ಗುಲಾಮಿ: ಗಿರೀಶ ಜಕಾಪುರೆ

ಮೂಲ : ಖಲೀಲ ಜಿಬ್ರಾನ್ ಕನ್ನಡಕ್ಕೆ : ಗಿರೀಶ ಜಕಾಪುರೆ ಮಾನವರು ಬದುಕಿನ ಗುಲಾಮರು. ಜೀವನದ ಜೀತದಾಳುಗಳು. ಈ ಬದುಕು ಅವರ ಹಗಲುಗಳಲ್ಲಿ ದುಃಖ ಮತ್ತು ಕ್ಲೇಶದ ಬಿರುಗಾಳಿಯಾಗಿ ಬೀಸುತ್ತದೆ, ರಾತ್ರಿಗಳಲ್ಲಿ ಕಣ್ಣೀರು ಮತ್ತು ಸಂತಾಪದ ಮಹಾಪೂರವಾಗಿ ನುಗ್ಗುತ್ತದೆ. ಏಳು ಸಾವಿರ ವರ್ಷಗಳಾದವು ನಾನು ಜನಿಸಿ. ಅಂದಿನಿಂದಲೂ ನಾನು ತಮ್ಮ ಕೈಕಾಲುಗಳಿಗೆ ಸುತ್ತಿದ ಭಾರದ ಬೇಡಿಗಳನ್ನು ಎಳೆಯುತ್ತ ಹೆಜ್ಜೆ ಹಾಕುತ್ತಿರುವ ಬದುಕಿನ ಗುಲಾಮರನ್ನು ಕಾಣುತ್ತಿದ್ದೇನೆ. ನಾನು ಭೂಮಿಯ ಪೂರ್ವಪಶ್ಚಿಮಗಳಲ್ಲಿ ಸುತ್ತಾಡಿದ್ದೇನೆ, ಜೀವನದ ನೆರಳು ಬೆಳಕುಗಳಲ್ಲಿ ದಿಕ್ಕೇಡಿಯಾಗಿ ಅಲೆದಿದ್ದೇನೆ. … Read more

ನಾನು ಮತ್ತೆ ನಾನಾದದ್ದು….!: ಶೀಲಾ. ಗೌಡರ

ಆಹಾ….! ನಾನೂ ಸಾಮಾನ್ಯ ಗೃಹಿಣಿಯರಂತೆ ಸುಮ್ನೆ ಮನೆ ನಿಭಾಯಿಸಿಕೊಂಡು, ಮನೇಲಿ ಹಾಯಾಗಿ ಇರಬಹುದಿತ್ತು, ಅಂತ ಎಷ್ಟೋಸಲ ಅನಿಸಿದ್ದುಂಟು. ಕೆಲಸ ಬೇಡ ಅಂತ ಬಿಡುವಂತಿಲ್ಲ…! ಸರಕಾರಿ ಕೆಲಸ…! ಮೇಲಾಗಿ ಶಿಕ್ಷಕ ವೃತ್ತಿ…. ಎಷ್ಟೊಂದು ಸುರಕ್ಷಿತ, ನೆಮ್ಮದಿ. ಆದರೆ ಕೆಲವೊಮ್ಮೆ ಮನೆ, ಶಾಲೆ ಎರಡನ್ನೂ ನಿಭಾಯಿಸುವಾಗ ಉಶ್ಯಪ್ಪ ಅಂತ ಬಸವಳಿದು, ಕಾಲಿಗೆ ಗಾಲಿ ಕಟ್ಟಿ ಇಪ್ಪತ್ತು ವರ್ಷಗಳಿಂದಲೂ ಬಸ್ಸಿನ ಹಿಂದೆ ಓಡುವಾಗ, ಏನೋ ಟೆನ್ ಶನ್ ನಲ್ಲಿ ಮನೆಯವರ ಹತ್ರ ಬಯ್ಸಿಕೊಡಾಗ, ಮಕ್ಕಳ ಓದಿನ ಬಗ್ಗೆ-ಊಟದ ಬಗ್ಗೆ-ಆರೋಗ್ಯದ ಬಗ್ಗೆ ಸಮಸ್ಯೆ … Read more

ಈ ಕ್ಷಣದಿಂದಲೇ ನೆಪಗಳಿಗೆಲ್ಲ ಗುಡ್ ಬೈ. . . . : ಆಶಾ ಹೆಗಡೆ

ಇನ್ನೂ ನೆನಪಿದೆ ನನ್ನ ಬಗ್ಗೆ ಗೆಳೆಯ ಗೆಳತಿಯರು ಆಡುತ್ತಿದ್ದ ಮಾತುಗಳು. . . ”ಹೇ, ಎಷ್ಟು ಚೆನ್ನಾಗಿ ಕತೆ, ಕವನ ಬರೀತಿಯಾ” “ಓ drawing ಕೂಡ ಮಾಡ್ತಿಯಾ?” “ಅರೆ ಎಷ್ಟು ಚೆನ್ನಾಗಿ ಹಾಡು ಹೇಳತೀಯಾ”, ”ಇವತ್ತಿನ speech ಎಷ್ಟು ಚೆನ್ನಾಗಿತ್ತು”, ”ನೀನ್ ಬಿಡು all rounder “,,, ಇವತ್ತಿಗೆ ಈ ಹೊಗಳಿಕೆ ಬರೀ ಹಿತವಾಗಿ ನೋಯಿಸುವ ನೆನಪುಗಳು ಮಾತ್ರ. ಹವ್ಯಾಸಕ್ಕೆ ಒರೆ ಹಚ್ಚಿ, ಅದ ಪ್ರತಿಭೆಯಾಗಿ ಪರಿವರ್ತಿಸಿ ಎಡಬಿಡದೆ ಅದೇ ದಾರಿಯಲಿ ಮುನ್ನಡೆದು ಏನಾದರೊಂದು ಸಾದಿಸಿದ್ದು ಮಾತ್ರ … Read more

ಪರಿವರ್ತನೆ ನನ್ನಿಂದಲೇ . . . . .: ಜಯಲಕ್ಷ್ಮಿ ಕೆ. , ಮಡಿಕೇರಿ

” ನಿನ್ನ ಮಗನಿಗೆ ಎಷ್ಟು ಪರ್ಸೆಂಟು ಬಂತೂ . . ? 89% ?? ಅಯ್ಯೋ . . . ಇನ್ನು ಸ್ವಲ್ಪ ಓದಿದ್ದಿದ್ದರೆ 9ಂ% ಬರುತ್ತಿತ್ತು , ಹೋಗ್ಲಿ ಬಿಡು . . . ಇನ್ನೇನ್ ಮಾಡೋಕಾಗುತ್ತೆ . ನನ್ ಮಗಳಿಗೆ ಓದಿಸಿ ಓದಿಸಿ 98% ತೆಗೆಸೋ ಹೊತ್ತಿಗೆ ನಂಗೆ ಸಾಕಾಗಿ ಹೋಗಿತ್ತು. ಅಂದ ಹಾಗೆ ನಿನ್ನ ತಂಗಿ ಮಗಳೂ ಪಿ ಯು ಸಿ . . ಅಲ್ವಾ ? ಅವಳೆಷ್ಟು ಮಾರ್ಕ್ಸ್ ತಕೊಂಡಳು ??” … Read more

