ಪ್ರಕಟಣೆ

ʻಬುಕ್‌ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ 2023 ಮತ್ತು ಕಾದಂಬರಿ ಪುರಸ್ಕಾರ 2023ʼ

ಭಾರತದ ಸ್ವಾತಂತ್ರ್ಯೋತ್ಸವ ಮತ್ತು ಸಂಸ್ಥೆಯ ನಾಲ್ಕನೇ ವಾರ್ಷಿಕೋತ್ಸವದ ಹಿನ್ನಲೆಯಲ್ಲಿ ಬುಕ್ ಬ್ರಹ್ಮ “ಸ್ವಾತಂತ್ರ್ಯೋತ್ಸವ ಕಥಾ ಸ್ಫರ್ಧೆ”ಯ ಜೊತೆಗೆ 2022ನೇ ಸಾಲಿನಲ್ಲಿ ಪ್ರಕಟವಾದ ಕಾದಂಬರಿಗೆ ಪುರಸ್ಕಾರ ನೀಡಲು ನಿರ್ಧರಿಸಿದೆ. 2022ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಅತ್ಯುತ್ತಮ ಕಾದಂಬರಿಗೆ ಒಂದು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು. ಈ ಒಂದು ಲಕ್ಷದಲ್ಲಿ 75 ಸಾವಿರ ರೂಪಾಯಿ ಲೇಖಕರಿಗೆ ಹಾಗೂ 25 ಸಾವಿರ ಪ್ರಕಾಶಕರಿಗೆ ವಿತರಿಸಲಾಗುತ್ತದೆ. ಮೆಚ್ಚುಗೆ ಪಡೆಯುವ ನಾಲ್ಕು ಕಾದಂಬರಿಗಳಿಗೆ ತಲಾ 5 ಸಾವಿರ ರೂಪಾಯಿ ಬಹುಮಾನ ನೀಡಲಾಗುವುದು. ಈ ಪೈಕಿ […]

ಪ್ರಕಟಣೆ

ಪಂಜುವಿನ ದಶಕದ ಸಂಭ್ರಮದ ವಿಶೇಷಾಂಕಕ್ಕೆ ಬರಹಗಳ ಆಹ್ವಾನ

ಸಹೃದಯಿಗಳೇ, ಇದೇ ಜನವರಿ ೨೧ನೇ ತಾರೀಖಿಗೆ ಪಂಜುವಿಗೆ ಹತ್ತು ವರ್ಷ ತುಂಬುತ್ತಿದೆ. ಪಂಜುವಿನ ದಶಕದ ಸಂಭ್ರಮದ ಆಚರಣೆಗಾಗಿ ವಿಶೇಷ ಸಂಚಿಕೆಯೊಂದನು ತರಲು ಬಯಸುತ್ತಿದ್ದೇವೆ. ಈ ವಿಶೇಷ ಸಂಚಿಕೆಗೆ ನಿಮ್ಮ ಅಪ್ರಕಟಿತ ಕತೆ, ಕವನ, ಲೇಖನ, ಪುಸ್ತಕ ವಿಮರ್ಶೆ, ಹಾಸ್ಯ ಬರಹ, ಚುಟುಕ, ಪ್ರವಾಸ ಕಥನ, ವ್ಯಂಗ್ಯಚಿತ್ರ, ಛಾಯಾಚಿತ್ರ, ಸಿನಿಮಾ ಸುದ್ದಿ, ಇತ್ಯಾದಿ ಸಾಹಿತ್ಯ ಸಂಬಂಧಿತ ಬರಹಗಳನ್ನು ಕಳುಹಿಸಿಕೊಡಿ. ನಮ್ಮ ಇ ಮೇಲ್ ವಿಳಾಸ editor.panju@gmail.com ಒಮ್ಮೊಮ್ಮೆ ತಾಂತ್ರಿಕ ತೊಂದರೆಗಳಿಂದ ನೀವು ಕಳುಹಿಸಿದ ಲೇಖನ ನಮಗೆ ತಲುಪದೇ ಇರಬಹುದು. […]

ಪ್ರಕಟಣೆ

ಕುವೆಂಪು ಪುಸ್ತಕ ಮನೆಗೆ ಪುಸ್ತಕಗಳ ದೇಣಿಗೆ ನೀಡಿರಿ

ಬಡಮಕ್ಕಳ ಜ್ಞಾನಾರ್ಜನೆಯ ಉದ್ದೇಶಕ್ಕಾಗಿ ಗ್ರಾಮೀಣ ಭಾಗದಲ್ಲಿ ಸ್ಥಾಪನೆಗೊಂಡಿರುವ ‘ಕುವೆಂಪು ಪುಸ್ತಕ ಮನೆ’ ಗೆ ನಿಮ್ಮಲ್ಲಿರುವ ಯಾವುದೇ ಬಗೆಯ ಪುಸ್ತಕಗಳನ್ನು ದೇಣಿಗೆಯಾಗಿ, ದಾನವಾಗಿ ನೀಡಬಹುದಾಗಿದೆ.ನೀವು ನೀಡುವ ಒಂದು ಪುಸ್ತಕ ಒಂದು ಕೋಟಿಗೂ ಮಿಗಿಲು.ಮಕ್ಕಳಿಗೆ ಪುಸ್ತಕಗಳನ್ನು ಓದಲು ನೀಡಿ; ಸಹಕರಿಸಿ.ಪ್ರಕಟಣೆ : ಕುವೆಂಪು ಪುಸ್ತಕ ಮನೆಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿದೂ ಸಂ : 8549957444 ಅಂಚೆ ಮೂಲಕ ಪುಸ್ತಕ ತಲುಪಿಸಲುಕುವೆಂಪು ಪುಸ್ತಕ ಮನೆನಂ ೯೬/ಎ, ಪರಿಣಾಮಿಪುರ, ಕಾವೇರಿಪುರ ಅಂಚೆತಲಕಾಡು ಹೋಬಳಿ, ತಿ ನರಸೀಪುರ ತಾಲ್ಲೂಕು,ಮೈಸೂರು – ೫೭೧೧೨೩

