ಪ್ರಶಸ್ತಿ ಅಂಕಣ

ವರ್ಕ್ ಫ್ರಂ ಹೋಂ ಮತ್ತದರ ಸಮಸ್ಯೆಗಳು: ಪ್ರಶಸ್ತಿ ಪಿ.

ಪೇಟೆಯಲ್ಲಿನ ಸಾಫ್ಟವೇರ್ ಕಂಪೆನಿಗಳಲ್ಲಿ ಕೆಲಸ ಮಾಡ್ತಿದ್ದ ಹುಡುಗರೆಲ್ಲಾ ಈಗ ಹಳ್ಳಿ ಸೇರಿದ್ದಾರೆ. ಮನೇಲೇ ಕೂತ್ಕೊಂಡು ಅದೇನೋ ವರ್ಕ್ ಫ್ರಂ ಹೋಂ ಮಾಡ್ತಿದ್ದಾರೆ ಅನ್ನೋ ಮಾತನ್ನ ಸುಮಾರು ಕಡೆ ಕೇಳಿರ್ತೀರ . ಮುಂಚೆಯೆಲ್ಲಾ ಆಫೀಸಿಗೆ ಅಂತ ಬೆಂಗಳೂರಿಗೆ ಹೋಗ್ತಿದ್ದೆ. ಈಗ ಇಲ್ಲೇ ಇದ್ದೀಯಲ್ಲ. ರಜೆಯೇನಪ್ಪ ನಿಂಗೆ ಅಂತಾರೆ ನಮ್ಮಜ್ಜಿ. ಇಲ್ಲಜ್ಜಿ ಮನೆಯಿಂದ್ಲೇ ಕೆಲಸ ಮಾಡ್ಬೋದು ಲ್ಯಾಪ್ಟಾಪಲ್ಲಿ, ಕಂಪ್ಯೂಟರಲ್ಲಿ ಅಂದ್ರೆ ಏನ್ಮಾಡ್ತೀಯ ಅದ್ರಲ್ಲಿ ? ಲೆಕ್ಕ ಮಾಡೋದಿರುತ್ತಾ ಅಂತಾರೆ. ನಾವು ಏನ್ಮಾಡ್ತೀವಿ ಅಂತ ಹೊರಗೆ ಹೇಳದ ಹಾಗೆ ನಮ್ಮ ಅನ್ನದಾತರಾದ […]

ಪ್ರಶಸ್ತಿ ಅಂಕಣ

ಮೆಕ್ಸಿಕೋ ಮೈತ್ರಿ: ಪ್ರಶಸ್ತಿ ಪಿ.

ಕೆಲಸದ ನಿಮಿತ್ತ ಮೆಕ್ಸಿಕೋಗೆ ಬಂದ ಮೊದಲ ದಿನಗಳಲ್ಲಿ ಕಾಡಿದ ದಿಗಿಲುಗಳು ಅಷ್ಟಿಷ್ಟಲ್ಲ. ಭಾರತದ ಮಾಧ್ಯಮಗಳಲ್ಲಿ ಕಂಡ ಹಾದಿಬೀದಿಯಲ್ಲೆಲ್ಲಾ ಡ್ರಗ್ಸ್ ಮಾಡೋ ನಾಡೆಂಬ ಸುದ್ದಿಗಳಾಗಿರಬಹುದು, ರಾತ್ರಿ ಏಳರ ಮೇಲೆ ಹೊರಗೆ ಕಾಲಿಡಬೇಡವೆಂದು ಎಚ್ಚರಿಸುತ್ತಿದ್ದ ಹೋಟೇಲು ರೂಂಮೇಟಾಗಿರಬಹುದು, ಗೊತ್ತಿಲ್ಲದ ಸ್ಪಾನಿಷ್ ಭಾಷೆಯಾಗಿರಬಹುದು, ಇಂಟರ್ ನ್ಯಾಷನಲ್ ರೋಮಿಂಗ್ ಇದ್ದರೂ ಸಿಗ್ನಲ್ ಸಿಗದ ಸಿಮ್ಮಾಗಿರಬಹುದು, ಎಲ್ಲೆಡೆಯೂ ಮಾಂಸದ ಸಾಮ್ರಾಜ್ಯವಾಗಿ ವೆಜ್ಜಿಗಳಿಗೆ ಸಿಗದ ಊಟವಾಗಿರಬಹುದು, ತಮ್ಮ ಕೆಲಸವನ್ನೇ ನೋಡಿಕೊಳ್ಳುತ್ತಾ ಹೆಚ್ಚೇನೂ ನೆರವಾಗದ ಈಗಾಗಲೇ ಅಲ್ಲಿಗೆ ಹೋಗಿದ್ದ ಸಹೋದ್ಯೋಗಿಗಳಾಗಿರಬಹುದು. ಸಿಮ್ಮು ತಗೊಳ್ಳೋಕೆ ನಾಲ್ಕು ದಿನ, ಬ್ಯಾಂಕ್ […]

ಪ್ರಶಸ್ತಿ ಅಂಕಣ

ಸುಂದರ ಸಿಯಾಟೆಲ್: ಪ್ರಶಸ್ತಿ

ನಮಗೆ ಅದೇ ಹೆಸರೇಕೆ ಇಟ್ಟರು ಅನ್ನೋದರ ಹಿಂದೆ ನಮ್ಮಪ್ಪ ಹೇಳೋ ತರ ಪ್ರಸಿದ್ಧ ನಗರಗಳಿಗೂ ಆ ಹೆಸರುಗಳೇ ಯಾಕೆ ಬಂದವು ಅಂತ ಎಷ್ಟು ಸಲ ಯೋಚನೆ ಮಾಡಿರೋಲ್ಲ ನಾವು ? ಹೆಸರಲ್ಲೇನಿದೆ ಅಂದ್ರಾ ? ಪ್ರತೀ ನಗರಕ್ಕೂ ತನ್ನದೇ ಆದೊಂದು ಹೆಸರಿರುತ್ತೆ. ಆ ಹೆಸರೇಕೆ ಬಂತು ಅನ್ನೋದರ ಹಿಂದೊಂದು ಸುಂದರ ಕಥೆಯಿರುತ್ತೆ. ಹೆಸರ ಇತಿಹಾಸ ಥಟ್ಟನೆ ಗೋಚರಿಸದಿದ್ದರೂ ಕಾಲಗರ್ಭದಲ್ಲೆಲ್ಲೋ ಮರೆಯಾಗಿ ಕೆದಕುವವರಿಗಾಗಿ ಕಾದು ಕೂತಿರುತ್ತೆ. ದೇಶ ಸುತ್ತೋ ಜೋಶಿನಲ್ಲಿ ಸಿಕ್ಕಿದ್ದ ಸಿಯಾಟೆಲ್ಲಿಗೆ ಆ ಹೆಸರೇಕೆ ಬಂತೆನ್ನೋ ಪ್ರಶ್ನೆಯ […]

ಪ್ರಶಸ್ತಿ ಅಂಕಣ

ಸಂತಾ ರನ್: ಪ್ರಶಸ್ತಿ

ವಾರಕ್ಕೊಮ್ಮೆ ಆಗೋ ಸಂತೆ ಗೊತ್ತು. ,ಸಂತಾ-ಬಂತಾ ಜೋಕುಗಳಲ್ಲಿಯ ಸಂತಾ ಗೊತ್ತು. ಕ್ರಿಸ್ಮಸ್ಸಿನಲ್ಲಿ ಗಿಫ್ಟ್ ಕೊಡ್ತಾನೆ ಅಂತ ಮಕ್ಕಳು ಕಾಯೋ ಸಂತಾ ಕ್ಲಾಸೂ ಗೊತ್ತು. ಇದೇನಿದು ಸಂತಾ ರನ್ ಅಂದ್ರಾ ? ಮೆಕ್ಸಿಕೋದಲ್ಲಿ ವರ್ಷಕ್ಕೊಮ್ಮೆ ಕ್ರಿಸ್ಮಸ್ ಸಮಯದಲ್ಲಿ ಆಗೋ ಓಟದ ಸ್ಪರ್ಧೆಯೇ "ಸಂತಾ ರನ್". ನಮ್ಮ ಬೆಂಗಳೂರಲ್ಲೂ ತಿಂಗಳಿಗೊಂದರಂತೆ ಓಟಗಳು ನಡೀತಿರತ್ತೆ. ನೈಸ್ ರೋಡ್ ಮ್ಯಾರಥಾನ್, ಟಿಸಿಎಸ್ ೧೦ಕೆ ಓಟಕ್ಕೆ ವಿದೇಶೀ ಅಥ್ಲೀಟುಗಳೂ ಬರುತ್ತಾರೆ ಇದ್ರಲ್ಲೇನು ವಿಶೇಷ ಅಂದ್ರಾ ? ಹೆಸರೇ ಹೇಳುವಂತೆ ಓಟಕ್ಕೆ ಬರೋ ಎಲ್ಲಾ ಸ್ಪರ್ಧಿಗಳೂ […]

