ಭೀಮಹೆಜ್ಜೆ: ಡಾ. ವಿಶ್ವನಾಥ ಎನ್ ನೇರಳಕಟ್ಟೆ
ಕುರುಕ್ಷೇತ್ರ ಯುದ್ಧದ ಹತ್ತೊಂಭತ್ತನೆಯ ದಿನ ರಣರಂಗದಲ್ಲಿ ಶಬರಿ ಬಂದು ಅಳುತ್ತಾ ಕುಳಿತಂತೆ ಕಾಣಿಸುತ್ತಿದ್ದಳು,ಭರತಪುರದ ತನ್ನ ಜಮೀನಿನಲ್ಲಿ ಕೆಂಪು ನೆಲದ ಮೇಲೆ ಕುಳಿತು ಅಳುತ್ತಿರುವ ಪಳನಿಯಮ್ಮ. ಸುತ್ತಮುತ್ತ ನಡು ಮುರಿಸಿಕೊಂಡು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಬಾಳೆಯ ಗಿಡಗಳು, ಅವುಗಳ ಮಧ್ಯೆ ಎಪ್ಪತ್ತೆರಡರ ಹಿರಿಜೀವ ಪಳನಿಯಮ್ಮ. ಕದಳಿ ವನದಲ್ಲಿ ಕದಡಿ ಕುಳಿತಂತಹ ನಿಲುವು ಅವಳದ್ದಾಗಿತ್ತು. ಬಿಕ್ಕಳಿಸುತ್ತಿದ್ದಳು. ನೆಲದ ಮೇಲೆ ಎರಡೆರಡು ಸಲ ಕೈಬಡಿದಳು. ತನ್ನ ಹೊಟ್ಟೆ ಸೇರಿ ತಂಪುಮಾಡಲಿ ಎಂದು ತಾನು ನಿರುಕಿಸುತ್ತಿದ್ದ ಹಣ್ಣುಹಣ್ಣಾದ ಗೊನೆ ಇದೆಯೇ ಎಂದು ತಾನು ಕುಳಿತಲ್ಲಿಂದಲೇ … Read more