ಹೆಣ್ಣು: ಸಹನಾ ಪ್ರಸಾದ್

ರಾತ್ರಿ ಎಲ್ಲ ಮಧುಸೂದನನಿಗೆ ನಿದ್ರೆ ಇಲ್ಲ. ಆ ಕಡೆ, ಈ ಕಡೆ ಹೊರಳಾಡಿ, ಎದ್ದು ಕುಳಿತು, ಮತ್ತೆ ಮಲಗಿ, ಹೀಗೆ ಅರ್ಧ ರಾತ್ರಿ ಕಳೆಯಿತು. ಸಧ್ಯ, ಹೆ0ಡತಿಗೆ ಬೇರೆ ಕೋಣೆಯಲ್ಲಿ ಮಲಗಿ ಅಭ್ಯಾಸ. ಇಲ್ಲದಿದ್ದರೆ ಇಷ್ಟು ಹೊತ್ತಿಗೆ ರ0ಪ ಮಾಡಿ ಬಿಟ್ಟಿರುತ್ತಿದ್ದಳು. ಅಬ್ಬಬ್ಬಾ, ರಾತ್ರಿಯೆಲ್ಲ ನಿಮ್ಮ ಗೊರಕೆ ಇಲ್ಲಾ ಹೊರಳಾಟ, ನನ್ಕೈಲಿ ಆಗುವುದಿಲ್ಲಪ್ಪ. ಆರಾಮವಾಗಿ ಹೊದ್ದು ಮಲಗಲು ನಿಮಗೇನು ಕಷ್ಟ? ಹೇಗು ನನಗೆ ಚಿಕ್ಕ ವಯಸ್ಸಿನಿ0ದ ಆಸೆ, ನನ್ನದೇ ರೂಮು ಇರಬೇಕೆ0ದು, ರಮ್ಯಳ ರೂಮು ಖಾಲಿಯಾಗಿದೆಯಲ್ಲ, ಅಲ್ಲಿ … Read more

ಅಹಂಕಾರ ದರ್ಪಗಳ ಮಧ್ಯೆ ಬಂದ ಅವನೊಬ್ಬ: ಬಸವರಾಜ ಕಾಸೆ

ಮಧ್ಯೆ ರಾತ್ರಿ ಎರಡು ಗಂಟೆಯ ಸಮಯ, ಸಿಟಿ ರೈಲು ನಿಲ್ದಾಣದ ಎದುರು ಪುಟಪಾತ್ ಅಲ್ಲಿ ಹೇಗೇಗೊ ಪೇಪರ್ ಹಾಸಿಕೊಂಡು ಮಲಗಿರುವ ಜನರು. ಗಾಢ ಅಂಧಕಾರದ ನಡುವೆ ಕುಂಟುತ್ತಿರುವ ಕುದುರೆ ನಿಂತಲ್ಲೇ ಎಗರಾಡಿ ಬರುತ್ತಿದೆ ಅವನ ಮೈಮೇಲೆ, ಇನ್ನೇನು ತುಳಿದು ಬಿಟ್ಟಿತು ಎನ್ನುವಷ್ಟರಲ್ಲಿ ಒಂದೆಡೆ ರಣಕೇಕೆ ಹಾಕಿ ನಗುತ್ತಿರುವ ರಾಜ ರಾಣಿ ಮಂತ್ರಿಗಳು, ಅಷ್ಟರಲ್ಲಿ ಜೋರಾಗಿ ತಿರುಗುತ್ತಿರುವ ಯಂತ್ರವೊಂದು ಕಳಚಿ ಭಯಾನಕವಾಗಿ ಬಿದ್ದು ಬಿಟ್ಟಿತು. ಹೊಡಿ ಆರು ನೂರಾ ಎಂಭತ್ತು ಎಂಬ ಕರಾಳ ಧ್ವನಿ…ಮಲಗಿದ್ದ ಅವನು ಇದ್ದಕ್ಕಿದ್ದಂತೆ ಬೆಚ್ಚಿ … Read more

ವೆಂಕಜ್ಜ: ಗಿರಿಜಾ ಜ್ಞಾನಸುಂದರ್

ಬೆಳಗಿನ ಸೂರ್ಯನ ಕಿರಣ ಕಣ್ಣಿಗೆ ಚುಚ್ಚುತ್ತಿದ್ದು,   ವೆಂಕಜ್ಜನ ಕಣ್ಣು ಭಾರವಾಗಿದ್ದರೂ ನಿಧಾನವಾಗಿ ತೆಗೆಯುತ್ತಿದ್ದ. ದೇವಸ್ಥಾನದ ಒಂದು ಮೂಲೆಯಲ್ಲಿ ಮಲಗುವ ವೆಂಕಜ್ಜ ಯಾವಾಗಲು ಚುರುಕು. ಅಷ್ಟೊಂದು ನಿಧಾನವಾಗಿ ಎದ್ದವನೇ ಅಲ್ಲ. ಇಂದೇಕೋ ಅವನ ಮನಸ್ಸು ಎಂದಿನಂತೆ ಇರಲಿಲ್ಲ. ವಸುಧಾಳ ನೆನಪು ಬಹಳವಾಗಿ ಕಾಡುತ್ತಿತ್ತು. ಅವಳು ತನ್ನನ್ನು ಎಬ್ಬಿಸುತ್ತಿದ್ದ ರೀತಿ,   ಮುದ್ದು ಮಾಡುತ್ತಾ ಕಚಗುಳಿ ಇಡುತ್ತಿದ್ದ ನೆನಪು. ವೆಂಕಜ್ಜನ ಜೀವನದಲ್ಲಿ ವಸುಧಾ ಅವನ ಬಾಳ ಸಂಗಾತಿಗಿಂತ ಹೆಚ್ಚಾಗಿದ್ದಳು. ಅವನೆಲ್ಲ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಳು. ಚಿಕ್ಕವಯಸ್ಸಿನಲ್ಲಿ ತಂದೆ ತಾಯಿಯನ್ನು ಕಳೆದುಕೊಂಡಿದ್ದ ಅವನಿಗೆ ತನ್ನೆಲ್ಲ … Read more