ಪ್ರಶಸ್ತಿ ಅಂಕಣ

ಮತ್ತೆ ಮಳೆಯಾಗಿದೆ: ಪ್ರಶಸ್ತಿ

ಮಳೆಗಾಲ ಮುಗೀತು. ಇನ್ನೇನು ಚಳಿಗಾಲ ಬರ್ಬೇಕಿತ್ತಲ್ಲ ಅಂತ ಕಾಯ್ತಾ ಇದ್ದವರಿಗೆ ಡಿಸೆಂಬರ್ ಐದಾದರೂ ಚಳಿಯ ದರ್ಶನವಾಗಿರಲಿಲ್ಲ. ಕಡಿಮೆಯೆಂದರೆ ಹದಿನೈದು , ಹೆಚ್ಚೆಂದರೆ ಇಪ್ಪತ್ತೈದು ಡಿಗ್ರಿಯಿರುತ್ತಿದ್ದ ದಿನಗಳಲ್ಲಿ ಗ್ಲಾಸ ಕಿಟಕಿಯ ಪಕ್ಕದಲ್ಲಿ ಕುಳಿತು ಕೆಲಸ ಮಾಡೋದೊಂತರ ಖುಷಿ. ಎದುರಿಗಿರೋ ಬೆಟ್ಟಗಳ ಮೇಲೆ ಕವಿಯುತ್ತಿದ್ದ ಮೋಡಗಳು, ಪಕ್ಕದ ಗಗನಚುಂಬಿಗಳ ನಡುವೆ ಕೂಕೆನ್ನುತ್ತಾ ಸಂಜೆ ಕಳೆಯೋ ಮುಳುಗುರವಿ, ಡಿಸೆಂಬರ್ ಬಂತೆಂದು ನೆನಪಿಸುತ್ತಾ ರಸ್ತೆಯಲ್ಲಿ ಆಗಾಗ ಕಾಣುವ ಮೆರವಣಿಗೆಗಳು ಕ್ರಿಸ್ ಮಸ್ ರಜೆ ಬರುತ್ತಿರೋ ಸೂಚನೆ ಕೊಡುತ್ತಿದ್ದವು. ಆಗಾಗ ಎದುರಿಗಿರೋ ಪರ್ವತಗಳನ್ನೇ ಮುಚ್ಚುವಂತಹ […]

ಪ್ರಶಸ್ತಿ ಅಂಕಣ

ಮಹಾವಲಸೆ: ಪ್ರಶಸ್ತಿ

  ಚಳಿಗಾಲ ಬಂತಂದ್ರೆ ಮನೆಯಿಂದ ಹೊರಗೆ ಹೊರಡೋಕೆ ಮನಸ್ಸಾಗಲ್ಲ. ಹೊರಗಡೆ ಚುಮುಚುಮು ಚಳಿ ಕೊರಿತಾ ಇರುವಾಗ  ಮನೆಯೊಳಗೆ ಬೆಚ್ಚಗೆ ಹೊದ್ದು ಕೂತು ಬಿಸಿ ಬಿಸಿ ಬಜ್ಜಿಯೋ, ಬೋಂಡಾವೋ ತಿನ್ನುತ್ತಾ ಚಹಾ ಹೀರೋ ಸವಿಯಿದ್ಯಲ್ಲಾ ? ಆಹಾ. ಬಾಳೇಕಾಯಿ ಚಿಪ್ಸೋ, ಹಲಸಿನ ಕಾಯಿ ಚಿಪ್ಸೋ ಸಿಕ್ಕಿಬಿಟ್ಟರೆ ಅದೇ ಸ್ವರ್ಗ. ನಮ್ಮಲ್ಲಿನ ಚಳಿಯೆಂದರೆ ಎಷ್ಟಿದ್ದೀತು ? ಅಬ್ಬಬ್ಬಾ ಅಂದರೆ ಹದಿನೈದು ಡಿಗ್ರಿಯವರೆಗೆ ಇಳಿಯಬಹುದೇನೋ ? ಆದರೆ ಆ ಚಳಿ ಹಾಗೇ ಹತ್ತಕ್ಕಿಂತಲೂ ಕಡಿಮೆಯಾಗುತ್ತಾ ಹೋದರೆ ? ರಾತ್ರಿ ಹೋಗಲಿ, ಹಗಲಲ್ಲೂ […]

ಪ್ರಶಸ್ತಿ ಅಂಕಣ

ಅನ್ನದಾತ ಕ್ಯಾಂಟೀನ್: ಪ್ರಶಸ್ತಿ

ಬೆಂಗಳೂರಿಗೆ ಕಾಲಿಟ್ಟ ಮೊದಲ ದಿನಗಳವು. ಎರಡು ದಿನ ನೆಂಟರ ಮನೆಯಲ್ಲಿದ್ದರೂ ಮೂರನೇ ದಿನದೊತ್ತಿಗೆ ಪೀಜಿಯೋ ರೂಮೋ ಹುಡುಕಲೇ ಬೇಕೆನ್ನೋ ಹಠ. ಹಠವೆನ್ನಬೇಕೋ, ಸ್ವಾಭಿಮಾನವೆನ್ನಬೇಕೋ ಗೊತ್ತಿಲ್ಲ. ಹಿಂದೊಮ್ಮೆ ಬಂದಾಗಿನ ಊಟವಿಲ್ಲದ ಉರಿಬಿಸಿಲ ದಿನಗಳಿಲ್ಲದಿದ್ದರೂ ಆದಷ್ಟು ಬೇಗ ಸ್ವಂತದ್ದೊಂದು ನೆಲ ಹುಡುಕೋ ಹವಣಿಕೆ. ಸಂಬಳ ಕೊಡೋ ಕಂಪೆನಿ ಕೆಲಸ ಕೊಡಲು ಶುರುಮಾಡದಿದ್ದರೂ ಗೊತ್ತಿಲ್ಲದ ಊರಲ್ಲಿ ಪರಕೀಯನಾಗದಿರಲು ಒದ್ದಾಟ. ನೆಂಟರ ಮನೆಯಲ್ಲಿದ್ದಷ್ಟು ದಿನವೂ ತಾನು ಈ ಊರಿಗೆ ನೆಂಟನೇ ತಾನೇ ? ಈ ಊರಲ್ಲೊಬ್ಬನಾಗಬೇಕೆಂದರೆ ಇಲ್ಲಿಯ ಸಾಮಾನ್ಯರಲ್ಲೊಬ್ಬನಾಗಬೇಕೆಂಬ ಕನವರಿಕೆ. ಅಂತದ್ದೇ ಕನಸಿನ […]

ಪ್ರಶಸ್ತಿ ಅಂಕಣ

ಅಗೋಚರ: ಪ್ರಶಸ್ತಿ

ಏಳ್ಬೇಕು ಅಂತಷ್ಟೊತ್ತಿಗೆ ಏಳ್ಬೇಕು, ಮಲಗ್ಬೇಕು ಅಂದಷ್ಟೊತ್ತಿಗೆ ಮಲಗಿ ಬಿಡ್ಬೇಕು. ಈ ಫೇಸ್ಬುಕ್ಕು,ವಾಟ್ಸಾಪು, ಜೀಮೆಲುಗಳನ್ನೆಲ್ಲ ಡಿಲಿಟ್ ಮಾಡಿ ಎಲ್ಲಾದ್ರೂ ದೂರ ಹೋಗಿ ಬಿಡಬೇಕು ಗುರೂ ಅಂತಿದ್ದವ ಅದರಲ್ಲೇ ಮೂರೊತ್ತೂ ಮುಳುಗಿರುತ್ತಿದ್ದ. ರಾಶಿ ರಾಶಿ ಪುಸ್ತಕಗಳ ಗುಡ್ಡೆ ಹಾಕಿಕೊಂಡವ ಕ್ಲಾಶ್ ಆಫ್ ಕ್ಲಾನ್ಸು, ಫ್ಯೂಚರ್ ಫೈಟಗಳಲ್ಲಿ ಕಳೆದುಹೋಗಿರುತ್ತಿದ್ದ. ಆಟಗಳಲ್ಲಿ ಸಿಗುವ ಕಾಲ್ಪನಿಕ ಕಾಸ ಹಿಂದೆ ಆತನ ಇಂದು ಕಾಣದಷ್ಟು ಕುರುಡನಾಗಿದ್ದವ ಒಮ್ಮೆ ಇದನ್ನೆಲ್ಲಾ ಪಟ್ಟನೆ ಬಿಟ್ಟು ಎಲ್ಲೋ ಮರೆಯಾಗಿಬಿಡುವನೆಂದು ಯಾರೂ ಎಣಿಸಿರಲಿಲ್ಲ. ಬೆಳಗಿಂದ ರಾತ್ರೆಯವರೆಗೂ ಆಫೀಸಲ್ಲೇ ಕೊಳೆಯುತ್ತಾನೆ ಎಂದು ಹೀಗಳೆಯೋ […]

