ಆಂಗ್ಲ ಕವಯಿತ್ರಿ ಎಮಿಲಿ ಬಗ್ಗೆ ಒಂದಿಷ್ಟು ಪರಿಚಯ. 19ನೇ ಶತಮಾನದ ಪ್ರಮುಖ ಕವಯಿತ್ರಿಗಳಲ್ಲಿ ಒಬ್ಬರು ಎಮಿಲಿ ಡಿಕಿನ್ಸನ್. ಅಮೇರಿಕಾದ ಕವಯಿತ್ರಿಯಾದ ಈಕೆಯ ಪೂರ್ಣ ಹೆಸರು ಎಮಿಲಿ ಎಲಿಜಬೆತ್ ಡಿಕಿನ್ಸನ್. 10 ಡಿಸೆಂಬರ್ 1830ರಲ್ಲಿ ಮ್ಯಾಸಚೂಸೆಟ್ಸ್ನ ಅಮ್ಹೆರ್ಸ್ಟ್ನಲ್ಲಿ ಜನನ. ತಂದೆ ಎಡ್ವರ್ಡ್ ಡಿಕಿನ್ಸನ್, ವಕೀಲರಾಗಿದ್ದವರು. ತಾಯಿ ಎಮಿಲಿ ನಾರ್ಕ್ರಾಸ್ ಡಿಕಿನ್ಸನ್. ಒಬ್ಬ ಸಹೋದರ ಮತ್ತು ಒಬ್ಬಾಕೆ ಸಹೋದರಿ ಎಮಿಲಿಗಿದ್ದರು. ಕವಯಿತ್ರಿ ಎಮಿಲಿ ‘Nun of Amherst’ಎಂದು ಕರೆಯಲ್ಪಡುತ್ತಿದ್ದರು. ಅವರು ನಿತ್ಯ ಶ್ವೇತವಸ್ತ್ರವನ್ನೇ ಧರಿಸಲು ಇಷ್ಟಪಡುತ್ತಿದ್ದರಂತೆ. ಬರಹದ ಹೊರತಾಗಿ ಎಮಿಲಿಯವರಿಗೆ […]
ಲೇಖನ
ಸೀತಾಳೆ ಹೂ: ಬಿಲಾಲ್ ಶೇಖ್
ಮಳೆ ನಾಡಿನ ಕಾನನದ ಹೂವು ಸೀತಾಳೆ. ಇದು ಒಂದು ಆರ್ಕಿಡ್ ಪ್ರಭೇಧವಾಗಿದ್ದು, ಇದರ ವೈಜ್ಞಾನಿಕ ಹೆಸರು Rhynchostylis retusa. ಧರೆಗೆ ಮಳೆ ಸುರಿಯಲು ಪ್ರಾರಂಭವಾಗಿದ್ದ ಮಳೆಗೆ ಸ್ವಾಗತಿಸಲು ಈ ಸೀತಾಳೆ ಹೂವುಗಳು ಎಲ್ಲೆಡೆ ಅರಳಿ ಕಾಡಿನ ಸೊಬಗನ್ನು ಹೆಚ್ಚಿಸುತ್ತದೆ. ನೋಡಲು ಬಿಳಿ – ನೇರಳ ಅಥವಾ ಬಿಳಿ – ಕಂದು ಬಣ್ಣಗಳ ಮಿಶ್ರಿತವಾಗಿದ್ದು, ನೋಡುಗರ ಕಣ್ಮನ ಸೆಳೆಯುತ್ತದೆ, ಹೂವಿನ ಗುಂಚಲುಗಳು ಯಾರೋ ಇದನ್ನು ಕೈಯಿಂದ ಮಾಲೆಗಳನ್ನಾಗಿ ಮಾಡಿ ತೂಗಿ ಬಿಟ್ಟಂತೆ ಕಾಣುತ್ತದೆ. ಇದಕ್ಕೆ ಸಾಮಾನ್ಯವಾಗಿ ಸ್ಥಳಿಯರು ಸೀತಾದಂಡೆ […]
ಮಾಮನ್ನನ್ ಎನ್ನುವ ಕಹಿ ಮದ್ದು: ಎಂ ನಾಗರಾಜ ಶೆಟ್ಟಿ
`ಸಿನಿಮಾ ಬಿಡುಗಡೆಯಾದ ಎರಡನೇ ವಾರದಲ್ಲಿ ಚಿತ್ರ ನೋಡುವುದು ಮತ್ತು ಅದರ ಬಗ್ಗೆ ಬರೆಯುವುದು ಕಷ್ಟದ ಕೆಲಸ. ಆಗಲೇ ಹಲವರು ಅದರ ಬಗ್ಗೆ ಬರೆದು-ಹೇಳಿ ಬಿಟ್ಟಿರುತ್ತಾರೆ. ಅವರ ಅಭಿಪ್ರಾಯಗಳು ನಮ್ಮ ತಲೆಯಲ್ಲೂ ನೆಲೆಗೊಂಡು ಬಿಟ್ಟಿರುತ್ತವೆ. ಅದರಿಂದ ಹೊರಬರಲು ಸಾಕಷ್ಟು ತಿಣುಕಬೇಕು. ಕೆಲವು ವಿಮರ್ಶೆಗಳು ಖಂಡಿಸಲೆಂದೇ ಹುಟ್ಟಿಕೊಳ್ಳುತ್ತವೆ! ಕೆಲವರಿಗೆ ಸಿನಿಮಾದ ಅಂತ್ಯವನ್ನು ಹೇಳುವ ಆತುರ. ಇದರಿಂದ ಚಿತ್ರದ ರಸಾಸ್ವಾದನೆಗೆ ಖಂಡಿತ ಧಕ್ಕೆಯಾಗುತ್ತದೆ. ʼಮಾಮನ್ನನ್ʼ ನೋಡಿದಾಗ ನನಗೂ ಅದೇ ಆಯಿತು. ಪುಣ್ಯವಶಾತ್ ನೋಡುವಂತಿಲ್ಲವೆಂದು ಯಾರೂ ಹೇಳಿರಲಿಲ್ಲ. ʼಪೆರಿಯೇರುಂ ಪೆರುಮಾಳ್ʼ ʼಕರ್ಣನ್ʼ ಚಿತ್ರದ […]
ತೇಜಸ್ವಿ ಹೆಸರಲ್ಲಿ ʼಡೇರ್ ಡೆವಿಲ್ ಮುಸ್ತಾಫʼ: ಎಂ ನಾಗರಾಜ ಶೆಟ್ಟಿ
ಪೂರ್ಣಚಂದ್ರ ತೇಜಸ್ವಿಯವರ ʼಡೇರ್ ಡೆವಿಲ್ ಮುಸ್ತಾಫಾ” ಕತೆಯನ್ನು ಸಿನಿಮಾ ಮಾಡುತ್ತಾರೆಂದು ತಿಳಿದಾಗ ಆಶ್ಚರ್ಯವಾಗಿತ್ತು. ʼಡೇರ್ ಡೆವಿಲ್ ಮುಸ್ತಾಫಾ” ವ್ಯವಸ್ಥೆಯನ್ನು ಕೀಟಲೆಗಣ್ಣಿಂದ ನೋಡುವ, ಸಂಘರ್ಷಕ್ಕೆ ಅನುವಿಲ್ಲದ, ಸಾಮಾನ್ಯವೆನ್ನಿಸುವ ಕತೆ. ಇದು ಸಿನಿಮಾಕ್ಕೆ ಹೊಂದುತ್ತದೆಂದು ಅನ್ನಿಸಿರಲಿಲ್ಲ. ಕೊನೆಗೆ ಆಗಿದ್ದೂ ಹಾಗೆಯೇ! ನಿರ್ದೇಶಕ ಶಶಾಂಕ್ ಸೊಗಾಲ್ ಕತೆಯ ಹೆಸರನ್ನು, ಪಾತ್ರಗಳ ಹೆಸರನ್ನು, ಕತೆಯ ಕೆಲವು ಅಂಶಗಳನ್ನು ಬಳಸಿಕೊಂಡು ತನ್ನದೇ ಚಿತ್ರ ಮಾಡಿದ್ದಾರೆ. ಅವರ ಕಲ್ಪನಾ ಶಕ್ತಿ ಮೆಚ್ಚುವಂತದ್ದೇ! ಅತ್ತ ಮುನ್ಸಿಪಾಲಿಟಿಯೂ ಅಲ್ಲದ, ಇತ್ತ ಗ್ರಾಮ ಪಂಚಾಯತಿಗೂ ಸೇರದ ಪುಟ್ಟ ಪಟ್ಟಣವೊಂದರ […]