ಪರೀಕ್ಷೆಯಲ್ಲಿ ಪಾಸಾದವರೊಂದಿಗೆ ಫೇಲಾದವರೂ ಉತ್ತಮ ಸಾಧಕರು…: ವೀರಣ್ಣ ಮಂಠಾಳಕರ್, ಬಸವಕಲ್ಯಾಣ

ಪರೀಕ್ಷೆಯ ಫಲಿತಾಂಶ ಬಂದ ತಕ್ಷಣ ಅದೇಷ್ಟೋ ವಿದ್ಯಾರ್ಥಿಗಳು ಮಾರ್ಕ್ಸ್ ಕಡಿಮೆ ಬಂತು/ ಫೇಲಾದೆ ಎಂಬ ಕಾರಣಕ್ಕೆ ಮಾನಸಿಕ ಸ್ಥೈರ್ಯವನ್ನು ಕಳೆದುಕೊಳ್ಳದೇ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಬೇಕು. ಪಾಸಾದವರು, ರ್ಯಾಂಕ್ ಪಡೆದವರಷ್ಟೇ ಪ್ರತಿಭಾವಂತರಲ್ಲ. ನೆನಪಿರಲಿ ಫೇಲಾದವರೂ ಜೀವನದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ನೆನಪಿಸಿಕೊಂಡು, ಮುಂದಿನ ಗುರಿ-ಛಲದೊಂದಿಗೆ ಮುನ್ನುಗ್ಗಬೇಕು. ಜೀವನ ಮತ್ತು ಸಾಧನೆಗೆ ಶಿಕ್ಷಣವೊಂದೇ ಮುಖ್ಯವಲ್ಲ. ಕನಿಷ್ಠ ಓದು ಬರಹ ಕಲಿತವರೆಷ್ಟೋ ಶೈಕ್ಷಣಿಕ ವಿದ್ಯಾಭ್ಯಾಸದಲ್ಲಿ ಉತ್ತಮ ಬರಹಗಾರರಾಗಿ ರಾಜ್ಯ/ರಾಷ್ಟ್ರ ಮಟ್ಟದಲ್ಲಿ ಹೆಸರಾಗಿದ್ದಾರೆ. ಸಾಮಾಜಿಕ ಚಿಂತಕರಾಗಿ, ಪತ್ರಕರ್ತರಾಗಿ, ಪತ್ರಿಕಾ ಸಂಪಾದಕರಾಗಿ, ಹೋರಾಟಗಾರರಾಗಿ ಒಳ್ಳೆಯ … Read more

ಟ್ರೇನ್ ಪ್ರಯಾಣ: ಆಶಾಜಗದೀಶ್

ನನಗೆ ಪ್ರಯಾಣವೆಂದರೆ ಬಹಳ ಇಷ್ಟ. ಬಸ್ ಟ್ರೇನ್ ಕಾರ್ ಬೈಕ್… ಯಾವ್ದಾದ್ರೂ ಸರಿ ಹತ್ತಿ ಹೊರಟುಬಿಟ್ಟರೆ ಮುಗೀತು. ಯಾಕೆ ಅಂತ ಗೊತ್ತಿಲ್ಲ. ಅದರೆ ನನಗೆ ಬೀಸುವ ಗಾಳಿ ಅಂದ್ರೆ ಇಷ್ಟ, ತೊಟ್ಟಿಲ ಹಾಗೆ ತೂಗುವ ವಾಹನ ಇಷ್ಟ, ಪ್ರಯಾಣದ ನಿದ್ದೆ ಇಷ್ಟ, ನಾನಾ ಥರದ ಜನಗಳನ್ನು ನೋಡುವುದು ಇಷ್ಟ, ಹಿಂದಕ್ಕೆ ಜೋರಾಗಿ ಓಡುವ ಮರಗಳು ಇಷ್ಟ, ನಾನಾ ಥರದ ಪರಿಸರದ ಚಿತ್ರಣವನ್ನು ಕಣ್ತುಂಬಿಕೊಳ್ಳುವುದು ಇಷ್ಟ….. ಹೀಗೆ ಇಷ್ಟಗಳ ಸಾಲೇ ಇದೆ. ಅದರೊಂದಿಗೆ ಅಪರೂಪದ ಅನುಭವಗಳೂ ಸಿಗುತ್ತವೆ. ಇಂತಹ … Read more

ತಾಯಿಯ ಗರ್ಭವೆಂಬ ಪುಟ್ಟ ಪ್ರಪಂಚದಲ್ಲಿ: ಸಿಂಧು ಭಾರ್ಗವ್

ಒಂದು ಮಗುವಿನ ಜನನ ಯಾವ ತಾಯಿಯ ಗರ್ಭದಲ್ಲಿ ಆಗುತ್ತದೆ ಎಂಬುದು ಹೇಳಬರದು. ಹುಟ್ಟು ನಮ್ಮ ಕೈಯಲ್ಲಿ ಇರುವುದಿಲ್ಲ. ಜನಿಸಿದ ಮೇಲೆ ಹಡೆದ ಜನನಿಯ ಮುಖ ದರುಷನವಾಗುವುದು. ಅವಳು ನಮಗಾಗಿ ಎಷ್ಟೆಲ್ಲ ಕಷ್ಟ ಪಡುತ್ತಾಳೆ. ಅವಳ ತ್ಯಾಗ ಸಹನೆಗೆ ನಾವು ಎಂದಿಗೂ ಋಣಿಗಳಾಗಿರಬೇಕು. ಒಬ್ಬ ತಾಯಿ ತಾನು ಗರ್ಭವತಿ ಎಂದು ತಿಳಿದ ತತ್ಕ್ಷಣದಿಂದ ಮುಂದೆ ಜನಿಸುವ ಮಗುವಿನ ಬಗೆಗೆ ನೂರಾರು ಕನಸುಗಳನ್ನು ಕಟ್ಟಿಕೊಳ್ಳಲು ಶುರುಮಾಡುತ್ತಾಳೆ. ಜೊತೆಗೆ ತಂದೆಯಾಗುವವನೂ ಕೂಡ ಆ ಮಗುವಿನ ಬಗೆಗೆ ಸಾಕಷ್ಟು ಕನಸುಗಳನ್ನು ಹೆಣೆಯುತ್ತಾನೆ. ತಮ್ಮ … Read more

ಪುಟ್ಟಿಯ ಬೆಂಗಳೂರು: ನಾಗರಾಜನಾಯಕ ಡಿ.ಡೊಳ್ಳಿನ

ಬೆಂಗಳೂರು ಅಂದರೆ ಚಿಕ್ಕಂದಿನಿಂದಲೂ ನಮಗೆ ಆಕರ್ಷಣೆ. ಅಲ್ಲಿನ ಮೆಜೆಸ್ಟಿಕ್, ಗಾಂಧಿನಗರ, ವಿಧಾನಸೌಧ, ಉದ್ಯೋಗಸೌಧ, ಹೈಕೋರ್ಟು, ಕಬ್ಬನ ಉದ್ಯಾನವನದಲ್ಲಿನ ಗ್ರಂಥಾಲಯ, ಲಾಲಬಾಗ್, ಬನ್ನೇರುಘಟ್ಟ, ನೆಹರು ತಾರಾಲಯ, ರವೀಂದ್ರ ಕಲಾಕ್ಷೇತ್ರ ಹೀಗೆ ಒಂದೇ ಎರಡೆ ಹೇಳುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಚಿಕ್ಕವನಿದ್ದಾಗ ಬೆಂಗಳೂರು ಕಾಡಿದ್ದು ಸುಳ್ಳಲ್ಲ. ಅಪ್ಪ ಬೆಂಗಳೂರಿಗೆ ಹೋದಾಗಲೆಲ್ಲ ನಮಗಾಗಿ ಚೆಂದನೆಯ ಆಟಿಕೆ, ಶಾಲಾ ಬ್ಯಾಗಗಳನ್ನು ತರುತ್ತಿದ್ದರಿಂದಲೋ ಏನೋ ನಮಗೆ ಬೆಂಗಳೂರಿನ ಬಣ್ಣ ಬಣ್ಣದ ಕಲ್ಪನೆಗಳು ಮೂಡುವಂತೆ ಮಾಡಿದ್ದು. ಆದರೆ ಆ ಕಲ್ಪನೆಗಳು ನಾವು ಪ್ರೌಢಾವಸ್ಥೆಗೆ ತಲುಪಿ … Read more