ಪ್ರಶಸ್ತಿ ಅಂಕಣ

ಐದ್ಸಾವರ ಫ್ರೆಂಡ್ಸು ಮತ್ತು ನಾವು: ಪ್ರಶಸ್ತಿ

ಈ ಫೇಸ್ಬುಕ್ಕಿನ ಸಾಹಿತಿಗಳೆಲ್ಲಾ, ಅಥವಾ ಬೇರೆಡೆ ಸಾಹಿತ್ಯ ಬರೆಯುತ್ತಿದ್ದು ಸದ್ಯ ಫೇಸ್ಬುಕ್ಕಿನಲ್ಲಿ ಸಕ್ರಿಯರಾಗಿರೋ ಸ್ನೇಹಿತರೆಲ್ಲಾ ಯಾವುದೋ ಪಕ್ಷದ ವಕ್ತಾರರಂತೆ, ಮತ್ಯಾವುದೋ ಕೋಮಿನ ಹರಿಕಾರರಂತೆ ಯದ್ವಾ ತದ್ವಾ ಪೋಸ್ಟುಗಳನ್ನ ಹರಿಬಿಡೋದನ್ನು ನೋಡಿದಾಗ ಖೇದವಾಗುತ್ತೆ. ಮೋದಿಯೊಬ್ಬ ಸರ್ವಾಧಿಕಾರಿಯೆಂದಾಗ್ಲೋ, ಟಿಪ್ಪು ಜಯಂತಿ ಬೇಡವೆನ್ನುವವರಿಗೆ ಬುದ್ಧಿಯಿಲ್ಲವೆಂದಾಗ್ಲೋ , ಉರುಳು ಸೇವೆಗೋ, ಉಡುಪಿ ಚಲೋಗೋ ಪ್ರಶಂಸೆ, ಧಿಕ್ಕಾರಗಳನ್ನ ಬರೆದಾಗಾದ ಬೇಸರವಲ್ಲವದು. ಆದರೆ ಎಡವೇ ಸರಿಯೆಂದೋ, ಬಲವೇ ಸರ್ವೋತ್ತಮವೆಂದೋ ದಿನಂಪ್ರತಿ ಜಗಳ ಕಾಯೋ ಪರಿಗೆ ಕಸಿವಿಸಿಯಾಗುತ್ತೆ. ವೈಯುಕ್ತಿಕವಾಗಿ ಇಷ್ಟವಾಗೋ ಅವರು ಫೇಸ್ಬುಕ್ಕಿಗೆ ಬಂದಾಗ ಹಿಂಗ್ಯಾಕೆ ಅನ್ನೋದು […]

ಪ್ರಶಸ್ತಿ ಅಂಕಣ

ಸುಬ್ರಹ್ಮಣ್ಯ ಸುತ್ತಮುತ್ತ: ಪ್ರಶಸ್ತಿ

ಸುಮಾರಷ್ಟು ಜನರಿಗೆ ಸುಬ್ರಹ್ಮಣ್ಯ ಅಂದ್ರೆ ಅಲ್ಲಿ ನಡೆಯೋ ನಾಗಪ್ರತಿಷ್ಟೆ, ಆಶ್ಲೇಷ ಬಲಿಗಳು ನೆನಪಾಗುತ್ತೆ. ಟ್ರೆಕ್ಕಿಂಗು ಅಂತ ಹೋಗೋರಿಗೆ ಅದಕ್ಕೆ ಸಮೀಪದಲ್ಲಿರೋ ಕುಮಾರ ಪರ್ವತ ನೆನಪಾಗಬಹುದು. ಆದರೆ ಸುಬ್ರಹ್ಮಣ್ಯ ದೇವಸ್ಥಾನದ ಹಿಂದಿರುವ ಮರಕತ ಪರ್ವತ ಗೊತ್ತಾ ಎಂದರೆ, ಆದಿ ಸುಬ್ರಹ್ಮಣ್ಯ, ಕಾಶಿ ಕಟ್ಟೆ ಗಣಪತಿ, ಅಭಯ ಗಣಪತಿ, ವನದುರ್ಗಾ ದೇವಿ ನೋಡಿದ್ದೀರಾ ಎಂದರೆ ಎಲ್ಲಿದೆಯಪ್ಪಾ ಇವು ಎನ್ನಬಹುದು. ಸುಬ್ರಹ್ಮಣ್ಯದಿಂದ ೨೦ ಕಿಮೀ ದೂರದ ಒಳಗಿರುವ ಪಂಜ ಪಂಚಲಿಂಗೇಶ್ವರ ದೇವಸ್ಥಾನ, ಬಿಳಿನೆಲೆ ಗೋಪಾಲಕೃಷ್ಣ ಸ್ವಾಮಿ ದೇವಸ್ಥಾನ, ಬನವನ ಮೂಲೆ ಈಶ್ವರ […]

ಪ್ರಶಸ್ತಿ ಅಂಕಣ

ಚಿಕ್ಕ ಬಿಲಗುಂಜಿಯ ಕಮಲೇಶ್ವರ ದೇವಸ್ಥಾನ: ಪ್ರಶಸ್ತಿ

ಹೋಗೋದು ಹೇಗೆ ?  ಸಾಗರ ತಾಲ್ಲೂಕಿನ ಸುತ್ತಮುತ್ತಲಿರೋ ಕೆಳದಿ,ಇಕ್ಕೇರಿ,ಕಲಸೆ, ಹೊಸಗುಂದ ಮುಂತಾದ ಇತಿಹಾಸ ಪ್ರಸಿದ್ಧ ತಾಣಗಳ ಬಗ್ಗೆ ಕೇಳಿರುತ್ತೀರಿ. ಆದರೆ ಸಾಗರಕ್ಕೆ ಹತ್ತಿರದಲ್ಲೇ ಹನ್ನೊಂದನೇ ಶತಮಾನದ ದೇವಸ್ಥಾನವೊಂದಿದೆ ಅನ್ನೋದು ಹೆಚ್ಚಿನವರಿಗೆ ತಿಳಿದಿರಲಾರದು. ಅದೇ ಸಾಗರದಿಂದ ಸುಮಾರು ೨೦ ಕಿ.ಮೀ ದೂರದಲ್ಲಿರುವ ಚಿಕ್ಕ ಬಿಲಗುಂಜಿಯ ಕಮಲೇಶ್ವರ ದೇವಸ್ಥಾನ. ಸಾಗರದಿಂದ ಚಿಕ್ಕಬಿಲಗುಂಜಿಗೆ ಹೋಗೋಕೆ ಎರಡು ಮಾರ್ಗಗಳಿವೆ. ಸಾಗರದಿಂದ ಶಿವಮೊಗ್ಗಕ್ಕೆ ಹೋಗೋ ಮಾರ್ಗದಲ್ಲಿ ಸಿಗೋ ತ್ಯಾಗರ್ತಿ ಕ್ರಾಸಿನಲ್ಲಿ ಹೋಗೋದು ಮೊದಲನೇ ಮಾರ್ಗವಾದರೆ ನಂತರ ಸಿಗೋ ಕಾಸ್ಪಾಡಿ ಎಂಬ ಊರಿನ ಬಳಿ ಎಡಕ್ಕೆ […]

