ಅಂದು ಮೂವತ್ತೊಂದನೇಯ ತಾರೀಖು, ಎಂದರೆ ಆ ಮಾಹೆಯ ಕೊನೆಯ ದಿನ. ಎಂದಿನಂತೆ ಮನೆಗೆಲಸ ಪೂರೈಸಿ ಹೊರಟು ನಿಂತ ನಿಂಗಿಯನ್ನು ಕಂಡ ಪಮ್ಮೀ “ಏಯ್. . . ನಿಂಗೀ. . . ನಾಳೆಯಿಂದ ನೀ ಕೆಲಸಕ್ಕೆ ಬರೋದು ಬೇಡ”ಎಂದಾಗ ಶಾಕ್ ಹೊಡೆಸಿಕೊಂಡವಳ ತರಹ ನಿಂತ ನಿಂಗಿ-“ಯಾಕ್ರವ್ವಾ. . ಬೇರೆ ಕಡೆ ಎಲ್ಲಾದ್ರೂ ಹೋಗ್ತಿದ್ದೀರಾ?, ನನ್ನ ಕಡೆಯಿಂದ ಏನಾದ್ರೂ ತೆಪ್ಪ ಆಗೈತಾ? ನಾನು ಉಸಾರಾಗೇಅವ್ನೀ. . , ಎರಡೂ ಡೋಸ್ ವ್ಯಾಕ್ಸಿನೇಷನ್ ಕೂಡ ಹಾಕ್ಸೊಂಡಿದ್ದೀನಿ. . ಮತ್ಯಾಕ್ರವ್ವಾ. ?” ಹೀಗೆ […]
ಹಾಸ್ಯ
ಅರೆಹೊಟ್ಟೆಯಲ್ಲಿ ಬಳಲಿದ ಸಮಾರಂಭದ ಅತಿಥಿ: ಮಹಾಬಲ ಕೆ ಎನ್
ಸ್ನೇಹದ ದಾಕ್ಷಿಣ್ಯಕ್ಕೆ ಸಿಕ್ಕಿಬಿದ್ದು ಆಗಾಗ್ಗೆ(ವರ್ಷಕ್ಕೊಮ್ಮೆ ಅನ್ನಿ. ಮೈಸೂರಿನಲ್ಲಿ ದಿನಪೂರ್ತಿ ನಡೆಯುವ ಕಾರ್ಯಕ್ರಮವೊಂದಕ್ಕೆ ಬಹುತೇಕ ವೇದಿಕೆಯಲ್ಲಿ ಕುಳಿತ (ಮೂಕ)ಪ್ರೇಕ್ಷಕನಾಗಿ ಭಾಗವಹಿಸುವ ದೌರ್ಭಾಗ್ಯ ನನ್ನ ಪಾಲಿಗೆ ಬಿಟ್ಟೆನೆಂದರೂ ಬಿಡದೀ ಮಾಯೆ ಎನ್ನುವಂತೆ ಮೆಟ್ಟಿಕೊಂಡು ಬಂದಿದೆ. ಹತ್ತು ಗಂಟೆಗೆ ಆರಂಭವಾಗಿ ಒಮ್ಮೊಮ್ಮೆ ಸಾಯಂಕಾಲ ಏಳರವರೆಗೆ ನಡೆಯುವ ಸಾಹಿತ್ಯಕ, ಸಾಮಾಜಿಕ, ಸಾಸ್ಕೃತಿಕ ಮತ್ತು ವೈದ್ಯಕೀಯ(ಏಕೆಂದರೆ ನೇತ್ರ ವಾಗ್ದಾನ ಕಾರ್ಯಕ್ರಮವನ್ನೂ ಹಮ್ಮಿಕೊಂಡಿರುತ್ತಾರೆ) ಕಲಾಪ ಹೊಂದಿರುವ ವ್ಯಾಪಕ ಯೋಜನೆಯ ಕಾರ್ಯಕ್ರಮವಿದು. ಬೆಳಿಗ್ಗೆ ಸಭಾಕಲಾಪ ಉದ್ಘಾಟನೆ. ದೀಪ ಹಚ್ಚುವ ಕಾರ್ಯಕ್ರಮದಲ್ಲಿ ಗಣ್ಯರ ಕೈಯಿಂದ ಕೈಗೆ ರಿಲೇ ರೇಸಿನ […]
ಚಿಂಗ್-ಚಾಂಗ್-ಚೂ: ಚಿನ್ನು ಪ್ರಕಾಶ್ ಶ್ರೀರಾಮನಹಳ್ಳಿ
ಮನುಷ್ಯ ಹುಟ್ಟಿನಿಂದಲೇ ಹಲವಾರು ನಾಮಧೇಯಗಳಿಂದ ಕರೆಯಲ್ಪಡುತ್ತಾನೆ, ಮಗುವಾಗಿದ್ದಾಗ ಒಂದು ತರಹದ ಪ್ರೀತಿಯ ಹೆಸರುಗಳು ಮುಗ್ಧ ನಗುವಿಗೆ ಅಲಂಕಾರದಂತೆ ಕಂಡರೂ ಕೆಲವು ಸಲ ಅದೇ ಹೆಸರುಗಳು ಬೆಳೆದು ದೊಡ್ಡವರಾಗಿ ಮುದುಕರಾಗುವವರೆಗೂ ಅವರ ಬೆನ್ನಿಗೆ ಹಾಗೇ ಅಂಟಿಕೊಂಡೇ ಇರುತ್ತವೆ, ಕೆಲವು ಸಲ ಸತ್ತ ನಂತರವೂ ಆತನ,/ಆಕೆಯ ಮನೆಯವರನ್ನು ಗುರುತಿಸುವುದೂ ಸಹ ಅದೇ ಅಡ್ಡಹೆಸರಿನಿಂದಲೇ, ಈ ಅಡ್ಡ ಹೆಸರಿನ ಪರಿಣಾಮ ಎಷ್ಡು ಪ್ರಭಾವಯುತವಾಗಿರುತ್ತದೆಂದರೆ ಅವರ ಅಸಲಿ ಹೆಸರೇ ಮರೆತು ಹೋಗುವಷ್ಟು, ನಮ್ಮ ಸಂಬಂದಿಕರಲ್ಲೇ ಒಬ್ಬರಿದ್ದರು ಅವರು ಸದಾ ಎಲೆ ಅಡಕೆ ಜಗಿಯುತ್ತಾ […]
ರೈತ ಫಾರ್ ಸರಕಾರ: ಸೂರಿ ಹಾರ್ದಳ್ಳಿ
ಒಂದು ಅಶುಭ ದಿನದಂದು, ಕಾಶೀಪತಿ ಕೊರೆಯಲು ಶುರುಮಾಡಿದನು. ‘ನಮ್ಮದು ರೈತರ ಫಾರ್ ಸರಕಾರ,’ ರಾಜಕಾರಣಿಗಳಿಗೆ ಮತ್ತು ಕವಿಗಳಿಗೆ ಇಹಲೋಕದಲ್ಲಿ ಬೇಕಿರುವುದು ‘ಕೇಳುವ ಕಿವಿಗಳು’ ಮತ್ತು ಆಡಿಸಲು ಒಳಗೆ ಟೊಳ್ಳಿರುವ ತಲೆಗಳು. ನಡುನಡುವೆ ಚಪ್ಪಾಳೆಯ ದನಿಗಳು. ಇವು ಮೂರಿರದ್ದರೆ, ದೇವರ ದಯೆ, ಒಡೆಯದ, ಮುರಿಯದ, ಚರ್ಮದ ಬಾಯಿ ದಣಿಯುವುದಿಲ್ಲ. ಕಾಶೀಪತಿ ಹೇಳಿದ್ದನ್ನು ನಾನು ತಿದ್ದಿದೆ, ‘ಅದರು ಫಾರ್ ಅಲ್ಲ, ಪರ.’ ‘ಇಂಗ್ಲಿಷಿನವರಿಗೂ ತಿಳಿಯಲಿ ಎಂದು ಹಾಗೆಂದೆ. ಆ್ಯಂಡು, ನಾನು ಹಳ್ಳಿಯವರ ಮಕ್ಕಳೂ ಗರ್ಭದಲ್ಲಿರುವಾಗಲೇ ಇಂಗ್ಲಿಷ್ ಕಲಿಯಬೇಕು ಎಂದು ವಾದಿಸುವವನು. […]
