ಕೆಂಪರೋಡ್..!: ತಿರುಪತಿ ಭಂಗಿ

ಕೆ.ಎ-28 ಎಫ್-6223 ಕರ್ನಾಟಕ ಸಾರಿಗೆ ಬಸ್ಸು ಗಾಳಿಯ ಎದೆ ಸೀಳಿಕೊಂಡು ಬಂವ್.. ವ್.. ವ್.. ಎಂದು ರಾಗ ಎಳೆಯುತ್ತ, ಕ್ಯಾಕರಸಿ ಹೊಗೆ ಉಗುಳುತ್ತ, ತಗ್ಗು ದಿನ್ನೆಯಲ್ಲಿ ಜಿಗಿದು, ಕುಣಿದು ದಣಿವರಿಯದೆ, ಚಾಲಕನ ಒತ್ತಡಕ್ಕೆ ಮನಿದು, ಮುನಿದು ‘ನಿಗಿನಿಗಿ’ ಕೆಂಡ ಉಗಳುವ ಸೂರಪ್ಪನ ಕಾಟಾಚಾರ ಸಹಿಸಿಕೊಂಡು ಬಿಜಾಪೂರದತ್ತ ಹೊರಟಾಗ ಬರೊಬ್ಬರಿ ಎರಡು ಗಂಟೆಯಾಗಿ ಮೇಲೆ ಒಂದಿಷ್ಟು ನಿಮಿಷಗಳಾಗಿದ್ದವು. ಖಾಸಗಿ ಬಸ್ಸಿನ ಸುಖಾಸನಗಳ ಮೇಲೆ ತಣ್ಣಗೆ ಕುಳಿತು ಬರಬೇಕೆಂದವನಿಗೆ, ಇದ್ದಕಿದ್ದಂತೆ ತಲೆಯಲ್ಲಿ ಅದೇನು ಸೇರಿಕೊಂಡಿತೋ, ವಿಠಲಸ್ವಾಮಿ ಸರಕಾರಿ ಬಸ್ಸಿನ ಬಾಗಿಲು … Read more

ಅವರೆಲ್ಲಿ, ಇವನೆಲ್ಲಿ…???: ಬಸವರಾಜ ಕಾಸೆ

ಅನಿಲ್ ಮತ್ತು ಸುನೀಲ್ ಕೆಲಸ ಮಾಡುವ ಕಂಪನಿ ಮಾಲೀಕನ ಮಗನ ಅದ್ದೂರಿ ಮದುವೆ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿತ್ತು. ಸರದಿ ಸಾಲಿನಲ್ಲಿ ನಿಂತು ಶುಭಾಶಯ ಕೋರಿದ ನಂತರ ಔತಣಕೂಟಕ್ಕೆ ಆಗಮಿಸಿದರು. ವಿಧ ವಿಧವಾದ ಭಕ್ಷ್ಯ ಭೋಜನಗಳಿಂದ ಕೂಡಿದ ರುಚಿಯ ಪರಿಮಳ ಸುತ್ತಲೂ ಪಸರಿಸಿತ್ತು. ಎರಡು ನಿಮಿಷ ನಿಂತು ನೋಡಿದ ಸುನೀಲಗೆ ಆಶ್ಚರ್ಯ. “ಅರೇ ಅನಿಲ್, ಅಲ್ಲಿ ನೋಡೋ. ರಾಮಣ್ಣ, ಶಾಮಣ್ಣ, ಸೀನ ಎಲ್ಲಾ ಇಲ್ಲೇ ಇದಾರೆ” “ಎಲ್ಲೋ” “ಆ ಕಡೆ ಮತ್ತು ಈ ಕಡೆ ಎರಡು ಕೌಂಟರು ನೋಡೋ” … Read more

ಕತೆ: ಸೂರಿ ಹಾರ್ದಳ್ಳಿ

ಕಂಪನಿಯೊಂದರಲ್ಲಿ ಒಳ್ಳೆಯ ಉದ್ಯೋಗದಲ್ಲಿದ್ದು ಆರಂಕಿಯ ಸಂಬಳ ಪಡೆಯುತ್ತಿದ್ದ ಕಾಶೀಪತಿಗೆ ಸಾಲದ ತುರ್ತು ಅವಶ್ಯಕತೆಯೇನೂ ಇರದಿದ್ದರೂ ಆ ಜಾಹಿರಾತು ಅವನ ತಲೆಯಲ್ಲಿ ದುಷ್ಟ ಯೋಚನೆಗಳನ್ನು ತುಂಬಿದ್ದಂತೂ ನಿಜ. ಪತ್ರಿಕೆಯೊಂದರಲ್ಲಿ ಪ್ರಕಟವಾದ ‘ವೈಯಕ್ತಿಕ ಸಾಲ ಬೇಕಾಗಿದೆಯೇ? ಕೇವಲ ಮೂರು ಪರ್ಸೆಂಟ್ ಬಡ್ಡಿಯಲ್ಲಿ ಎರಡು ಕೋಟಿ ರೂ.ಗಳ ತನಕ ಸಾಲ ಪಡೆಯಿರಿ. ಸಂಪರ್ಕಿಸಿ..’ ಎಂಬ ಕ್ಲಾಸಿಫೈಡ್ ಜಾಹೀರಾತು ಬೆಳಗಿನ ಬಿಸಿ ಬಿಸಿ ಕಾಫಿ ಹೀರುತ್ತಿದ್ದ ಕಾಶೀಪತಿಯ ಕಣ್ಣಿಗೂ ಬಿದ್ದಿತ್ತು, ಅವನ ಹೆಂಡತಿ ಮಾದೇವಿಯ ಕಣ್ಣಿಗೂ ಬಿದ್ದಿತ್ತು. ಕಾಶೀಪತಿ ಪತ್ರಿಕೆಯ ಇತರ ಸುದ್ದಿಗಳನ್ನು … Read more

