ತವಕ ತಲ್ಲಣಗಳ ತಾಜಾಭಿವ್ಯಕ್ತಿ ; ಮೊಗೆದ ಬಾನಿಯ ತುಂಬ ತಿಳಿನೀರ ಬಿಂಬ: ಡಾ. ಹೆಚ್ ಎನ್ ಮಂಜುರಾಜ್

ಛದ್ಮವೇಷ- ಕವನ ಸಂಕಲನಕವಯಿತ್ರಿ- ಎಂ ಕುಸುಮ, ಹಾಸನಪ್ರಕಾಶಕರು: ರಚನ ಪ್ರಕಾಶನ, ಮೈಸೂರುಮೊದಲ ಮುದ್ರಣ: 2012ಬೆಲೆ: 80 ರೂಗಳು, ಒಟ್ಟು ಪುಟ: 128 ಈ ಕವನ ಸಂಕಲನವನ್ನು ಕವಯಿತ್ರಿಯಾದ ಶ್ರೀಮತಿ ಎಂ ಕುಸುಮ ಅವರು ಹೃದಯ ಶ್ರೀಮಂತಿಕೆಯುಳ್ಳ ಎಲ್ಲ ಮನುಜರಿಗೆ ಅರ್ಪಿಸಿದ್ದಾರೆ. ಶುದ್ಧ ಮಾನವತಾವಾದದಲ್ಲಿ ನಂಬುಗೆಯಿಟ್ಟ ಇವರ ಧ್ಯೇಯ ಮತ್ತು ಧೋರಣೆಗಳು ಇದರಿಂದಲೇ ಮನವರಿಕೆಯಾಗುತ್ತವೆ. ಇದು ಇವರ ಎರಡನೆಯ ಕವನ ಸಂಕಲನ. ಮೂಲತಃ ಸರ್ಕಾರಿ ಪದವಿ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಇವರು ಕನ್ನಡದಲ್ಲಿ ತಮ್ಮ ಸೃಜನಾತ್ಮಕವನ್ನು … Read more

ಮನುಷ್ಯರು ಪ್ರಕೃತಿಯನ್ನು ಮೀರಬಲ್ಲರೆ?: ಡಾ. ಶಿವಕುಮಾರ್ ಆರ್.

ಶಿವಕುಮಾರ್ ದಂಡಿನ ಅವರು ಸಾಮಾಜಿಕ ಕಳಕಳಿಯುಳ್ಳ ಅಭೂತಪೂರ್ವ ಯುವ ಸಾಹಿತ್ಯ ಪ್ರತಿಭೆ. ಇವರು ಬರೆದದ್ದು ನಲವತ್ತೆಂದು ಕವಿತೆಗಳ “ಮೋಹದ ಪಥವೋ ಇಹಲೋಕದ ರಿಣವೋ” ಎಂಬ ಒಂದು ಕವನ ಸಂಕಲನ. ಅವರ ಎಲ್ಲ ಕವಿತೆಗಳಲ್ಲಿ ಸಾಮಾಜಿಕ ಕಳಕಳಿ ಕಂಡು ಬಂದರೂ ಕೆಲವು ಕವಿತೆಗಳು ಪ್ರಕೃತಿ ಪರವಾಗಿ ಹೆಚ್ಚಾಗಿ ಚಿಂತಿಸಿವೆ. ಅವರ ಪ್ರಕೃತಿಯ ಮುನಿಸು, ಹನಿ, ಪ್ರಕೃತಿಯ ಒಡಲೂ ಸಮಾನತೆಯ ಪಾಠವೂ ಎಂಬ ಕವಿತೆಗಳು ನಿಸರ್ಗತತ್ತ್ವವನ್ನು ಹೇಳುತ್ತವೆ. ಮನುಷ್ಯರು ಮೂಲತಃ ಅರಣ್ಯವಾಸಿಗಳು ಎಂಬುದು ನಮಗೆಲ್ಲ ತಿಳಿದಿರುವ ವಿಚಾರ. ಅವರಿಗೆ ಆರಂಭದಲ್ಲಿ … Read more

ಡಾ.ಜಿ.ಎನ್.ಉಪಾಧ್ಯರ ಸಮೀಕ್ಷೆಯಲ್ಲರಳಿದ ಡಾ.ಜನಾರ್ದನ ಭಟ್ ಅವರ “ವಾಙ್ಞಯ ವಿವೇಕ”: ಅನುಸೂಯ ಯತೀಶ್

ಡಾ. ಜನಾರ್ದನ ಭಟ್ ನಮ್ಮೊಳಗಿನ ಸಂವೇದನಾಶೀಲ ಲೇಖಕರು. ಇವರು ಯಾವುದೇ ಸಾಹಿತ್ಯ ಪ್ರಕಾರಗಳಿಗೆ ಅಂಟಿಕೊಳ್ಳದೆ ಸೃಜನ ಮತ್ತು ಸೃಜನೇತರ ಎರಡು ಪ್ರಕಾರಗಳಲ್ಲೂ ತಮ್ಮನ್ನು ಅವಿರತ ತೊಡಗಿಸಿಕೊಂಡು ಧಣಿವರಿಯದೆ ಸಾಹಿತ್ಯಾರಾಧನೆಯಲ್ಲಿ ತೊಡಗಿರುವ ಬಹುಶ್ರುತ ವಿದ್ವಾಂಸರು. ಬಹುಭಾಷಾ ಪ್ರವೀಣರಾದ ಇವರು ಕಥೆ, ಕಾದಂಬರಿ, ವೈಚಾರಿಕ ಕೃತಿಗಳು, ಅಂಕಣಗಳು, ವಿಮರ್ಶೆ, ಮಕ್ಕಳ ಸಾಹಿತ್ಯ, ಇಂಗ್ಲೀಷ್ ಸಾಹಿತ್ಯ ರಚನೆಯ ಜೊತೆಗೆ ಹಲವಾರು ಕೃತಿಗಳ ಸಂಪಾದನೆ ಕೂಡ ಮಾಡಿ ಆಡು ಮುಟ್ಟದ ಸೊಪ್ಪಿಲ್ಲ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಸುಮಾರು ನಾಲ್ಕು ದಶಕಗಳಿಂದ ಕನ್ನಡ ಸಾಹಿತ್ಯದ … Read more