ಪ್ರಕಟಣೆ

ವಿಚಾರ ಮಂಟಪ ಸಾಹಿತ್ಯ ಬಳಗದ ಕವನ ಸಂಕಲನಕ್ಕೆ ಕವನಗಳ ಅಹ್ವಾನ

ವಿಚಾರ ಮಂಟಪ ಸಾಹಿತ್ಯ ಬಳಗವು ಯುವ ಕವಿಗಳ ಕವಿತೆಗಳನ್ನು ಸಂಕಲಿಸಿ ಪ್ರಕಟಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದು, ಆಸಕ್ತರು ಸಮಕಾಲೀನ ಸಮಸ್ಯೆಗಳ, ಸಾಮಾಜಿಕ ಪಿಡುಗುಗಳ ಕುರಿತಾಗಿ ಜಾಗೃತಿ ಮೂಡಿಸುವ ಆಶಯವುಳ್ಳ, 20-25 ಸಾಲುಗಳಿಗೆ ಮೀರದ ಎರಡು ಸ್ವರಚಿತ ಕವನಗಳನ್ನು ದಿನಾಂಕ: 30.01.2023 ರ ಒಳಗಾಗಿ 8217744886 ಈ ಸಂಖ್ಯೆಗೆ ವಾಟ್ಸಪ್ ಮೂಲಕ ಕಳುಹಿಸಲು ಕೋರಿದೆ. ಆಯ್ಕೆಯಾದ ಮೂರು ಅತ್ಯುತ್ತಮ ಕವನಗಳಿಗೆ ಮತ್ತು ಒಂದು ಉತ್ತಮ ಶೀರ್ಷಿಕೆಗೆ ಪ್ರಮಾಣಪತ್ರ ಹಾಗೂ ಪುಸ್ತಕ ಬಹುಮಾನವಿರುತ್ತದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:ಧನುಷ್ ಎಚ್ ಶೇಖರ್ – […]

ಪ್ರಕಟಣೆ

ಸಮಾಜಮುಖಿ ವಾರ್ಷಿಕ ಕಥಾಸ್ಪರ್ಧೆಗೆ ಆಹ್ವಾನ

ಸಮಾಜಮುಖಿ ಪ್ರಕಾಶನ ಕನ್ನಡದ ಕಥಾಪರಂಪರೆಗೆ ಅರ್ಥಪೂರ್ಣ ಪ್ರಚೋದನೆ ನೀಡುವ ಉದ್ದೇಶದಿಂದ ‘ಸಮಾಜಮುಖಿ ವಾರ್ಷಿಕ ಕಥಾಸ್ಪರ್ಧೆ-2023’ ಏರ್ಪಡಿಸಿದೆ. ಸಮಾಜಮುಖಿ ಪುರಸ್ಕಾರಕ್ಕೆ ಆಯ್ಕೆಯಾಗುವ ಐದು ಕಥೆಗಾರರಿಗೆ ತಲಾ ರೂ.5000 ನಗದು ನೀಡಿ ಗೌರವಿಸಲಾಗುವುದು. ಜೊತೆಗೆ ಆಯ್ದ ಹದಿನೈದು ಕಥೆಗಳಿಗೆ ಸಮಾಜಮುಖಿ ವಾರ್ಷಿಕ ಕಥಾ ಸಂಕಲನದಲ್ಲಿ ಅವಕಾಶ ಸಿಗಲಿದೆ. ಕಥೆಗಾರರು 2000 ಪದಮಿತಿಯ, ಯಾವ ಮಾಧ್ಯಮದಲ್ಲೂ ಪ್ರಕಟವಾಗದ, ನುಡಿ/ಯುನಿಕೋಡ್ ಲಿಪಿಯಲ್ಲಿರುವ ಕಥೆಯನ್ನು ವರ್ಡ್ ಕಡತದಲ್ಲಿ 15 ಜನೆವರಿ 2023ರೊಳಗೆ ಕಳುಹಿಸಬೇಕಾದ ಇಮೇಲ್ ವಿಳಾಸ: samajamukhi2017@gmail.com

ಪ್ರಕಟಣೆ

ಕುವೆಂಪು ಯುವ ಮಂಥನ ಲೇಖನ ಸ್ಪರ್ಧೆಗೆ ಆಹ್ವಾನ

ತುಮಕೂರು ವಿಶ್ವವಿದ್ಯಾಲಯದ ಕುವೆಂಪು ಅಧ್ಯಯನ ಪೀಠ ಹಾಗೂ ಬುಕ್ ಬ್ರಹ್ಮ ಸಂಸ್ಥೆ ಜಂಟಿಯಾಗಿ “ಕುವೆಂಪು: ಯುವ ಮಂಥನ” ಲೇಖನ ಸ್ಪರ್ಧೆಯನ್ನು ಆಯೋಜಿಸಿದೆ. ಕುವೆಂಪು ಅವರ ನಾಡು ನುಡಿ ಚಿಂತನೆ, ವೈಚಾರಿಕ ಪ್ರಜ್ಞೆ, ವೈಜ್ಞಾನಿಕ ದೃಷ್ಟಿ, ಅಧ್ಯಾತ್ಮಿಕ ಮನೋಧರ್ಮಗಳನ್ನು ಅರಿಯುವ ಬಗೆಗಳನ್ನು ಈ ಲೇಖನಗಳು ಒಳಗೊಂಡಿರಲಿ. ನಿಯಮಗಳು: ಲೇಖನಗಳು ವಿಮರ್ಶಾತ್ಮಕ ಒಳನೋಟಗಳನ್ನು ಹೊಂದಿರಬೇಕು. 2000 ಪದಗಳನ್ನು ಮೀರದಂತಿರಲಿ. ಲೇಖಕರ ವಯಸ್ಸು 35 ವರ್ಷಗಳನ್ನು ಮೀರದಂತಿರಬೇಕು. ಲೇಖನಗಳು ಎಲ್ಲಿಯೂ ಪ್ರಕಟವಾಗಿರಬಾರದು. ಮೊದಲ ಬಹುಮಾನ 5 ಸಾವಿರ + 3 ಸಾವಿರ […]

