ಕನ್ನಡ ನಾಡಿನ ಸಾಹಿತ್ಯ ಲೋಕದ ಅದ್ವಿತೀಯ ಧ್ರುವತಾರೆ- ಡಿವಿಜಿ: ಹನಿಯೂರು ಚಂದ್ರೇಗೌಡ

  ಕನ್ನಡ ನಾಡಿನ ಸಾಹಿತ್ಯ ಲೋಕದ ಅದ್ವಿತೀಯ ಧ್ರುವತಾರೆ ಡಿವಿಜಿ.ಇವರ ಅನೇಕ ಅನನ್ಯ  ಸಾಧನೆಗಳ  ನಡುವೆ ನಮಗೆ ಶ್ರೇಷ್ಠವೆನಿಸಿರುವುದು  ತತ್ವಾಧಾರಿತವಾದ ಅವರ ಕಾವ್ಯಗಳಾದ "ಮಂಕುತಿಮ್ಮನ ಕಗ್ಗ" ಮತ್ತು "ಮರುಳ ಮುನಿಯನ ಕಗ್ಗ" ಗಳೇ  ಎನ್ನುವುದು ಸರ್ವವಿದಿತ. ಪತ್ರಿಕೋದ್ಯಮವೇ ಸರ್ವಸ್ವವೆಂದು ತಿಳಿದಿದ್ದ ಡಿವಿಜಿ ಸಾಹಿತ್ಯ ಲೋಕಕ್ಕೆ ಪಾದವಿರಿಸಿದ್ದು ಮಾತ್ರ ಅನಿರೀಕ್ಷಿತವೇ.ಆದರೂ ಅವರೊಬ್ಬ ದಾರ್ಶನಿಕ ಬರಹಗಾರ. 1887 ರ ಮಾರ್ಚ್ 17 ಜನಿಸಿದ  ಇವರಿಗೆ ಇಂದಿಗೆ  (ಮಾರ್ಚ್ 17, 2013ಕ್ಕೆ ) 126 ವಸಂತದ ಸಂಭ್ರಮ. ಈ ನೆಪದಲ್ಲೊಂದು ಅವರ … Read more

ಕುವೆಂಪುರವರ ಸೂರ್ಯಗೀತೆ; ಆನಂದಮಯ ಈ ಜಗಹೃದಯ: ದಿವ್ಯ ಆಂಜನಪ್ಪ

ಆನಂದಮಯ ಈ ಜಗಹೃದಯ……… ಕುವೆಂಪುರವರ ಸೂರ್ಯಗೀತೆಗಳಲ್ಲಿ ಪ್ರಸಿದ್ಧವಾದ ಈ ಗೀತೆಯೂ ಒಂದು. ಕವಿಗಳು ಈ ಜಗತ್ತಿನ ಎಲ್ಲಾ ಆಗೂ-ಹೋಗುಗಳ ಮೂಲವು 'ಶಿವ'ನೆಂದು ಭಾವಿಸುತ್ತಾರೆ. ಹಸುರಿನಿಂದ ನಳನಳಿಸುವ ಸಹ್ಯಾದ್ರಿಯಂತಹ ಬೆಟ್ಟಗಳು-ಅರಣ್ಯಗಳು. ಭೋರ್ಗರೆವ ಸಾಗರ, ನೀಲಿ ಆಕಾಶ, ಧುಮ್ಮಿಕ್ಕುವ ಜಲಧಾರೆ, ಸೋನೆ ಮಳೆ, ಹಕ್ಕಿಗಳ ಚಿಲಿಪಿಲಿ, ಮೋಡಗಳ ಘರ್ಜನೆ, ಹಾಡುವ ಕೋಗಿಲೆಗಳ ಕಂಠ ಸಿರಿ- ಹೀಗೆ ಪ್ರಕೃತಿಯ ಪ್ರತೀ ಸೌಂದರ್ಯದಲ್ಲೂ ಶಿವನ ಹೃದಯವು ವಿಸ್ತರಿಸಿದೆ ಎಂದು ಕವಿ ಉನ್ಮತ್ತರಾಗಿ ಹಾಡಿದ್ದಾರೆ. ಪ್ರಕೃತಿಯಲ್ಲಿ ಸಾಧಾರಣವಾಗಿ ಸಂಭವಿಸುವ ಸೂರ್ಯೋದಯ ಚಂದ್ರೋದಯವೂ ದೇವನ ದಯೆ … Read more

ವಾರಕೊಮ್ಮೆ ಯಶವಂತಪುರ ಸಂತೆ: ಶಿವು ಕೆ.