“ದೇವರ ಹೊಲ”ದಲ್ಲಿ ಭರ್ಜರಿ ಫಸಲು: ಡಾ. ನಟರಾಜು ಎಸ್‌ ಎಂ

ಮಂಜಯ್ಯ ದೇವರಮನಿ ಅವರ “ದೇವರ ಹೊಲ” ಪುಸ್ತಕ ನನ್ನ ಕೈ ಸೇರಿ ಒಂದು ತಿಂಗಳ ಮೇಲೆ ಒಂದು ವಾರವಾಗಿತ್ತು. ಸುಮಾರು ದಿನಗಳ‌ ಹಿಂದೆ ನೂರಾ ಐವತ್ತಕ್ಕೂ ಹೆಚ್ಚು ಜನರಿಗೆ ಕೃತಜ್ಙತೆ ಅರ್ಪಿಸಿರುವ ಮಂಜಯ್ಯ ಅವರ‌ ಮೊದಲ ಮಾತುಗಳನ್ನು ಅವರ ಈ ಪುಸ್ತಕದಲ್ಲಿ ಓದಿದ್ದೇನಾದರೂ ಇಡೀ ಪುಸ್ತಕವನ್ನು ಓದಲು ಯಾಕೋ ಸಾಧ್ಯವಾಗಿರಲಿಲ್ಲ. ನಿನ್ನೆ ಭಾನುವಾರ ಬಿಡುವು‌ ಮಾಡಿಕೊಂಡು ಇಡೀ ದಿನ ಒಂದೊಂದೇ ಕತೆಗಳನ್ನು ಓದುತ್ತಾ ಓದುತ್ತಾ ಮಂಜಯ್ಯ ಅವರ ಕಥನ ಕಲೆಗೆ ಬೆರಗಾಗಿ ಹೋದೆ. “ದೇವರ ಹೊಲ” ಪುಸ್ತಕವು … Read more

ಭಾರತದ ಸ್ವಾತಂತ್ಯ್ರ ಹುತಾತ್ಮ ಕವಿ ಅಶ್ಫಾಖ್‌ ಉಲ್ಲಾಖಾನ್‌ ಪುಸ್ತಕದ ಆಯ್ದ ಭಾಗ: ಜೆ ಕಲೀಂ ಬಾಷ

ಹಿಂದಿ ಮೂಲ: ಎಂ ಐ ರಾಜಸ್ವಿ ಕನ್ನಡಕ್ಕೆ: ಜೆ ಕಲೀಂ ಬಾಷ ಕಾಕೋರಿ ಕಾಂಡ ಸಣ್ನ ಸಣ್ಣ ಪ್ರಯತ್ನಗಳಿಂದಾದ ಅಸಫಲತೆಗಳಿಂದ ರಾಂ ಪ್ರಸಾದ್ ಬಿಸ್ಮಿಲ್ ಹಾಗೂ ಅವರ ಮಿತ್ರರ ಮನಸ್ಸು, ಈ ತರಹದ ವಿಧಿ ವಿಧಾನಗಳಿಂದ ಬೇಸರಗೊಂಡಿತ್ತು. ಆದರೂ ಸಹ ಅವರ ಮನದಲ್ಲಿನ್ನೂ ದೇಶ ಭಕ್ತಿಯ ಸಾಗರದ ಅಲೆಗಳು ಹೊಯ್ದಾಡುತ್ತಿದ್ದವು. ದಬ್ಬಾಳಿಕೆಯ ಬ್ರಿಟಿಷ್ ಸರ್ಕಾರದ ಸವಾಲನ್ನು ಎದುರಿಸುವಲ್ಲಿ ದೇಶಭಕ್ತರ ಕೊರತೆ ಇಲ್ಲ ಎಂಬುದನ್ನು ಸಾಬೀತು ಪಡಿಸಲು ಕ್ರಾಂತಿಕಾರಿಗಳು ಸಿದ್ಧರಿದ್ದರು. ಆದ್ದರಿಂದ ಕ್ರಾಂತಿಕಾರಿಗಳು ತಮ್ಮ ದಳವನ್ನು ಸಂಘಟಿಸುವಲ್ಲಿ ನಿರತರಾದರು. … Read more

ಸಲೀಮ ಭಾರತಿ ಅವರ “ಕಾರ್ಲ್ ಮಾರ್ಕ್ಸ್ ಜೀವನ ಪರಿಚಯ” ಒಂದು ಮರು ಓದು.: ಅಶ್ಫಾಕ್ ಪೀರಜಾದೆ.