ಚುನಾವಣೆ ಬಂತು ಚುನಾವಣೆ: ಡಾ.ವೃಂದಾ ಸಂಗಮ್
“ಮೇಡಂ, ನಿಮಗೆ ಬಂತಾ” ಅನ್ನುವ ಪ್ರಶ್ನೆ ಸಹೋದ್ಯೋಗಿಗಳಿಂದ ಬಂದರೆ, “ಛೇ ಛೇ ಇದೆಂಥಾ ಅಸಹ್ಯ,” ಎಂದು ಕೊಳ್ಳಬೇಡಿ. ಇದು ಚುನಾವಣೆ ಸಮಯದಲ್ಲಿ ಸರ್ಕಾರಿ ನೌಕರರ ಅತೀ ಸಾಮಾನ್ಯ ಪ್ರಶ್ನೆ. ನಿಮ್ಮನ್ನೂ ಚುನಾವಣಾ ಕಾರ್ಯಕ್ಕೆ ನಿಯೋಜಿಸಿದ್ದಾರೆಯೇ, ಯಾವ ಮತಕ್ಷೇತ್ರ ಎಂಬ ನಿಯೋಜನಾ ಆದೇಶ ನಿಮಗೆ ಬಂತಾ ಎಂಬ ಕುಶಲ ವಿಚಾರಣೆ ಅಷ್ಟೇ ಇದು. ಇನ್ನೇನು ಚುನಾವಣೆ, ಮುಂದಿನ ವರುಷ ಎಂದಾಗಲೇ, ಈ ಚುನಾವಣೆಯ ಬಿಸಿ ಸರ್ಕಾರಿ ನೌಕರರಿಗೆ ತಟ್ಟುತ್ತದೆ. ಮತದಾರರಿಗೆ ಚುನಾವಣೆ ಅಂದರೆ, ಒಂದು ದಿನ, ಅದೂ ಮತದಾನ […]
ಇಂದಿನ ಯುವಕರಲ್ಲಿ ಹೆಚ್ಚಾಗುತ್ತಿರುವ ಮನೋಬಲದ ಕೊರತೆ: ವಿಜಯ್ ಕುಮಾರ್ ಕೆ.ಎಂ.
ಮನುಷ್ಯನಿಗೆ ದೈಹಿಕ ಬಲದ ಅವಶ್ಯಕತೆ ಎಷ್ಟಿದೆಯೋ ಅಷ್ಟೇ ಮಟ್ಟದ ಮನೋಬಲದ ಅತ್ಯವಶ್ಯಕತೆಯು ಬೇಕಿದೆ.ಆದರೆ ಇತ್ತೀಚಿನ ದಿನಗಳಲ್ಲಿ ಈ ಮನೋಬಲದ ಅತಿಯಾದ ಕೊರತೆ ನಮ್ಮ ಯುವ ಸಮುದಾಯದಲ್ಲಿ ಹೆಚ್ಚುತ್ತಿರುವುದು ಯುವ ಪೀಳಿಗೆಯ ಭವಿಷ್ಯವನ್ನು ಚಿಂತೆಗೀಡು ಮಾಡುವಂತಿದೆ.ತಮ್ಮ ಆಯ್ಕೆಗಳಲ್ಲಾಗಲಿ, ನಿರ್ಧಾರಗಳಲ್ಲಾಗಲಿ ತೀರ್ಮಾನ ತೆಗೆದುಕೊಳ್ಳ ಬೇಕಾದ ತಮ್ಮ ಚಿತ್ತವನ್ನು ಗೊಂದಲಕ್ಕೆ ಸಿಲುಕಿಸಿ ಪೇಚಾಡುವ ಸ್ಥಿತಿಗೆ ತಲುಪಿರುವಲ್ಲಿ ಅವರ ಮನಸ್ಥಿತಿಯ ಶಕ್ತಿ ಎಷ್ಟರ ಮಟ್ಟಕ್ಕಿದೆ? ಎಂಬ ಪ್ರಶ್ನೆಯನ್ನು ಹುಟ್ಟು ಹಾಕದೆ ಇರದು. ಹಾಗಾದರೆ ಮನೋಬಲ ಎಂದರೆ ಏನು?ಅದಿಲ್ಲದೆ ಆಗಬಹುದಾದ ತೊಡಕುಗಳಾದರೂ ಏನು? ಎನುವಾಗ. […]
ಅಮ್ಮನಾಗಿ ನಾನು……: ಶಿಲ್ಪಾ ಎಂ. ಕುಕನೂರ್
ಕಳೆದ ವಾರವಷ್ಟೇ ಅಂತಾರಾಷ್ಟ್ರೀಯ ತಾಯಂದಿರ ದಿನಾಚರಣೆಯನ್ನು ಆಚರಿಸಲಾಯಿತು. ಇದು ಪಾಶ್ಚಿಮಾತ್ಯಾ ಸಂಪ್ರದಾಯ ನಾವೇಕೆ ಆಚರಿಸಬೇಕು ಎನ್ನುವ ಮನೋಭಾವ ಕೆಲವರಲ್ಲಿರಬಹುದು. ಆದರೆ ನಮ್ಮ ಭಾರತೀಯ ಪರಂಪರೆಯಲ್ಲೂ ಋಷಿಮುನಿಗಳು ಮಾತೃದೇವೋಭವ ಎಂದು ಹೇಳಿ ತಾಯಿಯನ್ನು ದೇವರಿಗೆ ಹೋಲಿಸಿದ್ದಾರೆ. ಭಾರತದಲ್ಲಿಂದು ಆಧುನಿಕತೆ ಹೆಚ್ಚಾದಂತೆಲ್ಲ ಸಮಸ್ಯೆಗಳು ಹೆಚ್ಚಾಗುತ್ತಿವೆ. ಈ ತಂತ್ರಜ್ಞಾನ ಯುಗದಲ್ಲಿ ನಾಗರಿಕ ಸಮಾಜ ಹೆಚ್ಚು ಶಿಕ್ಷತರಾದಂತೆಲ್ಲ ಭಾವನಾರಹಿತ ಜೀವಿಗಳಾಗಿ ಬದುಕುತ್ತಿದ್ದಾರೆ, ಸಂಭಂದಗಳ ಮೌಲ್ಯಗಳು ನಶಿಸಿ ಹೋಗುತ್ತಿರುವ ಕಾಲಘಟ್ಟದಲ್ಲಿ ಬೆಳೆಯುವ ಮಕ್ಕಳಿಗೆ, ಯುವ ಪೀಳಿಗೆಗೆ ಒಂದು ಆದರ್ಶಪ್ರಾಯ ಮಾರ್ಗದರ್ಶನದ ತಳಹದಿ ಒದಗಿಸುವ ಸಲುವಾಗಿ […]
ಸಂಡಿಗ್ಯೋಪಾಖ್ಯಾನ: ಡಾ.ವೃಂದಾ ಸಂಗಮ್
ಕನ್ನಡದಾಗ ಋತು ಮಾನ ಮತ್ತ ಋತು ಸಂಹಾರ ಅಂತ ಒಂದು ಶಬ್ದ ಅದ. ಅಂದರ, ಋತುಗಳನ್ನ ಮಾನಕ ಅಂದರ ಅಳತೀ ಮಾಡೋದು ಅಥವಾ ಋತುಗಳನ್ನ ಲೆಕ್ಕ ಹಾಕೋದು ಅಂತನೋ ಇರಬೇಕು. ಇನ್ನ ಕಾಳಿದಾಸ ಅಂದಕೂಡಲೇ ನೆನಪಾಗೋದು ಋತು ಸಂಹಾರ. ಎಲ್ಲಾ ಬಿಟ್ಟು ಈ ಋತುಗಳನ್ಯಾಕೆ ಸಂಹಾರ ಮಾಡಬೇಕೋ ರಾಕ್ಷಸರ ಹಂಗ ಅನ್ನಬ್ಯಾಡರೀ. ನನಗೂ ಗೊತ್ತಿಲ್ಲ. ಆದರ, ವಸಂತ ಋತು ಬಂದಾಗಲೇ ಮಾವು ಹಣ್ಣಾಗಿ, ರಸ ತುಂಬಬೇಕು, ಮಲ್ಲಿಗೆ ಹೂವರಳಿ ಘಮ ಚಲ್ಲಬೇಕು ಎಂದು ಯಾರು ತಿಳಿಸುವರೋ ತಿಳೀಲಿಲ್ಲ […]
ಬೇಸರವಾಗದಿರಲಿ ಬೇಸಿಗೆ ರಜೆ: ವಿಜಯ್ ಕುಮಾರ್ ಕೆ. ಎಂ.