ಮನೆ ಬಾಡಿಗೆಗಿದೆ!: ಎಸ್.ಜಿ.ಶಿವಶಂಕರ್
ಹೌದು, ನನ್ನ ಮನೆಯ ಮೊದಲ ಮಹಡಿ ಮನೆ ಬಾಡಿಗೆಗಿದೆ! ಫ್ಯಾಕ್ಟ್ರಿ ಕೆಲಸ ಮಾಡಿದವರಿಗೆ ನನ್ನ ಕಾಲದಲ್ಲಿ ಪೆನ್ಷನ್ ಇರಲಿಲ್ಲ. ಅದಕ್ಕೇ ಪಿಎಫ್ ಸಾಲ ತೆಗೆದು ಬಾಡಿಗೇಗೇಂತ ಇಪ್ಪತ್ತು ವರ್ಷದ ಹಿಂದೆ ಮಹಡಿ ಮೇಲೊಂದು ಮನೆ ಕಟ್ಟಿಸಿದ್ದೆ. ಕೆಳಗೆ ನಾನು ವಾಸ, ಮೇಲಿನದು ಬಾಡಿಗೆಗೇಂತ ಯೋಜನೆ ಮಾಡಿ ಕಾರ್ಯ ಅರೂಪಕ್ಕಿಳಿಸಿದ್ದೆ. ಕಳೆದ ಇಪ್ಪತ್ತು ವರ್ಷದಲ್ಲಿ ಐದಾರು ಜನ ಬಾಡಿಗೆದಾರರು ನೆಮ್ಮದಿಯಿಂದ ಇದ್ದು ಹೋದರು. ಆದರೆ ಈಗ ಮಾತ್ರ ವಿಚಿತ್ರ ಪರಿಸ್ಥಿತಿ ಎದುರಾಗಿತ್ತು. ಪ್ರತೀ ರೂಮಿಗೂ ಅಟ್ಯಾಚ್ಡ್ ಬಾತ್ರೂಮು ಕೇಳುತ್ತಿದ್ದರು! […]
ಕನ್ನಡ v/s ಇಂಗ್ಲಿಷ್ : ಸೂರಿ ಹಾರ್ದಳ್ಳಿ
ನಮ್ಮ ಕಂಪನಿಯಲ್ಲಿ ಕನ್ನಡೇತರರಿಗೆ ಕನ್ನಡ ಪಾಠ ಮಾಡುತ್ತಿದ್ದೆ. ಅಕ್ಷರಗಳ ಮಾಲೆ ಕೊಟ್ಟಾಗ ‘ಓಹ್ ಮೈ ಗಾಡ್,’ ಎಂಬೊಂದು ಉದ್ಗಾರ ಹಿಂದಿನಿಂದ ಬಂತು. ಇಂಗ್ಲಿಷಿನ ಇಪ್ಪತ್ತಾರು ಅಕ್ಷರಗಳು ಸರಿಯೆಂದ ನಮ್ಮವರು ಕನ್ನಡದಲ್ಲಿ ಇಷ್ಟೊಂದು ಅಕ್ಷರಗಳೇ, ಕಲಿಯಲು ಕಷ್ಟ ಎಂದು ಮೂಗು ಮುರಿಯುತ್ತಾರೆ. ಆದರೆ ಚೀನೀ ಭಾಷೆಯಲ್ಲಿ ಸುಮಾರು 43 ಸಾವಿರ ಅಕ್ಷರಗಳಿವೆ ಎಂದರೆ ನಂಬುವಿರಾ? ನಂಬಲೇಬೇಕು. ಆದರೆ ಒಬ್ಬ ವ್ಯಕ್ತಿಯು ಮಾತನಾಡಲು ಮೂರನೆಯ ಒಂದು ಭಾಗ ಮಾತ್ರ ಕಲಿತರೆ ಸಾಕಂತೆ. ಆದರ ಇನ್ನೊಂದು ದುರಂತ ಎಂದರೆ ಅದು ಧ್ವನಿ […]
ಯಮಲೋಕ ಭ್ರಷ್ಟಾಚಾರ ಮುಕ್ತವಾಗಲಿ: ಪಿ.ಕೆ. ಜೈನ್ ಚಪ್ಪರಿಕೆ
ಮರುಜನ್ಮದಲ್ಲಿ ನಾವೇನಾಗ್ತಿವಿ ಅನ್ನೋದು ನಾವು ಮಾಡಿದ ಪಾಪ ಪುಣ್ಯದ ಫಲಕ್ಕೆ ನೇರ ಸಂಬಂಧವಿದೆ ಅಂತಾ ಹೇಳ್ತೀವಿ. ಅದನ್ನೇ ಕರ್ಮಸಿದ್ಧಾಂತ ಅಂತಲೂ ಕರೀತಾರೆ. ಮುಂದಿನ ಜನ್ಮ ಮನುಷ್ಯ ಜನ್ಮವೇ ಆಗಬೇಕು ಅಂತಾದರೆ ಸಿಕ್ಕಾಪಟ್ಟೆ ಪುಣ್ಯ ಸಂಪಾದಿಸಬೇಕು ಅಂತಾ ಹೇಳ್ತಾ ಇರೋದನ್ನು ಕೇಳಿದ್ದೀವಿ. ಹಾಗೆಯೇ ಮುಂದಿನ ಏಳು ಜನ್ಮಗಳು ಮನುಷ್ಯನಲ್ಲದ ಜನ್ಮಗಳಾಗಿರ್ತಾವೆ ಅಂತಾನೂ ಕೇಳಿದ್ದೀವಿ. ಆದ್ರೆ ಇವೆಲ್ಲದರ ನಡುವೆ ಒಂದು ಕನ್ಫ್ಯೂಸನ್ ಮತ್ತು ಉತ್ತರ ಸಿಗದ ಪ್ರಶ್ನೆ ಈ ಕರೊನಾ ವೈರಸ್ ಬಂದಾಗ ಶುರು ಆಯ್ತು…ಎನ್ ಗೊತ್ತಾ…!??? ಪ್ರಸ್ತುತ ಪ್ರಪಂಚದಲ್ಲಿ […]
ಮಳೆಗಾಲ ನಮ್ಮದೂ ಒಂದು ಕತೆ: ಭಾರ್ಗವಿ ಜೋಶಿ
ಅಂದೊಂದು ಸುಂದರ ಸಂಜೆ.. ಸೂರ್ಯನು ಭಾರತದ ಸೌಂದರ್ಯವನ್ನು ಮಿಂಚಿಸಿ ಈಗ ಬೇರೆ ದೇಶಗಳಲ್ಲಿ ಕಣ್ಣುತೆರೆಸುವ ಸರದಿ.. ಸೂರ್ಯ ನಿಧಾನವಾಗಿ ಹೆಜ್ಜೆಯಿಟ್ಟು ದಾಟುತ್ತಿದ್ದ.. ಚಂದ್ರನು ನಾನಿಲ್ಲೇ ಇದ್ದೀನಿ ಅಂತಾ ಮೋಡದ ಮರೆಯಿಂದ ಇಣುಕಿ ಇಣುಕಿ ನೋಡುತ್ತಿದ್ದ. ಅವನ ಬರುವಿಕೆಯನ್ನು ತಡೆಯಲು ಸಫಲವಾದ ಮೋಡಗಳು ಈಗ ನಮ್ಮ ಸಮಯ ಎಂದು ಮಳೆಸುರಿಸಲು ಸಿದ್ಧವಾಗಿದ್ದವು.. ಸಂಧ್ಯಾಕಾಲ, ತಂಪಾದಗಾಳಿ, ಮಸಕು ಬೆಳಕು, ತುಂತುರು ಮಳೆ… ಮನೆಯ ಅಟ್ಟದಮೇಲೆ ಈ ಅಂದವನ್ನು ಅನುಭವಿಸುತ್ತ ನಿಂತಿದ್ದಳು ನಮ್ಮ ಅರುಂದತಿ… (ಭಾಳ್ ದಿವಸದ ಮೇಲೆ ಕರ್ಕೊಂಡು ಬಂದೆ […]