ಕಟಾವು: ವೀಣಾ ನಾಗರಾಜು

‘ಲಚ್ಚೀ ಏ ಲಚ್ಚೀ ಅದೇನು ಮಾಡ್ತಾ ಇದ್ದೀಯಮ್ಮೀ ಒಳಗೇ ಆಗಲೇ ಏಟೋತ್ತಾಗದೆ ಬಿರನೆ ಒಂದೆರಡು ತುತ್ತು ಉಂಡು ಬರಬಾರದಾ.? ಮಧ್ಯಾಹ್ನಕ್ಕೆ ಅಂತಾ ಒಂದು ಮುದ್ದೆ ಹೆಚ್ಚಾಗಿ ಬುತ್ತಿ ಕಟ್ಕೋ ಉಂಬಕೆ ವಸಿ ಸಮಯ ಆದರೂ ಸಿಗ್ತದೇ. ನೀ ಹಿಂಗೇ ಉಂಡಿದ್ದೆಲ್ಲಾ ಕೈಗೆ ಕಾಲಿಗೆ ಇಳಿಸ್ಕೊಂಡು ಕುಂತರೇ ಇವೊತ್ತೂ ಆ ಗುತ್ತಿಗೆದಾರ ಶಾಮಣ್ಣನ ತಾವ ಉಗಿಸಿಕೊಳ್ಳೋದರ ಜೊತಿಗೆ ಒಂದು ಗಂಟೆ ಸಂಬಳಕ್ಕೂ ಕತ್ತರಿ ಹಾಕಿಸ್ಕೋಬೇಕಾಗುತ್ತೆ. ಮೊದಲೇ ನಮ್ಮ ಗ್ರಹಚಾರ ಬೇರೆ ಸರಿ ಇಲ್ಲಾ ನಿನ್ನೆ ಸ್ವಲ್ಪ ತಡವಾಗಿ ಹೋಗಿದ್ದಕ್ಕೆ … Read more

ಕುಯಿರನ ಕನಸು ಮತ್ತು ಮಗಳು: ಜಗದೀಶ ಗೊರೋಬಾಳ

ಅಂದು ಸಾವಂತಿಗೆ ಅದೇಕೋ ತಲೆನೋವು ವಿಪರೀತವಾಗಿತ್ತು. ಮನೆಯಂದಾಚೆ ಹೋಗಲಾರದಷ್ಟು ಅಸ್ವಸ್ಥಳಾಗಿದ್ದಳು. ರಾತ್ರಿಯಿಡಿ ಅವಳ ತಲೆಯಲ್ಲಿ ಅನಿರೀಕ್ಷಿತ ಯೋಚನೆಗಳು ಲಗ್ಗೆ ಇಟ್ಟಿದ್ದೇ ಇದಕ್ಕೆ ಕಾರಣವಿರಬಹುದು. “ ನನಗೂ ಅವರಂತಾದರೇ ನನ್ನ ಗುಲಾಬಿಯ ಗತಿಯೇನು? ಗುಲಾಬಿಗೆ ಊಟ ಯಾರು ಕೊಡ್ತಾರೆ? ಗುಲಾಬಿಯನ್ನು ಶಾಲೇಗ್ ಕಳಿಸೋರ್ಯಾರು? ಗುಲಾಬಿಗೆ ರಾತ್ರಿ ಕತೆ ಹೇಳಿ ಮಲಗಿಸೋರ್ಯಾರು” ಎಂಬ ಆಲೋಚನೆಗಳಿಂದ ಸಾವಂತಿಯ ತಲೆ ಚಿತ್ರವಿಚಿತ್ರವಾಗಿತ್ತು. ಈ ರೀತಿ ಯೋಚನೆಗಳಿಂದ ಸಾವಂತಿ ಬೆಚ್ಚಿಬೀಳಲು ಕಾರಣವಿತ್ತು. ಸಾವಂತಿಯದು ಚಿಕ್ಕ ಬಡ ಕುಟುಂಬ. ಗಂಡ ಕುಯಿರ ಮತ್ತು ಎಂಟು ವರ್ಷದ … Read more

ದಾಳ..: ಸತೀಶ್ ಶೆಟ್ಟಿ ವಕ್ವಾಡಿ..

ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಬೇಸಿಗೆಯ ಬಿಸಿಲಿನ ಭರಕ್ಕೆ ಬಳಲಿದ ಧರೆ ತಂಪಾಗಿತ್ತು. ಮಧ್ಯಾಹ್ನವಾದರೂ , ಆಗಸದಲ್ಲಿ ಕಪ್ಪುಗಟ್ಟಿದ ಮೋಡಗಳ ದಾಳಿಗೆ ಬೆದರಿ ಸೂರ್ಯ ಕಣ್ಣು ತೆರೆದಿರಲಿಲ್ಲ. ಇಂದು ಸಹ ಭುವಿಯ ಮೇಲೆ ಮತ್ತೆ ದಾಳಿ ಮಾಡಲು ಮೋಡಗಳ ದಂಡು ಸಜ್ಜಾಗುತ್ತಿತ್ತು, ಪಡುವಣದ ಕಡಲ ಕಡೆಯಿಂದ ಬೀಸುತ್ತಿರುವ ಗಾಳಿ ಸಂಜೆಯ ಮೇಘರಾಜನ ಅಬ್ಬರಕ್ಕೆ ಪಕ್ಕವಾದ್ಯವೆಂಬಂತೆ ಜೋರಾಗಿ ಬೀಸುತ್ತಿತ್ತು. ಇಂತಹ ತಣ್ಣಗಿನ ವಾತಾವರಣದಲ್ಲೂ ಅಲ್ಲಿ ನೆರೆದವರೆಲ್ಲ ಬೆವತ್ತಿದ್ದರು. ನರಹರಿ ಒಳಬೈಲು ಅವರ ಮನೆಯ ಫ್ಯಾನುಗಳು ಅವಿರತವಾಗಿ ಕಾರ್ಯನಿರ್ವಹಿಸುತ್ತಿದ್ದರೂ … Read more

ಕನ್ನಡಿಗಂಟದ ಬಿಂದಿ: ಡಾ.ಅಜಿತ್ ಹರೀಶಿ

ಜೇಡ ತನ್ನೊಳಗಿನಿಂದ ತಾನು ಅಂಟನ್ನು ಸ್ರವಿಸುತ್ತಾ ಬಲೆ ನೇಯುತ್ತಲೇ ಇತ್ತು. ಸೂರ್ಯನ ಕಿರಣಗಳು ಬಲೆಯ ಮೇಲೆ ಬಿದ್ದಾಗ ಕಣ್ಣಿಗೆ ಬಣ್ಣದೋಕುಳಿಯಾಗುತ್ತಿತ್ತು. ದಿನವೂ ಅದೊಂದು ಚಿತ್ತಾಪಹಾರಿಯಾದ ದೃಶ್ಯವಾಗಿತ್ತು. ಆದರೆ ಇಂದೇಕೋ ಕಿರಿಕಿರಿ ಉಂಟುಮಾಡುತ್ತಿದೆ ಎಂದು ಅನ್ನಿಸಿತು. ಕೆಲಸದ ರಾಜಮ್ಮ ಅದಾಗಲೇ ನನ್ನ ರೂಮಿಗೆ ಬಂದು ನೆಲ ಗುಡಿಸುತ್ತಿದ್ದಳು. ರಾಜಮ್ಮ, ಮೇಲೆಲ್ಲಾ ನೋಡು, ಕಸ ಹೊಡೆಯೋದೇ ಇಲ್ಲ. ಹೇಳದೇ ಯಾವ ಕೆಲಸವನ್ನೂ ಇತ್ತೀಚೆಗೆ ನೀನು ಮಾಡಲ್ಲ’ ತುಸು ಗಡಸು ಧ್ವನಿಯಲ್ಲಿ ಜೇಡರ ಬಲೆ ತೋರಿಸುತ್ತಾ ಹೇಳಿದೆ. ಅಯ್ಯೋ, ಇದೊಳ್ಳೆ ಆಯ್ತಲ್ಲಾ … Read more