ಅದೊಂದಿತ್ತು ಕಾಲ ಬೇಸಿಗೆ ರಜೆ ಎಂದರೆ ಭಾವನೆಗಳ ಸಮಾಗಮ, ಬಂಧುಗಳ ಸಮ್ಮಿಲನ ಇಂದಿರುವ ಈ ಕಾಲ ಬೇಸಿಗೆ ಶಿಬಿರಗಳ, ತಾಪಮಾನದ ತಾಪತ್ರಯಗಳ ಸಂಕಲನ. ಹೌದು ಮಿತ್ರರೇ, 90ರ ದಶಕದ ನಂತರ ಬೇಸಿಗೆ ರಜೆ ಎಂಬುದು ಮಕ್ಕಳ ಮತ್ತು ಪೋಷಕರ ಮನಸ್ಸಿನಲ್ಲಿ ಮಹತ್ತರ ಬದಲಾವಣೆ ತಂದಿರುವುದು ನಮಗೆಲ್ಲಾ ತಿಳಿದ ವಿಚಾರವೇ ಸರಿ. ಆದರೂ ಈ ಕಾಲಘಟ್ಟಕ್ಕೆ ಹೊಂದುಕೊಳ್ಳುವುದಕ್ಕಿಂತಲು ಅಂದಿನ ಕಾಲಘಟ್ಟದ ಸಮಯ ಸಂದರ್ಭಗಳನ್ನು ಈ ಸಮಯಕ್ಕೆ ಅರ್ಥೈಸುವುದೇ ಬಹುಮುಖ್ಯ ಕಾರ್ಯವಾಗಿದೆ. ಅಂದೆಲ್ಲಾ ಬೇಸಿಗೆ ರಜೆ ಬಂತೆಂದರೆ ಕುಟುಂಬ ಕುಟುಂಬಗಳ […]
ಡಾ.ಎಸ್.ವಿ.ಪ್ರಭಾವತಿಯವರ ಕಾವ್ಯ: ಸಂತೋಷ್ ಟಿ
ಆಧುನಿಕ ಕನ್ನಡ ಸಾಹಿತ್ಯದಲ್ಲಿ ಕಾದಂಬರಿ, ಸಂಶೋಧನೆ, ಕಾವ್ಯ , ಪ್ರಬಂಧ, ವಿಮರ್ಶೆಗಳಿಂದ ಕ್ರಿಯಾಶೀಲ ಲೇಖಕಿಯಾದ ಡಾ.ಎಸ್.ವಿ.ಪ್ರಭಾವತಿಯವರ ಕಾವ್ಯ ಚಿಂತನೆಗಳು ವಾಸ್ತವಿಕ ನೆಲೆಗಟ್ಟಿನ ಮೇಲೆ ಆಕ್ರತಿ ಪಡೆಯುವಂತಹದ್ದು. ಕಾವ್ಯ ಜಿಜ್ಞಾಸೆಯು ಎಂದಿಗೂ ನಿಂತ ನೀರಲ್ಲ, ಅದು ಸದಾ ಹರಿಯುತ್ತಲೇ ತನ್ನ ಸುತ್ತ ಹಸಿರನ್ನು ಕಾಣುತ್ತದೆ. ಹಾಗಾಗಿಯೇ ಇವರ ಕವಿತೆಗಳಿಗೆ ಸಾಂಕೇತಿಕವಾದ ಚಲನಶೀಲತೆ ಒದಗಿಬರುತ್ತದೆ. ಮಳೆ, ಮರ,ಆಕಾಶ ಮತ್ತು ಭೂಮಿಗಳನ್ನು ಬಳಸಿಬಂದ ಕವಯತ್ರಿ ಎಲ್ಲಿಯೂ ನಿಲ್ಲುವುದಿಲ್ಲ. ಪ್ರಕ್ರತಿಯೇ ಅವರಿಗೆ ಮೆಟಾಫರ್. “ನದಿ ಹರಿಯುತಿರಲಿ” ಸಮಗ್ರ ಕಾವ್ಯ ಸಂಪುಟ ಇವರದಾಗಿದೆ. ಸೇತುವೆಗಳಿರುವುದೇ […]
ತೋತಾಪುರಿ ಮೂವಿಯ ನಂಜಮ್ಮನ ಕಥೆ ವ್ಯಥೆ: ಕಿರಣ್ ಕುಮಾರ್ ಡಿ
ತೋತಾಪುರಿ ೨೦೨೨ ರಲ್ಲಿ ತೆರೆಕಂಡ ಕನ್ನಡ ಚಲನಚಿತ್ರ. ಈ ಚಲನಚಿತ್ರವನ್ನು ವಿಜಯ ಪ್ರಸಾದ್ ಅವರು ನಿರ್ದೇಶಿಸಿದ್ದರೆ, ಕೆ ಎ ಸುರೇಶ್ ರವರು ನಿರ್ಮಾಪಕರಾಗಿರುತ್ತಾರೆ. ಈ ಚಲನಚಿತ್ರದಲ್ಲಿ ಜಗ್ಗೇಶ್, ಡಾಲಿ ಧನಂಜಯ, ಸುಮನ್ ರಂಗನಾಥನ್, ಅದಿತಿ ಪ್ರಭುದೇವ ಮತ್ತು ಮುಂತಾದವರು ನಟನೆ ಮಾಡಿರುತ್ತಾರೆ. ಈ ಚಲನಚಿತ್ರದಲ್ಲಿ ಸ್ವತಃ ವಿಜಯ ಪ್ರಸಾದ್ ರವರು ತಮ್ಮ ಬಾಲ್ಯದಿಂದ ಅರಿವು ಬರುವವರೆಗೂ ನೋಡಿದ ಜಾತಿ ಸಂಘರ್ಷಗಳನ್ನು ಮತ್ತು ಅರಿವು ಬಂದ ಮೇಲೆ ಆದ, ಅದೇ ಜಾತಿ ಸಂಘರ್ಷಗಳ ಅನುಭವವನ್ನ ದೃಶ್ಯರೂಪಕ್ಕೆ ಅಳವಡಿಸಿ ಕೊಟ್ಟಿದ್ದಾರೆ. […]
ಶಂಕರ್ ಸಿಹಿಮೊಗ್ಗೆ ಅವರ “ದೇವರ ಕಾಡು” ಕಥೆಯ ವಿಶ್ಲೇಷಣೆ: ಅನುಸೂಯ ಯತೀಶ್
ಶಂಕರ್ ಸಿಹಿಮೊಗ್ಗೆ ಅವರ ಕವಿತೆ, ಲೇಖನ, ಕಥೆ ಸೇರಿದಂತೆ ಯಾವುದೇ ಪ್ರಕಾರಗಳನ್ನು ಓದಿದರೂ ನಮಗೆ ವೈಚಾರಿಕತೆಯ ವಿಚಾರಗಳು, ಚಿಂತನಾಶೀಲ ಅಭಿವ್ಯಕ್ತಿ ಹಾಗೂ ವೈಜ್ಞಾನಿಕ ತಳಹದಿ ಬಹುವಾಗಿ ಗೋಚರಿಸುತ್ತವೆ. ಬಹುಶಃ ಇವರು ವಿಜ್ಞಾನ ವಿದ್ಯಾರ್ಥಿಯಾಗಿದ್ದರ ಫಲಶೃತಿಯಿರಬಹುದು. ಅಂತಹುದೇ ಒಂದು ನೆಲೆಗಟ್ಟಿನಲ್ಲಿ ಸೃಷ್ಟಿಯಾದ ಕಥೆ ಶಂಕರ್ ಸಿಹಿಮೊಗ್ಗೆ ಅವರ ಈ ‘ದೇವರ ಕಾಡು’. ಇದು ಮಾನವನ ದುರಾಸೆಯ ಫಲಿತವಾಗಿ ಪರಿಸರ ವಿನಾಶದ ಅಂಚಿಗೆ ತಲುಪುತ್ತಿರುವ ಆಘಾತಕಾರಿ ಸಂಗತಿಯನ್ನು ತಮ್ಮ ಪರಿಸರ ಪ್ರೀತಿ ಮತ್ತು ವೈಚಾರಿಕ ಪ್ರಜ್ಞೆಯಡಿಯಲ್ಲಿ ಕಥಾನಕವಾಗಿಸಿದ್ದಾರೆ. ಅಪ್ಪಟ ಗ್ರಾಮೀಣ […]