ಪ್ರಕಟಣೆ

ಪಂಜು ಕಥಾ ಸಂಕಲನ ಸ್ಪರ್ಧೆ ಫಲಿತಾಂಶ

ಪಂಜು ದಶಕದ ಸಂಭ್ರಮದ ಪ್ರಯುಕ್ತ ಏರ್ಪಡಿಸಿದ್ದ 2021 ನೇ ಸಾಲಿನ ಪಂಜು ಕಥಾ ಸಂಕಲನ ಪ್ರಶಸ್ತಿಯ ವಿವರ ಈ ಕೆಳಗಿನಂತಿದೆ ಪಂಜು ಕಥಾ ಸಂಕಲನ ಪ್ರಶಸ್ತಿ ಪಡೆದ ಕೃತಿಬಯಲಲಿ ತೇಲುತ ತಾನು: ಅಕ್ಷಯ ಪಂಡಿತ್ ತೀರ್ಪುಗಾರರ ಮೆಚ್ಚುಗೆ ಪಡೆದ ಕೃತಿಗಳು೧. ಅಗ್ಗಷ್ಟಿಕೆ: ರಾಜಶ್ರೀ ಟಿ. ರೈ, ಪೆರ್ಲ೨. ಪೂವಿ: ಮಲ್ಲೇಶ್ ಮಾಲಿಂಕಟ್ಟೆ೩. ದಶಕದ ಕತೆಗಳು: ಟಿ ಎಂ ರಮೇಶ೪. ನೀಲಕುರಿಂಜಿ: ದಾದಾಪೀರ್ ಜೈಮನ್೫. ಮಾರ್ಗಿ: ಲಿಂಗರಾಜ ಸೊಟ್ಟಪ್ಪನವರ ಒಟ್ಟು 25 ಕಥೆಗಾರರು ನಾಡಿನ ಮೂಲೆಮೂಲೆಗಳಿಂದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. […]

ಪ್ರಕಟಣೆ

ಪಂಜುವಿಗೆ ನೆರವಾಗಿ

ಸಹೃದಯಿಗಳೇ, ನಿಮಗೆ ತಿಳಿದಂತೆ ಕಳೆದ ಒಂಬತ್ತು ವರ್ಷಗಳಿಂದ ಪಂಜು ಪತ್ರಿಕೆ ಕನ್ನಡದ ಸೇವೆಯಲ್ಲಿ ನಿರತವಾಗಿದೆ. ಪ್ರತಿ ವರ್ಷದ ಹೋಸ್ಟಿಂಗ್‌ ವೆಚ್ಚ, ವೆಬ್‌ ಡೊಮೈನ್‌ ನವೀಕರಣ ವೆಚ್ಚ ಮತ್ತು ಇತರ ವೆಚ್ಚಗಳು ಹೆಚ್ಚತ್ತಲೇ ಹೋಗುತ್ತಿವೆ. ಈ ಎಲ್ಲಾ ವೆಚ್ಚಗಳನ್ನು ಪಂಜು ಇಷ್ಟು ವರ್ಷ ನಿಭಾಯಿಸುತ್ತಲೇ ಬಂದಿದೆ. ಹೆಚ್ಚುತ್ತಿರುವ ತಂತ್ರಜ್ಞಾನಗಳ ಜೊತೆಗೆ ಅವುಗಳಿಗೆ ಹಣ ನೀಡಬೇಕಾದ ಅವಶ್ಯಕತೆ ಕೂಡ ಇರುವುದರಿಂದ ನಿಮಗೆ ಪಂಜುವಿಗೆ ನೆರವಾಗುವ ಮನಸಿದ್ದರೆ ನಿಮಗೆ ಅನಿಸಿದ್ದಷ್ಟು ಹಣವನ್ನು ಪಂಜುವಿಗೆ ಡೊನೇಟ್‌ ಮಾಡಿ. Google pay/ Phone Pay: […]

ಪ್ರಕಟಣೆ

ಪಂಜು ಕಥಾಸಂಕಲನ ಪ್ರಶಸ್ತಿಗಾಗಿ ಕೃತಿಗಳ ಆಹ್ವಾನ

ಪಂಜು ಕಥಾಸಂಕಲನ ಪ್ರಶಸ್ತಿ ಪಂಜು 2023 ರ ಜನವರಿಯಲ್ಲಿ ಹತ್ತು ವರ್ಷ ಪೂರೈಸುತ್ತದೆ. ದಶಕದ ಮೈಲಿಗಲ್ಲು ತುಳಿದ ಬೆರಳೆಣಿಕೆಯ ಕನ್ನಡದ ಅಂತರ್ಜಾಲ ಪತ್ರಿಕೆಗಳಲ್ಲಿ ಪಂಜು ಕೂಡ ಒಂದು. ದಶಕದ ಈ ಸಂಭ್ರಮವನ್ನು ಆಚರಿಸಲು ಪಂಜು ಮೊದಲ ಹೆಜ್ಜೆಯಾಗಿ ಕಥಾಸಂಕಲನ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸುತ್ತಿದೆ. 2021 ರ ಸಾಲಿನಲ್ಲಿ ಅಂದರೆ ಜನವರಿ 2021 ರಿಂದ ಡಿಸೆಂಬರ್‌ 2021 ರವರೆಗೆ ಪ್ರಕಟವಾಗಿರುವ ಮೊದಲ ಮುದ್ರಣದ ಕಥಾಸಂಕಲನಗಳನ್ನು ಪಂಜುವಿಗಾಗಿ ಕಳುಹಿಸಿಕೊಡಿ. ನಮಗೆ ಬಂದ ಕೃತಿಗಳಲ್ಲಿನ ಅತ್ಯುತ್ತಮವಾದ ಕಥಾಸಂಕಲನವೊಂದಕ್ಕೆ ರೂ. 10,000/- ನಗದು […]

ಪ್ರಕಟಣೆ

2022 ರ “ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ” ಗಾಗಿ ಪ್ರಕಟಿತ ಕೃತಿಗಳ ಆಹ್ವಾನ

2022 ರ “ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ” ಗಾಗಿ ಪ್ರಕಟಿತ ಕೃತಿಗಳ ಆಹ್ವಾನ ಅವ್ವ ಪುಸ್ತಕಾಲಯ ಸಾಹಿತ್ಯ ಬಳಗ ಕುಣಿಗಲ್ ವತಿಯಿಂದ “ಶ್ರೀಮಾನ್ ಲೇ. ನರಸಯ್ಯ” ಅವರ ಸ್ಮರಣಾರ್ಥ ಕೊಡಮಾಡುವ “ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ” ಗಾಗಿ 2020 ರ ಜುಲೈ ತಿಂಗಳಿಂದ 2022 ರ ಜೂನ್ ತಿಂಗಳವರೆ ಪ್ರಕಟವಾಗಿರುವ ಕನ್ನಡ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ. ಈ ಹಿಂದೆ ಪ್ರಶಸ್ತಿ ಪಡೆದವರು ಈ ವರ್ಷದ ಪ್ರಶಸ್ತಿಗೆ ಅರ್ಹರಾಗಿರುವುದಿಲ್ಲ. 2022 ರ ಆಗಸ್ಟ್ 31 ರೊಳಗೆ ತಮ್ಮ ಕೃತಿಯ […]

