“ಮನದಾಳ”: ಟಿ.ಎ.ಗೋಪಾಲ 

    ಹಲವು ದಿನದ ಹಂಬಲ, ತಿಳಿಯುವ ಆಸೆ, ಅರಿಯುವ ಬಯಕೆ, ಬಂದನದಿಂದ ಹೊರಬರುವ ಚಿಂತನೆ. ಅದೇನೊ ನನ್ನ ಬೆನ್ನ ಹಿಂದೆ ಬಿದ್ದು ಎಳೆಯುತಿದೆ ಎಂದು ಕೆಲವು ಬಾರಿ ಬಾಸವಾಗುತ್ತದೆ. ಇದೆಲ್ಲವನ್ನು ತಿಳಿದುಕೊಳ್ಳಲು ಒಂದು ದಿನ ನನ್ನನ್ನು ನಾನು ವಿಶ್ಷ್ಲೇಷಿಸಿದೆ, ಹಲವಾರು ಸತ್ಯಾಂಶಗಳು ಕಂಡುಬಂದವು, ಅವು ಮನದಲ್ಲಿ ಗೊಂದಲ, ಜಂಜಾಟ, ಅಸಮಾದಾನ, ಅಶಾಂತಿ, ಉನ್ಮಾದ ಮತ್ತು ಎನೋ ಒಂದು ತರಹದ ಭಯ. ಇವೆಲ್ಲವು ಬೊರ್ಗರೆಯುವ ವೇಗದಲ್ಲಿ ಸಂಚಲಿಸುತ್ತಿವೆ, ಇದನ್ನು ಹಿಡಿದು ನಿಲ್ಲಿಸುವ ಯೋಚನೆ ಆದರೆ ಸಾದ್ಯವಾಗುತ್ತಿಲ್ಲ, ಹಲವು … Read more

ಶತಮಾನದ ಅಧ್ಬುತಗಳಲ್ಲೊಂದು-ಗೋಲ್ಡನ್ ಗೇಟ್ ಬ್ರಿಡ್ಜ್: ಪ.ನಾ.ಹಳ್ಳಿ.ಹರೀಶ್ ಕುಮಾರ್

ಇಲ್ಲೊಂದು ಸೇತುವೆಯಿದೆ. ಇದನ್ನು ನೋಡಿದವರೆಲ್ಲಾ ಇದೊಂದು ಇಪ್ಪತ್ತನೇ ಶತಮಾನದ ಅದ್ಭುತಗಳಲ್ಲೊಂದು ಎಂದು ಉಧ್ಗರಿಸುತ್ತಾರೆ. ಅಲ್ಲದೇ ಇದನ್ನು ಶತಮಾನದ ಅದ್ಬುತಗಳಲ್ಲೊಂದು ಎಂದೂ ಘೋಷಿಸಲಾಗಿದೆ. ಜಗತ್ತಿನ ಮೊದಲ ತೂಗುಸೇತುವೆಯೂ ಇದೇ ಆಗಿದೆ ಎಂದರೆ ಆಶ್ಚರ್ಯವಲ್ಲ. ಸ್ಯಾನ್ ಫ್ರಾನ್ಸಿಸ್ಕೋ ಕೊಲ್ಲಿಯ ಮೇಲಿರುವ ಈ ತೂಗುಸೇತುವೆಯು 1.7 ಮೈಲುಗಳಷ್ಟು ಉದ್ದವಿದ್ದು, ಸ್ಯಾನ್ ಫ್ರಾನ್ಸಿಸ್ಕೋದ ಉತ್ತರ ತುದಿಯನ್ನು ಮರೀನ್‍ಕೌಂಟಿಯ ಸಸಲಿಟೋದೊಂದಿಗೆ ಸೇರಿಸುತ್ತದೆ. ಆಧುನಿಕ ಜಗತ್ತಿನ 7 ಅಧ್ಬುತಗಳಲ್ಲಿ ಗೋಲ್ಡನ್ ಗೇಟ್ ಬ್ರಿಡ್ಜ್ ಕೂಡಾ ಒಂದು. ಸ್ಯಾನ್‍ಫ್ರಾನ್ಸಿಸ್ಕೋ ಕೊಲ್ಲಿಯ ಮೇಲಿರುವ ಈ ತೂಗುಸೇತುವೆ ಮುಖ್ಯವಾಗಿ ಎರೆಡು … Read more

ಆರೋಗ್ಯದ ಮೇಲೆ ಸಕಾರಾತ್ಮಕ ಮನೋಭಾವದ ಪರಿಣಾಮ: ವೈ. ಬಿ. ಕಡಕೋಳ

ಮನುಷ್ಯನ ನಡೆ-ನುಡಿ ಆತನ ಮನೋಭಾವ, ಕ್ರಿಯೆ, ಪ್ರತಿಕ್ರಿಯೆಗಳು ಒಂದೇ ರೀತಿ ಇರುವುದಿಲ್ಲ. ಒಂದು ಸಾಮಾನ್ಯ ಪ್ರಚೋದನೆಗೆ ಹತ್ತಾರು ಜನ ಹತ್ತಾರು ರೀತಿಯ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಬಹುದು. ಉದಾಹರಣೆಗೆ ಒಂದು ಮಗು ಅಳುತ್ತಿದ್ದರೆ ಕೆಲವರು "ಅಯ್ಯೋ ಪಾಪ ಎನ್ನಬಹದು. ಇನ್ನು ಕೆಲವರು “ಛಿ ಏನು ಅನಿಷ್ಟ ಎಷ್ಟು ಅಳುತ್ತೆ” ಎನ್ನಬಹುದು. ಇನ್ನು ಕೆಲವರು “ಪಾಪ ಆ ಮಗುವನ್ನು ರಮಿಸಬೇಕು” ಎನ್ನಬಹುದು. ಒಬ್ಬರು ಮಗುವಿನ ಪಕ್ಕದಲ್ಲಿ ಕುಳಿತು ರಮಿಸಲು ಯತ್ನಿಸಬಹುದು. ಹೀಗೆ ಕೇವಲ ಒಂದು ಘಟನೆ ಹತ್ತಾರು ಜನರಲ್ಲಿ ಹತ್ತಾರು ಯೋಚನೆಗಳನ್ನು … Read more

ಆಧುನಿಕ ಬೆಳವಣಿಗೆಯಿಂದ ಮಾನವೀಯ ಮೌಲ್ಯಗಳ ಅವನತಿ: ಶಿವಣ್ಣ ಎಸ್.ಕೆ. 