ಪ್ರಶಸ್ತಿ ಅಂಕಣ

ಕತೆಯಾಗದ ಕತೆ: ಪ್ರಶಸ್ತಿ

ಅದೆಷ್ಟೋ ಕಥೆಗಳು ಹುಟ್ಟೋ ಮೊದಲೇ ಸತ್ತಿರುತ್ತವೆ. ಒಂಚೂರು ಕಾಯೋ ತಾಳ್ಮೆಯಿಲ್ಲದ ಕತೃವಿನಿಂದ,ಖ್ಯಾತಿಯ ಹಿಂದೇ ಕಳೆದು ಹೋದ ಸ್ಪೂರ್ತಿಯಿಂದ. ಒಮ್ಮೆ ವಾವೆನಿಸಿದ್ದನ್ನೇ ಮತ್ತೆ ಮರುಸೃಷ್ಠಿಸೋ ಧಾವಂತದಲ್ಲಿ,ಹೊಸ ಪ್ರಯತ್ನ ಮತ್ತೆ ಸೋಲಿನತ್ತ ದೂಕಬಹುದೇನೋ ಎಂಬ ಆತಂಕದಲ್ಲಿ,ಬಾರದ ಬಹುಮಾನಗಳ ಕನವರಿಕೆಯಲ್ಲಿ, ಹಾರ-ತುರಾಯಿಗಳ, ಸನ್ಮಾನದ ಶಾಲುಗಳ ಮತ್ತೆ ಮತ್ತೆ ಹೊಚ್ಚಿಕೊಳ್ಳೋ ಹಪಾಹಪಿಯಲ್ಲಿ ಮುಂಚಿನ ಕತೆಗಾರ ಕಳೆದುಹೋಗಿರುತ್ತಾನೆ. ಬಹುಪರಾಕುಗಳ ಪಟಾಕಿಯ ಸದ್ದು ಕಿವಿಯ ಕಿವುಡಾಗಿಸೋ ಮುನ್ನ ಪ್ರಸಿದ್ದಿಯ ನಗರಿಯಿಂದ ಒಂದಿಷ್ಟು ದೂರ ಬಂದು ಒಂದಿಷ್ಟು ತಣ್ಣಗಿರೋ ಬೆಟ್ಟ ಹತ್ತಿ ಒಂದರೆಗಳಿಗೆ ಕೂತರೆ, ದೂರದೂರದ ದೃಶ್ಯ […]

ಪ್ರಶಸ್ತಿ ಅಂಕಣ

ಕುರುಡುಮಲೆ ಪ್ರವಾಸ: ಪ್ರಶಸ್ತಿ

ಸ್ಥಳವೊಂದರ ಹೆಸರು ಕಾಲಕಾಲಕ್ಕೆ ಹೇಗೆ ಬದಲಾಗುತ್ತಾ ಸಾಗುತ್ತೆ ಅನ್ನೋದಕ್ಕೆ ಕೋಲಾರ ಮತ್ತು ಕುರುಡುಮಲೆ ಒಳ್ಳೆಯ ಉದಾಹರಣೆ ಅನಿಸುತ್ತೆ. ಮೂರನೆಯ ಶತಮಾನದಲ್ಲಿ ಗಂಗರ ಅಧೀನದಲ್ಲಿದ್ದ ಒಂದು ನಗರಿ ಕೂವಲಾಲಪುರ. ಅದು ನಂತರ ಚೋಳ,ಹೊಯ್ಸಳ, ವಿಜಯನಗರ ಅರಸರಿಂದ ಆಳಲ್ಪಡುತ್ತಾ ಕೋಲಾರಮ್ಮನ ದೇವಸ್ಥಾನವನ್ನು ಹೊಂದಿ ಕೋಲಾರವಾಯಿತಂತೆ. ಅದೇ ರೀತಿ ಬ್ರಹ್ಮ, ವಿಷ್ಣು, ಮಹೇಶ್ವರರು ಧರೆಗಿಳಿದು ಬಂದು ಕೂಡಿ ಮೂರ್ತಿಯನ್ನು ಪ್ರತಿಷ್ಟಾಪಿಸಿದರೆಂಬ ಪ್ರತೀತಿಯಿದ್ದರಿಂದ ಕೋಲಾರದ ಹತ್ತಿರದ ಸ್ಥಳವೊಂದಕ್ಕೆ ಕೂಟುಮಲೆಯೆಂದು ಹೆಸರಾಯಿತಂತೆ. ಕೂಟುಮಲೆ, ಕೂಡುಮಲೆ ಜನರ ಬಾಯಲ್ಲಿ ಕುರುಡುಮಲೆಯಾಗಿದೆಯೀಗ. ಹೋಗುವುದು ಹೇಗೆ ?  ಕೋಲಾರದಿಂದ […]

ಪ್ರಶಸ್ತಿ ಅಂಕಣ

ಅವನಿ: ಪ್ರಶಸ್ತಿ

ಅರಳಗುಪ್ಪೆಯ ಹೊಯ್ಸಳರ ಕಾಲದ ಚನ್ನಕೇಶವ ದೇವಸ್ಥಾನ ನೋಡಹೋದಾಗ ಅಲ್ಲಿ ಅದಕ್ಕಿಂತ ಹಳೆಯದಾದ ಒಂಭತ್ತನೇ ಶತಮಾನದ ಆಸುಪಾಸಿನಲ್ಲಿ ಕಟ್ಟಿಸಿದ ಕಲ್ಲೇಶ್ವರ ದೇವಾಲಯವಿದೆ ಅಂತ ಗೊತ್ತಾಯ್ತು. ಅದನ್ನು ಕಟ್ಟಿಸಿದವರು ನೋಲಂಬ ಅರಸರು ಅಂತಲೂ ತಿಳಿಯಿತು. ಚಾಲುಕ್ಯರು ಗೊತ್ತು. ಅವರಿಗಿಂತ ಮುಂಚೆ ಬಂದ ನೆರೆ ರಾಜ್ಯಗಳಲ್ಲಿದ್ದ ಚೋಳರು, ರಾಷ್ಟ್ರಕೂಟರ ಬಗ್ಗೆ ಗೊತ್ತು. ಅದಕ್ಕಿಂತಲೂ ಮುಂಚೆ ಬಂದ ಗಂಗರು, ಕದಂಬರು ಕಟ್ಟಿಸಿದ ದೇವಾಲಯಗಳ ಬಗ್ಗೆಯೂ ಚೂರ್ಚೂರು ಗೊತ್ತು. ಇದ್ಯಾರು ನೋಲಂಬ ಅರಸರು ಅಂದರಾ ? ರಾಷ್ಟ್ರಕೂಟರ ಸಾಮಂತರಾಜರಾಗಿದ್ದ ಇವರು ಒಂಭತ್ತರಿಂದ ಹನ್ನೆರಡನೆಯ ಶತಮಾನದವರೆಗೆ […]

ಪ್ರಶಸ್ತಿ ಅಂಕಣ

ಕೋಲಾರಮ್ಮ ದೇವಸ್ಥಾನ: ಪ್ರಶಸ್ತಿ ಪಿ.

ಕರ್ನಾಟಕದಲ್ಲಿನ ಪುರಾತನ ದೇವಾಲಯಗಳಲ್ಲಿ ಹೆಚ್ಚಿರುವುದು ಹೊಯ್ಸಳರ ದೇಗುಲಗಳು. ಅವುಗಳಿಗಿಂತಲೂ ಹಿಂದಿನ ದೇಗುಲಗಳು ಅಂದರೆ ನೆನಪಾಗೋದು ಚೋಳರ ಕಾಲದ್ದು ಮತ್ತು ಅದಕ್ಕಿಂತಲೂ ಹಿಂದೆ ಅಂದರೆ ಕದಂಬರ, ಗಂಗರ ಕಾಲದ ಅಳಿದುಳಿದ ದೇಗುಲಗಳು. ಕೋಲಾರದಲ್ಲಿ ೧೦೧೨ರಲ್ಲಿ ಕಟ್ಟಿಸಲಾದ ದೇವಸ್ಥಾನವೊಂದಿದೆ, ಇನ್ನೂ ಒಳ್ಳೆಯ ಸ್ಥಿತಿಯಲ್ಲಿಯೇ ಇದೆಯೆಂಬ ಸುದ್ದಿ ಕೇಳಿದಾಗ ಅಲ್ಲಿಗೆ ಹೋಗದಿರಲಾಗಲಿಲ್ಲ. ಆ ದೇಗುಲವೇ ಕೋಲಾರಕ್ಕೆ ಇಂದಿನ ಹೆಸರು ಬರಲು ಕಾರಣವಾದ ಕೋಲಾರಮ್ಮ ದೇವಸ್ಥಾನ.  ಇತಿಹಾಸ: ಮೂರನೇ ಶತಮಾನದ ಶುರುವಿನಿಂದಲೂ ಕೂವಲಾಲಪುರ(ಇಂದಿನ ಕೋಲಾರವು) ಗಂಗರ ಆಳ್ವಿಕೆಗೆ ಒಳಪಟ್ಟಿತ್ತು ಎಂದು ಶಾಸನಗಳು ತಿಳಿಸುತ್ತದೆ. […]

ಪ್ರಶಸ್ತಿ ಅಂಕಣ

ಜಾಲ: ಪ್ರಶಸ್ತಿ ಪಿ.

