ಶಿಕಾರಿ: ಡಾ. ಗವಿ ಸ್ವಾಮಿ

ಎರಡು ವರ್ಷದ ಎಳೆಗೂಸು  ತನ್ನ ಶಕ್ತಿಯನ್ನೆಲ್ಲ ಒಗ್ಗೂಡಿಸಿ ಅವನನ್ನು ಅಲುಗಾಡಿಸುತ್ತಿದ್ದಳು. ಆತ ತೆರೆದ ಕಣ್ಣುಗಳಿಂದ ಛಾವಣಿಯನ್ನು ದಿಟ್ಟಿಸುತ್ತಾ ಮರದ ಕೊರಡಿನಂತೆ ಬಿದ್ದಿದ್ದ . ತನ್ನನ್ನು ಎಬ್ಬಿಸಲು ಹೆಣಗಾಡುತ್ತಿದ್ದ ಮುದ್ದಿನ ಮಗಳಿಗೆ ಒಂಚೂರೂ ಸ್ಪಂದಿಸದೇ ನಿತ್ರಾಣನಾಗಿ ಹಾಸಿಗೆಗೆ ಅಂಟಿಕೊಂಡಿದ್ದ. ಮೂರ್ನಾಲ್ಕು ಬಾರಿ ಅಪ್ಪನನ್ನು ಜಗ್ಗಾಡಿ ಸುಸ್ತಾದ ಕಂದನ ಕಣ್ಣುಗಳಲ್ಲಿ ಹತಾಶೆ ಮಡುಗಟ್ಟಿತು. ತನ್ನನ್ನು ಮೊರದಗಲದ ಅಂಗೈ ಮೇಲೆ ಕೂರಿಸಿಕೊಂಡು ಮುದ್ದಿಸುತ್ತಿದ್ದ ಅಪ್ಪ.. ಗೊಂಬೆಯಂತೆ ಎಸೆದು ಆತುಕೊಳ್ಳುತ್ತಿದ್ದ ಅಪ್ಪ ಈಗ ಸ್ಪಂದಿಸದೇ ಮರದ ಕೊಂಟಿನಂತೆ ಮಲಗಿರುವುದನ್ನು ನೋಡಿ ಪುಟ್ಟ ಕಣ್ಣುಗಳಲ್ಲಿ … Read more

ಇರುವೆ ಮತ್ತು ಮಿಡತೆ: ಜೆ.ವಿ.ಕಾರ್ಲೊ

ಮೂಲ ಕತೆ: ‘The Ant and the Grasshopper’  ಲೇಖಕರು: ಡಬ್ಲ್ಯು.ಸಾಮರ್‌ಸೆಟ್ ಮ್ಹಾಮ್ ಕನ್ನಡಕ್ಕೆ: ಜೆ.ವಿ.ಕಾರ್ಲೊ ನಾನು ಸಣ್ಣವನಿದ್ದಾಗ ಫ್ರೆಂಚ್ ಲೇಖಕ ಫೊಂಟೇಯ್ನಾನ ಕೆಲವು ನೀತಿ ಕತೆಗಳನ್ನು ಉರು ಹಚ್ಚಿಕೊಳ್ಳುವುದು ಕಡ್ಡಾಯವೆಂಬಂತ್ತಿತ್ತು. ಈ ಕತೆಗಳಲ್ಲಿ ಅಡಗಿರುವ ನೀತಿಯನ್ನು ನಮ್ಮ ಮನದಟ್ಟಾಗುವಂತೆ ನಮ್ಮ ಹಿರಿಯರೂ ವಿವರಿಸುತ್ತಿದ್ದರು. ಈ ಕತೆಗಳಲ್ಲಿ ನನಗೆ ಬಹಳ ಇಷ್ಟವಾದ ಕತೆ ’ಇರುವೆ ಮತ್ತು ಮಿಡತೆ’ಯದು. ಈ ಅಸಮಾನತೆಯ ಜಗತ್ತಿನಲ್ಲಿ ಕ್ರಿಯಾಶಾಲಿಗಳಿಗೆ ಜಯ, ಸೋಮಾರಿಗಳಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ತುಂಬಾ ಸೊಗಸಾಗಿ ಈ ಕತೆಯಲ್ಲಿ ಚಿತ್ರಿಸಲಾಗಿದೆ. ವಸಂತ … Read more

ಲಿಂಗೇರಿ ವಿಜಿಯ ಗುಟ್ಟು: ವಾಸುಕಿ ರಾಘವನ್

ತನ್ನ ಅಜ್ಜನ ಭಾವಚಿತ್ರದ ಮುಂದೆ ನಿಂತಿದ್ದ ವಿಜಿಯ ಮುಖದಲ್ಲಿ ತೃಪ್ತಿಯ ಮಂದಹಾಸವಿತ್ತು. "ಅಜ್ಜ, ನಿನ್ನ ಮಾತು ನಿಜ ಆಯ್ತು  ನೋಡು. ನೀನು ಹೇಳ್ತಿದ್ದ ಆ ದಿನ ಇವತ್ತು ಬಂತು" ಅಂದವನ ಕಣ್ಣಂಚು ಸ್ವಲ್ಪ ತೇವಗೊಂಡಿತ್ತು. ಅಜ್ಜ ಪಟ್ಟ ಕಷ್ಟಕ್ಕೆ, ಅನುಭವಿಸಿದ ನಿರಾಶೆ, ಅವಮಾನ, ಮೂದಲಿಕೆ ಇವೆಲ್ಲದಕ್ಕೂ ಒಂದು ಚಿಕ್ಕ ಸಮಾಧಾನ ಅನ್ನುವಂತೆ ಇತ್ತು ಆ ದಿನ. ವಿಜಿಯ ದೆಸೆಯಿಂದ ಲಿಂಗೇರಿ ಅನ್ನುವ ಆ ಪುಟ್ಟ ಹಳ್ಳಿಯ ಹೆಸರು ಜಗತ್ತಿನಾದ್ಯಂತ ಹರಡಿತ್ತು. ಯಾವುದೋ ಟಿವಿ ಚಾನಲ್ಲಿನವರು "ವಸ್ತ್ರ ಜಾದೂಗಾರ … Read more

ನಮ್ಮ ದೇವರು: ಜೈಕುಮಾರ್.ಹೆಚ್.ಎಸ್

ದೇಶದ ಪ್ರತಿಷ್ಟಿತ ವಿಜ್ಞಾನ ಸಂಶೋಧನಾ ಸಂಸ್ಥೆಯ ಆವರಣವದು. ದಟ್ಟ ಅರಣ್ಯವನ್ನು ನೆನಪಿಸುವ ದೇಶೀಯ ಮರಗಿಡಗಳಷ್ಟೇ ಅಲ್ಲದೆ ವಿವಿಧ ದೇಶಗಳ ಸಸ್ಯಸಂಪತ್ತನ್ನು ಹೊಂದಿದ್ದು, ಎಂಥಹ ಕಡುಬೇಸಿಗೆಯಲ್ಲೂ ತಂಪಾದ ಗಾಳಿ ಬೀಸುತ್ತಾ ನಳನಳಿಸುವ ಆವರಣವದು. ನೂರಾರು ಎಕರೆಯಷ್ಟು ಹರಡಿರುವ ಆವರಣದಲ್ಲಿ ವಿಜ್ಞಾನ ಪ್ರಯೋಗಾಲಯಗಳು, ಕ್ಲಾಸ್ ರೂಮುಗಳು, ವಿದ್ಯಾರ್ಥಿ ನಿಲಯಗಳು, ಕ್ಯಾಂಟೀನ್‌ಗಳು, ವಿಜ್ಞಾನಿಗಳ ವಸತಿ ನಿಲಯಗಳು ಯೋಜಿತ ರೀತಿಯಲ್ಲಿ ವಿಶ್ವದರ್ಜೆಗೆ ಸರಿಸiನಾಗಿ ಅರಣ್ಯದಂಥಹ ಆವರಣದಲ್ಲಿ ಅಡಗಿ ಕುಳಿತಂತಿವೆ.  ಅದೊಂದು ದಿನ ಮಧ್ಯಾಹ್ನದ ಹೊತ್ತು ರಸ್ತೆಯಲ್ಲಿ ಜನ ತಮ್ಮ ಪಾಡಿಗೆ ತಾವು ಸಾಗುತ್ತಿದ್ದಾರೆ. … Read more

ನಿಯತ್ತಿನ ಘರ್ಷಣೆ: ಪಾರ್ಥಸಾರಥಿ ಎನ್.