ಬೈಸಿಕಲ್ ಥೀವ್ಸ್ ವಿಮರ್ಶೆ: ಕಿರಣ್ ಕುಮಾರ್ ಡಿ
‘ಬೈಸಿಕಲ್ ಥೀವ್ಸ್’ ೧೯೪೮ರಲ್ಲಿ ಇಟಾಲಿಯನ್ ಭಾಷೆಯಲ್ಲಿ ತೆರೆಕಂಡ ಚಲನಚಿತ್ರ. ಇಟಾಲಿಯಲ್ಲಿ “ಲಾದ್ರಿ ದಿ ಬೈಸಿಕ್ಲೆಟ್” ಹೆಸರಿನಲ್ಲಿ ತೆರೆಕಂಡಿತು. ಚಲನಚಿತ್ರದ ಕಥೆಯನ್ನು ಸಿಸೇರ್ ಜವಟ್ಟಿನಿಯವರು ೧೯೪೬ರಲ್ಲಿ ಪ್ರಕಟಗೊಂಡ “ಲಾದ್ರಿ ದಿ ಬೈಸಿಕ್ಲೆಟ್” ಕಾದಂಬರಿಯಿಂದ ಅಳವಡಿಸಿಕೊಂಡು ಬರೆದಿದ್ದಾರೆ. ಈ ಚಲನಚಿತ್ರವನ್ನು ವಿಟ್ಟೋರಿಯಾ ಡಿ ಸಿಕಾ ಅವರು ನಿರ್ದೇಶಿಸಿದ್ದಾರೆ. ಈ ಚಲನಚಿತ್ರ ೨ನೇ ವಿಶ್ವಯುದ್ಧದ ನಂತರ ತೆರೆಕಂಡಿದ್ದು. ೨ನೇ ವಿಶ್ವಯುದ್ಧ ಮುಗಿದ ಮೇಲೆ ಇಟಾಲಿಯಲ್ಲಿ ಎದುರಾದ ಉದ್ಯೋಗದ ಸಮಸ್ಯೆಯನ್ನು ಮತ್ತು ಬಡತನವನ್ನು ಹಲವಾರು ಪಾತ್ರದ ಮೂಲಕ ಹೇಳುತ್ತದೆ ಈ ಚಲನಚಿತ್ರ. ಚಲನಚಿತ್ರದ […]
“ನೇರ ವ್ಯಕ್ತಿತ್ವ ಶಕ್ತಿಯೇ…?? “: ರೇಖಾ ಶಂಕರ್.
ಆತ್ಮೀಯ ಓದುಗರೇ, ನಾನಿವತ್ತು ಹೇಳ್ತಿರೊ ವಿಷ್ಯ ಅಂದ್ರೆ ನೇರ ವ್ಯಕ್ತಿತ್ವದ ಬಗ್ಗೆ, ಅದೇ ಇದ್ದಿದ್ದು ಇದ್ದಂಗೆ ಹೇಳುದ್ರೆ ಎದ್ ಬಂದ್ ಎದೆಗೆ ಒದ್ರಂತೆ ಅಂತ ಗಾದೆ ಹೇಳ್ತಾರಲ್ಲ. ಅದೇ ವಿಷಯ…., ಅದಕ್ಕೆ ನೇರ ನುಡಿಯ ವ್ಯಕ್ತಿತ್ವ ಅಂತ್ಲೂ ಹೇಳ್ಬೌದು. ನೋಡೋಕೆ ಮನುಷ್ಯ ಒಂದೆ ಥರ ಕಾಣ್ತಿದ್ರೂ ಅವನಲ್ಲಿ ಇರೊ ಗುಣ ಸ್ವಭಾವಗಳು ವಿಭಿನ್ನವಾಗಿರತ್ತೆ, ಅವ ನಡೆಯೊ ಹಾದಿ ಆಡುವ ಮಾತು ತನ್ನ ನೋಡುವ ನೋಟ ಒಟ್ಟಾರೆ ತನ್ನ ಬದುಕುವ ಶೈಲಿಯನ್ನೆ ವಿಭಿನ್ನವಾಗಿಟ್ಕೊಂಡಿರ್ತಾನೆ. ” ಲೋಕೊ ಭಿನ್ನ ರುಚಿಃ […]
ನಾಸಿಕ ಪುರಾಣ: ಡಾ.ವೃಂದಾ ಸಂಗಮ್,
ನಾಸಿಕದಾಗ ಅಂತ ನಮ್ಮ ಶೀನೂ ಮಾಮಾ ಮಾತು ಶುರು ಮಾಡಿದರೂಂದರ, ನಾವೆಲ್ಲಾ, ಮೂಗಿನ ಮೇಲೊಂದು ಬೆರಳಿಟ್ಟುಕೊಂಡು ಕೂತಿರಬೇಕು. ಯಾಕಂದರ ನಮ್ಮ ಶೀನೂ ಮಾಮಾ ಅಂದರ ಅಸಾಧಾರಣ ವ್ಯಕ್ತಿ. ಹಂಗಂತ, ಭಾಳ, ಭಾಳ ಸಾಧನಾ ಮಾಡ್ಯಾರ ಅಂತಲ್ಲ. ಸೀದಾ ಹಾದಿಯವರಲ್ಲ. ಸೊಟ್ಟ ಮೂಗಿನವರು. ಅಂದರ, ಹೀಂಗ, ಮಾತು ಶುರು ಮಾಡಿದಾಗ, ನಾವು ಯಾವ ರೀತಿ ವಿಚಾರ ಮಾಡಿದರೂ, ಇವರು ಈ ವಿಷಯದ ಹರಟಿ ಪ್ರಾರಂಭಿಸಬಹುದು ಅಂತ ಒಂದು ಅಂದಾಜು ಇಟ್ಟಕೊಂಡಿದ್ದರ, ಅದನ್ನೆಲ್ಲಾ, ಮುರದು, ಹೊಸಾ ದಾರಿಯೊಳಗೇನೇ ಹರಟೀ ಪ್ರಾರಂಭ […]
ಸಂಕ್ರಮಣ: ಡಾ. ವೃಂದಾ ಸಂಗಮ್
ಎಲ್ಲಾ ಕತೀಗಳೂ ಸಹ ಒಂದೂರಾಗ, ಅಂತ ಶುರುವಾಗೋ ಹಂಗ, ಹರಟೆಗಳು ಮಾತ್ರ ನಮ್ಮೂರಾಗ ಅಂತ ಶುರುವಾಗತಿರಬೇಕು. ನಮ್ಮೂರಾಗ ಅಷ್ಟ ಅಲ್ಲ, ನಾವು ಸಣ್ಣವರಿದ್ದಾಗ, ಅಂತನೂ ಇರತಾವ. ಯಾಕಂದರ, ಸಣ್ಣವರಿದ್ದಾಗ ಇದ್ದ ಕುತೂಹಲ, ಗಳಿಸಿದ ವಿಶೇಷ ಅನುಭದಷ್ಟು ಮುಂದಿನ ಜೀವನದಾಗ ಇರೋದಿಲ್ಲ. ಹಬ್ಬ ಹರಿದಿನಗಳ ನೆನಪಂತೂ ಬಾಲ್ಯದ ಅನುಭವಕ್ಕಿಂತಾ ಮುಂದ ಯಾವುದೂ ನೆನಪಿರೋದಿಲ್ಲ. ಮತ್ತ, ಅದನ್ನ ಹಂಚಿಕೊಳ್ಳೋದರಾಗೂ ಇರತದ. ಹಂಗನ ಇದು ಸಂಕ್ರಮಣ ಹಬ್ಬ. ಸಂಕ್ರಮಣ ಅಂದರ, ಇರೋ ಹನ್ನೆರಡು ರಾಶಿಗಳೊಳಗ, ಪ್ರತಿಯೊಂದು ರಾಶಿಯೊಳಗ ಸೂರ್ಯ ಚಲಸತಾನ, ಅಂದರ […]