                   ಇತ್ತೀಚೆಗೆ ತೇಜಸ್ವಿಯವರ "ಸಂತೆ" ಕಥೆ ಓದಿದಾಗ ನನಗೂ ಸಂತೆಗೆ ಹೋಗಬೇಕೆನಿಸಿತ್ತು.  ನನ್ನ ಮಡದಿ ಪ್ರತಿ ಭಾನುವಾರ  ಸಂಜೆ  ಯಶವಂತಪುರ ಸಂತೆಗೆ ತರಕಾರಿ ಹಣ್ಣು ಹೂಗಳನ್ನು ತರಲು ಹೋಗುತ್ತಿದ್ದಳು.  ಹೋಗುವ ಮೊದಲು ನಾನು ಜೊತೆಯಲ್ಲಿ ಬರಬೇಕೆಂದು ತಾಕೀತು ಮಾಡುತ್ತಿದ್ದಳು.  ಮೊದಮೊದಲು ಅವಳು ಕರೆದಾಗ ನಾನು ಉತ್ಸಾಹದಿಂದ ಹೋಗುತ್ತಿದ್ದೆನಾದರೂ ಅಲ್ಲಿ ಆಗಾಗ ಆಗುವ ಕೆಲವು ಬೇಸರದ ಅನುಭವಗಳು ನೆನಪಾಗಿ,  ನನಗೆ ಬ್ಲಾಗು, ಫೋಟೊಗ್ರಫಿ ಇತ್ಯಾದಿ ಕೆಲಸಗಳಿದೆಯೆಂದು ತಪ್ಪಿಸಿಕೊಳ್ಳುತ್ತಿದೆ. … Read more

ಸಮಾಜ ಸುಧಾರಕಿ, ಮಹಿಳಾವಿಮೋಚಕಿ ಕ್ರಾಂತಿಜ್ಯೋತಿ ಮಾತೆ ಸಾವಿತ್ರಿಬಾಯಿ ಫುಲೆ: ಹಿಪ್ಪರಗಿ ಸಿದ್ದರಾಮ್

  ಪ್ರಾಚೀನ ಕಾಲದಿಂದಲೂ ನಮ್ಮ ದೇಶದ ಪರಂಪರೆಯನ್ನು ಅವಲೋಕಿಸುತ್ತಾ ಹೋದಂತೆ ಭರತಖಂಡವು ಅಮೂಲ್ಯವಾದ ಸಾಮಾಜಿಕ ಸಮಾನತೆಯ ವೈಚಾರಿಕ, ಪ್ರಗತಿಪರ ಮನಸ್ಸುಗಳಿಂದೊಡಗೂಡಿದ ಅಪೂರ್ವ ರತ್ನಗಳ ಗಣಿಯಾಗಿದೆ. ಸಮಾಜ ಸೇವೆ, ಸಾಹಿತ್ಯ, ಸಂಗೀತ, ಕಲೆ, ಸಂಸ್ಕೃತಿ ಹೀಗೆ ಹಲವಾರು ಸಂಗತಿಗಳನ್ನು ಆಯಾ ಕಾಲಘಟ್ಟವು ತನ್ನ ಮಡಿಲಲ್ಲಿ ಹುದುಗಿಸಿಟ್ಟುಕೊಂಡಿರುವುದನ್ನು ಕಾಣಬಹುದು. ಹೀಗಿದ್ದರೂ ಕೆಲವು ಸಂಗತಿಗಳು ಸಮಾಜದಲ್ಲಿ ಐಕ್ಯತೆಯ ಮಂತ್ರದೊಂದಿಗೆ ಸಾಮರಸ್ಯವನ್ನುಂಟು ಮಾಡುವಲ್ಲಿ ಯಶಸ್ವಿಯಾದರೂ ಮತ್ತೆ ಕೆಲವೊಮ್ಮೆ ಸಾಮಾಜಿಕವಾಗಿ ಬಲಿಷ್ಟರು, ತಾವೇ ಶ್ರೇಷ್ಟರು ಎಂಬ ದುರಂಹಕಾರ ಮನೋಭಾವದ ಕುಹಕಿಗಳ ಕಪಟತನಕ್ಕೆ ಸಾಕ್ಷಿಭೂತವಾಗಿ ಕಹಿ … Read more