ಗುರು ಕೈಗೆ ಕಟ್ಟಿದ್ದ ಗಡಿಯಾರ ನೋಡಿಕೊಂಡ. ಸಂಜೆ ಆರುಘಂಟೆ ದಾಟುತ್ತಿತ್ತು. ಅವನ ಮನಸ್ಸು ಅಯಾಚಿತವಾಗಿ ನೆನೆಯಿತು. ಬೆಂಗಳೂರಿನಲ್ಲಿ ಈಗ ಸಮಯ ರಾತ್ರಿ ಹತ್ತುವರೆ ಅಗಿರುತ್ತದೆ.  ಮನೆಯಲ್ಲಿ ಅಪ್ಪ ಅಮ್ಮ ಮಲಗಿರುತ್ತಾರೆ,ತಂಗಿ ಓದುತ್ತ ಕುಳಿತಿರಬಹುದು. ಆದಿನದ ಮಟ್ಟಿಗೆ ಕೆಲಸವೇನು ಬಾಕಿ ಇರಲಿಲ್ಲ. ಸರಿ ಹೊರಡೋಣವೆಂದು ಎದ್ದು ನಿಂತ. ಅವನ ಸ್ನೇಹಿತ ಶ್ರೀನಾಥ ಇವನತ್ತ ನೋಡಿದ, ಏನು ಹೊರಟೆ ಅನ್ನುವಂತೆ. ಇಬ್ಬರೂ ಸೇರಿ ದೂರದ ಆ ನಾಡಿನಲ್ಲಿ ಮನೆ ಮಾಡಿದ್ದರು.  "ನಾನು ಹೊರಟಿರುತ್ತೇನೆ"  ಗುರು ನುಡಿದ,  ಶ್ರೀನಾಥನತ್ತ ನೋಡುತ್ತ.  ಶ್ರೀನಾಥ … Read more

ಸನ್ಯಾಸಿಯ ಮಗು: ಗಣೇಶ್ ಖರೆ

"ಅವ್ವಾ.. ಅವ್ವಾರ ತಿನ್ನಾಕ ಒಸಿ ನೀಡ್ರೀ.. ಹೂಟ್ಟಿ ಹಸಿದೈತಿ ಎನಾರ ಕೊಡ್ರಿ ಮನಿಗೆ ಒಳ್ಳೆದಾಕೈತಿ…" ಬೆಳಿಗ್ಗೆ ಮುಂಚಾ ಅಂಗಳದಾಗ ಅನಾಮಧೇಯ ಧ್ವನಿ ಕೇಳಾಕತ್ತಿತ್ತು. "ಬೆಳಿಗ್ಗೆ ಆಗೋ ಪುರುಸೊತ್ತಿಲ್ಲ ಮನಿ ಬಾಗಿಲನಾಗ ಬಂದು ಬೇಡಾಕ್ ಸುರು ಆತು" ಅಂತ ಬಯ್ಕೋತ ಸೀತವ್ವ ಸಿಟ್ನಾಗ ಹೊರಗಡೆ ಮುಖಾನೂ ಹಾಕ್ದೆ ಹಿತ್ತಲಮನಿ ಕಡಿಗೆ ಹೋದ್ಲು..  "ಉಳದಿದ್ದು ಬಳದಿದ್ದು ಎನಾರ ನಡಿತೈತಿ, ಒಸಿ ನೀಡ್ರಿ ಹೊಟ್ಟಿ ಹಸದೈತಿ ಕೊಡೋರಿಗೆಲ್ಲಾ ಸಿಕ್ಕಪಟ್ಟೆ ಕೊಟ್ಟೀರಿ, ದೇವ ಧರ್ಮಾ ಎಲ್ಲಾ ಮಾಡೀರಿ ನನಗೂ ತುಸಾ ನೀಡ್ರಿ, ಕೂಸಿಲ್ಲದ … Read more

ಆ ಅವಳು..: ಸುಧಾ ಚಿದಾನಂದಗೌಡ

“ಇಲ್ರೀ, ಇದೊಂದ್ ವಿಷ್ಯದಾಗ ತಲಿ ಹಾಕಬ್ಯಾಡ್ರೀ..” “ಸರಿಯವ್ವಾ, ನಿನ್ನ ಬಂಧುಬಳಗ, ಕುಲಸ್ಥರು, ದೈವಸ್ಥರು ಹೇಳಿದ್ದಕ್ಕೇ ನೀ ಒಪ್ಪಿಲ್ಲ. ಇನ್ನು ನನ್ನ ಮಾತಿಗೆ ಒಪ್ಪಿಕ್ಯಂತೀ ಅಂತ ನಾ ಏನೂ ಅನ್ಕಂಡಿಲ್ಲ. ಆದ್ರ ದುರ್ಗಾಶಕ್ತಿ ಅಂತ ಒಬ್ಬಾಕಿ ಅದಾಳ ನೋಡು, ಆಕೀದು ಅಭಿಪ್ರಾಯ ಕೇಳಬೇಕಲ್ಲಾ..” “ಅಂದ್ರ, ದುರುಗಮ್ಮನ ಗುಡೀಮುಂದ, ಪೂಜಾರಪ್ಪನೆದುರಿಗೆ ಹಾರ ಹಿಡ್ಕೊಂಡು ನಿಂದ್ರು ಅಂತ ಹೇಳಾಕ್ಹತ್ತೀರಿ ಹೌದಿಲ್ಲೋ..? ಆತು ಬಿಡ್ರೀ..ನಂಗೇನ್ ಅಭ್ಯಂತರ ಇಲ್ಲ. ನೋಡು ಪೂಜಾರಣ್ಣ, ಇದಾ ಮಂಗಳವಾರ ಹೂವಿನಹಾರ ತಗೊಂಡು ಗುಡಿ ಮುಂದ ಶರಣಾಗ್ತೀನಿ. ಅದೇನ್ ಮಾತು … Read more

ಗೋಳಿಬೈಲಿನ ನ್ಯೂಲೈಫು: ಶ್ರೀನಿಧಿ ಡಿ.ಎಸ್.