ಅಗ್ನಿ ಸ್ಪರ್ಶ: ಭಾರ್ಗವಿ ಜೋಶಿ

ಅಲ್ಲಿ ಜನಸಾಗರ ನೆರೆದಿತ್ತು, ಜಾತಿ ಮತದ ಬೇಧವಿಲ್ಲದೆ ನೆರೆದಿದ್ದ ಜನ.. ಎಲ್ಲರಲ್ಲೂ ಮನೆ ಮಾಡಿದ ಮೌನ, ತುಂಬಿದ ಕಣ್ಣೀರು. ಕಳೆದುಕೊಂಡ ಮಾಣಿಕ್ಯ ಬದುಕಿದ ರೀತಿಯೇ ಹಾಗಿತ್ತು. ಶ್ರೀನಿವಾಸ ರಾಯರು ತಮ್ಮ 60ವರ್ಷ ಸಾರ್ಥಕ ಬದುಕಿನ ಪಯಣ ಮುಗಿಸಿ ಪರಲೋಕ ಸೇರಿದ್ದರು. ಬದುಕಿರುವಷ್ಟು ದಿನ ಆದರ್ಶ ಜೀವನ ನಡೆಸಿದ್ದರು, ಜಾತಿ ಭೇಧವಿಲ್ಲದೆ, ಮೇಲು ಕೀಳು, ಬಡವ ಶ್ರೀಮಂತ ಎಂಬ ಬೇಧವಿಲ್ಲದೆ ಎಲ್ಲರನ್ನು ಪ್ರೀತಿಸುತ್ತಿದ್ದರು. ಪರೋಪಕಾರಕ್ಕೆ ಹೆಸರಾಗಿದ್ದರು. ಅನಾರೋಗ್ಯ, ಮಕ್ಕಳ ವಿದ್ಯಾಭ್ಯಾಸ ಹೀಗೆ ಹಲವಾರು ಇವರಿಂದ ಸಹಾಯ ಪಡೆದಿದ್ದರು. ಇವರ … Read more

ನನ್ನವಳ ನೆನಪು: ಶ್ರೀರಂಗ. ಕೆ. ಆರ್

ಅದೇನೋ ಅಂದು ಮನಸ್ಸು ತಳಮಳಗೊಂಡಿತ್ತು. ಮಲಗಿ ಮೂರು ಸುತ್ತು ಹೊರಳಾಡಿದರೂ ಕಣ್ಣಿಗೆ ನಿದ್ದೆ ಹತ್ತಲಿಲ್ಲ. ಆಗ ನಿನ್ನಪ್ಪನಿಂದ ಕರೆಬಂದದ್ದು. ನಿನಗೆ ಹೆರಿಗೆ ನೋವು, ಆಸ್ಪತ್ರೆಯಲ್ಲಿದ್ದೇವೆ ಎಂದು. ಆಗಲೇ ಓಡಿ ಬರಬೇಕೆಂದುಕೊಂಡೆ. ಪರವಾಗಿಲ್ಲ ನಾವೆಲ್ಲರೂ ಇದ್ದೇವೆ ತೊಂದರೆಯಿಲ್ಲ, ಬೆಳಗ್ಗೆ ಬಂದರಾಯಿತು ಎಂದರು ಮಾವ. ಆದರೂ ನನಗೆ ಸಮಾಧಾನವಿರಲಿಲ್ಲ. ನಿನ್ನ ಕನಸುಗಳಿಲ್ಲದೆ ಮಲಗಿದವನೇ ಅಲ್ಲ ನಾನು, ಅಂದೇಕೋ ಕಣ್ಣುಗಳು ಮುಚ್ಚಲೇ ಇಲ್ಲ. ಮಲಗಿದ್ದ ಕೋಣೆಯ ಮೇಲ್ಛಾವಣಿಯ ಪರದೆಯ ಮೇಲೆ ನಿನ್ನ ಜೊತೆ ಕಳೆದ ಕ್ಷಣಗಳ ನೆನಪುಗಳು ಮೂಡಿಬರುತ್ತಿದ್ದವು. ಅವನ್ನೇ ನೋಡುತ್ತ … Read more

ಹೊಸ ಬೆಳಕು: ವೈ. ಬಿ. ಕಡಕೋಳ

ವಂದನಾಳ ಬಾಳಿನಲ್ಲಿ ಏನೋ ದುಗುಡ. ಮುಖ ಸಪ್ಪೆಯಿಂದ ಮನೆಗೆಲಸದಲ್ಲಿ ಆಸಕ್ತಿ ಇಲ್ಲದಂತೆ ಮೋಬೈಲ್‍ದಲ್ಲಿ ಏನನ್ನೋ ಟೈಪಿಸುತ್ತ ಕುಳಿತಿದ್ದಳು. ಅದೇ ಸಂದರ್ಭ ಆ ಕಡೆಯಿಂದ ಅವಳ ಗೆಳತಿಯ ಕರೆ ಬಂತು ”ಹಲೋ ವಂದನಾ ಏನು ಮಾಡುತ್ತಿರುವೆ. ”? ಪ್ರಶ್ನೆ ಬರುವುದಷ್ಟೇ ತಡ ದುಃಖ ಉಮ್ಮಳಿಸಿ ಬಂದು ಅಳತೊಡಗಿದಳು. ಆ ಕಡೆಯಿಂದ ಮಾತೇ ಬರದಾದಾಗ ಇವಳ ಅಳುವ ಧ್ವನಿಯನ್ನು ಕೇಳಿ ಸುಮ ”ಯಾಕೆ ಏನಾಯಿತೇ ನಿನಗೆ, ಯಾಕೆ ಈ ಅಳು. ”? ಎಂದೆಲ್ಲ ಪ್ರಶ್ನೆಗಳ ಸುರಿಮಳೆಯೇ ಸುಮಳಿಂದ ಬಂದಾಗ ವಂದನಾ … Read more