ಇಂದು ಆಧುನಿಕತೆಯು ಅತ್ಯಂತ ವೇಗದಲ್ಲಿ ಬೆಳೆಯುತ್ತಿರುವುದು ನಿಜಕ್ಕೂ ಸಂತೋಷದ ವಿಷಯ. ಆದರೆ ಈ ತೀವ್ರಗತಿಯ ಆಧುನಿಕತೆಯ ಬೆಳವಣಿಗೆಯಿಂದಾಗಿ ಭಾರತದಲ್ಲಿ ಆಧುನಿಕತೆಯ ಬಿಸಿ (ಶಾಖ) ಹೆಚ್ಚು ತಟ್ಟಿರುವುದು ನಗರ/ಪಟ್ಟಣಗಳಲ್ಲಿ ಎಂದು ಹೇಳಬಹುದು. ಇಂದು ಸಾಮಾಜಿಕ ಸಂಬಂಧಗಳು ಗುರು-ಹಿರಿಯರು, ತಂದೆ-ತಾಯಂದಿರು, ಸ್ತ್ರೀಯರು ತಮ್ಮ ಸ್ಥಾನಮಾನಗಳನ್ನು ಕಳೆದುಕೊಳ್ಳುತ್ತಿರುವುದು ನಿಜಕ್ಕೂ ವಿಷಾದನೀಯ ಸಂಗತಿಯಾಗಿದೆ. ಸ್ವದೇಶಿ ಮತ್ತು ವಿದೇಶಿ ಚಾನೆಲ್‍ಗಳು ಮನೋರಂಜನೆಯ ಹೆಸರಿನಲ್ಲಿ ಬಿತ್ತರಿಸುತ್ತಿರುವ ಅಶ್ಲೀಲ ಚಿತ್ರಗಳಿಂದಾಗಿ ಭಾರತೀಯ ಸಂಸ್ಕøತಿಯ ಸಂಕೇತಗಳಾದ ಸೀರೆ, ಕುಂಕುಮ, ಹಸಿರು ಬಳೆಗಳು ಇಂದು ಕಾಣಸಿಗುವುದು ಅಪರೂಪವಾಗಿದೆ. ಹೀಗೆಯೇ ಮುಂದುವರೆದರೆ … Read more

ಭರತ ಮಾತೆಯ ಪುಣ್ಯ ಭೂಮಿಯನ್ನು ರಕ್ತದಿಂದ ತೋಯಿಸದಿರಿ ಸಹೋದರರೆ: ಸಿದ್ದುಯಾದವ್ ಚಿರಿಬಿ…

ನಿನ್ನೆ ಒಂದು ಕೆಲಸದ ವಿಷಯವಾಗಿ ಕೂಡ್ಲಿಗಿಯ ಸಾರ್ವಜನಿಕ ಅಸ್ಪತ್ರೆಗೆ ಹೋಗಿದ್ದೆ. ನಾನು ಹೋದಾಗ ಡಾಕ್ಟರ್ ಬಂದಿರಲಿಲ್ಲ. ಅದಕ್ಕಾಗಿ ಅಸ್ಪತ್ರೆಯ ಹೊರಗಡೆ ಕುಳಿಯು ಕಾಯ್ತಿದ್ದೆ. ಒಬ್ಬ ವ್ಯೆಕ್ತಿ ಬಂದು "ನೀವು ಸಿದ್ದುಯಾದವ್ ಅಲ್ವಾ?" ಅಂದ. 'ಹೌದು' ಎಂದೆ. ಅವ್ನು ಮರುಮಾತನಾಡದೆ ಯಾರ್ಗೊ ಪೋನ್ ಮಾಡ್ತ ಹೊರಟರಹೋದ. ಸ್ವಲ್ಪ ಸಮಯದ ನಂತರ ಇಬ್ಬರು ಬೈಕ್ ಮೆಲೆ ಬಂದು " ಸಿದ್ದುಯಾದವ್ " ಅಂದ್ರು ಹೌದು ಎಂದೆ. 'ನಿಮ್ಮ ಹತ್ತಿರ ಸ್ವಲ್ಪ ಮಾತಾಡ್ಬೆಕು ಬರ್ತಿರಾ!' ಅಂದ್ರು. ಯಾಕೆ ಎಂದೆ. ಪ್ಲೀಜ್ ಬನ್ನಿ … Read more

ದೋಸ್ತಿ ಖಾತೆಯವರಿಂದ ಕತೆ ಮಾತು ಆಹ್ವಾನ

ಬೆಳಗಾವಿಯಲ್ಲಿ ಒಂದಷ್ಟು ಕತೆಗಾರರು ಸೇರಿ ಒಬ್ಬರ ಕತೆಗಳ ಬಗ್ಗೆ ಇನ್ನೊಬ್ಬರು ಮಾತನಾಡುವ ವಿಶಿಷ್ಟ "ಕತೆ ಮಾತು" ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.  ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಜೊತೆಗೆ ಲಗತ್ತಿಸಲಾಗಿದೆ.   ಕಾರಣ, ಸಹೃದಯರಾದ ತಾವು ಕಾರ್ಯಕ್ರಮಕ್ಕೆ ಆಗಮಿಸಬೇಕಾಗಿ ವಿನಂತಿ. ಕಾರ್ಯಕ್ರಮದ ವಿವರಗಳು ಕೆಳಗಿನಂತಿವೆ. 13ನೇ ನವೆಂಬರ್ 2016,  ಕೇಂದ್ರ ಗ್ರಂಥಾಲಯ, ಡಿ.ಸಿ. ಕಂಪೌಂಡ್, ಬೆಳಗಾವಿ ಕಾರ್ಯಕ್ರಮದ ಆಶಯ: ಸಮಕಾಲೀನ ಕತೆಗಾರ ಗೆಳೆಯರು ಕೂತು ಪರಸ್ಪರರ ಕೃತಿಗಳ ಬಗ್ಗೆ ಅನಿಸಿಕೆ ಹಂಚಿಕೊಳ್ಳುವ ತನ್ಮೂಲಕ ಹೊಸ ಹೊಳಹುಗಳನ್ನು ಅರಿಯುವ ಚಿಕ್ಕ ಪ್ರಯತ್ನ.  ಒಬ್ಬರು … Read more

ಅಪ್ಪ ಅಂದ್ರೆ ಆಕಾಶ…: ನಾ’ನಲ್ಲ’

ಏಷ್ಟೋ ದಿನಗಳ ಹಿಂದೆ ಓದಬೇಕು ಅಂತ ತಂದಿದ್ದ ಪುಸ್ತಕವನ್ನು ಓದೋಕೆ ಇವತ್ತು ಸಮಯ ಕೂಡಿ ಬಂದಿತ್ತು. ಓದುತ್ತ ಹೋದಂತೆ ಒಂದಕ್ಕಿಂತ ಒಂದು ಲೇಖನಗಳು ಮನಸ್ಸಿನ ಆಳಕ್ಕೆ ಇಳಿಯತೊಡಗಿದವು. ಒಂದು ಲೇಖನದಲ್ಲಿ ಲೇಖಕರು ಹೇಳಿದಂತೆ "ಅಪ್ಪ ಅಂದ್ರೆ ಆಕಾಶ" ಎನ್ನುವುದು ಮನದಟ್ಟಾಗಲು ಬಹಳ ಸಮಯ ಬೇಕಾಗಲಿಲ್ಲ. ಹೌದು, ನಿಜವಾಗಲೂ ಅಪ್ಪ ಅಂದ್ರೆ ಆಕಾಶ. ನಾವು ಚಿಕ್ಕವರಿದ್ದಾಗ ಒಗಟುಗಳಿಗೆ ಉತ್ತರಿಸುವ ಪಂದ್ಯವಾಡುವಾಗ ಅನೇಕ ಬಾರಿ ಕೇಳಲ್ಪಟ್ಟ ಒಗಟೆಂದರೆ "ಅವ್ವನ ಸೀರೆ ಮಡಿಚೋಕಾಗಲ್ಲ, ಅಪ್ಪನ ರೊಕ್ಕ ಎನಿಸೊಕಾಗಲ್ಲ" ಅನ್ನೋದು. ಅದಕ್ಕೆ ಉತ್ತರ … Read more