ಆಗಾಗ ಒಳಸೇರೋ ಶುದ್ಧ ನೀರು ಖುಷಿ ಕೊಡುತ್ತೆ, ಆರೋಗ್ಯವನ್ನೂ. ಆದ್ರೆ ಆ ನೀರೊಳಗೇ ನಾವು ಸೇರಿದ್ರೆ ? ಕಚ್ಚೋ ಸೊಳ್ಳೆಯ ಸಾವಾಗೋ ಚಪ್ಪಾಳೆ ಹಿತವೀಯುತ್ತೆ. ಆದ್ರೆ ಸಾವೇ ಚಪ್ಪಾಳೆ ಹೊಡೆದು ನಮ್ಮ ಕರೆದ್ರೆ ? ಓದೋ ಕಥೆಯೊಂದು ಖುಷಿ ಕೊಡುತ್ತೆ. ಆದ್ರೆ ಅದೇ ಜಾಲವಾಗಿ ನಮ್ಮ ಸೆಳೆದ್ರೆ ?  ಊರಲ್ಲೊಂದು ಹೊಸ ಅಂಗಡಿ. ಹೆಸರು ಊರಾಗಿದ್ರೂ ಅದು ಹಳ್ಳಿಯೇನಲ್ಲ.ಹಂಗಂತ ಮಹಾನಗರಿಯೂ ಅಲ್ಲ. ಸಾವಿರದ ಸುಮಾರಿಗೆ ಜನರಿದ್ದ ಜಾಗವದು. ಅಲ್ಲಿನ ಜನಕ್ಕೆ ಅಂಗಡಿಗಳು ಹೊಸದಲ್ಲದಿದ್ದರೂ ತಮ್ಮೂರಿಗೆ ಪುಸ್ತಕದಂಗಡಿಯೊಂದು ಬಂದಿದ್ದು […]

ಪ್ರಶಸ್ತಿ ಅಂಕಣ

ಕಾಪಿ: ಪ್ರಶಸ್ತಿ ಪಿ.

ಮಾಡಿದ್ದೇ ಕೆಲಸವನ್ನು ಸದಾ ಮಾಡ್ತಾ ಇರು ಅಂದ್ರೆ ಏನೂ ಮಾಡದೇ ಆದ್ರೂ ಇರ್ತೀನಿ,ಆದ್ರೆ ಅದನ್ನ ಮಾಡೋಲ್ಲ ಅಂತಿದ್ದವನು ಅವ. ಹೊಸತನಕ್ಕೆ ತುಡಿದು ಇರೋದನ್ನ ಕಳೆದುಕೊಳ್ಳುವುದಕ್ಕಿಂತ ಇದ್ದುದರಲ್ಲೇ ಖುಷಿಯಾಗಿರೋದು ಮೇಲು ಅನ್ನುವವಳು ಅವಳು. ಭಾರತ-ಪಾಕಿಸ್ತಾನಗಳಂತಹ ಭಿನ್ನ ವಿಚಾರಧಾರೆಯಿದ್ರೂ ಇವರ ಮಧ್ಯೆ ಅದೆಂತದೋ ಒಂದು ಲವ್ವಿರೋದು ಹೆಂಗೆ ಅನ್ನೋದು ಬೇರೆ ಅವ್ರಿಗೆ ಹೋಗ್ಲಿ ಸ್ವತಃ ಅವ್ರಿಗೇ ಅಚ್ಚರಿಯ ವಿಷಯವಾಗಿತ್ತು. ಎಡಪಂಥ ಬಲಪಂಥ ಅಂತ ಪ್ರತಿದಿನಾ ಕಚ್ಚಾಡೋರು ಹೆಗಲ ಮೇಲೆ ಕೈಹಾಕಿಕೊಂಡ್ರು ಓಡಾಡ್ತಿದ್ರೆ ಹೆಂಗೆ ಅಚ್ಚರಿಯಾಗುತ್ತೋ ಆ ತರಹದ ಆಶ್ಚರ್ಯ ಇವ್ರನ್ನ […]

ಪ್ರಶಸ್ತಿ ಅಂಕಣ

ಕರ್ಚೀಫ್ ಕಹಾನಿ: ಪ್ರಶಸ್ತಿ

ತಿಂಗಳ ಹಿಂದೆ ಕಳೆದೇಹೋಗಿದ್ದನೆಂದು ಹುಡುಕುಡುಕಿ ಬೇಸತ್ತು ಕೊನೆಗೆ ಹುಡುಕೋದನ್ನೇ ಮರೆಸಿಬಿಟ್ಟಂತ ಮಾಲೀಕನೆದುರು ಇವತ್ತು ಇದ್ದಕ್ಕಿದ್ದಂತೆ ಪ್ರತ್ಯಕ್ಷನಾಗಿದ್ದೆ ! ಒಗೆದು ಒಣಗಿಸಿ ಮಡಚದೇ ಬಿದ್ದಿದ್ದ ರಾಶಿಯಲ್ಲೊಂದು ಪ್ಯಾಂಟನ್ನು ಇಸ್ತ್ರಿ ಮಾಡಲು ತೆಗೆದ್ರೆ ಅದರೊಳಗಿಂದ ನನ್ನ ಇರುವಿಕೆಯ ಅರಿವಾಗಬೇಕೇ ? ನಾ ಯಾರು ಅಂತ ಇಷ್ಟ್ರಲ್ಲೇ ಗೊತ್ತಾಗಿರಬೇಕಲ್ಲಾ ? ಹೂಂ. ಅದೇ. ಕರವಸ್ತ್ರ ಎನ್ನಿ ಕರ್ಚೀಫು ಎನ್ನಿ, ಹ್ಯಾಂಕಿ ಎನ್ನಿ. ಏನೇ ಅಂದ್ರೂ ಥ್ಯಾಂಕ್ಸೆನ್ನುವವ ನಾನೇ ನಾನು. ಕರ್ಚೀಫ್ ಕಹಾನಿ ಅಂದಾಕ್ಷಣ ಕರುಣಾಜನಕ ಕಥೆ ಅಂತೆಲ್ಲಾ ಅಂದ್ಕೋಬೇಡಿ. ಅಷ್ಟಕ್ಕೂ ಹಂಗ್ಯಾಕೆ […]

ಪ್ರಶಸ್ತಿ ಅಂಕಣ

ವರದಾಮೂಲ: ಪ್ರಶಸ್ತಿ

ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ಚಿತ್ರಗಳ ಮಾಹಿತಿ ಕಲೆಹಾಕಿ ಅದನ್ನು ವಿಕಿಪೀಡಿಯಾದಲ್ಲಿ ಎಲ್ಲರಿಗೂ ತಲುಪುವಂತೆ ದಾಖಲಿಸೋ ಒಂದು ಕಾರ್ಯಕ್ರಮ ವಿಕಿಪೀಡಿಯಾ ಫೋಟೋವಾಕ್.ಸಾಗರದಲ್ಲಿ ಈ ಕಾರ್ಯಕ್ರಮವನ್ನು ಮಾಡಬೇಕೆಂದುಕೊಂಡಾಗ ನಾವು ಅದನ್ನು ಶುರುಮಾಡಿದ್ದು ವರದಾಮೂಲದಿಂದ. ವರದಾಮೂಲವೆನ್ನೋ ಸ್ಥಳದ ಬಗ್ಗೆ ಸಾಗರದ ಸುತ್ತಮುತ್ತಲಿನವರಿಗೆ ಹೊಸದಾಗಿ ಹೇಳೋ ಅವಶ್ಯಕತೆಯಿಲ್ಲದಿದ್ದರೂ ಈ ಭಾರಿಯ ಭೇಟಿಯಲ್ಲಿ ಸಿಕ್ಕ ಒಂದಿಷ್ಟು ಆಸಕ್ತಿಕರ ಮಾಹಿತಿಯನ್ನು ಹಂಚಿಕೊಳ್ಳಲೇಬೇಕೆಂಬ ಹಂಬಲ ಹುಟ್ಟಿದ್ದು ಸಹಜ. ಅದರ ಫಲವೇ ಈ ಲೇಖನ.  ಹೋಗೋದು ಹೇಗೆ ?  ವರದಾಮೂಲಕ್ಕೆ ಸಾಗರದಿಂದ ೬ ಕಿ.ಮೀ. […]