ಕಮ್ಯೂನಿಸಂ : ಎಲ್ಲ ಸ್ವತ್ತೂ ಸಮುದಾಯಕ್ಕೆ ಸೇರಿದುದೆಂದೂ ಪ್ರತಿಯೊಬ್ಬ ವ್ಯಕ್ತಿಯೂ ಶಕ್ತ್ಯನುಸಾರವಾಗಿ ದುಡಿದು ಆವಶ್ಯಕತೆಗೆ ಅನುಸಾರವಾಗಿ ಪ್ರತಿಫಲ ಪಡೆಯಬೇಕೆಂದೂ ಪ್ರತಿಪಾದಿಸುವ ತತ್ತ್ವ (ಸಾಮ್ಯವಾದ).ಮಾರ್ಕ್ಸ್ ಮತ್ತು ಎಂಗೆಲ್ಸ್‌ ರಿಂದ ಪ್ರಪ್ರಥಮವಾಗಿ ಶಾಸ್ತ್ರೀಯವಾಗಿ ಪ್ರತಿಪಾದಿತವಾದ ಈ ತತ್ತ್ವಕ್ಕೆ ವೈಜ್ಞಾನಿಕ ಸಮಾಜವಾದವೆಂದೂ ಹೆಸರಿದೆ. (ವಿಕಿಪಿಡಿಯಾ) ಕಾಲ ಎಂಬುದು ಎಂದಿಗೂ ನಿಂತ ನೀರಲ್ಲ. ಸದಾ ಹರಿಯುತ್ತಲೇ ಇರುವ ಮಹಾ ಪ್ರವಾಹ. ಹಲವಾರು ತಿರುವು, ಹಲವಾರು ಘಟ್ಟಗಳು ಮತ್ತು ಪಲ್ಲಟಗಳು ಸಂಭವಿಸುತ್ತಲೇ ಹೊಸ ಹೊಸ ಸಾಮಾಜಿಕ, ರಾಜಕೀಯ, ಸಾಹಿತ್ಯಿಕ ಸಿದ್ಧಾಂತಗಳು, ಆಯಾಮಗಳು ಕೊನೆಗೆ ಒಂದು … Read more

ಇಡಿ ಕಿಡಿ ಕವಿತೆಗಳು: ಅನುಸೂಯ ಯತೀಶ್

ಮಂತ್ರಮುಗ್ಧಗೊಳಿಸುವಅಕ್ಷರ ಮಾಂತ್ರಿಕನ ಕಾವ್ಯ ಚಮತ್ಕಾರಿಕೆಯಲ್ಲರಳಿದಇಡಿ ಕಿಡಿ ಕವಿತೆಗಳು. ಹನಿಗವಿತೆಗಳ ಚಕ್ರವರ್ತಿ, ಚುಟುಕುಗಳು ರಾಜ, ಶಬ್ದ ಗಾರುಡಿಗ, ಹರಟೆಯ ಕವಿ, ಕಾವ್ಯ ಲೋಕದ ವಿದೂಷಕ, ಹಾಸ್ಯ ಲೇಖಕ, ನಗು ಬಿಗುವಿನ ಕವಿ, ಸಾಮಾಜಿಕ ಪ್ರಜ್ಞೆಯ ಬರಹಗಾರ ಮುಂತಾದ ನಾಮಾಂಕಿತಗಳಿಗೆ ಭಾಜನರಾದ ನಮ್ಮ ನಾಡಿನ ಹೆಮ್ಮೆಯ ಕವಿಯನ್ನು ಕನ್ನಡದ ಹಿರಿಯ ಹಾಗೂ ಶ್ರೇಷ್ಠ ಸಾಹಿತಿಗಳಾದ ಅ.ರಾ.ಮಿತ್ರರವರು “ಇಡಿ ಕಿಡಿ ಕವನಗಳು” ಕೃತಿಯ ಮುನ್ನುಡಿಯಲ್ಲಿ ಓದುಗರಿಗೆ ಪರಿಚಯಿಸಿರುವ ಪರಿಯಿದು. “ಚೇಷ್ಟೆಯ ಬುದ್ಧಿಯ ತುಂಟತನ ಇವಗುಂಟುಶಬ್ದಗಳ ವಕ್ರ ಸಂಚಾರವೂ ಉಂಟುಮೂಲೆ ಮೂಲೆಗಳಲ್ಲಿ ಬಾಯಾಡಿಸುವ … Read more

ಶಾಲಾ ಮಕ್ಕಳ ತರಲೆ ಕತೆಗಳ ವರ್ತಮಾನದ ಗಂಭೀರ ಕತಾ ಸಂಕಲನ “ಮಕ್ಕಳೇನು ಸಣ್ಣವರಲ್ಲ”: ರವಿರಾಜ್ ಸಾಗರ್

ಬಾಲಕನಾದರೂ ಬಾಲಕನು ಬಿಡುವ ಬಾಣವೇನೂ ಬಾಲಕನಲ್ಲ ಎನ್ನುವಂತೆ ಮಕ್ಕಳು ಸಣ್ಣವರಾದರೂ ಅವರ ಮಾತುಗಳು, ಪ್ರಶ್ನೆಗಳು ,ಕುತೂಹಲಗಳು, ಅವರ ತರಲೆಗಳು, ಅವರು ಸೃಷ್ಟಿಸುವ ಅವಾಂತರಗಳು ದೊಡ್ಡವು. ಶಿಕ್ಷಕರಾಗಿ ಎರಡು ದಶಕಗಳಿಂದ ಮಕ್ಕಳ ಜೊತೆ ಒಡನಾಟ ಇಟ್ಟು ಕೊಂಡು ಸಂವೇದನಶೀಲರಾಗಿರುವ ಗುಂಡುರಾವ್ ದೇಸಾಯಿಯವರು ಮಕ್ಕಳ ಮನೋವಿಜ್ಞಾನವನ್ನು ಚೆನ್ನಾಗಿ ಬಲ್ಲರು. ಅವರ ಸಾಹಿತ್ಯ ಕೃಷಿಯ ಅನುಭವ, ಮಕ್ಕಳ ಕಾಳಜಿ ಅವರ ಮಕ್ಕಳ ಕಥೆಗಳ ಸಂಕಲನ “ಮಕ್ಕಳೇನು ಸಣ್ಣವರಲ್ಲ” ಕೃತಿಯಲ್ಲಿ ವ್ಯಕ್ತವಾಗಿದೆ. ಮಕ್ಕಳ ಕಥೆಗಳು ಎಂದರೆ ಮಕ್ಕಳ ಮನೋರಂಜನೆ, ಮಕ್ಕಳಿಗೆ ನೀತಿ ಬೋಧನೆಯೇ … Read more