ಕಿರು ಲೇಖನಗಳು

ಗೆಳೆತನ ಅಂದು ಡಿಗ್ರಿ ಮೊದಲ ವರ್ಷದ ಪ್ರಾರಂಭ ದಿನ, ನನ್ನವರೂ ಯಾರೂ ಇಲ್ಲವೆಂಬ ಕೊರಗು ಆಕಾಶದಲ್ಲಿನ ಒಂಟಿ ಹಕ್ಕಿಯ ತಳಮಳದಂತೆ ನನ್ನ ಮನಸ್ಸನ್ನು ಭಾರವಾಗಿಸುತ್ತಿತ್ತು. ಅಪರಿಚಿತ ಮುಖಗಳ ದರ್ಶನ.. ಗೆಳೆಯರಿಲ್ಲದ ನೋವು… ಆಗ ಕಾಲೇಜಿನ ಮೊದಲ ಮಹಡಿಯಲ್ಲಿ ನನ್ನದೇ ಭಾವಗಳ ಭಾರ ಹೊತ್ತು ಆರಡಿ ಎತ್ತರದ ತೆಳ್ಳಗೆ ಮೈಕಟ್ಟಿನ ಕೋರಳಲ್ಲಿ ಸೈಡ ಬ್ಯಾಗ ಹಾಕಿಕೊಂಡ ನಿಂತಿದ್ದ ಹೊಸ ಮುಖದವನ್ನು ಮಾತನಾಡಿಸಿದೆ, ಪರಸ್ಪರ ಪರಿಚಯ ಮಾಡಿಕೊಂಡೆ.  ಮಾತುಗಳು ಸಾಗಿ ಆತ ಬೆಳಗಾವಿಯನೆಂದು ಹೇಳಿದ, ಅವರ ತಂದೆಯ ವರ್ಗವಾಗಿ ಆ … Read more

ಬೆಳಕು: ರೋಹಿತ್ ಶೆಟ್ಟಿ ಮೇಲಾರಿಕಲ್ಲ್

'ಬೆಳಕು' ಅನಂತ. ಅನಿಯಮಿತ. ಅದಕ್ಕೆ ಗಡಿ-ಗೆರೆಗಳಿಲ್ಲಾ. ನಮ್ಮ ಬೇಕುಗಳ ಸರತಿಸಾಲಿನ ಮೊದಲಿನ ಶಬ್ದವೆ ಬೆಳಕು ಎನ್ನಬಹುದು ಅಲ್ವ. ಬೆಳಕು ಏ೦ಧಾಕ್ಷಣ ಯಾರ ಮುಖಾರವಿ೦ದ ಅರಳದು ಹೇಳಿ? ಬೆಳಕ ವರ್ಣಿಸದ ಕವಿಯಿಲ್ಲ, ಬಣ್ಣಸದ ಮಾತುಗಾರನಿಲ್ಲಾ, ಬೆಳಗದ ಮನುಷ್ಯನಿಲ್ಲಾ, ಮನುಕುಲವಿಲ್ಲಾ, ಅದು ಜಗತ್ತಿನ ಚೈತನ್ಯದ ಸ೦ಕೇತ. ಪ್ರಾಣಿಪಕ್ಷಿ, ಸಸ್ಯಸ೦ಕುಲದ ಜೀವಾದಾರ, ಜೀವವು ಹೌದು! ಬೆಳಕು ಗೋಚರ ರೂಪದಲ್ಲಿದ್ದರೂ ಅಗೋಚರ ಸ್ಥಿತಿಯ ಪ್ರತಿಪಾದಕ. ಜಗತ್ತಿನ ಎಲ್ಲಾ ಆಗು ಹೊಗುಗಳಿಗು ಕಾರಣೀಕರ್ತ. ಸುಡುವುದು, ಬೆಳಗುವುದು ಎಲ್ಲವು ಅದೇ. ಕಣ್ಮುಚ್ಚಿದರೂ ಕಣ್ತೆರೆದರೂ ಕಾಣುವುದು ಬೆಳಕೆ. … Read more

ವಿಶೇಷತೆಗಳ ಆಗರ;  ಗೂಳೂರು ಗಣೇಶ: ದಂಡಿನಶಿವರ ಮಂಜು

                                ಗೂಳೂರು ಗಣೇಶನಿಗೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಈ ಗಣಪತಿ ಆಕಾರ ಮತ್ತು ಗಾತ್ರಗಳಲ್ಲಿ ತನ್ನದೇ ಆದ ವಿಶೇಷ ಶೈಲಿಯನ್ನು ಹೊಂದಿದೆ. ಎಲ್ಲಾ ಕಡೆಗಳಲ್ಲಿ ಗಣೇಶ ಚತುರ್ಥಿಯ ದಿನ ಗಣಪತಿಯನ್ನು ಪ್ರತಿಷ್ಠಾಪಿಸಿದರೆ ಗೂಳೂರಿನಲ್ಲಿ ಅಂದು ಮಣ್ಣಿನಿಂದ ಗಣಪತಿ ಮೈಳೆದಯಲು ಆರಂಭಿಸುತ್ತಾನೆ. ದೀಪಾವಳಿ ಹಬ್ಬದ ದಿನ ಈ ಗಣೇಶ ಪ್ರಥಮ ಪೂಜೆಗೆ ಸಿದ್ಧಗೊಳ್ಳುತ್ತಾನೆ. ಅಂದಿನಿಂದ ನಲವತ್ತೈದು … Read more

ರಾಗಿ’ಮುದ್ದೆ’ ತಿಂದವ ನಿರೋಗಿ. .: ಪ. ನಾ. ಹಳ್ಳಿ. ಹರೀಶ್ ಕುಮಾರ್

ಕನಕದಾಸರು ರಚಿಸಿದ ‘ರಾಮಧಾನ್ಯಚರಿತೆ’ ಯನ್ನು ನೀವು ಓದಿರಬೇಕು. ಅದರಲ್ಲಿ ಬರುವ ಅಕ್ಕಿ ಹಾಗೂ ರಾಗಿ ಧಾನ್ಯಗಳ ನಡುವಿನ ವಾದವಿವಾದ ಹಾಗೂ ಅದು ರಾಮನ ಆಸ್ಥಾನದಲ್ಲಿ ಬಗೆಹರಿದ ವಿಚಾರ,ಅಲ್ಲದೇ ಅಕ್ಕಿಗಿಂತಲೂ ರಾಗಿಯೇ ಶ್ರೇಷ್ಠ ಧಾನ್ಯ ಎಂದು ರಾಮನು ತೀರ್ಪಿತ್ತಿದ್ದನ್ನು ಓದಿ ಅಥವಾ ಕೇಳಿ ತಿಳಿದಿರಬೇಕಲ್ಲವೇ?. ಈಗ ಅದೆಲ್ಲಾ ಏಕೆ ಎಂದಿರಾ? ಕಾರಣ ಇದೆ. ನಾವೀಗ ಧಾನ್ಯಗಳಲ್ಲೇ ಶ್ರೇಷ್ಠವಾದ ರಾಗಿ ಹಾಗೂ ಅದರ ಉತ್ಪಾದಿತ ಆಹಾರ ಪದಾರ್ಥವಾದ ರಾಗಿಮುದ್ದೆಯ ಬಹುಪಯೋಗಿ ಗುಣಗಳ ಬಗ್ಗೆ ಚರ್ಚಿಸೋಣ. . ತನ್ನಲ್ಲಿ ಅಡಗಿಸಿಕೊಂಡಿರುವ ಪೋಷಕಾಂಶಗಳ … Read more

ಗೆಳೆಯನಿದ್ದರೆ ಕರ್ಣನಂತಿರಬೇಕು: ಸಿದ್ದುಯಾದವ್ ಚಿರಿಬಿ

ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಸುನಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಮಹಾಭಾರತದ ಮಹಾನ್ ಗ್ರಂಥದಲ್ಲಿ ತನ್ನವರಿಂದಲೆ ಆತಾಷೆ, ಅವಮಾನ, ಕಿಳಿರಿಮೇಗಳ ಚಕ್ರಯೋಹದೊಳಗೆ ಸಿಲುಕಿ ಬಳಲಿ ಬೆಂದ ಆತಭಾಗ್ಯದಾತ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಧಾನಶೋರ, ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ … Read more

ಶಿಕ್ಷಣ (ಭಾಗ 2): ಭಾರ್ಗವ ಎಚ್.ಕೆ.

