"ದೇವರಮನೆ ಬಾಗಿಲು ಮುಚ್ಚಿಬಿಡೇ" ಅಪರೂಪಕ್ಕೆ ಬಂದ ಗೆಳತಿ ಅಸ್ಪೃಶ್ಯಳಂತೆ ಬಾಗಿಲಲ್ಲೇ ನಿಂತು ಹೇಳುತ್ತಿದ್ದಳು. ಯಾಕೆಂದು ಕೇಳುವ ಅಗತ್ಯವಿರಲಿಲ್ಲ. ನಾನು ಹೋಗಿ ಮುಚ್ಚಿದೆ. "ಅಯ್ಯೋ ಬಿಡೇ ನೀನೊಬ್ಬಳು ಅಡಗೂಲಜ್ಜಿ ತರಹ ಆಡ್ತೀಯಮ್ಮಾ"-ಜೊತೆಯಲ್ಲಿದ್ದ ಇನ್ನೊಬ್ಬ ಗೆಳತಿಯ ಪ್ರತಿಕ್ರಿಯೆ. ಅವಳಲ್ಲಿ ಉತ್ತರವಿರಲಿಲ್ಲ, ಮುಖ ಪೆಚ್ಚಾಯಿತು. ಅದೊಂದು ನಂಬಿಕೆಯಷ್ಟೆ. ನಂಬಿಕೆಯೊಳಗೆ ಪ್ರಶ್ನೆಗಳೂ ಹುಟ್ಟುವುದಿಲ್ಲ, ಹಾಗೂ ಉತ್ತರಗಳೂ ಇರುವುದಿಲ್ಲ. ಪ್ರಶ್ನೆ ಇದ್ದರದು ನಂಬಿಕೆಯಾಗಿರುವುದಿಲ್ಲ, ಒಂದು ಸಂಶಯವಾಗಿರುತ್ತದೆ. ಸಂಪ್ರದಾಯಸ್ಥ ಮನೆಗಳಿಂದ ಬಂದ ಇಂದಿನ ಹೆಣ್ಣುಮಕ್ಕಳೆಲ್ಲರೂ ಇದೊಂದು ಅರ್ಥವಿಲ್ಲದ ಆಚರಣೆ ಎಂದು ತಿಳಿದಿದ್ದರೂ, ಅದನ್ನೊಂದು ಸಹಜಪ್ರಕ್ರಿಯೆ […]
ಪಂಜು-ವಿಶೇಷ
ನಾ ಕಂಡ ಹೀರೋಗಳು
ನಾನಾಗ ಒಂಭತ್ತನೆಯ ತರಗತಿಯಲ್ಲಿ ಓದುತ್ತಿದ್ದೆ. ಆ ವರ್ಷದಲ್ಲಿ ನಡೆದ ರಾಷ್ಟ್ರ ಮಟ್ಟದ ಭಾರತೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಮೊದಲು ಜಿಲ್ಲಾ ಮಟ್ಟದ ಸ್ಪರ್ಧೆ ಮೈಸೂರಿನಲ್ಲಿ ನಡೆದಿತ್ತು. ನಮ್ಮ ವಿಜ್ಞಾನ ಮಾಸ್ತರರಾಗಿದ್ದ ನಾಗೇಂದ್ರರವರ ಮಾರ್ಗದರ್ಶನದಲ್ಲಿ ಭಾಗವಹಿಸಿದ್ದ ನಾನು, ಗ್ರಾಮೀಣ ವಿಭಾಗದಿಂದ ರಾಜ್ಯ ಮಟ್ಟದ ಸಮಾವೇಶಕ್ಕೆ ಆಯ್ಕೆಯಾಗಿದ್ದೆ. ಬರೀ ೧೫ ದಿನಗಳ ಕಾಲಾವಕಾಶವಿದ್ದುದರಿಂದ ನಾನು ನಮ್ಮ ಮಾಸ್ತರರ ಕೊಳ್ಳೇಗಾಲ ನಿವಾಸದಲ್ಲಿಯೇ ಬೀಡು ಬಿಟ್ಟು ಹಗಲಿರುಳು ಶ್ರಮಿಸಿದ್ದೆ. ರಾಜ್ಯಮಟ್ಟದ ಸಮಾವೇಶಕ್ಕೆ ಅರಸೀಕೆರೆ ಮದುವೆ ಹೆಣ್ಣಿನಂತೆ ಅಲಂಕಾರಗೊಂಡಿತ್ತು. ಬೆಳಿಗ್ಗೆಯೇ ಕೊಳ್ಳೇಗಾಲ ಬಿಟ್ಟ ನಾವು […]
‘ತಾಯಿಯ ಮಡಿಲು’
ಬೇಡುವೆನು ವರವನ್ನು ಕೊಡು ತಾಯಿ ಜನ್ಮವನು ಕಡೆತನಕ ಮರೆಯೊಲ್ಲ ಜೋಗಿ… ಕಡೆತನಕ ಮರೆಯೊಲ್ಲ ಜೋಗಿ… ಎನ್ನುವ 'ಜೋಗಿ ಚಿತ್ರದ ಗೀತೆಯನ್ನು ನಾವೆಲ್ಲಾ ಟೀವಿ, ರೇಡಿಯೋಗಳಲ್ಲಿ ಕೇಳಿರುತ್ತೇವೆ. ಇದು ೨೦೦೫ ರಲ್ಲಿ ತೆರೆಕಂಡ 'ಶಿವರಾಜ್ ಕುಮಾರ್' ನಾಯಕ ನಟನ ಸೂಪರ್ ಹಿಟ್ ಚಲನ ಚಿತ್ರ. ಈ ಚಿತ್ರ ಬಿಡುಗಡೆಯದಾಗ ಹೆಚ್ಚು ಸಿನೆಮಾ ಮಂದಿರಕ್ಕೆ ಹೋಗದವಳಾದ ನಾನು ಸಹ ಈ ಹಾಡಿಗೆ ಮನಸೋತು ಚಿತ್ರ ನೋಡಲು ಹೋಗಿದ್ದೆ. ಚಿತ್ರ ತುಂಬಾ ಚೆನ್ನಾಗಿತ್ತು. ತಾಯಿ ಪ್ರೀತಿ ಪ್ರಧಾನವಾದ ಚಿತ್ರ, ಎಂತಹವರನ್ನು ಬರಸೆಳೆಯುವ […]