ಸೇವಾ ಮನೋಭಾವ: ಎಲ್. ಚಿನ್ನಪ್ಪ, ಬೆಂಗಳೂರು
ದಯಾನಿಧಿಯವರು ಆಸ್ಪತ್ರೆಗೆ ದಾಖಲಾಗಿ ಹದಿನೈದು ದಿನಗಳಾಗಿವೆ, ಆಸ್ಪತ್ರೆಯಲ್ಲಿ ಅವರಿಗೆ ಸತತ ಚಿಕಿತ್ಸೆಗಳು ಜರುಗುತ್ತಿವೆ. ಅವರಿಗೆ ಅಂತಹ ಗಂಭೀರ ಸ್ವರೂಪದ ಖಾಯಿಲೆಯೇನೂ ಇಲ್ಲ. ವಯೋಸಹಜ ಕಾರಣಕ್ಕೆ ಕಾಣಿಸಿಕೊಂಡ ಒಂದು ಸಾಧಾರಣ ತೊಂದರೆಗೆ ಅವರು ಅತ್ಯಂತ ಮಹತ್ವಕೊಟ್ಟು ತಮ್ಮ ಹಣ ಖರ್ಚುಮಾಡಿಕೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಹಾಸಿಗೆಯಲ್ಲಿ ಮಲಗಿದ್ದಂತೆಯೇ ದಯಾನಿಧಿಯವರು ತಾವೇ ಮಗ್ಗುಲು ಬದಲಾಯಿಸಿಕೊಂಡರು. ದೇಹ ಮೂತ್ರ ವಿಸರ್ಜನೆಗೆ ಕರೆ ಕೊಟ್ಟಿತು. ಅವರು ಎದ್ದು ಹತ್ತಿರವೇ ಇದ್ದ ಶೌಚಾಲಯಕ್ಕೆ ಹೋಗಿ ಬರಬಹುದಿತ್ತು, ಆದರೆ ಅವರು ಹಾಸಿಗೆ ಬಿಟ್ಟು ಮೇಲೇಳಲಿಲ್ಲ. … Read more