ಯುವ ಮಂದಿಯಲ್ಲಿ ತಂತ್ರಜ್ಞಾನ ಶಿಕ್ಷಣದ ಕೊರತೆ: ಕಿರಣ್ ಕುಮಾರ್ ಡಿ
ಯುವ ಪೀಳಿಗೆಯನ್ನು ದೇಶದ ಶಕ್ತಿ ಎಂದು ಹೇಳುತ್ತಾರೆ. ಅನೇಕ ಮಹನೀಯರು ಯುವ ಸಮೂಹವನ್ನು ದೇಶದ ಭವಿಷ್ಯ ಎಂದು ಕರೆದಿದ್ದಾರೆ. ದೇಶ ಕಟ್ಟಲು ಈ ಯುವಸಮೂಹ ಬಹಳ ದೊಡ್ಡ ಪಾತ್ರವನ್ನು ನಿಭಾಯಿಸುತ್ತಾರೆ. ನಮ್ಮ ದೇಶದ ಸಂಪತ್ತನ್ನು ಹೆಚ್ಚಿಸಲು ಈ ಯುವಸಮೂಹ ಬಹಳ ಶ್ರಮ ವಹಿಸುತ್ತಾರೆ. ನಮ್ಮ ದೇಶದ ಒಂದಿಷ್ಟು ಯುವಸಮೂಹ ಬಹಳಷ್ಟು ಸಾಧನೆ ಮತ್ತು ಅವಿಷ್ಕಾರಗಳನ್ನು ಮಾಡ್ಡಿದ್ದಾರೆ. ನಮ್ಮ ದೇಶದ ಜನಸಂಖ್ಯೆ ೧೩೦ ಕೋಟಿ ಅದರಲ್ಲಿ ಯುವಸಮೂಹ ೬೦ ಕೋಟಿಗೂ ಹೆಚ್ಚು. ಈ ಎಲ್ಲಾ ಯುವ ಮಂದಿಯಲ್ಲಿ ಎಷ್ಟು […]
ಯಾವುದೇ ಸಮಸ್ಯೆಯಿಂದಲೂ ಹೊರ ಬರುವ ಮಾರ್ಗ: ಕೆ. ಶ್ರೀನಿವಾಸ ರೆಡ್ಡಿ
ಬದುಕಿನಲ್ಲಿ ಪರಿವರ್ತನೆಯೆಂಬುದು ನಿರಂತರವಾಗಿದೆ. ಈ ಪರಿವರ್ತನೆಗಳು ಸವಾಲುಗಳನ್ನು ನಾವು ಬಹುತೇಕ ಸಮಸ್ಯೆಗಳು ಎಂತಲೇ ಪರಿಗಣಿಸುತ್ತೇವೆ. ಆದ್ದರಿಂದಲೇ ನಾವು ಅದರಿದ ಬಳಲುವುದು ಕುಗ್ಗಿಹೋಗುವುದೇ ಇದೆ. ಇದರಿಂದ ನಮಗೆ ಮತ್ತೂ ಹಾನಿಯಾಗುತ್ತದೆ. ಸವಾಲನ್ನು ಎದುರಿಸಲು ಅಗತ್ಯವಾಗಿರುವ ಸಂಪನ್ಮೂಲಗಳನ್ನು ನಾವು ದುರ್ಬಲಗೊಳಿಸಿಕೊಳುತ್ತೇವೆ. ಈಗ ನಾವು ಮಾಡುವುದಾದರೂ ಏನು? ಗಮನಿಸಿದರೆ ಇಲ್ಲಿ ಎಲ್ಲವೂ ಫಲಿತಾಂಶಗಳೇ ಆಗಿವೆ. ನಮ್ಮ ದೃಷ್ಟಿಯಲ್ಲಿ ಸೋಲೆಂದರೆ ನಾವು ಅಂದುಕೊಂಡದ್ದು ಆಗದಿರುವುದು. ಸಮಸ್ಯೆಯೆಂದರೆ ನಾವು ಅದನ್ನು ಎದುರಿಸಲಾರವೇನೋ ಇದರಿದ ನಮಗೆ ಹಾನಿಯೇ ಆಗುವುದೇನೋ ಹಾನಿಯಾದರೆ ಏನು ಮಾಡುವುದು ಎಂಬ ಊಹೆ […]
ಜಾದು ಕಾರ್ಯಕ್ರಮ: ಹೆಚ್. ಶೌಕತ್ ಆಲಿ ಮದ್ದೂರು
ಒಂದು ದಿನ ಶಾಲೆಗೆ ಒಬ್ಬ ಜಾದುಗಾರ ಬಂದ. ಬಂದವನೇ ಅದು ಇದು ಎನ್ನದೆ ಸೀದಾ ತನ್ನ ಪರಿಚಯ ಮಾಡಿಕೊಂಡ “ಎಲ್ಲರಿಗೂ ನಮಸ್ಕಾರ ನನ್ನ ಹೆಸರು ರಾಜ, ನಾನು ಮನರಂಜನೆಗಾಗಿ ಜಾದು ಮಾಡುತ್ತೇನೆ. ಶಾಲೆಯ ಮಕ್ಕಳಿಗೆ ಒಂದು ಅವಧಿ ಬಿಡುವು ಮಾಡಿಕೊಡಿ ಹಾಗೆ ಮಕ್ಕಳನ್ನು ಒಂದು ಕಡೆ ಸೇರಿಸಿ, ನಾನು ನಿಮ್ಮಿಂದ ಏನನ್ನು ನಿರೀಕ್ಷಿಸುವುದಿಲ್ಲ ದಯಮಾಡಿ ಅವಕಾಶ ಮಾಡಿಕೊಡಿ ಮೇಡಂ “ಎಂದು ಮುಖ್ಯ ಶಿಕ್ಷಕಿಯಲ್ಲಿ ಬೇಡಿಕೊಂಡಾಗ ಮುಖ್ಯ ಶಿಕ್ಷಕಿ ಕೆಲವು ಶರತ್ತುಗಳನ್ನು ಹೇಳಿ ಸಮಯ ಒಂದು ಅವಧಿ ಮಾತ್ರವೇ […]
ಬಸವಣ್ಣನ ವಚನಗಳಲ್ಲಿ ‘ಅವಳು’: ಮನು ಗುರುಸ್ವಾಮಿ