  ಪಂಚಾಯ್ತಿ ಮೆಂಬರು ದಾಮು ಹೇಳಿದ ಸುದ್ದಿಯನ್ನ ಗೋಳಿಬೈಲಿನ ವೆಂಕಟರಮಣ ಸ್ಟೋರ್ಸಿನ ಕಿಣಿ ಮಾಮ್ ಯಾತಕ್ಕೂ ನಂಬಲಿಲ್ಲ. ಅವರು ದಾಮು ಕೇಳಿದ ಜಾಫಾ ಕೋಲಾ ತೆಗೆದು ಕೊಟ್ಟು, ಅಂಗಡಿಯ ಗಾಜಿನ ಬಾಟಲುಗಳನ್ನ ಸರಿಯಾಗಿ ಜೋಡಿಸಿ, ಧೂಳು ಹೊಡೆದು, ಊದುಬತ್ತಿ ಹಚ್ಚಿ ಅದನ್ನು ಬಾಲಾಜಿಯ ಫೋಟೋಕ್ಕೆ ಮೂರು ಸುತ್ತು ಸುತ್ತಿಸಿ. ನಿಧಾನ ತಮ್ಮ ಕುರ್ಚಿಯ ಮೇಲೆ ಕುಳಿತು, “ಅದೆಂತ ಸಮಾ ಹೇಳು ಮಾರಾಯಾ” ಅಂದರು. ದಾಮು ಜಾಫಾ ಕುಡಿಯುತ್ತಿದ್ದವನು, ಇದಕ್ಕಾಗೇ ಕಾದಿದ್ದವನ ಹಾಗೆ, ಗಂಟಲು ಸರಿ ಮಾಡಿಕೊಂಡ. “ನೋಡಿ … Read more

ಬೆಳದಿಂಗಳ ನೋಡ: ಉಮೇಶ್ ದೇಸಾಯಿ

:೧: ಕಮಲಾಬಾಯಿ ನಿರಾಳವಾದರು ಎರಡು ದಿನಗಳಿಂದ ಬಹಳ ತಳಮಳಿಸಿದ್ದರು. ತಾವು ನೋಡಿದ ವಿಷಯ ಮೊದಲು ಯಜಮಾನರಿಗೆ ತಿಳಿಸಿದ್ದರು. ಅವರ ನೀರನ ಪ್ರತಿಕ್ರಿಯೆ ಅವರನ್ನು ನಿರುತ್ಸಾಹಗೊಳಿಸಿದರಲಿಲ್ಲ. ತಪ್ಪು ನಡೆಯುತ್ತಿದೆ ಎಂದು ಗೊತ್ತಿದ್ದೂ ನೋಡುತ್ತ ಸುಮ್ಮನೆ ಕುಳಿತುಕೊಳ್ಳುವ ಜಾಯಮಾನ ಅವರದಲ್ಲ. ಅದರಲ್ಲೂ ತಮ್ಮ ಪ್ರೀತಿಯ ಮಂಗಲಾಳ ಮಗಳು ತಪ್ಪು ಹಾದಿ ತುಳಿಯುತ್ತಿದ್ದಾಳೆ. ಇದರ ಬಗ್ಗೆ ಮಂಗಲಾಳಿಗೆ ಹೇಳಲೇಬೇಕು ಎಂದು ನಿರ್ಧರಿಸಿದರು. ಆಗಿದ್ದಿಷ್ಟೆ… ಎರಡು ದಿನದ ಹಿಂದಿನ ಮಧ್ಯಾಹ್ನ ಕಮಲಾಬಾಯಿ ಅಪಾರ್ಟಮೆಂಟಿನ ಮುಂದಿನ ಲಾನ್‌ನಲ್ಲಿ ಕುಳಿತಾಗ, ಮುಖ್ಯ ರಸ್ತೆಯ ತಿರುವಿಗೆ ಬೈಕ್ … Read more

ಸಂಬಂಧ: ಡಾ. ಗವಿ ಸ್ವಾಮಿ

ಬೆಂಗಳೂರಿನ ಬಿಸ್ಕೆಟ್ ಫ್ಯಾಕ್ಟರಿಯೊಂದರಲ್ಲಿ ಹೆಲ್ಪರ್ ಆಗಿದ್ದ ಇಪ್ಪತ್ತರ ವಯಸ್ಸಿನ ಸ್ವಾಮಿ ತನ್ನ ತಾತ ನಿಂಗಣ್ಣನ ಸಾವಿನ ಸುದ್ದಿ ತಿಳಿದು ಊರಿಗೆ ತಲುಪುವಷ್ಟರಲ್ಲಿ ಮಧ್ಯಾಹ್ನ ಮೂರು ಘಂಟೆಯಾಗಿತ್ತು. ನೆತ್ತಿಯ ಮೇಲೆ ಕಾರ್ಮೋಡಗಳು ಕವಿಯುತ್ತಿದ್ದವು. ಮೂರು ಮಂದಿ ತುರಾತುರಿಯಲ್ಲಿ ನಿಂಗಣ್ಣನನ್ನು ಎತ್ತಿ ತಂದು ಬಿಳಿಪಲ್ಲಕ್ಕಿಯ ಒಳಗೆ ಕೂರಿಸಿದರು. ಅತ್ತಿತ್ತ ವಾಲಾಡುತ್ತಿದ್ದ ಕುತ್ತಿಗೆಗೆ ಮೆಟರೆಕಡ್ಡಿ ಕೊಟ್ಟು ಸರಿ ಮಾಡಿದರು. ಸ್ವಾಮಿ ಒಮ್ಮೆ  ಕೆಳಗೆ ಬಾಗಿ ತಾತನನ್ನು ಕಣ್ತುಂಬಿಕೊಂಡ. ತಾತನ  ಒಟ್ಟು ಆಕಾರದಲ್ಲಿ ಏನೋ ಒಂದು ಕೊರತೆಯಿದೆ ಅನ್ನಿಸಿತು . ಯೆಸ್. ತಾತನ … Read more

ನಾಯಿ ನಕ್ಕಿದ್ದು ಯಾಕೆ?!: ಗುರುಪ್ರಸಾದ ಕುರ್ತಕೋಟಿ

ಹೊಟ್ಟೆ ಹಸಿವೆಯಿಂದ ಗುರುಗುಡುತ್ತಿತ್ತು. ಯಾಕಿವತ್ತು ಇನ್ನೂ ತಟ್ಟೆಯ ಸಪ್ಪಳವೇ ಇಲ್ಲಾ? ನಾಲಿಗೆ ಹೊರ ಚಾಚಿ, ಮುಚ್ಚಿರುವ ತಲಬಾಗಿಲನ್ನೊಮ್ಮೆ ದಿಟ್ಟಿಸಿ ನೋಡುತ್ತಾ, ತಲೆಯ ಮೇಲೆ ಸುಡುತ್ತಿರುವ ಸೂರ್ಯನ ಶಾಖವನ್ನು ತಾಳಲಾರದೇ ತನ್ನ ಗೂಡಿನೆಡೆಗೆ ಕುಂಯ್ ಗುಡುತ್ತಾ ರಾಜಾ ವಾಪಸ್ಸಾದ. ಗೂಡಿನಲ್ಲಿ ತಾಪ ಇನ್ನೂ ಜಾಸ್ತಿಯಿತ್ತು. ತಾನು ಆ ಮನೆಯನ್ನು ಸೇರಿದ್ದು ಚಿಕ್ಕ ಕುನ್ನಿಯಾಗಿದ್ದಾಗ. ತನ್ನ ಅಮ್ಮ ಟ್ರಕ್ಕಿನಡಿಯಲ್ಲಿ ಸಿಕ್ಕಿ ಸತ್ತು ತಾನು ತಬ್ಬಲಿಯಾದಾಗ, ಮುದ್ದಾಗಿದ್ದೆನೆಂದೋ ಅಥವಾ ಮುಂದೆ ಮನೆ ಕಾಯುವೆನೆಂದೋ ತನ್ನನ್ನು ಮನೆಗೆ ತಂದು ಸಾಕಿದ್ದು ಈ ಮನೆಯ … Read more