ಜಸ್ಟ್ ಮಿಸ್ಸೋ…………: ಗುಂಡುರಾವ್ ದೇಸಾಯಿ
ಇಡೀ ಭೂಮಂಡಲದಲ್ಲಿ ಅತಿ ಪ್ರಾಮಾಣಿಕನಾಗಿ, ಅನ್ಯಾಯ, ಹಿಂಸೆ, ಅಸೂಯೆ, ದ್ವೇಷ, ಮುನಿಸು, ಹೊಗಳಿಕೆ, ತೆಗಳಿಕೆ ಮೊದಲಾದ ರಾಗಗಳತ್ತ ಮುಖವೂ ಮಾಡದೆ ಮರಣವನ್ನಪ್ಪಿದ ಪದ್ದು ಯಮನ ಆಸ್ಥಾನಕ್ಕೆ ಬಂದ. ನಕ್ಕೋತ ಹರಿ ಧ್ಯಾನ ಮಾಡುತ್ತ ಬಂದದ್ದನ್ನು ನೋಡಿ ಯಮನಿಗೆ ಗಾಭರಿ ಮತ್ತು ಆಶ್ಚರ್ಯ ಎರಡು ಆತು. ನನ್ನತ್ರ ಬರೊಷ್ಟಿಗೆ ಕಾಲಿಗೆ ಬಿದ್ದು ‘ನನ್ನನ್ನ ದಯವಿಟ್ಟು ಸ್ವರ್ಗ ಕಳಿಸು ಹಾಂಗೆ ಹಿಂಗೆ ನಿನಗ ಅದೂ ಕೊಡುತಿ ಇದು ಕೊಡಸ್ತಿನಿ, ಭೂಲೋಕಕ್ಕೆ ಹೋದ್ರೆ ನನ್ನ ಬಂಗ್ಲೇಲಿ ಇಳಿಯೊಕೆ ವ್ಯವಸ್ಥ ಮಾಡಸ್ತಿನಿ’ ಅನ್ನೊರೆ […]
ಅಮಾಯಕನೊಬ್ಬನ ಕತೆ: ಸೂರಿ ಹಾರ್ದಳ್ಳಿ
ನಮ್ಮ ಗುಂಡ ಬರೀ ಅಮಾಯಕನಲ್ಲ, ಅಮಾಯಕರಲ್ಲಿ ಅಮಾಯಕ ಎಂಬುದರಲ್ಲಿ ಖಡಾಖಂಡಿತ ನಂಬಿಕೆಯುಳ್ಳವನು ನಾನು. ಇದಕ್ಕೆ ಕಾರಣಗಳಿಲ್ಲದಿಲ್ಲ. ಭಾರತದ ಹವಾಮಾನ ಇಲಾಖೆಯವರು ‘ಇನ್ನು ಮೂರು ದಿನ ಮಳೆ ಬರುತ್ತದೆ’ ಎಂದು ಹೇಳಿದರೆ ಮೂರೂ ದಿವಸ ತನ್ನ ಜೊತೆಯಲ್ಲಿ ತನ್ನ ಕೊಡೆಯನ್ನು ಹೊತ್ತೊಯ್ಯುವವನೇ ಅವನು. ‘ಇಲ್ಲವೋ ಮಂಕು ಮುಂಡೇದೇ, ನಿನಗೆಲ್ಲೋ ಭ್ರಮೆ. ಬರುತ್ತದೆ ಎಂದರೆ ಬರೋಲ್ಲ. ಮಳೆ ದೇವರಾದ ವರುಣನಿಗೆ ಈ ಇಲಾಖೆಯವರನ್ನು ಕಂಡರೆ ಕೋಪ. ಹಾಗಾಗಿ ಸದಾ ತದ್ವಿರುದ್ಧವಾಗಿರುತ್ತದೆ, ಇದು ಸತ್ಯಸ್ಯ ಸತ್ಯ,’ ಎಂದು ಬಿಡಿಸಿ ಬಿಡಿಸಿ ಹೇಳಿದರೂ […]
ಕನ್ನಡದ ಗಗನಸಖಿ: ಸೂರಿ ಹಾರ್ದಳ್ಳಿ
ಸಂದರ್ಶಕರು ಮಾದೇವಿಯನ್ನು ಕೇಳಿದರು: ‘ನೀವು ಎಂದಿಗಾದರೂ ವಿಮಾನದಲ್ಲಿ ಪ್ರಯಾಣಿಸಿದ್ದೀರಾ?’ ‘ಕ್ವಚಿತ್ತಾಗಿ.’ ‘ವಿಮಾನಗಳಲ್ಲಿ ಏರ್ ಹೋಸ್ಟೆಸ್ಗಳು ಪ್ರಯಾಣಿಕರಿಗೆ ಕೆಲವು ಸಲಹೆಗಳನ್ನು ಕೊಡುವುದನ್ನು ನೀವು ಕೇಳಿದ್ದೀರಿ. ಅದನ್ನು ಹೇಳಿ.’ ‘ಗೋ ಔಟ್ ವಿಮಾನದಲ್ಲಿ ಪ್ರಯಾಣಿಸುತ್ತಿರುವ ನಿಮಗೆಲ್ಲಾ ಆದರದ ಸ್ವಾಗತ. ಸ್ವಾಗತ ಎಂದರೆಷ್ಟು ಬಿಟ್ಟರೆಷ್ಟು, ಬಂದು ಅಂಡೂರಿ ಕುಳಿತುಬಿಟ್ಟಿದ್ದಿರಲ್ಲ, ಬೇರೇನೂ ಕ್ಯಾಮೆ ಇರದವರ ಹಾಗೆ.’ ‘ಏನೆಂದಿರಿ?’ ‘ಏನೂ ಇಲ್ಲ. ನಮ್ಮ ವಿಮಾನದಲ್ಲಿ ಮುಂದೆ ಎರಡು ಬಾಗಿಲುಗಳಿವೆ, ಹಿಂದೆ, ತಿರುಗಿಯೇನೂ ನೋಡಬೇಕಾಗಿಲ್ಲ. ಅಲ್ಲೇನೂ ಕರಡಿ ಕುಣಿಯುತ್ತಿಲ್ಲ, ಅಲ್ಲಿ ಎರಡು ನಿರ್ಗಮನ ದ್ವಾರಗಳಿವೆ. ನಡುವೆ […]
ಅಯ್ಯೋ! ಸಾಲಾ?: ಗುಂಡುರಾವ್ ದೇಸಾಯಿ
ಪದ್ದು ಮುಂಜಾನೆ ಮಂಜಾನೆ ಹಾಸಿಗೆಲಿ ಇದ್ದಾಗಲೆ ಮನ್ಯಾಗ ಒಕ್ಕರಿಸಿಕೊಂಡ, ‘ಏನಾತೋ ಪದ್ದು ಹಿಂಗ್ಯಾಕ ಗಾಬರಿ ಆಗಿದಿ’ ಅಂದೆ. ‘ಇಲ್ಲ ದೊಸ್ತ್ಯಾ ಸಾಲಗಾರರ ಕಾಟ ಬಾಳ ಆಗ್ಯಾದ. ಮಾರ್ಯದೆಯಿಂದ ಬದುಕೊ ಮನುಷ್ಯ. ಸಾಲ ಸಕಾಲಕ್ಕ ತೀರಿಸುವುದಾಗವಲ್ತು ಮೂರು ತಿಂಗಳ ಟೈಮು ಸಿಕ್ರ ಎಲ್ಲಾನೂ ಅಡ್ಜೆಸ್ಟ ಮಾಡಬಹುದು. ಇವರು ಸಿಕ್ಕ-ಸಿಕ್ಕಲ್ಲಿ ವಾಮಾಗೋಚರವಾಗಿ ಬಯ್ಯತಾರ ಏನು ಮಾಡಲಿ’ ಎಂದು ತನ್ನ ಅಳಲು ತೋಡಿಕೊಂಡ. ‘ಅದಕ್ಯಾಕ ಚಿಂತಿ ಮಾಡತಿ ಒಂದು ವ್ರತ ಅದ ಮಾಡ್ತಿ ಏನು?’ ‘ವ್ರತಾನ! ವ್ರತದಿಂದ ಸಾಲ […]
ನಗೆ ಹನಿ: ರಾಮಪ್ರಸಾದ.ಬಿ.