ಪ್ರಕಟಣೆ

ಡಾ.ಅರವಿಂದ ಪಟೇಲ್ ಅವರ “ಹಾಲು ಚೆಲ್ಲಿದ ಹೊಲ” ಕವನ ಸಂಕಲನ ಬಿಡುಗಡೆ ಸಮಾರಂಭ

ಅಂಕುರ ಪ್ರಕಾಶನ ಪ್ರಕಟಿಸಿರುವ ಡಾ.ಅರವಿಂದ ಪಟೇಲ್ ಅವರ “ಹಾಲು ಚೆಲ್ಲಿದ ಹೊಲ” ಕವನ ಸಂಕಲನವನ್ನು ಮಾರ್ಚ್ 20, ಭಾನುವಾರ, ಬೆಳಿಗ್ಗೆ 10.30ಕ್ಕೆ ಚಾಮರಾಜಪೇಟೆಯ ಐಎಂಎ ಸಭಾಂಗಣದಲ್ಲಿ ನಾಡೋಜ ಬರಗೂರು ರಾಮಚಂದ್ರಪ್ಪ ಜನಾರ್ಪಣೆ ಮಾಡಲಿದ್ದಾರೆ.  ಉಪಸ್ಥಿತಿ: ವಿಪ್ರೋ ಸಂಸ್ಥೆಯ ತರಬೇತಿ ವಿಭಾಗದ ಜಾಗತಿಕ ಮುಖ್ಯಸ್ಥರಾದ ಪಿ.ಬಿ.ಕೋಟೂರ, ವೈದ್ಯ ಲೇಖಕ ಡಾ.ಸಲೀಮ ನದಾಫ, ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ (ದಕ್ಷಿಣ ವಲಯ) ಉಪಾಧ್ಯಕ್ಷರಾದ ಸಿರಿಗೇರಿ ಪನ್ನರಾಜ, ಕನ್ನಡ ಸಹಾಯಕ ಪ್ರಾಧ್ಯಾಪಕಿ ಸೌಮ್ಯಾ ಕೋಡೂರು, ಕವಿ ಡಾ.ಅರವಿಂದ ಪಟೇಲ್, ಪ್ರಕಾಶಕ ಚಂದ್ರಕಾಂತ […]

ಪ್ರಕಟಣೆ

ಮಕ್ಕಳ ಸಾಹಿತ್ಯ ಪರಿಷತ್ತು ಶಿವಮೊಗ್ಗ ಘಟಕದಿಂದ 2021 ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಶಿವಮೊಗ್ಗಸೃಜನ ಶಿಕ್ಷಣ ಸಂಶೋಧನಾ ಟ್ರಸ್ಟ್ (ರಿ)ಮಕ್ಕಳ ಮಂದಾರ ಬಳಗ ಸಹಯೋಗದಲ್ಲಿ2021 ನೇ ಸಾಲಿನ ವಿವಿಧ ಐದು ವಿಭಾಗಗಳ ದತ್ತಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 1. ಡಾ.ಕೊಡಕ್ಕಲ್ ಶಿವಪ್ರಸಾದ್ ದತ್ತಿ ಪುರಸ್ಕಾರ ರಾಜ್ಯದ ಅಂಗವಿಕಲ ಮಕ್ಕಳ ಶಿಕ್ಷಣ , ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದವರಿಗೆ ಈ ಪುರಸ್ಕಾರ ಮೀಸಲಾಗಿದೆ. ಸಂಬಂಧಿಸಿದ ತಮ್ಮ ಸೇವಾ ವಿವರಗಳನ್ನು ಪಿಡಿ ಎಪ್ ಕಳುಹಿಸಲು ಕೋರಿದೆ. Makkalamandara@gmail.com 2 .”ಮಕ್ಕಳ ಮಂದಾರ ರಾಜ್ಯ ಪ್ರಶಸ್ತಿ” ಪುರಸ್ಕಾರಕ್ಕೆ ಅರ್ಜಿ ಆಹ್ವಾನ 21 […]

ಪ್ರಕಟಣೆ

ಪಂಜುವಿನ ವಿಶೇಷ ಸಂಚಿಕೆಗೆ ಬರಹಗಳ ಆಹ್ವಾನ

ಆತ್ಮೀಯರೇ, ನೋಡ ನೋಡುತ್ತಿದ್ದಂತೆ ಇದೇ ಜನವರಿ ಇಪ್ಪತ್ತೊಂದರಂದು ಪಂಜು ಹತ್ತನೇ ವರ್ಷಕ್ಕೆ ಕಾಲಿಡುತ್ತಿದೆ. ಪಂಜು ದಶಕ ತಲುಪುತ್ತಿರುವ ಸಂಭ್ರಮಕ್ಕೆ ಒಂದು ವಿಶೇಷ ಸಂಚಿಕೆ ಮಾಡದಿದ್ದರೆ ಹೇಗೆ. ಹೀಗೆ ಬಂದು ಹಾಗೆ ಮರೆಯಾಗುವ ನೂರಾರು ವೆಬ್ ತಾಣಗಳ ನಡುವೆಯೂ ಪಂಜುವಿಗೆ ತನ್ನದೇ ಐಡೆಂಟಿಟಿ ಕೊಟ್ಟವರು ನೀವು. ಇವತ್ತಿಗೂ ಯಾರಿಗೂ ಪರ್ಸನಲ್ ಆಗಿ ಕರೆ ಮಾಡಿಯೋ ಮೆಸೇಜ್ ಹಾಕಿಯೋ ಪಂಜುವಿಗಾಗಿ ಬರೆಯಿರಿ ಅಂತ ಕೇಳಿದ್ದು ತುಂಬಾನೆ ಕಡಿಮೆ. ಪಂಜುವಿಗೆ ಬರೆಯಲೇಬೇಕೆಂಬುವವರು ತುಂಬು ಹೃದಯದಿಂದ ಇಲ್ಲಿಯವರೆಗೂ ಬರೆದಿದ್ದಾರೆ. ಇನ್ನು ಮುಂದೆಯೂ ಬರೆಯುತ್ತಾರೆ […]