ಇಲ್ಲಿಯವರೆಗೆ 4    ಬೋಧನಾ ಕಲೆ ಪ್ರಸ್ತುತ ಸನ್ನಿವೇಶದಲ್ಲಿ ಮಕ್ಕಳಿಗೆ ಯಾವ ರೀತಿ ಶೈಕ್ಷಣಿಕ ಬೋಧನೆ ಮಾಡಬೇಕೆಂಬ ಹೊಸ ಹೊಸ ಆಲೋಚನೆಗಳ ಮತ್ತು ಜಿಜ್ಞಾಸೆಗಳ ಮಧ್ಯೆ ಬೋಧನಾ ಕಲೆಯ ಮಹತ್ವದ ಮನವರಿಕೆಗೆ ಇದು ಸುಸಂದರ್ಭ. ಶಿಕ್ಷಕನ ಬೋಧನೆ ಮಾಡುವ ಶೈಲಿಯು ಮಕ್ಕಳಿಗೆ ಪೂರಕವಾಗಿರಬೇಕು. ವಿದ್ಯಾರ್ಥಿಗಳಿಗೆ ಪಾಠದ ವಿವರಣೆ ಸರಳವಾಗಿ ತಿಳಿಯುವಂತಾಗಬೇಕು. ಶಿಕ್ಷಕರಾದ ನಾವುಗಳು ದಿನಾಲು ಅಪಡೇಟ್ ಆಗಿರಬೇಕು. ಅವುಟುಡೇಟೆಡ್ ಆಗಬಾರದು. ಕಲಿಯಲು ನಿರಂತರ ಉತ್ಸಾಹವುಳ್ಳವರು ಮಾತ್ರ್ರ ಕಲಿಸಲು ಯೋಗ್ಯರು ಎಂದರೆ ತಪ್ಪಾಗಲಾರದು. ಒಬ್ಬ ವಿದ್ಯಾರ್ಥಿಯ ಕಲಿಕಾ ಮಟ್ಟವು … Read more

ಯಾರಿಂದ, ಯಾರಿಗೆ, ಯಾತಕ್ಕಾಗಿ ಈ ವಶೀಕರಣ?: ಕೃಷ್ಣವೇಣಿ ಕಿದೂರ್, ಇಚ್ಲಂಪಾಡಿ

ಸ್ತ್ರೀ, ಪುರುಷ ವಶೀಕರಣ ಮಾಡಿಕೊಡುವವರು ಮಾಧ್ಯಮಗಳಲ್ಲಿ ಜಾಹೀರಾತುಗಳ ಮೂಲಕ ಹೆಚ್ಚಾಗಿ ಯುವಜನರನ್ನು ಸೆಳೆದುಕೊಳ್ಳುವುದನ್ನು ಗಮನಿಸಿದರೆ ಮೋಸ ಹೋಗುವವರು ಇರುವ ತನಕ ಮೋಸ ಮಾಡುವವರು ಇರುತ್ತಾರೆ ಅನ್ನುವ ಮಾತು ಅಪ್ಪಟ ಸತ್ಯ. ವಾರ್ತಾಮಾಧ್ಯಮಗಳಲ್ಲಿ ನಿತ್ಯವೂ ನಾನಾ ತರಹದ ಆಮಿಷವೊಡ್ಡಿ ಗಾಳಕ್ಕೆ ಸಿಲುಕಿಸುತ್ತಾರೆ. ಮೀನು ಹಿಡಿಯಬೇಕಾದರೆ ಗಾಳಕ್ಕೆ ಎರೆಹುಳ ಸಿಕ್ಕಿಸದೆ ಹೋದರೆ ಅದು ಬಾರದು. ಯುವಜನರನ್ನು ಮಾತ್ರವಲ್ಲ; ಈ ವಶೀಕರಣದ ಮೂಲಕ ಬಯಸಿದವರನ್ನು, ಸುಲಭವಾಗಿ ವಶ ಮಾಡಿಕೊಳ್ಳಬಹುದು ಎನ್ನುವ ಆಸೆ ಅನೇಕ ಜನರನ್ನು ಪತಂಗದಂತೆ ಮುಕುರಿ ಬೀಳಿಸುತ್ತದೆ. ಇದಕ್ಕೆ ವಯಸ್ಸಿನ … Read more

ಶಿಕ್ಷಣ: ಭಾರ್ಗವ ಎಚ್.ಕೆ.

1 ಶಿಕ್ಷಣದ ಉದ್ದೇಶವಾದರು ಏನು ? ಇಂದಿನ ಆಧುನಿಕ ಯುಗದಲ್ಲಿ ಶಿಕ್ಷಣವಂತರು ಸಮಾಜದ ಉದ್ಧಾರಕ್ಕೆ ತಮ್ಮ ಕೊಡುಗೆಗಳನ್ನು ನೀಡುತ್ತಾ ಬಂದಿದ್ದಾರೆ. ಇನ್ನು ಕೆಲವರು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸಕ್ಕೂ ಕೈಹಾಕಿದ್ದಾರೆ.  ಉದಾಹರಣೆಗೆ, ಗೂಗಲ್‍ನಲ್ಲಿ ಬಾಂಬ್ ತಯಾರಿಸುವ ಬಗೆಯನ್ನು ಸಾವಿರಾರು ಯುಆರ್‍ಎಲ್‍ಗಳು ಮಾಹಿತಿಗಳನ್ನು ನೀಡುತ್ತಿವೆ. ಅದೇ ರೀತಿಯಾಗಿ ಗೂಗಲ್ ಸರ್ಚ್ ಇಂಜಿನ್ ಒಳ್ಳೆಯದಕ್ಕೂ ಬಳಕೆಯಾಗುತ್ತಿದೆ. ವಿಪರ್ಯಾಸವೆಂದರೆ, ಈ ಜಾಲತಾಣಗಳನ್ನೆಲ್ಲ ಜಾಲಾಡುವ ವರ್ಗ ಮಾತ್ರ ಶಿಕ್ಷಣವಂತರು. ಶಿಕ್ಷಣದ ಮೂಲ ಉದ್ದೇಶವು ಕೆಲವು ಸಮಾಜಘಾತುಕರ ತಲೆಗೆ ಹೊಕ್ಕಿಲ್ಲ. ಪರಿಜ್ಞಾನದ ಪಾರವೇ ಇಲ್ಲದಷ್ಟು … Read more