ಸಂಗೀತ ಮೇಷ್ಟ್ರು:ಏನಮ್ಮ ರಾಗಿಣಿ! ಸ…ರಿ…ಅನ್ನು…. ರಾಗಿಣಿ:ಸಾರಿ ಅನ್ನೋಂತಹ ತಪ್ಪು ನಾನೇನು ಮಾಡಿದ್ದೇನೆ ಗುರುಗಳೇ?! **** ರಮ್ಯ:ಡ್ಯಾಡಿ,ನನಗೆ ಟೀಚರ್ ಶಿಕ್ಷೆ ಕೊಟ್ರು … ತಂದೆ:ಯಾಕೋ ಪುಟ್ಟ ಅಂತಾ ತಪ್ಪು ನೀನೇನು ಮಾಡಿದೆ?! ರಮ್ಯ:ನಮ್ ಟೀಚರ್ ನನ್ಹತ್ರ ಸ್ಕೇಲ್ ತೋರಿಸಿ ಎಲ್ರ ಮುಂದೆ ಹೇಳ್ತಿದ್ರು-"ಈ ಸ್ಕೇಲ್ ತುದಿಗೆ ಒಬ್ಬ ಮೂರ್ಖ ವ್ಯಕ್ತಿ ನಿಂತಿದ್ದಾಳೆ…" ಆಗ ನಾನು ಸ್ಕೇಲ್ ನ ಯಾವ ತುದಿ ಟೀಚರ್ ಅಂತ ಕೇಳಿದೆಯಷ್ಟೇ!" **** ಡಾಕ್ಟರ್:ನೀವೇನು ಭಯಪಡಬೇಡಿ!ಆಪರೇಷನ್ ಆದಕೂಡಲೇ ನೀವು ಹಾಯಾಗಿ ನಿಮ್ಮ ಮನೆಗೆ ನಡೆದುಕೊಂಡೇ ಹೋಗಬಹುದು…. […]
ಅಪ್ಪಾ ಬಾಂಬು ……..! (ನಗೆ ಬರಹ): ಗುಂಡುರಾವ್ ದೇಸಾಯಿ
‘ಅಪ್ಪಾ… ಬಾಂಬು ಅಪ್ಪಾ, ಬಾಂಬು’ ಅಂತ ಮಗ ಅಳುತ್ತಾ ಎಬ್ಬಿಸಿದಾಗ ಗರಬಡಿದವನಂತೆ ‘ಹ್ಞಾ! ಎಲ್ಲಿ…ಎಲಿ?್ಲ’ ಅಂತ ತಡಕಾಡಕತಿದೆ. ಹಾಸಿಗೆಯಲ್ಲ ಅಸ್ತವ್ಯಸ್ತವಾಗಿ ಲುಂಗಿ ಇಲ್ಲದೆ ಹಾಗೆ ಓಡಾಡುತ್ತಿದ್ದನ್ನು ನೋಡಿ ಎಲ್ಲರೂ ಏನಾಯ್ತು ಅಂತ ಓಡಿ ಬಂದ್ರು ‘ಬಾಂಬು!ಬಾಂಬೂ…..! ಎಲ್ಲಿ ಬಾಂಬು?’ ಅಂದೆ ‘ಅಯ್ಯೋ ಸವಾರಾತಿವರಗೂ ಸುಡಗಾಡೂ ಏನೇನೊ ನೋಡತಿರಿ, ಹಿಂಗ ಎದ್ದು ಕಣವರಸ್ತಿರಿ’ ಎಂದ್ಲು ಈಕಿ ಅಷ್ಟರಾಗ ಮಗ ‘ಅಪ್ಪಾ ಬಾಂಬು ಬೇಕು ಅಪ್ಪಾ ಬಾಂಬು ಬೇಕು’ ಎಂದು ಅಳಕೊಂತ ಕುತಿದ್ದ. ನನಗ ಹುಚ್ಚು ಮಬ್ಬು ಕೂಡೆ ಹಿಡಿತು. […]
ಕಿಟ್ಟಿ ಪಾರ್ಟಿ: ಮೂರ್ತಿ ಎ ಎನ್ ಕೆ
ರೀ. ಮನೇಲಿ ಸ್ವಲ್ಪವೂ ಹಾಲಿಲ್ಲ. ನನ್ನ ಸ್ನೇಹಿತೆ ಬರ್ತಾ ಇದ್ದಾಳೆ. ಒಂಚೂರು ಕಾಫಿ ಮಾಡಿಕೊಡೋಕಾದ್ರು ಬೇಕಲ್ಲ ಹೋಗಿ ತನ್ನಿ ಅಂದ್ಲು. ನನ್ನ ಅರ್ಧಾಂಗಿ. ಮಟ ಮಟ ಮಧ್ಯಾನ್ಹ. ಬಿಸಿಲು ಬೇರೆ ಜೋರಿದೆ. ಟಿ. ವಿ. ಯಲ್ಲಿ ಸೊಗಸಾದ ಕಾರ್ಯಕ್ರಮ ಬರ್ತಿದೆ. ಇವೆಲ್ಲದರ ಜೊತೆ ಸ್ವಲ್ಪವೇನು ಹೆಚ್ಚೇ ಸೊಂಬೇರಿತನ ಆವರಿಸಿದೆ. ಈಗ ಆಗಲ್ಲ. ಆಮೇಲೆ ನೋಡೋಣ. ಅಲ್ಲರೀ. ಅಲ್ಲವೂ ಇಲ್ಲ ಬೆಲ್ಲವೂ ಇಲ್ಲ. ಈಗ ಸುತಾರಾಂ ಆಗಲ್ಲ ಅಷ್ಟೆ ಕಡ್ಡಿ ಮುರಿದಂತೆ ಹೇಳಿ ಬಿಟ್ಟೆ. ಎಡವಿ ಬಿದ್ದರೆ ಶೆಟ್ಟರ […]
ಫಟಾಫಟ್ ಅಡಿಗೆ!!: ಎಸ್. ಜಿ. ಶಿವಶಂಕರ್