ಪ್ರಕಟಣೆ

ಲೇಖನ ಕಳುಹಿಸಿ

ಸಹೃದಯಿಗಳೇ, “ಪಂಜು” ಅಂತರ್ಜಾಲ ವಾರ ಪತ್ರಿಕೆಗೆ ನಿಮ್ಮ ಅಪ್ರಕಟಿತ ಕತೆ, ಕವನ, ಲೇಖನ, ಪುಸ್ತಕ ವಿಮರ್ಶೆ, ಹಾಸ್ಯ ಬರಹ, ಚುಟುಕ, ಪ್ರವಾಸ ಕಥನ, ವ್ಯಂಗ್ಯಚಿತ್ರ, ಛಾಯಾಚಿತ್ರ, ಸಿನಿಮಾ ಸುದ್ದಿ, ಇತ್ಯಾದಿ ಸಾಹಿತ್ಯ ಸಂಬಂಧಿತ ಬರಹಗಳನ್ನು ಕಳುಹಿಸಿಕೊಡಿ. ಜೊತೆಗೆ ನಾಟಕ ಪ್ರದರ್ಶನ, ಪುಸ್ತಕ ಬಿಡುಗಡೆ ಇತ್ಯಾದಿ ಸಾಹಿತ್ಯ ಮತ್ತು ಕಲೆ ಸಂಬಂಧಿತ ಪ್ರಕಟಣೆಗಳನ್ನು ನೀಡಲು ಸಹ ನಮ್ಮನ್ನು ಸಂಪರ್ಕಿಸಿ. ಹಾಗೆಯೇ ಪಂಜು ಪುಟಗಳಲ್ಲಿನ ಕತೆ, ಕವನ, ಲೇಖನಗಳಿಗೆ ನಿಮ್ಮ ಕುಂಚದ ಕೈಚಳಕದಿಂದ ಚಿತ್ರಗಳನ್ನು ರಚಿಸಿ ಪಂಜಿಗೆ ಮತ್ತಷ್ಟು ಮೆರಗು […]

ಪ್ರಕಟಣೆ

ನವಕರ್ನಾಟಕ ಪುಸ್ತಕ ಮಳಿಗೆಗಳಲ್ಲಿ ಕನ್ನಡ ಪುಸ್ತಕಗಳ ಮೇಲೆ ನವೆಂಬರ್ ತಿಂಗಳು ಪೂರ್ತಿ ವಿಶೇಷ ರಿಯಾಯಿತಿ

ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯಾದ್ಯಾಂತ ಇರುವ ನವಕರ್ನಾಟಕ ಪುಸ್ತಕ ಮಳಿಗೆಗಳಲ್ಲಿ ನವಕರ್ನಾಟಕ ಪ್ರಕಾಶನದ ಪುಸ್ತಕಗಳು ಮಾತ್ರವಲ್ಲದೆ ನಾಡಿನ ಪ್ರಮುಖ ಪ್ರಕಾಶಕರ ಕನ್ನಡ ಪುಸ್ತಕಗಳ ಮೇಲೆ ನವೆಂಬರ್ ತಿಂಗಳು ಪೂರ್ತಿ ವಿಶೇಷ ರಿಯಾಯಿತಿ ಮಾರಾಟವನ್ನು ಹಮ್ಮಿಕೊಳ್ಳಲಾಗಿದೆ. ಕನ್ನಡ ಪುಸ್ತಕ ಪ್ರಿಯರು ಈ ಸಂದರ್ಭವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಈ ಮೂಲಕ ಕೋರಲಾಗಿದೆ. ಬೆಂಗಳೂರು ಮಳಿಗೆಗಳ ವಿಳಾಸ: ನವಕರ್ನಾಟಕ ಪುಸ್ತಕ ಮಳಿಗೆದೇವಾಂಗ ಟವರ್, 35, ಕೆಂಪೇಗೌಡ ರಸ್ತೆಬೆಂಗಳೂರು – 560 009ದೂ : 9480686862 ನವಕರ್ನಾಟಕ ಪುಸ್ತಕ ಮಳಿಗೆಎಂಬೆಸಿ ಸೆಂಟರ್, ಕ್ರೆಸೆಂಟ್ […]

ಪ್ರಕಟಣೆ

ಹಾಡ್ಲಹಳ್ಳಿ ಪ್ರಕಾಶನದ ಐದು ಪುಸ್ತಕಗಳು ಈಗ ಒಂದೇ ಗುಚ್ಚದಲ್ಲಿ…

ಹಾಡ್ಲಹಳ್ಳಿ ಪಬ್ಲಿಕೇಷನ್ ವತಿಯಿಂದ ಉಲಿವಾಲ ಮೋಹನ್ ಕುಮಾರ್ ಅವರ “ಮುಳುಗಿದ್ದೆಲ್ಲಾ ಕಥೆಯಲ್ಲ” ಹಾಡ್ಲಹಳ್ಳಿ ನಾಗರಾಜ್ ಅವರ “ಅಜ್ಜನ ಕಮೋಡು” ಕಾದಂಬರಿ ಹಾಗು “ಮಳೆಯೆಂಬ ಮಾಯಾಂಗನೆ” ಪ್ರಬಂಧ ಹಾಗು ಚಲಂ ಹಾಡ್ಲಹಳ್ಳಿ ಅವರ “ಈ ಮಳೆಗಾಲ ನಮದಲ್ಲ” ಕವನ ಸಂಕಲನ, “ವಿ.ಸೂ. ಹೊಗೆ ಆರೋಗ್ಯಕ್ಕೆ ಒಳ್ಳೆಯದು” ಪುಸ್ತಕಗಳು ಇದೇ ಶನಿವಾರ, ಸೆಪ್ಟೆಂಬರ್‌ ೪, ೨೦೨೧ ರ ಸಂಜೆ ಐದಕ್ಕೆ ಹಾಸನದ ಸಾಹಿತ್ಯ ಪರಿಷತ್‌ ಭವನದಲ್ಲಿ ಬಿಡುಗಡೆಯಾಗಲಿವೆ. ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಪುಸ್ತಕ ಕೊಳ್ಳುವವರಿಗಾಗಿ ಈ ಐದು ಪುಸ್ತಕಗಳ […]