ಗೆಲ್ಲುವ, ಗೆಲ್ಲಿಸುವ ದಾರಿಯ ಅನ್ವೇಷಣೆ: ರಘುನಂದನ ಕೆ. ಹೆಗಡೆ

ನಮ್ಮೂರ ಯಂಕ್ಟ ಅದ್ಭುತ ಮಾತುಗಾರ, ಏನನ್ನೇ ಕೊಟ್ಟರೂ ಮಾರಾಟ ಮಾಡಬಲ್ಲ. ಎಲ್ಲಿ ಬೇಕಾದರೂ ಬದುಕಬಲ್ಲ. ಯಾವ ವಿಷಯದ ಬಗ್ಗೆ ಬೇಕಾದರೂ ಮಾತಾಡಬಲ್ಲ. ರಿಸೆಶ್ಶನ್, ಷೇರು ಮಾರುಕಟ್ಟೆಯಿಂದ ರಸಗೊಬ್ಬರ, ಮಣ್ಣಿನ ಫಲವತ್ತತೆಯವರೆಗೆ ಎಲ್ಲ ವಿಷಯಗಳೂ ಅವನಿಗೆ ಗೊತ್ತು. ಜನರನ್ನ ಸೆಳೆಯುವುದು, ಸಂವಹನ ಮಾಡುವುದು, ಯಾವುದೇ ವಿಷಯದ ಬಗ್ಗೆ ಮಾತಾಡುವುದು ಇದರಲ್ಲಿ ಅವನು ತುಂಬಾ ನಿಪುಣ. ಆದರೇನು, ಕಳೆದ 20 ವರ್ಷಗಳಿಂದಲೂ ಅವನು ಸೇಲ್ಸ್‍ಮೆನ್ ಆಗಿಯೇ ದುಡಿಯುತ್ತಿದ್ದಾನೆ. ನಮ್ಮೂರ ಬಡ ಮೇಷ್ಟ್ರ ಮಗ ತುಂಬಾ ಬುದ್ದಿವಂತ. ನಾವೆಲ್ಲ ಕಂಪ್ಯೂಟರ್ ಎಂದರೇನು … Read more

ಆತ್ಮ ವಿಶ್ವಾಸ ಯಶಸ್ಸಿನ ಮೊದಲ ಮೆಟ್ಟಿಲು: ಎಂ.ಎನ್.ಸುಂದರ ರಾಜ್

ಹೆನ್ರಿ ಡೇವಿಡ್ ಥೋರೋ ಹೇಳಿದಂತೆ, “ಮನುಷ್ಯರು ಯಶಸ್ಸುಗಳಿಸಲೆಂದೇ ಜನಿಸಿರುವರು, ಅಪಜಯ ಹೊಂದುವುದಕ್ಕಲ್ಲ” ಸಂತೋಷದಂತೆ ಯಶಸ್ಸು ಸಹ ಮಾನವನ ಮೂಲಭೂತ ಗುರಿಯಾಗಿದೆ. ‘ನಾವು ಹೆಚ್ಚು ಗುಲಾಬಿಗಳನ್ನು ಪಡೆಯಬೇಕಾದರೆ ಹೆಚ್ಚು ಗಿಡಗಳನ್ನು ನೆಡಬೇಕು’ ಎಂದು ಇಲಿಯೆಟ್ ಒಂದೆಡೆ ಹೇಳಿದ್ದಾನೆ. ನಾವು ಜೀವನದಲ್ಲಿ ಏನೇ ಸಾಧಿಸಲು ನಮಗೆ ಅತ್ಯಗತ್ಯವಾದದ್ದು ಹಣವಲ್ಲ, ಯಾರ ಆಶ್ರಯವೂ ಅಲ್ಲ, ಇನ್ನೊಬ್ಬರ ಉತ್ತೇಜನವೂ ಇಲ್ಲ. ಬೇಕಾಗಿರುವುದು ಆತ್ಮವಿಶ್ವಾಸ. ಇದು ಇಲ್ಲದ ವ್ಯಕ್ತಿ ಎಷ್ಟೇ ಉತ್ತೇಜನ ನೀಡಿದರೂ ಯಶಸ್ಸಿನ ದಾರಿಯಲ್ಲಿ ನಡೆಯಲಾರ. ಆತ್ಮ ವಿಶ್ವಾಸವೆಂದರೇನು ಎನ್ನುವ ಪ್ರಶ್ನೆಗೆ ಉತ್ತರ … Read more

ದಿಟ್ಟ ಹೆಣ್ಣು..: ದೇವರಾಜ್ ನಿಸರ್ಗತನಯ

ಆಗ ತಾನೇ ಹೈಸ್ಕೂಲು ಮೆಟ್ಟಿಲೇರಿದ್ದ ನಿರೋಷಾಗೆ ತನ್ನ ದೇಹದಲ್ಲಾಗುತ್ತಿದ್ದ ಬದಲಾವಣೆಗಳನ್ನು ಕಂಡು ತನ್ನೊಳಗೇ ತಾನು ಹೆಮ್ಮೆಪಡಲಾರಂಭಿಸಿದಳು. ಇತರ ಹೆಣ್ಮಕ್ಕಳಿಗಿಂತ ಭಿನ್ನವಾಗಿ ಆಲೋಚಿಸತೊಡಗಿದಳು. ಮುಗ್ದತೆ ತುಂಟತನ ಮಾಯವಾಗಿ ಗಂಭೀರ ಸ್ವಭಾವ ದಿನೇ ದಿನೇ ಹೆಚ್ಚಾಗತೊಡಗಿತು. ಅವಳ ಬದಲಾವಣೆಯನ್ನು ಗಮನಿಸಿದ ಅವಳ ತಾಯಿ ಸುಜಾತಳಿಗೂ ತನ್ನ ಮಗಳು ಬೆಳೆದು ದೊಡ್ಡವಳಾಗುತ್ತಿದ್ದಾಳೆ ಎಂಬ ಹೆಮ್ಮೆ ಒಂದು ಕಡೆಯಾದರೆ ಈಗಿನ ಸಮಾಜದಲ್ಲಿ ಬೆಳೆದ ಹೆಣ್ಣುಮಕ್ಕಳು ಸೆರಗಿನಲ್ಲಿ ಕೆಂಡ ಕಟ್ಟಿಕೊಂಡಂತೆ ಎನ್ನುವ ಆತಂಕವೂ ಅವಳನ್ನು ಕಾಡಿತ್ತು. ಚಿಕ್ಕವಯಸ್ಸಿಗೆ ಗಂಡನನ್ನು ಕಳೆದುಕೊಂಡು ಬದುಕುತಿದ್ದ ಒಂಟಿ ಜೀವ … Read more

ಜಗದೊಳು ಸರ್ವವೂ ಸುಖಮಯವು: ಜಯಶ್ರೀ.ಜೆ. ಅಬ್ಬಿಗೇರಿ ಬೆಳಗಾವಿ

ಹಾಲಿನಂಥ ಬೆಳದಿಂಗಳು ಚೆಲ್ಲಿ ಹಿತ ನೀಡುವ ಚಂದಿರ ಕಾರ್ಮೋಡಗಳ ನಡುವೆ ಸಿಕ್ಕು ಮರೆಯಾಗುತ್ತಾನೆ. ಕೆಲ ಕಾಲದ ನಂತರ ಬೆಳ್ಳಿ ಮೋಡಗಳ ನಡುವೆ ಮತ್ತೆ ಬೆಳ್ಳನೆಯ ನಗು ಬೀರುತ್ತಾನೆ. ಅಮವಾಸ್ಯೆಯ ದಿನ ಸಂಪೂರ್ಣ ಮಾಯವಾದ ಚಂದಿರ ಹುಣ್ಣಿಮೆ ದಿನ ಬಾಗಿಲು ಮುಚ್ಚಿ ಮಲಗಿದ್ದರೂ ಬೆಳಕಿಂಡಿಯಿಂದ ನಾವಿದ್ದಲ್ಲಿಗೆ ಬಂದು ತಂಪು ನೀಡುತ್ತಾನೆ. ಬದುಕಿನಲ್ಲಿ ಸುಖ ದುಃಖಗಳೂ ಹೀಗೇ ಒಂದರ ಹಿಂದೆ ಒಂದು ಬರುತ್ತಲೇ ಇರುತ್ತವೆ. ಸುಖ ದುಃಖಗಳು ಸೈಕಲ್ ಗಾಲಿಯ ಚಕ್ರದ ಕಡ್ಡಿಗಳಿದ್ದಂತೆ ಒಮ್ಮೆ ಮೇಲಿದ್ದದ್ದು ಇನ್ನೊಮ್ಮೆ ಕೆಳಗೆ ಬರಲೇಬೇಕು. … Read more