ವೇಣು ಜಾಲಿಬೆಂಚಿ ಅವರ ಕೃತಿ “ತಿಳಿಯದೇ ಹೋದೆ”: ಮಹಾದೇವ ಎಸ್, ಪಾಟೀಲ

ಕನ್ನಡ ಸಾಹಿತ್ಯ ಪರಂಪರೆ ದಿನದಿನೆ ಹುಲುಸಾಗಿ ಬೆಳೆಯುತ್ತ ಸಾಗಿದೆ. ಅದೊಂದು ಕಾಲದಲ್ಲಿ ಸಾಹಿತ್ಯ, ಬರಹವೆಂದರೆ ಪ್ರಾಧ್ಯಾಪಕರು,ಪಂಡಿತರಿಗೆ ಮಾತ್ರ ಸಿಮೀತ ವಾಗಿತ್ತು. ಆ ದಿನದ ಸಾಹಿತ್ಯವು ತನ್ನದೇ ಆದ ಛಂದೋಬದ್ಧ ಚೌಕಟ್ಟಿನಲ್ಲಿತ್ತು. ಆಧುನಿಕ ಸಾಹಿತ್ಯದ ಕಾಲದ ಈ ದಿನಮಾನದಲ್ಲಿ ‘ಮುಕ್ತಛಂದ’ದ ಮೂಲಕ ಎಲ್ಲವೂ ಮುಕ್ತವಾಗಿ ಅನಾವರವರಣಗೊಳ್ಳುತ್ತಿದೆ. ಇಂದಿನ ತಂತ್ರಜ್ಞಾನದ ಯುಗದಲ್ಲಿ ವಾಟ್ಸಪ್,ಫೇಸ್ ಬುಕ್ಕ್, ಇಂಟರ್ನೆಟ್ ಗಳ ಸಂಪರ್ಕ ಹಾಗೂ ಸಂವಹನದ ಮೂಲಕ ವೇದಿಕೆಯನ್ನು ಹಂಚಿಕೊಳ್ಳುವದರೊಂದಿಗೆ ಸಾಹಿತ್ಯ ಸಮೃದ್ಧವಾಗಿ ಬೆಳೆಯುತ್ತಿದೆ. ಇಂತಹ ಕಾಲಘಟ್ಟದಲ್ಲಿ ರಾಯಚೂರಿನ ಸೃಜನಶೀಲ ಬರಹಗಾರ ಕವಿ,ಕಥೆಗಾರರಾದ ಶ್ರೀ … Read more

ಧರ್ಮದ ಆಚರಣೆ ಆಸ್ತಿಕವೂ ಅಲ್ಲ.. ನಾಸ್ತಿಕವೂ ಅಲ್ಲ.. ಎನ್ನುವ ವಿಭಿನ್ನ ಕೃತಿ “ಯಡ್ಡಿ ಮಾಮ ಬರಲಿಲ್ಲ”: ಡಾ. ನಟರಾಜು ಎಸ್‌ ಎಂ

ಇಡೀ ವಾರ ನಾಲ್ಕೈದು ಪುಸ್ತಕಗಳ ಮೇಲೆ ಕಣ್ಣಾಡಿಸಿದ್ದೇನಾದರೂ ಪೂರ್ತಿಯಾಗಿ ಯಾವ ಪುಸ್ತಕವನ್ನು ಓದಲಾಗಿರಲಿಲ್ಲ. ಇತ್ತೀಚೆಗೆ ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರಿಗೆ ಪ್ರಾಶಸ್ತ್ಯ ಕೊಡಲಿಲ್ಲ ಎನ್ನುವ ದನಿಗಳು, ಪರ್ಯಾಯ ಸಮ್ಮೇಳನ ಎಂಬಂತೆ ಬೆಂಗಳೂರಿನಲ್ಲಿ ಸಾಹಿತ್ಯ ಸಮ್ಮೇಳನವೊಂದನ್ನು ಹಮ್ಮಿಕೊಂಡಿದ್ದರು. ಎರಡೂ ಸಮ್ಮೇಳನಗಳ ಆಹ್ವಾನ ಪತ್ರಿಕೆಗಳ ಮೇಲೆ ಕುತೂಹಲಕ್ಕೆ ಕಣ್ಣಾಡಿಸಿದಾಗ ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಒಬ್ಬೇ ಒಬ್ಬ ಮುಸ್ಲಿಂ ಕವಿಯ ಹೆಸರಿತ್ತು. ಆ ಕವಿಯೂ ಕೂಡ ಸಮ್ಮೇಳನದಿಂದ ಹಿಂದೆ ಸರಿದಿದ್ದು ಎಲ್ಲರಿಗೂ ತಿಳಿದ ವಿಚಾರವೇ … Read more

