನಾಗುತ್ತಿದ್ದಾನೆ. ಆದ್ದರಿಂದ ಫೇಸ್‍ಬುಕ್ ಕಂಪನಿಯ ಫ್ರೀಬೇಸಿಕ್ ನ್ನು ಬೆಂಬಲಿಸಿ’ ಇಂತಹ ಫೇಸ್‍ಬುಕ್ ಕಂಪನಿಯ ಹತ್ತಲವು ಜಾಹೀರಾತುಗಳು ಜನತೆಯ ಕಣ್ಣು ಕಿವಿಗಳ … Read more