ಪ್ರಶಸ್ತಿ ಅಂಕಣ

ಭಾವಗಳ ಬಂಡಿಯೇರಿ: ಪ್ರಶಸ್ತಿ

ಭಾವಲಹರಿಯೆನ್ನೋದೇ ಹಾಗೆ. ಈ ಭಾವಗಳ ಮಡಿಲಲ್ಲಿದ್ದಾಗ ಶಬ್ದಗಳ ಹಂಗಿಲ್ಲ, ಕಾಲದ ಅರಿವಿಲ್ಲ,ಸುತ್ತಣ ಪರಿಸರದ ಪರಿವೆಯೂ ಇಲ್ಲದ ಪರಿಸ್ಥಿತಿ. ಪಕ್ಕದ ಯಾವುದೋ ಘಟನೆ ನಮ್ಮ ತಟ್ಟೆಬ್ಬಿಸೋ ತನಕ ಕಲ್ಪನಾಲೋಕದಲ್ಲಿ ನಮಗೆ ನಾವಲ್ಲದೆ ಇನ್ಯಾರೂ ಇಲ್ಲ.ಭಾವಗಳ ಬಂಡಿಯೇರಿದ ಆ ಪಯಣ ಸಾಗೋ ಪರಿಯೇ ಅದಮ್ಯ.ಆ ಕ್ಷಣಕ್ಕೆ ಮೂಡೋ ಭಾವಕ್ಕೊಂದು ಆಕಾರವಿಲ್ಲದಿದ್ದರೆ ಕಳೆದೇ ಹೋದೀತೆಂದು ಸಿಕ್ಕ ಮೊಬೈಲಲ್ಲೋ ಪೇಪರಲ್ಲೋ ಕಂಪ್ಯೂಟರಲ್ಲೋ ಗೀಚುವವರದು ಒಂದು ಲಹರಿ.ಕಡಲಲೆಗಳಲ್ಲಿ ಕಂಡ ಸುಂದರ ಅಲೆಯೊಂದು ಕಾಲದ ಗರ್ಭದಲ್ಲಿ ಕರಗಿಹೋಗೋ ಹಾಗೆ ಮುಂಬರುವ ಭಾವ ಪ್ರವಾಹದಲ್ಲಿ ಈಗಿನ ಭಾವ […]

ಪ್ರಶಸ್ತಿ ಅಂಕಣ

ಆಲಿಯೋ: ಪ್ರಶಸ್ತಿ

ಬೆಂದಕಾಳೂರಿನ ಕುಂದಲಹಳ್ಳಿ ಅನ್ನೋ ಒಂದು ಹಳ್ಳಿಯಲ್ಲದ ಹಳ್ಳಿಯ ಕೆರೆಯ ಪಕ್ಕದಲ್ಲಿ ನಮ್ಮ ಪೀಜಿಯಿದೆ ಅನ್ನೋ ವಿಚಾರವನ್ನ ಹಿಂದಿನ ಲಹರಿಗಳಲ್ಲಿ ಓದೇ ಇರುವ ನಿಮಗೆ ಅದ್ರ ಹೆಸರು ಹೇಳೋ ಅಗತ್ಯ ಇಲ್ಲದಿದ್ದರೂ ಅಲ್ಲಿನ ಆಲಿಯೋ ಕತೆಯನ್ನಂತೂ ಹೇಳಲೇಬೇಕು. ಆಲಿಯೋನಾ ? ಅದ್ಯಾರು ಅಂತ ಊಹೆ ಮಾಡೋಕೆ ಶುರು ಮಾಡಿದ್ರಾ ?  ನಾ ಹೇಳಹೊರಟಿದ್ದು ಲವ್ ಯೂ ಆಲಿಯಾ ಬಗ್ಗೆಯಲ್ಲ, ಮಾತಾಡಿದ್ದೆಲ್ಲಾ ಕಾಮಿಡಿಯಾಗೋ ಆಲಿಯೋ ಭಟ್ ಬಗ್ಗೆಯೋ ಅಲ್ಲ. ನಮ್ಮ ಪೀಜಿ ಕಿಶೋರ್ ಭಯ್ಯಾನ ಆಲಿಯೋ ಬಗ್ಗೆ. ಈಗ ಈ […]

ಪ್ರಶಸ್ತಿ ಅಂಕಣ

ಶಂಕರನಾರಾಯಣ: ಪ್ರಶಸ್ತಿ

ಕಮಲಶಿಲೆಯ ನಂತರ ಹೊರಟಿದ್ದು ಸಿದ್ದಾಪುರದಿಂದ ಹತ್ತು ಕಿ.ಮೀ ದೂರವಿರೋ ಶಂಕರನಾರಾಯಣ ಕ್ಷೇತ್ರಕ್ಕೆ. ಇಲ್ಲಿ ಹರಿ,ಹರರಿಗೆ ಒಟ್ಟಿಗೇ ಪೂಜೆ ನಡೆಯುವುದು ವಿಶೇಷ.ನೆಲದಿಂದ ಒಂದು ಅಡಿಯಷ್ಟು ಕೆಳಗಿರುವ ವಿಷ್ಣುವಿನ ಚಪ್ಪಟೆಯಾದ ಮತ್ತು ಗೋಳಾಕಾರಾದ ಶಿವಲಿಂಗದ ಮೇಲೆ ಸದಾ ನೀರು ಹರಿಯುತ್ತಲೇ ಇರುತ್ತದೆ. ನಮ್ಮ ಎಡಭಾಗದಲ್ಲಿ ಉದ್ಭವಲಿಂಗಗಳಾದ ಶಂಕರಲಿಂಗ(ದೇವರ ಎಡಭಾಗದಲ್ಲಿ) ಮತ್ತು ಬಲಭಾಗದಲ್ಲಿ ವಿಷ್ಣುವಿನಲಿಂಗಗಳಿವೆ.ಲಿಂಗಗಳ ಮೇಲೆ ಸದಾ ಹರಿಯೋ ನೀರನ್ನು ಸುಧಾಮೃತ ತೀರ್ಥ ಎಂದು ಕರೆಯುತ್ತಾರಂತೆ.ದೇಗುಲದ ಹೊರಗಡೆ ಮತ್ತೊಂದು ಪುಟ್ಟ ಗುಡಿಯಲ್ಲಿ ಬೆಳ್ಳಿಯ ಶಂಕರನಾರಾಯಣ ವಿಗ್ರಹವಿದೆ. ಅದರಲ್ಲಿ ಬಲಭಾಗದಲ್ಲಿ ಮೀಸೆ,ಶೂಲ, ಚರ್ಮಾಂಬರನಾಗಿಯೂ […]

ಪ್ರಶಸ್ತಿ ಅಂಕಣ

ನೀರೆಂಬ ಟಾನಿಕ್: ಪ್ರಶಸ್ತಿ

ಇವತ್ತಿನ ದಿನಪತ್ರಿಕೆಯಲ್ಲಿ ಜನಪ್ರಿಯ ನಟಿ ಪ್ರಿಯಾಮಣಿ ಅವರ ಸಂದರ್ಶನ ಓದುತ್ತಿದ್ದೆ. ನೀರೇ ನನ್ನ ಫಿಟ್ನೆಸ್ ಮೂಲ.ಚೆನ್ನಾಗಿ ನೀರು ಕುಡಿಯೋದ್ರಿಂದ ಫ್ಯಾಟ್ ಬರ್ನ್ ಆಗುತ್ತೆ. ಆರೋಗ್ಯವೂ ಚೆನ್ನಾಗಿರುತ್ತೆ ಎಂದು ಅವರು ಹೇಳ್ತಾ ಇದ್ದಿದ್ದನ್ನು ಓದುತ್ತಿದ್ದ ನನ್ನ ಮನಸ್ಸು "ನೀರಿನಿಂದ ಫ್ಯಾಟ್ ಬರ್ನ್" ಅನ್ನೋ ವಾಕ್ಯದಲ್ಲಿ ನಿಂತೇ ಹೋಯ್ತು. ಹೆಚ್ಚು ನೀರು ಕುಡಿಯೋದ್ರಿಂದ ದೇಹದ ಕಷ್ಮಲಗಳ ಹೊರಹಾಕೋ ಪ್ರಕ್ರಿಯೆಗೆ ಸಹಾಯವಾಗಿ ದೇಹ ಆರೋಗ್ಯಕರವಾಗುತ್ತೆ ಅಂತ ಬೇರೆಡೆಯೂ ಓದಿದ್ದರೂ ಈ ಫ್ಯಾಟ್ ಬರ್ನಿನ ಸತ್ಯಾಸತ್ಯತೆ ಪರೀಕ್ಷಿಸಲೇ ಬೇಕು ಮತ್ತು ಹೆಚ್ಚು ನೀರು […]

