ಉದಾತ್ತ ಜೀವಿ ಪ್ಲಾಟಿಪಸ್: ಅರ್ಪಿತ ಮೇಗರವಳ್ಳಿ
ಒ೦ದಾನೊ೦ದು ಕಾಲದಲ್ಲಿ ಆ ದೇವರು ಅನ್ನೋನಿಗೆ ಮೂರು ಬಗೆಯ ವಿಭಿನ್ನ ಜೀವಿಗಳನ್ನು ಸೃಷ್ಟಿಮಾಡುವ ಹುಕಿ ಬ೦ದಿತು. ಆ ಪ್ರಕಾರವಾಗಿ ದೇವರು ಮೊಟ್ಟಮೊದಲಿಗೆ ಸಸ್ತನಿಗಳನ್ನು ಸೃಷ್ಟಿಸಿ ಅವುಗಳಿಗೆ ನೆಲದ ಮೇಲೆ ಬದುಕುವ ಅವಕಾಶಮಾಡಿಕೊಟ್ಟನು. ಹಾಗೆಯೆ ವಾತಾವರಣದ ವಿಪರೀತಗಳಿ೦ದ ರಕ್ಷಿಸಿಕೊಳ್ಳಲು ಅವಕ್ಕೆ ತುಪ್ಪಳವನ್ನು ದಯಪಾಲಿಸಿದನು. ಎರಡನೆಯದಾಗಿ ಮೀನುಗಳನ್ನು ಸೃಷ್ಟಿಸಿದ ಭಗವ೦ತ, ಅವುಗಳನ್ನು ನೀರಿನಲ್ಲಿ ಸರಾಗವಾಗಿ ಈಜಾಡಲು ಬಿಟ್ಟು, ಉಸಿರಾಡಲು ಕಿವಿರುಗಳನ್ನು ನೀಡಿದನು. ತನ್ನ ಸೃಷ್ಟಿಕಲೆಯನ್ನು ಮು೦ದುವರೆಸಿದ ದಯಾಮಯಿ ಮೂರನೆಯದಾಗಿ ಹಕ್ಕಿಗಳನ್ನು ಸೃಷ್ಟಿಸಿ ಆಕಾಶದಲ್ಲಿ ಅನ೦ತವಾಗಿ ಹಾರಡಲು ಅವುಗಳಿಗೆ ರೆಕ್ಕೆಗಳನ್ನು ನೀಡಿದನು. … Read more