ಗೆಲುವಿನಂಗಳದಿ ಮೂಡುತಿದೆ ಗೆಜ್ಜೆ ಕಾಲ್ಗಳ ಹೆಜ್ಜೆ ಗುರುತು: ಶ್ರೀವತ್ಸ ಕಂಚೀಮನೆ

ಕಾರ್ಯೇಶು ದಾಸಿ – ಕರಣೇಶು ಮಂತ್ರಿ – ಪೂಜ್ಯೇಶು ಮಾತಾ – ಕ್ಷಮಯಾ ಧರಿತ್ರಿ – ರೂಪೇಶು ಲಕ್ಷ್ಮಿ – ಶಯನೇಶು ರಂಭಾ ಎಂದು ಹೆಣ್ಣಿಗೆ ಹಲವಾರು ಶ್ರೇಷ್ಠ ಗುಣಗಳನ್ನು ಆರೋಪಿಸಿ, ತ್ಯಾಗ ಮೂರ್ತಿಯಾಗಿ ಚಿತ್ರಿಸಿ, ಹೊಗಳಿ ಅಟ್ಟಕ್ಕೇರಿಸಿ ಆಕೆಯ ಕಾರ್ಯ ವ್ಯಾಪ್ತಿಯನ್ನು ತನ್ನ ಮನೆಯ ಅಡಿಗೆ ಕೋಣೆ ಮತ್ತು ಶಯನಾಗಾರಕ್ಕೆ ಮಾತ್ರ ಸೀಮಿತಗೊಳಿಸಿದ ಪುರುಷ ಸಮಾಜ ಇಂದು ಸಣ್ಣಗೆ ಕಂಪಿಸುವಂತಾಗಿದೆ. ಕಾರಣ ಹೆಣ್ಣು ನಿಧಾನವಾಗಿ ಅಡಿಗೆ ಕೋಣೆಯ ಕಿಟಕಿಯಿಂದ ಆಚೆ ಗಂಡು ಕೇವಲ ತನ್ನದು ಎಂದುಕೊಂಡಿದ್ದ … Read more

ಮತ್ತೆ ಬಂದಿದೆ ಮಹಿಳೆಗೊಂದು ದಿನ !!: ಭಾಗ್ಯ ಭಟ್

  ಹಾಗೆ ನೋಡಿದ್ರೆ ಎಲ್ಲಾ ದಿನವೂ ಮಹಿಳೆಯರ ದಿನವೇ …. ಬೆಳಿಗ್ಗೆ ಎದ್ದು ಬಾಗಿಲಿಗೆ ನೀರು ಬಿಟ್ಟು ರಂಗೋಲಿ ಹಾಕೋದ್ರಿಂದ ಶುರು ಆಗಿ ರಾತ್ರಿ ಅರೆ ಊಟ ಮಾಡಿ ಮಗುವನ್ನು ಮಲಗಿಸಲು ಹೋಗೋ ತನಕ ಅದು ಅವಳಿಗೇ ಮೀಸಲಾದ ದಿನ … ಅವಳದ್ದೇ ದಿನಗಳೇ…  ಬಿಡುವಿಲ್ಲದ ದಿನಚರಿ ….  ಕೆಲವೊಂದಿಷ್ಟು ಕನಸುಗಳು … ಕಣ್ಣ ಮುಂದಿನ ಗುರಿ …. ಹೆಗಲ ಮೇಲೆ ಬೆಟ್ಟದಷ್ಟು ಜವಾಬ್ದಾರಿಗಳು … ಅತ್ತೆ ಮಾವಂದಿರ ಮೇಲಿನ ಕಾಳಜಿ ,ಅಪ್ಪ ಅಮ್ಮನ ಮರೆಯಲಾರದ ವಾತ್ಸಲ್ಯ … Read more

ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ: ರಾಜೇಂದ್ರ ಬಿ. ಶೆಟ್ಟಿ

ಯೋಗ ಅಂದರೆ ಏನೋ ಒಂದು ಅಲರ್ಜಿ. ಮಾಧ್ಯಮದವರು ಸುಮ್ಮನೆ ವಿಪರೀತ ಪ್ರಚಾರ ಕೊಡುತ್ತಿದ್ದಾರೆ ಅನ್ನುವ ಭಾವನೆ ನನ್ನಲ್ಲಿ ಬೇರೂರಿತ್ತು. ಮಂಗಳೂರಿನಿಂದ ಆಗಾಗ ದೂರವಾಣಿಯ ಮೂಲಕ ನನಗೆ ಕರೆ – ಒಂದು ವಾರ ಇದ್ದು ಯೋಗ ಕಲಿತು ಹೋಗಿ. ಆಮೇಲೆ ನೋಡಿ ನಿಮ್ಮಲ್ಲಿ ಆಗುವ ಬದಲಾವಣೆ. ಒಲ್ಲದ ಮನಸ್ಸಿನಿಂದ ಹೋದೆ. ಯೋಗದ ಮೊದಲ ಅಭ್ಯಾಸದಲ್ಲೇ ನನ್ನ ಅಭಿಪ್ರಾಯ ಬದಲಾಯಿತು ಎಂದು ಹೇಳುವ ಅಗತ್ಯವಿಲ್ಲ ಅನಿಸುತ್ತದೆ. ಮೊದಲ ಕ್ಲಾಸಿನ ಕೊನೆಯಲ್ಲಿ ನನ್ನ ಮುಖದಲ್ಲಿ ಮಂದಹಾಸವಿತ್ತು. ಮಗು ಒಂದು ಬಾವಿಗೆ ಬಿದ್ದು, … Read more