ಪ್ರಕಟಣೆ

ಮೈತ್ರಿ ಪ್ರಕಾಶನದ ವತಿಯಿಂದ ಕಥಾಸ್ಫರ್ಧೆಗಾಗಿ ಕತೆಗಳ ಆಹ್ವಾನ

ಮೈತ್ರಿ ಪ್ರಕಾಶನದ ವತಿಯಿಂದ ಕಥಾಸ್ಫರ್ಧೆಗಾಗಿ ಕತೆಗಳ ಆಹ್ವಾನಿಸುತಿದ್ದೇವೆ..ಕತೆಗಳು ಸ್ವಂತದ್ದಾಗಿರಬೇಕು ಅನುವಾದ, ಆಧಾರದ ಕತೆಗಳು ಬೇಡ.ಮೂರು ಬಹುಮಾನಗಳು ಮೊದಲ ಬಹುಮಾನ ರೂಗಳಲ್ಲಿ 5000, ಎರಡನೇಯ ಬಹುಮಾನ 3000 ಹಾಗೂ ಕೊನೆಯದು 2000. ನಿಯಮಾವಳಿಗಳು:ಒಬ್ಬರು ಒಂದು ಕತೆ ಮಾತ್ರ ಕಳಿಸಬೇಕು, ಕತೆಯ ಪದಮಿತಿ 1500 .ಕತೆಗಳನ್ನು ನುಡಿ/ಯುನಿಕೋಡಿನಲ್ಲಿ ಟಂಕಿಸಿ ಕೊನೆಗೆ ನೀಡಿದ ಮೇಲ್ ಐಡಿಗೆ ಕಳಿಸಬೇಕು.ಎಲ್ಲ ಅಂದರೆ ಹಿರಿಯ ಹಾಗೂ ಹೊಸ ಲೇಖಕ/ಲೇಖಕಿಯರಿಗೆ ಈ ಸ್ಫರ್ಧೆಯಲ್ಲಿ ಭಾಗವಹಿಸುವ ಅವಕಾಶವಿದೆ. ಆದಷ್ಟು ಹೊಸ ಕತೆಗಳ ಕಳಿಸಿ.. ಈಗಾಗಲೇ ಪತ್ರಿಕೆ, ಪುಸ್ತಕದಲ್ಲಿ ಪ್ರಕಟವಾದ […]

ಪ್ರಕಟಣೆ

ಚಡಗ ಕಾದಂಬರಿ ಪ್ರಶಸ್ತಿಗಾಗಿ ಕೃತಿಗಳ ಆಹ್ವಾನ

ಕೋಟೇಶ್ವರದ ಎನ್.ಆರ್.ಎ.ಎಂ.ಎಚ್. ಪ್ರಕಾಶನ ಮತ್ತು ಸ್ಥಿತಿಗತಿ ತ್ರೈಮಾಸಿಕ ಪತ್ರಿಕೆಗಳ ಆಶ್ರಯದಲ್ಲಿ, ಕನ್ನಡದ ಹೆಸರಾಂತ ಕಾದಂಬರಿಕಾರ, ಸಂಘಟಕ ದಿ. ಪಾಂಡೇಶ್ವರ ಸೂರ್ಯನಾರಾಯಣ ಚಡಗರ ನೆನಪಿನಲ್ಲಿ ಕೊಡುವ ಹನ್ನೊಂದನೆಯ ವರ್ಷದ ಕಾದಂಬರಿ ಪ್ರಶಸ್ತಿಗೆ 2020ರಲ್ಲಿ ಪ್ರಥಮ ಆವೃತ್ತಿಯಾಗಿ ಪ್ರಕಟವಾದ ಕಾದಂಬರಿಗಳನ್ನು ಲೇಖಕ/ ಪ್ರಕಾಶಕರಿಂದ ಆಹ್ವಾನಿಸಿದೆ. ಆಸಕ್ತರು ತಮ್ಮ ಕೃತಿಯ ಮೂರು ಪ್ರತಿಗಳನ್ನು ಸ್ಪರ್ಧೆಯ ಸಂಚಾಲಕರಾದ ಪ್ರೊ. ಉಪೇಂದ್ರ ಸೋಮಯಾಜಿ, “ಶ್ರೀ” ಚಿತ್ರಪಾಡಿ, ಅಂಚೆ: ಸಾಲಿಗ್ರಾಮ, ಉಡುಪಿ ಜಿಲ್ಲೆ – 575225 (9740842722) ಇವರಿಗೆ ಸೆಪ್ಟೆಂಬರ್ 30, 2021 ರ ಒಳಗೆ […]

ಪ್ರಕಟಣೆ

‘ಪಿಯುಸಿ ನಂತರ ಮುಂದೇನು?’ ಫೇಸ್ ಬುಕ್ ಲೈವ್ ಕಾರ್ಯಕ್ರಮ

ಸ್ನೇಹಿತರೆ,‘ಪಿಯುಸಿ ನಂತರ ಮುಂದೇನು?’ ಎಂಬ ವಿಷಯದ ಕುರಿತು ಫೇಸ್ ಬುಕ್ ಲೈವ್ ಕಾರ್ಯಕ್ರಮವನ್ನು ಭಾರತೀಯ ವಿದ್ಯಾರ್ಥಿ ಸಂಘ (BVS) ಏರ್ಪಡಿಸಿದೆ. ಈ ದಿನ ರಾತ್ರಿ ಎಂಟಕ್ಕೆ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮುಂದಿರುವ ಅವಕಾಶಗಳ ಬಗ್ಗೆ ಸಹಾಯಕ ಪ್ರಾಧ್ಯಾಪಕರಾದ ಲಕ್ಷ್ಮಣ. ಬಿ ಅವರು ಮಾರ್ಗದರ್ಶನ ನೀಡಲಿದ್ದಾರೆ. ಈ ಕಾರ್ಯಕ್ರಮವನ್ನು ವೀಕ್ಷಿಸಲು BVS ಫೇಸ್ ಬುಕ್ ಪುಟವನ್ನು ಭೇಟಿ ನೀಡಿ.