ಹೃದಯವನ್ನು ಸೀಟಿಯಂತೆ ಹೊಡೆಸುವ  ರೈಲಿನ ವೇಟಿಂಗ್ ಲಿಸ್ಟ್!: ಭಾರ್ಗವ ಎಚ್ ಕೆ

ಸುಡುಸುಡು ಬಿಸಿಲಿನಲ್ಲಿ ಬಿಳಿ ಟೊಪ್ಪಿಗೆಯನ್ನು ಹಾಕಿಕೊಂಡು ರಫೀಕ್ ತಾತನು ಎಳೆನೀರನ್ನು ಮಾರುತ್ತಿದ್ದನು. ಹೊಂದಿಸಿಟ್ಟ ಎಳೆನೀರನ್ನು ರಾಯಲ್ ಫೀಲ್ಡ್ ಬೈಕಿನಲ್ಲಿ ಬಂದ ಶೋಕಿಲಾಲ್ ರಾಕಿಭಾಯ್ ತನಗಿಷ್ಟವಾದುದನ್ನು ಕಿತ್ತುಕೊಂಡು ರಫೀಕ್ ತಾತನ ಕೈಯಲ್ಲಿ ಕೊಟ್ಟನು. ತಾತನ ಬಿಳಿ ಟೊಪ್ಪಿಗೆಯು  ನೀರು ದೋಸೆಯಂತೆ ನಾನ್ ಸ್ಟಿಕ್ ತಲೆಯ ಮೇಲೆ ಹೊಯ್ದುಬಿಟ್ಟಿತ್ತು. ಬೆವರ ಹನಿಯಲ್ಲೂ ರಾಕಿಭಾಯ್ ಮೇಲೆ ಸಿಟ್ಟು ಬರಲಿಲ್ಲ. ಕೈಯಲ್ಲಿರುವ ಮಚ್ಚು ಎಳೆನೀರನ್ನು ಕೊಚ್ಚಿತೇ ವಿನಹ ಬೈಕ್ ಸವಾರನನ್ನಲ್ಲ. ಆ ತಾತನು ಬಿಸಿಯಾಗಿದ್ದ ಎಳೆನೀರನ್ನು ಕುಡಿಯುತ್ತಿದ್ದ ರಾಕಿಭಾಯ್ ಗೆ ಒಂದು ನಿಂಬೆಹಣ್ಣನ್ನು … Read more

ಅಚ್ಚರಿಯ ಕಂಗಳು: ಸಿಂಧು ಭಾರ್ಗವ್ ಬೆಂಗಳೂರು

ಚಿಕ್ಕ ಮಕ್ಕಳು ಮುಗ್ಧರಾಗಿರುತ್ತಾರೆ. ಪ್ರಪಂಚದ ಅರಿವೇ ಇಲ್ಲದೇ ತಮ್ಮ ಪಾಡಿಗೆ ತಾವು ಆಡಿ ಕುಣಿದು ನಲಿಯುತ್ತಿರುತ್ತಾರೆ. ಹೆತ್ತವರು ಯಾವುದೋ ಕಾರಣಕ್ಕೆ ಗದರಿಸಿದರೆ ಹೆದರಿ ಮುದುರಿಕೊಂಡು ಕುಳಿತುಬಿಡುತ್ತಾರೆ. ಅವರ ತುಂಟಾಟ, ಚೇಷ್ಠೆಗಳು ಲೆಕ್ಕವಿಲ್ಲದಷ್ಟು ಮಾಡಿದರೂ ಹೆತ್ತವರು ಬೆದರಿಸದೇ, ಹೊಡೆಯದೇ ತಾಳ್ಮೆಯಿಂದ ಇರಬೇಕು. ತಮ್ಮ ಕೆಲಸದ ಒತ್ತಡವನ್ನು, ಕೋಪವನ್ನು ಅವರ ಮೇಲೆ ತೀರಿಸಿಕೊಳ್ಳಬಾರದು. ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ ಮಾಡುವುದು ಎಷ್ಟು ಸರಿ? ಬದಲಾಗಿ ಅವರ ಖುಷಿಯಲ್ಲಿ ತಾವು ಕೂಡ ಖುಷಿಪಡಬೇಕು. ಮಕ್ಕಳ ಮನಸ್ಸಿಗೆ ಘಾಸಿ ಮಾಡಬಾರದು. ಅವುಗಳ‌ ಜೊತೆ ಬೆರೆತು … Read more

ಬೆಳೆಸುವ ಸಿರಿ ಮೊಳಕೆಯಲ್ಲೇ?: ಕೊಟ್ರೇಶ್ ಕೊಟ್ಟೂರು

ಬೆಳೆಯುವ ಸಿರಿ ಮೊಳಕೆಯಲ್ಲೇ ಎನ್ನುವ ಗಾದೆಯನ್ನು ನಾವು ಕೇಳಿದ್ದೇವೆ ಆದರೆ ಇದು ಬೆಳೆಯುವ ಸಿರಿ ಮೊಳಕೆಯಲ್ಲೇ ಅಲ್ಲ, ಬದಲಾಗಿ ಬೆಳೆಸುವ ಸಿರಿ ಮೊಳಕೆಯಲ್ಲೇ ಎನ್ನುವುದು. ಯಾವುದೇ ಒಂದು ಮಗು ಬೆಳೆಯುವುದು ಬಿಡುವುದು ಅವರವರ ಇಚ್ಛೆ. ಆದರೆ ಈ ಮಗುವನ್ನು ಬೆಳೆಸುವುದರಲ್ಲಿ ಆ ಮಗುವಿನ ತಾಯಿ ಹೇಗೆ ಬೆಳೆಸಿ ಪೋಷಿಸುತ್ತಿರುವಳು ಎನ್ನುವುದು ನನಗಂತೂ ಆಶ್ಚರ್ಯ ಮತ್ತು ಅಗಾಧ. ಆ ಮಗುವಿಗೆ ಬದುಕುವ ಛಲವನ್ನು ಹೇಗೆಲ್ಲಾ ತುಂಬಬಹುದು ಎಂಬುದಕ್ಕೆ ಜೀವಂತ ನಿದರ್ಶನ ಅಮೃತಳ ಆ ನನ್ನ ತಾಯಿ. ನಾನೀಗ ಹೇಳುತ್ತಿರುವುದು … Read more