ತಮ್ಮ ಶ್ರೇಷ್ಟತೆಯನ್ನು ಬೇರೆಯವರ ನಿಮ್ನತೆಯಲ್ಲಿ ಕಾಣುವವರ ಮೂಲಗುಣಗಳ ಅನಾವರಣ ಮಾಡುವ “ಸ್ನೇಕ್‌ ಟ್ಯಾಟೂ”: ಡಾ. ನಟರಾಜು ಎಸ್‌ ಎಂ

ಬೆಳ್ಕೆ ಮಹಾದೇವ ಗಿರಿರಾಜರವರು ಕಳೆದ ಒಂದು ದಶಕದಿಂದ ಎಫ್‌ ಬಿ ಗೆಳೆಯರು. ಸಿನಿಮಾ ನಟರಾಗಿ, ನಿರ್ದೇಶಕರಾಗಿ, ನಾಟಕಕಾರರಾಗಿ ಹೆಸರು ಮಾಡಿದವರು. ಈಗ “ಕಥೆಗೆ ಸಾವಿಲ್ಲ” ಪುಸ್ತಕದ ಮೂಲಕ ಕಾದಂಬರಿಕಾರರಾಗಿದ್ದಾರೆ. ಜೊತೆಗೆ “ಸ್ನೇಕ್‌ ಟ್ಯಾಟೂ” ಎಂಬ ಹೊಸ ಕಥಾಸಂಕಲನದ ಮೂಲಕ ಕಥೆಗಾರರಾಗಿದ್ದಾರೆ. ಬಿ ಎಂ ಗಿರಿರಾಜರವರ “ನವಿಲಾದವರು” ಚಿತ್ರವನ್ನು ಯೂ ಟ್ಯೂಬ್‌ ನಲ್ಲಿ ನೋಡಿದ್ದೆ. ಆ ಚಿತ್ರದಲ್ಲಿನ ಅವರ ನಟನೆ ನನಗೆ ತುಂಬಾ ಇಷ್ಟವಾಗಿತ್ತು. ಒಬ್ಬ ಆತಂಕವಾದಿಯ ಪಾತ್ರವನ್ನು ತುಂಬಾ ಅಚ್ಚುಕಟ್ಟಾಗಿ ನಿರ್ವಹಿಸಿದ್ದರು. ನಂತರ ಬಂದ ಅವರ ಚಿತ್ರಗಳನ್ನು … Read more

“ಮಿಠಾಯಿ ಮಾಮ ಕವಿತೆ ಸವಿಯೋಣ ಬಾ ತಮ್ಮ”: ಯಲ್ಲಪ್ಪ ಎಮ್ ಮರ್ಚೇಡ್, ರಾಯಚೂರು

ಮಕ್ಕಳ ಸಾಹಿತ್ಯ ಎಂದರೆ ಮಕ್ಕಳ ಮನಸ್ಸನ್ನು ತಣಿಸಿ, ಕುಣಿಸಿ, ಅವರ ಕುತೂಹಲವನ್ನು ಕೇರಳಿಸಿ ಅರಳಿಸಿ, ಅವರ ಭಾವನೆಗಳಿಗೆ ರೆಕ್ಕೆ ಕಟ್ಟಿ, ಗಾಳಿಯಲ್ಲಿ ತೇಲಾಡುವಂತೆ, ಅವರ ಮನಸ್ಸು ಸಂತುಷ್ಟಗೊಳಿಸುವುದಲ್ಲದೇ, ಅವರನ್ನು ಮಾನಸಿಕವಾಗಿ ದೈಹಿಕವಾಗಿ ಸಂಪೂರ್ಣವಾಗಿ ತೊಡಗಿಸಿಕೊಂಡು ಹೋಗುವಂತೆ ಇರುವ ಸಾಹಿತ್ಯ. ಕನ್ನಡ ಸಾಹಿತ್ಯ ಲೋಕದೊಳಗೆ ಹಲವಾರು ಹಿರಿಯ ಸಾಹಿತಿಗಳು ಮಕ್ಕಳಿಗಾಗಿ ಬರೆದಿರುವಂತಹ ಕವಿಗಳನ್ನು ಸಹ ಕಾಣಬಹುದು. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕು ಸೋಂಪುರದವರದಾ ಶಿಕ್ಷಕರು, ಕವಿಗಳು, ವಚನಕಾರರು, ಮಕ್ಕಳ ಸಾಹಿತಿಯು ಆಗಿರುವ ಶ್ರೀ ವೀರೇಶ ಬ ಕುರಿ ಸೋಂಪುರ … Read more

ಶತಾವಧಾನಿ ಗಣೇಶರ ’ಮಣ್ಣಿನ ಕನಸು’ – ಆಧುನಿಕೋತ್ತರ ಕಾಲಘಟ್ಟದಲ್ಲಿ ತೆರೆದುಕೊಳ್ಳುವ ಪ್ರಾಚೀನ ಭಾರತದ ಕಥೆ: ರಾಘವೇಂದ್ರ ಅಡಿಗ ಎಚ್ಚೆನ್