ಮೊಸರಾಯಣ: ಶ್ರೀನಿಧಿ ರಾವ್

ಆಗಿನ್ನೂ ಸಂಜೆ ಗೋಧೂಳಿ ಸಮಯ ಮರುಭೂಮಿಗೆ ಪಾದಾರ್ಪಣೆ ಮಾಡಿತ್ತು ಅಷ್ಟೇ. ರಾತ್ರಿ ಊಟಕ್ಕೆ  ಊರಿನಿಂದ ಬರೋವಾಗ ಎಲ್ಲ ತಂದಿದ್ದೆ, ಅನ್ನ ಮೊಸರು ಬಿಟ್ಟು ! ಅನ್ನ ಮಾಡಿದ್ದೂ ಆಯಿತು. "ಮೊಸರು ಬೇಕು ಇಲ್ಲಾಂದ್ರೆ ನಂಗೆ ಊಟ ಮಾಡಿದ್ದು  ಮಾಡಿದ ಹಾಗೆ ಆಗುವುದಿಲ್ಲ" ಅಂದಿದ್ದಕ್ಕೆ 'ಸರಿ' ಎಂದು ನನ್ನ  ರಾಯರು ತಂದು ಕೊಟ್ರು. ಅಯ್ಯಬ್ಬಾ !! ಅದು ಬರಿ ಸಪ್ಪೆ. ನಂಗೆ ಬರೀ ಕೆನೆ ಹುಳಿ ಹುಳಿ ಮೊಸರು  ತಿಂದೇ ಗೊತ್ತು!! 'ಥೂ! ಇದೂ ಒಂದು ಮೊಸರಾ ?' … Read more

ಸೆಂಟ್ ನರಸಿಂಹ : ವಿ.ಆರ್.ಕಾರ್ಪೆಂಟರ್

ನಾನಾಗ ಎಂಟನೇ ತರಗತಿ ಓದುತ್ತಿದ್ದೆ. ನಮ್ಮ ಮನೆಯ ಪಕ್ಕದಲ್ಲಿರುವ ದುಬ್ಬಪ್ಪನ ಹೊಲ ಕಟಾವು ಮುಗಿಸಿ ಇನ್ನೊಂದು ಬಿತ್ತನೆ ಶುರುವಾಗುವವರೆಗೂ ಊರಿನ ತಿಪ್ಪೆಯಂತೆ ಕಂಗೊಳಿಸುತ್ತದೆ. ನಾನು ನನ್ನ ಸ್ನೇಹಿತರೊಡನೆ ಅಲ್ಲಿಯೇ ಕ್ರಿಕೆಟ್, ಗೋಲಿ, ಸೈಕಲ್ ರೇಸ್, ಚಿಲ್ಲೀ ದಾಂಡು, ಬಂಗ್ರ (ಬುಗರಿ), ಪ್ಯಾಕೇಟ್ (ಸಿಗರೇಟ್ ಪ್ಯಾಕ್), ಲಗೋರಿ ಆಡುತ್ತಲೇ ಅಲ್ಲಿನ ತಿಪ್ಪೆಗಳಲ್ಲಿ ಸಿಗುವ ನಾಣ್ಯ, ಕಬ್ಬಿಣ, ತಾಮ್ರದ ವಸ್ತುಗಳನ್ನು ತಡಕುತ್ತಿದ್ದೆವು. ಒಂದೊಂದು ಸಾರಿ ಇಡೀ ತಿಪ್ಪೆಯನ್ನೇ ಬುಡಮೇಲು ಮಾಡಿ! ಅದರಿಂದ ಸಿಗುವ ಹಣದಲ್ಲಿ ಬಾಯಿ ಚಪಲ ತೀರಿಸಿಕೊಳ್ಳುತ್ತಿದ್ದೆವು. ಅಲ್ಲಿ … Read more