“ಹೆಣ್ಣಿನ ಚಂಚಲ ಮನಸ್ಥಿತಿಯ ಮೇಲೆ ಬಸವಣ್ಣನವರ ವಚನಗಳ ಪ್ರಯೋಗ”ಅವಳ ವಚನ ಬೆಲ್ಲದಂತೆ!ಹೃದಯದಲಿಪ್ಪುದೆಲ್ಲಾ ನಂಜು ಕಂಡಯ್ಯ!!ಕಂಗಳಲೊಬ್ಬನ ಕರೆವಳು ಮನದಲೊಬ್ಬನ ನೆನೆವಳು,ವಚನದಲೊಬ್ಬನ ನೆರೆವಳು!ಇಂತಿವಳ ತನು ಒಂದೆಸೆ, ಮನ ಒಂದೆಸೆ, ಮಾತೊಂದೆಸೆ!!ಈ ಮಾನಿಸಗಳ್ಳಿಯ ನನ್ನವಳೆಂದು ನಂಬುವಕುರಿನರರನೇನೆಂಬೆನಯ್ಯ ಕೂಡಲಸಂಗಮದೇವ. ಬಸವಣ್ಣನವರ ಇದೊಂದು ವಚನ ನನ್ನನ್ನು ತುಂಬಾ ಆಳವಾಗಿ ಚಿಂತನೆಗೆ ಗುರಿ ಮಾಡಿದೆ. ಮಹಾಮಾನವತಾವಾದಿಯಾದ ಬಸವಣ್ಣನವರ ವಚನವೊಂದು ದೃಢ ಮನಸ್ಸಿಲ್ಲದ ಹೆಣ್ಣೊಬ್ಬಳ ಬಗ್ಗೆ ಮಾತನಾಡುತ್ತಿರುವುದು, ‘ಹೆಣ್ಣು ಚಂಚಲೆ’ ಎಂಬ ವಿಚಾರವನ್ನು ಒತ್ತಿ ಹೇಳುತ್ತಿರುವುದು ಬಹಳ ಅಚ್ಚರಿ ತಂದಿತು. ಅನುಭವ ಇಲ್ಲದವ ಕವಿಯಾಗಲಾರ ಎಂಬ ಮಾತಿನಂತೆ […]
ಮಂಜಿನಂತೆ ಮರೆಯಾದ ಮಂಜುಳಾ: ಎಂ. ಜಿ. ರವೀಂದ್ರ
ಚಂದನವನದ ಮಂಜುಳಾ ರವರು ಮರೆಯಾಗಿ 35 ವರ್ಷಗಳು ಗತಿಸಿದರೂ ಅವರ ಮನೋಜ್ಞ ಪಾತ್ರಗಳು ಇಂದಿಗೂ ಜೀವಂತ. ಸ್ವಾಭಿಮಾನಿ ಹೆಣ್ಣಿನ ಪಾತ್ರಗಳಲ್ಲಿ ಪರಕಾಯ ಪ್ರವೇಶ ಮಾಡಿದಂತೆ ಅಭಿನಯಿಸುತ್ತಿದ್ದರು. ಸುಮಾರು 100ಕ್ಕಿಂತ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಎರಡು ಕನಸು, ಸಂಪತ್ತಿಗೆ ಸವಾಲ್, ಮೂರುವರೆ ವಜ್ರಗಳು ಮುಂತಾದ ಚಿತ್ರಗಳಲ್ಲಿ ಡಾ. ರಾಜಕುಮಾರ್ ರವರ ಜೊತೆ ನಟಿಸಿ ತಮ್ಮ ಅಭಿನಯ ಪ್ರೌಢ ಪ್ರತಿಭೆ ಪ್ರದರ್ಶಿಸಿ ಇಂದಿಗೂ ಚಿರಸ್ಥಾಯಿಯಾಗಿ ಜನಮಾನಸದಲ್ಲಿ ಉಳಿದಿದ್ದಾರೆ. ವಿಷ್ಣುವರ್ಧನ್, ಶಂಕರನಾಗ್, ಶ್ರೀನಾಥ್ ಮುಂತಾದ ನಟರ ಜೊತೆಗೆ ಅತ್ಯುತ್ತಮ ವಾಗಿ ಆಭಿನಯಿಸಿ […]
ವಿಶ್ವ ಸಾಹಿತ್ಯ ಎಂದರೇನು?: ಕಿರಣ್ ಕುಮಾರ್ ಡಿ
ವಿಶ್ವಸಾಹಿತ್ಯ ಎಂಬ ಪದವನ್ನು ಗೋಥೆ ಅವರು ಮಂಡಿಸಿದರು, ಅವರು ಜಾಗತಿಕ ಆಧುನಿಕತೆಯ ತಯಾರಿಕೆಯಲ್ಲಿ, ಕಾವ್ಯವು ಸಾರ್ವತ್ರಿಕ ಅನುಭೋಗವೆಂದು ಭಾವಿಸಿದರು. ಗೊಥೆ ಪ್ರಕಾರ ರಾಷ್ಟ್ರೀಯ ಸಾಹಿತ್ಯ ಈಗ ಅರ್ಥಶೂನ್ಯ ಪದವಾಗಿದೆ. ಗೊಥೆಯವರನ್ನು ವ್ಯಾಪಕವಾಗಿ ಜರ್ಮನ್ ಭಾಷೆಯ ಶ್ರೇಷ್ಠ ಮತ್ತು ಅತ್ಯಂತ ಪ್ರಭಾವಶಾಲಿ ಬರಹಗಾರ ಎಂದು ಪರಿಗಣಿಸಲಾಗಿದೆ.ಗೊಥೆಯ ಪದಗುಚ್ಛವು ವಿಶ್ವ ಸಾಹಿತ್ಯ ಎಂದರೇನು?, ಪಶ್ಚಿಮ ಯೂರೋಪ್ ಮತ್ತು ಭೂಗೋಳದ ಇತರೆ ಭಾಗಗಳ ನಡುವೆ ಯಾವ ಸಂಬಂಧವಿದೆ? , ಪ್ರಾಚೀನತೆ ಮತ್ತು ಆಧುನಿಕತೆಯ ನಡುವೆ ಯಾವ ಸಂಬಂಧವಿದೆ?, ಸಾಮೂಹಿಕ ಸಂಸ್ಕೃತಿ ಮತ್ತು […]
ಭಾವನೆಗಳ ಭಾವೋದ್ವೇಗ: ರೇಖಾ ಶಂಕರ್
ಮನಸು ತಾ ತಿಳಿದದ್ದು ಅಂತರಂಗದಲ್ಲಿ ಕೂಡಿಹಾಕಿ ಕಲೆಹಾಕಿ ಒಂಚೂರು ಮುದವಾಗಿಸಿ ಇಮ್ಮಡಿಗೊಳಿಸಿಕೊಂಡು ಅರುಹುವ ಮಾತಿನ ಅನಾವರಣವೇ ” ಭಾವನೆ” . ಭಾವನೆ ಎಂದರೆ ವ್ಯಕ್ತಿಯೊಳಗೆ ಅಡಗಿದ್ದ ವಸ್ತುವಿನ ಅಥವಾ ಸನ್ನಿವೇಶಕ್ಕೆ ಸಂಬಂಧಿಸಿ ನೀಡುವ ಪ್ರತಿಕ್ರಿಯೆ. ಭಾವನೆಯು ಸಂತೋಷ, ನೋವು, ಆಕರ್ಷಣೆ ಅಥವಾ ಮೋಹಿತದಿಂದ ಗುರುತಿಸಲ್ಪಟ್ಟ ಮಾನಸಿಕ ದೈಹಿಕ ಪ್ರತಿಕ್ರಿಯೆಗಳ ಸೂಚಕ.ಇದು ಪ್ರತಿಕ್ರಿಯೆಗಳ ಅಸ್ತಿತ್ವವನ್ನು ತಿಳಿಸಬಹುದು ಆದರೆ ಅದರ ಸ್ವರೂಪ ಅಥವಾ ತೀವ್ರತೆಯ ಬಗ್ಗೆ ಏನನ್ನೂ ಸೂಚಿಸುವುದಿಲ್ಲ. ಭಾವನೆಯು ಉತ್ಸಾಹ ಅಥವಾ ನಿರುತ್ಸಾಹಗಳ ಬಲವಾದ ಸೂಚ್ಯಾರ್ಥವನ್ನು ಹೊಂದಿರುತ್ತದೆ ಹಾಗೂ […]