ಐದು ದಿನಗಳಿಂದ ಫ್ಯಾಕ್ಟ್ರಿಗೆ ಲೇಟಾಗುತ್ತಿತ್ತು. ಇಂದು ಏನಾದರೂ ಸರಿ, ಸರಿಯಾದ ಸಮಯಕ್ಕೆ ಫ್ಯಾಕ್ಟ್ರಿ ತಲುಪಲೇಬೇಕೆಂದು ಹಠದಿಂದ ಹೊರಟಿದ್ದೆ. ಸೈರನ್ನಿಗೆ ಐದು ನಿಮಿಷ ಮುಂಚೆಯೇ ಹಾಜರಿ ಬೆರಳಚ್ಚು ಒತ್ತಿ ಡಿಪಾರ್ಟುಮೆಂಟು ಸೇರಿದೆ. ಇನ್ನೂ ಚುಮುಚುಮು ಕತ್ತಲು! ಮಹಡಿಯಲ್ಲಿದ್ದ ನನ್ನ ಚೇಂಬರಿನಲ್ಲಿ ವಿಸಿಟರ್ಸ್ ಕುರ್ಚಿಯಲ್ಲಿ ಯಾರೋ ಕೂತಿದ್ದರು!! ಇನ್ನೂ ಆಗಷ್ಟೇ ಷಾಪಿಗೆ ಜನ ಬರುತ್ತಿದ್ದರು. ಅಷ್ಟು ಬೆಳಿಗ್ಗೆ ನನ್ನ ಚೇಂಬರಿಗೆ ಯಾವ ವಿಸಿಟರ್ಸೂ ಬರಲು ಸಾಧ್ಯವಿರಲಿಲ್ಲ! ಅಂದರೆ ಅಲ್ಲಿ ವಕ್ಕರಿಸಿರುವವರು ಯಾರು ಎಂದು ಅಚ್ಚರಿಯಾಯಿತು. ಹಾರರ್ ಸಿನಿಮಾಗಳು ನೆನಪಾದವು! ಕಳೆದ […]
ಕಿವಿ ಕಚ್ಚುವುದು!: ಎಸ್.ಜಿ.ಶಿವಶಂಕರ್
ಅರೆ..ಹಾಗಂದರೇನು? ಎಂದು ಹುಬ್ಬೇರಿಸಿದ್ದೀರೇನು? ನೀವು ಈ ಮಾತು ಈವರೆಗೆ ಕೇಳಿಯೇ ಇಲ್ಲವೆ? ‘ಇಲ್ಲ’ ಎಂಬ ನಿಮ್ಮ ಮಾತನ್ನು ನಾನು ಖಂಡಿತಾ ನಂಬುವುದಿಲ್ಲ! ಎಲ್ಲಿಯಾದರೂ ಅಪರೂಪಕ್ಕಾದರೂ ಈ ಮಾತು ನೀವು ಕೇಳಿಯೇ ಇರುತ್ತೀರಿ. ಕೇಳಿದಾಗ ಈ ಪದದ ಅರ್ಥವಾಗಿರಬಹುದು ಇಲ್ಲ ಅರ್ಥವಾಗದೆ ಮರೆತಿರಬಹುದು! ಕಿವಿಕಚ್ಚುವುದು ಎಂದಾಕ್ಷಣ ಒಬ್ಬ ವ್ಯಕ್ತಿ ಇನ್ನೊಬ್ಬ ವ್ಯಕ್ತಿಯ ಕಿವಿಯನ್ನು ಕಚ್ಚುತ್ತಿರುವುದನ್ನು ಕಲ್ಪಿಸಿಕೊಳ್ಳಬೇಡಿ! ಈ ಪದ ನನ್ನ ಕಿವಿಯ ಮೇಲೆ ಬಿದ್ದುದು ಕೇವಲ ವಾರದ ಹಿಂದೆ. ಆಗಿನಿಂದಲೂ ಇದರ ಅರ್ಥ, ವ್ಯಾಪ್ತಿಗಳ ಬಗೆಗೇ ಚಿಂತಿಸುತ್ತಿರುವೆ ಎಂದರೆ […]
ಬಿಂದಿಗಿ ಭೂತ: ಗುಂಡುರಾವ್ ದೇಸಾಯಿ
ಪದ್ದು ನಿತ್ಯದಂತೆ ವಾಕಿಂಗ್ಗೆ ಊರ ಹೊವಲಯದಲ್ಲಿ ಹೋಗಿದ್ದಾಗ ಕಾಲಿಗೆ ಕಲ್ಲುತಾಗಿ ಎಡವಿ ಬಿದ್ದ, ಎಡವಿದ ಸ್ಥಳದಲ್ಲಿ ನೋಡತಾನೆ ಹೊಳೆಯುವ ವಸ್ತುವೊಂದು ಕಾಣಿಸ್ತು. ಪುರಾತನ ವಸ್ತು ಇರಬಹುದೆಂದು ತೆಗ್ಗು ತೊಡಿ ತೆಗೆದ ಪುಟ್ಟ ಬಿಂದಿಗಿ ತರಹ ಇತ್ತು. ಒಳಗೆ ಏನು ಇರಬಹುದೆಂದು ತೆಗೆದು ನೋಡಿದ ಬಸ್ ಎಂದು ಹೊಗೆ ಹೊರಗೆ ಬಂದು ದೈತ್ಯಾಕಾರದ ವಿಚಿತ್ರ ಆಕೃತಿ ಕೈಕಟ್ಟಿಕೊಂಡು ದೈನ್ಯತೆಯಿಂದ ‘ಸ್ವಾಮಿ ತಾವು ನನ್ನನ್ನು ಬಂಧ ಮುಕ್ತರನ್ನಾಗಿ ಮಾಡಿದಿರಿ. ನಿಮಗೆ ಏನು ಸಹಾಯ ಬೇಕು ಕೇಳಿ’ ಎಂತು. ಅಲ್ಲಾವುದ್ದೀನನ ಅಧ್ಭುತ […]
ಕೋಲಾಪಾನಕ ಉಪಾಖ್ಯಾನ ಸಹಿತ ರಘುವರಚರಿತ ಲಘುವ್ಯಾಖ್ಯಾನವು: ಎಸ್. ಜಿ. ಸೀತಾರಾಮ್