ದೇವನೂರು ಪೋಸ್ಟ್ : ಹರಿ ಪ್ರಸಾದ್

ಶ್ರೀ ದೇವನೂರ ಮಹಾದೇವ ಅವರಿಗೆ,   ಆ ದಿನ ನಿಮ್ಮ ಸಂಪಾದಕತ್ವದಲ್ಲಿ ಪ್ರಜಾವಾಣಿ ವಿಶೇಷ ಸಂಚಿಕೆ ತಂದಿದೆ ಅಂತ ಮೈಸೂರಿಂದ ಫೋನ್ ಮಾಡಿದ ಪ್ರಸಾದ್‌ಕುಂದೂರಿಯು  ಹೇಳಿದನು. ಆಗ ನಾನು  ಊರಿನಲ್ಲಿದ್ದೆ. ಕಳೆದ ೧೫ ವರ್ಷಗಳಿಂದ ಊರಿಗೆ ಪರಕೀಯನಾಗಿದ್ದು, ಈಗ ೬ ತಿಂಗಳಿನಿಂದ ಊರಿನವನಾಗಲು ಕಷ್ಟಪಡುತ್ತಿರುವ ಕಾಲದಲ್ಲಿ ನೀವೊಂದು ಸಂಚಿಕೆ ಮಾಡಿದ್ದೀರ ಅನ್ನೋದೆ ಉತ್ಸಾಹವಾಯಿತು. ಇಲ್ಲಿ ಊರಲ್ಲಿದ್ದಾಗ ಕಾಲ, ದಿನಾಂಕಗಳು ಪರಿವೆಗೇ ಬರುವುದಿಲ್ಲ. ಆವತ್ತು ಅಂಬೇಡ್ಕರ್ ಜಯಂತಿ ಅಂತ ಕೂಡ ಮರ್‍ತುಹೋಗಿತ್ತು. ಅಂಬೇಡ್ಕರ್ ಜಯಂತಿ ಅಂದಾಗೆಲ್ಲ ’ಯಾವ ಕುಲವಯ್ಯ … Read more

ಗಾಂಧೀಜಿಯವರ ಅಹಿಂಸಾ ತತ್ವ: ರವಿ ತಿರುಮಲೈ

ಆಧುನಿಕ ಪ್ರಪಂಚದ ಚರಿತ್ರೆಯಲ್ಲಿ ಗಾಂಧೀಜಿಯವರ ' ಅಹಿಂಸೆ '  'ಅಸಹಕಾರ' ಮತ್ತು 'ಸತ್ಯಾಗ್ರಹ' ದ ಭಾವನೆ, ಸಿಧ್ಧಾಂತ ಅಥವಾ ತತ್ವಗಳು ಪ್ರಧಾನವಾಗಿ  ಎದ್ದು ಕಾಣುತ್ತವೆ. ಈ ಸಿಧ್ಧಾ೦ತಗಳು , ಭಾರತೀಯರಿಗೆ, ಬ್ರಿಟಿಷರನ್ನು ಭಾರತದಿಂದ ತೊಲಗಿಸಲು ಹೂಡಿದ ಆಂದೋಲನದಲ್ಲಿ, ಸ್ಪೂರ್ತಿ, ಆತ್ಮ ವಿಶ್ವಾಸ ಮತ್ತು ಉತ್ಸಾಹವನ್ನು ತುಂಬಿದ್ದವು.    ಭಾರತದಲ್ಲಿ ಗಾಂಧೀಜಿಯವರು ಅಹಿಂಸಾತ್ಮಕ ಚಳುವಳಿ ಅಥವಾ ಅಂದೋಲನವನ್ನು ಹುಟ್ಟು ಹಾಕುವವರೆಗೆ, ಪ್ರಪಂಚದಲ್ಲಿ ನಡೆದ ಎಲ್ಲಾ ಹೋರಾಟಗಳೂ, ಆಂದೋಲನಗಳೂ, ಮತ್ತು ದಂಗೆಗಳೂ ಹಿಂಸೆಯಿಂದ ಕೂಡಿದ್ದಾಗಿದ್ದವು. ಭಾರತೀಯ ಸ್ವಾತಂತ್ರ ಚಳುವಳಿಯು ಅಹಿಂಸೆಯನ್ನೇ … Read more