ಚದುರಂಗ: ಡಾ. ಗವಿಸ್ವಾಮಿ

ಇಂಟರ್ ಕಾಲೇಜ್ ಚೆಸ್ ಪಂದ್ಯಾವಳಿಯ ಅಂತಿಮ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗುವುದರಲ್ಲಿತ್ತು. ಆಗಲೇ ಆಸೀನನಾಗಿದ್ದ ಎದುರಾಳಿಯ ಕೈಕುಲುಕಿ ನನ್ನ ಛೇರಿನ ಮೇಲೆ ಕುಳಿತೆ. ಗಾಂಭೀರ್ಯದ ಉಳಿಯಿಂದ ಕೆತ್ತಿದಂತೆ ಕಾಣುತ್ತಿದ್ದ ಅವನ ಮುಖಚರ್ಯೆ ನನ್ನಲ್ಲಿ ದಿಗಿಲು ಹುಟ್ಟಿಸಿತು. ಸೋಲಿನ ಭಯ ಆವರಿಸಿತು. ನೀನು ಫೈನಲ್ಲಿಗೆ ತಲುಪಿರುವುದೇ ದೊಡ್ಡ ಸಾಧನೆ.. ಯುವ್ ಹ್ಯಾವ್ ನಥಿಂಗ್ ಟು ಲೂಸ್.. ಗೋ ಎಂಡ್ ಎಂಜಾಯ್ ಯುವರ್ ಗೇಮ್ ಎಂದು ನಮ್ಮ ಲೆಕ್ಚರರ್ ಹೇಳಿದ್ದು ಮನಸ್ಸಿನಲ್ಲಿತ್ತು. ಹೌದು.ನಾನು ಕಳೆದುಕೊಳ್ಳುವುದು ಏನೂ ಇರಲಿಲ್ಲ. ಇತರರನ್ನು ಮೆಚ್ಚಿಸುವುದಕ್ಕಾಗಿ … Read more

ಓಯಸಿಸ್: ನಿನಾದ (ಭಾಗ 3)

ಇಲ್ಲಿಯವರೆಗೆ ಮಾರನೆ ದಿನ ಲ್ಯಾಂಡ್ ಲಾರ್ಡ್ಗೆ ಫೋನ್ ಮಾಡುವಾಗ ನೀವು  ಬರೋಕೆ ರೆಡಿ ಆದ್ರೆ ಹೇಳಿ. ಇನ್ನು ಒಂದು ವಾರದಲ್ಲಿ ಎಲ್ಲ ದಾಖಲೆಗಳು ಸರಿ ಆಗುತ್ತೆ ಅಂದು ಹೇಳಿದರು. ಬರುವ ವಾರ ಬರೋದು  ಕಷ್ಟ. ಬರುವ ತಿಂಗಳು ಬರುವೆವು ಅಂದು ಹೇಳಿದ ನಿಶಾಂತ್ . ಆದರೆ ಅದೇ ಸಮಯಕ್ಕೆ ನಿಶಾಂತ್ ನ ವೀಸಾ ವಿಷಯ ದುತ್ತನೆ ಎದುರು ಬಂದು ಸಧ್ಯಕ್ಕೆ ಊರು ಬಿಡುವ ಹಾಗೆ ಇರಲಿಲ್ಲ. ಹೀಗಾಗಿ ದೀಪಾವಳಿ ಕಳೆದು ಬರುವುದಾಗಿ ಹೇಳಿದರು. ಈ ನಡುವೆ ಜೈನ್ … Read more

ಮನೆಗೆ ಬಂದ ಮೋಹಿನಿ: ಪಾರ್ಥಸಾರಥಿ. ಎನ್.

ಅದೇನೊ ಈ ಟೀವಿಗಳ ಹಾವಳಿ ಜಾಸ್ತಿಯಾದನಂತರ ಎಲ್ಲರ ಮನೆಗಳಲ್ಲಿ ರಾತ್ರಿ ಮಲಗುವ ಸಮಯವೆ ಹೆಚ್ಚು ಕಡಿಮೆ ಆಗಿಹೋಗಿದೆ. ಮೊದಲೆಲ್ಲ ರಾತ್ರಿ ಹತ್ತು ದಾಟಿತು ಅಂದರೆ ಸಾಕು ಎಲ್ಲರ ಮನೆಯ ದೀಪಗಳು ಆರುತ್ತಿದ್ದವು. ಈಗಲಾದರೆ ಅರ್ಧರಾತ್ರಿ ದಾಟಿದರು ಯಾವುದೊ ಚಾನಲ್ ನೋಡುತ್ತ ತೂಕಡಿಸುತ್ತ ಕುಳಿತಿರುವವರೆ ಜಾಸ್ತಿ.  ಕಳೆದ ವಾರ ಹೀಗೆ ಆಯಿತು. ಮನೆಯಲ್ಲಿ ಹೆಂಡತಿ ಹಾಗು ಮಗಳು ರಾತ್ರಿ ಹತ್ತೂವರೆ ಆಯಿತೆಂದು ಹೋಗಿ ಮಲಗಿಬಿಟ್ಟರು, ನಾನು ವಿದೇಶಿ ಚಾನಲ್ ನ ಹಾರರ್ ಸಿನಿಮಾ ನೋಡುತ್ತ ಕುಳಿತಿದ್ದವನು, ಟೀವಿ ಆರಿಸಿ … Read more

ಓಯಸಿಸ್: ನಿನಾದ (ಭಾಗ 2)

ಇಲ್ಲಿಯವರೆಗೆ… ಅದೊಂದು ದಿನ ನಿಶಾಂತ್ ಫೋನ್ ಗೆ ಕರೆ  ಮಾಡಿ ಮಾಡಿ ಸೋತು ಹೋಗಿ ನಿನಾದ ಫೋನ್ ಗೆ ಕರೆ ಮಾಡಿದ. ನಂಗೆ ತುರ್ತಾಗಿ ಕೆಲವು ವಿಷಯ ಕೇಳಬೇಕಿತ್ತು. ನಿಶಾಂತ್ ಎಲ್ಲಿ ?? ನಿನಾದ ಶಾಂತವಾಗಿ,  ಬಹುಶಃ  ನಿಶಾಂತ್ ಬ್ಯುಸಿ ಏನು ಕೇಳಬೇಕಿತ್ತು ? ಮನೆಗೆ ಬಂದ ಮೇಲೆ ವಾಪಾಸು ಕರೆ ಮಾಡಲು ಹೇಳುವೆ ಅಂದು ಉತ್ತರಿಸಿದಳು. ಏನೋ ಸುಮಾರು ಹೊತ್ತು ನಿಶಾಂತ್ & ಜೈನ್ ಮಾತನಾಡಿಕೊಂಡಿದ್ದರು. ದಿನಗಳು ಸಾಗಿ ಹೋಗುತ್ತಿದ್ದವು.. ಆಗೊಮ್ಮೆ ಈಗೊಮ್ಮೆ ನಿನಾದ ಕರೆ … Read more