ಸಂಸ್ಕಾರ ಜ್ಞಾನವೇ ಸಂಸಾರ ಪ್ರಾಣ: ರವಿ ರಾ ಕಂಗಳ

ಯಾವುದೇ ದೇಶದ ಅಭಿವೃದ್ಧಿಗೆ ಪೂರಕವಾದ ಅಂಶಗಳೆಂದರೆ ಒಂದು ನೈಸರ್ಗಿಕ ಸಂಪನ್ಮೂಲ ಇನ್ನೊಂದು ಮಾನವ ಸಂಪನ್ಮೂಲ. ಯಾವ ದೇಶದಲ್ಲಿ ವಿಪುಲವಾಗಿ ನೈಸರ್ಗಿಕ ಸಂಪನ್ಮೂಲವಿದೆಯೋ ಆ ದೇಶವು ಅಭಿವೃದ್ಧಿಶೀಲ ದೇಶವೆಂದು ಹೇಳಲು ಸಾಧ್ಯವಿಲ್ಲ, ಆ ನೈಸರ್ಗಿಕ ಸಂಪನ್ಮೂಲವನ್ನು ಅಲ್ಲಿನ ಮಾನವ ಸಂಪನ್ಮೂಲವು ಹೇಗೆ ಪರಿಣಾಮಕಾರಿಯಾಗಿ ಬಳಸಿಕೊಳ್ಳುತ್ತಾರೆಯೋ ಎಂಬುದರ ಮೇಲೆ ಅದು ನಿರ್ಧಾರವಾಗುತ್ತದೆ. ಹಾಗಾಗಿ ನೈಸರ್ಗಿಕ ಸಂಪನ್ಮೂಲವನ್ನು ಮಿತವ್ಯಯವಾಗಿ ಮತ್ತು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಮಾನವ ಸಂಪನ್ಮೂಲವು ಈ ದೇಶಕ್ಕೆ ಬೇಕಾಗಿದೆ. ಅದು ಅಲ್ಲದೆ ಇಂದು ನೈತಿಕ ಮೌಲ್ಯಗಳು ಕುಸಿಯುತ್ತಿರುವ ಸಂದರ್ಭದಲ್ಲಿ, ಮಾನವೀಯತೆಯ … Read more

ವಿಂಡೀಸ್ ಪಾಲಿಗೆ ಒಬ್ಬನೇ ಶಿವ, ಒಬ್ಬನೇ ಚಂದ್ರ: ಆದರ್ಶ ಯು ಎಂ

ನೀವು ತೊಂಭತ್ತರ ದಶಕದಿಂದ ಕ್ರಿಕೆಟ್ ನೋಡುವವರಾಗಿದ್ದರೆ ನಿಮಗೆ ಶಿವನಾರಾಯಣ್ ಚಂದ್ರಪೌಲ್ ನೆನಪಿನಲ್ಲಿ ಇದ್ದೇ ಇರುತ್ತಾನೆ, ಹೆಚ್ಚೂ ಕಡಿಮೆ ಬೌಲರ್ ಗೆ ಅಡ್ಡವಾಗಿ ನಿಲ್ಲುವ ಆತನ ಬ್ಯಾಟಿಂಗ್ ಶೈಲಿಯನ್ನು ಮರೆಯಲಾದರೂ ಹೇಗೆ ಸಾಧ್ಯ? ಶಿವನಾರಾಯಣ್ ಚಂದ್ರಪಾಲ್ ನ ವಂಶದ ಹಿಂದಿನವರು ಜೀತ ಪದ್ಧತಿಯಿಂದ ಭಾರತದಿಂದ ವೆಸ್ಟ್ ಇಂಡೀಸ್ ಗೆ ಹೋಗಿ ನೆಲೆಸಿದರು ಅಂತ ಇತಿಹಾಸ ಹೇಳುತ್ತದೆ. ಅಂತಹ ವಂಶದ ಚಂದ್ರಪಾಲ್ ಮುಂದೆ ವೆಸ್ಟ್ ಇಂಡೀಸ್ ತಂಡದ ಆಧಾರ ಸ್ಥಂಭವಾಗಬಲ್ಲ ಅಂತ ಅಂದು ಜೀತದಾಳುಗಳಾಗಿದ್ದ ಆತನ ಪೂರ್ವಜರಿಗೆ ಗೊತ್ತಿರಲಿಲ್ಲವೇನೋ. ಚಂದ್ರ … Read more

ಹೀಗೊಂದು ಸಾರ್ಥಕ ಮಹಿಳಾ ದಿನಾಚರಣೆ: ಶೀಲಾ. ಶಿವಾನಂದ. ಗೌಡರ.   

ಅಂದು ಮಾರ್ಚ 8. ವಿಶ್ವ ಮಹಿಳಾ ದಿನಾಚರಣೆ. ಶಾಲೆಯಲ್ಲಿ ವಿಶ್ವ ಮಹಿಳಾ ದಿನದ  ಇತಿಹಾಸವನ್ನು,  ಮಹಿಳೆಯರ ಹಕ್ಕು, ರಕ್ಷಣೆ, ಖ್ಯಾತ ಮಹಿಳಾ ಸಾಧಕಿಯರು, ಸಾಧನೆಯ ಹಾದಿಯಲ್ಲಿ ಎದುರಾಗುವ ತೊಡಕುಗಳು, ಅವುಗಳನ್ನು ಮೆಟ್ಟಿನಿಂತು ಸಾಧನೆಯ ನಗುಚಲ್ಲುವ  ಛಾತಿಯ ಬಗ್ಗೆ ವಿದ್ಯಾರ್ಥಿಗಳಿಗೆ  ತಿಳಿಸಲು , ಅವರೊಂದಿಗೆ ಚರ್ಚಿಸಲು ತುಂಬಾ ಉತ್ಸುಕಳಾಗಿದ್ದೆ.  ಸಂಸಾರ ಮತ್ತು  ವೃತ್ತಿಗಳೆರಡನ್ನು  ಯಶಸ್ವಿಯಾಗಿ  ನಿಭಾಯಿಸುತ್ತಿರುವ ಸುಪರ್ ವುಮನ್ ಗಳ ಸಾಲಿನಲ್ಲಿ ನಾನೂ ಒಬ್ಬಳು ಎಂದು ಬೀಗುತ್ತ, ಲಗುಬಗೆಯಲ್ಲಿ ಶಾಲೆಗೆ ನಡೆದೆ. ಯಾವತ್ತೂ ಅಭ್ಯಾಸದಲ್ಲಿ, ಶಾಲೆಯ ಪ್ರತಿ ಚಟುವಟಿಕೆಗಳಲ್ಲಿ … Read more

ಬೆಲ್ಲದ ಬಗ್ಗೆ ಬಲ್ಲಿರೇನು?: ಎಂ.ಎಚ್.ಮೊಕಾಶಿ

ಇಂದು ಬಹುತೇಕ ಜನರ ಮನೆಯಲ್ಲಿ ಫ್ರಿಜ್ ಇರುವುದರಿಂದ ವಿವಿಧ ರೀತಿಯ ಸಾಫ್ಟ್ ಡ್ರಿಂಕ್ಸ್‍ಗಳನ್ನು ಬಳಸುತ್ತೇವೆ. ಇವುಗಳು ನಾವು ಬಿಸಿಲಿನಿಂದ ಬಂದಾಗ ನಮ್ಮ ದೇಹವನ್ನು ತಂಪಾಸುತ್ತವೆ. ಆದರೆ ಮೊದಲೆಲ್ಲ ಹಾಗಿರಲಿಲ್ಲ ಹೊರಗಿನಿಂದ ಬಿಸಿಲಿನಲ್ಲಿ ಬಂದವರಿಗೆ ಬೆಲ್ಲ ಮತ್ತು ನೀರು ಕೊಡುತ್ತಿದ್ದರು. ಏಕೆಂದರೆ ಬೆಲ್ಲದಲ್ಲಿ ಗ್ಲುಕೋಸ್, ವಿಟಮಿನ್ ಹಾಗೂ ಕ್ಯಾಲ್ಸಿಯಮ್‍ಗಳಿರುವುದರಿಂದ ಶೀಘ್ರವಾಗಿ ದಣಿವಾರಿಸಿ ಆರೋಗ್ಯವನ್ನು ಸುಧಾರಿಸುವುದೆಂದು ತಿಳಿದಿದ್ದರು. ಆದರೆ ಇಂದು ಬೆಲ್ಲ ತಿನ್ನುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಏಕೆಂದರೆ ಬಹುತೇಕ ಜನರು ಸಕ್ಕರೆಯತ್ತ ತಮ್ಮ ಅಕ್ಕರೆಯನ್ನು ತೋರಿಸುತ್ತಿದ್ದಾರೆ. ಬೆಲ್ಲ ಅಂದರೆ ಮೂಗು … Read more