ಸಮಯ ಪ್ರಜ್ಞೆ ಇಲ್ಲದ ಕಾಲಭಕ್ಷಕರು: ಎಂ. ಆರ್, ವೆಂಕಟರಾಮಯ್ಯ
‘ಕಾಲ’ ಎಂಬ ಪದಕ್ಕೆ ಸಮಯ, ವೇಳೆ, ಅವಧಿ, ಯುಗ, ಪ್ರಹರ, ಎಂಬ ವಿವಿಧಾರ್ಥಗಳುಂಟು. ಸಮಯವೆಂಬುದು ಬಹು ಅಮೂಲ್ಯವಾದ ಸಂಪತ್ತು. ಮತ್ಯಾವುದೇ ವಸ್ತುವನ್ನು ಕಳೆದುಕೊಂಡರೂ ನಾವು ಅದನ್ನು ಸಂಪಾದಿಸಬಹುದು. ಆದರೆ ಒಮ್ಮೆ ಕಳೆದುಹೋದ ಕಾಲ, ಸಮಯವನ್ನು ಸಂಪಾದಿಸಲಾರೆವು. ಕಳೆದುಹೋದ ಕಾಲ ಮತ್ತೆಂದೂ ಹಿಂತಿರುಗುವುದಿಲ್ಲ. ‘ಟೈಮ್ ಅಂಡ್ ಟೈಡ್ ವೈಟ್ಸ್ ಫಾರ್ ನನ್, ಟೈಮ್ ಈಸ್ ಪ್ರೆಶಸ್’ ಮೊದಲಾದ ಅನುಭವೀ ಹಿರಿಯರ ವಾಕ್ಯಗಳೆಲ್ಲವೂ ನಮಗೆ ಚಿರಪರಿಚಿತ ವಾದದ್ದೇ. ಆದರೂ, ಸಮಯ ಪಾಲನೆಯಲ್ಲಿ, ಸಮಯವನ್ನು ಸದುಪ ಯೋಗಪಡಿಸಿಕೊಳ್ಳುವುದರಲ್ಲಿ ಬಹಳಷ್ಟು ಜನರು ಬಹು […]
ದೇಶಪ್ರೇಮವೆನ್ನುವುದು ಪ್ರತಿಯೊಬ್ಬ ಪ್ರಜೆಗೂ ಆತ್ಮಾಭಿಮಾನದ ಸಂಕೇತ: ಶಿವಲೀಲಾ ಹುಣಸಗಿ ಯಲ್ಲಾಪುರ
“ಜನನೀ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸಿ” ನಿಜ ತಾನೆ? ಎದೆಯ ಸೀಳಿ ಹುಡುಕದಿರಿಮದ್ದು ಗುಂಡುಗಳ ಬಳಸದಿರಿಬಂದೂಕಿನ ಎದೆಗೂಡಲಿಪ್ರೀತಿ, ಅನುರಾಗ, ಅನುಬಂಧ ಚಿಗುರಿದೇಶವೆಂಬ ಆತ್ಮಾಭಿಮಾನ ಹೊಮ್ಮಿನರನಾಡಿಗಳಲಿ ಚೈತನ್ಯ ತುಂಬಲಿ. . . ದೇಶಪ್ರೇಮವೆನ್ನುವುದು ಪ್ರತಿಯೊಬ್ಬ ಪ್ರಜೆಗೂ ಆತ್ಮಾಭಿಮಾನದ ಸಂಕೇತ. ದೇಶ ರಕ್ಷಣೆಯಲ್ಲಿ ಇದರ ಪಾತ್ರ ಪ್ರಮುಖವಾದದ್ದು. ಕೇವಲ ದೇಶ ರಕ್ಷಣೆಯಷ್ಟೇ ಅಲ್ಲ ಸಮಾಜದ ರಕ್ಷಣೆಯಲ್ಲೂ ಮುಖ್ಯವಾದುದು. ಹಾಗಿದ್ದ ಮೇಲೆ ದೇಶಪ್ರೇಮ ಎಂದರೇನು? ಯಾಕಾಗಿ ದೇಶವನ್ನು ಪ್ರೀತಿಸಬೇಕು? ದೇಶ ಪ್ರೀತಿಸುವುದರ ಪ್ರತಿಫಲವೇನು? ವಿಶ್ವದಾದ್ಯಂತ ಅನೇಕ ದಾರ್ಶನಿಕರು ತಮ್ಮದೇ ಆದ ರೀತಿಯಲ್ಲಿ ದೇಶ […]
ಪ್ರೀತಿಯು ನೀಡಿದ ಕಣ್ಣು: ಮನು ಗುರುಸ್ವಾಮಿ
ರಾಧಾ ಕೃಷ್ಣರ ಪ್ರೇಮವೆಂದರೆ ಅದೊಂದು ಅಪೂರ್ವ ಕಾವ್ಯಾ; ಭಾಗಶಃ ಹೊಸಗನ್ನಡ ಸಾಹಿತ್ಯದಲ್ಲಿ ಈ ಪ್ರೇಮ ಕಾವ್ಯದ ಬಗ್ಗೆ ಹಾಡಿ ಹೊಗಳದ ಕವಿಗಳಿಲ್ಲ. ಈ ಪ್ರೇಮಕಥೆಯನ್ನು ಕೇಳಿ ತಣಿಯದ ಕನ್ನಡ ಮನಗಳಿಲ್ಲ. ರಾಧೆ ಕೃಷ್ಣನೇ ಆಗಿ ಕೃಷ್ಣನನ್ನು ಆರಾಧಿಸುತ್ತಾ, ಪ್ರೇಮಿಸುತ್ತಾ, ಸಂಭ್ರಮಿಸುತ್ತಾ ಬಂದ ಕಥೆಯೇ ಈ ರಾಧಾಕೃಷ್ಣ ಪ್ರೇಮ. ಕುವೆಂಪು, ಪು.ತಿ.ನ, ಕೆಎಸ್ ನರಸಿಂಹಸ್ವಾಮಿ, ಜಿ ಎಸ್ ಶಿವರುದ್ರಪ್ಪ , ಎನ್ ಎಸ್ ಲಕ್ಷ್ಮೀನಾರಾಯಣ ಭಟ್ಟ, ವೆಂಕಟೇಶಮೂರ್ತಿ ಮೊದಲಾದ ಹಲವಾರು ಕವಿಗಳು ತಮ್ಮ ಕಾವ್ಯಗಳಲ್ಲಿ ರಾಧಾಕೃಷ್ಣ ಪ್ರೇಮವನ್ನು ಬಹಳ […]
ಕಳೆದುಕೊಂಡಾಗಲೇ ಪಡೆದುಕೊಳ್ಳುವುದು !: ಡಾ. ಹೆಚ್ ಎನ್ ಮಂಜುರಾಜ್,