ಓಯಸಿಸ್: ನಿನಾದ

ಅಂದು ಶನಿವಾರ ನಿನಾದಳಿಗೆ ಮನೆಯಲ್ಲಿ ಒಬ್ಬಳೆ  ಕೂತು ಸಾಕಾಗಿ ಹೋಗಿತ್ತು. ಸಾಮಾನ್ಯವಾಗಿ ನಿಶಾಂತ್ ಗೆ ಶುಕ್ರವಾರ, ಶನಿವಾರ ವಾರದ ರಜೆ. ಆದರೆ ಅವನ ಟೀಂ ಲೀಡರ್ ಒಂತರಾ ವಿಚಿತ್ರ ಮನುಷ್ಯ. ರಜೆ ಅಂದ್ರು ಮನೆಯಲ್ಲಿ ಇರೋಕೆ ಬಿಡುತ್ತಿರಲಿಲ್ಲ. ಹೀಗಾಗಿ ಎಲ್ಲ ಶನಿವಾರಗಳು ಆಫೀಸ್ ಗೆ ಹೋಗೋದು ಅನಿವಾರ್ಯ ಆಗಿತ್ತು. ಇತ್ತ ನಿನಾದ ಕಿರಿ ಕಿರಿ ಮಾಡಿದ್ದಕ್ಕೆ ಸರಿ ನೀನು ಬಾ ನನ್ನ ಜೊತೆಗೆ ಅಂದು ನಿಶಾಂತ್ ಆಫೀಸ್ ಗೆ ಹೊರಟ. ಹೀಗೆ ನಿನಾದ ನಿಶಾಂತ್ ಜೊತೆ ಆಫೀಸ್ … Read more

ಹೋರಿ ತಂದ ಕಥೆ: ಅಶೋಕ್ ಕುಮಾರ್ ವಳದೂರ್ (ಅಕುವ)

  "ಸುಧೀರಣ್ಣ ತೀರಿ ಕೊಂಡ" ಅಮ್ಮನ ಫೋನ್ ಬಂದಾಗ ತುಂಬಾ ಸಂಕಟ ಪಟ್ಟಿದ್ದೆ. ಬೇಸಾಯವನ್ನು ಪ್ರೀತಿಸಿದ ವ್ಯಕ್ತಿತ್ವ ಅದು.ಬಿಸಿಲು ಮಳೆಗಳು ಎಂದೂ ಆತನನ್ನು ಮುಟ್ಟಿದ್ದಿಲ್ಲ. ಚಳಿ ತಟ್ಟಿದ್ದಿಲ್ಲ. ಅದು ಮನೆಯ ಬೇಸಾಯದ ಕೋಣಗಳೇ ಆಗಲೀ ಕಂಬಳದ ಕೋಣಗಳೇ ಆಗಲಿ ಈತನಿಗೆ ಬಗ್ಗದೆ ಇರಲಿಲ್ಲ. ಕಂಬಳದ ಕೋಣನ ಕೊಂಬು ತಲೆಯ ನೆತ್ತಿಗೆ ಇರಿದಾಗ ರಕ್ತ ಹೋದದ್ದು ತಿಳಿಯಲಿಲ್ಲ. ಲೇಪದಲ್ಲೇ ಗುಣವಾದ ಗಾಯ ಮತ್ತೆ ಒಳಗೊಳಗೆ ಇಳಿದದ್ದು ಗೊತ್ತಾಗಲಿಲ್ಲ. ಮೊದ ಮೊದಲು ತಲೆನೋವಿದ್ದ ಅವರು ಮಣಿಪಾಲ ಆಸ್ಪತ್ರೆ ಸೇರಿದಾಗ ಪರಿಸ್ಥಿತಿ … Read more

ಎಡಸೊಕ್ಕು: ಹಿಪ್ಪರಗಿ ಸಿದ್ದರಾಮ್

'ಯೇನಪಾ…ತಮ್ಮಾ, ನಿನ್ನ ಹಂತ್ಯಾಕ ಮೊಬೈಲ್ ಐತೇನು?' ಆ ವಯಸ್ಸಾದ ಹಿರಿಯರು ಕೋರ್ಟ್ ಒಂದರ ಆವರಣದಲ್ಲಿ ನನಗೆ ಕೇಳಿದಾಗ, 'ಯಾಕ್ರಿ ಅಮ್ಮಾರ…ಈಗಿನ ಕಾಲದಾಗ ಮೊಬೈಲ್ ಇಲ್ಲದವರು ಯಾರರ ಇರ್ತಾರೇನ್ರೀ ನೀವ ಹೇಳ್ರೀ?' ಅಂತ ತಮಾಷೆಯೊಂದಿಗೆ ಗೌರವಪೂರ್ವಕವಾಗಿ ನಾನಂದೆ. 'ಹಂಗಲ್ಲೋ ನನ್ನ ಬಾಳಾ, ಮುಂಜಾಲಿಂದ ನಮ್ಮ ವಕೀಲರು ಬರ್ತಾರಂತ ಕಾಯಾಕತ್ತೀನಿ, ಪೋನ್ ಮಾಡಿದರ ರಿಸೀವ ಮಾಡಂಗಿಲ್ಲಾಗ್ಯಾರ…ನಿನ್ನ ಮೊಬೈಲ್ ಪೋನಿನಿಂದ ಅವರಿಗೆ ಹಚ್ಚಿ ಕೊಡು' ಎಂದು ಅರವತ್ತರ ವಯೋಮಾನದ ಆಸುಪಾಸಿನ ಆ ಹಣ್ಣು-ಹಣ್ಣು ಮುದಿಜೀವ ವಿನಂತಿಸಿಕೊಂಡಾಗ ಮನ ಕರಗಿತು. ಆದರೆ ಆ … Read more

ಬಾಡಿಗೆ ದೇಹ: ನಾಗರಾಜ್ ಹರಪನಹಳ್ಳಿ

          ಇಡೀ ನಗರ ತಲ್ಲಣಿಸಿದಂತೆ ಕಂಡಿತು. ದೇಹಗಳನ್ನ ಬಾಡಿಗೆ ನೀಡಲು ಅವರು ಗಿರಾಕಿಗಳಿಗಾಗಿ ಕಾಯುತ್ತಿದ್ದರು. ಒಂದು ಕಾಲದಲ್ಲಿ ನಗರದ ಯೌವ್ವನವನ್ನೇ ಆಳಿದವರು ಈಗ ಗಿರಾಕಿಗಳಿಲ್ಲದೇ ಅಂಡಲೆದು ಹೊಸಬರನ್ನ ದಂಧೆಗೆ ಇಳಿಸುತ್ತಿದ್ದರು. ದೇಹದ ಸೌಂದರ್ಯ, ಎಳಸುತನ ನೋಡಿ ದೇಹಗಳು ಗಂಟೆ ಲೆಕ್ಕದಲ್ಲಿ ಬಾಡಿಗೆ ನೀಡಲಾಗುತ್ತಿತ್ತು. ದೊಡ್ಡ ದೊಡ್ಡ ಕುಳಗಳು ತಿಂಗಳಿಗೊಮ್ಮೆ ಮೋಜಿಗಾಗಿ ಬಾಡಿಗೆ ಪಡೆದವರನ್ನು ಹೂವಿನಷ್ಟೆ ಮೃದುವಾಗಿ ಎತ್ತಿಕೊಂಡು ಹೋಗುತ್ತಿದ್ದರು. ಇದಕ್ಕಾಗಿ ನಗರದ ರಸ್ತೆಗಳು ಸಾಕ್ಷಿಯಾಗುತ್ತಿದ್ದವು. ಎಷ್ಟು ಸಲೀಸಾಗಿ ಈ ವ್ಯಾಪಾರ ನಡೆದುಹೋಗುತ್ತಿತ್ತು. … Read more

ಜೀವನ ದರ್ಶನ (ಕೊನೆಯ ಭಾಗ): ಪಾರ್ಥಸಾರಥಿ. ಎನ್.