ವಿಧವಿಧ ರಾಮಾಯಣಗಳಿಂದ ಹೆಚ್ಚುತ್ತಿರುವ ಹೊರೆಯಿಂದಾಗಿ, ಭೂಭಾರವನ್ನು ಹೊತ್ತ ಆದಿಶೇಷನು ನುಲಿದಾಡುತ್ತಿದ್ದಾನೆ; ರಾಮಾಯಣ ಸಾಹಿತ್ಯ ಪ್ರದೇಶ ಕಾಲಿಡಲಾಗದಷ್ಟು ನಿಬಿಡವಾಗಿಹೋಗಿದೆ ಎಂಬಂತೆ ಕುಮಾರವ್ಯಾಸನು ಸುಮಾರು ೬೦೦ ವರ್ಷಗಳ ಹಿಂದೆಯೇ ಹೇಳಿದ್ದನೆಂದಮೇಲೆ, ಇಂದು ಆ ಹೊರೆ ಇನ್ನೆಷ್ಟು ಹೆಚ್ಚಿರಬಹುದೆಂದು ಊಹಿಸಬಹುದು. ಆದ್ದರಿಂದಾಗಿ, ಮತ್ತೆ ಅದೇ ಕಥೆಯನ್ನೇ ಇರುಳುದ್ದ ಹೇಳಿ, ಹಗಲು ಹರಿಯುತ್ತಿದ್ದಂತೆ, ರಾಮಣ್ಣ-ರಾವಣ್ಣ ಯೇನ್ ಅಣ್ಣ-ತಮ್ಮಂದ್ರಾ? ಎಂಬ ಆಕಳಿಕೆಯ ಆಲಾಪವನ್ನು ಆಲಿಸುವ ಬದಲು, ಈಗಿನ ರಾಮಜನ್ಮದಿನಾಚರಣೆಗಾಗಿ ಅದೇ ರಘುವರಕಥೆಯ ಕೆಲವೇ ವಿಚಾರಗಳ ಲಘುನೋಟವೊಂದನ್ನು ಇಲ್ಲಿ ತೆಗೆದುಕೊಳ್ಳಲಾಗಿದೆ. ಆ ಕಥೆಯ ಕೆಲವು ಪ್ರಮುಖ […]
ಶನಿ-ಮನ್ಮಥ ಯೋಗ: ಎಸ್.ಜಿ. ಸೀತಾರಾಮ್
ಮನ್ಮಥ ಮತ್ತು ಶನಿ ಎಂಬ ಎರಡು ಅತ್ಯುಜ್ವಲ ಶಕ್ತಿಗಳು ಡಿಕ್ಕಿ ಹೊಡೆದಿರುವುದರಿಂದಾಗಿ, ಪ್ರಸಕ್ತ ಶಾಲೀವಾಹನ ಶಕೆ ೧೯೩೮ರಲ್ಲಿ, ಅತಿವಿರಳ ಶನಿ-ಮನ್ಮಥಯೋಗ ಒದಗಿಬಂದಿದೆ. ಇದರಿಂದಾಗಿ ಕೆಲವು ವಿಲಕ್ಷಣ ಬೆಳವಣಿಗೆಗಳಾಗಲಿದ್ದು, ಅತ್ಯಾಶಾವಾದಿಗಳಿಂದಾಗಿ ಉಗಾದಿಯು ’ಉಗ್ರಾದಿ’ಯೇ ಆಗಿ ಬಿಡಬಹುದು ಎಂದು ಕೆಲವು ಆಶಂಕವಾದಿಗಳು ನುಡಿಯತೊಡಗಿದ್ದಾರೆ. ಇದನ್ನು ಕೇಳಿ, ಮೊದಲೇ ಬೇಸಿಗೆಯ ಬೇಗೆಯಿಂದ ಬೇಸತ್ತು ಬೆವರುತ್ತಿರುವ ಪ್ರಜೆಗಳ ಬೇನೆಬೇಗುದಿಗಳು ಮತ್ತಷ್ಟು ಹೆಚ್ಚಾಗಿವೆ. ಹಾಗಾಗಿ, ಇಂದಿನ ಉಷ್ಣಾವರಣದಿಂದ ಪ್ರಜೆಗಳಿಗೆ ಒಂದಿನಿತು ಇನಿದಂಪು ನೀಡಬೇಕೆಂದು, ಶನಿ-ಮನ್ಮಥಯೋಗ ಕುರಿತಂತೆ ಇಲ್ಲೊಂದು ಕಾಕದೃಷ್ಟಿಯನ್ನೀಯಲಾಗಿದೆ. ಈ ಸಂವತ್ಸರದ ಸ್ವಾರಸ್ಯಗಳಲ್ಲಿ, ಮನ್ಮಥ […]
ಅಜ್ಜಿ ಲಿಪ್ಟ್ ಪಡೆದದ್ದು …!: ಪಾ.ಮು.ಸುಬ್ರಮಣ್ಯ, ಬ.ಹಳ್ಳಿ.
ಹೀಗೇ ಸುಮ್ಮನೆ ಏನನ್ನಾದರೂ ಹೇಳುತ್ತಿರಬೇಕೆಂಬ ಮನಸ್ಸಿನ ವಾಂಛೆಯನ್ನು ಅದುಮಿಟ್ಟುಕೊಳ್ಳಲು ಸಾಧ್ಯವಾಗದೆ ವಸ್ತುವಿಗಾಗಿ ಹುಡುಕಾಟ ಶುರುಮಾಡಿದೆ. ರಸ್ತೆಯಲ್ಲಿ ಅನೇಕ ವಸ್ತುಗಳು ಸಿಗುತ್ತವೆಂಬ ನಂಬಿಕೆ ಅನೇಕ ಬರಹಗಾರರದು. ವಸ್ತುಗಳೇನೋ ಸಿಗುತ್ತವೆ, ಆದರೆ ನೋಡುವ ಕಣ್ಣಿರಬೇಕು. ಆಘ್ರಾಣಿಸುವ ಮನಸ್ಸಿರಬೇಕು. ಅನುಭವಿಸುವ ಆಸೆ ಇರಬೇಕು. ಹೇಳಬೇಕೆಂಬ ಇಚ್ಚೆ ಇರಬೇಕು. ಒಮ್ಮೆ ಹೀಗೆ ನಡೆದು ಬರುತ್ತಿರುವಾಗ ಸುಮಾರು ಎಂಬತ್ತು ವರ್ಷ ವಯಸ್ಸಿನ ಹೆಂಗಸು ಕೈಯಲ್ಲಿ ಕೆಂಪು ಬಣ್ಣದ ಸಣ್ಣ ಚೀಲವೊಂದನ್ನು ಹಿಡಿದು ನಡೆದು ಬರುತ್ತಿದ್ದಳು. ತನ್ನ ದೀರ್ಘಕಾಲದ ಬದುಕಿನಲ್ಲಿ ಸಾಕಷ್ಟು ಹಿತ-ಅಹಿತ ಅನುಭವಗಳನ್ನು […]
ರೀಮೇಕ್ ಸಿನಿಮಾಗೆ ಪ್ರತ್ಯೇಕವಾಗಿ ರಾಜ್ಯ ಸರ್ಕಾರಿ ಅವಾರ್ಡ್ ಗಳು: ಮುಕುಂದ್ ಎಸ್.
