ಆದದ್ದೆಲ್ಲಾ ಒಳಿತೇ ಆಯಿತು: ಎಂ. ಎಸ್. ನಾರಾಯಣ.
ಇತ್ತೀಚೆಗೆ ನಾನೂ ಮತ್ತು ನನ್ನ ಮಡದಿ ಕಾರಿನಲ್ಲಿ ಬೆಂಗಳೂರಿಗೆ ಹೋಗುತ್ತಿದ್ದಾಗ ಬಿಡದಿಯ ಬಳಿ ದುರದೃಷ್ಟವಶಾತ್ ಭಾರೀ ರಸ್ತೆ ಅಪಘಾತಕ್ಕೊಳಗಾಗಿಬಿಟ್ಟೆವು. ನಮ್ಮ ಗಾಡಿಯೂ, ನಮ್ಮಿಬ್ಬರ ಬಾಡಿಗಳೂ ಚೆನ್ನಾಗಿಯೇ ಜಖಂಗೊಳಾಗಾದುವು. ನಮ್ಮಿಬ್ಬರಿಗೂ, ಮೂಲಾಧಾರವಾದ ಬೆನ್ನು ಮೂಳೆಗೇ ಪೆಟ್ಟು ಬಿದ್ದು ನನ್ನ ಹೆಂಡತಿಗೊಂದು ದೊಡ್ಡ ಶಸ್ತ್ರಚಿಕಿತ್ಸೆಯೂ ಮಾಡಿಸಬೇಕಾಗಿ ಬಂತು. ನನ್ನ ಹೆಮ್ಮೆಯ ಸ್ನೇಹವರ್ತುಲದ ಇನ್ನಿಲ್ಲದ ಸಹಕಾರ ಹಾಗೂ ಬೆಂಬಲದಿಂದ ನಾವು ಆ ಭೀಕರ ಸನ್ನಿವೇಶದಿಂದ ಬಹುಬೇಗ ಪಾರಾಗಿ ಹೊರಬರಲು ಸಾಧ್ಯವಾಯಿತೆಂಬುದನ್ನು ನಾನಿಲ್ಲಿ ಹೇಳಲೇಬೇಕು. ಈ ಸಂಧರ್ಭದಲ್ಲಿ ನಾವು ಪಟ್ಟ ಬೇಗೆ ಬವಣೆಗಳ … Read more