          (ಇಲ್ಲಿಯವರೆಗೆ…) ಮನುಷ್ಯನ ಮನವೇ ಹಾಗೇ ಧರ್ಮ , ಹಣ , ಅಧಿಕಾರ ಇವುಗಳನ್ನೆಲ್ಲ ಕಂಡರೆ ವಿಭ್ರಮೆಗೆ ಒಳಗಾಗುತ್ತೆ. "ಇಲ್ಲಿ ಮಾತು ಬೇಡ , ಸರಿಯಾಗಲ್ಲ, ಹೀಗೆ ನಡೆಯುತ್ತ ಹೋದರೆ ನಮ್ಮ ತೋಟ ಸಿಗುತ್ತೆ ಬಾ ಅಲ್ಲಿ ಹೋಗೋಣ" ಎನ್ನುತ್ತ ಹೊರಟ. ರಸ್ತೆಯ ಅಕ್ಕಪಕ್ಕ ಅಂಗಡಿಗಳು ಇದ್ದವು,  ಅವುಗಳಲ್ಲೆಲ್ಲ ತೆಂಗಿನಕಾಯಿ, ಎಳ್ಳೆಣೆಯ ಪೊಟ್ಟಣಗಳು, ಕಪ್ಪುವಸ್ತ್ರ, ದೀಪಗಳು, ವಿವಿದ ಪುಸ್ತಕಗಳು, ತುಳಸಿಹಾರದ ಅಂಗಡಿಗಳು ಇಂತಹುವುಗಳೆ, ಎಲ್ಲ ಕಡೆ ತುಂಬಿರುವ ಜನ. ಅಂಗಡಿಯಲ್ಲಿರುವ ಕೆಲವರು … Read more

ಜೀವನ ದರ್ಶನ (ಭಾಗ 1): ಪಾರ್ಥಸಾರಥಿ. ಎನ್.

ಊರಿಗೆ ಬಂದು ಇಪ್ಪತ್ತು ವರ್ಷಗಳೆ ಕಳೆದಿತ್ತು. ಮೊದಲಿಗೆ ಅಪ್ಪ ಅಮ್ಮನಿರುವವರೆಗೂ ಇದ್ದ ಆಕರ್ಷಣೆ ಈಗೇನು ಇರಲಿಲ್ಲ. ಅಲ್ಲದೆ ನಾನು ಊರು ಬಿಟ್ಟು ಊರೂರು ಸುತ್ತತ್ತ ಹೆಂಡತಿ ಮಕ್ಕಳೊಡನೆ ಓಡಾಡಿದ್ದೆ ಆಯಿತು, ಸರಕಾರಿ ಚಾಕರಿಯೆ ಹಾಗೆ ಬಿಡಿ.  ಈಗ ಮತ್ತೆ ಕರ್ನಾಟಕಕ್ಕೆ ಬಂದ ನಂತರ ಬೆಂಗಳೂರಿನಲ್ಲಿ ಮನೆ ಮಾಡಿ ಆರು ತಿಂಗಳಾಗುತ್ತ ಬಂದು, ಹುಟ್ಟಿದ ಊರನ್ನು ನೋಡಬೇಕೆಂಬ ಆಸೆ ಪ್ರಭಲವಾಯಿತು. ಅಲ್ಲಿ ಇದ್ದವನು ಅಣ್ಣನೊಬ್ಬನೆ. ಒಂದಿಷ್ಟು ವ್ಯಾಪಾರ ಅದು ಇದು ಎಂದು ಒದ್ದಾಡಿಕೊಂಡಿದ್ದ. ಮಕ್ಕಳನ್ನು ಚೆನ್ನಾಗಿ ಓದಿಸಿದ್ದ. ಮಗಳಿಗೆ … Read more

ಕೆಂಪು ಹುಂಜ: ಜೆ.ವಿ.ಕಾರ್ಲೊ

ಸೋಂಬಾನ ಆರೂಡುವ ಎತ್ತು ಹೊಟ್ಟೆಯುಬ್ಬರಿಸಿಕೊಂಡು ಸತ್ತು ಬಿದ್ದಿತ್ತು. ಸೋಂಬಾನ ಜಗತ್ತು ತಲೆ ಕೆಳಗಾದುದರಲ್ಲಿ ಆಶ್ಚರ್ಯವಿಲ್ಲ. ಎತ್ತು ಮುದಿಯಾಗಿತ್ತು, ನಿಜ. ನಿತ್ರಾಣಗೊಂಡಿತ್ತೂ ನಿಜವಾದರೂ, ಒಳ್ಳೆಯ ಸಮಯ ನೋಡಿಯೇ ಸೋಂಬಾನಿಗೆ ಕೈ ಕೊಟ್ಟಿತ್ತು… ಒಂದು ಹದವಾದ ಮಳೆ ಉದುರಿ ಭೂಮಿ ಉತ್ತನೆಗೆ ತಯಾರಾದಾಗ! ಎತ್ತು ಯಾಕೆ ಸತ್ತಿತು ಎಂದು ಕಾರಣ ಸೋಂಬಾನಿಗೆ ಸ್ಪಷ್ಟವಾಗಿ ಗೊತ್ತಿತ್ತು. ಅವನ ಹೊಲದ ಬದಿಯಲ್ಲೇ ಒಂದು ದೈತ್ಯಾಕಾರದ ಆಲದ ಮರವಿತ್ತು. ಅದರಲ್ಲಿ ವಾಸವಿದ್ದ ಚೌಡಿಗೆ, ಪ್ರತಿವರ್ಷ ಕೊಯ್ಲಿನ ನಂತರ ಕೆಂಪು ಹುಂಜನನ್ನು ಬಲಿ ಕೊಡುವುದು ರೂಢಿ. … Read more

ಚಕ್ರ: ಡಾ. ಗವಿಸ್ವಾಮಿ

''ತಾಯವ್ವಾ'' ''ಇನ್ನೂ ಆಗಿಲ್ಲ ಕ ನಿಂಗಿ ..  ತಿರ್ಗಾಡ್ಕಂಡ್ ಬಾ ಹೋಗು'' ''ಆಗಿದ್ದದೇನೋ ಅಂದ್ಕಂಡು ಕೇಳ್ದಿ ಕನ್ನೆವ್ವಾ … ಇಲ್ಲೇ ಕೂತಿರ್ತಿನಿ ತಕ್ಕಳಿ'' ಒಳಗೆ ಪೇಪರ್ ಒದುತ್ತಾ ಕೂತಿದ್ದವನು ನಿಂಗಿಯ ಸದ್ದು ಕೇಳಿ ಆಚೆ ಬಂದೆ. ಆವತ್ತು ಗೌರಿ ಹಬ್ಬ. ಹಬ್ಬಹರಿದಿನಗಳಂದು ಹೊಲಗೇರಿಯ ನಿಂಗಿ ನಮ್ಮ ಕೇರಿಯ ಮನೆಗಳಿಗೆ ಬಂದು ಊಟ ತಿಂಡಿ ಹಾಕಿಸಿಕೊಂಡು ಹೋಗುವುದು ಮಾಮೂಲು. ಆವತ್ತು ಎಂದಿನಂತೆ ಅದೇ ಹಳೆಯ  ಬಿದಿರಿನ ಪುಟ್ಟಿಯೊಂದಿಗೆ ಪಡಸಾಲೆಯ ಕೆಳಗಿನ ಮೆಟ್ಟಿಲುಗಳ ಮೇಲೆ ಕೂತಿದ್ದಳು. ಚಪ್ಪಲಿಗಳನ್ನು ಅಡ್ಡಾದಿಡ್ಡಿಯಾಗಿ ಬಿಟ್ಟಿದ್ದರಿಂದ … Read more