ಸಾಧನೆ ಎಂದರೆ ಗಳಿಸಿಕೊಳ್ಳುವುದಲ್ಲ; ಕಳೆದುಕೊಳ್ಳುವುದು ಎಂದರು ಗುರುಗಳು. ನನಗೆ ಅಚ್ಚರಿಯಾಯಿತು. ಲೌಕಿಕಾರ್ಥದಲ್ಲಿ ಇದನ್ನು ಹೇಳುತ್ತಿಲ್ಲ ಎಂದೂ ಮನದಟ್ಟಾಯಿತು! ಮಗುವೊಂದು ಹುಟ್ಟುತ್ತಲೇ ವಿಶ್ವಮಾನವ. ಬೆಳೆಯುತ್ತ ಅಲ್ಪಮಾನವ ಆಗುತ್ತದೆ; ಮತ್ತೆ ಏನೆಲ್ಲ ಸಂಕೋಲೆಗಳನ್ನು ಕಳಚಿಕೊಂಡು ವಿಶ್ವಮಾನವರಾಗಬೇಕು ಎಂದು ಕುವೆಂಪು ಅವರು ಹೇಳುತ್ತಿದ್ದುದು ಈ ಅರ್ಥದಲ್ಲೇ ಎಂದುಕೊಂಡೆ!! ಆಗವರು ಹೇಳಿದರು. ಸರಿಯಾಗಿ ಗುರುತಿಸಿದೆ. ಹಾಗೆ ನೋಡಿದರೆ ಇರುವುದು ಒಂದೇ ಲೋಕ. ಲೌಕಿಕ, ಅಲೌಕಿಕ, ಪಾರಲೌಕಿಕ ಅಂತೆಲ್ಲ ಇರುವುದಿಲ್ಲ. ಇದು ನಮ್ಮ ಮಾನಸಿಕ ಭ್ರಮೆ. ಹೇಗೆ ನೋಡುವುದೆಲ್ಲ ಮತ್ತು ಕೇಳುವುದೆಲ್ಲ ಸತ್ಯವಲ್ಲವೋ ಹಾಗೆ. […]
ಕಡಲ ಕಿನಾರೆಯಲಿ ನಿಂತು ನೀಲಾಕಾಶವ ಕಂಡಾಗ !: ಡಾ. ಹೆಚ್ ಎನ್ ಮಂಜುರಾಜ್
‘ಕಷ್ಟಕಾಲದಲಿ ಯಾರು ನಮ್ಮ ಜೊತೆ ಬಂದಾರು? ಕತ್ತಲಲಿ ನೆರಳು ಕೂಡ ನಮ್ಮನ್ನು ಬಿಟ್ಟು ಹೋಗುತ್ತದೆ!’ ಎಂಬ ಮಾತು ಸತ್ಯ. ಆದರೆ ಹಲವೊಮ್ಮೆ ನೆರಳು ಕೈ ಬಿಟ್ಟರೂ ಯಾರದೋ ಬೆರಳು ನಮ್ಮನ್ನು ಕಾಪಾಡುವಂಥ ಪವಾಡ ಈ ಜಗತ್ತಿನಲ್ಲಿ ಸದ್ದಿಲ್ಲದೆ ನಡೆಯುತ್ತಲೇ ಇರುತ್ತದೆ. ನಮ್ಮ ಜೀವಿತಾವಧಿಯಲ್ಲಿ ಇಂಥ ಅದೆಷ್ಟೋ ಅಪರಿಚಿತರು ಆಪದ್ಬಾಂಧವರಾಗಿ ಬಂದು ನಮ್ಮನ್ನು ನಿರಾಳಗೊಳಿಸಿರುತ್ತಾರೆ. ಆಪದ್ಬಾಂಧವ ಎಂದರೆ ಆಪತ್ತಿಗೆ ಆದವರೇ ನೆಂಟರು ಎಂದು. ಆಪತ್ತು ಎಂದರೆ ದಿಢೀರನೆ ಎದುರಾಗುವ ಕಷ್ಟಕಾಲ. ಇದು ಯಾರಿಗೆ ಬರುವುದಿಲ್ಲ? ಸಾಕ್ಷಾತ್ ಪ್ರಭು ಶ್ರೀರಾಮಚಂದ್ರನಿಗೂ […]
ಆಡಿ ಬಾ ನನ ಕಂದ ; ಅಂಗಾಲ ತೊಳೆದೇನು!: ಡಾ. ಹೆಚ್ ಎನ್ ಮಂಜುರಾಜ್,
ಮಕ್ಕಳನ್ನು ಕುರಿತು ನಮ್ಮ ಜನಪದರು ಇನ್ನಿಲ್ಲದಂತೆ ಹಾಡಿ ಹರಸಿದ್ದಾರೆ. ಜನವಾಣಿ ಬೇರು; ಕವಿವಾಣಿ ಹೂವು ಎಂದು ಆಚಾರ್ಯ ಬಿಎಂಶ್ರೀಯವರು ಹೇಳಿದಂತೆ, ಜನಪದ ಹಾಡು, ಗೀತ ಮೊದಲಾದ ಸಾಹಿತ್ಯದ ಸೃಷ್ಟಿಕರ್ತರು ಬಹುತೇಕ ಹೆಣ್ಣುಮಕ್ಕಳೇ. ಅದರಲ್ಲೂ ತವರು, ದಾಂಪತ್ಯ, ಬಡತನ, ದೇವರು, ಸೋದರರು, ಗಂಡ, ಗಂಡನಮನೆ ಹೀಗೆ ಜನಪದ ತ್ರಿಪದಿಗಳನ್ನು ಗಮನಿಸಿದರೆ ಸಾಕು, ನಮಗೆ ಅರ್ಥವಾಗುತ್ತದೆ. ಏಕೆಂದರೆ ಭಾರತೀಯ ಕುಟುಂಬ ವ್ಯವಸ್ಥೆ ಹಾಗಿತ್ತು. ಈಗಿನದೆಲ್ಲ ಮೈಕ್ರೋ ಫ್ಯಾಮಿಲಿ ಯುಗ. ಕೂಡು ಕುಟುಂಬ ಮತ್ತು ಹಿರಿಯರ ಯಾಜಮಾನ್ಯಗಳು ನಮ್ಮ ಕೌಟುಂಬಿಕ ಪದ್ಧತಿಯನ್ನು […]
ಗಾಡಿ ಹೋಟೆಲ್: ಎಸ್.ಗಣೇಶ್
ಸದಾಶಿವನಿಗೆ ಒಂದು ದೊಡ್ಡ ಚಟವಿತ್ತು. ತಿನ್ನೋ ಚಟ. ಯಾವಾಗಲೂ ಬಾಯಿ ಆಡ್ತಾನೇ ಇರಬೇಕು. ಅವರು, “ಗಾಡಿ ಹೋಟೆಲ್” ತಿಂಡಿ ಚಪಲ. ಮನೆಯಲ್ಲಿನ ಮೇವು ಹಿಡಿಸುತ್ತಿರಲಿಲ್ಲ. ಹೊರಗಡೆಯ ಯಾವುದೇ ತಿನಿಸು ಬಿಡುತ್ತಿರಲಿಲ್ಲ. ಬೇರೆ ಊರಿಗೆ ಹೋದರೂ.. ರಸ್ತೆ ಬದಿ ಕಾಣುತ್ತಿದ್ದ ಗಾಡಿ ಹೋಟೆಲ್ ಕಡೆಯೇ ಗಮನ. ಊಟದ ವಿಷಯಕ್ಕೆ ಎಷ್ಟೋ ಸಲ, ಮಡದಿ ಗಂಗಾಂಬ ಜೊತೆ ಜಗಳವಾಡಿಕೊಂಡು ಕಳೆದ ವರ್ಷ 12 ಬಾರಿ “ಗಾಡಿ ಹೋಟೆಲ್” ಜೊತೆ 1 ಬಾರಿಗೆ 1 ವಾರದಂತೆ ಸಂಸಾರ ಮಾಡಿದ ರೆಕಾರ್ಡ ಇದೆ. […]