ಚಾತುರ್ಮಾಸ: ಉಮೇಶ ಕ. ಪಾಟೀಲ

ಆಷಾಢಮಾಸದಿಂದ ನಾಲ್ಕು ತಿಂಗಳುಗಳ ಕಾಲ ನಡೆಯುವ ಒಂದು ವ್ರತ ಆಚರಣೆಯಾಗಿದೆ. ಆಷಾಢ ಶುಕ್ಲ ಪೂರ್ಣಿಮೆಯಿಂದ ಕಾರ್ತಿಕ ಶುಕ್ಲ ಪೂರ್ಣಿಮೆಯ ವರೆಗೆ ನಾಲ್ಕು ತಿಂಗಳ ಸಮಯವನ್ನು ‘ಚಾತುರ್ಮಾಸ’ ಎಂದು ಪರಿಗಣಿಸಲ್ಪಟಿದೆ. ಚಾತುರ್ಮಾಸ ಸಮೀಪಿಸದೊಡನೆ ಪೂಜ್ಯ ಮುನಿಗಳು, ಆರ್ಯಿಕೆಯರು, ತ್ಯಾಗಿಗಳು, ಬ್ರಹ್ಮಚಾರಿಗಳು ಮೊದಲಾದ ತಾವು ಚಾತುರ್ಮಾಸಕ್ಕಾಗಿ ನಿಶ್ಚಿಯಿಸಿದ ಗ್ರಾಮ, ನಗರಗಳನ್ನು ಆಶ್ರಯಿಸುತ್ತಾರೆ. ಈ ವ್ರತವನ್ನು ಆಷಾಢ ಶುಕ್ಲ ಏಕಾದಶಿ, ದ್ವಾದಸೀ, ಹುಣ್ಣಿಮೆ, ಕರ್ಕಾಟಕ ಸಂಕ್ರಮಣ, ಇವುಗಳಲ್ಲೊಂದು ದಿವಸ ಈ ವ್ರತವನ್ನು ಪ್ರಾರಂಭಿಸುತ್ತಾರೆ. ಈ ವ್ರತ ಆಚರಣೆಯನ್ನು ಪ್ರಾರಂಭ ಕಾಲ ಭಿನ್ನವಾಗಿದ್ದರು … Read more

ಭಾರತದಲ್ಲಿ ಏಕರೂಪ ಶಿಕ್ಷಣದ ಒಂದು ಚರ್ಚೆ: ಸಿದ್ದುಯಾದವ್ ಚಿರಿಬಿ

ಶಿಕ್ಷಣ ಎಂಬ ಪದಕ್ಕೆ ವ್ಯಾಪಕವಾದ ಅರ್ಥವಿದೆ. ಆ ಅರ್ಥವನ್ನು ಹಿಡಿದಿಡುವ ಒಂದು ಸಮರ್ಥ ವ್ಯಾಖ್ಯೆಯನ್ನು ಅಥವಾ ನಿರ್ದಿಷ್ಟ್ಟವಾಗಿ ಇದೇ ಶಿಕ್ಷಣ ಎಂಬ ವ್ಯಾಖ್ಯೆಯನ್ನು ಕೊಡುವುದು ಕಷ್ಟ್ಟ .ತತ್ವಜ್ಞಾನಿಗಳು ಶಿಕ್ಷಣತಜ್ಞರು ,ರಾಜಕಾರಣಿಗಳು ಮತ್ತು ಸಾಧುಸಂತರು ಇನ್ನು ಮುಂತಾದವರೆಲ್ಲರೂ ತಮ್ಮ ತಮ್ಮ ದೃಷ್ಟಿ ಕೋನಗಳಿಗನುಗುಣವಾಗಿ ಶಿಕ್ಷಣವನ್ನು ವ್ಯಾಖ್ಯಾನಿಸಲು ಪ್ರಯತ್ನಿಸುತ್ತಿದ್ದಾರೆ. ಪ್ರತಿಯೊಂದು ಸಂಪೂರ್ಣವಲ್ಲದಿದ್ದರು ಶಿಕ್ಷಣದ ಬಗ್ಗೆ ಪರಿಗಣಿಸಬೇಕಾದ ಒಂದಲ್ಲ ಒಂದಂಶವನ್ನು ಎತ್ತಿ ಹಿಡಿಯುವದರಿಂದ ಶಿಕ್ಷಣದ ಯಾವುದೇ ವ್ಯಾಖ್ಯೆಯನ್ನು ತಳ್ಳಿಹಾಕುವಂತಿಲ್ಲ. ಇದರಿಂದ ಶಿಕ್ಷಣದ ಪರಿಕಲ್ಪನೆಯು ಸಂಕೀರ್ಣವಾದುದು ಹಾಗೂ ಸಕ್ರಿಯವಾದುದು ಎಂದು ಹೇಳಬಹುದಾಗಿದೆ. ನಿರಂತರವಾಗಿ … Read more

 ಅರಳುಗುಪ್ಪೆ : ಕಲ್ಲರಳಿ ಕಲೆಯಾಗಿ…: ದಂಡಿನಶಿವರ ಮಂಜುನಾಥ್

ಬೇಲೂರು-ಹಳೇಬೀಡಿನ ದೇವಾಲಯಗಳು ವಿಶ್ವದಲ್ಲಿಯೇ ಶಿಲ್ಪಕಲೆಗೆ ಹೆಸರುವಾಸಿಯಾಗಿವೆ. ಹಾಗೆಯೇ ಅದೆಷ್ಟೋ ದೇವಾಲಯಗಳು ಶಿಲ್ಪಕಲಾ ಸೌಂದರ್ಯದಿಂದ ತುಳುಕುತ್ತಿದ್ದರೂ ಸಹ ಇನ್ನೂ ಅಪರಿಚಿತವಾಗಿಯೇ ಉಳಿದಿದೆ. ಅಂತಹ ಅಪರಿಚಿತ ದೇವಾಲಯಗಳಲ್ಲಿ ಅರಳುಗುಪ್ಪೆಯ ದೇವಾಲಯಗಳೂ ಸೇರ್ಪಡೆಗೊಂಡಿವೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನಲ್ಲಿರುವ ಅರಳುಗುಪ್ಪೆ ಎಂಬ ಕುಗ್ರಾಮ ಕಿಬ್ಬನಹಳ್ಳಿ ಹೋಬಳಿಗೆ ಸೇರಿದೆ. ಇಲ್ಲಿರುವ ಹೊಯ್ಸಳರ ಕಾಲದ ಶ್ರೀ ಚನ್ನಕೇಶವ ದೇವಾಲಯ ಮತ್ತು ದ್ರಾವಿಡ ಶೈಲಿಯ ಶ್ರೀ ಕಲ್ಲೇಶ್ವರ ದೇವಾಲಯಗಳು ಶಿಲ್ಪಕಲಾ ಸೌಂದರ್ಯದಿಂದ ಕಂಗೊಳಿಸುತ್ತಿವೆ. ಚನ್ನಕೇಶವ ದೇಗುಲ : ಚನ್ನಕೇಶವ ದೇವಾಲಯವನ್ನು ನೋಡಿದ ತಕ್ಷಣ ನಮಗೆ ನೆನಪಾಗುವುದು ಬೇಲೂರು ಮತ್ತು … Read more