ನಿರಾಳ: ಶರತ್ ಚಕ್ರವರ್ತಿ

“ನಾನು ಹೊರಟಿದ್ದೇನೆ” ಅಂತ ಅವಳ ಮೆಸೆಜ್ ಬಂದೊಡನೆ ತರಾತುರಿಯಲ್ಲಿ ಟವಲ್ಲು, ಅಂಡರಿವೆಯನ್ನ ಹಿಡಿದುಕೊಂಡೋಗಿ ಬಚ್ಚಲ ಬಾಗಿಲು ಜಡಿದುಕೊಂಡ. ಗಡ್ಡ ಬಿಟ್ಟುಕೊಂಡು ಹೋಗುವುದೋ, ಟ್ರಿಮ್ ಮಾಡಿಕೊಂಡು ಹೋಗುವುದೋ ಎಂಬ ಮೂರು ದಿನಗಳ ಜಿಜ್ಞಾಸೆಗೆ ಕತ್ತರಿ ಬಿದ್ದು ಅವನ ಹರಕಲು ಗಡ್ಡು ನೂರು ತುಕುಡಾಗಳಾಗಿ ಉದುರಿಕೊಂಡಿತ್ತು. ಏಳು ವರ್ಷಗಳ ನಂತರ ಅವಳು ಸಿಗುತ್ತಿರುವುದು. ಅಂದು ಹನಿಮಳೆಯೊಳಗೆ ಕಣ್ಣು ತೀಡುತ್ತಾ ಹೋದವಳ ಬೆನ್ನು ನೋಡುತ್ತಾ ನಿಂತವನು ಅಲ್ಲಿಯೇ ಸ್ತಬ್ಧವಾಗಿದ್ದ. ಕಣ್ಣೀರಿಡುತ್ತಾ ಅವಳು ಸೊರಗುಟ್ಟಿದ ಸದ್ದು ಇನ್ನೂ ಕಿವಿಯ ಗೋಡೆಗಳಿಗೆ ಗುದ್ದಿಕೊಳ್ಳುತ್ತಾ ಹೊರಬರಲಾಗದೇ … Read more

ಬಾಳವ್ವನ ಬಾಳುವೆ: ನೇಮಿನಾಥ ಬಸವಣ್ಣಿ ತಪಕೀರೆ

ಸಾವಕಾರ್ರ ನಂಗ ಐವತ್ತು ರೂಪಾಯಿ ಕೊಡ್ರಿ ಸಾವಕಾರ್ರ… ಮನೀಗಿ ಅಕ್ಕಿ ತಗೊಂಡು ಹೋಗಬೇಕ್ರಿ ಸಾವಕಾರ್ರ, ಐವತ್ತು ರೂಪಾಯಿ ಕೊಡ್ರಿ ಎಂದು ಅಂಗಲಾಚುತ್ತಿದ್ದ ಸಾರಾಯಿಯ ಅರೆ ನಶೆಯಲ್ಲಿದ್ದ ರಾಮಪ್ಪ. ಸಾವಕಾರ್ರ ಸಿದ್ದಪ್ಪನ ಮುಂದೆ.  ಅಲ್ಲೋ ರಾಮಾ!? ನೀ ಹೀಂಗ ದುಡದಿದ್ದ ರೊಕ್ಕ ಎಲ್ಲ ತಗೊಂಡು ಹೋಗಿ ಶೆರೇದ ಅಂಗಡ್ಯಾಗ ಇಟ್ಟರ ನಿನ್ನ ಹೆಂಡ್ತಿ ಮಕ್ಕಳ ಗತಿ ಏನಾಗಬೇಕೋ ಖೋಡಿ? ದಾರು ಕುಡ್ಯೋದು ಬಿಟ್ಟಬಿಡೋ! ಸಾವಕಾರ್ರ ಸಿದ್ದಪ್ಪ ಬುದ್ಧಿವಾದ ಹೇಳುತಿದ್ದ.  ಏನ್ ಮಾಡಲ್ರೀ ಸಾವಕಾರ್ರ ನಂಗ ಕುಡಿಲಿಕ್ಕಂದ್ರ ನಿದ್ದೀನ ಹತ್ತಂಗಿಲ್ಲ. … Read more

ಪುಷ್ಪ: ಈಶ್ವರ ಭಟ್ ಕೆ

ಇತ್ತೀಚೆಗೆ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಬರುತ್ತಿರುವ ಸುದ್ಧಿಗಳನ್ನು ನೋಡುತ್ತಾ, ನಿರೀಕ್ಷೆಗೂ ಮೀರಿ ಜಗತ್ತು ಬೆಳೆದರೂ ವಾಹಿನಿಗಳಲ್ಲಿ ಸುದ್ಧಿಯೇ ಆಗದ ಒಂದು ಕತೆಯಿದೆ. ನಮ್ಮೂರಿನ ಪುಷ್ಪಕ್ಕ ದಿನ ಕಳೆದಂತೆ ಜನರಿಗೆ ಅಚ್ಚರಿಯೂ ಜನರ ಅನುಕಂಪಕ್ಕೂ ಕಾರಣಳಾಗಿ ಉಳಿದ ಕತೆ. ಈ ಕತೆ ಹೇಳುವ ನನಗೆ ಆಗ ಹದಿನೇಳು ವಯಸ್ಸು, ಈಗ ಇಪ್ಪತ್ತೆಂಟು. ಈ ಪುಷ್ಪಕ್ಕ ಎನ್ನುವ ನನ್ನ ಕತೆಯ ನಾಯಕಿಯ ಪೂರ್ಣ ಹೆಸರು ಪುಷ್ಪಲತ. ಊರು ಎರಡು ಮೂರು ಬೆಟ್ಟಗಳ ನಡುವಿನ ಗ್ರಾಮ. ವಿಶಾಲವಾದ ಗ್ರಾಮದಲ್ಲಿ ಸುಮಾರು ನಲುವತ್ತು ಮನೆಗಳಷ್ಟೇ. … Read more

ಪಟಾಕಿ: ಸಂತೋಷ್ ಕುಮಾರ್ ಎಲ್. ಎಂ.