ಗೂಡಿನಲ್ಲೊಂದು ಗೂಡು!: ಜಯಶ್ರೀ. ಜೆ. ಅಬ್ಬಿಗೇರಿ ಬೆಳಗಾವಿ 

‘ನಿರಂತರ ಸಂತೋಷವೆಂಬುದಿಲ್ಲ ಕೇವಲ ಸಂತಸದ ಕ್ಷಣಗಳಿವೆ.’ ಎನ್ನುವುದು ಬಲ್ಲವರ ಮಾತು. ಇಂಥ ಸಂತಸದ ಕ್ಷಣಗಳನ್ನು ದಕ್ಕಿಸಿಕೊಳ್ಳಲು ಸ್ವಂತದ್ದೊಂದು ಗೂಡು (ಹೋಮ್ ಸ್ವೀಟ್ ಹೋಮ್) ಕಟ್ಟಲೇಬೇಕೆಂದು ಮುಂದಾಗುತ್ತೇವೆ. ಸ್ವಂತದ್ದೊಂದು ಮನೆ ಕಟ್ಟಿಕೊಳ್ಳುವುದು ಬದುಕಿನ ಪರಮೋಚ್ಚ ಗುರಿ. ಆ ಗುರಿ ಮುಟ್ಟಲು ಬ್ಯಾಂಕ್ ಲೋನ್‍ಗೆ ಅರ್ಜಿ ಸಾಲದ್ದಕ್ಕೆ ಸಂಬಂಧಿಕರು ಸ್ನೇಹಿತರು ಪರಿಚಿತರ ಹತ್ತಿರ ಸಾಲ. ಮನೆಯಾಕೆಯ ಸಾಮಾನು ಅಡವಿಡುವುದು ಇನ್ನೂ ಏನೇನೋ ನಡೆಯುತ್ತವೆ. ಇದನ್ನೆಲ್ಲ ಅರಿತ ನಮ್ಮ ಹಿರಿಯರು ‘ಮನೆ ಕಟ್ಟಿ ನೋಡು ಮದುವೆ ಮಾಡಿ ನೋಡು.’ ಎಂಬ ಮಾತು … Read more

ಸ್ವಾರ್ಥಿಗಳಾಗಿ – ಅಗತ್ಯವಿದ್ದವರಿಗೆ ನೆರವಾಗಿ: ಎಂ.ಎನ್.ಸುಂದರ ರಾಜ್, ಶಿವಮೊಗ್ಗ

ಇದೊಂದು 100 ವರ್ಷದ ಕಥೆಯಾದರೂ, ಅದರಿಂದ ದೊರಕುವ ಪಾಠ ಇಂದಿಗೂ ಪ್ರಸ್ತುತವಾದದ್ದು. 1892ನೆಯ ಇಸವಿ., ಸ್ಥಳ ಸ್ಟಾಂಡ್ ಫೋರ್ಡ್ ವಿಶ್ವವಿದ್ಯಾನಿಲಯ. 18 ವರ್ಷದ ಯುವ ವಿದ್ಯಾರ್ಥಿಯೊಬ್ಬ ಕಾಲೇಜಿನ ಶುಲ್ಕ ಕಟ್ಟಲು ಹೆಣಗಾಡುತ್ತಿದ್ದ. ಅವನೊಬ್ಬ ಅನಾಥ, ಯಾವ ಬಂಧುಗಳೂ ಇಲ್ಲ, ಹಣ ಹೊಂದಿಸುವುದು ಹೇಗೆಂದು ಒದ್ದಾಡುತ್ತಿದ್ದ. ಆಗ ಅವನಿಗೊಂದು ಉಪಾಯ ಹೊಳೆಯಿತು. ಅವನು ಮತ್ತು ಅವನ ಗೆಳೆಯನೊಬ್ಬ ವಿಶ್ವ ವಿದ್ಯಾನಿಲಯದ ಆವರಣÀದಲ್ಲಿ ಒಂದು ಸಾಂಸ್ಕøತಿಕ ಕಾರ್ಯಕ್ರಮವನ್ನೇರ್ಪಡಿಸಿ ಹಣ ಸಂಪಾದಿಸಿ ಕಾಲೇಜಿನ ಶುಲ್ಕ ಭರ್ತಿ ಮಾಡುವುದು. ಅದಕ್ಕಾಗಿ ಅಂದಿನ ಪ್ರಸಿದ್ಧ … Read more

ವಿಶ್ವ ರೇಡಿಯೋ ದಿನಾಚರಣೆ: ಎಂ.ಎಚ್.ಮೊಕಾಶಿ

ನಾಲಿಗೆಯಿಲ್ಲದೇ ಮಾತನಾಡುವ ವಸ್ತು ಎಂದೇ ಖ್ಯಾತಿಯಾದ ರೇಡಿಯೋವನ್ನು ಇಟಲಿ ದೇಶದ ವಿಜ್ಞಾನಿ ಗುಗ್ಲಿಯೊಲ್ಮೋ ಮಾರ್ಕೋನಿ ಆವಿಷ್ಕಾರ ಮಾಡಿದರು. 1886 ರಲ್ಲಿ ‘ಹೆನರಿಜ್ ಹಟ್ರ್ಜ್’ ಎಂಬ ವಿಜ್ಞಾನಿ ತರಂಗಗಳ ಸಂಶೋಧನೆಯನ್ನಾರಂಭಿಸಿದರು. ಮಾರ್ಕೊನಿಯು ಹಟ್ರ್ಜ್‍ರವರ ತರಂಗಗಳ ಕುರಿತು ಅಧ್ಯಯನ ಕೈಗೊಂಡು ಕೊನೆಗೆ ಜಯ ಪಡೆದರು. ಹೀಗಾಗಿ ಮಾರ್ಕೋನಿಯನ್ನು ರೇಡಿಯೋದ ಜನಕನೆಂದು ಕರೆಯುವರು. ಮಾರ್ಕೊನಿಯು 1896ರಲ್ಲಿ ಒಂದು ಏರಿಯಲ್ ಮುಖಾಂತರ 15 ಕಿಲೋ ಮೀಟರ್ ದೂರದಲ್ಲಿದ್ದ ಒಂದು ಸ್ಥಳಕ್ಕೆ ತಂತಿ ಇಲ್ಲದೇ ಸಂದೇಶ ಕಳಿಸಿದರು. ಇದೇ ಹೊಸ ತಂತ್ರಜ್ಞಾನದ ಆವಿಷ್ಕಾರಕ್ಕೆ ಕಾರಣವಾಯಿತು. … Read more

ನನ್ನೂರು -ನನ್ನ ಜನ, ಬೋಳೂರು ಪಾಟ್ಲೆನ ಎತ್ತಿನ ನಾಲು: ಮಂಜಯ್ಯ ದೇವರಮನಿ.