ನ್ಯಾನೋ ಕಥೆಗಳು: ವೆಂಕಟೇಶ್‌ ಚಾಗಿ

೧) ಹೊಸ ವರ್ಷಹೊಸ ವರ್ಷ ಬಂದಿತೆಂದು ಅವನಿಗೆ ತುಂಬ ಖುಷಿ. ಹೊಸ ವರ್ಷದ ಸಡಗರ ಭರ್ಜರಿಯಾಗಬೇಕೆಂಬುದು ಅವನ ಅಭಿಲಾಷೆ. ಅದರಂತೆ ತನ್ನ ಸ್ನೇಹಿತರೊಂದಿಗೆ ಸೇರಿ ದೊಡ್ಡ ಔತಣಕೂಟವನ್ನೆ ಏರ್ಪಡಿಸಿದ.ಮೋಜು ಮಸ್ತಿಯೊಂದಿಗೆ ಪಾರ್ಟಿ ಜೋರಾಗಿಯೇ ಆಯ್ತು. ಹೊಸ ವರ್ಷಕ್ಕೆ ಹೊಸ ಕ್ಯಾಲೆಂಡರ್ ಖರೀದಿಸಿದ. ಹೊಸ ಡೈರಿಯೊಂದನ್ನು ಖರೀದಿ ಮಾಡಿದ. ಡೈರಿಯ ಮೊದಲ ಪುಟದಲ್ಲಿ ತಾನು ಈ ವರ್ಷದಲ್ಲಿ ಕೈಗೊಳ್ಳ ಲೇಬೇಕಾದ ಕಾರ್ಯಗಳನ್ನು ಪಟ್ಟಿ ಮಾಡಿದ. ಸನ್ನಡತೆ , ನೈತಿಕತೆ ,ಉತ್ತಮ ಹವ್ಯಾಸ , ಉಳಿತಾಯ ಮುಂತಾದ ಗುಣಗಳನ್ನು ರೂಢಿಸಿಕೊಳ್ಳಲೇಬೇಕೆಂದು … Read more

ರೈತ (ಪುಟ್ಟ ಕತೆ): ವೆಂಕಟೇಶ ಚಾಗಿ

ಆಗ ನಾನಿನ್ನು  ಪುಟ್ಟ ಹುಡುಗ. ಎರಡೇ ತರಗತಿಯಲ್ಲಿ ಓದುತ್ತಿರುವಾಗಲೇ ಅಪ್ಪ ನನ್ನನ್ನು ಹೊಲಕ್ಕೆ ಕರೆದುಕೊಂಡು ಹೋಗುತ್ತಿದ್ದ. ಅಪ್ಪನಿಗೆ “ಅಪ್ಪಾ , ನಾನೂ ರೈತ ಆಗ್ಲಾ? ” ಅಂತ ಕೇಳಿದ್ದೆ.  ಅಪ್ಪನ ಕೆಲಸಗಳೋ ಒಂದಲ್ಲ ಎರಡಲ್ಲ. ನಸುಕಿನ ಜಾವ ಏಳುತ್ತಲೇ ಅಪ್ಪನ ಕಾಯಕ ಶುರುವಾಗುತ್ತಿತ್ತು. ಅಮ್ಮ ಮಾಡಿಕೊಟ್ಟ ನಾಲ್ಕೈದು ರೊಟ್ಟಿ  , ಪಲ್ಲೆ ಒಂದು ಬಟ್ಟೆಯಲ್ಲಿ ಕಟ್ಟಿಕೊಂಡು ಬಾಯಾರಿಕೆಗಾಗಿ ಮಣ್ಣಿನ ಬಾಟಲ್ ನಲ್ಲಿ ನೀರು ತುಂಬಿಕೊಂಡು ಎರಡು ಎತ್ತುಗಳನ್ನು ಹಿಡಿದು ಹೊರಟರೆ ಮುಗೀತು ಮತ್ತೆ ಸಂಜೆ ಆರಕ್ಕೆ ಅಪ್ಪ … Read more