ಉತ್ತರಕರ್ನಾಟಕ ಉದಯೋನ್ಮುಖ ಪ್ರತಿಭೆ ಪೂರ್ಣಿಮಾ ದೇಶಪಾಂಡೆ: ಗುಂಡೇನಟ್ಟಿ ಮಧುಕರ

      ಬೆಳಗಾವಿ ಭಾಗ್ಯನಗರದಲ್ಲಿ ವಾಸಿಸುತ್ತಿರುವ  ಪೂರ್ಣಿಮಾ ದೇಶಪಾಂಡೆ ಇವಳಿಗೆ ಮೊದಲಿನಿಂದಲೂ ಒಂದೇ ಆಸೆ. ತಾನು ಚಲನಚಿತ್ರ ನಿರ್ದೇಶಕಿಯಾಗಬೇಕೆಂಬುದು. ಇದು ಹೇಗೆ ಅವಳ ಮನಸ್ಸಿನಲ್ಲಿ ಮೊಳಕೆಯೊಡೆಯಿತೋ ಗೊತ್ತಿಲ್ಲ. ಆದರೂ ಅವಳದು ಒಂದೇ ಆಸೆ ನಿರ್ದೇಶಕಿಯಾಗಬೇಕೆಂದು. ಅದರಂತೆ ಅವರ ತಂದೆ ತಾಯಿ ಇಬ್ಬರೂ ಸಹಕರಿಸಿದರು. ಮಗಳ ಮನಸ್ಸಿನ ವಿರುದ್ಧ ಹೋಗಬಾರದೆಂದು ಅವಳಲ್ಲಿರುವ  ಪ್ರತಿಭೆಗೆ ನೀರೆರೆಯಲು ಮುಂದಾದರು. ಎಲ್ಲ ಪಾಲಕರೂ ತಮ್ಮ ಮಕ್ಕಳು ಇಂಜನಿಯರರು ಇಲ್ಲವೇ ಡಾಕ್ಟರರಾಗಬೇಕು. ಇವೆರಡನ್ನು ಬಿಟ್ಟು ಬೇರೆ ಜಗತ್ತೇ ಇಲ್ಲವೆಂದು ವರ್ತಿಸುತ್ತಿರುವ ಇಂದಿನ ಜಗತ್ತಿನಲ್ಲಿ. ಪೂರ್ಣಿಮಾಳ … Read more

ಜಗತ್ಪ್ರಸಿದ್ಧ ಪುರಿ ಜಗನ್ನಾಥ ಮಂದಿರ: ಕೃಷ್ಣವೇಣಿ ಕಿದೂರ್.

ಶಂಕರಾಚಾರ್ಯರು   ಸ್ಥಾಪಿಸಿದ   ಚಾರ್ ಧಾಮ್ ಗಳಲ್ಲಿ ಬದರಿನಾಥ  ದ್ವಾರಕಾ,  ಪುರಿ  ಮತ್ತು  ರಾಮೇಶ್ವರಂ  ಪವಿತ್ರ   ಪುಣ್ಯಕ್ಷೇತ್ರಗಳು.  ಒರಿಸ್ಸಾದ  ನೆಲದಲ್ಲಿ  ಈ ಚಾರ ಧಾಮ್ ಗಳಲ್ಲಿ  ಒಂದಾದ ಪುರಿ ಜಗನ್ನಾಥ  ದೇವಸ್ಥಾನ    ಸ್ಥಾಪಿಸಲಾಗಿದೆ.  ಅಲ್ಲದೆ   ಇಲ್ಲಿನ  ಕೊನಾರ್ಕ್  ಸೂರ್ಯ  ದೇಗುಲ   ಜಗತ್ ಪ್ರಸಿದ್ಧ.ದೇಶ ವಿದೇಶಗಳ  ಸಹಸ್ರಾರು ಭಕ್ತರು  ನಿತ್ಯ ನಿತ್ಯ  ಇಲ್ಲಿಗೆ  ತಲಪುತ್ತಾರೆ.                      ಬೆಳಗಿನ  ಹತ್ತುಘಂಟೆಯ … Read more

ಸ್ವಾತಂತ್ರ್ಯೋತ್ಸವದ ಪಾವನ ದಿನ: ಹೊಳಲ್ಕೆರೆ ಲಕ್ಷ್ಮಿವೆಂಕಟೇಶ್

ನಮ್ಮ ದೇಶದ  ಸ್ವಾತಂತ್ರ್ಯೋತ್ಸವದ ಪಾವನ ದಿನವನ್ನು ಅರ್ಥಪೂರ್ಣವಾಗಿ ಆಚರಿಸೋಣ ! ಈ  ಹಬ್ಬದ ಆಚರಣೆ ಕೇವಲ ಸಿಹಿ-ತಿಂಡಿ ತಿನ್ನಲು, ಇಲ್ಲವೇ ಮಜಾಮಾಡುತ್ತಾ ಕಾಲಹರಣ ಮಾಡುವುದಕ್ಕಲ್ಲ ಎನ್ನುವುದನ್ನು ನಾವು ಮೊದಲು ತಿಳಿಯಬೇಕು, ಮತ್ತು ಇತರರಿಗೆ ತಿಳಿಸಬೇಕು ಸಹಿತ ! ಬಾಲಗಂಗಾಧರ ತಿಳಕ್, ಗಾಂಧಿ, ನೆಹರು, ಪಟೇಲ್, ಬೋಸ್, ಮತ್ತು ಸಾವಿರಾರು ಜನ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ತಮ್ಮ ತನುಮನ ಧನಗಳನ್ನು ಒತ್ತೆಯಿಟ್ಟು  ನಮ್ಮ ಭಾರತ ದೇಶದ ಸ್ವಾತಂತ್ರ್ಯಕ್ಕಾಗಿ ದುಡಿದಿದ್ದಾರೆ. ಆ ಎಲ್ಲಾ ಮಹನೀಯರು ಮಹಿಳೆಯರಿಗೆ ನಾವು ಶಿರಬಾಗಿ ನಮನ … Read more

ಜೀವನದ ಸಂತೆಯಲಿ ಮಂದವಾಗಿದೆ ಬೀದಿದೀಪ: ಸಿಂಧು ಭಾರ್ಗವ್.

ಪ್ರತಿ ಸಂಜೆಯಾಯಿತೆಂದರೆ ಹಬ್ಬದ ವಾತಾವರಣವಿರುವ ಮಲ್ಲೇಶ್ವರಂ ಎಂಟನೇ ತಿರುವಿನಲ್ಲಿ ಸುತ್ತಾಡುವುದೇ ಕಣ್ಣಿಗೆ ಹಬ್ಬ… ಹದಿನೈದನೇ ತಿರುವಿನವರೆಗೂ ಸಣ್ಣಸಣ್ಣ  ವ್ಯಾಪಾರದಂಗಡಿಗಳು ರಸ್ತೆ ಬದಿಯಲ್ಲಿ ತುಂಬಾ ಕಾಣಸಿಗುತ್ತವೆ. ಹೂವಿನ ರಾಶಿ, ಹಣ್ಣು-ಹಂಪಲು, ಆಟಿಕೆಗಳು, ಬಟ್ಟೆ ವ್ಯಾಪಾರಿಗಳು, ಚಪ್ಪಲ್ ಅಂಗಡಿ, ಬ್ಯಾಂಗಲ್ಸ್ ,ಬ್ಯಾಗ್ ಗಳು, ತಿನ್ನಲು ಸ್ವೀಟ್ ಕಾರ್ನ್,ಕತ್ತರಿಸಿ ಅಲಂಕರಿಸಿಟ್ಟ ಮಾವು , ಚರುಮುರಿ, ಸಮೋಸ, ಕಚೋರಿ, ಕುಡಿಯಲು ಕಾಫಿ, ಟೀ, ಜ್ಯೂಸ್ ಏನಿದೆ ?ಏನಿಲ್ಲ ? ಕೇಳುವುದೇ ಬೇಡ. ಅಪರೂಪಕ್ಕಾದರೂ ಬೇಟಿ ನೀಡುವುದೆಂದರೆ ನಮಗೂ ಖುಷಿ. ತುಂಬಿದ ಜೇಬಿನೊಂದಿಗೆ ಹೋದರೆ … Read more