ನಮ್ಮೂರು ರೈತಾಪಿ ಚಟುವಟಿಕೆಯಿಂದ ಕೂಡಿದ ಸಣ್ಣ ಹಳ್ಳಿ. ಪ್ರತಿ ಮನೆಯಲ್ಲಿ ಏನಿಲ್ಲವೆಂದರು ಒಂದು ಜೊತೆ ಇಲ್ಲವೇ ಎರಡು ಜೊತೆ ಎತ್ತುಗಳು ಸಾಮಾನ್ಯ. ರಾಮನಗೌಡರ ಮನೆಯಲ್ಲಿ ಮಾತ್ರ ಏಳೆಂಟು ಜೊತೆ ರಾಸುಗಳು. ನೊಣ ಕೂತರೆ ಜಾರಬೇಕು ಅಷ್ಟು ಪೊಗರ್ದಸ್ಥಾಗಿದ್ದವು. ಅವುಗಳ ಚಾಕರಿ ಮಾಡಲೆಂದೇ ಇಬ್ಬರನ್ನು ನೇಮಿಸಲಾಗಿತ್ತು. ಏರೆ ಜಮೀನಿನಲ್ಲಿ ಬೆಳೆದ ಹಸಿಯಾದ ಎಳೆ ಬಿಳಿಜೋಳದ ತೆನೆಗಳನ್ನು ಮೇಯಲು ಹಾಕುತ್ತಿದ್ದರು. ಆದ್ದರಿಂದ ಅವುಗಳಿಗೆ ದುಡಿಯುವದಕ್ಕಿಂತ ಮೇಯೆಯುವುದೇ ಕೆಲಸವಾಗಿತ್ತು. ಹೀಗೆ ಊರ ದನಗಳಿಗೆ ನಾಲು ಕಟ್ಟಲು (ನಾಲು ಎಂದರೆ ಎತ್ತಿನ ಕಾಲಿನ … Read more

ಮಹಿಳೆಗೆ ಶೋಭೆ ನೀಡುವ ಮಂಗಲದ್ರವ್ಯಗಳು: ಜಯಶ್ರೀ ಭ.ಭಂಡಾರಿ.

ಭಾರತೀಯ ಸಂಸ್ಕೃತಿ ಶ್ರೀಮಂತಿಕೆಯಿಂದ ಕೂಡಿದೆ. ಅದರಲ್ಲೂ ಮಹಿಳೆಯರಿಗೆ ವಿಶೇಷವಾದ ಸಂಸ್ಕೃತಿ ಆಚರಣೆಗಳಿವೆ. “ಗೃಹಿಣಿ ಗೃಹಮುಚ್ಯತೆ ಎಂಬಂತೆ ಒಂದು ಮನೆಯಲ್ಲಿ ಒಬ್ಬ ಸ್ತ್ರೀ ಆಚರಿಸುವ ಧಾರ್ಮಿಕ, ಪೂಜೆ ಪುನಸ್ಕಾರಗಳು ಆ ಇಡೀ ಕುಟುಂಬವನ್ನೇ ಉನ್ನತ ಮಟ್ಟಕ್ಕೆ ಒಯ್ಯುತ್ತವೆ. ಅಂತಹ ಸ್ತ್ರೀಗೆ ಪಂಚರೀತಿಯ ಮಂಗಲದ್ರವ್ಯಗಳು ಭೂಷಣಪ್ರದವಾಗಿರುತ್ತವೆ. ಆ ಮಂಗಲ ದ್ರವ್ಯಗಳೆಂದರೆ . . “ಕುಂಕುಮಂ ಕವಚಂ ದಿವ್ಯಂ ಕಜ್ಜಲಂ ಕಂಠಸೂತ್ರತಾ ಕಂಕಣಂಚತು ಪಂಚೈತೆ ಕಕಾರಂ ಮಂಗಲಪ್ರದಾ” ಈ ಶ್ಲೋಕದ ಮೂಲಕ ಆ ಐದು ಮಂಗಲದ್ರವ್ಯಗಳು ತಿಳಿಯುತ್ತವೆ. ಕುಂಕುಮ, ಕವಚ(ವಸ್ತು), ಕಜ್ಜಲ(ಕಾಡಿಗೆ), … Read more

ನಾಲ್ಕು ವೇದಗಳೊಂದಿಗೆ ಐದನೇ ನಾಟ್ಯವೇದ: ಕೆ.ಪಿ.ಎಂ. ಗಣೇಶಯ್ಯ

ಎಲ್ಲವನ್ನೂ ತಿಳಿದ ನಾವು ನಮ್ಮ ತನುವನ್ನ ಬಿಟ್ಟು ಕೊಡುವುದಿಲ್ಲವೇಕೆ.? ಅಪ್ಪ ಹಾಕಿದ ಆಲದ ಮರವಿದೆ. ಬೇಕಾದ ರೀತಿಯಲ್ಲಿ, ಬೇಕಾದ ಹಾಗೆ ಬದುಕು ಕಂಡುಕೊಂಡ ಎಷ್ಟೋ ಜೀವಿಗಳು ನಮ್ಮ ಕಣ್ಣ ಮುಂದಿವೆ. ಹಾಗಂತ ಎಲ್ಲರನ್ನೂ ದೂಷಿಸಲು ಬರುವುದಿಲ್ಲ. ಕೆಲವರಾದರೂ ತಮ್ಮ ಕುಟುಂಬದ ಘನತೆಗೆ ತಕ್ಕಂತೆ “ಪರೋಪ ಕಾರ್ಯಾರ್ಥಂ ಮಿದಂ ಶರೀರಂ” ಎನ್ನುವ ಹಾಗೆ ಪರೋಪ ಕಾರ್ಯದಲ್ಲಿ ತೊಡಗಿರುವವರು ಎಷ್ಟೋ ಜನ..? ನಮ್ಮಷ್ಟಕ್ಕೇ ನಾವು ಅಂದುಕೊಂಡು ಇತರರನ್ನೂ ಕಡೆಗಣಿಸಿ ತಮ್ಮಿಷ್ಟದಂತೆ ಬದುಕು ನಡೆಸಿಕೊಂಡು ಹೋದರಾಯ್ತು ಎಂಬುವವರಿಗೆ ನಮ್ಮ ದೇಶದಲ್ಲೇನೂ ಕೊರತೆಯಿಲ್ಲ. … Read more

ಮಕ್ಕಳನ್ನು ಕೇವಲ ಮುದ್ದುಮಾಡಿ ಬೆಳೆಸಬೇಡಿ ಮೌಲ್ಯಗಳನ್ನೂ ಬೆಳೆಸಿ: ಶ್ರೀ ಜಗದೀಶ ಸಂ.ಗೊರೋಬಾಳ

ಇಂದಿನ ಮಕ್ಕಳೇ ನಾಳೆಯ ಪ್ರಜೆಗಳು ಎಂಬ ಮಾತು ಸತ್ಯವಾದರೂ ಇಂದಿನ ಮಕ್ಕಳಿಗೆ ನಾವು ಅವರಿಗೆ ಮುಂದೆ ಬೇಕಾಗುವುದನ್ನು ಕೊಡಬೇಕು ಅಲ್ವಾ? ಕೇವಲ ಸಸಿನಟ್ಟು ಅದರ ಫಲಕ್ಕೆ ಆಸೆಪಟ್ಟರೆ ಹೇಗೆ? ಅದನ್ನು ದಿನಂಪ್ರತಿ ನೀರು ಗೊಬ್ಬರ ಹಾಕಿ ಪೋಷಿಸಿದಾಗ ಮುಂದೊಮ್ಮೆ ಅದರಿಂದ ಫಲ ನಿರೀಕ್ಷಿಸಬಹುದು. ಹಾಗೆಯೇ ನಮ್ಮ ಶಾಲಾ ಮಕ್ಕಳನ್ನು ಬೆಳೆಸಬೇಕಿದೆ. ಮಕ್ಕಳ ಬಗ್ಗೆ ಹಲವು ಶಿಕ್ಷಕರ ಅಭಿಪ್ರಾಯಗಳು ಹೀಗಿರಲೂಬಹುದು : “ಇಂದಿನ ಮಕ್ಕಳಿಗೆ ಹಿರಿಯರೆಂದರೆ ಗೌರವವೇ ಇಲ್ಲ”, “ನನ್ನ ಕ್ಲಾಸ್ ಮಕ್ಕಳು ಹಾಳಾಗಿವೆ!”, “ನಾನು ಎಷ್ಟ್ ಅರಚಿದರೂ … Read more