ಬೃಂದಾ(ನ್ಯೂಸ್ ನಿರೂಪಕಿ): ಕನ್ನಡ ಚಿತ್ರರಂಗದ ಉದ್ಧಾರಕ್ಕಾಗಿ ನಮ್ಮ ಸರ್ಕಾರಕ್ಕೂ ಚಿತ್ರರಂಗದವರಿಗೂ ನಡೆದ ಚರ್ಚೆ ಸಫಲವಾಗಿದೆ. ಚಲನ ಚಿತ್ರ ವಾಣಿಜ್ಯ ಮಂಡಲಿ ಅಧ್ಯಕ್ಷರು ಗೋವಿಂದೋ ಗೋವಿಂದರವರು ಇದು ಚಿತ್ರೋದ್ಯಮದ ಹೊಸ ಹೆಜ್ಜೆ ಎಂದು ಬಣ್ಣಿಸಿದ್ದಾರೆ. ರೀಮೇಕ್ ಸಿನಿಮಾಗೆ ಪ್ರತ್ಯೇಕವಾಗಿ ರಾಜ್ಯ ಸರ್ಕಾರಿ ಅವಾರ್ಡ್ ಗಳು ಘೋಷಣೆಯಾಗಿದೆ ! ನಮ್ಮ ವರದಿಗಾರ ಸತ್ಯನಾಥ ಇದರ ಬಗ್ಗೆ ಹೇಳ್ತಾರೆ. ಹೇಳಿ ಸತ್ಯನಾಥ! ಸತ್ಯನಾಥ ! (ಸಿಟ್ಟಲ್ಲಿ) : ರೀ ಸತ್ಯನಾಥ! ಸತ್ಯನಾಥ ಬರುತ್ತಾನೆ! ಬೃಂದಾ(ನ್ಯೂಸ್ ನಿರೂಪಕಿ): ಎಲ್ಲಿ ಹಾಳಾಗಿ ಹೋಗಿದ್ದ್ರೀ.. ಥೂ […]
ಹೊಟ್ಟೆ ಗಟ್ಯಾ, ಸೊಂಟ ಗಟ್ಯಾ? (ಅಳಿದುಳಿದ ಭಾಗ): ಸೂರಿ ಹಾರ್ದಳ್ಳಿ
ಇಲ್ಲಿಯವರೆಗೆ ಇದು ಮುಗಿದ ನಂತರ ಸಿಹಿ ತಿಂಡಿಯ ಸರದಿ. ಸುಮಾರಾಗಿ ಒಬ್ಬಟ್ಟು ಇದ್ದೇ ಇರುತ್ತದೆ. ಒಬ್ಬಟ್ಟು ಎಂದರೆ ಹೋಳಿಗೆ, ಇಂಗ್ಲಿಷಿನವರು ಕುಲಗೆಡಿಸಿ ಹೇಳಿದ ಸ್ವೀಟ್ ಚಪಾತಿ. ಎಷ್ಟೋ ಕನ್ನಡ ಪದಗಳಿಗೆ ಇಂಗ್ಲಿಷಿನ ಪದಕೋಶದಲ್ಲಿ ಶಬ್ದಗಳೇ ಇಲ್ಲ. ಅವುಗಳಲ್ಲಿ ಮುಖ್ಯವಾಗಿ ಮಡಿ, ಮೈಲಿಗೆ, ಸೂತಕ, ಮುಸುರೆ ಇತ್ಯಾದಿ. ಇವು ಏನೆಂದು ಕೇಳಬೇಡಿ, ಹೇಳುವುದಕ್ಕೂ, ಕೇಳುವುದಕ್ಕೂ ಇದು ಸಮಯವಲ್ಲ! ಸಿಹಿ ತಿಂಡಿಗಳಲ್ಲಿ ಒಬ್ಬಟ್ಟು ಮಾತ್ರವೇ ಮೇಲೆ ಒಂದಿಷ್ಟು ಸಕ್ಕರೆ ಹಾಕಿಸಿಕೊಳ್ಳುತ್ತದೆ. ಕಾಯಿ, ಸಕ್ಕರೆ, ಬೇಳೆ ಒಬ್ಬಟ್ಟು ಮಾಡಿದರೆ ಅದರ ಮೇಲೆ […]
ಹೊಟ್ಟೆ ಗಟ್ಯಾ, ಸೊಂಟ ಗಟ್ಯಾ?: ಸೂರಿ ಹಾರ್ದಳ್ಳಿ
ಲೇಖನ ಬರೆದರೆ ರುಚಿಕಟ್ಟಾಗಿರಬೇಕು, ಓದುಗರಿಗೆ ರುಚಿಸಬೇಕು. ಸಾಹಿತ್ಯದಲ್ಲಿ ರಸಕವಳ ಇರಬೇಕು, ಅದರಲ್ಲಿ ಮಸಾಲೆಯೂ ಇರಬೇಕು ಎಂತೆಲ್ಲಾ ನಮ್ಮ ಹಿರಿಯ ಸಾಹಿತಿಯೊಬ್ಬರು ಉಪದೇಶಿಸಿದ್ದರಿಂದ ಈ ನನ್ನ ಲೇಖನವು ಊಟದ ಬಗ್ಗೆ, ಅದರಲ್ಲಿಯೂ ವಿಶೇಷ ಭೂರಿಭೋಜನದ ವಿಷಯವನ್ನೊಳಗೊಂಡಿದೆ. ನೀವೆಲ್ಲಾ ಬಾಯಿಯಲ್ಲಿ ನೀರು ಬರಿಸಿಕೊಳ್ಳುತ್ತಾ ಇದನ್ನು ಓದುತ್ತೀರಿ, ಖಾದ್ಯಾದಿಗಳ ರುಚಿಯನ್ನು ಕಲ್ಪಿಸಿಕೊಳ್ಳುತ್ತಾ ಒಣ ತೇಗಿಗೆ ಪಕ್ಕಾಗುತ್ತೀರಿ ಎಂದುಕೊಂಡಿದ್ದೇನೆ. ಬನ್ನಿ, ಉಡುಪಿಯ ಬ್ರಾಹ್ಮಣರ ವಿವಾಹದ ಸಮಾರಂಭಕ್ಕೆ ನುಗ್ಗೋಣ. ಓ.. ಆಗಲೇ ಎಲೆ ಹಾಕಿಬಿಟ್ಟಿದ್ದಾರೆ. ಬನ್ನಿ, ಕುಳಿತುಕೊಳ್ಳೋಣ. ನೋಡಿ, ಓ ಅಲ್ಲಿ, ನೆಲದ ಮೇಲೆ ಎಲೆ […]
ಗಂಡಾ ..ಅಲ್ಲಲ್ಲಾ…ಗುಂಡ-ಗುಂಡಿ: ಡಾ. ಆಜಾದ್ ಐ.ಎಸ್.
ಗುಂಡ ಗರಂ….. “ಯಾಕೋ?!!” ಅಂತ ಕೇಳಿದ್ದಕ್ಕೆ ಏನ್ ಹೇಳ್ದ ಗೊತ್ತಾ..?? “ಅಲ್ಲಾ ಸಾ… ಯಾವೋನು ಕಳ್ ನನ್ ಮಗ – ಎಂಡ, ಸಾರಾಯಿ ಬ್ರಾಂದಿ, ಬೀರು, ರಮ್ಮು, ಜಿನ್ನು, ಫೆನ್ನಿ, ಓಡ್ಕಾ ಎಲ್ಲಾದ್ಕೂ ಒಂದೇ ಕಲೆಕ್ಟಿವ್ ನೌನ್ “ಗುಂಡು” ಅಂತ ನಾಮಕರಣ ಮಾಡಿದ್ದು…??” ಅಬ್ಬಬಬಾ… ವ್ಯಾಕರಣದಲ್ಲಿ ತನಗೆ ಗೊತ್ತಿರೋ ಒಂದೇ ಒಂದು ಪಾರ್ಟ್ಸ್ ಅಫ್ ಸ್ಪೀಚ್ ನ ಎಷ್ಟು ಚನ್ನಾಗಿ ಉಪಯೋಗಿಸ್ದ..ಗುಂಡ…ವಾ.. ಎಂದುಕೊಂಡು… “ಅದ್ಸರಿ ..ಅದಕ್ಕೂ ನೀನು ಗರಂ ಆಗೋಕೂ ಏನಪ್ಪಾ ಸಂಬಂಧ?” ಅಂದೆ “ನಾಳೆ […]
ನೈಟೀ ಪುರಾಣ: ಕ್ರಾಕ್ ಬಾಯ್
ಹಿಂಗೇ ಮೊನ್ನೆ ಮಾಡಕ್ ಕ್ಯಾಮೆ ಇಲ್ದೆ ಭಟ್ರಂಗಡಿ ಕಟ್ಟೆ ಮೇಲ್ ಕುಂತ್ಕಂಡ್ ಓತ್ಲಾ ವಡೀತಿದ್ದೆ, ನನ್ನಂಗೆ ಮಾಡಕ್ ಕ್ಯಾಮೆ ಇಲ್ದಿರೋ ಐಕ್ಳೆಲ್ಲಾ, ಅಣ್ ತಮ್ಮಂದ್ರೆಲ್ಲಾ ನನ್ ಜೊತೆ ಸೇರ್ಕಂಡಿದ್ರು, ಅದೂ, ಇದೂ, ಆಳೂ, ಮೂಳೂ, ಮಣ್ಣೂ, ಮಸಿ, ಹಿಂಗೇ ಮಾತಾಡ್ಕಂಡ್ ಕುಂತಿದ್ವಿ, ಅಸ್ಟೊತ್ತಿಗೆ ಮೂಲೆ ಮನೆ ಆಂಟಿ ಕೊತ್ಮೆರಿ ಸಪ್ ತಗಳಕ್ಕೆ ಭಟ್ರಂಗ್ಡಿಗೆ ಬಂದ್ರು, ಅವ್ರ್ ಬಂದ್ ತಗಂಡ್ ವೋಗಿದ್ರಲ್ ಏನೂ ಇಸೇಸ ಇರ್ಲಿಲ್ಲಾ ಆದ್ರೆ ಅವ್ರು ನೈಟೀ ಹಾಕಂಡ್ […]
ನಾನು ಮತ್ತು ಗ್ವಾಡು: ಸಚಿನ್ ಎಂ. ಆರ್.