ನಿರಾಶ್ರಿತ: ವೈ. ಬಿ. ಕಡಕೋಳ

"ನಮಸ್ಕಾರ ಗುರುಗಳಿಗೆ" ಎದುರಿಗಿದ್ದ ಮಲ್ಲಪ್ಪನ ಕಂಡ ವೆಂಕಪ್ಪ ಮಾಸ್ತರು  "ಅರೆ ಮಲ್ಲಪ್ಪ. ಏನಿದು ಕಳೆದ ಎಳೆಂಟು ತಿಂಗಳಿಂದ ಬೆಟ್ಟಿ ಆಗಿಲ್ಲ ಎಲ್ಲಿ ಹೋಗಿದ್ದಿ. ಏನು ಕಥೆ? ", ಮತ್ತೆ ಮಾತು ಮುಂದುವರೆಸಿ "ಅಂದಾಂಗ ನಿನ್ನ ಮಗ ಚನ್ನಪ್ಪ ಅರಾಮ ಅದಾನೇನು? " ಹಾಗೆಯೇ ಒಂದೇ ಉಸಿರಿನಿಂದ ಪ್ರಶ್ನೆಗಳ ಸುರಿಮಳೆಯನ್ನೇ ಹರಿಸಿದರು. ಬಹಳ ದಿನಗಳಿಂದ ಶಾಲೆಯ ಕಡೆಗೆ ಬರದಿದ್ದ ಮಲ್ಲಪ್ಪನ ಬಗ್ಗೆ ವೆಂಕಪ್ಪ ಮಾಸ್ತರರಿಗೆ ವಿಶೇಷ ಕಾಳಜಿ. ಅವನ ಮಗ ಚನ್ನಪ್ಪ ಓದಿನಲ್ಲಿ ಸದಾ ಮುಂದು. ಮಲ್ಲಪ್ಪ ಬಡವನಾದರೂ … Read more

ಯೇಸು ಶಿಲುಬೆಯಲ್ಲಿಲ್ಲ: ಧನು ಮಲ್ಪೆ

ಸಾರ್, ಸಾರ್ ಎಂಬ ಕೂಗಿಗೆ ಅವನು ಸಾವಧಾನವಾಗಿ ಅಷ್ಟೆ ನಿರ್ಲಕ್ಷ್ಯವಾಗಿ ತಿರುಗಿ ನೋಡಿದ. ರೈಲಿನ ಕಿಟಕಿಯಿಂದ ವೇಗವಾಗಿ ಚಲಿಸುತ್ತಿರುವಂತೆ ಭಾಸವಾಗುವ ನದಿ ಸೇತುವೆಗಳು, ಹಸಿರು ಸೀರೆಯನ್ನು ಹೊದ್ದು ಮಲಗಿದಂತೆ ಕಾಣುವ ಹೊಲ ಗದ್ದೆಗಳು, ಕಪ್ಪು ಚುಕ್ಕೆಗಳಂತೆ ಕಾಣುವ ದನ ಕರುಗಳನ್ನು ನೋಡುತ್ತಾ ಯಾವುದೋ ಆಲೋಚನೆಯಲ್ಲಿ ಮುಳುಗಿದ್ದವನಿಗೆ ಆ ಕೂಗಿನಿಂದ ಅಸಾಧ್ಯ ಸಿಟ್ಟು ಬಂತು. ತಿರುಗಿ ನೋಡಿದಾಗ ಗಂಟಿನ ಕೆಳಗೆ ಎರಡೂ ಕಾಲುಗಳಿಲ್ಲದ ಹೆಳವನೊಬ್ಬ ತಟ್ಟೆ ಹಿಡಿದು ದೈನ್ಯವಾಗಿ ಅವನನ್ನೇ ನೋಡುತ್ತಿದ್ದಾನೆ. ಕಳೆದ ಎರಡು ವರ್ಷಗಳಲ್ಲಿ ಇದು ಅವನಿಗೆ … Read more