ಸುಂದರ ಊರಿನಲ್ಲೀಗ …: ಸ್ಮಿತಾ ಅಮೃತರಾಜ್. ಸಂಪಾಜೆ

ನಿಮ್ಮ ಊರು ಅದೆಷ್ಟು ಚೆಂದ; ನೀವೆಲ್ಲಾ ಪುಣ್ಯವಂತರು ಕಣ್ರೀ, ಸ್ವರ್ಗ ಅಂದರೆ ಇದೇ ನೋಡಿ. ಅಲ್ಲಿಯ ಬೆಟ್ಟ,ಗುಡ್ಡ,ನದಿ ,ಧುಮ್ಮುಕ್ಕಿ ಹರಿಯುವ ಜಲಧಾರೆ, ತುಂತುರು ಜುಮುರು ಮಳೆ..ನೆಮ್ಮದಿಯಿಂದ ಬದುಕೋದಿಕ್ಕೆ ಇನ್ನೇನು ಬೇಕು ಹೇಳಿ?. ನಾವೂ ನಿಮ್ಮೂರಿನಲ್ಲೇ ಬಂದು ಠಿಕಾಣಿ ಹೂಡ್ತೀವಿ, ಕೆಲಸಕ್ಕೆ ಜನ ಇಲ್ಲ ಅಂತೀರಿ ನಾವೇ ಬಂದು ಬಿಡ್ತೀವಿ, ನಮಗೆ ನಿಮ್ಮ ತೋಟಗಳಲ್ಲಿ ಕೆಲಸ ಕೊಟ್ರೆ ಅಷ್ಟೇ ಸಾಕು . ಈ ಬಯಲು ಸೀಮೆಯ ಒಣ ಹವೆ, ರಾಚುವ ಬಿಸಿಲು, ಇವೆಲ್ಲಾ ಅನುಭವಿಸಿ ಸಾಕಾಗಿ ಹೋಗಿದೆ ಅಂತ … Read more

ನಮ್ಮ ದಸರಾ Exhibition ಸವಾರಿ: ವಿಭಾ ಶ್ರೀನಿವಾಸ್

“Exhimition…Exhimition…” ಪದವನ್ನು ಸರಿಯಾಗಿ ಉಚ್ಚರಿಸಲೂ ಬಾರದ ಆ ದಿನಗಳಲ್ಲಿ ವರ್ಷಕ್ಕೊಮ್ಮೆ ಎದುರಾಗುತಿದ್ದ ಸ೦ತಸವೇ ಮೈಸೂರು ದಸರಾ Exhibition (ದಸರಾ ವಸ್ತುಪ್ರದರ್ಶನ). ಎಲ್ಲಾ ವರ್ಗದ, ಎಲ್ಲಾ ಭಾಷೆಗಳನ್ನು ಮಾತನಾಡುವ ಜನ ಕಾಣಸಿಗುತಿದ್ದ mini world !! ಪ್ರವೇಶ ಟಿಕೆಟ್ ನ ದರ ರೂ5 ಇದ್ದ ಕಾಲ. ನಾ ಮುಂದು ತಾ ಮುಂದು ಎ೦ದು ಟಿಕೆಟ್ ಪಡೆದು, ಮುಖ್ಯದ್ವಾರದ ಕನ್ನಡಿಯಲ್ಲಿ ಮುಖವನ್ನೊಮ್ಮೆ ನೋಡಿ ಹಲ್ಲುಕಿರಿದ ನ೦ತರವೇ ಪ್ರವೆಶಿಸಿದೆವೆ೦ಬ ಖುಷಿ. ಮು೦ದಿನ ೨-೩ ಗಂಟೆಗಳ ಕಾಲ ಅಣ್ಣ/ಚಿಕ್ಕಪ್ಪನ ಮಗಳ ಕೈ ಹಿಡಿದೇ … Read more

ಕಾಯಕಲ್ಪವಾಗಿ ಪ್ರವಾಸೋದ್ಯಮ: ಎಂ.ಎಚ್.ಮೊಕಾಶಿ

“ದೇಶ ಸುತ್ತಿ ನೋಡು ಕೋಶ ಓದಿ ನೋಡು” ಎಂಬ ಗಾದೆ ಮಾತಿದೆ. ಇದು ತನು ಮನದ ಜ್ಞಾನಕ್ಕಾಗಿ ನಮ್ಮ ಹಿರಿಯರು ಹೇಳಿದ ಮಾತಾಗಿದೆ. ಅನುಭವ, ತನ್ಮೂಲಕ ಅನುಭಾವಕ್ಕೆ ಬಾರದ ಜ್ಞಾನವನ್ನು ಪುಸ್ತಕದ ಬದನೇಕಾಯಿ ಎಂದು ಹೇಳುವುದೂ ಇದೆ. ಒಂದೇ ಒಂದು ಸುತ್ತಾಟ ಪುಸ್ತಕ ನೀಡುವ ಜ್ಞಾನಕ್ಕಿಂತ ಹೆಚ್ಚಿನ ಜ್ಞಾನ ನೀಡುವುದೆಂಬುದು ಅನುಭವದ ಮಾತಾಗಿದೆ. “ವಿಶ್ವ ಒಂದು ಪುಸ್ತಕವಿದ್ದಂತೆ, ಸುತ್ತಾಡಲಾರದವ ಯಾವ ಜ್ಞಾನವನ್ನೂ ಗಳಿಸಲಾರ” ಎಂದು ಸೇಂಟ್ ಆಗಸ್ಟಿನ್ ಹೇಳಿದ್ದಾರೆ. ವಿಶ್ವಸಂಸ್ಥೆಯ ಅಂತರಾಷ್ಟ್ರೀಯ ಪ್ರವಾಸೋದ್ಯಮ ಸಂಸ್ಥೆಯು 1980 ರಿಂದಲೂ … Read more

ಅಸಹಾಯಕತೆ: ನಾವೆ

ಅದೊಂದು ದಿನ ಮಟ ಮಟ ಮಧ್ಯಾಹ್ನ. ಸೂರ್ಯ ನೆತ್ತಿಯ ಮೇಲೆ ಪ್ರಖರ ಕಿರಣಗಳಿಂದ ಸುಡುತ್ತಿದ್ದ. ಗ್ರಾಮೀಣ ಪ್ರದೇಶವಾದ್ದರಿಂದ ಅದಾಗಲೇ ಅಕ್ಕಪಕ್ಕದ ಅಂಗಡಿ ಮುಂಗಟ್ಟುಗಳ ಹೊರಬಾಗಿಲುಗಳೆಲ್ಲ ಮುಚ್ಚಲ್ಪಟ್ಟಿದ್ದವು. ಅಂಗಡಿ ಮಾಲಿಕರು, ಕಾರ್ಮಿಕರೆಲ್ಲ ಹಸಿವೆಂಬ ರಕ್ಕಸನ ಅಬ್ಬರ ತಣಿಸಲು ಅವರವರ ಮನೆಯತ್ತ ಪಯಣಿಸಿಯಾಗಿತ್ತು. ಹಾಗಾಗಿ ಆ ಸಮಯದಲ್ಲಿ ಮನೆಗೆ ಹೋಗದೇ ಊಟ ಹೊತ್ತು ತರುವ ನನ್ನ ಅಂಗಡಿಯೊಂದೇ ತೆರೆದಿತ್ತು.ಊಟದ ಸಮಯದಲ್ಲಿಯೂ ಅಂಗಡಿಯು ತೆರೆದೇ ಇರುತ್ತಾದ್ದರಿಂದ ಅದರ ಗೋಜಿಗೆ ಹೋಗದೆ ನಾನೂ ಕೂಡ ಊಟದ ತಯಾರಿ ನಡೆಸುತ್ತಿದ್ದೆ. ಹಸಿವೆಂಬ ಬ್ರಹ್ಮರಾಕ್ಷಸನ ತೃಪ್ತಿ … Read more