ಪ್ರಕಟಣೆ

“ಅಲೈದೇವ್ರು” ನಾಟಕವನ್ನು ನೀವು ಮನೆಯಲ್ಲೆ ಕುಳಿತು ನೋಡಬಹುದು

ಈ ವೀಕೆಂಡ್ನಲ್ಲಿ “ಅಲೈದೇವ್ರು” ನಾಟಕವನ್ನು ನೀವು ಮನೆಯಲ್ಲೆ ಕುಳಿತು ನೋಡಬಹುದು. ನೀವು ನೋಡಿ ಫೀಡಬ್ಯಾಕ್ ಕೊಟ್ರೆ ನಮ್ಮ ತಂಡಕ್ಕೆ ಖುಷಿ. ಲಾಕ್ಡೌನ್ ಇರದಿದ್ರೆ ಇಷ್ಟೊತ್ತಿಗೆ ನಮ್ಮ ಜನರಂಗದಿಂದ “ಅಲೈದೇವ್ರು” ನಾಟಕ ಹತ್ತಾರು ಪ್ರದರ್ಶನ ಕಾಣುತ್ತಿತ್ತೇನೋ. ಸಾಲಸೋಲ ಮಾಡಿ, ಕೆಲವರು ಹತ್ರ ಇಸ್ಕೊಂಡು, ಲಕ್ಷಾಂತರ ರೂಪಾಯಿ ಖರ್ಚು ಮಾಡಿ 35 ಜನ ಹೊಸಬರೊಂದಿಗೆ ನಾಟಕ ಕಟ್ಟಿದ್ದೆವು. ಆದರೆ, ಇನ್ನು ಮುಂದೆ ಪ್ರದರ್ಶನವಾಗುತ್ತೋ ಇಲ್ಲವೋ ಗೊತ್ತಿಲ್ಲ. ಆದ್ದರಿಂದ ಈ ನಾಟಕವು ಈಗ ಜೂನ್ 19ರಿಂದ ಶನಿವಾರ ಬೆಳಿಗ್ಗೆ 7 ಗಂಟೆಯಿಂದ […]

ಪ್ರಕಟಣೆ

ಪಂಜುವಿನ ಯೂ ಟ್ಯೂಬ್ ಚಾನಲ್ ನಲ್ಲಿ ಕವನ ಓದುವ ಅವಕಾಶ

ಕನ್ನಡದ ಉತ್ತಮವಾದ ಕವಿತೆಗಳನ್ನು ಓದುಗರಿಗೆ ತಲುಪಿಸುವ ನಿಟ್ಟಿನಲ್ಲಿ ಪಂಜು ಯೂ ಟ್ಯೂಬ್ ಚಾನಲ್ ಶುರು ಮಾಡಿದ್ದೇವೆ. ತಮ್ಮ ಕವಿತೆಗಳಿಗಿಂತ ಬೇರೆ ಕವಿಗಳ ಕವಿತೆಗಳನ್ನು ವಾಚಿಸುವ ಅವಕಾಶ ಪಂಜುವಿನ ಯೂ ಟ್ಯೂಬ್ ಚಾನಲ್ಲಿನಲ್ಲಿದೆ. ಬೇರೆಯವರ ಕವಿತೆಯನ್ನು ವಾಚಿಸುವ ಇಚ್ಚೆಯಿದ್ದರೆ ನೀವು ವಾಚಿಸಿರುವ ಕವಿತೆಯ voice ಸ್ಯಾಂಪಲ್ ಕಳಿಸಿ. ಉತ್ತಮವಾಗಿ ವಾಚನ ಮಾಡುವವರಿಗೆ ನಮ್ಮ ಯೂ ಟ್ಯೂಬ್ ಚಾನಲ್ ನಲ್ಲಿ ಕವಿತೆ ವಾಚಿಸುವ ಅವಕಾಶ ನೀಡಲಾಗುವುದು. ನಿಮ್ಮ ಕವಿತೆಯನ್ನು ಬೇರೆಯವರಿಂದ ವಾಚಿಸುವ ಇಚ್ಚೆ ಇದ್ದರೆ ನಿಮ್ಮ ಕವನ ಸಂಕಲನವನ್ನು ನಮಗೆ […]

ಪ್ರಕಟಣೆ

ಪಂಜುವಿನ ಯೂಟ್ಯೂಬ್‌ ಚಾನೆಲ್‌ ಶುರು

ಕನ್ನಡದ ಅತ್ಯುತ್ತಮ ಕವಿತೆಗಳನ್ನು ಕೇಳಿಸಲು ಪಂಜುವಿನ ಯೂಟ್ಯೂಬ್‌ ಚಾನೆಲ್‌ ಶುರು ಮಾಡಿದ್ದೇವೆ. ಸಮಯವಿದ್ದಾಗ ಒಮ್ಮೆ ಕಣ್ಣಾಡಿಸಿ. ಕವಿತೆ ವಾಚಿಸುವ ಇಚ್ಚೆಯುಳ್ಳವರು ಒಂದು ಮೇಲ್‌ ಮಾಡಿ. ನಮ್ಮ ಮೇಲ್‌ ವಿಳಾಸ: editor.panju@gmail.com, smnattu@gmail.com

ಪ್ರಕಟಣೆ

ಕನ್ನಡ ಕಲರವ – ಆನ್ಲೈನ್ ಸಾಹಿತ್ಯಕೂಟದ ವಿವಿಧ ಸ್ಪರ್ಧೆಗಳು

ಕನ್ನಡ ಕಲರವ – ಆನ್ಲೈನ್ ಸಾಹಿತ್ಯಕೂಟ“ಇದು ಕನ್ನಡ ಸಾಹಿತ್ಯಾಸಕ್ತರ ಜೀವಾಳ” 23 ಏಪ್ರಿಲ್‍ 2020 ರಲ್ಲಿ ರಚಿತವಾದ ಈ ತಂಡವು ಈವರೆಗೆ ಯಶಸ್ವಿಯಾಗಿ ಸಾಹಿತ್ಯ ಸೇವೆಯಲ್ಲಿ ಒಂದು ವರ್ಷವನ್ನು ಪೂರೈಸಲಿದೆ. ಆ ನಿಟ್ಟಿನಲ್ಲಿ ಮೂರು ದಿನಗಳ ಸಾಹಿತ್ಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. 20-ಏಪ್ರಿಲ್-2021 : ನ್ಯಾನೋ ಕಥಾ ಸ್ಪರ್ಧೆ*) 150 ಪದಮಿತಿಯ ಸ್ವತಂತ್ರ ವಿಷಯದ ಮೇಲೆ ಕಥೆ ರಚಿಸಿ (mobileನಲ್ಲಿ unicode fontನಲ್ಲಿ ಟೈಪ್ ಮಾಡಿದ ಕಥೆ) ಏಪ್ರಿಲ್ 20 ರಂದು avvapustakaalaya@gmail.com ಗೆ ಕಳಿಸಿಕೊಡಬೇಕು. 21-ಏಪ್ರಿಲ್-2021 : ಸ್ವರಚಿತ ಕವನ […]