“ಥೂ.. ಯಾಕಪ್ಪಾ ನನ್ ಜೀವನ ಹಿಂಗೇ??? ಓ ಮೈ ಗ್ವಾಡ್ ಯಾಕೆ ನೀ ನನ್ನ ಹಿಂಗೆ ಮಾಡಿದೆ? ತಲೆಯಲ್ಲಿ ಯಾಕೆ ಯಾವಾಗ್ಲೂ ಪ್ರಶ್ನೆಗಳು ಏಳ್ತಾ ಇರ್ತವೆ? ಉತ್ತರ ಮಾತ್ರ ಯಾಕೆ ಸಿಗುತಿಲ್ಲ?? ಎಕೆ ಎಲ್ಲವೂ ಹೀಗೆ ಅಯೋಮಯ?” ಅಂತ ತಲೆಯಲ್ಲಿ ಒಂದೇ ಸಮನೆ ಪ್ರಶ್ನೆಗಳೆಲ್ಲ ಗಿರಕಿ ಹೊಡೆಯುತ್ತಾ ಕುಂತಿದ್ದವು.ಏನಾದರಾಗಲಿ ದೇವರನ್ನೇ ಕೇಳೋಣ ಅಂದುಕೊಂಡೆ!! ಆದರೆ ಕೇಳೋದು ಹೆಂಗೆ? ವೈಫೈ, ಬ್ಲೂಟೂಥ್ ಯೂಸ್ ಮಾಡೋದು ನಮ್ ಗಾಡ್ಗೆ ಗೊತ್ತಿಲ್ಲ. ಆದರೂ ಕನೆಕ್ಟಿವಿಟಿ ಮಾಡಿ ನನ್ನ ಪ್ರಶ್ನೆಗೆ ಉತ್ತರ ಪಡೆಯಲೇ […]
ಯಮಾಲಯದಲ್ಲಿ ಗಿಜಿ ಗಿಜಿ: ಶ್ರೀಕಾಂತ್ ಮಂಜುನಾಥ್
ಕೊರವಂಗಲ ವಂಶವೃಕ್ಷದಲ್ಲಿ ನವಗ್ರಹಗಳಾದ ಚಿಕ್ಕಪ್ಪ ದೊಡ್ಡಪ್ಪಂದಿರ ಗಂಡು ಮಕ್ಕಳಲ್ಲಿ ನಡೆಯುವ ತಮಾಷೆ ಮಾತುಗಳಿಗೆ ಮಿತಿಯಿಲ್ಲ. ಅಂಥಹ ಸಾಗರದಷ್ಟು ನಡೆದ, ನೆಡೆಯುವ ಚರ್ಚೆಗಳನ್ನು, ವಿಷಯಗಳನ್ನು ಹೆಕ್ಕಿ ಹೆಕ್ಕಿ ಮೆಲುಕು ಹಾಕುತ್ತ ನಮ್ಮ ಭೇಟಿಗಳನ್ನು ಇನ್ನಷ್ಟು ಸುಮಧುರ ಕ್ಷಣಗಳನ್ನಾಗಿ ಮಾಡಿಕೊಳ್ಳುತ್ತೇವೆ. ಒಂಭತ್ತು ಗ್ರಹಗಳು ಪ್ರಚಂಡ ಪ್ರತಿಭೆಗಳು ಒಬ್ಬರಿಗೊಬ್ಬರು, ಒಬ್ಬರಿಂದ ಒಬ್ಬರು, ಒಬ್ಬರಿಗಾಗಿ ಒಬ್ಬರು ಜೊತೆ ನಿಲ್ಲುತ್ತೇವೆ. ನಮ್ಮ ಹಿಂದಿನ ಹಾಗು ಮುಂದಿನ ಪೀಳಿಗೆಗೆ ಸೇತುವಾಗಿ ನಿಲ್ಲುವ ನಾವುಗಳು ನಮ್ಮ ಮಕ್ಕಳಿಗೆ ಒಂದು ಸಂಸ್ಕಾರದ ಹಾದಿಯನ್ನು ತೋರಬೇಕು ಅನ್ನುವುದಷ್ಟೇ ನಮ್ಮ ಕಳಕಳಿ. ಇಂತಹ ಒಂದು […]
ಸಾಲದ ವಿಷಯ (ಕೊನೆಯ ಭಾಗ): ಸೂರಿ ಹಾರ್ದಳ್ಳಿ
(ಇಲ್ಲಿಯವರೆಗೆ) ಈ ಘಟನೆಯ ನಂತರ ನಿಮಗೆ ನನ್ನ ರೂಪ ಅಸಹ್ಯವಾಗಿ ಕಾಣಿಸುತ್ತದೆ. ನಾನು ಎಲ್ಲಾ ದುರ್ಗುಣಗಳ ಘನೀಕೃತ ರೂಪವಾಗಿ, ಕೀಚಕನಾಗಿ, ವೀರಪ್ಪನ್ ಆಗಿ ಕಾಣುತ್ತೇನೆ. ಆದರೆ ಏನೂ ಮಾಡಲಾಗದ ಪರಿಸ್ಥಿತಿ ನಿಮ್ಮದು. ನನ್ನದು ಮೃದು ಹೃದಯ. ಇಲ್ಲ ಎಂದು ಹೇಳಿ ನಿಮ್ಮನ್ನು ಗಾಸಿಗೊಳಿಸಲು ಇಷ್ಟವಿಲ್ಲ. ಅದಕ್ಕಾಗಿ ನಾನು, ’ರೀ, ಗೆಳೆಯನೊಬ್ಬನಿಗೆ ಎರಡು ಲಕ್ಷ ಕೊಟ್ಟಿದ್ದೆ. ಎರಡು ವಾರ ಬಿಟ್ಟು ಕೊಡ್ತೀನಿ ಎಂದು ಹೇಳಿದ್ದಾನೆ. ನೀವು ಎರಡು ವಾರ ಬಿಟ್ಟು ಬನ್ನಿ, ಕೊಟ್ಟರೆ ನಿಮಗೆ ಖಂಡಿತಾ ಹತ್ತು ಸಾವಿರ […]