‘ಮಣ್ಣಿನ ಕನಸು’ ಇದು ಒಂದು ಕಾದಂಬರಿ ಎಂದು ಹೇಳುವುದಕ್ಕಿಂತ 2022ರಲ್ಲಿ ಪ್ರಕಟವಾದ ಆಧುನಿಕೋತ್ತರ ಭಾರತೀಯ ಮಹಾಗದ್ಯ ಎಂದು ಹೇಳಲು ಅಡ್ಡಿ ಇಲ್ಲ. ಶತಾವಧಾನಿ ಗಣೇಶ್ ಅವರ ಸಾಕಷ್ಟು ಉಪನ್ಯಾಸಗಳನ್ನು ಕೇಳಿದ್ದ ನಾನು ಅವರ ಕಾದಂಬರಿಯನ್ನು ಓದಲೇಬೇಕೆನ್ನುವ ಆಸೆಯಿಂದ ಬೆಲೆ ದುಬಾರಿ ಎಂದೆನಿಸಿದರೂ ಖರೀದಿಸಿ ಓದಿದೆ. ಒಟ್ಟೂ 634 ಪುಟಗಳ ಗಾತ್ರ, 14 ಅಧ್ಯಾಯಗಳಿರುವ ’ಮಣ್ಣಿನ ಕನಸು’ ನಮ್ಮನ್ನು ಎರಡೂವರೆ ಸಾವಿರ ವರ್ಷಗಳ ಹಿಂದಿನ ಭಾರತದಲ್ಲಿ ಪಯಣಿಸುವಂತೆ ಮಾಡುತ್ತದೆ. ಅದರಲ್ಲಿಯೂ ನೀವು ಸಂಸ್ಕೃತ ನಾಟಕಗಳನ್ನು ಓದಿರುವಿರಾದರೆ ಖಂಡಿತವಾಗಿ ಇದು … Read more

“ಸನ್ಮಾರ್ಗ ತೋರುವ “ಸತ್ ಪಾತ” ಕವಿತೆಗಳು”: ಅನುಸೂಯ ಯತೀಶ್

“ಸತ್ ಪಾತ” ಎಸ್. ಬಿ. ಮಾಳಗೊಂಡ ವಿರಚಿತ ಕವನ ಸಂಕಲನವಾಗಿದ್ದು 66 ಕವಿತೆಗಳನ್ನು ಒಳಗೊಂಡ ಬೃಹತ್ ಹೊತ್ತಿಗೆಯಾಗಿದೆ. ನಾಡಿನ ಖ್ಯಾತ ಲೇಖಕರಾದ “ರಾಗಂ” ಎಂದೆ ಹೆಸರು ವಾಸಿವಾಸಿಯಾದ ರಾಜಶೇಖರ ಮಠಪತಿಯವರ ಬೆನ್ನುಡಿಯ ಕಳಶದೊಂದಿಗೆ ಚೆನ್ನಬಸವಣ್ಣ ಎಸ್.ಎಲ್. IPS. ರವರ ಮುನ್ನುಡಿಯ ಶುಭ ಹಾರೈಕೆ ಜೊತೆಗೂಡಿ 2022 ರಲ್ಲಿ ಕನ್ನಡ ಸಾರಸ್ವತ ಲೋಕವನ್ನು ಪ್ರವೇಶಿಸಿದ ಕೃತಿ ಇದಾಗಿದೆ. ಎಸ್. ಬಿ. ಮಾಳಗೊಂಡರವರು ಪೊಲೀಸ್ ಇಲಾಖೆಯಲ್ಲಿ ಇನ್ಸ್ಪೆಕ್ಟರ್ ಆಗಿ ಲಾಟಿ ಹಿಡಿದು ಸಮಾಜಘಾತುಕರ ವಿರುದ್ಧ ಚಾಟಿ ಬೀಸುವ ಹುದ್ದೆಯಲ್ಲಿ ಇರುವವರು. … Read more

“ಅವ್ವನೊಂದಿಗಿನ ಬದುಕಿನ ಒಡನಾಟವನ್ನು ಆಪ್ತವಾಗಿ ಮನಬಿಚ್ಚಿ ಹೇಳಿರುವ ಬಯೋಗ್ರಫಿ”: ಎಂ.ಜವರಾಜ್

ಈಚೆಗೆ ಒಂದು ಪುಟ್ಟ ಕೃತಿ ‘ನನ್ನವ್ವನ ಬಯೋಗ್ರಫಿ’ ಓದಿದೆ. ಬಯೋಗ್ರಫಿ – ಜೀವನ ಚರಿತ್ರೆ, ಜೀವನ ಚಿತ್ರ, ಲೈಫ್ ಸ್ಟೋರಿ, ದಿನಚರಿ, ಇದೆಲ್ಲಕ್ಕು ಮೀರಿದ ಆಪ್ತವಾದ ಗಾಢವಾದ ಆತ್ಮಕಥನ ಅನ್ನಬಹುದು. ಆತ್ಮಕಥನದ ಲಕ್ಷಣ- ಇರುವುದನ್ನು ಮತ್ತು ಇದ್ದು ಬದುಕಿದ್ದನ್ನು ಪ್ರಾಮಾಣಿಕವಾಗಿ ಹೇಳುವುದು; ನೋಡಿದ್ದನ್ನು ಕೇಳಿಸಿಕೊಂಡಿದ್ದನ್ನು ಯಥಾವತ್ ದಾಖಲಿಸುವುದು; ಅರ್ಥಾತ್ ‘ಇದ್ದದ್ದು ಇದ್ದ ಹಾಗೆ’! ಸಾಹಿತ್ಯ ಪ್ರಾಕಾರಗಳಲ್ಲಿ ಆತ್ಮಕಥನವೂ ಒಂದು. ಆತ್ಮಕಥನಗಳ ರಚನೆ ಅಷ್ಟು ಸುಲಭವಲ್ಲ. ಅಲ್ಲಿ ಮರೆಮಾಚುವುದಕ್ಕೆ ಅವಕಾಶವಿಲ್ಲ. ಹಾಗೇನಾದರು ಮರೆಮಾಚಿದರೆ ಅದು ಆತ್ಮಕಥನವೇ ಅಲ್ಲ. ಗಾಂಧಿಯ … Read more

ಆತ್ಮಾನುಬಂಧದ ಸಖಿಯೊಡನೆ ಒಂದು ಸಹೃದಯ ಸಂವಾದ: ವರುಣ್ ರಾಜ್ ಜಿ.

