ನಾವು… ನಮ್ಮದು: ಗುರುಪ್ರಸಾದ ಕುರ್ತಕೋಟಿ
(ಇಲ್ಲಿಯವರೆಗೆ) ನಮ್ಮ ಜೀವನದ ಗತಿಯನ್ನು, ನಮ್ಮ ಯೋಚನಾ ಲಹರಿಯನ್ನು ಬದಲಿಸಬಲ್ಲ ತಾಕತ್ತು ಇರುವುದು ಪುಸ್ತಕಗಳಲ್ಲಿ ಮಾತ್ರ ಎಂದು ಬಲವಾಗಿ ನಂಬಿರುವವನು ನಾನು. ನಮ್ಮ ಮನೆಯಲ್ಲಿದ್ದ ಪುಸ್ತಕಗಳು, ವಾರಕ್ಕೊಮ್ಮೆ ಬರುತ್ತಿದ್ದ ತರಂಗ, ಸುಧಾ ಗಳಂತಹ ಪತ್ರಿಕೆಗಳು ನಮ್ಮ ಓದಿನ ಹುಚ್ಚು ಹೆಚ್ಚಿಸಿದ್ದಲ್ಲದೆ ನಮ್ಮ ಯೋಚನಾ ಕ್ರಮವನ್ನೇ ಬದಲಿಸಿದ್ದವು. ಅವುಗಳು ಈಗಿನ ಗೂಗಲ್ ಗಿಂತ ಹೆಚ್ಚಿನ ಮಾಹಿತಿಗಳನ್ನು ಕೊಡುತ್ತಿದ್ದವು. ಈಗಿನ ಅಂತರ್ಜಾಲ ಒಂದು ಸಾಗರ. ಅದರಲ್ಲಿ ನಮಗೆ ಬೇಕಾದ ನಿಖರ ಮಾಹಿತಿ ತೊಗೊಳ್ಳೋದು ಅಂದರೆ ಒಳ್ಳೆಯ ಬಲೆಯಲ್ಲಿ ಮೀನು ಹಿಡಿದಂತೆ. … Read more