ಕಾಲೇಜ್ ಎಂಬ ಬಣ್ಣಬಣ್ಣದ ದೃಶ್ಯಕಾವ್ಯ: ಗಾಯತ್ರಿ ಬಡಿಗೇರ

ಮುಂಗಾರು ಮಳೆ ಶುರುವಾಗುವ ಅಮೃತ ಕ್ಷಣ. ಎಂತವರನ್ನೂ ಕನಸಿನ ಲೋಕಕ್ಕೆ ಕೊಂಡ್ಯೊಯುವ ಒಂದು ಅದ್ಭುತ ಘಳಿಗೆ. ಪರಸ್ಪರ ಅಪ್ಪಿಕೊಳ್ಳುವ ತಂಗಾಳಿಯ ತಂಪಿನೊಂದಿಗೆ, ಚಿಗುರುವ  ಕನಸಿನೊಂದಿಗೆ ವಿದ್ಯಾಲಯಕ್ಕೆ ಪ್ರವೇಶ ಪಡೆಯುವ ಇತರರು ಸುಮಾರು ವೇಷ-ಭೂಷಣದೊಂದಿಗೆ ಅಂಗಳವನ್ನು ಅಲಂಕರಿಸುವರು. ಮೊದ-ಮೊದಲು ಮೌನದಲ್ಲಿ, ಕಣ್ಣಿನ ಸಲಿಗೆಯಲ್ಲಿ ಪರಿಚಯವಾಗವ ಅನಾಮಿಕರು.  ರಿಪ್ರಸೇಂಟ್ ಮಾಡಲು ಹೊರಟ ಮಾಕ್ರ್ಸಕಾರ್ಡ್ ಹೊತ್ತ ಪ್ಲ್ಯಾಸ್ಟಿಕ ಕವರ್‍ಗಳ ಕಾರಬಾರು, ಮಾರುಕಟ್ಟೆಯಲ್ಲಿ ಸೇಲ್ ಆಗದೆ ಉಳಿದ ಮಾರ್ಡನ್ ಟಾಪ್‍ಗಳು, ರಂಬೆ, ಊರ್ವಶಿ,  ಮೇನಕೆಯರ ನಾಟ್ಯದ ಜಲಕನ್ನು ಉಂಟು ಮಾಡುವ ವರ್ತನೆಗಳು, ದೇಹದ … Read more

ದತ್ತಿನಿಧಿ ಸದ್ಭಳಕೆಯಾಗಲಿ ಲೂಸಿ ಸಾಲ್ಡಾನ: ಲಕ್ಕಮ್ಮನವರ್

ಧಾರವಾಡ ಅಗಸ್ಟ:19: ಧಾರವಾಡದ ನಿವೃತ್ತ ಶಿಕ್ಷಕಿ ಲೂಸಿ.ಸಾಲ್ಡಾನ ಅವರು ತಮ್ಮ 55ನೇ ದತ್ತಿನಿಧಿಯನ್ನು ಜೀರಿಗವಾಡದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀಡಿದರು. ದತ್ತಿ ನಿಧಿಯನ್ನು ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯವರು ಮತ್ತು ಶಾಲಾ ಮುಖ್ಯ ಶಿಕ್ಷಕರುಗಳಿಗೆ ಹಸ್ತಾಂತರಿಸಿ ಮಾತನಾಡಿದ ಅವರು ಶ್ರೀಮಂತ ಕುಟುಂಬದಲ್ಲಿ ಜನಿಸಿದ ನಾನು ಅನಿರಿಕ್ಷಿತವಾಗಿ ತಂದೆ ತಾಯಿಯನ್ನು ಕಳೆದುಕೊಂಡು ಬಡತನವನ್ನು ಕಣ್ಣಾರೆ ಕಂಡು, ಎಲ್ಲೋ ಎದ್ದು ಬಿದ್ದು ಅಕ್ಷರ ಕಲಿತು ಶಿಕ್ಷಕಿಯಾಗಿ ಇಂದ ನಾನು ನಿವೃತ್ತನಾಗಿದ್ದೇನೆ. ಹಳ್ಳಿಗಾಡಿನಲ್ಲಿ ಮಕ್ಕಳನ್ನು ಪಾಲಕರು ಬಡತನದ ಕಾರಣಕ್ಕಾಗಿ ಶಾಲೆ … Read more

ರಾಜ್ಯಮಟ್ಟದ ಪ್ರಪ್ರಥಮ ಹಾಸ್ಯಸಾಹಿತ್ಯ ಸಮ್ಮೇಳನ: ಗುಂಡೇನಟ್ಟಿ ಮಧುಕರ

ಹಾಸ್ಯಸಾಹಿತ್ಯ : ಸಮ್ಮೇಳನಕ್ಕೆ ಪ್ರಥಮ ಪಾದಾರ್ಪಣೆ ನಗೆಮುಗುಳು ಹಾಸ್ಯ ಮಾಸಪತ್ರಿಕೆಯ 15 ನೇ ವಾರ್ಷಿಕೋತ್ಸವ ನಿಮಿತ್ತ ರಾಜ್ಯಮಟ್ಟದ ಪ್ರಪ್ರಥಮ ಹಾಸ್ಯಸಾಹಿತ್ಯ ಸಮ್ಮೇಳನ ಹಾಸ್ಯ ಸಾಹಿತ್ಯ ಕುರಿತು ಉಪನ್ಯಾಸ – ಹಾಸ್ಯ ದಿಗ್ಗಜರ ಮೆಲಕು –  ಹಾಸ್ಯ ಕವಿಗೋಷ್ಠಿ – ಹಾಸ್ಯಭಾಷಣಗಳು –ನಗೆನಾಟಕಗಳು      ತುಮಕೂರ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಸೇರಿದ ಎಲ್ಲರ ಮುಖದಲ್ಲಿ ನಗು, ಸಂತೋಷಗಳು ಎದ್ದು ಕಾಣುತ್ತಿದ್ದವು. ಎಲ್ಲ ಹಾಸ್ಯಪ್ರಿಯರು. ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಹಾಸ್ಯಾಸಕ್ತರು ಆಗಮಿಸಿದ್ದರು. ಒಬ್ಬರು ಒಂದು ಹಾಸ್ಯಚಟಾಕಿ … Read more

ಪ್ರೀತಿ ಮಾಡೋ ಮುಂಚೆ: ಮಲ್ಲಿಕಾರ್ಜುನ ದಾಸನಕೊಪ್ಪ

ಕಾಲೇಜು ಆರಂಭವಾಗಿ ಆರು ತಿಂಗಳುಗಳೇ ಕಳೆದಿವೆ. ಹೇಳದೆ ಪ್ರೀತಿಸುವ  ಹುಡುಗ ಹುಡುಗಿಯರಿಗೆ ತಮ್ಮ ಪ್ರೀತಿಯನ್ನು ನಿವೇದನೆ ಮಾಡಿಕೊಳ್ಳಲು ಒಂದು ವೇದಿಕೆ ಸಿದ್ಧವಾಗಿದೆ. ಹುಡುಗ ಹುಡುಗಿಯರೆಲ್ಲಾ ಸೂಕ್ತ ಪ್ರಿಯತಮ/ಮೆಯ ಹುಡುಕಾಟದಲ್ಲಿದ್ದಾರೆ. ಆ ಪ್ರಯತ್ನದಲ್ಲಿ ಕೆಲವರು  ಯಶಸ್ವಿಯು ಆಗಿದ್ದಾರೆ. ಇನ್ನು ಕೆಲವರು ತಮ್ಮ ಪ್ರೀತಿಯನ್ನು ಹೇಗೆ ಅವಳಿ/ನಿಗೆ ಅರಿಕೆ ಮಾಡಿಕೊಳ್ಳಬೇಕೆಂಬ  ತೋಳಲಾಟದಲ್ಲಿದ್ದಾರೆ. ಈ ಸಂದರ್ಭದಲ್ಲಿಯೇ “ವ್ಯಾಲೇಂಟೆನ್ಶ ಡೇ” ಸಮೀಪಸಿದೆ. ಹುಡುಗ ಹುಡುಗಿಯರ ಎದೆಯಲ್ಲಿ ಲಬ್-ಡಬ್ ಶುರುವಾಗಿದೆ.  ನಾನು ಪ್ರೀತಿಸಿದ ಹುಡುಗ/ಗಿ ನನ್ನಲ್ಲಿ ಬಂದು ಗುಲಾಬಿ ಹಿಡಿದು ಪ್ರೀತಿ ಯಾಚಿಸುತ್ತಾನಾ/ಳಾ??  ನನ್ನ … Read more