ಹಸಿದವರು: ಪ್ರವೀಣಕುಮಾರ್. ಗೋಣಿ

ಒಲೆಯ ಮೇಲೆ ಇಟ್ಟ ಅನ್ನ ಉಕ್ಕಿ ಗಂಜಿ ಎಲ್ಲ ಪಾತೆಲಿಯ ಮೈತುಂಬ ಇಳಿದು ಉರಿಯುತ್ತಿದ್ದ ಬೆಂಕಿಯನ್ನ ಚರ ಚರನೇ ಆರಿಸುತ್ತಲಿತ್ತು.  ಮಿಣುಕು ದೀಪದ ಮುಂದೆ ಓದುತ್ತ ಕುಳಿತಿದ್ದ ಮಗನನ್ನೇ ಬೆರಗು ಕಣ್ಣಿಂದ ನೋಡುತ್ತಾ ಕುಳಿತಿದ್ದ ಯಲ್ಲಿ ಎದ್ದು ಓಡಿ ಹೋಗಿ ಪಾತ್ರೆಯ ಮೇಲಿನ ಮುಚ್ಚಳಿಕೆಯನ್ನ ಆಚೆ ನೂಕಿದಳು.  ಏಳು ಮಗಾ ವೇಳ್ಯಾ ಬಾಳ್ ಆಯ್ತು ಅನ್ನಾನು ಆಗೆದೆ ಉಂಡು ಒದ್ತಾ ಕೂಡುವೆಂತೆ ಅಂತಾ ರಾತ್ರಿ ಊಟಕ್ಕೆ ಗಂಗಾಳ ಇಟ್ಲು.  ತೇಲಿ ಬರುತ್ತಿದ್ದ ನಿದ್ದೆಯನ್ನ ಸರಿಸಿ ಪರಮ ಚಕ್ಕಳುಮುಕ್ಕಳು … Read more

ಸಾಫ್ಟ್ ವೇರ್ ಹೆಂಡತಿಯ ನೋವು ನಲಿವು: ವೇದಾವತಿ ಹೆಚ್. ಎಸ್. 

ಮದುವೆಯಾಗಿ ಇಪ್ಪತ್ತು ವರ್ಷಗಳು ಕಳೆದು ಹೋದವು. ಇಪ್ಪತ್ತು ವರ್ಷಗಳಲ್ಲಿ ಸಂತೋಷ ದುಃಖ ಎರಡೂ ಹೇಗೆ ಬಂದವು ಹಾಗೆ ಕಳೆದು ಹೋದವು. ಹಳೆಯ ದಿನ ಪುನಃ ಮರಳಿ ಬರುತ್ತಿದ್ದರೆ…ಜೀವನದಲ್ಲಿ ತಪ್ಪುಗಳನ್ನು ತಿದ್ದಿ ಇನ್ನೂ ಚನ್ನಾಗಿ ಬದುಕಿನ ಸಂತೋಷ ಅನುಭವಿಸಬಹುದಿತ್ತು. ದೇವರು ಎಲ್ಲಾರಿಗೂ ಸುಖ ಸಂತೋಷ ಕೊಟ್ಟ ಹಾಗೆ ತನಗೂ ಸಹ ಕೊಟ್ಟಿದ್ದಾನೆ. ತನ್ನ ಕಷ್ಟ ಬೇರೆಯವರ ಕಷ್ಟಕ್ಕಿಂತ ಬೇರೆ ರೀತಿಯಲ್ಲಿ ಇರಬಹುದು ಅಷ್ಟೆ.           ದೇವಿಕಗೆ ಹಳೆಯ ದಿನಗಳ ನೆನಪುಗಳು ತುಂಬಾನೆ ಮನಸ್ಸಿಗೆ ಬರುತ್ತಿದ್ದವು. … Read more

ಸೀಕ್ರೆಟ್ ಡೈರಿ: ಪ್ರಸಾದ್ ಕೆ.

ಕೊಡಚಾದ್ರಿಯ ಎತ್ತರ. ತಣ್ಣನೆ ಗಾಳಿ. ಹಾಗೆ ಸುಮ್ಮನೆ ತಲೆಯ ಒಂದಿಷ್ಟು ಮೇಲಿನಿಂದ ಹಾದುಹೋಗುತ್ತಿರುವ ಮೋಡಗಳ ಚಪ್ಪರ. ಇನ್ನೇನು ಒಂದು ಲಾಗ ಹಾಕಿದರೆ ಹಿಡಿಯಷ್ಟು ಮೋಡವನ್ನು ಬಾಚಿ ಜೇಬಿನಲ್ಲಿಡಬಹುದು ಎಂಬಂತೆ. ಮುಳುಗುತ್ತಿದ್ದ ಸೂರ್ಯ ಕಿತ್ತಳೆಯಂತೆ, ಕೆಂಡದ ಪಾಕದಲ್ಲದ್ದಿದ ನಾಣ್ಯದಂತೆ ಕಾಣುತ್ತಿದ್ದ. ಆದರೆ ಅವನ ವೃತ್ತಾಕಾರದ ಅಂಚುಗಳೋ ಕೈವಾರದಿಂದ ವೃತ್ತ ಕೊರೆದಷ್ಟು ಹರಿತ, ಅಷ್ಟು ಪರಿಪೂರ್ಣತೆ. ಅಷ್ಟು ಎತ್ತರದಲ್ಲಿ ಅವರಿಬ್ಬರೂ ಅಂದು ಇದ್ದರು. ಅವನು ಮತ್ತು ಅವಳು.  ಕಳೆದೆರಡು ದಿನಗಳಿಂದ ಪರ್ವತವನ್ನು ಹತ್ತಿ, ಅಲ್ಲಲ್ಲಿ ನಿಂತು, ಅಲ್ಲಿಲ್ಲಿ ನಿದ್ದೆ ಹೊಡೆದು … Read more