ಅಮ್ಮ ಹೀಗೆ ಇರಬೇಕು: ಗಿರಿಜಾ ಜ್ಞಾನಸುಂದರ್

ಪುಟ್ಟ ಪುಟ್ಟ ಕೈಗಳು ಅಮ್ಮನನ್ನು ಹಿಡಿದಿದ್ದವು. ೮ ದಿನದ ಮಗು ಬಹಳ ಸಣ್ಣದಾಗಿ ಹುಟ್ಟಿದ್ದು, ಆ ಮಗುವನ್ನು ಹೇಗೆ ಎತ್ತಿಕೊಳ್ಳಬೇಕೆಂಬುದು ಸಹ ತಿಳಿದಿರಲಿಲ್ಲ ಅಮ್ಮನಿಗೆ. ಸರಸ್ವತಿ ತನ್ನ ೨೨ ನೇ ವರ್ಷಕ್ಕೆ ಮಗುವಿಗೆ ಜನನ ನೀಡಿದ್ದಳು. ಅವಳಿಗೆ ಇದೆಲ್ಲ ಹೊಸತು. ಮಗು ಅಳುತ್ತಿದ್ದರೆ ಏನು ಮಾಡಬೇಕೆಂಬುದೇ ಅವಳಿಗೆ ತಿಳಿಯುತ್ತಿರಲಿಲ್ಲ. ಯಾವ ಕಾರಣಕ್ಕೆ ಅಳುತ್ತಿದೆ ಎಂದು ಯೋಚಿಸುತ್ತಿದ್ದಳು. ಮಗು ತುಂಬ ಅಳುತ್ತಿತ್ತು, ಅವಳಿಗೆ ಅದನ್ನು ಸಮಾಧಾನ ಮಾಡುವುದೇ ಒಂದು ದೊಡ್ಡ ಸಾಹಸವಾಗಿತ್ತು. ಅವಳ ನಿದ್ದೆಗೆ, ಊಟಕ್ಕೆ ಪ್ರತಿಯೊಂದಕ್ಕೂ ಮಗು … Read more

ವಿಜೀ : ವರದೇಂದ್ರ.ಕೆ

ನಿತ್ರಾಣನಾಗಿದ್ದ ಸೂರ್ಯ ವಿರಮಿಸಲು ಪಶ್ಚಿಮಕ್ಕೆ ಮಾಯವಾಗುತ್ತಿದ್ದ, ಇದನ್ನೇ ಕಾಯುತ್ತಿದ್ದವನಂತೆ ಚಂದಿರ ಮುಗುಳ್ನಗುತ್ತ ಹಾಲು ಬೆಳದಿಂಗಳ ಚೆಲ್ಲುತ್ತ ಚೆಲುವೆಯರ ಅಂದ ಪ್ರತಿಬಿಂಬಿಸುತ್ತ ಮೇಲೇರ ತೊಡಗಿದ. ಅವನ ಬೆಳಕೇ ಗತಿ ಎನ್ನುವ ಬಸ್ ನಿಲ್ದಾಣ, ಧೂಳು ತುಂಬಿಕೊಂಡಿತ್ತು. ಇಂದೋ ನಾಳೆಯೋ ನೆಲಕ್ಕೆ ಮುತ್ತಿಡುವಂತಹ ಸ್ಥಿತಿಯಲ್ಲಿದ್ದು, ವಿನಾಶದ ಅಂಚಿನಲ್ಲಿತ್ತು. ಅಂತಹ ನಿಲ್ದಾಣವೇ ನಮ್ಮ ಜನರಿಗೆ ಜೀವ ಎನ್ನುವಂತೆ; ಅದರಡಿಯಲ್ಲಿಯೇ ನಿಂತು ಧೂಳಿನೊಂದಿಗೆ, ಬೀಡಿ ಸಿಗರೇಟಿನ ವಾಸನೆಯೊಂದಿಗೆ ಒಡನಾಡಿಗಳಾಗಿ ನಿಂತಿದ್ದಾರೆ. ಅಲ್ಲಿ ಪೋಲಿ ಹುಡುಗರ ದಂಡು, ಊರಿಗೆ ಲೇಟಾಗಿ ಪರಿತಪಿಸುತ್ತಿರುವ ಹೆಂಗಳೆಯರು. ದೊಡ್ಡ … Read more

ಹಗರಣದಲ್ಲೇ ಅಂತ್ಯ: ದಯಾನಂದ ರಂಗಧಾಮಪ್ಪ

ಸುಮಾರು ಅರವತ್ತು ವರ್ಷದ ವೃದ್ಧ ಟೇಬಲ್ ಮೇಲಿದ್ದ ಖಾಲಿ ಕಾಗದದ ಮೇಲೆ “ದೇವರು ಇದಾನೆ , ಇಲ್ಲ …. ದೇವರು ಇದಾನೆ , ಇಲ್ಲ ” ಎಂದು ಬರೆಯುತ್ತಿದ್ದ ತನ್ನ ಗಂಡನನ್ನು ನೋಡಿ ‘ರೀ ಏನ್ರಿ ಇದು? ರಾಮ ರಾಮ ಬರೆಯೋ ವಯಸ್ಸಲ್ಲಿ ನೀವ್ಯಾಕೆ ಈ ರೀತಿ ಬರೆತ್ತಿದ್ದೀರಾ? ಎಂದು ಗದರಿದಳು. ನಿನ್ನ ಪ್ರಕಾರ ಇದಾನೆ ಅಂತೀಯಾ? ಅವಳು ಮೌನಿಯಾದಳು. ಬರೆಯೋದು ನಿಲ್ಲಿಸಿ ಮೆಲ್ಲಗೆ ನಿಟ್ಟುಸಿರು ಬಿಡುತ್ತಾ ಕುರ್ಚಿಗೆ ಹೊರಗಿ ” ಮಗ ನಮ್ಮ ಜೊತೆ ಮಾತು … Read more

ಸಾವಿನ ಆಟ: ಜೆ.ವಿ.ಕಾರ್ಲೊ.