ನನ್ನ ಹಳ್ಳಿಯಲ್ಲಿನ ಪ್ರಾಥಮಿಕ ಜೀವನ ಹಾಗೂ ಶಿಕ್ಷಣ

ಹಸಿರು ತಾಯಿಯ ಮಡಿಲಿನಲ್ಲಿ ಮಲಗಿರುವ ಪುಟ್ಟ ಕ೦ದಮ್ಮ ನನ್ನ ಹಳ್ಳಿ..ಕಣ್ಣು ಹಾಯಿಸಿದಷ್ಟು ದೂರ ದ್ರಷ್ಠಿ ಸವರುವುದು ಹಸಿರು ಹೊತ್ತು ನಿ೦ತಿರುವ ಗಿಡಮರ ಬಳ್ಳಿಗಳೆ..ಆಗು೦ಬೆ ಬೆಟ್ಟದ ಬುಡದಲ್ಲಿ ಹರಡಿಕೊ೦ಡಿರುವ ಕಾಡುಗಳ ನಡುವಣದ ನನ್ನ ಹಳ್ಳಿಯಲ್ಲಿ ಈ ಜೀವ ಜನನ ತಾಳಿದ್ದು ನನ್ನ ಪುಣ್ಯವೇ ಸರಿ. ದೂರ ಎ೦ಬಷ್ಟು ಅ೦ತರವನ್ನು ಇಟ್ಟುಕೊ೦ಡು ಅಲ್ಲಲ್ಲಿ ಮ೦ಗಳೂರು ಹೆ೦ಚಿನ ಹೊದಿಕೆ ಹೊದ್ದಿರುವ ಮನೆಗಳು, ನಮ್ಮ ಹಿ೦ದಿನವರ್ಯಾರೋ ಜೀವನೋಪಾಯಕ್ಕೊ೦ದು ದಾರಿ ಕ೦ಡುಕೊಳ್ಳುವ ಪ್ರಯತ್ನದ ಫಲವಾಗಿ ಅಲ್ಲಲ್ಲಿ ಕಾಡು ಕಡಿದು ಸಮತಟ್ಟು ಮಾಡಿ ನಿರ್ಮಾಣಗೊ೦ಡಿರುವ ಭತ್ತದ … Read more

ಅಗಾಧ ಬದುಕು – ನಿಗೂಢ ಸಾವು, ಅಳುವ ಮನಸು…..

ಕಣ್ಣಲ್ಲಿ ಸಾವಿರ ಕನಸುಗಳ ಮತಾಪು… ಬೆನ್ನಲ್ಲಿ ಈಡೇರಿಸಿಕೊಳ್ಳಲಾಗದ ಅಸಹಾಯಕತೆಯ ನಡುಕ…   ಬಣ್ಣ ಬಣ್ಣದ ಕತ್ತಲು… ಭವಿಷ್ಯವನ್ನು ತೋರಲಾರದ ಬೆಳಕು… ನಮ್ಮೆಲ್ಲ ಪ್ರಯತ್ನವನ್ನೂ ಮೀರಿ ಒಮ್ಮೆಲೇ ಧುತ್ತನೆ ಎದುರಾಗಿ ಕಾಡುವ ಹತಾಶೆ… ಮನುಷ್ಯನ್ನು ಸಾವು ಮತ್ತು ಸೋಲುಗಳು ಕಂಗೆಡಿಸಿದಷ್ಟು ಮತ್ಯಾವ ವಿಷಯಗಳೂ ಕಂಗೆಡಿಸಲಾರವೇನೋ.  ಸಾವನ್ನಾದರೂ ಒಪ್ಪಿಕೊಂಡು ಬಿಡಬಹುದು.  ಏಕೆಂದರೆ ಅದು ಸಾರ್ವಕಾಲಿಕ ಮತ್ತು ಸರ್ವವಿಧಿತ ಸತ್ಯ.  ಆದರೆ ಸೋಲುಗಳು –  ಮನುಷ್ಯನನ್ನು ಮಾನಸಿಕವಾಗಿ ಹಾಗೂ ದೈಹಿಕವಾಗಿ ಎರಡೂ ವಿಧಗಳಲ್ಲೂ ಹಣ್ಣಾಗಿಸುವ ವಿಚಾರವೆಂದರೆ ಸೋಲುಗಳು.  ಅವು ಸತತ ಹಾಗೂ … Read more