ನ್ಯಾನೋ ಕಥೆಗಳು: ಪ್ರೇಮ್ (ಪ್ರೇಮ ಉದಯಕುಮಾರ್)

ಹಣೆಬರಹ ಬೆಳಗೆದ್ದು ಮಾವನ ಮನೆಗೆ ಹೋಗಬೇಕಿತ್ತು. ಟಿ.ವಿ. ಹಾಕಿದ ರಾಕೇಶ್. ಸ್ವಾಮೀಜಿಯೊಬ್ಬರು ಭವಿಷ್ಯ ಹೇಳುತ್ತಿದ್ದರು. ಅವನ ಕುಂಭ ರಾಶಿ ಬರುವವರೆಗೆ ಕಾದ. ಈ ರಾಶಿಯವರು ಪ್ರಯಾಣವನ್ನು ಮುಂದೂಡಿ ಎಂದರು. ಸೌಖ್ಯವಿಲ್ಲದ ಮಾವನನ್ನು ನೋಡಲು ನಾಳೆ ಹೋಗೋಣ ಎಂದು ಸುಮ್ಮನಾದ. ಮರುದಿನ ಹೊರಟ ಬಸ್ಸು ಬ್ರೇಕ್ ಫೈಲ್ಯೂರ್ ಆಗಿ ನುಜ್ಜುಗುಜ್ಜಾಯಿತು. ಜಿಪುಣತನ ರಾಮಣ್ಣ ಹಲ್ಲು ನೋವಿನಿಂದ ಬಳಲುತ್ತಿದ್ದರು. ಯಾವತ್ತೂ ಡಾಕ್ಟರ್ ಬಳಿ ಹೋಗುತ್ತಿರಲಿಲ್ಲ.ಡಾಕ್ಟರ್ ಎಂದರೆ ಭಯ. ಅವರಿವರ ಪುಕ್ಕಟೆ ಸಲಹೆ ಪಡೆಯುತ್ತಿದ್ದರು. ಯಾರೋ ಮಾತ್ರೆ ಇಡಲು ಹೇಳಿದರೆ, ಮತ್ತೊಬ್ಬರು … Read more

ಆಯಾಮಗಳು: ಗಿರಿಜಾ ಜ್ಞಾನಸುಂದರ್

ಬೆಳಿಗ್ಗೆ ಸ್ನಾನ ಮುಗಿಸಿ ಬಂದ ಕುಮುದ ಪೂಜೆ ಮಾಡುತ್ತಿದ್ದಳು. ತನ್ನ ಮದುವೆಯ ಮೂರನೇ ವಾರ್ಷಿಕೋತ್ಸವವಾಗಿದ್ದರಿಂದ ಸ್ವಲ್ಪ ವಿಶೇಷವಾದ ಪೂಜೆ ನಡೆಯುತ್ತಿತ್ತು. ಆದ್ರರೇ ಮನಸ್ಸಿನಲ್ಲಿ ಇನ್ನು ಅಡಿಗೆಮನೆಯ ಕೆಲಸ ಮುಗಿಸಿಲ್ಲವಲ್ಲ ಅನ್ನೋ ಯೋಚನೆ ಇತ್ತು. ಚಪಾತಿ ಹಿಟ್ಟು ಕಲಸಿಟ್ಟಿದ್ದೇನೆ. ತರಕಾರಿ ಪಲ್ಯ ಹಾಗು ಚಟ್ನಿ ಮಾಡಿದ್ದಾಗಿದೆ. ಗಂಡನಿಗೆ ಡಬ್ಬಿಗೆ ಹಾಕಿಕೊಡುವ ಕೆಲಸ ತನ್ನದಾದ್ದರಿಂದ, ಮನಸ್ಸು ಪೂಜೆಯಲ್ಲಿ ಪೂರ್ತಿ ಇರಲಿಲ್ಲ. ಜೊತೆಯಲ್ಲಿ ಮಗು ಎದ್ದರೆ ಹೇಗೆ ಸಂಭಾಳಿಸುವುದು ಅನ್ನೋ ಯೋಚನೆ ಬೇರೆ. ಹಾಗಾಗಿ ಪೂಜೆ ಹೆಂಗೋ ಹಂಗೆ ಮಾಡಿ ಸಮಾಧಾನ … Read more