ಮಲಯಾಳ ಸಿನೆಮಾ ರಂಗವೂ ಮಲಬಾರಿನ ಸಂಸ್ಕೃತಿಯೂ: ಕೃಷ್ಣವೇಣಿ ಕಿದೂರ್

            ಬಹಳಷ್ಟು  ಜನರಿಗೆ  ಮಲಯಾಳ   ಚಿತ್ರಗಳೆಂದರೆ  ಅದು ನೀಲಿ ಚಿತ್ರಗಳಿಗೆ  ಹತ್ತಿರದ್ದು ಎಂಬ  ತಪ್ಪು ಕಲ್ಪನೆಯಿದೆ.    ಜಾಹೀರಾತುಗಳು ತೋರಿಸುವ   ಚಿತ್ರಗಳು   ಹಾಗಿರುತ್ತದೆ ಎನ್ನಬಹುದು.   ಆದರೆ ಒಬ್ಬ ಕೇರಳೀಯಳಾಗಿ  ಮಲಯಾಳಂ  ಚಲನಚಿತ್ರಗಳೆಂದರೆ  ಅಲ್ಲಿ ಮಲಬಾರಿನ ( ಕೇರಳ) ಸಾಂಸ್ಕೃತಿಕ  ಹಿನ್ನಲೆಗೆ  ಹೆಚ್ಚಿನ ಒತ್ತು  ಸಿಗುತ್ತದೆ  ಎಂದು  ಕಂಡ  ಕಾರಣ ಆ ಮಿಥ್ಯೆಯನ್ನು  ಅಲ್ಲಗಳೆಯಬೇಕಾಗಿದೆ. ಅರಬ್ಬಿ ಸಮುದ್ರದ  ಪಕ್ಕದ ಪುಟ್ಟ ರಾಜ್ಯ  ಕೇರಳ.  ಇದಕ್ಕೆ ಕೇರ … Read more

ನೆಗಡಿಯಾದಾಗ ಮೂಗನ್ನೇ ಕೊಯ್ದರೆ,,,!: ಆರ್.ಬಿ.ಗುರುಬಸವರಾಜ. ಹೊಳಗುಂದಿ

ಮೂಗು ಇದ್ದವರಿಗೆಲ್ಲಾ ನೆಗಡಿ ಬರುವುದು ಸರ್ವೇ ಸಾಮಾನ್ಯ. ಪದೇ ಪದೇ ನೆಗಡಿ ಬರುತ್ತದೆ ಅಂತ ಮೂಗನ್ನೇ ಕೊಯ್ದು ಹಾಕುತ್ತೇವೆಯೇ? ಇಲ್ಲವಲ್ಲ. ಆದರೆ ಈಗ ಕರ್ನಾಟಕ ರಾಜ್ಯದಲ್ಲಿ ಇಂತಹದ್ದೊಂದು ಮೂಗನ್ನು ಕೊಯ್ಯಲು ಮುಂದಾದ ಪ್ರಕ್ರಿಯೆ ಶುರುವಾಗಿದೆ. ಅದೇನೆಂದು ನಿಮಗೆ ಈಗಾಗಲೇ ಗೊತ್ತಾಗಿರಬಹುದು. ಅದೇ ಲೋಕಾಯುಕ್ತ ಸಂಸ್ಥೆಯನ್ನು ಕೋಲೇ ಬಸವನಂತೆ ಮಾಡ ಹೊರಟಿರುವುದು.      ಭ್ರಷ್ಟಾಚಾರ ನಿಗ್ರಹಕ್ಕಾಗಿ ಭಾರತದ ರಾಜ್ಯಗಳಲ್ಲಿ ನಿಯೋಜಿತಗೊಂಡಿರುವ ‘ಲೋಕಾಯುಕ್ತ’ ಸಂಸ್ಥೆಯ ಅಧಿಕಾರವನ್ನು ಮೊಟಕುಗೊಳಿಸಿ ಅದಕ್ಕೆ ಪರ್ಯಾಯವಾಗಿ ಇನ್ನೊಂದು ಭ್ರಷ್ಟಾಚಾರ ನಿಗ್ರಹ ದಳ(ಎ.ಸಿ.ಬಿ.) ಎನ್ನುವ ಸಂಸ್ಥೆಯನ್ನು … Read more

ಗೋವಿಂದಯ್ಯನವರ ಗೃಹಬಂಧನ:ಕಿರಣ್ ಕುಮಾರ್ ಕೆ. ಆರ್.

'ನಾಳೆ ಅಪ್ಪನಿಗೆ ಟೌನಿಗೆ ಹೋಗ್ಲಿಕ್ಕೆ ಹೇಳ್ಬೇಕು.', ಎಂದುಕೊಂಡ ರಾಜಮೂರ್ತಿ. ಅಪ್ಪ ಗೋವಿಂದಯ್ಯನವರಿಗೆ ಎಂಬತ್ತರ ಆಸುಪಾಸು. ಅವರದು ಮೊದಲಿನಿಂದಲೂ ಸ್ವಲ್ಪ ದುರ್ಬಲ ಶರೀರ. ಶಾರೀರವೂ ಅಷ್ಟೆ, ದುರ್ಬಲ. ಆದರೂ ಅವರದು ಬಿಡುವಿಲ್ಲದ ಓಡಾಟ. ಒಂದೆಡೆ ಸುಮ್ಮನೆ ಕುಳಿತವರಲ್ಲ. ಎಲ್ಲೋ ಒಂದು ಮದುವೆ ಎಂದರೆ ಅಡಿಗೆಗೆ ಸಹಾಯಕ್ಕೆ, ಇನ್ನೆಲ್ಲೋ ಪೂಜೆ ಎಂದರೆ ಅಲ್ಲಿಗೆ 'ಸುಧಾರಿಸಲಿಕ್ಕೆ', ಮತ್ತೆಲ್ಲೋ ಶ್ರಾದ್ಧವೆಂದರೆ ಅಲ್ಲಿಗೂ ಕೆಲಸದಲ್ಲಿ ಕೈ ಜೋಡಿಸಲಿಕ್ಕೆ – ಒಟ್ಟಿನಲ್ಲಿ ಯಾವ ಸಮಾರಂಭವಾದರೂ ಗೋವಿಂದಯ್ಯ ಅಲ್ಲಿರುತ್ತಿದ್ದರು. ಅವರ ಜೀವನವಿಡೀ ಅವರು ಮಾಡಿದ್ದು ಇದನ್ನೇ. 'ಈ … Read more