ಪ್ರಶಸ್ತಿ ಅಂಕಣ

ನವೆಂಬರ್ ಕನ್ನಡ ಮತ್ತು ನಾವು: ಪ್ರಶಸ್ತಿ

ನವೆಂಬರ್ ಕೊನೆಯಲ್ಲೊಂದು ವಾರ ಬೆಂದಕಾಳೂರಲ್ಲಿ ಕನ್ನಡ ಸಿನಿಮಾ ನೋಡೊ ಉಮೇದಲ್ಲಿ ಕನ್ನಡ ಥಿಯೇಟರೊಂದ ಹುಡುಕಿ ಹೊರಟಿದ್ದೆ. ಎದುರು ನೋಡಲು ಒಂದು ಕಿಂಡಿಯಷ್ಟು ಮಾತ್ರವೇ ಜಾಗ ಬಿಟ್ಟು ಉಳಿದೆಲ್ಲಾ ಭಾಗದಲ್ಲಿ ಕನ್ನಡದ ಧ್ವಜ ಚಿತ್ರಿಸಿದ್ದ ಆಟೋವೊಂದು ಎದುರಾಯ್ತು. ಆಟೋದಲ್ಲಿ ಕನ್ನಡ ಧ್ವಜ, ಬಸ್ಸಲ್ಲಿ ಜ್ಞಾನಪೀಠಿಗಳ ಚಿತ್ರ, ಕನ್ನಡ ಘೋಷವಾಕ್ಯಗಳ ನೋಡಿದ್ದೆ ನವೆಂಬರ್ ಆಚರಣೆಯ ಫಲವಾಗಿ. ಈ ತರದ ಡಿಸೈನೊಂದನ್ನು ನೋಡಿದ್ದು ಮೊದಲಾದ್ದರಿಂದ ಅದರದೊಂದು ಫೋಟೋ ತೆಗೆಯೋಣ ಅಂತ ಹೊರಟೆ. ತನ್ನ ಆಟೋ ಫೋಟೋದಲ್ಲಿ ಸೆರೆಯಾಗಿದ್ದನ್ನ ನೋಡಿ ನಾಚಿದ ಆಟೋದವ, […]

ಪ್ರಶಸ್ತಿ ಅಂಕಣ

ಕಡ್ಲೆಕಾಳು ಗಣೇಶನಿಗೆ ಜೈ ಎನ್ನುತ್ತಾ: ಪ್ರಶಸ್ತಿ

ಏಕಶಿಲಾ ನಂದಿಯ ಬಳಿಯಿದ್ದ ಸೈಕಲ್ ಪಡೆದ ನಾವು ಹಂಪಿಬಜಾರಿನ ಮೂಲಕ ಹಂಪಿ ಬಸ್ಟಾಂಡವರೆಗೆ ಬಂದೆವು. ಇಲ್ಲೇ ಹತ್ತಿರದಲ್ಲಿರೋದ್ರಿಂದ ಕಡ್ಲೆಕಾಳು ಗಣೇಶ ಮತ್ತು ಹೇಮಕೂಟದಲ್ಲಿರೋ ದೇಗುಲಗಳನ್ನು ನೋಡೋಣ ಅಂತ ಸೈಕಲ್ ಅತ್ತ ತಿರುಗಿಸಿದೆವು. ಘಂಟೆ ನಾಲ್ಕಾಗುತ್ತಾ ಬಂದಿದ್ದರೂ ಮಧ್ಯಾಹ್ನದ ಊಟ ಮಾಡಿಲ್ಲವೆಂಬ ಚಿಂತೆ ಕಾಡುತ್ತಿರಲಿಲ್ಲ. ಬಾಡಿಗೆ ಸೈಕಲ್ ತಗೊಂಡಿದ್ರೂ ನಡೆದಾಟದಲ್ಲೇ ಅರ್ಧದಿನ ಕಳೆದಾಗಿದೆ. ಮುಂದಿನ ಸ್ಥಳಗಳನ್ನಾದರೂ ಸೈಕಲ್ಲಲ್ಲಿ ನೋಡಬೇಕೆಂಬ ಬಯಕೆ ಆಲೋಚನೆ ಮೂಡುತ್ತಿತ್ತು. ಆ ಆಲೋಚನೆಯಲ್ಲೇ ಕಡ್ಲೆಕಾಳು ಗಣೇಶ ದೇವಸ್ಥಾನಕ್ಕೆ ಸಾರೋ ಏರುಹಾದಿಯಲ್ಲಿ ಸೈಕಲ್ ಓಡಿಸಿದೆವು. ಸೈಕಲ್ಲಿನ ಬಂಪರ್ […]

ಪ್ರಶಸ್ತಿ ಅಂಕಣ

ಪುರಂದರ ಮಂಟಪದತ್ತಣ ಪಯಣ: ಪ್ರಶಸ್ತಿ

ಆಚೆ ದಡದ ಸಾಲು ದೇಗುಲಗಳ ಬಗ್ಗೆ ಅಚ್ಚರಿಪಡುತ್ತಾ, ಎತ್ತ ಸಾಗಿದರೂ ಅದೇ ಸರಿಯಾದ ದಾರಿಯೇನೋ ಎಂಬತ್ತಿದ್ದ ದೇಗುಲಗಳ, ಅವುಗಳಿಗೆ ಕರೆದೊಯ್ಯುತ್ತಿದ್ದ ಕಾಲು ಹಾದಿಗಳಲ್ಲಿ ಯಾವುದು ಸರಿ, ಯಾವುದು ತಪ್ಪು ಎಂದು ಬೋರ್ಡ್ ಹಾಕಿ ಮುಗಿಯೋ ಬಾಬತ್ತಲ್ಲ ಎಂದು ಆಲೋಚಿಸುತ್ತಾ ಎದುರಿಗೆ ಕಂಡ ಧ್ವಜಸ್ಥಂಭದ ದೇಗುಲದತ್ತ ದಾಪುಗಾಲಿಟ್ಟೆವು. ಧ್ವಜಸ್ಥಂಭವಿದೆ, ಕೆಳಗಿಳಿಯೋ ಮೆಟ್ಟಿಲುಗಳೂ ಇವೆ. ಆದರೆ ಅದ್ಯಾವ ದೇಗುಲವೆಂಬ ಮಾಹಿತಿಯೇ ಇರಲಿಲ್ಲ ಅಲ್ಲೆಲ್ಲೋ. ದಾಳಿಗೆ ತುತ್ತಾಗಿ ಗರ್ಭಗೃಹದಲ್ಲಿ ಪೂಜಾ ಮೂರ್ತಿಯಿಲ್ಲದ ಆ ದೇಗುಲ ಬಿಕೋ ಅನ್ನುತ್ತಿತ್ತು. ಅಲ್ಲಿಂದ ಮುಂದೆ ಸಾಗಿದರೆ […]