ನಿರ್ಧಾರ!: ಎಸ್.ಜಿ.ಶಿವಶಂಕರ್

ಕೊನೆಗೂ ಸದಾನಂದರು  ನಿರ್ಧಾರ ತೆಗೆದುಕೊಂಡುಬಿಟ್ಟಿದ್ದರು. ಯಾವುದಕ್ಕಾಗಿ ಮೂವತ್ತು ವರ್ಷಗಳಿಂದ ಹಿಂಜರಿಯುತ್ತಿದ್ದರೋ ಅದನ್ನಿಂದು ಹತ್ತಿಕ್ಕಿದ್ದರು! ಜೀವನದಲ್ಲಿ ಎಂದೂ ತೆಗೆದುಕೊಳ್ಳದ ಮಹತ್ವದ ನಿರ್ಧಾರವನ್ನು ಸದಾನಂದರು ತೆಗೆದುಕೊಂಡಿದ್ದರು. ಅವರ ನಿರ್ಧಾರ ಯಾವ ಸ್ವರೂಪದ್ದು ಎಂಬುದರ ಕಲ್ಪನೆ ಮನೆಯವರಿಗೆ ಇರಲಿಲ್ಲ;  ಶ್ಯಾಮಲೆಗೂ  ಇರಲಿಲ್ಲ. ಹಾಗೇನಾದರೂ ಗೊತ್ತಾಗಿಬಿಟ್ಟಿದ್ದರೆ ಅವರ ಕಣ್ಣಿನಲ್ಲಿ ಸದಾನಂದರು ಏಕದಂ ವಿಲನ್ ಅಗಿಬಿಡುತ್ತಿದ್ದರು. ಎಲ್ಲರೂ ಹಿಡಿಹಿಡಿ ಶಾಪ ಹಾಕುತ್ತಿದ್ದುದರಲ್ಲಿ ಸಂದೇಹವೇ ಇರಲಿಲ್ಲ. ಇವೆಲ್ಲಾ ಸದಾನಂದರಿಗೆ ಗೊತ್ತಿತ್ತು. ಅದಕ್ಕೇ ಇಷ್ಟು ವರ್ಷ ಅದನ್ನೆಲ್ಲ ಒಳಗೇ ಹಿಡಿದಿಟ್ಟಿದ್ದರು. ಮೂವತ್ತು ವರ್ಷಗಳಿಂದ ಯಾವುದಕ್ಕೆ ಹಿಂದೇಟು ಹಾಕುತ್ತ … Read more

ಕಳ್ಳನ ಕಥೆ: ಶ್ರೀಮಂತ ಯನಗುಂಟಿ

ಮೂಲ: ರಸ್ಕಿನ್ ಬಾಂಡ್ ಕನ್ನಡಕ್ಕೆ: ಶ್ರೀಮಂತ ಯನಗುಂಟಿ ರೋಮಿಗೆ ಭೇಟಿಯಾದಾಗ ನಾನಿನ್ನೂ ಕಳ್ಳನಾಗಿದ್ದೆ. ಕೇವಲ ಹದಿನೈದು ವರ್ಷದವನಾಗಿದ್ದರೂ ಕಳ್ಳತನದಲ್ಲಿ ನಾನೊಂದು ಅನುಭವಿ ಮತ್ತು ಯಶಸ್ವೀ ಹಸ್ತವಾಗಿದ್ದೆ.  ನಾನು ರೋಮಿಯ ಬಳಿ ಹೋದಾಗ ಅವನು ಕುಸ್ತಿ ಪಂದ್ಯವನ್ನು ವಿಕ್ಷೀಸುತ್ತಿದ್ದ. ಅವನು ಇಪ್ಪತ್ತೈದು ವರ್ಷದವನಿರಬಹುದು. ನನ್ನ ಉದ್ದೇಶಕ್ಕೆ ಸರಳವಾಗಿ ಸರಿಹೊಂದುವ ಹಾಗೆ ಕಾಣಿಸಿದ. ಈ ಯುವಕನ ವಿಶ್ವಾಸವನ್ನು ಗೆಲ್ಲಬಲ್ಲೆ ಎಂದು ನನಗೆ ಖಚಿತವಾಯಿತು.  "ನೀನು ಸ್ವಲ್ಪ ಕುಸ್ತಿ ಪಟುವಿನ ಹಾಗೆ ಕಾಣಿಸುತ್ತಿಯ", ನಾನು ಹೇಳಿದೆ. ಮಂಜುಗಡ್ಡೆಯನ್ನು ಕರಗಿಸಲು ಯಾವುದೇ ಹೊಗಳಿಕೆಯ … Read more

ಪುನೀತಭಾವ: ಸತೀಶ್ ಶೆಟ್ಟಿ ವಕ್ವಾಡಿ.

  ಸೂರ್ಯನಿಗೆ ಆಗಷ್ಟೇ ಬೆಳಗಾಗಿತ್ತು. ಹಕ್ಕಿಗಳ ಚಿಲಿಪಿಲಿ ಇಲ್ಲದ್ದಿದ್ದರೂ ಡಿಸೆಂಬರ್ ತಿಂಗಳ ಚುಮು ಚುಮು ಚಳಿಗೆ ಮುಂಜಾನೆ ಆಹ್ಲಾದಕರವಾಗಿತ್ತು. ಶೀತಗಾಳಿಗೆ ಮೈಯೊಡ್ಡಿ ಮಂಜಿನಹನಿಗಳನ್ನು ಹೊತ್ತ ಹುಲ್ಲಿನ ಮೇಲೆ ಬರಿಗಾಲಿನಲ್ಲಿ  ನೆಡೆಯುವುದೇ ಒಂದು ಅನನ್ಯ ಅನೂಭೂತಿ.  ಹಾಗೆ ಹಲ್ಲಿನ ಜೊತೆ ಜಗಳಕ್ಕೆ ಬಿದ್ದ ಬ್ರಷ್ ನೊಂದಿಗೆ ಕಾದಾಡುತ್ತ ಮನೆ ಎದುರಿನ ಗದ್ದೆಯ ಅಂಚಿನಲ್ಲಿ ಹೆಜ್ಜೆಹಾಕುತ್ತಿದ್ದೆ.  ಬೆಂಗಳೂರಿನಂತೆ ಇಲ್ಲಿ ತರಕಾರಿಯವನ ಬೊಬ್ಬೆ ಇಲ್ಲ.  ಕಸದವಳ ಶೀಟಿ ಸ್ವರವಿಲ್ಲ, ಸ್ಕೂಲ್ ವ್ಯಾನಿನ ಕರ್ಕಶ ಹಾರ್ನಿನ ಮಾರ್ಧನಿ ಇಲ್ಲ. ಆಗಷ್ಟೇ ಕೊಯ್ಲು ಮಾಡಿದ … Read more