ಮೂಲ: ಇವಾನ್ ಹಂಟರ್ ಅನುವಾದ: ಜೆ.ವಿ.ಕಾರ್ಲೊ.   ಅವನ ಎದುರಿಗೆ ಕುಳಿತ್ತಿದ್ದ ಹುಡುಗ ಶತ್ರು ಪಾಳೆಯದವನಾಗಿದ್ದ. ಹೆಸರು ಟೀಗೊ. ಅವನು ಧರಿಸಿದ್ದ ಹಸಿರು ಬಣ್ಣದ ಜಾಕೆಟಿನ ಬಾಹುಗಳಿಗೆ ಕಿತ್ತಳೆ ಬಣ್ಣದ ಪಟ್ಟಿಯನ್ನು ಅಂಟಿಸಲಾಗಿತ್ತು. ಆ ಜಾಕೆಟ್ಟೇ ಅವನು ಶತ್ರು ಪಾಳೆಯದವನೆಂದು ಚೀರಿ ಚೀರಿ ಸಾರುತ್ತಿತ್ತು. “ಇದು ಚೆನ್ನಾಗಿದೆ!” ಮೇಜಿನ ಮಧ್ಯದಲ್ಲಿದ್ದ ರಿವಾಲ್ವರಿಗೆ ಬೊಟ್ಟು ಮಾಡಿ ಡೇವ್ ಹೇಳಿದ. “ಅಂಗಡಿಯಲ್ಲಿ ಕೊಳ್ಳುವುದಾದರೆ 45 ಡಾಲರುಗಳಿಗೆ ಕಡಿಮೆ ಇಲ್ಲ ಅಂತ ನನ್ನ ಅನಿಸಿಕೆ.” ಅದು ಸ್ಮಿತ್ ಅಂಡ್ ವೆಸ್ಸನ್ .38 … Read more

ನ್ಯಾನೋ ಕತೆಗಳು: ವೆಂಕಟೇಶ ಚಾಗಿ

  ೧) ಸ್ವಚ್ಛ ಭಾರತ ಬಸ್ ನಿಲ್ದಾಣದ ಕಟ್ಟೆಯ ಮೇಲೆ ಇಬ್ಬರು ಸ್ನೇಹಿತರು ಸರಕಾರದ ಮಹತ್ತರ ಯೋಜನೆಯ ಸಾಧಕ-ಬಾಧಕಗಳ ಕುರಿತು ಮಾತನಾಡುತ್ತಾ ಕುಳಿತಿದ್ದರು. ಸಮಯ ಕಳೆಯಲು ಬಾಯಿ ಚಟಕ್ಕಾಗಿ ಶೇಂಗಾ, ಪ್ಯಾಕೆಟ್ ತಿಂಡಿ, ಬಾಳೆಹಣ್ಣು ಇನ್ನಿತರೆ ವಸ್ತುಗಳನ್ನು ತಿನ್ನುತ್ತಾ ಮಾತನಾಡುತ್ತಿದ್ದರು. “ಛೇ, ಈ  ಜನರಿಗೆ ಸರಕಾರದ ಈ ಮಹಾ ಯೋಜನೆ ಅರ್ಥವಾಗುವುದೇ ಇಲ್ಲ.  ಇವರಿಗೆ ಯಾವಾಗ ಬುದ್ಧಿ ಬರುತ್ತೋ ” ಎನ್ನುತ್ತಾ ಹೊರಟುಹೋದರು. ಅವರಿದ್ದ ಜಾಗದ ಸುತ್ತಮುತ್ತ ಶೇಂಗಾ ಸಿಪ್ಪೆ,  ಪ್ಲಾಸ್ಟಿಕ್ ಹಾಳೆಗಳು, ಬಾಳೆ ಸಿಪ್ಪೆ ಹರಡಿದ್ದವು. … Read more