ಕವಿ ಶ್ರೀ ರಾಘವೇಂದ್ರ ಡಿ. ತಳವಾರರ “ಆತ್ಮಾನುಬಂಧದ ಸಖಿ” ಕೃತಿಯ ಕುರಿತು ಇತ್ತೀಚೆಗೆ ತನುಶ್ರೀ ಪ್ರಕಾಶನದಿಂದ ಪ್ರಕಟಣೆಯಾಗಿದ್ದು ಅತ್ಯಲ್ಪ ಕಾಲದಲ್ಲಿಯೇ ಹಲವು ಸಹೃದಯರ ಮನಸ್ಸನ್ನು ಗೆದ್ದಿದೆ. ಈ ಕೃತಿಯು ರೂಪ – ಸ್ವರೂಪ ಮತ್ತು ವಿಷಯ ವ್ಯಾಪ್ತಿಯ ದೃಷ್ಠಿಯಿಂದ ಒಂದು ವಿಶಿಷ್ಟವಾದ ಕೃತಿ ಎನಿಸಿದ್ದು, ಓದುಗರನ್ನು ಎಲ್ಲಿಯೂ ನಿರಾಸೆಗೊಳಿಸದ ಗುಣ ಈ ಕೃತಿಯಲ್ಲಿದೆ. “ಆತ್ಮಾನುಬಂಧದ ಸಖಿ” ಕೃತಿಯ ಕವನದ ಸಾಲುಗಳು ಪದ್ಯದಂತೆ ಓದುವವರಿಂದ ಪದ್ಯವಾಗಿಯೂ, ಗದ್ಯದಂತೆ ಓದುವವರಿಂದ ಗದ್ಯವಾಗಿಯೂ ಓದಿಸಿಕೊಳ್ಳುತ್ತವೆ. ಪದ್ಯದಂತೆ ಹಾಡಿದರೂ ಗದ್ಯದಂತೆ ಓದಿದರೂ ಅರ್ಥ … Read more

ಯವ್ವಾ ಯವ್ವಾ “ಭೂಮಿಯ ಋಣ” ಚಂದ ಕಣವ್ವಾ: -ಡಾ. ನಟರಾಜು ಎಸ್.‌ ಎಂ.

ಒಂದು ಪೇಜಿನ ಕತೆ, ಕವಿತೆ ಕಟ್ಟುವುದು ಸುಲಭ. ಹತ್ತಾರು ಪುಟಗಳ ಕಥೆ, ನೂರಾರು ಪುಟಗಳ ಕಾದಂಬರಿ ಬರೆಯುವುದು ಕಷ್ಟ. ಆ ಕಷ್ಟಕ್ಕೆ ಯುವ ಲೇಖಕರು ತೆರೆದುಕೊಂಡಂತೆ ಯುವ ಲೇಖಕಿಯರು ತೆರೆದುಕೊಂಡಿದ್ದು ಬಹಳ ವಿರಳ. ಆ ಕಾರಣಕ್ಕೆ ಯುವ ಲೇಖಕಿಯರ ಕವಿತೆಗಳು ನಮಗೆ ಸಾಮಾಜಿಕ ಜಾಲತಾಣಗಳಲ್ಲಿ, ವಿಶೇಷಾಂಕಗಳಲ್ಲಿ ಹೆಚ್ಚಾಗಿ ಓದಲು ಸಿಗುತ್ತವೆ. ಲೇಖಕಿಯರು ಕಥಾಲೋಕಕ್ಕೆ ತೆರೆದುಕೊಳ್ಳಲು ಒಂದಷ್ಟು ಸಮಯ ತೆಗೆದುಕೊಳ್ಳುತ್ತಾರೆ ಎನಿಸುತ್ತದೆ. ಬದುಕಿನ ಅನುಭವಗಳನ್ನು ತುಂಬಾ ಪರಿಣಾಮಕಾರಿಯಾಗಿ ಕಟ್ಟಿಕೊಡುವ ಕೆಲಸ ಅಷ್ಟು ಸುಲಭವಲ್ಲ. ಆ ಸುಲಭವಲ್ಲದ ಕೆಲಸವನ್ನು ಒಂದು … Read more