ಪ್ರಶಸ್ತಿ ಅಂಕಣ

ಅಚ್ಯುತನ ಅರಸುತ್ತಾ: ಪ್ರಶಸ್ತಿ

ಅಚ್ಯುತರಾಯ ದೇವಾಲಯ, ವಿಠಲ ದೇವಾಲಯ, ಮಾತಂಗಪರ್ವತಕ್ಕೆ ದಾರಿ ತೋರೋ ಮಾರ್ಗದರ್ಶಿ ಫಲಕ ಏಕಶಿಲಾ ನಂದಿಯ ಬುಡದಲ್ಲಿ ಕಾಣುತ್ತಿತ್ತು. ರಾಮಾಯಣದಲ್ಲಿ ಬರೋ ಮಾತಂಗಪರ್ವತ(ಹಂಪಿ ಕಥಾನಕದ ಮೊದಲಭಾಗದಲ್ಲಿ ಹೇಳಿದಂತೆ)ಇದೇ ಎಂದು ಓದಿದ್ದ ನಾವು ಅದಕ್ಕೆ ಭೇಟಿ ನೀಡಬೇಕೆಂಬ ಆಸೆಯಿಂದ ಅತ್ತ ಹೆಜ್ಜೆ ಹಾಕಿದೆವು.ಮೂರು ದಿನವಾದ್ರೂ ಇಲ್ಲಿರೋ ಜಾಗಗಳನ್ನೆಲ್ಲಾ ಸುತ್ತೇ ಹೋಗಬೇಕೆಂದು ಬಂದಿದ್ದ ನಮಗೆದುರಾಗಿದ್ದೊಂದು ಪ್ರವೇಶದ್ವಾರ.ಕ್ರೇನುಗಳಿಲ್ಲದ ಕಾಲದಲ್ಲಿ ಆ ಪಾಟಿ ಭಾರದ ಕಲ್ಲುಗಳನ್ನು ಅಷ್ಟು ಮೇಲಕ್ಕೆ ಸಾಗಿಸಿ ಎರಡಂಸ್ತಿನ ಪ್ರವೇಶದ್ವಾರಗಳನ್ನು, ಹಜಾರಗಳನ್ನು ಕರಾರುವಕ್ಕಾಗಿ ಕಟ್ಟಿದ್ದಾದರೂ ಹೇಗೆಂದು ಕುತೂಹಲ ಮೂಡಿಸೋ ಇಂಥಾ ದ್ವಾರಗಳು, […]

ಪ್ರಶಸ್ತಿ ಅಂಕಣ

ನಮ್ಮೂರ ದಸರಾ: ಪ್ರಶಸ್ತಿ

ಹಬ್ಬಗಳೆಂದ್ರೆ ಅದೇನೋ ಖುಷಿ.ಅದು ನಮ್ಮನ್ನೆಲ್ಲಾ ಸ್ವಂತಂತ್ರ್ಯರನ್ನಾಗಿಸಿದ ಆಗಸ್ಟ್ ಹಬ್ಬವಾಗಿರಬಹುದು. ಗಣತಂತ್ರರನ್ನಾಗಿಸಿದ ಜನವರಿ ಹಬ್ಬವೂ ಆಗಿರಬಹುದು. ನಾಡಹಬ್ಬ ದಸರಾವಾಗಿರಬಹುದು, ಬೆಳಕಹಬ್ಬ ದೀಪಾವಳಿಯಾಗಿರಬಹುದು. ಯಾವಾಗ ಬರುತ್ತಪ್ಪಾ ರಜಾ ಎಂದನಿಸೋ ಬಕ್ರೀದು, ರಂಜಾನ್, ಕ್ರಿಸ್ಮಸ್ಸುಗಳಾದ್ರೂ ಸರಿಯೇ.ಹಬ್ಬವೆಂದ್ರೆ, ಆ ರಜೆಗಳೆಂದ್ರೆ ಅದೆಂತದೋ ಖುಷಿ ಬಾಲ್ಯದಿಂದಲೂ. ಕೆಲವೆಡೆಯೆಲ್ಲಾ ಶಾರದಾಪೂಜೆ, ಲಕ್ಷ್ಮೀ ಪೂಜೆ, ಆಯುಧಪೂಜೆ, ಗೂಪೂಜೆ ಅಂತ ಹಲವಾರು ಪೂಜೆಯಿರೋ ದಸರಾ ದೊಡ್ಡ ಹಬ್ಬವಾದರೆ ನಮ್ಮೆಡೆ ಅದರ ಹೆಚ್ಚಿನವೆಲ್ಲಾ ಬರೋ ದೀಪಾವಳಿಯೇ ದೊಡ್ಡಬ್ಬ. ದಸರಾವೆಂದರೆ  ದೊಡ್ಡವರಿಗೆ ಶಮೀ ಪತ್ರೆ ಕೊಟ್ಟು, ಬನ್ನಿ ಕಡಿಯೋದು , ಬಾಳೆಮರ […]

ಪ್ರಶಸ್ತಿ ಅಂಕಣ

ಖಾಲಿ: ಪ್ರಶಸ್ತಿ

ಕನಸ ಕಲ್ಪನೆಗಳೆಲ್ಲಾ ಕರಗಿಹೋಗಿ, ಮನದ ಭಾವಗಳೆಲ್ಲಾ ಬತ್ತಿಹೋಗಿ ಖಾಲಿತನ ಕಾಡುತ್ತಿತ್ತು. ಬರೆಯೋಣವೆಂದರೆ ಬರೆಯಲೇನನ್ನ, ಹಾಡೋಣವೆಂದರೆ ಹಾಡಲೇನನ್ನ ಅನ್ನೋ ದ್ವಂದ್ವ. ಸಖತ್ ಚೆನ್ನಾಗಿ ಬರೆದು ಅದಕ್ಕೇನಾದ್ರೂ ಪುರಸ್ಕಾರಗಳ ಸುರಿಮಳೆಯಾಗಿ ಕೊನೆಗೊಂದು ದಿನ ಅದನ್ನು ವಾಪಾಸ್ ಮಾಡಬೇಕಾಗಬಹುದೆನ್ನೋ ಭಯ ಬರೆಯಲೇ ಬಿಡುತ್ತಿರಲಿಲ್ಲ! ಹೊಸದೇನನ್ನಾದ್ರೂ ಬರೆಯೋ ಬದಲು ಬರೆದುದರ ಬಗ್ಗೆಯೇ ಮತ್ತಿನ್ನೇನ್ನಾದ್ರೂ ಬರೆಯೋಣವಾ ಅನ್ನಿಸಿತು. ವಿಶ್ವವಿದ್ಯಾಲಯಗಳಲ್ಲಿರುವ ಕೃತಿಚೌರ್ಯ ತಂತ್ರಜ್ಜಾನ ಎಲ್ಲಾ ಲೇಖಕರ, ಓದುಗರ ಬಳಿಯೂ ಸದ್ಯಕ್ಕಿಲ್ಲದೇ ನಾ ಕದ್ದಿದ್ದು ಗೊತ್ತಾಗದಿಲ್ಲದಿದ್ದರೂ ಮುಂದೊಂದು ದಿನ ಜನರ ಬಾಯಲ್ಲಿ ಛೀ, ಥೂ ಅನ್ನಿಸಿಕೊಳ್ಳೋ ಬದಲು […]

ಪ್ರಶಸ್ತಿ ಅಂಕಣ

ವಿಠಲನ ನಾಡಿನಲ್ಲಿ: ಪ್ರಶಸ್ತಿ

ಹಂಪಿ ಬಜಾರ್: ಹಂಪಿ ವಿರೂಪಾಕ್ಷನ ದರ್ಶನ ಪಡೆದ ನಾವು ಪಕ್ಕದಲ್ಲಿದ್ದ ತುಂಗಭದ್ರೆಗೊಂದು ನಮನವೆನ್ನುತ್ತಾ ಹಂಪೆ ಬಜಾರುಗಳನ್ನಾಸಿ ವಿಠಲ ದೇಗುಲದತ್ತ ಸಾಗಿದೆವು. ಹಂಪೆ ಬಜಾರೆಂದರೆ ಜನರಿಗೆ ಅದರಲ್ಲೇನಿದೆ ? ಎಲ್ಲಾ ಊರಿನಂತೆ, ಹಂಪಿಯಲ್ಲೊಂದು ಮಾರುಕಟ್ಟೆ, ವಿಶೇಷವೇನಪ್ಪ ಅನಿಸಬಹುದು. ಶ್ರೀ ಕೃಷ್ಣ ದೇವರಾಯನ ಕಾಲದ ಮಾರುಕಟ್ಟೆ, ಮುತ್ತು ರತ್ನಗಳನ್ನಳೆದು ತೂಗುತ್ತಿದ್ದ ಬೀದಿ ಅಂದರೆ ಆಗ ಓಹ್ ಅನ್ನಬಹುದು. ಹಂಪಿಯಲ್ಲಿ  ಶ್ರೀ ಕೃಷ್ಣ ದೇಗುಲದ ಎದುರಿಗಿನ ಕೃಷ್ಣ ಬಜಾರ್, ಮಹಾನವಮಿ ದಿಬ್ಬದಿಂದ ಬ್ಯಾಂಡ್ ಟವರಿನತ್ತ ಸಾಗುವಾಗ ಸಿಗುವ ಪಾನ್ ಸುಪಾರಿ ಬಜಾರ್ […]