ಓ ನಾಗರಾಜ ಅಪ್ಪಣೆಯೇ…

  ನಮ್ಮ ಆಫೀಸಿನ ಎದುರು ಬೈಕುಗಳು ಸಾಲಾಗಿ ನಿಲ್ಲುವ ಜಾಗದಲ್ಲಿ ಮೊನ್ನೆ ನಾಗರಹಾವೊಂದು ಬಂದು ಮಲಗಿತ್ತು. ಅದೇನು ಬೈಕಿನಂತೆ ಸರದಿ ಸಾಲಿನಲ್ಲಿ ಇರಲಿಲ್ಲ. ಯಾರದೋ ಬೈಕಿನ ಟ್ಯಾಂಕ್ ಕವರ್‌ನಲ್ಲಿ ಬೆಚ್ಚಗೆ ಪವಡಿಸಿತ್ತು. ಸದ್ಯ ಬೈಕಿನ ಸವಾರನಿಗೆ ಅದೇನು ಮಾಡಲಿಲ್ಲ. ಗಾಬರಿಯಿಂದ ಇಳಿದು ಯಾವುದೋ ಚರಂಡಿ ಹುಡುಕಿಕೊಂಡು ಹೋಯಿತು. ಆವತ್ತೆಲ್ಲ ಆ ಹಾವಿನ ಬಗ್ಗೆ ಗುಲ್ಲೋ ಗುಲ್ಲು. ಅಲ್ಲಿದ್ದವರೆಲ್ಲ ಹಾವು ಅಲ್ಲಿಗೆ ಏಕೆ ಬಂತು ಎಂಬುದರ ಬಗ್ಗೆ ಒಂದು ವಿಚಾರಸಂಕಿರಣಕ್ಕೆ ಆಗುವಷ್ಟು ಮಾತಾಡಿದರು ಎನ್ನಿ. ಹಾವುಗಳು ಯಾರಿಗೆ ತಾನೆ … Read more

ಮಾತೃ ಭಾಷೆಗೆ ಸಿಕ್ಕ ಮನ್ನಣೆ

  ಹಚ್ಚೇವು ಕನ್ನಡದ ದೀಪ  ಕರು ನಾಡ  ದೀಪ  ಸಿರಿನುಡಿಯ ದೀಪ ಒಲವೆತ್ತಿ ತೋರುವಾ ದೀಪ l            ನಾಲ್ಕು ವರ್ಷಗಳ ಹಿಂದೆ ಮೊದಲ ಬಾರಿಗೆ ಭಾರತದ ನನ್ನ ಹಳ್ಳಿ ಬಿಟ್ಟು ಈ ಮರುಭೂಮಿಗೆ ಬಂದು ಇಳಿದಾಗ ಅಸಾಧ್ಯ ಭಯ ಇತ್ತು. ದೇವರೇ! ಹೇಗೆ ನಾನು ಬದುಕಿ ಉಳಿದೇನಾ ಅಂತ. ಆದರೆ ನಾನು ಇದ್ದ ಜಾಗ ತುಂಬಾ ಸುರಕ್ಷಿತವಾಗಿತ್ತು. ನನ್ನ ಬಹು ಮಹಡಿ ಕಟ್ಟಡದಲ್ಲಿ ಹಾಗೂ ಸುತ್ತಲೂ ಎಲ್ಲವೂ ಇತ್ತು. ಕ್ಲಿನಿಕ್, … Read more

ಇದೇ ಮೇಲಲ್ಲವೇ?

  "ದೇವರಮನೆ ಬಾಗಿಲು ಮುಚ್ಚಿಬಿಡೇ" ಅಪರೂಪಕ್ಕೆ ಬಂದ ಗೆಳತಿ ಅಸ್ಪೃಶ್ಯಳಂತೆ ಬಾಗಿಲಲ್ಲೇ ನಿಂತು ಹೇಳುತ್ತಿದ್ದಳು. ಯಾಕೆಂದು ಕೇಳುವ ಅಗತ್ಯವಿರಲಿಲ್ಲ. ನಾನು ಹೋಗಿ ಮುಚ್ಚಿದೆ. "ಅಯ್ಯೋ ಬಿಡೇ ನೀನೊಬ್ಬಳು ಅಡಗೂಲಜ್ಜಿ ತರಹ ಆಡ್ತೀಯಮ್ಮಾ"-ಜೊತೆಯಲ್ಲಿದ್ದ ಇನ್ನೊಬ್ಬ ಗೆಳತಿಯ ಪ್ರತಿಕ್ರಿಯೆ. ಅವಳಲ್ಲಿ ಉತ್ತರವಿರಲಿಲ್ಲ, ಮುಖ ಪೆಚ್ಚಾಯಿತು. ಅದೊಂದು ನಂಬಿಕೆಯಷ್ಟೆ. ನಂಬಿಕೆಯೊಳಗೆ ಪ್ರಶ್ನೆಗಳೂ ಹುಟ್ಟುವುದಿಲ್ಲ, ಹಾಗೂ ಉತ್ತರಗಳೂ ಇರುವುದಿಲ್ಲ. ಪ್ರಶ್ನೆ ಇದ್ದರದು ನಂಬಿಕೆಯಾಗಿರುವುದಿಲ್ಲ, ಒಂದು ಸಂಶಯವಾಗಿರುತ್ತದೆ. ಸಂಪ್ರದಾಯಸ್ಥ ಮನೆಗಳಿಂದ ಬಂದ ಇಂದಿನ ಹೆಣ್ಣುಮಕ್ಕಳೆಲ್ಲರೂ ಇದೊಂದು ಅರ್ಥವಿಲ್ಲದ ಆಚರಣೆ ಎಂದು ತಿಳಿದಿದ್ದರೂ, ಅದನ್ನೊಂದು ಸಹಜಪ್ರಕ್ರಿಯೆ … Read more