ಪರಿಮಳದ ಪಯಣದಲಿ ಜೀವ ಜೀವನ ಧನ್ಯ: ಡಾ. ಹೆಚ್ ಎನ್ ಮಂಜುರಾಜ್

ಪುಸ್ತಕದ ಹೆಸರು : ಪರಿಮಳಗಳ ಮಾಯೆಲಲಿತ ಪ್ರಬಂಧ ಸಂಕಲನಲೇಖಕಿ : ಶ್ರೀಮತಿ ಆರ್ ಸಮತಾಪ್ರಕಾಶಕರು: ಅಹರ್ನಿಶಿ ಪ್ರಕಾಶನ, ಶಿವಮೊಗ್ಗಮೊದಲ ಮುದ್ರಣ : 2022, ಬೆಲೆ: ರೂ. 140 ಶ್ರೀಮತಿ ಸಮತಾ ಅವರ ಈ ಲಲಿತ ಪ್ರಬಂಧಗಳ ಪುಸ್ತಕವು ಓದಲು ಸಿಕ್ಕಿದ್ದು ನನಗೆ ಆಕಸ್ಮಿಕವಾಗಿ. ಸಮತಾ ಅವರು ನನ್ನ ತಂಗಿಯ ಸಹಪಾಠಿಯಾಗಿದ್ದವರು. ನಿನ್ನೆ ನನ್ನ ಸೋದರಿ ಲಕ್ಷ್ಮಿ ಉರುಫ್ ಪಮ್ಮಿಯ ಮನೆಗೆ ಹೋದಾಗ ಅದೂ ಇದೂ ಮಾತಾಡುವಾಗ ಲೇಖಕಿಯ ವಿಚಾರ ಬಂತು. ಈಕೆ ನನ್ನ ತಂಗಿಯ ಸ್ನೇಹಿತೆ. ನನ್ನ … Read more

ಕುಟುಂಬವೆಂದರೆ ಒಬ್ಬ ವ್ಯಕ್ತಿಯಲ್ಲ, ಅವನೊಡನೆ ನಿಲ್ಲುವ ಪ್ರಪಂಚವೇ ಕುಟುಂಬ ಎನ್ನುವ “ಅಜ್ಜನ ಕಮೋಡು”: ಡಾ. ನಟರಾಜು ಎಸ್.‌ ಎಂ.

ಈ ತಿಂಗಳ ಮೊದಲ ವಾರದಲ್ಲಿ ಹಾಸನಕ್ಕೆ ಹೋಗಿದ್ದೆ. ನಮ್ಮ ನಡುವಿನ ಅಧ್ಬುತವಾದ ಅನುವಾದಕರಾದ ಜೆವಿ ಕಾರ್ಲೊ ಸರ್‌, ಮೈಸೂರಿನ ಕಥೆಗಾರ ಗೆಳೆಯ ಡಾ. ಗವಿಸ್ವಾಮಿ ಸಿಕ್ಕಿದ್ದರು. ಅವರ ಜೊತೆ ಮಾತನಾಡಿ ಸಂಜೆ ಹಿರಿಯ ಸಾಹಿತಿಗಳಾದ ಹಾಡ್ಲಹಳ್ಳಿ ನಾಗರಾಜು ರವರನ್ನು ಭೇಟಿಯಾದೆ. ಹಾಸನದ ಬಳಿ ಅತ್ತಿಹಳ್ಳಿಯ ತೋಟದ ಮನೆಯಲ್ಲಿ ವಾಸವಿರುವ ಹಿರಿಯರಾದ ನಾಗರಾಜುರವರನ್ನು ಭೇಟಿಯಾದ ದಿನ ಹೊರಗೆ ಸಣ್ಣನೆ ತುಂತುರು ಮನೆ ಹನಿಯುತ್ತಿತ್ತು. ಒಂದೆರಡು ಗಂಟೆ ಅವರೊಡನೆ ಹರಟೆ ಹೊಡೆದು ರಾತ್ರಿ ಊಟ ಮಾಡಿ ವಾಪಸ್ಸು ಬರುವಾಗ ನನ್ನ … Read more

“ಸಂಪ್ರೀತಿ ಲೋಕದಲ್ಲೊಂದು ರೋಚಕ ಪಯಣ”: ಅನುಸೂಯ ಯತೀಶ್

ಕಾವ್ಯವೆಂದರೆ ಕೇವಲ ಒಡಿಬಡಿ ಕೌರ್ಯಗಳ ಅನಾವರಣವಲ್ಲ. ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ಬರಹಗಳ ಸೃಷ್ಟಿಯದು. ನೋಂದವರ ಪಾಲಿಗೆ ಅಳುವ ಮಗುವನ್ನು ಲಾಲಿಸಿ ಪಾಲಿಸಿ ಸಂತೈಸುವ ಹೆತ್ತವ್ವನ ಮಡಿಲು‌, ಅಂತಕರಣದ ತೊಟ್ಟಿಲು, ಭರವಸೆಯ ಬೆಳದಿಂಗಳು, ಅನುಭವಗಳ ಹಾರ, ಪ್ರೀತಿ ಪ್ರೇಮದ ಸಮ್ಮಿಲನ. ಒಟ್ಟಾರೆ ಜೀವ ಕಾರುಣ್ಯವೇ ಕಾವ್ಯವಾಗಿದೆ. ಜೀವನ ಎಂಬುದು ಸಮತಟ್ಟಾದ ನುಣ್ಣನೆಯ ದಾರಿಯಂತಲ್ಲ. ಹುಬ್ಬು ತಗ್ಗುಗಳನ್ನು, ಅಂಕುಡೊಂಕುಗಳನ್ನು ಒಳಗೊಂಡ ದುರ್ಗಮ ಹಾದಿಯದು. ನಮಗರಿವಿಲ್ಲದಂತೆ ತಿರುವುಗಳನ್ನು ಪಡೆದುಕೊಂಡು, ಅನಿರೀಕ್ಷಿತವಾಗಿ ಘಟಿಸುವ ಸವಾಲುಗಳ ಸರಮಾಲೆಯದು. ಕೆಲವೊಮ್ಮೆ ನಮ್ಮ ತೀರ್ಮಾನಗಳೇ ನಮಗೆ ತಿರುಮಂತ್ರಗಳಾಗಿ … Read more