ಅಮೂಲ್ಯ ಕ್ಷಣ: ಗಿರಿಜಾ ಜ್ಞಾನಸುಂದರ್

ಮೋಡ ತುಂಬಿದ ಆಕಾಶ. ಏನೋ ಒಂಥರಾ ತವಕ, ದುಗುಡ. ಮನಸ್ಸಿನಲ್ಲಿ ತಳಮಳ. ಕೈ ಕೈ ಹಿಸುಕಿ ಕೊಳ್ಳುತ್ತಾ ಓಡಾಡುತ್ತಿದ್ದೆ. ನನ್ನ ಆತಂಕ ಹೆಚ್ಚು ಮಾಡಲೆಂದೇ ಮೋಡ ಮುಸುಕಿದೆಯೇನೋ ಅನ್ನುವಂತಿದೆ. ಅನು ನನ್ನ ಜೀವನಕ್ಕೆ ಬಂದು ೬ ವರ್ಷಗಳಾಯಿತು. ಅವಳಿಲ್ಲದೆ ಒಂದು ದಿನವೂ ಮುಂದೆ ಹೋಗುವುದಿಲ್ಲವೇನೋ ಅನ್ನುವಂತೆ ಬೆಸೆದಿದೆ ಜೀವನ. ಅವಳೇ ಸಾಕು ನಾನು ಸುಖವಾಗಿ ಜೀವನ ನಡೆಸಲಿಕ್ಕೆ ಅನ್ನುವಂತಿದ್ದೆವು. ಮಕ್ಕಳು ಬೇಕೇ ಬೇಕು ಅನ್ನುವ ಹಟವೇನು ನನಗಿರಲಿಲ್ಲ. ಆದರೆ ಅವಳಿಗೆ ಮಕ್ಕಳೆಂದರೆ ಪ್ರಾಣ. ಅವಳ ಆರೋಗ್ಯವನ್ನೇ ಪಣಕ್ಕಿಟ್ಟು … Read more

ತ್ರಿಪದಿ ಕಥೆ: ಶುಭಶ್ರೀ ಭಟ್ಟ, ಬೆಂಗಳೂರು

#ತ್ರಿಪದಿ_ಕಥೆ-1: ನಕ್ಷತ್ರ ಮನೆಯವರೆಲ್ಲರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿ ಸ್ವರ್ಗಕ್ಕೆ ಕಿಚ್ಚು ಹಚ್ಚುವಂತಿದ್ದರು ವಿಶ್ವಾಸ-ವಾಣಿ. ಆರತಿಗೊಬ್ಬ ಮಗಳು-ಕೀರ್ತಿಗೊಬ್ಬ ಮಗಳೆಂಬಂತೆ ಸುಂದರ ಕುಟುಂಬವಾಗಿತ್ತು. 'ಊರಕಣ್ಣೋ ಮಾರಿಕಣ್ಣೋ' ಯಾರ ಕಣ್ಣೋ ಗೊತ್ತಿಲ್ಲ, ದೃಷ್ಟಿಬಿತ್ತು ಅವರ ಕುಟುಂಬಕ್ಕೆ. ಇದ್ದಕ್ಕಿದ್ದಂತೆ ವಾಣಿ ಹೃದಯಾಘಾತದಿಂದ ನಿಧನಳಾದಳು. ಆಗ ಮಗನಿಗಿನ್ನೂ ಒಂದುವರೆ ವರುಷ. ಮಗಳಿಗೆ ಮೂರು ವರುಷ. ಸಾವೆಂದರೆನೆಂದು ತಿಳಿಯದ ವಯಸ್ಸಲ್ಲಿ ಅಮ್ಮನ ಕಳೆದುಕೊಂಡರು. ಎಲ್ಲಾದ್ರಲ್ಲೂ ವಿಶ್ವಾಸ ಕಳೆದುಕೊಂಡ ವಿಶ್ವಾಸ ಕರ್ತವ್ಯದಿಂದ ವಿಮುಖನಾದ, ಮಕ್ಕಳು ಅಜ್ಜಿಮನೆ ಸೇರಿದರು.  ನಕ್ಷತ್ರವಾದ ಅಮ್ಮನ್ನ ಇನ್ನೂ ಹುಡುಕುತಿಹರು ಮಕ್ಕಳು ನೀಲಿಬಾನ … Read more