ಅದು ಬೃಹದಾಕಾರವಾಗಿ ಬೆಳೆದ ನಗರದ ಮೂಲೆಯಲ್ಲಿ, ಇನ್ನೂ ತಲೆಯೆತ್ತಿ ನಿಲ್ಲಲೂ ಕಷ್ಟಪಡುತ್ತಿರುವ ಒಂದು ಬಡವರ್ಗದವರ ಏರಿಯಾ. ನಾಲ್ಕು ಗಂಟೆಗೆಲ್ಲ ಎದ್ದು ಕೂಲಿಗೆ ಹೊರಡುವ ಶ್ರಮಜೀವಿಗಳು ಮತ್ತೆ ವಾಪಸ್ಸು ಬರುವುದೇ ಸಂಜೆ ಸೂರ್ಯ ಮುಳುಗುವ ಹೊತ್ತಿಗೆ.  ಮನೆಯೊಳಗೆ ಅಜ್ಜಿಯ ಕೈತುತ್ತು ತಿಂದು ಮಲಗಿದ ಪುಟ್ಟಿ ದೀಪಳಿಗೆ ನಿದ್ರೆ ಬರುತ್ತಿಲ್ಲ. ಅಜ್ಜಿ ನಾಳೆಯ ದಿನ ದೀಪಾವಳಿ ಅಂತ ಹೇಳಿದ್ದಾಳೆ. ಅಪ್ಪ ಹುಟ್ಟಿದಾಗಿನಿಂದ ಇಲ್ಲಿಯವರೆಗೆ ಯಾವತ್ತಿಗೂ ಪಟಾಕಿ ತರುವುದನ್ನು ಮರೆತಿಲ್ಲ. ಯಾವುದಕ್ಕೂ ದುಡ್ಡಿಲ್ಲದಿದ್ದರೂ ಪ್ರತೀ ತಿಂಗಳು ಪಟಾಕಿಗೆಂದೇ ಇಂತಿಷ್ಟು ಅಂತ ಒಂದಷ್ಟು … Read more

ಕರಿಮುಗಿಲುಗಳ ನಡುವೆ: ಜಯರಾಮ ಚಾರಿ

"ಬೆಳಕಿನ ವೇಗದಲ್ಲಿ ನೀನಿದ್ದಾಗ ಎಲ್ಲವೂ ಶೂನ್ಯವಾದಂತೆ ಭಾಸವಾಗುತ್ತದೆ; ಅಸಲು ಶೂನ್ಯವೇ ಆಗಿರುತ್ತದೆ" ಯಾವುದೋ ಅನಾಮಧೇಯ ವಿಜ್ಞಾನಿಯ ಈ ವಾಕ್ಯ ನನ್ನೊಳಗೆ ಎನನ್ನೋ ಹುಟ್ಟಿಹಾಕಿರಬೇಕು!. ಇಲ್ಲದಿದ್ದರೆ ಇಷ್ಟೊಂದು ಕಾಡುವ ಅಗತ್ಯವೇನಿತ್ತು? ಈ ಪ್ರವಾಹಭರಿತ 'ಜಲಧಾರಿನಿ' ತುಂಬಿ ಹರಿವಾಗ, ಅದರಲ್ಲಿ ಕೊಚ್ಚಿಹೋಗೋ ಸಾವಿರ ಕಲ್ಮಶಗಳ ನಡುವೆ ಇಂತಹುದೊಂದು ಪ್ರಶ್ನೆ ಯಾಕೆ ನನ್ನ ಕಾಡಬೇಕು? ಅದು ನನ್ನದಲ್ಲದ ಪ್ರಶ್ನೆಗೆ!. ಕರಿಮುಗಿಲಕಾಡು; ಈ ಹೆಸರೇ ವಿಚಿತ್ರತೆರನದು ಕರಿಮುಗಿಲೆಂದರೆ ಕಪ್ಪಾದ ಮುಗಿಲುಗಳು. ಮುಗಿಲುಗಳು ಸೇರಿ ಕಾಡಾದೀತೆ? ಕಾದಾಡಿತಷ್ಟೇ. ಇಂತಹುದೊಂದು ವಿಚಿತ್ರ ಊರಿಗೆ ನಾಗರೀಕತೆ ತುದಿಯಲ್ಲಿರೋ … Read more

ಬೆಳದಿಂಗಳ ಬಾಲೆ: ಸುಬ್ರಹ್ಮಣ್ಯ ಹೆಗಡೆ

೧.           ಪ್ರತೀ ದಿನದಂತೆ, ಕೋರಮಂಗಲದ ನಮ್ಮ ಮನೆಯಿಂದ ಬನಶಂಕರಿಯ ಕಾಲೇಜಿಗೆ ಹೊರಟವನು ಹಾಗೇ JP ನಗರದ ವೈಷ್ಣವಿಯ ಮನೆಯ ಕಡೆಗೆ ಗಾಡಿಯನ್ನು ತಿರುಗಿಸಿದೆ, ಅದೇನೂ ಕಾಲೇಜಿಗೆ ಹೋಗುವ ದಾರಿಯಲ್ಲಿ ಇಲ್ಲದಿದ್ದರೂ, ವೈಷ್ಣವಿ ಇಷ್ಟು ಹೊತ್ತಿಗೆ ಕಾಲೇಜು ಬಸ್ ನ್ನು ಹಿಡಿಯಲು ಮನೆಯಿಂದ ಹೊರಟಾಗಿರುತ್ತದೆ ಎಂದು ತಿಳಿದಿದ್ದರೂ. ಪ್ರೀತಿಸಿದ ವ್ಯಕ್ತಿ ಇದ್ದ ಜಾಗ ಎಂಬ ವಿಷಯ ಇದೆಯಲ್ಲಾ, ಅವಳು ನಡೆದ ದಾರಿಯ ಘಮ ಇಲ್ಲೇ ಹಬ್ಬಿದೆ ಎಂಬ ಭ್ರಮಾಭರಿತ ಸೊಗಸು ಮಾತಿನ ಅಗತ್ಯವಿಲ್ಲದೇ, ಕಾಲದೇಶಗಳ ಹಂಗಿಲ್ಲದೇ, ವ್ಯಕ್ತವಾಗುವ … Read more

ತಾನೊಂದು ಬಗೆದರೆ: ಮಮತಾ ಕೀಲಾರ್

ರಾಜೇಶನದು ಸುಂದರ ದಾಂಪತ್ಯ.ಮನ ಮೆಚಿದ್ದ ಮಡದಿ ಸ್ವಾತಿ. ಒಳ್ಳೆಯ ಉದ್ಯೋಗದಿಂದಾಗಿ ಕೈತುಂಬಾ ಸಂಬಳ, ಕಾರು ಬಂಗಲೆ ಎಲ್ಲ ಇದ್ದ ಶ್ರೀಮಂತ ಜೀವನ. ಕೊರತೆಯೊಂದೆ ಮದುವೆಯಾಗಿ ಹತ್ತು ವರುಷ ಕಳೆದರೂ ಅವರ ಹೆಸರು ಹೇಳೋ ವಂಶದ ಕುಡಿ ಮೂಡದಿರುವದು. ಸ್ವಾತಿಗಾದರೋ ಮಕ್ಕಳುಎಂದರೆ ಪಂಚಪ್ರಾಣ. ದಿನಾಲೂ ಸಾಯಂಕಾಲ ತಮ್ಮ ಮನೆಯಿದಿರು ಇರುವ ಉದ್ಯಾನದಲ್ಲಿ ಆಡುವ ಮಕ್ಕಳನ್ನು ಕಿಟಕಿಯಿಂದ ಗಂಟೆಗಟ್ಟಲೇ ನೋಡುತ್ತಾ ಮೈಮರೆಯುತ್ತಿದ್ದಳು. ಆದರೂ ರಾಜೇಶನ ಮನಸ್ಸಿಗೆ ಬೇಸರವಾಗಬಾರದೆಂದು ತನ್ನ ನೋವನ್ನು ಅಡಗಿಸಿ ಸತ್ತ ನಗುವಿಗೆ ಜೀವತುಂಬೊ ಪ್ರಯತ್ನ ಮಾಡುತ್ತಿದ್ದಳು. ಮಡದಿಯನ್ನು … Read more