ಶಕ್ತಿದೇವತೆ: ಗಿರಿಜಾ ಜ್ಞಾನಸುಂದರ್

ಕಮಲಾ ತನ್ನ ಯೋಚನೆಯಲ್ಲಿ ಮುಳುಗಿದ್ದಳು. ತನ್ನ ಬಾಲ್ಯ, ತನ್ನನ್ನು ಮುದ್ದುಮಾಡಿ ಬೆಳೆಸಿದ ತವರು, ಅವಳಪ್ಪ ಅಮ್ಮನ ಮುದ್ದು ಸಾಲದೆಂದು ಅವಳ ಅಣ್ಣ ಕೂಡ ಅವಳನ್ನು ಅತಿಯಾಗಿ ಮುದ್ದು ಮಾಡುತ್ತಿದ್ದ. ಅವರೆಲ್ಲರ ಮುದ್ದಿನ ಕಣ್ಮಣಿ ಆಗಿದ್ದ ಅವಳನ್ನು ಸಿರಿವಂತನಿಗೆ ಕೊಟ್ಟು ಮಾಡುವೆ ಮಾಡಿದ್ದರು. ಅವನು ಸಮಾಜದಲ್ಲಿ ಒಳ್ಳೆಯ ಹೆಸರನ್ನು ಪಡೆದುಕೊಂಡಿದ್ದ. ಆದರೆ ಅವನು ಮತ್ತು ಅವನ ಅಪ್ಪ ಅಮ್ಮ ಮನೆಯಲ್ಲಿ ಬೇರೆ ರೀತಿಯಲ್ಲಿಯೇ ಇರುತ್ತಿದ್ದರು. ಹೊರಗಿನ ಸಮಾಜದಲ್ಲಿ ಸಭ್ಯಸ್ಥರೆನಿಸಿಕೊಂಡ ಅವರು, ತಮ್ಮ ನಿಜವಾದ ಬಣ್ಣವನ್ನು ಮನೆಯಲ್ಲಿ ತೋರಿಸುತ್ತಿದ್ದರು. ಅವರನ್ನು … Read more

ಒಂಟಿ ಹೆಣ್ಣಿನ ಕಥೆ: ವರದೇಂದ್ರ ಕೆ

ಕಡು ಬಡತನದ ಬೇಗೆ. ಮನೆಯಲ್ಲಿ ತಾಯಿ ಮಗಳು ಮಾತ್ರ. ಗಾಯತ್ರಿ ಬದುಕಿಗೆ ಆದ ಹಲವು ಗಾಯಗಳಿಗೆ ನಗು ಸಹನೆಗಳನ್ನೇ ಔಷಧಿ ಆಗಿಸಿಕೊಂಡಾಕೆ. ಮದುವೆ ಆಗಿ ಒಂದು ಮಗುವಿಗೆ ತಾಯಿ ಆಗುತ್ತಾಳೆ. ಹೆರಿಗೆ ಆದ ದಿನವೇ ಗಂಡ ಆ್ಯಕ್ಸಿಡೆಂಟ್ ನಲ್ಲಿ ಸತ್ತು ಹೋಗುತ್ತಾನೆ. ಹೆರಿಗೆಗೆ ಬಂದಾಕಿ ತವರು ಮನೆಯಲ್ಲೇ ಉಳಿಯುತ್ತಾಳೆ. ಹುಟ್ಟಿ ತಂದೆಯನ್ನು ತಿಂದುಕೊಂಡ ಕೆಟ್ಟ ನಕ್ಷತ್ರದವಳೆಂಬ ಹಣೆ ಪಟ್ಟಿ ಹೊತ್ತ ಮಗಳನ್ನು ಗಂಡನ ಅಪ್ಪ ಅಮ್ಮ, ಮುಖ ನೋಡಲೂ ಬರುವುದಿಲ್ಲ. ಗಾಯತ್ರಿಗೆ ತವರು ಮನೆಯೇ ಗತಿಯಾಗುತ್ತದೆ ತವರನ್ನು … Read more

ಮಾಲಿಂಗ. . .: ಸಿದ್ದರಾಮ ತಳವಾರ

ರಾಮೇನಹಳ್ಳಿಯ ಇಡೀ ಊರಿಗೆ ಊರೇ ಪತರಗುಟ್ಟಿ ಹೋಗಿದೆ. ಊರ ರಾಮೇಗೌಡರ ಮನೆಯೆಂಬುದೊಂದು ಸಂತೆಯಾಗಿ ಹೋಗಿತ್ತು. ಇಡೀ ಊರಿಗೆ ಊರೇ ಅವರ ಮನೆ ಮುಂದೆ ನೆರೆದು ನೆರೆದವರೆಲ್ಲ ಕೌತುಕದಿಂದ ಪರಿಶೀಲನೆಗೆ ಬಂದ ಪೋಲೀಸರ ಮುಖಗಳನ್ನ ದಿಟ್ಟಿಸುತ್ತಿದ್ದಾರೆ. ಊರಿನ ಯಾವೊಬ್ಬ ಹೆಂಗಸು ಮುಖ ತೊಳೆದಿಲ್ಲ ಅಂಗಲದ ಕಸ ಗುಡಿಸಿಲ್ಲ ರಂಗೋಲಿ ಹಾಕಿಲ್ಲ ಬಾಯಲ್ಲಿ ಸೆರಗಿಟ್ಟುಕೊಂಡು “ಯವ್ವಾ ಹೆಂಗಾಗ್ಯದೋ ಏನೋ, ಪಾಪ ದೇವ್ರಂಥ ಗೌಡ್ರಿಗೆ ಹಿಂತಾ ಸ್ಥಿತಿ ಯಾಕ ಬಂತುಅಂತೇನಿ, ಮನೀ ಮಗನಂಗಿದ್ದ ಮಾಲಿಂಗ ಅದ್ಹೆಂಗ್ ಸತ್ನೋ ಏನೋ ಪಾಪ ಗೌಡರ … Read more