ನಗುವ ಮಗು: ಸುರೇಶ್ ಬಣಕಾರ್

ಅದು ಅಮಾವಾಸ್ಯೆಯ ಒಂದು ದಿನ. ಸೂರ್ಯ ಮುಳುಗುವ ಸಮಯ. ಎಂದಿನಂತೆ ಕಮಲ ಮನೆಯ ಮುಂದಿನ ತೆಂಗಿನ ತೋಟದಲ್ಲಿ ಒಣ ಕಟ್ಟಿಗೆ ಸಂಗ್ರಹಿಸುತ್ತಿದ್ದಳು. ತಟ್ಟನೆ ಒಂದು ಮಗು ನಗುವ ಸದ್ದು. ಕಮಲಳಿಗೆ ಆಶ್ಚರ್ಯ. ಏಕೆಂದರೆ ಆ ಸುತ್ತಮುತ್ತಲೂ ಹತ್ತು ಮೈಲಿ ದೂರದಲ್ಲಿ ಒಂದೂ ಮನೆ ಇರಲಿಲ್ಲ. ಅವಳು ಸುತ್ತಮುತ್ತ ನೋಡಿದಳು, ಏನೂ ಕಾಣಿಸಲಿಲ್ಲ. ಸ್ವಲ್ಪ ಸಮಯದ ನಂತರ ಶಬ್ದ ನಿಂತಿತು. ಏನೋ ಭ್ರಮೆ ಇರಬೇಕೆಂದು ತನ್ನ ಕೆಲಸದಲ್ಲಿ ಮಗ್ನಳಾದಳು. ಮತ್ತದೇ ನಗು!  ಈ ಬಾರಿ ಅವಳು ಗಮನವಿಟ್ಟು ಆಲಿಸಿದಳು. … Read more

ಕೋಸಿನ ಪಲ್ಯ: ಸಹನಾ ಪ್ರಸಾದ್

ಕಳೆದ ೪-೫ ದಿನಗಳಿಂದ ಕುಸುಮಳ ಮನಸ್ಸು ಕುದಿಯಲು ಶುರುವಾಗಿದೆ. ಪ್ರತಿ ವರುಷ ಸುಮಾರು ಈ ಹೊತ್ತಿಗೆ ಅವಳ ಮನಸ್ಸು ಬಾಂಡಲೆಯಲ್ಲಿ ಕುದಿಯುತಿರುವ ಎಣ್ಣೆಯಂತಾಗುತ್ತದೆ. ಕೊತ ಕೊತ ಕುದಿವ ಮನಸ್ಸಿನಲ್ಲಿ ಅನೇಕನೇಕ ಭಾವನೆಗಳು. ಸುಮಾರು ಒಂದು ವಾರದ ನಂತರ " ಆ ದಿನ" ಬಂದಾಗ ಮನಸ್ಸಿನಲ್ಲಿರುವ ಭಾವನೆಗಳೆಲ್ಲಾ ಸಿಡಿದು ಮನೆಯವರಿಗೆಲ್ಲಾ ಎರಚುವುದು ಅಥವಾ ಮೂಕ ಕಣ್ಣೆರಿನಲ್ಲಿ ಕೊನೆಗಾಣುವುದು. ಮಾರನೆಯ ದಿನದಿಂದ ಮಾಮೂಲು ದಿನಚರಿ ಶುರು. ಒಂದೆರಡು ದಿನ ನೋವು ಮನಸ್ಸನ್ನು ಕಾಡುತ್ತಿದ್ದರೂ ಹಿಂದಿನ ವಾರದಷ್ಟಿಲ್ಲ. ತನ್ನ ಮದುವೆಯ ದಿನ, … Read more

ನಿಯತ್ತು…: ದುರ್ಗಾ ಪ್ರಸಾದ್

ಮೂರು ದಿನವಾದರೂ ಒತ್ತರಿಸಿ ಬರುತ್ತಿದ್ದ ಸೊಸೆ ಮಾಡಿದ ಅವಮಾನದ ದೃಶ್ಯಗಳನ್ನು ರಂಗಪ್ಪನಿಗೆ ಸಹಿಸಲಾಗುತ್ತಿರಲಿಲ್ಲ. ಬೆಳ್ಳಂಬೆಳಗ್ಗೆಯೇ ಊರಿನಿಂದ ಬಂದ ಮಗಳನ್ನು ನಿಂದಿಸಿರುತ್ತಿರುವ ಸೊಸೆಯನ್ನು ಕಂಡು ರಂಗಪ್ಪನಿಗೆ ಸುಮ್ಮನಿರಲಾಗಲಿಲ್ಲ. ಯಾಕಮ್ಮ ಹಾಗೆಲ್ಲ ಮಾತಾಡುತ್ತಿಯಾ ಎಂದು ಕೇಳಿದಾಕ್ಷಣ ಮಾವನ ಕೊರಳಪಟ್ಟಿ ಹಿಡಿದು ಮತ್ತೊಂದು ಕೈಯಲ್ಲಿ ಚಪ್ಪಲಿ ಹಿಡಿದು ನಿಂತ ಸೊಸೆಯನ್ನು ಹಿಗ್ಗಾ ಮುಗ್ಗಾ ತಳಿಸಿಬಿಡಬೇಕು ಎಂದೆನಿಸಿದರೂ ಉಸಿರು ಗಟ್ಟಿ ಮಾಡಿಕೊಂಡು ಸುಮ್ಮನಾಗಿದ್ದರು. ತಂದೆಯನ್ನು ಕೊರಳಪಟ್ಟಿ ಹಿಡಿದರೂ ಏನೊಂದು ಮಾತಾಡದೆ ಒಳನಡೆದ ಮಗನನ್ನು ಕಂಡು ರೇಜಿಗೆ ಹುಟ್ಟಿತು. ಊರಮಂದಿಯೆಲ್ಲಾ ಮನೆಯ ಮುಂದೆ ನೋಡುತ್ತಾ … Read more