ಪ್ರಕಟಣೆ

ಡಾ|| ಎ.ಪಿ.ಜೆ. ಅಬ್ದುಲ್ ಕಲಾಂ ಕುರಿತು ಲೇಖನ ಸ್ಪರ್ಧೆಗೆ ಲೇಖನಗಳ ಆಹ್ವಾನ

ಡಾ|| ಎ.ಪಿ.ಜೆ. ಅಬ್ದುಲ್ ಕಲಾಂ ಸಮಾಜ ಸೇವಾ ಸಂಸ್ಥೆ ಯಾಪಲದಿನ್ನಿ, ರಾಯಚೂರು ಕಲಾಂ ಸಂಸ್ಥೆಯು ಗ್ರಾಮೀಣ ಪ್ರದೇಶದಲ್ಲಿ ಯೋಗ ಶಿಬಿರ ರಕ್ತದಾನ ಶಿಬಿರ ವ್ಯಕ್ತಿತ್ವ ವಿಕಸನ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ಕಲಾಂ ಕಲ್ಪ ವೃಕ್ಷವನ ಕಲಾಂ ಸ್ಮಾರಕ ಇನ್ನೂ ಹಲವಾರು ಸಾಮಾಜಿಕ ಚಟುವಟಿಕೆಗಳಮೂಲಕ ಗ್ರಾಮೀಣ ಪ್ರದೇಶದಲ್ಲಿ ಪ್ರತಿವರ್ಷ ವಿವಿಧ ಕಾರ್ಯಕ್ರಮವನ್ನು ಮಾಡುತ್ತಾ, ಸಮಾಜದ ಸುಧಾರಣೆಗಾಗಿ ವಿವಿಧ ರೀತಿಯ ಕ್ಷೇತ್ರದಲ್ಲಿ ತಮ್ಮದೇ ಆದ ಸಾಧನೆ ಮಾಡುತ್ತಿರುವ ವ್ಯಕ್ತಿಗಳನ್ನು ಗುರುತಿಸಿ, ಪ್ರತಿವರ್ಷ ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜಯಂತಿಯಂದು […]

ಪ್ರಕಟಣೆ

ಗಣಕರಂಗ (ರಿ), ಧಾರವಾಡ ಆಯೋಜಿಸಿರುವ ಕವನ ವಾಚನ ಅಥವಾ ಜನಪದ ಶೈಲಿಯಲ್ಲಿ ಗಾಯನ ಸ್ಪರ್ಧೆ

  #ಗಣಕರಂಗ (ರಿ), ಧಾರವಾಡ ಆಯೋಜಿಸುವ ವಿಶ್ವಜ್ಞಾನ ದಿನ ದ ಪ್ರಯುಕ್ತ ‘ಬಾಬಾಸಾಹೇಬ ಡಾ.ಅಂಬೇಡ್ಕರ್ ಕುರಿತ ಜಾನಪದ ಶೈಲಿಯ ಮುಕ್ತ ಕವನ ವಾಚನ ಮತ್ತು ಗಾಯನ ಸ್ಪರ್ಧೆಗೆ ಸ್ವಾಗತ . ಎಲ್ಲರಿಗೂ ಮುಂಚಿತವಾಗಿ (ಏಪ್ರಿಲ್-14) ವಿಶ್ವಜ್ಞಾನ ದಿನದ ಶುಭಾಶಯಗಳು. ಆತ್ಮೀಯರೇ, ನಿಮಗೆ ಈಗಾಗಲೇ ಗೊತ್ತಿರುವಂತೆ ಗಣಕರಂಗ (ರಿ), ಧಾರವಾಡ ಸಂಸ್ಥೆಯು ಇಲ್ಲಿಯವರೆಗೆ ಹಲವಾರು ಕಾರ್ಯಕ್ರಮಗಳನ್ನು ಸಭಾವೇದಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳ ಆನ್-ಲೈನ್ ದಲ್ಲಿ ಯಶಸ್ವಿಯಾಗಿ ನಡೆಸಿದೆ. ಅದರ ಮುಂದುವರಿಕೆಯಾಗಿ, ಈಗ ಬರುವ ಏಪ್ರಿಲ್-14ರಂದು ‘ವಿಶ್ವಜ್ಞಾನ ದಿನ’ದ ಪ್ರಯುಕ್ತ ವಾಟ್ಸಪ್ […]

ಪ್ರಕಟಣೆ

ಪಂಜು ಪ್ರೇಮ ಪತ್ರ ಸ್ಪರ್ಧೆ 2021 ರ ಫಲಿತಾಂಶ

2021 ರ ಪಂಜು ಪ್ರೇಮ ಪತ್ರ ಸ್ಪರ್ಧೆಯಲ್ಲಿ ವಿಜೇತರಾದವರ ಪಟ್ಟಿ ಈ ಕೆಳಗಿನಂತಿದೆ. 1 ಪ್ರಥಮ ಬಹುಮಾನ: ಕೃತಿಕಾರಾಣಿ, ಯಲ್ಲಾಪುರ 2 ದ್ವಿತೀಯ ಬಹುಮಾನ: ಸುಕೃತಿ ಕೆ ಪೂಜಾರಿ 3 ತೃತೀಯ ಬಹುಮಾನ: ಶರಣಬಸವ ಕೆ.ಗುಡದಿನ್ನಿ ಐದು ಸಮಾಧಾನಕರ ಬಹುಮಾನಗಳು: 1. ದಿನೇಶ್‌ ಉಡಪಿ 2. ನರೇಂದ್ರ ಎಸ್‌. ಗಂಗೊಳ್ಳಿ 3. ಕಪಿಲ ಪಿ ಹುಮನಾಬಾದೆ 4. ಪರಮೇಶ್ವರಿ ಭಟ್ 5. ಸುಜಾತಾ ಲಕ್ಮನೆ, ಬೆಂಗಳೂರು ತೀರ್ಪುಗಾರರು: ಕನ್ನಡದ ಖ್ಯಾತ ಬರಹಗಾರರಾದ ಎ ಆರ್‌ ಮಣಿಕಾಂತ್‌ ರವರು ಈ […]