ನಾ ಕಂಡ ಹೀರೋಗಳು

ನಾನಾಗ ಒಂಭತ್ತನೆಯ ತರಗತಿಯಲ್ಲಿ ಓದುತ್ತಿದ್ದೆ. ಆ ವರ್ಷದಲ್ಲಿ ನಡೆದ ರಾಷ್ಟ್ರ ಮಟ್ಟದ ಭಾರತೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಮೊದಲು ಜಿಲ್ಲಾ ಮಟ್ಟದ ಸ್ಪರ್ಧೆ ಮೈಸೂರಿನಲ್ಲಿ ನಡೆದಿತ್ತು. ನಮ್ಮ ವಿಜ್ಞಾನ ಮಾಸ್ತರರಾಗಿದ್ದ ನಾಗೇಂದ್ರರವರ ಮಾರ್ಗದರ್ಶನದಲ್ಲಿ ಭಾಗವಹಿಸಿದ್ದ ನಾನು, ಗ್ರಾಮೀಣ ವಿಭಾಗದಿಂದ ರಾಜ್ಯ ಮಟ್ಟದ ಸಮಾವೇಶಕ್ಕೆ ಆಯ್ಕೆಯಾಗಿದ್ದೆ. ಬರೀ ೧೫ ದಿನಗಳ ಕಾಲಾವಕಾಶವಿದ್ದುದರಿಂದ ನಾನು ನಮ್ಮ ಮಾಸ್ತರರ ಕೊಳ್ಳೇಗಾಲ ನಿವಾಸದಲ್ಲಿಯೇ ಬೀಡು ಬಿಟ್ಟು ಹಗಲಿರುಳು ಶ್ರಮಿಸಿದ್ದೆ. ರಾಜ್ಯಮಟ್ಟದ ಸಮಾವೇಶಕ್ಕೆ ಅರಸೀಕೆರೆ ಮದುವೆ ಹೆಣ್ಣಿನಂತೆ ಅಲಂಕಾರಗೊಂಡಿತ್ತು. ಬೆಳಿಗ್ಗೆಯೇ ಕೊಳ್ಳೇಗಾಲ ಬಿಟ್ಟ ನಾವು … Read more

‘ತಾಯಿಯ ಮಡಿಲು’

ಬೇಡುವೆನು ವರವನ್ನು ಕೊಡು ತಾಯಿ ಜನ್ಮವನು ಕಡೆತನಕ ಮರೆಯೊಲ್ಲ ಜೋಗಿ… ಕಡೆತನಕ ಮರೆಯೊಲ್ಲ ಜೋಗಿ… ಎನ್ನುವ 'ಜೋಗಿ ಚಿತ್ರದ ಗೀತೆಯನ್ನು ನಾವೆಲ್ಲಾ ಟೀವಿ, ರೇಡಿಯೋಗಳಲ್ಲಿ ಕೇಳಿರುತ್ತೇವೆ. ಇದು ೨೦೦೫ ರಲ್ಲಿ ತೆರೆಕಂಡ 'ಶಿವರಾಜ್ ಕುಮಾರ್' ನಾಯಕ ನಟನ ಸೂಪರ್ ಹಿಟ್ ಚಲನ ಚಿತ್ರ.  ಈ ಚಿತ್ರ ಬಿಡುಗಡೆಯದಾಗ ಹೆಚ್ಚು ಸಿನೆಮಾ ಮಂದಿರಕ್ಕೆ ಹೋಗದವಳಾದ ನಾನು ಸಹ ಈ ಹಾಡಿಗೆ ಮನಸೋತು ಚಿತ್ರ ನೋಡಲು ಹೋಗಿದ್ದೆ.  ಚಿತ್ರ ತುಂಬಾ ಚೆನ್ನಾಗಿತ್ತು. ತಾಯಿ ಪ್ರೀತಿ ಪ್ರಧಾನವಾದ ಚಿತ್ರ, ಎಂತಹವರನ್ನು ಬರಸೆಳೆಯುವ … Read more