ಮಂಗಳನ ಅಂಗಳದಲ್ಲಿ! (ಕೊನೆಯ ಭಾಗ): ಎಸ್.ಜಿ.ಶಿವಶಂಕರ್

  ಇಲ್ಲಿಯವರೆಗೆ "ರುಚಿಕಾ, ಮಗಳೆ ಮದುವೆಯ ನಂತರ ಗಂಡನ ಮನೆಗೆ ಹೋಗುವಾಗ ಹೇಳಬೇಕಾದ ವಿದಾಯವನ್ನು ಈಗಲೇ ಹೇಳಬೇಕಾದ ಪರಿಸ್ಥಿತಿ ಒದಗಿ ಬಂದಿದೆ. ನನ್ನ ಕಣ್ಣಾಲಿಗಳು ತುಂಬಿವೆ. ಮಾತು ಹೊರಡದಾಗಿದೆ. ಆದರೂ ಮತ್ತೆ ನಿನ್ನೊಂದಿಗೆ ಮಾತಾಡುವ ಸಂದರ್ಭ ಬರಲಾರದು. ಅದಕ್ಕೇ ತಾಯಿಯಾಗಿ ಕೆಲವು ಮಾತುಗಳನ್ನು ಹೇಳಲು ಬಯಸುತ್ತೇನೆ. ನೀನು ಕೊನೆಗೆ ತಲುಪಲಿರುವ ಜಾಗ ಹೇಗಿದೆಯೋ? ಅಲ್ಲಿ ನಮ್ಮಂತ ಜೀವಿಗಳಿರುವರೋ ಗೊತ್ತಿಲ್ಲ. ನಿನ್ನ ಜೊತೆಯಲ್ಲಿ ಬರುತ್ತಿರುವ ಸೃಜನ್ ನನ್ನ ಗೆಳತಿಯ ಮಗ. ನಿನಗೆ ಅನುರೂಪನಾದ ವರನಾಗಬಲ್ಲ. ಅವನನ್ನು ಒಪ್ಪುವುದು, ಬಿಡುವುದೂ … Read more

ಕುರುಂಜಿಮಲೆ ಹೋಂಸ್ಟೇ: ಜಾನ್ ಸುಂಟಿಕೊಪ್ಪ.

ಬಿದ್ದಪ್ಪ ಗೈಡ್ ಆದದ್ದೇನೂ ದೊಡ್ಡ ವಿಷಯವಾಗಿರಲಿಲ್ಲ. ಕುರುಂಜಿಮಲೆ ಹೋಂಸ್ಟೇ ಮಾಲಿಕ ಗಣಪತಿಯೂ ಅವನ ಹೆಂಡತಿ ದೇವಕ್ಕಿಯೂ, ಮತ್ತೆ ಆ ಬಡಕಲು ಲೈನ್‍ಮನೆಯಲ್ಲಿದ್ದ ನಾಲ್ಕು ಸಂಸಾರಗಳು ಅವರಷ್ಟಕ್ಕೇ ದಿನ ದೂಡುವುದು ಇದ್ದೇಇತ್ತು. ಕ್ಯಾಟರ್ ಬಿಲ್ಲೋ, ಸಾಹುಕಾರನ      ಕೋವಿಯೋ ಹಿಡಿದು ಆ ತಡಿಯಂಡಮೋಳು, ಮಾಪಿಳೆಕುಂದು, ಕರಡಿಮಲೆ ಎಂದೆಲ್ಲಾ ಇರೋಬರೋ ಬೆಟ್ಟ-ಕಾಡೊಳಗೆ ನುಗ್ಗಿ ಮೊಲವೋ, ಕಬ್ಬೆಕ್ಕೋ, ಕಾಡುಹಂದಿಯೋ, ಕೋಳಿಯೋ ಏನಾದರೂ ಹೊಡೆದು ತರುತ್ತಿದ್ದ ಬಿದ್ದಪ್ಪ ಆ ಗಣಪತಿ ಸಾಹುಕಾರನ ಮನೆ ಜಗಲಿಯಲ್ಲಿ ಬೇಟೆ ಹಾಕಿ ಕಾಲಿಗೆ ಹತ್ತಿದ ಜಿಗಣೆಗಳನ್ನು ಒಂದೊಂದಾಗಿ ಕಿತ್ತು … Read more